ಕೊನೆಗೂ ನಾಲ್ವರು ಪತ್ರಕರ್ತರಿಗೆ ಜಿಲ್ಲಾ ಪ್ರಶಸ್ತಿ ನೀಡಿದ ಜಿಲ್ಲಾಡಳಿತ.

108.7K Views 1 Nov 2024

ಮಂಗಳೂರು: ಅಕ್ಟೋಬರ್ 31ರಂದು ಜಿಲ್ಲಾ ಪ್ರಶಸ್ತಿಯ ಪಟ್ಟಿ ಬಿಡುಗಡೆಯಲ್ಲಿ ಒಬ್ಬ ಪತ್ರಕರ್ತರಿಗೆ ಮಾತ್ರ ಪ್ರಶಸ್ತಿ ಘೋಷಿಸಲಾಗಿತ್ತು.
ಆದರೆ, ಪತ್ರಕರ್ತ ಸಂಘದಿಂದ ನಾಲ್ವರು ಪತ್ರಕರ್ತರನ್ನು ಶಿಫಾರಸ್ಸು ಮಾಡಲಾಗಿತ್ತು. ಜಿಲ್ಲಾಡಳಿತದ ಈ ಕ್ರಮ ವ್ಯಾಪಕ ಅಸಮಾಧಾನಗಳಿಗೆ ಕಾರಣವಾದಾಗ ಈ ಬಗ್ಗೆ MPMLA’s ನ್ಯೂಸ್ ಬೆಳಕು ಚೆಲ್ಲಿ ಜಿಲ್ಲಾಧಿಕಾರಿಯವರು ತಕ್ಷಣ ಪತ್ರಕರ್ತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕೇಳಿಕೊಂಡಿತು. ಅದೇ ರೀತಿ ಪತ್ರಕರ್ತ ಸಂಘದಿಂದಲೂ ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು. ಕೂಡಲೇ ಎಚ್ಚೆತ್ತುಗೊಂಡ ಜಿಲ್ಲಾಡಳಿತ ಕೊನೆಗೂ ನಾಲ್ವರು ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಿತು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top