ಇಂದು ಪಿಡಿಓ ನೇಮಕಾತಿ ಪರೀಕ್ಷೆ. ಪರೀಕ್ಷಾ ಆಡಳಿತ ಮಂದಿ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ.

111.9K Views 17 Nov 2024

ಬ್ರೇಕಿಂಗ್ ನ್ಯೂಸ್: ಡಾ. ಅಶೋಕ್ ಶೆಟ್ಟಿ ಬಿ. ಎನ್.
ಕಲ್ಬುರ್ಗಿ: ಇಂದು ರಾಜ್ಯದಲ್ಲಿ ಪಿಡಿಓ ನೇಮಕಾತಿ ಪರೀಕ್ಷೆ ನಡೆದಿದ್ದು, ಕಲ್ಬುರ್ಗಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಆಡಳಿತ ಮಂದಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ಆರೋಪಗಳು ವಿದ್ಯಾರ್ಥಿಗಳಿಂದ ಕೇಳಿ ಬಂದಿವೆ. ಕಲ್ಬುರ್ಗಿಯ ಇಸ್ಲಾಂಬಾದ್ ಕಾಲೋನಿ
ಯಲ್ಲಿರುವ ಲಿಟಲ್ ಫ್ಲವರ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿದ್ದರೂ,12 ವಿದ್ಯಾರ್ಥಿಗಳಿಗೆ ಮಾತ್ರ ಬೆಳಗಿನ ಸಾಮಾನ್ಯ ಪ್ರಶ್ನೆ ಪತ್ರಿಕೆಯನ್ನು 20 ನಿಮಿಷ ತಡವಾಗಿ ನೀಡಲಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ಹಾಜರಾಗದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರಶ್ನೆ ಪತ್ರಿಕೆ ಇಲ್ಲದೆ ಪರೀಕ್ಷೆ ಹೇಗೆ ಬರೆಯಲಿ? ನಮಗೆ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಅನುಮಾನವಿದೆಂದು ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು, ಬೀದರ್, ಕಲ್ಬುರ್ಗಿಯ 840 ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top