ಬೋಳೂರು ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ತ್ರಿಕಾರ್ತಿಕಾ ಪೂಜಾ ಸಂಭ್ರಮ

106.4K Views 18 Nov 2024

ಮಂಗಳೂರು ನಗರದ ಬೋಳೂರು ಅಮೃತ ವಿದ್ಯಾಲಯಂ ಆವರಣದಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ವಿಶೇಷ ಕೃತ್ತಿಕಾ ಪೂಜೆ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು.


ಸಂಜೆ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಮಂಗಳೂರಿನ ಕಲಾಮೃತ ತಂಡದವರು ನಡೆಸಿಕೊಟ್ಟ ಸುಮಧುರ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಮಾಲಿನಿ ಕೇಶವ ಪ್ರಸಾದ್ ರವರ ಸುಶ್ರಾವ್ಯ ಕಂಠದ ಹಾಡುಗಳು ,ವೈಷ್ಣವಿಯವರ ಸ್ಯಾಕ್ಸೋಫೋನ್ ,ಅಭಿಷೇಕ್ ಸುರತ್ಕಲ್, ಪೂರ್ವಿ ಕಾಮತ್,ದೀಕ್ಷಿತಾ ಮತ್ತು ತಂಡದವರಿಂದ ಮೂಡಿಬಂದ ಭಕ್ತಿ ಭಾವದ ಸ್ವರಮಾಧುರ್ಯ ಜನಮಾನಸದ ಮೆಚ್ಚುಗೆ ಗಳಿಸಿತು.
ಬ್ರಹ್ಮಚಾರಿ ರತೀಶ್ ಇವರು ಕೃತ್ತಿಕಾ ನಕ್ಷತ್ರದ ಪ್ರಯುಕ್ತ ಜರುಗುವ ಜ್ಯೋತಿ ಪೂಜೆ ಹಾಗೂ ಭಗವತಿ ಸೇವೆಯ ವಿಧಿ ವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತಾ ಅಮೃತಾನಂದಮಯಿ ಸೇವಾ ಸಮಿತಿ, ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿ ,ಅಮೃತ ಯುವ ಧರ್ಮಧಾರದ ಪದಾಧಿಕಾರಿಗಳು, ಅಮ್ಮನವರ ಭಕ್ತರು ಮತ್ರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಆಗಮಿಸಿದ ಎಲ್ಲರಿಗೂ ಮಹಾಪ್ರಸಾದ ವಿತರಣೆ ಮಾಡಲಾಯಿತು.

Read More News

ಆರೋಗ್ಯ ಸಚಿವರ ತವರೂರು ಮಂಗಳೂರಿನ ವೆನ್ ಲಾಕ್ ಬಳಿಯ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್. ರೇಬಿಸ್ ತಡೆಗಟ್ಟುವ ಈ ಇಂಜೆಕ್ಷನ್ ಚುಚ್ಚಿದರೆ ಅಂಥ ಮಕ್ಕಳು 24 ಗಂಟೆ ಐಸಿಯುನಲ್ಲಿ ಇರಬೇಕು. ತುಂಬಾ ರಿಸ್ಕ್. ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಸರಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಆರೋಗ್ಯ ಸಚಿವರೇ ಉತ್ತರ ನೀಡಬೇಕು. ಖಾದರ್ ಸಾಹೇಬ್ರೆ, ಬಡ ಮಕ್ಕಳು ಏನು ತಪ್ಪು ಮಾಡಿದ್ದಾರೆ. ಅವರಿಗೇಕೆ ಇಂಥ ಕಳಪೆ ಇಂಜೆಕ್ಷನ್?

Scroll to Top