ಬೊಳಾಂತುರು ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿಲೇವಾರಿ ಶಿಬಿರ. ರಮಾನಾಥ ರೈ ರವರ ಇಚ್ಚೆಯಂತೆ ವಲಯ ಮಟ್ಟದಲ್ಲಿ ಶಿಬಿರ: ಜಯಂತಿ ವಿ.ಪೂಜಾರಿ. ಕ್ರಿಯಾಶೀಲ ಅಧ್ಯಕ್ಷರಿಂದ ಉತ್ತಮ ಕಾರ್ಯಕ್ರಮ: ಚಂದ್ರಪ್ರಕಾಶ್ ಶೆಟ್ಟಿ ತುಂಬೆ. ರಾಜ್ಯದಲ್ಲಿಯೇ ಪ್ರಥಮ ಕಾರ್ಯಕ್ರಮ: ಅಬ್ಬಾಸ್ ಆಲಿ.

115.3K Views 19 Dec 2024

ಬಂಟ್ವಾಳ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಬಾಳ್ತಿಲ,ಗೋಳ್ತಮಜಲು,ವೀರಕಂಭ,ಬೊಳಾಂತುರು ಗ್ರಾಮಗಳನ್ನು ಒಳಗೊಂಡು ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಬೊಳಾಂತುರು ಗ್ರಾ.ಪಂ ಕಛೇರಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಯಂತಿ ವಿ.ಪೂಜಾರಿರವರು ನನ್ನ ಮೇಲೆ ವಿಶ್ವಾಸ ಇಟ್ಟು ಬಂಟ್ವಾಳ ತಾಲೂಕಿನ ಅಧ್ಯಕ್ಷರಾಗಿ ಮಾಜಿ ಸಚಿವರಾದ ರಮಾನಾಥ ರೈ ರವರು ನೇಮಕಮಾಡಿರುತ್ತಾರೆ.ಅವರ ಇಚ್ಚೆ ಏಂದರೆ ಪ್ರತೀ ಗ್ರಾಮದ ಬಡವರಿಗೂ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನ ದೊರೆಯಬೇಕು.ಇದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರ ಆಶಯ.ಅದಕ್ಕೆ ಪೂರಕವಾಗಿ ಪ್ರತಿ ವಲಯದಲ್ಲಿ ಇದರ ಶಿಬಿರ ನಡೆಸಬೇಕು ಎಂದು ಸಲಹೆ ಸೂಚನೆ ನೀಡಿದ್ದರು ಅದರಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಹಾಯದಿಂದ ಯಶಸ್ವಿಯಾಗಿ ಈ ಕಾರ್ಯಕ್ರಮ ನಡೆಯುತ್ತ ಇದೆ.ಇದು ನಾಲ್ಕನೇ ಕಾರ್ಯಕ್ರಮ ಬಂಟ್ವಾಳ ತಾಲೂಕಿನಲ್ಲಿ ಒಟ್ಟು 10 ವಲಯಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಮುಖ್ಯ ಅತಿಥಿಯಾಗಿ ಅಗಮಿಸಿದ ಜಿಲ್ಲಾ ಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ರವರು ಮಾತನಾಡಿ ಕ್ರಿಯಾಶೀಲ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ರವರ ನೇತೃತ್ವದಲ್ಲಿ ಉತ್ತಮವಾದ ಕಾರ್ಯಕ್ರಮ ಇದು.ಪ್ರತೀ ಬಡವರ ಕಲ್ಯಾಣ ಈ ಶಿಬಿರದ ಮೂಲಕ ನಡೆಯಲಿ ಎಂದು ಶುಭಹಾರೈಸಿದರು.
ತಾಲೂಕು ಪಂ ಮಾಜಿ ಉಪಾದ್ಯಕ್ಷರಾದ ಅಬ್ಬಸ್ ಆಲಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿಯೇ ಇಂತಹ ಕಾರ್ಯಕ್ರಮ ಪ್ರಥಮವಾಗಿ ಬಂಟ್ವಾಳದಲ್ಲಿ ನಡೆಯುತ್ತ ಇರೊದು ಇದರ ಪ್ರಯೋಜನ ಪ್ರತಿಯೋಬ್ಬರು ಪಡೆಯಿರಿ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು..
ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ ಶುಭಹಾರೈಸಿದರು. ಬೊಳಂತುರು ಗ್ರಾ.ಪಂ ಅದ್ಯಕ್ಷರಾದ ಶ್ರೀಮತಿ ಶಾಲಿನಿ ರವರ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾ‌ಪಂ ಉಪಾದ್ಯಕ್ಷರಾದ ಯಾಕುಬ್, ಗ್ರಾ.ಪಂ ಸದಸ್ಯರಾದ ಚಂದ್ರಶೇಖರ್ ರೈ,ಅಶ್ರಫ್,ಅನ್ಸಾರ್,ಹಿತಾ ಶೆಟ್ಟಿ, ಮಹಾಲಕ್ಷ್ಮೀ,ಅನಿತಾ,ಸಂಧ್ಯಾ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಭಂಡಾರಿ,ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯರಾದ ನಾರಾಯಣ ನಾಯ್ಕ,ಅಲೆಸ್ಟರ್,ಪ್ರಮುಖರಾದ ವಿಶ್ವಾಜೀತ್ ರೈ,ತಾಲೂಕು ಗ್ಯಾರಂಟಿ ಯೋಜನೆಗಳ ಸದಸ್ಯರಾದ ಐಡಾ ಸುರೇಶ್,ಕಾಂಚಾಲಕ್ಷಿ,ಅಬ್ದುಲ್ ಕರೀಂ,ಕೃಷ್ಣಪ್ಪ ಪೂಜಾರಿ, ವಿನಯ್ ಕುಮಾರ್ ಸಿಂಧ್ಯಾ,ಸಿರಾಜ್ ಮದಕ,ಹರ್ಷನ್ ಬಿ,ಚಂದ್ರಶೇಖರ್ ಆಚಾರ್ಯ,ಸತೀಶ್ ಕೆ,. ಉಪಸ್ಥರಿದ್ದರು.
ಬೊಳಾಂತುರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸ್ವಾಗತಿಸಿ ,ಧನ್ಯವಾದ ಸಲ್ಲಿಸಿದರು..
ಸುಮಾರು 200 ರಿಂದ 250 ಜನ ಈ ಶಿಬಿರದ ಪ್ರಯೋಜನ ಪಡೆದುಕೊಂಡರು..ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳುಉಪಸ್ಥಿತರಿದ್ದರು.
ಚಿತ್ರ-ವರದಿ :ಸತೀಶ್, ಕಾರ್ತಿಕ್ ಸ್ಟುಡಿಯೋ, ಬಿ. ಸಿ. ರೋಡು

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top