Author name: editor

ಪ್ರಾದೇಶಿಕ ವಾರ್ತೆಗಳು

ಮೇ 2ರಂದು ಪುತ್ತೂರು ದರ್ಭೆ ಜಂಕ್ಷನ್ ಬಳಿ ಔಷಧಿ ರಹಿತ ಚಿಕಿತ್ಸಾಲಯ ಕಾಯಕಲ್ಪ ಅರೋಗ್ಯ ಧಾಮ ಶುಭಾರಂಭ-ಪ್ರೊ. ಲಕ್ಷ್ಮಣ್.

ಪುತ್ತೂರು -ಕುಂಬ್ರದಿಂದ ಸ್ಥಳಾoತರಗೊಂಡು ಪುತ್ತೂರಿನ ದರ್ಬೆ ಜಂಕ್ಷನ್ ಹತ್ತಿರ, ರೋಡರಿಗಸ್ ಚಿಕೆನ್ ಸೆಂಟರ್ ಪಕ್ಕ ಪ್ರೊ. ಲಕ್ಷ್ಮಣ್ ಸಾರಥ್ಯದ ಔಷಧಿ ರಹಿತ ಚಿಕಿತ್ಸಾಲಯ ಕಾಯಕಲ್ಪ ಮೇ.2ರಂದು ಶುಭಾಭರಂಭಗೊಳ್ಳಲಿದೆಔಷಧಿ ರಹಿತ ಚಿಕಿತ್ಸೆಯನ್ನು. ಸಾರ್ವಜನಿಕರು ಸದುಪಯೋಗ ಪಡೆದು ಕೊಳ್ಳಬಹುದೆಂದು ಪ್ರೊ. ಲಕ್ಷ್ಮಣ್ ತಿಳಿಸಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಮುಲ್ಲಕಾಡು ಫ್ರೆಂಡ್ಸ್ (ರಿ) : ಮೇ 02 ರಂದು ಯುಗಾದಿ ಉತ್ಸವ -2026, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾವೂರು ಮುಲ್ಲಕಾಡು ಪರಿಸರದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಊರಿನವರೆಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾದ ಸಂಘಟನೆಯಾದ ಮುಲ್ಲಕಾಡು ಫ್ರೆಂಡ್ಸ್ (ರಿ) 21 ನೇ ವರ್ಷದ ಯುಗಾದಿ ಉತ್ಸವದ ಸಲುವಾಗಿ ವೈವಿಧ್ಯಮಯ ಕಾರ್ಯಕ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಸಹಾಯಧನ, ಮಕ್ಕಳಿಗೆ ಪ್ರೋತ್ಸಾಹ ಧನ, ಪುಸ್ತಕ ವಿತರಣೆ ಹಾಗೂ ಪ್ರಸನ್ನ ಶೆಟ್ಟಿ ಬೈಲೂರು ನಿರ್ದೇಶನದ ಚೈತನ್ಯ ಕಲಾವಿದರು ಬೈಲೂರು ತಂಡದವರಿಂದ ‘ರಾಘು ಮಾಸ್ಟ್ರು’ ಹಾಸ್ಯಮಯ ತುಳು ನಾಟಕ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಆಸರೆ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈಯವರು ನೆರವೇರಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಜೇಶ್ ಚೌಟ, ಮಾಜಿ ಮಂತ್ರಿ ಕೃಷ್ಣ ಜೆ ಪಾಲೇಮಾರ್, ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ, ಗುತ್ತಿಗೆದಾರ ರಾಜಶೇಖರ್ ಕೋಟ್ಯಾನ್, ಸಮಾಜಸೇವಕ ಅರ್ಜುನ್ ಭಂಡಾರ್ಕರ್ ಅವರ ಘನ ಉಪಸ್ಥಿತಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಜನಪ್ರಿಯ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮವು ಮೇ 02 ರಂದು ಶನಿವಾರ ಸಂಜೆ 6.30 ಕ್ಕೆ ಸರಿಯಾಗಿ ಶ್ರೀ ಅಯ್ಯಪ್ಪ ಭಜನಾ ಮಂದಿರ ಬಳಿ ಇರುವ ಮುಲ್ಲಕಾಡು ಕೇಂದ್ರ ಮೈದಾನದಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯಕಾರಿ ಸದಸ್ಯ ಸತೀಶ್ ಮುಂಚೂರು, ಕೋಸ್ಟಲ್ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ನರೇಶ್ ಪೂಜಾರಿ, ಸುಹಾನ ಟ್ರಾವೆಲ್ಸ್ ಮಾಲಕ ಸಯ್ಯದ್ ಅನ್ಸಾರ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಚಂದ್ರಶೇಖರ ಪೂಜಾರಿ, ದೀಪಕ್ ಕೆ ಪೂಜಾರಿ, ಬಬಿತ ರವೀಂದ್ರ, ಪ್ರಶಾಂತ್ ಪೂಜಾರಿ, ಸುಶಾಂತ್ ಶೆಟ್ಟಿ, ಗೌತಮ್ ನೊರೋನ್ಹ, ಪ್ರತೀಕ್ ಪೂಜಾರಿ, ವಕೀಲ ಶಿವಪ್ರಸಾದ್ ಶೆಟ್ಟಿ, ರಾಘವೇಂದ್ರ ಉಡುಪ, ಶಬರಿ ಗ್ಯಾರೇಜ್ ಮಾಲಕರಾದ ಎಂ ರಾಘವ ಅವರ ಗೌರವ ಉಪಸ್ಥಿತಿಯಿರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದ ಸುರತ್ಕಲ್ ನ ಡಿ ಟ್ರಿಕ್ಸ್ ಡಾನ್ಸ್ ಸ್ಟುಡಿಯೋ ಅವರಿಂದ ನೃತ್ಯ ಪ್ರದರ್ಶನವೂ ಜರುಗಲಿದ್ದು, ಕಾರ್ಯಕ್ರಮದ ನಿರೂಪಣೆಯನ್ನು ಖ್ಯಾತ ವಾರ್ತಾ ವಾಚಕಿ ಡಾ| ಪ್ರಿಯಾ ಹರೀಶ್ ನಡೆಸಿಕೊಡಲಿದ್ದಾರೆ. ಮುಲ್ಲಕಾಡು ಪರಿಸರದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಡಿಸ್ಟ್ರಿಂಕ್ಷನ್ ಪಡೆದ 3 ವಿದ್ಯಾರ್ಥಿಗಳಿಗೆ ಹಾಗೂ 10 ಶಾಲಾ ಶಿಕ್ಷಕಿಯರಿಗೆ ಸನ್ಮಾನ, ಸಮಾಜದ ಏಳಿಗೆಗಾಗಿ ದುಡಿದ ಊರಿನ ಪ್ರತಿ ಸಂಘ ಸಂಸ್ಥೆಯ ಪ್ರಮುಖರನ್ನು ಕೂಡಾ ಗೌರವಿಸಲಿದ್ದೇವೆ, ಎಲ್ಲರೂ ಸಮಯಕ್ಕೆ ಸರಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮುಲ್ಲಕಾಡು ಫ್ರೆಂಡ್ಸ್ ನ ಅಧ್ಯಕ್ಷರಾದ ಸುಚೇತನ್ ಜಿ ಕಾವೂರು ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಜೆಪ್ಪುಕುಡ್ಪಾಡಿ, ಜೆಪ್ಪು ಬಪ್ಪಾಲ್ ನಲ್ಲಿ ರಾತ್ರಿಯಿಡೀ ಪವರ್ ಕಟ್ ಮಾಮೂಲು. ಇದು ಸರಿಯಾಗುವುದು ಯಾವಾಗ.

ವರದಿ: ಡಾ.ಅಶೋಕ್ ಶೆಟ್ಟಿ ಬಿ.ಎನ್.BREAKING NEWSಮಂಗಳೂರು – ಮಂಗಳೂರನ್ನು ಸ್ಮಾರ್ಟ್ ಸಿಟಿ ಎನ್ನುತ್ತೇವೆ.ಆದರೆ,ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು ವಾರ್ಡ್ ನ ಜೆಪ್ಪು ಕುಡ್ಪಾಡಿ,ಜೆಪ್ಪು ಬಪ್ಪಾಲ್ ನಲ್ಲಿ ಮೆಸ್ಕಾಂ ಲೋಡ್ ಚಾರ್ಜಿಂಗ್, ಲೋಡ್ ಶೆಡ್ಡಿಂಗ್ ಎಂದು ರಾತ್ರಿಯಿಡೀ ಪವರ್ ಕಟ್ ಮಾಡುತ್ತಿದೆ. ಇದು ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಲ್ಲ.ಅವರು ಅವರ ಡ್ಯೂಟಿ ಯನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ.ಇಲ್ಲಿ ಮೆಸ್ಕಾಂ ಇಂಜಿನಿಯರ್ ಗಳು,ಲೈನ್ ಮೆನ್, ಮೆಸ್ಕಾಂ ಸಿಬ್ಬಂದಿಗಳು ಸಮಸ್ಯೆ ಶಮನಕ್ಕಾಗಿ ಪ್ರಾಮಾಣಿಕವಾಗಿ ರಾತ್ರಿ ಪೂರ್ತಿ ಶ್ರಮಿಸುತ್ತಲೇ ಇರುತ್ತಾರೆ.ಆದರೆ,ಪವರ್ ಜಂಪ್ ಆಗಿ ಪವರ್ ಕಟ್ ಆಗುತ್ತಲೇ ಇರುತ್ತದೆ.ಮಂಗಳೂರು ದಕ್ಷಿಣದ ಜನಪರ ಶಾಸಕರಾದ ವೇದವ್ಯಾಸ ಕಾಮತ್ ಅವರು ಪವರ್ ಕಟ್ ಸಮಸ್ಯೆ ಶಮನದ ಬಗ್ಗೆ ಶಾಶ್ವತ ಪರಿಹಾರವನ್ನು ಮೆಸ್ಕಾಂ ಕಂಡುಕೊಳ್ಳುವಂತೆ ಸೂಕ್ತ ವ್ಯವಸ್ಥೆ, ಕ್ರಮ ಜರುಗಿಸುವಂತೆ mp mlas news ಒತ್ತಾಯಿಸುತ್ತದೆ.

ಪ್ರಾದೇಶಿಕ ವಾರ್ತೆಗಳು

ಕನ್ನಡ ಝೇಂಕಾರ ಎಂದರೆ ನಮ್ಮ ಕನ್ನಡ ಭಾಷೆಯ ಮಧುರ ಧ್ವನಿಯ ಪ್ರತಿಫಲನ – ಪ್ರೊ. ಹೆಚ್ ಎನ್ ಆಂಜನೇಯಪ್ಪ.

ಕನ್ನಡದ ಸೊಗಸು ಶ್ರೀಮಂತಿಕೆ ಮತ್ತು ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಕನ್ನಡವು ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಅಸ್ತಿತ್ವ ಅದು ಒಂದು ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆ ಅನೇಕ ಕವಿಗಳು ಸಾಹಿತ್ಯ ಸಾಹಿತ್ಯ ಕರು ಮತ್ತು ಚಿಂತಕರಿಂದ ಬೆಳಗಿದೆ. ಹಳೆಗನ್ನಡ ನಡುಗನ್ನಡ ಮತ್ತು ಹೊಸಗನ್ನಡ ಕವಿಗಳ ಬಗ್ಗೆ ಮಾತನಾಡಿದರು ಈ ಕಾರ್ಯಕ್ರಮವು ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಕನ್ನಡದ ಬಗ್ಗೆ ಆಸಕ್ತಿ ಗೌರವ ಮತ್ತು ಅಭಿಮಾನವನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದ ಮುಖ್ಯಸ್ಥ ಪ್ರೊಫೆಸರ್ ಹೆಚ್ ಎನ್ ಆಂಜನೇಯಪ್ಪ ಹೇಳಿದರು. ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭೀವೃದ್ದಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಮಂಗಳೂರು ಪುರಭವನದಲ್ಲಿ 25-04- 2026 ರಂದು ಆಯೋಜಿಸಿದ್ದ ಕನ್ನಡ ಝೇಂಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ತಂತ್ರಜ್ಞಾನದಲ್ಲಿ ನಾವು ಇಂಗ್ಲಿಷ್ ಮತ್ತು ಇತರ ಭಾಷೆಗಳೊಂದಿಗೆ ಮುಂದೆ ಸಾಗುತ್ತಿದ್ದರು ತಮ್ಮ ತಾಯಿ ಭಾಷೆಯನ್ನು ಮರೆಯಬಾರದು. ಕನ್ನಡವನ್ನು ದಿನನಿತ್ಯ ಜೀವನದಲ್ಲಿ ಬಳಸುವುದರಿಂದ ಮಾತ್ರ ಅದು ಜೀವಂತವಾಗಿರುತ್ತದೆ. ಈ ಕಾರ್ಯಕ್ರಮದ ಮೂಲಕ ನಾವು ನಮ್ಮ ಕನ್ನಡ ಭಾಷೆಯ ಮೇಲೆ ಇರುವ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸುತ್ತಿದ್ದೇವೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತರುವ ವೇದಿಕೆಯಾಗಿ ಈ ಕಾರ್ಯಕ್ರಮ ಕಾರ್ಯ ನಿರ್ವಹಿಸುತ್ತದೆ. ಹಾಡು ನೃತ್ಯ ಕವನ ನಾಟಕ ಇತ್ಯಾದಿಗಳ ಮೂಲಕ ಕನ್ನಡದ ವೈವಿಧ್ಯತೆಯನ್ನು ನಾವು ಕಾಣಬಹುದು. ಇಂದಿನ ತಂತ್ರಜ್ಞಾನದಲ್ಲಿ ನಾವು ನಮ್ಮ ಭಾಷೆಯನ್ನು ಮರೆಯದೆ ಅದನ್ನು ಉಳಿಸಿ ಬೆಳೆಸುವುದು ಬಹಳ ಮುಖ್ಯ ಮನೆಗಳಲ್ಲಿ ಶಾಲೆಗಳಲ್ಲಿ ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ನಾವು ಅದನ್ನು ಜೀವಂತವಾಗಿಡಬಹುದು ಎಂದ ಅವರು ಇಂತಹ ವೈವಿದ್ಯಮಯ ಕಾರ್ಯಕ್ರಮ ಆಯೋಜಿಸಿದ ರಾಣಿ ಪುಷ್ಪಲತಾ ದೇವಿ ಸಾರಥ್ಯದ KSSAP ಕಾರ್ಯ ಅಭಿನಂದನಾರ್ಹ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತನ್ನ ವಿಶ್ರಾಂತ ಜೀವನದಲ್ಲೂ ಶಾಲಾ ಮಕ್ಕಳ ಬುದ್ಧಿಮತ್ತೆಯನ್ನು ವೃದ್ಧಿಸಲು 1400ಕ್ಕೂ ಹೆಚ್ಚು ಉಪನ್ಯಾಸ ನೀಡಿರುವ /ನೀಡುತ್ತಿರುವ ಬೆಂಗಳೂರಿನ ಓಂಕಾರಪ್ರಿಯ ಬಾಗೇಪಲ್ಲಿ ಅವರಿಗೆ KSSAP ಕನ್ನಡ ಕಣ್ಮಣಿ ಪ್ರಶಸ್ತಿ ಹಾಗೂ ಮಂಗಳೂರಿನ ಸೌಂಡ್ ಇಂಜಿನಿಯರ್ ಗಣೇಶ್ ಬಂಗೇರ ಇವರಿಗೆ ಸೂಪರ್ ಸೌಂಡ್ ಮಾಸ್ಟರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹಾಯಕ ಪ್ರಾಧ್ಯಾಪಕಿ ಅಕ್ಷಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಆಯಿಷಾ ಪೆರ್ನೆ, ಮೂಗಪ್ಪ ಗಾಳೇರ, ಆಕೃತಿ ಐ.ಎಸ್.ಭಟ್, ತನ್ಸೀರಾ ಆತೂರು, ಸುಲೋಚನಾ ನವೀನ್ ಕೊಟ್ಟಾರ, ನಿರೀಕ್ಷಿತಾ ಮಂಗಳೂರು, ರಶ್ಮಿ ಸನಿಲ್, ಸುಖಲತ ಶೆಟ್ಟಿ. ರೇಖಾ ಸುದೇಶ್ ರಾವ್, ವ. ಉಮೇಶ್ ಕಾರಂತ, ಅನಿತಾ ಶೆಣೈ, ಎಂ.ಎ. ಮುಸ್ತಫಾ ಬೆಳ್ಳಾರೆ, ಓಂಕಾರಪ್ರಿಯ ಬಾಗೇಪಲ್ಲಿ, ಮುಂತಾದ ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಮ.ನ.ಪಾ. ನಗರ ಯೋಜನಾಧಿಕಾರಿ ನಾಗೇಂದ್ರ ಎನ್. ಕವಿ ಬರಹಗಾರ, ಶಿವಪ್ರಸಾದ್ ಕೊಕ್ಕಡ, ಸಾಮಾಜಿಕ ಚಿಂತಕ ರಂಜನ್ ಕುಮಾರ್, ಸಾಮಾಜಿಕ ಚಿಂತಕ ಗಂಗಾಧರ್ ಗಾಂಧೀ ಭಾಗವಹಿಸಿದ್ದರು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಡಿನಾಡು ಸಾಂಸ್ಕೃತಿಕ ಕಲಾ ತಂಡ ಇವರಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಲ್ಲದೆ ಗಾಯನದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಗಂಗಾಧರ್ ಗಾಂಧೀ ಬಳಗವು ಬೆಳ್ಳಿ ತೆರೆಯ ಬಂಗಾರದ ಗೀತೆಗಳನ್ನು ಸಾದರ ಪಡಿಸಿತು. ಕನ್ನಡ ಶಿಕ್ಷಕಿ ರೇಖಾ ಸುದೇಶ್ ರಾವ್ ಒಂದೇ ಮಾತರಂ ಗೀತೆ ಹಾಡಿ ಪ್ರಾರ್ಥಿಸಿದರು.ರಶ್ಮಿ ಸನಿಲ್ ನಿರೂಪಿಸಿದರು

ಪ್ರಾದೇಶಿಕ ವಾರ್ತೆಗಳು

ಬಂಟರ ಯಾನೆ ನಾಡವರ ಮಾತೃ ಸಂಘ: ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ ಹೇಳಿದರು.ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ, ವಕೀಲರಾದ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

2030ರೊಳಗೆ ಕರ್ನಾಟಕವನ್ನು ಜೂಡೋ ಶಕ್ತಿಕೇಂದ್ರವನ್ನಾಗಿಸುವ ಗುರಿ: ಯತೀಶ್‌ ನಾರಾಯಣ್ ಬಂಗೇರ

ಮಂಗಳೂರು,ಎ.30: 2030ರ ವೇಳೆಗೆ ಕರ್ನಾಟಕವನ್ನು ಭಾರತದಜೂಡೋ ಪ್ರಧಾನ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ‘ವಿಷನ್ 2030′ ನೀಲನಕ್ಷೆ ಆರಂಭಿಸಲಾಗಿದೆ’ ಎಂದು ಕರ್ನಾಟಕ ಸ್ಟೇಟ್ ಜೂಡೋ ಸ್ಪೋರ್ಟ್ಸ್ ಅಸೊಸಿಯೇಶನ್ ಪ್ರಮುಖರಾದ ಯತೀಶ್ ನಾರಾಯಣ್ ಬಂಗೇರ ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಸೇರಿದಂತೆ ರಾಜ್ಯದ ಜೂಡೋ ಕ್ರೀಡೆಯ ಗತವೈಭವವನ್ನು ಮರುಸ್ಥಾಪಿಸಲು ಈ ದೂರದೃಷ್ಟಿಯ ಯೋಜನೆ ರೂಪಿಸಲಾಗಿದೆ ಎ೦ದರು. 2030ರ ಕಾಮನ್‌ವೆಲ್ತ್ ಕ್ರೀಡಾಕೂಟ ಭಾರತದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರಕ್ಕೆ ಗರಿಷ್ಠ ಪದಕಗಳನ್ನು ತಂದುಕೊಡುವ ಗುರಿ ಹೊಂದಲಾಗಿದೆ ಎ೦ದು ತಿಳಿಸಿದರು. ‘ಗ್ರಾಸ್‌ರೂಟ್ಸ್ ಟು ಗೋಲ್ಡ್’ ಕಾರ್ಯಕ್ರಮದಡಿ ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ಗುರುತಿಸಿ ಬೆಳೆಸಲಾಗುವುದು. ಉಡುಪಿ, ಮಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ಅತ್ಯಾಧುನಿಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು.ಕ್ರೀಡಾ ಸಂಸ್ಥೆಗಳ ಪ್ರಸ್ತುತ ಸ್ಥಿತಿಗತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, “ನಾಯಕತ್ವವು ಕ್ರೀಡಾಪಟುಗಳ ಪ್ರಗತಿಗಿಂತ ವೈಯಕ್ತಿಕ ಲಾಭಕ್ಕೆ ಆದ್ಯತೆ ನೀಡುತ್ತಿದೆ. ಆಡಳಿತಾತ್ಮಕ ವೈಫಲ್ಯಗಳಿಂದ ಸಂಸ್ಥೆಗಳು ಹಿನ್ನಡೆಯಾಗುತ್ತಿವೆ” ಎಂದು ಹೇಳಿದರು. ಇದನ್ನು ಸರಿಪಡಿಸಲು ಡಿಜಿಟಲ್ ಪೋರ್ಟಲ್ ಮೂಲಕ ಪಾರದರ್ಶಕ ನೋಂದಣಿ ವ್ಯವಸ್ಥೆ ಹಾಗೂ ಮೂರನೇ ವ್ಯಕ್ತಿಯಿಂದ ಹಣಕಾಸು ಲೆಕ್ಕಪರಿಶೋಧನೆ ಜಾರಿಗೆ ತರಲಾಗುವುದು ಎಂದು ಘೋಷಿಸಿದರು. ಶಾಲೆಗಳಲ್ಲಿ ಆತ್ಮರಕ್ಷಣೆಗಾಗಿ ಜೂಡೋವನ್ನು ಕಡ್ಡಾಯ ಆಯ್ಕೆಯಾಗಿ ಪರಿಚಯಿಸುವುದರ ಜೊತೆಗೆ, ಪದಕ ವಿಜೇತರಿಗೆ ಪೊಲೀಸ್ ಮತ್ತು ಆಡಳಿತಾತ್ಮಕ ಸೇವೆಗಳಲ್ಲಿ ರದ್ದುಗೊಂಡಿರುವ ಕ್ರೀಡಾ ಕೋಟಾವನ್ನು ಪುನಃಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು. “ಭ್ರಷ್ಟಾಚಾರದ ಯುಗ ಕೊನೆಗೊಳ್ಳಬೇಕು; ಕ್ರೀಡಾಪಟುಗಳ ಯುಗ ಆರಂಭವಾಗಬೇಕು’ ಎಂದು ಅವರು ಅಭಿಪ್ರಾಯಪಟ್ಟರು. ಪತ್ರಿಕಾಗೋಷ್ಠಿಯಲ್ಲಿ ಅಡ್ವಕೇಟ್ ಎ.ಪಿ ಮೊಂತೆರೋ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ಮಾಧ್ಯಮ ಶ್ರೇಷ್ಠತಾ ಪ್ರಶಸ್ತಿ ಪ್ರದಾನ. *ಮಾಧ್ಯಮ ಸಮಾವೇಶ ಸಮಾರೋಪ

ಮಂಗಳೂರು,ಎ.29;ನಿಟ್ಟೆ ವಿಶ್ವವಿದ್ಯಾ ನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರಿಗೆ ಮಾಧ್ಯಮ ಶ್ರೇಷ್ಠತಾ ಪ್ರಶಸ್ತಿ – 2026 ಅನ್ನು ಪ್ರದಾನ ಮಾಡಲಾಯಿತು.ನಿಟ್ಟೆ ವಿಶ್ವವಿದ್ಯಾನಿಲಯದ ಉಪ ಕುಲಸಚಿವೆ ಪ್ರೊ. ಡಾ. ಸುಮಾ ಬಲ್ಲಾಳ್ ಅವರು ಸಮಾರೋಪ ಭಾಷಣ ಮಾಡಿದರು. ಮಾಧ್ಯಮವು ಸತ್ಯಾಂಶ, ದತ್ತಾಂಶಗಳನ್ನು ಆಧಾರವಾಗಿ ಇರಿಸಿಕೊಂಡು ಮಾನವ ಪರವಾದ ವರದಿಗಾರಿಕೆಯನ್ನು ಮಾಡಬೇಕಾದ್ದು ಮಾಧ್ಯಮಗಳ ಪ್ರಮುಖ ಕೆಲಸವಾಗಬೇಕು ಎಂದು ಕಿವಿಮಾತು ಹೇಳಿದರು. ಮಾಧ್ಯಮವು ಈಗ ಹಿಂದಿನಂತೆ ಉಳಿದಿಲ್ಲ; ಹೊಸ ಹೊಸ ಆಯಾಮಗಳನ್ನು ಅಳವಡಿಸಿಕೊಂಡಿದೆ. ಕೃತಕ ಬುದ್ಧಿಮತ್ತೆ ಇತ್ಯಾದಿ ತಂತ್ರಜ್ಞಾನಗಳ ಅಳವಡಿಕೆಯಾಗಿದೆ. ಆದರೆ, ಈ ಸಮಾವೇಶದ ಆಶಯವಾದ ಶಾಂತಿ, ಯುದ್ಧವಿರಾಮ ಇಂತಹ ವಿಚಾರಗಳಲ್ಲಿ ಮಾಧ್ಯಮವು ಜನಪರವಾದ ನಿಲುವುಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಗೌರವ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ರಾಯ್ಟರ್ಸ್‌ ನಿವೃತ್ತ ವರದಿಗಾರ ಸ್ಟ್ಯಾನ್ಲಿ ಕರ್ವಾಲೋ, ಕೃತಕ ಬುದ್ಧಿಮತ್ತೆ ಸುದ್ದಿಯನ್ನು ನಿರ್ಧರಿಸಬಾರದು. ಸುದ್ದಿಯನ್ನು ಪ್ರಕಟಿಸಲು ವರದಿಗಾರನಿಗೆ ಸ್ವಾತಂತ್ರ್ಯ ಇರಬೇಕು. ಅಂತೆಯೇ ಸುದ್ದಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವೂ ಓದುಗನಿಗೆ ಇರಬೇಕು ಎಂದು ಹೇಳಿದರು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಿದಂಬರ ಅವರು, ಸತ್ಯಾಧಾರಿತ ವರದಿಗಾರಿಕೆಗೆ ನಾನು ಆದ್ಯತೆ ನೀಡಿದೆ. ಅದರಿಂದ ನಾನು ಸಾಕಷ್ಟು ಕಲಿತಿದ್ದೇನೆ. ವಿದ್ಯಾರ್ಥಿಗಳು ಸತ್ಯಾಂಶವನ್ನು ಸಂಶೋಧಿಸಿ, ಧೈರ್ಯದಿಂದ ವರದಿ ಮಾಡುವ ಕಲೆಯನ್ನು ಈಗಿಂದಲೇ ಕಲಿತುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಸಹ ಪ್ರಾಧ್ಯಾಪಕ ಡಾ. ನೇಸರ ಕಾಡನಕುಪ್ಪೆ ಪ್ರಶಸ್ತಿ ಸಂದೇಶ ವಾಚಿಸಿದರು. ಹಿರಿಯ ಪತ್ರಿಕೋದ್ಯಮ ಪ್ರಾಧ್ಯಾಪಕ ಡಾ. ವರದೇಶ್‌ ಹಿರೇಗಂಗೆ ಅವರು ಸಮಾರಂಭವನ್ನು ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಭಾಗವಹಿಸಿದ್ದರು.ಕಾಲೇಜಿನ ಮುಖ್ಯಸ್ಥರಾದ ಡಾ. ಮೌಲ್ಯ ಬಾಲಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಹಾಗೂ ಸಮಾವೇಶದ ಸಂಘಟನಾ ಕಾರ್ಯದರ್ಶಿ ಡಾ. ಅನಿಶಾ ವಂದನಾರ್ಪಣೆ ಮಾಡಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಪ್ರಣಮ್ಯ ಭಟ್ ನಿರೂಪಿಸಿದರು. ಸಮಾವೇಶದಲ್ಲಿ ಆಯೋಜಿಸಿದ್ದ ಪತ್ರಿಕಾ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪತ್ರಕರ್ತರು, ಪೋಸ್ಟರ್‌ ಪ್ರದರ್ಶನ ಸ್ಪರ್ಧೆಯ ವಿಜೇತರು ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.ಸಮಾವೇಶದ ಗೋಷ್ಠಿ ಹಾಗೂ ಮಾಧ್ಯಮ ಕಾರ್ಯಾಗಾರ:ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ವಿಚಾರ ಗೋಷ್ಠಿಯಲ್ಲಿ ಟೈಮ್ಸ್ ಆಫ್‌ ಇಂಡಿಯಾ ಹಿರಿಯ ಸಹಾಯಕ ಸಂಪಾದಕ ಚೇತನ್‌ ಕುಮಾರ್, ಹಿರಿಯ ಪತ್ರಕರ್ತ ಹಾಗೂ ರಾಯ್ಟರ್ಸ್‌ ನಿವೃತ್ತ ವರದಿಗಾರ ಸ್ಟ್ಯಾನ್ಲಿ ಕರ್ವಾಲೋ ವಿಚಾರ ಮಂಡಿಸಿದರು. ಮಣಿಪಾಲ್ ಸಮಾಜ ವಿಜ್ಞಾನ, ಮಾನವಿಕ ಹಾಗೂ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿಗ್ನೇಶ್‌ ರಾಮ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯನಿರತ ಪತ್ರಕರ್ತರಿಗಾಗಿ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಾಗಾರವನ್ನು ಡೇಟಾ ಲೀಡ್ಸ್‌ ಅಕಾಡೆಮಿಯ ಎಐ ಫಾರ್‌ ಡಿಜಿಟಲ್ ರೆಡಿನೆಸ್ ಅಂಡ್ ಅಡ್ವಾನ್ಸ್‌ಮೆಂಟ್‌ (ADiRA) ಸಂಸ್ಥೆಯ ಎಸ್‌. ಕುಮಾರ್‌ ಅವರು ನಡೆಸಿಕೊಟ್ಟರು.

ಪ್ರಾದೇಶಿಕ ವಾರ್ತೆಗಳು

ಸಂದೀಪ್ ವಾಗ್ಲೆ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀಳ್ಕೊಡುಗೆ

ಮಂಗಳೂರು-ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಕನ್ನಡಪ್ರಭ ದೈನಿಕದ ಮಂಗಳೂರು ಪ್ರಧಾನ ವರದಿಗಾರ ,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಸಂದೀಪ್ ವಾಗ್ಲೆ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಏಪ್ರಿಲ್ 28ರಂದು ಅಧ್ಯಕ್ಷ ಪುಷ್ಪರಾಜ್ ಬಿ. ಎನ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು,ಕಾರ್ಯಕಾರಿ ಸಮಿತಿ ಸದಸ್ಯರು,ಮಾಧ್ಯಮ ಮಿತ್ರರ ಉಪಸ್ಥಿತಿಯೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಬೀಳ್ಕೊಡುಗೆ ಸಮಾರಂಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ. ಎನ್.,ಪತ್ರಿಕಾಭವನ ಟ್ರಸ್ಟ್ ನ ಅಧ್ಯಕ್ಷ ಅನ್ನು ಮಂಗಳೂರು,ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರಿಫ್ ಪಡುಬಿದ್ರಿ,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್,ಕಾರ್ಯದರ್ಶಿ ಸಿದ್ದಿಕ್ ನೀರಾಜೆ,ಮಹಾರಾಷ್ಟ್ರ ಕನ್ನಡಿಗರ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್,ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್,ಸುರೇಶ್ ಪಳ್ಳಿ, ಕಿರಣ್ ಸಿರ್ಸಿಕರ್, ಲಕ್ಷ್ಮೀ ನಾರಾಯಣ ರಾವ್,ಹರೀಶ್ ಕೆ. ಅದ್ದೂರು, ಅಭಿಷೇಕ್ ಹೆಚ್.ಎಸ್ , ಜಯಶ್ರೀ,ಮಾಧ್ಯಮ ಮಿತ್ರರಾದ ವಿನೋದ್ ಕುಮಾರ್ ಕೆ, ನಮ್ಮ ಟಿವಿಯ ಪ್ರಸನ್ನ ಪೂಜಾರಿ,ಕರಾವಳಿ ತರಂಗಿಣಿ ಪತ್ರಿಕೆಯ ಪ್ರೀತಮ್ ರೈ, ಲಲಿತಶ್ರೀ ಮೊದಲಾದವರು ಉಪಸ್ಥಿತರಿದ್ದರು. ಸಂದೀಪ್ ವಾಗ್ಲೆಯವರು ಮಂಗಳೂರು ವಿ. ವಿ.ಯಿಂದ ಪತ್ರಿಕೋದ್ಯಮದಲ್ಲಿ ಪಿಹೆಚ್ ಡಿ ಪದವಿ ಪಡೆದವರು. ಕಳೆದ 22 ವರ್ಷಗಳಲ್ಲಿ ಮಂಗಳೂರು ಪತ್ರಿಕೋದ್ಯಮದಲ್ಲಿ ಅಧ್ಯಯನಶೀಲ ಪತ್ರಕರ್ತರಾಗಿ ಗುರುತಿಸಿಕೊಂಡವರು. ಪ.ಗೋ .ಪ್ರಶಸ್ತಿ ಗೆ ಪಾತ್ರರಾಗಿರುವ ಅವರು ಉತ್ತಮ ಪತ್ರಕರ್ತರೆಂದು ಅಧ್ಯಕ್ಷ ಪುಷ್ಪರಾಜ್ ಬಿ. ಎನ್.ಹೇಳಿದರು. ಆರಿಫ್ ಪಡುಬಿದ್ರಿ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ,ವಂದಿಸಿದರು. ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಾ ಗೌರವಿಸುವ ಸಂದೀಪ್ ವಾಗ್ಲೆಯವರು ಭವಿಷ್ಯ ದಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡಲಿ.ಅವರಿಗೆ ಶುಭವಾಗಲೆಂದುmpmlas news ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್. ಅವರು ಶುಭ ಹಾರೈಸಿದ್ದಾರೆ.

Scroll to Top