Author name: editor

ಪ್ರಾದೇಶಿಕ ವಾರ್ತೆಗಳು

ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು,ಎ.20: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ , ಶ್ರೀ ಶಾರದಾ ಪೂಜಾ ಸಮಿತಿ, ಮಂಗಳಾ ಫ್ರೆಂಡ್ಸ್ ಸರ್ಕಲ್ ಊರ್ವಸ್ಟೋರ್ ಹಾಗೂ ಎ ಜೆ ಆಸ್ಪತ್ರೆ ಯ ಜಂಟಿ ಆಶ್ರಯದಲ್ಲಿ ಊರ್ವ ಸ್ಟೋರ್ ನ ಮಾನಸ ಮಂಟಪದ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ರವಿವಾರ ನಡೆಯಿತು.ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಅಧ್ಯಕ್ಷ ರೋ. ಬ್ರಾಯನ್ ಪಿಂಟೋ , ರೋಟರಿ ಜಿಲ್ಲೆ 3181 ಅಸಿಸ್ಟೆಂಟ್ ಗವರ್ನರ್ ಕೆ. ಯಂ .ಹೆಗ್ಡೆ , ಎ ಜೆ ದಂತ ಮಹಾ ವಿದ್ಯಾಲಯದ ಸಮುದಾಯ ಸೇವಾ ವಿಭಾಗದ ಮುಖ್ಯಸ್ಥೆ ಡಾ .ವಿಜಯ ಹೆಗ್ಡೆ ಹಾಗೂ ರೋಟರಿ ಪದಾಧಿಕಾರಿಗಳಾದ ರವಿ ಜಲನ್, ಸಾಯಿಬಾಬಾ ರಾವ್, ರಾಜೇಶ್ ಶೆಟ್ಟಿ,ಡೆರಿಲ್ ,ಆರ್ ಒ ಟಿ ಮಂಗಳ ಸ್ಫೋರ್ಟ್ಸ್ ಸರ್ಕಲ್ ಊರ್ವ ಸ್ಟೋರ್ ನ ಅಧ್ಯಕ್ಷ. ರಮೇಶ್ ಶೆಟ್ಟಿ ಮಾಜಿ ರೋಟರಿ ಗವರ್ನರ್ ದೇವ ದಾಸ್ ರೈ, ಜಗನ್ನಾಥ್ ಶೆಟ್ಟಿ, ಜಾಕ್ಸನ್ ಸಲ್ದಾನಾ,ಡೆರಿಲ್ ಸ್ಟೀವನ್ ಡಿಸೋಜ, ಆ್ಯನ್ಸ್ ಪೂರ್ಣಿಮಾ ರೈ, ಪ್ರಮೀಳಾ ಹೆಗ್ಡೆ, ಗೀತಾ ಬಿ ರೈ ಎ ಜೆ ಆಸ್ಪತ್ರೆ ಯ ವೈದ್ಯರು ಗಳು ಉಪಸ್ಥಿತರಿದ್ದರು. ರೋ ರಾಜ್ ಗೋಪಾಲ್ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಕೆ ಯಂ ಹೆಗ್ಡೆ ರೋಟರಿ ಕ್ಲಬ್ ಹಮ್ಮಿ ಕೊಂಡಿರುವ ಸಾಮಾಜಿಕ ಕಾರ್ಯ ಕ್ರಮಗಳ ಮಾಹಿತಿ ನೀಡಿದರು. ಎ ಜೆ ದಂತ ಮಹಾ ವಿದ್ಯಾಲಯದ ಕ. ಕಮ್ಯುನಿಟಿ ದಂತವೈದ್ಯ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಹೆಗ್ಡೆ ಶಿಬಿರದ ಮಹತ್ವವನ್ನು ತಿಳಿಸಿದರು.ರೋ ಭಾಸ್ಕರ್ ರೈ ಕಟ್ಟ ನಿರೂಪಿಸಿದರು.ಶಿಬಿರದಲ್ಲಿ ಹೃದಯ ತಪಾಸಣೆ, ಕಣ್ಣು ತಪಾಸಣೆ , ಅಗತ್ಯ ವಿದ್ದವರಿ ಗೆ ಕನ್ನಡಕ ವಿತರಣೆ, ರಕ್ತ ದೊತ್ತಡ ಸೇರಿದಂತೆ ಎಲ್ಲಾ ರೀತಿಯ ವೈದ್ಯಕೀಯ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಯನ್ನು ನೀಡ ಲಾ ಯಿತು. ಶಿಬಿರದಲ್ಲಿ 124 ಫಲಾನುಭವಿಗಳಿಗೆ ಉಚಿತ ತಪಾಸಣೆ ನಡೆಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಕ್ರೀಡೆಯಿಂದ ಮನಸ್ಸು ಹಗುರ: ಡಿವೈಎಸ್ ಪಿ ಮಹೇಶ್ ಕುಮಾರ್. ಸೂರಿಂಜೆಯಲ್ಲಿ ಸ್ನೇಹ ಸಮ್ಮಿಲನ ಕೂಟ

ಸುರತ್ಕಲ್: ಸುರತ್ಕಲ್ ಸ್ಪೋಟ್ಸ್೯ ಮತ್ತು ಕಲ್ಚರಲ್ ಕ್ಲಬ್ (ರಿ) ಇದರ ಆಶ್ರಯದಲ್ಲಿ ಸುರತ್ಕಲ್ ನಲ್ಲಿ ನಡೆದ ಲೆಜಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 4 ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಯಶಸ್ಸಿನ ಹಿನ್ನಲೆಯಲ್ಲಿ ಸೂರಿಂಜೆಯಲ್ಲಿ ಮನೋಹರ್ ಶೆಟ್ಟಿಯವರ ಮನೆಯಲ್ಲಿ ಸ್ನೇಹ ಸಮ್ಮಿಲನ ಕೂಟ ಆಯೋಜಿಸಲಾಗಿತ್ತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಮಹಾಪೋಷಕ ವಿರಾಜಪೇಟೆ ಡಿವೈಎಸ್ ಪಿ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕ್ರೀಡೆಯಿಂದ ಮನಸ್ಸು ಹಗುರ ಗೊಳ್ಳುತ್ತದೆ, ಕ್ರೀಡೆ ವ್ಯಾಯಾಮಕ್ಕೂ ಸಹಕಾರಿಯಾಗುತ್ತದೆ ಎಂದರು.ಸುರತ್ಕಲ್ ಸ್ಪೋಟ್ಸ್೯ ಮತ್ತು ಕಲ್ಚರಲ್ ಕ್ಲಬ್ ನಲ್ಲಿ ಕುಟುಂಬದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಕೂಡಾ ಇಂತಹ ಸಂಘಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂದಿನ‌ ದಿನಗಳಲ್ಲಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿ ಮಹಿಳಾ ವಿಭಾಗವನ್ನೂ ರಚಿಸಬೇಕು. ಇಂತಹ ಸಂಘಟನೆಗಳು ಬೆಳೆಯಬೇಕು, ಅದಕ್ಕೆ ಎಲ್ಲರ ಸಹಕಾರವೂ ಬೇಕು ಎಂದು ಡಿವೈಎಸ್ ಪಿ ಮಹೇಶ್ ಕುಮಾರ್ ತಿಳಿಸಿದರು.ಸ್ಪೋಟ್ಸ್೯ ಕ್ಲಬ್ ನ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ನಲ್ಲಿ ಸ್ಪೋಟ್ಸ್೯ ಮತ್ತು ಕಲ್ಚರಲ್ ಕ್ಲಬ್ ಬೆಳೆಯುವಲ್ಲಿ ಯುವಕರ ಶ್ರಮ ಬಹಳಷ್ಟಿದೆ. ಮುಂದಿನ ದಿನಗಳಲ್ಲೂ ಇದು ಸಂಘಟನಾತ್ಮಕವಾಗಿ, ಸೌಹಾರ್ದತಯುತವಾಗಿ ಸಮಾಜ ಪರ ಚಿಂತನೆಯಲ್ಲಿ ಬೆಳೆಯಲಿ ಎಂದರು.ಸಂಚಾಲಕರಾದ ಮನೋಹರ ಶೆಟ್ಟಿ ಸೂರಿಂಜೆ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಕಾರ್ಯದರ್ಶಿ ಕಿರಣ್ ಅಚಾರ್ಯ ಸುರತ್ಕಲ್ , ನಾಗರಾಜ್ ಕಡಂಬೋಡಿ, ಕೇಸರಿ ಮನೋಹರ ಶೆಟ್ಟಿ , ಸುಧಾಕರ ಪೂಂಜ ,ಪುಷ್ಪರಾಜ್ ಶೆಟ್ಟಿ ಮಧ್ಯ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಮುಂತಾದವರು ಉಪಸ್ಥಿತರಿದ್ದರು. ಸುರತ್ಕಲ್ ಸ್ಪೋಟ್ಸ್೯ ಮತ್ತು ಕಲ್ಚರಲ್ ಕ್ಲಬ್ ನ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಕಿರಣ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಅರಂತಬೆಟ್ಟುಗುತ್ತು ಮಾರ್ಲ ಮನೆತನದ ಗಡಿಪ್ರಧಾನ ಕಾರ್ಯಕ್ರಮ, ಆಮಂತ್ರಣ ಪತ್ರಿಕೆ ಬಿಡುಗಡೆ. ಮೇ 4, 5 ರಂದು ಕಾರ್ಯಕ್ರಮ

ಸುರತ್ಕಲ್: ಅರಂತಬೆಟ್ಟು ಗುತ್ತು ಶ್ರೀ ನಾಗದೇವರು ಶ್ರೀ ಉಳ್ಳಾಯ ಹಾಗೂ ಪರಿವಾರ ದೈವಗಳ ದೈವಸ್ಥಾನ ಇಲ್ಲಿ ಅರಂತಬೆಟ್ಟು ಗುತ್ತು ಮಾರ್ಲ ಮನೆತನದ ಗಡಿ ಸ್ವೀಕಾರ ಸಮಾರಂಭ ಮೇ 4 ರಂದು ಭಾನುವಾರ ಬೆಳಿಗ್ಗೆ 8.20 ಕ್ಕೆ ಅರಂತಬೆಟ್ಟುಗುತ್ತುವಿನಲ್ಲಿ ನಡೆಯಲಿದೆ. ಸುರತ್ಕಲ್ ಮಧುಸೂದನ‌ ಮಯ್ಯರವರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸುರತ್ಕಲ್ ಕೊಡಿಪಾಡಿ ಬಾಳಿಕೆ ಹಾಗೂ ಪಡ್ರೆ ಚಾವಡಿಯ ಗಡಿ ಪ್ರಧಾನರುಗಳ ಉಪಸ್ಥಿತಿಯಲ್ಲಿ ಹಾಗೂ ಗೌರವಾನ್ವಿತ ಎಲ್ಲಾ ಗಡಿ ಪ್ರಧಾನರ ಸಮ್ಮುಖದಲ್ಲಿ ಅರಂತಬೆಟ್ಟು ಗುತ್ತು ಮಾರ್ಲ ಮನೆತನದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿಯವರಿಗೆ ಕಾಂತೇರಿ ಜುಮಾದಿಯ ಗಡಿ ಸ್ವೀಕಾರ ನಡೆಯಲಿದೆ. ಕಾರ್ಯಕ್ರಮಗಳುಮೇ 4 ಭಾನುವಾರ ಬೆಳಿಗ್ಗೆ 8.20 ಗಡಿ ಸ್ವೀಕಾರ, 10.30 ಕ್ಕೆ ಧರ್ಮರಸು ಉಳ್ಳಾಯ, ಕಾಂತೇರಿ ಜುಮಾದಿ ಹಾಗೂ ಪರಿವಾರ ದೈವಗಳ ಭಂಡಾರ ಇಳಿಸುವುದು, ನಂತರ ಧರ್ಮರಸು ಉಳ್ಳಾಯ ದೈವಕ್ಕೆ ನೇಮ, ಮಧ್ಯಾಹ್ನ‌1 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ.ಸಂಜೆ 6 ಕ್ಕೆ ಮೈಸಂದಾಯ ದೈವಕ್ಕೆ ನೇಮ, ರಾತ್ರಿ 8 ಕ್ಕೆ ಅನ್ನ ಸಂತರ್ಪಣೆ, ರಾತ್ರಿ 9 ಕ್ಕೆ ಕಾಂತೇರಿ ಜುಮಾದಿ ಹಾಗೂ ಭಂಟ, ಸರಳ ಜುಮಾದಿ ಹಾಗೂ ಭಂಟ ದೈವಗಳಿಗೆ ನೇಮ, ನಂತರ ಪಿಲಿಚಾಮುಂಡಿ ದೈವಕ್ಕೆ ನೇಮ‌ ನಡೆಯಲಿದೆ.ಮೇ 5 ರಂದು ರಾತ್ರಿ 8 ಕ್ಕೆ ಕಲ್ಲುರ್ಟಿ ಪಂಜುರ್ಲಿ ಹಾಗೂ ಜಾಗದ ಪಂಜುರ್ಲಿ ದೈವಗಳಿಗೆ ಕೋಲ ನಡೆಯಲಿದೆ.ಆಮಂತ್ರಣ ಪತ್ರಿಕೆ ಬಿಡುಗಡೆಗಡಿ ಸ್ವೀಕಾರ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಎ.18 ರಂದು ಅರಂತಬೆಟ್ಟು ಗುತ್ತುವಿನಲ್ಲಿ ನಡೆಯಿತು.ಗಡಿ ಪ್ರಧಾನರಾದ ಬಾಬು ಬಂಡ್ರಿಯಾಲ್ ಪಡ್ರೆ, ಜಗನ್ನಾಥ ಅತ್ತಾರ್ ಕೊಡಿಪಾಡಿ, ಮಧು ಮಯ್ಯ, ರಮಾನಾಥ ರೈ, ಬಾಲಕೃಷ್ಣ ಶೆಟ್ಟಿ ಏಳಿಂಜೆ ಅಂಗಡಿಗುತ್ತು, ಪುಷ್ಪರಾಜ ಶೆಟ್ಟಿ ಕುಡುಂಬೂರು, ದಿನಕರ ಶೆಟ್ಟಿ ಪಡ್ರೆ, ದೇವೇಂದ್ರ ಪೂಜಾರಿ ಪಡ್ರೆ, ಸದಾನಂದ ಶೆಟ್ಟಿ, ನವೀನ್ ಶೆಟ್ಟಿ ಪಡ್ರೆ, ಅರಂತ ಬೆಟ್ಟು ಗುತ್ತು ಮನೆತನದ ಮುದ್ದಣ್ಣ ಶೆಟ್ಟಿ, ನವೀನ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ, ದಿಲ್ ರಾಜ್ ಆಳ್ವ, ಪ್ರಶಾಂತ್ ಶೆಟ್ಟಿ, ಜ್ಯೋತಿ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ವಿದ್ವಾನ್ ರಾಮಚಂದ್ರ ಉಚ್ಚಿಲ್ ಕೃತಿಸಂಚಯ ಲೋಕಾರ್ಪಣೆ ಮತ್ತು ಯಕ್ಷಗಾನ ತಾಳಮದ್ದಳೆ

ದೀರ್ಘಕಾಲ ಹೊರನಾಡು ಮುಂಬಯಿಯಲ್ಲಿದ್ದು, ಕನ್ನಡ ನಾಡುನುಡಿಯ ಕೈಂಕರ್ಯ ಮಾಡುತ್ತಾ ಅಲ್ಲಿ ಕನ್ನಡದ ಉಳಿವಿಗೆ, ಬೆಳವಣಿಗೆಗೆ ಶ್ರಮಿಸಿದ ವಿದ್ವಾನ್ ರಾಮಚಂದ್ರ ಉಚ್ಚಿಲರ ಬರಹ ಬದುಕನ್ನು ಅನಾವರಣಗೊಳಿಸಬೇಕು. ಅದು ದಾಖಲೀಕರಣಗೊಳ್ಳಬೇಕು ಎಂಬುದಾಗಿ ಈ ಮೇಲಿನ ಮೂರು ಸಂಸ್ಥೆಗಳು ಒಂದುಗೂಡಿ ಮಾಡಿದ ಕಾರ್ಯವೇ ಚ.ರಾ. ನೆನಪಿನ ನಾಲ್ಕು ಸಂಪುಟಗಳ ಸಂಚಯ. ಉಚ್ಚಿಲರ ಹುಟ್ಟೂರಿನಲ್ಲಿ ಈ ಸಂಪುಟಗಳು ಲೋಕಾರ್ಪಣೆಗೊಳ್ಳುತ್ತಿರುವುದು ಅದೂ ಉಚ್ಚಿಲರ ಜನ್ಮ ಶತಮನೋತ್ಸವದ ಸಂಸ್ಮರಣೆಯನ್ನು ಮಾಡುವ ವಿಶೇಷ ದಿನ. ಅದರೊಂದಿಗೆ ಡಾ. ವಾಣಿ ಎನ್. ಉಚ್ಚಿಲ್ಕರ್ ರವರ ಮೂರು ಕೃತಿಗಳು ಹಾಗೂ ಇನ್ನೊಂದು ಸಂಪಾದಿತ ಕೃತಿ ಹಾಗೆ ಒಟ್ಟು 8 ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.ಚ.ರಾ. ನೆನಪಿನ ಸಂಪುಟ ಒಂದರಲ್ಲಿ ಚ.ರಾ.ರವರ ಪ್ರಕಟಿತ ಕೃತಿಗಳಲ್ಲಿ 5 ಕೃತಿಗಳನ್ನು 1 ಸಂಪುಟವಾಗಿ ಸಂಕಲಿಸಲಾಗಿದೆ. ಸಂಪುಟ ಒಂದರಲ್ಲಿ ಕಡಲಕರೆಯ ಚಿತ್ರಗಳು, ೨ನೇ ಕೃತಿ ಪದರ, ೩ನೇ ಕೃತಿ ನೆನಪಿನ ಬುತ್ತಿ 4ನೇ ಕೃತಿ ಯಕ್ಷಗಾನ ನಡೆದು ಬಂದ ದಾರಿ ಹಾಗೂ ೫ನೇ ಕೃತಿ ಗಿಡ, ಮರ, ಬಳ್ಳಿ, ಮೂಲಿಕೆಗಳು ಇದರ ಮೂಲಗ್ರಂಥ ೧೮೮೧ರಲ್ಲಿ ಪ್ರಕಟವಾಗಿ ಆಗಲೇ 3 ಆವೃತ್ತಿಗಳನ್ನು ಕಂಡಿರುವುದು ಇಲ್ಲಿಯ ವೈಶಿಷ್ಟ್ಯ.ಚ.ರಾ. ನೆನಪಿನ ಸಂಪುಟ 2ರಲ್ಲಿ ಉಚ್ಚಿಲರು ಬರೆದ ಬರಹಗಳನ್ನು ಸಂಪಾದಕನಾಗಿ, ಪತ್ರಕರ್ತನಾಗಿ, ವಿಮರ್ಶಕನಾಗಿ, ಬರೆದ ಬರಹಗಳು ದೊರಕಿದ್ದು ಕೇವಲ 5೦ ಪ್ರತಿಶತ ಒಟ್ಟುಗೂಡಿಸಿ ದಾಖಲಿಸಿ ಪ್ರಕಟಿಸಲಾಗಿದೆ. ಚ.ರಾ. ನೆನಪಿನ ಸಂಪುಟ ೩ರಲ್ಲಿ ಮುಂಬಯಿಯ ದೈನಿಕ ಕರ್ನಾಟಕ ಮಲ್ಲದಲ್ಲಿ ಪ್ರಕಟಿತ ಅಂಕಣ ಬರಹಗಳ ಸಂಕಲನ ಇದೆ. ಚ.ರಾ. ನೆನಪಿನ ಸಂಪುಟ ೪ರಲ್ಲಿ ಸಾಹಿತಿಗಳು ಕಂಡ ಚ.ರಾ., ಆತ್ಮೀಯರು ನೆನಪಿಸಿಕೊಂಡಾಗಿನ ಲೇಖನಗಳು, ವಿದ್ವಜ್ಜನರ ವೈಚಾರಿಕ ಲೇಖನಗಳು, ಚ.ರಾ. ಪ್ರಕಟಿತ ಕೃತಿಗಳ ವಿಮರ್ಶೆ ಇವೆಲ್ಲವು ಸಂಕಲನಗೊಂಡಿವೆ.ಹೀಗೆ ಉಚ್ಚಿಲರ ಬರಹದ ಬದುಕನ್ನು ಸಾಧ್ಯವಾದಷ್ಟು ಮಟ್ಟಿಗೆ ಈ ನಾಲ್ಕು ಸಂಪುಟಗಳಲ್ಲಿ ಸಂಗ್ರಹಿಸಿ ಸಾರಸ್ವತ ಲೋಕಕ್ಕೆ ಕೊಡಲಾಗಿದೆ.ಈ ಕೃತಿಗಳಲ್ಲದೆ ಚ.ರಾ. ಪುತ್ರಿ ಡಾ. ವಾಣಿ ಎನ್. ಉಚ್ಚಿಲ್ಕರ್ ರವರ ಬರಹದ ಬದುಕನ್ನೂ ಇಲ್ಲಿ ದಾಖಲಿಸಲಾಗಿದೆ. ಈ ನಾಲ್ಕು ಕೃತಿಗಳೂ ಎಪ್ರಿಲ್ 20ರಂದು ಲೋಕಾರ್ಪಣೆಗೊಳ್ಳಲಿದೆ.1.ಭಾವ ತರಂಗ –ಕವನಸಂಕಲನದಲ್ಲಿ ತುಳು, ಕನ್ನಡ ಹಾಗೂ ಮಲೆಯಾಳ ಕವಿತೆಗಳನ್ನು ಸಂಕಲಿಸಲಾಗಿದೆ.2.ಜ್ಞಾನದರ್ಶನ – ಮುಂಬಯಿಯ ಅನೇಕ ಸಂಸ್ಥೆಗಳು, ಜಾತೀಯ ಸಂಸ್ಥೆಗಳು ಅವರು ಡಾಕ್ಟರೇಟ್ ಮಾಡಿದ ಸಂದರ್ಭದಲ್ಲಿ ಗೌರವ ಮಾಡಿದ ಬೇರೆ ಬೇರೆ ವಿಷಯ ಕೊಟ್ಟು, ಪ್ರಬಂಧ ಮಂಡನೆಗೆ ಅವಕಾಶ ನೀಡಿ ಸಾಹಿತ್ಯಿಕ ಹಿನ್ನೆಲೆಯಲ್ಲಿ ಬೆಳೆಸಿದುದನ್ನು ಸ್ಮರಿಸಿದ್ದಾರೆ.3, ನನ್ನ ಚೇತನ – ಸಂಸ್ಮರಣಾ ಲೇಖನಗಳು. ಡಾ. ವಾಣಿಯವರ ಬಾಳಿಗೆ ಬೆಳಕು, ಸ್ಫೂರ್ತಿ, ಚೇತನ ನೀಡಿದ ಅವರ ತಂದೆ ವಿದ್ವಾನ್ ರಾಮಚಂದ್ರ ಉಚ್ಚಿಲ್, ತಾಯಿ ಪೊನ್ನಮ್ಮ ಹಾಗೂ ಅವರ ಪತಿಯ ಸಂಸ್ಮರಣೆಯನ್ನು ಈ ಕೃತಿಯಲ್ಲಿ ದಾಖಲಿಸಲಾಗಿದೆ.4, ಎಲೆಮರೆಯ ಬರಹಗಾರ ದಿ. ನಾರಾಯಣ ಕೆ. ಉಚ್ಚಿಲ್ಕರ್ – ಇವರು ವರದಿಗಾರರಾಗಿದ್ದು ಬೇರೆ ಬೇರೆ ಪತ್ರಿಕೆಗಳಲ್ಲಿ ಬರೆದ ವರದಿಗಳನ್ನು ಅವರ ಮಕ್ಕಳಾದ ನವೀನ್ ಎನ್. ಉಚ್ಚಿಲ್ಕರ್, ನವನೀತ ಎನ್. ಉಚ್ಚಿಲ್ಕರ್ ಸಂಪಾದಿಸಿ ಕೃತಿರೂಪದಲ್ಲಿ ಸಂಕಲಿಸಿದ್ದಾರೆ.ಈ ಎಂಟು ಕೃತಿಗಳ ಬಿಡುಗಡೆ ಸಮಾರಂಭವು 2೦ ಎಪ್ರಿಲ್ 2೦25 ರವಿವಾರ ಸೋಮೇಶ್ವರ ಉಚ್ಚಿಲದ ಉಚ್ಚಿಲ ಬೋವಿ ಹಿರಿಯ ಪ್ರಾಥಮಿಕ ಶಾಲೆ ಇದರ ವಜ್ರಮಹೋತ್ಸವ ಸ್ಮಾರಕ ಸಭಾಗೃಹದಲ್ಲಿ ಸಂಜೆ ಘಂಟೆ 5ಕ್ಕೆ ನಡೆಯಲಿದೆ.ಕೃತಿ ಬಿಡುಗಡೆ – ತಾಳಮದ್ದಳೆ:ಸಮಾರಂಭವನ್ನು ಹಿರಿಯ ವೈದ್ಯ, ಸಾಹಿತಿ ಡಾ. ರಮಾನಂದ ಬನಾರಿ ಉದ್ಘಾಟಿಸುವರು. ಮುಂಬೈ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ವಸಂತ ಕುಮಾರ್ ತಾಳ್ತಜೆ ಅಧ್ಯಕ್ಷತೆ ವಹಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಚ.ರಾ. ಸಂಸ್ಮರಣೆಯನ್ನು ನೆರವೇರಿಸುವರು. ಡಾ.ಎಂ. ಪ್ರಭಾಕರ ಜೋಶಿ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ನಂದಳಿಕೆ ಬಾಲಚಂದ್ರ ರಾವ್, ಮುರಳಿ ಕಡೆಕಾರ್ ನಾಗೇಶ್ ಕಲ್ಲೂರ್ ಮುಖ್ಯ ಅತಿಥಿಗಳಾಗಿರುವರು. ಸಮಾರಂಭಕ್ಕೆ ಮುನ್ನ ಅಪರಾಹ್ನ ಗಂ.2.30ರಿಂದ ಹಿರಿಯ ಕಲಾವಿದರಿಂದ ‘ಕರ್ಣ ಪರ್ವ’ ಯಕ್ಷಗಾನ ತಾಳಮದ್ದಳೆಯನ್ನು ಏರ್ಪಡಿಸಲಾಗಿದೆ. ರಾಜಾರಾಮ ಹೊಳ್ಳ ಕೈರಂಗಳ, ಮಯೂರ್ ನಾಯಗ, ಸ್ಕಂದ ಕುಮಾರ್ ಹಿಮ್ಮೇಳದಲ್ಲಿರುವರು. ಡಾ‌ ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಡಾ.ಪುರುಷೋತ್ತಮ ಬಿಳಿಮಲೆ ಮತ್ತು ಸದಾಶಿವ ಆಳ್ವ ತಲಪಾಡಿ ಅರ್ಥಧಾರಿಗಳಾಗಿ ಭಾಗವಹಿಸುವರು.ಗುರುವಾರ ಮಂಗಳೂರು ಪತ್ರಿಕಾಭವನದಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮುಂಬಯಿಯ ಲೇಖಕಿ ಡಾ. ವಾಣಿ ಎನ್.ಉಚ್ಚಿಲ್ಕರ್ ಬಿಡುಗಡೆಗೊಳ್ಳುವ ಕೃತಿಗಳ ವಿವರ ನೀಡಿದರು. ಸಲಹೆಗಾರ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮದ ವಿವರ ನೀಡಿದರು. ನವನೀತ ಎನ್.ಉಚ್ಚಿಲ್ಕರ್,ನಿಧೀಶ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

Anti-Drug Awareness Program at Uppala and Hosangadi Bus Stand Conducted by Snehalaya De Addiction Centre in Collaboration with Janamaithri Police Station Manjeshwar and Police Officers Association Kasaragod District

Snehalaya De Addiction Centre, in collaboration with Janamaithri Police Station Manjeshwar and Police Officers Association Kasaragod District, organized a street play at Uppala and Hosangadi Bus Stand to raise awareness about the dangers of drug abuse and promote a drug-free lifestyle. The program featured skits and mime shows performed by the Snehalaya team and MSW field work students from Mangalore University. The event was attended by notable officials, including Mr. P Balakrishna Nair, ASP Kasaragod District; Ajith Kumar, CI Hosadurg Police station; Mr. Anoop, CI Manjeshwar; and Mr. Joseph Crasta, Executive Director of Snehalaya De Addiction Centre. The initiative aimed to educate the public, especially youth and parents, about the risks associated with substance abuse and encourage them to make informed choices. During the program, police officers highlighted the lack of facilities for victims of substance abuse for treatment in the Kasaragod district and praised Snehalaya’s 15-year-long service to the Society. They commended Joseph Crasta and Snehalaya’s mission, particularly their recently established well-equipped De-addiction center for victims. The Executive Director of Snehalaya emphasized the dangers of drug abuse and the treatment options available at their center.

ಪ್ರಾದೇಶಿಕ ವಾರ್ತೆಗಳು

ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ

— ಪ್ರತಿನಿಧಿಯಿಂದ, ಕಾಸರಗೋಡು | ಏಪ್ರಿಲ್ 17, 2025ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ ಪರಿಣಾಮಗಳನ್ನು ಸ್ಪಷ್ಟವಾಗಿ ಸಾರ್ವಜನಿಕರಿಗೆ ಪರಿಚಯಿಸುವುದು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯಶಾಸ್ತ್ರ (MSW) ವಿದ್ಯಾರ್ಥಿಗಳು ಸ್ನೇಹಾಲಯ ತಂಡದೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಕಲಾತ್ಮಕವಾಗಿ ತಮ್ಮ ಸಂದೇಶವನ್ನು ಸಾರ್ವಜನಿಕರ ಮುಂದಿಟ್ಟು ಜನಮನ ಗೆದ್ದರು.ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯ ಅತಿಥಿಗಳಲ್ಲಿ ಕಾಸರಗೋಡು ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ (ಎಎಸ್ಪಿ) ಶ್ರೀ ಪಿ. ಬಾಲಕೃಷ್ಣ ನಾಯರ್, ಹೊಸದುರ್ಗ್ ಠಾಣೆಯ ವೃತ್ತ ನಿರೀಕ್ಷಕ (ಸಿ.ಐ) ಅಜಿತ್ ಕುಮಾರ್, ಮಂಜೇಶ್ವರ ಠಾಣೆಯ ಸಿ.ಐ ಶ್ರೀ ಅನುಪ್ ಹಾಗೂ ಸ್ನೇಹಾಲಯ ಡಿ ಅಡಿಕ್ಶನ್ ಕೇಂದ್ರದ ಕಾರ್ಯನಿರ್ವಾಹಕ, ನಿರ್ದೇಶಕ ಶ್ರೀ ಜೋಸೆಫ್ ಕ್ರಾಸ್ತಾ ಅವರು ಪ್ರಮುಖರಾಗಿ ಉಪಸ್ಥಿತರಿದ್ದರು.ಸಂಭಾಷಣೆಯ ಸಂದರ್ಭಗಳಲ್ಲಿ ಪೊಲೀಸ್ ಅಧಿಕಾರಿಗಳು, ಕಾಸರಗೋಡು ಜಿಲ್ಲೆಯಲ್ಲಿನ ಮಾದಕವಸ್ತು ಬಳಕೆಯಲ್ಲಿರುವ ಯುವಜನತೆಗೆ ಸೂಕ್ತ ಚಿಕಿತ್ಸೆ ನೀಡಲು ಇರುವ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಚಿಂತೆಯನ್ನು ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಸ್ನೇಹಾಲಯವು ಕಳೆದ 15 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ಅಮೋಘ ಸೇವೆಗಳಿಗೆ ಪ್ರಶಂಶೆ ಅರ್ಪಿಸಿದರು. ಜೊತೆಗೆ, ಇತ್ತೀಚೆಗೆ ಈ ಸಂಸ್ಥೆಯು ಸ್ಥಾಪಿಸಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಯುಕ್ತಗೊಂಡಿರುವ ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಕುರಿತು ಅವರು ತಮ್ಮ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಕೊನೆಯ ಭಾಗದಲ್ಲಿ ಮಾತನಾಡಿದ ಶ್ರೀ ಜೋಸೆಫ್ ಕ್ರಾಸ್ತಾ, ಸ್ನೇಹಾಲಯದಲ್ಲಿ ಲಭ್ಯವಿರುವ ವಿವಿಧ ಚಿಕಿತ್ಸೆ ವಿಧಾನಗಳು, ವೈಯಕ್ತಿಕ ಪುನರ್ವಸತಿ ಕಾರ್ಯಕ್ರಮಗಳು ಹಾಗೂ ಕುಟುಂಬ ಜವಾಬ್ದಾರಿಗಳ ಜತೆಗೆ ಒಡನಾಡಿ ಬೆಳೆಸುವ ದಿಶೆಯ ಸೇವೆಗಳ ಬಗ್ಗೆ ವಿವರಿಸಿದರು. ಮಾದಕವಸ್ತುಗಳ ಮೋಹದಿಂದ ಮುಕ್ತವಾಗಿರುವ ಸಮುದಾಯ ನಿರ್ಮಾಣಕ್ಕೆ ಸ್ನೇಹಾಲಯ ತೊಡಗಿಸಿಕೊಂಡಿರುವ ನಿಷ್ಠೆ ಹಾಗೂ ಸೇವಾಭಾವನೆಗೆ ಅವರು ಬದ್ಧರಾಗಿರುವುದನ್ನು ಸ್ಪಷ್ಟಪಡಿಸಿದರು.ಸಮಾರಂಭದ ಅಂತ್ಯದಲ್ಲಿ ಸಾರ್ವಜನಿಕರು, ಉದ್ಯೋಗಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಸ್ನೇಹಾಲಯ ತಂಡದ ಈ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ರಮವನ್ನು ಶ್ರದ್ದೆಯಿಂದ ವೀಕ್ಷಿಸಿ ಎಲ್ಲಾ ಕಲಾವಿದರನ್ನು ತುಂಬು ಹ್ರದಯದಿಂದ ಅಭಿನಂದಿಸಿದರು

ಪ್ರಾದೇಶಿಕ ವಾರ್ತೆಗಳು

‘ಸಮಾಜಮುಖಿ ಸಂಘಟನೆಗಳಿಗೆ ಪ್ರೋತ್ಸಾಹ ಅಗತ್ಯ’ ಎಂಆರ್‌ಪಿಎಲ್ ನ ಸಿಜಿಎಂ ಮನೋಜ್ ಕುಮಾರ್ ಆಶಯ

ಮಂಗಳೂರು: ಸ್ಪಂದನಾ ಫ್ರೆಂಡ್ಸ್ ಸರ್ಕಲ್ ಕುಳಾಯಿ ಇದರ 31ನೇ ವಾರ್ಷಿಕೋತ್ಸವ ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಎಂಆರ್‌ಪಿಎಲ್ ನ ಚೀಫ್ ಜನರಲ್ ಮೆನೇಜರ್ ಮನೋಜ್ ಕುಮಾರ್ ಮಾತನಾಡಿ ‘ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುತ್ತಿರುವ ಸ್ಪಂದನಾ ಫ್ರೆಂಡ್ಸ್ ಸರ್ಕಲ್ ಮಾದರಿ ಸಂಸ್ಥೆಯಾಗಿದೆ. ಇಂತಹ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವುದು ಜನರ ಕರ್ತವ್ಯ. ಸ್ಪಂದನಾ ಸಂಸ್ಥೆಯ ಬಗ್ಗುಂಡಿ ಕೆರೆ ಉಳಿಸಿ ಅಭಿಯಾನಕ್ಕೆ ಎಂಆರ್‌ಪಿಎಲ್ ನ ಸಂಸ್ಥೆಯಿಂದ ಪೂರಕ ಬೆಂಬಲ ನೀಡಲಾಗುವುದು ಎಂದರು.ಮುಖ್ಯ ಅತಿಥಿಯಾಗಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ ‘ಸ್ಪಂದನಾ ಫ್ರೆಂಡ್ಸ್ ಸರ್ಕಲ್ ಸಮಾಜ ಸೇವೆಯ ಜತೆಗೆ ಧರ್ಮ ರಕ್ಷಣೆಯ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ’ಎಂದರು.ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘವನ್ನು ಹಾಗೂಯಕ್ಷಗಾನ ಪ್ರತಿಭೆ ರೇವತಿ ನವೀನ್ ಮತ್ತು ಪ್ರತಿಭಾವಂತ ವಿದ್ಯಾರ್ಥಿ ಅನಘ ಐತಾಳ್ ಇವರುಗಳನ್ನು ಸನ್ಮಾನಿಸಲಾಯಿತು. ಸುರೇಖ ಹರಿಶ್ಚಂದ್ರ, ಪೂರ್ಣಿಮಾ ಐತಾಳ್ ಮತ್ತು ಅನುಶ್ರೀ ಹರ್ಷಿತ್ ಸನ್ಮಾನಿತರ ಅಭಿನಂದನಾ ಪತ್ರ ವಾಚಿಸಿದರು.ಸಂಸ್ಥೆಯ ಗೌರವ ಸಲಹೆಗಾರ ಎಂ. ಜೆ. ಶೆಟ್ಟಿ , ಅಧ್ಯಕ್ಷ ದೀಪಕ್ ಕುಳಾಯಿ, ಗೌರವಾಧ್ಯಕ್ಷ ರಾಜೇಂದ್ರನ್, ಉದ್ಯಮಿ ಸುಧೀರ್ ಕುಮಾರ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ವರದಿ ವಾಚಿಸಿದರು. ಯಜ್ಞೇಶ್ ಐತಾಳ್ ಸ್ವಾಗತಿಸಿ, ಕೋಶಾಧಿಕಾರಿ ಆಶಿತ್ ವಂದಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತ ಚೈತನ್ಯ ಕಲಾವಿದರು ಬೈಲೂರು ಇವರಿಂದ ಅಷ್ಟೆಮಿ ನಾಟಕ ಪ್ರದರ್ಶನಗೊಂಡಿತು. ಫೋಟೋ : ಸ್ಪಂದನಾ

ಪ್ರಾದೇಶಿಕ ವಾರ್ತೆಗಳು

Rohan EthosLaunching on April 19, 2025

Mangaluru: Rohan Corporation proudly unveils its latest residential masterpiece, Rohan Ethos, in the prestigious locale of Kankanady, Next to Father Muller Hospital, Father Muller Road, Mangaluru. Set to launch on April 19, 2025, this project epitomizes timeless elegance and contemporary sophistication, offering a harmonious blend of modern architecture and beautiful surroundings. Designed for discerning individuals, Rohan Ethos features meticulously curated details, transforming houses into homes where families can thrive and create cherished memories.The project spans 15 floors, with a total of 28 units each of 3BHK and 4BHK configurations, catering to diverse lifestyle needs. The floor plans highlight spacious layouts, with 4BHK units ranging from 2515 to 2975 sq. ft. and 3BHK units from 1640 to 2025 sq. ft. Additionally, the development includes ample parking, and plans for road widening to enhance accessibility.Rohan Ethos offers a luxurious living experience with world-class amenities, including an infinity swimming pool, a modern gym, indoor games, a yoga room, and automatic elevators with ARD (Automatic Rescue Device) for added safety. The spacious and exquisitely designed super luxury flats ensure unmatched comfort and style. Strategically located, Rohan Ethos provides easy access to hospitals, worship places, railway stations, supermarkets, public gardens, and renowned educational institutions, making it an ideal choice for those seeking convenience, wellness, and premium living. Rohan Ethos boasts world-class specifications, including high-quality construction materials, designer finishes, and state-of-the-art amenities. The project also emphasizes sustainability and convenience, with thoughtful design elements like balcony safety measures and efficient drainage systems.This development not only offers a luxurious lifestyle but also ensures a timeless sanctuary for generations to come, solidifying Rohan Corporation’s reputation as a leader in premium residential projects. Rohan Corporation, known for its legacy of excellence, continues to redefine luxury living in Mangaluru. With Rohan Ethos, the company reaffirms its commitment to innovation, quality, and creating spaces that resonate with the aspirations of modern homeowners. With more than three decades of expertise and over 35 landmark Residential, Commercial and layout projects, Rohan Corporation continues to elevate coastal Karnataka’s real estate sector.Prospective homeowners are invited to explore the project at the Sales Office, Rohan City, Bejai Main Road, Mangalore or email: info@rohancorporation.in or website: www.rohancorporation.in or contact 98454 90100, 98456 07725, 90363 92628.

ಪ್ರಾದೇಶಿಕ ವಾರ್ತೆಗಳು

‘ರೋಹನ್ ಇಥೋಸ್’ ಎಪ್ರಿಲ್ 19 ರಂದು ಭೂಮಿ ಪೂಜೆ

ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್ಕೆಯ ಮತ್ತು 2515 ರಿಂದ 2975 ಚದರ ಅಡಿಗಳ 4 ಬಿಎಚ್ಕೆಯ ಎರಡು ಫ್ಲ್ಯಾಟ್ ಗಳಿದ್ದು, ಒಟ್ಟು 28 ಅಪಾರ್ಟ್’ಮೆಂಟ್’ಗಳಿರಲಿವೆ. ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ. ಅಪಾರ್ಟ್’ಮೆಂಟ್’ಗಳು ವಾಸ್ತು ಪ್ರಕಾರವಾಗಿದ್ದು ಸಿಸಿ ಕೆಮರಾ, ಸ್ವಯಂಚಾಲಿತ ಲಿಫ್ಟ್, ಜನರೇಟರ್ ಮತ್ತು ಇಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.ಆಸ್ಪತ್ರೆಗಳು, ಪೂಜಾ ಸ್ಥಳಗಳು, ರೈಲ್ವೆ ಸ್ಟೇಶನ್, ಸೂಪರ್ ಮಾರ್ಕೆಟ್, ಸಾರ್ವಜನಿಕ ಉದ್ಯಾನ ಮತ್ತು ಶಿಕ್ಷಣ ಸಂಸ್ಥೆಗಳು ಈ ಯೋಜನೆಯ ಸಮೀಪದಲ್ಲೇ ಇವೆ.ರೋಹನ್ ಕಾರ್ಪೊರೇಶನ್ ಮಂಗಳೂರಿನಲ್ಲಿ ಐಶಾರಾಮಿ ಅಪಾರ್ಟ್’ಮೆಂಟ್’ಗಳನ್ನು ಗ್ರಾಹಕರಿಗೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ರೋಹನ್ ಇಥೋಸ್ ಯೋಜನೆ ಹೊಸ ಟ್ರೆಂಡ್, ಗುಣಮಟ್ಟ ಮತ್ತು ಗ್ರಾಹಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣಗೊಳ್ಳುತ್ತಿದೆ.ಮೂರು ದಶಕಗಳಿಗೂ ಹೆಚ್ಚು ಕಾಲದ ಉನ್ನತ ಪರಂಪರೆಯನ್ನು ಹೊಂದಿರುವ ರೋಹನ್ ಕಾರ್ಪೊರೇಶನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರನ್ನು ಗಳಿಸಿದೆ. ಸಂಸ್ಥೆಯು ಕರಾವಳಿಯಲ್ಲಿ ಅನೇಕ ರೆಸಿಡೆನ್ಶಿಯಲ್, ಕಮರ್ಶಿಯಲ್ ಮತ್ತು ಲೇಔಟ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ

Scroll to Top