Author name: editor

ಪ್ರಾದೇಶಿಕ ವಾರ್ತೆಗಳು

ಏಪ್ರಿಲ್ 15 ರಂದು ಪವಿತ್ರ ಶಿಲುಬೆ ಯಾತ್ರೆ

ಪ್ರಭು ಯೇಸುವಿನ ಜನನದ ಜುಬಿಲಿ ವರ್ಷದ ಪ್ರಯುಕ್ತ ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ಕಳವಾರು ಪೆಜಾರ್ ಸಂತ ಯೋಸಫರಿಗೆ ಸಮರ್ಪಿಸಿದ ಚರ್ಚಿನ ಮುಂದಾಳುತನದಲ್ಲಿ 240 ವರ್ಷಗಳ ಹಿಂದೆ ಬೂದಿ ಬುಧವಾರ (Ash Wednesday) ದಂದು ಪ್ರಾರಂಭಗೊಂಡು ನಿರಂತರವಾಗಿ ನಡೆಯುತ್ತಾ ಬಂದ ಪವಿತ್ರ ಶಿಲುಬೆ ಯಾತ್ರೆಯನ್ನು ಇದೇ ಬರುವ ತಾರೀಕು ಏಪ್ರಿಲ್ 15ರಂದು ಮಂಗಳವಾರ 241ನೇ ವರ್ಷದ ಚಾರಿತ್ರಿಕ ಶಿಲುಬೆಯ ಹಾದಿಯು “ಪವಿತ್ರ ಶಿಲುಬೆಯ ನೆರಳಲ್ಲಿ ಭರವಸೆಯ ಪಯಣಿಗರ ಈ ಧೈಯ ವಾಕ್ಯದೊಂದಿಗೆ” ನಡೆಯಲಿದೆ. ಆ ದಿನ ಬೆಳಗ್ಗೆ ಗಂಟೆ 9 ರಿಂದ ಸಂಜೆ 3ರ ವರೆಗೆ ದೇವರ ವಾಕ್ಯದ ಧ್ಯಾನಕೂಟ, ಸ್ತುತಿ ಆರಾಧನೆ ಹಾಗೂ ನಿರಂತರ ಬಿನ್ನಹ ಪ್ರಾರ್ಥನೆ ನಡೆಸಿಕೊಡುವವರು, ಕಾರಿಸ್ಮಾತಿಕ್ ಸಂಚಾಲನದ ಸದಸ್ಯರು ಸಂಜೆ 3 ಗಂಟೆಯಿಂದ ಕರುಣೆಯ ಜಪಸರ ಪ್ರಾರ್ಥನೆ ಹಾಗೂ 3.30 ಗಂಟೆಗೆ ವಂದನೀಯ ಕ್ಲಿಫರ್ಡ್ ಫೆರ್ನಾಂಡಿಸ್, ಕುಲಶೇಖರ ಕೊರ್ಡೆಲ್ ಚರ್ಚ್‌ನ ಧರ್ಮ ಗುರುಗಳು ನಡೆಸಿಕೊಡಲಿದ್ದಾರೆ. 5 ಗಂಟೆಗೆ ಸರಿಯಾಗಿ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಅತೀ ವಂದನೀಯ ಡಾ| ಪೀಟರ್ ಪಾಮ್ಸ್ ಸಲ್ದಾನರವರು ಅರ್ಪಿಸಲಿದ್ದಾರೆ. ತದನಂತರ ಚಾರಿತ್ರಿಕ ಶಿಲುಬೆಯ ಹಾದಿಯನ್ನು ಕಥೋಲಿಕ ಉಡುಪಿ ಧರ್ಮ ಪ್ರಾಂತ್ಯದ ತೊಟ್ಟಂ ಚರ್ಚಿನ ಧರ್ಮಗುರುಗಳು ಹಾಗೂ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂದನೀಯ ಫಾ। ಡೆನಿಸ್ ಡೆಸಾರವರು ಪ್ರಭೋಧನೆಯನ್ನು ಭೋದಿಸುವರು. ನಂತರ ಪ್ರಭು ಯೇಸುವಿನ ಪವಿತ್ರ ಶರೀರಕ್ಕೆ ನಮನ ಸಲ್ಲಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸರಿ ಸುಮಾರು 7 ಸಾವಿರ ಕಥೋಲಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಎಲ್ಲಾ ಕಾರ್ಯಕ್ರಮಗಳು ಶಿಸ್ತಿನಿಂದ ಹಾಗೂ ಸಾಂಗವಾಗಿ ನೆರವೇರಲಿವೆ. ರಾತ್ರಿ 9 ಗಂಟೆಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ. ಕಾರ್ಯಕ್ರಮದ ನಂತರ ಭಕ್ತಾಧಿಗಳಿಗೆ ಬಸ್ಸಿನ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. 241ನೇ ವರ್ಷಗಳ ಹಿಂದೆ ವಿಭೂತಿಯ ಬುಧವಾರದಂದು ಈ ಚಾರಿತ್ರಿಕ ಶಿಲುಬೆಯ ಹಾದಿಯನ್ನು ಆರಂಭಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಚರ್ಚಿನ ಧರ್ಮಗುರುಗಳು ವಂ। ಫಾ। ಲಾರೆನ್ಸ್ ರೊನಾಲ್ಡ್ ಡಿಸೋಜಾ, ವಲಯದ ಶ್ರೇಷ್ಠ ಗುರು ವಂ। ಫಾ। ರೂಡಾಲ್ಫ್ ಡೆಸಾ, ಮಾಧ್ಯಮ ಸಲಹೆದಾರರು ಎಲಿಯಾಸ್ ಫೆರ್ನಾಂಡಿಸ್, ಉಪಾಧ್ಯಕ್ಷ ಅನಿಲ್ ಪೆರಿಸ್, ಕಾವ್ಯದರ್ಶಿ ಫಿಲೋಮೆನಾ ಫೆರ್ನಾಂಡಿಸ್, ವಲಯ ಪ್ರತಿನಿಧಿ ಪ್ರಮಿಳಾ ಪೆರಿಸ್, ವಾಲ್ಟರ್ ಮೊಂತೇರೊ, ಆಲ್ವಿನ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ. ಮನೆಮಂದಿ ಸಿನಿಮಾ ವೀಕ್ಷಿಸಿ ಪ್ರೋತ್ಸಾಹಿಸಿ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು.ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ ಕತೆ ಇದೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸ ಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ತುಳುವಿನಲ್ಲಿ ಈಗ ಉತ್ತಮ ಸದಭಿರುಚಿಯ ಸಿನಿಮಾಗಳು ಬರುತ್ತಿದೆ. ಅದರಲ್ಲೂ ಮೀರಾ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮನೆಮಂದಿ ಎಲ್ಲರೂ ಇಂತಹ ಸಿನಿಮಾವನ್ನು ನೋಡಿ ಪ್ರೋತ್ಸಾಹಿಸ ಬೇಕೆಂದರು. ಫ್ಲೆಕ್ಸ್ ನಿಷೇಧ ಸಿನಿಮಾರಂಗದ ಮೇಲೆ ನೇರ ಪರಿಣಾಮ:ನಟ, ನಿರ್ದೇಶಕ ರಾಹುಲ್ ಮಾತನಾಡಿ ನಗರದಲ್ಲೀಗ ಫ್ಲೆಕ್ಸ್ ಗಳನ್ನು ಅಳವಡಿಸಲು ಮಹಾನಗರ ಪಾಲಿಕೆ ನಿಷೇಧ ಏರಿರುವುದರಿಂದು ಇದು ತುಳು ಸಿನಿಮಾರಂಗದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ ತುಳುಸಿನಿಮಾ ರಂಗದ ನಿರ್ಮಾಪಕರು ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದರು. ಪ್ರೀಮಿಯರ್ ಶೋ ಮೂಲಕ ಒಂದು ಕೋಟಿ ರೂ ಗಳಿಕೆ:ನಿರ್ಮಾಪಕ ಲಂಚುಲಾಲ್ ಕೆ ಎಸ್ ಮಾತನಾಡಿ “ಮೀರಾ” ತುಳು ಸಿನಿಮಾ ಬಿಡುಗಡೆಯ ಮೊದಲು ಪ್ರೀಮಿಯರ್ ಶೋ ಮೂಲಕ ಒಂದು ಕೋಟಿ ರೂಪಾಯಿ ಗಳಿಸಿದೆ ಎಂದರು. ನನ್ನ ನೂರು ಮಂದಿ ಹಿತೈಷಿಗಳು ತಲಾ ಒಂದು ಲಕ್ಷ ರೂಪಾಯಿಯಂತೆ ನೂರು ಟಿಕೇಟುಗಳನ್ನು ಖರೀದಿಸಿದ್ದಾರೆ. ಪ್ರೀಮಿಯರ್ ಶೋ ವೀಕ್ಷಿಸಿದ ಅವರೆಲ್ಲರೂ ಸಿನಿಮಾದ ಕುರಿತು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.ಸಮಾರಂಭದಲ್ಲಿ ನಟ ವಿಜೆ ವಿನೀತ್ ಕುಮಾರ್, ರಾಹುಲ್ ಅಮೀನ್, ತ್ರಿಶೂಲ್ ಶೆಟ್ಟಿ, ಲಕ್ಷ್ಮೀಶ ಶೆಟ್ಟಿ ಬೈಕಂಪಾಡಿ, ಮೋಹನ್ ಕೆ ಬೋಳಾರ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಹರ್ಷಿತ್ ಸೊಮೇಶ್ವರ, ಪ್ರಕಾಶ್ ಶೆಟ್ಟಿ ಧರ್ಮನಗರ, ಯತೀಶ್ ಪೂಜಾರಿ, ಅನೀಶ್ ಪೂಜಾರಿ, ಅನಿಲ್ ದಾಸ್, ಶರಣ್ ಚಿಲಿಂಬಿ, ಜೆಪಿ ತುಮಿನಾಡ್, ಪುಷ್ಪರಾಜ್ ಬೊಳ್ಳೂರು, “ಮೀರಾ” ಸಿನಿಮಾದ ನಿರ್ದೇಶಕ ಅಶ್ವಥ್, ನಟಿಯರಾದ ಇತಿಶಾ ಶೆಟ್ಟಿ, ಲಕ್ಷ್ಯ ಎಲ್ ಮೊದಲಾದವರು ಉಪಸ್ಥಿತರಿದ್ದರು. ಯತೀಶ್ ಪೂಜಾರಿ ಸ್ವಾಗತಿಸಿ ಕಾರ್ಯಕ್ರಮ‌ ನಿರ್ವಹಿಸಿದರು.ಕರಾವಳಿಯಾದ್ಯಂತೆ ತೆರೆಗೆ:“ಮೀರಾ” ತುಳು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲಿಸ್, ಪಿವಿಆರ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಷಿ, ನಟರಾಜ್, ಬೆಳ್ತಂಗಡಿಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ.ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್.ನಿರ್ಮಿಸಿದ್ದು, ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ, ಈ ಚಿತ್ರ ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ ಎಂದು ನಿರ್ದೇಶಕ ಅಶ್ವಥ್ ತಿಳಿಸಿದರು.ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ.ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವರ್ಕಾಡಿ, ಯತೀಶ್ ಪೂಜಾರಿ, ಅಶ್ವಥ್, ಬೇಬಿ ಲಕ್ಷ್ಯ ಎಲ್. ರಕ್ಷಿತಾ ಶೆಟ್ಟಿ ಮುಂಬೈ ಅಭಿನಯಿಸಿದ್ದಾರೆ.ತನ್ನ ಕನಸುಗಳನ್ನು ನನಸಾಗಿಸುವ ಪಯಣದಲ್ಲಿ ಸಮಾಜದಿಂದ ಸವಾಲುಗಳನ್ನು ಎದುರಿಸುವ ಯುವತಿಯ ಕಥೆಯನ್ನು ಈ ಚಿತ್ರ ಹೇಳುತ್ತದೆ. ಈ ಚಲನಚಿತ್ರವು ಮಹಿಳೆಯರಿಗೆ ಅವರ ಕನಸನ್ನು ಜಯಿಸಲು ಮತ್ತು ಸಾಧಿಸಲು ಸ್ಫೂರ್ತಿ ನೀಡುತ್ತದೆ ಎಂದರು.ಇದು ತುಳುವಿನ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ. ಹೆಣ್ಣಿನ ಕನಸು, ನೋವು ನಲಿವನ್ನು ಕೇಂದ್ರೀಕರಿಸಿರುವ ಗಟ್ಟಿ ಕತೆಯನ್ನು ಒಳಗೊಂಡಿದೆ. ಮಹಿಳೆಯರು ತಮ್ಮ ಕನಸುಗಳನ್ನು ನನಸಾಗಿಸಲು ಸವಾಲುಗಳನ್ನು ಎದುರಿಸಿ ಸಾಧಿಸಲು ಸ್ಪೂರ್ತಿ ನೀಡಲಿದೆ ಎಂದು ನಿರ್ಮಾಪಕ ಲಂಚುಲಾಲ್ ಕೆಎಸ್ ತಿಳಿಸಿದ್ದಾರೆ.ಫೋಟೊ – ಸತೀಶ್ ಕಾಪಿಕಾಡ್.

ಪ್ರಾದೇಶಿಕ ವಾರ್ತೆಗಳು

ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ಪೂಂಜ ಇದರ ನೂತನ ವ್ಯವಸ್ತಾಪನ ಸಮಿತಿ ಆಯ್ಕೆಯಾಗಿದ್ದುಅಧ್ಯಕ್ಷರಾಗಿ ಶ್ರೀ ಸುದರ್ಶನ್ ಶೆಟ್ಟಿ ಹಕ್ಕೇರಿ, ಅರ್ಚಕರಾಗಿ ಶ್ರೀ ಪ್ರಕಾಶ ಆಚಾರ್ಯ ಪೂಂಜ, ಕೃಷ್ಣಪ್ರಸಾದ್‌ ಆಸ್ರಣ್ಣ, ಅಶೋಕ್‌ ಆಚಾರ್ಯ, ಸಿದ್ದಕಟ್ಟೆ. ಅರುಣ್ ಕುಮಾರ್. ಮಂಜಿಲ ಸುಧೀಂದ್ರ ಶೆಟ್ಟಿ, ಕಲಾಯಿದಡ್ಡ ಉಮೇಶ್ ಶೆಟ್ಟಿ, ಕೊನೆರೊಟ್ಟು ಸುರೇಶ್ ನೀರಪಲ್ಕೆ, ರಂಜಿನಿ ದಿವಾಕರ್ ಮಾದಾಯಿ, ಗೀತಾ ವಿಶ್ವನಾಥ್ ಉಮನೊಟ್ಟು ಆಯ್ಕೆಯಾಗಿರುತ್ತಾರೆ.

ಪ್ರಾದೇಶಿಕ ವಾರ್ತೆಗಳು

Rohan Garden Foundation StoneLaying ceremony on April 12

Rohan Corporation, a leading name in Coastal Karnataka’s real estate sector for more than three decades, is all set to launch its project Rohan Garden, Shivabagh on Saturday, April 12, 2025 at 5.00 pm. Located in the prime area of Shivabagh, Kadri, this new residential development promises to offer a perfect blend of modern luxury and serene living. The project features meticulously designed 2 and 3 BHK apartments ranging from 1,105 to 1,550 square feet, catering to diverse family needs. Each unit boasts high-quality construction with vitrified flooring, premium sanitary ware, and UPVC/Aluminium windows, ensuring both elegance and durability. Residents will enjoy spacious living areas, elegant balconies, and contemporary interiors designed for comfort and style. Rohan Garden is a modern residential complex that combines luxury, safety, and sustainability in a serene environment. Spread across five spacious floors, the building houses 28 elegantly designed apartments, offering a perfect blend of comfort and sophistication. Residents enjoy world-class amenities, including a fully-equipped gymnasium, 24/7 CCTV surveillance, and smart sensor lighting for enhanced security. Eco-conscious features like electric vehicle charging points promote sustainable living, while ample parking spaces with controlled access ensure convenience for both residents and visitors. The community-focused design includes a dedicated children’s play area and a relaxing seating zone for seniors, fostering a harmonious living experience for all age groups. Advanced safety systems such as intelligent fire detection, video door phones, and lifts with ARD (Automatic Rescue Device) attachments provide peace of mind. A visitors management system further enhances security by regulating entry. Strategically located, Rohan Garden offers easy access to urban conveniences while maintaining a tranquil, green ambiance. Whether it’s fitness, safety, or leisure, every detail has been thoughtfully planned to create an exceptional living space. With a legacy of more than 30 successful projects across coastal Karnataka, Rohan Corporation continues to raise the bar in real estate development. The launch of Rohan Garden marks another milestone in their commitment to delivering exceptional living spaces that combine innovation, quality, and timeless design.Prospective homeowners are invited to explore the project at the Sales Office, Rohan City, Bejai Main Road, Mangalore or email: info@rohancorporation.in or website: www.rohancorporation.in or contact 98454 90100

ಪ್ರಾದೇಶಿಕ ವಾರ್ತೆಗಳು

ರೋಹನ್ ಗಾರ್ಡನ್-ಶಿವಭಾಗ್, ಏಪ್ರಿಲ್ 12ರಂದು ಭೂಮಿಪೂಜೆ

ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳಿಗೂ ಮಿಕ್ಕಿ ಸೇವೆ ನೀಡುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆಯನ್ನು, 2025ರ ಏಪ್ರಿಲ್ 12ರ ಶನಿವಾರ ಸಂಜೆ 5:00 ಗಂಟೆಗೆ ನಡೆಸಲಿದೆ. ಕದ್ರಿ -ಶಿವಬಾಗ್, ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಧುನಿಕ ವಸತಿ ಸಮುಚ್ಚಯ ಪ್ರಕೃತಿ ಮತ್ತು ಅನುಕೂಲತೆಗಳ ಸಮ್ಮಿಲನವಾಗಿದೆ. ರೋಹನ್ ಗಾರ್ಡನ್ ಐಶಾರಾಮಿ, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಾಸಯೋಗ್ಯ ವ್ಯವಸ್ಥೆಯನ್ನು ಒದಗಿಸುವ ಆಧುನಿಕ ವಸತಿ ಸಮುಚ್ಚಯವಾಗಿದೆ. ಐದು ಅಂತಸ್ತುಗಳ ಈ ಕಟ್ಟಡದಲ್ಲಿ 28 ಸುಂದರವಾಗಿ ವಿನ್ಯಾಸಗೊಳಿಸಲಾದ ಅಪಾರ್ಟ್‌ಮೆಂಟ್‌ಗಳು ಇದ್ದು, ಇದು ಆರಾಮ ಮತ್ತು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಜಿಮ್ನೇಶಿಯಂ, 24/7 ಸಿಸಿಟಿವಿ ಮತ್ತು ಸ್ಮಾರ್ಟ್ ಸೆನ್ಸರ್ ದೀಪಗಳಂತಹ ಪ್ರೀಮಿಯಂ ಸೌಲಭ್ಯಗಳಿವೆ. ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್ಸ್, ಸಾಕಷ್ಟು ಪಾರ್ಕಿಂಗ್, ಮಕ್ಕಳ ಆಟದ ಸ್ಥಳ ಮತ್ತು ಹಿರಿಯರಿಗಾಗಿ ವಿಶ್ರಾಂತಿ ಸ್ಥಳಗಳೂ ಇವೆ. ಫೈರ್ ಫೈಟಿಂಗ್ ವ್ಯವಸ್ಥೆ, ವೀಡಿಯೋ ಡೋರ್ ಫೋನ್ ಮತ್ತು ಎ.ಆರ್.ಡಿ. ಅಟ್ಯಾಚ್ಡ್ ಲಿಫ್ಟ್’ಗಳ ಸುರಕ್ಷತೆಯನ್ನು ಒದಗಿಸಿದೆ. ರೋಹನ್ ಗಾರ್ಡನ್ ನಗರದ ಪ್ರಮುಖ ಸ್ಥಳಗಳಿಗೆ ಸುಲಭ ಸಂಪರ್ಕವನ್ನು ಹೊಂದಿರುವುದಲ್ಲದೆ, ಶಾಂತ ಮತ್ತು ಹಸಿರು ಪರಿಸರದ ಅನುಭವವನ್ನು ನೀಡಲಿದೆ. ಈ ಯೋಜನೆಯು 1,105 ರಿಂದ 1,550 ಚದರ ಅಡಿಗಳ 2 ಮತ್ತು 3 ಬಿ.ಎಚ್.ಕೆ. ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದ್ದು, ಪ್ರತಿಯೊಂದು ಅಪಾರ್ಟ್‌ಮೆಂಟ್‌ ವಿಟ್ರಿಫೈಡ್ ಫ್ಲೋರಿಂಗ್, ಪ್ರೀಮಿಯಂ ಸ್ಯಾನಿಟರಿ ವೇರ್ ಮತ್ತು ಯುಪಿವಿಸಿ/ಅಲ್ಯೂಮಿನಿಯಂ ಕಿಟಕಿಗಳೊಂದಿಗೆ ಉತ್ತಮ ಗುಣಮಟ್ಟದ ನಿರ್ಮಾಣವನ್ನು ಹೊಂದಿದೆ. ವಿಶಾಲವಾದ ಒಳಾಂಗಣ, ಸೊಗಸಾದ ಬಾಲ್ಕನಿಗಳು, ಮತ್ತು ಸಮಕಾಲೀನ ವಾಸ್ತುಶಿಲ್ಪವನ್ನು ಹೊಂದಿದೆ. ಕರಾವಳಿ ಕರ್ನಾಟಕದಾದ್ಯಂತ 30ಕ್ಕೂ ಮಿಕ್ಕಿ ಯಶಸ್ವಿ ಯೋಜನೆಗಳನ್ನು ನಿರ್ಮಿಸಿರುವ ರೋಹನ್ ಕಾರ್ಪೋರೇಶನ್, ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಗಳನ್ನು ಮಾಡಿದೆ. ರೋಹನ್ ಗಾರ್ಡನ್‌ ಯೋಜನೆಯು – ನವೀನತೆ, ಗುಣಮಟ್ಟ ಮತ್ತು ಉತ್ತಮ ವಿನ್ಯಾಸವನ್ನು ಹೊಂದಿದ್ದು, ತನ್ನ ಗ್ರಾಹಕರಿಗ ಅತ್ತ್ಯುತ್ತಮ ವಾಸ ಯೋಗ್ಯ ಅನುಭವವನ್ನು ನೀಡಲಿದೆ.ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಪ್ರಾದೇಶಿಕ ವಾರ್ತೆಗಳು

ರೆಡ್‌ಕ್ರಾಸ್  ಸೊಸೈಟಿಯಿಂದ ವಿಶ್ವ ಆರೋಗ್ಯ ದಿನಾಚರಣೆ. ‘ಆರೋಗ್ಯಕರ ಜೀವನಶೈಲಿಯಿಂದ ನೆಮ್ಮದಿಯ ಬದುಕು’-ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್‌ಕ್ರಾಸ್ ಘಟಕ ಮಂಗಳೂರು ವಿ.ವಿ.,ಯನೆಪೋಯ ಪರಿಗಣಿತ ವಿ.ವಿ. ಮತ್ತು ವಿ.ವಿ.ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ  ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ಮನುಷ್ಯನಿಗೆ ಬದುಕಿನಲ್ಲಿ ಆರೋಗ್ಯ ಎಲ್ಲಕ್ಕಿಂತಲೂ ಮುಖ್ಯ. ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ನೆಮ್ಮದಿಯ ಬದುಕು ಸಾಧ್ಯ’  ಎಂದರು.ಅಧ್ಯಕ್ಷತೆ ವಹಿಸಿದ್ದ ವಿ.ವಿ.ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಮಾತನಾಡಿ ‘ಆರೋಗ್ಯ ಕಾಪಾಡಲು ಉತ್ತಮ ಆಹಾರ ಪದ್ದತಿ ಅನುಸರಿಸುವುದು ಅಗತ್ಯ ಎಂದರು.ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ನಿರ್ದೇಶಕರಾದ ಪಿ.ಬಿ.ಹರೀಶ್ ರೈ, ಗುರುದತ್ ಕಾಮತ್ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯೇನೆಪೊಯ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್  ಶ್ವೇತಾ ಪ್ರಭು ಮತ್ತು ಪ್ರತೀಕ್ಷಾ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.ಮಂಗಳೂರು ವಿ.ವಿ.ಯ ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್.ಸ್ವಾಗತಿಸಿ,  ಯೇನೆಪೊಯ ವಿ.ವಿ.ಯ ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ. ವಂದಿಸಿದರು. ವಿ.ವಿ.ಕಾಲೇಜಿನ ರೆಡ್‌ಕ್ರಾಸ್ ಸಂಯೋಜನಾಧಿಕಾರಿ ಭಾರತಿ ಪಿಲಾರ್ಕಾರ್ಯಕ್ರಮ ನಿರೂಪಿಸಿದರು. * ಬಹುಮಾನ ವಿಜೇತರು ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃಷಾ ಕಾಲೇಜು ತಂಡ ಪ್ರಥಮ, ಯೇನೆಪೋಯ ವಿ.ವಿ.ದ್ವಿತೀಯ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ತಂಡ ತೃತೀಯ ಸ್ಥಾನ ಗಳಿಸಿದವು. ಪೋಸ್ಟರ್ ತಯಾರಿಸ್ಪರ್ಧೆಯಲ್ಲಿ ಯೇನೆಪೋಯ ವಿ.ವಿ.ಯ ಹಿಬಾ ಪ್ರಥಮ, ಸುಲ್ತಾನ ದ್ವಿತೀಯ ಹಾಗೂ ಮುಸ್ತಾಫ ತೃತೀಯ ಬಹುಮಾನ ಪಡೆದರು.ಸಮಾರೋಪ ಸಮಾರಂಭದಲ್ಲಿ  ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಸತೀಶ್ ರಾವ್, ಆರೋಗ್ಯ ಮತ್ತು ಪ್ರಥಮ ಚಿಕಿತ್ಸೆ ಉಪಸಮಿತಿಯ  ಚೇರ್ಮನ್ ಡಾ.ಸಚ್ಚಿದಾನಂದ ರೈ ಬಹುಮಾನ ವಿತರಿಸಿದರು.ಫೋಟೋ : ರೆಡ್‌ಕ್ರಾಸ್

ಪ್ರಾದೇಶಿಕ ವಾರ್ತೆಗಳು

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ. ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಕ್ರೀಡಾಕೂಟ ಯಶಸ್ವಿಯಾಗಲಿ. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ ನಿಂಬಾಳ್ಕರ್, ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ಸೋಮಶೇಖರಗಾಂಧಿ ಮತ್ತಿತರರು ಹಾಜರಿದ್ದರು.ಲಾಂಛನ ವಿಶೇಷ:ಕ್ರಿಕೆಟ್ ಕ್ರೀಡಾಕೂಟ ಲಾಂಛನವು, ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಹೊಯ್ಸಳ ಶಿಲ್ಪಕಲೆಯ ತವರೂರು, ಗೊಮ್ಮಟನ ನೆಲೆಬೀಡು ಎನ್ನುವುದನ್ನು ಪ್ರತಿನಿಧಿಸುತ್ತದಲ್ಲದೆ, ಮಲೆನಾಡು, ಅರೆ ಮಲೆನಾಡು, ಬಯಲುಸೀಮೆಯ ಸೊಗಡನ್ನು ಹೊಂದಿದೆ.

ಪ್ರಾದೇಶಿಕ ವಾರ್ತೆಗಳು

ಕ್ಯಾಥೊಲಿಕ್ ಕ್ರೈಸ್ತ ಧರ್ಮಸಭೆಯಿಂದ ಜುಬಿಲಿ ವರ್ಷ 2025

ಮಂಗಳೂರು:ಕ್ಯಾಥೋಲಿಕ್ ಕ್ರೈಸ್ತ ಧರ್ಮ ಸಭೆಯು ಭರವಸೆಯ ಯಾತ್ರಿಕರು ಎಂಬ ಧ್ಯೇಯದೊಂದಿಗೆಜುಬಿಲಿ ವರ್ಷ 2025 ನ್ನು ಆಚರಿಸುತ್ತಿದ್ದು, ಅದರ ಅಂಗವಾಗಿ ಮಂಗಳೂರು ಧರ್ಮ ಪ್ರಾಂತ್ಯದ ಎಪಿಸ್ಕೋಪಲ್ ಸಿಟಿ ವಲಯವು ಆಧ್ಯಾತ್ಮಿಕ ನವೀಕರಣದ ಉದ್ದೇಶವನ್ನು ಇರಿಸಿಕೊಂಡು ತಪಸ್ಸು ಕಾಲದಬೈಬಲ್ ಆಧಾರಿತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಉದ್ಘಾಟನೆ ಭಾನುವಾರ ನೆರವೇರಿತು.ಜಪ್ಪು ಸೈಂಟ್ ಜೋಸೆಫ್ ಸೆಮಿನರಿಯ ತೆರೆದ ಮೈದಾನದಲ್ಲಿ ನಡರ ಸಾಮಾ ರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪಾವ್ಲ್ ಸಲ್ದಾನ್ಹ ಅವರು 3 ದಿನಗಳ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವಿಶಿಷ್ಟವಾದ ಸ್ಪರ್ಧೆಯುಬೈಬಲ್- ಆಧಾರಿತ ಕಿರು ನಾಟಕ ಪ್ರದರ್ಶನ ಮತ್ತು ಕೀರ್ತನೆ ಹಾಡುವ ಸ್ಪರ್ಧೆಗಳನ್ನು ಒಳಗೊಂಡಿದೆ, ಎಪಿಸ್ಕೋಪಲ್ ಸಿಟಿ ವಲಯ ವ್ಯಾಪ್ತಿಯಲ್ಲಿ 11 ಚರ್ಚ್ ಗಳು ಬರುತ್ತಿವೆ.ಸಮುದಾಯದ ಸಂಪರ್ಕವನ್ನು ಬಳ ಪಡಿಸುವುದು ಮತ್ತು ಸುವಾರ್ತೆಯನ್ನು ಆಧರಿಸಿ ಜೀವಿಸುವ ನವೀಕರಣದ ಬದ್ಧತೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. “ದೇವರ ವಾಕ್ಯದ ಪ್ರಕಾರ ಬದುಕುವವರು ತಮ್ಮ ಜೀವನದಲ್ಲಿ ಸಂತೋಷ ಮತ್ತು ಶಾಂತಿಯನ್ನು ಅನುಭವಿಸುತ್ತಾರೆ. ವಾಕ್ಯವು ಕೇವಲ ಪಠ್ಯವಲ್ಲ; ಇದು ಜೀವನ ವಿಧಾನವಾಗಿದೆ ಎಂದು ಬಿಷಪ್ ಹೇಳಿದರು.ಸಮಾರಂಭದಲ್ಲಿ ವಿಕಾರ್ ಜನರಲ್ ಅತಿ ವಂದನೀಯಮ್ಯಾಕ್ಸಿಮ್ ನೊರೊನ್ಹಾ, ಚಾನ್ಸಲರ್ ಫಾದರ್ ವಿಕ್ಟರ್ ಜಾರ್ಜ್ ಡಿ’ಸೋಜಾ, ಫಾ. ರೊನಾಲ್ಡ್ ಸೇರಾವೋ, ಫಾ. ಜೆ.ಬಿ.ಸಲ್ಡಾನ್ಹಾ, ಫಾ. ಮ್ಯಾಕ್ಸಿಂ ಡಿಸೋಜಾ, ಫಾ. ವಾಲ್ಟರ್ ಡಿಸೋಜಾ , ಫಾ. ಜೆ. ಬಿ. ಕ್ರಾಸ್ತಾ, ಫಾ. ಎರಿಕ್ ಕ್ರಾಸ್ತಾ, ಫಾ. ವಿಜಯ್ ವಿಕ್ಟರ್ ಲೋಬೊ, ಫಾ. ಬೊನವೆಂಚರ್ ನಜರೆತ್, ಮಾಧ್ಯಮ ಸಂಚಾಲಕ ಎಲಿಯಾಸ್ ಫೆರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

“ಮೀರಾ” ತುಳು ಸಿನಿಮಾ ಎಪ್ರಿಲ್ 11 ರಂದು ತೆರೆಗೆ.ಅಸ್ತ್ರ ಸಂಸ್ಥೆಯಿಂದ ಸಾಮಾಜಿಕ ಕಾರ್ಯಕರ್ತೆ ರಜಿನಿ ಶೆಟ್ಟಿಗೆ ಒಂದು ಲಕ್ಷ ರೂ, ಟ್ರಾಫಿಕ್ ಪೊಲೀಸರಿಗೆ ಕೊಡೆ ವಿತರಣೆ

ಮಂಗಳೂರು: ಅಸ್ತ್ರ ಪ್ರೊಡಕ್ಷ ನ್ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ಚಲನಚಿತ್ರ ಎಪ್ರಿಲ್ 11 ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್.ನಿರ್ಮಿಸಿದ್ದು, ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ, ಈ ಚಿತ್ರ ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ.ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ.ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವರ್ಕಾಡಿ, ಯತೀಶ್ ಪೂಜಾರಿ, ಅಶ್ವಥ್, ಬೇಬಿ ಲಕ್ಷ್ಯ ಎಲ್. ಮುಂತಾದ ಕೋಸ್ಟಲ್ ವುಡ್ ನ ಹೆಸರಾಂತ ಕಲಾವಿದರ ಜತೆ ಮುಂಬೈ ಮೂಲದ ತುಳು ಬ್ಲಾಗರ್ ನಟಿ ರಕ್ಷಿತಾ ಶೆಟ್ಟಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಕರಾವಳಿ ಭಾಗದ ಅನೇಕ ಪ್ರತಿಭೆಗಳೂ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.ಮೀರಾ ಚಲನಚಿತ್ರದ ಡಿಒಪಿ ಅಜಯ್ ಕೆ.ಎಸ್, ಸಂಕಲನ ಜಾಬಿನ್ಸ್ ಸೆಬಾಸ್ಟಿಯನ್ ನಿರ್ವಹಿಸುತ್ತಿದ್ದು ಸಂಗೀತ ಸಂಯೋಜನೆ ರಜ್ಜು ಜಯ ಪ್ರಕಾಶ್, ಗೀತೆರಚನೆ ಜಯಪ್ರಕಾಶ್ ಕಳೇರಿ ನಿರ್ವಹಿಸುತ್ತಿದ್ದಾರೆ. ಮಲ ಯಾಳಂ ಸಿನೆಮಾ ‘ಭ್ರಮಯುಗಂ’ ಖ್ಯಾತಿಯ ಲಿಜು ಪ್ರಭಾಕರ್ ಚಿತ್ರದ ಡಿ.ಐ ವಿಭಾಗವನ್ನು ನಿರ್ವಹಿಸುತ್ತಿ ದ್ದಾರೆ.ಎಸ್.ಎಫ್.ಎಕ್ಸ್. ಮತ್ತು ಅಂತಿಮ ಮಿಶ್ರಣವನ್ನು ಯುನಿಟಿ ಸ್ಟುಡಿಯೋಸ್ ನಿರ್ವಹಿಸಿದ್ದು, ಜಿತಿನ್ ಕುಂಬ್ಳೆ ಸಹಾಯಕ ನಿರ್ದೇಶಕರಾಗಿ, ಜಯ ಸುವರ್ಣ ಮೇಕ್ ಅಪ್ ಹಾಗೂ ಪಿ.ಆ‌ರ್.ಒ ಆಗಿ ಬಾಳ ಜಗನ್ನಾಥ ಶೆಟ್ಟಿ ಉಸ್ತುವಾರಿ ವಹಿಸಿದ್ದಾರೆ. ಈ ಚಿತ್ರದಲ್ಲಿ 5 ಹಾಡುಗಳಿದ್ದು ದಕ್ಷಿಣ ಭಾರತ ಹೆಸರಾಂತ ಹಿನ್ನೆಲೆ ಗಾಯಕರಾದ ಮಧುಬಾಲಕೃಷ್ಣ ಸೇರಿ ದಂತೆ ಹೆಸರಾಂತ ಗಾಯಕರ ಧ್ವನಿ ಯಲ್ಲಿ ಮೂಡಿ ಬಂದಿದೆ. ತುಳು ಚಿತ್ರರಂಗದಲ್ಲಿ ಇದೇ ಮೊದಲ ಬಾರಿಗೆ A.I ತಂತ್ರಜ್ಞಾನದಲ್ಲಿ ತಯಾರಿಸಿದ ಹಾಡು ಕೂಡ ಈ ಚಿತ್ರದಲ್ಲಿ ಇದೆ” ಎಂದರು.ತನ್ನ ಕನಸುಗಳನ್ನು ನನಸಾಗಿಸುವ ಪಯಣದಲ್ಲಿ ಸಮಾಜದಿಂದ ಸವಾಲುಗಳನ್ನು ಎದುರಿಸುವ ಯುವತಿಯ ಕಥೆಯನ್ನು ಈ ಚಿತ್ರ ಹೇಳುತ್ತದೆ. ಈ ಚಲನಚಿತ್ರವು ಮಹಿಳೆಯರಿಗೆ ಅವರ ಕನಸನ್ನು ಜಯಿಸಲು ಮತ್ತು ಸಾಧಿಸಲು ಸ್ಫೂರ್ತಿ ನೀಡುತ್ತದೆ.ಮಂಗಳೂರು, ಕಟೀಲು, ಕಾಸರ ಗೋಡು, ಸೀತಾಂಗೋಳಿ, ಕುಂಬಳ ಮತ್ತು ಕರಾವಳಿ ಪ್ರದೇಶದ ಸುತ್ತಮು ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ಗೊಂಡ ‘ಮೀರಾ’ ತುಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ಆಗಲಿದ್ದು, ಉತ್ತಮ ಕಥೆ, ಅಭಿನಯ ಮತ್ತು ಸಾಮಾಜಿಕ ಸಂದೇಶದೊಂದಿಗೆ ಎಪ್ರಿಲ್ 11 ರಂದು ಬಿಡುಗಡೆಯಾದಾಗ ಪ್ರೇಕ್ಷಕರ ಮೇಲೆ ಗಮನಾರ್ಹ ಪರಿಣಾಮ ಬೀರುವ ನಿರೀಕ್ಷೆಯಿದೆ.ಇದು ತುಳುವಿನ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ. ಹೆಣ್ಣಿನ ಕನಸು, ನೋವು ನಲಿವನ್ನು ಕೇಂದ್ರೀಕರಿಸಿರುವ ಗಟ್ಟಿ ಕತೆಯನ್ನು ಒಳಗೊಂಡಿದೆ. ಮಹಿಳೆಯರು ತಮ್ಮ ಕನಸುಗಳನ್ನು ನನಸಾಗಿಸಲು ಸವಾಲುಗಳನ್ನು ಎದುರಿಸಿ ಸಾಧಿಸಲು ಸ್ಪೂರ್ತಿ ನೀಡಲಿದೆ ಎಂದು ನಿರ್ಮಾಪಕ ಲಂಚುಲಾಲ್ ಕೆಎಸ್ ತಿಳಿಸಿದರು.ಇತ್ತೀಚೆಗೆ ಅಸ್ತ್ರ ಪೊಡ್ರಕ್ಷನ್ ಲಾಂಛನದ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತೆ ರಜಿನಿ ಶೆಟ್ಟಿ ಅವರಿಗೆ ಒಂದು ಲಕ್ಷ ರೂಪಾಯಿ ಅಸ್ತ್ರ ಸಂಸ್ಥೆಯಿಂದ ನೀಡಲಾಯಿತು. ಅಲ್ಲದೆ 300 ಮಂದಿ ಟ್ರಾಫಿಕ್ ಪೋಲಿಸರಿಗೆ ಕೊಡೆಗಳನ್ನು ವಿತರಿಸಲಾಯಿತು.ಪತ್ರಿಕಾಗೋಷ್ಠಿಯಲ್ಲಿ ನಟ ಸ್ವರಾಜ್ ಶೆಟ್ಟಿ, ನಿರ್ದೇಶಕ ಅಶ್ವಥ್, ನಟಿ ಇಶಿತಾ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಸಂಘಟನೆಗಳು ಸಮಾಜದ ದೀಪವಾಗಬೇಕು: ಮಹಾಬಲ ಪೂಜಾರಿ ಕಡಂಬೋಡಿ.ಸುರತ್ಕಲ್ ನಲ್ಲಿ ಹಿರಿಯರ ಕ್ರಿಕೆಟ್ ಹಬ್ಬ

ಸುರತ್ಕಲ್: ಸಂಘಟನೆಗಳು ಸಮಾಜದ ದೀಪವಾಗಬೇಕು ಸಮಾಜಕ್ಕೆ ಮಾದರಿಯದಂತಹ ಕಾರ್ಯಗಳನ್ನು ಮಾಡಿದಾಗ ಮಾತ್ರ ಸಂಘಟನೆ ಪದದ ಸಾರ್ಥಕ್ಯ ಕಾಣಲು ಸಾಧ್ಯ ಎಂದು ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ ನುಡಿದರು. ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ 4 ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ಬಿ,ಎ,ಎಸ್,ಎಪ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಪ್ರಭಂದಕರಾದ ಸಂತೋಷ್ ಪೈ, ಮನಪಾ ಮಾಜಿ ಸದಸ್ಯ ವರುಣ್ ಚೌಟ, ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅರ್ಜುನ್ ಭಂಡಾರ್ಕರ್, ಎನ್ ಐ ಟಿ ಕೆ ಮಾಜಿ ಜಂಟಿ ಕುಲಪತಿ ರಾಮಮೋಹನ್ ಎಣ್ಮಕಜೆ, ಮಂಗಳೂರು ಎಸ್ ಡಿ ಸಿ ಸಿ ಬ್ಯಾಂಕ್ ಎ.ಜಿ.ಎಂ ರಾಜೇಶ್ ಶೆಟ್ಟಿ, ಬಾಲಕೃಷ್ಣ ಕೆಂಚನೂರು, ಮಂಗಳೂರು ಬಿ.ಎಂ.ಅರ್ ಗ್ರೂಪ್ ಮಾಲಕರು ದಾವೂದ್ ಹಕಿಂ, ಸುರತ್ಕಲ್ ಸ್ಪೋರ್ಟ್ಸ ಕ್ಲಬ್ ಸಂಚಾಲಕರು ಮನೋಹರ ಶೆಟ್ಟಿ ಸೂರಿಂಜೆ, ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಕಾರ್ಯದರ್ಶಿ ಕಿರಣ್ ಅಚಾರ್ಯ ಉಪಸ್ಥಿತರಿದ್ದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ದುರ್ಗಾಂಬ ತಡಂಬೈಲ್, ದ್ವೀತಿಯ ವೀರಕೇಸರಿ ತಡಂಬೈಲ್, ತೃತೀಯ ಬಿ.ಜೆ,ಸ್ಪಾರ್ಕ್ ಉಡುಪಿ ಚತುರ್ಥ ಆನಂದಿಲೆವೆನ್ ಬೆಂಗಳೂರು ಪಡೆಯಿತು. ಇದೇ ಸಂದರ್ಭದಲ್ಲಿ ಬಬಿತಾ ಜೆ ಶೆಟ್ಟಿ ಮತ್ತು ಅರ್ಜುನ್ ಭಂಡಾರ್ಕರ್ ಇವರನ್ನು ಸನ್ಮಾನಿಸಲಾಯಿತು.

Scroll to Top