Author name: editor

ಕರಾವಳಿ ಸುದ್ದಿ

ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ : ಪ್ರತಿಭಾ ಎಲ್ ಸಾಮಗಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ

ಸುರತ್ಕಲ್ :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು.ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಂಜೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನೃತ್ಯ ವಿದುಷಿ, ವಿಮರ್ಶಕಿ ಪ್ರತಿಭಾ ಎಲ್ ಸಾಮಗ ವಹಿಸಿದ್ದರು. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರೂ ಕೂಡಾ ಯಕ್ಷಗಾನದಲ್ಲಿ ಮುಂಚೂಣಿಯಲ್ಲಿದ್ದು ಕಲಾಸೇವೆಗೈಯುತ್ತಿದ್ದಾರೆ. ಅದರಲ್ಲೂ ಮಕ್ಕಳು ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವಂತೆ ಮಹಿಳಾ ಕೇಂದ್ರ ಸಮಿತಿ ಶ್ರಮ ಪಟ್ಟಿದೆ. ನೇಪಥ್ಯಕ್ಕೆ ಸರಿದ ಮತ್ತು ಸಾಧನೆಗೈದ ಮಹಿಳಾ ಕಲಾವಿದರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯ ಎಂದರು.ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಪ್ರಸಾದ್ ಜೈನ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ, ಸುಜಾತ ಧನಂಜಯ ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ ಭಾಗವಹಿಸಿದ್ದರು.ಸಮಾರಂಭದಲ್ಲಿ ಜಯಲಕ್ಷ್ಮೀ ಕಾರಂತ್ ಮಂಗಲ್ಪಾಡಿ, ಜ್ಯೋತಿ ಸುನೀಲ್ ಶೆಟ್ಟಿ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಚೈತ್ರಾ ಎಚ್ ರಾವ್, ವಿದುಷಿ ವೈಷ್ಣವಿ ಸಾತ್ವಿಕ್ ರಾವ್, ವಿದುಷಿ ಮೈತ್ರಿ ಭಟ್ ಅವರನ್ನು ಯಕ್ಷಧ್ರುವ ಪುರಸ್ಕಾರ ನೀಡಿ ಗೌರವಿಸಲಾಯಿತು. ಕೇಂದ್ರೀಯ ಮಹಿಳಾ ಘಟಕದ ಗೌರವಾಧ್ಯೆಕ್ಷೆ ಆರತಿ ಆಳ್ವ, ಅಧ್ಯೆಕ್ಷೆ ಪೂರ್ಣಿಮಾ ಯತೀಶ್ ರೈ, ಕಾರ್ಯದರ್ಶಿ ಪೂರ್ಣಿಮಾ ಶಾಸ್ತ್ರಿ, ಕೋಶಾಧಿಕಾರಿ ಭಾರತಿ ಎಸ್ ರಾವ್, ಸಂಚಾಲಕಿ ನಿವೇದಿತಾ ಎನ್ ಶೆಟ್ಟಿ ಉಪಸ್ಥಿತರಿದ್ದರು. ಪೂರ್ಣಿಮಾ ಯತೀಶ್ ರೈ ಸ್ವಾಗತಿಸಿ ಪ್ರಸ್ತಾವನೆಗೈದರು. ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ‌ ನಿರೂಪಿಸಿದರು.ಬಳಿಕ ಮಹಿಳಾ ಕಲಾವಿದೆಯರಿಂದ ದಶಾವತಾರ ಯಕ್ಷರೂಪಕ ಪ್ರದರ್ಶನಗೊಂಡಿತು.

ಪ್ರಾದೇಶಿಕ ವಾರ್ತೆಗಳು

ಸ್ಟೇಟ್ ಬ್ಯಾಂಕ್ನಲ್ಲಿ QR CODE genarate ತಲೆದೋರಿದ ಸಮಸ್ಯೆ.

ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಕಳೆದ 4-5 ದಿನಗಳಿಂದ ತಮ್ಮ ತಮ್ಮ ಖಾತೆಗೆ ಸಂಬಂಧಪಟ್ಟಂತೆ QR CODE genarate ಮಾಡಲು ಸಾಧ್ಯವಾಗದೇ ಅನೇಕರು ಬ್ಯಾಂಕ್ಗೆ ಅಲೆದು ಅಲೆದು ಸುಸ್ತಾದ ಬಗ್ಗೆ ವರದಿಯಾಗಿದೆ.ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರನ್ನು ಕೇಳಿದರೆ ಮುಂಬೈ ಕೇಂದ್ರ ಕಚೇರಿಯಲ್ಲಿ ದೋಷ ಕಂಡು ಬಂದಿದೆ ಎಂದು ಹೇಳುತ್ತಿದ್ದಾರೆ.ಇದರಿಂದ ಬೇಸರಗೊಂಡ ಗ್ರಾಹಕರು ಮೊಬೈಲ್ ಸಂಖ್ಯೆ ಪೋರ್ಟಿಂಗ್ ವ್ಯವಸ್ಥೆ ಇರುವಂತೆ ಬ್ಯಾಂಕ್ ಖಾತೆ ಪೋರ್ಟಿಂಗ್ ವ್ಯವಸ್ಥೆ ಶೀಘ್ರ ಜಾರಿಗೆ ಬರುವಂತಾಗಲಿ ಎಂದು ಕಳೆದ 4-5 ದಿನಗಳಿಂದ ಬ್ಯಾಂಕ್ಗೆ ಅಲೆದು ಸುಸ್ತಾದ ಗ್ರಾಹಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ

ಪ್ರಾದೇಶಿಕ ವಾರ್ತೆಗಳು

20th year Celebration of Indian Group of InstitutionsMass Media Training in collaboration with Namma Kudla 24×7 | LAPT International Accreditation | Inauguration of Rajamma Memorial Trust

The Indian Group of Institutions (formerly Indian Computer Academy) celebrated its 20th anniversary, IGI – Sambhram 2025, on March 16 at 4:00 PM at the Shehnai Hall of Hotel Deepa Comforts. Established in 2005 in Pumpwell, Mangalore, the institution was inaugurated by the current Speaker of the Karnataka Legislative Assembly, Shri U.T. Khader, who was then the Secretary of Seva Dal. Over the past two decades, IGI has provided quality education in computer science, technical training, aviation, hospitality, logistics and supply chain management, airport management, cabin crew training, English coaching, and other fields, empowering thousands of students.One of the major highlights of the event was the announcement of LAPT (London Academy of Professional Training) accreditation. This internationally recognized skill assessment and certification body operates in over 180 countries, enabling students at IGI to receive globally recognized certificates that enhance their career prospects. During the celebration, Shri Murali Hosamajalu, Managing Director of IGI, was honored with the Master Trainer Award from LAPT for his contributions to aviation education. Another milestone was the launch of the Mass Media and Communication Training program in collaboration with Namma Kudla 24×7, Coastal Karnataka’s leading TV channel. This marks the region’s first diploma program in mass media communication, providing hands-on training in print and digital journalism, video production, social media and digital marketing, public relations, news anchoring, camera technology, and multimedia techniques, with expert media professionals guiding students through industry-oriented learning. The celebration also witnessed the inauguration of the Smt. Rajamma Memorial Educational and Charitable Trust in memory of Smt. Rajamma, the late mother of IGI’s MD, Shri Murali Hosamajalu. A social worker and political figure from Kaukraadi village in Puttur Taluk, she played a key role in women’s empowerment and community development. The trust aims to support youth and women through education and skill development programs. As part of the occasion, several notable personalities were honored for their contributions, including Shri Bhaskar Rai for journalism, Shri Vipin Purushu for art and culture, Smt. Sharada Kadri and Akash Karkera for social service, and Shri Advaith Narayan, who secured the 100th rank in the CDS Exam, for defense services. Alumni of IGI who have excelled in aviation, computer science, and logistics were also recognized. The event was presided over by Shri Murali Hosamajalu, MD of IGI and a Member of the State Committee, Education Cell, along with Director Smt. Sajitha M. Nair. Chief guests included Captain Brijesh Chouta, Member of Parliament, Shri Vedavyas Kamath, Karnataka MLA, Shri Satish Kumpala, President of Dakshina Kannada BJP, Shri Ramanath Rai, Former District In-Charge Minister, and Shri Vijay, President of LAPT, UK. Special invitees included Shri Kadri Navaneeth Shetty, CEO of Namma Kudla 24×7, writer and journalist Shri Jayant Kodkani, director and actor Shri Swaraj Shetty, film director Shri Vijay Kumar, film and theatre artist Miss Roopa Varkadi, Shri Abraham Varghese, former Principal and Secretary of St. George Group of Institutions, Dr. Abdul Khader, former Principal of Karnataka Polytechnic, Mangalore, and Shri Prasad Rai, Advocate from BC Road. The event also saw the presence of educationists, college heads, and media professionals.The evening concluded with a grand musical concert featuring renowned South Indian playback singers Prakash Mahadevan and Roopa Prakash. The program commenced with a welcome address by faculty member Smt. Chaitra and ended with a vote of thanks by Smt. Avani Parvathi. The event was hosted by Shri Kadri Navaneeth Shetty and Smt. Sindhu N.

ಪ್ರಾದೇಶಿಕ ವಾರ್ತೆಗಳು

ಮಕ್ಕಳು ಯಕ್ಷಗಾನದತ್ತ ಆಕರ್ಷಿಸುತ್ತಿರುವುದು ಒಳ್ಳೆಯ ಬೆಳವಣಿಗೆ: ಪ್ರತಿಭಾ ಎಲ್ ಸಾಮಗ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು.ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆಗೈದರು.ಸಂಜೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನೃತ್ಯ ವಿದುಷಿ, ವಿಮರ್ಶಕಿ ಪ್ರತಿಭಾ ಎಲ್ ಸಾಮಗ ವಹಿಸಿದ್ದರು. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರೂ ಕೂಡಾ ಯಕ್ಷಗಾನದಲ್ಲಿ ಮುಂಚೂಣಿಯಲ್ಲಿದ್ದು ಕಲಾಸೇವೆಗೈಯುತ್ತಿದ್ದಾರೆ. ಅದರಲ್ಲೂ ಮಕ್ಕಳು ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವಂತೆ ಮಹಿಳಾ ಕೇಂದ್ರ ಸಮಿತಿ ಶ್ರಮ ಪಟ್ಟಿದೆ. ನೇಪಥ್ಯಕ್ಕೆ ಸರಿದ ಮತ್ತು ಸಾಧನೆಗೈದ ಮಹಿಳಾ ಕಲಾವಿದರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯ ಎಂದರು. ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಪ್ರಸಾದ್ ಜೈನ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ, ಸುಜಾತ ಧನಂಜಯ ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಜಯಲಕ್ಷ್ಮೀ ಕಾರಂತ್ ಮಂಗಲ್ಪಾಡಿ, ಜ್ಯೋತಿ ಸುನೀಲ್ ಶೆಟ್ಟಿ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಚೈತ್ರಾ ಎಚ್ ರಾವ್, ವಿದುಷಿ ವೈಷ್ಣವಿ ಸಾತ್ವಿಕ್ ರಾವ್, ವಿದುಷಿ ಮೈತ್ರಿ ಭಟ್ ಅವರನ್ನು ಯಕ್ಷಧ್ರುವ ಪುರಸ್ಕಾರ ನೀಡಿ ಗೌರವಿಸಲಾಯಿತು. ಕೇಂದ್ರೀಯ ಮಹಿಳಾ ಘಟಕದ ಗೌರವಾಧ್ಯೆಕ್ಷೆ ಆರತಿ ಆಳ್ವ, ಅಧ್ಯೆಕ್ಷೆ ಪೂರ್ಣಿಮಾ ಯತೀಶ್ ರೈ, ಕಾರ್ಯದರ್ಶಿ ಪೂರ್ಣಿಮಾ ಶಾಸ್ತ್ರಿ, ಕೋಶಾಧಿಕಾರಿ ಭಾರತಿ ಎಸ್ ರಾವ್, ಸಂಚಾಲಕಿ ನಿವೇದಿತಾ ಎನ್ ಶೆಟ್ಟಿ ಉಪಸ್ಥಿತರಿದ್ದರು. ಪೂರ್ಣಿಮಾ ಯತೀಶ್ ರೈ ಸ್ವಾಗತಿಸಿ ಪ್ರಸ್ತಾವನೆಗೈದರು. ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ‌ ನಿರೂಪಿಸಿದರು.ಬಳಿಕ ಮಹಿಳಾ ಕಲಾವಿದೆಯರಿಂದ ದಶಾವತಾರ ಯಕ್ಷರೂಪಕ ಪ್ರದರ್ಶನಗೊಂಡಿತು.

ಪ್ರಾದೇಶಿಕ ವಾರ್ತೆಗಳು

ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಿ- ಡಾ.ಸಂಕಮಾರ್

ಮಂಗಳೂರು : ಅಕ್ಷರ ಲೋಕಕ್ಕೆ ಪ್ರಬಲವಾದ ಶಕ್ತಿ ಇದೆ. ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಓದುವ ಅಭಿರುಚಿ ಬೆಳೆಸುವುದು ಅವಶ್ಯವಾಗಿದೆ. ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಲು ಪ್ರೇರಣೆ ನೀಡಬೇಕು ಎಂದು ಜಾನಪದ ವಿದ್ವಾಂಸ, ಹಿರಿಯ ಸಾಹಿತಿ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಭಾನುವಾರ ಸ್ವಗೃಹದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು ಸಾಹಿತ್ಯದ ಮೂಲಬೇರು ನಮ್ಮ ಜನಪದದಲ್ಲಿದೆ. ಬದುಕಿನ ನೋವು ಜನಪದ ಸಾಹಿತ್ಯದ ಮೂಲಕ ಹೊರಹೊಮ್ಮಲು ಸಾಧ್ಯವಾಗಿದೆ. ಸಾಹಿತಿಗಳು ಮನಸ್ಸುಗಳನ್ನು ಕಟ್ಟುವ ಜತೆಗೆ ಸಮಾಜದ ಧ್ವನಿಯಾಗಬೇಕು‌ ಎಂದರು.ಇಂದು ಸಾಹಿತ್ಯ ಸಮ್ಮೇಳನಗಳು ರಾಜಕೀಯ ಅಬ್ಬರದ ಪ್ರದರ್ಶನವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸಮ್ಮೇಳನ ನಿಜಾರ್ಥದಲ್ಲಿ ಸಾಹಿತಿಗಳ ಸಮ್ಮೇಳನವಾಗ ಬೇಕು‌‌ ಎಂದು ಡಾ.ಸಂಕಮಾರ್ ಅಭಿಪ್ರಾಯ ಪಟ್ಟರು.ಅಭಾಸಾಪ‌ಜಿಲ್ಲಾ ಖಜಾಂಜಿ ಭಾಸ್ಕರ ರೈ ಕಟ್ಟ, ಸಾಹಿತ್ಯ ಕೂಟದ ಮುಖ್ಯಸ್ಥೆ ಗೀತಾ ಲಕ್ಷ್ಮೀಶ್, ಮೂಲ್ಕಿ ಘಟಕದ ಅಧ್ಯಕ್ಷ ಸರ್ವೋತ್ತಮ ಅಂಚನ್, ಕಾರ್ಯಕಾರಿ ಸಮಿತಿ ಸದಸ್ಯ ಯಾದವ ದೇವಾಡಿಗ, ನಾಟ್ಯರಾಧನಾ ಕಲಾ ಕೇಂದ್ರದ ಟ್ರಸ್ಟಿ ಬಿ.ರತ್ನಾಕರ ರಾವ್, ಜಯಂತಿ ಸಂಕಮಾರ್, ಭವ ಸಂಕಮಾರ್ ಕಾಪಸ್ಥಿತರಿದ್ದರು. ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ. ಬಿ.ಹರೀಶ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

“ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು” ಮುಖ್ಯ ಅತಿಥಿಯಾಗಿ ಆಗಮಿಸಿದ ಅಡ್ವಕೇಟ್ ಕೆ .ಪೃಥ್ವಿರಾಜ್ ರೈ ,ಮಾಜಿ ಅಧ್ಯಕ್ಷರು ,ವಕೀಲರ ಸಂಘ ಮಂಗಳೂರು ಮಾತನಾಡಿ ಹೇಳಿದರು . ಪಿ.ಎ ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಮಾರ್ಚ್ 15, 2025 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯು ನಡೆಯಿತು. ಕಾರ್ಯಕ್ರಮದ ಪೀಠಿಕೆಯ ಕುರಿತು ಡಾ.ಅಬೂಬಕ್ಕರ್ ಸಿದ್ಧಿಕ್, ಒಡಂಬಡಿಕೆಯ ಸಂಚಾಲಕರು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿವರಿಸಿಕೊಟ್ಟರು. ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯವಂತ ನಾಯಕ್ ಪ್ರಾಧ್ಯಾಪಕರು ಅರ್ಥಶಾಸ್ತ್ರವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಶರಫುದ್ದೀನ್ ಪಿ.ಕೆ, ಎ .ಜಿ .ಎಮ್ ಕ್ಯಾಂಪಸ್ ಪಿ.ಎ.ಇ.ಟಿ , ಪಿ.ಎ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್ ಅಹ್ಮದ್, ಪಿ.ಎ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಜಿ ಹರಿಕೃಷ್ಣನ್, ಐ.ಕ್ಯೂ.ಎ.ಸಿ ಸಂಯೋಜಕರರಾದ ಶ್ರೀಮತಿ ವಾಣಿಶ್ರೀ ವೈ ವೇದಿಕೆಯಲ್ಲಿ ಆಸೀನರಾಗಿದ್ದರು.ವಿದ್ಯಾರ್ಥಿಗಳಾದ ಹಿಬಾ ಮರ್ಯಂ ಕಾರ್ಯಕ್ರಮ ನಿರೂಪಿಸಿದರೆ, ಫರ್ಹಾನ್ ಸ್ವಾಗತಿಸಿ, ತಶ್ಮೀಯಾ ವಂದಿಸಿದರು. ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾ.18ರಂದು ಡಾ.ಆರ್.ಕೆ.ನಾಯರ್ ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ, ಪರಿಸರವಾದಿ ಡಾ.ಆರ್.ಕೆ.ನಾಯರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಸುದ್ದಿ

ಕುದ್ರೋಳಿ ಗಣೇಶ್ ಗೆ” ಗೋಲ್ಡನ್ ಮ್ಯಾಜಿಷಿಯನ್ “ರಾಷ್ಟ್ರೀಯ ಜಾದೂ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ( ಐ ಎಂ ಎ) ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ.ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿಶಾಖಪಟ್ಟಣದ ಲೋಕಸಭಾ ಸದಸ್ಯರಾದ ಶ್ರೀ ಶ್ರೀಭರತ್ ಮುತ್ತುಕುಮುಲಿಯವರು ಕುದ್ರೋಳಿ ಗಣೇಶ್ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಐ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಖ್ಯಾತ ಜಾದೂಗಾರ ಶ್ರೀ ಬಿ.ಎಸ್.ರೆಡ್ಡಿ ಉಪಸ್ಥಿತರಿದ್ದರು.ಇಂಡಿಯನ್ ಮ್ಯಾಜಿಕ್ ಅಸೋಸಿಯೇಶನ್ ಸಂಸ್ಥೆಯು ತನ್ನ ದಶಮಾನೋತ್ಸದ ಅಂಗವಾಗಿ ಭಾರತದ ಅಗ್ರಗಣ್ಯ ಜಾದೂಗಾರರಾದ ಶ್ರೀ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ಕೊಡಮಾಡಿದೆ.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್ ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೊಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ದಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ, ಈ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕುದ್ರೋಳಿ ಗಣೇಶ್ ಈ ಬಗ್ಗೆ ತಾವು ಮುಂದಾಳತ್ವವನ್ನು ವಹಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಜಾದೂಗಾರ ಶ್ರೀ ಪಿ.ಸಿ.ಸೊರ್ಕಾರ್ ರವರಿಗೆ ವಿನಂತಿಸಿದರು.ಕುದ್ರೋಳಿ ಗಣೇಶ್ ರವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ. ವಿವಿಧ ಜಾದೂ ಸ್ಪರ್ಧೆಗಳಲ್ಲಿ ಭಾಗವಹಿಸಿ 11 ರಾಷ್ಟ್ರೀಯ ಜಾದೂ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜಾದೂ,ಜಾನಪದ,ರಂಗಭೂಮಿ,ಸಂಗೀತಗಳ ಸಮ್ಮಿಳನದ ನವರಸಪೂರ್ಣ ಜಾದೂ ಶೈಲಿಯನ್ನು ಹುಟ್ಟುಹಾಕಿದ್ದಾರೆ. ತುಳುನಾಡು ಜಾದೂ, ತುಳುನಾಡು ತುಡರ್ ಚೆಂಡು,ಹರಿಕಥೆ ಜಾದೂ, ನವದುರ್ಗಾ ವಿಸ್ಮಯ, ಸ್ವಚ್ಛತೆಗಾಗಿ ಜಾದೂ, ಶಿಕ್ಷಣಕ್ಕಾಗಿ ಜಾದೂ, ಮೈಂಡ್ ಮ್ಯಾಜಿಕ್ ಮುಂತಾದ ನವನವೀನ ಜಾದೂ ಪ್ರಯೋಗಗಳ ಮೂಲಕ ಜಗತ್ತಿನಾದ್ಯಂತ ಜನಪ್ರಿಯರಾಗಿದ್ದಾರೆ

ಕರಾವಳಿ ಸುದ್ದಿ

ಮಧೂರು ಬ್ರಹ್ಮಕಲಶೋತ್ಸವ” ಮಂಗಳೂರಿನಲ್ಲಿ ನಾಳೆ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಮಧೂರಿನಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ” ಹೊರೆಕಾಣಿಕೆ ಸಂಗ್ರಹಣಾ ಕೇಂದ್ರ ” ದ ಉದ್ಘಾಟನೆಯು ನಾಳೆ ತಾ.15, ಶನಿವಾರ ಬೆಳಿಗ್ಗೆ ಗಂಟೆ 10-00 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿರುವುದು.ಕೊಂಡೆವೂರಿನ ಪ.ಪೂ.ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಕಟೀಲು ಹರಿನಾರಾಯಣ ಆಸ್ರಣ್ಣ, ಮಧೂರು ಕ್ಷೇತ್ರದ ತಂತ್ರಿಗಳಾದ ದೇರೆಬೈಲು ಶಿವಪ್ರಸಾದ್ ತಂತ್ರಿ, ಶರವು ರಾಘವೇಂದ್ರ ಶಾಸ್ತ್ರಿ , ಇತರ ಧಾರ್ಮಿಕ ಕ್ಷೇತ್ರಗಳ ಪ್ರಮುಖರು, ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು.ಬನ್ನಿ ಭಾಗವಹಿಸಿಎಸ್.ಪ್ರದೀಪ ಕುಮಾರ ಕಲ್ಕೂರ , 9845083736

ಕರಾವಳಿ ಸುದ್ದಿ

ಮಾಚ್೯ 15 ರಂದು ಸುರತ್ಕಲ್ ನಲ್ಲಿ ಪಟ್ಲ ಫೌಂಡೇಶನ್ ಘಟಕದ ಪಂಚಮ ವಾರ್ಷಿಕೋತ್ಸವ, ಕೇಂದ್ರೀಯ ಮಹಿಳಾ ಘಟಕದ ಅಷ್ಟಮ ವಾರ್ಷಿಕೋತ್ಸವ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಮಾಚ್೯ 15 ರಂದು ಶನಿವಾರ ಸಂಜೆ 6.30 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ.ಸಂಜೆ 7.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶಂಕರ ನಾರಾಯಣ ಭಟ್ ದೀಪ ಪ್ರಜ್ವಲನೆ ಗೈಯ್ಯಲಿದ್ದಾರೆ. ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮುಂಬೈ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಅಗರಿ ರಾಘವೇಂದ್ರ ರಾವ್, ಡಿ ಕೆ ಶೆಟ್ಟಿ ಸುರತ್ಕಲ್, ಮನೋಹರ ಶೆಟ್ಟಿ ಸೂರಿಂಜೆ, ಜಗಧೀಶ ಶೆಟ್ಟಿ ಪೆರ್ಮುದೆ, ಶ್ರೀಕಾಂತ್ ಕಾಮತ್ ಭಾಗವಹಿಸಲಿದ್ದಾರೆ.ಪುತ್ತಿಗೆ ರಘುರಾಮ ಹೊಳ್ಳರಿಗೆ ಗೌರವಾರ್ಪಣೆ ನಡೆಯಲಿದೆ. ಸಮಾರಂಭದಲ್ಲಿ ಶಂಕರ ನಾರಾಯಣ ಮೈರ್ಪಾಡಿ, ಶ್ರೀಧರ ಶೆಟ್ಟಿ ಕೊಕ್ಕಾರುಗುತ್ತು ಪೆರ್ಮುದೆ, ಜಗಧೀಶ್ ಆಚಾರ್ಯ ಜೋಕಟ್ಟೆ, ಕೃಷ್ಣಪ್ಪ ಪೂಜಾರಿ ಬೊಟ್ಟಿಕೆರೆ, ಜರ್ನಾಧನ ಡಿ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಗುವುದು.ಸಂಜೆ 6.30 ರಿಂದ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.ಮಹಿಳಾ ಘಟಕದ ವಾರ್ಷಿಕೋತ್ಸವಅದೇ ದಿನ ಸಂಜೆ 4 ಗಂಟೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ 8 ನೇ ವಾರ್ಷಿಕೋತ್ಸವ ನಡೆಯಲಿದೆ.ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತಾ ಹೆಗ್ಡೆ, ಸತ್ಯವತಿ ಡಿ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.ಸಂಜೆ 4.15 ರಿಂದ ಮಹಿಳಾ ಕಲಾವಿದೆಯರಿಂದ ದಶಾವತಾರ ಯಕ್ಷರೂಪಕ ನಡೆಯಲಿದೆ.ಸಂಜೆ 5 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿಭಾ ಎಲ್ ಸಾಮಗ ವಹಿಸಲಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ಪೂರ್ಣಿಮಾ ಯತೀಶ್ ರೈ, ಆರತಿ ಆಳ್ವ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಶೋಕ್ ಶೆಟ್ಟಿ ತಡಂಬೈಲ್, ಪದ್ಮಪ್ರಸಾದ್ ಜೈನ್ , ದೀಪಕ್ ಶೆಟ್ಟಿ ಲಿಂಗಮಾರು ಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ್ ರಾವ್ ಪೇಜಾವರ, ಸುಜಾತ ಧನಂಜಯ ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ ಭಾಹವಹಿಸಲಿದ್ದಾರೆ.ಸಮಾರಂಭದಲ್ಲಿ ಜಯಲಕ್ಷ್ಮೀ ಕಾರಂತ್ ಮಂಗಲ್ಪಾಡಿ, ಜ್ಯೋತಿ ಸುನೀಲ್ ಶೆಟ್ಟಿ ಕಾರ್ಕಳ ಇವರನ್ನು ಸನ್ಮಾನಿಸಲಾಗುವುದು. ಚೈತ್ರಾ ಎಚ್ ರಾವ್, ವೈಷ್ಣವಿ ಸಾತ್ವಿಕ್ ರಾವ್, ಮೈತ್ರಿ ಭಟ್ ಮವ್ವಾರು ಇವರಿಗೆ ಯಕ್ಷಧ್ರುವ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.

Scroll to Top