Author name: editor

ಕರಾವಳಿ ಸುದ್ದಿ

45ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಶ್ರೀಮತಿ ಗ್ಲಾಡಿಸ್ ಪಾಯ್ಸ್ ಅವರಿಗೆ ಪ್ರಶಸ್ತಿ

ಮಾರ್ಚ್ 4ರಿಂದ 9ರವರೆಗೆ ಬೆಂಗಳೂರಿನ ಕಂಠೀರವ ಹಾಗೂ ಸಾಯಿ ಕ್ರೀಡಾಂಗಣದಲ್ಲಿ ನಡೆದ 45ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳ ನಿವಾಸಿ ಶ್ರೀಮತಿ ಗ್ಲಾಡಿಸ್ ಪಾಯ್ಸ್ ರವರು 70ರ ವಯೋಮಾನದ ವಿಭಾಗದಲ್ಲಿ 400 ಮೀ. ಓಟ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 800 ಮೀ. ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ

ಕರಾವಳಿ ಸುದ್ದಿ

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸರಕಾರಕ್ಕೆ ಒತ್ತಾಯ

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ.ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆ ಶೇಕಡಾ 60 ಮಂದಿ ಬಡತನ ರೇಖೆಯಲ್ಲಿದ್ದು 30 ಶೇಕಡಾ ಮಧ್ಯಮ ವರ್ಗದಲ್ಲಿದ್ದು ಕೇವಲ 10 ಶೇಕಡಾ ಜನರು ಸಿರಿವಂತರಾಗಿದ್ದಾರೆ. ಈ ಬಂಟ ಸಮುದಾಯ ಕಡಿಮೆ ಜನರು ಇರುವ ಒಂದು ವಿಶಿಷ್ಟ ಜಾತಿಯಾಗಿದ್ದು ತೀರ ಕೆಳಸ್ತರದ ಮಂದಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶ ನಮ್ಮದಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆಬಡ ಜನರನ್ನು ಮುಖ್ಯ ವಾಹಿನಿಗೆ ಕರೆತರಲು ಸರಕಾರದ ಸಂಪೂರ್ಣ ಸಹಾಯ ಇದ್ದಲ್ಲಿ ಮಾತ್ರ ಸಾಧ್ಯ. ಅದಕ್ಕಾಗಿ ಕರ್ನಾಟಕ ಘನ ಸರಕಾರ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ ಮುಂದಿನ ದಿನಗಳಲ್ಲಿ ಬಡ ಬಂಟರ ಉನ್ನತೀಕರಣ ಮಾಡಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಹಕ್ಕೊತ್ತಾಯ ಮಾಡುತ್ತಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟ ( ರಿ )ಮಂಗಳೂರು ತಿಳಿಸಿದೆ.

ಕರಾವಳಿ ಸುದ್ದಿ

ಬಹು ಭಾಷೆಗಳಲ್ಲಿ ಭಾರತೀಯ ಸಂಸ್ಕೃತಿ ಅಡಕಹಿರಿಯ ಸಾಹಿತಿ ಡಾ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯ

ಮಂಗಳೂರು : ದೇಶದ ಬಹು ಭಾಷೆಗಳಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದ್ದು, ಭಾರತೀಯ ಸಾಹಿತ್ಯದ ವ್ಯಾಪ್ತಿ, ವೈವಿಧ್ಯತೆ ಅಗಾಧವಾಗಿದೆ. ಸ್ವತಂತ್ರ ಕೃತಿ ರಚನೆಯ ಜತೆಗೆ ,ಇತರ ಭಾಷೆಯ ಪ್ರಮುಖ ಕೃತಿಗಳನ್ನು ಅನುವಾದ ಮಾಡುವ ಮೂಲಕ ನಮ್ಮ ಸಾಹಿತ್ಯಿಕ ಪರಂಪರೆಯನ್ನು ಎಲ್ಲೆಡೆ ಪಸರಿಸಲು ಸಾಹಿತಿಗಳು ಪ್ರಯತ್ನಿಸಬೇಕು ಎಂದು ವಿಶ್ರಾಂತ ಕುಲಪತಿ, ಹಿರಿಯ ಸಾಹಿತಿ ಡಾ.ಕೆ.ಚಿನ್ನಪ್ಪ ಗೌಡ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ಹಿರಿಯ ಸಾಹಿತಿಗಳ ಸಂಪರ್ಕ ಅಭಿಯಾನದಡಿ ಗುರುವಾರ ಸ್ವಗೃಹದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು ಸಾಹಿತ್ಯ ಕ್ಷೇತ್ರದಲ್ಲಿ ಅನುವಾದ ಕೃತಿಗಳೂ ಸ್ವತಂತ್ರ ಕೃತಿಯಷ್ಟೇ ಮಹತ್ವ ಪಡೆದಿವೆ ಎಂದರು.ಸಾಹಿತ್ಯ ಸಮ್ಮೇಳನಗಳಲ್ಲಿ ಹಿಂದಿನ ಸಾಹಿತ್ಯ, ಸಮಕಾಲೀನ ಸಾಹಿತ್ಯದ ಬಗ್ಗೆ ಚಿಂತನ ಮಂಥನ ನಡೆಯಬೇಕು. ಆದರೆ ಇತ್ತೀಚಿನ ಸಾಹಿತ್ಯ ಸಮ್ಮೇಳನಗಳಲ್ಲಿ ರಾಜಕೀಯವೂ ಸೇರಿದಂತೆ ಇತರ ವಿಷಯಗಳ ಬಗ್ಗೆಯೇ ಹೆಚ್ಚು ಚರ್ಚೆ ನಡೆಯುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸಾಹಿತ್ಯ ಸಮ್ಮೇಳನ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿರಬೇಕು. ಶಿಕ್ಷಣ ವ್ಯವಸ್ಥೆ ಸಾಹಿತ್ಯಕ್ಕೆ ಹೆಚ್ಚಿನ ಶಕ್ತಿ ನೀಡಬಲ್ಲದು. ವಿಶ್ವ ವಿದ್ಯಾನಿಲಯಗಳಲ್ಲಿ ಸಾಹಿತ್ಯದ ಚಟುವಟಿಕೆ ನಿರಂತರವಾಗಿ ನಡೆಯಬೇಕು ಎಂದು ಡಾ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯ ಪಟ್ಟರು.ಅಭಾಸಾಪ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಸಮಿತಿ ಸದಸ್ಯ ಡಾ.ಸುರೇಶ್ ನೆಗಳಗುಳಿ , ಸಾಹಿತ್ಯ ಕೂಟದ ಮುಖ್ಯಸ್ಥೆ ಗೀತಾ ಲಕ್ಷ್ಮೀಶ್,ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ ಉಪಸ್ಥಿತರಿದ್ದರು. ಅಭಾಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ಸ್ವಾಗತಿಸಿ, ಖಜಾಂಜಿ ಭಾಸ್ಕರ ರೈ ಕಟ್ಟ ವಂದಿಸಿದರು.

ಕರಾವಳಿ ಸುದ್ದಿ

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯಮಾಹಿತಿ ತಂತ್ರಜ್ಞಾನದಲ್ಲಿನ ಪ್ರಸ್ತುತ ಪ್ರವೃತ್ತಿಗಳ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ

ಮಾರ್ಚ್ 10 ಮತ್ತು 11, 2025ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಸಂಸ್ಥೆ, “ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಪ್ರಗತಿ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಎರಡು ದಿನಗಳ ಸಮ್ಮೇಳನದಲ್ಲಿ ಸಂಶೋಧಕರು, ಶಿಕ್ಷಣ ತಜ್ಞರು ಮತ್ತು ಉದ್ಯಮ ವೃತ್ತಿಪರರಾದಿಯಾಗಿ 150 ಜನರು ಭಾಗವಹಿಸಿ ಹೊಸ ತಂತ್ರಜ್ಞಾನ ವಿಷಯಗಳನ್ನು ಚರ್ಚಿಸಿದರು.ಸಮ್ಮೇಳನದ ಪ್ರಾರಂಭದಲ್ಲಿ ಪ್ರಾರ್ಥನೆ, ವಿಶ್ವವಿದ್ಯಾಲಯ ಗೀತ ಮತ್ತು ದೀಪ ಬೆಳಗಿಸಿ ಸಮಾರಂಭವನ್ನು ಆರಂಭಿಸಲಾಯಿತು. ಡಾ. ಆನಿ ಸಿರಿಯನ್ ಅವರು ಉಪನ್ಯಾಸ ನೀಡಿ ಅಕಾಡೆಮಿಕ್ ಸಹಕಾರ ಮತ್ತು ಜ್ಞಾನ ವಿನಿಮಯದ ಮಹತ್ವವನ್ನು ವಿವರಿಸಿದರು. ಹಂಗಾಮಿ ಉಪಕುಲಪತಿ ಡಾ. ರೊನಾಲ್ಡ್ ಮಸ್ಕರೇನ್ಹಸ್, ಕಂಪ್ಯೂಟರ್ ವಿಜ್ಞಾನ ಮತ್ತು ರಸಾಯನಶಾಸ್ತ್ರದ ನಡುವಿನ ಬೆಳೆಯುತ್ತಿರುವ ಸಮನ್ವಯತೆಯ ಬಗ್ಗೆ ತಿಳಿಸಿದರು. ಪ್ರೊ-ಉಪಕುಲಪತಿ ಶ್ರೀಮತಿ ರೆಜಿನಾ ಮಥಾಯಸ್, ಶೈಕ್ಷಣಿಕ ಕ್ಷೇತ್ರದಲ್ಲಿ ಸಂಶೋಧನೆ ಆಧಾರಿತ ಚರ್ಚೆಗಳ ಮಹತ್ವವನ್ನು ತಿಳಿಸಿದರು.ಮುಖ್ಯ ಅತಿಥಿ ಶ್ರೀ ತಾಂಡವ ಪೊಪುರಿ, ಡೆಲ್ ಟೆಕ್ನೋಲಜೀಸ್, ಅವರು ಕೃತಕ ಬುದ್ಧಿಮತ್ತೆ ಮತ್ತು ಯಾಂತ್ರಿಕ ಮೆಶಿನ್ ಲರ್ನಿಂಗ್ ಕುರಿತು ಉಪನ್ಯಾಸ ನೀಡಿದರು. ಅಂತರರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಡಾ.ಬಿ.ಜಿ. ಪ್ರಶಾಂತಿ ಯಶಸ್ವಿಯಾಗಿ ಮುಕ್ತಾಯಗೊಳಿಸಿದರು. ಮೊದಲ ದಿನ “ಆರೋಗ್ಯ ಸೇವೆಯಲ್ಲಿ ಎಐ ಮತ್ತು ಇತ್ತೀಚಿನ ಪ್ರಗತಿಗಳು” ಕುರಿತು ಮುಖ್ಯ ಭಾಷಣ ಹಾಗೂ ಸೈಬರ್ ಸಿಸ್ಟಮ್ ಸಂಬಂಧಿತ ತಂತ್ರಜ್ಞಾನಗಳ ಕುರಿತು ತಾಂತ್ರಿಕ ಅಧಿವೇಶನ ನಡೆಯಿತು. ಡಾ. ಕೆ. ಗೋಪಾಲಕೃಷ್ಣನ್ ನೇತೃತ್ವದಲ್ಲಿ ಸೈಬರ್ ಭದ್ರತೆಯ ಮುಂದಿನ ಪೀಳಿಗೆಯ ಪ್ರವೃತ್ತಿಗಳ ಕುರಿತು ತಾಂತ್ರಿಕ ಅಧಿವೇಶನ, ನಂತರ ಎಐ ಅಪ್ಲಿಕೇಶನ್‌ಗಳು, ಸೈಬರ್ ಭದ್ರತೆ ಮತ್ತು ಡಿಜಿಟಲ್ ರೂಪಾಂತರದಲ್ಲಿನ ಪ್ರಗತಿಗಳ ಕುರಿತು ಸಂಶೋಧನಾ ಪ್ರಸ್ತುತಿಗಳು ನಡೆದವು.ಎರಡನೇ ದಿನದಂದು, ಮಂಗಳೂರಿನ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಡಾ. ರೂಬನ್ ಅವರು “ಆರೋಗ್ಯ ರಕ್ಷಣೆ ತಂತ್ರಜ್ಞಾನದಲ್ಲಿನ ಪ್ರಗತಿಗಳು – ಎಐ ಸಂಶೋಧನೆ ಮತ್ತು ವಾಸ್ತವದ ಒಳನೋಟಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.ಸಮ್ಮೇಳನವು ಶೈಕ್ಷಣಿಕ ಮತ್ತು ಉದ್ಯಮದ ಪ್ರಮುಖ ಭಾಷಣಕಾರರನ್ನು ಒಳಗೊಂಡ ಸಮಾರೋಪ ಅಧಿವೇಶನದೊಂದಿಗೆ ಮುಕ್ತಾಯಗೊಂಡಿತು. ಮಾಹಿತಿ ತಂತ್ರಜ್ಞಾನ ಶಾಲೆಯ ಡೀನ್ ಫಾದರ್ ಡೆನ್ಜಿಲ್ ಲೋಬೊ ಅವರು ಸಮ್ಮೇಳನದ ಶೈಕ್ಷಣಿಕ ಮತ್ತು ಕೈಗಾರಿಕಾ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿ ಡಾ. ಶ್ರೀನಿವಾಸ್ ಕಥಾರ್ಗುಪ್ಪೆ ಅವರು ಐಟಿ ಭವಿಷ್ಯವನ್ನು ರೂಪಿಸುವಲ್ಲಿ ಸಂಶೋಧನೆಯ ಪಾತ್ರವನ್ನು ತಿಳಿಸಿದರು. ಅಮೆರಿಕದ ಸಾಂತಾ ಕ್ಲಾರಾದ ಎಎಮ್’ಡಿ ಯಲ್ಲಿ ಹಿರಿಯ ಉತ್ಪಾದನಾ ಕಾರ್ಯಾಚರಣೆಯ ಉದ್ಯೋಗಿಯಾದ ಶ್ರೀ ಟೆರೆನ್ಸ್ ಆಂಡ್ರೇಡ್ ಅವರು ಉತ್ಪಾದನೆ ಮತ್ತು ಉತ್ಪಾದನೆಯಲ್ಲಿ ಉದಯೋನ್ಮುಖ ತಂತ್ರಜ್ಞಾನಗಳ ಕುರಿತು ಒಳನೋಟಗಳನ್ನು ನೀಡಿದರು.

ಕರಾವಳಿ ಸುದ್ದಿ

ಪತ್ರಿಕಾಗೋಷ್ಠಿ

ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲಾ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸು ಕಾಲದ ಆಧ್ಯಾತ್ಮಿಕ ಪ್ರೇರಣೆಯಾಗಿ ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ, ಮುಡಿಪು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಮಹಾನ್ ಕಾಲ್ನಡಿಗೆ ಜಾಥ “ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ” ಎಂಬ ಜಾಥವು ಕೋಟೆಕಾರು ಗ್ರಾಮದ ದಯಾಮಾತಾ ದೇವಾಲಯದ ಪಾನೀರ್‌ನಲ್ಲಿ ವಿಶ್ರಾಂತ ಬಿಷಪ್ ಅತೀ ವಂದನೀಯ ಡಾ। ಅಲೋಶಿಯಸ್ ಪೌಲ್ ಡಿಸೋಜಾ ಅವರಿಂದ ಆಶೀರ್ವಚನ ಹಾಗೂ ವಂದನೀಯ ಫಾ। ವಿಕ್ಟರ್ ಡಿಮೆಲ್ಲೊರವರು ಉದ್ಘಾಟಿಸಲಿರುವರು. ಸಮಾರೋಪ ಕಾರ್ಯಕ್ರಮದಲ್ಲಿ ಅತೀ ವಂದನೀಯ ಫಾ| ಆಸ್ಸಿಸಿ ರೆಬೆಲ್ಲೊರವರು ಮತ್ತು ಫಾ| ಸಂತೋಷ್ ಮಿನೇಜಸ್‘ರವರು ಪ್ರಾರ್ಥನೆಯನ್ನು ನೆರವೇರಿಸುವರು. ಅತೀ ವಂದನೀಯ ಫಾ। ಸಿಪ್ರಿಯನ್ ಪಿಂಟೊರವರು ಪರಮಪ್ರಸಾದದ ಆಶೀರ್ವಚನವನ್ನು ನೆರವೇರಿಸುವರು. ಈ ಕಾರ್ಯಕ್ರಮವು ಆಧ್ಯಾತ್ಮಿಕ ಕಾರ್ಯಕ್ರಮವಾಗಿದ್ದು ಯೇಸುಕ್ರಿಸ್ತರು ಹುಟ್ಟಿ 2025 ವರ್ಷಗಳು(ಮಹೋತ್ಸವ) ತುಂಬಿದ ಸಂದರ್ಭದಲ್ಲಿ ಹಾಗೂ ತಪಸ್ಸು ಕಾಲದ ಪರಿವರ್ತನಾ ಜಾಥಾವಾಗಿರುತ್ತದೆ. ಈ ಜಾಥಕ್ಕೆ ಸುಮಾರು 5000 ಜನರು ಸೇರಲಿದ್ದಾರೆ. ಈ ಜಾಥವು ಪಾನೀರ್ ದಯಾಮಾತಾ ದೇವಾಲಯದಿಂದ ಹೊರಟು, ದೇರಳಕಟ್ಟೆಯಿಂದ ಸಾಗಿ ನಾಟೇಕಲ್ ಮಾರ್ಗವಾಗಿ ಮುನ್ನಡೆದು ಮುಡಿಪು ಸಂತ ಜೋಸೆಫ್ ವಾಜ್’ರವರ ಪುಣ್ಯಕ್ಷೇತ್ರದಲ್ಲಿ ಕೊನೆಗೊಳ್ಳುವುದು.ಉಪಸ್ಥಿತಿ: ಈ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ದಕ್ಷಿಣ ವಲಯದ ಕಥೊಲಿಕ್ ಸಭಾದ ಅಧ್ಯಕ್ಷರಾದ ಶ್ರೀ ಡೊಲ್ಫಿ ಡಿಸೋಜಾ, ಸಂಚಾಲಕರಾದ ಶ್ರೀ ಆಲ್ವಿನ್ ಡಿಸೋಜಾ ಪಾನೀರ್, ಘಟಕದ ಅಧ್ಯಕ್ಷರಾದ ಶ್ರೀ ರಜತ್ ವೇಗಸ್, ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ಬೆಳ್ಳಿ ಹಬ್ಬದ ಸಂಚಾಲಕರಾದ ಶ್ರೀ ರೋಶನ್ ಡಿಸೋಜಾ, ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ಉಪಾಧ್ಯಕ್ಷರಾದ ನವೀನ್ ಡಿಸೋಜಾ ಮತ್ತು ಕಾರ್ಯದರ್ಶಿಯಾದ ಸಂತೋಶ್ ಡಿಸೋಜಾ ಹಾಗೂ ಕಥೊಲಿಕ್ ಸಭಾ ಮಂಗುರ್ ಪ್ರದೇಶ್(ರಿ) ದಕ್ಷಿಣ ವಲಯದ ಉಪಾಧ್ಯಕ್ಷರಾದ ಅರುಣ್‌ ಡಿಸೋಜಾ ಇವರು ಉಪಸ್ಥಿತಲಿರುವರು.

ಕರಾವಳಿ ಸುದ್ದಿ

International Women’s Day – A functional collaborative endeavour towards Accelerating Action on Health!

Through the collaborative ideation of the Diocesan Council for Catholic Women, Mangalore Diocese; Deanery Stree Sanghatan; Catholic Association of South Canara alongside the joint efforts of the healthcare partners Kanachur Medical College Hospital and ResearchCentre, Deralakatte & the Indian Cancer Society, Mangaluru – a preventive health inclusive outreach health camp was held exclusively for women on 9th March at Church School, Kinnigoli in honor of International Women’s Day. The camp focused on creatingawareness, ensuring guidance for focused health interventions and the programmed approach to healthcare – to improve the general well being of the women in our communities. The health camp commenced with the invocation and recognition of the dignitaries. On the dais were : Vicar forane – Fr Oswald Monteiro; Deanery Stree Sanghatan Director – Fr Anil D’Souza; Kinnigoli ParishPriest – Fr Joquim Fernandez; Catholic Association of South Kanara, President – Mr Ronald Gomes; DCCW President – Mrs Gretta Pinto; Deanery Stree Sanghatan President – Mrs Anitha D’Souza; Secretary – Nalini D’Souza; Kinnigoli Stree Sanghatan President – Sangeetha Sequeira; Secretary – Mrs Gretta Rodrigues; Kinnigoli Parish Council Vice President – William D’Souza & Kanachur Doctors : Dr Ashwathi, Dr Afsal, DrShreya Hegde, Dr Rashmi, Dr Habiba & Dr Simran. In the inaugural addresses Fr OzwaldMonteiro and Mrs Gretta Pinto expressed the importance of this health initiative and the need for proactively testing. Mr Ronald Gomes expressed the resemblance of the women to salt, figuratively. Cancer is non-communicable chronic health public crises; which when diagnosed on time – can be eliminated; adding life to years. The proactive healthcare partnership of Kanachur Medical CollegeHospital and Indian Cancer Society is an earnest attempt to help educate, test and guide women on the cancer of oral cavity, breast and cervix. The Kanachur team of healthcare providers offered services on The camp saw a high level of participation of women from the villages of Kinnigoli, Damaskatte, Balkunje, Mundkur, Bola, Pakshikere, Niddodi and Neerude – demonstrating a greaterunderstanding of the value of preventative women’s health and utilized the experience of the healthcare professionals from Kanachur MedicalCollege. The campaign specifically focused on increasing awarenessof women’s health issues and motivated them to prioritize their well-being, in keeping with the spirit of International Women’s Day. The accomplishment of this benevolent project highlights how important easily accessible healthcare and focused awareness campaigns are to empowering people and creating healthier communities. Numerous people’s lives were significantly impacted bythe humanitarian efforts of the partnering teams – which emphasised the need for more focused healthcare outreach teamwork in meeting community health needs; against the dreaded disease.

ಕರಾವಳಿ ಸುದ್ದಿ

ಸ್ತ್ರೀಯರು ತಮ್ಮ ಚೈತನ್ಯ ಶಕ್ತಿಯನ್ನು ಜಾಗೃತಗೊಳಿಸಿ ಸಾಧನೆ ಮಾಡಬೇಕು‌: ರೂಪಾ ಅಯ್ಯರ್

ತಪಸ್ಯದಿಂದ ಮಂಗಳೂರಿನಲ್ಲಿ “ಶೌರ್ಯ” ಕಾರ್ಯಕ್ರಮ ಮಂಗಳೂರು: ವೇದ ಕಾಲದಿಂದಲೂ ಮಹಿಳೆಯರಿಗೆ ಗೌರವ ನೀಡುತ್ತಾ ಬರಲಾಗಿದೆ‌. ಸ್ತ್ರೀಯಲ್ಲಿ ಕೀರ್ತಿ, ಕ್ಷಮೆಯೇ ನಾನು ಎಂದು ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ದಶ ಮಹಾವಿದ್ಯೆಯಲ್ಲಿ ದೇವಿ ತನ್ನ ಶಕ್ತಿ ಬೇಕೇ ಬೇಕು ಎಂದು ತೋರಿಸಿದ್ದಾಳೆ. ಹಾಗಾಗಿ ಸ್ತ್ರೀಯರು ತಮ್ಮ ಚೈತನ್ಯ ಶಕ್ತಿಯನ್ನು ಜಾಗೃತಗೊಳಿಸಿ ಸಾಧನೆ ಮಾಡಬೇಕು‌ ಎಂದು ಖ್ಯಾತ ಅಂಕಣಕಾರ್ತಿ, ಚಿತ್ರ ನಟಿ, ಚಿತ್ರ ನಿರ್ದೇಶಕಿ, ಸಮಾಜಸೇವಕಿ ರೂಪಾ ಅಯ್ಯರ್ ಹೇಳಿದರು.ಅವರು ಮಾ.8ರಂದು ಶನಿವಾರ ಮಂಗಳೂರಿನ ಪುರಭವನದಲ್ಲಿ ನಡೆದ ಲಯನ್ಸ್‌ ಇಂಟರ್‌ನ್ಯಾಷನಲ್‌ ಡಿಸ್ಟ್ರಿಕ್ಟ್ 317 , ಐಡಿಎಫ್‌ಸಿ ಫ‌ಸ್ಟ್‌ ಬ್ಯಾಂಕ್‌ ಮತ್ತು ಬಿಎಎನ್‌ಎಂಎಸ್‌ ಮಂಗಳೂರು ತಾಲೂಕು ಸಮಿತಿ ಮಹಿಳಾ ಘಟಕದ ಸಹಯೋಗದಲ್ಲಿ ತಪಸ್ಯ ಫೌಂಡೇಶನ್ ವತಿಯಿಂದ ಶೌರ್ಯದ ಹೆಸರಲ್ಲಿ ಸಾಹಸಿಗಳನ್ನು ಗೌರವಿಸುವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.ಸಮಾಜದಲ್ಲಿ ಮಹಿಳೆಯರಿಗೆ ದೌರ್ಜನ್ಯಗಳಾಗುತ್ತಿರುವುದು ಮಾತ್ರವಲ್ಲ, ದೇವಾನು ದೇವತೆಗಳಿಗೂ ಆಗಿವೆ‌, ಪುರುಷರಿಗೂ ದೌರ್ಜನ್ಯಳಾಗುತ್ತಿದೆ. ಹೀಗಾಗಿ ನಾವು ಮೇಲು ಕೀಳು ಎಂಬ ಸ್ಪರ್ಧೆಯಲ್ಲಿಯೇ ಹೋದರೆ ದೌರ್ಜನ್ಯಗಳಿಗೆ ಪರಿಹಾರ ಖಂಡಿತಾ ಸಾಧ್ಯವಿಲ್ಲ. ಸಮಾಜದಲ್ಲಿ ಅನೇಕ ಕಷ್ಟಗಳನ್ನು ಮೆಟ್ಟಿ ನಿಂತು ಸಾಧನೆಗಳನ್ನು ಮಾಡಿದವರಿದ್ದಾರೆ. ಸಾಧನೆಯನ್ನು ಯಾರು ಬೇಕಾದರೂ ಮಾಡಬಹುದು. ಸಮಾಜಕ್ಕಾಗಿ ದುಡಿಯುವವರನ್ನು ನಿರುತ್ಸಾಹಗೊಳಿಸುವವರು ಇದ್ದೇ ಇರುತ್ತಾರೆ. ಇದನ್ನೆಲ್ಲಾ ಲೆಕ್ಕಿಸದೆ ದೇವರೊಬ್ಬನೇ ನನ್ನ ಶಕ್ತಿ ಎಂದು ಅವನನ್ನೇ ಸಾಕ್ಷೀಕರಿಸಿ ಸಾಧನೆ ಮಾಡಿದರೆ ಉತ್ತಮ ಫಲಿತಾಂಶ ಖಂಡಿತಾ ಸಿಗುತ್ತದೆ ಎಂದು ರೂಪಾ ಅಯ್ಯರ್ ಹೇಳಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಲಯನ್ ಜಿಲ್ಲಾ ರಾಜ್ಯಪಾಲರು 317 ಡಿ. ಡಿಸ್ಟ್ರಿಕ್ಟ್ ಗವರ್ನರ್‌ ಲ| ಭಾರತಿ ಬಿ.ಎಂ., ಸ್ತ್ರೀ ತಮ್ಮ ಪರಿಶ್ರಮ, ಕಾಳಜಿ, ತ್ಯಾಗದ ಮೂಲಕ ಇಡೀ ಕುಟುಂಬದ ಭದ್ರತೆಯಾಗಿರುತ್ತಾಳೆ. ಇಂತಹ ಮಹಿಳೆಯರಿಗೆ ವಿಶ್ವ‌ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದರು. ತಪಸ್ಯ ಫೌಂಡೇಶನ್ ಮೂಲಕ ಕ್ಯಾನ್ಸರ್ ರೋಗಿಗಳ ಆರೈಕೆ, ಚಿಕಿತ್ಸೆ ನೀಡಲಾಗುತ್ತಿದೆ. ಇಂತಹಾ ರೋಗಿಗಳ ಸೇವೆ ಮಾಡುವ ಸಂಸ್ಥೆಗೆ ತನು,‌ ಮನ, ಧನಗಳಿಂದ ಸಹಾಯಹಸ್ತ ನೀಡಬೇಕಾಗಿದೆ ಎಂದರು.ಬಾಲ್ಯದ ಕ್ಯಾನ್ಸರನ್ನು ಗುಣಪಡಿಸಬಹುದು(childhood cancer is curable) ಎಂಬ ಧ್ಯೇಯವಾಕ್ಯವನ್ನಿಟ್ಟು ಸಮಾಜದಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕೇವಲ 23 ದಿನಗಳಲ್ಲಿ ಮುಂಬೈಯಿಂದ ಮಂಗಳೂರಿಗೆ950 ಕಿ.ಮೀ ಓಡಿ ಬಂದು ವಿಶ್ವದಾಖಲೆ ನಿರ್ಮಿಸಿದ ಗಿರೀಶ್ ಶೆಟ್ಟಿ- ರೇಷ್ಮಾ ಗಿರೀಶ್ ಶೆಟ್ಟಿ ದಂಪತಿಯನ್ನು ಅದ್ಧೂರಿ ಮೆರವಣಿಗೆಯ ಮೂಲಕ ಕರೆದೊಯ್ಯಲಾಯಿತು.ರೂಪ ಅಯ್ಯರ್, ಲ| ಭಾರತಿ ಬಿ.ಎಂ., ಡಾ. ಆಶಾ ಜ್ಯೋತಿ ರೈ, ಸಚಿತ ನಂದಗೋಪಾಲ್ ಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಅಪೂರ್ವ ಸಾಧನೆ ಮಾಡುತ್ತಿರುವ ಗಿರೀಶ್ ಶೆಟ್ಟಿ- ರೇಷ್ಮಾ ಗಿರೀಶ್ ಶೆಟ್ಟಿ ದಂಪತಿ, ಕುಮಾರ್ ಅಜ್ವಾನಿ ದಂಪತಿ, ಹರಿದಾಸನ್ ನಾಯರ್ ದಂಪತಿಯನ್ನು ಸನ್ಮಾನಿಸಲಾಯಿತು.ಪ್ರಶಾಂತ್ ಶೆಟ್ಟಿ, ಹರಿಣಿ ಶೆಟ್ಟಿ, ನಯನ ಶೆಟ್ಟಿ ಹಾಗೂ ಅರವಿಂದ ಕುಮಾರ್ ಸನ್ಮಾನಿತರನ್ನು ಪರಿಚಯಿಸಿದರು.ವೇದಿಕೆಯಲ್ಲಿ ಶಾಸಕ ವೇವ್ಯಾಸ ಕಾಮತ್, ಕೆಎಂಸಿ ಆಸ್ಪತ್ರೆಯ ಖ್ಯಾತ ವೈದ್ಯ ಡಾ. ಹರ್ಷಪ್ರಸಾದ್ ಎಲ್., ಆಸರೆ ಚಾರಿಟೇಬಲ್ ಟ್ರಸ್ಟ್‌ ಚೇರ್‌ಪರ್ಸನ್ ಡಾ. ಆಶಾ ಜ್ಯೋತಿ ರೈ, ಬಾಲ ನ್ಯಾಯ ಮಂಡಳಿಯ ಸಚಿತಾ ನಂದಗೋಪಾಲ್, ಸವಿತಾ, ನವೀನ್ ಹೆಗ್ಡೆ ಮತ್ತಿತರರಿದ್ದರು. ಭರತನಾಟ್ಯ ಕಲಾವಿದೆ ಸುನೀತಾ ಶೆಟ್ಟಿ ಗಣೇಶನ ಸ್ಥುತಿ ನೃತ್ಯ ಮಾಡಿದರು. ದಿವ್ಯ ವಸಂತ್ ಶೆಟ್ಟಿ ಪ್ರಾರ್ಥಿಸಿದರು. ತಪಸ್ಯ ಮ್ಯಾನೇಜಿಂಗ್ ಟ್ರಸ್ಟಿ ಸಬಿತಾ ರಮಾನಾಥ್ ಶೆಟ್ಟಿ ಸ್ವಾಗತಿಸಿದರು. ಸ್ವಯಂಪ್ರೇರಿತ ದಾನಿಗಳಿಗೆ ಗೌರವಿಸಲಾಯಿತು. ಡಾ. ಮಂಜುಳಾ ಶಟ್ಟಿ ಮತ್ತು ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನವೀನ್ ಹೆಗ್ಡೆ ವಂದಿಸಿದರು. ಶಾಸಕನ ವೇದವ್ಯಾಸ್ 25 ಲಕ್ಷ ಭರವಸೆ:ವೇದಿಕೆ ಮೇಲೆ ಆಸೀನರಾದ ಸಾಧಕರ ಸಾಧನೆ, ತ್ಯಾಗದ ಮುಂದೆ ಶಾಸಕನಾದ ನನ್ನ ಸಾಧನೆ ಏನೂ ಅಲ್ಲ. ಕ್ಯಾನ್ಸರ್ ಮಕ್ಕಳಿಗಾಗಿ ನಾಲ್ಕು ತಿಂಗಳೊಳಗೆ ದಾನಿಗಳ ಸಹಕಾರದಿಂದ ರೂ. ಇಪ್ಪತ್ತೈದು ಲಕ್ಷ ಕೊಡುವುದಾಗಿ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭರವಸೆ ನೀಡಿದ್ದಾರೆ.

ಕರಾವಳಿ ಸುದ್ದಿ

ಅಂಚೆ ಅಪಘಾತ ವಿಮೆ ಉಪಯುಕ್ತ ಯೋಜನೆಹಿರಿಯ ಅಂಚೆ ಅಧೀಕ್ಷಕ ಎಂ.ಸುಧಾಕರ ಮಲ್ಯ ಮಾಹಿತಿ

ಮಂಗಳೂರು : ಭಾರತೀಯ ಅಂಚೆ ಇಲಾಖೆಯು ಅತ್ಯಂತ ವಿಶ್ವಾಸಾರ್ಹ ಸೇವೆ ನೀಡುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಅಂಚೆ ಅಪಘಾತ ವಿಮಾ ಯೋಜನೆಯು ಸರಳವಾದ ಹಾಗೂ ಜನಸಾಮಾನ್ಯರ ಕೈಗೆಟುಕುವ ಉಪಯುಕ್ತ ವಿಮಾ ಯೋಜನೆಯಾಗಿದೆ ಎಂದು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ಎಂ.ಸುಧಾಕರ ಮಲ್ಯ ತಿಳಿಸಿದರು.ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ ಮತ್ತು ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇದರ ಸಹಯೋಗದಲ್ಲಿ ಭಾನುವರ ನಗರದ ಅತ್ತಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಅಂಚೆ ಜನಸಂಪರ್ಕ ಅಭಿಯಾನದಲ್ಲಿ ಅವರು ಇಲಾಖೆಯವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ವಿಮಾ ಕಂತು 549 ರೂ.ಅಥವಾ 749 ರೂ. ಪಾವತಿಸಿದ ಬಳಿಕ ಯಾವುದೇ ಅಂಚೆ ಕಚೇರಿಯ ಮೂಲಕ ದಾಖಲೆ ಸಲ್ಲಿಸಿ ಸಣ್ಣಪುಟ್ಟಅಪಘಾತ ಸಂಭವಿಸಿದಾಗ ನಿರ್ದಿಷ್ಟ ವಿಮಾ ಪರಿಹಾರ ಮೊತ್ತ ಪಡೆಯಬಹುದು. ಶಾಶ್ವತ ಅಂಗವೈಕಲ್ಯ, ಮರಣ ಸಂದರ್ಭ ಪೂರ್ಣ ಪ್ರಮಾಣದ ವಿಮಾ ಮೊತ್ತ ಪಡೆಯಬಹುದು. ಅಂಚೆ ಜನಸಂಪರ್ಕ ಅಭಿಯಾನದ ಮೂಲಕ ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಲಾಗುತ್ತಿದೆ. ಮಂಗಳೂರಿನಲ್ಲಿ ಇದುವರೆಗೆ 75 ಮಾಹಿತಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಅವರು ತಿಳಿಸಿದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾನೂನು ಸಲಹೆಗಾರ , ವಕೀಲ ರಾಮ್‌ಪ್ರಸಾದ್ಮುಖ್ಯ ಅತಿಥಿಯಾಗಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಯೆಯ್ಯಡಿ ವರದಿ ವಾಚಿಸಿದರು. ಅಂಚೆ ನಿರೀಕ್ಷಕ ಪ್ರದೀಪ್ ಭಂಡಾರಿ, ಸಂಘದ ಸ್ಥಾಪಕ ಅಧ್ಯಕ್ಷ ಮೋಹನ್ ಕುಮಾರ್ ಅತ್ತಾವರ, ಕೋಶಾಧಿಕಾರಿ ಸತೀಶ್ ಪೂಜಾರಿ ಉರ್ವ, ಸುರತ್ಕಲ್ ಘಟಕದ ಅಧ್ಯಕ್ಷ ಜಪ್ರುಲ್ಲಾ ಕೃಷ್ಣಾಪುರ , ಬಿ.ಸಿ.ರೋಡ್ ಘಟಕದ ಕಾರ್ಯದರ್ಶಿ ಶ್ರೀಕಾಂತ್ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿ ಕಿರಣ್ ಲೇಡಿಹಿಲ್ ಸ್ವಾಗತಿಸಿ, ಭವಾನಿ ಶಂಕರ್ ವಂದಿಸಿದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿದರು.

ಕರಾವಳಿ ಸುದ್ದಿ

ಕರ್ನಾಟಕದಾದ್ಯಂತ ಹೋಮ್ ನರ್ಸಿಂಗ್ ಸೇವೆಯಲ್ಲಿ ಅನುಭವೀ ,ಹೆಸರಾಂತ ಮತ್ತುಮುಂಚೂಣಿಯಲ್ಲಿರುವ ದಾಸ್‌ ಸೇವಾ ಸಂಸ್ಥೆಯಿಂದ ಸಹಸ್ರಾರು ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ.

ಮಂಗಳೂರು -ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಸೇವಾ ಸಂಸ್ಥೆ ಕಳೆದ 23 ವರುಷ ಗಳಿಂದ ಸೇವಾ ತರಬೇತಿ ಯೊಂದಿಗೆ ಉದ್ಯೋಗ ವನ್ನು ಕಲ್ಪಿಸಿ ನಿರುದ್ಯೋಗಿ ಯುವಕ ಯುವತಿ ಯರಿಗೆ ದಾರಿ ದೀಪವಾಗಿದೆ ಮತ್ತು ಆಶಾ ಕಿರಣವಾಗಿದೆ. ಕರ್ನಾಟಕ ದಾದ್ಯಂತ ಮಂಗಳೂರು ಕೇಂದ್ರೀಕೃತ ಗೊಂಡು ಬೆಂಗಳೂರು, ಮೈಸೂರು, ಹುಬ್ಬಳ್ಳಿ. ಬೆಳಗಾಂ, ಶಿವಮೊಗ್ಗ. ಹಾಸನ, ದಾವಣಗೆರೆ. ಬಳ್ಳಾರಿ ಮುಂತಾದೆಡೆ ಶಾಖೆಗಳನ್ನು ಹೊಂದಿದ್ದು.. ಕನಿಷ್ಠ ವಿದ್ಯಾರ್ಹತೆ. 10ನೇ. ಪಿ ಯು ಸಿ. ಡಿಗ್ರಿ ಯಾದ ವಿದ್ಯಾರ್ಥಿಗಳಿಗೆ ಆಸ್ಪತ್ರೆಗಳ ಮುಖಾಂತರ ಉಚಿತ ಸೇವಾ ತರಬೇತಿ ಯನ್ನು ಕೊಟ್ಟು ಉದ್ಯೋಗಕ್ಕೆ ಆಯ್ಕೆ ಮಾಡುತ್ತದೆ ಹಾಗೂ ಈಗಾಗಲೇ ತರಬೇತಿ ಹೊಂದಿರುವ ನರ್ಸ್. ಹೋಮ್ ನರ್ಸ್. (GNM. ANM. PAYARAMEDICAL) ಕೋರ್ಸ್ ಆದ ಅಭ್ಯರ್ಥಿ ಗಳಿಗೆ ಸಂಸ್ಥೆ ಯಿಂದ ಉದ್ಯೋಗ ಅವಕಾಶ ಮಾಡಿ ಕೊಟ್ಟಿದೆ. ಸಂಸ್ಥೆ ಯಿಂದ ತರಬೇತಿ ಪಡೆದ ಅದೆಷ್ಟೋ ಅಭ್ಯರ್ಥಿಗಳು ದೇಶ ವಿದೇಶಗಳಲ್ಲಿ ಉತ್ತಮ ಸೇವಾ ಅನುಭವ ಪಡೆದು ತನ್ನ ಬದುಕನ್ನು ನಿರೂಪಿಸಿದ ನಿದರ್ಶನವಿದೆ.. ಸಂಸ್ಥೆಯು ವಯೋವೃದ್ಧರ , ರೋಗಿಗಳ ಆರೈಕೆಯಲ್ಲಿ.. ನಿಷ್ಠಾವಂತ ಅನುಭವಿ ನರ್ಸ್ ಹೋಮ್ ನರ್ಸ್ ಗಳನ್ನು ಮನೆ. ವೃದ್ಧಾಶ್ರಮ. ಆಸ್ಪತ್ರೆ.. ಮುಂತಾದಡೆ ಸಂಸ್ಥೆ ಯ ಪೂರ್ಣ ಜವಾಬ್ದಾರಿ ಯೊಂದಿಗೆ ಕಳುಹಿಸಿ.. ದೇಶ ವಿದೇಶಗಳಲ್ಲಿ ಅಸಂಖ್ಯಾತ ಗ್ರಾಹಕ ವರ್ಗವನ್ನು ಹೊಂದಿದೆ.ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಮೂಲಕ ತನ್ನ ದುಡಿಮೆಯ ಒಂದು ಭಾಗವನ್ನು ಸಮಾಜದ ವಿವಿಧ ಸೇವಾ ಚಟುವಟಿಕೆಯಲ್ಲಿ ತೊಡಗಿಸಿ ದಾಸ್ ಓಲ್ಡ್ ಹೆಲ್ತ್ ಕೇರ್ ಮೂಲಕ ವೃದ್ಧರ ಆರೈಕೆ ಯನ್ನು ಉಚಿತವಾಗಿ ಮಾಡುತ್ತಿದೆ ಹಾಗೂ ಸಮಾಜದ ಅಗ್ರಮಾನ್ಯರ ಸಂತುಷ್ಟ ಸೇವೆಯ ಮೂಲಕ ಸಾರ್ಥಕತೆಯ ಮೈಲಿ ಗಲ್ಲಿನೊಂದಿಗೆ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ದಾಪುಗಾಲು ಇಟ್ಟಿದೆ.ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಸೇವಾ ಸಂಸ್ಥೆ ಕಂಕನಾಡಿ ಮಂಗಳೂರು.. www.homenursingservices.org Mob..9343568915ಕಳೆದ 23 ವರ್ಷಗಳಿಂದ ನಿರುದ್ಯೋಗಿ ಯುವಕ, ಯುವತಿಯರಿಗೆ ದಾರಿ ದೀಪವಾದ “ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್” ಸೇವಾ ಸಂಸ್ಥೆ

Scroll to Top