Author name: editor

ಕರಾವಳಿ ಸುದ್ದಿ

ಅಭಾಸಾಪ ಬಂಟ್ವಾಳ ತಾಲೂಕುಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಧುರಾ ಕಡ್ಯ, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ , ಖಜಾಂಚಿಯಾಗಿ ನರಸಿಂಹ ಮಯ್ಯ , ಸಮಿತಿ ಸದಸ್ಯರಾಗಿ ಜಯಾನಂದ ಪೆರಾಜೆ, ರಮೇಶ್ ಬಾಯಾರು, ಜಯಶ್ರೀ ಶೆಣೈ, ಸೀತಾಲಕ್ಷ್ಮಿ ವರ್ಮ, ಅಶೋಕ್ ಕಲ್ಲಟೆ , ಹೇಮಾವತಿ ಸಾಲೆತ್ತೂರು, ಈಶ್ವರ ಪ್ರಸಾದ್, ಜಯರಾಮ್ ಪಡ್ರೆ ಆಯ್ಕೆಯಾಗಿದ್ದಾರೆ.

ಕರಾವಳಿ ಸುದ್ದಿ

ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ -2025 : ಪ್ರೆಸ್ ಕ್ಲಬ್ ಗೆ ಆಗಮಿಸಿದ ಪ್ರಿನ್ಸೆಸ್ ಆಫ್ ಕರಾವಳಿ ವಿನ್ನರ್ ವಿಯಾ ಸಾಯಿ ಸೇರಿದಂತೆ ಸ್ಪರ್ಧೆ ವಿಜೇತರು

ಚಿತ್ರಗಳು – ಸತೀಶ್ ಕಾಪಿಕಾಡ್ ಮಂಗಳೂರು: ಮೂಡುಬಿದಿರೆಯ ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊ ನೇತೃತ್ವದಲ್ಲಿ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ -2025 ಸ್ಪರ್ಧೆಯಲ್ಲಿ 60 ಮಕ್ಕಳು ಭಾಗವಹಿಸಿದ್ದು, ಒಟ್ಟು 65,555 ರೂ. ಬಹುಮಾನ ನೀಡಲಾಗಿದೆ ಎಂದು ಸ್ಪರ್ಧೆಯ ತೀರ್ಪುಗಾರ ಸಂದೀಪ್ ಶೆಟ್ಟಿ ಮಂಗಳೂರು ತಿಳಿಸಿದರು.7ರಿಂದ 11 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಿನ್ಸ್ ಆಫ್ ಕರಾವಳಿ 2025 ವಿನ್ನರ್ ಆಗಿ ಮಂಗಳೂರು ಎಸ್‌ಡಿಎಂ ಶಾಲೆಯ ಶೌರ್ಯ ರಾವ್, ಬಾಲಕಿಯರ ವಿಭಾಗದಲ್ಲಿ ಪ್ರಿನ್ಸೆಸ್ ಆಫ್ ಕರಾವಳಿ 2025 ವಿನ್ನರ್ ಆಗಿ ಮಂಗಳೂರು ಕಾರ್ಮೆಲ್ ಸಿಬಿಎಸ್‌ಇ ಶಾಲೆಯ ವಿಯಾ ಸಾಯಿ, ಸ್ಟಾರ್ ಕಿಡ್ ಕರಾವಳಿ 2025 ವಿನ್ನರ್ ಆಗಿ ಕುಳಾಯಿ ರಾಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಐಶಾನಿ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. 7ರಿಂದ 11 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಿನ್ಸ್ ಆಫ್ ಕರಾವಳಿ 2025 ವಿನ್ನರ್ ಆಗಿ ಮಂಗಳೂರು ಎಸ್‌ಡಿಎಂ ಶಾಲೆಯ ಶೌರ್ಯ ರಾವ್, ಬಾಲಕಿಯರ ವಿಭಾಗದಲ್ಲಿ ಪ್ರಿನ್ಸೆಸ್ ಆಫ್ ಕರಾವಳಿ 2025 ವಿನ್ನರ್ ಆಗಿ ಮಂಗಳೂರು ಕಾರ್ಮೆಲ್ ಸಿಬಿಎಸ್‌ಇ ಶಾಲೆಯ ವಿಯಾ ಸಾಯಿ, ಸ್ಟಾರ್ ಕಿಡ್ ಕರಾವಳಿ 2025 ವಿನ್ನರ್ ಆಗಿ ಕುಳಾಯಿ ರಾಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಐಶಾನಿ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.11ರಿಂದ 17 ವರ್ಷದೊಳಗಿನ ಹುಡುಗರ ವಿಭಾಗದ ಮಿಸ್ಟರ್ ಟೀನ್ ಕರಾವಳಿ 2025 ವಿನ್ನರ್ ಆಗಿ ಕಿನ್ನಿಗೋಳಿ ಸೈಂಟ್ ಮೇರೀಸ್ ಸೆಂಟ್ರಲ್ ಸ್ಕೂಲ್‌ನ ಸಾನ್ವಿತ್ ಕುಲಾಲ್, ಹುಡುಗಿಯರ ವಿಭಾಗದಲ್ಲಿ ಮಿಸ್ ಟೀನ್ ಕರಾವಳಿ 2025 ವಿನ್ನರ್ ಆಗಿ ಮೂಡುಬಿದರೆ ರೋಟರಿ ಇಂಗ್ಲಿಷ್ ಮೀಡಿಯಂ ಶಾಲೆಯ ಧನ್ವಿ ಶೆಟ್ಟಿ, ಮಿಸ್ ಕ್ವೀನ್ ಕರಾವಳಿ 2025 ವಿನ್ನರ್ ಆಗಿ ಉಡುಪಿ ಹಿರಿಯಡ್ಕ ಗ್ರೀನ್ ಪಾರ್ಕ್ ಶಾಲೆಯ ಪೂರ್ವಿ ಕುಲಾಲ್, ಪಾಪ್ಯುಲರ್ ಐಕಾನ್ ಕರಾವಳಿ 2025 ವಿನ್ನರ್ ಆಗಿ ಆಲಂಗಾರು ಸೈಂಟ್ ಥೋಮಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಸಾಧ್ವಿ ಶೆಟ್ಟಿ ವಿನ್ನರ್ ಆಗಿ ಆಯ್ಕೆಯಾಗಿದ್ದಾರೆ ಎಂದರು. ಸ್ವಾಮೀಸ್ ಬೆದ್ರ ಕ್ಲಾಸಿಕ್ 2025 ಮಿ. ದಕ್ಷಿಣ ಕನ್ನಡ ದೇಹದಾರ್ಢ್ಯ ಸ್ಪರ್ಧೆಯಲ್ಲಿ 100 ಸ್ಪರ್ಧಿಗಳು ಭಾಗವಹಿಸಿದ್ದು, ವಿಜೇತರಿಗೆ ಒಟ್ಟು 3 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ ಎಂದರು.ಸಂಸ್ಥೆಯ ಸ್ವಾಮಿಪ್ರಸಾದ್, ಎಂ.ಜೆ. ಅನೀಶ್, ಸ್ಪರ್ಧೆಯಲ್ಲಿ ವಿಜೇತ ಮಕ್ಕಳು ಉಪಸ್ಥಿತರಿದ್ದರು.

ಕರಾವಳಿ ಸುದ್ದಿ

INAUGURATION OF MCC BANK’S ATM AT BRAHMAVARA

On the occasion of the first anniversary of opening of Brahmavara branch, achievement of total business turnover of Rs.10 Crore by the branch and inauguration of ATM at Brahmavara branch, a programme was arranged on the 3rd march 2025 at MCC Bank Brahmavara branch premises.The ATM room was inaugurated by Mr Jerald Gonsalves, President Catholic Cooperative Society, Brahmavara. Rev. Fr John Fernandes, Parish Priest, Holy Family Church, Brahmavara blessed the event and congratulated the Chairman, Directors, staff and customers on this occasion. Mr Sourab Shetty, Proprietor, AS Used Cars, Brahmavara inaugurated the ATM by withdrawing the amount from the ATM. Mr Shamsuddin Moideen Gudmi Kutty was the chief guest. Mr Elroy Kiran Crasto, Director in charge of the branch was present on the occasion. The programme was presided over by the Chairman of the Bank, Sahakara Ratna Mr Anil Lobo. In his presidential address ‘Sahakara Ratna’ Mr Anil Lobo, thanked the customers of the branch who were responsible for opening of the branch and the branch achieving the total business turnover of Rs.10 Crore within one year of its opening. He said that it is only because of the support and cooperation of the customers, the branch could achieve this milestone. This has also demonstrated that excellent customer service and thereby earning the trust of the customers can lead to success of the branch. He congratulated Mr Ovin Rebello and his team for achieving the milestone and called upon the customers to cooperate and the branch staff make efforts for achieving a total business turnover of Rs.30 Crore by next financial year ending 31st Mach 2025. He thanked Rev. Fr. John Fernandes who had blessed the premises at the time of inauguration of the branch last year. Speaking on the occasion, Mr Jerald Gonsalves, President Catholic Cooperative Society, Brahmavara appreciated the Chairman for his efficient leadership in taking the Bank to greater heights after assuming charge as Chairman of the Bank. He congratulated the management and expressed his happiness at the branch achieving Rs. 10 Crore business in the first year of its operation. He said that progress is possible only when there is technological advancement and appreciated the Bank for adopting latest technology in the banking operations, He wished all the best for the future endeavours of the Bank. The first anniversary of the branch was celebrated by cutting the cake and Mr Ovin Rebello was felicitated for achieving the business turnover of Rs.10 crore of the branch in the first year of operation. Mr Jerald Gonsalves was felicitated for having been elected as President of Catholic Cooperative Society, Brahmavara recently. Dr Gerald Pinto, Director welcomed the guests, General Manager Mr Sunil Menezes proposed vote of thanks and Mr Ovin Rebello compered the programme. Mr Pradeep Dsouza, Branch Manager, Udupi, Mrs Ancilla Fernandes, Branch Manager, Shirva, Mrs Jyothi Baretto, Branch Manager, Kundapura and the customers of Brahmavara branch were present on the occasion.

ಕರಾವಳಿ ಸುದ್ದಿ

ಬ್ರಹ್ಮಾವರದ ಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ ೮ನೇ ಎಟಿಎಮ್ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ| ಜೋನ್ ಫೆರ್ನಾಂಡಿಸ್ ಆಶೀರ್ವದಿಸಿದರು. ಎಟಿಎಮ್ ಯಂತ್ರವನ್ನು ಎಎಸ್ ಯೂಸ್ಡ್ ಕರ‍್ಸ್ ಇದರ ಮ್ಹಾಲಕರಾದ ಶ್ರೀ ಸೌರಬ್ ಶೆಟ್ಟಿ ಇವರು ಎಟಿಎಮ್‌ನಿಂದ ಹಣ ತೆಗೆಯುವ ಮೂಲಕ ಉದ್ಘಾಟಿಸಿದರು. ಉದ್ಯಮಿ ಶ್ರೀ ಶಂಶುದ್ದಿನ್ ಮೊÊದಿನ್ ಮುಖ್ಯ ಅತಿಥಿಯಾಗಿದ್ದರು ಹಾಗೂ ಶಾಖಾ ನಿರ್ದೇಶಕ ಶ್ರೀ ಎಲ್‌ರೋಯ್ ಕಿರಣ್ ಕ್ರಾಸ್ಟೊ ಸಮಾರಂಭದಲ್ಲಿ ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು.ಸಹಕಾರ ರತ್ನ ಶ್ರೀ ಅನಿಲ್ ಲೋಬೊ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಬ್ರಹ್ಮಾವರದಲ್ಲಿ ಶಾಖೆಯು ಆರಂಭಗೊಳ್ಳಲು ಹಾಗೂ ರೂ. 10 ಕೋಟಿ ವ್ಯವಹಾರ ದಾಖಲಿಸಲು ಸಹಕರಿಸಿದ ಬ್ರಹ್ಮಾವರದ ಗ್ರಾಹಕರಿಗೆ ವಂದನೆಗಳನ್ನು ಸಲ್ಲಿಸಿದರು. ಬ್ರಹ್ಮಾವರದ ಜನತೆ ನೀಡಿದ ಸಹಕಾರದಿಂದ ಬ್ರಹ್ಮಾವರ ಶಾಖೆಯು ಈ ಸಾಧನೆ ಮಾಡಲು ಸಾಧ್ಯವಾಯಿತು.ಶಾಖೆಯಲ್ಲಿ ಉತ್ತಮ ಸೇವೆ ಮತ್ತು ವಿಶ್ವಾಸರ್ಹತೆಯನ್ನು ಗಳಿಸುವಲ್ಲಿ ಯಶಸ್ವಿಯಾದರೆ ಮಾತ್ರ ಸಾಧನೆ ಮಾಡಲು ಸಾದ್ಯ. ಇದಕ್ಕಾಗಿ ಬ್ರಹ್ಮಾವರ ಶಾಖೆಯ ವ್ಯವಸ್ಥಾಪಕ ಶ್ರೀ ಒವಿನ್ ರೆಬೆಲ್ಲೊ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವರ್ಷ ೩೦ ಕೋಟಿ ವ್ಯವಹಾರವನ್ನು ದಾಖಲಿಸಿ, ಶಾಖೆಯು ಲಾಭ ಗಳಿಸುವಲ್ಲಿ ಗ್ರಾಹಕರು ಸಹಕರಿಸಲು ಮತ್ತು ಶಾಖೆಯ ಸಿಬ್ಬಂದಿ ಶ್ರಮಿಸಲು ಕರೆ ಕೊಟ್ಟರು. ಕಳೆದ ವರ್ಷ ಶಾಖೆಯ ಉದ್ಘಾಟನಾ ಸಂದರ್ಭದಲ್ಲಿ ಆಶೀರ್ವಚಿಸಿದ ಧರ್ಮಗುರುಗಳಾದ ವಂ. ಫಾ| ಜೋನ್ ಫೆರ್ನಾಂಡಿಸ್ ಇವರಿಗೆ ವಂದನೆಗಳನ್ನು ಸಲ್ಲಿಸಿದರು. ನೂತನ ಎಟಿಎಮ್‌ನ್ನು ಆಶೀರ್ವಚಿಸಿ ಮಾತನಾಡಿದ ವಂದನೀಯ ಫಾ| ಜೋನ್ ಫೆರ್ನಾಂಡಿಸ್ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ಶುಭ ಹಾರೈಸಿದರು. ಎಟಿಎಮ್ ಉಧ್ಘಾಟಿಸಿ ಮಾತನಾಡಿದ ಶ್ರೀ ಜೆರಾಲ್ಡ್ ಗೊನ್ಸಾಲ್ವಿಸ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಇವರ ಮುಂದಾಳುತ್ವದ ಆಡಳಿತ ಮಂಡಳಿಯ ಇತ್ತೀಚಿನ ಸಾಧನೆಯನ್ನು ಮತ್ತು ಫಲಿತಾಂಶದ ಬಗ್ಗೆ ಶ್ಲಾಘಿಸಿದರು. ಶಾಖೆಯು ಒಂದು ವರ್ಷದಲ್ಲಿಯೇ ರೂ. ೧೦ ಕೋಟಿ ಸಾಧನೆಗೈದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ನೂತನ ತಂತ್ರಜ್ಞಾನದಲ್ಲಿ ಹಿಂದೆ ಬಿದ್ದರೆ ಪ್ರಗತಿ ಅಸಾದ್ಯ, ಎಲ್ಲರೂ ಒಟ್ಟುಗೂಡಿ ಕೆಲಸ ಮಾಡಿದ್ದರಿಂದ ಬ್ಯಾಂಕ್ ಪ್ರಗತಿಯಲ್ಲಿ ಮುಂದೆ ಇದೆ. ಬ್ಯಾಂಕ್ ತಂತ್ರಜ್ಞಾನದಲ್ಲಿ ಮೂಂಚೂಣಿಯಲ್ಲಿದ್ದು ಮುಂದೆಯೂ ಉತ್ತಮ ಪ್ರಗತಿ ಸಾಧಿಸಲಿ ಎಂದು ಶುಭ ಹಾರೈಸಿದರು. ಶಾಖೆಯ ವಾರ್ಷಿಕೋತ್ಸವ ಸಂದರ್ಭವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ರೂ. ೧೦ ಕೋಟಿ ವ್ಯವಹಾರದ ಸಾಧನೆ ಮಾಡಿದ ಶಾಖೆಯ ವ್ಯವಸ್ಥಾಪಕ ಶ್ರೀ ಒವಿನ್ ರೆಬೆಲ್ಲೊ ಇವರನ್ನು ಸನ್ಮಾನಿಸಲಾಯಿತು. ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಶ್ರೀ ಜೆರಾಲ್ಡ್ ಗೊನ್ಸಾಲ್ವಿಸ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಿರ್ದೇಶಕರಾದ ಡಾ| ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಮಹಾಪ್ರಬಂಧಕ ಶ್ರೀ ಸುನಿಲ್ ಮಿನೆಜಸ್ ವಂದಿಸಿದರು. ಶಾಖಾ ವ್ಯವಸ್ಥಾಪಕ ಶ್ರೀ ಒವಿನ್ ರೆಬೆಲ್ಲೊ ನಿರೂಪಿಸಿದರು. ಉಡುಪಿ ಶಾಖಾ ವ್ಯವಸ್ಥಾಪಕ ಶ್ರೀ ಪ್ರದೀಪ್ ಡಿಸೋಜ, ಶಿರ್ವ ಶಾಖಾ ವ್ಯವಸ್ಥಾಪಕಿ ಅನ್ಸಿಲ್ಲಾ ಫೆರ್ನಾಂಡಿಸ್, ಕುಂದಾಪುರ ಶಾಖಾ ವ್ಯವಸ್ಥಾಪಕಿ ಜ್ಯೋತಿ ಬಾರೆಟ್ಟೊ ಹಾಗೂ ಗ್ರಾಹಕರು ಹಾಜರಿದ್ದರು.

ಕರಾವಳಿ ಸುದ್ದಿ

ಎಂಸಿಸಿ ಬ್ಯಾಂಕ್ 19ನೇ ಶಾಖೆ ಬೆಳ್ಮಣ್ ನಲ್ಲಿ ಲೋಕಾರ್ಪಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಬೆಳ್ಮಣ್ ನಲ್ಲಿ ಆದಿತ್ಯವಾರ ಲೋಕಾರ್ಪಣೆಗೊಂಡಿತು.ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ಅವರು ದೀಪ ಬೆಳಗಿಸುವ ಮೂಲಕ ನೂತನ ಬ್ಯಾಂಕ್ ಉದ್ಘಾಟಿಸಿ ಶುಭ ಹಾರೈಸಿದರು.ಬಳಿಕ ಆಶೀರ್ವಚನದ ನುಡಿಗಳನ್ನಾಡಿದ ಅವರು, “ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಇಂದು ಉದ್ಘಾಟನೆಗೊಂಡಿದೆ. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. ಅನಿಲ್ ಲೋಬೋ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ ಬ್ಯಾಂಕ್ ಮನೆಮಾತಾಗಿದೆ. ಬೆಳ್ಮಣ್ ಶಾಖೆಯು ಅದೇ ರೀತಿ ಗ್ರಾಹಕ ಸ್ನೇಹಿಯಾಗಿ ಬೆಳೆದು ಜನರಿಗೆ ವರದಾನವಾಗಲಿ“ ಎಂದರು.ಬಳಿಕ ಮಾತಾಡಿದ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರು, ”ವಿಶ್ವಾಸಾರ್ಹತೆಗೆ ಇನ್ನೊಂದು ಹೆಸರೇ ಎಂಸಿಸಿ ಬ್ಯಾಂಕ್. ಈ ಕಾರಣದಿಂದ 113 ವರ್ಷಗಳಿಂದ ಬ್ಯಾಂಕ್ ಗ್ರಾಹಕ ಸೇವೆಯಲ್ಲಿ ಹೆಸರು ಪಡೆದಿದೆ. ಕಳೆದ 10 ವರ್ಷಗಳಲ್ಲಿ ಬ್ಯಾಂಕ್ ರಾಷ್ಟ್ರೀಕೃತ ಬ್ಯಾಂಕ್ ಗೆ ಸರಿಸಮಾನವಾಗಿ ಬೆಳೆದಿದೆ. ಒಂದು ಊರಿಗೆ ಬ್ಯಾಂಕ್ ಬಂತು ಎಂದರೆ ಅದು ಪ್ರಗತಿಗೆ ದಾರಿಯಾಗಿದೆ. ಜನರ ವ್ಯವಹಾರಕ್ಕೆ ಪೂರಕವಾಗಿ ಬ್ಯಾಂಕ್ ಸೇವೆ ಮಾಡಿದಲ್ಲಿ ಜನರು ಬ್ಯಾಂಕ್ ಗೆ ಮತ್ತಷ್ಟು ಹತ್ತಿರವಾಗುತ್ತಾರೆ. ಜನರ ವಿಶ್ವಾಸವನ್ನು ಇದೇ ರೀತಿ ಮುಂದುವರಿಸಿ“ ಎಂದರು.ಬಳಿಕ ಮಾತಾಡಿದ ದೈಜಿ ವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತಾಡಿ, “ಎಂಸಿಸಿ ಬ್ಯಾಂಕ್ ಅನ್ನು ಹಿಂದೆ ಕ್ಯಾಥೋಲಿಕ್ ಸಮುದಾಯದವರು ಅಮ್ಚೆ ಬ್ಯಾಂಕ್ ಎಂದು ಕರೆಯುತ್ತಿದ್ದರು. ಆದರೆ ಇಂದು ಇದು ನಮ್ಮೆಲ್ಲರ ಬ್ಯಾಂಕ್ ಆಗಿದೆ. ಇದಕ್ಕೆ ಕಾರಣ ಬ್ಯಾಂಕ್ ನ ಗ್ರಾಹಕ ಸ್ನೇಹಿ ನಿರ್ದೇಶಕರು ಮತ್ತು ಸಿಬ್ಬಂದಿಯ ತಂಡ. ಅನಿಲ್ ಲೋಬೋ ಅವರ ನೇತೃತ್ವದಲ್ಲಿ ಬ್ಯಾಂಕ್ ಯಶಸ್ಸಿನ ದಾರಿಯಲ್ಲಿ ಮುನ್ನಡೆಯುತ್ತಿದೆ. ಅವರಲ್ಲಿನ ನಾಯಕತ್ವ ಗುಣದಿಂದಲೇ ಬ್ಯಾಂಕ್ ಹೊಸ ಹೊಸ ಶಾಖೆಯನ್ನು ಗ್ರಾಮೀಣ ಭಾಗಗಳಲ್ಲಿ ತೆರೆಯುತ್ತಿದೆ. ಈ ಮೂಲಕ ಜನರಿಗೆ ಆರ್ಥಿಕ ವಹಿವಾಟು ನಡೆಸಲು ನೆರವಾಗುತ್ತಿದೆ. ನಗುಮೊಗದ ಸಿಬ್ಬಂದಿಯ ಸೇವೆಯಿಂದ ಜನರಿಗೆ ಆಪ್ತವಾಗಿರುವ ಬ್ಯಾಂಕ್ ಮುಂದೆ ಇನ್ನಷ್ಟು ಶಾಖೆಗಳನ್ನು ವಿಸ್ತರಿಸಿ ಬೆಳೆಯಲಿ“ ಎಂದರು. ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಮಾತಾಡಿ, ”ಬ್ಯಾಂಕ್ ಆಗಮನಕ್ಕೆ ಬೆಳ್ಮಣ್ ನಾಗರಿಕರು ತುಂಬು ಹೃದಯದ ಸ್ವಾಗತ ಕೋರಿದ್ದಾರೆ. ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬ್ಯಾಂಕ್ ನಲ್ಲಿ ಖಾತೆ ತೆರೆಯುತ್ತಿದ್ದಾರೆ. ನಮ್ಮ ಧ್ಯೇಯ ಬ್ಯಾಂಕ್ ಶಾಖೆಗಳನ್ನು ಹೆಚ್ಚಿಸಿ ಗ್ರಾಹಕರಿಗೆ ನೆರವಾಗುವುದು. ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಹಕಸ್ನೇಹಿಯಾಗಿ ಬ್ಯಾಂಕ್ ಕೆಲಸ ಮಾಡಲಿದೆ“ ಎಂದರು. ವೇದಿಕೆಯಲ್ಲಿ ಬೆಳ್ಮಣ್ ಗ್ರಾಮ ಪಂಚಾಯತ್ ರಾಮೇಶ್ವರಿ ಎಂ. ಶೆಟ್ಟಿ, ಜನರಲ್ ಮೆನೇಜರ್ ಸುನಿಲ್, ಅನಿವಾಸಿ ಉದ್ಯಮಿ ರೊನ್ ರಾಡ್ರಿಗಸ್ ಲಂಡನ್, ಬ್ರಾಂಚ್ ಮೆನೇಜರ್ ಶೈನಿ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು.ಎಲ್ಸನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿAಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ.  ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ 6 ವರ್ಷಗಳಿಂದ ಪ್ರಸ್ತುತ ಆಡಳಿತ ಮಂಡಳಿಯು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಮುಂದಾಳತ್ವದಲ್ಲಿ ಬ್ಯಾಂಕ್ ಪ್ರಗತ್ತಿಯತ್ತ ದಾಪುಗಾಲು ಇಡುತ್ತಿದೆ. ಬ್ಯಾಂಕಿನ ಕಾರ್ಯವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದೆ. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣ ಕೋರ್ ಬ್ಯಾಂಕಿAಗ್ ಮುಖಾಂತರ ಕಾರ್ಯ ನಡೆಸುತ್ತಿದ್ದು, ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ನಮ್ಮ ಬ್ಯಾಂಕಿನಲ್ಲಿ ದೊರೆಯುತ್ತವೆ. ಡಿಜಿಟಲ್ ಸೇವೆಯಂತಹ ಗೂಗಲ್ ಪೇ, ಫೊನ್ ಪೇ, ಯುಪಿಎ, ಇತರ ಸೌಲಭ್ಯಗಳನ್ನು ಸದ್ಯದಲ್ಲಿಯೇ ಗ್ರಾಹಕರಿಗೆ ಒದಗಿಸುವ ಯೋಜನೆಯನ್ನು ಕೈಗೊಂಡಿದ್ದು ಬ್ಯಾಂಕಿನ ಶಾಖೆಗಳನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಕಾರ್ಯಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರಿಗೆ ಕಡಿಮೆ ಬಾಡಿಗೆಯಲ್ಲಿ ಲಾಕರ್ ಸೌಲಭ್ಯ, ಕಡಿಮೆ ದರದಲ್ಲಿ ದೇಶ ವಿದೇಶ ವಿಧ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಏಟಿಎಮ್ ಮತ್ತು ಮೊಬೈಲ್ ಬ್ಯಾಂಕಿAಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಕರ್ನಾಟಕದಲ್ಲಿ ಎನ್‌ಆರ್‌ಐ ಸೌಲಭ್ಯವಿರುವ ಎಕೈಕ ಪಟ್ಟಣ ಸಹಕಾರ ಬ್ಯಾಂಕ್ ಆಗಿರುತ್ತದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳAತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ (ಆIಅಉಅ) ವಿಮಾ ಸೌಲಭ್ಯವಿದೆ. ಎಂ.ಸಿ.ಸಿ.ಬ್ಯಾAಕ್ ಒಟ್ಟು ಠೇವಣಿಯು ರೂ.676.00 ಕೋಟಿ, ಒಟ್ಟು ಸಾಲ ಮತ್ತು ಮುಂಗಡ ರೂ.532.00 ಕೋಟಿ ತಲುಪಿದ್ದು, ಒಟ್ಟು ವ್ಯವಹಾರವು ರೂ. 1208 ಕೋಟಿ ಆಗಿರುತ್ತದೆ. ಮಾರ್ಚ್ ಅಂತ್ಯಕ್ಕೆ ದುಡಿಯುವ ಬಂಡವಾಳ ರೂ.752.95 ಕೋಟಿ ಮತ್ತು ಶೇರು ಬಂಡವಾಳ ರೂ.31.21 ಕೋಟಿ ಇರುತ್ತದೆ. ಜೊತೆಗೆ ಬ್ಯಾಂಕಿನ ಎನ್.ಪಿ.ಎ. ಪ್ರಮಾಣವು 1.12%ಕ್ಕೆ ತಲುಪಿರುವುದು ಬ್ಯಾಂಕಿನ ಬೆಳವಣಿಗೆ ಉತ್ತಮವಾಗಿದೆ ಎಂಬುದನ್ನು ತೋರಿಸುತ್ತದೆ. ಬ್ಯಾಂಕಿನ ಅಖಂಖ ಪ್ರಮಾಣವು ಆರ್‌ಬಿಐ ನಿಗದಿಪಡಿಸಿರುವ ಕನಿಷ್ಟ ಮಿತಿ ಶೇಕಡಾ 9%ಕ್ಕಿಂತ ಹೆಚ್ಚಿದ್ದು ಅಂದರೆ 23.06% ಆಗಿದ್ದು, ಬ್ಯಾಂಕ್ ಆರೋಗ್ಯಕರವಾಗಿರುವುದನ್ನು ತೋರಿಸುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ನೇಮಿಸಿದ ಲೆಕ್ಕಪರಿಶೋಧಕರು ನಡೆಸಿದ ಲೆಕ್ಕ ಪರಿಶೋಧನೆಯಲ್ಲಿ ಸತತವಾಗಿ ‘ಎ’ ಶ್ರೇಣಿಯ ಬ್ಯಾಂಕಾಗಿ ಗುರುತಿಸಲ್ಪಟ್ಟಿದ್ದು ಬ್ಯಾಂಕ್ ಆರ್ಥಿಕವಾಗಿ ಸುಧ್ರಡವಾಗಿದೆ ಎಂಬುದನ್ನು÷ತೋರಿಸುತ್ತದೆ. ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಅದಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಪ್ರಗತಿಯತ್ತ ಗಮನಹರಿಸಿ ಕಾರ್ಯಯೋಜನೆಯನ್ನು ಹಮ್ಮಿಕೊಂಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರ್ಣಗೊಳಿಸಿ 22 ವರ್ಷಗಳ ನಂತರ ಪ್ರಸ್ತುತ ಆಡಳಿತ ಮಂಡಳಿಯ ಮುಂದಾಳತ್ವದಲ್ಲಿ ಬ್ರಹ್ಮಾವರದಲ್ಲಿ 2024ನೇ ಮಾರ್ಚ್ ತಿಂಗಳಲ್ಲಿ 17ನೇ ಶಾಖೆಯನ್ನು ಮತ್ತು ನವಂಬರ್ ತಿಂಗಳಲ್ಲಿ 18ನೇ ಶಾಖೆಯನ್ನು ಬೆಳ್ತಂಗಡಿಯಲ್ಲಿ ಪ್ರಾರಂಭಿಸಲಾಗಿದೆ. ಪ್ರಸ್ತುತ ಎಂ.ಸಿ.ಸಿ ಬ್ಯಾಂಕ್ ಸುಸಜ್ಜಿತ ಆಡಳಿತ ಕಛೇರಿ ಮತ್ತು ಸಂಸ್ಥಾಪಕರ ಶಾಖೆ ಹಂಪನಕಟ್ಟ, ಅಶೋಕನಗರ, ಕಂಕನಾಡಿ, ಕುಲಶೇಕರ, ಮೋರ್ಗನ್ಸ್ಗೇಟ್, ಮೂಡಬಿದ್ರಿ, ಶಿರ್ವ, ಬಜಪೆ, ಕಿನ್ನಿಗೋಳಿ, ಸುರತ್ಕಲ್, ಉಳ್ಳಾಲ, ಉಡುಪಿ, ಕುಂದಾಪುರ, ಪುತ್ತೂರು, ಬಿ.ಸಿ.ರೋಡ್, ಕಾರ್ಕಳ, ಬ್ರಹ್ಮಾವರ ಮತ್ತು ಬೆಳ್ತಂಗಡಿ ಹೀಗೆ 18 ಶಾಖೆಗಳನ್ನು ಹೊಂದಿರುವ ಎಂ.ಸಿ.ಸಿ. ಬ್ಯಾಂಕ್ ತನ್ನ 19ನೇ ಶಾಖೆಯನ್ನು ದಿನಾಂಕ 02.03.2025ರಂದು ಬೆಳ್ಮಣ್‌ನಲ್ಲಿ ಉದ್ಘಾಟಿಸಲಿದೆ.ಶಾಖೆಯ ಉದ್ಘಾಟನೆಯ ಕಾರ್ಯಕ್ರಮವು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಸಿಯಲಿದೆ. ಶಾಖೆಯ ಉದ್ಘಾಟನೆಯನ್ನು ಶ್ರೀ ಐವನ್ ಡಿಸೋಜ, ಶಾಸಕರು, ಕರ್ನಾಟಕ ವಿಧಾನ ಪರಿಷತ್ ಇವರು ನಡೆಸಿಕೊಡಲಿರುವರು. ಸಂತ ಜೋಸೆಪ್ಸ್ ಚರ್ಚ್, ಬೆಳ್ಮಣ್ ಇದರ ಧರ್ಮಗುರುಗಳಾದ ವಂ. ಫಾ| ಫ್ರೆಡ್ರಿಕ್ ಮಸ್ಕರೇನ್ಹಸ್ ಇವರು ಆಶಿರ್ವಚನ ಕೈಗೊಳ್ಳುವರು. ದಾಯ್ಜಿವಲ್ಡ್ ಮೀಡಿಯಾ ಪ್ರೆöÊ.ಲಿ. ಇದರ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಯಾಗಿದ್ದು, ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ರಾಮೇಶ್ವರಿ ಎಮ್. ಶೆಟ್ಟಿ ಗೌರವಾನ್ವಿತ ಅತಿಥಿಗಳಾಗಿರುವರು.ಹಾಗೆಯೇ ಬ್ರಹ್ಮಾವರ ಶಾಖೆಯ ಎಟಿಎಮ್ ಉದ್ಘಾಟನೆ: ನೆಲಮಹಡಿ, ಶೇಷಗೋಪಿ ಪ್ಯಾರಡೈಸ್, ರಾ.ಹೆ.66, ಆಕಾಶವಾಣಿ ವೃತ್ತದ ಬಳಿ, ವಾರಂಬಳ್ಳಿ, ಬ್ರಹ್ಮಾವರದಲ್ಲಿರುವ ಎಮ್‌ಸಿಸಿ ಬ್ಯಾಂಕಿನ ಶಾಖೆಯ ಎಟಿಎಮ್ ಉದ್ಘಾಟನೆ ಸೋಮವಾರ ಮಾರ್ಚ್ 3 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.ಬ್ಯಾಂಕಿನ ಆಡಳಿತ ಮಂಡಳಿ*ಪ್ರಸ್ತುತ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅಧ್ಯಕ್ಷ ಹಾಗೂ ಜೆರಾಲ್ಡ್ ಡಿಸಿಲ್ವಾ ಉಪಾಧಕ್ಷರಾಗಿದ್ದು, ಶ್ರೀ ಅಂಡ್ರೂ÷್ಯ ಡಿಸೋಜ, ಶ್ರೀ ಅನಿಲ್ ಪತ್ರಾವೊ, ಡಾ| ಜೆರಾಲ್ಡ್ ಪಿಂಟೊ, ಶ್ರೀ ಡೇವಿಡ್ ಡಿಸೋಜ, ಶ್ರೀ ಎಲ್‌ರೊಯ್ ಕ್ರಾಸ್ಟೊ, ಶ್ರೀ ರೋಶನ್ ಡಿ’ಸೋಜ, ಶ್ರೀ ಹೆರಾಲ್ಡ್ ಮೊಂತೇರೊ, ಶ್ರೀ ಜೆ. ಪಿ. ರೊಡ್ರಿಗಸ್, ಶ್ರೀ ವಿನ್ಸೆಂಟ್ ಲಸ್ರಾದೊ, ಶ್ರೀ ಮೆಲ್ವಿನ್ ವಾಸ್, ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ನಿರ್ದೇಶಕರಾಗಿದ್ದು, ಶ್ರೀ ಸಿ.ಜಿ. ಪಿಂಟೊ, ಶ್ರೀ ಸುಶಾಂತ್ ಸಲ್ಡಾನ್ಹಾ ವೃತ್ತಿಪರ ನಿರ್ದೇಶಕರಾಗಿರುತ್ತರೆ. ಶ್ರೀ ಪೆಲಿಕ್ಸ್ ಡಿಕ್ರುಜ್, ಶ್ರೀ ಆಲ್ವಿನ್ ಮೊಂತೇರೊ ಹಾಗೂ ಶ್ರೀಮತಿ ಶರ್ಮಿಳಾ ಮಿನೇಜಸ್ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿರುತ್ತಾರೆ. ಪ್ರಸ್ತುತ ಶ್ರೀ ಸುನಿಲ್ ಮಿನೇಜಸ್ ಮಹಾಪ್ರಬಂಧಕರಾಗಿ, ಒಟ್ಟು, 185 ಸಿಬ್ಬಂದಿಗಳು ಆಡಳಿತ ಕಛೇರಿ ಮತ್ತು ಶಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಪ್ರಾದೇಶಿಕ ವಾರ್ತೆಗಳು

MCC Bank with a History of 113 years and a Business Turnover of Rs. 1200 Crore inaugurates its 19th branch at Belman

M.C.C. Bank, which has a 113-years history, has achieved excellent progress in the banking sector, declaring 10% dividend to its members for the financial year 2023-24. The bank has been consistently making profit and during 2023-24, the bank has come out with an unprecedented net profit of Rs. 10.45 crore, the highest in the bank’s history. The current management, under the leadership of ‘Sahakara Ratna’ Shri Anil Lobo, has been driving the bank’s progress over the past six years. The bank’s operations have expanded across Karnataka. It operates fully on core banking and offers all the products and services available in other private and public sector banks. The bank has plans to provide digital services such as Google Pay, PhonePe, UPI, and more are underway. The bank is also working on expanding its branches across Karnataka state.The bank has been providing various financial products, including locker facilities at low costs, affordable education loans for domestic and international studies, MSME loans, vehicle loans, housing loans, loans for house repairs, wedding, and purchase of household items. It offers gold loans without processing fees and provides ATM and mobile banking services free of charge. M.C.C. Bank is the only urban co-operative bank in Karnataka providing NRE accounts to NRIs. Deposits in the bank are insured by the Deposit Insurance and Credit Guarantee Corporation (DICGC), as per the guidelines of the Reserve Bank of India (RBI).M.C.C. Bank’s total deposits amount to Rs. 676 crore, total loans and advances stand at Rs. 532 crore, and the total business has reached Rs. 1208 crore. As on 31st March, 2024, the working capital of the bank was Rs.752.95 crore, and the share capital was Rs. 31.21 crore. The bank’s NPA ratio has improved to 1.12%, showing a significant reduction in NPA. The bank’s capital adequacy ratio, which exceeds the RBI’s minimum requirement of 9%, stands at 23.06%, indicating a healthy financial position. The bank has been continuously rated as ‘A’ grade bank by the auditors appointed by the RBI, demonstrating its strong financial health. With the constant efforts of the efficient management team, the dedicated staff, and a well-laid out strategic plan, the bank has met all the regulatory requirements set by the Reserve Bank of India and opened its 17th branch at Brahmavara in March 2024 and 18th branch at Belthangady after 22 years. Now, M.C.C. Bank is set to inaugurate its 19th branch at Belman March 2, 2025.The programme will be presided over by Sahakara Ratna Shri Anil Lobo, President of MCC Bank. Branch will be inaugurated by Mr Ivan Dsouza, MLC, Govt of Karnataka, Rev. Fr Frederick Mascarenhas, Parish Priest of St Joseph’s Church, Belman will bless the branch premises, Mr Walter Nandalike, Founder and MD of Daijiwolrd Media Pvt Ltd will be the chief guest. Smt. Rameshwari M. Shetty, President of Belman Grama Panchayath will be the Guests of honour.Similarly, the inauguration of the ATM at the Brahmavar branch: The ATM of MCC Bank’s branch, located at ground floor of Sheshagopi Paradise, NH-66, near Akashvani Circle, Varamballi, Brahmavar, will be inaugurated on Monday, March 3, at 10:00 AM.Bank’s Management: The current Board of Directors includes ‘Sahakara Ratna’ Shri Anil Lobo as the president, Shri Gerald D’Silva as vice-president, Shri Andrew D’Souza, Shri Anil Patrao, Dr Gerald Pinto, Shri David D’Souza, Shri Elroy Crasto, Shri Roshan D’Souza, Shri Herald Monteiro, Shri J.P. Rodrigues, Shri Vincent Lasrado, Shri Melwin Vas, Smt. Irene Rebello, and Dr Freeda D’Souza as directors. Shri C.G. Pinto and Shri Sushanth Saldanha as Professional directors. The Board of Management consists of Shri Felix D’Cruz, Shri Alwin Monteiro and Smt. Sharmila Menezes. Currently, Shri Sunil Menezes serves as the General Manager, with a total of 185 staff members working at the administrative office and branches.

ಪ್ರಾದೇಶಿಕ ವಾರ್ತೆಗಳು

ಮಹಾನಗರ ಪಾಲಿಕೆ ಅಧಿಕಾರಿ ನಾಗೇಂದ್ರ ಅವರಿಗೆ ಕಲಾರತ್ನ ಪ್ರಶಸ್ತಿ.

ಮಂಗಳೂರು -Film field, ಸಂಗೀತ ಕ್ಷೇತ್ರ, ಉದ್ಯೋಗ ಕ್ಷೇತ್ರ, ರಂಗಭೂಮಿ, TVನಿರೂಪಕ, ಸಾಹಿತ್ಯ ,ಸಾಮಾಜಿಕ ಕಳಕಳಿ, cooking field, ಎಲ್ಲವನ್ನು ಪರಿಗಣಿಸಿ ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿ ನಾಗೇಂದ್ರ ಅವರಿಗೆ Axis Bank max ರವರು ಕಲಾರತ್ನ ಅವಾರ್ಡ್ ನೀಡಿರುತ್ತಾರೆ

Scroll to Top