Author name: editor

ಪ್ರಾದೇಶಿಕ ವಾರ್ತೆಗಳು

ದ. ಕ. ಜಿಲ್ಲಾ ಪ್ರದಾನ ಸರಕಾರಿ ವಕೀಲರಾಗಿ ಎಂ. ಪಿ. ನೊರೊನ್ಹಾ

ಬಿ.ಎ.(ಲಾ) ಹಾಗೂ ಎಲ್.ಎಲ್.ಬಿ ಪರೀಕ್ಷೆಯಲ್ಲಿ ಉನ್ನತ ರ‍್ಯಾಂಕ್ ವಿಜೇತರಾಗಿದ್ದು, ಕಳೆದ ೩೪ ವರ್ಷಗಳಿಂದ ನುರಿತ ಕಾನೂನು ತಜ್ಞರಾಗಿ ಸಾವಿರಾರು ಖಾಸಾಗಿ ವ್ಯಕ್ತಿಗಳಿಗೆ, ಸಂಘ ಸಂಸ್ಥೆಗಳಿಗೆ, ವಾಣಿಜ್ಯ ಹಾಗೂ ವಿದ್ಯಾ ಸಂಸ್ಥೆಗಳಿಗೆ ಕಾನೂನು ಸಲಹೆಗಾರರಾಗಿ ಅಪಾರ ಸೇವೆ ಸಲ್ಲಿಸುತ್ತಿರುವ ಖ್ಯಾತ ಹಿರಿಯ ವಕೀಲರಾದ ಎಂ.ಪಿ. ನೊರೊನ್ಹಾರವರನ್ನು ಕರ್ನಾಟಕ ಸರ್ಕಾರವು ಮುಂದಿನ ಮೂರು ವರ್ಷಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ದ.ಕ. ಜಿಲ್ಲಾ ಪ್ರಧಾನ ಸರಕಾರಿ ವಕೀಲರನ್ನಾಗಿ ನೇಮಕ ಮಾಡಿರುತ್ತಾರೆ. ಸರಕಾರಿ ವಕೀಲರಾಗಿ ಖಾಸಾಗಿ ಹಾಗೂ ಸರಕಾರದ ಪರವಾಗಿ ವ್ಯಾಜ್ಯಗಳನ್ನು ನಡೆಸಲು ಅವಕಾಶ ಇರುತ್ತದೆ.

ಪ್ರಾದೇಶಿಕ ವಾರ್ತೆಗಳು

ಮೊಗರ್ನಾಡು ದೇವ ಮಾತಾ ಚರ್ಚ್ ನಲ್ಲಿ ಹೊಸ ವರ್ಷದ ಬಲಿ ಪೂಜೆ.

ಬಂಟ್ವಾಳ: 250 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ತಿಗೊಳಿಸಿ ಸಂಭ್ರಮಾಚರಣೆಯಲ್ಲಿರುವ ಬಂಟ್ವಾಳ ತಾಲೂಕಿನ ಮೊಗರ್ನಾಡು ದೇವ ಮಾತಾ ಚರ್ಚ್‌ ನಲ್ಲಿ ಹೊಸ ವರ್ಷದ ಬಲಿ ಪೂಜೆ ಸಂಭ್ರಮದಿಂದ ನಡೆಯಿತು. ಬಲಿಪೂಜೆಯ ನೇತೃತ್ವವನ್ನು ಆಸ್ಟ್ರೇಲಿಯಾದ ಅತಿ ವಂದನೀಯ ಮೊನ್ಸಿಂಜೋರ್‌ ಆಲ್ಫ್ರೆಡ್‌ ರಾಯನ್‌ ಡಿ’ಸೋಜಾ ಅವರು ವಹಿಸಿ ಮೇರಿ ಮಾತೆ ದೇವ ಮಾತೆ ಆಗಿದ್ದರಿಂದ ಅವರು ನಮ್ಮೆಲ್ಲರ ಮಾತೆ. ಅವರ ಆದರ್ಶ ನಮಗೆ ದಾರಿದೀಪವಾಗಿದೆ ಎಂದರು. ಬಲಿಪೂಜೆಯಲ್ಲಿ ಚರ್ಚ್ ನ ಪ್ರಧಾನ ಧರ್ಮ ಗುರು ವಂದನೀಯ ಫಾ. ಅನಿಲ್‌ ಕೆನ್ಯೂಟ್‌ ಡಿ’ಮೆಲ್ಲೊ ಅವರು ಭಾಗವಹಿಸಿ ಭಕ್ತರಿಗೆ ಹೊಸ ವರ್ಷದ ಶುಭಾಶಯ ಸಲ್ಲಿಸಿದರು.ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂತೋಷ್‌ ಡಿ’ ಸೋಜಾ, ಕಾರ್ಯದರ್ಶಿ ವಿಲ್ಫ್ರೆಡ್‌ ಲೋಬೊ, ಆಯೋಗಗಳ ಸಂಯೋಜಕಿ ಎಮಿಲಿಯಾ ಡಿ’ ಕುನ್ಹಾ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ವೆಂಕಟ್ ಭಾರಧ್ವಜ್ ನಿರ್ದೇಶನದ ಹೈನಾ ಚಿತ್ರದ ಸಾಂಗ್ ನಾಳೆ ಬಿಡುಗಡೆ.

ಬೆಂಗಳೂರು: ಖ್ಯಾತ ನಿರ್ದೇಶಕ ವೆಂಕಟ್ ಭಾರಧ್ವಜ್ ನಿರ್ದೇಶನದ ಹೈನಾ ಚಿತ್ರದ ಸಾಂಗು ಎಲ್ಲರಿಗೂ ಗೊತ್ತು ತಲೆಗೆ ಹತ್ತಿದೆ ಮತ್ತು ಅನ್ನುವ ಹಾಡು ನಾಳೆ ಬಿಡುಗಡೆಗೊಳ್ಳಲಿದೆ

ಪ್ರಾದೇಶಿಕ ವಾರ್ತೆಗಳು

Melwyn Peris’ PAYANN team jubilantly celebrates 100 days of success

“It is hopeful that a Konkani language regional film has been shown for 100 days when the entire global cinema industry is in decline. Rarely is a film released in Konkani due to the limited market and lack of resources. Films are made in Konkani not out of any profit expectation but out of sheer love for the mother tongue. Payann’ has emerged as an artistic film that inspires positive thoughts and is unlike any other Konkani film. We must congratulate Melwyn Peris and Neeta Peris ofSangeet Ghar Productions,’ said Mr Ivan D’Souza, a Member of the Legislative Council. He was speaking as the chief guest at the centenary celebrations of Payann’ Konkani film at Bharat Cinema in Bijai. On this occasion, the Rector of St. Aloysius Educational Institutions, Fr Melwin Joseph Pinto, non-resident businessman Mr. James Mendonca andMand Sobhann’ President Mr. Louis J. Pinto were the guests of honour. Payann Cinema director `Sangeet Guru’ Mr. Joel Pereira was present n the stage. Famous Konkani singer Mr Melwyn Peris, producer of Payann, thanked all the artists, technicians, sponsors, and viewers who contributed to the film’s success. Film actor, composer, and organizer Mr. Leslie Rego conducted the program. At the beginning of the program, the ‘Angelore Choir’ set a festive tone by singing a Christmas carol, bringing a lively Christmas spirit to the cinema hall. At the program’s end, the movie Payann’s last screening was arranged in a packed cinema hall.

ಪ್ರಾದೇಶಿಕ ವಾರ್ತೆಗಳು

ಅಂತಾರಾಜ್ಯ ಬಂಟ ಕ್ರೀಡೋತ್ಸವ: ಹಗ್ಗಜಗ್ಗಾಟದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಪ್ರಥಮ

ಸುರತ್ಕಲ್: ಪಡುಬಿದ್ರೆ ಬಂಟರ ಸಂಘ ಮತ್ತು ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪಡುಬಿದ್ರೆಯಲ್ಲಿ ದಿ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸೆಮಿಫೈನಲ್ ನಲ್ಲಿ ಬಂಟ್ವಾಳ ತಂಡದ ಎದುರು ಜಯ ಸಾಧಿಸಿದ ಸುರತ್ಕಲ್ ತಂಡ ಫೈನಲ್ ನಲ್ಲಿ ಮಂಜೇಶ್ವರ ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿ ಜಯಿಸಿತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮುಣಿಯಾಲು ಉದಯಕುಮಾರ್ ಶೆಟ್ಟಿ ಪ್ರಶಸ್ತಿ ಹಸ್ತಾಂತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕ್ರೀಡಾ ಕಾರ್ಯದರ್ಶಿಗಳಾದ ಶಿಶಿರ್ ಶೆಟ್ಟಿ, ಬಬಿತಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು 75 ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಒಳಗೊಂಡಿತ್ತು. ತರಬೇತುದಾರರಾದ ನಿನಾದ್ ಜಯರಾಮ್ ಶೆಟ್ಟಿ, ವಿಕ್ರಂ ಮಾಡ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಚಲನಚಿತ್ರೋಧ್ಯಮ ಕುಸಿಯುತ್ತಿರುವಾಗ ʻಪಯಣ್ʼಶತದಿನಗಳ ಪ್ರದರ್ಶನ ಕಂಡಿರುವುದು ಆಶಾದಾಯಕ ಬೆಳವಣಿಗೆ: ಐವನ್ ಡಿʼಸೋಜ

ʻಇಡೀ ವಿಶ್ವಾಧ್ಯಂತ ಚಲನ ಚಿತ್ರೋಧ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು ನೂರು ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ. ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ ಮಾತೃಭಾಷೆಯ ಮೇಲಿನ ಪ್ರೇಮದಿಂದ. ʻಪಯಣ್ʼ ಕೊಂಕಣಿಯಲ್ಲಿ ಇದುವರೆಗೆ ಬಂದಂತಹ ಎಲ್ಲಾ ಚಿತ್ರಗಳಿಗಿಂತ ಭಿನ್ನವಾಗಿದ್ದು, ಧನಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವ ಕಲಾತ್ಮಕ ಚಿತ್ರವಾಗಿ ಮೂಡಿ ಬಂದಿದೆ. ಅದಕ್ಕಾಗಿ ನಾವು ʻಸಂಗೀತ್ ಘರ್ ಪ್ರೊಡಕ್ಷನ್ಸ್ʼ ಜೋಡಿ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ಇವರನ್ನು ಖಂಡಿತವಾಗಿಯೂ ಅಭಿನಂದಿಸಬೇಕುʼ ,ಎಂದರು ವಿಧಾನ ಪರಿಷತ್ ಸದಸ್ಯ ಶ್ರೀ ಐವನ್ ಡಿʼಸೋಜ. ಅವರು ಬಿಜೈನಲ್ಲಿರುವ ಭಾರತ್ ಸಿನೇಮಾದಲ್ಲಿ ʻಪಯಣ್ʼಕೊಂಕಣಿ ಚಲನಚಿತ್ರದ ಶತದಿನೋತ್ಸವ ಸಂಭ್ರಮಾಚರಣೆಯಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಸಂತ ಅಲೋಶಿಯಸ್ ವಿಧ್ಯಾ ಸಂಸ್ಥೆಗಳ ರೆಕ್ಟರ್ ವಂ| ಫಾ| ಮೆಲ್ವಿನ್ ಜೋಸೆಫ್ ಪಿಂಟೊ, ಅನಿವಾಸಿ ಉಧ್ಯಮಿ ಶ್ರೀ ಜೇಮ್ಸ್ ಮೆಂಡೊನ್ಸಾ ಮತ್ತು ದಾಖಲೆ ನಿರ್ಮಿಸಿದ ʻಅಸ್ಮಿತಾಯ್ʼ ಕೊಂಕಣಿ ಚಿತ್ರ ನಿರ್ಮಾಪಕ, ʻಮಾಂಡ್ ಸೊಭಾಣ್ʼ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಲುವಿ ಪಿಂಟೊ ಗೌರವ ಅಥಿತಿಳಾಗಿ ಹಾಜರಿದ್ದರು. ಪಯಣ್ ಸಿನಿಮಾ ನಿರ್ದೇಶಕ ʻಸಂಗೀತ್ ಗುರುʼ ಶ್ರೀ ಜೊಯೆಲ್ ಪಿರೇರಾ ವೇದಿಕೆಯಲ್ಲಿ ಹಾಜರಿದ್ದರು. ಕೊಂಕಣಿಯ ಖ್ಯಾತ ಗಾಯಕ, ಪಯಣ್ ಚಲನಚಿತ್ರದ ನಿರ್ಮಾಪಕ ಮೆಲ್ವಿನ್ ಪೆರಿಸ್ರವರು ಚಲನಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲಾ ಕಲಾವಿದರಿಗೆ, ತಂತ್ರಜ್ಞರಿಗೆ ಹಾಗೂ ವೀಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಸಿನಿಮಾ ನಟ, ಸಂಯೋಜಕ, ಸಂಘಟಕ ಶ್ರೀ ಲೆಸ್ಲಿ ರೇಗೊ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಆರಂಭದಲ್ಲಿ ʻಆಂಜೆಲೊರ್ ಕೊಯರ್ʼ ಪಂಗಡದವರು ಕ್ರಿಸ್ಮಸ್ ಹಾಡೊಂದನ್ನು ಹಾಡಿ ಟಾಕಿಸಿನಲ್ಲಿ ಕ್ರಿಸ್ಮಸ್ ಕಳೆ ತಂದರು. ಕಾರ್ಯಕ್ರಮದ ಕೊನೆಯಲ್ಲಿ ತುಂಬಿದ ಚಿತ್ರಮಂದಿರದಲ್ಲಿ ʻಪಯಣ್ʼ ಸಿನಿಮಾದ ಕೊನೆಯ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕ್ರೀಡಾಂಗಣ

ಭಾರತ ಕ್ರಿಕೆಟ್ ತಂಡದ ಮುಂದುವರಿದ ಬ್ಯಾಟಿಂಗ್ ವೈಫಲ್ಯದಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ನಲ್ಲಿ ಮತ್ತೆ ಸೋಲುಂಡ ಇಂಡಿಯಾ.

ಸ್ಪೋರ್ಟ್ಸ್ ರಿಪೋರ್ಟ್: ಡಾ. ಅಶೋಕ್ ಶೆಟ್ಟಿ. ಬಿ. ಎನ್.ಮೇಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ 4 ನೇ ಟೆಸ್ಟ್ ಪಂದ್ಯದಲ್ಲಿ 340 ರನ್ ಚೆಸ್ ಮಾಡಲಾಗದೆ ರೋಹಿತ್, ಕೊಹ್ಲಿ, ಕೆ. ಎಲ್. ರಾಹುಲ್ ಸೇರಿದಂತೆ ಭಾರತದ ಬ್ಯಾಟ್ಸಮನ್ ಗಳ ಬ್ಯಾಟಿಂಗ್ ವೈಫಲ್ಯದಿಂದ ಭಾರತ ಕ್ರಿಕೆಟ್ ತಂಡ ಸೋತು ತೀವ್ರ ಮುಖಭಂಗ ಅನುಭವಿಸಿದೆ. ಬೌಲಿಂಗ್ ನಲ್ಲಿ ಸೂಪರ್ ದೂಪರ್ ಆಗಿರುವ ಭಾರತ ಬ್ಯಾಟಿಂಗ್ ನಲ್ಲಿ ತೀರಾ ನಿರಾಸೆ ಹುಟ್ಟಿಸುತ್ತಿದೆ. ಕೊಹ್ಲಿ, ರೋಹಿತ್ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗುವುದು ಒಳಿತು ಎನ್ನುವ ಅಭಿಪ್ರಾಯಗಳು ಎಲ್ಲೆಡೆ ವ್ಯಕ್ತವಾಗುತ್ತಿವೆ

ಪ್ರಾದೇಶಿಕ ವಾರ್ತೆಗಳು

ಬಂಗ್ರ ಕೂಳೂರು, ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 07 ಜೊತೆಅಡ್ಡಹಲಗೆ: 08 ಜೊತೆಹಗ್ಗ ಹಿರಿಯ: 20 ಜೊತೆನೇಗಿಲು ಹಿರಿಯ: 32 ಜೊತೆಹಗ್ಗ ಕಿರಿಯ: 23 ಜೊತೆನೇಗಿಲು ಕಿರಿಯ: 81 ಜೊತೆಒಟ್ಟು ಕೋಣಗಳ ಸಂಖ್ಯೆ: 171 ಜೊತೆ•••••••••••••••••••••••••••••••••••••••••••••• ಕನೆಹಲಗೆ:( ಸಮಾನ ಬಹುಮಾನ ) ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್ಹಲಗೆ ಮುಟ್ಟಿದವರು: ಭಟ್ಕಳ ಪಾಂಡು ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿಹಲಗೆ ಮುಟ್ಟಿದವರು: ಭಟ್ಕಳ ಪಾಂಡು ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ಬೋಳಾರ ತ್ರಿಶಾಲ್ ಕೆ ಪೂಜಾರಿಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್ ಬಾರ್ಕೂರು ಶಾಂತಾರಾಮ ಶೆಟ್ಟಿಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ನಿಡ್ಡೋಡಿ ಕಾನ ರಾಮ ಸುವರ್ಣಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್•••••••••••••••••••••••••••••••••••••••••••••• ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು “ಎ”ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು “ಬಿ”ಹಲಗೆ ಮುಟ್ಟಿದವರು: ಭಟ್ಕಳ ಹರೀಶ್•••••••••••••••••••••••••••••••••••••••••••••• ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” (11.86)ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಬಿ” (12.06)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ••••••••••••••••••••••••‌‌‌‌‌••••••••••••••••••••••ಹಗ್ಗ ಕಿರಿಯ: ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72)ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ದ್ವಿತೀಯ: 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ “ಬಿ” (11.90)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ••••••••••••••••••••••••••••••••••••••••••••••ನೇಗಿಲು ಹಿರಿಯ: ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ” (11.53)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ ದ್ವಿತೀಯ: ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ••••••••••••••••••••••••••••••••••••••••••••••ನೇಗಿಲು ಕಿರಿಯ: ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.80)ಓಡಿಸಿದವರು: ಪಟ್ಟೆ ಗುರು ಚರಣ್ ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ “ಎ” (12.46)ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ಪ್ರಾದೇಶಿಕ ವಾರ್ತೆಗಳು

ಉಳ್ಳಾಲ ಮಂಜನಾಡಿ ಗ್ಯಾಸ್ ದುರಂತ, ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಬಾಲಕಿ ಮೃತ್ಯು, ಯು ಟಿ ಖಾದರ್ ಸಂತಾಪ

ಉಳ್ಳಾಲ: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ,ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಯಿಝ(9) ಡಿಸೆಂಬರ್ 28ರಂದು ಮೃತಪಟ್ಟಿದ್ದು,ಸಭಾಧ್ಯಕ್ಷ ಯು.ಟಿ ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರು,ಸ್ಥಳೀಯರು ನಾವೆಲ್ಲರೂ ಸೇರಿ ಗಾಯಾಳುಗಳ ರಕ್ಷಣೆಗಾಗಿ ಶಕ್ತಿ ಮೀರಿ ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಮನಸ್ಸಿಗೆ ಬಹಳ ಆಘಾತ ತಂದಿದೆ.ಅಲ್ಲಾಹು ಅವರ ಖಬರ್ ವಿಶಾಲವಾಗಿರಿಸಲಿ,ಕುಟುಂಬಸ್ಥರಿಗೆ,ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲು ಪ್ರಾರ್ಥಿಸುತ್ತೇನೆಂದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.ಅಲ್ಲದೆ ದುರಂತ ಸಂಭವಿಸಿದ ದಿನದಿಂದ ಇಂದಿನವರೆಗೂ ಸುಮಾರು ದಿನಗಳ ಕಾಲ ಕುಟುಂಬಸ್ಥರ ಜತೆಗಿದ್ದ ಸ್ಥಳೀಯ ಮುಖಂಡರಿಗೂ,ಸಂಘ ಸಂಸ್ಥೆಗಳ ಕಾರ್ಯ ವೈಖರಿ ಎಲ್ಲರಿಗೂ ಮಾದರಿ ಎಂದವರು ತಿಳಿಸಿದರು.

Scroll to Top