Author name: editor

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ವಿರಾಸತ್ ಸಮಾಪನ. ಭಾಗವಹಿಸಿದ ಸರ್ವರಲ್ಲೂ ‘ಅಧ್ಬುತ ಅತ್ಯಧ್ಬುತ’ ಉದ್ಗಾರ

ಮೂಡುಬಿದಿರೆ: 30ನೇ ಆಳ್ವಾಸ್ ವಿರಾಸತ್ 5 ದಿನಗಳ ಸಾಂಸ್ಕೃತಿಕ ಉತ್ಸವ ಹಾಗೂ 6 ದಿನವೂ ನಡೆದ ಮಹಾಮೇಳ ಲಕ್ಷಾಂತರ ಜನರ ಪಾಲ್ಗೊಳ್ಳುವಿಕೆಯ ಮೂಲಕ ಆಯೋಜಕರು ಹಾಗೂ ಸಾರ್ವಜನಿಕರಲ್ಲಿ ಸರ್ವ ಶ್ರೇಷ್ಠ ವಿರಾಸತ್ ಎಂಬ ಭಾವ ಮೂಡಿಸಿ ಸಮಾಪನವಾಯಿತು. ವಿರಾಸತ್‌ನ ಮುಖ್ಯ ರೂವಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಹರ್ಷ ವ್ಯಕ್ತಪಡಿಸುತ್ತಾ ಅಭಿವ್ಯಕ್ತ ಪಡಿಸಿದ ಅಂಶಗಳು.ಪ್ರತಿ ವರ್ಷದಂತೆ ಈ ವರ್ಷದ ವಿರಾಸತ್ ಕೂಡ ಸರ್ವ ಶ್ರೇಷ್ಠ ಸಾಂಸ್ಕೃತಿಕ ಉತ್ಸವವಾಗಿ ಮೂಡಿಬಂದಿದ್ದು, ದೇವರ ಹಾಗೂ ಪ್ರಕೃತಿಯ ಸಂಪೂರ್ಣ ಅನುಗ್ರಹ ರ‍್ಯಕ್ರಮ ಯಶಸ್ಸಿಗೆ ಕಾರಣ. ಈ ಉತ್ಸವ ಎಲ್ಲಾ ವರ್ಗದ ಜನರು – ಮಕ್ಕಳು, ಯುವಕ ಯುವತಿಯರು, ಪ್ರಬುದ್ಧರು, ವಯೋವೃದ್ಧರಾಧಿಯಾಗಿ ಸರ್ವರನ್ನು ಆಕರ್ಷಿಸಿ, ಪಾಲ್ಗೊಳ್ಳುವಂತೆ ಮಾಡಿದೆ. ಭಾಗವಹಿಸಿದ ಎಲ್ಲರೂ ಮುಕ್ತ ಕಂಠದಿAದ ಶ್ಲಾಘಿಸಿದ್ದು, ಅಧ್ಬುತ ಎಂಬ ಉದ್ಘಾರದ ಭಾವ ಮೂಡಿಸಿರುವುದು ಸಂಘಕರಾದ ನಮಗೆ ಸಂಪೂರ್ಣ ತೃಪ್ತಿ ನೀಡಿದೆ. ಈ ರ‍್ಯಕ್ರಮ ಯಾವುದೇ ಒಂದು ಸಮುದಾಯದ ರ‍್ಯಕ್ರಮವಾಗದೇ ಎಲ್ಲಾ ವರ್ಗಗಳ, ಎಲ್ಲಾ ಸಮುದಾಯದ ಜನರನ್ನು ರ‍್ಯಕ್ರಮದತ್ತಾ ಸೆಳೆದದ್ದು, ಇದರ ಇನ್ನೊಂದು ವಿಶೇಷತೆ. ಆರು ದಿನದ ರ‍್ಯಕ್ರಮದಲ್ಲಿ ಪ್ರತಿ ದಿನ ಸುಮಾರು ಒಂದು ಲಕ್ಷದಂತೆ ಜನ ಭಾಗವಹಿಸಿದರೆ, ಶನಿವಾರ ಹಾಗೂ ಭಾನುವಾರ ಜನಸ್ತೋಮ ಲಕ್ಷಕ್ಕೂ ಮೀರಿತ್ತು. ಒಟ್ಟು ರ‍್ಯಕ್ರಮ 4000ಕ್ಕೂ ಅಧಿಕ ಕಲಾವಿದರಿಗೆ ವೇದಿಕೆಯಾಗಿ, ಪ್ರತೀ ದಿನ ಸರಾಸರಿ 1500 ದಷ್ಟು ಕಲಾವಿದರು ತಮ್ಮ ಪ್ರತಿಭೆ ವ್ಯಕ್ತ ಪಡಿಸಲು ವೇದಿಕೆಯಾಗಿ ಮೂಡಿ ಬಂತು.ಜಾತಿ ಧರ್ಮ ಮತ ಹಾಗೂ ರಾಜಕೀಯ ಹಿನ್ನಲೆ ಹಾಗೂ ಮೋಜಿನ ರ‍್ಯಕ್ರಮಗಳಿಗೆ ಜನ ಸೇರುವುದು ಮಾಮೂಲಿ. ಆದರೆ ಸಾಂಸ್ಕೃತಿಕ ಹಿನ್ನಲೆಯಲ್ಲಿ ಈ ಪರಿಯ ಜನ ಸೇರುವುದು, ಹರ್ಷ ವ್ಯಕ್ತಪಡಿಸುವುದು ವಿರಾಳತಿ ವಿರಳ. ಈ ಹಿನ್ನಲೆಯಲ್ಲಿ ಸಂಘರಾದ ನಮಗೆ ಮುಂದಿನ ವರ್ಷದ ರ‍್ಯಕ್ರಮವನ್ನು ಇನ್ನೂ ಹೆಚ್ಚಿನ ನಿರೀಕ್ಷೆಯನ್ನು ಈಡೇರಿಸುವಂತೆ ಮಾಡಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿ ರ‍್ಯಕ್ರಮದಲ್ಲೂ ಸ್ವಚ್ಛತೆಗೆ ಅತೀ ಹೆಚ್ಚಿನ ಒತ್ತನ್ನ ನೀಡಲಾಗುತ್ತದೆ. ಅಂತೆಯೇ ಈ ಭಾರಿಯ ವಿರಾಸತ್‌ನಲ್ಲೂ ಸ್ಚಚ್ಛತಾ ಸೇನಾನಿಗಳು ರಾತ್ರಿ ಹಗಲುಪಾಳಿಯಲ್ಲಿ ಕೆಲಸ ನಿರ್ವಹಿಸಿದ್ದು, ರ‍್ಯಕ್ರಮ ಮುಗಿದ 15ರಂದೆ ಇಡೀ ಆಳ್ವಾಸ್ ಆವರಣವನ್ನು ಸ್ವಚ್ಚಗೊಳಿಸಲಾಗಿದ್ದು, ಆರು ದಿನದ ರ‍್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಿದ್ದ ಜಾಗವೆಂದು ಊಹಿಸಲಾಗದಷ್ಟು ಪರಿಸರವನ್ನು ಸ್ವಸ್ಥಿತಿಗೆ ತರಲಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯ ವಿರಾಸತ್ ಸಾವಿರಾರು ಸಂದೇಶವನ್ನು ಜಗತ್ತಿಗೆ ನೀಡಿದ್ದು, ಪ್ರತಿಯೊಬ್ಬರ ಮುಖದಲ್ಲೂ ಆತ್ಮ ತೃಪ್ತಿಯ ಭಾವ ಮೂಡಿಸಿದೆ. ಕರ್ನಾಟಕ ರಾಜ್ಯಕ್ಕೆ ಶ್ರೇಷ್ಠವೆಂಬAತೆ ನಡೆದ ರ‍್ಯಕ್ರಮ ಸಾರ್ವಜನಿಕರಿಗೆ ಸಂಪೂರ್ಣ ಉಚಿತವಾಗಿದ್ದು, ರ‍್ಯಕ್ರಮಕ್ಕೆ ಆಗಮಿಸಿದ ಸರ್ವರಲ್ಲೂ ವ್ಹಾವ್ ಎನ್ನುವಂತ ಉದ್ಗಾರ ಮೂಡಿಸಿದೆ. ಇಲ್ಲಿವರೆಗೆ ನಡೆದೆ ಎಲ್ಲಾ ವಿರಾಸತ್‌ನಲ್ಲೂ ಪಾಲು ಪಡೆದ ಸಾವಿರಾರು ಜನರು 30ನೇ ಆಳ್ವಾಸ್ ವಿರಾಸತ್‌ನಲ್ಲೂ ಸಂತೋಷದಿAದ ತಮ್ಮ ಮನೆಯ ರ‍್ಯಕ್ರಮದಂತೆ ಪಾಲ್ಗೊಂಡರು. ಇಷ್ಟು ದೊಡ್ಡ ಸಂಖ್ಯೆಯ ಜನಸಮೂಹ ಸೇರಿದರು ಯಾರೊಬ್ಬರಿಗೂ ಕಿಂಚಿತ್ತು ತೊಂದರೆಯಾಗದAತೆ ಸಾಂಗವಾಗಿ ನಡೆದದ್ದು ಖುಷಿ ಕೊಟ್ಟಿದೆ. ಈ ಭಾರಿ, ವಿರಾಸತ್‌ಗಾಗಿ ವಿದ್ಯಾಗಿರಿ ಹಾಗೂ ಪುತ್ತಿಗೆ ಪ್ರವೇಶಿಸಲಿರುವ 8 ಮಾರ್ಗಗಳನ್ನು ಡಾಂಬರೀಕರಣ ಹಾಗೂ ಅಗಲೀಕರಣಗೊಳಿಸಿ, ಬರುವ ಪ್ರತಿಯೊಬ್ಬರಿಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಸರಿಸುಮಾರು 2000ಕ್ಕೂ ಅಧಿಕ ಜನರು ವಿರಾಸತ್‌ಗಾಗಿ ದುಡಿದಿದ್ದು, ಎಲ್ಲವೂ ಸೂಸುತ್ರವಾಗಿ ನೆರೆವೇರಲು ಸಹಕರಿಸಿದ್ದಾರೆ. ಇದರ ಜೊತೆಗೆ ನಡೆದ ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ಸ ಮತ್ತು ರೇರ‍್ಸ್ ರಾಜ್ಯ ಮಟ್ಟ÷ದ ಸಾಂಸ್ಕೃತಿಕ ಉತ್ಸವವು 1500 ವಿದ್ಯಾರ್ಥಿಗಳು ಪಾಲ್ಗೊಂಡು ಸ್ಕರ‍್ಸ್ಗಳ ಹೊಸ ಹುಮ್ಮಸ್ಸನ್ನು ಮೂಡಿಸಿತು.

ಪ್ರಾದೇಶಿಕ ವಾರ್ತೆಗಳು

ರಾಜ್ಯ ಮಟ್ಟದ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ-2024ರ ಸಮಾರೋಪ ಸಮಾರಂಭ. ‘ಸಮೃದ್ಧ – ಸಮರ್ಥ ಕರ್ನಾಟಕಕ್ಕೆ ಸಮರ್ಥ ಪ್ರಜೆಗಳ ನಿರ್ಮಾಣ’

ವಿದ್ಯಾಗಿರಿ: ‘ಸಮೃದ್ಧ ಮತ್ತು ಸಮರ್ಥ ಕರ್ನಾಟಕ ಕಟ್ಟುವ ಉದ್ದೇಶದಿಂದ ದೇಶದ ಭವಿಷ್ಯದ ಪ್ರಜೆಗಳಿಗೆ ಹಮ್ಮಿಕೊಂಡ ಕಾರ್ಯಕ್ರಮ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯಾ ಹೇಳಿದರು.ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗಿತ್ವದಲ್ಲಿ 30 ನೇ ಆಳ್ವಾಸ್ ವಿರಾಸತ್ ಸಂಧರ್ಭದಲ್ಲಿ ನಡೆದ ರಾಜ್ಯ ಮಟ್ಟದ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಹಾಗೂ ರೋವರ್ಸ್ ರೇಂಜರ್ಸ್ ಸಾಂಸ್ಕೃತಿಕ ಉತ್ಸವ-2024ರ ಸಮಾರೋಪ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು.ಸ್ಕೌಟ್ಸ್ ಮತ್ತು ಗೈಡ್ಸ್ ನ ಕಲಿಕಾ ಅನುಭವವನ್ನು ಜೀವನ ಪದ್ಧತಿಗಾಗಿ ಅಳವಡಿಸಿಕೊಳ್ಳಬೇಕು..ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಯಾಗಿ ಅನೇಕ ಬದಲಾವಣೆಯನ್ನು ತಂದಿದೆ. ಆದ್ದರಿಂದ, ಆರಂಭದಲ್ಲಿ ಇದ್ದಂತಹ ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಚಟುವಟಿಕೆಗಳ ಕಲಿಕಾಕ್ರಮವನ್ನು ಬದಲಾಯಿಸುವುದು ತೀರ ಅವಶ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟರು.ಇಂದಿನ ಮಕ್ಕಳಲ್ಲಿ ಸಾಂಸ್ಕೃತಿಕ , ಕ್ರೀಡೆ , ಕಲೋತ್ಸವ ಮತ್ತು ಪ್ರಕೃತಿ ಅಧ್ಯಯನಕ್ಕೆ ಹೆಚ್ಚು ಮಹತ್ವ ಸಿಗಬೇಕಿದೆ. ಈ ರೀತಿಯ ಸಾಂಸ್ಕೃತಿಕ ಉತ್ಸವದಲ್ಲಿ ಸಾಹಸಮಯ ಕ್ರೀಡೆಗಳನ್ನು ಆಯೋಜಿಸಿದ್ದರಿಂದ , ಸೇನೆಗೆ ಪ್ರವೇಶಿಸುವ ಆಕಾಂಕ್ಷಿಗಳಿಗೆ ಉತ್ತಮ ಮೂಲ ವೇದಿಕೆಯನ್ನು ಕಲ್ಪಿಸಿದಂತಾಗಿದೆ ಎಂದರು.ಸಂಸ್ಥೆಯಿAದ ಕೈಗೊಂಡಿರುವ ಪ್ರೇರಣಾ ಕಾರ್ಯಕ್ರಮ ಹೆಣ್ಣುಮಕ್ಕಳಿಗೆ ಪೂರಕವಾಗಿ ಸ್ವಚ್ಛತೆ , ಜ್ಞಾನ ಮಟ್ಟವನ್ನು ಹೆಚ್ಚಿಸಲು ಅರಿವನ್ನು ಮೂಡಿಸುವ ಪ್ರಯತ್ನವನ್ನು ಮಾಡುತ್ತಿದೆ . ಇಂತಹ ಕಾರ್ಯಕ್ರಮ ರಾಜ್ಯದ ವಿವಿಧ ಭಾಗಗಳಲ್ಲಿಯೂ ಸವಿಸ್ತಾರವಾಗಿ ಮುಂದುವರೆಯಬೇಕು . ಪ್ರತಿ ಜಿಲ್ಲೆಯಲ್ಲೂ ಸೇವಾ ಶಿಬಿರಗಳು ಹೆಚ್ಚೆಚ್ಚು ಆಯೋಜಿಸಬೇಕು ಎಂದು ಸಲಹೆ ನೀಡಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತಕ ಪಿ.ಜಿ ಆರ್ ಸಿಂಧ್ಯ , ಶಿಬಿರದ ಮೇಲ್ವಿಚಾರಕಿ ಮಲ್ಲೇಶ್ವರಿ ಜೂಜಾರೆ ಮತ್ತು ನಿತಿನ್ ಅಮೀನ್ , ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ , ಮೈಸೂರು ವಿಭಾಗ ಸಹಾಯಕ ರಾಜ್ಯ ಆಯುಕ್ತಕ ಬಸವರಾಜ್ , ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತೆ ವಿಮಲಾ ರಂಗಯ್ಯ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಮಾರ್, ರಾಜ್ಯ ಸಂಘಟನಾ ಅಯುಕ್ತ ಪ್ರಭಾಕರ್ ಭಟ್ , ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತಕ ಬಿ ಎಂ ತುಂಬೆ ಇದ್ದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರದ ವರದಿಯನ್ನು ಬೆಂಗಳೂರು ಉತ್ತರದ ಶಿಬಿರದ ಮೇಲ್ವಿಚಾರಕ ನಿತಿನ್ ಅಮೀನ್ ವಾಚಿಸಿದರು.ಶಿಬಿರದಲ್ಲಿ ಭಾಗಿಯಾದ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು.ಶಿಬಿರದ ಯಶಸ್ಸಿಗೆ ಸಹಕರಿಸಿದ ವ್ಯಕ್ತಿಗಳನ್ನು ಮತ್ತು ಪ್ರತಿ ಜಿಲ್ಲೆಯ ಪ್ರತಿನಿಧಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ವಾರ್ತೆಗಳು

ನಿವೃತ್ತ ಸರಕಾರಿ ನೌಕರರ ವೇದಿಕೆ ಹೋರಾಟಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕರ್ನಾಟಕ ನಿವೃತ್ತ ನೌಕರರ ವೇದಿಕೆಯು ಡಿಸೆಂಬರ್16ರಂದು ಬೆಳಗಾವಿ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನ್ನನ್ನು ಭೇಟಿಯಾದ 12 ಜನ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ತಂಡದವರಿಗೆ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ್ದಾರೆ. ನಿವೃತ್ತ ನೌಕರರ ಸಮಸ್ಯೆ ಯನ್ನು ಸಮಾಧಾನದಿಂದ ಆಲಿಸಿದ ಮುಖ್ಯಮಂತ್ರಿ ಯವರು-” ನಾವೇ ಖುದ್ದಾಗಿ ನಮ್ಮ ಸರ್ಕಾರದ ಗೌರವಾನ್ವಿತ ಮಾನ್ಯ ಸತೀಶ ಜಾರಕಿಹೊಳೆಯರನ್ನೂಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳನ್ನು ತಮ್ಮ ಪ್ರತಿಭಟನಾ ಸ್ಥಳಕ್ಕೆ ಕಳಿಸಿದ್ದೆವು ಎಂದೂ ತಮ್ಮ ಬೇಡಿಕೆಯು ನಮ್ಮ ಗಮನದಲ್ಲಿದೆ ಎಂದೂ ಕೂಡಲೇ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅನುಕೂಲ ಮಾಡಿಕೊಡೋಣ ಎಂದರು. ಧನಾತ್ಮಕವಾಗಿ ಅತ್ಯಂತ ಆತ್ಮೀಯವಾಗಿ ಕಳಕಳಿಯಿಂದ ಗೌರವಾನ್ವಿತ ಜನಪ್ರಿಯ ಮುಖ್ಯಮಂತ್ರಿಗಳು ವೇದಿಕೆಯ ತಂಡದವರಿಗೆ ತಿಳಿಸಿದರು.ಇದು ತಮ್ಮೆಲ್ಲರ ಹೋರಾಟದ ಫಲ ಪೂರ್ಣ ಪ್ರಮಾಣದ ಪರಿಹಾರದ ಆದೇಶ ಆಗುವವರೆಗೆ ಹೋರಾಟ ನಿರಂತರವಾಗಿರಿಸೋಣ ಉತ್ಸಾಹ ಸಹಕಾರ ಪ್ರಯತ್ನದಿಂದಿರೋಣ. ತಮಗೆಲ್ಲರಿಗೂ ದನ್ಯವಾದಗಳೆಂದು ಶೇಖರಪ್ಪ ಬಿಸೇರೊಟ್ಟಿ ಸಂಸ್ಥಾಪಕ ರಾಜ್ಯ ಸಂಚಾಲಕರು, ನಿವೃತ್ತ ನೌಕರರ ವೇದಿಕೆ ಇವರು ತಿಳಿಸಿದ್ದಾರೆ ನಮ್ಮ ವೇದಿಕೆಯ ಹೋರಾಟದ ಫಲವಾಗಿ ವಿವಿಧ ದರ್ಜೆಯ ಅಧಿಕಾರಿಗಳಿಗೆ ಆರ್ಥಿಕವಾಗಿ (ಅಂದಾಜು)ಇಷ್ಟು ಹಣ ದೊರೆಯಲಿದೆA ದರ್ಜೆ ಅಧಿಕಾರಿ,17 ಲಕ್ಷ 35,000 ಸಾವಿರB ದರ್ಜೆ ಅಧಿಕಾರಿ,15 ಲಕ್ಷ 15 ಸಾವಿರC ದರ್ಜೆ ಅಧಿಕಾರಿ12 ಲಕ್ಷ 58000D, ದರ್ಜೆ ನೌಕರ8ಲಕ್ಷ 37000 ಸಾವಿರ ನೌಕರ.DCRG, committeeration, encashment live ಈ ಮೂರು ಸೌಲಭ್ಯಗಳನ್ನು ಆರ್ಥಿಕ ತಜ್ಞರು ಲೆಕ್ಕಾಚಾರ ಮಾಡಿ ಈ ರೀತಿ ಮಾಹಿತಿ ನೀಡಿದ್ದಾರೆ. *ನಮ್ಮ ವೇದಿಕೆಯ ಹೋರಾಟಕ್ಕೆ ನಿಮ್ಮ ಬೆಂಬಲ ನೀಡಿ ನಿಮ್ಮ ಆರ್ಥಿಕ ಸೌಲಭ್ಯವನ್ನು ಪಡೆಯಿರೆಂದು ಹೆಚ್ .ಡಿ. ಮಾದಪ್ಪ ಜಿಲ್ಲಾ ಮಹಾ ಪ್ರಧಾನ ಸಂಚಾಲಕರು ಹಾಗೂ ರಾಜ್ಯ ಸಂಚಾಲಕರು, ನಿವೃತ್ತ ನೌಕರರ ವೇದಿಕೆ ಇವರು ತಿಳಿಸಿದ್ದಾರೆ

ರಾಷ್ಟ್ರೀಯ ವಾರ್ತೆಗಳು

ರಾಜೇಶ್ ಅಮೀನ್ ಮುಲ್ಕಿ ಅವರಿಗೆ ನವದೆಹಲಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಫೆಲೋಶಿಪ್ ನ್ಯಾಷನಲ್ ಅವಾರ್ಡ್ ಪ್ರಶಸ್ತಿ ಪ್ರಧಾನ.

ನವದೆಹಲಿ: ಭಾರತೀಯ ದಲಿತ್ ಸಾಹಿತ್ಯ ಅಕಾಡೆಮಿ ನವದೆಹಲಿ ಇದರ ವತಿಯಿಂದ ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆದ 38ನೇ ದಲಿತ ಬರಹಗಾರ ರಾಷ್ಟ್ರೀಯ ಸಮ್ಮೇಳನದಲ್ಲಿ ಆಯುಷ್ ಇಲಾಖೆ ಸರಕಾರಿ ನೌಕರ, ಹಾಯ್ ತುಳುನಾಡು ಪತ್ರಿಕೆ ಸಂಪಾದಕ, ತುಳುನಾಡು ಪ್ರತಿಷ್ಠಾನ (ರಿ) ಮೂಲ್ಕಿ ಇದರ ಸ್ಥಾಪಕಾಧ್ಯಕ್ಷರಾದ, ಲಯನ್ ಸ್ಮಾರ್ಟ್ ಸಿಟಿ ಮಂಗಳೂರು ಇದರ ಸದಸ್ಯರಾದ ಲಯನ್ ರಾಜೇಶ್ ಅಮೀನ್ ಮುಲ್ಕಿ ಅವರಿಗೆ ಬಡವರ ಹಸಿವನ್ನು ನೀಗಿಸುವಲ್ಲಿ ಮಾಡಿರುವ ಕಾರ್ಯ, ಆಪತ್ತಿನಲ್ಲಿರುವವರಿಗೆ ಸಹಾಯ ಮಾಡಿರುವುದಕ್ಕೆ ಇವರು ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನ್ಯಾಷನಲ್ ಅವಾರ್ಡ್ -2024ನ್ನು ನೀಡಿ ಗೌರವಿಸಲಾಗಿದೆ.

ಪ್ರಾದೇಶಿಕ ವಾರ್ತೆಗಳು

ಡಿಸೆಂಬರ್ 21ರಂದು ನವಜ್ಯೋತಿ ಫ್ರೆಂಡ್ಸ್ ಕ್ಲಬ್ ಕಳಸಗುರಿ ಇವರ ವತಿಯಿಂದ ಸಂಸ್ಥೆಯ ವಾರ್ಷಿಕೋತ್ಸವದ ಪ್ರಯುಕ್ತ ಆಶಕ್ತರಿಗೆ ಸಹಾಯನಿಧಿ ನೀಡುವ ಕಾರ್ಯಕ್ರಮ ಮತ್ತು ಬಪ್ಪನಾಡು ಮೇಳದವರಿಂದ ಯಕ್ಷಗಾನ ಬಯಲಾಟ. ಡಿಸೆಂಬರ್ 1 ರಂದು ಕ್ರೀಡಾಕೂಟ ನಡೆದಿದೆ.

ಕಳಸಗುರಿ: ನವಜ್ಯೋತಿ ಫ್ರೆಂಡ್ಸ್ ಕ್ಲಬ್ ಕಳಸಗುರಿ ಇವರ ವತಿಯಿಂದ ಡಿಸೆಂಬರ್ 01,2024ರ ಭಾನುವಾರ ಕಳಸಗುರಿ ಬಾರ್ ಲಚ್ಚಿಲ್ ಇಲ್ಲಿ ಕ್ರೀಡಾಕೂಟ ನಡೆಸಲಾಯಿತು.. ಸಂಸ್ಥೆಯ ಗೌರವಾಧ್ಯಕ್ಪರಾದ ರುಕ್ಮಯ ಸಪಳಿಗ ಉಳಿಯ, ಸಂಸ್ದೆಯ ಅಧ್ಯಕ್ಷರಾದ ಭೋಜ ಕುಲಾಲ್, ರಾಜೇಶ್ ರಾವ್, ಗೀತಾ ಬಾರ್ಲಚ್ಚಿಲ್ ಇವರು ದೀಪ ಪ್ರಜ್ವಲನೆಯ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ವಿಭಾಗವಾರು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.ಸಂಸ್ಥೆಯ ಸದಸ್ಯರು, ಪರಿಸರದ ಎಲ್ಲಾ ಬಂಧುಗಳು ಅತ್ಯಂತ ಸಂಭ್ರಮದಿಂದ ಭಾಗವಹಿಸಿದರು. ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸಂಸ್ದೆಯ ಅಧ್ಯಕ್ಷರು ಮತ್ತು ಸಂಸ್ಥೆಯ ಹಿರಿಯರ ಉಪಸ್ಥಿತಿಯಲ್ಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಂಸ್ಥೆಯ ಎಲ್ಲಾ ಸದಸ್ಯರ ಪೂರ್ಣ ಸಹಕಾರದೊಂದಿಗೆ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆಯಿತು. ನವಜ್ಯೋತಿ ಫ್ರೆಂಡ್ಸ್ ಕ್ಲಬ್ ಕಳಸಗುರಿ ಇದರ ವತಿಯಿಂದ ಡಿಸೆಂಬರ್ 21 ರ ಶನಿವಾರ ಸಂಸ್ಥೆಯ ವಾರ್ಷಿಕೋತ್ಸವದ ಪ್ರಯುಕ್ತ ಬಪ್ಪನಾಡು ಮೇಳದವರಿಂದ ಯಕ್ಷಗಾನ ಬಯಲಾಟ ಮತ್ತು ಅಶಕ್ತ ಬಂಧುಗಳಿಗೆ ಸಹಾಯನಿಧಿ ನೀಡುವ ಕಾರ್ಯಕ್ರಮ ನಡೆಯಲಿದೆ.

ಹೊರ ರಾಜ್ಯ ವಾರ್ತೆಗಳು

ಉದ್ಯಮಿ, ಸಮಾಜ ಸೇವಕ ಶಶಿಧರ ಶೆಟ್ಟಿ ಬರೋಡ ಅವರಿಗೆ ಬಂಟರತ್ನ ಪ್ರಶಸ್ತಿ.

ಅಹ್ಮದ್ ಬಾದ್,:ನಿರ್ಭಿತ ಮಾತಿನ, ನೇರನಡೆ ನುಡಿಯ ನಿರಾಡಂಬರಿ ಸಮಾಜ ಸೇವಕ, ಉದ್ಯಮಿ ಶಶಿಧರ ಶೆಟ್ಟಿ ಬರೋಡ ಅವರಿಗೆ ಅಹ್ಮದ್ ಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಹ್ಮದ್ ಬಾದ್ ಬಂಟರ ಸಂಘವು ಬಂಟರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಅವರಿಗೆ Mpmla’s ನ್ಯೂಸ್ ಶುಭ ಹಾರೈಸುತ್ತದೆ

ಕರ್ನಾಟಕ ವಾರ್ತೆಗಳು

ಇಂದು (ಡಿಸೆಂಬರ್ 16)ಬೆಳಗಾವಿ ಸುವರ್ಣ ಸೌಧದ ಎದುರು ನಿವೃತ್ತ ಸರಕಾರಿ ನೌಕರರಿಂದ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ. ಸುಮಾರು 8 ಸಾವಿರ ಮಂದಿ ಭಾಗಿ.

ಬೆಳಗಾವಿ: ಬೆಳಗಾವಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯಿಂದ 7ನೇ ವೇತನ ಆಯೋಗದಲ್ಲಿ ವೇತನ ನಷ್ಟ ಸರಿಪಡಿಸುವ ಬಗ್ಗೆ ಸರಕಾರಕ್ಕೆ ಒತ್ತಾಯಿಸಿ ಸುವರ್ಣ ಸೌಧದ ಎದುರು ಇಂದು (ಡಿಸೆಂಬರ್16 ರಂದು) ಬೆಳಿಗ್ಗೆ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಗಳಾದ ರಾಜಶೇಖರ್ (Ex-ACCT), ಎಸ್. ಕೆ. ಸತ್ಯನಾರಾಯಣ ಬೆಂಗಳೂರು(Ex-ACCT),ಅಂಜನಾಮೂರ್ತಿ (Ex-ACCT), ಬಿ. ಇಂದಿರಾ ಕುಮಾರ್ (Ex-CTO), ವೆಂಕಟೇಶ್ (Ex-CTO), ಗಂಗಾಧರ್(Ex-CTI).ಅನಂತ ಪದ್ಮನಾಭ(Ex-CTO). ರಂಗಣ್ಣ (Ex-CTI). ಎನ್. ಜಿ. ರಂಗಸ್ವಾಮಿ (Ex-CTO) ಸೇರಿದಂತೆ 8 ಸಾವಿರಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳು ರಾಜ್ಯದ ವಿವಿಧ ಭಾಗಗಳಿಂದ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಿನ್ನೆ ನಿವೃತ್ತ ಸರಕಾರಿ ನೌಕರರ ನಿಯೋಗ ಸ್ಪೀಕರ್ ಯು. ಟಿ. ಖಾದರ್ ಅವರನ್ನು ಭೇಟಿ ಮಾಡಿ ಪ್ರಸುತ್ತ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಿತ್ತು. ಇಂದು ಪ್ರತಿಭಟನೆ ನಡೆಯುವಲ್ಲಿಗೆ ಬೈಂದೂರು ಮತ್ತು ಪುತ್ತೂರು ಶಾಸಕರು ಆಗಮಿಸಿ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕಿಸಿ ಕೊಡುವ ಬಗ್ಗೆ ಭರವಸೆ ನೀಡಿದರು. ಎಂಪಿಎಂ ಷಣ್ಮುಖಯ್ಯ ಅವರು ಸಂಘಟನೆಯ ಪ್ರಧಾನ ಸಂಚಾಲಕರಾಗಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಸಂಕಷ್ಟಗಳ ನಿವಾರಣೆಗಾಗಿ ದೋಷ ಪರಿಹಾರ ಪೂಜೆ: ಸ್ವಾಮಿ ಪೂರ್ಣಾಮೃತಾನಂದ ಪುರಿ

ಮಂಗಳೂರು: ಜನ್ಮಜಾತವಾಗಿ ಜಾತಕಗಳಲ್ಲಿ ಗ್ರಹಗಳ ಸ್ಥಾನಾಂತರದಿಂದ ಹಲವು ದೋಷಗಳು ಗೋಚರಿಸುತ್ತವೆ.ಇದರಿಂದಾಗಿ ಪ್ರಕೃತಿಸಹಜವಾದ ಸಂಕಷ್ಟಗಳು ಮತ್ತು ತೊಂದರೆಗಳು ಮನುಷ್ಯರನ್ನು ಬಾಧಿಸುತ್ತವೆ.ಅದಕ್ಕಾಗಿ ಕಾಲಕಾಲಕ್ಕೆ ದೋಷ ನಿವಾರಣಾ ಪೂಜೆಗಳನ್ನು ಮಾಡಿಸುವುದು ಸೂಕ್ತ ಎಂದು ಮಾತಾ ಅಮೃತಾನಂದಮಯಿ ಮಠದ ಹಿರಿಯ ಸ್ವಾಮೀಜಿಗಳಾದ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿ ಹೇಳಿದರು. ಮಂಗಳೂರು ನಗರದ ಬೋಳೂರಿನಲ್ಲಿರುವ ಮಾತಾ‍ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ನೂತನವಾಗಿ ಆರಂಭಿಸಲಾದ ಶನಿ ದೋಷ ನಿವಾರಣಾ ಪೂಜೆಯನ್ನು ದೀಪ ಬೆಳಗಿಸಿ ಚಾಲನೆ ನೀಡಿ ಸ್ವಾಮೀಜಿ ಆಶೀರ್ವಚನವಿತ್ತರು.ನವಗ್ರಹಗಳಲ್ಲಿ ಶನಿಗ್ರಹದ ಪ್ರಭಾವವು ಜೀವಿಗಳ ಮೇಲೆ ಅಧಿಕವಾಗಿದ್ದು ಆ ಗ್ರಹಗಳ ಪ್ರೀತ್ಯರ್ಥವಾಗಿ ಸಾಮೂಹಿಕ ಪೂಜೆ ಕೈಗೊಂಡಾಗ ಅದರ ಪ್ರಭಾವವು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು. ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರಾದ ಪೂಜನೀಯ ಸ್ವಾಮಿನಿ ಮಂಗಳಾಮೃತ ಪ್ರಾಣ ಉಪಸ್ಥಿತರಿದ್ದರು.ಸ್ವಾಮೀಜಿಯವರನ್ನು ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿಯ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು. ಈ ಸಂದರ್ಭದಲ್ಲಿ ಡಾ. ಜೀವರಾಜ್ ಸೊರಕೆ, ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಅಮೀನ್, ಭೋಜರಾಜ್ ಕರ್ಕೇರ,ಶ್ರುತಿ ಸನತ್ ಹೆಗ್ಡೆ,ಶ್ರೀ ಮುರಳೀಧರ್ ಶೆಟ್ಟಿ,ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೈ. ಎನ್. ಸಾಲ್ಯಾನ್,ಉಪಾಧ್ಯಕ್ಷರಾದ ಕೃಷ್ಣಶೆಟ್ಟಿ,ಸುಧಾಕರ ಭಟ್,ಸಂಘಟನಾ ಕಾರ್ಯದರ್ಶಿ ಯೋಗೀಶ್ ಸಾಲ್ಯಾನ್, ಕಾರ್ಯದರ್ಶಿ ಡಾ. ದೇವದಾಸ್ ಪುತ್ರನ್ , ರಾಮನಾಥ್ , ದೀಪಕ್ ಶೆಟ್ಟಿಗಾರ್, ಪ್ರಕಾಶ್ ಕರ್ಕೇರ ಮತ್ತು ವಿವಿಧ ಸೇವಾ ಸಮಿತಿಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಲಹೆಗಾರರಾದ ಡಾ.ವಸಂತಕುಮಾರ ಪೆರ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಡಿದರು.ಪ್ರತಿ ತಿಂಗಳ ಎರಡನೆಯ ಶನಿವಾರ ಸಂಜೆ ಈ ದೋಷ ನಿವಾರಣೆ ಪೂಜೆ ಮುಂದುವರಿಯಲಿದೆ.

ಪ್ರಾದೇಶಿಕ ವಾರ್ತೆಗಳು

ಡಿ.18ರಂದು ಗಿರೀಶ್ ಭಾರದ್ವಾಜ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತೂಗು ಸೇತುವೆಗಳ ಸರದಾರ , ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ಕಾರ್ಯಕ್ರಮ. ಭಾರತೀಯ ಸೇನೆ ಒಂದು ಕುಟುಂಬ: ಲೆಫ್ಟಿನಂಟ್ ಜನರಲ್ ಬಿ ಎಸ್ ರಾಜು ಸೋಮಶೇಖರ್

ಮೂಡುಬಿದಿರೆ: ಎನ್‌ಸಿಸಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಭಾರತೀಯ ಸೇನೆಯನ್ನು ಸೇರಬೇಕು. ಭಾರತೀಯ ಸೇನೆ ಒಂದು ಕುಟುಂಬ, ಸವಾಲನ್ನು ಎದುರಿಸುವ ಸ್ಥಳ. ಅಗ್ನಿವೀರ್ ಯೋಜನೆಯು ಯುವಜನತೆಗೆ ದೇಶ ಸೇವೆ ಮಾಡಲು ಉತ್ತಮ ಅವಕಾಶ ಕಲ್ಪಿಸಿದೆ ಎಂದು ಭಾರತೀಯ ಸೇನೆಯ ನಿವೃತ್ತ ಲೆಫ್ಟಿನಂಟ್ ಜನರಲ್ ಬಿಎಸ್ ರಾಜು ಹೇಳಿದರು.ಅವರು ಆಳ್ವಾಸ್‌ನ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್‌ವತಿಯಿಂದ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಮಾತನಾಡಿದರು. ಜೀವನದಲ್ಲಿ ಪ್ರತಿಬಾರಿ ನಾವು ಅಂದುಕೊAಡAತೆ ನಡೆಯುವುದಿಲ್ಲ. ಅದಕ್ಕಾಗಿ ನಾವು ಪರ್ಯಾಯ ಯೋಜನೆಗಳನ್ನು ಇಟ್ಟುಕೊಳ್ಳಬೇಕು. ಶಿಸ್ತು ಮತ್ತು ಘನತೆ ನಮ್ಮ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಶಿಸ್ತು ನಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸುವ ಶಕ್ತಿ ನೀಡುತ್ತದೆ. ಎನ್‌ಸಿಸಿ ಸಮವಸ್ತ್ರ ವನ್ನು ಧರಿಸುವ ಆಸೆ ನಮ್ಮಲ್ಲಿ ಮೂಡಬೇಕು. ಆಳ್ವಾಸ್ ಸಂಸ್ಥೆಯ ಎನ್‌ಸಿಸಿಯಲ್ಲಿ ಮೂರು ವಿಭಾಗಳಿದ್ದು, ಕ್ರೀಯಾಶೀಲತೆಯಿಂದ ಕರ‍್ಯನಿರ್ವಹಿಸುತ್ತಿದೆ ಎಂಬುದನ್ನು ಅರಿತಿದ್ದೇನೆ ಎಂದರು.ಜಗತ್ತು ಕ್ಷಿಪ್ರ ಬದಲಾವಣೆಯಾಗುತ್ತಾ ಸಾಗುತ್ತಿದೆ. ನಮ್ಮಲ್ಲಿ ಹೊಸ ತಂತ್ರಜ್ಞಾನ, ಅನ್ವೇಷಣೆಗಳಿಗೆ ಒಗ್ಗಿಕೊಳ್ಳುವ ಸಾಮರ್ಥ್ಯ ಇರಬೇಕು. ಯಾವುದು ಸಮಾಜದಲ್ಲಿ ಅಸ್ತಿತ್ವದಲ್ಲಿಲ್ಲವೋ ಅಂತಹದನ್ನು ಅನ್ವೇಷಿಸುವ ಹಲವು ಕೌಶಲ್ಯಗಳನ್ನು ನಾವು ಪಡೆಯುವತ್ತಾ ಕರ‍್ಯಪ್ರವೃತ್ತರಾಗಬೇಕು. ಶಿಕ್ಷಣ ವ್ಯವಸ್ಥೆ ಹಲವಾರು ಬದಲಾವಣೆಗಳನ್ನು ತರುತ್ತಿದೆ. ಶಿಕ್ಷಣದ ಜೊತೆಗೆ ಬಹು ಕೌಶಲ್ಯಗಳನ್ನು ಹೊಂದಿದರೆ ಮಾತ್ರ ಬಹುರಾಷ್ಟಿçÃಯ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಸಾಧ್ಯ ಎಂದರು. ನಾವು ಸವಾಲನ್ನು ಎದುರುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಧನಾತ್ಮಕ ಯೋಚನೆಗಳನ್ನು ಇಟ್ಟುಕೊಳ್ಳಬೇಕು. ನಮಗೆ ವಹಿಸಿದ ಜವಾಬ್ದಾರಿಗಳನ್ನು ನಿರ್ವಹಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಸವಾಲನ್ನು ಎದುರಿಸುವ ಹಸಿವು ನಮ್ಮಲ್ಲಿ ಮೂಡಬೇಕು. ಸಂವಹನ ಕೌಶಲ್ಯ, ಅನ್ವೇಷಣಾತ್ಮಕ ಯೋಚನೆಗಳು ಅಗತ್ಯ . ವಿದ್ಯಾರ್ಥಿಗಳ ಪ್ರಾಯೋಗಿಕ ಅನುಭವ ಉದ್ಯೋಗದ ಮೂಲ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಇವತ್ತು ನಾನು ಏನಾಗಿದ್ದೇನೋ ಅದಕ್ಕೆ ಎನ್‌ಸಿಸಿ ಕಾರಣ. ಅಂದು ಕಲಿತ ಶಿಸ್ತು ನನ್ನ ಜೀವನದಲ್ಲಿ ಇಂದಿಗೂ ರೂಢಿಯಲ್ಲಿದೆ ಎಂದರು. ನಾವು ಜವಾಬ್ದಾರಿಗಳನ್ನು ಸ್ವೀಕರಿಸಿದಾಗ ನಮ್ಮ ವ್ಯಕ್ತಿತ್ವ ಬದಲಾಗುತ್ತದೆ. ಜೀವನದ ನಿಜವಾದ ಬದಲಾವಣೆ ಆಗ ಆಗುತ್ತದೆ. ನಮ್ಮಲ್ಲಿ ಅನ್ವೇಷಣಾತ್ಮಕ ಯೋಜನೆಗಳು ನಾವು ಹಾಕಿಕೊಂಡ ಚೌಕಟ್ಟಿನಿಂದ ಹೊರ ಬಂದಾಗ ಸಾಧಿಸಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಉತ್ಸಾಹಿತರಾಗಿರಬೇಕು. ಭಾರತದಲ್ಲಿರುವಷ್ಟು ವೈವಿಧ್ಯತೆ ಯಾವ ದೇಶದಲ್ಲೂ ಇಲ್ಲ. ಪ್ರತಿ ನೂರು ಕಿ.ಮೀ.ಗೂ ಭಾಷೆಯಲ್ಲಿ, ವೇಷಭೂಷಣದಲ್ಲಿ, ಬದಲಾವಣೆ ಕಾಣುತ್ತೇವೆ. ನಾವು ಭಾರತಲ್ಲಿ ಹುಟ್ಟಿರಲು ಅದೃಷ್ಟಮಾಡಿರಬೇಕು ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ಲೆಫ್ಟಿನಂಟ್ ಜನರಲ್ ಬಿಎಸ್ ರಾಜು ಅವರ ಧರ್ಮಪತ್ನಿ ಶಕುಂತಲಾ ಸೋಮಶೇಖರ್ ಇದ್ದರು. ವಿದ್ಯಾರ್ಥಿನಿ ಶಾರ್ವರಿ ನಿರೂಪಿಸಿ ವಂದಿಸಿದರು.

Scroll to Top