Author name: editor

ಪ್ರಾದೇಶಿಕ ವಾರ್ತೆಗಳು

St Joseph’s University to Host ‘Open Day 2026’ on July 27

Bengaluru, July 26: St Joseph’s University, located on Lalbagh Road, Bengaluru, will host its annual academic showcase, ‘Open Day 2026’, on Monday, July 27, 2026, from 8.00 a.m. to 4.00 p.m.The event is designed to introduce prospective students, parents and the general public to the University’s academic programmes, research initiatives and vibrant campus life. It also aims to serve as a collaborative platform bringing together schools, colleges, educationists and industry leaders to promote meaningful interaction between academia and industry.The highlights of Open Day 2026 include the Principal Conclave, TEDx student talks, an exhibition and evaluation of projects by high school students, a Student Parliamentary Session, and the prize distribution and valedictory ceremony.Visitors will have the opportunity to gain first-hand insights into the University’s academic and co-curricular ecosystem while interacting with faculty members, students and representatives from various industries.

ಪ್ರಾದೇಶಿಕ ವಾರ್ತೆಗಳು

ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ : ಹರಿಕೃಷ್ಣ ಪುನರೂರು

ಮೂಲ್ಕಿ : ಆರೋಗ್ಯಯುತ ಸಮಾಜದ ಬೆಳವಣಿಗೆಗೆ ಪತ್ರಕರ್ತರ ಪಾತ್ರವಿದೆ. ವರದಿಯೊಂದಿಗೆ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಪತ್ರಕರ್ತನಿಗೆ ಜವಬ್ದಾರಿ ಹೆಚ್ಚಿದೆ ಎಂದು ರಾಜ್ಯ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.ಅವರು ಮೂಲ್ಕಿ ಸ್ವಾಗತ್ ಸಭಾಂಗಣದಲ್ಲಿ ನಡೆದಮೂಲ್ಕಿ ಪ್ರೆಸ್ ಕ್ಲಬ್ ಹಾಗೂ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಸಂಯೋಜನೆಯಲ್ಲಿ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮೂಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ಲೋಕೇಶ್ ಸುರತ್ಕಲ್ ಅಧ್ಯಕ್ಷತೆಯನ್ನು ವಹಿಸಿದ್ದರು.ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಜನರಿಗೆ ಇಂದಿಗೂ ಪತ್ರಿಕೆ ಮೇಲೆ ನಂಬಿಕೆ ಉಳಿದಿದ್ದು, ಸಮೂಹ ಮಾಧ್ಯಮಗಳು ವಿವಿಧ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆಯಲ್ಲಿ ಪತ್ರಿಕೆ ಮತ್ತು ವ್ಯ ಮಾಧ್ಯಮ ಮಂಚೂಣಿಯಲ್ಲಿದೆ ಎಂದು ಹೇಳಿದರು.ಹಿರಿಯ ಪತ್ರಕರ್ತ ಐಕಳ ಜಯಪಾಲ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಜಿಲ್ಲಾ ಪ್ರತ್ರಕರ್ತರ ಸಂಘದ ಮಾಜಿ ಅಧ್ಯಕ್ಷೆ ಜಗನ್ನಾಥ ಶೆಟ್ಟಿ ಬಾಳ, ರಾಜ್ಯ ಸಮಿತಿಯ ಸದಸ್ಯ ಶ್ರೀನಿವಾಸ್ ನಾಯಕ್,ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಪುನೀತ್ ಕೃಷ್ಣ ವಂದಿಸಿದರು. ಹರೀಶ್ ಹೆಜ್ಮಾಡಿ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

INTERSNIP in Artificial Intelligence for the MCA and MSc students of St Joseph’s University, Bengaluru

The AI/ML Internship conducted for students of St. Joseph’s University (SJU) at the Comedkares Innovation Hub (Mysore Road) represents a critical milestone in bridging academic instruction with industry-aligned technical application.Running for one month in June and July, this program integrated human-centred design thinking, virtual prototyping, and digital sketching with a comprehensive hands-on curriculum in Artificial Intelligence and Machine Learning. 50 postgraduate students — comprising 27 MSc Big Data Analytics, 20 MCA, and 3 MSc Computer Science —completed all four phases of the internship, progressing from initial problem scouting and empathy mapping through to training advanced ensemble machine learning models.The students were organised into 11 project teams. In Week 4, teams learned and integrated advanced Ensemble Methods, Gradient Boosting, and XGBoost models into their project pipelines. The final week of the program (Week 5: 8 – 12 June 2026) focussed on final model stability improvements, comprehensive project documentation, mock presentation rehearsals, and a final showcase. Students have demonstrated outstanding participation and deep collaboration across their teams. Evidence — including project charters, Jupyter notebooks, Git code repositories, Onshape CAD models, Figma wireframes, and PrepIndia progress logs — validated their learning and progress. The final showcase in Week 5 allowed teams to demonstrate their completed, interactive AI/ML solutions, proving their readiness for industry-level data science and engineering roles.Mr Muurulidhar, Founder and CEO of Era Foundation Innovation Center, Fr Denzil Lobo SJ, Director, School of Information Technology, Dr Bojamma, Dean, School of Information Technology, Dr Prasanthi, HOD of the Dept of Computer Science were present for the Valedictory.

ಪ್ರಾದೇಶಿಕ ವಾರ್ತೆಗಳು

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂ.ಸಿ.ಎ (MCA) ಮತ್ತು ಎಂ.ಎಸ್ಸಿ (MSc) ವಿದ್ಯಾರ್ಥಿಗಳಿಗಾಗಿ ಕೃತಕ ಬುದ್ಧಿಮತ್ತೆ (Artificial Intelligence) ವಿಷಯದಲ್ಲಿ ಇಂಟರ್ನ್‌ಶಿಪ್‌

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್‌ಕೇರ್ಸ್ ಇನ್ನೋವೇಶನ್ ಹಬ್‌ನಲ್ಲಿ (Comedkares Innovation Hub) ನಡೆಸಲಾದ ಎಐ/ಎಮ್‌ಎಲ್ (AI/ML) ಇಂಟರ್ನ್‌ಶಿಪ್‌, ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆದ ಈ ಕಾರ್ಯಕ್ರಮವು, ಮಾನವ-ಕೇಂದ್ರಿತ ವಿನ್ಯಾಸ ಚಿಂತನೆ (human-centred design thinking), ವರ್ಚುವಲ್ ಪ್ರೊಟೊಟೈಪಿಂಗ್ ಮತ್ತು ಡಿಜಿಟಲ್ ಸ್ಕೆಚಿಂಗ್ ಅನ್ನು ಕೃತಕ ಬುದ್ಧಿಮತ್ತೆ (AI) ಮತ್ತು ಮಷಿನ್ ಲರ್ನಿಂಗ್ (ML) ವಿಷಯಗಳ ಸಮಗ್ರ ಪ್ರಾಯೋಗಿಕ ಪಠ್ಯಕ್ರಮದೊಂದಿಗೆ ಸಂಯೋಜಿಸಿತ್ತು. 27 ಎಂ.ಎಸ್ಸಿ ಬಿಗ್ ಡೇಟಾ ಅನಾಲಿಟಿಕ್ಸ್, 20 ಎಂ.ಸಿ.ಎ ಮತ್ತು 3 ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್ ಒಳಗೊಂಡಂತೆ ಒಟ್ಟು 50 ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ನ ಎಲ್ಲಾ ನಾಲ್ಕು ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಅವರು ಆರಂಭಿಕ ಸಮಸ್ಯೆಗಳ ಹುಡುಕಾಟ ಮತ್ತು ಎಂಪಥಿ ಮ್ಯಾಪಿಂಗ್‌ನಿಂದ ಹಿಡಿದು ಸುಧಾರಿತ ಎನ್ಸೆಂಬಲ್ ಮಷಿನ್ ಲರ್ನಿಂಗ್ ಮಾಡೆಲ್‌ಗಳ (advanced ensemble machine learning models) ತರಬೇತಿಯವರೆಗೆ ಪ್ರಗತಿ ಸಾಧಿಸಿದರು. ವಿದ್ಯಾರ್ಥಿಗಳನ್ನು 11 ಪ್ರಾಜೆಕ್ಟ್ ತಂಡಗಳಾಗಿ ಸಂಘಟಿಸಲಾಗಿತ್ತು. 4ನೇ ವಾರದಲ್ಲಿ, ತಂಡಗಳು ಸುಧಾರಿತ ಎನ್ಸೆಂಬಲ್ ವಿಧಾನಗಳು (Ensemble Methods), ಗ್ರೇಡಿಯಂಟ್ ಬೂಸ್ಟಿಂಗ್ (Gradient Boosting) ಮತ್ತು ಎಕ್ಸ್‌ಜಿಬೂಸ್ಟ್ (XGBoost) ಮಾಡೆಲ್‌ಗಳನ್ನು ಕಲಿತು ತಮ್ಮ ಪ್ರಾಜೆಕ್ಟ್ ಪೈಪ್‌ಲೈನ್‌ಗಳಲ್ಲಿ ಅಳವಡಿಸಿಕೊಂಡವು. ಕಾರ್ಯಕ್ರಮದ ಅಂತಿಮ ವಾರವು (ವಾರ 5: 8 – 12 ಜೂನ್ 2026) ಮಾಡೆಲ್‌ನ ಸ್ಥಿರತೆಯ ಸುಧಾರಣೆಗಳು, ಸಮಗ್ರ ಪ್ರಾಜೆಕ್ಟ್ ದಾಖಲಾತಿ (documentation), ಅಣಕು ಪ್ರಸ್ತುತಿ ತಾಲೀಮುಗಳು (mock presentation rehearsals) ಮತ್ತು ಅಂತಿಮ ಪ್ರದರ್ಶನದ ಮೇಲೆ ಕೇಂದ್ರೀಕೃತವಾಗಿತ್ತು. ವಿದ್ಯಾರ್ಥಿಗಳು ತಮ್ಮ ತಂಡಗಳಲ್ಲಿ ಅತ್ಯುತ್ತಮ ಭಾಗವಹಿಸುವಿಕೆ ಮತ್ತು ಆಳವಾದ ಸಹಯೋಗವನ್ನು ಪ್ರದರ್ಶಿಸಿದ್ದಾರೆ. ಪ್ರಾಜೆಕ್ಟ್ ಚಾರ್ಟರ್‌ಗಳು, ಜುಪಿಟರ್ ನೋಟ್‌ಬುಕ್‌ಗಳು (Jupyter notebooks), ಗಿಟ್ ಕೋಡ್ ರೆಪೊಸಿಟರಿಗಳು (Git code repositories), ಆನ್‌ಶೇಪ್ ಕ್ಯಾಡ್ ಮಾಡೆಲ್‌ಗಳು (Onshape CAD models), ಫಿಗ್ಮಾ ವೈರ್‌ಫ್ರೇಮ್‌ಗಳು (Figma wireframes) ಮತ್ತು ಪ್ರೆಪ್‌ಇಂಡಿಯಾ ಪ್ರಗತಿ ದಾಖಲೆಗಳು ಸೇರಿದಂತೆ ವಿವಿಧ ಪುರಾವೆಗಳು ಅವರ ಕಲಿಕೆ ಮತ್ತು ಪ್ರಗತಿಯನ್ನು ದೃಢೀಕರಿಸಿವೆ. 5ನೇ ವಾರದ ಅಂತಿಮ ಪ್ರದರ್ಶನವು ತಂಡಗಳಿಗೆ ತಮ್ಮ ಪೂರ್ಣಗೊಂಡ, ಸಂವಾದಾತ್ಮಕ ಎಐ/ಎಮ್‌ಎಲ್ (AI/ML) ಪರಿಹಾರಗಳನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿತು. ಇದು ಉದ್ಯಮ-ಮಟ್ಟದ ಡೇಟಾ ಸೈನ್ಸ್ ಮತ್ತು ಎಂಜಿನಿಯರಿಂಗ್ ಪಾತ್ರಗಳಿಗೆ ಅವರ ಸಿದ್ಧತೆಯನ್ನು ಸಾಬೀತುಪಡಿಸಿತು.ಈ ಸಮಾರೋಪ ಸಮಾರಂಭದಲ್ಲಿ ಎರಾ ಫೌಂಡೇಶನ್ ಇನ್ನೋವೇಶನ್ ಸೆಂಟರ್‌ನ ಸಂಸ್ಥಾಪಕ ಮತ್ತು ಸಿಇಒ ಶ್ರೀ ಮುರಳಿಧರ್, ಮಾಹಿತಿ ತಂತ್ರಜ್ಞಾನ ಶಾಲೆಯ ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್‌ಜೆ, ಮಾಹಿತಿ ತಂತ್ರಜ್ಞಾನ ಶಾಲೆಯ ಡೀನ್ ಆದ ಡಾ. ಬೋಜಮ್ಮ, ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ (HOD) ಡಾ. ಪ್ರಶಾಂತಿ ಅವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ -ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್

ಮಂಗಳೂರು, ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಮೂಡಬಿದಿರೆ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅಭಿಪ್ರಾಯ ಪಟ್ಟರು.ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಮೂಡಬಿದಿರೆ ಉಪ ವಿಭಾಗ ಹಾಗೂ ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಯ ವನಸಿರಿ ಇಕೋ ಕ್ಲಬ್ ವತಿಯಿಂದ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳಲ್ಲಿ ಪರಿಸರದ ಕುರಿತು ಜಾಗ್ರತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಹೇಳಿದರು. ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಎಂಬ ಕೀಳರಿಮೆ ಬೇಡ. ಸರಕಾರಿ ಶಾಲೆಯಲ್ಲಿ ಕಲಿತವರು ಇಂದು ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಲವು ಉದಾರಹಣೆಗಳು ಇವೆ ಎಂದು ಹೇಳಿದರು.ಇದೇ ವೇಳೆ ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಾಗೂ ಈ ಸರಕಾರಿ ಶಾಲೆಗೆ ಹಲವು ನೆರವು ನೀಡಿದ ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿ ಗಳೊಂದಿಗೆ ಶ್ರೀಧರ್ ಅವರು ಸಂವಾದ ನಡೆಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ ಎನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್ಶಾಲಾಭಿವೃದ್ಧಿಗೆ ನೆರವುಗಿಡನೆಟ್ಟು ಉತ್ತಮ ರೀತಿಯಲ್ಲಿ ಪೋಷಿಸುವ ಈ ಶಾಲಾ ವಿದ್ಯಾರ್ಥಿಗಳಿಗೆ ತಲಾ 200 ರೂಪಾಯಿ ಬಹುಮಾನ, ಶಾಲಾ ಶಿಕ್ಷಕರೊಬ್ಬರ 8 ಸಾವಿರ ರೂಪಾಯಿ ಮಾಸಿಕ ವೇತನ ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ತಮ್ಮ ವೈಯುಕ್ತಿಕ ಕೊಡುಗೆ ನೀಡುವುದಾಗಿ ಘೋಷಿಸಿದರು.ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಫ್ರೂಟ್ ಪಾರ್ಕ್ ನಿರ್ಮಿಸಿ ಕೊಡುವುದಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ತಿಳಿಸಿದರು.

ಪ್ರಾದೇಶಿಕ ವಾರ್ತೆಗಳು

ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ. ವಿಶೇಷ ಸಂಚಿಕೆ ಬಿಡುಗಡೆ

ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರು ಪತ್ರಿಕಾ ಭವನದಲ್ಲಿ ಜುಲೈ 21ರಂದು ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೂರು ಬಂಟರ ಸಂಘದ ಅಧ್ಯಕ್ಷರಾದ ಆನಂದ ಶೆಟ್ಟಿ ಅಡ್ಯಾರ್ ವಹಿಸಿದರು. ಯಾವುದೇ ಪತ್ರಿಕೆ ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ ಅದು ಸಮಾಜದ ಧ್ವನಿ .ಸಂಸ್ಕೃತಿಯ ಪ್ರತಿಬಿಂಬ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಕಳೆದ 13 ವರ್ಷಗಳಿಂದ ಅಮೃತ ಪ್ರಕಾಶ ಪತ್ರಿಕೆ ಸಮಾಜಮುಖಿ ವಿಚಾರಗಳು, ಮಹಿಳಾ ಸಬಲೀಕರಣ ,ಶಿಕ್ಷಣ ,ಸಾಹಿತ್ಯ ,ಸಂಸ್ಕೃತಿ, ಮತ್ತು ಸಾಮಾಜಿಕ ಮೌಲ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿದೆ ಎಂದರು .ಅಮೃತ ಪ್ರಕಾಶ ವಿಶೇಷ ಸಂಚಿಕೆಯನ್ನು ಮಾಜಿ ರಾಜ್ಯಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಬಿಡುಗಡೆಗೊಳಿಸಿ ಸುದೀರ್ಘ 13 ವರ್ಷಗಳಿಂದ ಗುಣಮಟ್ಟದ ಮೌಲ್ಯಯುತ ಪತ್ರಿಕೆಯನ್ನು ಸಮಾಜಕ್ಕೆ ನೀಡುತ್ತಾ ನಿರಂತರ ಸಾಹಿತ್ಯ ಸೇವೆ ಮಾಡುವ ಡಾ.ಮಾಲತಿ ಶೆಟ್ಟಿ ಮಾಣೂರು ಅವರ ಕೆಲಸ ಶ್ಲಾಘನೀಯ ಎಂದು ಪತ್ರಿಕೆಗೆ ಶುಭ ಹಾರೈಸಿದರು . ಮುಖ್ಯ ಅತಿಥಿಯಾಗಿ ಸಮಾಜ ಸೇವಕಿ ಹಾಗೂ ಉದ್ಯಮಿ ಲಯನ್ ಆಶಾ ರಾವ್ ಆರೂರು ಉಪಸ್ಥಿತರಿದ್ದರು . ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ, ಮಾಣೂರು ಅವರು ಸ್ವಾಗತಿಸಿದರು ಲೇಖಕಿ ಹಾಗೂ ಶಿಕ್ಷಕಿ ಸುರೇಖಾ ಯಾಳವಾರ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಆರೋಗ್ಯ ಶಿಕ್ಷಣದಿಂದ ಹದಿಹರೆಯದವರ ಸ್ಥೂಲಕಾಯ ನಿರ್ವಹಣೆ ಕುರಿತು ಸಂಶೋಧನೆ: ದೀಕ್ಷಾ ಎಂ. ಶೆಟ್ಟಿಗೆ ಪಿಎಚ್‌ಡಿ

ಸುರತ್ಕಲ್: ಹದಿಹರೆಯದವರಲ್ಲಿ ಕಂಡುಬರುವ ಸ್ಥೂಲಕಾಯ (Obesity) ಸಮಸ್ಯೆ, ಅದರ ಕುರಿತು ಇರುವ ಜ್ಞಾನ, ಮನೋಭಾವ ಹಾಗೂ ಆಚರಣೆಗಳ ಕುರಿತು ಅಧ್ಯಯನ ನಡೆಸಿ, ಆರೋಗ್ಯ ಶಿಕ್ಷಣದ ಪರಿಣಾಮವನ್ನು ವಿಶ್ಲೇಷಿಸಿದ ಸಂಶೋಧನೆಗಾಗಿ ದೀಕ್ಷಾ ಎಂ. ಶೆಟ್ಟಿ ಅವರು ಪಿಎಚ್‌ಡಿ ಪದವಿ ಪಡೆದಿದ್ದಾರೆ. ಮೈಸೂರಿನ *ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (JSS AHER)ನ *ನಿರ್ವಹಣಾ ಅಧ್ಯಯನ ವಿಭಾಗ (Faculty of Management Studies)ದಿಂದ ನಿರ್ವಹಣಾ ಶಾಸ್ತ್ರ (Management) ವಿಷಯದಲ್ಲಿ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ಪ್ರದಾನ ಮಾಡಲಾಗಿದೆ.“ಹದಿಹರೆಯದವರ ಸ್ಥೂಲಕಾಯದ ಕುರಿತು ಜ್ಞಾನ, ಮನೋಭಾವ ಮತ್ತು ಆಚರಣೆಗಳನ್ನು ನಿರ್ಧರಿಸುವ ಅಧ್ಯಯನ ಹಾಗೂ ಸ್ಥೂಲಕಾಯ ನಿರ್ವಹಣೆಯಲ್ಲಿ ಆರೋಗ್ಯ ಶಿಕ್ಷಣದ ಪರಿಣಾಮದ ಮೌಲ್ಯಮಾಪನ” ಎಂಬ ವಿಷಯದ ಕುರಿತು ಅವರು ಸಂಶೋಧನಾ ಪ್ರಬಂಧ ಮಂಡಿಸಿದ್ದರು.ಈ ಸಂಶೋಧನೆಯನ್ನು ಡಾ. ಕನಕವಳ್ಳಿ ಕೆ. ಕುಂದೂರಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಲಾಗಿದೆ.ದೀಕ್ಷಾ ಎಂ. ಶೆಟ್ಟಿ ಅವರು ಬಾಳ ಮಾಧವ ಶೆಟ್ಟಿ ಮತ್ತು ಮೀರಾವಾಣಿ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.

ಪ್ರಾದೇಶಿಕ ವಾರ್ತೆಗಳು

ಬರುತ್ತಿದ್ದಾಳೆ “ಶ್ರೀಮತಿ ಸತ್ಯಭಾಮ”. ಕೊಡಿಯಾಲ್ ಬೈಲ್ ಅವರ ಕಲಾಸಂಗಮದ ಹೊಸ ನಾಟಕ

ಆ ಪೋಸ್ಟರೇ ಹೊಸತನವನ್ನು ತುಂಬಿಕೊಂಡಿದೆ, ತಬ್ಬಿಕೊಂಡಿದೆ. “ಶ್ರೀಮತಿ ಸತ್ಯಭಾಮ” ಟೈಟಲ್ ಅನ್ನೇ ಆಭರಣ, ಸೀರೆಯಿಂದ ಅಲಂಕರಿಸಲಾಗಿದೆ. Born to Rule ಎಂಬ ಅಡಿಬರಹ ಹಾಗೂ ಸತ್ಯಭಾಮ ನಿಂತ ಭಂಗಿಯು ಆಕೆಯ ಪಾತ್ರ ಎಂಥದ್ದು ಎಂಬುದನ್ನೂ ಸೂಚಿಸುತ್ತದೆ. ಅವೆಲ್ಲವುಗಳಿಂದ ಮುಖ್ಯವಾಗಿ – ಕೈಲಾಸ – ವೈಕುಂಠ ತಿರ್ಗ್ದ್ ಕಲಾಸಂಗಮ ಕುಡ ಭೂಲೋಕೊಗು ಎಂಬ ಒಂದು ವಾಕ್ಯದ ಮೂಲಕ ಈ ತಂಡವು ಪೌರಾಣಿಕ ಕಥೆಗಳ ಬಳಿಕ ಮತ್ತೆ ಸಾಮಾಜಿಕ ಕಥೆಗೆ ಹೊರಳಿದೆ ಎಂಬುದನ್ನು ವಿಭಿನ್ನವಾಗಿ ತಿಳಿಸುವ ಪ್ರಯತ್ನ ಮಾಡಿದೆ.ತುಳು ರಂಗಭೂಮಿಯ ಬದಲಾವಣೆಯ ಹರಿಕಾರ, ಹೊಸತನದ ರೂವಾರಿ ಎಂದೇ ಗುರುತಿಸಿಕೊಂಡಿರುವ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಎರಡು ಮೂರು ವರ್ಷಗಳಿಂದ ಪೌರಾಣಿಕ, ಐತಿಹಾಸಿಕ ನಾಟಕಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಈಗ ಮತ್ತೆ ಸಾಮಾಜಿಕ ನಾಟಕಕ್ಕೆ ಮರಳಿದ್ದಾರೆ. ಈ ಹಿಂದೆಯೂ ಅವರು ಒರಿಯರ್ದೊರಿ ಅಸಲ್, ಮದಿಮೆ, ಕುಟುಂಬ, ಕೋಡೆ – ಇನಿ- ಎಲ್ಲೆ, ಮೈತಿದಿ ಮುಂತಾದ ಸಾಮಾಜಿಕ ನಾಟಕಗಳ ಮೂಲಕ ಜನರ ಮನಸ್ಸು ಗೆದ್ದವರು. ಅದಾದ ಬಳಿಕ ಅವರಿಗೆ “ಶಿವದೂತೆ ಗುಳಿಗೆ” ನಾಟಕವು ಅಪಾರ ಖ್ಯಾತಿ ಮತ್ತು ಜನಪ್ರಿಯತೆಯನ್ನು ತಂದು ಕೊಟ್ಟಿದೆ. ಅದರ ಬೆನ್ನಿಗೆ “ಛತ್ರಪತಿ ಶಿವಾಜಿ” ನಾಟಕದ ಮೂಲಕ ಜನಮನ್ನಣೆ ಗಳಿಸಿದರು. ಈಗ ಈ ಬಾರಿ “ಶ್ರೀಮತಿ ಸತ್ಯಭಾಮ” ಎಂಬ ಸಾಮಾಜಿಕ ನಾಟಕದ ಮೂಲಕ ಜನರ ಮುಂದೆ ಬರಲಿದ್ದಾರೆ.“ಶ್ರೀಮತಿ ಸತ್ಯಭಾಮ” ನಾಟಕದ ಪೋಸ್ಟರ್ ಗಳು ವಾಟ್ಸಾಪ್ ಗ್ರೂಪ್ ಗಳಲ್ಲಿ ಭರ್ಜರಿಯಾಗಿ ಹರಿದಾಡುತ್ತಿದೆ. ಮುಖ್ಯವಾಗಿ ಸತ್ಯಭಾಮ ಪಾತ್ರಧಾರಿಯ ಬಗ್ಗೆ ಸಾಕಷ್ಟು ಕುತೂಹಲವಿದೆ. ಯಾರು ಮಾಡಿರಬಹುದು ಈ ಪಾತ್ರವನ್ನು ಎಂಬ ಕುತೂಹಲವನ್ನು ತಣಿಸಲು ಸದ್ಯಕ್ಕಂತೂ ಕೊಡಿಯಾಲ್‌ಬೈಲ್ ಸಿದ್ದರಿಲ್ಲ. ತಂಡದಲ್ಲಿ ಯಾವೆಲ್ಲ ಪ್ರಮುಖ ಕಲಾವಿದರು ಇದ್ದಾರೆ ಎಂಬುದನ್ನೂ ಕಾದು ನೋಡಬೇಕಷ್ಟೆ.ಈ ನಾಟಕದಲ್ಲೂ ಅದ್ದೂರಿ ಸೆಟ್ಟಿಂಗ್, ವಿಶೇಷ ತಾಂತ್ರಿಕತೆ ಬಳಸಲು ಕೊಡಿಯಾಲ್ ಬೈಲ್ ಮುಂದಾಗಿದ್ದಾರೆ. ಅದ್ದೂರಿತನ, ತಾಂತ್ರಿಕತೆಯಿಂದಲೇ “ಶಿವಧೂತೆ ಗುಳಿಗೆ’ ಜನಮಚ್ಚುಗೆ ಪಡೆದಿದೆ. ಆದ್ದರಿಂದ ಹೊಸ ನಾಟಕದಲ್ಲೂ ಅದ್ದೂರಿತನಕ್ಕೆ ಕಿಂಚಿತ್ತೂ ಕೊರತೆಯಾಗಬಾರದು ಎಂದು ಕೊಡಿಯಾಲ್‌ಬೈಲ್ ವಿಶೇಷ ಆಸ್ಥೆ ವಹಿಸಿದ್ದಾರೆ. ಸಂಗೀತದ ವಿಷಯಕ್ಕೆ ಬಂದರೆ ಮತ್ತೆ ಅದೇ ಹೆಮ್ಮೆಯ ಎ. ಕೆ. ವಿಜಯ್ ಕೋಕಿಲಾ ಅವರೇ ಕೆಲಸ ಮಾಡಿದ್ದಾರೆ. ಇವರು ಕಲಾಸಂಗಮದ ಹೆಮ್ಮೆಯ ಮತ್ತು ಖಾಯಂ ಸಂಗೀತ ನಿರ್ದೇಶಕರಾಗಿದ್ದಾರೆ. ಕೊಡಿಯಾಲ್‌ಬೈಲ್ ಅವರ ಎಲ್ಲ ಯಶಸ್ವಿ ನಾಟಕಗಳ ಹಿಂದೆ ಈ ಸಂಗೀತ ನಿರ್ದೇಶಕರ ಕೊಡುಗೆ ಪ್ರಮುಖವಾಗಿದೆ.ಶ್ರೀಮತಿ ಸತ್ಯಭಾಮ ಮೇಕಪ್‌ಗೆ ಕುಳಿತಿದ್ದಾಳೆ. ಸದ್ಯದಲ್ಲೇ ಎದ್ದು ಬರಲಿದ್ದಾಳೆ ನಿಮ್ಮ ಮುಂದೆ. ಸ್ವಾಗತಿಸಲು ಸಿದ್ಧರಾಗಿ.ನವಂಬರ್ 1ರಂದು ಸುರತ್ಕಲ್ ನಲ್ಲಿ “ಶ್ರೀಮತಿ ಸತ್ಯಭಾಮ”ವಿಜಯಕುಮಾರ್ ಕೊಡಿಯಾಲ್ ಬೈಲ್ ಯಾವುದೇ ಹೊಸ ನಾಟಕಗಳನ್ನು ಮಾಡುವಾಗ ಅಲ್ಲಿ ಅದ್ದೂರಿತನವನ್ನು ಉಳಿಸಿಕೊಳ್ಳುತ್ತಾರೆ. ತಾಂತ್ರಿಕತೆಯನ್ನೂ ಧಾರಾಳವಾಗಿ ಬಳಸಿಕೊಳ್ಳುತ್ತಾರೆ. ಈ ಮೂಲಕ ಒಂದು ಹೊಸತನ ಹಾಗೂ ಭಿನ್ನತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಈಗ “ಶ್ರೀಮತಿ ಸತ್ಯಭಾಮ” ನಾಟಕದಲ್ಲೂ ಆ ಹೊಸತನ, ಅದ್ದೂರಿತನ ಕಂಡುಬರಲಿದೆ. ಪ್ರಸ್ತುತ ಅವರು ನಾಟಕ ರಚನೆ ಮತ್ತು ನಿರ್ದೇಶನದಲ್ಲಿ ಬಿಝಿಯಾಗಿದ್ದಾರೆ. ಅಕ್ಟೋಬರ್ ತಿಂಗಳ ಕೊನೆಯಲ್ಲಿ “ಶ್ರೀಮತಿ ಸತ್ಯಭಾಮ” ನಮ್ಮ, ನಿಮ್ಮೆಲ್ಲರ ಊರಿಗೆ ಬರಲಿದ್ದಾಳೆ. ಹೀಗೆ ಸುತ್ತಾಡುತ್ತಾ ನವೆಂಬರ್ 1ರಂದು ರವಿವಾರ ಸಂಜೆ ಸುರತ್ಕಲ್‌ಗೆ ಬರುತ್ತಿದ್ದಾಳೆ. ಅಂದು ಶ್ರೀಮತಿ ಸತ್ಯಭಾಮಾಳ ಸಂಪೂರ್ಣ ಪರಿಚಯ ಪಡೆದುಕೊಳ್ಳಬಹುದು.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರಿಗೆ ನಿವೃತ್ತಿ ನಂತರ ಪಿಂಚಣಿ ಸೇರಿದಂತೆ ಸರಕಾರದ ಸಮರ್ಪಕ ಸೌಲಭ್ಯಗಳು ಸಕಾಲದಲ್ಲಿ ದೊರೆಯದಿರುವುದು ವಿಷಾದನೀಯ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಬದಲಾವಣೆ ತರಲು ಸಂಘಟಿತ ಪ್ರಯತ್ನದ ಅಗತ್ಯತೆ ಇದೆ -ಬಂಟ್ವಾಳ ತಾಲೂಕು ಪತ್ರಿಕಾ ದಿನಾಚರಣೆಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ. ಎನ್. ಆಶಯ.

ಮಂಗಳೂರು: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆಯು ಜುಲೈ 22ರ ಬುಧವಾರ ಬಿ.ಸಿ.ರೋಡಿನ ಬಂಟ್ವಾಳ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರನ್ನು ಸನ್ಮಾನಿಸಿ, ಸಂಘದ ಸದಸ್ಯರಿಗೆ ಗುರುತುಚೀಟಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಅನಂತಪದ್ಮನಾಭ ಮಾತನಾಡಿ, ಪತ್ರಕರ್ತರ ವರದಿಗಳು ಸಮಾಜಕ್ಕೆ ಮಾಹಿತಿ ನೀಡುವುದಷ್ಟೇ ಅಲ್ಲದೆ, ಜಾಗೃತಿ ಮೂಡಿಸಿ ಸಮಾಜದ ದಿಕ್ಕನ್ನು ಬದಲಿಸುವ ಶಕ್ತಿಯನ್ನೂ ಹೊಂದಿವೆ ಎಂದು ಹೇಳಿದರು. ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಗಳಿದ್ದಂತೆ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸ್ ಇಲಾಖೆ ಮತ್ತು ಮಾಧ್ಯಮಗಳು ಪರಸ್ಪರ ಸಹಕಾರದಿಂದ ಅಪರಾಧ ತಡೆ ಹಾಗೂ ಜನಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದರು. ಸಾರ್ವಜನಿಕರು ತುರ್ತು ಸಹಾಯವಾಣಿ 112ರ ಸದುಪಯೋಗ ಪಡೆಯುವಂತೆ ಜಾಗೃತಿ ಮೂಡಿಸಬೇಕು. ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಮಾತನಾಡಿ, ಸಮಾಜದ ಹಿತಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ನಿವೃತ್ತಿಯ ಬಳಿಕ ಪಿಂಚಣಿ ಸೇರಿದಂತೆ ಸಮರ್ಪಕ ಸೌಲಭ್ಯಗಳು ದೊರೆಯದಿರುವುದು ವಿಷಾದನೀಯ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಬದಲಾವಣೆ ತರಲು ಸಂಘಟಿತ ಪ್ರಯತ್ನ ಅಗತ್ಯವಿದೆ ಎಂದರು.ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಪತ್ರಕರ್ತರಿಗೆ ಬಸ್ ಪಾಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಘ ಕೈಗೊಂಡಿರುವ ಪ್ರಯತ್ನಗಳ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಕಾಸರಗೋಡು ಕ್ಷೇಮಾಭಿವೃದ್ಧಿ ಕನ್ನಡ ಸಂಘದ ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ ಪುರಸ್ಕೃತ ಹರೀಶ್ ಮಾಂಬಾಡಿ ಹಾಗೂ 2024ನೇ ಸಾಲಿನ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ಉತ್ತಮ ವರದಿ ಪ್ರಶಸ್ತಿ ವಿಜೇತ ಅಬ್ದುಲ್ ರಹಿಮಾನ್ ತಲಪಾಡಿ ಅವರನ್ನು ಸನ್ಮಾನಿಸಲಾಯಿತು.ಇದೇ ವೇಳೆ ಪುತ್ತೂರಿಗೆ ವರ್ಗಾವಣೆಗೊಂಡ ಉದಯವಾಣಿ ಹಿರಿಯ ವರದಿಗಾರ ಕಿರಣ್ ಸರಪಾಡಿ ಅವರಿಗೆ ಬೀಳ್ಕೊಡುಗೆ ನೀಡಿ, ಬಂಟ್ವಾಳಕ್ಕೆ ನೂತನ ಹಿರಿಯ ವರದಿಗಾರರಾಗಿ ಆಗಮಿಸಿದ ದಿನೇಶ್ ಇರಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆಲಿ ವಿಟ್ಲ ಕಾರ್ಯಕ್ರಮ ನಿರೂಪಿಸಿ, ಸದಸ್ಯ ಹರೀಶ್ ಮಾಂಬಾಡಿ ವಂದಿಸಿದರು.ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಮೇಶ್ ಕೆ. ಪುಣಚ, ಕೋಶಾಧಿಕಾರಿ ಚಂದ್ರಶೇಖರ ಕಲ್ಮಲೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಉದಯಶಂಕರ ನೀರ್ಪಾಜೆ, ರತ್ನದೇವ್ ಪುಂಜಾಲಕಟ್ಟೆ, ವೆಂಕಟೇಶ ಬಂಟ್ವಾಳ ಹಾಗೂ ಸದಸ್ಯರಾದ ಗಣೇಶ್ ಪ್ರಸಾದ್ ಪಾಂಡೇಲು, ಯಾದವ ಕುಲಾಲ್ ಅಗ್ರಬೈಲ್, ಕಿಶೋರ್ ಪೆರಾಜೆ, ನಿಶಾಕಿರಣ್ ಬಾಳೆಪುಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ವಿಶ್ವ ದೇವಾಡಿಗರ ಮಹಾಮಂಡಳದ ಮಹಾ ಅಧಿವೇಶನದ ಪೂರ್ವಭಾವಿ ಸಭೆ

ಮಂಗಳೂರು: ವಿಶ್ವ ದೇವಾಡಿಗರ ಮಹಾಮಂಡಳದ ಆಶ್ರಯದಲ್ಲಿ ದಿನಾಂಕ 20-12-2026 ರಂದು ಉಡುಪಿಯ ಚಿತ್ಪಾಡಿ ಬಯಲು ರಂಗವೇದಿಕೆಯಲ್ಲಿ ನಡೆಯಲಿರುವ ಮಹಾಅಧಿವೇಶನದ ಪೂರ್ವಬಾವಿ ಸಭೆಯು ಮಂಗಳೂರು, ಕಾಟಿಪಳ್ಳ, ಸುರತ್ಕಲ್, ಬಂಟ್ವಾಳ ಕಣ್ವತೀರ್ಥ ಕನ್ನಡ ಮೊಯಿಲಿ ಸಂಘ,ವಿಟ್ಲ, ಕಾರಿಂಜೆ ಚಿತ್ರಾಪುರ ವ್ಯಾಪಿಯ ದೇವಾಡಿಗ ಸಂಘಗಳ ಸಭೆ ,ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರುನ ಸಭಾ ವೇದಿಕೆಯಲ್ಲಿ ವಿಶ್ವ ಮಹಾ ಮಂಡಳದ ಅಧ್ಯಕ್ಷರಾದ ಧರ್ಮಪಾಲ್ ಯು ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅವರು ಮಾತನಾಡುತ್ತಾ, ನಮ್ಮ ಬೇಡಿಕೆಗಳು ಸರಕಾರದ ಮಟ್ಟಕ್ಕೆ ಮುಟ್ಟಲು ಈ ಮಹಾ ಅಧಿವೇಶನ ಅಗತ್ಯವೆಂದುವಿವರಿಸಿದರು ತನ್ನನ್ನು ಅಭಿನಂದಿಸಿದ ಬಗ್ಗೆ ಉತ್ತರವಾಗಿ ಈ ಸನ್ಮಾನವು ನನ್ನ ಜೊತೆ ಹಗಲಿರುಳು ಶ್ರಮಿಸುವ ನನ್ನ ತಂಡಕ್ಕೆ ಸಲ್ಲಿಸುವುದಾಗಿ ತಿಳಿಸಿದರು.ಕಾರ್ಯದರ್ಶಿ ಯಾದವ ದೇವಾಡಿಗರು ಪ್ರಸ್ತಾವನೆ ಮಂಡಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನದಾಸ್,ಮುಂಬೈ ಸಂಘದ ಅಧ್ಯಕ್ಷ ರವಿ ಎಸ್ ದೇವಾಡಿಗ, ವಿಶ್ವ ಮಹಾ ಮಂಡಳದ ಉಪಾಧ್ಯಕ್ಷ ಡಾ. ದೇವರಾಜ್ ಕೆ.,ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಉಪಾಧ್ಯಕ್ಷರು ಯಂ. ಎಚ್. ಕರುಣಾಕರ ದೇವಾಡಿಗ,ಮಹಾ ಮಂಡಳದ ಪ್ರದಾನ ಕಾರ್ಯದರ್ಶಿ ಗಣೇಶ್ ಅಂಬಲಪಾಡಿ, ಸಂಘಟನಾ ಕಾರ್ಯದರ್ಶಿ ಜನಾರ್ದನ ಪಡುಪಣಂಬೂರು, ಉಡುಪಿ ನಗರಪಾಲಿಕೆ ಮಾಜಿ ಸದಸ್ಯ ವಿಜಯ್ ಕೊಡವೂರು,ಸಮಯೋಚಿತವಾಗಿ ಮಾತನಾಡಿದರು.ಆಗಮಿಸಿರುವ ಎಲ್ಲಾ ಸಂಘದ ಅಧ್ಯಕ್ಷರು ಸಹಕರಿಸುವುದಾಗಿ ಆಶ್ವಾಸನೆ ನೀಡಿದರು.ವೇದಿಕೆಯಲ್ಲಿ ಸಂಘಟನಾ ಕಾರ್ಯದರ್ಶಿ ಚೆನ್ನಪ್ಪ ಮೊಯಿಲಿ, ಕೋಶಾಧಿಕಾರಿ ಸುರೇಶ ಕೊಡವೂರು ಉಪಸ್ಥಿತರಿದ್ದರು.ಪ್ರಾರಂಭದಲ್ಲಿ ಶ್ರೀಮತಿ ವೀಣಾ ಸ್ವಾಗತಿಸಿದರು. ರೋಹಿತಾಕ್ಷ ದೇವಾಡಿಗ ವಂದಿಸಿದರು , ಶ್ರೀಮತಿ ಯಶ್ವಿತಾ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

Scroll to Top