Author name: editor

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ.

ಧ ರ್ಮಸ್ಥಳ:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಧರ್ಮೋತ್ತಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯಕಾರಿ ಸಮಿತಿಯ ಸದಸ್ಯ ರಾಜೇಶ್ ದಡ್ಡಂಗಡಿ, ಸಂಘದ ಸದಸ್ಯ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

ಹೊರ ರಾಜ್ಯ ವಾರ್ತೆಗಳು

ಖ್ಯಾತ ಉದ್ಯಮಿ, ನಿಸ್ವಾರ್ಥ ಸಮಾಜ ಸೇವಕ ಪ್ರವೀಣ್ ಶೆಟ್ಟಿ ಪುತ್ತೂರು ದಂಪತಿಗಳಿಗೆ ತುಳುಕೂಟ ಬೆಳ್ಳಿಹಬ್ಬ ಸಂಭ್ರಮದಲ್ಲಿ ಸನ್ಮಾನ

ಪುಣೆ: ಪುಣೆ ಬಂಟರ ಸಂಘದ ಉಪಾಧ್ಯಕ್ಷ, ತುಳುಕೂಟ ಪುಣೆಯ ಬೆಳ್ಳಿ ಹಬ್ಬ ಸಂಭ್ರಮದ ಗೌರವಾಧ್ಯಕ್ಷ,ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, 2024 ರ ಸಾಲಿನ ಬಂಟರತ್ನ ಪ್ರಶಸ್ತಿ ಪುರಸ್ಕೃತ, ಆರ್ಯಭಟ ಪ್ರಶಸ್ತಿ ಪುರಸ್ಕೃತ, ಪುಣೆಯ ಖ್ಯಾತ ಉದ್ಯಮಿ, ನಿಸ್ವಾರ್ಥ ಸಮಾಜಸೇವಕ ಪ್ರವೀಣ್ ಶೆಟ್ಟಿ ಪುತ್ತೂರು ದಂಪತಿಗಳನ್ನು ತುಳುಕೂಟ ಪುಣೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ.ಕೆ.ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಕಾರ್ಯದರ್ಶಿ ರೋಹಿತ್ ಶೆಟ್ಟಿ ನಗ್ರಿಗುತ್ತು ಇವರುಗಳು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭ ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ದ.ಕ.ಸಂಸದ ಬ್ರಜೇಶ್ ಚೌಟ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಜ. 5, 2025 ರಂದು ಮಂಗಳೂರು ಧರ್ಮಪ್ರಾಂತದ ಪರಮ ಪವಿತ್ರ ಪ್ರಸಾದ ಮೆರವಣಿಗೆ. ಈ ಬಗ್ಗೆ ಬಿಷಪ್ ಹೌಸ್ ನಲ್ಲಿ ನಡೆಯಿತು ಪೂರ್ವಭಾವಿ ಸಭೆ.

ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ ತಾ. 05-01-2025 ರಂದು ನಡೆಯಲಿದ್ದು, ಇದರ ಬಗ್ಗೆ ಪೂರ್ವಬಾವಿ ಸಭೆಯನ್ನು ಬಿಷಪ್ ಹೌಸ್‌ನಲ್ಲಿ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ ವಹಿಸಿ, ಕಾರ್ಯಕ್ರಮದ ಬಗ್ಗೆ ರೂಪು ರೇಖೆಯನ್ನು ವಿವರಿಸಿದರು. ಈ ಸಭೆಯಲ್ಲಿ ಧರ್ಮಪ್ರಾತ್ಯದ ಶ್ರೇಷ್ಠ ಗುರು ವಂ| ಪಾ| ಮ್ಯಾಕ್ಸಿಂ ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ಟಲಿನೋ, ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿ’ಸೋಜಾ ಮುಂತಾದವರು ಉಪಸ್ಥಿತರಿದ್ದರು.ರೋಯ್ ಕ್ಯಾಸ್ಟಲಿನೋ ಮೆರವಣಿಗೆಯ ಬಗ್ಗೆ ಸಂಸೇವಕರ ಸೇವೆಯ ಬಗ್ಗೆ ರೂಪು ರೇಖೆ ನೀಡಿ ಪ್ರತಿ ಚರ್ಚಿನ ಸ್ವಯಂ ಸೇವಕರು ಅವರು ನಿಲ್ಲುವ ಸ್ಥಳವನ್ನು ತಿಳಿಸಿದರು.ಈ ಪರಮ ಪ್ರಸಾದದ ಮೆರವಣಿಗೆಯು ಆ ದಿನ ಸಂಜೆ 3 ಗಂಟೆಗೆ ಮಿಲಾಗ್ರಿಸ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಪ್ರಾರಂಭಗೊಳ್ಳಲಿದ್ದು 4.30 ಕ್ಕೆ ಮಿಲಾಗ್ರಿಸ್ ಚರ್ಚಿನಿಂದ ಪಾಂಡೇಶ್ವರದ ರೊಸಾರಿಯೊ ಚರ್ಚಿಗೆ ಮೆರವಣಿಗೆ ಮೂಲಕ ಪರಮ ಪ್ರಸಾದ ಕೊಂಡೊಯ್ಯಲಾಗುವುದು. ಚರ್ಚಿನ ತೆರೆದ ಮೈದಾನದಲ್ಲಿ ಪ್ರವಚನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿರುವುದು.

ಪ್ರಾದೇಶಿಕ ವಾರ್ತೆಗಳು

ರಾಷ್ಟ್ರೀಯ ಪತ್ರಿಕಾ ದಿನಾಚರಣೆ : ‘ಪತ್ರಕರ್ತರಿಂದ ಸಮಾಜವನ್ನು ಎಚ್ಚರಿಸುವ ಕಾರ್ಯ’ : ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಆಶಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ನಗರಾಭಿವವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಮಾತನಾಡಿ ‘ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಪತ್ರಕರ್ತರು ಸಮಾಜವನ್ನು ಕಾಲಕಾಲಕ್ಕೆ ಎಚ್ಚರಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ದಿನ ನಿತ್ಯದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಮಾಧ್ಯಮದ ಬಗ್ಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ ಎಂದರು.ಹಿರಿಯ ಪತ್ರಿಕಾ ವಿತರಕ ನಾಗರಾಜ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ವಿತರಕರಾಗಿರುವ ನಮ್ಮಂತವರನ್ನು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸ ತಂದಿದೆ ಎಂದು ಅವರು ಹೇಳಿದರು.ಮುಖ್ಯ ಅತಿಥಿಯಾಗಿದ್ದ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಮಾತನಾಡಿ ‘ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈ ಬಾರಿ ಬದಲಾಗುತ್ತಿರುವ ಮಾಧ್ಯಮಗಳ ಸ್ವರೂಪ ವಿಷಯದ ಬಗ್ಗೆ ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸುತ್ತಿದೆ. ಸುದ್ದಿಯನ್ನು ಪರಿಶೀಲನೆ ನಡೆಸದೆ ನೇರವಾಗಿ ನವ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದು ಈಗ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಇದನ್ನು ತಡೆಯಲು ಒಂದು ಹೊಸ ಕಾಯ್ದೆಯನ್ನು ಜಾರಿ ಮಾಡಿದೆ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದ ಪತ್ರಕರ್ತ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಭುವನೇಂದ್ರ ಪುದುವೆಟ್ಟು ಅವರಿಗೆ ಸಭೆ ಆರಂಭದ ಮೌನ ಪ್ರಾರ್ಥನೆಯೊಂದಿಗೆ ಸಂತಾಪ ಸೂಚಿಸಲಾಯಿತು.

ಕರ್ನಾಟಕ ವಾರ್ತೆಗಳು

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವೇದಿಕೆಯಲ್ಲಿ ಜನಮನ ರಂಜಿಸಿದ ಕನ್ನಡ ಗೀತಗಾಯನ ಕಾರ್ಯಕ್ರಮ

ದಸರಾ ವಸ್ತು ಪ್ರದರ್ಶನ 2024 ರ ವರ್ಣ ರಂಜಿತ ಕಾರ್ಯಕ್ರಮದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರವು ಪ್ರತಿನಿತ್ಯ ಮೈಸೂರು ವಸ್ತು ಪ್ರದರ್ಶನ ವೇದಿಕೆಯಲ್ಲಿ ಆಯೋಜಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾನು ವೀಕ್ಷಿಸಿದ್ದೇನೆ. ಹಾಗೇನೇ 15-11-2024ರಂದು ಸಂಜೆ ಆಯೋಜಿಸಲಾದ ಗಂಗಾಧರ ಗಾಂಧಿ ಮತ್ತು ಬಳಗದ ಸಂಗೀತ ಕಾರ್ಯಕ್ರಮವನ್ನು ಕುತೂಹಲದಿಂದ ನೋಡಿದೆ. ಒಂದು ಸುಮಧುರ ಗೀತೆಗಳ ಲೋಕವೇ ಅಲ್ಲಿ ಅನಾವರಣ ಗೊಂಡಿತ್ತು. ಅಲ್ಲಿ ಮೂಡಿಬಂದ ಮಾಧುರ್ಯ ಪ್ರಧಾನವಾದ ಗೀತೆಗಳೇ ಆಗಿದ್ದವು. ಈ ಕಾರಣದಿಂದ ಜನಮನಗೆಲ್ಲುವಲ್ಲಿ ಯಶಸ್ವಿಯಾಯಿತು.ಸರಿಯಾಗಿ ಸಂಜೆ 6 ಗಂಟೆಗೆ ‘ಈ ದೇಶ ಚೆನ್ನ ಈ ಮಣ್ಣು ಚೆನ್ನ, ಎಂದು ನಾ ಕಾಣೆನಲ್ಲ’ ಎಂಬ ಹಾಡಿನೊಂದಿಗೆ ಆರಂಭಗೊಂಡು ದ್ವಿತೀಯ ಹಾಡಾಗಿ’ಕನ್ನಡಮ್ಮನ ದೇವಾಲಯ ಕಂಡೆ ಹೆಣ್ಣಿನ ಕಂಗಳಲಿ ‘ ಹಾಡುವ ಮೂಲಕ ನಿರಂತರ ಸುಮಾರು 45ಕ್ಕು ಹೆಚ್ಚು ಗೀತೆಗನ್ನು ಹಾಡುವುದೆಂದರೆ ತಮಾಷೆ ಮಾತಲ್ಲ ಮತ್ತು ಅನೇಕರು ಗಾಯನ ಕಂಡು ಮುಖವಿಸ್ಮಿತಾರಾದರು. ಸುಮಧುರ ಹಾಡುಗಳು ಜನರನ್ನು ಮನರಂಜಿಸಿತು…ಹಿನ್ನಲೆಯಲ್ಲಿ ಸಂಗೀತ ಪರಿಕರ ನುಡಿಸುವವರು ಇರಲಿಲ್ಲ ನಿಜ . ಹಾಗಾಗಿ ಇತ್ತೀಚಿನ ನೂತನ ಆವಿಷ್ಕಾರದ ಕರೋಕೆ ಮಾದರಿಯಲ್ಲಿ ಹಿನ್ನಲೆ ಸಂಗೀತವನ್ನು ಅಳವಡಿಸಲಾಗಿತ್ತು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಪರಿಕರ ನುಡಿಸುವಿಕೆಯಲ್ಲಿ ಅಥವಾ ಗಾಯನದಲ್ಲಿ ವ್ಯತ್ಯಾಸವಾದರೆ ಸರಿದೂಗಿಸಿಕೊಳ್ಳಲು ಅವಕಾಶವಿರುತ್ತದೆ. ಕರೋಕೇ ಹಿನ್ನಲೆ ಸಂಗೀತದಲ್ಲಿ ಹಾಡುವಾಗ ಗಾಯಕ ಒಂದು ಕ್ಷಣ ತಪ್ಪಿದರೂ ಹಾಡಿನ ರೂಪವೇ ಬದಲಾದೀತು. ಹಾಗಾಗಿ ಕರೋಕೆ ಗಾಯನವನ್ನು ಸಾಮಾನ್ಯವೆಂದು ಪರಿಭಾವಿಸುವಂತಿಲ್ಲ ಮತ್ತು ಅದೊಂದು ತಪ್ಪಸ್ಸೆ ಸರಿ.ಅನೇಕ ಬೇರೆ ಬೇರೆ ಸಂಗೀತ ಪರಿಕರಗಳನ್ನು ಬಳಸಿ ಮಧ್ಯೆ ಮಧ್ಯೆ ಸಂಗೀತ ನುಡಿಸುವಿಕೆಗೆ ಸಮಯ ಕಳೆದುಕೊಳ್ಳುವ ಈ ಸಂದರ್ಭಗಳಲ್ಲಿ ಕಡಿಮೆ ಅವಧಿಯಲ್ಲಿ ಕರೋಕೆ ಮೂಲಕ ಸುಮಾರು _45 ಕ್ಕು ಹೆಚ್ಚು ಹಾಡುಗಳನ್ನು ಸಾದರ ಪಡಿಸಿದ ಗಂಗಾಧರ್ ಗಾಂಧಿ, ರಾಣಿ ಪುಷ್ಪಲತಾ ದೇವಿ, ವರ್ಷ ರವರ ಗಾಯನ ನಿಜಕ್ಕು ಅದ್ಭುತವೆನಿಸಿತು.ಅಲ್ಲದೆ ಪ್ರತಿ ಹಾಡಿನ ಮಧ್ಯೆ ಗೀತೆಯ ಬಗ್ಗೆ ಅತ್ಯಂತ ಕಡಿಮೆ ಶಬ್ಧಗಳಲ್ಲಿ ಹಾಡಿನ ನಿರೂಪಣೆ ಗೈದ ರೇಷ್ಮಾ ಶೆಟ್ಟಿ ಗೋರೂರು ಹಾಗೂ ಮಧ್ಯೆ ಮಧ್ಯೆ ಮೂಡಿಬಂದ ಬಾಲ ಕಲಾವಿದೆ ಲಾಲಿತ್ಯ ಬೇಲೂರು ಇವರ ನೃತ್ಯ ಮನಸಿಗೆ ಮುದನೀಡಿತು.ಬಹಳ ಮುಖ್ಯವಾಗಿ ಒಂದಕ್ಕಿಂತ ಒಂದು ಮಾಧ್ಯರ್ಯ ಪ್ರಧಾನ ಕನ್ನಡ ಗೀತೆಗಳು ಮೂಡಿ ಬಂದಿರುವುದಲ್ಲದೆ ಪ್ರೇಕ್ಷಕರ ಒತ್ತಾಯದ ಮೇರೆಗೆ ಒಂದೆರಡು ಹಿಂದಿ ಹಾಡುಗಳನ್ನು ಸಾದರ ಪಡಿಸಿ ಜನಮೆಚ್ಚುಗೆಗೆ ಪಾತ್ರರಾದರು. ಈ ಕಾರ್ಯಕ್ರಮದ ನಂತರ ತಿಳಿದ ವಿಚಾರವೇನೆಂದರೆ ಗಂಗಾಧರ್ ಗಾಂಧಿ, ರಾಣಿ ಪುಷ್ಪಲತಾ ದೇವಿ, ವರ್ಷ ಕರ್ಕೇರಾ , ಶ್ರೀ ರಕ್ಷಾ ಸರ್ಪಗಳ ಮತ್ತು ನೇತ್ರಾ ಖುಷಿ ಕಳೆದ 2023 ರ ನವೆಂಬರ್ ತಿಂಗಳಲ್ಲಿ ಮಂಗಳೂರಿನ ಪುರಭನದಲ್ಲಿ ನಿರಂತರ 12 ಗಂಟೆ ಹಾಡುವ ಮೂಲಕ ಎರಡು ವಿಶ್ವದಾಖಲೆಯನ್ನು ನಿರ್ಮಿಸಿರುವ ವಿಚಾರ ಬೆಳಕಿಗೆ ಬಂತು. ಮತ್ತು ಕರ್ನಾಟಕ ವಸ್ತು ಪ್ರದರ್ಶನ ವೇದಿಕೆಯಲ್ಲಿ ಗಂಗಾಧರ್ ಗಾಂಧಿ, ರಾಣಿ ಪುಷ್ಪಲತಾ ದೇವಿ ಮತ್ತು ವರ್ಷ ಕರ್ಕೇರಾ 45 ಕ್ಕೂ ಹೆಚ್ಚು ಗೀತೆಗಳನ್ನು ಹಾಡುವ ಮೂಲಕ ನಿಜಕ್ಕೂ ಶ್ಲಾಘನೀಯ ವೆನಿಸಿದರು.ಈ ತಂಡವನ್ನು ಗುರುತಿಸಿ ಮೈಸೂರಿನ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟ “ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ” ದ ಅಧ್ಯಕ್ಷ ರಘುರಾಜ್ ಅರಸ್ ಹಾಗೂ ಉಪಾಧ್ಯಕ್ಷ ರಾಜೇಶ್ ಸಿ.ಗೌಡ ಅಭಿನಂದನಾರ್ಹರು ಅನಿಸಿತು. ಇಂತಹ ಪ್ರತಿಭೆಗಳಿಗೆ ಮತ್ತಷ್ಟು ಅವಕಾಶಗಳು ಸಿಗುವಂತಾಗಲಿ ಎಂಬುದೇ ನನ್ನ ಆಶಯ.ಡಾ. ಕೊಲ್ಚಪ್ಪೆ ಗೋವಿಂದ ಭಟ್.

ಕರ್ನಾಟಕ ವಾರ್ತೆಗಳು

ಕರ್ನಾಟಕ ಜಾನಪದ ಪರಿಷತ್ ನ ಜಿಲ್ಲಾಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಪ್ರವೀಣ್ ಕುಮಾರ್ (ಪಮ್ಮಿ) ಕೊಡಿಯಲ್ ಬೈಲ್ ಆಯ್ಕೆ.

ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ದ.ಕ. ಜಿಲ್ಲಾಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಪ್ರವೀಣ್ ಕುಮಾರ್(ಪಮ್ಮಿ) ಕೊಡಿಯಾಲ್ ಬೈಲ್ ಅವರು ಆಯ್ಕೆಯಾಗಿದ್ದಾರೆ. ಇವರಿಗೆ mpmla’s ನ್ಯೂಸ್ ಶುಭ ಹಾರೈಸುತ್ತದೆ.

ಪ್ರಾದೇಶಿಕ ವಾರ್ತೆಗಳು

ಭಾಸ್ಕರ ರೈ ಕುಕ್ಕುವಳ್ಳಿಯವರ ಕವನ ಸಂಕಲನ ಬಿಡುಗಡೆ – ವಿಚಾರಗೋಷ್ಠಿ. ‘ಸೀಯನ’ ತುಳು ಬದುಕಿನ ನೈಜ ಚಿತ್ರಣ: ಪ್ರೊ. ಎ.ವಿ.ನಾವಡ

ಮಂಗಳೂರು: ‘ತುಳು ಭಾಷೆಯಲ್ಲಿ ಬರೆಯುವ ಹೆಚ್ಚಿನ ಲೇಖಕರು ಭಾಷೆಯ ಬಗ್ಗೆ ಗಂಭೀರವಾಗಿ ಯೋಚಿಸುವುದಿಲ್ಲ. ಆದರೆ ಭಾಸ್ಕರ ರೈ ಕುಕ್ಕುವಳ್ಳಿಯವರ ಸೀಯನ ಕೃತಿಯಲ್ಲಿ ವಸ್ತುವೈವಿಧ್ಯತೆಯೊಂದಿಗೆ ಭಾಷೆಯನ್ನು ಸಶಕ್ತವಾಗಿ ಬಳಸಲಾಗಿದೆ. ಸೀಯನ ಶೀರ್ಷಿಕೆಯೇ ಅಪ್ಪಟ ತುಳು ದೇಸಿ ಪದ. ಮೂರು ವಿಭಾಗಗಳಲ್ಲಿ ಪ್ರಕಟವಾಗಿರುವ ನೂರಕ್ಕೂ ಹೆಚ್ಚಿನ ಅವರ ಕವಿತೆಗಳಲ್ಲಿ ತುಳು ಬದುಕಿನ ನೈಜ ಚಿತ್ರಣವನ್ನು ವಿವಿಧ ಆಯಾಮಗಳಲ್ಲಿ ಕಟ್ಟಿ ಕೊಡಲಾಗಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಹಿರಿಯ ಜಾನಪದ ಸಂಶೋಧಕ ಪ್ರೊ.ಎ.ವಿ.ನಾವಡ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಸಹಯೋಗದಲ್ಲಿ ನ. 17 ರಂದು ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ಜರಗಿದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ನೂತನ ಕೃತಿ ‘ಸೀಯನ’ ಚೀಪೆ ಕೋಪೆದ ಪಾಕ ಪದೊಕುಲು ಕವನ ಸಂಕಲನ ಬಿಡುಗಡೆ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ‘ಆಧುನಿಕ ಕವಿತೆಗಳು ನವೋದಯ ಕಾವ್ಯದ ದಾರಿಯಲ್ಲಿ ಸಾಗುತ್ತಿವೆ. ಅಲ್ಲಿ ಕನ್ನಡ, ಸಂಸ್ಕೃತ, ಇಂಗ್ಲಿಷ್ ಪದಗಳು ಧಾರಾಳ ಬಳಕೆಯಾಗುತ್ತವೆ. ತುಳುಕವಿಗಳೂ ಅದನ್ನು ಅನುಸರಿಸುತ್ತಿರುವುದು ಖೇದಕರ. ನಮ್ಮ ಕವಿಗಳು ಹೆಚ್ಚೆಚ್ಚು ತುಳು ಪಾಡ್ದನಗಳನ್ನು ಓದಬೇಕಾದ ಅಗತ್ಯವಿದೆ. ಜೊತೆಗೆ ತುಳು ಕೃತಿಗಳ ಭಾಷಾಂತರ ಪ್ರಕ್ರಿಯೆಯೂ ಬಿರುಸಾಗಿ ನಡೆಯಬೇಕು; ಅಕಾಡೆಮಿ ಅದನ್ನು ಪ್ರಕಟಿಸಬೇಕು. ಸೀಯನದ ಹಾಡುಗಳು ಕನ್ನಡದಲ್ಲೂ ಬರಲಿ’ ಎಂದವರು ಆಶಿಸಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಕೃತಿಕರ್ತ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ರವೀಂದ್ರ ರೈ ಕಲ್ಲಿಮಾರು ಕೃತಿ ಪರಿಚಯ ನೀಡಿದರು. ಎ.ಕೆ.ಜಯರಾಮ ಶೇಖ, ರಾಜಾರಾಮ ಶೆಟ್ಟಿ ಮನವಳಿಕೆ, ಲಕ್ಷ್ಮೀನಾರಾಯಣ ರೈ ಹರೇಕಳ, ವಾಸಪ್ಪ ಶೆಟ್ಟಿ ಬೆಳ್ಳಾರೆ, ನಿವೇದಿತಾ ಎನ್. ಶೆಟ್ಟಿ, ಸುಮಾ ಪ್ರಸಾದ್ ವೇದಿಕೆಯಲ್ಲಿದ್ದರು. ಜಿಲ್ಲೆಯ ಖ್ಯಾತ ಗಾಯಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ತೋನ್ಸೆ ಪುಷ್ಕಳ ಕುಮಾರ್ ಮತ್ತು ತಂಡದವರು ‘ಸೀಯನ ಪದರಂಗಿತ’ ಕಾರ್ಯಕ್ರಮದಲ್ಲಿ ಕವನ ಸಂಕಲನದ ಪ್ರಮುಖ ಹಾಡುಗಳನ್ನು ಸ್ವರ ಸಂಯೋಜಿಸಿ ಹಾಡಿದರು.ಯಕ್ಷಗಾನ ‌ವಿಚಾರಗೋಷ್ಠಿ:ಇದೇ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ತುಳು ಆಟೊ: ಪ್ರಸಂಗ ಬೊಕ್ಕ ಪ್ರಯೋಗ’ ಯಕ್ಷಗಾನ ವಿಚಾರಗೋಷ್ಠಿ ಜರಗಿತು. ಯಕ್ಷಗಾನ ಕಲಾವಿದ ಮತ್ತು ಪ್ರಸಂಗಕರ್ತ ತಾರಾನಾಥ ವರ್ಕಾಡಿ ‘ತುಳುಟು ಪುರಾಣ ಪ್ರಸಂಗೊಲು’ ವಿಷಯದ ಕುರಿತು ಮಾತನಾಡಿದರು. ಶಿಕ್ಷಕ,ಭಾಗವತ ಮತ್ತು ಪ್ರಸಂಗಕರ್ತ ಹರೀಶ್ ಶೆಟ್ಟಿ ಸೂಡ ‘ ತುಳು ಜಾನಪದ ಪ್ರಸಂಗೊ ಬೊಕ್ಕ ಕಲ್ಪ ಕತೆಕ್ಲು’ ವಿಚಾರವಾಗಿ ಪ್ರಬಂಧ ಮಂಡಿಸಿದರು. ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಸಮನ್ವಯಗೊಳಿಸಿದರು. ಮಹಾಬಲ ಶೆಟ್ಟಿ ಕೂಡ್ಲು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಪ್ರತಿಕ್ರಿಯೆ ಸಲ್ಲಿಸಿದರು. ‘ರೆಂಜೆ ಬನೊತ ಲೆಕ್ಯೆಸಿರಿ’ ತಾಳಮದ್ದಳೆ:ಕಾರ್ಯಕ್ರಮದ ಅಂಗವಾಗಿ ಹರೀಶ್ ಶೆಟ್ಟಿ ಸೂಡ ವಿರಚಿತ ‘ರೆಂಜೆ ಬನೊತ ಲೆಕ್ಯೆಸಿರಿ’ ತುಳು ಯಕ್ಷಗಾನ ತಾಳಮದ್ದಳೆ ಜರಗಿತು. ಭಾಸ್ಕರ ರೈ ಕುಕ್ಕುವಳ್ಳಿ , ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು, ಡಾ. ದಿನಕರ ಎಸ್. ಪಚ್ಚನಾಡಿ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಅವಿನಾಶ್ ಶೆಟ್ಟಿ ಉಬರಡ್ಕ, ಜಯರಾಮ ಪೂಜಾರಿ ನರಿಕೊಂಬು ಅರ್ಥಧಾರಿಗಳಾಗಿದ್ದರು. ಹಿಮ್ಮೇಳದಲ್ಲಿ ಭಾಗವತರಾಗಿ ಹರೀಶ್ ಶೆಟ್ಟಿ ಸೂಡಾ, ಚೆಂಡೆ-ಮದ್ದಳೆಗಳಲ್ಲಿ ಕೋಳ್ಯೂರು ಭಾಸ್ಕರ ಮತ್ತು ರೋಹಿತ್ ಉಚ್ಚಿಲ್ ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮೂಲ್ಕಿಯ ಪಾಯಲ್ ಅವರಿಗೆ ಅವಳಿ ಚಿನ್ನದ ಪದಕ

ಮೂಲ್ಕಿ: ಮೂಲ್ಕಿ ಕೆ.ಎಸ್.ರಾವ್ ನಗರದ ಪಾಯಲ್ ಪಿ. ಉಡುಪಿಯ ಬುಡಕಾನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಆಶ್ರಯದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ಮಾಧವಂಗಣದಲ್ಲಿ 17/11/2024 ರಂದು ಜರುಗಿದ ಉಡುಪಿ ಓಪನ್ ಕರಾಟೆ ಚ್ಯಾಂಪಿಯನ್ ಶಿಪ್ 2024ರ ಸ್ಪರ್ಧೆಯ 12ರ ಹರೆಯದ ಹಳದಿ ಬೆಲ್ಟ್‌ನ ವೈಯಕ್ತಿಕ ವಿಭಾಗದ ಕುಮುಟಿಯಲ್ಲಿ ಪ್ರಥಮ ಮತ್ತು ಕಟಾದಲ್ಲಿ ಪ್ರಥಮ ಸ್ಥಾನ ಪಡೆದು ಅವಳಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಇವರು ಮೂಲ್ಕಿ ಕೆ.ಎಸ್.ರಾವ್ ನಗರದ ನಿವೃತ್ತ ಯೋಧ ಪ್ರಶಾಂತ್ ಬಿ. ಮತ್ತು ನಯನ ಪಡುಬಿದ್ರಿ ದಂಪತಿಯ ಪುತ್ರಿಯಾಗಿದ್ದು, ಪಾವಂಜೆ ಶ್ರೀ ವಾಣಿ ಸ್ಕೂಲ್‌ನ ಆರನೇ ತರಗತಿಯ ವಿದ್ಯಾರ್ಥಿನಿ, ಎಸ್.ಕೋಡಿಯ ಕರಾಟೆ ಶಿಕ್ಷಣ ಕೇಂದ್ರದ ಕರಾಟೆ ತರಬೇತುದಾರ ನಾಗರಾಜ್ ಕುಲಾಲ್ ಕುಬೆವೂರು ಇವರಿಂದ ತರಬೇತಿ ಪಡೆಯುತ್ತಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ವಿತ್ತೆ ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಭಾರತ @2047 ಪುಸ್ತಕವನ್ನು ಪ್ರಸ್ತುತ ಪಡಿಸಿದ ರೆಶೆಲ್ ಫೆರ್ನಾಂಡಿಸ್

ಮಂಗಳೂರಿನಲ್ಲಿ ನಡೆದ ಸಿಟಿಜನ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಮಂಗಳೂರಿನ ಲೇಖಕಿ ರೆಶೆಲ್ ಬಿ ಫೆರ್ನಾಂಡಿಸ್ ಅವರು ಅಮೃತಕಾಲದ ಕಾಲದಲ್ಲಿ ಯುವಕರ ಪಾತ್ರವನ್ನು ಆಧರಿಸಿದ ಭಾರತ @2047 ಯುವಜನತೆಯ ಪಾತ್ರ ಎಂಬ ಎರಡನೇ ಪುಸ್ತಕವನ್ನು ಪ್ರಸ್ತುತಪಡಿಸಿದರು.

Scroll to Top