Author name: editor

ಪ್ರಾದೇಶಿಕ ವಾರ್ತೆಗಳು

‘ಯಕ್ಷಾಂಗಣ’ದ ತಾಳಮದ್ದಳೆ ಸಪ್ತಾಹ – ಹಿರಿಯರ ಸಂಸ್ಮರಣೆ. ‘ವಿದ್ವಾನ್ ಕಾಂತ ರೈ ಯಕ್ಷಗಾನ ಮತ್ತು ಮನೆತನಕ್ಕೆ ಕೀರ್ತಿ ತಂದವರು’: ಜಯರಾಮ ಸಾಂತ

ಮಂಗಳೂರು: ‘ಕೊಳ್ನಾಡು ಗ್ರಾಮದ ಕುಳಾಲು ಕುಟುಂಬದಲ್ಲಿ ಜನಿಸಿದ ವಿದ್ವಾನ್ ಕಾಂತ ರೈ ಮೂಡಬಿದಿರೆಯಲ್ಲಿ ವೃತ್ತಿ ಜೀವನವನ್ನು ನಡೆಸುತ್ತಾ ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. ಹಳೆಯ ತಲೆಮಾರಿನ ಅರ್ಥಧಾರಿಯಾಗಿ, ಬಹುಶ್ರುತ ವಿದ್ವಾಂಸರಾಗಿ ಯಕ್ಷಗಾನ ರಂಗದಲ್ಲಿ ಮೆರೆದ ಅವರು ಪ್ರಗತಿಪರ ಕೃಷಿಕರಾಗಿ, ಕುಟುಂಬದ ಯಜಮಾನರಾಗಿ ಹುಟ್ಟಿದ ಮನೆಗೆ ಕೀರ್ತಿ ತಂದ ಮೇರು ವ್ಯಕ್ತಿ’ ಎಂದು ಯಕ್ಷಗಾನ ಹವ್ಯಾಸಿ ಕಲಾವಿದ ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ಕೆ. ಜಯರಾಮ ಸಾಂತ ಹೇಳಿದ್ದಾರೆ.‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುತ್ತಿರುವ 12ನೇ ವರ್ಷದ ಕನ್ನಡ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಅಂಗವಾಗಿ ನ.13ರಂದು ಜರಗಿದ ವಿದ್ವಾನ್ ಕೆ.ಕಾಂತ ರೈ ಮೂಡಬಿದಿರೆ ಅವರ ಸಂಸ್ಮರಣಾ ಸಮಾರಂಭದಲ್ಲಿ ದೀಪ ಪ್ರಜ್ವಲನೆ ಮಾಡಿ ಅವರು ಮಾತನಾಡಿದರು. ಸಂಸ್ಕಾರಯುತ ಸಂಸ್ಮರಣೆ :ಹರೇಕಳ ವಿದ್ಯಾ ಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ.ರವೀಂದ್ರ ರೈ ಕಲ್ಲಿಮಾರು ತಮ್ಮ ಸಂಸ್ಮರಣ ಭಾಷಣದಲ್ಲಿ ‘ಗತಿಸಿ ಹೋದ ಹಿರಿಯರನ್ನು ಸ್ಮರಿಸಿಕೊಳ್ಳುವುದು ಒಂದು ಸಂಸ್ಕಾರಯುತ ಕಾರ್ಯ. ಕಾಂತ ರೈಯವರು ಆದರ್ಶ ಅಧ್ಯಾಪಕರಾಗಿ, ಪ್ರಶಸ್ತಿ ವಿಜೇತ ಕೃಷಿಕರಾಗಿ, ಯಕ್ಷಗಾನದ ಶ್ರೇಷ್ಠ ಅರ್ಥಧಾರಿಯಾಗಿ, ಪ್ರಸಂಗ ಕರ್ತರು ಹಾಗೂ ಸಾಹಿತಿಯಾಗಿ ಉನ್ನತ ವ್ಯಕ್ತಿತ್ವವನ್ನು ಪಡೆದವರು. ಯಕ್ಷಾಂಗಣವು ಪ್ರತಿ ವರ್ಷ ಅವರ ಸಂಸ್ಮರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿದೆ’ ಎಂದು ನುಡಿದರು.ಬೋಳಾರ ಶ್ರೀ ಮಾರಿಯಮ್ಮ ಮಹಿಷ ಮರ್ದಿನಿ ದೇವಾಲಯದ ನಿಕಟಪೂರ್ವ ಆಡಳಿತ ಮೊಕ್ತೇಸರ ತಾರಾನಾಥ ಶೆಟ್ಟಿ ಬೋಳಾರ, ಭಾರತೀಯ ರಿಸರ್ವ್ ಬ್ಯಾಂಕಿನ ನಿವೃತ್ತ ಮಹಾ ಪ್ರಬಂಧಕ ರಾಜಾರಾಮ ಶೆಟ್ಟಿ ಮನವಳಿಕೆ ಗುತ್ತು, ವಿಶ್ರಾಂತ ಏರ್ ಪೋರ್ಟ್ ಅಧಿಕಾರಿ ಆನಂದ ಶೆಟ್ಟಿ ಮಿಜಾರು, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದರು. ಕಾಂತ ರೈಯವರ ಮೊಮ್ಮಗ ವಿಶಾಲಕೀರ್ತಿ ರೈ ಹೊಸಂಗಡಿ ಮೂಡಬಿದ್ರಿ, ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ, ಹರಿಕಥಾ ಪರಿಷತ್ ಅಧ್ಯಕ್ಷ ಕೂಡ್ಲು ಮಹಾಬಲ ಶೆಟ್ಟಿ, ಪ್ರಗತಿಪರ ಕೃಷಿಕ ಸೋಮಶೇಖರ ಚೌಟ, ಶಿಕ್ಷಕ ತ್ಯಾಗಂ ಹರೇಕಳ ಉಪಸ್ಥಿತರಿದ್ದರು.ಯಕ್ಷಾಂಗಣ ಮಂಗಳೂರು ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಅಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪಾಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ವಂದಿಸಿದರು. ಸಮಿತಿ ಸಂಚಾಲಕಿ ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿಗಳಾದ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ ಮತ್ತು ಸುಮಾ ಪ್ರಸಾದ್ ಸಹಕರಿಸಿದರು. ‘ಸೈಂಧವ ವಧೆ’ ತಾಳಮದ್ದಳೆ:ಯಕ್ಷಗಾನ ತಾಳಮದ್ದಳೆ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮವಾಗಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇವರಿಂದ ‘ಸೈಂಧವ ವಧೆ’ ತಾಳಮದ್ದಳೆ ಜರಗಿತು. ಭಾಗವತರಾಗಿ ಮಹೇಶ್ ಕನ್ಯಾಡಿ ಮತ್ತು ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ ಭಾಗವಹಿಸಿದರು. ದಿವಾಕರ ಆಚಾರ್ಯ ಗೇರುಕಟ್ಟೆ, ಅಂಬಾ ಪ್ರಸಾದ್ ಪಾತಾಳ, ಜಯರಾಮ ಭಟ್ ದೇವಸ್ಯ, ಗುಡ್ಡಪ್ಪ ಬಲ್ಯ, ಹರೀಶ್ ಆಚಾರ್ಯ ಉಪ್ಪಿನಂಗಡಿ, ಶ್ರೀಧರ ಎಸ್.ಪಿ. ಸುರತ್ಕಲ್, ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ಅರ್ಥಧಾರಿಗಳಾಗಿದ್ದರು.

ಪ್ರಾದೇಶಿಕ ವಾರ್ತೆಗಳು

ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ. ‘ಅಂಗನವಾಡಿ ಶಿಕ್ಷಕಿಯರ ಸೇವೆಯಿಂದ ಮಕ್ಕಳ ಅಭ್ಯುದಯ’ : ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ರಶ್ಮಿ ಎಸ್.ಆರ್.

ಮಂಗಳೂರು: ಎಳೆಯ ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ನೀಡುತ್ತಿರುವ ಅಂಗನವಾಡಿ ಶಿಕ್ಷಕಿಯರ ಸೇವೆ ಮಕ್ಕಳ ಅಭ್ಯುದಯಕ್ಕೆ ಕಾರಣವಾಗಿದೆ. ಇಂತಹ ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವವೂ ಅಗತ್ಯ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದರು.ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಮಕ್ಕಳ ದಿನಾಚರಣೆ ಹಾಗೂ ಪುಟಾಣಿ ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ ಮಕ್ಕಳ ದಿನಾಚರಣೆಯಂದು ಎಲ್ಲ ಮಕ್ಕಳು ಸಂಭ್ರಮಿಸುವಂತಾಗಬೇಕು . ಯಾವ ಮಗು ಕೂಡಾ ಶಿಕ್ಷಣದಿಂದ ವಂಚಿತರಾಗದಂತೆ ಕಾಳಜಿ ವಹಿಸುವುದು ಮುಖ್ಯ ಎಂದು ಅವರು ಹೇಳಿದರು.ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ ‘ ಮಕ್ಕಳಲ್ಲಿ ದೇವರನ್ನು ಕಾಣುವ ಸಂಸ್ಕಾರ ನಮ್ಮದು. ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿರುವ ಚಟುವಟಿಕೆ ಉತ್ತಮವಾಗಿದೆ ಎಂದರು.ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಕಾಮತ್ ಕ್ಯಾಟರರ್ಸ್ ಮಾಲೀಕ ಸುಧಾಕರ ಕಾಮತ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿದ್ದರು. ಹಿರಿಯ ಪತ್ರಕರ್ತರಾದ ಕೇಶವ ಕುಂದರ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್., ಪತ್ರಕರ್ತರಾದ ಪ್ರೀತಂ ರೈ, ಲಲಿತಾಶ್ರೀ , ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಶಿಕ್ಷಕಿ ನಂದಾ, ಸಹಾಯಕಿ ಲಕ್ಷ್ಮಿ,ಆಶಾ ಕಾರ್ಯ ಕರ್ತೆ ಪ್ರಭಾ ಉಪಸ್ಥಿತರಿದ್ದರು.ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ನಿರಂತರ ಶ್ರಮವಹಿಸಿದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಅವರನ್ನು ಅಂಗನವಾಡಿ ಕೇಂದ್ರದ ಪರವಾಗಿ ಇದೇ ಸಂದರ್ಭ ಸನ್ಮಾನಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ. ‘ಕಲಾವಿದರಿಗೆ ಅಭಿಮಾನಿಗಳ ರಕ್ಷೆ’: ಅರುವ ಕೊರಗಪ್ಪ ಶೆಟ್ಟಿ

ಮಂಗಳೂರು: ‘ಯಕ್ಷಗಾನ ಕ್ಷೇತ್ರದ ಸುಧೀರ್ಘವಾದ ತನ್ನ ಯಾತ್ರೆಯಲ್ಲಿ ಸಾವಿರಾರು ಮಾನ – ಸಮ್ಮಾನಗಳು ಲಭಿಸಿವೆ; ಇದು 1023ನೇ ಸನ್ಮಾನ. ದೇಹದ ಕಸುವು ಕಡಿಮೆಯಾದರೂ ರಂಗಸ್ಥಳದಲ್ಲಿ ಅದು ಅರಿವಿಗೆ ಬರುವುದಿಲ್ಲ; ಕಾರಣ ರಂಗದ ಒಳಗೂ ಹೊರಗೂ ನಮಗೆ ಅಭಿಮಾನಿಗಳ ರಕ್ಷೆ ಇದೆ’ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಹೇಳಿದ್ದಾರೆಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುತ್ತಿರುವ 12ನೇ ವರ್ಷದ ನುಡಿ ಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಅಂಗವಾಗಿ ನ.12ರಂದು ಜರಗಿದ ದಿ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣಾ ಸಮಾರಂಭದಲ್ಲಿ ‘ಬಾಳಪ್ಪ ಶೆಟ್ಟಿ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.‘ಕುಂಡಾವು ಮೇಳದಲ್ಲಿ ಬಾಳಪ್ಪ ಶೆಟ್ಟರು ಜೊತೆಗಿದ್ದಾಗ ಅವರ ಪ್ರಬುದ್ಧ ಹಾಸ್ಯವನ್ನು ಹತ್ತಿರದಿಂದ ಕಂಡಿದ್ದೆ. ಅವರು ಯಾವತ್ತೂ ರಂಗದಲ್ಲಿ ಅಸಂಬದ್ಧವಾಗಿ ಅಪಹಾಸ್ಯವಾಗುವ ರೀತಿಯಲ್ಲಿ ನಡೆದುಕೊಂಡಿರಲಿಲ್ಲ’ ಎಂದು ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.ಸಂಸ್ಮರಣ ಜ್ಯೋತಿ ಬೆಳಗಿದ ಮೂಡುಬಿದಿರೆ ಶ್ರೀ ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಶ್ರೀಪತಿ ಭಟ್ ಮಾತನಾಡಿ ‘ಯಕ್ಷಗಾನವಿಂದು ವಿದ್ಯಾವಂತರ ವಲಯದಲ್ಲೂ ಜನಪ್ರಿಯತೆ ಪಡೆದಿದೆ. ಅನೇಕ ಯುವಕರು,ಮಕ್ಕಳು ಹಾಗೂ ಮಹಿಳೆಯರು ಈ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ತೋರುತ್ತಿದ್ದಾರೆ. ಇದಕ್ಕೆ ಕಾರಣ ಯಕ್ಷಗಾನವನ್ನು ಕಟ್ಟಿ ಬೆಳೆಸಿ ಗತಿಸಿ ಹೋದ ಹಿರಿಯ ಕಲಾವಿದರ ಆದರ್ಶ’ ಎಂದು ನುಡಿದರು. ಶ್ರೇಷ್ಠ ಕಾರ್ಯ: ಡಾ.ದಂಡಕೇರಿಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರು ‘ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ ಅನೇಕ ಕಲಾವಿದರು ಕದ್ರಿ ಕ್ಷೇತ್ರಕ್ಕೆ ಸೇರಿದ್ದಾರೆ. ಇಲ್ಲಿ ಅರುವ ಕೊರಗಪ್ಪ ಶೆಟ್ಟರಂತಹ ಹಿರಿಯರನ್ನು ಪ್ರಶಸ್ತಿ ನೀಡಿ ಗೌರವಿಸಿರುವುದು ಯಕ್ಷಾಂಗಣದ ಶ್ರೇಷ್ಠ ಕಾರ್ಯ’ ಎಂದು ಶ್ಲಾಘಿಸಿದರು. ದಿ.ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷ ಪ್ರತಿಷ್ಠಾನದ ಅಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ತಂದೆಯವರೊಂದಿಗಿನ ತನ್ನ ಬಾಲ್ಯದ ದಿನಗಳನ್ನು ಸ್ಮರಿಸಿದರು. ಶ್ಯಾಮಲಾ ಪದ್ಮನಾಭ ಶೆಟ್ಟಿ ಸನ್ಮಾನ ಫಲಕ ವಾಚಿಸಿದರು.ಅರುವ – ಪುಳಿಂಚ ಅಪೂರ್ವ ಜೋಡಿ:ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ವಕೀಲ ಮತ್ತು ಪುಳಿಂಚ ಪ್ರತಿಷ್ಠಾನದ ಅಧ್ಯಕ್ಷ ಪುಳಿಂಚ ಶ್ರೀಧರ ಶೆಟ್ಟಿ ಅವರು ಮಾತನಾಡುತ್ತಾ ‘ತಮ್ಮ ತಂದೆಯವರಾದ ಪುಳಿಂಚ ರಾಮಯ್ಯ ಶೆಟ್ಟಿ ಮತ್ತು ಅರುವ ಕೊರಗಪ್ಪ ಶೆಟ್ಟರದ್ದು ಅಪೂರ್ವ ಜೋಡಿ. ಕಾಡಮಲ್ಲಿಗೆಯಂಥ ತುಳು ಪ್ರಸಂಗಗಳಲ್ಲಿ ಅವರೀರ್ವರು ಊರು ಮತ್ತು ಮುಂಬೈಗಳಲ್ಲಿ ಕಲಾಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದಾರೆ’ ಎಂದರು. ಸಮಾರಂಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶಕೀಲಾ ಕಾವ ಮತ್ತು ಹಿರಿಯ ಅರ್ಥಧಾರಿ ಎನ್. ಸಂಜೀವ ರೈ ಬೆಟ್ಟಂಪಾಡಿ ಅತಿಥಿಗಳಾಗಿದ್ದರು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಸಂಚಾಲಕ ರವೀಂದ್ರರೈ ಕಲ್ಲಿಮಾರು ಕಾರ್ಯಕ್ರಮ ನಿರೂಪಿಸಿ ಕರುಣಾಕರ ಶೆಟ್ಟಿ ಪಣಿಯೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್, ಸಂಚಾಲಕಿ ನಿವೇದಿತಾ ಎನ್. ಶೆಟ್ಟಿ, ಕಾರ್ಯದರ್ಶಿಗಳಾದ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಸುಮಾ ಪ್ರಸಾದ್ ಹಾಗೂ ಬಾಳಪ್ಪ ಶೆಟ್ಟಿ ಪ್ರತಿಷ್ಠಾನದ ಬೆಟ್ಟಂಪಾಡಿ ಪದ್ಮನಾಭ ಶೆಟ್ಟಿ ಮತ್ತು ಡಾ.ಸೂರಜ್ ಶೆಟ್ಟಿ ಉಪಸ್ಥಿತರಿದ್ದರು.‘ಕಚ – ದೇವಯಾನಿ’ ತಾಳಮದ್ದಳೆ:ಸಪ್ತಾಹದ ಎರಡನೇ ದಿನ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ, ಪುತ್ತೂರು ಇವರಿಂದ ‘ಕಚ-ದೇವಯಾನಿ’ ಯಕ್ಷಗಾನ ತಾಳಮದ್ದಳೆ ಜರಗಿತು.

ಕಲೆ ಸಾಹಿತ್ಯ

ತುಳು ರಂಗಭೂಮಿಗೆ ಒಂದು ಹೊಸತನದ ನಾಟಕ “ಶನಿ ಮಹಾತ್ಮೆ”

ಅದೊಂದು ಭಿನ್ನ ನಾಟಕ. ಶನಿಯ ಕಥೆಯಲ್ಲಿ ಎಷ್ಟೋ ನಾಟಕ, ಯಕ್ಷಗಾನಗಳು ಬಂದಿರಬಹುದು. ಆದರೆ ಲ। ಕಿಶೋರ್‌ ಡಿ. ಶೆಟ್ಟಿ ನೇತೃತ್ವದ ಶ್ರೀಲಲಿತೆ ತಂಡದವರು ಕದ್ರಿ ನವನೀತ ಶೆಟ್ಟಿ ರಚನೆಯಲ್ಲಿ ಜೀವನ್ ಉಳ್ಳಾಲ್ ನಿರ್ದೇಶನದಲ್ಲಿ ನ.10ರಂದು ಸುರತ್ಕಲ್‌ನಲ್ಲಿ ಚೊಚ್ಚಲ ಪ್ರದರ್ಶನ ನೀಡಿರುವ ಶನಿ ಮಹಾತ್ಮೆ ತುಳು ನಾಟಕವು ಈ ಹಿಂದಿನ ಶನಿ ಕಥೆಯಾಧಾರಿತ ಎಲ್ಲ ನಾಟಕ, ಯಕ್ಷಗಾನಗಳಿಗಿಂತಲೂ ಭಿನ್ನವಾಗಿದೆ. ರಂಗಚಾವಡಿ ವಾರ್ಷಿಕ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತುಂಬಿ ತುಳುಕುತ್ತಿದ್ದ ಸುರತ್ಕಲ್‌ನ ಬಂಟರ ಭವನದಲ್ಲಿ ನ. 10ರಂದು ಪ್ರದರ್ಶನಗೊಂಡ ಈ ನಾಟಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲಿರುವ ಹರಿಶ್ಚಂದ್ರ – ಚಂದ್ರಮತಿಯ ದೃಶ್ಯವಂತೂ ಪ್ರೇಕ್ಷಕರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ. ಅಂಥ ಅಭಿನಯ ನೀಡಿರುವ ಚಂದ್ರಮತಿ ಮತ್ತು ಹರಿಶ್ಚಂದ್ರ ಪಾತ್ರಧಾರಿಗಳಿಗೆ ದೊಡ್ಡ ಶಹಬ್ಬಾಸ್‌ ಹೇಳಲೇಬೇಕಾಗಿದೆ.ಈ ನಾಟಕದಲ್ಲಿ ಶನಿ ಕಾಟದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಹಲವಾರು ಪುರಾಣ ಪುರುಷರ ಕಥೆಗಳನ್ನು ಒಪ್ಪ ಓರಣವಾಗಿ ಪ್ರೇಕ್ಷಕರ ಮುಂದೆ ಕಟ್ಟಿ ಕೊಡಲಾಗಿದೆ. ಕದ್ರಿ ನವನೀತ್‌ ಶೆಟ್ಟಿ ರಚನೆಯ ಈ ನಾಟಕದಲ್ಲಿ ಸೂರ್ಯದೇವ, ದೇವಗುರು ಬೃಹಸ್ಪತಿ, ಪರಮೇಶ್ವರ, ನಳ ಮಹಾರಾಜ, ವಿಕ್ರಮಾದಿತ್ಯ, ಹರಿಶ್ಚಂದ್ರ ಮುಂತಾದವರು ಶನಿ ಪ್ರಭಾವದಿಂದ ಪಡುವ ಕಷ್ಟವನ್ನು ಮನಸ್ಪರ್ಶಿಯಾಗಿ ಕಟ್ಟಿ ಕೊಡಲಾಗಿದೆ. ಬೇರೆ ಬೇರೆ ಯುಗದ ಕಥೆಗಳನ್ನು ಹೆಕ್ಕಿ ಒಂದೇ ನಾಟಕದಲ್ಲಿ ತೋರಿಸಿರುವುದು ಈ ನಾಟಕದ ಒಂದು ವಿಶೇಷತೆಯಾಗಿದೆ. ಶನಿಯ ಪಾತ್ರವಂತೂ ಅದ್ಭುತವಾಗಿತ್ತು. ಅಜಾನುಬಾಹು ದೇಹದ ಶನಿಯ ಅಟ್ಟಹಾಸ ಪ್ರೇಕ್ಷಕರಲ್ಲಿ ಒಂದು ರೀತಿಯ ಭಯಭಕ್ತಿ ಮೂಡುವಂತೆ ಮಾಡಿತ್ತು.ಈ ನಾಟಕದ ಇನ್ನೊಂದು ಪ್ರಮುಖ ಅಂಶವೆಂದರೆ ಅತ್ಯಾಕರ್ಷಕ ರಂಗಾಲಂಕಾರ. ಕಾಗೆಯನ್ನೇರಿ ಶನಿ ಸಂಚರಿಸುವುದು, ರಥದಲ್ಲಿ ಸೂರ್ಯನ ಸಂಚಾರ, ಗೋಡೆಯಲ್ಲಿ ತೂಗಿ ಹಾಕಲಾಗಿದ್ದ ಹಂಸದ ಚಿತ್ರಪಟ ಮುತ್ತಿನ ಹಾರವನ್ನು ನುಂಗುವುದು ಮುಂತಾದ ಕೆಲವು ದೃಶ್ಯಗಳು ಅತ್ಯುದ್ಭುತವಾಗಿದ್ದವು. ನಂದಿಶ್ರೇಷ್ಠಿಯ ಪುತ್ರಿಯ ನೃತ್ಯವೂ ಆಕರ್ಷಕವಾಗಿತ್ತು. ವಿಕ್ರಮಾದಿತ್ಯ, ಹನುಮಂತನ ಪಾತ್ರವೂ ಮನಸ್ಪರ್ಶಿಯಾಗಿತ್ತು. ನಾಟಕದಲ್ಲಿ ಕೆಲವು ಹಾಡುಗಳಿದ್ದು, ಅವು ಕಿವಿಗೆ ಇಂಪು ನೀಡುವಲ್ಲಿ ಸಫಲವಾಗಿವೆ. ಜತೆಗೆ ಬಹುತೇಕ ದೃಶ್ಯಗಳಲ್ಲಿ ಆಕರ್ಷಕ ಸಂಗೀತವೂ ಇದ್ದುದರಿಂದ ಇದೊಂದು ಸಂಗೀತಮಯ ನಾಟಕದ ರೂಪದಲ್ಲೂ ಇತ್ತು. ಅದು ಕೂಡ ಪ್ರೇಕ್ಷಕರಿಗೆ ಖುಷಿ ಕೊಟ್ಟಿದೆ. ಸಂಭಾಷಣೆಯನ್ನು ಧ್ವನಿ ಮುದ್ರಿಸಿಕೊಳ್ಳಲಾಗಿದ್ದರೂ ಎಲ್ಲೂ ಹಾಗೆ ಅನಿಸಲೇ ಇಲ್ಲ. ಎಲ್ಲವೂ ಪಾತ್ರಧಾರಿಗಳು ಮಾತನಾಡುವಂತೆಯೇ ನೈಜವಾಗಿತ್ತು. ಕಿವಿಗೆ ಬಡಿಯುವಂತೆ ಅಟ್ಟಹಾಸ, ಅತಿಯಾದ ಏರು ಸ್ವರದ ಕಿರಿಕಿರಿ ಇಲ್ಲದಿರುವುದು ಕೂಡ ಒಂದು ಪ್ಲಸ ಪಾಯಿಂಟ್‌. ರಂಗಾಲಂಕಾರದ ಜತೆಗೆ ಬೆಳಕಿನ ವ್ಯವಸ್ಥೆಯೂ ಅತ್ಯುತ್ತಮವಾಗಿತ್ತು.ನಾಟಕಕ್ಕೆ ಜೀವನ್‌ ಉಳ್ಳಾಲ್‌ ಅವರು ನಿರ್ದೇಶನ ನೀಡಿದ್ದು, ವಸಂತ್ರಲಂಕಾರ ಲಲಿತ ಅವರದ್ದಾಗಿದೆ. ಪಟ್ಲ ಸತೀಶ್ ಶೆಟ್ರ “ರುದ್ರ ರೂಪದ ಭದ್ರ ಕಾಯೊದ ಛಾಯಾಪುತ್ರೆ ಶನಿರಾಜೆ” ಹಾಡು ನಾಟಕದ ಹೈಲೈಟ್ಸ್ ಆಗಿದೆ.ನಾಟಕದ ಬಹುತೇಕ ಎಲ್ಲ ಪಾತ್ರಗಳಿಗೂ ಕಲಾವಿದರು ಅತ್ಯಂತ ಸೂಕ್ತ ರೀತಿಯಲ್ಲಿ ನ್ಯಾಯ ನೀಡಿದ್ದು, ಯಾರದ್ದೂ ಕಳಪೆ ಎನ್ನುವಂಥ ಪ್ರದರ್ಶನ ಇರಲೇ ಇಲ್ಲ. ಚೊಚ್ಚಲ ಪ್ರದರ್ಶನವಾಗಿದ್ದರೂ ಎಲ್ಲೂ ಮೊದಲ ಪ್ರದರ್ಶನ ಎಂದು ಅನಿಸಲೇ ಇಲ್ಲ. ಇದು ಇನ್ನಷ್ಟು ಪ್ರದರ್ಶನ ನೀಡಿದ ಬಳಿಕ ಮತ್ತಷ್ಟು ಉತ್ತಮವಾಗಿ ಒಂದು ಅತ್ಯಂತ ಶ್ರೇಷ್ಠ ಮಟ್ಟದ ನಾಟಕವಾಗಿ ತುಳು ರಂಗಭೂಮಿಗೆ ಒಂದು ದೊಡ್ಡ ಕೊಡುಗೆ ನೀಡುವುದರಲ್ಲಿ ಸಂದೇಹವೇ ಇಲ್ಲ.

ಪ್ರಾದೇಶಿಕ ವಾರ್ತೆಗಳು

71 ನೇ ಅಖಿಲ ಭಾರತ ಸಹಕಾರ ಸಪ್ತಾಹಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪ್ರಶಸ್ತಿ

ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆ ಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನ ದಲ್ಲಿ ನಡೆಯುವ 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಜೂನಿಯರ್ ಚೇಂಬರ್ ಔಟ್ಸ್ ಸ್ಟ್ಯಾಂಡಿಂಗ್ ಯಂಗ್ ಅಚೀವರ್ಸ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

“ಹೆತ್ತವರು, ಪೋಷಕರು ಮಕ್ಕಳ ಮೇಲೆ ನಿಗಾ ಇರಿಸಬೇಕು”-ಸ್ಪೀಕರ್ ಯು.ಟಿ.ಖಾದರ್.“ ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಮಾದಕ ದ್ರವ್ಯ ವ್ಯಸನದಿಂದ ಮುಕ್ತರಾಗುವುದು ಸುಲಭದ ಮಾತಲ್ಲ. ಯಾಕೆಂದರೆ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಟ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಆದ್ದರಿಂದ ಇದನ್ನು ತಡೆಯಲು ಸಮಾಜದ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ಹೆತ್ತವರು, ಮನೆಯವರು ಮಕ್ಕಳ ಮೇಲೆ ನಿಗಾ ಇರಿಸಬೇಕು. ಪೊಲೀಸ್ ಇಲಾಖೆಯಲ್ಲಿ ಟೆಸ್ಟಿಂಗ್ ಕಿಟ್ ಸಿಗುತ್ತದೆ ಅದನ್ನು ಮನೆಯಲ್ಲಿಟ್ಟು ತಿಂಗಳಿಗೊಮ್ಮೆ ಪರೀಕ್ಷೆ ಮಾಡುವುದು ಯಾಕೆ ಕಷ್ಟ? ಈ ನಿಟ್ಟಿನಲ್ಲಿ ಜನಜಾಗೃತಿಯಾಗಬೇಕು. ಪ್ರತೀ ಕಾಲೇಜಿನಲ್ಲಿ ಇಂತಹ ಟೆಸ್ಟಿಂಗ್ ನಡೆದಾಗ ಮಕ್ಕಳು ಮಾದಕ ದ್ರವ್ಯ ಸೇವಿಸಲು ಭಯ ಪಡುತ್ತಾರೆ. ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ಇದ್ದಲ್ಲಿ ಸಂಬಂಧಪಟ್ಟವರಿಗೆ ಕೊಡಿ ಇದರಿಂದ ಸ್ವಸ್ಥ ಸಮಾಜವನ್ನು ಕಟ್ಟಬಹುದು“ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಮಾತಾಡಿ, “ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಬೇಡಿಕೆಯೂ ಹೌದು. ನಾನು ಮೊದಲ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದೆ. ಇಂದು ಪಂಜಾಬ್ ರಾಜ್ಯವನ್ನು ಡ್ರಗ್ಸ್ ದಂಧೆ ಬೆಂಬಿಡದೆ ಕಾಡುತ್ತಿದೆ. ಅಷ್ಟು ಭೀಕರವಾಗಿ ದಂಧೆ ಎಲ್ಲೆಡೆ ಹರಡಿದೆ. ಗಡಿಯಲ್ಲಿರುವ ಸೈನಿಕನಷ್ಟೇ ದೇಶವನ್ನು ಉಳಿಸುವ ಜವಾಬ್ದಾರಿ ಈ ಮಾದಕ ದ್ರವ್ಯ ವ್ಯಸನದ ವಿರುದ್ಧ ಹೋರಾಡುವವರದ್ದು. ಇದು ದೇವರು ಮೆಚ್ಚುವ ಕೆಲಸ. ಇಂತಹ ಕಾರ್ಯಕ್ರಮಕ್ಕೆ ಮಂಗಳೂರು ಮಾದರಿಯಾಗಬೇಕು“ ಎಂದರು.ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, “ನಮ್ಮ ದೇಶವನ್ನು ನಾಶ ಮಾಡುವ ದುಷ್ಟ ಷಡ್ಯಂತ್ರ ಮಾದಕ ದ್ರವ್ಯ ವ್ಯಸನದಿಂದ ನಡೆಯುತ್ತಿದೆ. ಇದನ್ನು ತಡೆಯಲು ಮನೆಯಲ್ಲಿ ಸಮಾಜದಲ್ಲಿ ಜಾಗೃತಿಯಾಗಬೇಕು. ಮಾದಕ ದ್ರವ್ಯ ಸೇವನೆ, ಮಾರಾಟ ಕುರಿತು ಮಾಹಿತಿ ಇದ್ದಲ್ಲಿ ಸಂಬಂಧಪಟ್ಟವರಿಗೆ ನೀಡಬೇಕು. ಎಲ್ಲರೂ ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಬೇಕು” ಎಂದರು. ಮಂಗಳೂರು ಮೇಯರ್ ಮನೋಜ್ ಕುಮಾರ್ ಮಾತನಾಡಿ, “ಯುವಜನತೆಯನ್ನು ವ್ಯವಸ್ಥಿತವಾಗಿ ಹಾಳು ಮಾಡುವ ಮಾದಕ ದ್ರವ್ಯ ವ್ಯಸನದ ವಿರುದ್ಧ ಹೋರಾಟ ನಿರಂತರವಾಗಿರಬೇಕು” ಎಂದರು.ವೇದಿಕೆಯಲ್ಲಿ ಸಂಚಾಲಕ ವಸಂತ ಶೆಟ್ಟಿ, ಮಂಗಳೂರು ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂ‌ರು, ಆಶಾಜ್ಯೋತಿ ರೈ, ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ, ಎಸ್.ಡಿ.ಎಂ. ಕಾನೂನು ಕಾಲೇಜು ಪ್ರಾಂಶುಪಾಲ ಡಾ. ತಾರಾನಾಥ, ತಪಸ್ಯ ಫೌಂಡೇಶನ್ ಅಧ್ಯಕ್ಷೆ ಸಬಿತಾ ಆರ್. ಶೆಟ್ಟಿ, ಎಕ್ಕಾರ್ ರತ್ನಾಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಸಬಿತಾ ಆರ್. ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.ಪುಷ್ಪರಾಜ್ ಧನ್ಯವಾದ ಸಮರ್ಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮದುವೆ ಹಾಲ್ ಬುಕ್ಕಿಂಗ್ ಮಾಡುವಾಗ ಕ್ಯಾಟರಿಂಗ್‍ನವರ ಲೈಸನ್ಸ್ ಪ್ರತಿ ಕಡ್ಡಾಯಗೊಳಿಸುವ ಕ್ರಮ ಶೀಘ್ರ ಜಾರಿಯಾಗಲಿ – ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿಕೆ.

ಮಂಗಳೂರು: ಮದುವೆ ಹಾಲ್ ಬುಕ್ಕಿಂಗ್ ಮಾಡುವಾಗ ಹಾಲ್‍ನವರು ಕ್ಯಾಟರಿಂಗ್‍ನವರು ಯಾರು ಎಂದು ಕೇಳುತ್ತಾರೆ. ಈ ಸಂದರ್ಭದಲ್ಲಿ ಕ್ಯಾಟರಿಂಗ್‍ನವರ ಹೆಸರು ಬರೆಸಿಕೊಳ್ಳುವಾಗ ಲೈಸನ್ಸ್ ಪ್ರತಿಯನ್ನು ಕೂಡಾ ಹಾಜರು ಪಡಿಸುವಂತೆ ನಿಯಮ, ಪದ್ಧತಿಯನ್ನು ಮದುವೆ ಹಾಲ್‍ನವರು ಕಡ್ಡಾಯವಾಗಿ ಜಾರಿಗೊಳಿಸುವ ಕ್ರಮವನ್ನು ಮಾಡಬೇಕು. ಹಾಗದಲ್ಲಿ ಮಾತ್ರ ಅನಧಿಕೃತ ಕ್ಯಾಟರಿಂಗ್‍ನವರಿಗೆ ಕಡಿವಾಣ ಹಾಕಲು ಸಾಧ್ಯ ಎಂದು ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ)ದ ಅಧ್ಯಕ್ಷ ಅಬ್ದುಲ್ ರಶೀದ್‍ರವರು ತಿಳಿಸಿದ್ದಾರೆ.Mp mla’s ನ್ಯೂಸ್ ಜೊತೆ ಮಾತನಾಡಿದ ಅವರು ಶುಭ ಕಾರ್ಯ ಮಾಡುವವರು ಲೈಸನ್ಸ್ ಹೊಂದಿದ ಕ್ಯಾಟರಿಂಗ್‍ನ್ನೇ ಬುಕ್ ಮಾಡಬೇಕೆಂದು ಎಂದಿದ್ದಾರೆ. ಒಂದು ವೇಳೆ ಫುಡ್ ಪಾಯಿಸನ್ ಸಂಭವಿಸಿದರೆ ಹಾಲ್‍ನವರು ಜವಾಬ್ದಾರಿಯಾಗುತ್ತಾರಾ? ಅಂತಹ ಸಂದರ್ಭದಲ್ಲಿ ಎಲ್ಲರೂ ಬೊಟ್ಟು ಮಾಡಿ ತೋರಿಸುವುದು ಅದಕ್ಕೆ ಕಾರಣರಾದ ಕ್ಯಾಟರಿಂಗನ್ನು. ಈ ಕಾರಣಕ್ಕೆ ಸಾರ್ವಜನಿಕರು ಪರವಾನಿಗೆ ಹೊಂದಿರುವ ಅಧಿಕೃತ ಕ್ಯಾಟರಿಂಗ್‍ಗಳಿಗೆ ಆರ್ಡರ್ ಕೊಡಬೇಕು. ಹಾಗಾದಲ್ಲಿ ಮಾತ್ರ ಅಂತಹ ಸಂದರ್ಭದಲ್ಲಿ ಸಂಘ ಮಧ್ಯಪ್ರವೇಶಿಸಿ ಗ್ರಾಹಕರಿಗೆ ನ್ಯಾಯದೊರಕಿಸಿಕೊಡಲು ಸಾಧ್ಯ ಎಂದು ಅಬ್ದುಲ್ ರಶೀದ್‍ರವರು ಹೇಳಿದ್ದಾರೆ.ಈ ಬಗ್ಗೆ ಈಗಾಗಲೇ ಮದುವೆ ಹಾಲ್‍ಗಳ ಮಾಲಕರ ಸಂಘದ ಜೊತೆ ಮಾತಾಡಲಾಗಿದ್ದು, ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆಯ ಕಮೀಷನರ್ ರವರ ಗಮನಕ್ಕೂ ತರಲಾಗಿದೆ. ಮದುವೆ ಹಾಲ್‍ಗಳ ಮಾಲಕರ ಸಭೆ ಕರೆದು ಕ್ಯಾಟರಿಂಗ್‍ನವರು ಕಡ್ಡಾಯವಾಗಿ ಲೈಸನ್ಸ್ ಪ್ರತಿಯನ್ನು ಹಾಜರುಪಡಿಸಲೇಬೇಕಾದ ನಿಯಮ, ಪದ್ಧತಿಯನ್ನು ಅನುಷ್ಟಾನಗೊಳಿಸುವತ್ತ ನಮ್ಮ ಸಂಘ ಸತತ ಪ್ರಯತ್ನ ಮಾಡುತ್ತದೆ. ಅನಧಿಕೃತ ಕ್ಯಾಟರಿಂಗ್ ಹಾವಳಿಯನ್ನು ಸಂಪೂರ್ಣವಾಗಿ ಮಟ್ಟಹಾಕುವಲ್ಲಿ ಸಾರ್ವಜನಿಕರ, ಅಧಿಕಾರಿಗಳ, ಮದುವೆ ಹಾಲ್‍ಗಳ ಮಾಲಕರ ಪರಸ್ಪರ ಸಹಕಾರ ಅತ್ಯಗತ್ಯವಾಗಿದೆ. ಒಟ್ಟಾರೆಯಾಗಿ ಹೇಳುವುದಾದರೆ, ಮದುವೆ ಹಾಲ್ ಬುಕ್ ಮಾಡುವಾಗ ಕ್ಯಾಟರಿಂಗ್‍ಗಳ ಲೈಸನ್ಸ್ ಪ್ರತಿ ಹಾಜರುಪಡಿಸುವಿಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸುವ ಕ್ರಮ ಜಾರಿಯಾಗಲಿ ಎಂದು ಅಬ್ದುಲ್ ರಶೀದ್‍ರವರು ಹೇಳಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಆಳ್ವಾಸ್‌ಗೆ 19ನೇ ಬಾರಿಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ತಂಡವನ್ನು 35-20, 35-5 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ತಂಡವನ್ನು 35-12, 35-10 ಅಂಕಗಳಿAದ ಸೋಲಿಸಿ 19ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಆಳ್ವಾಸ್ ಬಾಲಕರ ವಿಭಾಗದಲ್ಲಿ ಆಕಾಶ್ ಉತ್ತಮ ರಕ್ಷಣಾಕಾರ, ಲಿಖಿತ್ ಉತ್ತಮ ಆಕ್ರಮಣಕಾರ ಹಾಗೂ ಬಾಲಕಿಯರ ವಿಭಾಗದಲ್ಲಿ ಲಾಂಛನ ಉತ್ತಮ ರಕ್ಷಣಾಕರ‍್ತಿ, ಶಾಲಿನಿ ಉತ್ತಮ ಆಕ್ರಮಣಕಾರ್ತಿ ಪ್ರಶಸ್ತಿ ಪಡೆದರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಅವಳಿ ಪ್ರಶಸ್ತಿ, ಯೆನೆಪೋಯ ಪ್ರಶಸ್ತಿ.

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿAಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರು ಇವರ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಮತ್ತು ದೇಹದಾಢ್ಯ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಆಳ್ವಾಸ್ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿತು. ವೇಯ್ಟ್ ಲಿಫ್ಟಿಂಗ್ ನಲ್ಲಿ ದ್ವಿತೀಯ ಸ್ಥಾನವನ್ನು ಎನ್‌ಎಮ್‌ಎಎಮ್‌ಐಟಿ ನಿಟ್ಟೆ, ತೃತೀಯ ಸ್ಥಾನವನ್ನು ಯೆನಪೋಯ ಮೂಡುಬಿದಿರೆ ಇವರು ಪಡೆದುಕೊಂಡರು. ಬಾಲಕಿಯರ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಯೆನೆಪೋಯ ಇಂಜಿನಿಯರಿAಗ್ ಮತ್ತು ತಾಂತ್ರಿಕ ಕಾಲೇಜು ಮೂಡುಬಿದಿರೆ, ದ್ವಿತೀಯ ಸ್ಥಾನವನ್ನು ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರು, ತೃತೀಯ ಸ್ಥಾನವನ್ನು ಎನ್‌ಐಇ ಮೈಸೂರು ಪ್ರಶಸ್ತಿಯನ್ನು ಪಡೆಯಿತು. ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಕೆಎಲ್‌ಎಸ್ ಗೋಗಟೆ ತಾಂತ್ರಿಕ ಕಾಲೇಜು ಬೆಳಗಾವಿ, ತೃತೀಯ ಸ್ಥಾನವನ್ನು ಜಿಎಮ್ ತಾಂತ್ರಿಕ ಕಾಲೇಜು, ದಾವಣಗೆರೆ ಪಡೆದುಕೊಂಡಿತು. ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸಿನ ಭರತ್ ಪ್ರಶಸ್ತಿಯನ್ನು ಪಡೆದರು.ಬಹುಮಾನ ವಿತರಣಾ ಸಮಾರಂಭದಲ್ಲಿ ಆಳ್ವಾಸ್ ಇಂಜಿನಿಯರಿAಗ್ ಮತ್ತು ತಾಂತ್ರಿಕ ಕಾಲೇಜು ಮಿಜಾರಿನ ಪ್ರಾಂಶುಪಾಲರಾದ ಡಾ. ಪೀಟರ್ ಫೆರ್ನಾಂಡಿಸ್, ವಿಟಿಯು ವೀಕ್ಷಕರಾಗಿ ನಿಟ್ಟೆ ಕಾಲೇಜಿನ ಶ್ಯಾಮ್ ಸುಂದರ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024

ಮೂಡುಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ.ಮಹಾದೇವಪ್ಪ ಹೇಳಿದರು.ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್‌ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ ಸುಂದರ ನಾಯ್ಕ ವೇದಿಕೆಯಲ್ಲಿ ಭಾನುವಾರ ನಡೆದ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024 ಉದ್ಘಾಟಿಸಿ ಅವರು ಮಾತನಾಡಿದರು.ಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟಬಾಬಾ ಸಾಹೇಬರ ಮಂತ್ರ- ಶಿಕ್ಷಣ, ಸಂಘಟನೆ ಹಾಗೂ ಹೋರಾಟ. ಶಿಕ್ಷಿತರಾಗುವ ಮೂಲಕ ಸಂಘಟಿತ ಹೋರಾಟ ಸಾಧ್ಯ. ಆ ಮೂಲಕ ನಮ್ಮ ನಿರ್ದಿಷ್ಟ ಬೇಡಿಕೆಗಳು ಇಡೇರುತ್ತವೆ. ಹೋರಾಟ ವ್ಯಕ್ತಿತ್ವ, ನೈತಿಕತೆ ಹಾಗೂ ಚರಿತ್ರೆಯನ್ನು ನಿರ್ಮಾಣ ಮಾಡಬಲ್ಲದು ಎಂದು ಅಂಬೇಡ್ಕರ್ ನಂಬಿದ್ದರು. ನಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಬಾಬಾ ಸಾಹೇಬರು ರಚಿಸಿದ ಸಂವಿಧಾನದಲ್ಲಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದರು. ‘ಸಾವಿರಾರು ದೇವರುಗಳು ನಮ್ಮ ಬಂಧನವನ್ನು ಬಿಡಿಸಲು ಸಾಧ್ಯವಾಗದೆ ಇದ್ದಾಗ, ಸಂವಿಧಾನ ಕೊಟ್ಟಿರುವ ಮೀಸಲಾತಿ ನಮ್ಮ ಬಂಧನವನ್ನು ಬಿಡಿಸಿತ್ತು. ಸಂವಿಧಾನ ನಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ಸಾಮಾರ್ಥ್ಯವನ್ನು ಹೊಂದಿದೆ ಎಂದು ಅಂದು ಅಂಬೇಡ್ಕರ್ ನುಡಿದ ಮಾತುಗಳನ್ನು ಪುನರುಚ್ಚಿಸಿದರು’.ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯಲ್ಲಿ ಗ್ಯಾರಂಟಿ ಯೋಜನೆನಮ್ಮ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳು ಸಂವಿಧಾನದ ಸಿದ್ದಾಂತಗಳ ಅಡಿಯಲ್ಲಿ ನಿರ್ಮಾಣಗೊಂಡಿವೆ. ಅವು ಯಾವುದೇ ಧರ್ಮ ಜಾತಿಗೆ ಸೀಮಿತವಾಗಿಲ್ಲ. ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯ ಅಡಿಯಲ್ಲಿ ಅವುಗಳನ್ನು ಜಾರಿಗೊಳಿಸಲಾಗಿದೆ. ಇದು ದೇಶದಲ್ಲಿ ಮಾತ್ರವಲ್ಲದೆ, ಇಡೀ ಜಗತ್ತಿನಲ್ಲೆ ಮೊದಲ ಬಾರಿ ಇಂತಹ ಯೋಜನೆಗಳನ್ನು ಜಾರಿಗೊಳಿಸಿದ ಹಿರಿಮೆ ನಮ್ಮ ಸರ್ಕಾರದು ಎಂದರು.ಮರಾಟಿ ಸಮುದಾಯದ 17 ಬೇಡಿಕೆಗಳು ಈಡೇರಿಸಲು ಪ್ರಯತ್ನಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.ಗದ್ದಿಗೆ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಕರಾವಳಿ ಮರಾಟಿ ಸಮಾವೇಶ ನಮ್ಮ ಆವರಣದಲ್ಲಿ ಜರಗುತ್ತಿರುವುದು ಸಂತಸದ ವಿಷಯ. ನಮ್ಮ ಶಿಕ್ಷಣ ಪ್ರತಿಷ್ಠಾನ ಸದಾ ಸಮಾಜದ ಪರಿಕಲ್ಪನೆಯಲ್ಲಿ ಕರ‍್ಯನಿರ್ವಹಿಸುತ್ತಾ ಬಂದಿದೆ. ಮರಾಟಿ ಸಮಾಜ ಸದಾ ಹೋರಾಟ ಹಾಗೂ ಸ್ವಾಭಿಮಾನದ ಮೂಲಕ ಬದುಕಿದವರು ಎಂಬುದು ಅವರ ಇತಿಹಾಸದ ಮೂಲಕ ತಿಳಿಯುತ್ತದೆ. ನಾವು ಯಾವುದೇ ಜಾತಿ ಧರ್ಮದವರಾಗಿದ್ದರೂ, ನಾವು ಈ ಸಮಸ್ತ ಸಮಾಜದ ಭಾಗ ಹಾಗೂ ಈ ದೇಶದ ಪ್ರಜೆ ಎಂಬ ನಮ್ಮಲ್ಲಿ ಸದಾ ಜಾಗೃತವಾಗಿರಬೇಕು ಎಂದರು.ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದ ಮೂಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಎ ಕೋಟ್ಯಾನ್, ಸಮಾವೇಶ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸಮುದಾಯದ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ವಿದ್ಯೆಗೆ ಯಾವುದೇ ಜಾತಿ, ಧರ್ಮದ ಗಡಿಗಳಿಲ್ಲ. ಪ್ರತಿಯೊಬ್ಬರೂ ವಿದ್ಯಾವಂತರಾಗುವAತೆ ಪ್ರತಿ ಸಮಾಜ ಶ್ರಮಿಸಬೇಕು ಎಂದರು.ಕರ‍್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಮ್ಮು ಕಾಶ್ಮೀರ ಸರಕಾರದ ಪ್ರಧಾನ ಕರ‍್ಯದರ್ಶಿ ಹಾಗೂ ಕರಾವಳಿ ಮರಾಟಿ ಸಮಾವೇಶದ ಅಧ್ಯಕ್ಷ ರಾಜೇಶ್ ಪ್ರಸಾದ, ದೇಶ ಸ್ವಾತಂತ್ರ‍್ಯ ಪಡೆದು ಏಳು ದಶಕವಾದರೂ ಮರಾಟಿ ಸಮಾಜ ಹಿಂದುಳಿದಿದೆ. ನಮ್ಮ ಸಮಾಜದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ನಾವು ಮುಖ್ಯ ವಾಹಿನಿಗೆ ಬರಲು ಶಿಕ್ಷಣ ನಮಗಿರುವ ಪ್ರಮುಖ ಅಸ್ತç ಎಂದರು.ಗದ್ದಿಗೆ ಸ್ಮರಣ ಸಂಚಿಕೆಯನ್ನು ಡಾ ಎಂ ಮೋಹನ ಆಳ್ವ ಬಿಡುಗಡೆಗೊಳಿಸಿದರು. ಕರ‍್ಯಕ್ರಮದಲ್ಲಿ ಪ್ರಮುಖ ಮೂರು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಯಿತು. ಮೊದಲನೆ ಗೋಷ್ಠಿಯಲ್ಲಿ ಶಿಕ್ಷಣ ಮತ್ತು ಯುವಜನತೆ ವಿಷಯದ ಕುರಿತು ಡಾ ಎಂ ಮೋಹನ್ ಆಳ್ವ ಮಾತನಾಡಿದರು. ಎರಡನೇ ಗೋಷ್ಠಿಯಲ್ಲಿ ಮರಾಟಿಗರ ಆಚಾರ ವಿಚಾರ ಮತ್ತು ಸಂಸ್ಕಾರ ವಿಷಯದ ಕುರಿತು ನ್ಯಾಯವಾದಿ ಎನ್‌ಎಸ್ ಮಂಜುನಾಥ ವಿಷಯ ಮಂಡಿಸಿದರು. ಕೊನೆಯ ಗೋಷ್ಠಿ ಮರಾಟಿಗರ ಸಮಸ್ಯೆ ಮತ್ತ ಸವಾಲುಗಳು ಕುರಿತು ಉಚ್ಛನ್ಯಾಲಯದ ನ್ಯಾಯವಾದಿ ಪ್ರವೀಣಕುಮಾರ ಮುಗುಳಿ ಮಾತನಾಡಿದರು. ಮರಾಟಿ ಭಾಷೆ ಉಳಿಸುವುದು ಮತ್ತು ಬೆಳೆಸುವುದು ವಿಷಯದಲ್ಲಿ ದೈಹಿಕ ಶಿಕ್ಷಕಿ ರತಿ ಪ್ರಭಾಕರ ನಾಯ್ಕ ಉಪನ್ಯಾಸ ನೀಡಿದರು. ಪದ್ಮಶ್ರೀ ರಾಷ್ಟç ಪ್ರಶಸ್ತಿ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕರನ್ನು ಸನ್ಮಾನಿಸಲಾಯಿತು.ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಬರೋಡಾ ಶಶಿಧರ ಶೆಟ್ಟಿ, ಕೇಂದ್ರ ಸರ್ಕಾರದ ನಿವೃತ್ತ ಕೃಷಿ ನಿರ್ದೇಶಕ ಡಾ.ಬಿ.ಜಿ.ನಾಯ್ಕ, ಬೆಂಗಳೂರು ಮರಾಟಿ ಸಂಘದ ಅಧ್ಯಕ್ಷೆ ಶೋಭಾವತಿ ಎಂ.ಟಿ., ದಕ್ಷಿಣ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ವಿಶ್ವನಾಥ ನಾಯ್ಕ, ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ ಕೆದಿಲ, ಸಮ್ಮೇಳನದ ಸಂಚಾಲಕ ಡಾ.ಬಾಲಕೃಷ್ಣ ಸಿ.ಎಚ್., ಕೂಡ್ಲಿ ಮರಾಟಿ ಸಮಾಜದ ಅಧ್ಯಕ್ಷ ರಾಮಚಂದ್ರ ನಾಯ್ಕ್, ಕೆ. ಚಂದ್ರಶೇಖರ ನಾಯ್ಕ್, ಎಸ್. ಎಸ್. ಪರಮೇಶ್ವರ, ಸಮ್ಮೇಳನದ ಸಹಸಂಚಾಲಕ ಪ್ರಕಾಶ್ ನಾಯ್ಕ ಮೊದಲಾದವರು ಇದ್ದರು. ಸಮ್ಮೇಳನದ ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ ಅವರು ಮನವಿ ವಾಚಿಸಿದರು.ಮರಾಟಿ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕರ‍್ಯಕ್ರಮಗಳು ಜರುಗಿದವು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ವಿಶೇಷ ವೈವಿಧ್ಯಮಯ ಕರ‍್ಯಕ್ಮ ನಡೆಯಿತು.ಸಮಾವೇಶದ ಗೌರವಾಧ್ಯಕ್ಷ ಡಾ.ಕೆ.ಸುಂದರ ನಾಯ್ಕ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶಂಕರ ನಾಯ್ಕ ವಂದಿಸಿದರು. ಉಪನ್ಯಾಸಕ ಪ್ರಕಾಶ ನಾಯ್ಕ ನಿರೂಪಿಸಿದರು.

Scroll to Top