Author name: editor

ಪ್ರಾದೇಶಿಕ ವಾರ್ತೆಗಳು

ಮಾನವತೆಯ ಮಹಾ ಬೆಳಕು: ಸ್ವಾಮಿ ವಿವೇಕಾನಂದರು: ಕು. ಅಕ್ಷಯಾ ಗೋಖಲೆ. ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತನೇ ಉಪನ್ಯಾಸ

“ಸ್ವಾಮಿ ವಿವೇಕಾನಂದರು ಭಾರತದ ಮಾನವೀಯತೆಯ ಹಾಗೂ ಪ್ರಜ್ಞೆಯ ಶಾಶ್ವತ ಬೆಳಕಾಗಿ ಉಳಿದಿದ್ದಾರೆ. ಇಡೀ ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಸನಾತನ ಧರ್ಮದ ಮಹತ್ವವನ್ನು ಪರಿಚಯಿಸಿದ ಈ ಮಹಾನ್ ಯೋಗಿ, ತನ್ನ ಸಂದೇಶಗಳಿAದ ಜನರ ಮನಸ್ಸಿನಲ್ಲಿ ಹೊಸ ಹುಮ್ಮಸ್ಸು ಉಂಟುಮಾಡಿದರು. “ಉತ್ತಿಷ್ಠತ, ಜಾಗ್ರತ!” ಎಂಬ ನಿನಾದದಲ್ಲಿ ಪ್ರತಿಫಲಿಸಿದಂತೆ ಅವರು ಜೀವನದ ಪ್ರತಿ ಕ್ಷಣವನ್ನು ಸಾರ್ಥಕತೆಯಿಂದ, ಸಾಧನೆಯ ದಾರಿಗೆ ಬೆಳೆಸಲು ಪ್ರೇರೇಪಿಸಿದರು”.ಸ್ವಾಮಿ ವಿವೇಕಾನಂದರು ದೈವಸಾಕ್ಷಾತ್ಕಾರವನ್ನು ಮಾತ್ರವಲ್ಲ, ಮಾನವ ಸೇವೆಯನ್ನು ಸಹ ಪ್ರಧಾನ ಧರ್ಮವೆಂದು ಸಾರಿದರು. “ನೀವು ಬಡವರ ಸೇವೆ ಮಾಡುತ್ತಿರುವಾಗ, ಆ ದೇವರೇ ನಿಮ್ಮ ಮುಂದೆ ನಿಂತಿರುವರು” ಎಂಬ ಅವರ ಸಂದೇಶ, ಧರ್ಮವನ್ನು ಕೇವಲ ದೇವಾಲಯದ ಭಿತ್ತಿಗಳ ಒಳಗೆ ಮಾತ್ರವಲ್ಲ, ಸಾಮಾಜಿಕ ಜೀವನದ ಪ್ರತಿಯೊಂದು ಅಂಶದಲ್ಲೂ ಪ್ರತಿಷ್ಠಾಪಿಸುವಂತೆ ತೋರಿಸಿತು. ಇಂದು ಸ್ವಾಮಿ ವಿವೇಕಾನಂದರ ಶಕ್ತಿ, ಧೈರ್ಯ, ಮತ್ತು ತತ್ವದ ಬೆಳಕು ಎಲ್ಲರಿಗೂ ಹೊಸ ಬೆಳಕಿನಂತಾಗಿದೆ. ಅವರ “ವಿಶ್ವಸಮಾಧಾನ”ದ ದೃಷ್ಟಿಕೋನ ನಮಗೆ ಸಹಾನುಭೂತಿ, ಸಹಬಾಳ್ವೆ ಮತ್ತು ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ನೀಡುತ್ತದೆ.” ಎಂದು ಕಾರ್ಕಳದ ಉಪನ್ಯಾಸಕರಾದ ಕು. ಅಕ್ಷಯಾ ಗೋಖಲೆಯವರು ಹೇಳಿದರು.ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತನೇ ಉಪನ್ಯಾಸದಲ್ಲಿ “ಮಹಾ ಬೆಳಕು ಸ್ವಾಮಿ ವಿವೇಕಾನಂದರ ಜೀವನ – ಸಂದೇಶ” ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಈ ಕಾರ್ಯಕ್ರಮವು ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಜರುಗಿತು.ಈ ಸಂದರ್ಭದಲ್ಲಿ ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ ಕಾಮತ್ ಎಂ, ತ್ರಿಶಾ ಸಂಧ್ಯಾ ಕಾಲೇಜಿನ ಪ್ರೊ. ಸುಪ್ರಭಾ ಎಂ, ತ್ರಿಶಾ ಸಮೂಹ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ, ತ್ರಿಶಾ ಕ್ಲಾಸೆಸ್ ಮಂಗಳೂರಿನ ಮುಖ್ಯಸ್ಥರಾದ ಪ್ರೊ. ಯಶಸ್ವಿನಿ ಯಶಪಾಲ್, ಕಾರ್ಯಕ್ರಮ ಸಂಯೋಜಕರಾದ ಪ್ರೊ. ನಮೃತಾ ಮತ್ತು ಉಪನ್ಯಾಸಕರು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಚಂದ್ರು ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕರಾದ ಪ್ರೊ. ವಿದ್ಯಾಲಕ್ಷ್ಮಿ ವಂದಿಸಿದರು. ವಿದ್ಯಾರ್ಥಿನಿಯಾದ ಇಂಚರ ತಂತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಅನಧಿಕೃತ ಕ್ಯಾಟರಿಂಗ್‍ಗಳ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ದೂರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದ. ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ) ಮಂಗಳೂರು.

ಮಂಗಳೂರು:ಮಂಗಳೂರಿನಲ್ಲಿ 500 ಮತ್ತು ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 2,000 ಅನಧಿಕೃತ ಕ್ಯಾಟರಿಂಗ್‍ಗಳಿದ್ದು, ಇದರಿಂದಾಗಿ ನೊಂದಾಯಿತ ಕ್ಯಾಟರಿಂಗ್ ಮಾಲಕರಿಗೆ ತುಂಬಾ ತೊಂದರೆ ಮತ್ತು ತೀವ್ರ ನಷ್ಟ ಉಂಟಾಗುತ್ತಿದೆ. ಈ ಬಗ್ಗೆ ಅನಧಿಕೃತ ಕ್ಯಾಟರಿಂಗ್‍ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿ ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ) ಮಂಗಳೂರು ಇವರು ಜಿಲ್ಲಾಧಿಕಾರಿ ಸಹಿತ ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಮನವಿ ಸಲ್ಲಿಸಿದ್ದಾರೆ. ಇದರ ಕುರಿತು ಮಂಗಳೂರು ಪ್ರೆಸ್ ಕ್ಲಬ್‍ನಲ್ಲಿ ಇಂದು (ನವೆಂಬರ್ 13ರಂದು) ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ದ.ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ(ರಿ) ಮಂಗಳೂರು ಇದರ ಅಧ್ಯಕ್ಷ ಅಬ್ದುಲ್ ರಶೀದ್‍ರವರು ಜಿಲ್ಲೆಯಲ್ಲಿ ನೋಂದಾಯಿತ ಅಂದರೆ ಅಧಿಕೃತ 250 ಕ್ಯಾಟರಿಂಗ್‍ಗಳಿವೆ ಎಂದು ಹೇಳಿದರು. ನೋಂದಾಯಿತ ಕ್ಯಾಟರಿಂಗ್ ಮಾಲಕರಿಗೆ ಟ್ರೇಡ್ ಲೈಸನ್ಸ್ ಮತ್ತು ಎಫ್‍ಎಸ್‍ಎಸ್‍ಎಐ ರಿಜಿಸ್ಟ್ರೇಶನ್ ಪರವಾನಿಗೆ ಇದ್ದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಎಫ್‍ಎಸ್‍ಎಸ್‍ಎಐ ರಿಜಿಸ್ಟ್ರೇಶನ್ ಇದೆ. ಇದಕ್ಕಾಗಿ ವರ್ಷಕ್ಕೆ 20,000ದಿಂದ 50,000 ಸಾವಿರ ತನಕ ಟ್ರೇಡ್ ಲೈಸನ್ಸ್ ಶುಲ್ಕ ಮತ್ತು ರೂ. 2000ದವರೆಗೆ ಎಫ್‍ಎಸ್‍ಎಸ್‍ಎಐ ಲೈಸನ್ಸ್ ಗಾಗಿ ನೀಡಲಾಗುತ್ತದೆ. ಇಷ್ಟೆಲ್ಲ ಪರವಾನಿಗೆ ಮಾಡಿಕೊಂಡು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಅತ್ಯಂತ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಧಿಕೃತ ಕ್ಯಾಟರಿಂಗ್ ಮಾಲಕರು ಪೂರೈಕೆ ಮಾಡುತ್ತಿದ್ದರೂ ಕೆಲವು 2000ಕ್ಕೂ ಅಧಿಕ ಅಕ್ರಮ ಮತ್ತು ಅನಧಿಕೃತ ಕ್ಯಾಟರಿಂಗ್ ಮಾಲಕರ ಹಾವಳಿಯಿಂದಾಗಿ ತುಂಬಾ ಸಂಕಷ್ಟಕ್ಕೆ ಒಳಗಾಗಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ಈ ಬಗ್ಗೆ ತಕ್ಷಣ ಕಾನೂನುಕ್ರಮ ಕೈಗೊಂಡು ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ದ.ಕ. ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘ (ರಿ) ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ನೀಡಿ ವಿನಂತಿಸಿದೆ.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಅಬ್ದುಲ್ ರಶೀದ್, ಗೌರವ ಅಧ್ಯಕ್ಷರು ಸುಧಾಕರ್ ಕಾಮತ್, ಮಾಜಿ ಅಧ್ಯಕ್ಷರು ರಾಜಗೋಪಾಲ್ ರೈ, ದೀಪಕ್ ಕೋಟ್ಯಾನ್, ಅನೀಸ್ ಶೇಕ್ ಮೊಹಮ್ಮದ್. ಉಪಾಧ್ಯಕ್ಷರು ವಿಜಯ್ ಕುಮಾರ್, ರಾಜೇಶ್ ಕೊಂಚಾಡಿ, ಪ್ರಧಾನ ಕಾರ್ಯದರ್ಶಿ ಕರುಣಾಕರ್ ಪಡಿಯಾರ್, ಖಜಾಂಚಿ ಪ್ರಕಾಶ್ ಲೋಬೊ, ಸ್ಥಾಪಕ ಸದಸ್ಯರು ಬಾಲಕೃಷ್ಣ ಕುಕ್ಯಾನ್, ಸಂಘಟನಾ ಕಾರ್ಯದರ್ಶಿ ದೇವಿ ಪ್ರಸಾದ ಶೆಟ್ಟಿ,ಕೇಟರಿಂಗ್ ಮಾಲಕರ ಸಂಘ ಬಂಟ್ವಾಳ ವಲಯದ ಅಧ್ಯಕ್ಷರು ನಾರಾಯಣ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿಗೆ ದೂರು:ದ.ಕ. ಜಿಲ್ಲಾ ಕ್ಯಾಟರಿಂಗ್ ಅಸೋಸಿಯೇಷನ್ ವತಿಯಿಂದ ವಿವಿಧ ಬೇಡಿಕೆಗಳನ್ನು ಅಗ್ರಹಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಬ್ದುಲ್ ರಶೀದ್, ಗೌರವಾಧ್ಯಕ್ಷ ಸುಧಾಕರ ಕಾಮತ್, ಉಪಾಧ್ಯಕ್ಷ ವಿಜಯಕುಮಾರ್, ಕಾರ್ಯದರ್ಶಿ ಸುಧಾಕರ ಪಡಿವಾಳ್, ಮಾಜಿ ಅಧ್ಯಕ್ಷ ರಾಜಗೋಪಾಲ್ ರೈ ಹಾಗೂ ಸದಸ್ಯರು ಉಪಸ್ಥಿತಿ ಇದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣದ ತಾಳಮದ್ದಳೆ ಸಪ್ತಾಹ 2024 – ಸಂಘಟನಾ ಪರ್ವ

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಮತ್ತು ಕರ್ನಾಟಕ ಯಕ್ಷಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲ್ಪಡುವ ಹನ್ನೆರಡನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ¸ ಸಪ್ತಾಹ – 2024’ ದ್ವಾದಶ ಸರಣಿಯು ಇದೇ 2024 ನವೆಂಬರ್ 11 ರಿಂದ 17ರ ವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಜರಗಲಿದೆ. ‘ಸಂಘಟನಾ ಪರ್ವ’ ಎಂಬ ಹೆಸರಿನಲ್ಲಿ ಜಿಲ್ಲೆಯ ವಿವಿಧ ಯಕ್ಷಗಾನ ಸಂಘಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ನವೆಂಬರ 11 ರಿಂದ ಕ್ರಮವಾಗಿ ಹವ್ಯಾಸಿ ಬಳಗ ಕದ್ರಿ (ರಾಜಾ ದಂಡಕ), ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘ ಬೆಟ್ಟಂಪಾಡಿ (ಕಚ – ದೇವಯಾನಿ), ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘ, ಉಪ್ಪಿನಂಗಡಿ (ಸೈಂಧವ ವಧೆ), ಶ್ರೀ ವಾಣೀವಿಲಾಸ ಯಕ್ಷ ಬಳಗ, ಕಟೀಲು (ತ್ರಿಶಂಕು ಸ್ವರ್ಗ), ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ (ಬಿನದ ದಾಂಪತ್ಯ); ಶ್ರೀ ಚಾಮುಂಡೇಶ್ವರೀ ಯಕ್ಷಕೂಟ ಕಣಿಯೂರು ಕನ್ಯಾನ (ಸುದರ್ಶನೋಪಖ್ಯಾನ); ಕರ್ನಾಟಕ ಯಕ್ಷಭಾರತಿ ಪುತ್ತೂರು (ಸತೀ ಶಕುಂತಲೆ) ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ‘ರೆಂಜೆ ಬನೊತ ಲೆಕ್ಯೆಸಿರಿ’ ಹೀಗೆ ವಿನೂತನ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ.

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣ ನುಡಿಹಬ್ಬ ತಾಳಮದ್ದಳೆ ಸಪ್ತಾಹ – 2024. ತಾಳಮದ್ದಳೆಯಲ್ಲಿ ಕನ್ನಡ ಭಾಷೆಯ ಸಿರಿವಂತಿಕೆ ಇದೆ: ಕೃಷ್ಣ ಪಾಲೆಮಾರ್

ಮಂಗಳೂರು: ‘ನಾವಾಡುವ ಭಾಷೆಯ ಶುದ್ಧ ಸ್ವರೂಪವನ್ನು ಯಕ್ಷಗಾನ ರಂಗಸ್ಥಳದಲ್ಲಿ ಮಾತ್ರ ಕಾಣಲು ಸಾಧ್ಯ. ಅದರಲ್ಲೂ ತಾಳಮದ್ದಳೆಯಲ್ಲಿ ಕನ್ನಡ ಭಾಷೆಯ ಸಿರಿವಂತಿಕೆ ಇದೆ. ತಾನು ಅಮೆರಿಕಕ್ಕೆ ಹೋಗಿದ್ದಾಗ ಅಲ್ಲಿಯ ಕನ್ನಡಿಗರು ವಾರಾಂತ್ಯದಲ್ಲಿ ತಮ್ಮ ವಸತಿ ಸಂಕೀರ್ಣ ಮಧ್ಯೆ ದೊಡ್ಡ ಪರದೆಯ ಮೇಲೆ ತಾಳಮದ್ದಳೆಯನ್ನು ಹಾಕಿ ಸಂಭ್ರಮಿಸುವುದನ್ನು ಕಂಡಿದ್ದೇನೆ’ ಎಂದು ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಹೇಳಿದ್ದಾರೆ.ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿಆರಂಭಗೊಂಡಿರುವ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ -2024’ 12ನೇ ವರ್ಷದ ನುಡಿ ಹಬ್ಬ ದ್ವಾದಶ ಸರಣಿಯಲ್ಲಿ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರವನ್ನು ಪ್ರದಾನ ಮಾಡಿ ಅವರು ಮಾತನಾಡಿದರು. ಕನ್ನಡ ರಥ ಬೇಡ: ಡಾ. ಜೋಶಿ‘ಕರ್ನಾಟಕ ರಾಜ್ಯೋತ್ಸವದ ಸುವರ್ಣ ವರ್ಷಾಚರಣೆಯ ಸಂಕಲ್ಪ ಸಾಕಾರ ಆಗಬೇಕಿದ್ದರೆ ರಥವೂ ಬೇಡ, ರಾಜಕಾರಣಿಗಳು ಮತ್ತು ರಾಜಕೀಯ ಸೋಂಕಿತ ಸಾಂಸ್ಕೃತಿಕ ಕಾರ್ಯಕರ್ತರು ಕನ್ನಡಕ್ಕಾಗಿ ಕರೆ ಕೊಡುವುದೂ ಬೇಡ. ಬದಲು ಪ್ರಾಥಮಿಕ ಸರಕಾರಿ ಕನ್ನಡ ಶಾಲೆಗಳನ್ನು ಉಳಿಸಿ, ಕನ್ನಡ ಕಲಿಸಿ, ನೆಲದ ಕಲೆ ಯಕ್ಷಗಾನ ಬಯಲಾಟ ಮತ್ತು ತಾಳಮದ್ದಳೆಯನ್ನು ಪೋಷಿಸಿದರೆ ಸಾಕು. ಪರಿಣಾಮವಾಗಿ ಕನ್ನಡ ಸಮೃದ್ಧವಾಗಿ ಅರಳುವುದು ನಿಸ್ಸಂದೇಹ’ ಎಂದು ಬಹುಶ್ರುತ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ತಮ್ಮ ಆಶಯ ಭಾಷಣದಲ್ಲಿ ನುಡಿದರು.‘ಭಾಷೆ ಮತ್ತು ಭಾಷಾ ಸಂಸ್ಕೃತಿಗಳು ಅದರ ಬಳಕೆ, ಆಚರಣೆಯಿಂದ ಮಾತ್ರವೇ ಬೆಳೆಯುತ್ತದೆ. ಯಕ್ಷಗಾನ ಮತ್ತು ತಾಳಮದ್ದಳೆಯಲ್ಲಿ ತೊಡಗುವುದರಿಂದ ಭಾಷಾ ಪೋಷಣೆಯಾಗುತ್ತದೆ’ ಎಂದವರು ಹೇಳಿದರು. ಕಲ್ಕೂರರಿಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ:ಸಮಾರಂಭದಲ್ಲಿ ಕೃಷ್ಣ ಪಾಲೆಮಾರ್ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಮತ್ತು ಕಲ್ಕೂರ ಪ್ರತಿಷ್ಠಾನದ ಸಂಸ್ಥಾಪಕ ಪ್ರದೀಪ ಕುಮಾರ್ ಕಲ್ಕೂರ ಅವರಿಗೆ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ನೀಡಿ ಗೌರವಿಸಿದರು. ವಿನೋದಾ ಕಲ್ಕೂರ ಜತೆಗಿದ್ದರು.ತಾಳಮದ್ದಳೆ ಸಪ್ತಾಹವನ್ನು ಉದ್ಘಾಟಿಸಿದ ಕ.ಸಾ.ಪ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಮಾತನಾಡಿ ‘ಯಕ್ಷಾಂಗಣ ಮಂಗಳೂರು ಶುದ್ಧ ಕನ್ನಡವನ್ನು ಉಳಿಸುವ ಕೆಲಸ 12 ವರ್ಷಗಳಿಂದ ಮಾಡುತ್ತಿದೆ. ಕನ್ನಡ ರಥವೆಂದು ಕನ್ನಡದ ಹೆಸರಲ್ಲಿ ಪ್ರಚಾರ ಪಡೆಯುವವರಿಗೆ ಕನ್ನಡ ಶಾಲೆಗಳನ್ನು ಕಾಪಾಡಲು ಆಗುತ್ತಿಲ್ಲ, ಅಧ್ಯಾಪಕರ ನೇಮಕ ನಡೆಯುತ್ತಿಲ್ಲ -ಇಂತಹ ಪರಿಸ್ಥಿತಿಯಲ್ಲಿ ರಥಯಾತ್ರೆಯ ಔಚಿತ್ಯ ಪ್ರಶ್ನಾರ್ಹ’ ಎಂದ ಅವರು ‘ತಾಳಮದ್ದಳೆ,ಯಕ್ಷಗಾನದಂಥ ಕಲೆ ನೈಜ ಕನ್ನಡ ಕೊಡುಗೆ ನೀಡುತ್ತದೆ’ ಎಂದರು.ಕದ್ರಿ ಶ್ರೀ ಮಂಜುನಾಥ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದರು.ಸೂರಜ್ ಇಂಟರ್ನ್ಯಾಷನಲ್ ಸ್ಕೂಲ್ ಆಡಳಿತ ನಿರ್ದೇಶಕಡಾ.ಮಂಜುನಾಥ ಎಸ್. ರೇವಣ್ಕರ್, ಉದ್ಯಮಿಗಳಾದ ವಿ.ಕರುಣಾಕರ್, ಜಿತೇಂದ್ರ ಕೊಟ್ಟಾರಿ, ದೆಹಲಿ ಕನ್ನಡಿಗ ವಸಂತ ಶೆಟ್ಟಿ ಬೆಳ್ಳಾರೆ, ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘ ಶತಮಾನೋತ್ಸವ ಸಮಿತಿ ಅಧ್ಯಕ್ಷ ಸಿ‌.ಎಸ್.ಭಂಡಾರಿ ಮೊದಲಾದವರು ಅತಿಥಿಗಳಾಗಿ ಪಾಲ್ಗೊಂಡರು.ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಸುಮಾ ಪ್ರಸಾದ್ ಸನ್ಮಾನಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿತೋನ್ಸೆ ಪುಷ್ಕಳ ಕುಮಾರ್ ನಿರೂಪಿಸಿದರು. ಸಂಚಾಲಕಿ ನಿವೇದಿತ ಎನ್. ಶೆಟ್ಟಿ ವಂದಿಸಿದರು. ಪದಾಧಿಕಾರಿಗಳಾದ ಎ.ಕೆ.ಜಯರಾಮ ಶೇಖ, ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ರವೀಂದ್ರ ರೈ ಕಲ್ಲಿಮಾರು, ರಾಜಾರಾಮಶೆಟ್ಟಿ ಮನವಳಿಕೆ ಗುತ್ತು, ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ವಾಸಪ್ಪ ಶೆಟ್ಟಿ ಬೆಳ್ಳಾರೆ ಉಪಸ್ಥಿತರಿದ್ದರು.‘ರಾಜಾ ದಂಡಕ’ ತಾಳಮದ್ದಳೆ:ಬಳಿಕ ‘ಸಂಘಟನಾ ಪರ್ವ’ದ ಮೊದಲ ಕಾರ್ಯಕ್ರಮವಾಗಿ ಹವ್ಯಾಸಿ ಬಳಗ ಕದ್ರಿ ಇವರ ಸಂಯೋಜನೆಯಲ್ಲಿ ‘ರಾಜಾ ದಂಡಕ’ ಯಕ್ಷಗಾನ ತಾಳಮದ್ದಳೆ ಜರಗಿತು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ವಿರಾಸತ್-2024. ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥಆಹಾರೋತ್ಸವ, ಕೃಷಿ-ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2024. 10 ರಿಂದ15, ಡಿಸೆಂಬರ್ 2024. ಮಳಿಗೆ ತೆರೆಯಲು ಆಹ್ವಾನ

ಮೂಡುಬಿದಿರೆ:  ಇದೇ ಬರುವ ಡಿಸೆಂಬರ್ 10 ಮಂಗಳವಾರದಿAದ 15ನೇ ಭಾನುವಾರದವರೆಗೆ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ, ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ಆರು ದಿನಗಳ ರೈತರ ಸಂತೆ ಮತ್ತು ಕೃಷಿಮೇಳವು ಪ್ಯಾಲೇಸ್‌ಗ್ರೌಂಡ್‌ನಲ್ಲಿ ನಡೆಯಲಿದೆ. ಹಾಗೆಯೇ ಆಹಾರೋತ್ಸವ-ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳವನ್ನು ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ (ಕೃಷಿಸಿರಿ ವೇದಿಕೆ) ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮಹಾಮೇಳದಲ್ಲಿ ಭಾಗವಹಿಸಿ ಮಳಿಗೆ ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಹಾರೋತ್ಸವ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಖಾದ್ಯಗಳು, ಫಾಸ್ಟ್ಫುಡ್ ಹಾಗೂ ವೈವಿಧ್ಯಮಯ ಪಾನೀಯಗಳಿಗೆ ಸಂಬAಧಿಸಿದ ಸಿದ್ಧ ಮತ್ತು ಸ್ಥಳದಲ್ಲೇ ತಯಾರಿಸಿ ನೀಡುವ ಆಹಾರ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ.ಕೃಷಿಗೆ ಸಂಬAಧಿಸಿದ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಲ್ಲಿ ಹಣ್ಣು, ತರಕಾರಿ, ಹೂವು ಬೀಜಗಳ ಮಾರಾಟ, ನರ್ಸರಿಗಳು, ಸಾವಯವ-ರಾಸಾಯನಿಕ ಗೊಬ್ಬರಗಳು, ನೀರು-ನೆಲಗಳಲ್ಲಿ ಬೆಳೆಯುವ ವೈವಿಧ್ಯಮಯ ಹೂಗಿಡಗಳು, ಕೃಷಿ ಉಪಕರಣ-ಯಂತ್ರಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿಯ ಪ್ರಮುಖ ಆಕರ್ಷಣೆ ಎಂದರೆ “ರೈತರ ಸಂತೆ”. ಈ ರೈತರ ಸಂತೆಯಲ್ಲಿ ಭಾಗವಹಿಸಲು ಇಚ್ಚಿಸುವ ರೈತರು ಮೊದಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳತಕ್ಕದ್ದು. ಮೊದಲು ಬಂದವರಿಗೆ ಮೊದಲ ಆದ್ಯತೆ. ರೈತರೇ ನೇರವಾಗಿ ತಾವು ಬೆಳೆದ ತರಕಾರಿ, ಹಣ್ಣು ಪುಷ್ಪಗಳನ್ನು ಗ್ರಾಹಕರಿಗೆ ಮಾರಾಟ ಮಾಡಬಹುದಾಗಿದೆ.ಹಾಗೆಯೇ ಕರಕುಶಲ ವಸ್ತುಗಳಾದಂತಹ ಸೆರಾಮಿಕ್ಸ್ ಮತ್ತು ಗಾಜಿನ ವಸ್ತುಗಳು, ಫೈಬರ್ ಮತ್ತು ಜವಳಿ ಕರಕುಶಲ ವಸ್ತುಗಳು, ಹೂವಿನ ಕರಕುಶಲ ವಸ್ತುಗಳು, ಚರ್ಮದ ಕರಕುಶಲ ವಸ್ತುಗಳು, ಗೃಹಪಯೋಗಿ ವಸ್ತುಗಳ ಪ್ರದರ್ಶನಕ್ಕೆ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆಹಾರ ಮತ್ತು ಕರಕುಶಲ ಮೇಳದ ಮಾರಾಟ ಮತ್ತು ಪ್ರದರ್ಶನ ಕೃಷಿಸಿರಿ ವೇದಿಕೆಯಲ್ಲಿ ನಡೆಯಲಿದೆ. ಒಟ್ಟಾರೆ ಈ ಮಹಾಮೇಳದಲ್ಲಿ 500 ರಿಂದ 600 ಮಳಿಗೆಗಳನ್ನು ತೆರೆಯಲು ಅವಕಾಶವಿದ್ದು, ಆಸಕ್ತ ವ್ಯಾಪಾರಿಗಳು ಮಳಿಗೆಗಳನ್ನು ಅದಷ್ಟು ಬೇಗ ನೊಂದಾಯಿಸಿಕೊಳ್ಳಲು ವಿನಂತಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – ನರ್ಸರಿ ಮಳಿಗೆಗೆ :  ಡಾ. ಕೆ. ವಿ. ಸುರೇಶ್ 9880496920, ಡಾ. ರಾಹುಲ್ ಫಾಟಕ್ 8197025728   ಡಾ. ಶಶಿಕುಮಾರ್ 9113019074, ಆಹಾರ ಮತ್ತು ಕರಕುಶಲ ಮಳಿಗೆಗೆ : ಶ್ರೀ ನಾರಾಯಣ – 8197487197, ಮಹೇಶ – 8050499626

ಹೊರ ರಾಜ್ಯ ವಾರ್ತೆಗಳು

ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ(ಪುಣೆ) ಅವರಿಗೆ ‘ತುಳುನಾಡ ಧನ್ವoತರಿ’ ಬಿರುದು, ಪ್ರಶಸ್ತಿ ಪ್ರಧಾನ

ಪುಣೆ :ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರಿಗೆ ಪುಣೆ ಬಾಣಿರ್ ಬಂಟರ ಭವನದಲ್ಲಿ ನಡೆದ ತುಳುಕೂಟದ ರಜತ ಸಂಭ್ರಮ ಮತ್ತು ತುಳುನಾಡ ಜಾತ್ರೆ ಸಂದರ್ಭದಲ್ಲಿ ‘ತುಳುನಾಡ ಧನ್ವoತರಿ’ ಬಿರುದು ಪ್ರಧಾನ ಮಾಡಲಾಯಿತು. ಒಡಿಯೂರು ಗುರುದೇವಾನಂದ ಸ್ವಾಮೀಜಿ ಮತ್ತು ಕಟೀಲು ಅಸ್ರಣ್ಣ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾ ಲಗತ್ತಿ ಐಪಿಎಸ್,ಡಾ. ಜಿ. ಶಂಕರ್, ದಿನೇಶ್ ಶೆಟ್ಟಿ ಕಳತ್ತೂರು,ಪ್ರವೀಣ್ ಶೆಟ್ಟಿ ಪುತ್ತೂರು, ರೋಹಿತ್ ಶೆಟ್ಟಿ ನಗ್ರಿಗುತ್ತು ಮೊದಲಾದ ಗಣ್ಯರ ಸಮ್ಮುಖದಲ್ಲಿ ಡಾ. ಸುಧಾಕರ ಶೆಟ್ಟಿ ಅವರಿಗೆ ಬಿರುದು ಪ್ರಧಾನ ಮಾಡಲಾಯಿತು. ವೈದ್ಯಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಮೂರುವರೆ ದಶಕಗಳ ನಿಸ್ವಾರ್ಥ ಸಮಾಜ ಸೇವೆಗಾಗಿ ಅವರಿಗೆ ತುಳುನಾಡ ಧನ್ವoತರಿ ಬಿರುದು ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಡಾ. ಸುಧಾಕರ ಶೆಟ್ಟಿಯವರಿಗೆ ಈ ಹಿಂದೆ ಹೊರನಾಡ ಕನ್ನಡ ರತ್ನ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ -2022,ಚಾರ್ ಸಹಿಬಜಾದೆ ಅವಾರ್ಡ್ ದೊರಕಿರುತ್ತದೆ. ಅಷ್ಟೇ ಅಲ್ಲದೆ, ಅವರು ಸತತ ನಾಲ್ಕು ಬಾರಿ ಕೇಂದ್ರ ಸರಕಾರದ ರಕ್ಷಾ ಮಂತ್ರಿ ಅವಾರ್ಡ್ ಪುರಸ್ಕೃತ ವೈದ್ಯಕೀಯ ತಂಡದ ಸದಸ್ಯರಾಗಿದ್ದಾರೆ

ಪ್ರಾದೇಶಿಕ ವಾರ್ತೆಗಳು

‘ಕನ್ನಡ ಮಾಧ್ಯಮ ಶಾಲೆಗಳಿಂದ ಸಂಸ್ಕೃತಿ ಉಳಿವು’ : ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಭಾಷೆ ಒಂದು ನಾಡಿನ ಸಂಸ್ಕೃತಿಯ ಜೀವಾಳ. ಕನ್ನಡ ಭಾಷೆ ಸಂಸ್ಕೃತಿ ಉಳಿಯ ಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ಅಭಾಸಾಪ) ಕರ್ನಾಟಕ ಇದರ ವತಿಯಿಂದ ಕಲ್ಲಡ್ಕದ ಶ್ರೀ ರಾಮ ಶಾಲೆಯಲ್ಲಿಭಾನುವಾರ ನಡೆದ ಕನ್ನಡ ಶಾಲೆಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ರಾಷ್ಟ್ರೀಯ ಭಾವನೆಗಳು ಜಾಗೃತ ಗೊಳ್ಳಬೇಕಾದರೆ ಮಾತೃಭಾಷೆಯ ಶಿಕ್ಷಣ ಅಗತ್ಯ ಎಂದರು.ದಿಕ್ಸೂಚಿ ಭಾಷಣ ಮಾಡಿದ ರಾಜ್ಯ ಸಂಪರ್ಕ ಪ್ರಮುಖ್ ಡಾ. ವಿ. ರಂಗನಾಥ ಅವರು ಭಾರತೀಯ ಭಾಷೆಗಳ ನಡುವೆ ಇರಬೇಕಾದುದು ಸಾಮರಸ್ಯವೇ ವಿನಾ ಸಂಘರ್ಷವಲ್ಲ ಎಂದರು. ಕನ್ನಡ ಶಾಲೆ ಸವಾಲು ಮತ್ತು ಸಮಾಧಾನ ವಿಷಯದ ಬಗ್ಗೆ ನಡೆದ ವಿಚಾರಗೋಷ್ಠಿ ಶಿಕ್ಷಣ ತಜ್ಞ ರಾಜಾರಾಮ ಹೊಳೆಹೊನ್ನೂರು ವಿಷಯ ಮಂಡಿಸಿದರು.ಶ್ರದ್ಧೆ ಇದ್ದಾಗ ಏಕಾಗ್ರತೆ, ಗ್ರಹಿಕೆ,ಹೇಳುವ ಸಾಮರ್ಥ್ಯ, ಕ್ರಿಯಾಶೀಲತೆಯಿಂದ ಉತ್ತಮ ಫಲಿತಾಂಶ ದೊರಕುತ್ತದೆ. ವಿಷಯಗಳನ್ನುಮಾತೃ ಭಾಷೆಯಲ್ಲಿ ಕಲಿಸುವುವುದರಿಂದ ಭಾವನೆಗಳು ಅರಳಲು ಸಾಧ್ಯ ವಾಗುವುದು ಎಂದು ಉದಾಹರಣೆಗಳ ಮೂಲಕ ವಿವರಿಸಿದರು.ಗುಣ ಆಧಾರಿತ ಶಿಕ್ಷಣ -ಡಾ.ಪ್ರಭಾಕರ ಭಟ್ರಾಜ್ಯದ ಉತ್ತಮ ಕನ್ನಡ ಶಾಲೆಗಳ ಮುಖ್ಯಸ್ಥರನ್ನು ಸನ್ಮಾನಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ ಇಂದಿನ ಶಿಕ್ಷಣ ಹಣ ಆಧಾರಿತವಾಗಿದೆ. ನಮಗೆ ಗುಣ ಅಧಾರಿತ ಶಿಕ್ಷಣ ಅವಶ್ಯವಾಗಿದೆ. ದೀಪದಿಂದ ದೀಪ ಹಚ್ಚಿದಂತೆ ಜ್ಞಾನವನ್ನು ಪಸರಿಸಬೇಕು.ಕನ್ನಡ ಭಾಷೆ ಬೆಳೆಸಿದರೆ ಜಗತ್ತಿನ ಭಾಷೆಗಳಗೆ ಶಕ್ತಿ ನೀಡಿದಂತಾಗುತ್ತದೆ.ಭಾರತದಲ್ಲಿ ಕೊನೆಗೆ ಗೆಲ್ಲುವುದು ಧರ್ಮವೇ ಹೊರತು ಅಧರ್ಮವಲ್ಲ ಎಂದರು.ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್, ಸಂಘಟನಾ ಕಾರ್ಯದರ್ಶಿ ನಾರಾಯಾಣ ಶೇವಿರೆ , ಕಾರ್ಯದರ್ಶಿ ಶೈಲೇಶ್ ಮಂಗಳೂರು, ವಿಭಾಗ ಸಂಯೋಜಕ ಸುಂದರ ಇಳಂತಿಲ, ಕಾರ್ಯಕಾರಿ ಸಮಿತಿ ಸದಸ್ಯ ಡಾ.ಮಾಧವ.ಎಂ.ಕೆ., ಬಂಟ್ವಾಳ ತಾಲೂಕು ಅಧ್ಯಕ್ಷ ರಾಜಮಣಿ ರಾಮಕುಂಜ ಉಪಸ್ಥಿತರಿದ್ದರು.ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ ರೈ ಸ್ವಾಗತಿಸಿ, ಮಧುರಾ ಕಡ್ಯ ವಂದಿಸಿದರು. ಅಶೋಕ ಕಲ್ಯಾಟೆ ಮತ್ತು ಡಾ.ಮೀನಾಕ್ಷಿ ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.ಸನ್ಮಾನಗೊಂಡ ಶಾಲೆಗಳು:*ಜೈಹಿಂದ್ ಪ್ರೌಢ ಶಾಲೆ ಅಂಕೋಲಾ *ಜ್ಞಾನಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆ ಶಹಾಪುರ, ಯಾದಗಿರಿ *ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರ *ವನಿತಾ ಸದನ ಕೃಷ್ಣಮೂರ್ತಿಪುರಂ, ಮೈಸೂರು * ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಪುತ್ತೂರು.

ಪ್ರಾದೇಶಿಕ ವಾರ್ತೆಗಳು

“ಕಿಶೋರ್ ಶೆಟ್ಟಿ ಅವರದ್ದು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ” -ಡಾ.ಸಂಜೀವ ದಂಡೆಕೇರಿ. “ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್: “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಿಶೋರ್ ಶೆಟ್ಟಿ ಅವರು ಸದಾ ನೆರವು ನೀಡಿದವರು. ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿದೆ. ಸಂಘಟನೆಯ ಈ ಕ್ರಮ ಶ್ಲಾಘನೀಯವಾದುದು“ ಎಂದರು. ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ-2024 ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನನ್ನ ತಂಡದ ಕಲಾವಿದರಿಂದ ನಾನಿದ್ದೇನೆ, ಅವರಿಲ್ಲದೆ ನಾನೇನೂ ಇಲ್ಲ. ನಾನು ಮಾಡಿರುವ ದಾನ ಧರ್ಮ ಏನೂ ಇಲ್ಲ. ನೊಂದವರಿಗೆ ನೆರವಾಗುವುದು ದೇವರ ಸೇವೆ. ಇದು ನನಗೆ ಅಪ್ಪ ಅಮ್ಮ ಕಲಿಸಿದ್ದು. ಈ ಪ್ರಶಸ್ತಿಯನ್ನು ಬಹಳ ಖುಷಿಯಿಂದ ಸ್ವೀಕರಿಸುತ್ತಿದ್ದೇನೆ. ಇಂತಹ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ“ ಎಂದರು.ಬಳಿಕ ಮಾತು ಮುಂದುವರಿಸಿದ ಉದ್ಯಮಿ, ಶ್ರೀ ಡೆವಲಪರ್ಸ್ ಸಂಸ್ಥೆಯ ಮಾಲಕ ಗಿರೀಶ್‌ ಎಂ ಶೆಟ್ಟಿ ಕಟೀಲು ಅವರು, ”ಬಾಳ ಜಗನ್ನಾಥ ಶೆಟ್ಟಿ ಅವರು ರಂಗಭೂಮಿ ಕಲಾವಿದರನ್ನು ಗುರುತಿಸಲು ಹುಟ್ಟುಹಾಕಿದ ರಂಗಚಾವಡಿ ಸಂಘಟನೆ ಇಂದು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕಲಾವಿದರನ್ನು ಗುರುತಿಸಿ ಬೆನ್ನು ತಟ್ಟುತ್ತಿರುವ ಇಂತಹ ಸಂಘಟನೆಯ ಕಾರ್ಯ ಶ್ಲಾಘನೀಯ ಎಂದರು. ವೇದಿಕೆಯಲ್ಲಿ ಉದ್ಯಮಿ, ಸಮಾಜಸೇವಕ ಅನಿಲ್ ಶೆಟ್ಟಿ ತೇವು-ಸೂರಿಂಜೆ, ಬಂಟರ ಸಂಘ ಸುರತ್ಕಲ್ ಇದರ ನಿರ್ದೇಶಕ ಜಗದೀಶ್ ಶೆಟ್ಟಿ ಪೆರ್ಮುದೆ, ಜಯಕಿರಣ ಪತ್ರಿಕೆ ಮಾಲಕ ಪ್ರಕಾಶ್ ಪಾಂಡೇಶ್ವರ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷ ರಮೇಶ್‌ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್. ಪೂಂಜ, ಉದ್ಯಮಿ ಜಯರಾಮ ಶೇಖ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ, ಚಿತ್ರಾ ಜೆ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಗಿರೀಶ್ ಸಾಗರ ದೇವರನ್ನು ಸ್ತುತಿಸಿದರು. ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಅಭಿನಂದನಾ ಭಾಷಣಗೈದರು.‌ ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಗಾನಲಹರಿ, ಲಯನ್ ಕಿಶೋರ್ ಶೆಟ್ಟಿಯವರ ಸಾರಥ್ಯದ ಶ್ರೀ ಲಲಿತೆ ಕಲಾವಿದರಿಂದ ನವನೀತ ಶೆಟ್ಟಿ ರಚಿಸಿರುವ “ಶನಿ ಮಹಾತ್ಮೆ” ತುಳು ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಅಭಿನಂದನೆ.

ಮಂಗಳೂರು, ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರು ಭಾನುವಾರ ಧರ್ಮಸ್ಥಳ ದಲ್ಲಿ ಅಭಿನಂದಿಸಿದರು. ಇನ್ನಷ್ಟು ಸಾಧನೆ ಗಳು ಆಗಲಿ ಎಂದು ಶುಭ ಹಾರೈಸಿದರು .

ಪ್ರಾದೇಶಿಕ ವಾರ್ತೆಗಳು

ಮಂಗಳೂರು: ಉಳಾಯಿಬೆಟ್ಟು ಕಿರುಸೇತುವೆ ಬದಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಬೇಡಿಕೆ : ನವೆಂಬರ್ 13ರಂದು “ಸಾರ್ವಜನಿಕ ಪ್ರತಿಭಟನೆ..!

ಮಂಗಳೂರು: ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು, ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಉಳಾಯಿಬೆಟ್ಟುವಿನ ಕಿರು ಸೇತುವೆಗೆ ಪರ್ಯಾಯವಾಗಿ ಅಲ್ಲೇ ಪಕ್ಕದಲ್ಲಿ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಿಸಲು ಸಾರ್ವಜನಿಕರು ನಿಶ್ಚಯಿಸಿರುತ್ತಾರೆ. ಆದರೆ ಉಳಾಯಿಬೆಟ್ಟು -ಪೆರ್ಮಂಕಿ-ಮಲ್ಲೂರು ತೀರಾ -ಬಿ.ಸಿ.ರೋಡ್ -ಅರ್ಕುಳ- ಅಡ್ಯಾರ್‌ಗೆ ರಾಷ್ಟ್ರೀಯ ಹೆದ್ದಾರಿ 169 ರಿಂದ ನೇರ ಸಂಪರ್ಕ ಹೊಂದಿರುವ ಈ ಕಿರು ಸೇತುವೆ, ನಿಷೇಧಗೊಂಡಿರುವ ಹಿನ್ನಲೆಯಲ್ಲಿ, ಈ ಭಾಗದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಮಹಿಳೆಯರು ಮತ್ತು ವಯೋವೃದ್ಧರ ಈ ಮಾರ್ಗದಲ್ಲಿ ಸಾರ್ವಜನಿಕ ಕಷ್ಟದಾಯಕವಾಗಿದೆ. ಕಿರು ಸೇತುವೆ ನಿಷೇಧದ ಬಳಿಕ ವಾಹನಗಳು (KSRTC ಬಸ್ಸುಗಳು ಮತ್ತು ಖಾಸಾಗಿ ಶಾಲಾ ಕಾಲೇಜು ಬಸ್ಸುಗಳು)ಸ್ಥಗಿತಗೊಂಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಹೇಳಿದ್ದಾರೆ.ಈ ಬಾಗದಲ್ಲಿ ಕಿರು ಸೇತುವೆಗೆ ಪರ್ಯಾಯ ಮಣ್ಣಿನ ರಸ್ತೆ ನಿರ್ಮಿಸುವರೇ, ಜಿಲ್ಲಾಡಳಿತಕ್ಕೆ ಮೂರು ಬಾರಿ ಮನವಿ ಸಲ್ಲಿಸಲಾಗಿದ್ದು ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರೊಂದಿಗೆ ಖುದ್ದಾಗಿ ಸಮಸ್ಯೆಯ ಒಳಹೊರವುವನ್ನು ವಿವರಿಸಲಾಗಿತ್ತು.ಆದರೆ ಈವರೆಗೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಹಾಗಾಗಿ ಸ್ಥಳೀಯ ನಾಗರೀಕರು, ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಕೂಲಿ ಕಾರ್ಮಿಕರು ಹಾಗೂ ಇತರ ಎಲ್ಲರೂ ಸೇರಿಕೊಂಡು ನವೆಂಬರ್ 13ರಂದು ರಾಷ್ಟ್ರೀಯ ಹೆದ್ದಾರಿ 169ರ ಪರಾರಿಯಲ್ಲಿ “ಸಾರ್ವಜನಿಕ ಪ್ರತಿಭಟನೆ” ನಡೆಸಲು ಉದ್ದೇಶಿಸಿದ್ದೇವೆ. ಈ ಸಾರ್ವಜನಿಕರು, ಎಲ್ಲಾ ಸಂಘ ಸಂಸ್ಥೆಗಳು ಪೂರ್ಣವಾಗಿ ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಇಸ್ಮಾಯಿಲ್,ಮಹಮ್ಮದ್ ಶರೀಫ್,ವಿಶ್ವನಾಥ್ ಶೆಟ್ಟಿ, ದೀನೇಶ್ ಪಲಿಮಾರ್,ದಿನೇಶ್ ಕುಮಾರ್,ಸಂತೋಷ್ ಪೆರ್ಮಂಕಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Scroll to Top