Author name: editor

ಪ್ರಾದೇಶಿಕ ವಾರ್ತೆಗಳು

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ. ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

ಸುರತ್ಕಲ್ : ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.ರಂಗ ಸವ್ಯಸಾಚಿ ಲಯನ್ ಕಿಶೋರ್ ಡಿ ಶೆಟ್ಟಿ ಅವರನ್ನು 2024 ನೇ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಚಲನ ಚಿತ್ರ ನಿರ್ಮಾಪಕ ಡಾ ಸಂಜೀವ ದಂಡೆಕೇರಿ, ಶ್ರೀ ಡೆವಲಪರ್ಸ್ ಕಟೀಲು ಸಂಸ್ಥೆಯ ಮಾಲಕ ಗಿರೀಶ್ ಎಂ ಶೆಟ್ಟಿ ಕಟೀಲು, ಚಲನ ಚಿತ್ರ ನಿರ್ಮಾಪಕ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಥಾಣೆ ಬಂಟ್ಸ್ ಎಸೋಸಿಯೇಶನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಜಗಧೀಶ್ ಶೆಟ್ಟಿ ಪೆರ್ಮುದೆ, ಚಲನ‌ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಎಂ ಲೋಕಯ್ಯ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಪೇರ್ ಅಸೋಸಿಯೇಶನ್ (ರಿ ಅಧ್ಯಕ್ಷ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಲಕುಮಿ ತಂಡದ ವ್ಯವಸ್ಥಾಪಕ, ರಂಗಸವ್ಯಸಾಚಿ ನಿರ್ದೇಶಕ, ಸಂಘಟಕ ಕಿಶೋರ್ ಡಿ ಶೆಟ್ಟಿ ಅವರನ್ನು ರಂಗಚಾವಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.ಬಳಿಕ ಕಲಾವಿದರಿಂದ ಗಾನ ಲಹರಿ ಮತ್ತು ಶ್ರೀ ಲಲಿತೆ ನಾಟಕ ತಂಡದಿಂದ “ಶನಿ ಮಹಾತ್ಮೆ” ನಾಟಕ ಪ್ರದರ್ಶನಗೊಳ್ಳಲಿದೆ ಎಂದು ರಂಗಚಾವಡಿಯ ಪ್ರಕಟನೆ ತಿಳಿಸಿದೆ.

ಕಲೆ ಸಾಹಿತ್ಯ

“90 ಎಮ್ ಎಲ್” ತುಳು ಸಿನಿಮಾಕ್ಕೆ ಶರವು ದೇವಸ್ಥಾನದಲ್ಲಿ ಮುಹೂರ್ತ

ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.ಶರವು ರಾಘವೇಂದ್ರ ಶಾಸ್ತ್ರಿ ಸಿನಿಮಾಕ್ಕೆ ಕ್ಲಾಪ್ ಮಾಡಿದರು. ನಟ ವಿನೀತ್ ಕುಮಾರ್, ನಟಿ ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ನಿರ್ದೇಶಕ ರಂಜಿತ್ ಸಿ ಬಜಾಲ್, ನಿರ್ಮಾಪಕ ಡೋಲ್ಪಿ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ. ರಂಜಿತ್ ಸಿ ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತ ಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ ಬಜಾಲ್ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ದೀಪಾವಳಿ ಶುಭಾಶಯ.

ಮಂಗಳೂರು: ಇಲ್ಲಿನ ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು. ಮಠದ ಸ್ವಾಮೀಜಿ ಶ್ರೀ ಜಿತಕಾಮಾನಂದಜಿ ಅವರನ್ನು ಭೇಟಿ ಮಾಡಿದ ಮಂಗಳೂರು ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕರಾದ ವಂದನೀಯ ಫಾ. ಜೆ.ಬಿ. ಕ್ರಾಸ್ತಾ, ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಆಲ್ವೀನ್ ಡಿಸೋಜಾ ಅವರು ಶುಭಾಶಯ ತಿಳಿಸಿದರು.ಈ ಸಂದರ್ಭ ಪ್ರಮುಖರಾದ ಮಿಥುನ್ ಸಿಕ್ವೇರಾ, ಬಸವರಾಜ್, ಉದ್ಯಮಿ ಹಾಗೂ ಸಮಾಜ ಸೇವಕ ದಿಲ್ ರಾಜ್ ಆಳ್ವ, ಆಶ್ರಮದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರಂಜನ್ ಮೊದಲಾದವರು ಉಪಸ್ಥಿತರಿದ್ದರು.

ಹೊರ ರಾಜ್ಯ ವಾರ್ತೆಗಳು

ಪುಣೆ ರೆಡ್ ಲೈಟ್ ಏರಿಯಾಕ್ಕೆ ಮಕ್ಕಳ ಆರೋಗ್ಯ ತಪಾಸಣೆಗಾಗಿ ಡಾ. ಸುಧಾಕರ್ ಶೆಟ್ಟಿ(ಪುಣೆ) ಯವರ ಪುನರಾಗಮನ.

ವಿಶೇಷ ಸಂದರ್ಶನ ವರದಿ: ಡಾ. ಅಶೋಕ್ ಶೆಟ್ಟಿ ಬಿ.ಎನ್.ಪುಣೆ: ಮೂವತ್ತು ವರ್ಷಗಳ ನಂತರ ಪುಣೆ ರೆಡ್ ಲೈಟ್ ಏರಿಯಾಕ್ಕೆ ಅಲ್ಲಿನ ಮಕ್ಕಳ ಅರೋಗ್ಯ ತಪಾಸಣೆಗಾಗಿ ಡಾ. ಸುಧಾಕರ್ ಶೆಟ್ಟಿಯವರ ಪುನರಾಗಮನವಾಗಿದೆ. 1995ರಲ್ಲಿ ಪುಣೆ ರೆಡ್ ಲೈಟ್ ಏರಿಯಾದ ವಾಣಿಜ್ಯ ಲೈಂಗಿಕ ಕಾರ್ಯಕರ್ತೆಯರ ಮಕ್ಕಳ ಆರೋಗ್ಯ ತಪಾಸಣೆ ಶಿಬಿರದಲ್ಲಿ ವೈದ್ಯಕೀಯ ಸಾಹಸಿ ಮಕ್ಕಳ ವೈದ್ಯ ಡಾ. ಸುಧಾಕರ್ ಶೆಟ್ಟಿಯವರು ಹೊಸ ದಾಖಲೆ ಬರೆದಿದ್ದರು. ವಾಣಿಜ್ಯ ಲೈಂಗಿಕ ಕಾರ್ಯಕರ್ತೆಯರ ಮಕ್ಕಳು ಕೂಡಾ ಸಮುದಾಯದ ಭವಿಷ್ಯವೆಂದು ಸಾರುವುದು ಡಾ. ಸುಧಾಕರ್ ಶೆಟ್ಟಿಯವರ ಉದ್ದೇಶವಾಗಿತ್ತು. ಆ ಸಂದರ್ಭದಲ್ಲಿ ಪುಣೆ ರೆಡ್ ಲೈಟ್ ಏರಿಯಾದಲ್ಲಿ ವಾಣಿಜ್ಯ ಲೈಂಗಿಕ ಕಾರ್ಯಕರ್ತೆಯರ ಮಕ್ಕಳ ಅರೋಗ್ಯ ತಪಾಸಣೆಗೆ ಅಂದಿನ ಸಂಸದ ಸುನೀಲ್ ದತ್ತ್ ಮತ್ತು ಪ್ರಖ್ಯಾತ ವೈದ್ಯರಾದ ಡಾ. ಐ. ಎಸ್. ಗಿಲಾದ ಅವರು ಸಂಪೂರ್ಣ ಸಹಕಾರ ನೀಡಿದ್ದರು. ಇದೀಗ ಡಾ.ಸುಧಾಕರ್ ಶೆಟ್ಟಿ ಅವರು ಮೂವತ್ತು ವರ್ಷಗಳ ನಂತರ ಮತ್ತೆ ಪುಣೆ ರೆಡ್ ಲೈಟ್ ಏರಿಯಾದಲ್ಲಿ ವಾಣಿಜ್ಯ ಲೈಂಗಿಕ ಕಾರ್ಯಕರ್ತೆಯರ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ನಡೆಸಲು ರೀ -ಎಂಟ್ರಿ ಕೊಟ್ಟಿದ್ದಾರೆ. ದೀಪಾವಳಿಯ ಶುಭ ಸಂದರ್ಭದಲ್ಲಿ ಈ ಪುನರಾಗಮನ ವೈದ್ಯಕೀಯ ಜಗತ್ತಿನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಎಲ್ಲರೂ ಡಾ. ಸುಧಾಕರ್ ಶೆಟ್ಟಿಯವರ ಸಾಹಸಮಯ ಸಾಧನೆಗೆ ಹ್ಯಾಟ್ಸ್ ಅಪ್ ಹೇಳಿದ್ದಾರೆ. ಡಾ. ಸುಧಾಕರ್ ಶೆಟ್ಟಿ ಅವರು ಪರಿಣಿತ ವೈದ್ಯಕಿಯ ತಂಡದ ಸಹಕಾರದೊಂದಿಗೆ ರೆಡ್ ಲೈಟ್ ಏರಿಯಾದ ಮಹಿಳೆಯರ ಮಕ್ಕಳ ಅಪೌಷ್ಟಿಕತೆ , ಚರ್ಮರೋಗ ಸೇರಿದಂತೆ ಆರೋಗ್ಯ ನ್ಯೂನ್ಯತೆಯ ಬಗ್ಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಿದ್ದಾರೆ.ಇದಕ್ಕೆ ಪುಣೆ ಪೊಲೀಸರ ಸಹಕಾರ ಸಿಕ್ಕಿದೆ. ಯಾಕೆಂದರೆ, ಡಾ. ಸುಧಾಕರ್ ಶೆಟ್ಟಿಯವರು ಪುಣೆ ಪೊಲೀಸ್ ಹಾಸ್ಪಿಟಲ್ ನಲ್ಲೂ ಮಕ್ಕಳ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಾ. ಸುಧಾಕರ್ ಶೆಟ್ಟಿಯವರು ಹೊರನಾಡ ಕನ್ನಡ ರತ್ನ ಮತ್ತು ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ -2022 ಪುರಸ್ಕೃತರು.ಸತತ ಮೂರು ಬಾರಿ ಕೇಂದ್ರ ಸರಕಾರದ ರಕ್ಷಾ ಮಂತ್ರಿ ಅವಾರ್ಡ್ ಪುರಸ್ಕೃತ ಪುಣೆ ವೈದ್ಯಕೀಯ ತಂಡದ ಸಕ್ರಿಯ ಸದಸ್ಯರಾಗಿರುವ ಡಾ. ಸುಧಾಕರ್ ಶೆಟ್ಟಿಯವರು ಚಾರ್ ಸಹಿ ಬಜಾದೆ ಪ್ರಶಸ್ತಿ ಪುರಸ್ಕೃತರು.

ಕರ್ನಾಟಕ ವಾರ್ತೆಗಳು

ರವಿ ಶೆಟ್ಟಿ ಮೂಡಂಬೈಲು ಹಾಗೂ ಮಿತ್ರಂಪಾಡಿ ಜಯರಾಮ ರೈಯವರಿಗೆ ‘ನವಕರ್ನಾಟಕ ರತ್ನ’ ಪ್ರಶಸ್ತಿ

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ಸಂಘ ಕತಾರ್ ನ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು ಹಾಗೂ ಅಬುಧಾಬಿಯ ಇಂಡಿಯಾ ಸೋಶಿಯಲ್ ಆಂಡ್ ಕಲ್ಚರ್ ಸೆಂಟರ್ ಅಧ್ಯಕ್ಷ ಜಯರಾಮ್ ರೈ ಮಿತ್ರಂಪಾಡಿಯವರು ಸಮಾಜಸೇವೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನದಲ್ಲಿ ಪ್ರತಿಷ್ಠಿತ ನವಕರ್ನಾಟಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಯುಎಇ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಸಮ್ಮೇಳನದ ಅಧ್ಯಕ್ಷರಾಗಿ ಆಗಮಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್‌ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗ್ಗೆ 9 ಗಂಟೆಗೆ ಸಿಟಿ ವಲಯದ ಪ್ರಧಾನ ಗುರುಗಳಾದ ವಂದನೀಯ ಜೇಮ್ಸ್ ಡಿಸೋಜ ಅವರು ನೆರವೇರಿಸಿದರು. ವೇದಿಕೆಯಲ್ಲಿ ಧರ್ಮ ಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫೆಡ್ರಿಕ್ ಲೋಬೊ, ವಸತಿ ಯಾಜಕರಾದ ವಂದನೀಯ ಸ್ಟ್ತಾನಿ ಫೆರ್ನಾಂಡಿಸ್, ಸೇವಾದರ್ಶಿ ಬ್ರ. ಜೀವನ್ ಲೋಬೊ, ವೈಸಿಎಸ್ ವಲಯ ನಿರ್ದೇಶಕರಾದ ವಂದನೀಯ ವಿಜಯ ಮೊಂತೆರೊ, ಧರ್ಮಕ್ಷೇತ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪೌಲ್ ರೊಡ್ರಿಗಸ್, ಕಾರ್ಯದರ್ಶಿ ಲೊಲಿನಾ ಡಿಸೋಜ, ವಲಯ ಸಚೇತಕಿ ರೆನಿಟಾ ಮಿನೇಜಸ್, ಘಟಕ ಸಚೇತಕ ರೋಶನ್ ಪತ್ರಾವೊ, ಧರ್ಮಪ್ರಾಂತ್ಯದ ವೈಸಿಎಸ್ ಅಧ್ಯಕ್ಷ ಡಿಯೋನ್ ಸಲ್ದಾನಾ, ವಲಯ ವೈಸಿಎಸ್ ಅಧ್ಯಕ್ಷ ಡ್ಯಾರೆಲ್ ಮೊಂತೇರೊ, ಘಟಕಾಧ್ಯಕ್ಷ ಲಿಯೋನ್ ಡಿಸೋಜ ಅವರು ಉಪಸ್ಥಿತರಿದ್ದರು.ವೈಯಕ್ತಿಕ ಗಾಯನ, ಪಂಗಡ ಗಾಯನ ಹಾಗೂ ವೆರೈಟಿ ವಿಭಾಗಗಳಲ್ಲಿ 9 ಘಟಕಗಳ 130 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಜೆ 4.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಸಿಎಸ್ ಕುಲಶೇಖರ ಘಟಕ ಪ್ರಥಮ ಸಮಗ್ರ ಪ್ರಶಸ್ತಿ, ಆಂಜೆಲೊರ್ ವೈಸಿಎಸ್ ಘಟಕ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.

ಹೊರ ರಾಜ್ಯ ವಾರ್ತೆಗಳು

Well known child specialist Dr. Sudhakar shetty(Pune)makes a great come back to treat children in Pune”s red light area.

pune:In 1995, with the support of MP Sunil dutt & Dr I S Gilada,Dr Shetty had set an example to the medical faternity that care & health of children of commercial sex workers (CSW) is very important as they are also the future of the community. After 30 years he is re entering this area to uplift their health by preventing malnutrition & various vitamin deficiency, skin diseases,behavioral problems & School drop outs.He has recieved the support of the Police department as Dr Shetty works at Police hospital as a Pediatrician. On the occasion of deepavali Dr Shetty was pledged to bring light and meaning to the life of these childrenDr shetty will be doing this work as a part of the outreach ( community service) programme of his Baby friend clinic.He will also help all NGOs working in that area. He is a recipient of horanada kannada ratna & dakshina kannada zilla Rajyotsava award 2022

ಪ್ರಾದೇಶಿಕ ವಾರ್ತೆಗಳು

ನಾಲ್ವರು ಪತ್ರಕರ್ತರಿಗೆ ಜಿಲ್ಲಾ ಪ್ರಶಸ್ತಿ

ಮಂಗಳೂರು: ಇಂದು ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಪತ್ರಕರ್ತರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಪುಷ್ಪರಾಜ್ ಬಿ.ಎನ್. (ವಾರ್ತಾ ಭಾರತಿ), ರಾಜೇಶ್ ರಾವ್ (ನಮ್ಮ ಕುಡ್ಲ), ಸುಖಪಾಲ್ ಪೊಳಲಿ (ಪಬ್ಲಿಕ್ ಟಿ.ವಿ.), ಮತ್ತು ಐ.ಬಿ. ಸಂದೀಪ್ ಕುಮಾರ್ (ಹೊಸದಿಗಂತ) ಇವರು ಇಂದು ಜಿಲ್ಲಾ ಪ್ರಶಸ್ತಿ ಪಡೆದ ಪತ್ರಕರ್ತರಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ MPMLA’s ನ್ಯೂಸ್ ಶುಭ ಹಾರೈಸುತ್ತದೆ.

ಕರ್ನಾಟಕ ವಾರ್ತೆಗಳು

ವಿಧಾನ ಸೌಧದಲ್ಲಿ ಸದ್ದು ಮಾಡಿದ mpmlasnewstv 24×7 news portal.

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪಾರದರ್ಶಕವೇ ಎಂದು mpmlasnewstv 24×7 news portal ತನಿಖಾ ವರದಿ ಪ್ರಕಟಿಸಿತ್ತು.ಈ ವರದಿಯಲ್ಲಿ ಉದ್ಯಮಿಯೊಬ್ಬರು ರಾಜ್ಯೋತ್ಸವ ಪ್ರಶಸ್ತಿ ಪಡೆಯುವುದಕ್ಕಾಗಿ 15 ಲಕ್ಷ ರೂಪಾಯಿ ಖರ್ಚು ಮಾಡಿರುವ ಬಗ್ಗೆ ಬರೆಯಲಾಗಿತ್ತು.ಈ ಹಿನ್ನಲೆಯಲ್ಲಿ ಜನಸಾಮಾನ್ಯರಿಗೆ, ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ಪಡೆಯಲು ಸಾಧ್ಯವೇ? ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಖುದ್ದು ಪರಿಶೀಲಿಸಿ ಅರ್ಹರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಹೇಳಲಾಗಿತ್ತು.ಇದು ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಬಿಡುಗಡೆಯ ದಿವಸ ಸಿಎಂ ಸಿದ್ಧರಾಮಯ್ಯರವರ ಗಮನಕ್ಕೆ ಬಂದು ಅವರು ರಾಜ್ಯೋತ್ಸವ ಪಟ್ಟಿಯಲ್ಲಿದ್ದ ಆ ಉದ್ಯಮಿಯ ಹೆಸರನ್ನು ಪಟ್ಟಿಯಿಂದಲೇ ಕಿತ್ತೆಸೆದು ಪ್ರಾಮಾಣಿಕ ಮತ್ತು ಅರ್ಹರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದರು.ಇದು mpmlasnewstv 24×7 news portal ವರದಿಗೆ ಸಂದ ಜಯವಾಗಿದೆ.

ಪ್ರಾದೇಶಿಕ ವಾರ್ತೆಗಳು

ಕೊನೆಗೂ ನಾಲ್ವರು ಪತ್ರಕರ್ತರಿಗೆ ಜಿಲ್ಲಾ ಪ್ರಶಸ್ತಿ ನೀಡಿದ ಜಿಲ್ಲಾಡಳಿತ.

ಮಂಗಳೂರು: ಅಕ್ಟೋಬರ್ 31ರಂದು ಜಿಲ್ಲಾ ಪ್ರಶಸ್ತಿಯ ಪಟ್ಟಿ ಬಿಡುಗಡೆಯಲ್ಲಿ ಒಬ್ಬ ಪತ್ರಕರ್ತರಿಗೆ ಮಾತ್ರ ಪ್ರಶಸ್ತಿ ಘೋಷಿಸಲಾಗಿತ್ತು.ಆದರೆ, ಪತ್ರಕರ್ತ ಸಂಘದಿಂದ ನಾಲ್ವರು ಪತ್ರಕರ್ತರನ್ನು ಶಿಫಾರಸ್ಸು ಮಾಡಲಾಗಿತ್ತು. ಜಿಲ್ಲಾಡಳಿತದ ಈ ಕ್ರಮ ವ್ಯಾಪಕ ಅಸಮಾಧಾನಗಳಿಗೆ ಕಾರಣವಾದಾಗ ಈ ಬಗ್ಗೆ MPMLA’s ನ್ಯೂಸ್ ಬೆಳಕು ಚೆಲ್ಲಿ ಜಿಲ್ಲಾಧಿಕಾರಿಯವರು ತಕ್ಷಣ ಪತ್ರಕರ್ತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕೇಳಿಕೊಂಡಿತು. ಅದೇ ರೀತಿ ಪತ್ರಕರ್ತ ಸಂಘದಿಂದಲೂ ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು. ಕೂಡಲೇ ಎಚ್ಚೆತ್ತುಗೊಂಡ ಜಿಲ್ಲಾಡಳಿತ ಕೊನೆಗೂ ನಾಲ್ವರು ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಿತು.

Scroll to Top