Author name: editor

ಪ್ರಾದೇಶಿಕ ವಾರ್ತೆಗಳು

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ: ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 105 ಪದಕಗಳು

ಮಂಗಳೂರು: ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ಗಳು ಅಮೋಘ ಸಾಧನೆ ಮೆರೆದಿದ್ದಾರೆ.ಹೈಫ್ಲೈರ‍್ಸ್ ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ ಗಳು ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಗೆದ್ದು ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾದರು.‌ ರಾಜ್ಯ ಮಟ್ಟದ ಸ್ರ‍್ಧೆಯು ನವೆಂಬರ್ ತಿಂಗಳಿನಲ್ಲಿ ಮೈಸೂರಿನಲ್ಲಿ ನಡೆಯಲಿದೆ.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ 42 ಸ್ಕೇಟರ್ ಗಳು ಭಾಗವಹಿಸಿದ್ದು, 56 ಚಿನ್ನ, 33 ಬೆಳ್ಳಿ ಹಾಗೂ 16 ಕಂಚಿನ ಪದಕ ಗಳಿಸಿ ಗಮನ ಸೆಳೆದರು.‌ ಇವರೆಲ್ಲರೂ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ಪದಕ ಪಡೆದ ಸ್ಕೇರ‍್ಸ್ ಗಳ ವಿವರ:ತನ್ಮಯ್ ಕೊಟ್ಟಾರಿ – 4 ಚಿನ್ನಮುಹಮ್ಮದ್ ಶಾಮಿಲ್ ರ‍್ಷಾದ್ – 4 ಚಿನ್ನಡಾಶಿಯಲ್ ಆಮಂಡಾ ಕಾನ್ಸೆಸ್ಸಾವ್ – 4 ಚಿನ್ನಡೇನಿಯಲ್ ಸಾಲ್ವಡೋರ ಕಾನ್ಸೆಸ್ಸಾವ್ – 4 ಚಿನ್ನಶೀಹಾನ್ ಎ.ಆರ್. – 3 ಚಿನ್ನರಿತ್ವಿಕಾ ಮಲ್ಯ – 3 ಚಿನ್ನಜೆಸ್ನಿಯಾ ಕರ‍್ರೆಯ – 3 ಚಿನ್ನಶಾಲೋಮ್ ಕ್ರಿಶ್ಚಿನ್ – 3 ಚಿನ್ನಗ್ರೀಷ್ಮಾ ಶೆಟ್ಟಿ – 3 ಚಿನ್ನಇದ್ಧಾಂತ್ ಯೋಗಿ – 3 ಚಿನ್ನಹಿಮಾನಿ ಕೆ.ವಿ. – 3 ಚಿನ್ನಮುಹಮ್ಮದ್ ಆಯಾನ್ – 3 ಚಿನ್ನಲಕ್ಷ್. ಡಿ. ಎಸ್. ಗೌಡ – 3 ಚಿನ್ನರೆಯಾನ್ಶ್ ಕೆ – 2 ಚಿನ್ನಜೇನಿಷಾ – 2 ಚಿನ್ನ, 1ಬೆಳ್ಳಿಅಡಪಾ ಡೇವಿಡ್ ಆಚರ‍್ಯ – 2 ಚಿನ್ನ, 1 ಬೆಳ್ಳಿಶಿವಾಂಶ್ ಕೆ.ಪಿ. ಶೆಟ್ಟಿ – 1 ಚಿನ್ನ 2 ಬೆಳ್ಳಿಈಶಾನಿ ಕೆ.ವಿ. – 1 ಚಿನ್ನ 2 ಬೆಳ್ಳಿಜಿಷ್ಣು : 1 ಚಿನ್ನ 2 ಬೆಳ್ಳಿಎಂ. ಆಕಾಂಶಾ ಪೈ – 1 ಚಿನ್ನ, 2 ಬೆಳ್ಳಿಕೇಟ್ ರ‍್ವಿವಾಜ್ – 1 ಚಿನ್ನ, 1 ಬೆಳ್ಳಿ, 1 ಕಂಚುಶ್ರೇಷ್ಟ್ ಮಲ್ಲಿ – 1 ಚಿನ್ನ, 1ಬೆಳ್ಳಿ, 1 ಕಂಚುಮರ‍್ಯ ಕಿರಣ್ ಬಂಜನ್ – 1 ಚಿನ್ನ, 1 ಬೆಳ್ಳಿ, 1 ಕಂಚುಸ್ಪೃಹಾ ಜೈಶ್ವರ್ – 3 ಬೆಳ್ಳಿಎ. ಡೇವಿನ ಮಹೇಶ್ – 3 ಬೆಳ್ಳಿಡೆಲಿನಾ ಒಳಿಡಾ ಮೆಂಡೋನ್ಸ – 2 ಬೆಳ್ಳಿ, 1 ಕಂಚುಅಕ್ಷೋಬ್ಯಾ ಜಿ.ಎಸ್. – 2 ಬೆಳ್ಳಿ,‌ 1 ಕಂಚುಅನಿಕಾ ಸಚಿನ್ ಉಚ್ಚಿಲ‌ – 2 ಬೆಳ್ಳಿ, 1 ಕಂಚುನೈವೇದ್ಯ ಪಾಂಡೇ – 2 ಬೆಳ್ಳಿ, 1 ಕಂಚುರಕ್ಷ್ ಡಿ.ಎಸ್. ಗೌಡ – 2 ಬೆಳ್ಳಿಪ್ರದ್ಯುಮ್ನ ರಾವ್ ಎಚ್. – 1 ಬೆಳ್ಳಿ, 1 ಕಂಚುಭೂಮಿಕಾ ವಿ. ಭಟ್ – 1 ಬೆಳ್ಳಿ , 1 ಕಂಚುಎಂ. ಅಮನ್ ಅರುಣ್ ಶೇಟ್ – 1 ಬೆಳ್ಳಿ, 1 ಕಂಚುಅಮಯ್ ಸಚಿನ್ ಉಚ್ಚಿಲ – 1 ಬೆಳ್ಳಿನೀವೇದ್ ಅನಿಶ್ – 3 ಕಂಚುಸನ್ನಿಧಿ ಪಿ. ಭಂಡಾರಿ – 2 ಕಂಚುಮೇಧಾಂಶ್ ನೇತ್ರಕೆರೆ – 1 ಕಂಚು

ಪ್ರಾದೇಶಿಕ ವಾರ್ತೆಗಳು

ನ.9-10ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಟಿ ಸಮಾವೇಶ-2024

ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್.ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು ನಮ್ಮ ಈ ಸಮಾವೇಶವು ಮುಖ್ಯವಾಗಿ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧೈಯಘೋಷವನ್ನು ಹೊಂದಿದ್ದೆ. ಮೂಲತಃ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಈ ಸಮುದಾಯದ ಸುಮಾರು ಶೇಕಾಡ 80ರಷ್ಟು ಜನ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು ಇವರು ಅನೇಕ ಸಮಸ್ಯೆಗಳನ್ನು ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ, ಹಾಗೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಅನಾವರಣೆ ಮಡುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸುಮಾರು 15 ರಿಂದ 20 ಸಾವಿರ ಜನ ಭಾಗವಹಿಸುವವರಿದ್ದಾರೆ.ಈ ಸಮಾವೇಶದಲ್ಲಿ ಮರಾಟಿಗರ ವಿವಿಧ ಆಚಾರ-ವಿಚಾರ ಸಂಸ್ಕಾರಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ, ಮೂರು ಗೋಷ್ಠಿಗಳು, ಉಪನ್ಯಾಸ ಹಾಗೂ ಸನ್ಮಾನ ಮತ್ತು ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ನಮ್ಮ ಬಹು ನಿರೀಕ್ಷೆಯ “ಗದ್ದಿಗೆ” ಸ್ಮರಣ ಸಂಚಿಕೆಯನ್ನು ಡಾ.ಎಂ.ಮೋಹನ್ ಆಳ್ವರವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸಮಾಜದ ಶ್ರೇಷ್ಠ ಸಾಧನೆಯನ್ನು ಮಾಡಿರುವ ಪದ್ಮಶ್ರೀ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕರವರನ್ನು ಸನ್ಮಾನ ಮಾಡಲಾಗುವುದು. ಮರಾಟಿಗರ ಅಹವಾಲುಗಳನ್ನು ನಮ್ಮ ಸಮಾವೇಶದ ಗೌರವಾಧ್ಯಕ್ಷರಾದ ಡಾ.ಕೆ.ಸುಂದರ್ ನಾಯಕ್ ರವರು ಮುಖ್ಯಮಂತ್ರಿಗಳಿಗೆ ಅರ್ಪಿಸಲಿದ್ದಾರೆ. ಹಾಗೆಯೇ ರಾಷ್ಟ್ರಮಟ್ಟದಲ್ಲಿ ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಸಮಾಜದ ಆನೇಕ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು“ ಎಂದರು.ನ.9ರಂದು ಕರ್ನಾಟಕ ಮರಾಟಿ ಸಂಘ (ರಿ.) ಬೆಂಗಳೂರು ಇವರ ಸಹಕಾರದಿಂದ ಮರಾಟಿಗರಿಗಾಗಿಯೇ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು ಈಗಾಗಲೇ 1500ಕ್ಕೂ ಹೆಚ್ಚು ಮರಾಟಿ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಈ ಸಮಾವೇಶದ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ದೂರದ ಊರಿನ ಮರಾಟ ಬಂಧುಗಳಿಗೆ ವಸತಿ ವ್ಯವಸ್ಥೆ ಮತ್ತು ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು.ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎಂ. ಮೋಹನ್ ಆಳ್ವ, ಎನ್.ಎಸ್.ಮಂಜುನಾಥ್, ರತಿ ಪ್ರಭಾಕರ ನಾಯ್ಕ, ಹಾಗೂ ಪ್ರವೀಣ್ ಕುಮಾರ್ ಮುಗುಳಿ ನಮ್ಮೊಂದಿಗೆ ಸಹಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮುಖ್ಯ ಅತಿಥಿಗಳಾಗಿ, ಶಾಸಕಉಮಾನಾಥ ಕೋಟ್ಯಾನ್, ಐವನ್ ಡಿ’ಸೋಜ, ಕೆ.ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಶಶಿಧರ್ ಶೆಟ್ಟಿ ಬರೋಡಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಸಮಾರೋಪ ಸಮಾರಂಭದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಡಾ.ಎಂ ಮೋಹನ್ ಆಳ್ವ, ಕೆನರಾ ಬ್ಯಾಂಕ್ ಜಿ.ಎಂ. ಶ್ರೀ ರಾಮ ನಾಯ್ಕ್, ದ.ಕ,ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ“ ಎಂದರು. ಪತ್ರಿಕಾಗೋಷ್ಟಿಯಲ್ಲಿ ಡಾ.ಕೆ.ಸುಂದರ್ ನಾಯಕ್, ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ, ರತ್ನಾವತಿ, ಎನ್.ವಿಶ್ವನಾಥ್ ನಾಯಕ್, ಮಹಾಲಿಂಗ ನಾಯಕ್, ಗೌತಮ್ ಮತ್ತಿತರರು ಉಪಸ್ಥಿತರಿದ್ದರು.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಅ.23ರಂದು ಅರವಿಂದ ಬೋಳಾರ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅ.23ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಜನಪ್ರಿಯ ನಟ ಅರವಿಂದ ಬೋಳಾರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

‘ಮಾದಕ ವ್ಯಸನಗಳ ಬಗ್ಗೆ ಯುವಜನತೆ ಜಾಗೃತರಾಗಿರಿ’ ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ

ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರ ನಿರ್ದೇಶನದಂತೆ ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ಜರುಗಿದ ಈ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮದ‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು “ಮಾದಕದ್ರವ್ಯ ವ್ಯಸನ ಮತ್ತು ಪರಿಹಾರೋಪಾಯಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವೈದ್ಯರ ಸಲಹೆಯಂತೆ ಪಡೆಯುವ ಔಷಧಗಳು ಅಧಿಕೃತ. ವೈದ್ಯರ ಸಲಹೆ ಇಲ್ಲದೆ ಪಡೆಯುವ ಔಷಧಗಳು ಅಕ್ರಮ ಹಾಗೂ ಹಾನಿಕಾರಕ ಪರಿಣಾಮಗಳನ್ನು ಬೀರುತ್ತವೆ. ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದರು. ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಭರವಸೆಯನ್ನು ಹೊಂದಿ ಉತ್ತಮ ಶಿಕ್ಷಣವನ್ನು ನೀಡಲು ಮುಂದಾಗುವರು. ಅವರ ನಿರೀಕ್ಷೆಯಂತೆ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಅಳವಡಿಸಿ ಮುನ್ನಡೆಯುವಂತೆ ಅವರು ಕರೆಯಿತ್ತರು.ಇನ್ನೋರ್ವ ಅತಿಥಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಸಹಾಯಕ ನಿರ್ದೇಶಕರಾದ ಸೂರ್ಯನಾರಾಯಣ ಭಟ್ ಅವರು “ಆಧುನಿಕ ಸಮಾಜದಲ್ಲಿ ಸಮೂಹ ಮಾಧ್ಯಮಗಳ ಬಳಕೆ” ಬಗ್ಗೆ ಮಾತನಾಡಿ ಮಾಧ್ಯಮಗಳು ಬೆಳೆದುಬಂದ ಮೈಲಿಗಲ್ಲುಗಳ ಬಗ್ಗೆ ಮಾಹಿತಿ ನೀಡಿದರು.ನವೀನ ಮಾಧ್ಯಮದ ಕುರಿತು ಮಾತಾಡಿದ ಅವರು ಶಿಕ್ಷಣ, ಮಾಹಿತಿ ಮತ್ತು ಮನರಂಜನೆಗಾಗಿ ಮಾಧ್ಯಮಗಳು ಬಳಕೆಯಾಗುತ್ತವೆ. ಇದರಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗುತ್ತದೆ. ಆದುದರಿಂದ ಮಾಹಿತಿಗಳನ್ನು ಹಂಚಿಕೊಳ್ಳುವಾಗ ಅತ್ಯಂತ ಎಚ್ಚರಿಕೆ ಅಗತ್ಯ ಎಂದು ತಿಳಿಸಿದರು.ಅಮೃತಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಗೌರವ ಸಲಹೆಗಾರ ಡಾ. ಜೀವರಾಜ್ ಸೊರಕೆ ಅಮ್ಮ ಮತ್ತು ಆಶ್ರಮದ ಪರಿಚಯ ನೀಡಿದರು. ಕೇಂದ್ರದ ಅಧ್ಯಕ್ಷ ಡಾ.ವಸಂತಕುಮಾರ ಪೆರ್ಲ ಅವರು 2018 ರಿಂದ ಅತ್ಯುತ್ತಮ ಕಾರ್ಯಕ್ರಮಗಳೊಂದಿಗೆ ಯುವ ಸಮುದಾಯಕ್ಕೆ ಸ್ಪೂರ್ತಿ ತುಂಬುವ ಕಾರ್ಯ ಯಶಸ್ವಿಯಾಗಿ ಈ ಕೇಂದ್ರದಿಂದ ನಡೆಯುತ್ತಿದೆ ಎಂದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಅತಿಥಿಗಳ ಪರಿಚಯವಿತ್ತರು. ಅತಿಥಿಗಳು ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಾಭಿವೃದ್ಧಿ ಸಮಿತಿ ಹಾಗೂ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಸ್ವಾಗತಿಸಿದರು, ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ವಂದಿಸಿದರು. ಪ್ರವೀಣ್ ಚಂದ್ರ ಶರ್ಮ ವಂದಿಸಿದರು.ಚಿತ್ರಗಳು: ಸತೀಶ್ ಕಾಪಿಕಾಡ್

ಅಂತಾರಾಷ್ಟ್ರೀಯ ವಾರ್ತೆಗಳು

ಮಿತ್ರಂಪಾಡಿ ಜಯರಾಮ ರೈಯವರಿಗೆ ಬೆಂಗಳೂರಿನಲ್ಲಿ ನವಕರ್ನಾಟಕ ರತ್ನ ಪ್ರಶಸ್ತಿ ಮತ್ತು ದುಬೈ ಗಡಿನಾಡ ಉತ್ಸವದಲ್ಲಿ ನಾಗರಿಕ ಸನ್ಮಾನ.

ಬೆಂಗಳೂರು /ದುಬೈ :ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆ ಇಂಡಿಯನ್ ಸೋಶಿಯಲ್ ಅಂಡ್ ಕಲ್ಚರಲ್ ಸೆಂಟರ್ ಅಬುಧಾಬಿಯ ಅಧ್ಯಕ್ಷರಾಗಿರುವ ಮಿತ್ರಂಪಾಡಿ ಜಯರಾಮ ರೈಯವರಿಗೆ ಬೆಂಗಳೂರಿನಲ್ಲಿ ನಡೆದ ಪ್ರಥಮ ಕರ್ನಾಟಕ ಎನ್ಆರ್ ಐ ಸಮ್ಮೇಳನದಲ್ಲಿ ಪ್ರತಿಷ್ಟಿತ ನವಕರ್ನಾಟಕ ಪ್ರಶಸ್ತಿ ಮತ್ತು ದುಬೈಯಲ್ಲಿ ನಡೆದ ಗಡಿನಾಡ ಉತ್ಸವದಲ್ಲಿ ನಾಗರಿಕ ಸನ್ಮಾನ ಮಾಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಮಿತ್ರಂಪಾಡಿ ಜಯರಾಮ ರೈಯವರು ಲೋಕೋಪಕಾರ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ನಿಸ್ವಾರ್ಥ ಮತ್ತು ವಿಶಿಷ್ಟ ಸೇವೆಗಾಗಿ ಅವರನ್ನು ಪ್ರಶಸ್ತಿ, ಸನ್ಮಾನದೊಂದಿಗೆ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉಪಸ್ಥಿತರಿದ್ದರು

ಪ್ರಾದೇಶಿಕ ವಾರ್ತೆಗಳು

ಅಂತಾರಾಷ್ಟ್ರೀಯ ಮುಕ್ತ ಹಿರಿಯರ ಕ್ರೀಡಾಕೂಟದಲ್ಲಿ ಗ್ಲೇಡಿಸ್ ಪಾಯ್ಸ್ ಪ್ರಥಮ

ಅಕ್ಟೋಬರ್ 12 ಮತ್ತು 13ರಂದು ಮಲೇಷ್ಯಾ ದಲ್ಲಿ ನಡೆದ 36ನೇ ಅಂತಾರಾಷ್ಟ್ರೀಯ ಮುಕ್ತ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳ ನಿವಾಸಿ ಶ್ರೀಮತಿ ಗ್ಲೇಡಿಸ್ ಪಾಯ್ಸ್ ರವರು 200 ಮೀ. ಓಟ, 400 ಮೀ. ಓಟ,ಉದ್ದ ಜಿಗಿತ ಹಾಗು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಪ್ರಾದೇಶಿಕ ವಾರ್ತೆಗಳು

‘ಎಸ್‌ಒಎಸ್’ ಕಿರುಚಿತ್ರದಿಂದ ಮಹತ್ವದ ಸಂದೇಶ : ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್. ಅಭಿಪ್ರಾಯ

ಮಂಗಳೂರು : ಅತ್ಯಾಚಾರ, ಅಪಘಾತದಂತಹ ಘಟನೆ ಸಂಭವಿಸಿದಾಗ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎನ್ನುವ ಮಹತ್ವದ ಸಂದೇಶವನ್ನು ಎಸ್‌ಒಎಸ್ (ಸೇವ್ ಅವರ್ ಸೋಲ್ ) ಕಿರುಚಿತ್ರದಲ್ಲಿ ಮನೋಜ್ಞವಾಗಿ ತೋರಿಸಲಾಗಿದೆ. ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಅರಿವು ಮೂಡಿಸಲು ಕೂಡಾ ಈ ಕಿರುಚಿತ್ರದಲ್ಲಿ ಪ್ರಯತ್ನಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್. ಹೇಳಿದರು.ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ ಬುಧವಾರ ನಡೆದ ‘ಸೇವ್ ಅವರ್ ಸೋಲ್ ‘ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಗಳಾಗಿದ್ದ ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಡಿಸಿಪಿ ಸಿದ್ಧಾರ್ಥ ಗೋಯಲ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ .ಡಿ.ಎಸ್. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಶುಭ ಹಾರೈಸಿದರು.ಎ.ಯು. ಕ್ರಿಯೇಶನ್ಸ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಎಸ್‌ಒಎಸ್ ಕಿರುಚಿತ್ರ ಅ.18ರಂದು ಯು ಟ್ಯೂಬ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಯು.ಜಿ.ರಾಧ ತಿಳಿಸಿದರು.ಚಿತ್ರದ ನಿರ್ದೇಶಕ ಅಚಲ್ ಉಬರಡ್ಕ , ಸಹ ನಿರ್ದೇಶಕರಾದ ಗುರುಮೂರ್ತಿ ಅಮ್ಮಣ್ಣಾಯ , ರತ್ನ ಸಿಂಚನ, ಸಂಗೀತ ನಿರ್ದೇಶಕ ಸಾತ್ವಿಕ್ ಪಡಿಯಾರ್ , ಛಾಯಾಗ್ರಾಹಕ ಷಣ್ಮುಖ ಪ್ರಸಾದ್, ತಾಂತ್ರಿಕ ಸಲಹೆಗಾರ ಅನೀಶ್ ಗಾಣಿಗ , ಪ್ರಸಾದ ಕೊಲ ಉಪಸ್ಥಿತರಿದ್ದರು. ರಚನ ಗುಡಿಗಾರ್ ಕಾರ್ಯಕ್ರಮ ನಿರೂಪಿಸಿದರು.

ಹೊರ ರಾಜ್ಯ ವಾರ್ತೆಗಳು

Navratri Festival, traditional koralaparba,Navadurga Award distribution held in Pune Buntara Bhavana

Pune:Golden jubilee year – auspicious Navratri Festival, traditional Korala Parba, prestigious Navadurge Award distribution and mesmerizing Dandiya Raas were held in Buntara Bhavana on 12th October 2024. Union Minister of State for Civil aviation & Cooperation – Mr Murlidhar Anna Mohol, Maharashtra State Higher and Technical Education Minister – Mr Chandrakant Dada Patil grace the ocassion with their presence as a Chief Guests. Renowned Hotelier from Baramati and our Trustee – Mr Shridhar Shetty, Bunts Sangha Pimpri Chinchwad ladies wing Chairperson – Mrs Prabha S Shetty and Bunts Association Pune ladies wing Chairperson – Mrs Reshma R Shetty were the Guest of Honours for packed event which was presided by our President Mr Santosh V Shetty. Traditional festival of Tulunad – Korala Parba performed with all devotion by our General Secretary Mr Ajith Hegde and his better half Mrs Shammi A Hegde.Very meaningful “Navadurge Award”, which is the brainchild of our President, presented to Nine outstanding women, who brought visible changes in the lives of ordinary citizens of Pune.Later in the evening, our members from Managing Committee, Ladies Wing, Youth Wing, North zone, South zone and East Zone performed stunning Dandiya Raas.Memorable day ended with mouthwatering Dinner catered by iconic Shahji’s.

Scroll to Top