Author name: editor

ಕ್ರೀಡಾಂಗಣ

ಸ್ಪಿನ್ ದಾಳಿಯನ್ನು ನಿಭಾಯಿಸಲಾಗದೆ ಶ್ರೀಲಂಕಾ ವಿರುದ್ದ 27 ವರ್ಷಗಳ ನಂತರ ಏಕದಿನ ಕ್ರಿಕೆಟ್ ನಲ್ಲಿ ಸರಣೆ ಕಳೆದುಕೊಂಡ ಭಾರತ.

ಸ್ಪೋರ್ಟ್ಸ್ ರಿಪೋರ್ಟ್: ಡಾ.ಅಶೋಕ್ ಶೆಟ್ಟಿ ಬಿ. ಎನ್.ಮಂಗಳೂರು: ಭಾರತ ಕ್ರಿಕೆಟ್ ತಂಡ 3 ಪಂದ್ಯ ಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯವನ್ನು ಟೈಗೆ ಸಮಾಧಾನ ಪಟ್ಟು ನಂತರದ ಎರಡು ಪಂದ್ಯಗಳನ್ನು ಸೋತಿದೆ. ಮೂರನೇ ಪಂದ್ಯದಲ್ಲಿ 110 ರನ್ ಗಳ ಭಾರೀ ಅಂತರದಲ್ಲಿ ಪರಾಜಯ ಅನುಭವಿಸಿ ತೀವ್ರ ಮುಖಭಂಗಗೊಳಗಾಗಿದೆ. ಈ ಸರಣೆಯಲ್ಲಿ ಬುಮ್ರಾರನ್ನು ಕೈ ಬಿಟ್ಟದ್ದು, ಅಗ್ರ ಸರಣೆಯ ಬ್ಯಾಟರ್ ಗಳ ಬ್ಯಾಟಿಂಗ್ ವೈಫಲ್ಯ ಸೋಲಿಗೆ ಕಾರಣವಾಗಿದೆ. ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ. ಎಲ್. ರಾಹುಲ್, ದುಬೆ, ಪಂತ್ ಲೆಕ್ಕ ಭರ್ತಿಗಷ್ಟೇ ಆಡಿದರು. ಇವರ ಬ್ಯಾಟ್ ನಿಂದ ರನ್ ಬರಲೇ ಇಲ್ಲ. ಬಲಿಷ್ಠ ಭಾರತ ದುರ್ಬಲ ಶ್ರೀಲಂಕಾದ ವಿರುದ್ದ ಸೋತದ್ದು ನೂತನ ಕೋಚ್ ಗೌತಮ್ ಗಂಭೀರ್ ಗೆ ಸವಲಾಗಿ ಪರಿಣಮಿಸಿದೆ. ಇನ್ನು ಮುಂದಾದರೂ ಈ ಸೋಲಿನಿಂದ ಭಾರತ ಕ್ರಿಕೆಟ್ ತಂಡ ಪಾಠ ಕಲಿತು ಬಲಿಷ್ಠ ತಂಡವನ್ನು ರೂಪಿಸಲೆಂದು ಅಭಿಮಾನಿಗಳು ಆಶಯ ವ್ಯಕ್ತ ಪಡಿಸಿದ್ದಾರೆ

ಪ್ರಾದೇಶಿಕ ವಾರ್ತೆಗಳು

‘ಮನೋಹರ ಪ್ರಸಾದ್ ನೆನಪು’ ಕಾರ್ಯಕ್ರಮದಲ್ಲಿ ಡಾ. ಎಂ. ಮೋಹನ್ ಆಳ್ವ. ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್ ಮನೋಹರ್ ಪ್ರಸಾದ್.’

ವಿದ್ಯಾಗಿರಿ(ಮೂಡುಬಿದಿರೆ): ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್’ ಮನೋಹರ ಪ್ರಸಾದ್’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಣ್ಣಿಸಿದರು.ಇಲ್ಲಿನ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲ್ಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ನಡೆದ ‘ಮನೋಹರ ಪ್ರಸಾದ್ ನೆನಪು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅವರು ಪತ್ರಕರ್ತರಿಗಿಂತ ಹೆಚ್ಚಾಗಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಂತೆ ಜನಮಾನಸದಲ್ಲಿ ಬೆರೆತು ಹೋಗಿದ್ದರು. ಅವರದ್ದು ಬಹುಮುಖಿ ವ್ಯಕ್ತಿತ್ವ. ಅವರ ಹೆಸರನ್ನು ವಿರಾಸತ್ ನಲ್ಲಿ ನಾವು ಈ ಬಾರಿ ಸ್ಮರಿಸಿಕೊಳ್ಳುತ್ತೇವೆ ಎಂದರು.ನಾನು ಮತ್ತು ಮನೋಹರ್ ಸಮಕಾಲೀನರು ಹಾಗೂ ಗ್ರಾಮೀಣ ಸ್ಪಂದನೆಯವರು. ನಮ್ಮದು ಹುಚ್ಚು ಮನಸ್ಸಿನ ಹತ್ತು ಮುಖಗಳು. ಮನೋಹರ್ ಶಿಕ್ಷಕ ಆಗಿರಬೇಕಿತ್ತು ಎಂದರು.ಅಪೂರ್ವ ಜ್ಞಾಪಕ ಶಕ್ತಿ. ಸಮಯಕ್ಕೆ ತಕ್ಕಂತೆ ಸ್ಪಂದಿಸುತ್ತಿದ್ದ ಅವರೊಂದು ವಿಶ್ವಕೋಶ. ಖ್ಯಾತ ನಟ ಮಮ್ಮುಟ್ಟಿ ಮಂಗಳೂರಿಗೆ ಬಂದಿದ್ದಾಗ ಅವರು ಸಂದರ್ಶನ ಮಾಡಿದ್ದರು. ಅದನ್ನು ನೋಡಿದ ಮಮ್ಮುಟ್ಟಿ ಶ್ಲಾಘಿಸಿದ್ದರು ಎಂದು ಆಳ್ವ ಅವರು ನಪಿಸಿಕೊಂಡರು.ನಿರೂಪಕನಾಗಿ ಭಾಷೆ ಮೇಲಿನ ಹಿಡಿತ ಹಾಗೂ ಸ್ವರ ಮಾಧುರ್ಯ ಗಮನ ಸೆಳೆಯುತ್ತಿತ್ತು. ನುಡಿಸಿರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅದನ್ನು ಕೇಳುವುದೇ ಸೊಗಸಾಗಿತ್ತು ಎಂದರು.ಸುಮಾರು 5 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, 22 ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ, 9 ಮಸ್ತಕಾಭಿಷೇಕ ನಿರೂಪಣೆ ಹಾಗೂ ಆಕಾಶವಾಣಿಯಲ್ಲಿ ಸುಮಾರು 91 ಕಾರ್ಯಕ್ರಮ ನೀಡಿದ್ದರು ಎಂದು ಸ್ಮರಿಸಿದರು.ಅವರ ಕುಗ್ರಾಮ ಗುರುತಿಸುವ ಬರಹವು ಶ್ರೇಷ್ಠವಾಗಿದೆ. ಕೌಟುಂಬಿಕವಾಗಿ ಒಡಹುಟ್ಟಿದವರನ್ನು ಕಳೆದುಕೊಂಡು ನೋವುಂಡರೂ, ಒಂಟಿಯಾಗಿ ಜೀವಿಸಿದರು. ಜನರಿಗೆ ಸ್ಪಂದಿಸಿದರು ಎಂದು ನೆನಪಿಸಿಕೊಂಡರು.ಅವರು ತಮ್ಮ ಕೊನೆದಿನಗಳಲ್ಲಿ ನವ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿದ್ದರು ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಮನೋಹರ ಪ್ರಸಾದ್ ಅವರ ನಿಧನದಿಂದ ಕರಾವಳಿ ಪತ್ರಿಕೋದ್ಯಮದಲ್ಲಿ ಒಂದು ಶ್ರೇಷ್ಠ ಅಧ್ಯಾಯ ಯುಗಾಂತ್ಯ ಕಂಡಿದೆ ಎಂದರು.ಮನೋಹರ ಅವರು ಬರಹ ಮಾತ್ರವಲ್ಲದೇ ವ್ಯಕ್ತಿತ್ವದ ಮೂಲಕ ಪತ್ರಿಕೋದ್ಯಮಕ್ಕೆ ಹಲವರನ್ನು ಸೆಳೆದವರು ಎಂದರು.ಮೂರು ತಲೆಮಾರಿನ ಸಾಧಕರನ್ನು ಕಂಡವರು. ಅವರ ಸ್ಮರಣಶಕ್ತಿ ಅದ್ಭುತ. ಅವರಿಗೆ ತಿಳಿಯುವ ಕುತೂಹಲ ಹಾಗೂ ವಿದ್ಯಾರ್ಥಿ ಮನಸ್ಸು ಹೊಂದಿದ್ದರು ಎಂದರು.ಅವರು ಅವಕಾಶ ಸದ್ಬಳಕೆ ಮಾಡುತ್ತಿದ್ದರು. ವೈವಿಧ್ಯಮಯ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ಕಾರಣ ತುಳುನಾಡಿನ ರಾಯಭಾರಿಯೇ ಆಗಿದ್ದರು ಎಂದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಮನೋಹರ ಪ್ರಸಾದ್ ಅವರ ನೆನಪನ್ನು ಚಿರಸ್ಥಾಯಿಗೊಳಿಸುವ ಕಾರ್ಯಕ್ರಮಗಳನ್ನು ನಮ್ಮ ಸಂಘ ಹಮ್ಮಿಕೊಳ್ಳಲಿದೆ ಎಂದರು.ಪತ್ರಕರ್ತರಿಗೆ ರಾಜ್ಯ ಮಟ್ಟದ ಕಾರ್ಯಾಗಾರ, ದತ್ತಿ ಪ್ರಶಸ್ತಿ, ಕ್ರಿಕೆಟ್ ಪಂದ್ಯಾಟ ನಡೆಸುವ ಯೋಜನೆ ಇದೆ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಇಬ್ರಾಹಿಂ ಅಡ್ಕಸ್ಥಳ, ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಅನ್ನು ಮಂಗಳೂರು, ಭಾಸಕರ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಮೂಡುಬಿದಿರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಇದ್ದರು.ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ. ಕಾರ್ಯಕ್ರಮ ನಿರೂಪಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಸಮಾಜಮುಖಿ ಕಾರ್ಯಗಳಿಗೆ ಸನ್ಮಾನ ಹುಡುಕಿಕೊಂಡು ಬರುತ್ತವೆ: ಡಿಸಿಪಿ ದಿನೇಶ್ ಕುಮಾರ್

ಸಮಾಜಕ್ಕೆ ಬೆಳಕು ಚೆಲ್ಲುವ ವಿಚಾರಗಳೊಂದಿಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಲಹೆಗಳು ಪತ್ರಿಕೆಗಳಿಂದ ನಿರೀಕ್ಷಿಸಲಾಗುತ್ತಿದೆ. ಜನಸಾಮಾನ್ಯರಿಗೆ ಉಪಯುಕ್ತ ಹಾಗೂ ಸಮಾಜಕ್ಕೆ ಒಳಿತಾಗುವ ಕೆಲಸ ನಿರಂತರ ಮುಂದುವರೆಯಬೇಕು. ಬಸ್ ಸಿಬಂದಿಗಳ ಮಾನವೀಯ ಕಾರ್ಯಗಳು ಇತರರಿಗೂ ಮಾದರಿ ಎಂದು ಮಂಗಳೂರು ಅಪರಾಧ ಮತ್ತು ಸಂಚಾರ ವಿಭಾಗ ಡಿಸಿಪಿ ಬಿ.ಪಿ. ದಿನೇಶ್ ಕುಮಾರ್ ಹೇಳಿದರು.ಪತ್ರಿಕಾಭವನದಲ್ಲಿ ಮಂಗಳವಾರದಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ, ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ವತಿಯಿಂದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ ಹಾಗೂ ಮಾನವೀಯತೆ ಮೆರೆದ ಬಸ್ ಸಿಬಂದಿಗಳಿಗೆ ಸಮ್ಮಾನ ನೆರವೇರಿಸಿ ಅವರು ಮಾತನಾಡಿದರು.ಮಂಗಳೂರು ನಗರದಲ್ಲಿ ಅನೇಕ ಸಮಸ್ಯೆಗಳಿವೆ. ರಸ್ತೆ ಅಗೆಯುವುದು, ಅಲ್ಲಲ್ಲಿ ಹೊಂಡ ಗುಂಡಿಗಳು, ವಾಹನ ದಟ್ಟನೆ ಇತ್ಯಾದಿ ಸಮಸ್ಯೆಯ ನಡುವೆಯೂ ಸಂಚಾರ ನಿಭಾಯಿಸಲು ಸಾರ್ವಜನಿಕರು ಸಹಕಾರ ನೀಡುತ್ತಿರುವುದು ಅಪೇಕ್ಷಿತ ಎಂದು ಹೇಳಿದರು.ಮಂಗಳೂರು ಆರ್‌ಟಿಒ ಶ್ರೀಧರ್ ಮಲ್ಲಾಡ್ ಮಾತನಾಡಿ, ಬಸ್ ಮಾಲಕರು ಸಾರಿಗೆ ಇಲಾಖೆಗೆ ಪ್ರತೀ ತಿಂಗಳು ಎರಡುವರೆ ಕೋಟಿ ರೂ. ತೆರಿಗೆ ಕಟ್ಟುತ್ತಿದ್ದು, ನಗರದಲ್ಲಿ ಎರಡನೇ ಅತ್ಯಧಿಕ ತೆರಿಗೆ ಪಾವತಿದಾರರಾಗಿದ್ದಾರೆ. ಇಲಾಖೆಯೊಂದಿಗೆ ಪ್ರಾಮಾಣಿಕವಾಗಿ ವರ್ತಿಸುವ ಜತೆಗೆ ಬಸ್‌ಗಳಲ್ಲಿನ ಸಿಬಂದಿಗಳ ಮಾನವೀಯ ಕಾರ್ಯಗಳು ಸಮಾಜಕ್ಕೆ ಆದರ್ಶ ಎಂದರು.ಸಂಚಾರ ವಿಭಾಗದ ಎಸಿಪಿ ನಜ್ಮಾ ರೂಕ್ ಮಾತನಾಡಿ, ಮಂಗಳೂರಿನ ಖಾಸಗಿ ಬಸ್‌ನವರು ಡಿಜಿಟಲ್ ಇಂಡಿಯಾಕ್ಕೆ ಚಾಲನೆ ನೀಡುವ ಮೂಲಕ ರಾಜ್ಯದಲ್ಲೇ ಮೊದಲ ಪ್ರಯತ್ನ ಮಾಡಿದ್ದಾರೆ. ಅದರ ಜತೆಗೆ ಮಾದ್ಯಮದವರ ಆಗತ್ಯತೆಗೆ ಬಸ್ ಮಾಲಕರು ನೆರವಾಗಿದ್ದಾರೆ. ಬಸ್ ಪಾಸ್ ಪತ್ರಕರ್ತರಿಗೆ ಉಪಯುಕ್ತವಾಗಲಿದೆ ಎಂದರು.ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಮಾತನಾಡಿ, ವಿಶ್ವದಲ್ಲೇ ಮಾನವ ಹಕ್ಕು ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ರಚನಾತ್ಮ ಕೆಲಸ ಮಾದ್ಯಮ ನಿರ್ವಹಿಸುತ್ತಿದೆ. ಜಿಲ್ಲೆಯ ಕೆಲವು ಗ್ರಾಮಾಂತರ ಪ್ರದೇಶಗಳಲ್ಲಿ ಬಸ್ ಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳತ್ತ ಪತ್ರಕರ್ತರು ಬೆಳಕು ಚೆಲ್ಲಬೇಕಿದೆ. ಸಾರಿಗೆ ವ್ಯವಸ್ಥೆಯನ್ನು ಎಚ್ಚರಿಸುವ ಜತೆಗೆ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹ ನೀಡುವುದು ಅಭಿನಂದನೀಯ ಎಂದರು.ಸಮಾರಂಭದಲ್ಲಿ ಪತ್ರಕರ್ತರಿಗೆ ಖಾಸಗಿ ಬಸ್ ಮಾಲಕ ಸಂಘದ ವತಿಯಿಂದ ಪಾಸ್ ವಿತರಿಸಲಾಯಿತು.ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯ ವೃಂದದ ಯಕ್ಷ ಸಿದ್ಧಿ ಸಂಭ್ರಮ. ಸಿದ್ಧಿ ದಶಯಾನ ಒಂದೇ ವೇದಿಕೆಯಲ್ಲಿ 300ಕ್ಕೂ ಅಧಿಕ ಮಕ್ಕಳ ನೂಪುರ ನಿನಾದ. ಆಗಸ್ಟ್ 10 ಮತ್ತು 11ಆಗಸ್ಟ್ 2024 ರಂದು ಡಾ.ಬಿ.ಆರ್ ಅಂಬೇಡ್ಕರ್ ಸಭಾಭವನ ಉರ್ವಸ್ಟೋರ್ ನಲ್ಲಿ ನಡೆಯಲಿದೆ.

ಮಂಗಳೂರು: ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 15ವರ್ಷಗಳಿಂದ ತೊಡಗಿಸಿಕೊಂಡು,ನಾಟ್ಯ ಮಯೂರಿ, ಯಕ್ಷ ಸವ್ಯಸಾಚಿ ಬಿರುದುಗಳೊಂದಿಗೆ ಖ್ಯಾತರಾಗಿ, ಮುಂದಿನ ಪೀಳಿಗೆಗೆ ಯಕ್ಷಗಾನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತೊಡಗಿಸಿಕೊಂಡು ಅವಿಭಜಿತ ದ.ಕ.ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ತರಗತಿಗಳನ್ನು ನಡೆಸಿಕೊಂಡು ಬರುತ್ತಿರುವ ಯಕ್ಷಗಾನ ಕಲಾವಿದರು ಹಾಗೂ ಯಕ್ಷಗುರು ರಕ್ಷಿತ್ ಶೆಟ್ಟಿ ಪಡ್ರೆ ಅವರ ಯಕ್ಷ ಶಿಕ್ಷಣ ಕಾರ್ಯಕ್ಕೆ ಹತ್ತು ವರುಷಗಳಾದ ನಿಟ್ಟಿನಲ್ಲಿ ದಶಮಾನೋತ್ಸವದ ಅಂಗವಾಗಿ ವಿವಿಧೆಡೆಯ ಇವರ ಶಿಷ್ಯ ವೃಂದವನ್ನು ಒಗ್ಗೂಡಿಸಿ 300ಕ್ಕೂ ಅಧಿಕ ಶಿಷ್ಯವೃಂದದವರಿಂದ ಸಂಯೋಜಿಸಲಾದ ಹತ್ತು ಹಲವು ಯಕ್ಷಗಾನ ವಿವಿಧ ಪ್ರದರ್ಶನಗಳನ್ನು ಯಕ್ಷ ಸಿದ್ಧಿ ಸಂಭ್ರಮ , ಸಿದ್ಧಿ ದಶಯಾನ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಆಗಸ್ಟ್ 10, ಶನಿವಾರ ಹಾಗೂ ಆ.11 ರವಿವಾರ ಬೆಳಗ್ಗೆಯಿಂದ ರಾತ್ರಿ ವರೆಗೆ ಮಂಗಳೂರು , ಉರ್ವಸ್ಟೋರ್, ಡಾ.ಬಿ.ಆರ್.ಅಂಬೇಡ್ಕರ್ ಸಭಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.ಆ.10ರಂದು ಬೆಳಗ್ಗೆ 9ರಿಂದ ಚೌಕಿ ಪೂಜೆ, ಪೂರ್ವ ರಂಗ, 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಯಕ್ಷಗಾನ ವಿದ್ವಾಂಸ ಶ್ರೀ ವಾಸುದೇವ ರಂಗಾ ಭಟ್ಟ ಅವರು ಉದ್ಘಾಟಿಸಲಿರುವರು. ಮಂಗಳೂರು ಮಹಾ ನಗರ ಪಾಲಿಕೆಯ ಮಹಾಪೌರ ಸುಧೀರ್ ಶೆಟ್ಟಿ ಕಣ್ಣೂರು ಅಧ್ಯಕ್ಷತೆ ವಹಿಸಲಿರುವರು.ಮಂಗಳೂರು ಮಹಾ ನಗರ ಪಾಲಿಕೆಯ ಸದಸ್ಯ ಗಣೇಶ್ ಕುಲಾಲ್, ಕದ್ರಿ ಪೊಲೀಸ್ ಠಾಣಾ ಉಪ ಠಾಣಾಧಿಕಾರಿ ಸುಧಾಕರ ರಾವ್ ಪಾಟೀಲ್, ಪಡ್ರೆ ಶ್ರೀ ಧೂಮಾವತಿ ಚಾವಡಿ ಮನೆಯ ಗಡಿ ಪ್ರಧಾನ ಬಾಬು ಬಂಡ್ರಿಯಾಲ್, ಜಲ್ಲಿಗುಡ್ಡೆ ಅಂಬಾ ಭವಾನಿ ಭಜನಾ ಮಂದಿರದ ಗೌರವಾಧ್ಯಕ್ಷ ಹರಿಕೇಶವ ಜಾದವ್, ಹಿರಿಯ ವಕೀಲ ಸದಾಶಿವ ಐತಾಳ್‌ ಅತಿಥಿಗಳಾಗಿ ಭಾಗವಹಿಸುವರು.10.30ರಿಂದ ವಿದ್ಯಾರ್ಥಿಗಳಿಂದ ದೇವಸೇನಾನಿ, ಗಂಟೆ 12ರಿಂದ ಮಹಿಳೆಯರಿಂದ ಪಾವನ ಪಕ್ಷಿ ಯಕ್ಷಗಾನ ನಡೆಯಲಿದೆ. ಮಧ್ಯಾಹ್ನ ಭೋಜನ ವಿರಾಮ, 1.45ರಿಂದ ಯಕ್ಷಗಾನ ರೂಪಕ ದಾಶರಥಿ ದರ್ಶನ, 3.45ರಿಂದ ಧರ್ಮ ದಂಡನೆ ಯಕ್ಷಗಾನ ನಡೆಯಲಿದೆ. ಸಂಜೆ 5ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಅವರು ಅಧ್ಯಕ್ಷತೆ ವಹಿಸುವರು. ಉದ್ಯಮಿಗಳಾದ ಎ.ಕೆ. ಜಯರಾಮ ಶೇಖ, ಪ್ರೇಮನಾಥ ಮಾರ್ಲ,, ಹಿರಿಯ ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್ ಕಟೀಲು,ಇರ್ವತ್ತೂರು ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ತಾನದ ಅಧ್ಯಕ್ಷ ಮೋಹನ ಶೆಟ್ಟಿ ನರ್ವಲ್ದಡ್ಡ, ಉರ್ವ, ಚಿಲಿಂಬಿ ಸಾಯಿ ಶಕ್ತಿ ಕಲಾಬಳಗದ ಸಂಚಾಲಕಿ ಲಾವಣ್ಯ ವಿಶ್ವಾಸ್ ಕುಮಾರ್ ದಾಸ್, ಪಾತೂರು ಮೇಗಿನ ಮನೆ ಕಲ್ಲಾಡಿ ಧೂಮಾವತಿ ದೈವಸ್ಥಾನದ ಅಧ್ಯಕ್ಷ ಲ| ಚಂದ್ರಹಾಸ ರೈ, ಕಾಟಿಪಳ್ಳ ಬ್ರಹ್ಮ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ದಯಾಕರ ಪಿ.ಕುಳಾಯಿ, ಬಲಿಪಗುಳಿ ಉದ್ಯಮಿ ಡಾ.ರಮೇಶ್ ಚಂದ್ರ ಸಿ.ಜಿ., ಗುರುಪುರ ಡಾ.ಬಿ.ಆರ್ ಆಂಬೇಡ್ಕರ್ ವಸತಿ ಶಾಲೆಯ ಶಿಕ್ಷಕ ಜಯಕರ ಶೆಟ್ಟಿ, ಎಂಆರ್‌ಪಿಎಲ್ ನಿವೃತ್ತ ಮಹಾ ಪ್ರಬಂಧಕಿ ವೀಣಾ ಟಿ.ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ ಗಂಟೆ 6.30ರಿಂದ ಯಕ್ಷ ನವರಸ ವೈಭವ, 8ರಿಂದ ವಿನೂತನ ಪ್ರಯೋಗ ಹಿಮ್ಮಿಂಚು ಯಕ್ಷಗಾನ ನಡೆಯಲಿದೆ.ಆ.11ರಂದು ಬೆಳಗ್ಗೆ ಗಂಟೆ 9.30ರಿಂದ ಯಕ್ಷಗಾನ ಲೀಲಾಮಾನುಷ ವಿಗ್ರಹ, ಗಂಟೆ 12ರಿಂದ ನೃತ್ಯ ವಚನ ಚಿತ್ರ ಕಥನ ನಡೆಯಲಿದೆ. ಮಧ್ಯಾಹ್ನ ಭೋಜನ ವಿರಾಮ ಬಳಿಕ ದಶಾವತಾರ ಮತ್ತು ಪಾದ ಪ್ರತೀಕ್ಷಾ ಯಕ್ಷಗಾನ ಪ್ರದಶರನ ನಡೆಯಲಿದೆ. ಸಂಜೆ ಸಮಾರೋಪ ನಡೆಯಲಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅವರು ಅಧ್ಯಕ್ಷತೆ ವಹಿಸಲಿರುವರು.ಕಟೀಲು ದೇವಸ್ಥಾನದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ ಅವರು ಆಶೀರ್ವಚನ ನೀಡಲಿರುವರು. ಉದ್ಯಮಿ ಮಿಥುನ್ ರೈ, ರಾಮನಗರ ಪೊಲೀಸ್ ಉಪಾಧಿಕ್ಷಕ ದಿನಕರ ಶೆಟ್ಟಿ,ನಿಟ್ಟೆ ಎನ್‌ಎಂಎಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ನಿರಂಜನ ಎನ್.ಚಿಪ್ಳೂಣ್ಕರ್, ಜಾಗತಿಕ ಬಂಟರ ಒಕ್ಕೂಟ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಉದ್ಯಮಿ ಅಗರಿ ರಾಘವೇಂದ್ರ ರಾವ್, ಗುರುಪುರ ಬಂಟರ ಮಾತೃಸಂಘದ ಮಾಜಿ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ ತಿರುವೈಲುಗುತ್ತು, ಮಂಗಳೂರು ಟ್ರಾಫಿಕ್ ಟಾಣೆಯ ಸಂತೋಷ್ ಪಡೀಲು, ಉದ್ಯಮಿ ಎಂ.ಹರಿ ರಾವ್ ಕೈಕಂಬ, ಯಕ್ಷ ಮಂಜೂಷ ನಿರ್ದೇಶಕಿ ವಿದ್ಯಾ ಕೂಳ್ಯೂರು, ಕಲಾ ಪೋಷಕಿ ಶಕುಂತಲಾ ಆರ್. ಭಟ್ ಸುರತ್ಕಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.ಈ ಸಂದರ್ಭದಲ್ಲಿ ಯಕ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಯಕ್ಷ ಸಿದ್ಧಿ ಪ್ರಶಸ್ತಿ, ಸಾಧಕರಿಗೆ ಸನ್ಮಾನ ನಡೆಯಲಿದೆ. ಬಳಿಕ ಗಂಟೆ 6 ರಿಂದ ಯಕ್ಷಗಾನ ವೈವಿಧ್ಯ ನೀನೋ-ನಾನೋ,ಬಳಿಕ ತೆಂಕು ಬಡಗು ತಿಟ್ಟಿನ ಯಕ್ಷಗಾನ ನಾಗಶ್ರೀ ನಡೆಯಲಿದೆ.ಪತ್ರಿಕಾಗೋಷ್ಟಿಯಲ್ಲಿಯಲ್ಲಿ ಸದಾಶಿವ ಐತಾಳ್, ರಕ್ಷಿತ್ ಶೆಟ್ಟಿ ಪಡ್ರೆ, ರವಿಪ್ರಸಾದ್ ಶೆಟ್ಟಿ, ಶ್ರವಣ್ ಉಡುಪ ಕತ್ತಲ್ ಸಾರ್, ಉಮೇಶ್ ಆಚಾರ್ಯ,ಸತ್ಯಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಹೊರ ರಾಜ್ಯ ವಾರ್ತೆಗಳು

ರಾಮಕೃಷ್ಣ ಮೋರ್ ನಾಟ್ಯ ಶಾಲಾ ಚಿಂಚ್ವಾಡ್, ಪುಣೆ ಇಲ್ಲಿ ಪ್ರದರ್ಶನಗೊಂಡ ತುಳುನಾಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ‘ಹೊರನಾಡ ಕನ್ನಡ ರತ್ನ’ ಡಾ. ಸುಧಾಕರ್ ಶೆಟ್ಟಿಯವರಿಗೆ ಸನ್ಮಾನ.

ಪ್ರಾದೇಶಿಕ ವಾರ್ತೆಗಳು

ಆಗಸ್ಟ್ 6 ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ

ಮಂಗಳೂರು, ಆಗಸ್ಟ್ 4: ದಕ್ಷಿಣ ಕನ್ನಡ ಖಾಸಗಿ ಬಸ್ಸು ಮಾಲಕರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಭಾಗಿ ತ್ವದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಆಗಸ್ಟ್ 6 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.ಮಂಗಳೂರು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ದಿನೇಶ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ ಬಸ್ ಪಾಸ್ ವಿತರಣೆ ಮಾಡಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಆಝೀಜ್ ಪರ್ತಿಪ್ಪಾಡಿ, ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮ್ ಫಾರೂಕಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಗೌರವ ಉಪಸ್ಥಿತರಿರುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಆ.10ರಂದು ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ

ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.10ರಂದು ನಗರದ ಮೋತಿ ಮಹಲ್ ಹೋಟೆಲ್‌ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೇಜರ್ ಜನರಲ್ ಸತೀಶ್ ಭಂಡಾರಿ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಪ್ರದಾನ ಮಾಡಲಾಗುವುದು. ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಡಾ.ಕೆ.ಪ್ರಕಾಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಹಿರಿಯ ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಪುಷ್ಪ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ , ಸಿಎ ಮನೀಶ್ ಶೆಟ್ಟಿ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ , ಸಿಎ ರೋಶನ್ ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಫೋಟೋ : ಸತೀಶ್ ಭಂಡಾರಿ

ರಾಷ್ಟ್ರೀಯ ವಾರ್ತೆಗಳು

ನನ್ನ ತಂದೆಯವರು ತೀರಿಕೊಂಡಾಗ ಆದಷ್ಟೇ ನೋವು, ದುಃಖ ನನಗಾಗುತ್ತಿದೆಂದು ವಯನಾಡು ಘಟನೆಗೆ ಕಣ್ಣೇರು ಹಾಕಿದ ರಾಹುಲ್ ಗಾಂಧಿ.

ಕೇರಳ: ವಯನಾಡು ದುರಂತದಲ್ಲಿ 400 ಮಂದಿ ನಾಪತ್ತೆಯಾಗಿದ್ದು,10 ಮಂದಿ ಕನ್ನಡಿಗರು ಸಹಿತ 290 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 82 ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರು ಆಶ್ರಯ ಪಡೆದಿದ್ದಾರೆ. ಇಲ್ಲಿಗೆ ಸಹೋದರಿ ಪ್ರಿಯಾಂಕ ಗಾಂಧಿ ಜೊತೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು -“ನನ್ನ ತಂದೆಯವರು ತೀರಿಕೊಂಡಾಗ ಆದಷ್ಟೇ ನೋವು, ದುಃಖ ನನಗಾಗುತ್ತಿದೆ “ವೆಂದು ಕಣ್ಣೇರು ಹಾಕಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿಯ ಪ್ರಮುಖ ವೇಣುಗೋಪಾಲ್ ಜೊತೆಗಿದ್ದರು.

ಹೊರ ರಾಜ್ಯ ವಾರ್ತೆಗಳು

MAGNUM OPUS HOMOEOPATHY ರಾಷ್ಟ್ರೀಯ ತರಬೇತಿ ಸಂಸ್ಥೆ ಇದರ ಸಹ-ಸಂಸ್ಥಾಪಕರಾಗಿ ಪುಣೆಯ ‘ಹೊರನಾಡ ಕನ್ನಡ ರತ್ನ’ ಡಾ. ಸುಧಾಕರ್ ಶೆಟ್ಟಿಯವರ ಸುಪುತ್ರ ಡಾ. ವಿರೇನ್ ಶೆಟ್ಟಿ.

ಪುಣೆ : ಡಾ.ವಿರೇನ್ ಶೆಟ್ಟಿ ಮತ್ತು ಡಾ. ಸನ್ಯಾ ರೂಪನಿ ಅವರು ಹೋಮಿಯೋಪತಿಯಲ್ಲಿ ಸ್ಪರ್ಧಾತ್ಮಕ ಆನ್ ಲೈನ್ ಪರೀಕ್ಷೆ ಬರೆಯುವ ಮಾನ್ಯತೆ ಪಡೆದ MAGNUM OPUS HOMOEOPATHY ರಾಷ್ಟ್ರೀಯ ತರಬೇತಿ ಸಂಸ್ಥೆ ಇದರ ಸಹ-ಸಂಸ್ಥಾಪಕರಾಗಿದ್ದಾರೆ. ಡಾ. ವಿರೇನ್ ಶೆಟ್ಟಿಯವರು ಪುಣೆಯ ‘ಹೊರನಾಡ ಕನ್ನಡ ರತ್ನ’ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರ ಸುಪುತ್ರರಾಗಿದ್ದಾರೆ. AIAPGET ವೆಂಬುವುದು ಎಂ. ಡಿ. ವೈದ್ಯಕೀಯ ಹೋಮಿಯೋಪತಿಗಾಗಿ ಇರುವ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಇದರಲ್ಲಿ ಲಕ್ಷಗಟ್ಟಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರವೇಶ ಪರೀಕ್ಷೆ ಬರೆಯುತ್ತಾರೆ.1 ರಿಂದ 100 ರ ತನಕ ರ‍್ಯಾಂಕ್‌ ಗಳಿರುತ್ತವೆ. MAGNUM OPUS ಮೂಲಕ ತರಬೇತಿ ಪಡೆದ ವಿದ್ಯಾರ್ಥಿ, ವಿದ್ಯಾರ್ಥಿನಿಯರು AIAPET ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್‌ ನಿಂದ 100 ರ‍್ಯಾಂಕ್‌ ಗಳಲ್ಲಿ ಒಟ್ಟು 20 ರ‍್ಯಾಂಕ್‌ಗಳನ್ನು ಪಡೆದಿದ್ದು,MAGNUM OPUS ನ ಬಹು ದೊಡ್ಡ ಸಾಧನೆಯಾಗಿದೆ. ಡಾ. ಫಝಲ್ ಅಖ್ತರ್ ಮೊದಲ ರ‍್ಯಾಂಕ್‌, ಡಾ. ವೈಷ್ಣವಿ ಬೈರಾಗಿ 18ನೇ ರ‍್ಯಾಂಕ್‌, ಡಾ.ಈಸ್ ಲಾವತ್ ಮೌನಿಕಾ 23 ನೇ ರ‍್ಯಾಂಕ್‌. ಡಾ. ಶಭಾನ್ ಶಾ 26 ನೇ ರ‍್ಯಾಂಕ್‌ ಪಡೆದಿರುತ್ತಾರೆ. ಹೀಗೇ MAGNUM OPUS ನ ಒಟ್ಟು 20 ಮಂದಿ ರಾಂಕ್ ಗಳಿಸಿರುವುದು ಹೆಮ್ಮೆಯ ಸಂಗತಿ ಮತ್ತು ಸಂಸ್ಥೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದು ಕೊಟ್ಟಿದೆ.…. ಡಾ.ವಿರೇನ್ ಶೆಟ್ಟಿ, ಎಂ. ಡಿ (ಮಕ್ಕಳ ವೈದ್ಯಕಿಯ ವಿಭಾಗದಲ್ಲಿ ಹೊಮಿಯೋಪತಿ) ಇವರನ್ನು ಸಂಪರ್ಕಿಸಲು ಇಚ್ಚಿಸುವವರು 8975966156 ಮೊಬೈಲ್ ನಂಬರ್ ನ್ನು ಸಂಪರ್ಕಿಸಬಹುದಾಗಿದೆ

ಹೊರ ರಾಜ್ಯ ವಾರ್ತೆಗಳು

ಆಗಸ್ಟ್ 1ರಿಂದ ಪುಣೆ ಕಂಟೋನೂಮೆಂಟ್ ಎರಿಯಾದಲ್ಲಿ ಡಾ. ಸುಧಾಕರ್ ಶೆಟ್ಟಿಯವರಿಂದ ನ್ಯಾಷನಲ್ ಸ್ಕೂಲ್ ಹೆಲ್ತ್ ಪ್ರೋಗ್ರಾಮ್ ಆರಂಭವಾಗಿದೆ.

ಪುಣೆ :ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಂದ ಪುಣೆ ಕಂಟೋನೂಮೆಂಟ್ ಎರಿಯಾದಲ್ಲಿ ನ್ಯಾಷನಲ್ ಸ್ಕೂಲ್ ಹೆಲ್ತ್ ಪ್ರೋಗ್ರಾಮ್ 2024-25 ಅಗಸ್ಟ್ 1ರಿಂದ ಆರಂಭಗೊಂಡಿದೆ. ನ್ಯಾಷನಲ್ ಸ್ಕೂಲ್ ಹೆಲ್ತ್ ಪ್ರೋಗ್ರಾಮ್ 2024-25 ಪುಣೆ ಕಂಟೋನೂಮೆಂಟ್ ಎರಿಯಾದ ಎಲ್ಲಾ ಶಾಲೆಗಳಲ್ಲಿ ನಡೆಯಲಿದೆ. ಡಾ.ಉಷಾ ತಪಾಸೆ(ಪುಣೆ ಕಂಟೋನೂಮೆಂಟ್ ಹಾಸ್ಪಿಟಲ್ ನ ಆರ್ ಎಂ ಓ), ಡಾ.ಸುಧಾಕರ್ ಶೆಟ್ಟಿ( ಮಕ್ಕಳ ತಜ್ಞರು, ಪುಣೆ ಕಂಟೋನೂಮೆಂಟ್ ಹಾಸ್ಪಿಟಲ್),ಡಾ. ಭುಜಬಲ್(ಎಎಂಓ)ಮತ್ತು ಮಟ್ರೋನ್ ಮೊದಲಾದ ಗಣ್ಯರು ಜುಲೈ 31ರಂದು ನಡೆದ ನ್ಯಾಷನಲ್ ಸ್ಕೂಲ್ ಹೆಲ್ತ್ ಪ್ರೋಗ್ರಾಮ್ 2024-25 ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನ್ಯಾಷನಲ್ ಸ್ಕೂಲ್ ಹೆಲ್ತ್ ಪ್ರೋಗ್ರಾಮ್ ನ್ನು ಅಗಸ್ಟ್ 1 ರ ಬೆಳಿಗ್ಗೆ 8 ಗಂಟೆಗೆ ಪುಣೆಯಲ್ಲಿರುವ ಗಣೇಶ್ ಪೇಟೆಯ ಗುರುನಾನಕ್ ಪ್ರೈಮರಿ ಸ್ಕೂಲ್ ನಲ್ಲಿ ಮತ್ತು ಬೆಳ್ಳಿಗೆ 9.30ಕ್ಕೆ ರಬಿಂದ್ರನಾಥ್ ಪ್ರೈಮರಿ ಸ್ಕೂಲ್ ಕ್ಯಾಂಪ್ ಪುಣೆಯಲ್ಲಿ ಡಾ. ಸುಧಾಕರ್ ಶೆಟ್ಟಿಯವರು ಯಶಸ್ವಿಯಾಗಿ ನಡೆಸಿಕೊಟ್ಟರು.

Scroll to Top