Author name: editor

ಪ್ರಾದೇಶಿಕ ವಾರ್ತೆಗಳು

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ಮಂಗಳೂರು- ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣದಿಂದ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯತೆಯಿದ್ದು. ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿನಂತಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕುಟುಂಬ ವೈದ್ಯ ಪದ್ಧತಿ ಅಂದು ಇಂದು ಮುಂದೂ. ಈ ಬಾರಿಯ ಕುಟುಂಬ ವೈದ್ಯರ ರಾಜ್ಯ ಸಮ್ಮೇಳನ ಅಕ್ಟೋಬರ್ 20 ರಂದು ಮಂಗಳೂರಲ್ಲಿ ನಡೆಯಲಿದೆ -ಡಾ. ಅಣ್ಣಯ್ಯ ಕುಲಾಲ್.

ಮಂಗಳೂರು : ಹತ್ತು ವರ್ಷಗಳ ಬಳಿಕ ಮತ್ತೊಮ್ಮೆ ಕುಟುಂಬ ವೈದ್ಯರ ರಾಜ್ಯ ಸಮ್ಮೇಳನವನ್ನ ಮಾಡುವ ಅವಕಾಶ ಮಂಗಳೂರಿಗೆ ದೊರೆತಿದೆ. ಭಾರತೀಯ ವೈದ್ಯಕೀಯ ಸಂಘದ ಕುಟುಂಬ ವೈದ್ಯರ ವಿಭಾಗ ಮತ್ತು ಇಪ್ಪತ್ತನೇ ವರ್ಷದ ಸಂಭ್ರಮದಲ್ಲಿ ಇರುವ ಮಂಗಳೂರಿನ ಕುಟುಂಬ  ವೈದ್ಯರಸಂಘ ಆಶ್ರಯದಲ್ಲಿ ಈ ಬಾರಿ ರಾಜ್ಯಕುಟುಂಬವೈದ್ಯರ ಸಮ್ಮೇಳನ ಜರುಗಲಿದೆ ಎಂದು ಅಧ್ಯಕ್ಷರಾದ ಡಾ ಎಂ. ಅಣ್ಣಯ್ಯ ಕುಲಾಲ್ ಉಲ್ತೂರು ತಿಳಿಸಿದರು. ನಗರದಲ್ಲಿ ಕುಟುಂಬ ವೈದ್ಯರ ಸಂಘಟನೆಯಲ್ಲಿ ನ್ಯೂಮೋನಿಯಾ ಬಗ್ಗೆ ಜರುಗಿದ ವೈದ್ಯಕೀಯ ಕಾರ್ಯಾಗಾರದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತಾಡುತ್ತಿದ್ದರು. 2024 ರ ಅಕ್ಟೋಬರ್ ತಿಂಗಳ 20 ರಂದು ಮಂಗಳೂರಲ್ಲಿ ಜರುಗುವ ರಾಜ್ಯ ಕುಟುಂಬ ವೈದ್ಯರ ಸಮ್ಮೇಳನಕ್ಕೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಐಎಂಎ ಹಾಗೂ ಕುಟುಂಬ ವೈದ್ಯರ ಸಂಘಟನೆಯ ಹಿರಿಯ ಹಾಗೂ ತಜ್ಞ ನಾಯಕರುಗಳು ಭಾಗವಹಿಸುತ್ತಿದ್ದಾರೆ. ನಶಿಸುತ್ತಿರುವ ಕುಟುಂಬ ವೈದ್ಯಪದ್ಧತಿ( ಫ್ಯಾಮಿಲಿ ಮೆಡಿಸಿನ್) ಉಳಿಯಬೇಕಾದರೆ ಎಂಬಿಬಿಎಸ್ ಓದುತ್ತಿರುವ ವಿದ್ಯಾರ್ಥಿಗಳ ಹಾಗೂ ಇಂಟರ್ನ್ ಗಳ ಗಮನ ಸೆಳೆದು ಅವರಿಗೆ ಫ್ಯಾಮಿಲಿ ಮೆಡಿಸಿನ್ ಅಗತ್ಯ ಬಗ್ಗೆ ತಿಳಿಹೇಳಲು ಸಿದ್ಧತೆ ಮಾಡಿಕೊಂಡಿದ್ದು. ಕಳೆದ ಹತ್ತು ವರ್ಷಗಳಲ್ಲಿ ಕುಟುಂಬ ವೈದ್ಯರ ಅಂದರೆ ಎಂಬಿಬಿಎಸ್ ಮಾಡಿ ಪ್ರಾಕ್ಟೀಸ್ ಮಾಡುವವರ ಸಂಖ್ಯೆ ತುಂಬಾ ಕ್ಷೀಣಿಸಿದೆ. ಅದಕ್ಕೆ ಈ ಬಾರಿ ಕುಟುಂಬ ವೈದ್ಯ ಪದ್ದತಿ ಅಂದು ಇಂದು ಹಾಗೂ ಮುಂದು ಎಂಬ ಶೀರ್ಷಿಕೆ ಯ ಮೂಲಕ ಒಂದು ದಿನದ ಚಿಂತನ ಮಂಥನದ ಗೋಷ್ಠಿಗಳು ಜರುಗಲಿದ್ದು, ಹಿರಿಯ ತಜ್ಞ ಕುಟುಂಬ ವೈದ್ಯರ ಜೊತೆ ಜಿಲ್ಲಾ ಆರೋಗ್ಯ ವಿಭಾಗ, ಮೆಡಿಕಲ್ ಕಾಲೇಜ್ ಶಿಕ್ಷಕರು, ಜಿಲ್ಲಾಡಳಿತ, ಪೊಲೀಸ್ ವಿಭಾಗ, ಕಾನೂನುವಿಭಾಗ, ಮಾಧ್ಯಮ ಮಂದಿ, ಪ್ರಜ್ಞಾವಂತ ನಾಗರಿಕರನ್ನ ಚರ್ಚೆಯಲ್ಲಿ ಭಾಗವಹಿಸುವಂತೆ ಮಾಡಿ ಕುಟುಂಬ ವೈದ್ಯಪದ್ಧತಿಯಬಗ್ಗೆ ಜನಜಾಗೃತಿಯ ಮೂಡಿಸಿ ಒಂದು ಶ್ರೇಷ್ಠ  ಹಾಗೂ ಅವಶ್ಯ ವೈದ್ಯಪದ್ಧತಿಯನ್ನ ಉಳಿಸುವ ಪ್ರಯತ್ನ ಮಾಡಲಾಗುವುದು. ಐಎಂಎ ಕುಟುಂಬ ವೈದ್ಯರ ವಿಭಾಗದ ರಾಜ್ಯ ಅದ್ಯಕ್ಷರೂ, ವಿಂಶತಿ ಸಂಭ್ರಮದಲ್ಲಿ ಇರುವ ಮಂಗಳೂರು ಕುಟುಂಬ ವೈದ್ಯರ ಸಂಘಟನೆಯ ಅಧ್ಯಕ್ಷರಾಗಿರುವ ಡಾ.ಎಂ ಅಣ್ಣಯ್ಯ ಕುಲಾಲ್ ಉಲ್ತೂರು ಅವರ ಅದ್ಯಕ್ಷತೆಯಲ್ಲಿ ಜರುಗುವ ಈ ಸಮ್ಮೇಳನ ಹಾಗೂ ಗೋಷ್ಠಿಗೆ ಹಿರಿಯ ತಜ್ಞ ಕುಟುಂಬ ವೈದ್ಯರಾದ ಡಾ ಸದಾಶಿವ ಪೊಳನಾಯ ಗೌರವ ಅಧ್ಯಕ್ಷರಾಗಿ, ಇನ್ನೊಬ್ಬ ಹಿರಿಯ ಕುಟುಂಬ ವೈದ್ಯರಾದ ಡಾ ಜಿಕೆ ಭಟ್ ಸಂಕಬಿತ್ತಿಲು ಸಂಘಟನಾ ಕಾರ್ಯದರ್ಶಿಆಗಿ, ಡಾ ಜೆ ಎನ್ ಭಟ್ ಗೋಷ್ಠಿಗಳ ಸಂಚಾಲಕರಾಗಿ, ಡಾ ಶೇಖರ್ ಪೂಜಾರಿ ಅವರನ್ನು ಸಮ್ಮೇಳನದ ಕೋಶಾದಿಕಾರಿಯನ್ನಾಗಿ ಆರಿಸಲಾಯಿತು. ಎಲ್ಲಾ ಮಾಜಿ ಅದ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳ ಸಹಯೋಗದೊಂಡಿದೆ ಸ್ವಾಗತ ಹಾಗೂ ಪ್ರಚಾರ ಸಮಿತಿಯನ್ನ ರಚಿಸಲಾಯಿತು. ಸಮ್ಮೇಳನದಲ್ಲಿ ಮಂಗಳೂರಿನ ಕುಟುಂಬ ವೈದ್ಯರ ಸಂಘಟನೆಯ ಸ್ಥಾಪಕರಲ್ಲಿ ಪ್ರಮುಖರಾದ ಈಗ ನಮ್ಮ ಜೊತೆ ಇಲ್ಲದಿದ್ದರೂ ಸಂಘಟನೆಗೆ ಪ್ರೇರಣೆ ಆಗಿದ್ದ ಡಾ. ಕೆ ಮೋಹನದಾಸ್ ಭಂಡಾರಿ, ಡಾ ಎಂ ಎ ಅರ್ ಕುಡ್ವಾ, ಹಾಗೂ ಡಾ ಜಯಪ್ರಕಾಶ್ ಖಂಡಿಗೆಯವರ ಹೆಸರಲ್ಲಿ ಗೋಷ್ಠಿಗಳನ್ನು ಏರ್ಪಡಿಸಲು ಚರ್ಚಿಸಲಾಯಿತು. ಶೈಕ್ಷಣಿಕ ಕಾರ್ಯಾಗಾರದಲ್ಲಿ ನ್ಯೂಮೋನಿಯಾ ಕಾಯಿಲೆಬಗ್ಗೆ ಪರಿಣಾಮಕಾರಿಯಾಗಿ ಉಪನ್ಯಾಸನೀಡಿದ ಡಾ ಅಲ್ಕಾ ಭಟ್ ಅವರನ್ನು ಗೌರವಿಸಲಾಯಿತು. ನಗರದ ಯುನಿಟಿ ಆಸ್ಪತ್ರೆಯವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಡಾ ಎಂ ಅಣ್ಣಯ್ಯ ಕುಲಾಲ್ ಉಲ್ತೂರು ಸ್ವಾಗತಿಸಿ ಪರಿಚಯಿಸಿದರು. ಕಾರ್ಯದರ್ಶಿ ಡಾ ಶೇಖರ್ ಪೂಜಾರಿ ನಿರ್ವಹಿಸಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ. ಕ್ಯಾಪ್ಟನ್ ಚೌಟರ ಪರ ವ್ಯಾಪಕ ಜನ ಶ್ಲಾಘನೆ

ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ಸಭೆಯಲ್ಲಿ ಸಂಸದರ ವಿಶೇಷ ಕೋರಿಕೆಯ ಮೇರೆಗೆ ಸಚಿವರು ತುರ್ತಾಗಿ ಬಿಸಿ ರೋಡ್ ರೈಲ್ವೆ ಸ್ಟೇಷನ್ ಗೆ ನೈರುತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮತ್ತು ಡಿವಿಷನಲ್ ರೈಲ್ವೆ ಮ್ಯಾನೇಜರ್ ಅವರನ್ನು ಕಳುಹಿಸಿ ನಿಧಾನಗತಿಯ ಹಾಗೂ ಕಳಪೆ ಕಾಮಗಾರಿಯ ಬಗ್ಗೆ ವೀಕ್ಷಿಸಿ ರಿಪೋರ್ಟ್ ನೀಡಲು ಆದೇಶಿಸಿದ್ದರು.ಅದರಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.ಸಂಸದರ ಈ ರೀತಿಯ ತುರ್ತು ಕಾರ್ಯವೈಖರಿಗೆ ಎಲ್ಲ ಕಡೆಯಿಂದಲೂ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಉಳೆಪಾಡಿ ಶ್ರೀ ದುರ್ಗಾಪರಮೇಶ್ವರಿ ಮಹಮ್ಮಾಯಿ ಕ್ಷೇತ್ರದಲ್ಲಿ ಗಲಾಟೆ ಸಂಸಾರ ಧಾರಾವಾಹಿಯ ಸಾಮಾಜಿಕ ನೆರವಿನೊಂದಿಗೆ ಶುಭ ಮುಹೂರ್ತ

ಮೂಲ್ಕಿ : ಇಲ್ಲಿನ ಬಳ್ಕುಂಜೆ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಸ್ಥಾನದಲ್ಲಿ ನಡೆದ ಶ್ರೀಗುರುನಮನಸಂತೃಪ್ತಿ ಫಿಲ್ಮ್ಸ್‌ನ ಗಲಾಟೆ ಸಂಸಾರದ ಶುಭ ಮುಹೂರ್ತದಂದು ಕಲಾವಿದರಿಗೆ ಸನ್ಮಾನ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಯನ್ನು ನಡೆಸಲಾಯಿತು.ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಸ್ಥಾನದ ಧರ್ಮದರ್ಶಿ ಮೋಹನ್‌ದಾಸ್ ಸುರತ್ಕಲ್ ಅವರು ಆಶೀರ್ವಾದ ನೀಡಿ, ಜನಜಾಗೃತಿ ಮೂಡಿಸುವಂತಹ ಕಥಾವಸ್ತುವಿನ ಸಿನಿಮಾಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಮೂಡುತ್ತದೆ. ಉತ್ತಮ ಸಧಭಿರುಚಿಯ ಧಾರಾವಾಹಿಗಳು ನಿರಂತರವಾಗಿ ಪ್ರಸಾರ ಆಗಬೇಕು, ಜನರ ಮೂಡನಂಬಿಕೆಗಳನ್ನು ದೂರ ಮಾಡುವ ಕೆಲಸ ಆಗಬೇಕು ಎಂದರು.ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಜನಪ್ರಿಯತೆಯೊಂದಿಗೆ ಸಮಾಜದಲ್ಲಿ ಉತ್ತಮ ಸಂದೇಶ ನೀಡುವ ಧಾರಾವಾಹಿಯಾಗಿ ಗಲಾಟೆ ಸಂಸಾರ ಮೂಡಿಬರಲಿ, ಸಾಮಾಜಿಕ ಜಾಲತಾಣದಲ್ಲಿನ ಉತ್ತಮ ಅವಕಾಶವನ್ನು ಪಡೆದುಕೊಂಡು ಈ ಧಾರಾವಾಹಿ ಜನರ ಮೆಚ್ಚುಗೆಯನ್ನುಗಳಿಸಲಿ ಎಂದು ಹೇಳಿದರು.ಕಿನ್ನಿಗೋಳಿಯ ಯುಗಪುರುಷದ ಕೆ. ಭುವನಾಭಿರಾಮ ಉಡುಪ ಅವರು ಪ್ರಥಮ ದೃಶ್ಯಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ಸಮಾಜ ಸೇವಕಿ ಶಾಂಭವಿ ಶಿವರಾಂ ಶೆಟ್ಟಿ ಮುಚ್ಚೂರು ಕ್ಯಾಮರಾಗೆ ಚಾಲನೆ ನೀಡಿದರು.ಕಿನ್ನಿಗೋಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಸ್ವರಾಜ್ ಶೆಟ್ಟಿ ಅವರು ಕಲಾವಿದರಾದ ನಯನ ಪಡುಬಿದ್ರಿ, ಸುರೇಶ್ ಶೆಟ್ಟಿಗಾರ್ ಕೆರೆಕಾಡು, ಪೂರ್ಣೀಮಾ ಸುರತ್ಕಲ್ ಅವರನ್ನು ವಿಶೇಷವಾಗಿ ಸನ್ಮಾನಿಸಿದರು.ಕಿನ್ನಿಗೋಳಿ ಲಯನ್ಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷೆ ಹಿಲ್ಡಾ ಡಿಸೋಜಾ ಹಾಗೂ ಕಿನ್ನಿಗೋಳಿ ವಿಜಯ ಕಲಾವಿದರ ತಂಡದ ಅಧ್ಯಕ್ಷ ಶರತ್ ಶೆಟ್ಟಿ ಅವರು ಎರಡು ಕುಟುಂಬಕ್ಕೆ ಉಚಿತ ಪಡಿತರವನ್ನು ವಿತರಿಸಿದರು.ಹಿರಿಯ ರಂಗಕರ್ಮಿ ಸುರೇಶ್ ವರ್ಕಾಡಿ, ಪತ್ರಕರ್ತ ರೋಶನ್ ಡಿಕ್ರೂಸ್, ಸಿನಿಮಾ ನಿರ್ಮಾಪಕ ಲಾನ್ಸಿ ಕುವೆಲ್ಲೋ, ಕಲಾವಿದರಾದ ನಾಗರಾಜ್ ಪೂಜಾರಿ ಬಪ್ಪನಾಡು, ವಿಲ್ಫ್ರೆಡ್ ಕೊಲ್ಲೂರು, ಧರ್ಮಾನಂದ ಶೆಟ್ಟಿಗಾರ್ ತೋಕೂರು, ಕಾವ್ಯ ಕೊಡೆತ್ತೂರು ಮತ್ತಿತರರು ಉಪಸ್ಥಿತರಿದ್ದರು.ಧಾರಾವಾಹಿಯ ನಿರ್ದೇಶಕ ದೇವಿಪ್ರಕಾಶ್ ಮಂಗಳೂರು ಸ್ವಾಗತಿಸಿದರು, ಛಾಯಾಗ್ರಾಹಕ ಹರೀಶ್ ಪಿ. ಕೋಟ್ಯಾನ್ ಪಡುಪಣಂಬೂರು ವಂದಿಸಿದರು, ಕಲಾವಿದ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಸೋನೆ ಮಳೆ- ಹಸಿರು ಇಳೆ ಕವಿಗೋಷ್ಠಿ. ‘ಪರರಿಗೆ ನೆರಳಾಗುವ ಬದುಕು ನಮ್ಮದಾಗಲಿ’ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಆಶಯ.

ಮಂಗಳೂರು : ಮರಗಳು ಬಿಸಿಲಿಗೆ ಬಾಡಿದರೂ ತಂಪಾದ ನೆರಳು ನೀಡುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವ ಬದುಕಿಗೆ ನೆರವಾಗುತ್ತಿರುವ ಪ್ರಕೃತಿಯಿಂದ ನಾವು ಪ್ರೇರಣೆ ಪಡೆಯಬೇಕು. ಪರರಿಗೆ ನೆರಳಾಗುವ ಬದುಕು ನಮ್ಮದಾಗಬೇಕು ಎಂದು ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆ ಮತ್ತು ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಸಹಯೋಗದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್‌ನಲ್ಲಿ ಬುಧವಾರ ನಡೆದ ವನಮಹೋತ್ಸವ ಹಾಗೂ ಸೋನೆ ಮಳೆ-ಹಸಿರು ಇಳೆ ಪರಿಸರ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.ವನಮಹೋತ್ಸವಕ್ಕೆ ಚಾಲನೆ ನೀಡಿದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ್ ಶೆಟ್ಟಿ ಮಾತನಾಡಿ ‘ ಮಾನವ ಸ್ವಾರ್ಥದಿಂದ ಪ್ರಕೃತಿ ನಾಶವಾಗುವುದನ್ನು ತಡೆಯಲು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಿರಂತರ ನಡೆಯಬೇಕಾಗಿದೆ ಎಂದರು. ಅಭಾಸಾಪ ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕವಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ಮಂಂಗಳೂರು ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರ್ಪೋರೇಟರ್ ಸಂಧ್ಯಾ ಮೋಹನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಮೀನಾಕ್ಷಿ ರಾಮಚಂದ್ರ, ಪರಿಸರವಾದಿ ಕೃಷ್ಣಪ್ಪ ಉಪಸ್ಥಿತರಿದ್ದರು. ಅಭಾಸಾಪ ಜಿಲ್ಲಾ ಕೋಶಾಧಿಕಾರಿ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಕವಿ ಗುಣಾಜೆ ರಾಮಚಂದ್ರ ಭಟ್ ಕವಿಗೋಷ್ಠಿಗೆ ಚಾಲನೆ ನೀಡಿದರು. ಡಾ.ಸುರೇಶ್ ನೆಗಳಗುಳಿ ಗೋಷ್ಠಿಯಅಧ್ಯಕ್ಷತೆ ವಹಿಸಿದ್ದರು. ರೇಖಾ ಸುದೇಶ್ ರಾವ್ ನಿರೂಪಿಸಿದರು.**ಸೋನೆ ಮಳೆ- ಹಸಿರು ಇಳೆಕವಿಗೋಷ್ಠಿಯಲ್ಲಿ ಸುಮನಾ ಘಾಟೆ, ರೇಣುಕಾ ಸುಧೀರ್, ಗೀತಾ ಲಕ್ಷ್ಮೀಶ, ವಿದ್ಯಾಶ್ರೀ ಅಡೂರು, ಅರುಣಾ ನಾಗರಾಜ್, ದಿವ್ಯಾ .ಎ ಗಿರೀಶ್, ಚಂದನಾ ಕಾರ್ತಟ್ಟು, ಕೊಳ್ಚಪ್ಪೆ ಗೋವಿಂದ ಭಟ್, ರೇಖಾ ಸುದೇಶ ರಾವ್, ನಿಶಾನ್ ಅಂಚನ್, ಮನ್ಸೂರ್ ಮೂಲ್ಕಿ, ವೆಂಕಟೇಶ ಗಟ್ಟಿ, ಉಮೇಶ ಕಾರಂತ, ರಾಣಿ ಪುಷ್ಪಲತಾ ದೇವಿ,ಅನುರಾಧಾ ರಾಜೀವ್, ಸುಲೋಚನಾ ನವೀನ್, ದೀಪಾ ಜಿ .ಎಂ.,ಅನಿತಾ ಶೆಣೈ , ರೇಖಾ ಸುದೇಶ್ ರಾವ್ ಇವರುಗಳು ಸ್ವರಚಿತ ಕವನ ವಾಚಿಸಿದರು.**ಹಸಿರು ಮಂಗಳೂರುಮೇಯರ್ ಆಶಯಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ ಮಂಗಳೂರಿನ ಜನತೆಗೆ ಸ್ವಚ್ಛ ಹಾಗೂ ಹಸುರಿನಿಂದ ಕೂಡಿದ ಪರಿಸರ ಲಭಿಸಲು ಮಂಗಳೂರು ಮಹಾ ನಗರ ಪಾಲಿಕೆ ವಿಶೇಷ ಆದ್ಯತೆ ನೀಡಿದೆ. ಜನತೆಯ ಸಹಕಾರದಿಂದ ಹಸಿರು ಮಂಗಳೂರು ಸಾಕಾರವಾಗಲಿದೆ ಎಂದರು.

ಪ್ರಾದೇಶಿಕ ವಾರ್ತೆಗಳು

ಸೋನೆ ಮಳೆ- ಹಸಿರು ಇಳೆ ಕವಿಗೋಷ್ಠಿ.’ಪರರಿಗೆ ನೆರಳಾಗುವ ಬದುಕು ನಮ್ಮದಾಗಲಿ’ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಆಶಯ.

ಮಂಗಳೂರು : ಮರಗಳು ಬಿಸಿಲಿಗೆ ಬಾಡಿದರೂ ತಂಪಾದ ನೆರಳು ನೀಡುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವ ಬದುಕಿಗೆ ನೆರವಾಗುತ್ತಿರುವ ಪ್ರಕೃತಿಯಿಂದ ನಾವು ಪ್ರೇರಣೆ ಪಡೆಯಬೇಕು. ಪರರಿಗೆ ನೆರಳಾಗುವ ಬದುಕು ನಮ್ಮದಾಗಬೇಕು ಎಂದು ದೇರಳಕಟ್ಟೆಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆ ಮತ್ತು ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಸಹಯೋಗದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್‌ನಲ್ಲಿ ಬುಧವಾರ ನಡೆದ ವನಮಹೋತ್ಸವ ಹಾಗೂ ಸೋನೆ ಮಳೆ-ಹಸಿರು ಇಳೆ ಪರಿಸರ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.ವನಮಹೋತ್ಸವಕ್ಕೆ ಚಾಲನೆ ನೀಡಿದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ್ ಶೆಟ್ಟಿ ಮಾತನಾಡಿ ‘ ಮಾನವ ಸ್ವಾರ್ಥದಿಂದ ಪ್ರಕೃತಿ ನಾಶವಾಗುವುದನ್ನು ತಡೆಯಲು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಿರಂತರ ನಡೆಯಬೇಕಾಗಿದೆ ಎಂದರು. ಅಭಾಸಾಪ ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕವಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ಮಂಂಗಳೂರು ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರ್ಪೋರೇಟರ್ ಸಂಧ್ಯಾ ಮೋಹನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಮೀನಾಕ್ಷಿ ರಾಮಚಂದ್ರ, ಪರಿಸರವಾದಿ ಕೃಷ್ಣಪ್ಪ ಉಪಸ್ಥಿತರಿದ್ದರು. ಅಭಾಸಾಪ ಜಿಲ್ಲಾ ಕೋಶಾಧಿಕಾರಿ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಕವಿ ಗುಣಾಜೆ ರಾಮಚಂದ್ರ ಭಟ್ ಕವಿಗೋಷ್ಠಿಗೆ ಚಾಲನೆ ನೀಡಿದರು. ಡಾ.ಸುರೇಶ್ ನೆಗಳಗುಳಿ ಗೋಷ್ಠಿಯಅಧ್ಯಕ್ಷತೆ ವಹಿಸಿದ್ದರು. ರೇಖಾ ಸುದೇಶ್ ರಾವ್ ನಿರೂಪಿಸಿದರು.**ಸೋನೆ ಮಳೆ- ಹಸಿರು ಇಳೆಕವಿಗೋಷ್ಠಿಯಲ್ಲಿ ಸುಮನಾ ಘಾಟೆ, ರೇಣುಕಾ ಸುಧೀರ್, ಗೀತಾ ಲಕ್ಷ್ಮೀಶ, ವಿದ್ಯಾಶ್ರೀ ಅಡೂರು, ಅರುಣಾ ನಾಗರಾಜ್, ದಿವ್ಯಾ .ಎ ಗಿರೀಶ್, ಚಂದನಾ ಕಾರ್ತಟ್ಟು, ಕೊಳ್ಚಪ್ಪೆ ಗೋವಿಂದ ಭಟ್, ರೇಖಾ ಸುದೇಶ ರಾವ್, ನಿಶಾನ್ ಅಂಚನ್, ಮನ್ಸೂರ್ ಮೂಲ್ಕಿ, ವೆಂಕಟೇಶ ಗಟ್ಟಿ, ಉಮೇಶ ಕಾರಂತ, ರಾಣಿ ಪುಷ್ಪಲತಾ ದೇವಿ,ಅನುರಾಧಾ ರಾಜೀವ್, ಸುಲೋಚನಾ ನವೀನ್, ದೀಪಾ ಜಿ .ಎಂ.,ಅನಿತಾ ಶೆಣೈ , ರೇಖಾ ಸುದೇಶ್ ರಾವ್ ಇವರುಗಳು ಸ್ವರಚಿತ ಕವನ ವಾಚಿಸಿದರು.**ಹಸಿರು ಮಂಗಳೂರುಮೇಯರ್ ಆಶಯಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ ಮಂಗಳೂರಿನ ಜನತೆಗೆ ಸ್ವಚ್ಛ ಹಾಗೂ ಹಸುರಿನಿಂದ ಕೂಡಿದ ಪರಿಸರ ಲಭಿಸಲು ಮಂಗಳೂರು ಮಹಾ ನಗರ ಪಾಲಿಕೆ ವಿಶೇಷ ಆದ್ಯತೆ ನೀಡಿದೆ. ಜನತೆಯ ಸಹಕಾರದಿಂದ ಹಸಿರು ಮಂಗಳೂರು ಸಾಕಾರವಾಗಲಿದೆ ಎಂದರು.

ಪ್ರಾದೇಶಿಕ ವಾರ್ತೆಗಳು

ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯ ಸನ್ಮಾನ ಸ್ವೀಕರಿಸಿದ ಕೇಂದ್ರ ಸಚಿವ ವಿ. ಸೋಮಣ್ಣ

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಅದ್ಯಕ್ಷರಾದ ಸತೀಶ್ ಕುಂಪಲ, ಪ್ರಮುಖರಾದ ಸಂಜೀವ ಮಠಂದೂರು,ಕಿಶೋರ್ ಕುಮಾರ್ ,ದಿವಾಕರ ಪಾಂಡೇಶ್ವರ,ರಮೇಶ್ ಕಂಡೆಟ್ಟು, ಗಣೀಶ್ ಕುಲಾಲ್, ರಾಹುಲ್ ಶೆಟ್ಟಿ, ಗೌತಮ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಖ್ಯಾತ ಹೋಟೆಲ್ ಉದ್ಯಮಿ, ಸಮಾಜ ಸೇವಕ ರಾಜೇಂದ್ರ ವಿ. ಶೆಟ್ಟಿ ಅವರಿಗೆ ಕರುನಾಡ ರತ್ನ ರಾಜ್ಯ ಪ್ರಶಸ್ತಿ. ಇವರ ಅನನ್ಯ ಸಾಧನೆಯನ್ನು ಪರಿಗಣಿಸಿ ಡಾ.ಅಶೋಕ್ ಶೆಟ್ಟಿ ಬಿ. ಎನ್. ಸಾರಥ್ಯದ Mp mla’s tv 24×7 ನ್ಯೂಸ್ ಪೋರ್ಟಲ್ ಮತ್ತು Mp mla’s news ಪತ್ರಿಕೆಯು ಅಕ್ಟೋಬರ್ 13 ರಂದು ಆದಿತ್ಯವಾರ ಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ 13ನೇ ಸೌಹಾರ್ದ ಸಂಗಮದಲ್ಲಿ ಕರುನಾಡ ರತ್ನ ರಾಜ್ಯ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಿದೆ.ಈ ಬಗ್ಗೆ ರಾಜೇಂದ್ರ ವಿ. ಶೆಟ್ಟಿ ಅವರ ಸಾಧನಶೀಲ ಬದುಕಿನ ಯಶೋಗಾಥೆ.

ಹುಬ್ಬಳ್ಳಿ : ಉಡುಪಿ ಜಿಲ್ಲೆಯ ಪುಟ್ಟ ಹಳ್ಳಿಯೊಂದರ ಬಡ ಕುಟುಂಬವೊಂದರಲ್ಲಿ ಜನಿಸಿದ ರಾಜೇಂದ್ರ ಶೆಟ್ಟಿ ಬಾಲ್ಯದಲ್ಲೇ ಬಡತನದ ಬೇಗೆ ಅನುಭವಿಸಿದವರು. ಅವರ ತಂದೆ ತಾಯಿ ಕುಟುಂಬದೊಂದಿಗೆ ಉಡುಪಿಯಿಂದ ಹುಬ್ಬಳ್ಳಿಗೆ ವಲಸೆ ಬಂದಾಗ ರಾಜೇಂದ್ರ ಶೆಟ್ಟಿಯವರು ಬಾಲಕನಾಗಿದ್ದರು. ಹೇಗೋ ಕಷ್ಟಪಟ್ಟು 8ನೇ ತರಗತಿಯವರೆಗೆ ಓದಿದರು. ಆದರೆ, ಫೇಲ್ ಆದರು. ಮುಂದೆ,ಅವರು ಉದ್ಯೋಗಕ್ಕಾಗಿ ಮನೆಯಲ್ಲಿ ಯಾರಿಗೂ ಹೇಳದೆ ರೈಲು ಹತ್ತಿದರು. ಅದು ಹೋಗಿ ನಿಂತದ್ದು ಮುಂಬೈಯಲ್ಲಿ, ಅಲ್ಲಿ ರೈಲ್ವೇ ಸ್ಟೇಷನ್ ಅಕ್ಕಪಕ್ಕದಲ್ಲಿ ಚಹಾ ಮಾರುವ ಕೆಲಸ ಮಾಡಿದರು. ಆರಂಭದಲ್ಲಿ ಬೀದಿ ಬದಿಯಲ್ಲಿ ಮಲಗಿ ಕೆಲಸ ಹುಡುಕುತ್ತಾ ಅಲ್ಲಿನ ಹೊಟೇಲ್‌ಗಳಿಗೆ ಕೆಲಸಕ್ಕಾಗಿ ಅಲೆದಾಡಿದರು. ಮುಂದೆ, ಅವರಿಗೆ ಹೊಟೇಲ್‌ನಲ್ಲಿ ಕ್ಲೀನರ್ ಕೆಲಸ ಸಿಗುತ್ತದೆ. ವಿವಿಧ ಹೋಟೆಲ್‌ಗಳಲ್ಲಿ ಅಡುಗೆ ಮನೆಯ ಕೆಲಸ, ಕ್ಲೀನರ್, ವೇಟರ್, ಕ್ಯಾಪ್ಟನ್ ನಂತಹ ನಾನಾ ತರಹದ ಕೆಲಸಗಳನ್ನು ಮಾಡಿದರು. ಆ ಬಳಿಕ ದೇವತಾ ಮನುಷ್ಯರಂಥ ಮಾಲಕರೊಬ್ಬರು ಸಿಕ್ಕಿದ್ದರಿಂದ ಅವರ ಹೊಟೇಲ್‌ನಲ್ಲಿ 12 ವರ್ಷಗಳ ಕಾಲ ಮೆನೇಜರ್ ಆಗಿ ದುಡಿದರು. ಮುಂಬೈಗೆ ಬಂದಾಗ ಅವರಿಗೆ 13 ರಿಂದ 14 ವರ್ಷ ಆಗಿತ್ತು. ಅಲ್ಲಿ 18 ವರ್ಷಗಳ ತನಕ ಒಟ್ಟು 45 ಹೊಟೇಲ್‌ಗಳಲ್ಲಿ ದುಡಿದರು. ಅಪಾರ ಅನುಭವ ಗಳಿಸಿದರು.ತದನಂತರ, ಅವರು ತಾಯಿಯವರಿಗೆ ಫೋನ್ ಮಾಡಿ ಮುಂಬೈಯಲ್ಲಿ ಮನೆ ಮಾಡುತ್ತೇನೆ. ಬಂದು ನೆಲೆಸಿ ಎಂದಾಗ ಅವರ ತಾಯಿಯವರು ತಾನು ಸತ್ತರೂ ಬರೋಲ್ಲ ಎಂದರು. ತಾಯಿ ಲೀಲಾವತಿ ಅವರ ಮೇಲೆ ರಾಜೇಂದ್ರ ಶೆಟ್ಟಿಯವರಿಗೆ ಅತೀವ ಪ್ರೀತಿ. ತಾಯಿಯೆಂದರೆ ಪಂಚಪ್ರಾಣ. ಅವರ ಪಾಲಿಗೆ ಪ್ರತ್ಯಕ್ಷ ದೇವರು. ಈ ಕಾರಣಕ್ಕಾಗಿಯೇ ತನ್ನ ತಾಯಿಗಾಗಿ ಮುಂಬೈ ಬಿಟ್ಟು ಅಲ್ಲಿನ ಅಸಂಖ್ಯಾತ ಸ್ನೇಹಿತರ ಫ್ರೆಂಡ್ಸ್ ಸರ್ಕಲ್ ತೊರೆದರು. ಹುಬ್ಬಳ್ಳಿಯಲ್ಲಿಯೇ ಹೊಟೇಲ್ ಉದ್ಯಮ ಆರಂಭಿಸಿದ ಅವರು ನವೀನ್ ಕಾಮತ್ ಅವರು ಕೊಟ್ಟ 5೦ ಸಾವಿರ ರೂಪಾಯಿ ಹಣವನ್ನು ಹೊಟೇಲ್ ಉದ್ಯಮಕ್ಕೆ ತೊಡಗಿಸಿಕೊಂಡರು. ಇಂದು ಅದು ಕೋಟ್ಯಾಂತರ ರೂಪಾಯಿ ಬೆಲೆ ಬಾಳುತ್ತದೆ. ಮನೆ ದೇವರ ಹೆಸರಲ್ಲಿ ಹುಬ್ಬಳ್ಳಿ, ಧಾರವಾಡ, ಬೆಳಗಾಂ, ದಾವಣಗೆರೆ ಯಲ್ಲಿ ಶ್ರೀಪಂಜುರ್ಲಿ ಗ್ರೂಪ್ ಆಪ್ ಹೊಟೇಲ್’ ಮತ್ತು ತಾಯಿ ಲೀಲಾವತಿ ಯವರ ಹೆಸರಲ್ಲಿಹೊಟೇಲ್ ಲೀಲಾವತಿ ಪ್ಯಾಲೇಸ್’ ಮತ್ತು ಪೂಜ್ಯ ತಂದೆಯವರ ಹೆಸರಲ್ಲಿ ಪುಣೆಯಲ್ಲಿ ವಿಶ್ವನಾಥ್ ಪ್ಯಾಲೇಸ್ ಸೇರಿದಂತೆ ಒಟ್ಟು 9 ಹೊಟೇಲ್‌ಗಳನ್ನು ಆರಂಭಿಸಿದರು. ದಾವಣಗೆರೆಯಲ್ಲಿ ಒಂದು ಸುಸಜ್ಜಿತ ಕಲ್ಯಾಣ ಮಂಟಪವನ್ನು ಸ್ಥಾಪಿಸಿದರು.ಇಂದು ಅದು ರಾಜ್ಯ, ರಾಷ್ಟ್ರ,ಅಂತರಾಷ್ಟೀಯ ಮಟ್ಟದಲ್ಲಿಯೇ ಖ್ಯಾತಿ ಯನ್ನು ಪಡೆದು ಗ್ರಾಹಕರ ಶ್ಲಾಘನೆಗೆ ಪಾತ್ರವಾಗಿದೆ. ತಾನೊಬ್ಬನೇ ಬೆಳೆಯ ಬೇಕು, ತಾನೊಬ್ಬನೇ ದುಡ್ಡು ಗಳಿಸಬೇಕೆಂಬ ದುರಾಸೆಗೆ ಬೀಳದೆ 2೦ ವರ್ಷಗಳ ಕಾಲ ವಿವಿಧ ಹೊಟೇಲ್‌ಗಳಲ್ಲಿ ಕೆಲಸ ಮಾಡುವಾಗ ತನ್ನ ಜೊತೆಯಲ್ಲಿ ಕೆಲಸ ಮಾಡಿದ, ಸಹಾಯ, ಸಹಕಾರ ನೀಡಿದ, ಅರ್ಹ ಹಾಗೂ ಪ್ರಾಮಾಣಿಕ, ಆತ್ಮೀಯ ಗೆಳೆಯರನ್ನು ಕರೆದು ತನ್ನ ಹೊಟೇಲ್‌ಗಳ ಜವಾಬ್ದಾರಿಯನ್ನು ಅವರಿಗೆ ವಹಿಸಿಕೊಟ್ಟರು. ಅವರು ಕೂಡಾ ತನ್ನೊಟ್ಟಿಗೆ ಬೆಳೆದು ತಮ್ಮ ಸುಂದರ ಬದುಕು ಕಟ್ಟಿಕೊಳ್ಳಲು ಕಾರಣರಾದರು. ಹೀಗೇ ತನ್ನ ಹೊಟೇಲ್‌ನ ಕಾರ್ಮಿಕರನ್ನೇ ಮಾಲಕರಾಗಿಸಿ ಹಿರಿತನ ಮೆರೆದರು. ಇಂದು ಪಂಜುರ್ಲಿ ಗ್ರೂಪ್ ಆಪ್ ಹೊಟೇಲ್ ಮೂಲಕ ನಾನಾ ಸಂಸ್ಥೆಗಳನ್ನು ಆರಂಭಿಸಿ ಉದ್ಯಮದಲ್ಲಿ ಬಂದ ಹಣದಲ್ಲಿ ಸಮಾಜಸೇವೆಯನ್ನು ಮಾಡುತ್ತಿದ್ದಾರೆ. ಅವರ ತಂದೆಯವರು ತನ್ನ ಮಗ ದಾನಶೂರ ಕರ್ಣನಾಗುತ್ತಾನೆ ಎನ್ನುತ್ತಿದ್ದರು. ಕೊಡುವುದೆಂದರೆ ರಾಜೇಂದ್ರ ಶೆಟ್ಟಿಯವರಿಗೆ ಎಲ್ಲಿಲ್ಲದ ಪ್ರೀತಿ, ಅವರು ಕೊಡುಗೈದಾನಿ, ಬಡವರ ಬಂಧು. ತಾಳ್ಮೆ ಮತ್ತು ಶ್ರದ್ಧೆಯೊಂದಿದ್ದರೆ ಯಶಸ್ಸು ಸಾಧಿಸಬಹುದೆಂಬುವುದಕ್ಕೆ ರಾಜೇಂದ್ರ ಶೆಟ್ಟಿಯವರೇ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಯಾವುದೇ ದುರಾಭ್ಯಾಸಗಳಿಲ್ಲದ ರಾಜೇಂದ್ರ ಶೆಟ್ಟಿಯವರು ಸದ್ಗುಣಗಳ ಸಂಪನ್ನ. ಮಾನವೀಯ ಮೌಲ್ಯಗಳಿಗೆ ಜೀವ ತುಂಬುವ ಅಪೂರ್ವ ಸಾಧಕ. ಅವರ ಸಾಧನೆಯ ಹಿಂದೆ ಕಷ್ಟಗಳ ನೆರಳಿದೆ. ಹಠ, ಛಲ, ಪ್ರಾಮಾಣಿಕತೆ, ಶ್ರದ್ಧೆ, ನಿಷ್ಠುರತೆ, ಅನುಭವ, ಮಾತೃ ವಾತ್ಸಲ್ಯ ಸೇರಿದಂತೆ ನಂಬಿಕೆ, ವಿಶ್ವಾಸದ ಗುಣವಿದೆ. ಅದೇ ಅವರನ್ನು ಹೊಟೇಲ್ ಉದ್ಯಮದಲ್ಲಿ ಯಶಸ್ವಿ ಉದ್ಯಮಿಯಾಗಿ ಬೆಳೆಸಿದೆ. ತಾಯಿ, ಮಗಳು, ಹೆಂಡತಿ, ಪ್ರಾಮಾಣಿಕತೆ ಎಂಬ ನಾಲ್ಕು ಸಿದ್ಧಾಂತಗಳೇ ಅವರ ಯಶಸ್ಸಿನ ಬೆನ್ನೆಲುಬುಗಳು. ಹುಬ್ಬಳ್ಳಿ-ಧಾರವಾಡದಲ್ಲಿ ಹೊಟೇಲ್ ಎಂದರೆ ಹಸಿದವನಿಗೆ ಅನ್ನ ಹಾಕುವ ಮನೆಯಿದ್ದಂತೆ. ರಾಜೇಂದ್ರ ಶೆಟ್ಟಿಯವರು ಶ್ರೀ ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್, ಹೊಟೇಲ್, ಲೀಲಾವತಿ ಪ್ಯಾಲೇಸ್ ಮೂಲಕ ಹೊಟೇಲ್ ಉದ್ಯಮದಲ್ಲಿ ಕ್ರಾಂತಿಯನ್ನೇ ಮಾಡಿದ್ದಾರೆ. ಬಡವರ ಬಂಧುವಾಗಿ ಸಾವಿರಾರು ಜನರ ಹಸಿವು ನೀಗಿಸಿದ್ದಾರೆ. 37 ವರ್ಷಗಳ ಹೊಟೇಲ್ ಉದ್ಯಮದ ಅನುಭವವಿರುವ ಅವರು ಇಂದು ಸಾವಿರಾರು ಉದ್ಯೋಗಿಗಳಿಗೆ ಅನ್ನದಾತ. ಅವರ ಸಾಧನೆ, ಜೀವನ ಶೈಲಿ ಯುವಜನತೆಗೆ ಸ್ಪೂರ್ತಿ. ಅವರು ಕರ್ನಾಟಕದ ಹೆಮ್ಮೆಯ ಸುಪುತ್ರರಾಗಿದ್ದಾರೆ. ಸಾಧನೆಗಳ ಸರದಾರ ರಾಜೇಂದ್ರ ಶೆಟ್ಟಿ:ರಾಜೇಂದ್ರ ಶೆಟ್ಟಿಯವರು ನವೆಂಬರ್ 2೦, 1973 ರಂದು ಉಡುಪಿ ಜಿಲ್ಲೆಯ ಮೂಡುಬೆಟ್ಟು ಮಣಿಪುರ ಗ್ರಾಮದ ದೆಂದೂರುನಲ್ಲಿ ಜನಿಸಿದರು. ಅವರ ತಂದೆ ದಿ. ವಿಶ್ವನಾಥ ಶೆಟ್ಟಿ ಮತ್ತು ತಾಯಿ ಲೀಲಾವತಿ. ಹರೀಶ್ ಮತ್ತು ಅಜಯ್ ಅವರು ರಾಜೇಂದ್ರ ಶೆಟ್ಟಿಯವರ ಸಹೋದರರಾಗಿದ್ದು, ದೀಪಾ ಮತ್ತು ವಿದ್ಯಾ ಸಹೋದರಿಯರು.ರಾಜೇಂದ್ರ ಶೆಟ್ಟಿಯವರ ಧರ್ಮಪತ್ನಿ ಹರಿಣಿ. ಕುಮಾರಿ ವೈಷ್ಣವಿ ಮತ್ತು ಕುಮಾರಿ ವೈಭವಿ ಇವರ ಸುಪುತ್ರಿಯರು.ಹುಬ್ಬಳ್ಳಿ-ಧಾರವಾಡ-ಬೆಳಗಾವಿ-ದಾವಣಗೆರೆ, ಪುಣೆ ಗಳಲ್ಲಿ ಒಟ್ಟು 9 ಹೊಟೇಲ್‌ಗಳನ್ನು ಹೊಂದಿರುವ ಅವರು ದಾವಣಗೆರೆಯಲ್ಲಿ ಸುಸಜ್ಜಿತ ಕಲ್ಯಾಣ ಮಂಟಪವನ್ನು ಹೊಂದಿದ್ದಾರೆ. ಒಟ್ಟು 1೦೦೦ ಮಂದಿ ಉದ್ಯೊಗಿಗಳಿಗೆ ಇವರು ಅನ್ನದಾತರಾಗಿದ್ದಾರೆ. 2005 ರಲ್ಲಿ ಧಾರವಾಡದ ಟೋಲ್ ನಾಕಾದಲ್ಲಿ ಹೊಟೇಲ್ ಶ್ರೀ ಪಂಜುರ್ಲಿ, 2009ರಲ್ಲಿ ಹುಬ್ಬಳ್ಳಿ ಕೋರ್ಟು ಸರ್ಕಲ್‌ನ ಹತ್ತಿರ ಹೊಟೇಲ್ ಶ್ರೀ ಪಂಜುರ್ಲಿ, 2011ರಲ್ಲಿ ಹುಬ್ಬಳ್ಳಿ ವಿದ್ಯಾನಗರದ ಬಿ.ವಿ.ಬಿ. ಎದುರು ಹೊಟೇಲ್ ಶ್ರೀ ಪಂಜುರ್ಲಿ, 2012ರಲ್ಲಿ ಧಾರವಾಡ ಕೆ.ಸಿ. ಪಾರ್ಕು ಎದುರು ಹೊಟೇಲ್ ಶ್ರೀ ಪಂಜುರ್ಲಿ, 2015 ರಲ್ಲಿ ಹುಬ್ಬಳ್ಳಿ ಗೋಕುಲ್ ರಸ್ತೆಯ ನೆಹರು ನಗರದಲ್ಲಿ ಹೊಟೇಲ್ ಶ್ರೀ ಪಂಜುರ್ಲಿ, 2015 ರಲ್ಲಿ ಹುಬ್ಬಳ್ಳಿ ಗೋಕುಲ ರಸ್ತೆ ಓಯಾಸಿಸ್ ಮಾಲ್ ಎದುರು ಹೊಟೇಲ್ ಲೀಲಾವತಿ ಪ್ಯಾಲೇಸ್, 2020 ರಲ್ಲಿ ಬೆಳಗಾವಿಯ ಖಾನಾಪುರ ರಸ್ತೆಯ 3ನೇ ರೈಲ್ವೇ ಗೇಟ್ ಬಳಿ ಶ್ರೀ ಪಂಜುರ್ಲಿ ಫೈನ್ ಡೈನ್, 2022 ರಲ್ಲಿ ದಾವಣಗೆರೆ ಹಳೇ ಬಸ್ ನಿಲ್ದಾಣದ ಹತ್ತಿರ ಹೊಟೇಲ್ ಶ್ರೀ ಪಂಜುರ್ಲಿ ಪ್ಯಾಲೇಸ್, ದಾವಣಗೆರೆ ಹಳೇ ಬಸ್ ನಿಲ್ದಾಣದ ಹತ್ತಿರ 2022 ರಲ್ಲಿ ಲೀಲಾವತಿ ಕಲ್ಯಾಣ ಮಂಟಪವನ್ನು ಸ್ಥಾಪಿಸಿದ್ದಾರೆ.2023 ರಲ್ಲಿ ಪುಣೆಯಲ್ಲಿ ಹೋಟೆಲ್ ವಿಶ್ವನಾಥ್ ಪ್ಯಾಲೇಸ್ ನ್ನು ಆರಂಭಿಸಿದ್ದಾರೆ. ಹುಬ್ಬಳ್ಳಿ ಹೊಟೇಲ್ ಸಂಘದ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಹೊಟೇಲ್ ಮತ್ತು ಉಪಹಾರ ಮಂದಿರಗಳ ಸಂಘ, ಬೆಂಗಳೂರು ಇದರ ಧಾರವಾಡ ಜಿಲ್ಲಾ ಪ್ರತಿನಿಧಿ ಸದಸ್ಯ, ಹುಬ್ಬಳ್ಳಿ-ಧಾರವಾಡ ಬಂಟರ ಸಂಘ, ಹುಬ್ಬಳ್ಳಿ ಇದರ ಸಹ ಕಾರ್ಯದರ್ಶಿ, ವಿಶ್ವ ಬಂಟರ ಸಂಘ ಮುಂಬಯಿ ಇದರ ನಿರ್ದೇಶಕರು, ಧಾರವಾಡ ಹೋಟೆಲ್ ಸಂಘ, ಬೆಳಗಾವಿ ಹೋಟೆಲ್ ಸಂಘ, ದಾವಣಗೆರೆ ಹೋಟೆಲ್ ಸಂಘ, ಪುಣೆ ಹೋಟೆಲ್ ಸಂಘ, ಹುಬ್ಬಳ್ಳಿ ರೋಟರಿ ಕ್ಲಬ್, ಹುಬ್ಬಳ್ಳಿ ಶಿರೂರ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಕಮಿಟಿ ಇವುಗಳಲ್ಲಿ ಸಮಿತಿ ಸದಸ್ಯರಾಗಿ ಗುರುತಿಸಿದ್ದಾರೆ. ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಹುಬ್ಬಳ್ಳಿ ಇದರ ಗೌರವ ಅಧ್ಯಕ್ಷರಾಗಿದ್ದಾರೆ. ಧಾರವಾಡ ಜಿಲ್ಲಾ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ, ಹುಬ್ಬಳ್ಳಿ ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೋಟೆಲ್ ಉದ್ಯಮದಲ್ಲಿ ಸಾಧಿಸಿದ ಸಾಧನೆಗೆ ಮತ್ತು ಇವರ ನಿಸ್ವಾರ್ಥ ಸಮಾಜ ಸೇವೆಯನ್ನು ಗುರುತಿಸಿ ವಿವಿಧ ಸಂಘ ಸಂಸ್ಥೆಗಳು ಹಾಗೂ ಮಾಧ್ಯಮಗಳು ಇವರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಿವೆ. ಬೆಂಗಳೂರಿನ ಕರ್ನಾಟಕ ಸಿರಿ ಸಂಘಟನೆಯು ಕರ್ನಾಟಕ ಉದ್ಯಮ ರತ್ನ ಪ್ರಶಸ್ತಿ ನೀಡಿದೆ.2015 ರಲ್ಲಿ ಹೊನ್ನಾವರದ ಹೊನ್ನಾವರ ಸಂಘದಿಂದ ರಾಜ್ಯೋತ್ಸವ ಪ್ರಶಸ್ತಿ, 2016 ರಲ್ಲಿ ಹುಬ್ಬಳ್ಳಿಯ ಹುಬ್ಬಳ್ಳಿ ಹೊಟೇಲ್ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಪ್ರಶಸ್ತಿ, 2018 ರಲ್ಲಿ ವಿಜಯ ಕರ್ನಾಟಕ ಕನ್ನಡ ದಿನಪತ್ರಿಕೆ ಹುಬ್ಬಳ್ಳಿ ಆವೃತ್ತಿಯಿಂದ 2018ರಲ್ಲಿ ಅಚೀವರ್ಸ್ ಆಫ್ ಕರ್ನಾಟಕ ಪ್ರಶಸ್ತಿ, 2018 ರಲ್ಲಿ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಟಾನ ಟ್ರಸ್ಟ್ ನಿಂದ ವಿಶ್ವೇಶ್ವರಯ್ಯ ರಾಷ್ಟೀಯ ಸದ್ಭಾವನಾ ಪ್ರಶಸ್ತಿ, 2021 ರಲ್ಲಿ ಮದರ್ ಥೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ನ್ನು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ, ಬೆಂಗಳೂರು ಇವರಿಂದ ಪಡೆದಿದ್ದಾರೆ. 2021ರಲ್ಲಿ ಕರ್ನಾಟಕ ಮಾದ್ಯಮ ಸಹಕಾರ ಮತ್ತು ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ. 2021ರಲ್ಲಿ ರೆಡ್ ಎಫ್.ಎಂ. ರೇಡಿಯೋದಿಂದ ಬಿಸಿನೆಸ್ ಬ್ರಿಲಿಯನ್ಸ್ ಅವಾರ್ಡ್, 2022 ರಲ್ಲಿ ಸುವರ್ಣ ನ್ಯೂಸ್ ಟಿ.ವಿ. ಚಾನೆಲ್ ಮತ್ತು ಕನ್ನಡ ಪ್ರಭ ದಿನಪತ್ರಿಕೆಯಿಂದ ಉತ್ತರ ಕರ್ನಾಟಕ ಸಾಧಕರು ಪ್ರಶಸ್ತಿ, 2022 ರಲ್ಲಿ ಇಂದು ಸಂಜೆ ಪತ್ರಿಕೆಯಿಂದ ಉದ್ಯೋಗ ರತ್ನ ಪ್ರಶಸ್ತಿ, 2022 ರಲ್ಲಿ ರಾಜ್ ನ್ಯೂಸ್ ಟಿ.ವಿ.ಯಿಂದ ಗುರು ಅನುಗ್ರಹ ಪುರಸ್ಕಾರ, 2022 ರಲ್ಲಿ ಸರ್ಕಾಳ ಮರಾಠಿ ದಿನಪತ್ರಿಕೆಯಿಂದ ಐಡಲ್ಸ್ ಆಫ್ ಬೆಳಗಾವ, 2022 ರಲ್ಲಿ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಬೆಂಗಳೂರು ಇವರಿಂದ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ, 2023 ರಲ್ಲಿ ವಿಸ್ತಾರ ಟಿವಿಯಿಂದ ಬಿಜಿನೆಸ್ ಎಕ್ಸಲೆನ್ಸ್ ಅವಾರ್ಡ್,2023 ರಲ್ಲಿ ಪಬ್ಲಿಕ್ ನೆಸ್ಟ್ ಇಂಟರ್‌ನ್ಯಾಷನಲ್ ನ್ಯೂಸ್‌ನಿಂದ ಪಂಚರತ್ನ ಪ್ರಶಸ್ತಿ, 2023 ರಲ್ಲಿ ಸರ್ಟಿಫಿಕೇಟ್ ಆಫ್ ಎಕ್ಸಲೆನ್ಸ್ ನ್ಯೂಸ್ ಫಸ್ಟ್ ಟಿವಿ ಮೊದಲಾದ ಹಲವಾರು ಪ್ರತಿಷ್ಠಿತ ಪ್ರಶಸ್ತಿ, ಪುರಸ್ಕಾರ, ಸನ್ಮಾನಗಳು ದೊರೆಕಿವೆ.ಇವರು ಹೊಟೇಲ್ ಉದ್ಯಮದಲ್ಲಿ ಸಾಧಿಸಿದ ಸಾಧನೆಯ ಬಗ್ಗೆ 2021ರಲ್ಲಿ ಪವರ್ ಟಿವಿಯ ‘ಹೊಟೇಲ್ ಹೀರೋ’ ಕಾರ್ಯಕ್ರಮ, 2022 ರಲ್ಲಿ ನ್ಯೂಸ್ ಫಸ್ಟ್ ಟಿವಿಯಿಂದ ‘ನಾನು ನನ್ನ ಸಾಧನೆ ಕಾರ್ಯಕ್ರಮ’, 2023 ರಲ್ಲಿ ಟಿವಿ 5 ‘ನಮ್ಮ ಬಾಹುಬಲಿ’ ಕಾರ್ಯಕ್ರಮ ಮೂಲಕ ಸುದ್ಧಿ ಬಿತ್ತರಗೊಂಡಿವೆ. ಇದು ಖ್ಯಾತ ಹೋಟೆಲ್ ಉದ್ಯಮಿ, ಸಮಾಜ ಸೇವಕ ರಾಜೇಂದ್ರ ವಿ. ಶೆಟ್ಟಿ ಅವರ ಯಶೋಗಾಥೆ. ಇವರ ಅನನ್ಯ ಸಾಧನೆಯನ್ನು ಪರಿಗಣಿಸಿ ಡಾ.ಅಶೋಕ್ ಶೆಟ್ಟಿ ಬಿ. ಎನ್. ಸಾರಥ್ಯದ Mp mla’s tv 24×7 ನ್ಯೂಸ್ ಪೋರ್ಟಲ್ ಮತ್ತು Mp mla’s news ಪತ್ರಿಕೆಯು ಅಕ್ಟೋಬರ್ 13 ರಂದು ಆದಿತ್ಯವಾರ ಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ 13ನೇ ಸೌಹಾರ್ದ ಸಂಗಮದಲ್ಲಿ ಕರುನಾಡ ರತ್ನ ರಾಜ್ಯ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಿದೆ.

ಪ್ರಾದೇಶಿಕ ವಾರ್ತೆಗಳು

ಅವಕಾಶ ವಂಚಿತ ಮಕ್ಕಳಿಗೆ ಆಸರೆ ಪುಣ್ಯದ ಕಾರ್ಯ-ಮೋಹನ್‌ದಾಸ್ ಕಾಮತ್ ಮಂಜೇಶ್ವರ

ಮಂಗಳೂರು : ಮಕ್ಕಳಲ್ಲಿ ದೇವರನ್ನು ಕಾಣುವ ಶ್ರೇಷ್ಠ ಸಂಪ್ರದಾಯ ಭಾರತೀಯರಲ್ಲಿದೆ. ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ ಕಾರ್ಯ ಎಂದು ಅನಿವಾಸಿ ಭಾರತೀಯ, ಸಮಾಜ ಸೇವಕ ಮೋಹನ್‌ದಾಸ್ ಕಾಮತ್ ಮಂಜೇಶ್ವರ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ಜೆಪ್ಪುವಿನ ಭಗಿನಿ ಸಮಾಜದ ಮಕ್ಕಳಿಗೆ ಏರ್ಪಡಿಸಿದ ಸಹಭೋಜನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ‘ ಮಂಗಳೂರಿನ ಭಗಿನ ಸಮಾಜ ಕಳೆದ ಹಲವು ದಶಕದಿಂದ ಕೈಗೊಂಡಿರುವ ಮಾನವೀಯ ಸೇವೆ ಸಮಾಜಕ್ಕೆ ಮಾದರಿಯಾಗಿದೆ’ ಎಂದರು.ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ‘ಮಕ್ಕಳು ನಾಳಿನ ರೂವಾರಿಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳಿಸುವುದು ಸಮಾಜದ ಜವಾಬ್ದಾರಿ ’ಎಂದರು.ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ಸತೀಶ್ ಇರಾ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಪ್ರತಿಭಾ ಪುರಸ್ಕಾರ

ಮಂಗಳೂರು: ಅವಿಭಜಿತ ಮಂಗಳೂರು ತಾಲೂಕು ವ್ಯಾಪ್ತಿಯ, 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿಯಲ್ಲಿ 95% ಮತ್ತು ಅಧಿಕ ಅಂಕಗಳನ್ನು ಪಡೆದ ಬಂಟ ಸಮಾಜದ ವಿದ್ಯಾರ್ಥಿಗಳನ್ನು ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಗೌರವ ಪುರಸ್ಕಾರವನ್ನು ಅಗೋಸ್ತು ತಿಂಗಳ 15ನೇ ತಾರೀಕಿನಂದು ಬೆಳಗ್ಗೆ 10.30 ಗಂಟೆಗೆ ಬಂಟರ ಯಾನೆ ನಾಡವರ ಮಾತೃಸಂಘದ ಅಮೃತೋತ್ಸವ ಕಟ್ಟಡದ ಸಭಾಭವನದಲ್ಲಿ ನೆರವೇರಿಸುವುದೆಂದು ತೀರ್ಮಾನಿಸಲಾಗಿದೆ.ಈ ಬಗ್ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಂಕಪಟ್ಟಿ, ಆಧಾರ್ ಕಾರ್ಡ್‌ನ ಪ್ರತಿ ಮತ್ತು ಒಂದು ಭಾವಚಿತ್ರ ಸಮೇತ ಬಂಟರ ಯಾನೆ ನಾಡವರ ಮಾತೃಸಂಘದ ಕಛೇರಿ, ಒಂದನೇ ಮಹಡಿ, ಅಮೃತೋತ್ಸವ ಕಟ್ಟಡ ಮಂಗಳೂರು, ಇಲ್ಲಿ ಜುಲೈ ತಿಂಗಳ 31ನೇ ತಾರೀಕಿನೊಳಗೆ ಸಲ್ಲಿಸಲು ವಿನಂತಿಸಲಾಗಿದೆ.ಹೆಚ್ಚಿನ ವಿವರಗಳಿಗೆ ಕೃಷ್ಣಪ್ರಸಾದ್ ರೈಯವರನ್ನು 9480015895 ಸಂಪರ್ಕಿಸಬಹುದು.

Scroll to Top