Author name: editor

ಕರಾವಳಿ ಸುದ್ದಿ, ಪ್ರಾದೇಶಿಕ ವಾರ್ತೆಗಳು

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.

ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಸದಾನಂದ ಪೂಜಾರಿಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ ವಿಭಾಗದ ಮುಖ್ಯಸ್ಥರಾಗಿದ್ದು, ಸಾವಿರಾರು ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ ಸಮಾಜಮುಖಿಯಾಗಿ ಸಾಗಿ ಬಡವರ ಪಾಲಿನ ಕರುಣಾಮಯಿ ಎಂದೇ ಜನಜನಿತರಾಗಿದ್ದಾರೆ. ಇವರಿಗೆ Mp mla’s news ಸೌಹಾರ್ದ ಸಂಗಮದಲ್ಲಿ ಬೆಸ್ಟ್ ಡಾಕ್ಟರ್ ಅವಾರ್ಡ್ ನೀಡಿ ಗೌರವಿಸಿದೆ.

ಪ್ರಾದೇಶಿಕ ವಾರ್ತೆಗಳು

ಜುಲೈ 12 ರಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಚೇರಿ ಶುಭಾರಂಭ.

ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಚೇರಿ ಅಂದರೆ ಸಂಸದರ ಕಚೇರಿಯು ಜುಲೈ 12 ರ ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಸ್ಟೇಟ್ ಬ್ಯಾಂಕ್ ಬಳಿಯಿರುವ ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿ ಶುಭಾರಂಭಗಳ್ಳಲಿದೆ.

ಪ್ರಾದೇಶಿಕ ವಾರ್ತೆಗಳು

ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ನೆರವು: ಶಾಸಕ ಕಾಮತ್

ಮಂಗಳೂರು: ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ‌ ಶ್ರೀ ಬಬ್ಬುಸ್ವಾಮಿ‌ ಕ್ಷೇತ್ರದ ಕಾರ್ಯಗಳಿಗೆ‌ ತನ್ನಿಂದಾದ ಅಗತ್ಯ ನೆರವು ಒದಗಿಸಲಾಗುವುದು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.ಅವರು ಸೋಮವಾರ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ ಉರ್ವ ವೇಲ್ಸ್ ಪೇಟೆ ಇಲ್ಲಿನ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ದೈವ ದೇವರ ಕೆಲಸ ಮಾಡುವುದೆಂದರೆ ಅದೊಂದು ಪುಣ್ಯದ ಕೆಲಸ. ಶಾಸಕನಾಗಿ ನನಗೂ ಹಲವು ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಕೂಡ ವೇಲ್ಸ್ ಪೇಟೆಯ ಬಬ್ಬುಸ್ವಾಮಿ‌ ಕ್ಷೇತ್ರದ ಅಭಿವೃದ್ಧಿಗೆ ನೆರವು ದೊರೆಯುವಂತಾಗಲಿ ಎಂದವರು ಹೇಳಿದರು.ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ‌ ಶುಭ ಹಾರೈಸಿದರು.ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ಉದ್ಘಾಟಿಸಿದರು.ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ.ಜಿ.ಸುವರ್ಣ, ಕ್ಷೇತ್ರದ ಗುರಿಕಾರ ಬಾಲಕೃಷ್ಣ ಯು.ಎಸ್‌. ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾರ್ಪೋರೇಟರ್ ಗಳಾದ ಗಣೇಶ್ ಕುಲಾಲ್, ಕಿರಣ್ ಕುಮಾರ್ ಕೋಡಿಕಲ್, ಮನೊಜ್ ಕೋಡಿಕಲ್, ಸುರೇಖಾ ಶ್ರೀನಿವಾಸ್, ಸಿನೆಮಾ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್,ಉರ್ವ ಮಾರಿಯಮ್ಮ ಕ್ಷೇತ್ರದ ಆಡಳಿತ ಮೊಕ್ತೇಸರ ಲಕ್ಷ್ಮಣ್ ಕೋಡಿಕಲ್ ಚಾಮುಂಡೇಶ್ವರಿ ಕ್ಷೇತ್ರದ ಪ್ರಮುಖರಾದ ದೀಪಕ್, ಪ್ರಮುಖರಾದ ಬಾಬಾ ಅಲಂಕಾರ್‌,ರಾಧಾಕೃಷ್ಣ ಅಶೋಕನಗರ, ಕೃಷ್ಣ ಅಡಿಗ, ರವಿ ಕಾಪಿಕಾಡ್, ಅಮಿತಕಲಾ, ಸುಧಾಕರ ಆಳ್ವ, ಅರುಣ್ ಉರ್ವ, ಭುಜಂಗ ಶ್ರೀಯಾನ್, ರಮಾನಾಥ ಶೆಟ್ಟಿ, ವಿಠೋಬಾ ನೆಲ್ಲಿಪಾಡಿ, ಉದ್ಯಮಿ ದೀಪಕ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.ಸಮಿತಿಯ ಜೊತೆ ಕಾರ್ಯದರ್ಶಿ ರಘುವೀರ್ ಬಾಬು ಗುಡ್ಡೆ ಸ್ವಾಗತಿಸಿದರು. ರಘುವೀರ್ ಕದ್ರಿ ವಂದಿಸಿದರು. ಚೇತನ್ ಪಿಲಿಕುಳ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ತುಳುನಾಡು ಪ್ರತಿಷ್ಠಾನ(ರಿ) ಮುಲ್ಕಿ ಇದರ ಸ್ಥಾಪಕ ಅಧ್ಯಕ್ಷ ರಾಜೇಶ್ ಅಮೀನ್ ನೇತೃತ್ವದಲ್ಲಿ ತಡರಾತ್ರಿ ಮಂಗಳೂರು ತಲುಪುವ ದೂರದೂರಿನ ಬಡ ಪ್ರಯಾಣಿಕರಿಗೆ ಉಚಿತವಾಗಿ ದಿನನಿತ್ಯ ಆಹಾರ ವಿತರಣೆ.

ಮಂಗಳೂರು:ಮಂಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಮತ್ತು ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಗಳಲ್ಲಿ ತಡರಾತ್ರಿ ವೇಳೆಗೆ ದೂರದೂರಿಂದ ಮಂಗಳೂರಿಗೆ ತಲುಪುವ ಹೊರಜಿಲ್ಲೆಗಳ ಬಡ ಪ್ರಯಾಣಿಕರು ಹಸಿವಿನಿಂದ ಬಳಲಬೇಕಾದ ಪರಿಸ್ಥಿತಿಯನ್ನು ಮನಗಂಡ ತುಳುನಾಡು ಪ್ರತಿಷ್ಠಾನ ಮೂಲ್ಕಿ ಇದರ ಸ್ಥಾಪಕ ಅಧ್ಯಕ್ಷ ಮತ್ತು ಆಯುಷ್ ಇಲಾಖೆಯ ಯುನಾನಿ ವಿಭಾಗದಲ್ಲಿ ಮುಲ್ಕಿ ಕೆರೆಕಾಡ್ ನಲ್ಲಿ ಉದ್ಯೋಗಿಯಾಗಿರುವ ರಾಜೇಶ್ ಅಮೀನ್ ಅವರು ಪ್ರತಿದಿನ ರಾತ್ರಿ 11ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ತನಕ ಆಹಾರದ ವ್ಯವಸ್ಥೆಯನ್ನು ಸ್ವತಃ ಬಡ ಪ್ರಯಾಣಿಕರಿಗೆ ಉಚಿತವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಕಳೆದ 2 ತಿಂಗಳಿಂದ ಅವರು ದೂರದೂರಿಂದ ಮಂಗಳೂರು ತಲುಪುವ ಬಡ ಪ್ರಯಾಣಿಕರಿಗೆ ಉಚಿತವಾಗಿ ಆಹಾರ ವಿತರಣೆ ಮಾಡುತ್ತಿದ್ದಾರೆ. ಬಡ ಪ್ರಯಾಣಿಕರ ಜೊತೆಗೆ, ನಿರಾಶ್ರಿತರಿಗೆ ಕೂಡಾ ಅವರು ಆಹಾರ ವಿತರಣೆ ಮಾಡುತ್ತಿದ್ದಾರೆ. ಪ್ರತಿ ರಾತ್ರಿ ಅವರು 25 ಮಂದಿಗೆ ಉಚಿತವಾಗಿ ಆಹಾರ ವಿತರಣೆ ಮಾಡುತ್ತಿದ್ದಾರೆ. ಲಾಲ್ ಬಾಗ್ ಬಿಗ್ ಬಜಾರ್ ನ ಎದುರುಗಡೆ ಇರುವ ಕ್ಯಾಂಟೀನ್ ವೊಂದರ ಮಾಲಕಿ ಸಾವಿತ್ರಿ ಮತ್ತು ಕೆ ಎಸ್ ಆರ್ ಟಿ ಸಿ ಬಳಿಯ ಕ್ಯಾಂಟೀನ್ ಗಳ ಮಾಲಕರಾದ ರವಿ ಕಡಬ ಮತ್ತು ಲೋಕೇಶ್ ಬಾರೆಬೈಲ್ ಅವರು ತಮ್ಮ ಹೋಟೆಲ್ ನಿಂದ ಆಹಾರ ವ್ಯವಸ್ಥೆಯನ್ನು ಉಚಿತವಾಗಿ ರಾಜೇಶ್ ಅಮೀನ್ ಅವರಿಗೆ ನೀಡುತ್ತಿದ್ದೂ,ಅದನ್ನು ಅವರು ಬಡ ಪ್ರಯಾಣಿಕರಿಗೆ, ನಿರಾಶ್ರಿತರಿಗೆ ತುಳುನಾಡು ಪ್ರತಿಷ್ಠಾನ ಟ್ರಸ್ಟ್ ಮೂಲಕ ನೀಡುತ್ತೀರುವುದಾಗಿ Mp mla’s ನ್ಯೂಸ್ ಗೆ ತಿಳಿಸಿದ್ದಾರೆ. ರಾಜೇಶ್ ಅಮೀನ್ ಅವರ ಸಮಾಜ ಸೇವೆ ವ್ಯಾಪಕ ಜನ ಶ್ಲಾಘನೆಗೆ ಪಾತ್ರವಾಗಿದೆ. ರಾಜೇಶ್ ಅಮೀನ್ ಅವರು ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟಿ ಸಿಟಿಯ ಸಕ್ರಿಯ ಸದಸ್ಯರಾಗಿದ್ದಾರೆ. ಹಲವು ಬಾರಿ ರಕ್ತದಾನ ಮಾಡಿರುವ ಅವರು ತುಳುನಾಡು ಪ್ರತಿಷ್ಠಾನದ ಮೂಲಕ ಸಮಾಜಸೇವೆ ಮಾಡುತ್ತಾ ಬಂದಿದ್ದು, ಬಡರೋಗಿಗಳಿಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಶಾಲಾ ಮಕ್ಕಳಿಗಾಗಿ ಉಚಿತ ಪುಸ್ತಕ ವಿತರಣೆ ಮೊದಲಾದ ನೆರವು ಒದಗಿಸಿದ್ದಾರೆ. ಇದರ ಜೊತೆಗೆ, ಕೆಲವು ಸಿನೆಮಾಗಳಲ್ಲಿ ಚಲನಚಿತ್ರ ಕಲಾವಿದರಾಗಿಯೂ ದುಡಿದ್ದಾರೆ. ಹಾಯ್ ತುಳುನಾಡು ಪತ್ರಿಕೆಯ ಸ್ಥಾಪಕ ಸಂಪಾದಕರಗಿಯೂ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷರಾಗಿ ಬೇಬಿ ಕುಂದರ್.

ಬಂಟ್ವಾಳ : ಬಂಟ್ವಾಳ ರೋಟರಿ ಕ್ಲಬ್ ನ 56ನೇ ಅಧ್ಯಕ್ಷರಾಗಿ ಬೇಬಿ ಕುಂದರ್ ಅಧಿಕಾರ ಸ್ವೀಕರಿಸಿದ್ದಾರೆ. ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ(ಬೂಡಾ)ದ ಅಧ್ಯಕ್ಷರಾಗಿರುವ ಬೇಬಿ ಕುಂದರ್ ಅವರು ಸಮಾಜಮುಖಿ ಅಭಿವೃದ್ಧಿ ಆಡಳಿತದಿಂದ ಜನಜನಿತರಾಗಿದ್ದು, ಮಾಜಿ ಸಚಿವ ಬಿ. ರಮಾನಾಥ ರೈಯವರ ಪರಮಾಪ್ತರು ಹಾಗೂ ವಿಜಯಬ್ಯಾಂಕ್ ನ ಮಾಜಿ ಉದ್ಯೋಗಿ. ಇವರಿಗೆ Mp mla’s ನ್ಯೂಸ್ ಶುಭ ಹಾರೈಸುತ್ತದೆ.

ಕರ್ನಾಟಕ ವಾರ್ತೆಗಳು

ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು.05 : ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಶುಕ್ರವಾರ ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಪ್ರಾದೇಶಿಕ ವಾರ್ತೆಗಳು

ದ.ಕ.ಜಿಲ್ಲಾ ವಕ್ಪ್ ನಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜರಿಗೆ ಅಭಿನಂದನಾ ಸಮಾರಂಭ.ಜಿಲ್ಲೆಯ ಪ್ರಮುಖ ಗಣ್ಯ ನಾಯಕರ ಸಮ್ಮುಖದಲ್ಲಿ ವಕ್ಪ್ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್ ಬೇಡಿಕೆಯಿಟ್ಟ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ‌ಸದನದಲ್ಲಿ ಪ್ರಸ್ತಾಪಿಸಿ ನ್ಯಾಯ ಒದಗಿಸುವ ಭರವಸೆ ನೀಡಿದ ಐವನ್ ಡಿಸೋಜ ಅವರು ಸುಮಾರು 1 ತಾಸು 40 ನಿಮಿಷಗಳ ‌ ಭಾಷಣದ ಮೂಲಕ ಚರ್ಚಿಸಿದರು.

ಮಂಗಳೂರು : ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ ವತಿಯಿಂದ ಜಿಲ್ಲಾ ವಕ್ಪ್ ಸಭಾಂಗಣದಲ್ಲಿ ಜಿಲ್ಲೆಯ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಬೃಹತ್ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಇವರು ವಹಿಸಿದ್ದರು.ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಅಲ್ಪಸಂಖ್ಯಾತ ಮುಸಲ್ಮಾನರ1.ಮೀಸಲಾತಿ ರದ್ದತಿ ವಾಪಾಸ್ ಪಡೆದು, 2ಬಿ ಗೆ 4% ನ್ನು 7% ಮಾಡಬೇಕು.2.ಹಿಜಾಬ್ ನಿಷೇದ ಹಿಂಪಡೆಯಬೇಕು.3.ಎನ್ ಆರ್ ಸಿ ಅಮಾತತ್ವಯಕರ ಮೇಲಿನ ಕೇಸು ವಾಪಾಸು ಪಡೆಯಬೇಕು..4.ಮಂಗಳೂರು ಗೋಲಿಬಾರ್ ನಲ್ಲಿ ಮಡಿದವರಿಗೆ ಬಿಜೆಪಿ ಪರಿಹಾರ ಘೋಷಿಸಿ ವಾಪಸ್ಸು ಪಡೆದದನ್ನು ಸರಕಾರದಿಂದ ಮರು ಘೋಷಣೆ ಮಾಡಿಸಬೇಕು ಹಾಗೂ ಗೋಲಿಬಾರ್ ಬಗ್ಗೆ ತನಿಖೆ ನಡೆಸಬೇಕು.7.ಕೋಮುಭಾಷಣ ಮತ್ತು ಕೋಮುವಿಷಬೀಜ ಬಿತ್ತುವವರ ವಿರುದ್ಧ ಕೇಸ್ ದಾಖಲಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಪ್ರಕರಣಗಳು ಇತೀಚೆಗೆ ಜಾಸ್ತಿಯಾಗುತ್ತಿದ್ದು,ಇದರ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿದಾಗ,ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುವುದರಲ್ಲಿ ಪಿಪಿ ಗಳು ಹಾಗೂ ಸರಕಾರಿ ವಕೀಲರುಗಳ ಆಲಸ್ಯ ಮತ್ತು ಕರ್ತವ್ಯಲೋಪಗಳು ಎದ್ದು ಕಾಣುತ್ತಿದೆ.ಸಂಬಂಧಪಟ್ಟವರನ್ನು ತಾಕೀತು ಮಾಡುವ ಅಥವಾ ಆ ಹುದ್ದೆಗೆ ಪ್ರಾಮಾಣಿಕರನ್ನು ನೇಮಕ ಮಾಡುವುದು.ಈ ಎಲ್ಲಾ ಬೇಡಿಕೆಗಳನ್ನು ಆಲಿಸಿದ ಐವನ್ ಡಿಸೋಜರು ಸುಮಾರು‌1 ತಾಸು 40 ನಿಮಿಷಗಳ ಭಾಷಣ ಮಾಡಿ ಮಂಗಳೂರಿನ ಎಲ್ಲಾ ಪ್ರಮುಖ ನಾಯಕರು ಉದ್ಯಮಿಗಳು ಸೇರಿರುವಂತಹ ಸಭೆಯಲ್ಲಿ ಎಲ್ಲಾ ಸಮಸ್ಯೆಗಳನ್ನು ಕೂಡಲೇ ಸದನದಲ್ಲಿ ಪ್ರಸ್ತಾಪಿಸಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸಿ ಕೊಡುವಲ್ಲಿ ಪ್ರಾಮಾಣಿಕವಾಗಿ ಅತೀ ಶೀಘ್ರವಾಗಿ ಶ್ರಮಿಸುತ್ತೇನೆ ಎಂಬ ಭರವಸೆಯನ್ನು ನೀಡಿದರು.ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಎಸ್.ಎಮ್.ರಷೀದ್ ಹಾಜಿ, ಇಬ್ರಾಹಿಮ್ ಕೋಡಿಜಾಲ್ , ಝಕರಿಯ್ಯಾ ಜೋಕಟ್ಟೆ,ಶೇಖಬ್ಬ ಎಕ್ಷಪರ್ಟೈಸ್,ಬಿ ಎಂ ಮಮ್ತಾಝ್ ಅಲಿ, ಮಾಜಿ ಮೇಯರ್ ಕೆ ಅಶ್ರಫ್, ಮುಹಮ್ಮದ್ ಹಾರಿಸ್ ,ಮನ್ಸೂರ್ ಅಝಾದ್, ಸಿರಾಜ್ ಬಜಪೆ, ಆಸಿಪ್ ಹೋಂ ಪ್ಲಸ್, ಅಬ್ದುಲ್ ಜಲೀಲ್ ಕೃಷ್ಣಾಪುರ,ಮೂಸಬ್ಬ ಬ್ಯಾರಿ, ಯಾಸೀನ್ ಕುದ್ರೋಳಿ, ಅಝೀಝ್ ಕುದ್ರೋಳಿ, ಮಕ್ಬೂಲ್ ಜಾಮಿಅ, ಕುದ್ರೋಳಿ, ಶಂಸುದ್ದೀನ್ ಕಂಡತ್ಪಳ್ಳಿ , ನಿಸಾರ್ ಕರಾವಳಿ,ಸಾಲಿಹ್ ಬಜಪೆ, ಮುಕ್ತಾರ್ ವಕೀಲರು,ಅಶ್ರಫ್ ಬದ್ರಿಯಾ, ವಕ್ಪ್ ಅಧಿಕಾರಿ ಅಬೂಬಕ್ಕರ್,ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿ ಜಿನೇಂದ್ರ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಯಶೋಧರ, ನೌಸೀರ್ , ಉಪಾಧ್ಯಕ್ಷರುಗಳಾದ ಪಕೀರಬ್ಬ ಮಾಸ್ಟರ್, ಎ. ಕೆ. ಜಮಾಲ್,ಅಬ್ದುಲ್ ರಹ್ಮಾನ್,ಅಶ್ರಫ್ ಕಿನಾರ,ಸದಸ್ಯರಾದ ಸಿದ್ದೀಖ್ ಕಾಜೂರು,ಹನೀಪ್ ಮಲ್ಲೂರು, ಸಾಕಿರ್ ಕಣ್ಣೂರು ಉಪಸ್ಥಿತರಿದ್ದು,ಸೈದುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅಸಹಾಯಕರಿಗೆ ಸಹಾಯಹಸ್ತ ನೀಡುವ ಕಾರ್ಯಕ್ರಮ ಸ್ಫೂರ್ತಿ ದಾಯಕ : ಡಾ. ಶಾಂತರಾಮ ಶೆಟ್ಟಿ.

ಮುಲ್ಕಿ :ರಾಮಕೃಷ್ಣ ಪೂಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ,ಟ್ರಸ್ಟಿ ಭಾಸ್ಕರ್ ಪೂಂಜ ಸಹಕಾರದೊಂದಿಗೆಅಶಕ್ತರಿಗೆ ವೈದ್ಯಕೀಯ ನೆರವು ನೀಡುವ ಕಾರ್ಯಕ್ರಮ ಮುಲ್ಕಿಯ ಕಾರ್ನಾಡ್ ಪೂಂಜಾ ವಿಲ್ಲಾ ದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಿಟ್ಟೆ ಯುನಿವರ್ಸಿಟಿಯ ಪ್ರೊ ಚಾನ್ಸಿಲರ್ ಡಾ ಶಾಂತರಾಮ ಶೆಟ್ಟಿ ಮಾತನಾಡಿ ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅಸಹಾಯಕರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮ ಸ್ಪೂರ್ತಿದಾಯಕವಾಗಿದ್ದು ಫಲಾನುಭವಿಗಳ ಆಶೀರ್ವಾದವೇ ಶ್ರೀರಕ್ಷೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಂಜ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದ್ಯಮಿ ಅರವಿಂದ ಪೂಂಜ ವಹಿಸಿ ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು ನಿರಂತರವಾಗಿ ನಡೆಯಲಿದೆ ಎಂದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಸಂತಿ ಶಾಂತರಾಮ್ ಶೆಟ್ಟಿ, ಡಾ. ಲತೀಕಾ ಶೆಟ್ಟಿ, ಪೂಂಜಾ ಚಾರಿಟೇಬಲ್ ಟ್ರಸ್ಟಿಗಳಾದ ಅಶ್ವಿನಿ ಪೂಂಜ, ಆದಿತ್ಯ ಪೂಂಜಾ, ಅಪೂರ್ವ ಪೂಂಜಾ ಹಾಗೂ ಪೂಂಜಾ ಚಾರಿಟಬಲ್ ಟ್ರಸ್ಟ್ ನ ನಿರ್ದೇಶಕರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ವೈ ಎನ್ ಸಾಲ್ಯಾನ್ ನಿರೂಪಿಸಿದರು.ಬಳಿಕ ಸುಮಾರು 10 ಲಕ್ಷ 25 ಸಾವಿರ ರೂ ವೆಚ್ಚದಲ್ಲಿ 160 ಮಂದಿ ಅಶಕ್ತರಿಗೆ ವೈದ್ಯಕೀಯ ನೆರವು ನೀಡುವ ಕಾರ್ಯಕ್ರಮ ನಡೆಯಿತು.

ಪ್ರಾದೇಶಿಕ ವಾರ್ತೆಗಳು

“ಧರ್ಮದೈವ” ತುಳು ಚಲನಚಿತ್ರ ತೆರೆಗೆ. ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ

ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ ಕಠಿಣ ಪರಿಶ್ರಮದಿಂದ ಸಿನಿಮಾ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಆಶೀರ್ವದಿಸಿ” ಎಂದರು.ಮುಂಬೈ ಹೇರಂಭ ಇಂಡಸ್ಟ್ರಿಸ್ ನ ಸಿಎಂಡಿ ಕನ್ಯಾನ‌ ಕೂಳೂರು ಸದಾಶಿವ ಶೆಟ್ಟಿ ಮಾತನಾಡಿ, “ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ. ಸಿನಿಮಾ ಗೆಲ್ಲಲು ಪ್ರೇಕ್ಷಕರ ಬೆಂಬಲ ಬೇಕೇ ಬೇಕು. ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿ” ಎಂದರು.ದೇವದಾಸ್ ಕಾಪಿಕಾಡ್ ಮಾತನಾಡಿ, “ಧರ್ಮದೈವ ಸಿನಿಮಾ ದೈವಗಳ ಕುರಿತು ಯಾವುದೇ ವಿಡಂಬನೆ ಇಲ್ಲದೆ ತುಳುನಾಡಿನ ದೈವಗಳ ಶಕ್ತಿಯನ್ನು ಜಗತ್ತಿಗೆ ಪರಿಚಯಿಸುವ ಸಿನಿಮಾ. ಇಂದು ಮಲಯಾಳಂ ಸಿನಿಮಾಗಳು ಸಾಲು ಸಾಲು ಗೆಲ್ಲುತ್ತಿವೆ. ತುಳು ಸಿನಿಮಾ ರಂಗದಲ್ಲೂ ಅಂಥ ವಿಭಿನ್ನ ಸಿನಿಮಾಗಳು ಬರಬೇಕು” ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತಾಡಿ, “ಕೋರ್ಟ್ ಕಚೇರಿಗಳ ಮೇಲಿನ ನಂಬಿಕೆಗಿಂತ ಧರ್ಮದೈವದ ಚಾವಡಿಯಲ್ಲಿ ಸಿಗುವ ತೀರ್ಪು ದೊಡ್ಡದು ಅನ್ನೋ ನಂಬಿಕೆ ಇರುವುದು ತುಳುನಾಡಿನಲ್ಲಿ ಕಾಣಲು ಸಾಧ್ಯ. ದೈವದ ಇಚ್ಛೆಯಿಲ್ಲದೆ ಏನೂ ನಡೆಯುವುದಿಲ್ಲ. ಇಂಥ ಉತ್ತಮ ಪ್ರಯತ್ನಕ್ಕೂ ದೈವಗಳೇ ಕಾರಣ. ಮುಂದೆಯೂ ತುಳು ಚಿತ್ರರಂಗದಲ್ಲಿ ಉತ್ತಮ ಸಿನಿಮಾಗಳು ಬರಲಿ” ಎಂದರು.ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಮಾತಾಡಿ, “ಸಿನಿಮಾದಲ್ಲಿ ನಾನು ಟೈಟಲ್ ಹಾಡನ್ನು ಹಾಡಿದ್ದೇನೆ. ಸಿನಿಮಾವನ್ನು ತುಳುನಾಡಿನ ಜನರು ಸಿನಿಮಾವನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ” ಎಂದರು.ವೇದಿಕೆಯಲ್ಲಿ ಉದ್ಯಮಿ ಕೆ ಕೆ ಶೆಟ್ಟಿ, ತುಳು ಚಲನ‌ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ಪಟ್ಲ, ಪ್ರಕಾಶ್ ಪಾಂಡೇಶ್ವರ್, ಸ್ವರಾಜ್ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಚೇತನ್ ರೈ ಮಾಣಿ, ಭೋಜರಾಜ್ ವಾಮಂಜೂರ್, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಇಸ್ಮಾಯಿಲ್ ಮೂಡುಶೆಡ್ಡೆ, ಪ್ರದೀಪ್ ಆಳ್ವ ಕದ್ರಿ, ಭಾಸ್ಕರ್ ರೈ ಕುಕ್ಕುವಳ್ಳಿ, ಕೆ ಕೆ ಪೇಜಾವರ, ದಯಾನಂದ ಕತ್ತಲ್ ಸಾರ್, ಸುಹಾನ್ ಆಳ್ವ, ರೂಪಾ ವರ್ಕಾಡಿ, ಚಂದ್ರಹಾಸ ಆಳ್ವ, ಹೇಮಂತ್ ಸುವರ್ಣ,_ನಿರ್ಮಾಪಕ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ, ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ಮತ್ತಿತರರು ಉಪಸ್ಥಿತರಿದ್ದರು. ಲಿಖಿತ್ ರೈ ಕಾರ್ಯಕ್ರಮ‌ ನಿರ್ವಹಿಸಿದರು.‌“ಧರ್ಮ ದೈವ” ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಂಡಿದೆ.ಈ ನಾಡಿನ ರೈತಾಪಿ ಜನರು ತಮ್ಮ ಬೇಸಾಯ- ಕೃಷಿ,ತೋಟಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ತುಳುನಾಡಿನ ದೈವ- ದೇವರು, ನೇಮ- ಕೋಲ-ತಂಬಿಲ, ನಾಗಾರಾಧನೆ -ದೈವಾರಾಧನೆ ಮೂಲಕ ಈ ಮಣ್ಣಿನ, ಬದುಕಿನ ಕಥೆಯನ್ನು ಕಟ್ಟಿಕೊಡುವ ತುಳು ಚಲನಚಿತ್ರ “ಧರ್ಮ ದೈವ” ಬೆಳ್ಳಿ ತೆರೆಯಲ್ಲಿ ಮೂಡಿಬಂದಿದೆ.ಸಿನಿಮಾ ಕುರಿತು:ಉಡುಪಿ, ಮಂಗಳೂರು ಮತ್ತು ಪುತ್ತೂರಿನ ಯುವಕರು ತಾವೇ ಸೇರಿಕೊಂಡು “ಧರ್ಮದೈವ ಪ್ರೊಡಕ್ಷನ್ಸ್ ಲಾಂಛನದಲ್ಲಿ” “ಧರ್ಮ ದೈವ”ಎಂಬ ಹೆಸರಿನಲ್ಲಿ ಒಂದು ಪೂರ್ಣ ಚಲನಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.ಯುವ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ ಶೆಟ್ಟಿ, “ಧರ್ಮದೈವ” ತುಳು ಚಲನ ಚಿತ್ರವನ್ನು ಭಕ್ತಿ -ಶಕ್ತಿ ಶ್ರದ್ಧೆಯಿಂದ ನಿರ್ಮಾಣ ಮಾಡಿಕೊಟ್ಟಿರುವರು, ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಕಥೆ ಬರೆದು ಈ ಚಿತ್ರವನ್ನು ನಿರ್ದೇಶಸಿದ್ದಾರೆ.ಈ ಚಿತ್ರಕ್ಕೆ ಚಿತ್ರ ಕಥೆ- ಸಂಭಾಷಣೆಯನ್ನು ಹಮೀದ್ ಪುತ್ತೂರು ಬರೆದಿದ್ದಾರೆ. ಅರುಣ್ ರೈ ಪುತ್ತೂರು ಇವರ ಛಾಯಾಗ್ರಹಣ, ಸಂಗೀತ ಮತ್ತು ಹಿನ್ನೆಲೆ ಸಂಗೀತ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇವರ ಶಿಷ್ಯ ನಿಶಾನ್ ರೈ ಮಠಂತಬೆಟ್ಟು, ಸಾಹಿತ್ಯ :ಕೆ.ಕೆ ಪೇಜಾವರ್ , ಸುಮಂತ್ ಬೈಲಾಡಿ, ಹಿನ್ನೆಲೆ ಗಾಯನ: ಖ್ಯಾತ ಯಕ್ಷಗಾನ ಭಾಗವತರು ಪಟ್ಲ ಸತೀಶ್ ಶೆಟ್ಟಿ, ಕು.ಸಮನ್ವಿ ಆರ್.ರೈ ನುಳಿಯಾಲು, ಚಿತ್ರ ಸಂಕಲನ: ರಾಧೇಶ್ ರೈ ಮೊಡಪ್ಪಾಡಿ ಮತ್ತು ಶ್ರೀನಾಥ್ ಪವಾರ್, ನಿರ್ಮಾಣದಲ್ಲಿ ಸುಧೀರ್ ಕುಮಾರ್ ಕಲ್ಲಡ್ಕ ಮತ್ತು ರಾಕೇಶ್ ಶೆಟ್ಟಿ ಜಿ ಅವರ ಸಹಕಾರವು ಈ ಚಿತ್ರಕ್ಕಿದೆ.ಚಿತ್ರದಲ್ಲಿ ದೈವದ ನಂಬಿಕೆ- ಇರುವಿಕೆಯನ್ನು ಮಾತ್ರ ಸಾದರ ಪಡಿಸಲಾಗಿದೆ.ನವರಸ ಭರಿತವಾಗಿರುವ “ಧರ್ಮದೈವ” ತುಳು ಚಲನ ಚಿತ್ರದ ತಾರಾಗಣದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಚೇತನ್ ರೈ ಮಾಣಿ, ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ, ದಯಾನಂದ ರೈ ಬೆಟ್ಟಂಪಾಡಿ, ಭರತ್ ಶೆಟ್ಟಿ, ರವಿ ಸಾಲ್ಯಾನ್ (ಸ್ನೇಹಿತ್), ಸಂದೀಪ್ ಪೂಜಾರಿ, ಪುಷ್ಪರಾಜ್ ಬೊಳ್ಳಾರ್ ,ರಂಜನ್ ಬೋಳಾರ್, ಕೌಶಿಕ್ ರೈ ಕುಂಜಾಡಿ,ದೀಕ್ಷಾ ಡಿ.ರೈ, ಹಾಗೂ ಗ್ರೇಷಿಯಲ್ ಕಲಿಯಂಡ ಕೊಡಗು ಮೊದಲಾದವರು ಅಭಿನಯಿಸಿದ್ದಾರೆ. ಚಿತ್ರಗಳು : ಸತೀಶ್ ಕಾಪಿಕಾಡ್

Scroll to Top