Author name: editor

ಕರಾವಳಿ ಸುದ್ದಿ, ಹೊರ ರಾಜ್ಯ ವಾರ್ತೆಗಳು

ಪ್ರಖ್ಯಾತ ಉದ್ಯಮಿ, ಸಮಾಜ ಸೇವಕ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಮಾಲಕತ್ವದ ಅತ್ಯಾಧುನಿಕ ಸೌಲಭ್ಯದ ಸುಸಜ್ಜಿತವಾದ ಕೊರೋನೆಟ್ ಬ್ಯೂಟಿಕ್ ಹೋಟೆಲ್ ವಿನೂತನ ವಿನ್ಯಾಸದೊಂದಿಗೆ ಪುಣೆಯ ಆಪೆಯ ರೋಡನಲ್ಲಿ ಶುಭಾರಂಭ

ಪುಣೆ: ಸಮಾಜ ಸೇವಕ, ಪುಣೆಯ ಹೆಸರಾಂತ ಹೊಟೇಲ್ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ, ಪುಣೆ ಬಂಟರ ಸಂಘದ ಅಧ್ಯಕ್ಷ ಮತ್ತು ಬಂಟ ಸಮಾಜದ ಮುಖಂಡ, ಬಡವರ ಬಂಧು ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಬಾಳಿಕೆ ಮಾಲಕತ್ವದ ಕೊರೋನೆಟ್ ಬ್ಯೂಟಿಕ್ ಹೊಟೇಲ್ ನೂತನ ವಿನ್ಯಾಸದೊಂದಿಗೆ ಪುಣೆಯ ಆಪ್ಪೆ ರೋಡ್‌ನಲ್ಲಿ ಮಾ. 1ರಂದು ಶುಭಾರಂಭಗೊಂಡಿತು. ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು ಪೂಜೆ, ಶ್ರೀ ಸತ್ಯನಾರಾಯಣ ಪೂಜೆ ಯೊಂದಿಗೆ ದೇವತಾ ಕಾರ್ಯಗಳು ನಡೆದವು. ಈ ಸಂದರ್ಭ ಗಣ್ಯರಾದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂ.ಜಿ.ಆರ್ ಗ್ರೂಪ್‌ನ ಸಿಎಂಡಿ ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಬಂಟರ ಸಂಘ ಮುಂಬಯಿಯ ಪ್ರಮುಖರು, ಖ್ಯಾತ ಉದ್ಯಮಿಗಳು ಆಗಮಿಸಿ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟುಬಾಳಿಕೆ, ದಿವ್ಯಾ ಸಂತೋಷ್ ಶೆಟ್ಟಿ ದಂಪತಿಯನ್ನು ಶಾಲು ಹೊದಿಸಿ, ಪುಷ್ಪಗುಚ್ಚ ಸ್ಮರಣಿಕೆ ನೀಡಿ ಅಭಿನಂದಿಸಿ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂ ಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ,ಗೌರವ ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ವಿ. ಕೆ. ಗ್ರೂಪ್ ಆಫ್ ಕಂಪೆನೀಸ್‌ ಸಿಎಂಡಿ ಕೆ. ಎಂ.ಶೆಟ್ಟಿ,ಸಿಎ ಎನ್. ಬಿ. ಶೆಟ್ಟಿ,ಹೊಟೇಲ್ ಸಾಯಿ ಪ್ಯಾಲೇಸ್ ಆಡಳಿತ ನಿರ್ದೇಶಕ ರವಿ ಶೆಟ್ಟಿ, ಬಂಟರ ಸಂಘ ಮುಂಬಯಿ, ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ಎಸ್‌ಎಂಶೆಟ್ಟಿ ಶಿಕ್ಷಣಸಮೂಹ ಸಂಸ್ಥೆಯ ಕಾರ್ಯಾಧ್ಯಕ್ಷ ರತ್ನಕಾರ್ ಶೆಟ್ಟಿ ಮುಂಡ್ಕೂರು, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಉಪ್ಪೇಂದ್ರ ಶೆಟ್ಟಿ ಮುಂಬಯಿ ಶ್ರೀ ಸಿದ್ದಿವಿನಾಯಕ ಮಂದಿರದ ಟ್ರಸ್ಟಿ ಭಾಸ್ಕರ್ ಶೆಟ್ಟಿ,ನವಿಮುಂಬಯಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸಂಜೀವ ಎಸ್. ಶೆಟ್ಟಿ, ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಾಜಿ ಅಧ್ಯಕ್ಷ ನ್ಯಾಯವಾದಿ ಪ್ರಕಾಶ್ ಎಲ್. ಶೆಟ್ಟಿ, ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ, ಬಾಲಾಜಿ ಗ್ರೂಪ್‌ನ ವಿಜಯ ಶೆಟ್ಟಿ,ತುಂಗಾ ಹಾಸ್ಪಿಟಲ್ ಮುಂಬಯಿ ನಿರ್ದೇಶಕ ಉಮೇಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಪಶ್ಚಿಮ ವಲಯ ಸಮನ್ವಯಕ ಖಾಂದೇಶ ಭಾಸ್ಕರ್ ಶೆಟ್ಟಿ, ಮುಂಬಯಿ ಉದ್ಯಮಿಗಳಾದ ಹರೀಶ್ ಶೆಟ್ಟಿ ಗುರ್ಮೆ, ಆಶೋಕ್ ಶೆಟ್ಟಿ, ಪ್ರಭಾಕರ ಶೆಟ್ಟಿ ಇನ್ನ, ದಿವಾಕರ ಶೆಟ್ಟಿ ಕುರ್ಲಾ, ಸಮಾಜ ಸೇವಕ ಸಂಚಿತ್ ಶೆಟ್ಟಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರು, ಟ್ರಸ್ಟಿಗಳು, ಕಾರ್ಯಕಾರಿ ಸಮಿತಿಯ ಪದಾ ಧಿಕಾರಿಗಳು, ಪ್ರಾದೇಶಿಕ ಸಮಿತಿ ಪದಾ ಧಿಕಾರಿಗಳು, ಮಹಿಳಾ ವಿಭಾಗ ಪದಾ ಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಹಿತೈಷಿಗಳು ಶುಭ ಹಾರೈಸಿದರು.ಸಂತೋಷ್ ಶೆಟ್ಟಿಯವರು ಅತಿಥಿ- ಗಣ್ಯರನ್ನು ಶಾಲು ಹೊದಿಸಿ, ಪುಷ್ಪ ಗುಚ್ಚವನ್ನಿತ್ತು ಸ್ವಾಗತಿಸಿ ಗೌರವಿಸಿದರು. ಬಂಟರ ಸಂಘ ಮುಂಬಯಿ ಮುಖವಾಣಿ ಬಂಟರವಾಣಿ ಸಮಿತಿ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ ಅವರು ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಮೈಮೂನಾ ಮತ್ತು ಮರ್ಝಿನಾರಿಗೆ ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿ. ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಶರತ್ ಸಾಲ್ಯಾನ್, ಅಶೋಕ್. ಶೆಟ್ಟಿ ಬಿ.ಎನ್. ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ.ಮಾ.1೦ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ.

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.1೦ರಂದು ಬೆಳಗ್ಗೆ9.3೦ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆಗೈದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರು ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಶರತ್ ಸಾಲ್ಯಾನ್, ಅಶೋಕ್. ಶೆಟ್ಟಿ ಬಿ.ಎನ್.ಇವರುಗಳು ಪ್ರೆಸ್‌ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.ನಟ, ನಿರ್ದೇಶಕ ನಟ ದೇವದಾಸ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ವೈ.ಭರತ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಪ್ರೆಸ್‌ಕ್ಲಬ್ ನ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ , ಪ್ರೆಸ್‌ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿರುವರು. ಇದೇ ಸಂದರ್ಭ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

“ಪುರುಷೋತ್ತಮನ‌ ಪ್ರಸಂಗ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ‌ ಪ್ರಸಂಗ ಸಿನಿಮಾ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು. ಭುಜಬಲಿ ಧರ್ಮಸ್ಥಳ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ದೇವದಾಸ್ ಕಾಪಿಕಾಡ್ ತುಳು ನಾಟಕ ಮತ್ತು ತುಳು ಸಿನಿಮಾಗಳ ಮೂಲಕ ಅದ್ವಿತೀಯ ಸಾಧನೆಗೈದವರು. ಈಗ ಪುರುಷೋತ್ತಮನ ಪ್ರಸಂಗ ಸಿನಿಮಾವನ್ನು ಕನ್ನಡದಲ್ಲಿ ನಿರ್ದೇಶನ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೂ ಪರಿಚಯವಾಗುತ್ತಿದ್ದಾರೆ. ಇದರಲ್ಲಿ ಅವರು ಯಶಸ್ಸನ್ನೂ ಕಂಡಿದ್ದಾರೆ. ಮತ್ತಷ್ಟು ಕನ್ನಡ ಸಿನಿಮಾಗಳನ್ನು ನಿರ್ದೇಶನ ಮಾಡಲಿ ಎಂದು ಶುಭ ಹಾರೈಸಿದರು.ವಾರ್ತಾಧಿಕಾರಿ ಖಾದರ್ ಷಾ ಶುಭ ಹಾರೈಸಿದರು. ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ಕಾಪಿಕಾಡ್ ತುಳು ಸಿನಿಮಾರಂಗದಲ್ಲಿ ಅನೇಕ ಉತ್ತಮ ಸಿನಿಮಾಗಳನ್ನು ನೀಡಿದ್ದಾರೆ. ಈಗ ಕನ್ನಡದಲ್ಲಿ ನಿರ್ದೇಶನ ಮಾಡಿದ ಸಿನಿಮಾ ಸೂಪರ್ ಹಿಟ್ ಆಗಲಿ ಎಂದರು. ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಕೋಸ್ಟಲ್ ವುಡ್ ನಿಂದ ದೇವದಾಸ್ ಕಾಪಿಕಾಡ್ ಕನ್ನಡ ಚಿತ್ರರಂಗಕ್ಕೆ ಹೋಗಿದ್ದಾರೆ. ಅವರಿಂದ ಒಳ್ಳೆಯ ಸಿನಿಮಾಗಳು ಬರಲಿ. ಪುರುಷೋತ್ತಮನ‌ ಪ್ರಸಂಗ ಒಂದು ಸದಭಿರುಚಿಯ ಒಳ್ಳೆಯ ಸಿನಿಮಾ. ಸಿನಿಮಾ ನೋಡಿ ಎಲ್ಲರೂ ಪ್ರೋತ್ಸಾಹ ನೀಡಿ ಎಂದು ಶುಭ ಹಾರೈಸಿದರು.ಕಿಶೋರ್ ಕೊಟ್ಟಾರಿ, ಗಿರೀಶ್ ಶೆಟ್ಟಿ, ಸಾಯಿ ಕೃಷ್ಣ ಕುಡ್ಲ, ಮೈಮ್ ರಾಮ್ ದಾಸ್, ಸದಾಶಿವ ಅಮೀನ್, ದೇವದಾಸ್ ಕಾಪಿಕಾಡ್, ಶರ್ಮಿಳಾ ಕಾಪಿಕಾಡ್, ನಾಯಕ ನಟ ಅಜಯ್ ಪೃಥ್ವಿ, ನಾಯಕಿ ರಿಷಿಕಾ ನಾಯಕ್, ಜ್ಯೋತಿಷ್ ಶೆಟ್ಟಿ, ಅರ್ಜುನ್ ಕಾಪಿಕಾಡ್, ಸಂದೀಪ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಉತ್ತಮ ಹಾಸ್ಯ ಕಥಾಹಂದರ ಹೊಂದಿರುವ ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗೂ ರಿಷಿಕಾ ನಾಯ್ಕ್ ಮತ್ತು ದೀಪಿಕಾ ಎಂಬರನ್ನು ದೇವದಾಸ್ ಕಾಪಿಕಾಡ್ ಕನ್ನಡಕ್ಕೆ ಪರಿಚಯಿಸಿದ್ದಾರೆ.ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ.ಕನ್ನಡದಲ್ಲಿ ನಟನಾಗಿ ಗುರುತಿಸಿ ಹೆಸರು ಗಳಿಸಿರುವ ದೇವದಾಸ್ ಕಾಪಿಕಾಡ್ ಮೊದಲನೇ ಬಾರಿಗೆ ಕನ್ನಡದಲ್ಲಿ ಕತೆ ಚಿತ್ರಕತೆ ಸಾಹಿತ್ಯ ಸಂಭಾಷಣೆ ಬರೆದು ಸಿನಿಮಾ ನಿರ್ದೇಶಿಸಿದ್ದಾರೆ. ಅಲ್ಲದೆ ಒಂದು ಪ್ರಮುಖ ಪಾತ್ರದಲ್ಲೂ ಅವರು ಕಾಣಿಸಿ ಕೊಂಡಿದ್ದಾರೆ. ಇವರಿಗೆ ನಿರ್ದೇಶನದಲ್ಲಿ ಅರ್ಜುನ್ ಕಾಪಿಕಾಡ್ ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ. ನಿರ್ಮಾಪಕರು: ವಿ. ರವಿ ಕುಮಾರ್.ತಾರಾಗಣದಲ್ಲಿ ಅಜಯ್ ನಾಯಕ ನಟ ರಿಷಿಕಾ ನಾಯ್ಕ್ (ನಾಯಕಿ) ದೀಪಿಕಾ ( ನಾಯಕಿ) ದೇವದಾಸ್ ಕಾಪಿಕಾಡ್ ನವೀನ್ ಡಿ ಪಡೀಲ್ ಅರವಿಂದ ಬೋಳಾರ್ ಭೋಜರಾಜ ವಾಮಂಜೂರು ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ ಚೇತನ್ ರೈ ಮಾಣಿ, ಜ್ಯೋತಿಷ್ ಶೆಟ್ಟಿ ಇದ್ದಾರೆ. ತಾಂತ್ರಿಕ ವರ್ಗಸಹ ನಿರ್ದೇಶನ: ಅರ್ಜುನ್ ಕಾಪಿಕಾಡ್ ಸಹಾಯಕ ನಿರ್ದೇಶನ: ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ, ಅನೂಪ್ ಸಾಗರ್, ಕ್ಯಾಮರಾ -ವಿಷ್ಣು, ಸಹಾಯ: ಪುಟ್ಟ, ಸಂಗೀತ – ನಕುಲ್ ಅಭಯಂಕರ್, ವಸ್ತ್ರವಿನ್ಯಾಸ – ಶರತ್ ಪೂಜಾರಿ, ಸಹ ನಿರ್ಮಾಪಕರು- ಅಬೂಬಕರ್ ಪುತ್ತಕ, ಲೈನ್ ಪ್ರೊಡ್ಯುಸರ್ – ಸಂದೀಪ್ ಶೆಟ್ಟಿ, ಪ್ರೊಡಕ್ಷನ್ ಟೀಮ್ – ಸಂತೋಷ್, ರಮಾನಂದ, ಮುನ್ನ, ರಾಜೇಶ್.

Scroll to Top