Author name: editor

ಪ್ರಾದೇಶಿಕ ವಾರ್ತೆಗಳು

ಫೆ.11-15: ಉರ್ವ ಮಾರಿಯಮ್ಮನ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ, ಫೆ.26-ಮಾ.2: ವರ್ಷಾವಧಿ ಉತ್ಸವ, ಮಲರಾಯ ನೇಮೋತ್ಸವ

ಮಂಗಳೂರು: “ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಕೂಡಾ ಪ್ರಾಮುಖ್ಯತೆ ಪಡೆದಿರುತ್ತದೆ. ದ.ಕ. ಜಿಲ್ಲೆ ಮಾತ್ರವಲ್ಲದೇ ನಾಡಿನ ಸಮಸ್ತ ವರ್ಗದ ಭಕ್ತಾಭಿಮಾನಿಗಳು ಉರ್ವ ಶ್ರೀ ಮಾರಿಯಮ್ಮ ದೇವಿಯ ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಮತ್ತು ನಂಬಿಕೆಯನ್ನಿಟ್ಟು, ಶ್ರದ್ಧೆಯಿಂದ ಆರಾಧಿಸಿಕೊಂಡು ಬಂದಿದ್ದಾರೆ. ಇಂತಹ ದಿವ್ಯ ಮಾತೆಯ ಕ್ಷೇತ್ರದಲ್ಲಿ ಫೆ.11ರಿಂದ 15ರವರೆಗೆ ಬ್ರಹ್ಮಕಲಶೋತ್ಸವವು ನಡೆಯಲಿದ್ದು ಈ ಸಂದರ್ಭದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪ್ರಚಾರ ರಥದ ಸಂಚಾರ, ಹೊರೆಕಾಣಿಕೆ ಮೆರವಣಿಗೆ, ಬೃಹತ್ ನೂತನ ಸಭಾಂಗಣ ಉದ್ಘಾಟನೆ ನಡೆಯಲಿದೆ” ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ನಾಡೋಜ ಜಿ. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಫೆ.26ರಿಂದ ಕ್ಷೇತ್ರದಲ್ಲಿ ವರ್ಷಾವಧಿ ಮಹಾಪೂಜೆ, ಮಾರ್ಚ್ 2ರಂದು ಶ್ರೀ ಲ್ ಮಲರಾಯ ಪರಿವಾರ ದೈವಗಳ ನೇಮೋತ್ಸವ, ಧಾರ್ಮಿಕ ಸಭಾ ಕಲಾಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಮೂಹಿಕ ಅನ್ನಸಂತರ್ಪಣೆ ಕೂಡಾ ನೆರವೇರಲಿದೆ. ಈಗಾಗಲೇ ಪ್ರಚಾರ ರಥವು ಸಂಚಾರ ಆರಂಭಿಸಿದೆ” ಎಂದರು. “ಬ್ರಹ್ಮಕಲಶೋತ್ಸವ ಸಲುವಾಗಿ ಹೊರೆಕಾಣಿಕೆ ಮೆರವಣಿಗೆಯು ಫೆ.9ರಂದು ಅಪರಾಹ್ನ ಗಂಟೆ 3ಕ್ಕೆ ನಗರದ ಕೇಂದ್ರ ಮೈದಾನ ಹಾಗೂ ಕೂಳೂರು ಸಮೀಪದ ಗೋಲ್ಡ್ ಪಿಂಚ್ ಮೈದಾನದಿಂದ ಏಕಕಾಲದಲ್ಲಿ ಹೊರಡಲಿದ್ದು ಎರಡೂ ಕಡೆಯ ಹೊರೆಕಾಣಿಕೆ ಮೆರವಣಿಗೆಯು ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಒಟ್ಟು ಸೇರಿ ಕ್ಷೇತ್ರಕ್ಕೆ ಆಗಮಿಸಲಿದೆ. ಫೆ.11ರಿಂದ ಬ್ರಹ್ಮಕಲಶೋತ್ಸವದ ವೈದಿಕ ವಿಧಿ-ವಿಧಾನಗಳು ಆರಂಭವಾಗಲಿದ್ದು, ಫೆ.13ರಂದು ದೇವರ ಪುನರ್ ಪ್ರತಿಷ್ಠೆ ನೆರವೇರುತ್ತದೆ. ಫೆ.15ರಂದು ಬ್ರಹ್ಮಕಲಶೋತ್ಸವವು ಸಂಪನ್ನವಾಗಲಿದೆ. ಫೆ.16ರಂದು ವರ್ಷಾವಧಿ ಮಹಾಪೂಜೆಗೆ ಪ್ರಸಾದ ಹಾರಿಸುವಿಕೆ, ಫೆ.23ರಂದು ಚಂಡಿಕಾಯಾಗ, ಫೆ.26 ಹಾಗೂ 27ರಂದು ವರ್ಷಾವಧಿ ಮಹಾಪೂಜೆ ನಡೆಯುತ್ತದೆ. ಮಾ.2ರಂದು ಕ್ಷೇತ್ರದ ಶ್ರೀ ಮಲರಾಯ ಪರಿವಾರ ದೈವಗಳ ನೇಮೋತ್ಸವ ನಡೆಯುವುದರೊಂದಿಗೆ ವರ್ಷಾವಧಿ ಉತ್ಸವ ಮುಕ್ತಾಯವಾಗಲಿದೆ. ಕ್ಷೇತ್ರದ ಮುಂಭಾಗದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ನೂತನ ಬೃಹತ್ ಸಭಾಂಗಣದ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು ಫೆ.3ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ವೇದಿಕೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ಗೌರವ ಸಲಹೆಗಾರ ಜಯ ಸಿ. ಕೋಟ್ಯಾನ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಕರ್ಕೇರ, ಪ್ರಧಾನ ಸಂಚಾಲಕ ಗೌತಮ್ ಸಾಲ್ಯಾನ್ ಕೋಡಿಕಲ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಬಂಗೇರ ಬೋಳೂರು, ಉಪಾಧ್ಯಕ್ಷ ಕುಮಾರ್ ಮೆಂಡನ್ ಬೈಕಂಪಾಡಿ, ಕೋಶಾಧಿಕಾರಿ ವಸಂತ ಅಮೀನ್ ಬೈಕಂಪಾಡಿ, ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಲೋಕೇಶ್ ಸುವರ್ಣ, ಆಡಳಿತ ಮೊಕ್ತೇಸರ ಲಕ್ಷ್ಮಣ ಅಮೀನ್ ಕೋಡಿಕಲ್, ಪ್ರಚಾರ ಸಮಿತಿಯ ಯಶವಂತ ಬೋಳೂರು, ಪ್ರಧಾನ ಅರ್ಚಕ ಶಿವಾನಂದ ಕನ್ನಡ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ವಾರ್ತೆಗಳು

ಪತ್ರಿಕಾ ಪ್ರಕಟಣೆಜೆ: ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ (ಗೇಲ್-ಇಂಡಿಯಾ) ನಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ: ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ

ಇಂದು ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದ್ದರು.

ಕರಾವಳಿ ಸುದ್ದಿ, ಕರ್ನಾಟಕ ವಾರ್ತೆಗಳು

ದುರ್ಗಾಪರಮೇಶ್ವರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ವ್ಯವಸ್ಥಾಪಕ ಎಂ.ಬಿ ಉಮೇಶ್‌ ಶೆಟ್ಟಿ ಇವರಿಗೆ 2024ರ ಸಾಧಕ ಪ್ರಶಸ್ತಿ

ದುರ್ಗಾ ಪರಮೇಶ್ವರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಭಯ ಸೇವಾ ಫೌಂಡೇಶನ್ ಅಧ್ಯಕ್ಷರಾದ ಎಂ.ಬಿ ಉಮೇಶ್ ಶೆಟ್ಟಿ ಮಂದಾರ್ತಿ ಇವರಿಗೆ ಏಶಿಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಪತ್ರಿಕೆ ಇವರ ಸಮಾಜಸೇವೆ ಗುರುತಿಸಿ 2024ರ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಶ್ರೀಯುತರು ಸಾಮಾಜಿಕ ಸೇವೆಯ ನೂತನ ಕ್ರಾಂತಿ ಮಾಡುವ ಮೂಲಕ ಹಲವಾರು ಬಡ ಜನತೆಯ ಕುಟುಂಬಕ್ಕೆ ಬೆಳಕಾಗಿ ಸಮಾಜದಲ್ಲಿ ತಮ್ಮ ಸಾಮಾಜಿಕ ಕಾರ್ಯದಲ್ಲಿ ಗುರುತಿಸಿಕೊಂಡವರು. ಈ ಪ್ರಶಸ್ತಿ ಇವರ ಅಭಿಮಾನಿಗಳಿಗೆ ಅತೀವ ಸಂತಸ ತಂದಿದೆ.

Scroll to Top