Author name: editor

ಪ್ರಾದೇಶಿಕ ವಾರ್ತೆಗಳು

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ-ಮಮತಾ ಗಟ್ಟಿ. *ಮಹಿಳಾ ಉದ್ಯಮಿಗಳಿಂದ ವಸ್ತು ಪ್ರದರ್ಶನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು,ಮಾ.26;ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ,ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.ಅವರು ಮಹಿಳಾ ದಿನಾಚರಣೆಯ ಅಂಗವಾಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಛೇರಿ ಸಭಾಂಗಣ ಗುರುವಾರ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತುಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರುಇದರ ಸಂಯುಕ್ತ ಆಶ್ರಯ ದಲ್ಲಿಮಹಿಳಾ ದಿನಾಚರಣೆ ಮತ್ತುಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ, ಮಹಿಳಾ ಸಾಧಕರಿಯರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು.ಮಹಿಳೆ ಕುಟುಂಬದಲ್ಲಿ ವಿವಿಧ ರೀತಿಯಲ್ಲಿ ಕುಟುಂಬದ ಸಮಾಜದ ಶಕ್ತಿಯಾಗಿದ್ದಾರೆ. ಸರಕಾರದ ಗ್ಯಾರಂಟಿ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತಿದೆ ಇದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಯಾಗುತ್ತದೆ ಎಂದರು.ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಪೊಲೀಸ್ ಸಹಾಯಕ ಆಯಕ್ತೆ ನಜ್ಮಾ ಫಾರೂಕಿ ಮಾತನಾಡುತ್ತಾ ತೊಟ್ಟಿಲು ತೂಗುವ ಕೈ ಜಗತ್ತು ಆಳುತ್ತವೆ ಎನ್ನುವ ಮಾತಿನಂತೆ ಮಹಿಳೆಯರು ದೇಶದಲ್ಲಿ ಸಾಧನೆ ಮಾಡಿದ್ದಾರೆ.ಆದರೆ ಇನ್ನೂ ಸಾಕಷ್ಟು ಹಿಂದುಳಿದ ಪ್ರದೇಶದಲ್ಲಿ ಮಹಿಳೆಯರು ಸ್ಥಾನ ಮಾನ ಪಡೆಯಲು ಕಷ್ಟ ಪಡುತ್ತಿದ್ದಾರೆ.ಈ ಪರಿಸ್ಥಿತಿ ಬದಲಾಗ ಬೇಕಾ ಗಿದೆ. ಪೊಲೀಸ್ ಇಲಾಖೆ ಮಹಿಳೆಯರ ರಕ್ಷಣೆಗೆ ಗುಲಾಬಿ ಹೊಯ್ಸಳ ಪೊಲೀಸ್ ತಂಡ ಇದೆ.ಮಹಿಳಾ ಸುರಕ್ಷತೆ ಪೊಲೀಸರ ಜೊತೆ ಸಾಮೂಹಿಕ ಜವಾಬ್ದಾರಿ ವಹಿಸಬೇಕಾಗಿದೆ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಜಯಲಕ್ಷ್ಮಿ ರಾಯಕೋಡ್ ಮಾತನಾಡುತ್ತಾ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ನಡೆಯುತ್ತಿದೆ.ಮಹಿಳಾ ಸಶಕ್ತತೆಗೆ ಪುರುಷ -ಮಹಿಳೆ ಪರಸ್ಪರ ಸಮಾನವಾಗಿ ,ಪೂರಕವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.ಸಮಾರಂಭದಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ,ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ(ರಿ)ದ ಅಧ್ಯಕ್ಷೆ ಶಕುಂತಳ ಸಹಾಯಕ ಪೊಲೀಸ್ ಆಯುಕ್ತರಾದ ( ಸಂಚಾರ ಉಪವಿಭಾಗ, ಮಂಗಳೂರು) ನಜ್ಮಾ ಫಾರೂಕಿ ಸಾಧಕರಿಗೆ ಸನ್ಮಾನ ಮಾಡಿದ್ದಾರೆ.ಅತಿಥಿಗಳಾಗಿ ರೊ. ಪ್ರೊ. ಡಾ| ಚಿನ್ನಗಿರಿ ಗೌಡ,( ಅಸಿಸ್ಟೆಂಟ್ ಗವರ್ನರ್ ವಲಯ-2 ರೋಟರಿ ಜಿಲ್ಲೆ 3181)ರಜನಿ ಭಟ್, (ಅಸಿಸ್ಟೆಂಟ್ ಗವರ್ನರ್, ವಲಯ-3 ರೋಟರಿ ಜಿಲ್ಲೆ 3181)ಶ್ರೀಮತಿ ಚಂದ್ರಿಕಾ ಎಸ್. ನಾಯಕ್, (ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಅಭಿವೃದ್ಧಿ ನಿಗಮ,)ಸತೀಶ್ ಮೊಬೆನ್, (ಜಿಲ್ಲಾ ಸಂಪನ್ಮೂಲ ವ್ಯಕ್ತಿ, ಪಿ.ಎಂ.ಎಫ್.ಎ.ಇ. ಯೋಜನೆ, ದ.ಕ. ಜಿಲ್ಲೆ, ಮಂಗಳೂರು )ಪುಷ್ಪರಾಜ್ ಬಿ.ಎನ್.(ಅಧ್ಯಕ್ಷರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ))ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.ಸಮಾರಂಭದಲ್ಲಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಘಟಕದ ಅಧ್ಯಕ್ಷ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು.ಭಾಗವಹಿಸಲಿದ್ದಾರೆ.ಮಾಜಿ ರೋಟರಿ ಅಸಿಸ್ಟೆಂಟ್ ಗವರ್ನರ್ ರಾಜಗೋಪಾಲ ರೈ,ಮಾಜಿ ಅಧ್ಯಕ್ಷ ಸಂತೋಷ್ ಶೇಟ್,ರಾಜೇಶ್ ಶೆಟ್ಟಿ, ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ರೋಟರಿ ಪದಾಧಿಕಾರಿಗಳಾದ ಜಾಕ್ಸನ್ ಸಲ್ದಾನ,ಶೆಲ್ಡನ್ ಕ್ರಾಸ್ತಾ,ಡೆರಿಲ್ ಡಿ ಸೋಜ,ಪ್ರಮೀಳ ಶೆಟ್ಟಿ ಉಪಸ್ಥಿತರಿದ್ದರು.ಸಮಾರಂಭದಲ್ಲಿ ಮಹಿಳಾ ಸಾಧಕರಾದ ಜ್ಯೋತಿ ಕೆ. ಉಳೆಪ್ಪಾಡಿ, ದೇವಿಕಾ ಪುರುಷೋತ್ತಮ್, ಪೂರ್ಣಿಮಾ ರೈ, ಪ್ರಮೀಳಾ ರಾವ್,ಜಯಶ್ರೀ ರಟ್ಟಿಹಳ್ಳಿ, ವಿಭಾ ಎಸ್. ನಾಯಕ್,ಡಾ| ರಶ್ಮಿ ಕೆ.ಸುಜಾತ (ಅಂಗನವಾಡಿ ಶಿಕ್ಷಕಿ, ಅಶೋಕ್‌ನಗರ) ಶ್ರದ್ಧಾ ಕೇಶವ ರಾಮಕುಂಜ,ಪೊಟ್ಟಮ್ಮ ಮಂಗ ಳೂರು,ಲಕ್ಷ್ಮೀ ಗಾಣಿಗ,ದೀಕ್ಷಿತಾ ಟಿ.ಎಸ್ ಇವರನ್ನು ಸನ್ಮಾನಿಸ ಲಾಯಿತು.ಪ್ರಮೀಳಾ ಹೆಗ್ಡೆ ಮತ್ತು ಗೀತಾ ಬಿ ರೈ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪಾಲ್ದನೆ ಚರ್ಚ್: ಬೀಳ್ಕೊಡುಗೆ ಸಮಾರಂಭ

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಡಿಯಾಕೋನ್ ಆಗಿದ್ದ ರೋವಿನ್ ಲೋಪೆಜ್ ಅವರನ್ನು ಬೀಳ್ಕೊಡಲಾಯಿತು.ಕಳೆದ ಆರು ತಿಂಗಳುಗಳಿಂದ ಪಾಲ್ದನೆ ಚರ್ಚ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಚರ್ಚ್ ಧರ್ಮಗುರುಗಳಾದ ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರೊಂದಿಗೆ ಸಹಕರಿಸುತ್ತಿದ್ದು, ಮುಂದಿನ ತಿಂಗಳ 29 ರಂದು ಕಪುಚಿನ್ ಧರ್ಮಗುರುಗಳಾಗಿ ಗುರು ದೀಕ್ಷೆಯನ್ನು ಹೊನ್ನಾವರ ಚರ್ಚ್ ನಲ್ಲಿ ಸ್ವೀಕರಿಸಲಿದ್ದಾರೆ.ವಿದಾಯ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ . ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ ಶುಭ ಹಾರೈಸಿದರು.ಚರ್ಚ್ ನ ಜನರಿಂದ ದೊರೆತ ಸಹಕಾರದ ಬಗ್ಗೆ ಡಿಯಾಕೋನ್ ರೋವಿನ್ ಲೋಪೆಜ್ ಅವರು ಕೃತಜ್ಞತಾ ಭಾವನೆಯೊಂದಿಗೆ ಮಾತನಾಡಿದರು.ಈ ಸಂದರ್ಭದಲ್ಲಿ ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ರೋಶನ್ ಮೊಂತೇರೊ ಪುಷ್ಪಾರ್ಚನೆಗೈದರು. ಸರ್ವ ಆಯೋಗಗಳ ಸಂಚಾಲಕ ವಿಲಿಯಂ ಲೋಬೊ ಉಪಸ್ಥಿತರಿದ್ದರು.ಮಾಜಿ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾ.25 ರಂದು ಲಲಿತ ಮಂಟಪ ಕೃತಿ ಬಿಡುಗಡೆ

ಮಂಗಳೂರು: ಹಿರಿಯ ಲೇಖಕಿ, ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿಅವರು ಬರೆದ ಅಹರ್ನಿಶಿ ಪ್ರಕಾಶನ ಹೊರತಂದಿರುವ ‘ಲಲಿತ ಮಂಟಪ’ ಕೃತಿ ಬಿಡುಗಡೆ ಹಾಗೂ ಅದರ ವಿನೂತನ ರಂಗಪ್ರಯೋಗ ಕಾರ್ಯಕ್ರಮ ಮಾ.೨೫ರಂದು ಸಂಜೆ ೫ಕ್ಕೆ ನಗರದ ಹಂಪನಕಟ್ಟೆಯ ಸಪ್ನ ಬುಕ್ ಹೌಸ್‌ನಲ್ಲಿ ನಡೆಯಲಿದೆ.ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ನೂತನ ಕೃತಿ ಆಧರಿಸಿದ ವಿನೂತನ ರಂಗಪ್ರಯೋಗ ‘ಗೆಜ್ಜೆ ಬರೆದ ಅಕ್ಷರ’ ಪ್ರಸ್ತುತಿಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಎಸ್‌ಡಿಎಂ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಪದಗ್ರಹಣ

ಮಂಗಳೂರು : ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ 2026 –28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಹೈಕೋರ್ಟ್ ವಕೀಲ ಪಿ.ಪಿ.ಹೆಗ್ಡೆ ವಿದ್ಯಾರ್ಥಿ ವೇತನ ವಿತರಿಸಿದರು. ಸುಪ್ರೀಂ ಕೋರ್ಟ್ ವಕೀಲ ರೋಹಿತ್ ರಾವ್ ಪೂರ್ವ ವಿದ್ಯಾರ್ಥಿ ಸಂಘದ ಲಾಂಛನ ಅನಾವರಣಗೊಳಿಸಿದರು.ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಅಧ್ಯಕ್ಷತೆ ವಹಿಸಿದ್ದರು. ಎಂಎಲ್‌ಸಿ ಐವನ್ ಡಿಸೋಜಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಪೂರ್ವ ವಿದ್ಯಾರ್ಥಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಾ. ದೇವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಉಮೇಶ್ ಗಟ್ಟಿಜತೆ ಕಾರ್ಯದರ್ಶಿ ಜಯಶ್ರೀ ಹಟ್ಟಿಹಳ್ಳಿ ಸಂಚಾಲಕ ವಿನೋದ್ ಕುಮಾರ್, ಸಂಘದ ಸಂಯೋಜಕಿ ಡಾ.ಅನ್ನಪೂರ್ಣ ಶೇಟ್ ಉಪಸ್ಥಿತರಿದ್ದರು . ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್ ಸ್ವಾಗತಿಸಿ,ಸಂಚಾಲಕ ಅಶ್ವಿನ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಡಿವಿಜಿ ಆದರ್ಶದಲ್ಲಿ ಬೆಳೆದ ಪತ್ರಕರ್ತರ ಸಂಘ-ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಮಂಗಳೂರು: ಪ್ರಸಿದ್ಧ ಕವಿ ಡಿ.ವಿ.ಗುಂಡಪ್ಪ (ಡಿವಿಜಿ) ಅವರ ಮಂಕುತಿಮ್ಮನ ಕಗ್ಗದಲ್ಲಿ ಎಲ್ಲ ಧರ್ಮಗಳ ಸಾರ ಅಡಗಿದೆ. ಪತ್ರಕರ್ತರಾಗಿದ್ದ ಡಿವಿಜಿ ಅವರು 1932 ರಲ್ಲಿ ಸ್ಥಾಪಿಸಿದ ಮೈಸೂರು ರಾಜ್ಯ ಪತ್ರಕರ್ತರ ಸಂಘ ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಸಂಸ್ಥಾಪಕ ಡಿವಿಜಿ ಅವರ ಆದರ್ಶ ಹಾಗೂ ಚಿಂತನೆಗಳಲ್ಲಿ ಬೆಳೆದು ಬಂದಿರುವ ಪತ್ರಕರ್ತರ ಸಂಘ ಹಂತಹಂತವಾಗಿ ಬೆಳದು ಈಗ 1೦ ಸಾವಿರ ಸದಸ್ಯರನ್ನು ಒಳಗೊಂಡಿರುವ ದೇಶದ ಬೃಹತ್ ಸಂಘಟನೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ” ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಘಟಕಗಳ ಆಶ್ರಯಯದಲ್ಲಿ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಸಂಘದ ಉಪಾಧ್ಯಕ್ಷರಾದ ವಿಲ್ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಸುರೇಶ್. ಡಿ.ಪಳ್ಳಿ, ಸಿದ್ದಿಕ್ ನೀರಾಜೆ , ಸಮಿತಿ ಸದಸ್ಯರಾದ ದಿವಾಕರ ಪದ್ಮುಂಜ, ಭುವನೇಶ್ವರ.ಜಿ. ಹರೀಶ್ ಆದೂರು, ತಾಲೂಕು ಘಟಕಗಳ ಅಧ್ಯಕ್ಷರಾದ ತುಕಾರಾಮ, ನವೀನ್ ಸಾಲ್ಯಾನ್, ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್. ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ರಾಜೇಶ್. ಕೆ.ಪೂಜಾರಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರಿನ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು, ಡಿಸೆಂಬರ್ 18, 2025 – ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ ಉತ್ಕೃಷ್ಟ ಕೃತಿಗಳನ್ನು ಆಯ್ದು ಈ ಪುರಸ್ಕಾರ ನೀಡಲಾಗುತ್ತದೆ. ಕೊಂಕಣಿ ಭಾಷೆಯು 1992 ರಿಂದ ಅನುಸೂಚಿತ ಭಾಷೆಯಾಗಿದ್ದು, ಗೋವಾ, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗುಜರಾತ್ ಐದು ರಾಜ್ಯಗಳಲ್ಲಿ ಪ್ರಚಲಿತವಾಗಿರುವ ಕೊಂಕಣಿ ಭಾಷೆಗೆ 1975 ರಲ್ಲಿ ಸಾಹಿತ್ಯ ಅಕಾಡೆಮಿಯಿಂದ ಮಾನ್ಯತೆ ದೊರಕಿತ್ತು. 1977 ರಿಂದ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷೆಯ ಕೃತಿಗಳಿಗೂ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಹಿಂದೆ ಮಂಗಳೂರಿನ ಚಾ. ಫ್ರಾ. ದೆಕೊಸ್ತಾ (1992) ಮತ್ತು ಮೆಲ್ವಿನ್ ರೊಡ್ರಿಗಸ್(2011) – ಕವನ ಸಂಕಲನಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರೆ, 2016 ರಲ್ಲಿ ಎಡ್ವಿನ್ ಜೆ.ಎಫ್.ಡಿ. ಸೊಜಾ ಕಾದಂಬರಿಗಾಗಿ – ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು. ಎಚ್. ಎಂ. ಪೆರ್ನಾಲ್ ಅವರು ಈ ಪರಂಪರೆಯನ್ನು ಮುಂದುವರೆಸುತ್ತಿರುವ ಕರ್ನಾಟಕದ ನಾಲ್ಕನೇ ಕೊಂಕಣಿ ಸಾಹಿತಿಯಾಗಿದ್ದಾರೆ. ಪೆರ್ನಾಲ್ ಅವರ ಪ್ರಸ್ತುತ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ ಕೃತಿಯು ಸಾಹಿತ್ಯ ವಿಮರ್ಶೆ ವಿಭಾಗದಲ್ಲಿ ಪ್ರಶಸ್ತಿ ಪಡೆದ ಮೊದಲ ಕೊಂಕಣಿ ಕೃತಿ ಎಂಬ ಐತಿಹಾಸಿಕ ಮೈಲುಗಲ್ಲನ್ನು ಸೃಷ್ಟಿಸಿದೆ. ಈ ಕೃತಿಗೆ ಮೊದಲು 2021 ರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಮತ್ತು 2023 ರಲ್ಲಿ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ ಲಭಿಸಿತ್ತು. ಈ ಪುಸ್ತಕಕ್ಕೆ ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ್ ಮೌಜೋ ಅವರ ವಿಸ್ತೃತ ಮುನ್ನುಡಿ ಬರೆದಿದ್ದು, ಮಂಗಳೂರಿನ ಕವಿತಾ ಪಬ್ಲಿಕೇಷನ್ಸ್ ಈ ಪುಸ್ತಕವನ್ನು ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆಯ ಪೆರ್ನಾಲ್ ನಲ್ಲಿ ಹುಟ್ಟಿ, ಶಿರ್ವದ ಹಿಂದೂ ಜೂನಿಯರ್ ಕಾಲೇಜು ಮತ್ತು ಎಂ.ಎಸ್.ಆರ್.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ, ಮುಂಬಯಿಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಹೆನ್ರಿ ಮೆಂಡೋನ್ಸಾ ವೃತ್ತಿಯಲ್ಲಿ ಕಮರ್ಶಿಯಲ್ ಎಕಾಂವ್ಟೆಂಟ್. ಕನ್ನಡದಲ್ಲಿ – ತರಂಗ, ಸಂಕ್ರಮಣ,ಶೂದ್ರ ಮುಂತಾದ ಪತ್ರಿಕೆಗಳ ಮೂಲಕ ಬರವಣಿಗೆ ಆರಂಭಿಸಿದ ಅವರು 1980 ರ ದಶಕದ ಆರಂಭದಲ್ಲಿ ಯುವಕ್ ಮಾಸಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಕೊಂಕಣಿಗೆ ಪಾದಾರ್ಪಣೆ ಮಾಡಿ ಪ್ರಸ್ತುತ – ಕಥೆಗಾರ, ಕವಿ, ವಿಮರ್ಶಕ, ಸಂಪಾದಕ, ಪ್ರಕಾಶಕರಾಗಿ ತಮ್ಮದೇ ಛಾಪು ಮೂಡಿಸಿರುತ್ತಾರೆ. 2011 ರಲ್ಲಿ ಅವರು ಸ್ಥಾಪಿಸಿದ ಕಿಟಾಳ್ ಸಾಹಿತ್ಯಿಕ ಅಂತರ್ಜಾಲ ಪತ್ರಿಕೆ ಹಿರಿ – ಕಿರಿಯ ಲೇಖಕರನ್ನೊಳಗೊಂಡು ಸತತ ಹದಿನಾಲ್ಕನೇ ವರ್ಷದಲ್ಲಿ ನಿರಂತರವಾಗಿ ಪ್ರಕಟವಾಗುತ್ತಿದ್ದು, ಡಿಜಿಟಲ್ ಕೊಂಕಣಿ ಸಾಹಿತ್ಯ ನಿರ್ಮಿತಿಯಲ್ಲಿ ಮುಂಚೂಣಿಯಲ್ಲಿದೆ. 2013 ರಲ್ಲಿ ಪಾಕ್ಷಿಕವಾಗಿ ಆರಂಭಿಸಿದ ಆರ್ಸೊ ಸಾಹಿತ್ಯ ಪತ್ರಿಕೆ ಪ್ರಸ್ತುತ ಕವಿ ವಿಲ್ಸನ್ ಕಟೀಲ್ ಸಂಪಾದಕತ್ವದಲ್ಲಿ ಮಾಸಪತ್ರಿಕೆಯಾಗಿ ಹನ್ನೆರಡನೇ ವರ್ಷದಲ್ಲಿ ಪ್ರಕಟವಾಗುತ್ತಿದ್ದು, ಆರ್ಸೊ ವಾರ್ಷಿಕ ವಿಶೇಷಾಂಕಗಳಿಗೆ ಸಾಹಿತ್ಯ ವಿಶ್ವದಲ್ಲಿ ವಿಶೇಷ ಮಾನ್ಯತೆಯಿದೆ. ತಮ್ಮದೇ ಕಿಟಾಳ್ ಪ್ರಕಾಶನ ದ ಮೂಲಕ ಈ ವರೆಗೆ 15 ಕ್ಕೂ ಮಿಕ್ಕಿ ಮೌಲಿಕ ಸಾಹಿತ್ಯ ಕೃತಿಗಳನ್ನೂ ಪೆರ್ನಾಲ್ ಪ್ರಕಟಿಸಿದ್ದಾರೆ. ಈ ವರೆಗೆ ಪೆರ್ನಾಲ್ ಅವರ ನಾಲ್ಕು ಕವನ ಸಂಕಲನಗಳು — ಚಲ್ಯಾಂಕ್ ಚತ್ರಾಯ್ (1999), ಕಯ್ದ್ಯಾಚ್ಯೊ ಕವಿತಾ (2004), ಭಾಮುಣಾಂಚೆಂ ಚೆಡುಂ (2006) ಮತ್ತು ಜನೆಲ್ (2025), ಎರಡು ಕಥಾ ಸಂಕಲನಗಳು — ದೆವಾಕ್ ಸೊಡುಲ್ಲೊ ಪಾಡೊ(2002) ಮತ್ತು ಬೀಗ್ ಆನಿ ಬಿಗಾತ್ (2016) ಹಾಗೂ ಪ್ರಶಸ್ತಿ ವಿಜೇತ ಸಾಹಿತ್ಯ ವಿಮರ್ಶೆಯ ಕೃತಿ ಕೊಂಕಣಿ ಕಾವ್ಯೆಂ : ರುಪಾಂ ಆನಿ ರೂಪಕಾಂ (2021) ಪ್ರಕಟವಾಗಿವೆ. ಅವರ ಬೀಗ್ ಆನಿ ಬಿಗಾತ್‌ಕಥಾ ಸಂಕಲನಕ್ಕೆ ವಿಶ್ವ ಕೊಂಕಣಿ ಕೇಂದ್ರದ – ಖ್ಯಾತ ಉದ್ಯಮಿ ಟಿ. ವಿ. ಮೋಹನದಾಸ ಪೈ – ತಾಯಿಯ ಹೆಸರಿನಲ್ಲಿ ಕೊಡಮಾಡುವ ಶ್ರೀಮತಿ ವಿಮಲಾ ವಿ ಪೈ ಅತ್ಯುತ್ತಮ ಸಾಹಿತ್ಯ ಕೃತಿ ಪ್ರಶಸ್ತಿ (2017), ಕೊಂಕಣಿ ಕಾವ್ಯಕ್ಕೆ ನೀಡಿರುವ ಕೊಡುಗೆಗೆ , ಕವಿತಾ ಟ್ರಸ್ಟ್ ನೀಡುವ ಮಥಾಯಸ್ ಕುಟುಂಬ ದತ್ತಿ ಕಾವ್ಯ ಪ್ರಶಸ್ತಿ (2018), ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕೊಂಕಣಿ ಕಾವ್ಯೆಂ : ರುಪಾಂ ಆನಿ ರೂಪಕಾಂ ಪುಸ್ತಕಕ್ಕೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ (2021), ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕೊಂಕಣಿ ಸಾಹಿತ್ಯ ಗೌರವ ಪ್ರಶಸ್ತಿ (2022), ಕೊಂಕಣಿ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ (2023) ಮತ್ತು ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ ಪುಸ್ತಕಕ್ಕೆ ಗೋವಾ ಕೊಂಕಣಿ ಅಕಾಡೆಮಿಯಿಂದ ಉತ್ತಮ ಪುಸ್ತಕ ಪ್ರಶಸ್ತಿ (2023) ಲಭಿಸಿರುತ್ತದೆ. 850 ಕ್ಕೂ ಹೆಚ್ಚು ಕವಿತೆಗಳು, 100 + ಕಥೆಗಳು ಮತ್ತು 2,000 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಪೆರ್ನಾಲ್ ಅವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕೊಂಕಣಿ ಸಾಹಿತ್ಯವನ್ನು ಪೋಷಿಸುತ್ತಾ ಬಂದಿದ್ದು, 2012 ರಿಂದ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರತೀ ವರ್ಷ ಅಬುದಾಬಿಯ ಉದ್ಯಮಿ, ದಾನಿ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರವನ್ನು ನೀಡುತ್ತಾ ಬಂದಿರುತ್ತಾರೆ. ಈ ಪ್ರಶಸ್ತಿಯು ಸನ್ಮಾನ ಪತ್ರ ಮತ್ತು ರು. 25,000/- ನಗದನ್ನು ಒಳಗೊಂಡಿರುತ್ತದೆ. ಪ್ರಸ್ತುತ ಮೈಕಲ್ ಡಿಸೋಜಾ ವಿಷನ್ ಕೊಂಕಣಿ ಪುಸ್ತಕ ಅನುದಾನ ಯೋಜನೆಯ ಪ್ರಧಾನ ಸಂಪಾದಕರಾಗಿದ್ದು, ಕೊಂಕಣಿ ಲೇಖಕ / ಲೇಖಕಿಯರಿಗೆ ತಮ್ಮ ಕೃತಿಯ ಮುದ್ರಣಕ್ಕಾಗಿ ಪುಸ್ತಕವೊಂದಕ್ಕೆ ರು. 40,000/- ವರೆಗೆ ಅನುದಾನ ನೀಡಲಾಗುತ್ತಿದೆ. ₹ 40 ಲಕ್ಷ ವೆಚ್ಚದ ಈ ಯೋಜನೆಯ ಸಂಪೂರ್ಣ ಖರ್ಚನ್ನು ಅನಿವಾಸಿ ಉದ್ಯಮಿ ಮತ್ತು ಕೊಂಕಣಿ ಭಾಷಾಭಿಮಾನಿ, ಮಹಾದಾನಿ ಶ್ರೀ ಮೈಕಲ್ ಡಿಸೋಜಾ ಪ್ರಾಯೋಜಿಸಿದ್ದು – ವಿಶ್ವ ಕೊಂಕಣಿ ಕೇಂದ್ರದ ಉಸ್ತುವಾರಿಯಲ್ಲಿ 5 ವರ್ಷಗಳ ಅವಧಿಗೆ 100 ಪುಸ್ತಕ ಪ್ರಕಟಣೆಯ ಗುರಿಯನ್ನು ಈ ಯೋಜನೆ ಹೊಂದಿರುತ್ತದೆ. ಕೊಂಕಣಿ ಸಾಹಿತ್ಯ ಸಮುದಾಯದಲ್ಲಿ ಸಮರ್ಪಿತ ನಾಯಕರಾಗಿರುವ ಪೆರ್ನಾಲ್ ಅವರು 2023 ರಲ್ಲಿ ಮಂಗಳೂರಿನಲ್ಲಿ ನಡೆದ ಅಖಿಲ ಭಾರತ ರಜತ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅಖಿಲ ಭಾರತ ಕೊಂಕಣಿ ಪರಿಷತ್‌ನಲ್ಲಿ ಕೋಶಾಧಿಕಾರಿಯಾಗಿದ್ದಾರೆ. ಅವರು ಕೊಂಕಣಿ ಲೇಖಕರ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು ಪ್ರಸ್ತುತ ಸಾಹಿತ್ಯ ಅಕಾಡೆಮಿಯ ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯರಾಗಿದ್ದಾರೆ.

Scroll to Top