Author name: editor

ಪ್ರಾದೇಶಿಕ ವಾರ್ತೆಗಳು

54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ:

ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ “ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ” ಇವರ 17 ವರುಷಗಳ ಸೇವೆಯ ತನ್ನ ವಿವಿಧ ಕಾರ್ಯ ಯೋಜನೆಗಳ ಅನುಷ್ಟಾನಕ್ಕೆ ಸಹಾಯರ್ಥವಾಗಿ ಮಂಗಳೂರಿನ ಪ್ರಖ್ಯಾತ ಸಂಗೀತಗಾರ, ಯುವ ಪ್ರತಿಭೆಯಾಗಿರುವ ಕೆವಿನ್ ಮಿಸ್ಕಿತ್ ಇವರ 54ನೇ ಕೊಂಕಣಿ ಸಂಗೀತ ಸಂಜೆಯನ್ನು ಅಯೋಜಿಸಿದೆ.ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಸರಿಯಾಗಿ ಮಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನೆರವೇರಿಸಲಾಗುವುದು. ಈ ಪ್ರಯುಕ್ತ ಪ್ರಚಾರ ಘೊಷಣೆಯ ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಸ್ನೇಹಾಲಯ ಸಂಸ್ಥೆಯ ಮಂಗಳೂರಿನ ಪ್ರಧಾನ ಕಛೇರಿಯಲ್ಲಿ ನೆರವೇರಿಸಲಾಯಿತು. ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರು ಆಗಿರುವ ಜೋಸೆಫ್ ಕ್ರಾಸ್ತಾ ಪೊಸ್ಟರ್ ಬಿಡುಗಡೆ ಮಾಡಿ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಿದರು. ಸಭಾರಂಭದಲ್ಲಿ ಸ್ನೇಹಾಲಯದ ಹಲವು ಅಭಿಮಾನಿಗಳ ಉಪಸ್ಥಿಯಲ್ಲಿ ಶ್ರೀಯುತ ಶೆಲ್ಡಾನ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಒಲಿವಿಯಾ ಕ್ರಾಸ್ತಾ, ಸಂಗೀತಗಾರ ಕೆವಿನ್ ಮಿಸ್ಕಿತ್, ಸಲಹೆಗಾರರಾದ ಜಿಯೋ ಡಿ ಸಿಲ್ವ, ಅಗ್ರಾರ್, ಜಾಕ್ಸನ್ ಕಿನ್ನಿಗೋಳಿ ಹಾಗು ಇತರರು ಹಾಜರಿದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಧ್ರುವ ಯಕ್ಷಶಿಕ್ಷಣ. ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ. ಯಕ್ಷ ಶಿಕ್ಷಣ  ಫೌಂಡೇಶನ್ ನ ಅಭಿವೃದ್ದಾತ್ಮಕ ಯೋಜನೆ : ಪಟ್ಲ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್( ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಕರ್ತವ್ಯ ನಿರತ ಯಕ್ಷಗಾನ ಶಿಕ್ಷಕರ‌ ಸಮಾಲೋಚನಾ‌ ಸಭೆಯು ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸಭಾಂಗಣದಲ್ಲಿ  ನಡೆಯಿತು.ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನಿರ್ದೇಶಕರಾದ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿ ಯಕ್ಷಧ್ರುವ ಯಕ್ಷಶಿಕ್ಷಣವು ಪಟ್ಲ ಫೌಂಡೇಶನ್ ನ ಅಭಿವೃದ್ಧಾತ್ಮಕವಾದ ಯೋಜನೆಯಾಗಿದ್ದು ಭವಿತವ್ಯದ ಸುಸಂಸ್ಕೃತ ಪ್ರೇಕ್ಷಕರು ಮತ್ತು ಉತ್ತಮ ಕಲಾವಿದರನ್ನು ತಯಾರುಗೊಳಿಸುವ ನಿಭಾವಣೆಯನ್ನು ಹೊತ್ತ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಯಕ್ಷಗಾನ ಶಿಕ್ಷಕರು ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಫಲತೆಯನ್ನು ಸಾಧಿಸಬೇಕು ಎಂದರು. ಈ‌ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳರು ಕಳೆದ ಶೈಕ್ಷಣಿಕ ವರ್ಷದ ತರಗತಿಯ ಅವಲೋಕನ ಮಾಡಿದರು. ಈ ವೇಳೆ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ನೀತಿಸಂಹಿತೆಯನ್ನು ಪ್ರಸ್ತಾಪಿಸಿ ಚರ್ಚಿಸಲಾಯಿತು.ಪ್ರಸಕ್ತ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ತರಗತಿ, ಯಕ್ಷಗಾನ ಶಿಕ್ಷಕರ ಕಾರ್ಯಗಾರ, ಶಾಲಾ ಸಮಿತಿಯ ಸಭೆ ಸಹಿತ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ಕಾರ್ಯದರ್ಶಿಗಳಾದ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ CA ಸುದೇಶ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಸಹಿತ ವಿವಿಧ ಪದಾಧಿಕಾರಿಗಳು, ಯಕ್ಷಗಾನ ಶಿಕ್ಷಕರು ಉಪಸ್ಥಿತರಿದ್ದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾ.21ರಂದು ಮಂಗಳೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ-ಡಾ.ಎಂ.ಮೋಹನ ಆಳ್ವ

ಮಂಗಳೂರು : ಆಳ್ವಾಸ್ ನುಡಿಸಿರಿ- ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.21ರಂದು ಸಾಯಂಕಾಲ 6ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ನಮ್ಮ ಸಾಂಸ್ಕೃತಿಕ, ಜನಪದ ಹಾಗೂ ಶಾಸ್ತ್ರೀಯ ಕಲೆಗಳನ್ನುಜನಮಾನಸಕ್ಕೆ ತಲುಪಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಸಲಾಗಿದ್ದು, ಅಪಾರ ಜನಮನ್ನಣೆ ಗಳಿಸಿದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 3 ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣದ ಜತೆಗೆ ನುಡಿಸಿರಿ, ವಿರಾಸತ್‌ನಂತಹ ಕಾರ್ಯಕ್ರಮಗಳ ಮೂಲಕ ನಮ್ಮ ನಾಡು,ನುಡಿ,ಕ್ರೀಡೆ ಹಾಗೂ ಕಲೆಗಳಪೋಷಣೆಗೆ ಶ್ರಮಿಸುತ್ತಿದೆ. ನಮ್ಮ ಶಾಸ್ತ್ರೀಯ, ಜನಪದ ಕಲೆಗಳು ಮರೆಯಾಗದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆಗೆ ಸಾಂಸ್ಕೃತಿಕ ಶಿಕ್ಷಣ ನೀಡುವುದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಉದ್ದೇಶವಾಗಿದೆ. ಮಂಗಳೂರಿನಲ್ಲಿ ನಡೆಯಲಿರುವ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಸಮಾನ ಮನಸ್ಕರು ಕೈಜೋಡಿಸಬೇಕು ಎಂದು ಡಾ.ಎಂ.ಮೋಹನ್ ಆಳ್ವ ವಿನಂತಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಮಾತನಾಡಿ ತಮ್ಮ ಹಿರಿಯರ ಆದರ್ಶದಲ್ಲಿ ನಡೆದು ಬಂದ ಡಾ.ಎಂ. ಮೋಹನ್ ಆಳ್ವರು ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಎಂದು ಮರೆತವರಲ್ಲ. ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಂಡು ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿರುವಡಾ.ಆಳ್ವ ಅವರು ಮೂಡುಬಿದಿರೆಯನ್ನು ಸಾಂಸ್ಕೃತಿಕ ಕೇಂದ್ರವಾಗಿಸಿ ಹೊಸ ಕ್ರಾಂತಿ ಮಾಡಿದ್ದಾರೆ ಎಂದರು.ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಪ್ರಮುಖರಾದ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ, ಪದ್ಮರಾಜ್ ಆರ್. ಪೂಜಾರಿ, ಡಾ.ಆಶಾ ಜ್ಯೋತಿ ರೈ, ಭಾಸ್ಕರ ರೈ ಕುಕ್ಕುವಳ್ಳಿ, ರತ್ನಾಕರ ಜೈನ್, ಲೀಲಾಕ್ಷ ಕರ್ಕೇರ, ಕದ್ರಿ ನವನೀತ ಶೆಟ್ಟಿ, ವಿದುಷಿ ರಾಜಶ್ರೀ ಉಳ್ಳಾಲ್, ಯುವಜನ ಕ್ರೀಡಾಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ರೈ ಕಲ್ಲಿಮಾರ್, ಖಜಾಂಚಿ ಶಶಿರಾಜ್ ರಾವ್ ಕಾವೂರು ಉಪಸ್ಥಿತರಿದ್ದರು. ಉಪನ್ಯಾಸಕ ಡಾ.ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಅಭಾಸಾಪ ದ.ಕ.ಜಿಲ್ಲಾ ಅದ್ಯಕ್ಷೆಯಾಗಿ ವೀಣಾ.ಟಿ.ಶೆಟ್ಟಿ ಆಯ್ಕೆ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ದ.ಕ.ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ವೀಣಾ. ಟಿ .ಶೆಟ್ಟಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿಯಾಗಿ ಲತೇಶ ಬಾಕ್ರಬೈಲ್ , ಜತೆ ಕಾರ್ಯದರ್ಶಿಗಳಾಗಿ ಗೀತಾ ಲಕ್ಷ್ಮೀಶ, ಶ್ರೀಲಕ್ಷ್ಮೀ ಮಠದಮೂಲೆ, ಕೋಶಾಧಿಕಾರಿಯಾಗಿ ರತ್ನಾವತಿ ಬೈಕಾಡಿ.ಮಾಧ್ಯಮ ಪ್ರಮುಖರಾಗಿ ಚಂದ್ರಶೇಖರ ಕುಳವರ್ಮ,ಮಹಿಳಾ ಪ್ರಕಾರ ಪ್ರಮುಖರಾಗಿ ಸುಮಂಗಲ ರತ್ನಾಕರ , ಮಕ್ಕಳ ಪ್ರಕಾರ ಪ್ರಮುಖರಾಗಿ ರಮೇಶ ಮಯ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಬಿ. ಹರೀಶ್ ರೈ , ಡಾ.ಸುರೇಶ ನೆಗಳಗುಳಿಪ್ರಕಾಶ ನಾರಾಯಣ ಚಾರ್ಮಾಡಿ , ರವೀಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಮಾಹೆಯ ಉಪ ಕುಲಪತಿಯಾಗಿ ಡಾ.ಶರತ್ ಕುಮಾರ್ ರಾವ್

ಮಣಿಪಾಲ-ಮಣಿಪಾಲ ಕೆಎಂಸಿ ಆಸ್ಪತ್ರೆಯ ಖ್ಯಾತ ಮತ್ತು ಯಶಸ್ವಿ ಮೂಳೆ ಶಸ್ತ್ರ ಚಿಕಿತ್ಸಕ, ಮೂಳೆ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಶರತ್ ಕುಮಾರ್ ರಾವ್ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಾಹೆಯ ಉಪ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಅವರಿಗೆ Mp mla’s news ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್ ಅವರು ಶುಭ ಹಾರೈಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸಾಲದ ಹೊರೆ ಹೆಚ್ಚಿಸಿದ ಬಜೆಟ್-ನಳಿನ್ ಕುಮಾರ್ ಕಟೀಲ್

ಮಂಗಳೂರು ‌: ಸಿದ್ದರಾಮಯ್ಯ ಅವರ ಈ ಹಿಂದಿನ‌ ಬಜೆಟ್‌ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾದ ಹಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ. ಅಬಕಾರಿ ಇಲಾಖೆ ಮೂಲಕ ಸರ್ಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ.ಸಾಲದಲ್ಲಿ ಮುಳುಗಿರುವ ಈ ಸರ್ಕಾರ ಬಜೆಟ್ ನ ಶೇ. 25ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ.ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್ ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್ ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಶಾದಾಯಕ ಬಜೆಟ್.-ನಳಿನ್ ಕುಮಾರ್ ಕಟೀಲುಮಾಜಿ ಸಂಸದರು, ದ.ಕ.

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಅಶೋಕ್ ಪೂಜಾರ್ ಆಯ್ಕೆ

ಮಂಗಳೂರು : ಕರ್ನಾಟಕ ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಮೂಲ್ಕಿಯ ಯುವ ಸಾಮಾಜಿಕ ನೇತಾರ ಅಶೋಕ್ ಎಚ್. ಪೂಜಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾದರ ಮಹಾಸಭಾದ ರಾಜ್ಯಾಧ್ಯಕ್ಷ ಡಾ. ಕೆ.ಹೆಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.ಕರ್ನಾಟಕ ಮಾದರ ಮಹಾಸಭೆಯು 2015ರಲ್ಲಿ ಮಾದಿಗ ಸಮುದಾಯದ ಸಬಲೀಕರಣ ಮತ್ತು ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಸ್ಥಾಪಿತವಾಗಿದೆ. ಮಾದಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ನೀವು ನಿಷ್ಠೆಯಿಂದ ಹಾಗೂ ತ್ಯಾಗಮನೋಭಾವದಿಂದ ಕೆಲಸ ಮಾಡುವ ಇಂಗಿತವನ್ನು ಅಶೋಕ್ ಪೂಜಾರ್ ಹೊಂದಿದ್ದಾರೆ.ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಕರಾವಳಿ ಆದಿಜಾಂಬವ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಅಶೋಕ್ ಪೂಜಾರ್ ಸಮುದಾಯವನ್ನು ಸಂಘಟಿಸುತಿದ್ದಾರೆ.

Scroll to Top