Author name: editor

ಪ್ರಾದೇಶಿಕ ವಾರ್ತೆಗಳು

ಜವಾಬ್ ಆಶ್ರಯದಲ್ಲಿ ಯಕ್ಷಗಾನ ತಾಳಮದ್ದಳೆ. ‘ತಾಳಮದ್ದಳೆಯಿಂದ ಸಂಸ್ಕಾರ’ : ರಘು ಎಲ್. ಶೆಟ್ಟಿ

ಮುಂಬಯಿ: ‘ಮುಂಬೈಯ ಹೋಟೆಲ್ ಉದ್ಯಮಿಗಳು ಒಟ್ಟು ಸೇರಿ ಜವಾಬ್ ಆಶ್ರಯದಲ್ಲಿ ಕಳೆದ ಎರಡು ದಶಕಗಳಿಂದ ಅಜೆಕಾರು ಕಲಾಭಿಮಾನಿ ಬಳಗದ ತಾಳಮದ್ದಳೆ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದ್ದಾರೆ. ಅದು ನಮ್ಮ ಅಭಿರುಚಿಗೆ ಪೂರಕವಾಗಿ ಎಲ್ಲರನ್ನೂ ಆಕರ್ಷಿಸುತ್ತಿರುವುದರಿಂದ ಪ್ರತಿ ಬಾರಿಯೂ ಒಳ್ಳೆಯ ಪ್ರೇಕ್ಷಕ ವರ್ಗವನ್ನು ಸೆಳೆಯುತ್ತಿದೆ. ಯಕ್ಷಗಾನ ತಾಳಮದ್ದಳೆ ಪ್ರಕಾರದಲ್ಲಿ ಪುರಾಣ ಜ್ಞಾನದೊಂದಿಗೆ ಜೀವನಕ್ಕೆ ಸಂಸ್ಕಾರ ನೀಡುವಂತಹ ಹಲವು ವಿಚಾರಗಳನ್ನು ತಿಳಿಯಲು ಸಾಧ್ಯವಾಗುತ್ತದೆ’ ಎಂದು ಜವಾಬ್ ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ರಘು ಎಲ್. ಶೆಟ್ಟಿ ಹೇಳಿದ್ದಾರೆ. ಮುಂಬೈ ಮಹಾನಗರದ ಹೋಟೆಲ್ ಉದ್ಯಮಿಗಳ ಬೃಹತ್ ಸಂಘಟನೆಯಾದ ಜವಾಬ್ ವತಿಯಿಂದ ಅಂಧೇರಿಯ ಹೋಟೆಲ್ ಪ್ಯಾಪಿಲೋನ್ ನಲ್ಲಿ ಆಗಸ್ಟ್ 11ರಂದು ಜರಗಿದ ಅಜೆಕಾರು ಕಲಾಭಿಮಾನಿ ಬಳಗದ 24ನೇ ಸರಣಿಯ ಮೂರನೇ ದಿನದ ತಾಳಮದ್ದಳೆ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಜವಾಬ್ ಅಧ್ಯಕ್ಷ ರಾಜೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಹಿರಿಯ ಯಕ್ಷಗಾನ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಅವರು ಮುಂಬೈ ಪ್ರೇಕ್ಷಕರ ಕಲಾಭಿಮಾನವನ್ನು ಪ್ರಶಂಸಿಸಿ ಶುಭಾಶಂಸನೆಗೈದರು. ಬಳಗದ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಕಲಾವಿದರನ್ನು ಪರಿಚಯಿಸಿ, ಅಜೆಕಾರು ಕಲಾಭಿಮಾನಿ ಬಳಗದ 24ನೇ ವರ್ಷದ ಸರಣಿ ತಾಳಮದ್ದಳೆಯ ವಿವರಗಳನ್ನು ಹಾಗೂ ಮುಂದಿನ ವರ್ಷ ಬೆಳ್ಳಿ ಹಬ್ಬ ಆಚರಿಸುವ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ರೂವಾರಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಮತ್ತು ತಂಡದ ಎಲ್ಲಾ ಕಲಾವಿದರನ್ನು ಜವಾಬ್ ವತಿಯಿಂದ ಗೌರವಿಸಲಾಯಿತು.‘ಗಾಂಡೀವ ನಿಂದನೆ – ಕರ್ಣಾವಸಾನೊ’ ತಾಳಮದ್ದಳೆ :ಉದ್ಘಾಟನೆ ಬಳಿಕ ಊರಿನ ಪ್ರಸಿದ್ಧ ಕಲಾವಿದರಿಂದ ‘ಗಾಂಡೀವ ನಿಂದನೆ (ಕನ್ನಡ) ಮತ್ತು ಕರ್ಣಾವಸಾನೊ (ತುಳು)’ ಪ್ರಸಂಗಗಳ ಯಕ್ಷಗಾನ ತಾಳಮದ್ದಳೆ ಜರಗಿತು. ಡಾ.ಎಂ. ಪ್ರಭಾಕರ ಜೋಶಿ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ , ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ದಿನೇಶ್ ಶೆಟ್ಟಿ ಕಾವಳಕಟ್ಟೆ ಮತ್ತು ಸದಾಶಿವ ಆಳ್ವ ತಲಪಾಡಿ ಅರ್ಥಧಾರಿಗಳಾಗಿದ್ದರು. ದೇವಿಪ್ರಸಾದ್ ಆಳ್ವ ತಲಪಾಡಿ ಅವರ ಭಾಗವತಿಕೆಗೆ ದೇಲಂತಮಜಲು ಸುಬ್ರಹ್ಮಣ್ಯ ಭಟ್ ಮತ್ತು ಪ್ರಶಾಂತ ಶೆಟ್ಟಿ ವಗೆನಾಡು ಹಿಮ್ಮೇಳದಲ್ಲಿ ಸಹಕರಿಸಿದರು

ಪ್ರಾದೇಶಿಕ ವಾರ್ತೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವಾರ್ಷಿಕ ಸಭೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವಾರ್ಷಿಕ ಸಭೆ ಬಿ.ಸಿ ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ವಲಯದ ಅಧ್ಯಕ್ಷರಾದ ಕಿಶೋರ್ ಎಸ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು, ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಜಿಲ್ಲಾ ಕೋಶಾಧಿಕಾರಿ ನವೀನ ರೈ , ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾದ ಆನಂದ್ ಏನ್, ಜಿಲ್ಲಾ ಸಂಚಾಲಕರಾದ ಕರುಣಾಕರ ಕಾಣಂಗಿ, ಎಸ್ ಕೆ ಪಿ ವಿವಿದ್ದುದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಹರೀಶ್ ರಾವ್, ವಲಯದ ಗೌರವಾಧ್ಯಕ್ಷರಾದ ಹರೀಶ್ ಕುಂದರ್, ವೇದಿಕೆಯಲ್ಲಿ ಉಪಸ್ಥಿತಿ ಇದ್ದರು,2023-2024ನೇ ಗತವರ್ಷದ ವರದಿಯನ್ನು ಮೋಹನ್ ಏಕದಂತ ವಾಚಿದರು, ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ವರದಿಯನ್ನು ವಾಚಿಸಿದರು, ಕೋಶಾಧಿಕಾರಿ ವರುಣ್ ಕಲ್ಲಡ್ಕ 24-25 ನೇ ಸಾಲಿನ ಲೆಕ್ಕ ಪತ್ರ ಮಂಡಿಸಿದರು. ವಲಯದ ಅಧ್ಯಕ್ಷರು ಕಿಶೋರ್ ಕುಮಾರ್ ಮಾತನಾಡಿ ವಲಯವು ರಜತ ಸಂಭ್ರಮವನ್ನು ಆಚರಿಸುತಿದ್ದು, ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಅಂಚೆ ಜೀವವಿಮೆಯನ್ನು ಮಾಡಿಸಿದ್ದು, ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ಸಂಘದ ಸದಸ್ಯತ್ವನ್ನು ನವೀಕರಿಸಿದ ಸದಸ್ಯರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಸಂಘದಿಂದ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಹೇಳಿದರು. ಯೋಗೀಶ್ ಮೊಗರ್ನಾಡು, ವಂದಿಸಿದರು, ರಾಜೇಂದ್ರ ಹಾಗೂ ರೋಷನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಸುನೀತಾ ಶೆಟ್ಟಿ ಚಿಕಿತ್ಸೆಗೆ ಡೈಜಿ ವರ್ಲ್ಡ್ ಮೂಲಕ ಧನಸಹಾಯ ಒದಗಿಸಿ ಕೊಟ್ಟ ವಾಲ್ಟರ್ ನಂದಳಿಕೆಯವರಿಗೆ ಧನ್ಯವಾದಗಳು

ಮಂಗಳೂರು – ಜೆಪ್ಪು ಕುಡ್ಪಾಡಿ ನಿವಾಸಿ ಸುನೀತಾ ಶೆಟ್ಟಿಯವರ ಚಿಕಿತ್ಸೆಗೆ ಡೈಜಿ ವರ್ಲ್ಡ್ ಮೀಡಿಯಾದ ಮೂಲಕ ಧನ ಸಹಾಯ ಒದಗಿಸಿ ಕೊಟ್ಟ ಡೈಜಿ ವರ್ಲ್ಡ್ ಮೀಡಿಯಾ ಪ್ರೈವೇಟ್ ಲಿ. ನ ಸ್ಥಾಪಕರು ಮತ್ತು ಆಡಳಿತ ನಿರ್ದೇಶಕರಾಗಿರುವ ವಾಲ್ಟರ್ ನಂದಳಿಕೆಯವರಿಗೆ Mp mlas ನ್ಯೂಸ್ ಧನ್ಯವಾದಗಳನ್ನು ಸಲ್ಲಿಸುತ್ತದೆ. ಸುನೀತಾ ಶೆಟ್ಟಿಯಂತೆ ಸಾವಿರಕ್ಕೂ ಮಿಕ್ಕಿ ಬಡರೋಗಿಗಳಿಗೆ ದೈಜಿ ವರ್ಲ್ಡ್ ಮೂಲಕ ವಾಲ್ಟರ್ ನಂದಳಿಕೆಯವರು ಆರ್ಥಿಕ ನೆರವು ಒದಗಿಸಿ ಕೊಟ್ಟಿದ್ದಾರೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬುವ ಸೌಹಾರ್ದ ವ್ಯಕ್ತಿತ್ವದ ವಾಲ್ಟರ್ ನಂದಳಿಕೆ ಅವರ ನಿಸ್ವಾರ್ಥ ಸಮಾಜ ಸೇವೆ ಇತರ ಪತ್ರಿಕೋದ್ಯಮಿಗಳಿಗೂ ಸ್ಫೂರ್ತಿಯಾಗಲಿ. ಇದೇ ಸಂದರ್ಭದಲ್ಲಿ ಡೈಜಿ ವರ್ಲ್ಡ್ ನ ಪೋಟೋಗ್ರಾಫರ್ ದಯಾನಂದ ಕುಕ್ಕಾಜೆಯವರಿಗೂ Mp mlas ನ್ಯೂಸ್ ಧನ್ಯವಾದಗಳನ್ನು ಸಲ್ಲಿಸುತ್ತದೆ

Scroll to Top