Author name: editor

ಪ್ರಾದೇಶಿಕ ವಾರ್ತೆಗಳು

ವಿದ್ಯಾರ್ಥಿಗಳ ಸೂಪ್ತ ಪ್ರತಿಭೆ ಗುರುತಿಸಲು ಪ್ರೋತ್ಸಾಹ ಅಗತ್ಯ: ಅರುಣಾಪ್ರಭಾ

ಮಂಗಳೂರು, ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆ ಇರುತ್ರದೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಸಿಕ್ಕಿದರೆ ಗುರುತಿಸಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಭಂದಕ ಅರುಣಾಪ್ರಭಾ ಹೇಳಿದರು.ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ವತಿಯಿಂದ ಗಾಂಧಿನಗರ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಚಿತ್ರಕಲಾ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಮಕ್ಕಳ ಪ್ರತಿಭೆ ಗುರುತಿಸಿ ಹೆತ್ತವರು ಹಾಗೂ ಶಿಕ್ಷಕರು ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಂಗಳ ರಿ ಸೊರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ದಿಲ್ ರಾಜ್ ಆಳ್ವ, ಅನಘ ಸುಝಕೀ ಆಡಳಿತ ನಿರ್ದೇಶಕ ಫಣಿ ಸಾಂಬಾಶಿವ ರಾವ್ ನಡೆಲ್ಲಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಸ್ಪರ್ಧೆ ತೀರ್ಪುಗಾರರಾದ ಗೀತಾ ಬಿ ರೈ,, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ರೆಡ್‌ಕ್ರಾಸ್‌ನಿಂದ ನಾಗರಿಕ ಸುರಕ್ಷಾ ತರಬೇತಿ. ರೆಡ್‌ಕ್ರಾಸ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ಆಶಯ

ಮಂಗಳೂರು: ಸಮಾಜಮುಖಿ ಸೇವೆಗೆ ಇಡೀ ವಿಶ್ವದಲ್ಲೇ ರೆಡ್‌ಕ್ರಾಸ್ ಸಂಸ್ಥೆ ಅತ್ಯುತ್ತಮ ವೇದಿಕೆಯಾಗಿದೆ. ನಾಗರಿಕರ ಸುರಕ್ಷತೆಗೆ ರೆಡ್‌ಕ್ರಾಸ್ ವಿಶೇಷ ಅದ್ಯತೆ ನೀಡಿದ್ದು ಮುಂದಿನ ದಿನಗಳಲ್ಲಿ ರೆಡ್‌ಕ್ರಾಸ್ ಮೂಲಕ ನಾಗರಿಕ ಸುರಕ್ಷಾ ತರಬೇತಿ ನೀಡಲು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ, ನಿವೃತ್ತ ಎಡಿಜಿಪಿ ಭಾಸ್ಕರ ರಾವ್ ಹೇಳಿದರು.ಸೋಮವಾರ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕ ರಾಜ್ಯದ ಅತ್ಯುತ್ತಮ ಘಟಕಗಳಲ್ಲಿ ಒಂದಾಗಿದ್ದು, ಭವ್ಯ ಕಟ್ಟಡ ಸಹಿತ ಉತ್ತಮ ಮೂಲಭೂತ ಸೌಲಭ್ಯ ಹೊಂದಿದೆ ಎಂದರು.ಉದ್ಘಾಟನೆಗೆ ಸಿದ್ದವಾಗಿರುವ ದ.ಕ.ಜಿಲ್ಲಾ ಘಟಕದ ಶತಮಾನೋತ್ಸವ ಕಟ್ಟಡವನ್ನು ವೀಕ್ಷಿಸಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಸಂಸ್ಥೆಯ ಕಾರ್ಯಚಟವಟಿಕೆಗಳ ವಿವರ ನಿಡಿದರು.ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ , ರೆಡ್‌ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಪುಷ್ಪರಾಜ್ ಜೈನ್, ಗುರುದತ್ ಕಾಮತ್, ಪಿ.ಬಿ.ಹರೀಶ್ ರೈ, ಸಿಬ್ಬಂದಿ ಮಲ್ಲಿಕಾ, ಅನಿತಾ, ಗಿರೀಶ್ ಕುಮಾರ್ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಬಂಟ್ವಾಳ ವ್ಯವಸಾಯ ಸಂಘದ ಅಕ್ಷಯ ಸೌಧ ಲೋಕಾರ್ಪಣೆ. ‘ಸಹಕಾರಿ ಸಂಘವು ಜನಸಾಮಾನ್ಯರ ಜೊತೆಗೆ ಉತ್ತಮ ಸಂಬಂಧವಿರಿಸಬೇಕು’-ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ ಜೂ.9: ಸಹಕಾರಿ ಸಂಘವು ಜನಸಾಮಾನ್ಯರ ಜೊತೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು. ಪ್ರತಿಯೊಬ್ಬರ ಸಹಕಾರ ಇಲ್ಲದೆ ಸಂಘ ಲಾಭದಾಯಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಬಂಟ್ವಾಳ ವ್ಯವಸಾಯ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆಯಾಗುತ್ತಿರುವುದು ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಅವರು ಬಿ.ಸಿ.ರೊಡಿನ ಕೈಕಂಬದಲ್ಲಿ ಬಂಟ್ವಾಳ ವ್ಯವಸಾಯ ಸಹಕಾರಿ ಸಂಘದ ನೂತನ ಕಟ್ಟಡ ಅಕ್ಷಯ ಸೌಧದ ಉದ್ಘಾಟನಾ ಸಮಾರಂಭದಲ್ಲಿ ದೀಪಪ್ರಜ್ವಲನೆ ಮಾಡಿ ಮಾತನಾಡಿದರು.ಕರ್ನಾಟಕ ರಾಜ್ಯಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಸಹಕಾರ ರತ್ನ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು, ಅಕ್ಷಯ ಸೌಧ ಜನರಿಗೆ ಅಕ್ಷಯವಾಗಲಿ ಕೃಷಿ ಸಾಲ ಶೂನ್ಯ ಬಡ್ಡಿಯಲ್ಲಿ ಸಿಗುವಂತಾಗಬೇಕು. ಸಹಕಾರಿ ಸಂಘಗಳು ರೈತರ ಸಂಸ್ಥೆಯಾಗಿದ್ದು ಲಾಭದಾಯಕವಾಗಿ ಕಾರ್ಯನಿರ್ವಹಿಸಿ ರೈತರಿಗಾಗಿ ನಿರಂತರ ಸೇವೆಯನ್ನು ಮಾಡಬೇಕು ಎಂದರು.ಮಾಜಿ ಸಚಿವ ನಾಗರಾಜ ಶೆಟ್ಟಿ ಜಿ.ಆನಂದ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿ ರೈತರಿಗೆ ಮತ್ತು ಬಡವರಿಗೆ ಸಹಕಾರ ನೀಡುವುದರ ಜೊತೆಗೆ ಮಹಿಳೆಯರಿಗೂ ಉತ್ತಮ ಸೇವೆ ಸಹಕಾರಿ ಸಂಘದಿಂದ ಸಿಗುವಂತಾಗಲಿ ಎಂದು ಶುಭಹಾರೈಸಿದರು.ಗಣಕೀಕರಣವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಪುರಸಭೆ ಅಧ್ಯಕ್ಷ ಟಿ.ವಾಸು ಪೂಜಾರಿ, ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜ, ಬಂಟ್ವಾಳ ಪುರಸಭೆ ಸದಸ್ಯ ಎ.ಗೋವಿಂದ ಪ್ರಭು, ಸದಸ್ಯೆ ಜಯಂತಿ ವಿ. ಬಂಗೇರ ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಎಮ್. ಕರುಣೇಂದ್ರ ಪೂಜಾರಿ ಕೊಂಬರಬೈಲು ಮಾತನಾಡಿ ಎಲ್ಲಾ ನಿರ್ದೇಶಕರ ಹಾಗೂ ಸದಸ್ಯರ ಸಹಕಾರದಿಂದ ಉತ್ತಮವಾದ ಅಕ್ಷಯ ಸೌಧ ಕಟ್ಟಡ ನಿರ್ಮಾಣವಾಗಿದೆ ಎಂದು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಆದಿರಾಜ ಕೆ. ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಕಾಮತ್ ವರದಿ ಮಂಡಿಸಿದರು.ಸನ್ಮಾನ :ಸಹಕಾರ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ , ಸಂಘದ ಮಾಜಿ ಅಧ್ಯಕ್ಷ ದಿ. ಜಿ ಆನಂದ ರವರ ಪತ್ನಿ ಶಾರದಾ ಜಿ.ಆನಂದ , ಮಾಜಿ ಅಧ್ಯಕ್ಷ ಪದ್ಮನಾಭ ದೇವಾಡಿಗ , ಸಹಕಾರ ರತ್ನ ರವೀಂದ್ರ ಕಂಬಳಿ, ಇಂಜಿನಿಯರ್ ಸುಧಾಕರ ಕೆ.ಟಿ., ಗುತ್ತಿಗೆದಾರರಾದ ಹರೀಶ್, ನವೀನ್ ರವರನ್ನು ಸನ್ಮಾನಿಸಲಾಯಿತು.ನಿರ್ದೇಶಕರಾದ ವಿಠಲ ಪೂಜಾರಿ , ಎ.ಲಕ್ಷಿö್ಮÃ ವಿ. ಪ್ರಭು , ಹರೀಶ್, ಬಿ. ಜಯ ಕುಂದರ್ ,ಮುರಳೀಧರ ಭಟ್ , ಚಂದ್ರಶೇಖರ ಭಂಡಾರಿ, ದಿವಾಕರ ಶೆಟ್ಟಿ , ಪದ್ಮನಾಭ ಗೌಡ , ಗಣೇಶ , ಜಯಂತಿ, ಬಂಟ್ವಾಳ ವಲಯ ಮೇಲ್ವಿಚಾರಕ ಕೀರ್ತಿ ರಾಜ್ ಹಾಗೂ ಶಾಖೆಯ ಸಿಬ್ಬಂದಿಗಳು ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ಜಿಲ್ಲಾಧ್ಯಕ್ಷರಾಗಿ ಲ| ಅನಿಲ್ ದಾಸ್ ಆಯ್ಕೆ

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ಜಿಲ್ಲಾಧ್ಯಕ್ಷರಾಗಿ ಲ| ಅನಿಲ್ ದಾಸ್ ರವರು ಆವಿರೋದವಾಗಿ ಆಯ್ಕೆಯಾಗಿದ್ದಾರೆ

ಪ್ರಾದೇಶಿಕ ವಾರ್ತೆಗಳು

MRPL ನ CSR ಉಪಕ್ರಮದಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ.

ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ಇಂದು ದಿ. 5-6-2025 ರಂದು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ MRPLಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ( CSR ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರಿರಿಕ್ ಹಾಗು ಮನಾಸಿಕ ಚಟುವಟಿಕೆಗಳಿಗೆ ಮೀಸಲಿಡಲಾಗುವುದು. .ಉದ್ಘಾಟನಾ ಸಮಾರಂಭವು ಬಹಳ ಅರ್ಥಪೂರ್ಣವಾಗಿತ್ತು ಮತ್ತು ಹೃದಯಸ್ಪರ್ಶಿ ಕಾರ್ಯಕ್ರಮವಾಗಿತ್ತು, ಹಲವಾರು ಗಣ್ಯ ಅತಿಥಿಗಳ ಉಪಸ್ಥಿತಿಯಿಂದ ಕಾರ್ಯಕ್ರಮದ ಮೆರುಗು ಅಲಂಕರಿಸಲ್ಪಟ್ಟಿತು. MRPL ನ CSR ವಿಭಾಗದ ಹಿರಿಯ ವ್ಯವಸ್ಥಾಪಕ ಶ್ರೀ ಕೆ. ನಾಗರಾಜ್ ರಾವ್ ಅವರು ಮುಖ್ಯ ಅತಿಥಿಯಾಗಿ ಹಾಜರಿದ್ದು MRPL-ONGC ಮಂಗಳೂರಿನ ಗ್ರೂಪ್ ಜನರಲ್ ಮ್ಯಾನೇಜರ್ ಶ್ರೀ ಕೃಷ್ಣ ಹೆಗ್ಡೆ ಮಿಯಾರ್ ಅವರ ಪರವಾಗಿ ರಿಬ್ಬನ್ ಕತ್ತರಿಸುವ ಮೂಲಕ ಹೊಸ ಸೌಲಭ್ಯವನ್ನು ಉದ್ಘಾಟಿಸಿದರು.ನೆರೆದ ಅತಿಥಿಗಳು ದೀಪ ಬೆಳಗಿಸ್ಸಿ, ಹಾಗೂ ವನಮಹೋತ್ಸವ ಸಾಂಕೇತಿಸಲು ಗಿಡನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇತರ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವವರು:*ಶ್ರೀ ಜಾನ್ ಬಿ. ಮೊಂತೆರೊ, ರಚನಾ ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ, ಮಂಗಳೂರು*ಪೂಜ್ಯಶ್ರೀ ರಾಜ ಬಲ್ಚಡ, ಅರಸು ಮಂಜಿಹ್ನಾರ್ ಕ್ಷೇತ್ರ, ಉದ್ಯಾವರ ಮಾಡ*ಸ್ನೇಹಾಲಯದ ಚಾಪ್ಲಿನ್ ರೆವರೆಂಡ್ ಫಾದರ್ ಸಿರಿಲ್ ಡಿ’ಸೋಜಾ*ಮಂಗಳೂರಿನ ಪ್ರೇರಣಾ ಭಾಷಣಕಾರರಾದ ಶ್ರೀ ರಫೀಕ್ ಮಾಸ್ಟರ್ಸ್ನೇಹಾಲಯದ ಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಬ್ರದರ್ ಜೋಸೆಫ್ ಕ್ರಾಸ್ತಾ ಅವರು ಅತಿಥಿಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು ಮತ್ತು ಸಂಸ್ಥೆಯ ಧ್ಯೇಯದ ಆಶಯ ವ್ಯಕ್ತ ಪಡಿಸಿದರು. ಸ್ನೇಹಾಲಯವನ್ನು ವ್ಯಸನದಿಂದ ಮುಕ್ತಿ ಬಯಸುವವರಿಗೆ ಒಂದು ಪವಿತ್ರ ಸ್ಥಳವನ್ನಾಗಿ ರೂಪಿಸಿದ ಸಮರ್ಪಣೆಯನ್ನು ಅವರ ಮಾತುಗಳು ಪ್ರತಿಧ್ವನಿಸಿದವು.ಕಾರ್ಯಕ್ರಮವನ್ನು ಸೊಗಸಾಗಿಶ್ರೀ ಜಿಯೋ ಡಿಸಿಲ್ವಾ ಅವರು ನೀರೂಪಿಸಿದರು. ಶ್ರೀಮತಿ ಒಲಿವಿಯಾ ಕ್ರಾಸ್ತಾ ಸ್ನೇಹಾಲಯದ ಕಾರ್ಯದರ್ಶಿಗಳು ಅತಿಥಿಗಳಿಗೆ, ವಿಶೇಷವಾಗಿ MRPL ಮಂಗಳೂರು ಇವರಿಗೆ ಮತ್ತು ಈ ಕನಸನ್ನು ನನಸಾಗಿಸಲು ಬೆಂಬಲ ನೀಡಿದ ಎಲ್ಲರಿಗೂ ಅಂತರಾಳದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಜೀವನ ಪರಿವರ್ತನೆಗೆ ಸ್ನೇಹಾಲಯದ ಅಚಲ ಬದ್ಧತೆಯನ್ನು ಅತಿಥಿ ಭಾಷಣಕಾರರು ಶ್ಲಾಘಿಸಿದರು, ಹೊಸ ಟೆರೇಸ್ ಜಾಗವು ಸೃಜನಶೀಲತೆ ಮತ್ತು ಅಭಿವ್ಯಕ್ತಿಯ ಮೂಲಕ ಗುಣಪಡಿಸುವಲ್ಲಿ ಹೇಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ಒತ್ತಿ ಹೇಳಿದರು. ಅವರ ಹೃತ್ಪೂರ್ವಕ ಸಂದೇಶಗಳು ಸಹಾನುಭೂತಿಯ ಸೇವೆ ಮತ್ತು ಜವಾಬ್ದಾರಿಯುತ ಕಾರ್ಪೊರೇಟ್ ಪೌರತ್ವವು ಇಲ್ಲಿ ಸ್ವರ್ಗವನ್ನು ರೂಪಿಸಬಹುದು ಎಂಬ ಪ್ರಭಾವದ ಸಂದೇಶ ವನ್ನು ಸಾರಿದವು.

ಪ್ರಾದೇಶಿಕ ವಾರ್ತೆಗಳು

Snehalaya Inaugurates Another facility: A CSR initiative of MRPL

Snehalaya, a home for psycho social rehabilitation, a beacon of compassion and love , had yet another day to mark in golden letters. On 5-6-2025 Snehalaya marked the inauguration of their newly constructed terrace roofing and flooring at its De-Addiction Cente. This facility is provided through the generous support of MRPL Mangalore under their CSR initiative. This facility will be utilised and dedicated space for expressive art therapy and various healing activities aimed at empowering individuals on their path to recovery. The inauguration ceremony was very meaningful and a touching event, graced by the presence of several distinguished guests. Mr. K. Nagaraj Rao, Senior Manager of the CSR Department at MRPL, had the honor of cutting the ceremonial ribbon, symbolizing the opening of a new chapter for the center on behalf of Shri Krishna Hegde Miyar, Group GM, HR MRPL-ONGC Mangalore in his absencia as chief guest.Other esteemed attendees included:*Mr. John B. Monteiro, President of Rachana Catholic Chamber of Commerce and Industry, Mangalore*Mr. Raja Balchada, Arasu Manjihnar Kshetra, Udyavara Mada*Rev. Fr. Cyril D’Souza, Chaplain of Snehalaya*Mr. Rafeeq Master, Motivational Speaker from Mangalore Br. Joseph Crasta, the founder and Executive Director of Snehalaya, warmly welcomed the guests and shared the heart and soul behind the organization’s mission. His words echoed the dedication that has shaped Snehalaya into a sanctuary for those seeking freedom from addiction.The event’s proceedings were seamlessly conducted by Mr. Geo Dsilva whose vibrant presence kept the gathering engaged and inspired.  and Mrs. Olivia Crasta joined in expressing profound gratitude to the guests especially to MRPL Mangalore and all those whose support made this dream a reality.The guest speakers praised Snehalaya’s unwavering commitment to transforming lives, emphasizing how the new terrace space would play a vital role in healing through creativity and expression. Their heartfelt messages served as powerful reminders of the ripple effect that compassionate service and responsible corporate citizenship can form a paradise here.

ಕರ್ನಾಟಕ ವಾರ್ತೆಗಳು

ಕಾಲ್ತುಳಿತ ಪ್ರಕರಣಕ್ಕೆ ನಿಜವಾದ ಕಾರಣೀಕರ್ತರು ಯಾರು? ಸಿದ್ಧರಾಮಯ್ಯರವರ ಕ್ರಮ ಎಷ್ಟು ಸರಿ?

ವಿಶೇಷ ವರದಿ: ಡಾ. ಅಶೋಕ್ ಶೆಟ್ಟಿ ಬಿ.ಎನ್.ಬೆಂಗಳೂರು: 11 ಮಂದಿ ಆರ್‌ಸಿಬಿ ಅಭಿಮಾನಿಗಳ ದುರಂತ ಸಾವಿಗೆ ಸಿದ್ಧರಾಮಯ್ಯನವರು ಐವರು ಪೊಲೀಸ್ ಅಧಿಕಾರಿಗಳ ಸಸ್ಪೆಂಡ್, ರಾಜ್ಯ ಗುಪ್ತಚರ ಇಲಾಖೆಯ ಎಡಿಜಿಪಿಯವರ ವರ್ಗಾವಣೆ, ಆರ್‌ಸಿಬಿ ಮಾರ್ಕೆಟಿಂಗ್ ಹೆಡ್, ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್ ಸೇರಿದಂತೆ ಐವರ ಮೇಲೆ ಎಫ್‌ಐಆರ್, ಕೆಎಸ್‌ಸಿಎ ಮೇಲೆ ಪ್ರಕರಣ ದಾಖಲು, ಸಿ.ಎಂ ಅವರ ಆಪ್ತ ಕಾರ್ಯದರ್ಶಿ ಗೋವಿಂದ ರಾಜು ಅವರನ್ನು ಆ ಸ್ಥಾನದಿಂದ ಕೆಳಗಿಳಿಸಿ ಕ್ರಮದ ಮೇಲೆ ಕ್ರಮವನ್ನು ಜರಗಿಸುತ್ತಾ ಹೋದರೂ ಎಲ್ಲೂ ಕೂಡಾ ಆರ್‌ಸಿಬಿ ಸಂಭ್ರಮಾಚರಣೆಯನ್ನು ಅವಸರವಸರದಿಂದ ತರಾತುರಿಯಲ್ಲಿ ನಡೆಸಿದ್ದು ಏಕೆ ಎಂಬ ಬಗ್ಗೆ ಇನ್ನೂ ಉತ್ತರ ಕೊಟ್ಟಿಲ್ಲ. ಮಾಜಿ ಡಿಜಿಪಿ ಶಂಕರ್ ಬಿದರಿಯವರು ಹೇಳುವಂತೆ, ಇಂಥದ್ದೊಂದು ಅದ್ಧೂರಿ ಕಾರ‍್ಯಕ್ರಮವನ್ನು ನಡೆಸಲು ಇದಕ್ಕೆ ಭದ್ರತೆ ಕೊಡಲು ಕನಿಷ್ಠ 2-3 ದಿನಗಳ ಕಾಲಾವಕಾಶವನ್ನಾದರೂ ಕೊಡಬೇಕಿತ್ತು. ಆದರೆ, ಮುಖ್ಯಮಂತ್ರಿಯವರು ಅದಕ್ಕಾವಕಾಶ ಕೊಡಲಿಲ್ಲ. ಪೊಲೀಸರ ಮೇಲೆ ಒತ್ತಡ ಹಾಕಿ ಕಾರ‍್ಯಕ್ರಮ ಈಗಲೇ ನಡೆಸಬೇಕೆಂದು ಆದೇಶಿಸಿದ್ದರು.ಅಷ್ಟೇ ಅಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ‍್ಯಕ್ರಮವನ್ನು ಹಮ್ಮಿಕೊಂಡಾಗ ಅದಕ್ಕೆ ಮೊದಲು ವಿಧಾನಸೌಧದ ಆವರಣದಲ್ಲಿ ಆರ್‌ಸಿಬಿಆಟಗಾರರ ಸನ್ಮಾನ, ವಿಜಯೋತ್ಸವ ಕಾರ‍್ಯಕ್ರಮ ಏರ್ಪಡಿಸಿದ್ದರು. ಇದರಿಂದ ಪೊಲೀಸರು ಎರಡೆರಡು ಕಡೆಗಳಲ್ಲಿ ಭದ್ರತೆ ಕೊಡಬೇಕಾದಅನಿವಾರ‍್ಯತೆಗೆ, ಸಂಕಟಕ್ಕೆ ಸಿಲುಕಿದರು. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಪೊಲೀಸರ ತಪ್ಪು ಹೇಗಾಗುತ್ತದೆ?ಎರಡೆರಡು ಕಡೆಗಳಲ್ಲಿ ಕಾರ‍್ಯಕ್ರಮ ನಡೆಸುವ ಅಗತ್ಯವೇನಿತ್ತು? ಸ್ವತಃ ಸಿದ್ಧರಾಮಯ್ಯನವರೇ ಹೇಳುವಂತೆ, ಈ ಕಾರ‍್ಯಕ್ರಮಕ್ಕೆ ತಾನು ಒಪ್ಪಿರಲಿಲ್ಲ.ಖಾಸಗಿ ಕಾರ‍್ಯಕ್ರಮ ಎಂದಿದ್ದೆ. ಆದರೆ, ತನ್ನ ಆಪ್ತ ಕಾರ‍್ಯದರ್ಶಿಯೇ ಮನವೊಲಿಸಿದರು. ಮೈಲೇಜ್ ಸಿಗುತ್ತದೆಂದಿದ್ದರು. ಅದಕ್ಕಾಗಿಯೇ ಈಗ ಗೋವಿಂದ ರಾಜು ಅವರನ್ನು ಆಪ್ತ ಕಾರ‍್ಯದರ್ಶಿ ಸ್ಥಾನದಿಂದ ವಜಾಗೊಳಿಸಿದ್ದು ಎಂದು ಸಿ.ಎಂ. ಅವರ ಸಮಜಾಯಿಷಿ ಹೇಳಿಕೆ.ಇನ್ನು ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆದ ವಿಜಯೋತ್ಸವದ ಬಗ್ಗೆ ಹೇಳುವುದಾದರೆ, ಮಧ್ಯಾಹ್ನ 1 ಗಂಟೆಗೆ ಜನ ಸ್ಟೇಡಿಯಂ ಹೊರಗಡೆಗುಂಪು ಸೇರಿದ್ದರು. ಆರ್‌ಸಿಬಿ ಮಾರ್ಕೇಟಿಂಗ್ ಹೆಡ್ ನಿಖಿಲ್ ಸೋಸಲೆ ಉಚಿತ ಪಾಸು ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿಪೋಸ್ಟ್ ಹಾಕಿರುವುದ್ದರಿಂದ ಎರಡೂವರೆ ಲಕ್ಷಕ್ಕೂ ಮಿಕ್ಕಿ ಆರ್‌ಸಿಬಿ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ಆದರೆ, ಸ್ಟೇಡಿಯಂ ಗೇಟ್ ತೆರೆದದ್ದು ಸಂಜೆ 4 ಗಂಟೆಗೆ. ಎಲ್ಲಾ ಗೇಟ್ ತೆಗೆದಿರಲಿಲ್ಲ. ಕೇವಲ ಎರಡು ಗೇಟ್‌ಗಳನ್ನು ಮಾತ್ರ ತೆರೆದಿದ್ದು ಇದರಿಂದ ಆರ್ ಸಿಬಿ ಅಭಿಮಾನಿಗಳು ಒಳಪ್ರವೇಶಿಸಿದಾಗ ಅಡ್ಡಲಾಗಿಟ್ಟಿದ್ದ ಬ್ಯಾರಿಕೇಡ್‌ಗಳು, ಮ್ಯಾನ್‌ಹೋಲ್ ಸ್ಲಬ್ ಕಟ್ ಆಗಿ ಜನ ಕೆಳಗೆ ಬಿದ್ದರು. ಆಗ ಉಸಿರಾಟದ ಸಮಸ್ಯೆ ಎದುರಾಯಿತು. ಕೆಳಗೆ ಬಿದ್ದವರ ಮೇಲೆ ಜನ ನಡೆದು ಹೋದದ್ದರಿಂದ 11 ಮಂದಿ ಸಾವನ್ನಪ್ಪಿ ,47 ಮಂದಿ ಗಾಯಗೊಂಡರು.ಬೇರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿಯಲ್ಲಿ 4, ಮಣಿಪಾಲ್ ಆಸ್ಪತ್ರೆಯಲ್ಲಿ ಒಬ್ಬರು ಹೀಗೇ 11 ಮಂದಿ ಮೃತಪಟ್ಟರು.ಜನರನ್ನು ನಿಯಂತ್ರಿಸಲಾಗದಾಗ ಪೊಲೀಸರು ಸಹಜವಾಗಿಯೇ ಲಾಠಿ ಚಾರ್ಜ್ ಮಾಡಿದ್ದರು. ಜನರು ದುರಂತ ಸಾವಿಗೀಡಾದರೂಆರ್‌ಸಿಬಿ ಸಂಭ್ರಮಾಚರಣೆಯನ್ನು ನಿಲ್ಲಿಸದೇ ಸಮಾರಂಭವನ್ನು ನಡೆಸಿದ್ದು ಸಂಘಟಕರ ಕಟುಕ, ಅಮಾನವೀಯ ನಿಲುವಿಗೆ ಸಾಕ್ಷಿಯಾಯಿತು.ನಿಜ ಹೇಳಬೇಕಾದರೆ, ಇಷ್ಟು ದೊಡ್ಡ ಕಾರ‍್ಯಕ್ರಮವನ್ನು ಯಾವುದೇ ಪೂರ್ವ ತಯಾರಿ, ಸಿದ್ಧತೆಯಿಲ್ಲದೆ ನಡೆಸಿದ್ದು ಅನಾಹುತಕ್ಕೆ, 11 ಮಂದಿ ಆರ್ ಸಿಬಿ ಅಭಿಮಾನಿಗಳ ದುರಂತ ಸಾವಿಗೆ ಕಾರಣವಾಯಿತು.ಈ ಅವಸರದ ಕಾರ‍್ಯಕ್ರಮದ ರೂವಾರಿ ಯಾರು? ಯಾಕೆ ಈ ಬಗ್ಗೆ ಸಿ.ಎಂ. ಮಾತಾಡುತ್ತಿಲ್ಲ? ಇಡೀ ಪ್ರಕರಣಕ್ಕೆ ಪೊಲೀಸ್ ವೈಫಲ್ಯವೇಕಾರಣವೆಂದು ಹೇಳಿ ಐವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ಮಾತ್ರಕ್ಕೆ ಜನ ಇದನ್ನು ನಂಬುತ್ತಾರಾ?40 ವರ್ಷಗಳ ರಾಜಕೀಯ ವೃತ್ತಿ ಬದುಕಿನಲ್ಲಿ ಜನಪರವಾಗಿಯೇ ಸಾಗಿದ್ದ ಸಿದ್ಧರಾಮಯ್ಯನವರು ಇಲ್ಲೇಕೇ ಎಡವಿದರು?ಕಾರ‍್ಯಕ್ರಮದ ಜವಾಬ್ದಾರಿ ವಹಿಸಿದ್ದವರ ಮೇಲೆ ಕ್ರಮ ಜರುಗಿಸಲಾಗಿದೆಂದ ಮಾತ್ರಕ್ಕೆ ಇದನ್ನು ಸಾರ್ವಜನಿಕರು ಒಪ್ಪುತ್ತಾರಾ? ಅಮಾನತಿಗೊಳಗಾದ ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ದಯಾನಂದ್ ಅವರು 1998ರಲ್ಲಿ ಪುತ್ತೂರು ಎಎಸ್ಪಿಯಾಗಿದ್ದರು. ತದನಂತರ, ದಕ್ಷಿಣ ಕನ್ನಡದ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದರು. ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದು ಖಡಕ್ ಆಡಳಿತ ನೀಡಿದ ಅವರಿಗೆ ಇನ್ನು ಒಂದೆರಡು ತಿಂಗಳಲ್ಲಿ ಡಿಜಿಪಿಯಾಗುವ ಅವಕಾಶವಿತ್ತು.ದಯಾನಂದ್‌ರವರ ಆಪ್ತರೊಬ್ಬರು ಕಾಂಗ್ರೆಸ್ ಹೈಮಾಂಡ್ ಸೋನಿಯಾ ಗಾಂಧಿಯವರ ಆತ್ಮೀಯರಾಗಿದ್ದು, ದಯಾನಂದ್ ಅವರು ಮನಸ್ಸು ಮಾಡಿದ್ದರೆ ಸಸ್ಪೆಂಡ್ ಆದೇಶವನ್ನು ತಕ್ಷಣ ರದ್ದುಗೊಳಿಸಬಹುದಿತ್ತು. ಆದರೆ, ಹಾಗೆ ಮಾಡಲಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ದಯಾನಂದ್ ಪರ ಅಭಿಯಾನ ನಡೆಯುತ್ತಿದೆ. ಇದರ ಮಧ್ಯೆ ಐಪಿಎಸ್ ಅಧಿಕಾರಿಗಳೆಲ್ಲರೂ ಒಟ್ಟು ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಾಸ್ಸು ಪಡೆಯಬೇಕೆಂದು ಒತ್ತಾಯಿಸುತ್ತಿದ್ದಾರೆ.ಅಧಿಕಾರಿಗಳೆಂದರೆ ಮೊದಲೇ ಸಿಎಂಗೆ ಅಲರ್ಜಿ ಎಂದು ಸಿದ್ಧರಾಮಯ್ಯನವರ ಮೇಲೆ ಈ ಹಿಂದೆಯೇ ಬಹಳಷ್ಟು ಟೀಕೆಗಳಿದ್ದವು. ಅದೀಗ ನಿಜವಾಗಿದೆ.ಸಿದ್ಧರಾಮಯ್ಯನವರು ಮಾಡಿದ್ದು ಎಷ್ಟು ಸರಿ ಎಂಬುವುದು ಚರ್ಚೆಗೆ ಗ್ರಾಸವಾಗಿದೆ.ಇನ್ನೊಂದೆಡೆ, ಇಪ್ಪತ್ತೈದು ಲಕ್ಷ ಕೊಟ್ಟ ಕೂಡಲೇ ಹೋದ ಜೀವ ವಾಪಸ್ ಬರುತ್ತದಾ.ನಾನು ಐವತ್ತು ಲಕ್ಷ ಕೊಡುತ್ತೇನೆ.ನನ್ನ ಮಗನನ್ನು ಜೀವಂತವಾಗಿ ವಾಪಸ್ ಕೊಡುತ್ತೀರಾ ಎಂದು ಮೃತ ಯುವಕನ ಪೋಷಕರೊಬ್ಬರು ಕೇಳುತ್ತಿದ್ದಾರೆ. ಎಲ್ಲದಕ್ಕೂ ಉತ್ತರಿಸಬೇಕಾದ ಹೊಣೆಗಾರಿಕೆ ಸಿಎಂ ಸಿದ್ದರಾಮಯ್ಯ ನವರ ಮೇಲಿದೆ.ಇದಕ್ಕೆ ಆರ್ ಸಿಬಿ ಅಭಿಮಾನಿಗಳ ಅಂಧಾಭಿಮಾನ ಕೂಡಾ ಕಾರಣವಾಗಿದೆ. ಆರ್ ಸಿಬಿ ಕ್ರಿಕೆಟ್ ತಂಡವನ್ನು ಐದು ವರ್ಷಗಳ ಮಟ್ಟಿಗೆ ಬ್ಯಾನ್ ಮಾಡಬೇಕೆಂಬ ಕೂಗು ಕೂಡಾ ಸಾರ್ವತ್ರಿಕವಾಗಿ ಕೇಳಿ ಬರುತ್ತಿದೆ.

ಪ್ರಾದೇಶಿಕ ವಾರ್ತೆಗಳು

ರೋಟರಾಕ್ಟ್ ಜಿಲ್ಲಾಮಟ್ಟದ ವಾರ್ಷಿಕ ರಸಪ್ರಶ್ನೆ ಸ್ಪರ್ಧಾಕೂಟ

ಮಂಗಳೂರು: ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಮತ್ತು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ.ರೋ. ಶಾಂತಾರಾಮ್ ವಾಮಂಜೂರು ಸ್ಮಾರಕ 19ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ನೇತೃತ್ವದಲ್ಲಿ ಶನಿವಾರ ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಜರುಗಿತು.ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯನ್ನು ಪ್ರತಿನಿಧಿಸಿದ ರೋ.ಸಾತ್ವಿಕ್ ಕೊಟೆಕಾರ್ ಮತ್ತು ರೋ.ಶಮನ್ ಜೋಡಿ ತಂಡ ಪ್ರಥಮ ಸ್ಥಾನ ಗಳಿಸಿತು. ರೋಟರಾಕ್ಟ್ ಕ್ಲಬ್ ವನಚೈತನ್ಯ, ಬೆಂಗಳೂರು ಸಂಸ್ಥೆಯನ್ನು ಪ್ರತಿನಿಧಿಸಿದ ರೋ. ಶ್ರೀಖರ್ ದ್ವಿತೀಯ ಸ್ಥಾನ ಪಡೆದರು.ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ದಿವಂಗತ ಸಹೋದರ ರೋ.ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ಧಾಕೂಟವನ್ನು ಆಯೋಜಿಸುವ ರೋಟರಾಕ್ಟ್ ಸಂಸ್ಥೆಯ ನಿಸ್ವಾರ್ಥ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ರೋಟರಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಪ್ರಶಸ್ತಿ ಪ್ರಮಾಣ ಪತ್ರ ಪ್ರದಾನ ಮಾಡಿ ಅವರ ಸಾಧನೆಯನ್ನು ಅಭಿನಂದಿಸಿದರು.ಅಂತಾರಾಷ್ಟ್ರೀಯ ರೋಟರಾಕ್ಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಗುಂಟೂರು ನಗರದ ರೋ.ರವಿ ವಡ್ಲಮಣಿಯವರು ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದರು.ರೋಟರಾಕ್ಟ್ ಜಿಲ್ಲಾ ಚುನಾಯಿತ ಪ್ರತಿನಿಧಿ ಮೈಸೂರು ನಗರ ಮೂಲದ ರೋ. ಪ್ರಜ್ವಲ್, ರೋಟರಾಕ್ಟ್ ದಕ್ಷಿಣ ಏಷ್ಯಾ ಸಂಸ್ಥೆಯ ಅಧ್ಯಕ್ಷ ಡೇರಿಲ್ ಡಿಸೋಜ, ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷ ರೋ.ಭಾಸ್ಕರ್ ರೈ, ವಾಣಿ ವಾಮಂಜೂರ್ ಉಪಸ್ಥಿತರಿದ್ದರು. ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷ ರೋ.ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ಮಟ್ಟದ 10 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿತ್ತು. ಈ ಸ್ಪರ್ಧಾಕೂಟವನ್ನು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ನಿರೂಪಿಸಿದರು. ಕಾರ್ಯದರ್ಶಿ ರೋ. ಅಕ್ಷಯ್ ರೈ ವಂದಿಸಿದರು.ರೋ. ದಿ. ಶಾಂತಾರಾಮ್ ವಾಮಂಜೂರ್‌ರವರು ಸಂಸ್ಥೆಯ ನಿಷ್ಠಾವಂತ ಸದಸ್ಯರಾಗಿದ್ದು, ನಿಸ್ವಾರ್ಥ ಸೇವಾ ಮನೋಭಾವ ಹೊಂದಿದ್ದು, 2006 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಕಸ್ಮಿಕ ವಾಹನ ರಸ್ತೆ ಅಪಘಾತದ ದುರಂತದಲ್ಲಿ ವಿಧಿವಶರಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ವಾರ್ಷಿಕ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವನ್ನು ಆಯೋಜಿಸಲಾಗುವುದು ಎಂದು ಡಾ.ದೇವದಾಸ್ ರೈಯವರು ಮಾಹಿತಿ ನೀಡಿದರು.

ಪ್ರಾದೇಶಿಕ ವಾರ್ತೆಗಳು

“ನಾನು ಪಟ್ಲರ ಮೇಳಕ್ಕೆ ಬೆಳ್ಳಿ ತೊಟ್ಟಿಲು ನೀಡಿದ ಬಳಿಕ ಬಹಳಷ್ಟು ಅಭಿವೃದ್ಧಿಯನ್ನು ಕಂಡೆ!” -ಡಾ.ಕೆ.ಪ್ರಕಾಶ್ ಶೆಟ್ಟಿ. ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಮಹಾಪೋಷಕ ಪ್ರಶಸ್ತಿ ಪ್ರದಾನ!

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಸತೀಶ್ ಪಟ್ಲರಿಗೆ ಅವರ ಕಂಠವೇ ದೇವರು, ಆದರೆ ಯಕ್ಷಗಾನ ಕಲಾವಿದರಿಗೆ ಸತೀಶ್ ಪಟ್ಲರೇ ದೇವರು. ಯಕ್ಷಗಾನ ಕಲಾವಿದರು ತಮ್ಮ ಕಷ್ಟವನ್ನು ಬದಿಗಿರಿಸಿ ಜನರಿಗೆ ಮನೋರಂಜನೆ ನೀಡುತ್ತಾರೆ ಎಂದಿಗೂ ಯಾರ ಮುಂದೆಯೂ ಕೈಚಾಚುವುದಿಲ್ಲ. ಅವರ ಸ್ವಾಭಿಮಾನದ ಬದುಕು ಹಾಗಿರುತ್ತದೆ, ಇಂತಹ ಕಲಾವಿದರಿಗೆ ನೆರವಾಗಲು ಯಕ್ಷಧ್ರುವ ಪಟ್ಲ ಟ್ರಸ್ಟ್ ಸ್ಥಾಪಿಸಿ ರಾತ್ರಿ ಹಗಲು ಕಲಾವಿದರ ನೋವಿಗೆ ಸ್ಪಂದಿಸಿದರು. ಅವರು ಪ್ರಾರಂಭದಲ್ಲಿ ನನ್ನ ಬಳಿ ತೊಟ್ಟಿಲು ಕೇಳಿದಾಗ ನಾನು ಹಿಂದೆ ಮುಂದೆ ಯೋಚಿಸದೆ ಬೆಳ್ಳಿ ತೊಟ್ಟಿಲು ನೀಡಿದೆ. ಆದರೆ ನಂತರ ನನ್ನ ಜೀವನದಲ್ಲಿ ವ್ಯವಹಾರದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡೆ. ನಾವೆಲ್ಲರೂ ಅವರು ಮಾಡುವ ಒಳ್ಳೆಯ ಕೆಲಸಕ್ಕೆ ಕೈಜೋಡಿಸೋಣ. ಅವರ ಸಮಾಜಮುಖಿ ಚಿಂತನೆ, ಕಾರ್ಯಗಳು ಹೀಗೆಯೇ ಮುಂದುವರಿಯಲಿ“ ಎಂದರು.2025ನೇ ಸಾಲಿನ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ-ಚಂದ್ರಿಕಾ ಹರೀಶ್ ಶೆಟ್ಟಿ ದಂಪತಿಗಳಿಗೆ ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಐಕಳ ಹರೀಶ್ ಶೆಟ್ಟಿ ಅವರು, “ಪಟ್ಲ ಸತೀಶ್ ಶೆಟ್ಟಿಯವರು ಕಟೀಲು ದುರ್ಗೆಯ ದೊಡ್ಡ ಭಕ್ತರು. ವರ್ಷದಲ್ಲಿ 6 ತಿಂಗಳು ಯಕ್ಷಗಾನ ಕಲಾವಿದರಾಗಿ ದುಡಿಯುವವರು ನಂತರದ 6 ತಿಂಗಳು ಜೀವನ ನಿರ್ವಹಣೆಗೆ ಕಷ್ಟ ಪಡುವುದನ್ನು ನೋಡುತ್ತೇವೆ. ಅಂತಹ ಕಲಾವಿದರಿಗೆ ನೆರವಾಗುವ ಉದ್ದೇಶದಿಂದ ಪಟ್ಲ ಫೌಂಡೇಶನ್ ಸ್ಥಾಪಿಸಿ ಸಾವಿರಾರು ಕಲಾವಿದರಿಗೆ ನೆರವು ನೀಡಿದ್ದಾರೆ. ನಾನು ಜೀವನ ಪೂರ್ತಿ ಈ ಸಂಘಟನೆಯ ಜೊತೆಯಲ್ಲಿ ಇರುತ್ತೇನೆ. ಸನ್ಮಾನ ಮಾಡುವುದಕ್ಕಿಂತ ಅದರ ಹಿಂದಿರುವ ಪ್ರೀತಿ ಮುಖ್ಯವಾದುದು. ಎಲ್ಲಾ ಧರ್ಮಗಳು ಕೂಡಾ ಸಹಬಾಳ್ವೆಯಿಂದ ತುಳುನಾಡಿನಲ್ಲಿ ಬದುಕುವಂತಾಗಲಿ. ಪಟ್ಲ ಒಂದು ಶಕ್ತಿ ಅದಕ್ಕೆ ಇನ್ನಷ್ಟು ಶಕ್ತಿ ತುಂಬಲು ಯುವಕರು ಮುಂದೆ ಬರಲಿ“ ಎಂದರು.ವೇದಿಕೆಯಲ್ಲಿ ವಕ್ವಾಡಿ ಪ್ರವೀಣ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ದುಬೈ ಘಟಕದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ತಲ್ಲೂರ್ ಶಿವರಾಮ ಶೆಟ್ಟಿ, ಬಿಬಿಎಂಪಿ ಅಪರ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಶಶಿಧರ್ ಶೆಟ್ಟಿ ಬರೋಡ, ಉದ್ಯಮಿ ವೇಣುಗೋಪಾಲ್ ಶೆಟ್ಟಿ ಥಾಣೆ, ಬೆಳ್ಳಾಡಿ ಅಶೋಕ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ರವೀಂದ್ರ ನಾಥ್ ಭಂಡಾರಿ, ಶಶಿಧರ್ ಶೆಟ್ಟಿ ಇನ್ನಂಜೆ, ಗಿರೀಶ್ ಶೆಟ್ಟಿ ತೆಳ್ಳಾರ್, ಉಳ್ತೂರು ಮೋಹನ್ ದಾಸ್ ಶೆಟ್ಟಿ, ಪೆರಾರ ಬಾಬಣ್ಣ, ಪುತ್ತಿಗೆ ಮಠ ಯುಎಸ್ ಎ ಅರ್ಚಕ ಕಿರಣ್ ರಾವ್, ಗಿರೀಶ್ ಎಂ ಶೆಟ್ಟಿ ಕಟೀಲ್, ಸುಧಾಕರ ಎಸ್ ಪೂಂಜ ಸುರತ್ಕಲ್, ದಯಾನಂದ ಶೆಟ್ಟಿ ಆಸ್ಟ್ರೇಲಿಯಾ, ಡಾ.ಆರ್.ಕೆ.ಶೆಟ್ಟಿ, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಕದ್ರಿ ನವನೀತ ಶೆಟ್ಟಿ, ಕದ್ರಿ ಪ್ರದೀಪ್ ಆಳ್ವ, ಬಾಳ ಜಗನ್ನಾಥ ಶೆಟ್ಟಿ, ರವಿಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸಿದರು.

Scroll to Top