Author name: editor

ಪ್ರಾದೇಶಿಕ ವಾರ್ತೆಗಳು

ಜೂ.5ರಂದು ಒಡಿಯೂರಿನಲ್ಲಿ ಗಿಡ ನೆಡುವ ಸ್ಪರ್ಧೆಗೆ ಚಾಲನೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಮಂಗಳೂರು ವಿಭಾಗ ಮಟ್ಟದ ಗಿಡ ನೆಡುವ ಸ್ಪರ್ಧೆಯನ್ನು ಜೂ.5 ರಂದು ಬೆಳಗ್ಗೆ 9.30ಕ್ಕೆ ಕನ್ಯಾನದ ಒಡಿಯೂರು ಶ್ರೀ ಗುರುದೇವ ಐಟಿಐ ಸಭಾಂಗಣದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೊ. ಕೆ.ಆರ್.ಕವಿತಾ ಅಧ್ಯಕ್ಷತೆ ವಹಿಸಲಿದ್ದಾರೆ.ಶಿಕ್ಷಕ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ ಕೆ ಆಶಯ ಭಾಷಣ ಮಾಡಲಿದ್ದಾರೆ.ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಮಂಗಳೂರು ವಿ.ವಿ.ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಶೇಷಪ್ಪ ಅಮೀನ್, ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ, ಪರಿಸರ ಪ್ರೇಮಿ ಮಾಧವ ಉಳ್ಳಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಪರಿಸರ ಸಂರಕ್ಷಣೆಯ ಕಾಳಜಿ ಮುಖ್ಯ-ಕೆ.ವಿ.ಪ್ರಭಾಕರ್

ಮಂಗಳೂರು, ಮೇ.30; ಜನ ಸಾಮಾನ್ಯರಲ್ಲಿ ಪರಿಸರ ಸಂರಕ್ಷಣೆಯ ಕಾಳಜಿ ಮೂಡಿಸುವುದು ಮುಖ್ಯ ಈ ನಿಟ್ಟಿನಲ್ಲಿ ಸಾಮೂಹಿಕ ಗಿಡ ನೆಡುವ ಕಾರ್ಯಕ್ರಮಗಳ ಅಗತ್ಯ ವಿದೆ ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.ಅವರು ನಗರದ ಇಂದಿರಾ ಪ್ರೀಯದರ್ಶಿನಿ ವನಿತಾ ಪಾರ್ಕ ನಲ್ಲಿಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಕೆಪಿಟಿ ಮಂಗಳೂ ರು, ಸಂತ ಅಲೋಶಿಯಸ್ ಐಟಿಐ ಹಾಗೂ ಗ್ಲೋಬಲ್ ಗ್ರೀನ್ ಫೌಂಡೇಶನ್ ಸಹಯೋಗ ದೊಂದಿಗೆ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು.ಈ ಸಂದ ರ್ಭದಲ್ಲಿ ರೋಟರಿ ಸೆಂಟ್ರಲ್ ಮಂಗಳೂರು ಘಟಕದ ಅಧ್ಯಕ್ಷ ಬ್ರಿಯಾನ್ ಪಿಂಟೊ,ಮಾಜಿರೋಟರಿ ಸಹಾಯಕ ಗವರ್ನರ್ ರಾಜ ಗೋಪಾಲ್ ರೈ,, ಉದ್ಯಮಿ ರಮೇಶ್ ನಾಯಕ್,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಸಂತ ಅಲೋಶಿಯಸ್ ಐಟಿಐ ಕಾಲೇಜು,ಕೆಪಿಟಿ ಮಂಗಳೂರಿನ ಶಿಕ್ಷಕರು ಮತ್ತು ವಿದ್ಯಾರ್ಥಿ ಗಳು,ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ನ ಪದಾಧಿಕಾ ರಿಗಳು,ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಪದಾಧಿ ಕಾರಿಗಳು,ಮನಪಾ ಮಾಜಿ ಸದಸ್ಯೆ ಸಂಧ್ಯಾ ಆಚಾರ್ಯ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್,ವಲಯ ಅರಣ್ಯ ಅಧಿಕಾರಿ ರಾಜೇಶ್ ಮೊದಲಾದವರು ಉಪಸ್ಥಿತ ರಿದ್ದರು. ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿ ಭಾಸ್ಕರ ರೈ ಕಟ್ಟ ಸ್ವಾಗತಿಸಿದರು.

ಪ್ರಾದೇಶಿಕ ವಾರ್ತೆಗಳು

ಅನಂತಾಡಿ ಹಿರ್ತಂದಬೈಲು ವಿಶ್ವನಾಥ ರೈ ನಿಧನ

ಅನಂತಾಡಿ ಹಿರ್ತಂದಬೈಲು ವಿಶ್ವನಾಥ ರೈ(84) ಶ್ರೀ ವಿಶ್ವನಾಥ ರೈ ಇವರು ತಾ/30/05/25 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.ಶ್ರೀಯುತರು ಪುತ್ತೂರು ಸರ್ವೆ, ನೇರಳಕಟ್ಟೆ,ಅನಂತಾಡಿ ಸರಕಾರಿ ಶಾಲೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ, ಅನಂತಾಡಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು.ಜನಾನುರಾಗಿ ಪರೋಪಕಾರಿಯಾಗಿ ಜೀವನ ನಡೆಸುತ್ತಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡದ್ದಿರು. ಪುತ್ರರಾದ ಶಶಿಧರ್ ರೈ ಹಾಗೂ ಬಿ.ಸಿ. ರೋಡಿನ ಪ್ರಸಿದ್ದ ದಂತ ವೈದ್ಯರಾದ ಮುರಳೀಧರ ರೈ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕೊಡಿಯಾಲ್‌ಬೈಲ್‌ ಬಿಷಪ್ ಹೌಸ್‌ನ ನವೀಕೃತ ಶೋಕ ಮಾತಾ ಚಾಪೆಲ್‌ ಆಶೀರ್ವಚನ, ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕೊಡಿಯಾಲ್‌ ಬೈಲ್ ಬಿಷಪ್ಸ್ ಹೌಸ್‌ ನ ಶೋಕ ಮಾತೆಗೆ ಸಮರ್ಪಿಸಿದ ಚಾಪೆಲ್‌ ನವೀಕರಣಗೊಂಡಿದ್ದು, ಅದರ ಆಶೀರ್ವಚನ ಮತ್ತು ಲೋಕಾರ್ಪಣೆಯನ್ನು ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್‌ ಸಲ್ಡಾನ್ಹಾ ಅವರು ಮೇ 31 ರಂದು ನೆರವೇರಿಸಿದರು.ಇದರ ಪ್ರಯುಕ್ತ ನಡೆದ ಸಂಭ್ರಮದ ಬಲಿ ಪೂಜೆಯಲ್ಲಿ ಹಲವಾರು ಮಂದಿ ಧರ್ಮಗುರುಗಳು, ಧರ್ಮ ಭಗಿನಿಯರು ಮತ್ತು ಕ್ಯಾಥೊಲಿಕ್‌ ವಿಶ್ವಾಸಿಗಳು ಭಾಗವಹಿಸಿದ್ದರು.ಪ್ರಥಮವಾಗಿ 1857 ರಲ್ಲಿ ಆಶೀರ್ವದಿಸಲಾಗಿದ್ದ ಈ ಚಾಪೆಲ್ 1963 ರಲ್ಲಿ ನವೀಕರಣಗೊಂಡಿತ್ತು. ಬಳಿಕ ಒಂದು ದಶಕದ ಹಿಂದೆ ನೆಲಹಾಸಿನ ನವೀಕರಣ ಮಾಡಲಾಗಿತ್ತು. ಇದೀಗ ಆಕರ್ಷಕ ವಾಸ್ತು ಶಿಲ್ಪ ಶೈಲಿಯನ್ನು ಅಳವಡಿಸಿಕೊಂಡು ಛಾವಣಿಯ ದುರಸ್ತಿ, ಗೋಡೆಗಳ ಪ್ಲಾಸ್ಟರಿಂಗ್, ತಾಜಾ ಪೈಂಟಿಂಗ್‌, ವಿದ್ಯುದೀಕರಣ, ಧ್ವನಿ ವ್ಯವಸ್ಥೆ ಮತ್ತು ಸುಧಾರಿತ ಬೆಳಕಿನ ವ್ಯವಸ್ಥೆಯನ್ನು ಪರಂಪರೆ ಮತ್ತು ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ನವೀಕರಿಸಲಾಗಿದೆ. ಆಶೀರ್ವಚನ ಮತ್ತು ಬಲಿ ಪೂಜೆಯ ಸಂದರ್ಭದಲ್ಲಿ ನಿವೃತ್ತ ಬಿಷಪ್ ಅತಿ ವಂ. ಡಾ. ಅಲೋಶಿಯಸ್ ಪಾವ್ಲ್ ಡಿ’ಸೋಜಾ, ವಿಕಾರ್ ಜನರಲ್‌ ಅತಿ ವಂ. ಮ್ಯಾಕ್ಸಿಮ್ ಎಲ್. ನೊರೊನ್ಹಾ, ಛಾನ್ಸಲರ್‌ ಅತಿ ವಂ. ಡಾ. ವಿಕ್ಟರ್ ಜಾರ್ಜ್ ಡಿ’ಸೋಜಾ, ಹಣಕಾಸು ಆಧಿಕಾರಿ ರೆ. ಫಾ. ಜಗದೀಶ್ ಪಿಂಟೊ, ರಾಕ್ಣೊ ವಾರಪತ್ರಿಕೆಯ ಸಂಪಾದಕ ರೆ. ಫಾ.ರೂಪೇಶ್ ಮಾಡ್ತಾ, ಫಾ. ಮ್ಯಾಕ್ಸಿಮ್ ರೊಸಾರಿಯೊ, ಫಾ. ತ್ರಿಶಾನ್ ಡಿ’ಸೋಜಾ ಮತ್ತು ಫಾ. ಜೇಸನ್ ಲೋಬೊ, ಫಾ. ವಲೇರಿಯನ್ ಡಿ’ಸೋಜಾ, ಮೊ. ಲೆಸ್ಲಿ ಎಫ್. ಶೆಣೈ, ರೆ. ಡಾ. ರೊನಾಲ್ಡ್ ಸೆರಾವೊ ಮತ್ತು ಎಪಿಸ್ಕೋಪಲ್ ಹಾಗೂ ಸಿಟಿ ಒಲಯದ ಗುರುಗಳು ಭಾಗವಹಿಸಿದ್ದರು. ಬಲಿ ಪೂಜೆಯ ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ದಾನಿಗಳನ್ನು ಗೌರವಿಸಲಾಯಿತು.ಅಬುಧಾಬಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಮೈಕೆಲ್ ಡಿ’ಸೋಜಾ ಮತ್ತು ಮಂಗಳೂರಿನ ಸೊಡ್ಯಾಲಿಟಿ ಆಫ್ ದಿ ಇಮ್ಯಾಕ್ಯುಲೇಟ್ ಕನ್ಸೆಪ್ಷನ್ ಆಫ್ ದಿ ಬ್ಲೆಸ್ಡ್ ವರ್ಜಿನ್ ಮೇರಿಯ ಸದಸ್ಯರನ್ನು ಒಳಗೊಂಡಂತೆ ಪ್ರಮುಖ ದಾನಿಗಳನ್ನು ಹಾಗೂ ಆರ್ಥಿಕ ಬೆಂಬಲ ನೀಡಿದ ಇತರ ದಾನಿಗಳನ್ನು ಬಿಷಪ್ ಪೀಟರ್ ಪಾವ್ಲ್‌ ಸಲ್ಡಾನ್ಹಾ ಅವರು ಸನ್ಮಾನಿಸಿದರು.

ಪ್ರಾದೇಶಿಕ ವಾರ್ತೆಗಳು

ಅಂಗನವಾಡಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಗಮನ-ಕೆ.ವಿ.ಪ್ರಭಾಕರ್

ಮಂಗಳೂರು,ಮೇ.31;ಅಂಗನವಾಡಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರಕಾರ ಗಮನಹರಿಸುತ್ತಿದೆ ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.ಅವರು ನಗರದ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡುತ್ತಿದ್ದರು.ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಶಾಲಾ ಪೂರ್ವ ಮಕ್ಕಳ ಮಾನಸಿಕ ದೈಹಿಕ ವಿಕಸನ ಕೇಂದ್ರಗಳಾಗಿವೆ ಎಂದರು.ಈ ಸಂದರ್ಭದಲ್ಲಿ ರೋಟರಿ ಸೆಂಟ್ರಲ್ ಮಂಗಳೂರು ಘಟಕದ ಅಧ್ಯಕ್ಷ ಬ್ರಿಯಾನ್ ಪಿಂಟೊ, ಮಾಜಿ ರೋಟರಿ ಸಹಾಯಕ ಗವರ್ನರ್ ರಾಜ ಗೋಪಾಲ್ ರೈ,ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮಹಾ ಪ್ರಬಂಧಕ ಅರುಣ್ ಪ್ರಭಾ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಅಂಗನವಾಡಿ ಕಾರ್ಯಕರ್ತೆ ನಂದಾ,ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

“ನೆತ್ತರಕೆರೆ” ತುಳು ಸಿನಿಮಾದ ಟೀಸರ್ ಬಿಡುಗಡೆ. ಸಿನಿಮಾರಂಗದಲ್ಲಿ ಸಂಚಲನ ಮೂಡಿಸಿದ ಟೀಸರ್

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ನೆತ್ತರೆಕೆರೆ ತುಳು ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಹೀಗಾಗಿ ಸಿನಿಮಾವನ್ನು ಜೂನ್ ಕೊನೆಯ ವಾರದಲ್ಲಿ ತೆರೆಕಾಣಿಸಲು ಚಿತ್ರತಂಡ ಸಿದ್ದತೆ ಮಾಡಿಕೊಂಡಿದೆ.ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ , ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಸುಮನ್ ತಲ್ವಾರ್, ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆಸಿನಿಮಾದಲ್ಲಿ ಪೃಥ್ವಿನ್ ಪೊಳಲಿ, ಯುವ ಶೆಟ್ಟಿ, ಅನಿಲ್ ಉಪ್ಪಳ, ಪುಷ್ಪರಾಜ್ ಬೊಳ್ಳೂರು, ವಿಜಯ ಮಯ್ಯ, ನೀತ್ ಪೂಜಾರಿ, ಉತ್ಸವ ವಾಮಂಜೂರು, ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ ಉಪಿರ, ಭವ್ಯಾ ಪೂಜಾರಿ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ ಇದ್ದಾರೆ.ಸಿನಿಮಾಕ್ಕೆ ಚಿತ್ರಕತೆ ನಿರ್ದೇಶನ ಸ್ವರಾಜ್ ಶೆಟ್ಟಿ, ಕ್ಯಾಮರಾ: ಉದಯ ಬಲ್ಲಾಳ್, ಸಂಗೀತ: ವಿನೋದ್ ರಾಜ್ ಕೋಕಿಲಾ, ಸಂಕಲನ: ಗಣೇಶ್ ನೀರ್ಚಾಲ್, ಸಾಹಸ: ಮಾಸ್ ಮಾದ, ಟೈಗರ್ ಶಿವ, ಎಕ್ಸಿಟಿವ್ ಪ್ರೊಡ್ಯುಸರ್ : ಯತೀಶ್ ಪೂಜಾರಿ, ಲೈನ್ ಪ್ರೊಡ್ಯುಸರ್: ವಿಜಯ ಮಯ್ಯ, ಪ್ರೊಡಕ್ಷನ್ ಮ್ಯಾನೇಜರ್: ರಾಜೇಶ್ ಕುಡ್ಲ, ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ : ಚೇತನ್, ಆಟ್೯: ವಿಪಿನ್,ಸಿನಿಮಾ ತುಳುವಿನ ಜೊತೆಗೆ ಬೇರೆ ಭಾಷೆಗಳಲ್ಲೂ ಬಿಡುಗಡೆಯಾಗಲಿದ್ದು, ಇದೊಂದು ಪಾನ್ ಇಂಡಿಯಾ ಸಿನಿಮಾ ಆಗಿದೆ.

ಪ್ರಾದೇಶಿಕ ವಾರ್ತೆಗಳು

ಇಂದು ಡಾ.ಮಿಜಾರುಗುತ್ತು ಮೋಹನ್ ಆಳ್ವರಿಗೆ 73ನೇ ಹುಟ್ಟುಹಬ್ಬದ ಸಂಭ್ರಮ

ಮೂಡಬಿದ್ರೆ-ಇಂದು ಮೇ 31 ಡಾ.ಮಿಜಾರುಗುತ್ತು ಮೋಹನ್ ಆಳ್ವರಿಗೆ 73ನೇ ಹುಟ್ಟುಹಬ್ಬದ ಸಂಭ್ರಮ. ಅದ್ವಿತೀಯ ಸಂಘಟಕ,ನಿಸ್ವಾರ್ಥ ಸಮಾಜ ಸೇವಕ,ವಾಗ್ಮಿ, ಸಾಹಿತ್ಯ-ಕಲಾರಂಗದ ಸವ್ಯಸಾಚಿ,ಸೌಹಾರ್ದ ನಾಯಕ,ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ,ಮೂಡಬಿದ್ರೆ ಅಭಿವೃದ್ದಿಯ ಶಿಲ್ಪಿ,ಲಕ್ಷಾಂತರ ಅಭಿಮಾನಿಗಳ ನೆಚ್ಚಿನ ನೇತಾರ ಡಾ.ಮೋಹನ್ ಆಳ್ವರ ಹುಟ್ಟುಹಬ್ಬಕ್ಕೆ Mp mlas News ಪತ್ರಿಕೆ ಮತ್ತು mpmlasnewstv 247 ನ್ಯೂಸ್ ಪೋರ್ಟಲ್ ನ ಸಂಪಾದಕ ಡಾ.ಅಶೋಕ್ ಶೆಟ್ಟಿ ಬಿ. ಎನ್ ಅವರು ಶುಭಾಶಯ ಸಲ್ಲಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ -ಕೆ.ವಿ.ಪ್ರಭಾಕರ್

ಬೆಳ್ತಂಗಡಿ:ರಾಜ್ಯದ ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದರು.ತಾಲೂಕಿನ ಕುತ್ಲೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು ಸನಿಹದ ಮಂಜುಶ್ರೀ ಸಭಾಭನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.ಸರಕಾರಿ ಶಾಲೆಯಲ್ಲಿ ಓದಿದವರೇ ಆಗಿದ್ದಾರೆ.ಸರಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಸ್ಥಳೀಯರ ಸಹಭಾಗಿತ್ವದ ಅಗತ್ಯವಿದೆ.ಹೀಗಾಗಿ ಸರಕಾರಿ ಶಾಲೆಗಳನ್ನು ಕಡೆಗೆಣಿಸಬಾರದು ಎಂದರು.ಮನುಷ್ಯರ ನಡುವಿನ ಪ್ರೀತಿ, ಸಾಮರಸ್ಯ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಕರ ಜವಾಬ್ದಾರಿಯುತ ನಡವಳಿಕೆಗಳು ಮಕ್ಕಳ ಮೇಲೆ ಪ್ರಭಾವ ಬೀರುತ್ತವೆ. ವಿದ್ಯಾರ್ಥಿಗಳು ತಂದೆ, ತಾಯಿ, ಗುರುಗಳಿಗೆ ಗೌರವ ಕೊಡುವಂತಾಗಬೇಕು ಟೀಕೆಗಳು ಬರುತ್ತವೆ. ಸಾಯುತ್ತವೆ. ನಾವು ದೊಡ್ಡವ್ಯಕ್ತಿಗಳಾಗುವುದಕ್ಕಿಂತ ಸಮಾಜಕ್ಕೆ ನಾವು ಏನು ನೀಡಿದ್ದೇವೆ ಎಂಬುದು ಮುಖ್ಯವಾಗುತ್ತದೆಎಂದು ಆಶಿಸಿದರು. ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಎಸ್.ಕೆ.ಡಿ.ಆರ್.ಡಿ.ಪಿ.ಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಎಂ.ಆರ್.ಪಿ.ಎಲ್.ನ ಸಿ.ಎಸ್.ಆರ್. ಪ್ರಬಂಧಕ ಹರೀಶ್, ಕ್ವಾಯರ್ ಬೋರ್ಡ್ ಅಧ್ಯಕ್ಷ ನಟರಾಜ್, ಸೇವಾ ಭಾರತಿ ಅಧ್ಯಕ್ಷ ವಿನಾಯಕ್ ರಾವ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ,ಸದಸ್ಯ ರಾಜೇಶ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಹರೀಶ್ ರೈ, ನಾರಾವಿ ಗ್ರಾ.ಪಂ.ಅಧ್ಯಕ್ಷ ರಾಜರತ್ನ ಜೈನ್, ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷ ಉಮಾಕಾಂತ ಅರಿಗ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಮಿತ್ ಜೈನ್, ಹಿರಿಯರಾದ ಡಾಕಯ್ಯ ಪೂಜಾರಿ, ಗುತ್ತಿಗೆದಾರ ವಿನಯಕುಮಾರ್, ಉಪಾಧ್ಯಕ್ಷೆ ಶ್ವೇತಾ ಇದ್ದರು. ಕಾಮಗಾರಿಗಳನ್ನು ನಿರ್ವಹಿದವನ್ನು ಸಮ್ಮಾನಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕಿ ರೂಪಾ ವಂದಿಸಿದರು. ಶಿಕ್ಷಕ ಅಜಿತ್‌ಕುಮಾರ್ ನಿರ್ವಹಿಸಿದರು. *ಸರಕಾರಿ ಶಾಲೆಯಲ್ಲಿ ಕಲಿತ ಪಾಠ,ಪ್ರೀತಿ, ಶಿಸ್ತು ಇಂದು ನನ್ನನ್ನು ಇಲ್ಲಿವರೆಗೆ ತಂದು ನಿಲ್ಲಿಸಿದೆ. ಹೀಗಾಗಿ ನನಗೆ ಸರಕಾರಿ ಶಾಲೆಯೆಂದರೆ ವಿಶೇಷ ಅಭಿಮಾನ. ಕುತ್ಲೂರು ಶಾಲೆಗೆ ಕೆಲ ದಿನಗಳಲ್ಲಿ ಮಿನಿ ಬಸ್ ನೀಡಲಿದ್ದೇನೆ ಹಾಗೂ ಇಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಸರಕಾರದ ಮಟ್ಟದಲ್ಲಿ ಅನುಮತಿ ಕೊಡಿಸುತ್ತೇನೆ. ಒಟ್ಟಿನಲ್ಲಿ ಶಾಲೆ ರಾಜ್ಯಕ್ಕೇ‌ ಮಾದರಿ ಯಾಗಬೇಕು ಎಂದು ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.*ಇದೇ ಸಂದರ್ಭದಲ್ಲಿ ಅವರು ಶಾಲಾ ಎಸ್.ಡಿ.ಎಂ.ಸಿ ನೇತೃತ್ವದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಶಾಲಾ ಫಲಕ, ಕೊಳವೆ ಬಾವಿ, ಚಿತ್ರಗಳುಳ್ಳ ಶಾಲಾ ಕೊಠಡಿ, ವಿದ್ಯುದೀಕರಣ, ಶೌಚಾಲಯ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ ಕಂಪ್ಯೂಟರ್ ‌ನ್ನು ಕೆ.ವಿ.ಪ್ರಭಾಕರ ಅವರು ಉದ್ಘಾಟಿಸಿದರು. ಶಾಲಾ ಆವರಣದಲ್ಲಿ ಗಿಡ ನೆಟ್ಟು ಶಾಲೆಯ ತರಕಾರಿ, ಅಡಕೆ ತೋಟವನ್ನು ವೀಕ್ಷಿಸಿದರು.

ಪ್ರಾದೇಶಿಕ ವಾರ್ತೆಗಳು

ಕ.ವಿ.ಪ್ರ,ನಿ.ನೌ.ಸಂಘ ಮೆಸ್ಕಾಂ ಉಪಾಧ್ಯಕ್ಷ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಮಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (ರಿ,) ನಂ.659, ಕೇಂದ್ರ ಸಮಿತಿ, ಸ್ಥಳೀಯ ಸಮಿತಿ ಮತ್ತು ಎಲ್ಲಾ ಪ್ರಾರ್ಥಮಿಕ ಸಮಿತಿಗಳ ಸಹಯೋಗದೊಂದಿಗೆ ಕ.ವಿ.ಪ್ರ,ನಿ.ನೌ.ಸಂಘ ಮೆಸ್ಕಾಂ, ಮಂಗಳೂರು ಇದರ ಉಪಾಧ್ಯಕ್ಷರು ಹಾಗೂ (ವಿ), ಎಲ್.ಟಿ.ರೇಟಿಂಗ್ ಉಪವಿಭಾಗ ಅತ್ತಾವರ ಮಂಗಳೂರು ಇದರ ಕಿರಿಯ ಇಂಜಿನಿಯರ್ ಹೆಚ್. ಎಸ್. ಗುರುಮೂರ್ತಿ ಇವರ ವಯೋ ನಿವೃತ್ತಿ ಬೀಳ್ಕೊಡುಗೆ ಸಮಾರಂಭ ನಗರದ ಬೊಂದೆಲ್‌ನಲ್ಲಿರುವ ಕ.ವಿ.ಪ್ರ,ನಿ.ನೌಕರರ ಸಮುದಾಯ ಭವನದಲ್ಲಿ ಜರಗಿತು.ಕ.ವಿ.ಪ್ರ,ನಿ.ನೌ.ಸಂಘದ ಅಧ್ಯಕ್ಷರು ಹಾಗೂ ಕ.ವಿ.ಪ್ರ,ನಿ ಮತ್ತು ಎಲ್ಲಾ ಎಸ್ಕಾಂಗಳು ಬೆಂಗಳೂರು, ಇದರ ನಿರ್ದೇಶರಾದ ಕೆ. ಬಲರಾಂ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ಮೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾದ ಡಾ. ಮಂಜುನಾಥ ಸ್ವಾಮಿ ಬಿ.ಎಸ್ ಹಾಗೂ ಮಂಗಳೂರು ಬಿಜೈ ಮೆಸ್ಕಾಂನ ನಿರ್ದೇಶಕ (ತಾಂತ್ರಿಕ)ರಾದ ಮಹಾದೇವ ಸ್ವಾಮಿ ಪ್ರಸನ್ನ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ.ವಿ.ಪ್ರ,ನಿ.ನೌ.ಸಂಘ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಶಿವರಾಂ, ಕ.ವಿ.ಪ್ರ,ನಿ.ನೌ.ಸಂಘ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಕೆ.ಶಂಕರ ಪ್ರಕಾಶ, ಹಿರಿಯ ಕಾರ್ಮಿಕ ಮುಖಂಡ ಕೆ. ಶಶೀಂದ್ರ, ಇ. ಚೆನ್ನೆಶ್, ಕಾರ್ಯದರ್ಶಿ, ಪ್ರಾ.ಸ. ಮಂಗಳೂರು ಮುಂತಾದವರು ಪಾಲ್ಗೊಂಡಿದ್ದರು.ಕ.ವಿ.ಪ್ರ,ನಿ.ನೌ.ಸಂಘ ಕಾವೂರು ಇದರ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀ ಷಣ್ಮುಖಪ್ಪ ಬಾವಿ ಕಾರ್ಯಕ್ರಮ ನಿರೂಪಿಸಿದರು.News By: Sathish kapikad.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಲೋಕಾಯುಕ್ತ ನಿರೀಕ್ಷಕರಿಗೆ ಲಂಚದ ಆಮಿಷ ಒಡ್ಡಿದ ಸರಕಾರಿ ಅಧಿಕಾರಿ ಗಜೇಂದ್ರ ವಿ ಎಡಕೆ ಬಂಧನ

ಮಂಗಳೂರು-ಫಿರ್ಯಾದಿದಾರರಾದ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರುರವರು ದಿನಾಂಕ 30-06-2025 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿರುವ ಸಮಯ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಪ್ರವೀಣ್ ನಾಯ್ಕ್ ಮಾಲಿಕರು, ಪ್ರಶಾಂತ್ ಆಯಿಲ್ ಇಂಡಸ್ಟ್ರಿಸ್, ಕೋಟೆಕಣಿ, ಮಂಗಳೂರುರವರು ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದು ಫಿರ್ಯಾದಿದಾರರಾದ ಪೊಲೀಸ್ ನಿರೀಕ್ಷಕರಿಗೆ ಮಾಹಿತಿ ನೀಡಬೇಕು ಎಂಬುದಾಗಿ ಠಾಣೆಯ ಸಿಬ್ಬಂದಿಯವರಲ್ಲಿ ತಿಳಿಸಿ, ನಂತರ ಗಜೇಂದ್ರ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರುರವರು ಫಿರ್ಯಾದಿದಾರರಾದ ಪೊಲೀಸ್ ನಿರೀಕ್ಷಕರವರಲ್ಲಿ ಮಾತನಾಡುತ್ತಾ ತನ್ನ ವಿರುದ್ಧ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು ಅಥವಾ ದಾಳಿ ಮಾಡಬಾರದು ಎಂಬುದಾಗಿ ತಿಳಿಸಿ ತಾನು 3 ತಿಂಗಳಿಗೊಮ್ಮೆ 25,000/- ಹಣವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಫಿರ್ಯಾದಿದಾರರಿಗೆ ಲಂಚದ ಅಮಿಷ ಒಡ್ಡಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಗಜೇಂದ್ರ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರುರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ. 30.05.2025ರಂದು ಮಂಗಳೂರು ಲೋಕಾಯುಕ್ತ ಠಾಣೆಯ ಠಾಣಾಧಿಕಾರಿಯವರಿಗೆ ಲಂಚ ಹಣ ನೀಡುವುದಾಗಿ ಆಮೀಷ ಒಡ್ಡಿದ ಸರಕಾರಿ ಅಧಿಕಾರಿಯಾದ ಗಜೇಂದ್ರ ವಿ ಎಡಕೆ, ಸಹಾಯಕ ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಂಗಳೂರುರವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.ಈ ಕಾರ್ಯಾಚರಣೆಯಲ್ಲಿ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ರವರು ಸಿಬ್ಬಂದಿಗಳ ಜೊತೆ ಕಾನೂನು ಕ್ರಮ ಕೈಗೊಂಡಿರುತ್ತಾರೆ.

Scroll to Top