ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

Special permission under COVID-19 pandemic to deliver medicines at doorstep, being misused by illegal online platforms, posing threat to public health be immediately withdrawn AIOCD urges Central Government.

Mangalore: The All-India Organisation of Chemists and Druggists (AIOCD), and South Kanara District Chemists and Druggists Association which represents all chemists and distributors of the state and across India, has written to the Secretary, Ministry of Health and Family Welfare for the third time, appealing to revoke the notification G.S.R. 220 (E) issued during the COVID-19 pandemic.This notification G.S.R. 220 (E) was published in March 2020 during the COVID pandemic, wherein movement restriction ware imposed, supply of medicines to the doorstep was allowed with some conditions, under Section 26B of the Drugs Act to regulate the manufacture, sale, and distribution of medicines. Under this, doorstep delivery of medicines was allowed and some rules, such as the requirement to stamp the prescription for the sale of medicines (Rule 65), were temporarily set aside only as a special circumstance.AIOCD President Sri. JS Shinde and General Secretary Sri. Rajiv Singhal said that the main purpose of this notification was to deliver medicines in emergency situations through local chemists, but now it is being misused by Swiggy and other digital platforms to deliver medicines at home without following the necessary regulatory safety measures.All these illegal platforms are selling medicines without a valid prescription, which is increasing serious problems like self-medication, drug abuse, and antimicrobial resistance. All such illegal platforms are focusing only on their profits by ignoring the safety of patients.AIOCD and South Kanara District Chemists and Druggists Association has said that the original intention of this notification was to make the delivery of medicines in specific circumstances for valid licensed nearby chemists – not for online platforms to bypass important safety measures.All these online platforms are ignoring the rules of drug delivery for their convenience, which can have a negative impact on the health of the public.* AIOCD demands:*• With the emergency phase of the pandemic is no longer exists and normalcy returned therefore notification is no longer relevant and should be withdrawn immediately.• Strict adherence to prescription and other safety rules for the sale and distribution of medicines should be ensured.• Illegal online sale of medicines in the country should be stopped with immediate effect so that unregulated sale of medicines can be stopped.AIOCD and South Kanara District Chemists and Druggists Association believes that this step is necessary to maintain public health and safety. If the government does not act positively AIOCD and South Kanara District Chemists and Druggists Association shall be forced to launch agitation with all its 12.40 lakh members.For South Kanara District Chemists and Druggists AssociationPresident SecretaryArun Kumar Shetty Dr. A.K. Jamal

ಪ್ರಾದೇಶಿಕ ವಾರ್ತೆಗಳು

COVID -19 ಮಹಾಮಾರಿಯ ಸಂದರ್ಭದಲ್ಲಿ ಔಷಧಿಗಳನ್ನು ಮನೆ ಬಾಗಿಲಿಗೆ ವಿತರಿಸಲು ನೀಡಲಾಗಿದ್ದ ವಿಶೇಷ ಅನುಮತಿಯನ್ನು ಅಕ್ರಮ ಆನ್ಲೈನ್ ವೇದಿಕೆಗಳು ದುರುಪಯೋಗ ಮಾಡುತ್ತಿದ್ದು, ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತಿದೆ. ಈ ಅನುಮತಿಯನ್ನು ತಕ್ಷಣವೇ ಹಿಂಪಡೆಯುವಂತೆ AIOCD ಕೇಂದ್ರದಿಂದ ಸರ್ಕಾರಕ್ಕೆ ಕೋರಿಕೆ.

ಮಂಗಳೂರು: ಅಖಿಲ ಭಾರತ ಔಷಧ ಮತ್ತು ಔಷಧಿ ವ್ಯಾಪಾರಿಗಳ ಸಂಘ (AIOCD )ಮತ್ತು ರಾಜ್ಯ ಮತ್ತು ಭಾರತಾದ್ಯಂತದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರನ್ನು ಪ್ರತಿನಿಧಿಸುವ ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿಗಳಿಗೆ ಮೂರನೇ ಸಲ ಪತ್ರ ಬರೆದಿದ್ದು, COVID -19 ಮಹಾಮಾರಿಯ ವೇಳೆ ಜಾರಿಗೊಂಡಿದ್ದ G.S.R.220(E) ಅಧಿಸೂಚನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದೆ.ಈ G.S.R.220(E) ಅಧಿಸೂಚನೆಯನ್ನು COVID -19 ಮಹಾಮಾರಿಯ ಸಮಯದಲ್ಲಿ, 2020 ರ ಮಾರ್ಚ್ ನಲ್ಲಿ ಪ್ರಕಟಿಸಲಾಗಿದ್ದು, ತುರ್ತು ಪರಿಸ್ಥಿತಿಯಡಿಯಲ್ಲಿ ಔಷಧಿ ಉತ್ಪಾದನೆ, ಮಾರಾಟ ಮತ್ತು ವಿತರಣೆಯನ್ನು ನಿಯಂತ್ರಿಸಲು ಡ್ರಗ್ಸ್ ಕಾಯ್ದೆಯ 26B ಕಲಮದ ಅನ್ವಯ ಕೆಲವು ಶರತ್ತುಗಳೊಂದಿಗೆ ಔಷಧಿಗಳನ್ನು ಮನೆಬಾಗಿಲಿಗೆ ವಿತರಿಸುವುದಕ್ಕೆ ಅನುಮತಿ ನೀಡಲಾಯಿತು. ಇದರಡಿ, ಔಷಧಿಗಳ ಮನೆಬಾಗಿಲಿನ ವಿತರಣೆಗೆ ಅನುಮತಿ ನೀಡಲಾಯಿತು ಮತ್ತು ಔಷಧಿಗಳ ಮಾರಾಟಕ್ಕಾಗಿ ಪ್ರಿಸ್ಕಿçಪ್ಷನ್ ಮೇಲೆ ಮುದ್ರಣ ಅಗತ್ಯ (ನಿಯಮ 65) ತಾತ್ಕಾಲಿಕವಾಗಿ ನಿರ್ಲಕ್ಷಿಸಲಾಯಿತು, ಅದು ವಿಶೇಷ ಸಂದರ್ಭಕ್ಕೆ ಮಾತ್ರ ಅನ್ವಯಿಸಿತು.AIOCD ಅಧ್ಯಕ್ಷ ಜೆ.ಎಸ್.ಶಿಂಧೆ ಮತ್ತು ಪ್ರಧಾನ ಕಾರ್ಯದರ್ಶಿ ರಾಜೀವ್ ಸಿಂಗ್ಹಲ್ ಅವರು ಹೇಳಿರುವಂತೆ, ಈ ಅಧಿಸೂಚನೆಯ ಪ್ರಮುಖ ಉದ್ದೇಶವು ತುರ್ತು ಪರಿಸ್ಥಿತಿಗಳಲ್ಲಿ ಸ್ಥಳೀಯ ಔಷಧಿ ವ್ಯಾಪಾರಿಗಳ ಮೂಲಕ ಔಷಧಿಗಳನ್ನು ವಿತರಿಸುವುದಾದರೂ, ಇತ್ತೀಚಿಗೆ ಸ್ವಿಗ್ಗಿ ಮತ್ತು ಇತರ ಡಿಜಿಟಲ್ ವೇದಿಕೆಗಳು ಔಷಧಿಗಳನ್ನು ಮನೆಬಾಗಿಲಿಗೆ ವಿತರಿಸಲು ಇದನ್ನು ದುರುಪಯೋಗ ಮಾಡುತ್ತಿವೆ, ಅಗತ್ಯವಿರುವ ನಿಯಂತ್ರಣ ಮತ್ತು ಭದ್ರತಾ ಕ್ರಮಗಳನ್ನು ಅನುಸರಿಸಿದೆ.ಈ ಎಲ್ಲಾ ಅಕ್ರಮ ವೇದಿಕೆಗಳು ಮಾನ್ಯವಾದ ಪ್ರಿಸ್ಕಿçಪ್ಷನ್ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುತ್ತಿವೆ, ಇದರಿಂದ ಸ್ವಯಂ ಚಿಕಿತ್ಸಾ ಔಷಧಿಗಳು ದುರುಪಯೋಗ ಮತ್ತು ಆಚಿಟಿಮೈಕ್ರೋಬಿಯಲ್ ಪ್ರತಿರೋಧದಂತಹ ಗಂಭೀರ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಎಲ್ಲಾ ಅಕ್ರಮ ವೇದಿಕೆಗಳು ರೋಗಿಗಳ ಭದ್ರತೆಯನ್ನು ಕಡೆಗಣಿಸಿ, ತನ್ನ ಲಾಭಗಳನ್ನು ಮಾತ್ರ ಗಮನದಲ್ಲಿಡುತ್ತಿವೆ.AIOCD ಮತ್ತು ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ಅವರು ಹೇಳಿರುವಂತೆ, ಈ ಅಧಿಸೂಚನೆಯ ಮೂಲ ಉದ್ದೇಶವು ನಿರ್ದಿಷ್ಟ ಪರಿಸ್ಥಿತಿಗಳಲ್ಲಿ ಮಾನ್ಯ ಲೈಸನ್ಸ್ ಹೊಂದಿರುವ ಸ್ಥಳೀಯ ಔಷಧಿ ವ್ಯಾಪಾರಿಗಳಿಂದ ಔಷಧಿಗಳ ವಿತರಣೆಯನ್ನು ಅನುಮತಿಸುವುದಾಗಿತ್ತು- ಆದರೆ ಅದು ಆನ್ಲೈನ್ ವೇದಿಕೆಗಳಿಗೆ ಮಹತ್ವಪೂರ್ಣ ಭದ್ರತಾ ಕ್ರಮಗಳನ್ನು ಅವಗಣಿಸಲು ಅವಕಾಶ ನೀಡುವುದಕ್ಕೆ ಇವು ಉದ್ದೇಶಿತವಾಗಿರಲಿಲ್ಲ.ಈ ಎಲ್ಲಾ ಆನ್ಲೈನ್ ವೇದಿಕೆಗಳು ತಮ್ಮ ಸುಲಭತೆಗೆ ಅನುಗುಣವಾಗಿ ಔಷಧಿ ವಿತರಣೆಯ ನಿಯಮಗಳನ್ನು ಅವಗಣಿಸುತ್ತಿವೆ, ಇದರಿಂದ ಸಾರ್ವಜನಿಕ ಆರೋಗ್ಯಕ್ಕೆ ನಕಾರಾತ್ಮಕ ಪರಿಣಾಮ ಬೀರುವ ಸಾದ್ಯತೆ ಇದೆ.AIOCD ಯ ಬೇಡಿಕೆಗಳು:• ಮಹಾಮಾರಿಯ ತುರ್ತು ಹಂತವು ಈವಾಗ ಇರುವುದಿಲ್ಲ ಮತ್ತು ಸಾಮಾನ್ಯ ಜನಜೀವನಕ್ಕೆ ಬಂದಿರುವುದರಿಂದ ಈ ಅಧಿಸೂಚನೆ ಇನ್ನು ಕೂಡಾ ಅನ್ವಯಿಸದು, ಮತ್ತು ಅದನ್ನು ತಕ್ಷಣವೇ ಹಿಂಪಡೆಸಬೇಕಾಗಿದೆ.• ಔಷಧಿಗಳ ಮಾರಾಟ ಮತ್ತು ವಿತರಣೆಗೆ ಸಂಬAಧಿಸಿದ ಪ್ರಿಸ್ಕಿçಪ್ಷನ್ ಮತ್ತು ಇತರ ಭದ್ರತಾ ನಿಯಮಗಳಿಗೆ ಕಠಿಣವಾಗಿ ಅನುಸರಣೆ ನೀಡಬೇಕು ಎಂದು ಖಾತ್ರಿಪಡಿಸಬೇಕು.• ದೇಶದಲ್ಲಿ ಅಕ್ರಮ ಆನ್ಲೈನ್ ಔಷಧಿ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು, ಇದರಿಂದ ನಿಯಂತ್ರಣವಿಲ್ಲದ ಔಷಧಿ ಮಾರಾಟವನ್ನು ತಡೆಯಲು ಸಾಧ್ಯವಾಗುತ್ತದೆ.AIOCD ಮತ್ತು ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ಅವರು ಸಾರ್ವಜನಿಕ ಆರೋಗ್ಯ ಮತ್ತು ಭದ್ರತೆಯನ್ನು ಕಾಪಾಡಲು ಈ ಕ್ರಮ ಅಗತ್ಯವಾಗಿದೆ ಎಂಬುದನ್ನು ನಂಬುತ್ತೇವೆ. ಸರ್ಕಾರವು ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳದಿದ್ದಲ್ಲಿ,AIOCD ಮತ್ತು ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘವು ತನ್ನ 12.40 ಲಕ್ಷ ಸದಸ್ಯರೊಂದಿಗೆ ಆಂದೋಲನ ಆರಂಭಿಸಲು ಬಾಧ್ಯವಾಗಲಿದೆ.ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಪರವಾಗಿ,ಅಧ್ಯಕ್ಷರುಅರುಣ್ ಕುಮಾರ್ ಶೆಟ್ಟಿ , ಕಾರ್ಯದರ್ಶಿ ಡಾ. ಎ.ಕೆ. ಜಮಾಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಪ್ರಾದೇಶಿಕ ವಾರ್ತೆಗಳು

“Payann” Konkani movie celebrating its 100th show.

A hit from the day of its release, the Konkani film “Payann”, produced by yodeling King Melvin Peris and Neeta Peris under the banner “Sangeet Ghar”, is entering its 100th day. Due to the limited market, making a movie in Konkani and delivering it to the scattered Konkani people is a challenging task. However, the team of “Payann” has worked tirelessly to ensure that the film achieves a 100-day run. This milestone is a record for the Mangalorean Konkani-speaking community, as it is rare for a movie with a limited market to sustain such a long theatrical release. At the same time, many films with multi-crore budgets have turned out to be flops. “Payann” has created history as the second Konkani film to run for 100 days after last year’s “Osmitay.”The movie narrates the life story of a musician who discovers that true harmony in life requires more than mastery of the art of music. The protagonist navigates the challenges of the music industry, confronting personal demons and unpredictable webs of deceit and craft. Driven by his desire to break the mold in the music industry and leave a legacy behind, “Payann” is a compelling tale of resilience and ambition.The 100th-day celebration will be held on 29th December at 4:00 PM sharp at Bharat Cinema in Bijai. Member of the Legislative Council, Mr. Ivan D’Souza, will be the chief guest for this event. Rector of St. Aloysius Educational Institutions, Rev. Fr. Melwin Joseph Pinto, and non-resident businessman Mr. James D’Souza from Dubai will be the guests of honor.The creative team behind “Payann” includes Director Joel Pereira, who also wrote the story, screenplay, and dialogues. Roshan D’Souza Angelore served as the music director. Brian Sequeira, a young talent from Puttur, played the lead role, supported by heroines Jasmine D’Souza, Kate Pereira, and Shaina D’Souza. The ensemble cast includes Rainal Sequeira, Leslie Rego, Gerry Rasquinha, Walter Nandalike, Jeevan Vas, Jossey Rego, Alvin Danti, Albert Peris, Arun Noronha, Denver Peris, Denver D’Souza, and Melisha Pinto. Lyrics and music were composed by Melvin Peris, cinematography was handled by V. Ramanjaneya, and the film was edited by Mevin Joel Pinto, Shirthady.

ಪ್ರಾದೇಶಿಕ ವಾರ್ತೆಗಳು

ಶತದಿನೋತ್ಸವದತ್ತ ‘ಪಯಣ್‌’ ಕೊಂಕಣಿ ಸಿನೆಮಾ

ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್‌ ಘರ್‌’ ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್‌ ಕಿಂಗ್‌ ಮೆಲ್ವಿನ್‌ ಪೆರಿಸ್‌ ಮತ್ತು ನೀಟ ಪೆರಿಸ್‌ ನಿರ್ಮಿಸಿರುವ “ಪಯಣ್‌’ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನು ತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ “ಪಯಣ್‌’ ಸಿನಿಮಾ ತಂಡವು ‘ಪಯಣ್‌’ ಸಿನಿಮಾ ನೂರು ದಿನಗಳ ಪ್ರದರ್ಶನವನ್ನು ಕಾಣುವಂತೆ ನಿರಂತರ ಶ್ರಮವಹಿಸಿ ದುಡಿದಿದೆ. ಕೋಟ್ಯಾಂತರ ಬಜೆಟಿನ ಚಿತ್ರಗಳು ಸೋಲುತ್ತಿರುವಾಗ, ಸೀಮಿತ ಮಾರುಕಟ್ಟೆಯಿರುವ ಕೊಂಕಣಿ ಸಮಾಜದ ಸಿನಿಮಾವೊಂದು ನೂರು ದಿನಗಳ ಪ್ರದರ್ಶನವನ್ನು ಕಾಣುವುದು ನಿಜಕ್ಕೂ ದಾಖಲೆಯೇ ಸರಿ. ಕಳೆದ ವರ್ಷ ತೆರೆಕಂಡ “ಅಸ್ಮಿತಾಯ್‌’ ಕೊಂಕಣಿ ಚಲನಚಿತ್ರದ ಬಳಿಕ ನೂರು ದಿನಗಳ ಪ್ರದರ್ಶನ ಕಂಡ ದ್ವಿತಿಯ ಚಿತ್ರವಾಗಿ ‘ಪಯಣ್‌’ ಇತಿಹಾಸ ಸೃಷ್ಠಿಸಿದೆ.“ಪಯಣ್‌’ ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚಿನದ್ದು ಬೇಕು ಎಂಬುದನ್ನು ಅನುಭವಿಸಿ ಜೀರ್ಣಿಸಿಕೊಳ್ಳುವ ಸಂಗೀತಗಾರನ ಜೀವನಗಾಥೆ. ನಾಯಕ ಸಂಗೀತ ಉದ್ಯಮದ ಸವಾಲುಗಳನ್ನು ಎದುರಿಸಿ ಮುನ್ನಡೆಯುವಾಗ – ವೈಯಕ್ತಿಕ ಪೈಶಾಚಿಕತೆಯನ್ನು ಎದುರಿಸುವುದರೊಂದಿಗೆ ವಂಚನೆ ಮತ್ತು ಕಸುಬಿನ ಅನಿರೀಕ್ಷಿತ ಜಾಲಗಳನ್ನು ಎದುರಿಸುತ್ತಾನೆ. ಸಂಗೀತ ಕ್ಷೇತ್ರದಲ್ಲಿ ಪಡಿಯಚ್ಚನ್ನು ಒತ್ತಿ, ತನ್ನ ಹಿಂದೆ ಪರಂಪರೆಯೊಂದನ್ನು ಬಿಟ್ಟು ಹೋಗುವ ಬಯಕೆಯಿಂದ ಪ್ರೇರೇಪಿಸಲ್ಪಟ್ಟ ಅವ ತನ್ನ ಸಂಗೀತ ಜೀವನದಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕೇಂದ್ರಬಿಂದುವಾಗಿಸಿದ ಕಥೆಯೇ ಪಯಣ್‌.ಶತದಿನೋತ್ಸವ ಸಂಭ್ರಮವು ಡಿಸೆಂಬರ್‌ 29ರಂದು ಸಂಜೆ 4.00 ಗಂಟೆಗೆ ಸರಿಯಾಗಿ ಬಿಜೈನಲ್ಲಿರುವ ಭಾರತ್‌ ಸಿನೆಮಾದಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರು ಮುಖ್ಯ ಅಥಿತಿಯಾಗಿ ಆಗಮಿಸಲಿರುವರು. ಸಂತ ಅಲೋಶಿಯಸ್‌ ಸಮೂಹ ವಿದ್ಯಾ ಸಂಸ್ಥೆಗಳ ರೆಕ್ಟರ್‌ ವಂ| ಮೆಲ್ವಿನ್‌ ಜೋಸೆಫ್‌ ಪಿಂಟೊ ಮತ್ತು ಅನಿವಾಸಿ ಉಧ್ಯಮಿ ಶ್ರೀ ಜೇಮ್ಸ್‌ ಡಿ’ಸೋಜಾ ದುಬಾಯ್‌ ಇವರುಗಳು ಗೌರವ ಅಥಿತಿಗಳಾಗಿರುವರು.ಪಯಣ್‌ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕ ಜೊಯೆಲ್‌ ಪಿರೇರಾ ಬರೆದಿದ್ದು, ರೋಶನ್‌ ಡಿ’ಸೋಜಾ ಆಂಜೆಲೊರ್‌ ಸಂಗೀತ ನಿರ್ದೇಶನ ನೀಡಿದ್ದಾರೆ. ಪುತ್ತೂರಿನ ಯುವ ಪ್ರತಿಭೆ ಬ್ರಾಯನ್‌ ಸಿಕ್ಟೇರಾ ನಾಯಕನಾಗಿ ಹಾಗೂ ಜಾಸ್ಮಿನ್‌ ಡಿ’ಸೋಜಾ, ಕೇಟ್‌ ಪಿರೇರಾ ಮತ್ತು ಶೈನಾ ಡಿ’ಸೋಜ ನಾಯಕಿಯರಾಗಿ ನಟಿಸಿದ್ದಾರೆ. ನಟರಾದ ರೈನಲ್‌ ಸಿಕ್ವೇರಾ, ಲೆಸ್ಲಿ ರೇಗೊ, ಜೆರಿ ರಸ್ಕಿನ್ನಾ, ವಾಲ್ಟರ್‌ ನಂದಳಿಕೆ, ಜೀವನ್‌ ವಾಸ್‌, ಜೊಸ್ಸಿ ರೇಗೊ, ಆಲ್ವಿನ್‌ ದಾಂತಿ, ಆಲ್ಬರ್ಟ್‌ ಪೆರಿಸ್‌, ಅರುಣ್‌ ನೊರೊನ್ಹಾ, ಡೆನ್ವರ್‌ ಪೆರಿಸ್‌, ಡೆನ್ವರ್‌ ಡಿ’ಸೋಜಾ, ಮೆಲಿಶಾ ಪಿಂಟೊ ಮುಖ್ಯ ಭೂಮಿಕೆಯಲ್ಲಿದ್ದಾರೆ.ಸಾಹಿತ್ಯ ಮತ್ತು ರಾಗ ಸಂಯೋಜನ್‌ ಮೆಲ್ವಿನ್‌ ಪೆರಿಸ್‌, ಛಾಯಾಗ್ರಹಣ ವಿ. ರಾಮಾಂಜನೆಯ ಮತ್ತು ಸಂಕಲನ ಮೆವಿನ್‌ ಜೊಯೆಲ್‌ ಪಿಂಟೊ, ಶಿರ್ತಾಡಿ ಇವರದ್ದು.

ಪ್ರಾದೇಶಿಕ ವಾರ್ತೆಗಳು

ಡಿ.28-29ರಂದು ಬೀಚ್ ಉತ್ಸವ.

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಬೀಚ್‌ನಲ್ಲಿ ಡಿ. 28 ಮತ್ತು 29ರಂದು ಆಯೋಜಿಸಲಾಗಿರುವ ಬೀಚ್ ಉತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯ ಕಲಾವಿದರ ಕಲಾ ಪ್ರದರ್ಶನದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ. 28ರಂದು 6.30ಕ್ಕೆ ವಿಧಾನಸಭೆ ಸ್ಪೀಕರ್ ಬೀಚ್ ಉತ್ಸವವನ್ನು ಅಧಿಕೃತವಾಗಿ ಉದ್ಘಾಟಿಸುವರು ಎಂದರು.7.30ರಿಂದ ಕದ್ರಿ ಮಣಿಕಂಠರವರಿಂದ ಕಾರ್ಯಕ್ರಮ ನಡೆಯಲಿದ್ದು, ವಿವಿಧ ರೀತಿಯ ಜಲ ಸಾಹಸ ಕ್ರೀಡೆಗಳು ಹಾಗೂ ಆಹಾರ ಮಳಿಗೆಗಳು ಪ್ರವಾಸಿಗರು ಸೇರಿದಂತೆ ವರ್ಷಾಂತ್ಯವನ್ನು ಸಂಭ್ರಮಿಸಲು ಭೇಟಿ ನೀಡುವ ಸ್ಥಳೀಯರಿಗೆ ಎಲ್ಲಾ ರೀತಿಯ ಮನರಂಜನೆಯನ್ನು ಒದಗಿಸಲಿದೆ ಎಂದು ಅವರು ಹೇಳಿದರು.ಬೀಚ್ ಉತ್ಸವ ಸಮಿತಿಯ ಅಧ್ಯಕ್ಷರೂ ಹಾಗೂ ಪೊಲೀಸ್ ಆಯುಕ್ತರೂ ಆಗಿರುವ ಅನುಪಮ್ ಅಗ್ರವಾಲ್ ಮಾತನಾಡಿ, ಬೀಚ್ ಉತ್ಸವ ನಡೆಯಲಿರುವ ತಣ್ಣೀರುಬಾವಿ ರಸ್ತೆಯುದ್ದಕ್ಕೂ ನಿಲ್ಲಿಸಲಾಗುವ ಘನ ವಾಹನಗಳನ್ನು ಉತ್ಸವದ ದಿನಗಳಂದು ತೆರವುಗೊಳಿಸಲು ಸೂಚಿಸಲಾಗಿದೆ. ಬೀಚ್‌ನ ದಾರಿಯಲ್ಲಿ ಐದಾರು ಕಡೆಗಳಲ್ಲಿ ದ್ವಿಚಕ್ರ, ಚತುಷ್ಚಕ್ರ ಹಾಗೂ ಇತರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಉತ್ಸವದ ದಿನಗಳಲ್ಲಿ ಫರ‍್ರಿ ಸೇವೆಯನ್ನು ಹೆಚ್ಚುಗೊಳಿಸಲು ಕ್ರಮ ವಹಿಸಲಾಗಿದೆ. ಫರ‍್ರಿಯಲ್ಲಿ ಆಗಮಿಸುವವರಿಗೆ ಅಲ್ಲಿಂದ ತಣ್ಣೀರುಬಾವಿವರೆಗಿನ ಸುಮಾರು ಒಂದು ಕಿ.ಮೀ. ರಸ್ತೆಗೆ ಮಿನಿ ಬಸ್ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ. ಉತ್ಸವದ ಸಂದರ್ಭ ಬೀಚ್‌ನಲ್ಲಿ ಹೆಚ್ಚಿನ ಸಿಬ್ಬಂದಿ ಮೂಲಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.ಗೋಷ್ಟಿಯಲ್ಲಿ ಮುಡಾ ಆಯುಕ್ತೆ ನೂರ್ ಜಹರಾ ಖಾನಂ, ವಾರ್ತಾಧಿಕಾರಿ ಖಾದರ್ ಷಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.ವರ್ಷಾಂತ್ಯದಲ್ಲಿ ಊರ ಹಾಗೂ ಪರವೂರವರು ಸೇರಿದಂತೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ಬೀಚ್ ಉತ್ಸವದೊಂದಿಗೆ ಕರಾವಳಿ ಉತ್ಸವವನ್ನು ವಾರ್ಷಿಕ ಕಾರ್ಯಕ್ರಮವಾಗಿ ನಿರಂತರವಾಗಿ ಮುಂದುವರಿಸುವ ನಿಟ್ಟಿನಲ್ಲಿ ಜಿಲ್ಲೆಯ ಜನರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಕರೆ ನೀಡಿದರು.ಮಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ನಗರಕ್ಕೆ ಪ್ರವಾಸಿಗರನ್ನು ಆಕರ್ಷಿಸುವ ಹಾಗೂ ಬ್ರಾಂಡ್ ಮಂಗಳೂರು ಆಗಿ ನಗರವನ್ನು ಪ್ರೋತ್ಸಾಹಿಸುವ ಈ ಬೀಚ್ ಉತ್ಸವಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ಬೀಚ್ ಉತ್ಸವದ ಪ್ರಾಯೋಜಕತ್ವ ವಹಿಸಿರುವ ರೋಹನ್ ಕಾರ್ಪೊರೇಶನ್ ಮುಖ್ಯಸ್ಥ ರೋಹನ್ ಮೊಂತೆರೋ ತಿಳಿಸಿದರು.

ಪ್ರಾದೇಶಿಕ ವಾರ್ತೆಗಳು

ಡಿ.28ರಂದು ಗೋಲ್ಡ್ ಫಿಂಚ್ ಸಿಟಿಯಲ್ಲಿ 8ನೇ ವರ್ಷದ “ಮಂಗಳೂರು ಕಂಬಳ”

ಮಂಗಳೂರು: ಕಳೆದ 7 ವರ್ಷಗಳಿಂದ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್‌ನ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿಯವರ ಗೌರವ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಮಂಗಳೂರು ಕಂಬಳವು ಡಿಸೆಂಬರ್ 28ರ ಶನಿವಾರ ಬೆಳಗ್ಗೆ 8.30ಕ್ಕೆ ಪ್ರಾರಂಭಗೊಂಡು ಅದೇ ದಿನ ಸಂಜೆ 6.00ಕ್ಕೆ ಸಭಾ ಕಾರ್ಯಕ್ರಮ ಹಾಗೂ ಮರುದಿನ ಡಿಸೆಂಬರ್ 29ರ ಭಾನುವಾರ ಬೆಳಗ್ಗೆ 08.00ಕ್ಕೆ ಬಹುಮಾನ ವಿತರಣಾ ಸಮಾರಂಭದ ಮೂಲಕ ಸಂಪನ್ನಗೊಳ್ಳಲಿದೆ“ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಎಳೆ ಮನಸ್ಸುಗಳನ್ನು ನಮ್ಮ ಈ ಆಚರಣೆಯ ಭಾಗವಾಗಿಸುವ ಸದುದ್ದೇಶದಿಂದ ‘ಕಲರ್ ಕೂಟ’ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಮೂರು ವಿಭಾಗಗಳಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಂದ ಎಲ್ಲರೂ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ಭಾಗವಹಿಸಿದ ಎಲ್ಲರಿಗೂ ನೆನಪಿನ ಕಾಣಿಕೆ ಹಾಗೂ ಆಕರ್ಷಕ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತದೆ. ನಮ್ಮ ಕಂಬಳದ ಅನುಭವವನ್ನು ಪುಟ್ಟ ಹಾಗೂ ಯುವ ಪ್ರತಿಭೆಗಳು ತಮ್ಮ ಕುಂಚದಿಂದ ತಮ್ಮ ಹಾಳೆ ಹಾಗೂ ಮನಸ್ಸುಗಳಲ್ಲಿ ಸೃಷ್ಟಿಸಿ ಈ ಮಣ್ಣಿನ ಸಾಂಸ್ಕೃತಿಕ ಸಂಪತ್ತಿನ ರಾಯಭಾರಿಗಳಾಗಲಿ ಎಂಬ ಆಶಯ ನಮ್ಮದು“ ಎಂದರು. ಬಳಿಕ ಮಾತಾಡಿದ ಈಶ್ವರ್ ಪ್ರಸಾದ್ ಅವರು, ”ಸಾಮಾಜಿಕ ಜಾಲತಾಣಗಳ ಈ ಯುಗದಲ್ಲಿ ಹಿಂದಿನಿಂದ ನಡೆದು ಬಂದ ನಮ್ಮ ಈ ಆಚರಣೆಯನ್ನು ಮುಂದಿನ ಪೀಳಿಗೆಯು ಹೆಮ್ಮೆ ಹಾಗೂ ಆಸಕ್ತಿಯಿಂದ ವಾರೀಸುದಾರರಾಗಿಸುವತ್ತ ರೀಲ್ಸ್ ಹಾಗೂ ಫೋಟೋಗ್ರಾಪಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅದೇ ದಿನ ಸಂಜೆ 6.30ಕ್ಕೆ ನಾಡಿನ ಧಾರ್ಮಿಕ, ಶೈಕ್ಷಣಿಕ, ರಾಜಕೀಯ, ಕ್ರೀಡೆ, ಚಲನಚಿತ್ರ ಕ್ಷೇತ್ರದ ಸಾಧಕರ, ಹಿರಿಯರ, ಗಣ್ಯ ಮಾನ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮರುದಿನ ಬೆಳಿಗ್ಗೆ ಬಹುಮಾನ ವಿತರಣಾ ಸಮಾರಂಭದ ಮೂಲಕ ಕಂಬಳ ಸಂಪನ್ನಗೊಳ್ಳಲಿದೆ“ ಎಂದರು. ವೇದಿಕೆಯಲ್ಲಿ ಮಂಗಳೂರು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಸಂಚಾಲಕರಾದ ಸಾಂತ್ಯಗುತ್ತು ಸಚಿನ್ ಶೆಟ್ಟಿ, ಕಿರಣ್ ಕೋಡಿಕಲ್, ಪ್ರಸಾದ್ ಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು”-ಡಾ.ಕೆ.ಪ್ರಕಾಶ್ ಶೆಟ್ಟಿ. ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

ಮಂಗಳೂರು: 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ನನ್ನ 60ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಸಮಾಜಕ್ಕೆ ನನ್ನಿಂದ ಕಿಂಚಿತ್ತು ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಂದಿನಿಂದ ಸತತವಾಗಿ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಇಂದು ನನ್ನ ಬಾಳಿನಲ್ಲಿ ಅತ್ಯಂತ ಖುಷಿಯ ದಿನ. ನನ್ನ ಈ ಕಾರ್ಯಕ್ಕೆ ನನ್ನ ಪತ್ನಿ ಮಗ ಸೊಸೆ ಸಹಿತ ಕುಟುಂಬದ ಸದಸ್ಯರು ಸಹಕಾರ ನೀಡುತ್ತಿದ್ದಾರೆ. ಮೊದಲ ವರ್ಷದಲ್ಲಿ 1 ಕೋಟಿ 25 ಲಕ್ಷ ರೂ. ನೆರವು ನೀಡಿದ್ದು ಅದು ಇಂದು 6 ಕೋಟಿ ರೂ. ಗಡಿಯನ್ನು ದಾಟಿದೆ. ಇಂದು ಇಲ್ಲಿ ಸಮಾರಂಭ ನಡೆಸಿ ನೆರವು ನೀಡುವ ಉದ್ದೇಶ ಇಷ್ಟೇ. ಇಂತಹ ಕಾರ್ಯಕ್ರಮ ಇಂದು ಸಹಾಯ ಪಡೆದ ಕೈಗಳಿಗೆ ಸ್ಫೂರ್ತಿಯಾಗಬೇಕು. ಮುಂದೊಂದು ದಿನ ಅವರು ಕೂಡಾ ಸಮಾಜದಲ್ಲಿ ಒಂದಷ್ಟು ಮಂದಿಗೆ ನೆರವು ನೀಡಲು ಮುಂದೆ ಬರಬೇಕು. ಕಷ್ಟ ಎಲ್ಲರಿಗೂ ಬರುತ್ತದೆ, ಆದರೆ, ಧೃತಿಗೆಡದೆ ಅದನ್ನು ಎದುರಿಸುವ ಛಲ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ನಿಮ್ಮ ತಂದೆ ತಾಯಿ ಗೌರವ ಪಡುವಂತೆ ಸಾಧನೆ ಮಾಡಿ ದೇಶದಲ್ಲಿ ಗುರುತಿಸುವಂತಾಗಬೇಕು“ ಎಂದರು. ಬಳಿಕ ಮಾತಾಡಿದ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷೆ ಹಾಗೂ ಸಹ- ಸಂಸ್ಥಾಪಕಿ ಡಾ. ತೇಜಸ್ವಿನಿ ಅನಂತಕುಮಾರ್ ಅವರು, “ಶಿಕ್ಷಣದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳು, ವಿಶೇಷ ಚೇತನ ಮಕ್ಕಳು, ಸಾಮಾಜಿಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಪ್ರಕಾಶ್ ಶೆಟ್ಟಿಯವರ ನೆರವು ಕಾರ್ಯಕ್ರಮ ಶ್ಲಾಘನೀಯವಾದುದು. ನಾವೇ ಹುಡುಕಿಕೊಂಡು ಹೋಗಿ ಅರ್ಹರಿಗೆ ನೆರವು ನೀಡುವ ಮಾದರಿ ಕಾರ್ಯಕ್ರಮ ಇದಾಗಿದೆ. ಇಲ್ಲಿ ಆರ್ಥಿಕ ಸಹಾಯ ಪಡೆದಿರುವ ಮಕ್ಕಳು ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದೆ“ ಎಂದರು.ಪ್ರಾಸ್ತಾವಿಕ ಮಾತನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, “ಬೆಂಗಳೂರು ಹುಬ್ಬಳ್ಳಿ ಗುಲ್ಬರ್ಗದಲ್ಲಿ ಲಕ್ಷಾಂತರ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಅದಮ್ಯ ಫೌಂಡೇಶನ್ ನ ಸಂಸ್ಥಾಪಕಿ ತೇಜಸ್ವಿನಿ ಅನಂತ ಕುಮಾರ್ ಅವರು ಮಾಡುತ್ತ ಬಂದಿದ್ದಾರೆ. ಎಲ್ಲೂ ತಮ್ಮ ಸಹಾಯವನ್ನು ಹೊರಗಡೆ ತೋರಿಸದೆ ಎಲ್ಲರೊಳಗೆ ಒಂದಾಗಿ ಬದುಕುತ್ತಿರುವ ಅವರು ಇಂದಿನ ಕಾರ್ಯಕ್ರಮಕ್ಕೆ ಆಗಮಿಸಿರುವುದು ಸಂತಸ ತಂದಿದೆ. ಅದೇ ರೀತಿ ಪ್ರಕಾಶ್ ಶೆಟ್ಟಿಯವರ ಪ್ರತೀ ಕಾರ್ಯದ ಹಿಂದೆ ಶ್ರೀಮತಿ ಆಶಾ ಪ್ರಕಾಶ್ ಶೆಟ್ಟಿ ಅವರ ಸ್ಫೂರ್ತಿ ತುಂಬುವ ವ್ಯಕ್ತಿತ್ವ ಇದೆ. ಅವರ ಪುತ್ರ ಗೌರವ್ ಅವರು ತಂದೆ ತಾಯಿಯ ಪ್ರೀತಿಯ ಪುತ್ರನಾಗಿ ಸರಳ ಸಜ್ಜನಿಕೆಯಿಂದ ಗುರುತಿಸಲ್ಪಡುತ್ತಿದ್ದಾರೆ. ಇಂತಹ ಪುಣ್ಯ ಕಾರ್ಯಕ್ಕೆ ಒತ್ತಾಸೆಯಾಗಿ ನಿಂತ ಪ್ರಕಾಶ್ ಶೆಟ್ಟಿಯವರ ಕುಟುಂಬಕ್ಕೆ ನಿಮ್ಮೆಲ್ಲರ ಹಾರೈಕೆಯಿರಲಿ“ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾಡಿ, “ಪ್ರಕಾಶ್ ಶೆಟ್ಟಿ ಅವರಂತಹ ಪುಣ್ಯಾತ್ಮನ ಜೊತೆಯಲ್ಲಿ ಇರುವುದೇ ನಮ್ಮ ಭಾಗ್ಯ. ಹುಟ್ಟುವಾಗ ಶ್ರೀಮಂತಿಕೆ ಇಲ್ಲದಿದ್ದರೂ ತಮ್ಮ ಕಾರ್ಯ ಸಾಧನೆಯಿಂದ ಹಂತಹಂತವಾಗಿ ಯಶಸ್ವಿ ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡು ಬಂದಿರುವ ಪ್ರಕಾಶ್ ಶೆಟ್ಟಿ ಅವರ ವ್ಯಕ್ತಿತ್ವ ನಮಗೆಲ್ಲ ಮಾದರಿ. ಅವರ ದಾನ ಧರ್ಮದ ಸಮಾಜಮುಖಿ ಕಾರ್ಯ ಇದೇ ರೀತಿ ಮುಂದುವರಿಯಲಿ“ ಎಂದರು.ಬಳಿಕ ವೇದಿಕೆಯಲ್ಲಿ ಶಿಕ್ಷಣ, ಮನೆ ನಿರ್ಮಾಣ, ವೈದ್ಯಕೀಯ ಚಿಕಿತ್ಸೆ, ವಿಶೇಷ ಚೇತನ ಮಕ್ಕಳು ಹಾಗೂ ಸಾಮಾಜಿಕ ಸಂಘಟನೆಗಳಿಗೆ ಸಾಂಕೇತಿಕವಾಗಿ “ನೆರವು” ಸಹಾಯಹಸ್ತವನ್ನು ವಿತರಿಸಲಾಯಿತು. ಅನುಷ್ಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವು ವಿತರಣೆ:ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗಿದ್ದು ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರತೀ ವರ್ಷದ ಶಿಷ್ಟಾಚಾರದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ. ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಉತ್ತೇಜನ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ. ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ. ವರ್ಷದಿಂದ ಈ ಮೊತ್ತ ಏರುತ್ತಾ ಹೋಗಿದೆ.ವರ್ಷದಿಂದ ವರ್ಷ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ, ಸಹಜವಾಗಿ ಮೊತ್ತವೂ ಹೆಚ್ಚಾಗಿದೆ. ಈ ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು ಕಾಸರಗೋಡು ಜಿಲ್ಲೆಗಳು. (ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯತೆಯ ಹಿನ್ನೆಲೆಯಲ್ಲಿ ಈ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ)ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳವರೆಗೆ ನೀಡಲಾಗಿದೆ, ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಮೊದಲಾದ್ಯತೆ ನೀಡಲಾಗಿದೆ.ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳವರೆಗೆ ನೆರವು ನೀಡಲಾಗಿದೆ.ವೈದ್ಯಕೀಯ ಪ್ರಕರಣಗಳಲ್ಲಿ ಅವಶ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ, ಹಿಮ್ಮಾಹಿತಿ ಪಡೆದು ನೆರವು ನೀಡಲಾಗಿದೆ.ಬಹುತೇಕ ಅರ್ಜಿಗಳು ವೈದ್ಯಕೀಯ ನೆರವನ್ನು ಕೋರಿದವುಗಳಾಗಿವೆ.ಸಂಘ ಸಂಸ್ಥೆಗಳ ಸಂದರ್ಭದಲ್ಲಿ ಅವುಗಳ ಚಟುವಟಿಕೆ ಸ್ವಚ್ಚತೆ ಕಾಪಾಡುವಿಕೆ, ಮಹಿಳಾ ಸಶಕ್ತೀಕರಣ, ಯುವಜನರ ಸಬಲೀಕರಣ, ಕೌಶಲ್ಯೀಕರಣ ಸಹಿತ ಸಾಮಾಜಿಕ ಪರಿವರ್ತನೆಗೆ ಅವುಗಳ ಕೊಡುಗೆಯನ್ನು ಗಮನಕ್ಕೆ ತೆಗೆದುಕೊಳ್ಳಲಾಗಿದೆ.ಚಿತ್ರಗಳು: ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ

ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆಗಳನ್ನು ಅಂದರೆ ಕ್ಯಾರೊಲ್ ಗಳನ್ನು ಸುಶ್ರಾವ್ಯವಾಗಿ ಪ್ರಸ್ತುತ ಪಡಿಸಲಾಯಿತು. ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಚಾರ್ಲ್ಸ್ ಡಿಮೆಲ್ಲೊ, ಲ್ಯಾನಿಶ್ ಡಿ ಸೋಜಾ, ಮಾರಿಯೋ ರೇಗೊ, ಮಿಶಲ್ ರೇಗೊ, ರೀಶಲ್ ಡಿ ಸೋಜಾ, ಜೋಯಲ್ ಫೆರ್ನಾಂಡಿಸ್, ಜೆಸಿಂತಾ ಕ್ರಾಸ್ತಾ, ಅಲೀಶಾ ಮೊಂತೇರೊ, ರೆ ನಿಶಾ ಡಿ ಸೋಜಾ, ಅಲಿಟಾ ಟೆಲ್ಲಿಸ್, ಈತನ್ ಮೊಂತೆರೋ, ಓಶಿನ್ ಮೊರಾಸ್, ಜನಿಶಾ ಫೆರ್ನಾಂಡಿಸ್, ಅಲ್ವೀರಾ ಮೊಂತೆರೋ, ಸ್ಟಾನ್ ಝಾ ಕ್ರಾಸ್ತಾ ಮತ್ತು ಎಲ್ದನ್ ಮೊಂತೆರೋ ಅವರು ಗಾಯನ ತಂಡದಲ್ಲಿದ್ದರು.

ಪ್ರಾದೇಶಿಕ ವಾರ್ತೆಗಳು

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು: ಎಡನೀರು ಶ್ರೀಗಳು

ಪುತ್ತೂರು: ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು.ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ. ನಾರಾಯಣ ಅವರು ಅಧ್ಯಕ್ಷತೆ ವಹಿಸಿದ್ದರು.ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ. ವಸಂತಕುಮಾರ ತಾಳ್ತಜೆ ವಿಶೇಷ ಉಪನ್ಯಾಸ ನೀಡಿದರು.ಪುತ್ತೂರು ಮಹಾವೀರ ಆಸ್ಪತ್ರೆಯ ಡಾ. ಸುರೇಶ್ ಪುತ್ತೂರಾಯ ಹಿರಿಯರಿಗೆ ಆರೋಗ್ಯ ಸಲಹೆಗಳನ್ನು ನೀಡಿದರು.ಸನ್ಮಾನ ಮತ್ತು ಗೌರವಾರ್ಪಣೆ : ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ ಪೂಂಜ,ಕರ್ನಾಟಕ ಸರಕಾರದಿಂದ ಕನಕ ಪ್ರಶಸ್ತಿ ಪುರಸ್ಕೃತರಾದ ತಾಳ್ತಜೆ ವಸಂತಕುಮಾರ ಇವರನ್ನು ಸನ್ಮಾನಿಸಲಾಯಿತು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೂ ಎ. ವಿ. ನಾರಾಯಣ,ಸಾಮಾಜಿಕ ಕಾರ್ಯಕರ್ತರಾದ ಸಿ.ಎಚ್ ಬಾಲಕೃಷ್ಣ ಶೆಟ್ಟಿ ಮಂಗಳೂರು ಮತ್ತು ಪ್ರೇಮಲತಾ ಟಿ.ರಾವ್ ಪುತ್ತೂರು, ಮಹಾಬಲ ರೈ ಒಳತಡ್ಕ ಇವರನ್ನು ಗೌರವಿಸಲಾಯಿತು.ಕೇಂದ್ರ ಸಮಿತಿ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ವಿವರವನ್ನು ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನೀಡಿದರು.ಸೇವಾ ಕೊಡುಗೆಗಳ ಹಸ್ತಾಂತರ : ಪ್ರತಿಷ್ಠಾನದ ಬಂಟ್ವಾಳ ಘಟಕದಿಂದ ಧೀರಜ್ ನಾಯ್ಕ್ ಪುಚ್ಛಕೆರೆ ಮಂಚಿ, ಗಣಪ ಪೂಜಾರಿ ಅಬ್ಬೆಟ್ಟು,ವಾಮನ ಪೂಜಾರಿ ಪರಂಗಿಪೇಟೆ ಮತ್ತು ಪುತ್ತೂರು ಘಟಕದಿಂದ ಹೊನ್ನಮ್ಮ ಬಲ್ನಾಡು ಇವರಿಗೆ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.ಸಂಚಾಲಕ ಭಾಸ್ಕರ ಬಾರ್ಯ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಮಂಗಳೂರು ಘಟಕದ ಅಧ್ಯಕ್ಷ ಭರತ್.ಕೆ , ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಉಜಿರೆ, ಬಂಟ್ವಾಳ ಘಟಕದ ಅಧ್ಯಕ್ಷ ಸುಬ್ರಾಯ ಮಡಿವಾಳ ಬಿ.ಸಿ ರೋಡು, ಪುತ್ತೂರು ಘಟಕದ ಜಿಲ್ಲಾ ಪ್ರತಿನಿಧಿ ಸಂಜೀವ ನಾಯಕ್ ಕಲ್ಲೇಗ, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರತಿಷ್ಠಾನದ ಟ್ರಸ್ಟಿಗಳಾದ ಲೋಕೇಶ್ ಹೆಗ್ಡೆ ಪುತ್ತೂರು, ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಅನಾರು ಕೃಷ್ಣಶರ್ಮ, ಪದಾಧಿಕಾರಿಗಳಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಕೆ.ರಾಮಕೃಷ್ಣ ನಾಯಕ್ ಬಂಟ್ವಾಳ, ಜಯಾನಂದ ಪೆರಾಜೆ, ವಸಂತ ಸುವರ್ಣ ಬೆಳ್ತಂಗಡಿ, ಕೆ.ವಾರಿಜ ಬೆಳ್ತಂಗಡಿ, ಚಂಚಲಾಕ್ಷಿ ಪುತ್ತೂರು, ಪ್ರೊ ವಿ. ಜಿ ಭಟ್ ಪುತ್ತೂರು,ಪದ್ಮಯ್ಯ, ರಾಜಮಣಿ ರಾಮಕುಂಜ,ಗಣೇಶ್ ಭಟ್ ಬೆಳ್ತಂಗಡಿ, ಗುಂಡ್ಯಡ್ಕ ಈಶ್ವರ ಭಟ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಡಾ.ಬಿ. ಎನ್ ಮಹಾಲಿಂಗ ಭಟ್ ಅಭಿನಂದನ ನುಡಿಗಳನ್ನಾಡಿದರು. ಸಹ ಸಂಚಾಲಕ ಪ್ರೊ. ವೇದವ್ಯಾಸ ರಾಮಕುಂಜ ಪ್ರಾರ್ಥಿಸಿದರು.ಟ್ರಸ್ಟಿ ದುಗ್ಗಪ್ಪ.ಎನ್ ಪುತ್ತೂರು ವಂದಿಸಿದರು. ಟ್ರಸ್ಟಿ ಜಯರಾಮ ಪೂಜಾರಿ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾಸ್ಕರ ಬಾರ್ಯ ಸಂಯೋಜನೆಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸದಸ್ಯರಿಂದ ಪಾರ್ಥಸಾರಥ್ಯ ತಾಳ ಮದ್ದಳೆ ಜರಗಿತು.

ಪ್ರಾದೇಶಿಕ ವಾರ್ತೆಗಳು

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು: ಎಡನೀರು ಶ್ರೀಗಳು

ಪುತ್ತೂರು: ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು.ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ. ನಾರಾಯಣ ಅವರು ಅಧ್ಯಕ್ಷತೆ ವಹಿಸಿದ್ದರು.ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ. ವಸಂತಕುಮಾರ ತಾಳ್ತಜೆ ವಿಶೇಷ ಉಪನ್ಯಾಸ ನೀಡಿದರು.ಪುತ್ತೂರು ಮಹಾವೀರ ಆಸ್ಪತ್ರೆಯ ಡಾ. ಸುರೇಶ್ ಪುತ್ತೂರಾಯ ಹಿರಿಯರಿಗೆ ಆರೋಗ್ಯ ಸಲಹೆಗಳನ್ನು ನೀಡಿದರು.ಸನ್ಮಾನ ಮತ್ತು ಗೌರವಾರ್ಪಣೆ : ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ ಪೂಂಜ,ಕರ್ನಾಟಕ ಸರಕಾರದಿಂದ ಕನಕ ಪ್ರಶಸ್ತಿ ಪುರಸ್ಕೃತರಾದ ತಾಳ್ತಜೆ ವಸಂತಕುಮಾರ ಇವರನ್ನು ಸನ್ಮಾನಿಸಲಾಯಿತು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೂ ಎ. ವಿ. ನಾರಾಯಣ,ಸಾಮಾಜಿಕ ಕಾರ್ಯಕರ್ತರಾದ ಸಿ.ಎಚ್ ಬಾಲಕೃಷ್ಣ ಶೆಟ್ಟಿ ಮಂಗಳೂರು ಮತ್ತು ಪ್ರೇಮಲತಾ ಟಿ.ರಾವ್ ಪುತ್ತೂರು, ಮಹಾಬಲ ರೈ ಒಳತಡ್ಕ ಇವರನ್ನು ಗೌರವಿಸಲಾಯಿತು.ಕೇಂದ್ರ ಸಮಿತಿ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ವಿವರವನ್ನು ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನೀಡಿದರು.ಸೇವಾ ಕೊಡುಗೆಗಳ ಹಸ್ತಾಂತರ : ಪ್ರತಿಷ್ಠಾನದ ಬಂಟ್ವಾಳ ಘಟಕದಿಂದ ಧೀರಜ್ ನಾಯ್ಕ್ ಪುಚ್ಛಕೆರೆ ಮಂಚಿ, ಗಣಪ ಪೂಜಾರಿ ಅಬ್ಬೆಟ್ಟು,ವಾಮನ ಪೂಜಾರಿ ಪರಂಗಿಪೇಟೆ ಮತ್ತು ಪುತ್ತೂರು ಘಟಕದಿಂದ ಹೊನ್ನಮ್ಮ ಬಲ್ನಾಡು ಇವರಿಗೆ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.ಸಂಚಾಲಕ ಭಾಸ್ಕರ ಬಾರ್ಯ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಮಂಗಳೂರು ಘಟಕದ ಅಧ್ಯಕ್ಷ ಭರತ್.ಕೆ , ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಉಜಿರೆ, ಬಂಟ್ವಾಳ ಘಟಕದ ಅಧ್ಯಕ್ಷ ಸುಬ್ರಾಯ ಮಡಿವಾಳ ಬಿ.ಸಿ ರೋಡು, ಪುತ್ತೂರು ಘಟಕದ ಜಿಲ್ಲಾ ಪ್ರತಿನಿಧಿ ಸಂಜೀವ ನಾಯಕ್ ಕಲ್ಲೇಗ, ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರತಿಷ್ಠಾನದ ಟ್ರಸ್ಟಿಗಳಾದ ಲೋಕೇಶ್ ಹೆಗ್ಡೆ ಪುತ್ತೂರು, ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಅನಾರು ಕೃಷ್ಣಶರ್ಮ, ಪದಾಧಿಕಾರಿಗಳಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಕೆ.ರಾಮಕೃಷ್ಣ ನಾಯಕ್ ಬಂಟ್ವಾಳ, ಜಯಾನಂದ ಪೆರಾಜೆ, ವಸಂತ ಸುವರ್ಣ ಬೆಳ್ತಂಗಡಿ, ಕೆ.ವಾರಿಜ ಬೆಳ್ತಂಗಡಿ, ಚಂಚಲಾಕ್ಷಿ ಪುತ್ತೂರು, ಪ್ರೊ ವಿ. ಜಿ ಭಟ್ ಪುತ್ತೂರು,ಪದ್ಮಯ್ಯ, ರಾಜಮಣಿ ರಾಮಕುಂಜ,ಗಣೇಶ್ ಭಟ್ ಬೆಳ್ತಂಗಡಿ, ಗುಂಡ್ಯಡ್ಕ ಈಶ್ವರ ಭಟ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಡಾ.ಬಿ. ಎನ್ ಮಹಾಲಿಂಗ ಭಟ್ ಅಭಿನಂದನ ನುಡಿಗಳನ್ನಾಡಿದರು. ಸಹ ಸಂಚಾಲಕ ಪ್ರೊ. ವೇದವ್ಯಾಸ ರಾಮಕುಂಜ ಪ್ರಾರ್ಥಿಸಿದರು.ಟ್ರಸ್ಟಿ ದುಗ್ಗಪ್ಪ.ಎನ್ ಪುತ್ತೂರು ವಂದಿಸಿದರು. ಟ್ರಸ್ಟಿ ಜಯರಾಮ ಪೂಜಾರಿ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಾಸ್ಕರ ಬಾರ್ಯ ಸಂಯೋಜನೆಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸದಸ್ಯರಿಂದ ಪಾರ್ಥಸಾರಥ್ಯ ತಾಳ ಮದ್ದಳೆ ಜರಗಿತು.

Scroll to Top