ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

NABL ಪ್ರಮಾಣಪತ್ರವು ಅಂತರಾಷ್ಟ್ರೀಯ ಮನ್ನಣೆ ಪಡೆದಿದೆ: ಶ್ರೀಕಾಂತ್

ಮೂಡುಬಿದಿರೆ: ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆಯು (ಎನ್‌ಎಬಿಎಲ್) ಜಾಗತಿಕವಾಗಿ ಪರಿಗಣಿಸಲ್ಪಡುವ ಮಾನದಂಡವಾಗಿದೆ. ಈ ಪ್ರಯೋಗಾಲಯದ ಫಲಿತಾಂಶಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಾಸಾರ್ಹವಾಗಿರುತ್ತದೆ ಎಂದು ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮಂಡಳಿ ನಿರ್ದೇಶಕ ಶ್ರೀಕಾಂತ್ ಆರ್ ಹೇಳಿದರು.ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಎಂಬಿಎ ಸೆಮಿನಾರ್ ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತೆ ಮತ್ತು ಅದರ ಪ್ರಯೋಜನಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎನ್‌ಎಬಿಎಲ್ ಮಾನ್ಯತೆಯ ಪ್ರಯೋಗಾಲಯಗಳು ದೃಢವಾದ ಗುಣಮಟ್ಟ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು ಸಹಕಾರಿಯಾಗಿವೆ. ಇದು ಪ್ರಯೋಗಾಲಯದ ಕಾರ್ಯಾಚರಣೆಗಳು, ಪರೀಕ್ಷೆಯ ನಿಖರತೆ ಮತ್ತು ಒಟ್ಟಾರೆ ಸೇವೆಯ ಗುಣಮಟ್ಟದಲ್ಲಿ ನಿರಂತರ ಸುಧಾರಣೆಗೆ ಕಾರಣವಾಗುತ್ತದೆ ಎಂದರು.ಮಾಪನಶಾಸ್ತç ವಿಷಯವು ಇಂದಿನ ಶೈಕ್ಷಣಿಕ ಪಠ್ಯಕ್ರಮದಲ್ಲಿ ಒಂದು ವಿಷಯವಾಗಿ ಅಧ್ಯಯನ ಮಾಡಲು ಮಾತ್ರ ಸೀಮಿತವಾಗಿದೆ. ಆದರೆ ಇದು ದುರದೃಷ್ಟಕರ. ಮಾಪನಶಾಸ್ತ್ರ ಅಥವಾ ಮಾಪನ ವಿಜ್ಞಾನವು ಕೈಗಾರಿಕಾ ಉತ್ಪಾದನೆ ಮತ್ತು ವೈಜ್ಞಾನಿಕ ಸಂಶೋಧನೆಯಿAದ ಹಿಡಿದು ಆರೋಗ್ಯ ರಕ್ಷಣೆ, ಪರಿಸರ ಸಂರಕ್ಷಣೆ ಮತ್ತು ಅಂತರರಾಷ್ಟ್ರೀಯ ವ್ಯಾಪಾರದವರೆಗೆ ಆಧುನಿಕ ಜೀವನದ ಪ್ರತಿಯೊಂದು ಅಂಶಗಳಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮಾಪನಗಳ ನಿಖರತೆ, ವಿಶ್ವಾಸಾರ್ಹತೆ ಮತ್ತು ಪತ್ತೆಹಚ್ಚುವಿಕೆ ತಾಂತ್ರಿಕ ಪ್ರಗತಿ ಮತ್ತು ಆರ್ಥಿಕ ಬೆಳವಣಿಗೆಗೆ ಅಡಿಪಾಯವಾಗಿದೆ ಎಂದರು.ಎನ್‌ಎಬಿಎಲ್‌ನ ಶ್ರೀರಾಮ್ ಪಿಣ್ಣಮ್ಮರಾಜು, ಗೋಪಿಕಾ ಮೋಹನನ್ ಕರ‍್ಯಗಾರವನ್ನು ನಡೆಸಿಕೊಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಾಲೇಜುಗಳ ಉಪನ್ಯಾಸಕರು ಕರ‍್ಯಗಾರದಲ್ಲಿ ಪಾಲ್ಗೊಂಡರು. ಕರ‍್ಯಕ್ರಮ ಸಂಯೋಜಕ ಡಾ ವಿನಯ್ ಇದ್ದರು.ಸಹಾಯಕ ಪ್ರಾಧ್ಯಪಕಿ ಡಾ ಸಾಕ್ಷಿ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ವ್ಯವಹಾರಗಳ ಡೀನ್ ಪ್ರೊ. ದುರ್ಗಾಪ್ರಸಾದ್ ಬಾಳಿಗ ಸ್ವಾಗತಿಸಿದರು. ಮ್ಯಾಕಾನಿಕಲ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಡಾ ಸತ್ಯನಾರಾಯಣ ವಂದಿಸಿದರು

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಕನ್ನಡ ಸಂಘದ ಕನ್ನಡ ಹಬ್ಬದಲ್ಲಿ ಡಾ. ಕೆ. ಚಿನ್ನಪ್ಪ ಗೌಡ. ‘ಕನ್ನಡದ ಬೆಳವಣಿಗೆಗೆ ತಂತ್ರಜ್ಞಾನದ ಕೊಡುಗೆ ಅತ್ಯವಶ್ಯ’

ಮಿಜಾರು: ‘ಇಂದಿನ ಡಿಜಿಟಲ್ ಕಾಲಘಟ್ಟದಲ್ಲಿ ಕನ್ನಡದ ಬೆಳವಣಿಗೆಗೆ ತಂತ್ರಜ್ಞಾನದ ಕೊಡುಗೆ ಅತ್ಯವಶ್ಯ ಹಾಗೂ ಅನಿವಾರ್ಯ’ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಕನ್ನಡ ಸಂಘವು ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಕನ್ನಡ ಹಬ್ಬ -2024’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕನ್ನಡ ಭಾಷೆಯ ಅಳಿವು- ಉಳಿವಿಗೆ ತಂತ್ರಜ್ಞಾನದ ಬಳಕೆಯೂ ಮಹತ್ತರವಾಗಿದೆ. ತಂತ್ರಜ್ಞಾನದ ಮೂಲಕ ಕನ್ನಡದ ವ್ಯಾಪ್ತಿ ಮತ್ತು ಸತ್ವವನ್ನು ಹೆಚ್ಚಿಸುವುದು ಹಾಗೂ ಕಂಪನ್ನು ಪಸರಿಸುವುದು ಬಹುಮುಖ್ಯವಾಗಿದೆ. ಭವಿಷ್ಯದ ಪೀಳಿಗೆಗೆ ಕನ್ನಡದ ಪ್ರಸ್ತುತತೆಯನ್ನು ಖಚಿತಪಡಿಸಬಹುದು ಎಂದರು.ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಟಣ ಮಾತನಾಡಿ, ಕನ್ನಡ ಭಾಷೆಯು ಆಳವಾದ ಅರ್ಥಗಳನ್ನು ಹೊಂದಿರುವ ಪದಗಳಿಂದ ಕೂಡಿದ ಸಮೃದ್ಧ ಭಾಷೆಯಾಗಿದೆ. ದೈನಂದಿನ ಸಂಬAಧಗಳು ಮತ್ತು ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಕನ್ನಡ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕನ್ನಡವು ನಮ್ಮ ಜೀವನದ ಹಾಗೂ ಸಂವಹನದ ಅವಿಭಾಜ್ಯ ಅಂಗ ಎಂದರು.ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ‘ಕನ್ನಡ ಮಾತನಾಡುವ ಜನರನ್ನು ಒಗ್ಗೂಡಿಸುವ ಶಕ್ತಿ ಆ ಭಾಷೆಯಲ್ಲಿದೆ. ಕನ್ನಡ ನಮ್ಮ ಆತ್ಮಭಾಷೆ, ಇಂಗ್ಲಿಷ್ ಕಾರ್ಯ ಭಾಷೆ ಎಂದರು.ವಿವಿಧ ಸ್ಪರ್ಧೆಗಳ ವಿಜೇತರ ಹೆಸರನ್ನು ಕನ್ನಡ ಸಂಘದ ಸಂಚಾಲಕರಾದ ಪ್ರೊ. ಗಣೇಶ್ ಆಚಾರ್ಯ ವಾಚಿಸಿದರು.ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ವೇಣುಗೋಪಾಲ ಶೆಟ್ಟಿ, ಕನ್ನಡ ಸಂಘದ ಸಂಚಾಲಕ ಡಾ.ಬಿ. ಗುರುಶಾಂತ ವಗ್ಗರ್, ವಿದ್ಯಾರ್ಥಿ ವ್ಯವಹಾರಗಳ ಡೀನ್ ಪ್ರೊ. ದುರ್ಗಾ ಪ್ರಸಾದ್ ಬಾಳಿಗಾ ಹಾಗೂ ವಿದ್ಯಾರ್ಥಿಗಳು ಇದ್ದರು. ಕನ್ನಡ ಸಂಘದ ವಿದ್ಯಾರ್ಥಿ ಸಂಚಾಲಕರಾದ ಸ್ಪಂದನಾ, ತೇಜಸ್, ಕನ್ನಡ ಸಂಘದ ವಿದ್ಯಾರ್ಥಿ ಸಂಚಾಲಕರಾದ ಗಣೇಶ್ ಆಚಾರ್ಯ ವಂದಿಸಿದರು. ಸಭಾ ಕರ‍್ಯಕ್ರಮ ನಂತರ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದಿಂದ ಅವಲೋಕನ. ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್…’

ಮೂಡುಬಿದಿರೆ: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯAತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು.ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ. ತುಳು ಭಾಷಿಕರು ತುಳು ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು.‘ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕೃತಿ ಇದಾಗಿದ್ದು. ತುಳು ಸಾಹಿತ್ಯವು ಈ ಕೃತಿಯ ನಂತರ ತಿರುವು ಪಡೆದುಕೊಂಡಿದೆ ಎಂದರು.ವಾಣಿಜ್ಯ ವೃತ್ತಿಪರ ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಇದ್ದರು. ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನೀಶಾ ಶೆಟ್ಟಿ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

“ವಿದ್ಯಾರ್ಥಿಗಳ ಬದುಕಿನ ಅಡಿಪಾಯ ಶಿಕ್ಷಕರ ಶಿಕ್ಷಣ”

ವಿದ್ಯಾಗಿರಿ: ‘ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು’ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾದ (ಐಸಿಎಸ್‌ಐ) ಕೇಂದ್ರ ಸಮಿತಿ ಸದಸ್ಯ ಸಿ.ಎಸ್. ದ್ವಾರಕಾನಂದ್ ಹೇಳಿದರು.ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ‘ಶಿಕ್ಷಣ ತಜ್ಞರ ಸಶಕ್ತೀಕರಣ- ಶಿಕ್ಷಕರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು.ಇಷ್ಟಪಟ್ಟು ಓದಬೇಕು. ಕಷ್ಟ ಪಟ್ಟು ಓದುವ ಹಾಗೆ ಆಗಬಾರದು. ವಿದ್ಯಾರ್ಥಿಗಳಿಗೆ ಗುರಿ ಅತಿ ಮುಖ್ಯ. ಯಾವುದಕ್ಕಾಗಿ ಓದುತ್ತಿದ್ದೇವೆ ಎನ್ನುವ ಜ್ಞಾನ ನಿಮ್ಮಲ್ಲಿರಬೇಕು. ನಿಮ್ಮ ಸಮಯವನ್ನು ಓದಿಗೆ ಮೀಸಲಿಡಬೇಕು. ಇಷ್ಟ ಪಟ್ಟು ಕೆಲಸ ಮಾಡಿದಾಗ ಅದು ಕಷ್ಟ ವೆನಿಸುವುದಿಲ್ಲ’ ಎಂದರು.ಎಸ್. ಕೆ. ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪ್ರಜ್ವಲ್ ಆಚಾರ್ ಮಾತನಾಡಿ, ಶಿಕ್ಷಕರು ತುಂಬಾ ಸವಾಲುಗಳನ್ನು ಎದುರಿಸಬೇಕಾಗಿದೆ. ಶಿಕ್ಷಣ ನೀಡುವ ಜೊತೆಗೆ ತಂತ್ರಜ್ಞಾನಕ್ಕೆ ಸ್ಪಂದಿಸಬೇಕು. ನಾಳೆಯ ಸಮಾಜಕ್ಕೆ ನಾಯಕರನ್ನು ನೀಡುವ ದೊಡ್ಡ ಜವಾಬ್ದಾರಿ ಶಿಕ್ಷಕರ ಹೆಗಲ ಮೇಲೆ ಇದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಲಿಸಿದ ಶಿಕ್ಷಕರಿಗೆ ಕೃತಜ್ಞರಾಗಿರಬೇಕು. ಮೊದಲು ನಿಮ್ಮ ಯೋಚನೆ ಬದಲಾಯಿಸಿಕೊಳ್ಳಿ. ಎಲ್ಲಾ ಶಿಕ್ಷಣ ಕ್ಷೇತ್ರಕ್ಕೂ ಅದರದೇ ಆದ ವಿಶೇಷತೆ ಇದೆ ಎಂದರು.ಅರಿವು ಮೂಡಿಸುವ ಶಿಕ್ಷಕರೇ ವಿದ್ಯಾರ್ಥಿಗಳ ಭವಿಷ್ಯದ ನಿರ್ದೇಶಕರು. ವಿದ್ಯಾರ್ಥಿಗಳಲ್ಲಿ ಇರುವ ಸಾಮರ್ಥ್ಯವನ್ನು ಹುಡುಕಿ, ಎಚ್ಚರಿಸಿ ಎಲ್ಲಾ ಮನುಷ್ಯನಿಗೆ ಅವನದೇ ಆದ ಸಾಮರ್ಥ್ಯವಿದೆ ಎಂದರು.ಆಳ್ವಾಸ್(ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಬದಲಾವಣೆ ತರಲು ಶಿಕ್ಷಕರಿಗೆ ಸಾಧ್ಯ. ಸಮಾಜದ ಜವಾಬ್ದಾರಿ ಶಿಕ್ಷಣದಲ್ಲಿದೆ. ಅದು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷಣ ತಿಳಿಸುತ್ತದೆ ವಿದ್ಯಾರ್ಥಿಗಳನ್ನು ಸಮಾಜನ ಶ್ರೇಷ್ಠ ವ್ಯಕ್ತಿಯನ್ನಾಗಿಸುವ ಜವಾಬ್ದಾರಿ ಶಿಕ್ಷಕರದ್ದು ಎಂದರು.ಪುಸ್ತಕದ ವಿಚಾರ ತಿಳಿಸುವುದು ಮಾತ್ರ ನಿಮ್ಮ ಕೆಲಸವಲ್ಲ ಬದುಕಿನ ಬಗ್ಗೆ ಎಚ್ಚರಿಸುವುದು ಶಿಕ್ಷಕರು. ವಿದ್ಯಾರ್ಥಿ ತಪ್ಪು ದಾರಿ ಹಿಡಿದರೆ ತಿದ್ದುವುದು ಶಿಕ್ಷಕರ ಕರ್ತವ್ಯ ಎಂದರು.‘ಶಿಕ್ಷಕರ ಸಂಪನ್ಮೂಲ ಉನ್ನತೀಕರಣ’ ಕುರಿತು ಮಂಗಳೂರು ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಮನೋಜ್ ಲೂಯಿಸ್ ಹಾಗೂ ‘ಕಂಪೆನಿ ಸೆಕ್ರಟರೀಸ್‌ಯಾಗಿ ವೃತ್ತಿ ಜೀವನ ಮತ್ತು ಉದ್ಯೋಗ ಅವಕಾಶಗಳು’ ಕುರಿತು ಮಣಿಪಾಲ್ ಟೆಕ್ನಾಲಜಿಯ ಕಂಪೆನಿ ಸೆಕ್ರೆಟರಿ ಚಂದನಾ ಟಿಕೋಠಿ ಉಪನ್ಯಾಸ ನೀಡಿದರು. ಕರ‍್ಯಕ್ರಮದಲ್ಲಿ ಕಂಪೆನಿ ಸೆಕ್ರೆಟರಿಗಳಾದ ರಾಕೇಶ್ ನಾಯಕ್, ಸಂತೋಷ್ ಪ್ರಭು, ಸಿದ್ದೇಶ್ ಭಕ್ತ ಹಾಗೂ ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆಜಿ ಇದ್ದರು.ಸಹಾಯಕ ಪ್ರಾಧ್ಯಾಪಕಿ ಸಮನ್ ಸೈಯದ್ ಕಾರ್ಯಕ್ರಮ ನಿರೂಪಿಸಿದರು. ಅಪರ್ಣಾ ಕೆ ಸ್ವಾಗತಿಸಿದರು. ಸುಪ್ರೀತಾ ನಾಯಕ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಪತ್ರಕರ್ತರ ಸಮ್ಮೇಳನದ ಆಮಂತ್ರಣ ‌ಪತ್ರಿಕೆ ಬಿಡುಗಡೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ.5ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 5ನೇ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಶನಿವಾರ ಬಿಡುಗಡೆಗೊಳಿಸಿದರು.ಶಾಸಕ ಡಾ.ವೈ.ಭರತ್ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಡಾ ಆಯುಕ್ತೆನೂರ್ ಜಹರಾ ಖಾನಂ ಮುಖ್ಯ ಅತಿಥಿಗಳಾಗಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ .ಬಿ.ಎನ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ರೋಮ್ ನ ಕ್ರೈಸ್ತ ಸಂಘಟನೆಗಳಿಂದ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸನ್ಮಾನ.

ರೋಮ್: ‘ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೈದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. “ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು ಪಡೆಯುವ ಉನ್ನತ ಶಿಕ್ಷಣ ಮತ್ತು ನಿಮ್ಮ ಸೇವಾ ಮನೋಭಾವ, ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಲು ನಿಮಗೆ ಪ್ರೇರಣೆಯಾಗಲಿ” ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಇಟಲಿಯ ರೋಮ್ ನಲ್ಲಿರುವ ಕರ್ನಾಟಕ ಮೂಲದ ಕ್ರೈಸ್ತ ಸಂಘಟನೆಗಳ ಸದಸ್ಯರಿಗೆ ಕರೆ ನೀಡಿದರು. ಅಂತರ್ ರಾಷ್ಟ್ರೀಯ ಅಂತರ್ ಧರ್ಮೀಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರೋಮ್ ಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನಲ್ಲಿ ‘ಕೊಂಕಣಿ ಕುಟಾಮ್ ರೋಮ್’ ಮತ್ತು ‘ಕನ್ನಡಿಗರ ಒಕ್ಕೂಟ, ರೋಮ್’ ಇವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರು ಫಾದರ್ ಜಿಲ್ ಡಿಸೋಜಾ, ಯು.ಟಿ. ಖಾದರ್ ರವರ ಸೇವಾ ಸಾಧನೆಯನ್ನು ವಿವರಿಸಿದರು. ಫಾದರ್ ಜೋವಿನ್ ಸಿಕ್ವೆರಾರವರು ಕೊಂಕಣಿ ಸಂಘಟನೆ ಮತ್ತು ಫಾದರ್ ರಿಚಾರ್ಡ್ ಕನ್ನಡ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನ ರೆಕ್ಟರ್ ಫಾದರ್ ಜೋಸ್ ತಮ್ಮ ಸಂದೇಶ ನೀಡಿ ಶುಭ ಹಾರೈಸಿದರು. ಉಭಯ ಸಂಘಟನೆಗಳ ಪರವಾಗಿ ಖಾದರ್ ರವರನ್ನು ಸನ್ಮಾನಿಸಲಾಯಿತು. ಫಾದರ್ ಸೆಬಾಸ್ಟಿಯನ್ ಪ್ರಾರ್ಥನಾವಿಧಿ ನೆರವೇರಿಸಿದರು.ಕಾರ್ಯಕ್ರಮದ ಸಂಯೋಜಕ ಫಾದರ್ ಲೋರೆನ್ಸ್ ನೊರೊನ್ಹಾ ಸ್ವಾಗತಿಸಿದರು, ಸಹ ಸಂಯೋಜಕಿ ವ್ಯಾಟಿಕನ್ ಸಂವಹನ ವಿಭಾಗದ ಧರ್ಮಭಗಿನಿ ಸಿಸ್ಟರ್ ಕಾರ್ಮೆಲ್ ವಂದನಾರ್ಪಣೆಗೈದರು. ಫಾದರ್ ರೊಯ್ಸನ್ ಫೆರ್ನಾಂಡಿಸ್, ಹಿರ್ಗಾನ ಕಾರ್ಯಕ್ರಮವನ್ನುನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಅನಿಲ್ ಕುಮಾರ್ ಆಯ್ಕೆ.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಕಾಂಗ್ರೆಸ್ ನ ಯುವನಾಯಕ, ವಾರ್ಡ್ ನಂಬರ್ 12 ರ ಪಂಜಿಮೊಗರು ವಾರ್ಡ್ ನ ಕಾರ್ಪೊರೇಟರ್ ಅನಿಲ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ. ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಅಭಿಮತ

ಮಂಗಳೂರು: ಪರಸ್ಪರ ಉತ್ತಮ ಬಾಂಧವ್ಯ ಹಾಗೂ ಸೌಹಾರ್ದತೆಯ ವಾತಾವರಣ ಮೂಡಿಸಲು ಕ್ರೀಡೆ ಪೂರಕವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಸಮಯ ಮೀಸಲಿಡುವುದು ಅತೀ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದರು.ದಕ್ಷಿಣ ಕನ್ನಡ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಗುರುವಾರ ನಗರದ ನೆಹರು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಹಾಗೂ ಪತ್ರಕರ್ತರ ತಂಡದ ಸೌಹಾರ್ದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಘನತೆ ಕಾಪಾಡುವುದು ಎಲ್ಲರ ಕರ್ತವ್ಯ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿರಂತರ ಶ್ರಮ ವಹಿಸುತ್ತಿದ್ದಾರೆ. ಜಿಲ್ಲೆಯ ಮಾಧ್ಯಮಗಳು ಹಾಗೂ ಪ್ರಜ್ಞಾವಂತ ನಾಗರಿಕರು ಇಲಾಖೆಗೆ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ ರೈ, ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ಬಿ.ಪಿ.ದಿನೇಶ್ ಕುಮಾರ್, ಉಮೇಶ್ ಪಿ.,ಎಸಿಪಿಗಳಾದ ಮನೋಜ್ ಕುಮಾರ್, ಶ್ರೀಕಾಂತ್, ರವೀಶ್ ನಾಯಕ್, ನಜ್ಮಾ ಫಾರೂಕಿ, ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಉಪಸ್ಥಿತರಿದ್ದರು.ಪಂದ್ಯಾಟದಲ್ಲಿ ಪೊಲೀಸ್ ತಂಡ ಜಯಗಳಿಸಿತು. ಪೊಲೀಸ್ ತಂಡದ ಮನೋಜ್ ನಾಯಕ್ ಉತ್ತಮ ಬ್ಯಾಟ್ಸ್‌ಮನ್ ಹಾಗೂ ಸಾಗರ್ ಉತ್ತಮ ಬೌಲರ್ ವೈಯಕ್ತಿಕ ಪ್ರಶಸ್ತಿ ಪಡೆದರು.

ಪ್ರಾದೇಶಿಕ ವಾರ್ತೆಗಳು

ಇಸ್ಕಾನ್ ಕುಡುಪು ಕಟ್ಟೆ ವತಿಯಿಂದ ನಶಾ ಮುಕ್ತಿ ಅಭಿಯಾನಕ್ಕೆ ಚಾಲನೆ

ಇಸ್ಕಾನ್ ಕುಡುಪು ಕಟ್ಟೆ: ನಮಗೆ ತಿಳಿದಿರುವಂತೆ, ಅಂತಾರಾಷ್ಟ್ರೀಯ ಕೃಷ್ಣ ಭವನಂರಿತ ಸಂಘ(ಇಸ್ಕಾನ್) ಮಂಗಳೂರಿನ ನಿವಾಸಿಗಳಿಗೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ಕಾಲ ನೈತಿಕತೆ ಮತ್ತು ಸಂಸ್ಕೃತಿಯ ಹಾದಿಯಲ್ಲಿ ಮಾರ್ಗದರ್ಶನ ನೀಡುತ್ತಿದೆ. ಇತ್ತೀಚೆಗೆ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇಸ್ಕಾನ್ ಯೂತ್ ವಿಂಗ್ ಅನ್ನು ಅವರ ಯುವ ಪ್ರಭಾವದ ಉಪಕ್ರಮಗಳಿಗಾಗಿ ಶ್ಲಾಘಿಸಿದೆ. ಮತ್ತು ವ್ಯಸನ ಮತ್ತು ಮಾದಕ ದ್ರವ್ಯಗಳ ವಿಷಯದ ಕುರಿತು ಹೆಚ್ಚಿನ ಕಾರ್ಯಕ್ರಮಗಳನ್ನು ಮಾಡಲು ಎಂಒಯುಗೆ ಸಹಿ ಹಾಕಿದೆ. (https://pib.gov. in/Press ReleasePage.aspx?PRID=1979220). ಇತ್ತೀಚೆಗೆ ಕರ್ನಾಟಕದಲ್ಲಿ 30% ನಶಾ ವ್ಯಸನ ಪ್ರಕರಣಗಳಲ್ಲಿ ಮಂಗಳೂರು ಪ್ರಮುಖ ಪ್ರದೇಶವಾಗಿ ಹೊರಹೊಮ್ಮಿದೆ. ದಕ್ಷಿಣ ಕನ್ನಡ ಪ್ರದೇಶದಲ್ಲಿ ಹೆಚ್ಚಿದ ನಶಾ ದ್ರವ್ಯ ಸೇವನೆಯ ಬಗ್ಗೆ ಗೌರವಾನ್ವಿತ ಸಂಸದ ಶ್ರೀಮನ್ ಕ್ಯಾಪ್ಟನ್ ಬ್ರಜೇಶ್ ಚೌಟಾ ಅವರು ಮಂಗಳೂರಿಗರು ಧ್ವನಿ ಎತ್ತುತ್ತಿರುವುದನ್ನು ನಾವು ಗಮನಿಸಿದ್ದೇವೆ. ವಿದ್ಯಾರ್ಥಿಗಳು ಮತ್ತು ಸಮಾಜಕ್ಕೆ ಸಹಾಯ ಮಾಡುವ ಸಲುವಾಗಿ, ಇಸ್ಕಾನ್ ಕುಡುಪು ಕಟ್ಟೆಯ ಯುವ ಘಟಕವು ಮಂಗಳೂರಿನಲ್ಲಿ ನಶಾ ಮುಕ್ತಿ ಅಭಿಯಾನವನ್ನು ಪ್ರಾರಂಭಿಸಲು ಈ ಉಪಕ್ರಮವನ್ನು ಕೈಗೊಂಡಿದೆ. ನಶಾ ವ್ಯಸನದ ವಿರುದ್ಧ ಜಾಗೃತಿಯನ್ನು ಹೆಚ್ಚಿಸಲು ವಿವಿಧ ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಾವು ಯೋಜಿಸಿದ್ದೇವೆ. ನಾವು ಉಮಂಗ್ 3.0 : ಮೆಗಾ ಯೂತ್ ಫೆಸ್ಟಿವಲ್ ಅನ್ನು ಸಹ ಆಯೋಜಿಸುತ್ತಿದ್ದೇವೆ. ಇದು ಸಂಗೀತ ಮತ್ತು ಮೋಜಿನೊಂದಿಗೆ ಬುದ್ದಿವಂತಿಕೆಯನ್ನು ಹಂಚಿಕೊಳ್ಳಲು ವೇದಿಕೆಯಾಗಿದೆ. ವಿಶ್ವಪ್ರಸಿದ್ದ ಶ್ರೀಮನ್‌ ಅಮೋಫ್ ಲೀಲಾ ದಾಸ್ (ಉಪಾಧ್ಯಕ್ಷರು, ಇಸ್ಕಾನ್ ದೆಹಲಿ- ಪ್ರಸಿದ್ಧ ಯುವ ನಾಯಕ, ಪ್ರೇರಕ ಭಾಷಣಕಾರ, ಸಾಮಾಜಿಕ ಮಾಧ್ಯಮ ವ್ಯಕ್ತಿತ್ವ) ಅವರು ಈ ಕಾರ್ಯಕ್ರಮವನ್ನು ಅಲಂಕರಿಸಲಿದ್ದಾರೆ ಮತ್ತು ಇವರಿಂದ ಮಾರ್ಗದರ್ಶನದ ಜೊತೆಗೆ ಪ್ರವಚನ ನಡೆಯಲಿದೆ. ಜಾಗತಿಕವಾಗಿ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯ ಮೂಲವಾಗಿರುವುದರಿಂದ, ಅವರು IIT ಗಳು ಮತ್ತು IIM ಗಳು ಮತ್ತು ಬೃಹತ್ MNC ಗಳಲ್ಲಿ ಅತಿಥಿ ಭಾಷಣಕಾರರಾಗಿದ್ದಾರೆ ಮತ್ತು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ 100 ಮಿಲಿಯನ್ + ವೀಕ್ಷಣೆಗಳನ್ನು ಹೊಂದಿದ್ದಾರೆ. ಎಚ್.ಜಿ. ಪ್ರೇಮಾ ಭಕ್ತಿ ದಾಸ್ (ಕಾರ್ಯದರ್ಶಿ, ಇಸ್ಕಾನ್ ಕುಡುಪು ಕಟ್ಟೆ, ಮಂಗಳೂರು). ಎಚ್.ಜಿ. ದೇವಧರ್ಮ ದಾಸ್ (ಸದಸ್ಯ, ಯುವ ಘಟಕ) ಜೊತೆಗೆ ಭಾರತದಾದ್ಯಂತ 1200 ಕ್ಕೂ ಹೆಚ್ಚು ಯುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ನಮಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಮತ್ತೆ ಪ್ರಸಿದ್ಧ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಎಲ್ಲಾ ನಿವಾಸಿಗಳು ಇಸ್ಕಾನ್ ಕುಡುಪು ಕಟ್ಟೆಯನ್ನು ಸಂಪರ್ಕಿಸಿ ನೋಂದಾಯಿಸಬಹುದು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ (ಸ್ವಾಯತ್ತ) ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ‘ದೇಶದ ಸಂಸ್ಕೃತಿಯಲ್ಲಿ ಸಂವಿಧಾನದ ಬೇರು’

ವಿದ್ಯಾಗಿರಿ (ಮೂಡುಬಿದಿರೆ): ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ, ನಾಗರಿಕತೆ, ಸಂಸ್ಕೃತಿಯಲ್ಲಿದೆ. ನಮ್ಮದು ಅಪ್ಪಟ ದೇಶೀಯ, ಅಸಮಾನತೆ ನಿರ್ಮೂಲನೆಯ ಪರಿವರ್ತನಾಶೀಲ ಸಂವಿಧಾನ ಎಂದು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕಾನೂನು ಪೀಠದ ಪ್ರಾಧ್ಯಾಪಕ ಡಾ. ಪಿ. ಪುನೀತ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ `ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು ಎಂದರು.ಇತರರ ತಪ್ಪಿನಿಂದ ನೀವು ತಿದ್ದಿಕೊಳ್ಳಿ ಎಂದು ಚಾಣಕ್ಯ ಹೇಳಿದ್ದರು. ಜ್ಞಾನ ಎಲ್ಲೆಡೆಯಿಂದ ಬರಲಿ ಎಂದು ಋಗ್ವೇದ ಹೇಳಿದೆ. ಇದನ್ನು ಉಲ್ಲೇಖಿಸಿದ ಅಂಬೇಡ್ಕರ್, ಯಾವುದೇ ಉನ್ನತ ಮೌಲ್ಯಗಳನ್ನು ಅನುಕರಿಸುವುದು ಅಥವಾ ಅನುಸರಿಸುವುದು ತಪ್ಪಲ್ಲ ಎಂದು ಹೇಳಿದ್ದರು ಎಂದರು.ಸಂವಿಧಾನ ರಚನಾ ಸಮಿತಿಯಲ್ಲಿ ನಡೆದ ಚರ್ಚೆಯು ದೇಶದಲ್ಲಿ ನಡೆದ ಅತ್ಯುತ್ತಮ ಚರ್ಚೆ ಎಂದು ವಿವರಿಸಿದರು. ಸಂವಿಧಾನಗಳ ಸರಾಸರಿ ಜೀವಿತಾವಧಿ 17 ವರ್ಷವಾಗಿದೆ. ಆದರೆ, 76ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಭಾರತದ ಸಂವಿಧಾನ ಜಗತ್ತಿನ ಅತಿದೊಡ್ಡ ಮಾತ್ರವಲ್ಲ ಅತ್ಯುತ್ತಮ ಸಂವಿಧಾನ. 106 ತಿದ್ದುಪಡಿ ಆಗಿದ್ದರೂ ಸ್ಥಿರವಾಗಿದೆ ಎಂದರು.ಥಾಮಸ್ ಗಿನ್ಸ್ ಬರ್ಗ್ ನಡೆಸಿದ ಅಧ್ಯಯನದ ಪ್ರಕಾರ ಸಂವಿಧಾನದ ಸರಾಸರಿ ಜೀವಿತಾವಧಿ 17 ವರ್ಷ. ವಿಶ್ವದ 798 ಸಂವಿಧಾನ ವ್ಯವಸ್ಥೆಯನ್ನು ಅವರು ಅಧ್ಯಯನ ನಡೆಸಿದ್ದು, ಈ ಪೈಕಿ 192 ಮಾತ್ರ ಇನ್ನೂ ಅನುಷ್ಠಾನದಲ್ಲಿವೆ ಎಂದರು. ಈ ಪೈಕಿ ಜಗತ್ತಿನ ಶೇಕಡಾ 50 ಸಂವಿಧಾನಗಳು ಈಗಿಲ್ಲ. ಕೆಲವು ವರ್ಷಾಚರಣೆಯನ್ನೂ ಮಾಡಿಲ್ಲ. ಆದರೆ ಸಂವಿಧಾನ ರಚಿಸುವಾಗ ಅಮರ ಎಂಬ ಚಿಂತನೆ ಸಹಜ ಎಂದರು.ಸಂವಿಧಾನ 50 ವರ್ಷ ಬದುಕಿದರೆ, ಅದರ ಭವಿಷ್ಯ ಉತ್ತಮವಾಗಿರುತ್ತದೆ. ಅದು ಸ್ಪಟಿಕೀಕರಣಗೊಂಡು ಸದೃಢವಾಗುತ್ತದೆ ಎಂದರು. ನವೆಂಬರ್ 26 ದಿನವನ್ನು ಸಂವಿಧಾನದ ಅನುಷ್ಠಾನ ದಿನ ಎಂದು ಆಚರಿಸಲಾಗುತ್ತದೆ. ಆದರೆ, ಆ ದಿನವನ್ನು ಮೊದಲೇ ಕಾನೂನು ದಿನ ಎಂದು ಆಚರಿಸಲಾಗುತ್ತಿತ್ತು ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಮ್ಮ ಆಲೋಚನಾ ಕ್ರಮ ಬದಲಾಗಬೇಕಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗವನ್ನು ಸಮಾನಂತರವಾಗಿ ಕಾಣಬೇಕು ಎಂದರು.ಪ್ರಸ್ತುತ ಸಮಾಜದಲ್ಲಿ ಔದ್ಯೋಗಿಕ ಕೊರತೆಗಿಂತ ಹೆಚ್ಚಾಗಿ, ಬೇಡಿಕೆ ಅನುಗುಣವಾಗಿ ವಿಷಯ ಆಯ್ಕೆಯ ಸಮತೋಲನ ಆಗುತ್ತಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.ಶೈಕ್ಷಣಿಕ ವ್ಯವಸ್ಥೆಯಲ್ಲಿ ಜ್ಞಾನ ತುಂಬಿದ ಡಬ್ಬಗಳು ತೆರೆದುಕೊಳ್ಳಬೇಕು. ಸೀಮಿತ ದೃಷ್ಟಿಕೋನ ಬಿಟ್ಟು, ಅಂತರಶಿಸ್ತೀಯ ಅಧ್ಯಯನ ನಡೆಸಬೇಕು ಎಂದರು. ದೇಶದ ಬಹುತ್ವ ಬಹುಮುಖ್ಯ. ನಮ್ಮೆಲ್ಲರನ್ನು ಒಂದು ಮಾಡಿರುವುದು ದೇಶದ ಸಂವಿಧಾನ. ಸೀಮಿತ ಸಿದ್ಧಾಂತಗಳಿAದ ಹೊರಬನ್ನಿ ಎಂದರು.ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮಾನವೀಯತೆಯ ಅತ್ಯುತ್ತಮ ಮೌಲ್ಯಗಳನ್ನು ಹೊಂದಿದ ಸಂವಿಧಾನ ನಮ್ಮದು. ದಾಸ್ಯ, ಶೋಷಣೆ ಮುಕ್ತ ಸಮಾಜ ನೀಡಿದೆ ಎಂದರು. ಅಂದು, ಸತಿ ಪದ್ಧತಿ ಪರವಾಗಿಯೂ ಹೋರಾಡಿದ ಜನ ನಮ್ಮ ದೇಶದಲ್ಲಿ ಇದ್ದರು. ಆದರೆ, ಜನರ ಇಚ್ಛೆಯೇ ಜನರನ್ನು ಆಳಬೇಕು ಎಂದರು. ಗಿಡ ನೆಟ್ಟು ಬೆಳೆಸಿದವರಿಗೆ ಫಲ ದೊರೆಯಬೇಕು. ವೈಚಾರಿಕತೆ ಇದ್ದ ಸಮಾಜ ಮಾತ್ರ ಜನರನ್ನು ಬದುಕಲು ಬಿಡುತ್ತದೆ. ಇಲ್ಲದಿದ್ದರೆ ಅವಸಾನ ಸಹಜ ಎಂದರು.ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಡಿ, ಕುಲಸಚಿವ (ಶೈಕ್ಷಣಿಕ) ಡಾ.ಟಿ.ಕೆ.ರವೀಂದ್ರನ್ ಇದ್ದರು. ವಿದ್ಯಾರ್ಥಿನಿ ಅನುಷಾ ಮತ್ತು ಶ್ರೀವಲ್ಲಿ ಕಾರ್ಯಕ್ರಮ ನಿರೂಪಿಸಿದರು. ದಿಶಾ ಸ್ವಾಗತಿಸಿದರು. ರಕ್ಷಾ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.ತೇಜಸ್ವಿನಿ ವಂದಿಸಿದರು.

Scroll to Top