ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸುರತ್ಕಲ್ ಬಂಟರ ಸಂಘದಿಂದ ಸನ್ಮಾನ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಸುರತ್ಕಲ್ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅವರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಸಹನಾ ರಾಜೇಶ್ ರೈ, ಸವಿತಾ ಭವಾನಿ ಶಂಕರ್ ಶೆಟ್ಟಿ, ಕೇಸರಿ ಎಸ್ ಪೂಂಜ, ಪಟ್ಲ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಸಿ.ಎಸ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉತ್ತಮ ಸಾಧನೆಸಿ. ಎಸ್.ಇ.ಇ.ಟಿ ಪರೀಕ್ಷೆ ಫಲಿತಾಂಶ

ಮೂಡುಬಿದಿರೆ: ಐಸಿಎಸ್‌ಐ(IಅSI)2024 ನವೆಂಬರ್‌ನಲ್ಲಿ ನಡೆಸಿದ ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಕೀರ್ತನ್ ಎಸ್. ಶೆಟ್ಟಿ(126), ಪವಿತ್ರ ಪ್ರಭು(121), ಗಗನ್ ಟಿ.ವೈ (119), ಅದಿತಿ(119), ಗ್ಲೆನಿಶಾ ಎಸ್(115), ಯಶಸ್ ಆರ್(114), ಸೃಷ್ಟಿ ಎನ್ ಪೂಜಾರಿ(112), ಸೃಷ್ಟಿ ಅಶೋಕ್(108), ನಿಹಾರಿಕಾ ಎಸ್.ಎಂ(106), ಚಿನ್ಮಯಿ ಹೊಳ್ಳ(104), ಪ್ರಥ್ವಿಕ್ ಶೆಟ್ಟಿ(104), ಚಂದನಾ ವೈ(100), ನಿಶಿತಾ(100), ರಾಹುಲ್ ಹೆಚ್.ಎಸ್(100), ಶಿವಾತ್ಮಜ(100), ದೀಶ್ಮಾ(100), ಕಾವ್ಯ(100), ಸಂಜನಾ ವಿ(100), ವೀರವರ್ಧನ್ ರೆಡ್ಡಿ(100) ಮೊದಲ ಪ್ರಯತ್ನದಲ್ಲಿ ಉತ್ತಮ ಅಂಕದೊAದಿಗೆ ಉತ್ತೀರ್ಣರಾಗಿದ್ದಾರೆ.ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ,ಪ್ರಾಂಶುಪಾಲರು ಡಾ. ಕುರಿಯನ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮಹಮ್ಮದ್ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥಅಶೋಕ್ ಹಾಗೂ ಸಿ.ಎಸ್ ಸಂಯೋಜಕರು ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ದೇಶದ ಉನ್ನತಿಗೆ ಮಹಿಳೆಯ ಕೊಡುಗೆ ಅನನ್ಯ: ವಿವೇಕ್ ಆಳ್ವ

ಮೂಡುಬಿದಿರೆ: ಕೆಲವು ದೇಶಗಳು ಆರ್ಥಿಕವಾಗಿ ಹಿಂದುಳಿಯಲು ಮಹಿಳಾ ಉದ್ಯೋಗಿಗಳ ಪ್ರಮಾಣ ಕಡಿಮೆ ಪ್ರಮುಖ ಕಾರಣವಾಗಿದೆ. ಯಾವುದೇ ದೇಶ ಅಥವಾ ಸಂಸ್ಥೆ ಉನ್ನತಿಯನ್ನು ಕಾಣಲು ಮಹಿಳೆಯರ ಪಾತ್ರ ಮುಖ್ಯ. ಮಹಿಳೆಯರು ವಿವಿಧ ವೃತ್ತಿರಂಗಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ದೇಶದ ಪ್ರಗತಿಗೆ ಕಾಣಿಕೆ ನೀಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅಭಿಪ್ರಾಯಪಟ್ಟರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ ‘ಸಕ್ಷಮಾ’ದ ವತಿಯಿಂದ ಮಹಿಳಾ ಮಾನಸಿಕ ಆರೋಗ್ಯದ ಜಾಗೃತಿ ಕಾರ್ಯಕ್ರಮ ‘ಎಂಪವರ್‌ಹರ್’ ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ವಿವಿಧ ಸ್ತರದ ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದನ್ನು ಪ್ರೋತ್ಸಾಹಿಸಿಸುವ ಸಮಾಜ ನಮ್ಮದಾಗಬೇಕು ಎಂದರು. ಆಳ್ವಾಸ್ ಸಂಸ್ಥೆಯ ಯಶಸ್ಸಿನಲ್ಲಿ ಮಹಿಳೆಯರ ಪಾತ್ರ ಅನನ್ಯ. ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಶ್ರೇಷ್ಠತೆಯಿಂದ ನಿಭಾಯಿಸುವುದರಿಂದ ಸಂಸ್ಥೆಯ ಜೇಷ್ಠತೆ ಹೆಚ್ಚಿದೆ ಎಂದರು. ಮಹಿಳೆಯರು ವೃತ್ತಿ ಜೀವನ ಹಾಗೂ ಕೌಟುಂಬಿಕ ಜೀವನದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹಳ ಅವಶ್ಯ. ಇತ್ತೀಚಿನ ದಿನಗಳಲ್ಲಿ ವಿಭಕ್ತ ಕುಟುಂಬಗಳು ಕೂಡ ಮಾನಸಿಕ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿವೆ ಎಂದರು.ನAತರ ನಡೆದ ಉಪನ್ಯಾಸ ಕರ‍್ಯಕ್ರಮದಲ್ಲಿ ಉಡುಪಿಯ ಡಾ. ಪಿ ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ವೃತ್ತಿ ಜೀವನದ ಸಮತೋಲನ ಮತ್ತು ವೃತ್ತಿ ಜೀವನದಲ್ಲಿ ಮಹಿಳೆಯರ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಸಂಸ್ಥೆಯ ಮಹಿಳಾ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಗೃಹಿಣಿಯರಿಗೆ ಮತ್ತು ಮಹಿಳಾ ಉದ್ಯೋಗಿಗಳಿಗೆ ಹೋಲಿಸಿದರೆ ಮಹಿಳಾ ಉದ್ಯೋಗಿಗಳು ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಿರುತ್ತಾರೆ. ಮಹಿಳಾ ಉದ್ಯೋಗಿಗಳ ಮಾನಸಿಕ ಆರೋಗ್ಯವು ಸಂಸ್ಥೆಯ ಏಳಿಗೆಯ ಮೇಲೂ ಪರಿಣಾಮ ಬೀರಬಲ್ಲದು. ಮಹಿಳೆಯರಿಗೆ ವೃತ್ತಿ ಜೀವನ ಮತ್ತು ಕೌಟುಂಬಿಕ ಜೀವನವನ್ನು ಜೊತೆಯಲ್ಲೇ ಸಂಭಾಳಿಸಲು ಕಷ್ಟವಾದಾಗ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬಿರುತ್ತದೆ. ನಾವು ವೃತ್ತಿಯನ್ನು ನಿರ್ವಹಿಸುವ ರೀತಿಯಲ್ಲಿ ನಮ್ಮ ಮಾನಸಿಕ ಆರೋಗ್ಯ ನಿರ್ಧಾರವಾಗುತ್ತದೆ. ನಾವು ಮಾಡುವ ಕೆಲಸವನ್ನು ಖುಷಿಯಿಂದ ನಿರ್ವಹಿಸಿದಾಗ ಮಾನಸಿಕ ಸಮಸ್ಯೆಗಳು ತಗ್ಗುತ್ತದೆ ಎಂದರು. ಸಿಟ್ಟು, ಬೇಸರ, ದ್ವೇಷ, ಅಸಹನೆ, ಕೀಳರಿಮೆಗಳಂತಹ ಭಾವನೆಗಳು ಮಾನಸಿಕ ಅನಾರೋಗ್ಯಕ್ಕೆ ಕಾರಣವಾಗುತ್ತದೆ.ಭಾವನೆಗಳ ನಿಯಂತ್ರಣದಿAದ ಸಂತೋಷದಾಯಕ ಜೀವನ ಸಾಧ್ಯ. ನಮ್ಮ ಮುಖದಲ್ಲಿ ಚಿಂತೆಯ ಸುಕ್ಕು ಎಂದು ಮೂಡದಿರಲಿ. ಒತ್ತಡ ನಮ್ಮ ನಿರೀಕ್ಷೆಗಳ ಮತ್ತು ವಾಸ್ತವದ ನಡುವಿನ ವ್ಯತ್ಯಾಸವಾಗಿದೆ. ಒತ್ತಡ ಕಡಿಮೆಯಾದಾಗ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಶೇ.೯೮% ದುಗುಡಗಳು ನಿಜವಿರುವುದಿಲ್ಲ. ಆದರೆ ಮಿತವಾದ ಒತ್ತಡವು ವಾಸ್ತವವಾಗಿ ಕಾರ್ಯಕ್ಷಮತೆ ಮತ್ತು ದಕ್ಷತೆಯನ್ನು ಹೆಚ್ಚಿಸಬಲ್ಲದು ಎಂದರು. ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಮನೋವಿಜ್ಞಾನ ಉಪನ್ಯಾಸಕಿ ಸಾರ ಕ್ರಾಸ್ತ ವಿದ್ಯಾರ್ಥಿನಿಯರಲ್ಲಿ ಮಾನಸಿಕ ಯೋಗಕ್ಷೇಮದ ಕುರಿತು ಉಪನ್ಯಾಸ ನೀಡಿ ಕಲಿಕೆ, ಪರೀಕ್ಷೆ, ವೃತ್ತಿ ಜೀವನದ ಆಯ್ಕೆ, ಗೆಳೆತನ ಸಾಮಾಜಿಕ ಮಾಧ್ಯಮಗಳ ಪರಿಣಾಮ ವಿವರಿಸಿದರು. ಈಗಿನ ಯುವ ಜನಾಂಗ ಮತ್ತು ಹಿಂದಿನ ತಲೆಮಾರು ಹೀಗೆ ಭಿನ್ನವಾಗಿತ್ತು ಮತ್ತು ಇಂದಿನ ಸಮುದಾಯ ಎದುರಿಸತ್ತಿರುವ ತೊಂದರೆಗಳಾದ ಮೊಬೈಲ್ ಅವಲಂಬನೆ, ಸೃಜನಶೀಲತೆಯ ಕೊರತೆ, ತಮ್ಮನ್ನು ಸಮಾಜದಿಂದ ಪ್ರತ್ಯೇಕಿಸುವುದರ ಕುರಿತು ವಿವರಿಸಿದರು.ಮಾನಸಿಕ ಆರೋಗ್ಯವನ್ನು ಹತೋಟಿಯಲ್ಲಿಟ್ಟುಕೊಳ್ಳಲು ಮೆದುಳಿಗೆ ನೀಡಬೇಕಾದ ವಿಶ್ರಾಂತಿ, ಲಘು ನಿದ್ದೆ, ಸಕರಾತ್ಮಕ ಚಿಂತನೆಗಳು ಅಗತ್ಯ ಎಂದರು.ಕಾರ್ಯಕ್ರಮದಲ್ಲಿ ಸಕ್ಷಮ ಮಹಿಳಾ ಘಟಕದ ಮಾಸಿಕ ಇ-ಪೋಸ್ಟರ್- ‘ಶಿರೋಸ್’ ಬಿಡುಗಡೆ ಮಾಡಲಾಯಿತು.ಆಳ್ವಾ ಫಾರ್ಮಸಿಯ ಮುಖ್ಯ ನಿರ್ವಾಹಕಿ ಡಾ. ಗ್ರೀಷ್ಮ ಆಳ್ವ, ಮೂಡಬಿದಿರೆಯ ಮಹಿಳಾ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷೆ ಶೋಭಾ ಹೆಗ್ಡೆ, ಸಕ್ಷಮಾ ಘಟಕದ ಅಧ್ಯಕ್ಷೆ ಡಾ. ಮುಕಾಂಬಿಕಾ ಮತ್ತಿತರರು ಇದ್ದರು. ಪದವಿ ಪೂರ್ವ ಕಾಲೇಜಿನ ಅಧ್ಯಾಪಕಿ ಮಲ್ಲಿಕಾ ಎಂ. ಆರ್ ನಿರೂಪಿಸಿದರು. ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ನ ಉಪ ಪ್ರಾಂಶುಪಾಲೆ ಶ್ರೀವನಿತಾ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌. ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಳ್ವಾಸ್‌ನ ಪುರುಷರ ಹಾಗೂ ಮಹಿಳೆಯರ ಎರಡು ತಂಡ ಸಮಗ್ರ ಚಾಂಪಿಯನ್ಸ್. ಪ್ರತಿನಿಧಿಸಿದ 12 ಜನ ಆಟಗಾರರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು.

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಪುರುಷರ ತಂಡವು ನಾಲ್ಕನೇ ಭಾರಿ ಸಮಗ್ರ ತಂಡ ಪ್ರಶಸ್ತಿ ಪಡೆಯುತ್ತಿದ್ದರೆ, ಮಹಿಳೆಯರ ತಂಡವು ಮೂರನೇ ಬಾರಿ ಪ್ರಶಸ್ತಿ ಪಡೆದಿದೆ. ಮಂಗಳೂರು ವಿವಿ ಪ್ರತಿನಿಧಿಸಿದ ಪುರುಷರ ಹಾಗೂ ಮಹಿಳೆಯರ ತಂಡದಲ್ಲಿದ್ದ 12 ಜನ ಕ್ರೀಡಾಳುಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿದ್ದರೆ. ಪುರುಷರ ವಿಭಾಗದಲ್ಲಿ ಮಂಗಳೂರು ವಿವಿ 69 ಅಂಕಗಳೊAದಿಗೆ ಪ್ರಥಮ ಸ್ಥಾನ ಪಡೆದರೆ, ಮುಂಬೈ ವಿವಿ 71 ಅಂಕಗಳೊAದಿಗೆ ದ್ವಿತೀಯ ಸ್ಥಾನ, 83 ಅಂಕಗಳೊAದಿಗೆ ರಾಜಸ್ಥಾನ ವಿವಿ ತೃತೀಯ ಸ್ಥಾನ ಗಳಿಸಿತು.ಮಹಿಳಾ ವಿಭಾಗದಲ್ಲಿ ಮಂಗಳೂರು ವಿವಿ 33 ಅಂಕಗಳೊAದಿಗೆ ಪ್ರಥಮ, 46 ಅಂಕಗಳೊAದಿಗೆ ಮಹರ್ಷಿದಯನಂದ ವಿವಿಯು ದ್ವಿತೀಯ, ಕೋಲ್ಹಾಪುರದ ಶಿವಾಜಿ ಯುನಿವರ್ಸಿಟಿ 64 ಅಂಕಗಳೊAದಿಗೆ ತೃತೀಯ ಸ್ಥಾನ ಪಡೆಯಿತುಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್‌ನ ಬಸಂತಿಕುಮಾರಿ ದ್ವಿತೀಯ, ಸೋನಿಯಾ ತೃತೀಯ ಸ್ಥಾನ, ಜ್ಯೋತಿ ಒಂಬತ್ತನೇ ಸ್ಥಾನ, ದಿಶಾ ಬೋರ್ಸೆ ಹತ್ತೋಂಬತ್ತನೇ ಸ್ಥಾನ ಪಡೆದರುಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ನವರತನ್ ಎಂಟನೇ ಸ್ಥಾನ, ಗಗನ್ ಹದಿನೇಳನೆ ಸ್ಥಾನ, ರೋಹಿತ ಹದಿನೆಂಟನೇ ಸ್ಥಾನ, ಅಮನ್ ಕುಮಾರ್ ಇಪ್ಪತ್ತಾರನೇ ಸ್ಥಾನ ಪಡೆದರು.ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಸ್ ಸಹಯೋಗದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್ ಬುಧವಾರ ನಡೆಯಿತು. ಪುರುಷರ ಅಖಿಲ ಭಾರತಅಂತರ್ ವಿವಿ ಗುಡ್ಡಗಾಡು ಓಟವು ಉಪ್ಪಿನಂಗಡಿಯ ಪ್ರಧಮ ದರ್ಜೆಕಾಲೇಜಿನಲ್ಲಿ ಮಂಗಳವಾರ ಜರುಗಿತ್ತು.ಮಹಿಳಾ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ತಂಡಗಳಿಗೆ ಕ್ರಮವಾಗಿ 25,000, 15000 ಹಾಗೂ 10000 ನಗದನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯಿAದ ನೀಡಲಾಯಿತು.ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿವಿ ಕುಲಪತಿ ಡಾ ಪಿ ಎಲ್‌ಧರ್ಮ, ಸ್ಕೌಟ್ಸ್ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ದೈಹಿಕ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಮೂಡುಬಿದಿರೆ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಉಪಸ್ಥಿತರಿದ್ದರು. ಆಳ್ವಾಸ್ ಪದವಿ ಪೂರ್ವಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು

ಪ್ರಾದೇಶಿಕ ವಾರ್ತೆಗಳು

ಮುಂಬೈಯಲ್ಲಿ ಡಿ. 7 ರಂದು ವಿಶ್ವಬಂಟರ ಸಮಾಗಮ, ಕಟೀಲು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕಟೀಲು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಭುವನಾಭಿರಾಮ ಉಡುಪ, ಶರತ್ ಶೆಟ್ಟಿ, ಸಂತೋಷ್ ಶೆಟ್ಟಿ ಶೆಡ್ಡೆ, ರತ್ನಾಕರ ಶೆಟ್ಟಿ ಎಕ್ಕಾರ್, ಅಶೋಕ್ ಕುಮಾರ್ ಶೆಟ್ಟಿ ಮುಲ್ಕಿ , ಬಾಲಕೃಷ್ಣ ರೈ ಕೊಲ್ಲಾಡಿ, ಸಾಯಿನಾಥ ಶೆಟ್ಟಿ, ತೋನ್ಸೆ ಮನೋಹರ್ ಶೆಟ್ಟಿ, ದೇವಪ್ಪ ಶೆಟ್ಟಿ ಸಾಲೆತ್ತೂರು, ಅಮರೇಶ್ ಸಾಲೆತ್ತೂರು, ಅರವಿಂದ ರೈ, ಅಜಿತ್ ಶೆಟ್ಟಿ ಬಜಪೆ, ಹರೀಶ್ ಶೆಟ್ಟಿ ಬಜಪೆ, ಸಂದೀಪ್ ಶೆಟ್ಟಿ ಎಕ್ಕೂರು, ತೇಜಸ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಾಂಗಣ ನುಡಿಹಬ್ಬದಲ್ಲಿ ಕುಂಬಳೆ ಶ್ರೀಧರ ಸಂಸ್ಮರಣೆ – ಸಾಧಕರಿಗೆ ಸನ್ಮಾನ. ‘ಯಕ್ಷಗಾನದಲ್ಲಿ ಮಕ್ಕಳನ್ನು ತೊಡಗಿಸಿ’: ಸಿಎ ಶಾಂತರಾಮಶೆಟ್ಟಿ

ಮಂಗಳೂರು: ‘ಯಕ್ಷಗಾನದಲ್ಲಿ ನಮ್ಮ ಜೀವನ ಮೌಲ್ಯದ ಪಾಠವಿದೆ. ಆದ್ದರಿಂದ ಎಳೆಯ ಜನಾಂಗ ಅದರತ್ತ ಹೆಚ್ಚು ಆಸಕ್ತರಾಗುವ ಅಗತ್ಯವಿದೆ. ಕಲಿಯುವ ಮಕ್ಕಳನ್ನು ಶಾಲಾ ಹಂತದಲ್ಲೇ ಯಕ್ಷಗಾನದಲ್ಲಿ ತೊಡಗಿಸಲು ಪೋಷಕರು ಮುಂದಾಗಬೇಕು’ ಎಂದು ಭಾರತೀಯ ರೆಡ್ ಕ್ರಾಸ್ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಹೇಳಿದ್ದಾರೆ.ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಇವರು ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ12ನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಅಂಗವಾಗಿ 4ನೇ ದಿನದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಕೌಶಲ್ಯ ಕನ್ಸ್ಟ್ರಕ್ಷನ್ಸ್ ನ ಜಿ.ಸುಂದರ ಆಚಾರ್ಯ ಬೆಳುವಾಯಿ ಮುಖ್ಯ ಅತಿಥಿಯಾಗಿದ್ದರು. ಕುಂಬಳೆ ಯಕ್ಷಗಾನದ ಕಣ್ಣು: ಎಂ.ನಾ.ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅಗಲಿದ ಯಕ್ಷಗಾನದ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಅವರ ಸಂಸ್ಮರಣೆ ಜರಗಿತು. ಸಂಸ್ಮರಣಾ ಭಾಷಣ ಮಾಡಿದ ‘ಕಣಿಪುರ’ ಮಾಸಪತ್ರಿಕೆ ಸಂಪಾದಕ ಎಂ.ನಾ.ಚಂಬಲ್ತಿಮಾರ್ ಮಾತನಾಡಿ ‘ತೆಂಕುತಿಟ್ಟಿನ ಮೂಲನೆಲವಾದ ಕುಂಬ್ಳೆಯ ಹೆಸರನ್ನು ವರ್ತಮಾನದಲ್ಲಿ ಬೆಳಗಿಸಿ, ಮೆರೆಸಿದವರು ಕುಂಬ್ಳೆ ಸುಂದರ ರಾವ್ ಮತ್ತು ಶ್ರೀಧರ ರಾಯರು. ಅವರಿಬ್ಬರೂ ಅಗಲುವ ಮೂಲಕ ಕುಂಬ್ಳೆಯ ಹೆಸರನ್ನು ಮೆರೆಸಲು ಮತ್ತು ಮೆರೆಯಲು ಕುಂಬ್ಳೆಯಲ್ಲಿ ಕಲಾವಿದರೇ ಇಲ್ಲ! ಈ ಮೂಲಕ ಕುಂಬ್ಳೆಯ ಯಕ್ಷಗಾನದ ಕಣ್ಣುಗಳೆರಡೂ ಮಂಜಾಗಿವೆ’ ಎಂದರು.‘ದುರಂತ ಮತ್ತು ವಿಷಾದ ಎಂದರೆ ವರ್ತಮಾನದ ಕಲಾಭಿಮಾನಿಗಳಿಗೆ ಪಾರ್ತಿಸುಬ್ಬನೇ ಕುಂಬ್ಳೆಯವನೆಂದು ಗೊತ್ತಿಲ್ಲ. ಕುಂಬ್ಳೆ ಸೀಮೆಯೆಂದರೆ ಯಕ್ಷಗಾನದ ತವರು. ಅಲ್ಲಿನ ಕಲಾವಿದರನ್ನು ಈಗೀಗ ಕೇರಳದ ಕಲಾವಿದರೆಂದು ಗುರುತಿಸುವುದು ವಿಷಾದನೀಯ. ತುಳುವರು, ಕನ್ನಡಿಗರು ತಮ್ಮದೇ ನಾಡಿನ ಸಾಂಸ್ಕೃತಿಕ ಸೌರಭವನ್ನು ಮರೆಯುವುದು ವಿಷಾದಕರ’ ಎಂದು ಎಂ.ನಾ.ನುಡಿದರು. ವಾಸುದೇವ ಕೊಟ್ಟಾರಿ ಸಮ್ಮಾನ:‌ಸಮಾರಂಭದಲ್ಲಿ ಯಕ್ಷಾಂಗಣದ ಹಿರಿಯ ಸದಸ್ಯ, ಧಾರ್ಮಿಕ ಮುಂದಾಳು ಅಳಪೆ – ಕರ್ಮಾರ್ ಸತ್ಸಂಗ ಸಮಿತಿ ಸಂಚಾಲಕ ವಾಸುದೇವ ಆರ್. ಕೊಟ್ಟಾರಿ ಅವರನ್ನು ಯಕ್ಷಾಂಗಣದ ವತಿಯಿಂದ ಸನ್ಮಾನವಿತ್ತು ಗೌರವಿಸಲಾಯಿತು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ ಅವರನ್ನು ಅಭಿನಂದಿಸಿದರು.ಹರಿದಾಸ, ನ್ಯಾಯವಾದಿ ಮಹಾಬಲ ಶೆಟ್ಟಿ ಕೂಡ್ಲು, ಭಾರತೀಯ ರಿಸರ್ವ್ ಬ್ಯಾಂಕಿನ ನಿವೃತ್ತ ಮಹಾ ಪ್ರಬಂಧಕ ರಾಜಾರಾಮ್ ಶೆಟ್ಟಿ, ಮನವಳಿಕೆ ಗುತ್ತು; ಪದಾಧಿಕಾರಿಗಳಾದ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ರವೀಂದ್ರ ರೈ ಕಲ್ಲಿಮಾರು, ತೋನ್ಸೆ ಪುಷ್ಕಳ ಕುಮಾರ್, ಕರುಣಾಕರ ಶೆಟ್ಟಿ ಪಣಿಯೂರು, ಲಕ್ಷ್ಮೀನಾರಾಯಣ ರೈ ಹರೇಕಳ, ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ, ಸುಮಾ ಪ್ರಸಾದ್ ವೇದಿಕೆಯಲ್ಲಿದ್ದರು.‘ತ್ರಿಶಂಕು ಸ್ವರ್ಗ’ ತಾಳಮದ್ದಳೆ:ಬಳಿಕ ವಾಣೀವಿಲಾಸ ಯಕ್ಷಬಳಗ ಕಟೀಲು ಇವರಿಂದ ‘ತ್ರಿಶಂಕು ಸ್ವರ್ಗ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಭಾಗವತರಾಗಿ ರವಿಕೃಷ್ಣ ದಂಬೆ, ಹಿಮ್ಮೇಳದಲ್ಲಿ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ, ರಾಮ ಹೊಳ್ಳ ಭಾಗವಹಿಸಿದರು. ಸರ್ಪಂಗಳ ಈಶ್ವರ ಭಟ್, ವಿನಯಾಚಾರ್ ಹೊಸಬೆಟ್ಟು, ಪಶುಪತಿ ಶಾಸ್ತ್ರಿ ಶಿರಂಕಲ್ಲು, ಉಮೇಶ ನೀಲಾವರ ಅರ್ಥಧಾರಿಗಳಾಗಿದ್ದರು.

ಪ್ರಾದೇಶಿಕ ವಾರ್ತೆಗಳು

‘ಕಲಾ ಪರ್ಬ’ದ ಲಾಂಛನ ಬಿಡುಗಡೆ

ಮಂಗಳೂರು: ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ ಪಾರ್ಕ್‌ನ ಒಳಗೆ ವಿವಿಧ ಕಲಾ ಚಟುವಟಿಕೆಗೆ ಅವಕಾಶ ಕಲ್ಪಿಸಲು 1 ಕೋಟಿ ರೂ. ಮೀಸಲಿಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಕಲಾಪರ್ಬ ಸಹಿತ ವಿವಿಧ ಕಲಾ ಚಟುವಡಿಕೆಗಳಿಗೆ ಪೂರಕವಾಗುವ ಕಾರ್ಯ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ಈ ಸಂದರ್ಭ ತಿಳಿಸಿದರು.ಸಂಘಟಕ ಪುನೀಕ್ ಶೆಟ್ಟಿ ಮಾತನಾಡಿ, ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಹಾಗೂ ತನ್ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶದಿಂದ ಕಲಾ ಪರ್ಬ ಆಯೋಜಿಸಲಾಗುತ್ತಿದೆ .ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ, 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಶರಧಿ ಪ್ರತಿಷ್ಟಾನದ ಮಾರ್ಗದರ್ಶಕ ರಮೇಶ್ ನಾಯಕ್, ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಚಿತ್ರ ಕಲಾವಿದರಾದ ಕೋಟಿಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ, ರಾಜೇಂದ್ರ ಕೇದಿಗೆ, ಶ್ರೀಧರ ಹೊಳ್ಳ, ರಾಧಾಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು. ಚಿತ್ರ ಕಲಾವಿದ ದಿನೇಶ್ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ

ಪಡುಬಿದ್ರಿ: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು ವಿಶ್ವದಗಲ ಮೆಚ್ಚಿಕೊಂಡ ಅಸಂಖ್ಯ ಜನರಿದ್ದಾರೆ. ತುಳು ಭಾಷೆಯ ಬೆಳವಣಿಗೆಗೆ ತುಳು ನಾಟಕ, ಸಿನಿಮಾ ಮತ್ತು ತುಳು ಕಲಾವಿದರು ಬಹಳಷ್ಟು ಪ್ರಯತ್ನ ಪಡುತ್ತಿದ್ದಾರೆ. ಪಡುಬಿದ್ರಿಯ ಮಹಾಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರೆ ನಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಈ ಸಿನಿಮಾ ಯಶಸ್ಸು ಕಾಣಲಿ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತೀವ ಸಂತಸವಾಗುತ್ತಿದೆ“ ಎಂದು ಶುಭ ಹಾರೈಸಿದರು.ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ”ತುಳು ಚಿತ್ರರಂಗಕ್ಕೆ ಈಗ ಪರ್ವಕಾಲ. ಮಂಗಳೂರಿನಲ್ಲಿ 9 ಸಿನಿಮಾಗಳಿಗೆ ಚಿತ್ರೀಕರಣ ನಡೆಯುತ್ತಿವೆ. ಒಳ್ಳೊಳ್ಳೆ ಸಿನಿಮಾಗಳನ್ನು ಜನರು ಖಂಡಿತ ಸ್ವೀಕರಿಸುತ್ತಾರೆ. ಸಿನಿಮಾ ತಂಡದ ಪ್ರಯತ್ನಕ್ಕೆ ತುಳುವರು ಬೆಂಬಲ ನೀಡಬೇಕು, ಚಿತ್ರತಂಡಕ್ಕೆ ಶುಭವಾಗಲಿ“ ಎಂದರು.ಕುಸೆಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿ, ”ಸಿನಿಮಾ ಯಶಸ್ಸು ಕಾಣಲಿ. ತುಳುನಾಡಿನಲ್ಲಿ ಸಿನಿಮಾ ಒಳ್ಳೆಯ ಹೆಸರು ಮಾಡಲಿ“ ಎಂದರು. ನಾಯಕ ನಟ ಶೋಧನ್ ಶೆಟ್ಟಿ ಮಾತನಾಡಿ, ”2019ರಲ್ಲಿಯೇ ಸಿನಿಮಾ ಮಾಡಲು ತಯಾರಿ ಮಾಡಿದ್ದೆ. ಆದರೆ ಕಾರಣಾಂತರದಿಂದ ವಿಳಂಬವಾಯಿತು. ಈಗ ಕಾಲ ಕೂಡಿಬಂದಿದೆ. ನಿಮ್ಮೆಲ್ಲರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿಬರಲಿದೆ. ಭಾಗ 1ರ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಲಾಂಚ್ ಮಾಡಲಿದ್ದೇವೆ“ ಎಂದರು.ದೇವಸ್ಥಾನದ ಮೊಕ್ತೇಸರ ಭವಾನಿ ಶಂಕರ್ ಹೆಗ್ಡೆ, ಉಮೇಶ್ ಶೆಟ್ಟಿ, ನಟ ಶೋಧನ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಡಾ ಪ್ರತೀಕ್ಷಾ, ಡಾ ನಿಖಿಲ್ ಶೆಟ್ಟಿ, ಸಂಜಯ್ ಶೆಟ್ಟಿ ಗೋಣಿಬೀಡು, ಡಾ ವೈಎನ್ ಶೆಟ್ಟಿ, ಮಿಥುನ್, ನವೀನ್ ಚಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಕುಳಾಯಿ, ವಿಠಲ್ ಶೆಟ್ಟಿ, ಶಾಂತಾರಾಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಉದ್ಯಮಿ ಪಲ್ಲವಿ ಸಂತೋಷ್ ಶೆಟ್ಟಿ ಕೆಮರಾ ಚಾಲನೆ ಮಾಡಿದರು.ಶಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.ಸಿನಿಮಾ ಕುರಿತು:ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು ಸಂದೀಪ್ ಉಡುಪಿ ಕೆಮರಾ ಕಣ್ಣಲ್ಲಿ ಸಿನಿಮಾ ಮೂಡಿಬರಲಿದೆ.ರವಿರಾಜ್ ಗಾಣಿಗ ಎಡಿಟರ್, ಪ್ರಸಾದ್ ಕೆ.ಶೆಟ್ಟಿ ಸಂಗೀತ ಸಂಯೋಜನೆ ಸಿನಿಮಾಕ್ಕಿರಲಿದೆ.ಕಲಾವಿದರಾಗಿ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ರಮೇಶ್ ಶೆಟ್ಟಿ, ಸೂರಜ್ ಸನಿಲ್, ನಿತೇಶ್ ಶೆಟ್ಟಿ, ಕೀರ್ತನಾ ಸಾಲಿಯಾನ್, ಶೋಭಾ ಪ್ರಿಯಾ ನಾಯರ್, ಸಂದೀಪ್ ಪೂಜಾರಿ ಬಣ್ಣ ಹಚ್ಚಲಿದ್ದಾರೆ.ಕಟೀಲು, ಪಡುಬಿದ್ರಿ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಪ್ರಾದೇಶಿಕ ವಾರ್ತೆಗಳು

ತಾಳಮದ್ದಳೆ ಸಪ್ತಾಹ ಸಮಾರೋಪ – ಕೆ.ಎಸ್.ಮಂಜುನಾಥರಿಗೆ ಯಕ್ಷಾಂಗಣ ಪ್ರಶಸ್ತಿ. ‘ಕಲೆಯಿಂದ ಬದುಕಿಗೆ ಮೌಲ್ಯ’: ಚಿತ್ತರಂಜನ್ ಬೋಳಾರ

ಮಂಗಳೂರು: ‘ಕಲಾವಿದ ತನ್ನ ನೈಪುಣ್ಯವನ್ನು ವ್ಯಾವಹಾರಿಕ ದೃಷ್ಟಿಯಿಂದ ನೋಡದೆ ಕಲೆಯ ಶ್ರೀಮಂತಿಕೆ ಹೆಚ್ಚಿಸಲು ಪ್ರಯತ್ನಿಸಬೇಕು. ಕಲೆ ತನ್ನ ಬದುಕಿಗೆ ಮೌಲ್ಯ ತಂದು ಕೊಟ್ಟಿದೆ ಎಂಬ ವಿನಯದಿಂದ ಅದನ್ನು ಆರಾಧಿಸಿದರೆ ಹೆಸರು, ಖ್ಯಾತಿ ತಾನಾಗಿ ಬರುತ್ತದೆ’ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ ಹೇಳಿದ್ದಾರೆ. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುತ್ತಿದ್ದ 12ನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ದ ಸಮಾರೋಪ ಸಮಾರಂಭದಲ್ಲಿ ನವೆಂಬರ್ 17ರಂದು ದೀಪ ಪ್ರಜ್ವಲನೆ ಮಾಡಿ ಅವರು ಮಾತನಾಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕರ್ನಾಟಕ ಬ್ಯಾಂಕ್ ಮಹಾಪ್ರಬಂಧಕಿ ಸುಮನಾ ಘಾಟೆ ‘ಗಾನ,ನೃತ್ಯ, ಮಾತು, ಬಣ್ಣ ಗಾರಿಕೆ ಹಾಗೂ ವೇಷಭೂಷಣಗಳಿಂದ ರಂಜಿಸುವ ಯಕ್ಷಗಾನ ಕಲೆ ಕರಾವಳಿಯ ಹೆಮ್ಮೆ. ಅದರಲ್ಲೂ ತಾಳಮದ್ದಳೆಗೆ ಮಾತೇ ಬಂಡವಾಳ. ಶಾಸ್ತ್ರಾರ್ಥ ಮತ್ತು ಪುರಾಣ ಜ್ಞಾನಗಳಿಂದ ಮೇಳೈಸಿ ಕಲಾವಿದರು ತಮ್ಮ ಗತ್ತು, ಗಾಂಭೀರ್ಯ ಮತ್ತು ಸ್ವರ ಸಾಮರ್ಥ್ಯದಿಂದ ಪುರಾಣ ಜಗತ್ತನ್ನು ಸಾಕಾರಗೊಳಿಸುತ್ತಾರೆ’ ಎಂದರು. ಉದ್ಯಮಿ ಎ.ಕೆ.ಜಯರಾಮ ಶೇಖ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಶಸ್ತಿ ಪ್ರದಾನ :ಹವ್ಯಾಸಿ ಯಕ್ಷಗಾನ ಭಾಗವತ, ಪ್ರಸಂಗಕರ್ತ ಹಾಗೂ ವಚನ ಸಾಹಿತಿ ಕೆ.ಎಸ್. ಮಂಜುನಾಥ ಶೇರಿಗಾರ್ ಹರಿಹರಪುರ ಅವರಿಗೆ 2024ನೇ ಸಾಲಿನ ಯಕ್ಷಾಂಗಣ ಗೌರವ ಪ್ರಶಸ್ತಿ – 2024 ನೀಡಿ ಸತ್ಕರಿಸಲಾಯಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡಿದರು. ‘ತಾಳಮದ್ದಳೆ ಸಪ್ತಾಹವನ್ನು ಒಂದು ಜ್ಞಾನಸತ್ರದಂತೆ ವರ್ಷಂಪ್ರತಿ ನವೆಂಬರ್ ತಿಂಗಳಲ್ಲಿ ನಡೆಸುತ್ತಿರುವ ಯಕ್ಷಾಂಗಣ ನಿಜವಾದ ಕನ್ನಡದ ನುಡಿ ಸೇವೆ ಮಾಡುತ್ತಿದೆ’ ಎಂದವರು ಶ್ಲಾಘಿಸಿದರು.ಯಕ್ಷಾಂಗಣದ ಕಾರ್ಯಾಧ್ಯಕ್ಷ ಹಾಗೂ ಕರ್ನಾಟಕ ಯಕ್ಷ ಭಾರತಿ ಸಂಚಾಲಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ತಮ್ಮ ಸ್ವಾಗತ ಭಾಷಣದಲ್ಲಿ ದ್ವಾದಶ ಸರಣಿಯ ನುಡಿಹಬ್ಬ ತಾಳಮದ್ದಳೆ ಸಪ್ತಾಹದ ಯಶಸ್ಸಿನಲ್ಲಿ ವಿಶೇಷ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿ ಸನ್ಮಾನಿತ ಮಂಜುನಾಥರನ್ನು ಅಭಿನಂದಿಸಿ ಮಾತನಾಡಿದರು. ಯಕ್ಷಾಂಗಣದ ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಂಚಾಲಕ ರವೀಂದ್ರ ರೈ ಕಲ್ಲಿಮಾರು ವಂದಿಸಿದರು. ಉಪಾಧ್ಯಕ್ಷ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ಕಾರ್ಯದರ್ಶಿಗಳಾದ ಕೆ.ಲಕ್ಷ್ಮೀನಾರಾಯಣ ರೈ ಹರೇಕಳ, ಸುಮಾ ಪ್ರಸಾದ್, ಸಂಚಾಲಕಿ ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ ಹಾಗೂ ಪದಾಧಿಕಾರಿಗಳಾದ ಸಿದ್ಧಾರ್ಥ ಅಜ್ರಿ, ರಾಜಾರಾಮ ಶೆಟ್ಟಿ, ದಾಸಪ್ಪ ಶೆಟ್ಟಿ ಬೆಳ್ಳಾರೆ ಉಪಸ್ಥಿತರಿದ್ದರು. ‘ಸತೀ ಶಕುಂತಳೆ’ ತಾಳಮದ್ದಳೆ :ಸಪ್ತಾಹದ ಕೊನೆಯ ಕಾರ್ಯಕ್ರಮವಾಗಿ ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಇವರಿಂದ ‘ಸತೀ ಶಕುಂತಳೆ’ ಯಕ್ಷಗಾನ ತಾಳಮದ್ದಳೆ ಜರಗಿತು. ಕೂಡ್ಲು ಮಹಾಬಲ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಗಣರಾಜ ಕುಂಬಳೆ, ಹರೀಶ ಬಳಂತಿಮೊಗರು, ರಮೇಶ ಸಾಲ್ವಣ್ಕರ್, ಉಮೇಶ ಆಚಾರ್ಯ ಗೇರುಕಟ್ಟೆ, ದಿನೇಶ್ ಶೆಟ್ಟಿ ಅಳಿಕೆ, ಕೆ‌.ಎಸ್. ಮಂಜುನಾಥ್, ವಿಜಯಶಂಕರ ಆಳ್ವ ಮಿತ್ತಳಿಕೆ, ಆಜ್ಞಾ ಸೋಹಂ ವರ್ಕಾಡಿ ವಿವಿಧ ಪಾತ್ರಗಳಲ್ಲಿ ಅರ್ಥವಾದಿಗಳಾಗಿ ಭಾಗವಹಿಸಿದರು. ಪ್ರಶಾಂತ ರೈ ಪುತ್ತೂರು ಅವರ ಭಾಗವತಿಗೆ ಕೋಳ್ಯೂರು ಭಾಸ್ಕರ, ಹರಿಶ್ಚಂದ್ರ ನಾಯಗ ಮಾಡೂರು ಮತ್ತು ಸತ್ಯಜಿತ್ ರಾವ್ ರಾಯಿ ಹಿಮ್ಮೇಳದಲ್ಲಿ ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾಜಿ ಸಚಿವ ಬಿ. ರಮಾನಾಥ ರೈಯವರ ನೇತೃತ್ವದಲ್ಲಿ ಪಾಣೆ ಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ.

ಪಾಣೆಮಂಗಳೂರು: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ರವರ ನೇತೃತ್ವದಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿರವರ ಜನ್ಮದಿನಾಚರಣೆಯು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಜನ್ಮದಿನಾಚರಣೆಯ ಅಂಗವಾಗಿ ಮಾಜಿ ಸಚಿವ ಬಿ.ರಮಾನಾಥ ರೈ ರವರು ಭಾರತ್ ಸೇವಾಶ್ರಮ ಕನ್ಯಾನ ಇಲ್ಲಿಗೆ ದಿನಬಳಕೆ ಸಾಮಗ್ರಿಯನ್ನು ಹಾಗೂ ಆರ್ಥಿಕ ಸಹಾಯವನ್ನು ಹಸ್ತಾಂತರಿಸಿದರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ಪೂಜಾರಿರವರು ಅಗಮಿಸಿದ ನಾಯಕರನ್ನು ಸ್ವಾಗತಿಸಿ ಪ್ರಸ್ತಾವಿಕ ಮಾತನ್ನಾಡಿದರು.ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಚಂದ್ರಶೇಖರ್ ಭಂಡಾರಿ,ಸಂಜೀವ ಪೂಜಾರಿ ಬಿರ್ವ,ಅಬ್ಬಾಸ್ ಆಲಿ ,ಬೇಬಿ ಕುಂದರ್,ಚಿತ್ತರಂಜನ್ ಶೆಟ್ಟಿ, ವಾಸು ಪೂಜಾರಿ,ಐಡಾ ಸುರೇಶ್,ಮಲ್ಲಿಕಾ ಶೆಟ್ಟಿ, ಜೋಸ್ಪನ್ ಡಿ.ಸೋಜಾ ,ಪೌಝಿಯಾ,ಮಂಜುಳಾ ಕುಶಾಲ ಪೆರಾಜೆ,ರೇಷ್ಮಾ ಟೆಲ್ಲಿಸ್, ಶೈಲಜಾ ರಾಜೇಶ್,ಆಯಿಚಾ,ಆಶಿಫಾ,ವಸಂತಿ ನೆಟ್ಲ,ಉಪಸ್ಥರಿದ್ದರು.

Scroll to Top