ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

Tv5 ವಿಡಿಯೋ ಜರ್ನಲಿಸ್ಟ್ ವಿರೇಶ್ ಕಡ್ಡಿಕೊಪ್ಲ ನಿಗೂಢ ಸಾವಿನ ಪ್ರಕರಣ ತನಿಖೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್. ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಗದಗ ಎಸ್. ಪಿ ಗೆ ಸೂಚನೆ.

Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ವಿರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಹಲವಾರು ಅನುಮಾನ ಗಳು ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪರವಾಗಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್ ಗದಗ ಎಸ್ ಪಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಿರೇಶ್ ನಿಗೂಢ ಸಾವಿನ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯಾಸತ್ಯತೆ ಅರಿಯಲು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸೂಚನೆ ನೀಡಿದರು.ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ಶೆಟ್ಟಿ, ಸಂದೇಶ್ ಜಾರ, ಸದಸ್ಯರಾದ ಉಮೇಶ್ ಕೊಟ್ಟಾರಿ,ಅಶೋಕ್, ಆದಿತ್ಯ, ಪ್ರಣಾಮ್,ನಿಖಿಲ್, ಪತ್ರಕರ್ತರಾದ ಪ್ರೀತಮ್ ರೈ, ಲಲಿತಾಶ್ರೀ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಜು.30ರಂದು ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್.ಜಿ. ಅಮೀನ್. ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜು.30ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್. ಜಿ.ಅಮೀನ್ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕಬ್ಬಿಣದ ರಾಡು ಬಿದ್ದು ನೀರಿನ ಟ್ಯಾಂಕ್ ಮತ್ತು ಮನೆಯ ಫೈಬರ್ ಶೀಟ್ ಸಂಪೂರ್ಣ ಹಾನಿ. ಮನೆ ಮಂದಿ ಪ್ರಾಣಾಪಾಯದಿಂದ ಪಾರು. ಚಿಲಿಂಬಿ ಬಳಿ ನಡೆದ ಘಟನೆ.

ಮಂಗಳೂರು : ಚಿಲಿಂಬಿ ಶಾರದಾ ನಿಕೇತನದ ಎದುರುಗಡೆ ಸಿಸ್ಟರ್ ಲೂಸಿ ಡಿಸೋಜ ಅವರು ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿ ವಾಸ್ತವ್ಯ ವಿದ್ದು ,ನಿನ್ನೆ ರಾತ್ರಿ 9.15 ಗಂಟೆ ಸುಮಾರಿಗೆ ಸುರಿದ ಬಿರುಸು ಮಳೆಗೆ ಇವರ ಪಕ್ಕದ ಕಟ್ಟಡದ ಮೇಲಿದ್ದ ಕಬ್ಬಿಣದ ಶೀಟ್ ಮತ್ತು ಕಬ್ಬಿಣದ ರಾಡು ಬಿದ್ದು ನೀರಿನ ಟ್ಯಾಂಕ್ ಮತ್ತು ಕಾಂಕ್ರೀಟ್ ಮನೆಯ ಫೈಬರ್ ಶೀಟ್ ಸಂಪೂರ್ಣ ಹಾನಿಗೊಳಗಾಗಿದ್ದು, ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಾಜು ನಷ್ಟ 25 ಸಾವಿರವೆಂದು ವರದಿಯಾಗಿದೆ. ಲೂಸಿ ಡಿಸೋಜ ಅವರು ನಿವೃತ್ತ ನರ್ಸ್ ಆಗಿದ್ದು, ಪಾರ್ಟ್ ಟೈಮ್ ಹೋಮ್ ನರ್ಸಿಂಗ್ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕೆಂದು Mp mla’s ನ್ಯೂಸ್ ವಿನಂತಿಸುತ್ತದೆ.

ಪ್ರಾದೇಶಿಕ ವಾರ್ತೆಗಳು

“ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ”-ಡಿಸಿ ಮುಲ್ಲೈ ಮುಹಿಲನ್. ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯ್ಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, “ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ“ ಎಂದು ಬೆನ್ನುತಟ್ಟಿದರು.ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಖಾದರ್ ಶಾ, ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಅಧ್ಯಕ್ಷ ವಸಂತ್ ಎನ್. ಕೊಣಾಜೆ, ಗಣೇಶ್ ತಲಪಾಡಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಭೆ

ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಪ್ಪ್ರೆಡ್ ಡಿಸೋಜ ಮತ್ತು ಖಾಸಗಿ ಟಿ.ವಿ.ಯ ಕ್ಯಾಮರಾಮನ್ ವೀರೇಶ್ ಕಡ್ಲಿಕೊಪ್ಪ ಅವರಿಗೆ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆಯಿತು. ಅಗಲಿದ ಪತ್ರಕರ್ತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಅಗಲಿದ ಇಬ್ಬರೂ ಪತ್ರಕರ್ತರೂ ಸಜ್ಜನ ವ್ಯಕ್ತಿತ್ವ ಹೊಂದಿದ್ದರು. ಎಲ್ಲರ ಜತೆ ಮುಕ್ತವಾಗಿ ಬೆರೆಯುತ್ತಿದ್ದರು. ಅವರ ಹೆಸರನ್ನು ಶಾಶ್ವತವಾಗಿ ನೆನಪಿಸಿಕೊಳ್ಳುವ ನಿಟ್ಟಿನಲ್ಲಿ ಸಂಘ ಕಾರ್ಯೋನ್ಮುಖವಾಗಲಿದೆ ಎಂದರು.ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ವೀರೇಶ್ ಅವರು ಗದಗ್ ಜಿಲ್ಲೆಯಿಂದ ಮಂಗಳೂರಿಗೆ ಆಗಮಿಸಿ ಇಲ್ಲಿನ ಪತ್ರಕರ್ತರ ಜತೆ ಬೆರೆತು ಕೆಲಸ ಮಾಡಿದ್ದರು. ಕಿರಿಯ ವಯಸ್ಸಿನಲ್ಲಿ ಅವರು ಅಗಲಿರುವುದು ಆಘಾತ ತಂದಿದೆಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ಭರತ್ ರಾಜ್, ಉಮೇಶ್ ಕೊಟ್ಟಾರಿ, ಆದಿತ್ಯ ನುಡಿ ನಮನ ಸಲ್ಲಿಸಿದರು.ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್., ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ರಮೇಶ್ ಪೆರ್ಲ, ನಂದಗೋಪಾಲ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಪ್ರಥಮ ರ‍್ಯಾಂಕ್

ಮಂಗಳೂರು: ಭಾರತದ ನಂ.1 ಸ್ಪೆಲ್ ಬೀ ವಿಜ್ ನ್ಯಾಷನಲ್ ಸ್ಪೆಲ್ ಬೀ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆಯಲ್ಲಿ ನಗರದ ಮೇರಿಹಿಲ್ ನ ಮೌಂಟ್ ಕಾರ್ ಮೆಲ್ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯೆಲ್ ಮರ್ಲಿನ್ ಮೊಂತೇರೊ ಅವರು ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.ಸಿಯೆಲ್ ಮರ್ಲಿನ್ ಮೊಂತೇರೊ ಅವರು ಬಜಪೆ ಕರಂಬಾರಿನ ವಾಲ್ಟರ್ ಮೊಂತೇರೊ ಹಾಗೂ ಕಿರಣ್ ಶರ್ಲಿ ಡಿಸೋಜ ಅವರ ಪುತ್ರಿ. Mangalore, July 23, 2024 — Ciel Merlyn Monteiro, a class 9 student of Mount Carmel Central School, Maryhill in the city, has secured the first rank in the 2023-24 state level grand finale conducted by India’s No.1 Spell Bee WIZ National Spell Bee competition. Ciel Merlyn Monteiro is the daughter of Walter Monteiro of Bajpe Karambara and Kiran Shirley D’Souza.

ಪ್ರಾದೇಶಿಕ ವಾರ್ತೆಗಳು

ನೀರುಪಾಲಾಗಿದ್ದ ವೃದ್ಧೆಯ ಶವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!. ಶಿರೂರು ಗುಡ್ಡ ಕುಸಿತ ಪ್ರಕರಣ.

ಶಿರೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ.ಬೇಸರದ ಸಂಗತಿ ಎಂದರೆ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಹಿಳೆಯರು ಗಂಜಿ ಕೇಂದ್ರದಲ್ಲಿದ್ದಾರೆ. ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶವ ಆಂಬುಲೆನ್ಸ್ ನಲ್ಲಿ ಉಳಿದಿದ್ದು ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ. ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯುಆರ್ ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶವಸಂಸ್ಕಾರದಲ್ಲಿ ಸಹಕರಿಸಿದರು.ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!ಶಿರೂರು ಗುಡ್ಡ ಕುಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ. ನೀರು‌ ಚಿಮ್ಮುತ್ತಿದ್ದಂತೆ ಬಾಂಬ್‌ನಂತೆ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನನಿಗಾಗಿ‌ ಶೋಧ ಮುಂದುವರಿದಿದೆ. ಮೋಹನ್ ಕುತ್ತಾರ್, ಶಶಿ ಬೆಳ್ಳಾಯುರ್, ಗಿರೀಶ್ ಮಳಲಿ, ಆರಿಫ್ ಯು ಆರ್, ಶಿವರಾಜ್ ಪತ್ರಕರ್ತರ ಶೌರ್ಯ ತಂಡ ದಲ್ಲಿದ್ದರು.

ಪ್ರಾದೇಶಿಕ ವಾರ್ತೆಗಳು

ಚೆನ್ನೈ ಯಲ್ಲಿ ಜನ ಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ

ಮಂಗಳೂರು, ಜುಲೈ 22,ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಶ್ರೀ ಜೆ. ಎಸ್. ಪ್ರಭು ಹಾಗೂ ಶ್ರೀಮತಿ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡ ದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು.ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ,ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಹಾಗೂ ಚೆನ್ನೈ ನ ಪ್ರಮೋದ್ ಕಾಮತ್ ತಾಳದಲ್ಲಿ ಸಾಥ್ ನೀಡಿದರು .ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಿದರು.

ಪ್ರಾದೇಶಿಕ ವಾರ್ತೆಗಳು

ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿಯವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣೆ ಶಿಬಿರ ನಡೆಯಿತು

ಮಂಗಳೂರು : ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಖ್ಯಾತ ಮಕ್ಕಳ ತಜ್ಞ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಹಾಗೂ ಹೊರನಾಡ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಡಾ‌.ಸುಧಾಕರ ಶೆಟ್ಟಿ ಅವರಿಂದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಅಪೌಷ್ಟಿಕತೆ ನಿವಾರಣಾ ಶಿಬಿರವು ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಅಕ್ಷಯಧಾಮದಲ್ಲಿ ಜುಲೈ 14 ರಂದು ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ12 ರ ವರೆಗೆ ನಡೆದ ಈ ಶಿಬಿರದ ಪ್ರಯೋಜನವನ್ನು ಕಲ್ಲಬೆಟ್ಟು ಮತ್ತು ಆಸುಪಾಸಿನ ಗ್ರಾಮಗಳ ಮಕ್ಕಳು ಪಡೆದುಕೊಂಡರೆಂದು ಸಂಘದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿತಾ ಆರ್.ಶೆಟ್ಟಿ ಅವರು ತಿಳಿಸಿದ್ದಾರೆ .ಈ ಶಿಬಿರಕ್ಕೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಸಹಕಾರವಿತ್ತು.

ಪ್ರಾದೇಶಿಕ ವಾರ್ತೆಗಳು

ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳಿನ ದಿನಾಚರಣೆ. ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ, ಬೆಂಗಳೂರಿನ ನಿಮಾನ್ಸ್ ಸಹಯೋಗದ ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ ಸಿಬ್ಬಂದಿಗಳ ವತಿಯಿಂದ ವಿಶ್ವಮೆದುಳಿನ ದಿನದ ಅಂಗವಾಗಿ ಮೆದುಳಿನ ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ವಿಶೇಷ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಯಿತು.

ಮಂಗಳೂರು: ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠ ರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮೆದುಳು ದಿನ  ಕಾರ್ಯಕ್ರಮವನ್ನು ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಧಿಕಾರಿಗಳಾದ ಡಾ. ಸುಧಾಕರ ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿಶ್ವ ಮೆದುಳು ದಿನ ಆಚರಿಸುವ ಉದ್ದೇಶವನ್ನು ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈದ್ಯಧಿಕಾರಿಗಳಾದ ಮತ್ತು ಜಿಲ್ಲಾ ಆಸ್ಪತ್ರೆಯ ಮಟ್ಟದಲ್ಲಿ ಬ್ರೈನ್ ಹೆಲ್ತ್ ಕ್ಲಿನಿಕ್ ನ ನೋಡೆಲ್ ಆಫೀಸರ್ ಆದ ಡಾ. ಗಿರೀಶ್ ಕುಮಾರ್ ರವರು ಮಾತನಾಡಿ ನಮ್ಮ ದೇಹದಲ್ಲಿ ಮೆದುಳು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಮತ್ತು ಮೆದುಳಿನ ಆರೋಗ್ಯವನ್ನು ನಾವು ಕಾಪಾಡಿಕೊಂಡು ಬರದಿದ್ದರೆ ಯಾವ ರೀತಿಯ ನರಕೋಶದ ತೊಂದರೆಗಳು ಬರುತ್ತದೆ ಎನ್ನುವುದನ್ನು ವಿವರಿಸಿದರು. Palliative care ನ Incharge ಮತ್ತು ಐಎಂಎ ಕುಟುಂಬ ವೈದ್ಯರ ವಿಭಾಗದ ರಾಜ್ಯಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್ ರವರು, ಮೂಳೆರೋಗ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಆರ್ ಕಾಮತ್ ರವರು, ಮನೋವೈದ್ಯಕೀಯ ರೋಗ ವಿಭಾಗದ ಮುಖ್ಯಸ್ಥರಾದ ಡಾ. ಸುನಿಲ್ ಕುಮಾರ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅದೇ ರೀತಿ ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಅಧಿಕಾರಿಗಳಾದ ಡಾ. ಮನೀಶ್, ಡಾ. ಅಶ್ವಿನ್, ಡಾ. Thafsiya ರವರು ಮತ್ತು ಬ್ರೈನ್ ಹೆಲ್ತ್ ಕ್ಲಿನಿಕ್ ನ ವೈದ್ಯರಾದ ಡಾ. ವಂಶಿ ಕೃಷ್ಣ ರೆಡ್ಡಿ ಯವರು ಮತ್ತು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬ್ರೈನ್ ಹೆಲ್ತ್ ಕ್ಲಿನಿಕ್ ನ ಮನಶಾಸ್ತ್ರಜ್ಞಾರಾದ ಕುಮಾರಿ ನಿಶ್ಚಿತ ಬಿ ಎಲ್ ರವರು ಪ್ರಾರ್ಥಿಸಿದರು. ಜಿಲ್ಲಾ ಸಂಯೋಜಕರಾದ ಶ್ರೀಮತಿ ಸೌಮ್ಯ ಆರ್ ಕೆ ರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. Physiotherapist ಆದ ಕುಮಾರಿ ಐಶ್ವರ್ಯ ಎಮ್ ಬಿ ಮತ್ತು ಸ್ಟಾಫ್ ನರ್ಸ್ ಆದ ಶ್ರೀಮತಿ ದಿವ್ಯ ಕುಮಾರಿ ಜಿ ಯವರು ಕಾರ್ಯಕ್ರಮ ಆಯೋಜಿಸುವಲ್ಲಿ ಸಹಕರಿಸಿದರು. NTCP ಯ ಆಪ್ತಸಮಾಲೋಚಕರಾದ ವಿಜಯ್ ಕುಮಾರ್ ರವರು ವಂದಿಸಿದರು.

Scroll to Top