ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿ ಚುನಾವಣೆ-ಸಿಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡ ಎಲ್ಲ 10 ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು. ಸೋಮವಾರ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದಲ್ಲಿ ಮತ ಎಣಿಕೆ ನಡೆಯಿತು.ಸಿಎ ಶಾಂತಾರಾಮ ಶೆಟ್ಟಿ -1005, ಡಾ.ಸುಮನ.ಬಿ.-876, ಡಾ.ಸತೀಶ್ ರಾವ್-870,ಡಾ. ಬಿ.ಸಚ್ಚಿದಾನಂದ ರೈ-868, ರಾಘವೇಂದ್ರ ರಾವ್- 844,ಪುಷ್ಪರಾಜ್ ಜೈನ್-835, ಪಿ.ಬಿ.ಹರಿಪ್ರಸಾದ್ ರೈ-810, ಯತೀಶ್ ಬೈಕಂಪಾಡಿ-797, ಸಚೇತ್ ಸುವರ್ಣ- 762, ಗುರುದತ್ .ಎಂ.ನಾಯಕ್-762. ಮತ ಗಳಿಸಿ ಜಯಶಾಲಿಗಳಾದರು.ಆಡಳಿತ ಮಂಡಳಿಯ 10 ಸದಸ್ಯ ಸ್ಥಾನಕ್ಕೆ ಫೆ.22 ರಂದು ಚುನಾವಣೆ ನಡೆದಿತ್ತು. 3654 ಮತದಾರರ ಪೈಕಿ 1388 ಮಂದಿ ಮತ ಚಲಾಯಿಸಿದ್ದರು. 24 ಮತ ಅಸಿಂಧುವಾಗಿತ್ತು.ಚುನಾವಣಾಧಿಕಾರಿಯಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಮಹೇಶ್ ಕುಮಾರ್ .ಯು. ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ನಿವೃತ್ತ ಚುನಾವಣಾ ಉಪ ತಹಶೀಲ್ದಾರ್ ರಾಮಚಂದ್ರ .ಬಿ. ಕಾರ್ಯ ನಿರ್ವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ಯೂನಿವರ್ಸಲ್ ಕೋಚಿಂಗ್ ಸೆಂಟರ್ ಬೆಳ್ಳಿಹಬ್ಬ. ಐಎಎಸ್, ಐಪಿಎಸ್, ಕೆಎಎಸ್ ಉಚಿತ ಪರೀಕ್ಷಾ ತರಬೇತಿ

ಮಂಗಳೂರು: ಯೂನಿವರ್ಸಲ್ ಕೋಚಿಂಗ್ ಸೆಂಟರ್ ಸಂಸ್ಥೆ 25ನೇ ವರ್ಷದ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು, ಕರ್ನಾಟಕ ಸೇರಿ ಭಾರತದಾದ್ಯಂತ 8036 ಕ್ಕೂ ಹೆಚ್ಚು IAS/IPS/KAS/PDO/ESI/PSI ಮತ್ತು ಇತರೇ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಕರ್ನಾಟಕದ 100 ಅಭ್ಯರ್ಥಿ ಗಳಿಗೆ ಉಚಿತ IAS/KAS ಪರೀಕ್ಷಾ ಪೂರ್ವ ತರಬೇತಿ ನೀಡಲು ನಿರ್ಧರಿಸಿದ್ದು, ತರಬೇತಿ ಸಂಪೂರ್ಣ ಉಚಿತವಾಗಿದೆ. ಅಧಿಕಾರಿಗಳಾಗಲು ಬಯಸುತ್ತಿರುವ ಸ್ಪರ್ಧಾರ್ಥಿಗಳಿಗೆ ಉಚಿತ ತರಬೇತಿ ಪಡೆದುಕೊಳ್ಳಲು ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ ಯೂನಿವರ್ಸಲ್ ಕೋಚಿಂಗ್ ಸೆಂಟರ್, ಅತ್ತಿಗುಪ್ಪೆ, ವಿಜಯನಗರ, ಬೆಂಗಳೂರು :9686664983, 080-23396403/409 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಯೂನಿವರ್ಸಲ್ ಕೋಚಿಂಗ್ ಸೆಂಟರ್ ಸಂಸ್ಥೆಯ ನಿರ್ದೇಶಕರಾದ ಆರ್. ಉಪೇಂದ್ರ ಶೆಟ್ಟಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿಯವರಿಗೆ ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ.

ಬೆಂಗಳೂರು_ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿಯವರಿಗೆ ಕನ್ನಡ ಪ್ರಭ, ಏಷ್ಯಾನೆಟ್ ಸುವರ್ಣ ಟಿವಿ ನ್ಯೂಸ್ ವತಿಯಿಂದ ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಚೆಲುವರಾಯ ಸ್ವಾಮಿ,ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಗಣ್ಯರು ಹಲವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಡಾ. ರೋಹನ್ ಮೊಂತೆರೋ ಅವರಿಗೆ ನವ ನಕ್ಷತ್ರ ಸನ್ಮಾನ.

ಬೆಂಗಳೂರು – ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸಾಧನೆಗಾಗಿ ಡಾ. ರೋಹನ್ ಮೊಂತೆರೋ ಅವರಿಗೆ ಟಿವಿ 9 ಕನ್ನಡ ಟಿವಿ ಚಾನೆಲ್ ಫೆ.15 ರಂದು ಬೆಂಗಳೂರಲ್ಲಿ ನಡೆದ ಸಮಾರಂಭದಲ್ಲಿ ನವ ನಕ್ಷತ್ರ ಸನ್ಮಾನ ನೀಡಿ ಗೌರವಿಸಿದೆ. ಕಳೆದ ವರ್ಷ ಮಂಗಳೂರು ಪುರಭವನದಲ್ಲಿ ನಡೆದ ಎಂಪಿಎಂಎಲ್ ಎ ನ್ಯೂಸ್ 13ನೇ ಸೌಹಾರ್ದ ಸಂಗಮದಲ್ಲಿ ಡಾ. ರೋಹನ್ ಮೊಂತೆರೋ ಅವರಿಗೆ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು

ಪ್ರಾದೇಶಿಕ ವಾರ್ತೆಗಳು

ಯಕ್ಷಗಾನ ಕಲಾರಂಗದ 88ನೇಯ ಮನೆ ಹಸ್ತಾಂತರ. ಯಕ್ಷಗಾನ ಕಲಾರಂಗವೆಂಬುದು ವಿಸ್ಮಯ: ಬೈಂದೂರು ಶಾಸಕ ಗಂಟಿಹೊಳೆ

ಉಡುಪಿ: ಯಕ್ಷಗಾನ ಕಲಾರಂಗ ಉಡುಪಿ ಇದರ ವಿದ್ಯಾಪೋಷಕ್‌ನಡಿ 88ನೆಯ ಮನೆಯನ್ನು ಶನಿವಾರ(ಫೆ.14) ಹಸ್ತಾಂತರಿಸಲಾಯಿತು.ಎಂಎಸ್‌ಆರ್‌ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ.ಶಾರದಾ ಎಂ. ಇವರು ತಮ್ಮ ಪತಿ ಕೃಷ್ಣಮೂರ್ತಿ ಕೆ.ಇವರ ಸ್ಮರಣೆಯಲ್ಲಿ, 7,೦೦,೦೦೦ ರೂ.ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಛಂದೋಗತಿ’ಯನ್ನು ಬೈಂದೂರು ತಾಲೂಕಿನ ಜಡ್ಕಲ್ ಸೆಲ್ಕೋಡ್ ನಿವಾಸಿಗಳಾದ ಚಿಕ್ಕಮ್ಮ ಮತ್ತು ಶಂಕರ ನಾಯ್ಕ್ ಇವರ ಪುತ್ರ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್. ನಾಯ್ಕ್‌ಗೆ ನಿರ್ಮಿಸಿಕೊಡಲಾಗಿದೆ. ಇದು ಶಾರದಾ ಎಂ ಅವರ ಪ್ರಾಯೋಜಕತ್ವದ ಎರಡನೇ ಮನೆಯಾಗಿದೆ. ಸ್ವಸ್ತಿಕ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಎಸ್‌ಎಸ್‌ಎಲ್‌ಸಿಯಲ್ಲಿ ಶೇ.97 ಅಂಕ ಪಡೆದಿದ್ದು, ವಿದ್ಯಾಪೋಷಕ್ ಅಡಿಯಲ್ಲಿ ಈತನನ್ನು ಆಯ್ಕೆ ಮಾಡಲಾಗಿತ್ತು.ಅತ್ಯಂತ ಸರಳವಾಗಿ ಈ ಕಾರ್ಯಕ್ರಮ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಾನಿ ಶಾರದಾ ಎಂ ಅವರು, ನನ್ನ ಪತಿ ಕೃಷ್ಣಮೂರ್ತಿಯವರ ಹಲವು ಆಸಕ್ತಿಗಳಲ್ಲಿ ಛಂದಸ್ಸಿನ ಕುರಿತ ಆಳವಾದ ಅಧ್ಯಯನವೂ ಒಂದು. ಅವರಿಗೆ ‘ಛಂದೋಗತಿ’ ಎಂಬ ಪುಸ್ತಕವನ್ನು ಬರೆಯಬೇಕೆಂಬ ಕನಸಿತ್ತು. ಅದು ಈಡೇರಿರಲಿಲ್ಲ. ಹಾಗಾಗಿ ಅವರ ಸ್ಮೃತಿಯಲ್ಲಿ ನೀಡಿದ ಈ ಮನೆಗೆ ಅದೇ ಹೆಸರಿಟ್ಟಿದ್ದೇನೆ ಎಂದರು. ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಯಕ್ಷಗಾನ ಕಲಾರಂಗ ನನಗೊಂದು ವಿಸ್ಮಯವೇ ಆಗಿದೆ. ಅವರ ಸಾಮಾಜಿಕ-ಶೈಕ್ಷಣಿಕ-ಕಲಾ ಸಂಬಂಧಿ ಕಾರ್ಯಕ್ರಮಗಳ ವಿಶ್ವರೂಪ ಅನ್ಯ ಸಂಘಟನೆಗಳಿಂದ ಅಸಾಧ್ಯ. ಅವರ ಕ್ಲಪ್ತತೆ, ಪರಿಶ್ರಮ, ಪಾರದರ್ಶಕತೆ, ಬದ್ಧತೆ, ಅಚ್ಚುಕಟ್ಟುತನಕ್ಕೆ ಶರಣಾಗಿದ್ದೇನೆ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆಯವರು ಮಾತನಾಡಿ, ಆಹಾರ, ಔಷಧ, ಶಿಕ್ಷಣ ವಿಕ್ರಯ ಮಾಡಬಾರದೆಂದು ನಮ್ಮ ಮೂಲ ಸಂಸ್ಕೃತಿಯಲ್ಲಿದೆ. ಈ ಮೂರೂ ವಿಧದ ದಾನಗಳು ಈ ಸಂಸ್ಥೆಯಿಂದ ಆಗುತ್ತಿವೆ ಎಂದರು.ವೇದಿಕೆಯಲ್ಲಿ ಖ್ಯಾತ ವಕೀಲ ರಾಮಚಂದ್ರ ಅಡಿಗ, ಬಿ.ಹರೀಶ್ ತಂತ್ರಿ, ಶಾರದಾ ಎಂ ಅವರ ಸಹೋದರ ಕೃಷ್ಣ ಭಟ್ ಮತ್ತು ಅವರ ಪತ್ನಿ ಪರಮೇಶ್ವರೀ, ಸಹೋದರಿ ಸರೋಜ,ಸಹೋದ್ಯೋಗಿ ಸುಬ್ರಹ್ಮಣ್ಯ ಭಟ್, ಸ್ನೇಹಿತೆ ಜೆಸಿಂತಾ, ಮಧುಕರ ಪೂಜಾರಿ, ವಿಠ್ಠಲ ಪೂಜಾರಿ, ವಿಷ್ಣುಮೂರ್ತಿ ಪ್ರಭು ಉಪಸ್ಥಿತರಿದ್ದರು. ಸಂಸ್ಥೆಯ ಸದಸ್ಯರಾದ ಯು. ವಿಶ್ವನಾಥ ಶೆಣೈ, ಭುವನಪ್ರಸಾದ ಹೆಗ್ಡೆ, ವಿಜಯ ಕುಮಾರ್ ಮುದ್ರಾಡಿ, ಅನಂತರಾಜ ಉಪಾಧ್ಯಾಯ, ಡಾ.ರಾಘವೇಂದ್ರ ರಾವ್, ಪ್ರಾಂಶುಪಾಲರಾದ ಅಮರೇಶ್ ಹೆಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿ, ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಪ್ರಾದೇಶಿಕ ವಾರ್ತೆಗಳು

ನ್ಯಾಚುರಲ್ ಮೆಡಿಕಲ್ಸ್ ಎರಡನೆಯ ಬ್ರಾಂಚ್ ಉದ್ಘಾಟನೆ. ಮೆಡಿಕಲ್ಸ್ ಗಳು ಸೇವಾ ಉದ್ಯಮವಾಗಿ ಬೆಳೆಯಲಿ: ಕಾಮತ್

ಮಹಾನಗರ, ಫೆ. 14 : ಜನರು ಅನಾರೋಗ್ಯಕ್ಕೆ ಈಡಾದಾಗ ಔಷಧಿಗೆ ಬರುವ ಸಂದರ್ಭ ಮಾನವೀಯ ಹಾಗೂ ಸೇವಾ ರೂಪದಲ್ಲಿ ಬೇಕಾದ ಔಷಧಿಗಳನ್ನು ಕ್ಲಪ್ತ ಸಮಯದಲ್ಲಿ ನೀಡುವಂತಾಗಬೇಕು.ಇದರಿಂದ ಗ್ರಾಹಕರು ಹಾಗೂ ಉದ್ಯಮದ ನಡುವೆ ಉತ್ತಮ ಬಾಂಧವ್ಯ ಬೆಳೆಯಲು ಸಾಧ್ಯ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಮಂಗಳೂರಿನ ಬಲ್ಮಠ ರಸ್ತೆಯಲ್ಲಿರುವ ಮೈಲ್ ಸ್ಟೋನ್ -25 ಕಟ್ಟಡದಲ್ಲಿ ಸ್ವಾತಿ ಗಣೇಶ್ ಮಾಲಕತ್ವದ ನ್ಯಾಚುರಲ್ ಗ್ರೂಪ್ಇವರ ಸಂಪೂರ್ಣ ಹವಾ ನಿಯಂತ್ರಿತ ಔಷಧಿಯ ಮಳಿಗೆ ನ್ಯಾಚುರಲ್ ಮೆಡಿಕಲ್ಸ್ ನ 2ನೇ ಬ್ರಾಂಚ್ ನ್ನು ಉದ್ಘಾಟಿಸಿ ಅವರು ಮಾನಾಡಿದರು. ಮಂಗಳೂರು ಬೆಳೆಯುತ್ತಿರುವ ನಗರವಾಗಿದ್ದು ಆರೋಗ್ಯ ಕ್ಷೇತ್ರದಲ್ಲಿಯೂ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಹತ್ತಾರು ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಇಲ್ಲಿದ್ದು, ಇದಕ್ಕೆ ಪೂರಕವಾಗಿ ಎಲ್ಲಾ ಔಷಧಿ ವ್ಯವಸ್ಥೆಗಳು ಒಂದೇ ಸೂರಿ ನಾಡಿ ದೊರಕುವಂತಹ ಮೆಡಿಕಲ್ಸ್ ಕೇಂದ್ರಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ನ್ಯಾಚುರಲ್ ಗ್ರೂಪ್ ಸಂಸ್ಥೆ ಉತ್ತಮ ಹೆಜ್ಜೆಯನ್ನು ಇಟ್ಟಿದೆ. ಜನರಿಗೆ ಮನೆ ಬಾಗಿಲಿನಲ್ಲಿ ದೊರಕುವಂತಹ ಔಷಧ ಕೇಂದ್ರಗಳು ಮಂಗಳೂರು ಮಾತ್ರವಲ್ಲದೆ ಇತರ ಜಿಲ್ಲೆಗಳಲ್ಲಿಯೂ ಆರಂಭಿಸಲು ದೇವರು ಶಕ್ತಿ ನೀಡಲಿ ಎಂದು ನುಡಿದರು.ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮಂಜು ಕಾರ್ನವರ್,ಆಡಳಿತ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ಅವರುಹೊಸ ಔಷಧಿ ಕೇಂದ್ರದಲ್ಲಿ ಸೇವೆಯ ಜೊತೆಗೆ, ಹಲವು ಮಂದಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಟ್ಟು ಮಹಿಳಾ ಉದ್ಯಮಿ ಸ್ವಾತಿ ಗಣೇಶ ಅವರು ಇತರರಿಗೆ ಮಾದರಿ ಹೆಜ್ಜೆಯನ್ನು ಇಟ್ಟಿದ್ದಾರೆ ಎಂದು ಶ್ಲಾಘಿಸಿದರು., ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಡೆಂಟ್ ಡಾ. ಉದಯ್ ಕುಮಾರ್ ಅವರು ಮಾತನಾಡಿ ಔಷಧಿ ಕೇಂದ್ರಗಳು ಉತ್ತಮ ಸೇವೆ ನೀಡುವ ಜೊತೆಗೆ, ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರು ಆರೋಗ್ಯಯುತವಾಗಿ ಬಾಳಲು ಸಹಕಾರ ನೀಡಬೇಕು ಎಂದರು.ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಅವರು ಮಾತನಾಡಿ ಮಂಗಳೂರಿನ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಪ್ರಥಮ ಬ್ರ್ಯಾಂಚ್ ತೆರೆದು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿದ್ದೀರಿ. ಇಲ್ಲಿಯೂ ಉತ್ತಮ ಸೇವೆ ಸಿಗುವಂತಾಗಲಿ ಎಂದು ಹಾರೈಸಿದರು.ಲ್ಯಾಂಡ್ ಟ್ರೇಡ್ಸ್ ಮಾಲಕ ಕೆ. ಶ್ರೀನಾಥ್ ಹೆಬ್ಬಾರ್,ಬಂದರ್ ಸ್ಟೀಲ್ ಸೆಂಟರ್ ನ ಎಂ. ಮೂಸಾ ಮೋಯಿದೀನ್, ಮೆಡಿಕಲ್ಸ್ ಓನರ್ಸ್ ಅಸೋಸಿಯೇಷನ್ ಇದರ ಜಮಾಲ್, ನ್ಯಾಚುರಲ್ ಗ್ರೂಪ್ ನ ಗಣೇಶ್ ಉಪಸ್ಥಿತರಿದ್ದರು.ಸಂಸ್ಥೆಯ ಮಾಲಕರಾದ ಸ್ವಾತಿ ಗಣೇಶ್ ಸ್ವಾಗತಿಸಿದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.ನ್ಯಾಚುರಲ್ ಗ್ರೂಪ್ ಇದರ ಪ್ರಥಮ ಹವಾ ನಿಯಂತ್ರಿತ ಮೆಡಿಕಲ್ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿರುವ ಸಹಕಾರಿ ಸದನ ಕಟ್ಟಡದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು,ಇದೀಗ ನೂತನವಾಗಿ ಆರಂಭವಾದ ಹವಾ ನಿಯಂತ್ರಿತ ಔಷಧಿ ಕೇಂದ್ರ ದಿನದ 24 ಗಂಟೆ ಕರ್ತವ್ಯ ನಿರ್ವಹಿಸಲಿದೆ. ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರ ಮನೆ ಬಾಗಲಿಗೆ ಔಷಧಿ ತಲುಪಿಸುವ ಸೌಲಭ್ಯ ನೀಡಲಿದೆ.

ಪ್ರಾದೇಶಿಕ ವಾರ್ತೆಗಳು

ಪೊಲೀಸ್ ಆಯುಕ್ತರನ್ನು ಭೇಟಿಮಾಡಿ ಅಭಿನಂದಿಸಿದ ಐಕಳ ಹರೀಶ್ ಶೆಟ್ಟಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಅವರು ತಿಳಿಸಿದ್ದಾರೆ. ದಕ್ಷ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಶ್ರೀ ಈಶ್ವರೀ ಭಜನಾ ಮಂಡಳಿ ಕಾಂಜಿಲಕೋಡಿ ದಶಮ ಸಂಭ್ರಮ

ಅಡ್ಡೂರು: ಶ್ರೀ ಈಶ್ವರೀ ಭಜನಾ ಮಂಡಳಿಯ ದಶಮ ಸಂಭ್ರಮವು ಫೆಬ್ರವರಿ 6 ರಿಂದ 8 ರವರೆಗೆ ಶ್ರೀ ಮುಖ್ಯ ಪ್ರಾಣ ದೇವಸ್ಥಾನ ದಲ್ಲಿ ನಡೆಯಲಿದೆ. ಫೆಬ್ರವರಿ 6 ರಂದು ಸಂಜೆ 5 ಗಂಟೆಗೆ ಕಾಂಜಿಲ ಕೋಡಿ ನಮ್ಮ ಮಂಡಳಿ ಯಿಂದ ಮೆರವಣಿಗೆ ಮೂಲಕ ಶ್ರೀ ಮುಖ್ಯ ಪ್ರಾಣ ದೇವರಿಗೆ ರಜತ ಗದೆ ಸಮರ್ಪಣೆ ನಡೆಯಲಿದೆ. ಅದೇ ದಿನ ಸಂಜೆ 6:30 ರಿಂದ ಏಕಹಾ ಭಜನಾ ಪ್ರಾರಂಭವಾಗಿ ಮರುದಿನ ಸಂಜೆ ಸೂರ್ಯಾಸ್ತ ದವರೆಗೆ ಭಜನಾ ಮಂಗಳೋತ್ಸವ ಸಮಾಪ್ತಿ ಗೊಳ್ಳಲಿದೆ. ಫೆಬ್ರವರಿ 7 ರಂದು ಶ್ರೀ ಮುಖ್ಯ ಪ್ರಾಣ ದೇವರಿಗೆ 108 ಸೀಯಾಳ ಅಭಿಷೇಕ, ಪವನಮಾನ ಅಭಿಷೇಕ, ಪವಮಾನ ಹೋಮ, ರಂಗಪೂಜೆ ಯು ನಡೆಯಲಿದೆ. ಫೆಬ್ರವರಿ 8 ರಂದು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಅಂತರ್ ಜಿಲ್ಲಾ ಮಟ್ಟದ ಹಾಗೂ ಗ್ರಾಮೀಣ ಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನೆ ಸಮಾರಂಭದಲ್ಲಿ ದ್ವೀಪ ಪ್ರಜ್ವಲನೆ ಯನ್ನು ಮಾಧವ ಭಟ್ ಪೊಳಲಿ, ಚಂದ್ರಶೇಖರ ಭಟ್ ನಡು ಮನೆ ನೆರೆವೇರಿಸಲ್ಲಿದ್ದಾರೆ. ಆಶೀರ್ವಾಚನವನ್ನು ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾ ಚೈತನ್ಯಾನಂದ ಸ್ವಾಮೀಜಿ, ನಳಿನ್ ಕುಮಾರ್ ಕಟೀಲ್, ರವಿಶಂಕರ್ ರಾವ್ ನೂಯಿ, ಧನಂಜಯ್ ಭಟ್ ಗಂದಾಡಿ, ನೂಯಿ ಬಾಲಕೃಷ್ಣ ರಾವ್, ಯಶವಂತ್ ಕುಮಾರ್ ಶೆಟ್ಟಿ, ವೆಂಕಟೇಶ್ ನಾವಡ ಪೊಳಲಿ, ಗುಣಾಕರ ಎಂ ಸಾಲ್ಯಾನ್, ಜಿ. ಎಂ ಉದಯಭಟ್, ನವೀನ್ ಮೂಡು ಶೆಡ್ಡೆ, ಪವನ್ ಆಮೀನ್ ಬರ್ಕೆ,ಮತ್ತಿತರು ಭಾಗವಹಿಸಿಲಿದ್ದಾರೆ. ಸಂಜೆ 6 ರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಾಚನ ನೀಡಲಿದ್ದಾರೆ. ಅಧ್ಯಕ್ಷತೆ ಯನ್ನು ಶಾಸಕರಾದ ವೈ. ಭರತ್ ಶೆಟ್ಟಿಯವರು ವಹಿಸಲ್ಲಿದ್ದಾರೆ..ದಾಮೋದರ ಶರ್ಮರವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.. ಮುಖ್ಯ ಅತಿಥಿಯಾಗಿ ಸಂಸದ ರಾದ ಬ್ರಿಜೇಶ್ ಚೌಟ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಮಾಜಿ ಸಚಿವರಾದ ರಮಾನಾಥ ರೈ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು, ಶ್ರೀ ಮುಖ್ಯ ಪ್ರಾಣ ದೇವಸ್ಥಾನದ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದ ಹರಿಶ್ಚಂದ್ರ ಆಮೀನ್ ಬರ್ಕೆ, ಮಾದುಕೋಡಿ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ದ ವಿಜಯ ಸುವರ್ಣ ಗುರೂಜಿ, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಓಂ ಪ್ರಕಾಶ್ ಶೆಟ್ಟಿ, ಲಂಚು ಲಾಲ್ ಕೆ ಎಸ್, ಚಂದ್ರಹಾಸ್ ಪಲ್ಲಿಪಾಡಿ, ಭುವನೇಶ್ ಪಚಿನಡ್ಕ, ಚಂದ್ರಹಾಸ್ ನಾರಾಳ, ಕಿರಣ್ ಪಕ್ಕಳ ಪೆರ್ಮೆoಕಿ ಗುತ್ತು, ಬಜಪೆ ಪೊಲೀಸ್ ನಿರೀಕ್ಷಕ ರಾದ ಸಂದೀಪ್ ಜಿ ಎಸ್, ಸಂತೋಷ್ ಶೆಟ್ಟಿ ಕಾಂಜಿಲ ಕೋಡಿ ಭಾಗವಹಿಸಲ್ಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಉಡುಪಿಯಲ್ಲಿ ಸೌದಾಮಿನಿ ರಾವ್ ಕಟಪಾಡಿಯವರಿಂದ ಏಕವ್ಯಕ್ತಿ ನೃತ್ಯ ಪ್ರದರ್ಶನ

ಮಂಗಳೂರು,ಫೆ.4;ಶ್ರೀ ಶಿರೂರು ಪರ್ಯಾಯದ ಭಾಗವಾಗಿ ಇತ್ತೀಚೆಗೆ ಉಡುಪಿ ರಾಜಾಂಗಣದಲ್ಲಿ ಸೌದಾಮಿನಿ ರಾವ್ ಕಟಪಾಡಿಯವರಿಂದ ಏಕವ್ಯಕ್ತಿ ನೃತ್ಯ ಪ್ರದರ್ಶನ ನಡೆಯಿತು.ನಟುವಾoಗದಲ್ಲಿ ಆಚಾರ್ಯ ಶ್ರೀಮತಿ ಇಂದಿರಾ ಕಡoಬಿ,ಗಾಯನ ಶ್ರೀ ವಿಶ್ವೇಶ್ ಸ್ವಾಮಿನಾಥನ್,ಮೃದಂಗ ಶ್ರೀ ವಿದ್ಯಾಶಂಕರ್ ಎನ್,ಕೊಳಲು ಶ್ರೀ ವಿವೇಕ್ ವಿ ಕೃಷ್ಣ ಸಹಕರಿಸಿದರು.

ಪ್ರಾದೇಶಿಕ ವಾರ್ತೆಗಳು

ಫೆ.7-8;ಉಚಿತ ಶ್ರವಣ ತಪಾಸಣಾ ಶಿಬಿರ

ಮಂಗಳೂರು, ಫೆ.3; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ಕಳೆದ ಸಲದಂತೆ ಈ ಬಾರಿಯೂ ದಿನಾಂಕ 7-02-2026. ಮತ್ತು 8-02-2026 ‌‌‌‌‌ರಂದು ಉಚಿತ ಶ್ರವಣ ತಪಾಸಣಾ ಶಿಬಿರ (ಸಮಯ ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಸಲಿದೆ.ಈ ಶಿಬಿರದಲ್ಲಿ ಉಚಿತವಾಗಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ನಡೆಯಲಿದೆ ಎಂದು ತಂಡದ ಸಂಚಾಲಕ ಲವ ಬಂಗೇರಾ ಸುದ್ದಿಗೋಷ್ಢಿಯಲ್ಲಿಂದು ತಿಳಿಸಿದ್ದಾರೆ.ಈ ಶಿಬಿರದಲ್ಲಿ ಪತ್ರಕರ್ತರ ಕುಟುಂಬದ ಸದಸ್ಯರ ಜೊತೆ ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ಸಾರ್ವಜ ನಿಕರು ಉಚಿತ ತಪಾಸಣೆ ಮಾಡಿಕೊಳ್ಳಬಹುದಾಗಿದೆ.ಈ ಬಗ್ಗೆ ಮಾಧ್ಯಮದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕಾಗಿ ವಿನಂತಿ.ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವ ರಿಸಿಕೊಂಡು ಬರುತ್ತಿದ್ದು, ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನಮ್ಮ ಸಂಸ್ಥೆಯಾದ ಟೀಮ್ ಈಶ್ವರ್ ಮಲ್ಪೆ ಯವರು ಶ್ರವಣದ ಯಂತ್ರಕ್ಕೆ (Hearing Machine) ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಾಗುತ್ತಿದ್ದು ರೋಗಿಗಳು ಇದರ ಸದುಪಯೋಗ ಪಡಿಸಿಕೊಳ್ಳ ಬೇಕಾಗಿ ವಿನಂತಿ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ(ರಿ) ವತಿಯಿಂದ ಕಳೆದ ಬಾರಿ ಆಯೋಜಿಸಿರುವ ಶಿಬಿರದಲ್ಲಿ 68 ಮಂದಿ ತಪಾಸಣೆಗೆ ಒಳಗಾಗಿದ್ದರು.ಈ ಶಿಬಿರದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕೆಲವು ಸೂಚನೆಗಳು ಹೀಗಿವೆ :-*ನೋಂದಣಿ ಕಡ್ಡಾಯವಾಗಿದೆ ಕರೆಮಾಡಿ ನೋಂದಾಯಿಸಿಕೊಳ್ಳಿ.*ಹಿರಿಯರ ನಾಗರಿಕರಿಗೆ ಮೊದಲ ಆದ್ಯತೆ. (ಮನೆಯವರೊಂದಿಗೆ ಬರಬೇಕು)*ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ (Old Report) ಇದ್ದರೆ ಜೊತೆಯಲ್ಲಿ ತನ್ನಿ.*ಈಶ್ವರ್ ಮಲ್ಪೆ ಟೀಮ್‌ನವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ.(ಮೊದಲು ನೋಂದಾಯಿಸುವ 30 ಜನರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.)*ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಹೆಚ್ಚಿನ ಮಾಹಿತಿಗಾಗಿ91 89518 04399 ಕರೆಮಾಡಬಹುದಾಗಿದೆಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಲವ ಬಂಗೇರಾ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ,ಶ್ರವಣ ತಜ್ಞೆ ಡಾ‌. ಅಂಕಿತಾ ಉಪಸ್ಥಿತರಿದ್ದರು.

Scroll to Top