ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

ಬೆಳ್ತಂಗಡಿ: ಕಾಂಗ್ರೆಸ್’ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್’ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಮತದಾನ ಪ್ರತಿಯೊಬ್ಬರ ಜವಾಬ್ದಾರಿ.ಮನಪಾ ಆಯುಕ್ತ ಆನಂದ್ ಸಿ.ಎಲ್. ಹೇಳಿಕೆ

ಮಂಗಳೂರು : ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಯಾವುದೇ ಭಯವಿಲ್ಲದೆ, ಪ್ರಭಾವಕ್ಕೆ ಒಳಪಡದೆ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ದ.ಕ. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ವ್ಯಾಪಕ ಮತದಾನ ಆಗಬೇಕು .ಈ ನಿಟ್ಟಿನಲ್ಲಿ ನಗರದ ಹಲವು ಕಡೆ ಸ್ವೀಪ್ ಸಮಿತಿಯಿಂದ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಚುನಾವಣೆ ದಿನ ಎಲ್ಲರೂ ಉತ್ಸುಕತೆಯಿಂದ ಮತದಾನಕ್ಕೆ ಆಗಮಿಸಬೇಕು. ದಕ್ಷಿಣ ಕನ್ನಡ ಬುದ್ದಿವಂತರ ಜಿಲ್ಲೆಯಾಗಿದೆ. ಈ ಬಾರಿಯ ಚುನಾವಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರು ಬಂದು ಬುದ್ದಿವಂತಿಕೆ ಪ್ರದರ್ಶಿಸಬೇಕಿದೆ ಎಂದು ಅವರು ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇದ್ರ ಕುಂದೇಶ್ವರ, ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.ಮತದಾನ ಜಾಗೃತಿ ಬಗ್ಗೆ ಸಂತ ಆ್ಯಗ್ನೆಸ್ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಕಿರು ನಾಟಕ ಪ್ರದರ್ಶಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಹುಚ್ಚು ಮನಸ್ಸಿನ ಸಾಹಸ ಯಶಸ್ಸಿಗೆ ಕಾರಣ – ಡಾ. ಎಂ. ಮೋಹನ ಆಳ್ವ ಅಭಿಮತ

ಮಂಗಳೂರು : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗ ಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್‌ನ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ಆಧುನಿಕ ಕಾಲಘಟ್ಟದಲ್ಲಿ ಎಲ್ಲವೂ ವ್ಯಾಪಾರೀಕರಣಗೊಳ್ಳುತ್ತಿದ್ದು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರವೂ ಇದರಿಂದ ಹೊರತಾಗಿಲ್ಲ. ಕಳೆದ ದಿನಗಳು ಒಳ್ಳೆಯ ಸಮಯಗಳಾಗಿ ಸಂತಸ ಉಂಟು ಮಾಡಿದೆ. ಭವಿಷ್ಯದಲ್ಲಿ ಆಧುನಿಕ ಜಗತ್ತಿಗೆ ನಾನು ಎಷ್ಟರ ಮಟ್ಟಿಗೆ ಒಗ್ಗಿಕೊಳ್ಳುತ್ತೇನೆ ಎಂಬುದು ಬದುಕಿನ ಸವಾಲು ಎಂದರು. ಹಾಸ್ಟೆಲ್ ಶಿಕ್ಷಣಕ್ಕೆ ಆದ್ಯತೆ : ಬದುಕಿನಲ್ಲಿ ಕೆಲವೊಂದು ಕಾರ್ಯಗಳು ಹುಚ್ಚು ಮನಸ್ಸಿನ ಸಾಹಸ ಎಂದು ಅನಿಸಿದರೂ ಯಶಸ್ಸಿಗೆ ಅದೇ ಮುಖ್ಯ ಕಾರಣವಾಯಿತು. ಬಾಲ್ಯ,ವಿದ್ಯಾಭ್ಯಾಸ,ವೃತ್ತಿ ಜೀವನ ಹೀಗೆ 72 ವರ್ಷ ಕಳೆದರೂ ಹುಚ್ಚು ಮನಸ್ಸು ಕಡಿಮೆ ಆಗಲೇ ಇಲ್ಲ.ವಿದ್ಯಾರ್ಥಿ ಜೀವನದಲ್ಲಿ 20 ವರ್ಷ ಹಾಸ್ಟೆಲ್ನಲ್ಲಿದ್ದೆ. ಅಲ್ಲಿ ವಿದ್ಯೆ ಜತೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗೂ ಒತ್ತು ನೀಡಲು ಸಾಧ್ಯವಾಗುತ್ತದೆ ಎಂಬುದು ನನ್ನ ಅನುಭವ. ಅದಕ್ಕಾಗಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಹಾಸ್ಟೆಲ್ ಸಹಿತ ಶಿಕ್ಷಣಕ್ಕೆ ಒತ್ತು ನೀಡಿದ್ದೇನೆ. ಆರ್ಥಿಕ ಸಂಕಷ್ಟದಲ್ಲಿರುವವರು, ಪ್ರತಿಭಾನ್ವಿತರು, ಕ್ರೀಡೆ, ಸಾಂಸ್ಕೃತಿಕ ಸಾಧಕ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಂಡು ಉತ್ತಮ ವಿದ್ಯೆಗೆ ಅವಕಾಶ ನೀಡಲಾಗುತ್ತಿದೆ. ನಮ್ಮ ಸಂಸ್ಥೆ ಕ್ರೀಡೆಯಲ್ಲಿ ಹಾಗೂ ಸಾಂಸ್ಕೃತಿಕವಾಗಿ ಅತ್ಯುತ್ತಮ ಸಾಧನಾ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು. ಜಾಲತಾಣದಿಂದ ದೂರ : ಹೆಚ್ಚು ಸಾಮಾಜಿಕ ಜಾಲತಾಣದ ಮೇಲೆ ಅವಲಂಬಿತವಾದಾಗ ನಮ್ಮಲ್ಲಿರುವ ಮುಗ್ಧತೆಯನ್ನು ಕಳೆದುಕೊಳ್ಳುತ್ತೇವೆ. ಹಾಗಾಗಿ, ನನಗೆ ಸಾಮಾಜಿಕ ಜಾಲತಾಣದ ಕುರಿತು ಆಸಕ್ತಿಯಿಲ್ಲ. ರಾಜಕೀಯ ಪಕ್ಷಗಳ ಮೇಲೆ ನನಗೆ ಗೌರವ ಇದೆ, ಆದರೆ ರಾಜಕೀಯ ಪಕ್ಷಗಳಿಂದ ನಾನು ದೂರ ಇದ್ದೇನೆ. ಬಾಲ್ಯದಿಂದ ಇಲ್ಲಿವರೆಗೂ ನಾನು ಇನ್ನೊಬ್ಬರ ಜತೆ ಸ್ಪರ್ಧೆ ಮಾಡಿದವನಲ್ಲ. ಯಾರಲ್ಲೂ ವೈರತ್ವ ಹೊಂದಿಲ್ಲ. ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಆಯಾಮಗಳಲ್ಲೂ ನಾಯಕತ್ವ ವಹಿಸಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮೋಹನ ಆಳ್ವ ಹೇಳಿದರು. ಸಾಹಿತ್ಯಾಸಕ್ತರಿಗೆ ನುಡಿಸಿರಿ : ನುಡಿಸಿರಿಗೆ ಇನ್ನು ಜಾತ್ರೆಯ ಸ್ವರೂಪ ಇರುವುದಿಲ್ಲ. ಆಸಕ್ತ ಸಾಹಿತ್ಯಾಸಕ್ತರನ್ನು ಮಾತ್ರ ಆಹ್ವಾನಿಸಿ ವಿಭಿನ್ನ ರೀತಿಯಲ್ಲಿ ಮೂರು ದಿನಗಳ ಕಾಲ ಸಂಘಟಿಸಲಾಗುವುದು. ರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮ ವಿರಾಸ್ ಎಂದಿನಂತೆಯೇ ನಡೆಯಲಿದೆ ಎಂದು ಅವರು ಹೇಳಿದರು.ಹಿರಿಯ ಪತ್ರಕರ್ತ ವಿ.ಯು.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದರು. ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ:ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಏ. 11ರಂದು ಸುಳ್ಯ, 12ರಂದು ಮುಲ್ಕಿ, 13ರಂದು ಪುತ್ತೂರು,14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪುತ್ತೂರಿಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದರು.ಏ. 19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಎ . 24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.ಒಮ್ಮತದ ಅಭ್ಯರ್ಥಿ:ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು.ಗೆಲ್ಲುವ ಅಭ್ಯರ್ಥಿ:ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ನಾವು ಕಾರ್ಯಕರ್ತರು. ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ ಎಂದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ನೀಡಿರುವ ಕಾಂಗ್ರೆಸ್ ನೀಡಿದಂತಹ ಭರವಸೆಯನ್ನು ಈಡೇರಿಸಿದೆ‌. ಗ್ಯಾರೆಂಟಿ ಯೋಜನೆಯೂ ಯಶಸ್ಸು ಕಂಡಿದೆ ಎಂದರು.ಗೆಲುವಿಗಾಗಿ ಹೋರಾಟ:ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ. ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವಿಗೆ ಕೈಜೋಡಿಸಿದ ಕಾಂಗ್ರೆಸ್ ಮುಖಂಡರು

ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಗೆಲುವಿಗೆ ಶುಭಹಾರೈಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ. ಲಾಲ್ ಭಾಗ್ ನಲ್ಲಿ ಉದ್ಘಾಟನೆಗೊಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರೆ ಪ್ರತಿಭಾ ಕುಳಾಯಿ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಬಳಿಕ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ದ.ಕ. ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ  ನಾಳೆ ಉದ್ಘಾಟನೆ.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ನಾಳೆ (ಮಾ.26) ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ನಗರದ ಎಂ.ಜಿ. ರಸ್ತೆಯ ಲಾಲ್‌ಬಾಗ್‌ನಿಂದ (ಮಹಾನಗರಪಾಲಿಕೆ ಕಟ್ಟಡದ ಬಲಭಾಗದ ರಸ್ತೆ) ಮಣ್ಣಗುಡ್ಡೆಗೆ ತೆರಳುವ ರಸ್ತೆ ಸಮೀಪ ನೂತನ ಚುನಾವಣಾ ಕಚೇರಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕರಾದ ಅಶೋಕ್ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ,ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜ, ಅಭಯಚಂದ್ರಜೈನ್, ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಮಾ.26ರಂದು ಡಾ.ಎಂ.ಮೋಹನ ಆಳ್ವ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.26 ರಂದು ಬೆಳಗ್ಗೆ 11.00ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಹಿರಿಯ ಪತ್ರಕರ್ತ ಯು.ವಿ.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಬಪ್ಪನಾಡು: ಶ್ರೀ ದೇವರ ಸ್ವರ್ಣ ಪಲ್ಲಕ್ಕಿ ಉತ್ಸವ; ಸಣ್ಣ ರಥೋತ್ಸವ; ಆಯನ ಬಲಿ ಉತ್ಸವ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ ಸ್ವರ್ಣ ಪಲ್ಲಕ್ಕಿ ಉತ್ಸವ; ಸಣ್ಣ ರಥೋತ್ಸವ; ಆಯನ ಬಲಿ ಉತ್ಸವ ನಡೆಯಿತು.ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಣಾಧಿಕಾರಿ ಜಯಮ್ಮ,ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್,ಸತೀಶ್ ಭಂಡಾರಿ, ಸುನಿಲ್ ಆಳ್ವ, ಕಿಶೋರ್ ಶೆಟ್ಟಿ ಬಪ್ಪನಾಡು, ತಾರಾನಾಥ ಸುವರ್ಣ ಅಡ್ವೆ, ಗೋಪಾಲಕೃಷ್ಣ ಭಟ್ ಬಪ್ಪನಾಡು, ವಿದ್ವಾನ್ ನಾಗೇಶ್ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು

ಪ್ರಾದೇಶಿಕ ವಾರ್ತೆಗಳು

ನಾಯಕರ ಹೆಸರು ಹೇಳಿ ಓಟು ಕೇಳುವವರು ಗೆದ್ದ ನಂತರ ಕ್ಷೇತ್ರದ ಕಡೆ ಮುಖವೆತ್ತಿಯೂ ನೋಡುವುದಿಲ್ಲ. ನನ್ನ ಬಗ್ಗೆ ಜನರಿಗೆ ಗೊತ್ತಿದೆ. ಖಂಡಿತ ಗೆಲ್ಲಿಸುತ್ತಾರೆ : ಜಯಪ್ರಕಾಶ್ ಹೆಗ್ಡೆ.

ಉಡುಪಿ : ಉಡುಪಿ -ಚಿಕ್ಕ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ನಾನು ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಟೀಕಿಸುವುದಿಲ್ಲ. ಜನರಿಗೆ ಗೊತ್ತಿದೆ ಯಾರಿಗೆ ಓಟು ಕೊಡಬೇಕು. ಯಾರನ್ನು ಗೆಲ್ಲಿಸಬೇಕೆಂಬ ಸ್ಪಷ್ಟತೆ. ನನಗೆ ನಾಯಕರ ಹೆಸರಲ್ಲಿ ಓಟು ಕೇಳಬೇಕಾದ ಅನಿವಾರ್ಯತೆ ಇಲ್ಲ. ನಾನು ಇಲ್ಲಿ ಒಂದು ಅವಧಿಗೆ ಸಂಸದನಾಗಿದ್ದೆ. ವಾರಾಹಿ ಯೋಜನೆ ಸೇರಿದಂತೆ ಅಭಿವೃದ್ಧಿ ಕೆಲಸ ಮಾಡಿದ್ದೆ. ನಾನು ಬಂಟನೆಂದ ಮಾತ್ರಕ್ಕೆ ಬಂಟರೆಲ್ಲರೂ ಓಟು ಹಾಕುತ್ತಾರೆಂಬ ಗ್ಯಾರಂಟಿ ಇಲ್ಲ. ಅವರಿಗೆ ಬಿಲ್ಲವರೆಲ್ಲರೂ ಓಟು ಹಾಕುತ್ತಾರೆಂದು ಹೇಳಲಾಗುವುದಿಲ್ಲ. ಜಾತಿ ರಾಜಕೀಯ ಇಲ್ಲಿ ನಡೆಯವುದಿಲ್ಲ. ನಾನು ಜಾತ್ಯತೀತ ರಾಜಕಾರಣಿ. ಇಲ್ಲಿನ ಜನ ನನ್ನನ್ನು ಒಪ್ಪಿದ್ದಾರೆ. ನನ್ನ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿದೆ. ನನಗೆ ಇನ್ನೊಬ್ಬರ ಹೆಸರಲ್ಲಿ ಓಟು ಕೇಳುವ ಅಗತ್ಯತೆ ಬೀಳುವುದಿಲ್ಲ.ನಾಯಕರ ಹೆಸರಲ್ಲಿ ಓಟು ಕೇಳುವವರು ಗೆದ್ದ ನಂತರ ಕ್ಷೇತ್ರದ ಕಡೆಗೆ ಮುಖವೆತ್ತಿಯೂ ನೋಡುವುದಿಲ್ಲವೆಂದು ಜಯಪ್ರಕಾಶ್ ಹೆಗ್ಡೆ ಟೀಕಿಸಿದರು

Scroll to Top