ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಸಮಾಜಕ್ಕೆ ಮಾದರಿ ಆಗುವ ಕೆಲಸ ಮಾಡಿದ ಹೆಮ್ಮೆ ಇದೆ – ಶ್ರೀನಿವಾಸ್ ನಾಯಕ್ ಇಂದಾಜೆ

ಮಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗಿ ಎರಡು ಅವಧಿ ಗೆ (ಆಗಸ್ಟ್ 4,2018 ರಿಂದ 07.11.2025 ರ ವರೆಗೆ ) ಅವಕಾಶ ನೀಡಿರುವುದಕ್ಕೆ ನನ್ನ ಪತ್ರಕರ್ತ ಮಿತ್ರರಿಗೆ ಧನ್ಯವಾದಗಳು.ನಮ್ಮ ಅವಧಿಯಲ್ಲಿ ಪತ್ರಕರ್ತರ ಅರೋಗ್ಯ ಕ್ಷೇಮಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಪತ್ರಿಕಾ ಭವನದಲ್ಲಿ ಮೀಡಿಯಾ ಹೆಲ್ತ್ ಕ್ಲಬ್ ನ್ನು ಎ ಜೆ ವೈದ್ಯಕೀಯ ಮಹಾವಿದ್ಯಾಲಯ ಸಹಾಭಾಗೀತ್ವದಲ್ಲಿ ಆರಂಭಿಸಲಾಗಿದೆ. ಈ ಮೂಲಕ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಉಚಿತ ಅರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಕ್ಷೇಮಾ ಹೆಲ್ತ್ ಕಾರ್ಡ್ ಹಾಗೂ ಮಣಿಪಾಲ ಅರೋಗ್ಯ ಕಾರ್ಡ್ ನ್ನು ಪತ್ರಕರ್ತ ಮಿತ್ರರಿಗೆ ವಿತರಿಸಲಾಗಿದೆ.ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಆರಂಭಿಸಲಾಗಿದೆ. ಕಳೆದ ಎರಡು ವರ್ಷದಲ್ಲಿ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ. ಸಮಾಜಕ್ಕೆ ಮಾದರಿ ಯಾಗುವ ಕೆಲಸ ಮಾಡಿದ್ದೇನೆ ಎಂಬ ಹೆಮ್ಮೆ ಇದೆ ಎಂದುl ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜಿ ತಿಳಿಸಿದರು.ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿ ಯಲ್ಲಿ ಮಾತನಾಡಿದ ಅವರು,ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘ ಆರಂಭಿಸಲಾಗಿದೆ. ಈ ಮೂಲಕ ಪತ್ರಕರ್ತರಿಗೆ ಕಡಿಮೆ ದರದಲ್ಲಿ ನಿವೇಶನ ನೀಡುವ ಪ್ರಯತ್ನ ಮುಂದುವರಿದಿದೆ. ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಮ0ಕಿ ಪದವು ಎಂಬಲ್ಲಿ 3 ಎಕರೆ ಕಂದಾಯ ಭೂಮಿಯನ್ನು ನಿವೇಶನ ನೀಡುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಕೊರೋನ ವೇಳೆ 4 ಕುಟುಂಬಗಳಿಗೆ ರಾಜ್ಯ ಸರಕಾರದಿಂದ 14 ಲಕ್ಷ ರೂಪಾಯಿ ನೆರವು ಕೊಡಿಸಲಾಗಿದೆ.ಕೊರೋನ ವೇಳೆ ಕಾರ್ಮಿಕ ಇಲಾಖೆ ಹಾಗೂ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಸಹಾಯದಲ್ಲಿ ಎಲ್ಲಾ ಪತ್ರಕರ್ತರಿಗೆ ಫುಡ್ ಕಿಟ್ ವಿತರಿಸಲಾಗಿದೆ.5 ಪತ್ರಕರ್ತರ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿದೆ. ಈ ಸಮಾವೇಶ ದಲ್ಲಿ ಸಾಧಕ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನಿಸಿ ಅವರನ್ನು ಗುರುತಿಸುವ ಕೆಲಸ ಮಾಡಲಾಗಿದೆ.ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಹಾಗೂ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.ಸಾಮಾಜಿಕ ಚಟುವಟಿಕೆಗಳುಪತ್ರಕರ್ತರ ಗ್ರಾಮ ವಾಸ್ತವ್ಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಮಾಡಲು ಸಾಧ್ಯವಾಗಿದೆ. ಬೆಳ್ತಂಗಡಿ ತಾಲೂಕಿನ ಕುತ್ಲುರು, ಸುಳ್ಯ ತಾಲೂಕಿನ ಮಡಪ್ಪಾಡಿ, ಕೊಲ್ಲಮೊಗರು, ಕಡಬ ತಾಲೂಕಿನ ಸಿರಿಬಾಗಿಲು, ಪುತ್ತೂರು ತಾಲೂಕಿನ ಸುಳ್ಯಪದವು ನಲ್ಲಿ ಯಶಸ್ವಿ ಗ್ರಾಮ ವಾಸ್ತವ್ಯ ಮಾಡಲಾಗಿದೆ.ಕುತ್ಲುರು ಸರಕಾರಿ ಶಾಲೆ ಗೆ ವಿವಿಧ ಕಂಪನಿ ಹಾಗೂ ಸರಕಾರದ ಮೂಲಕ 50 ಲಕ್ಷಕ್ಕೂ ಮಿಕ್ಕಿ ಅನುದಾನ ತರಲಾಗಿದೆ.ಮಡಪಾಡ್ಡಿ ಯಲ್ಲಿ 1.5 ಕೋಟಿ ವೆಚ್ಚದಲ್ಲಿ 3 ಕಿಲೋಮೀಟರ್ ರಸ್ತೆ ನಿರ್ಮಾಣ ವಾಗಿದೆ.ಬಿಜೈ ಕಾಪಿಕಾಡ್ ಅಂಗನವಾಡಿ ಯನ್ನು ದಾನಿಗಳ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮ ದ ಮೂಲಕ ಮಂಗಳೂರು ವಿಶ್ವದಲ್ಲಿಯೇ ಗುರುತಿಸುವ ಕೆಲಸ ವಾಗುತ್ತಿದೆ. ಪತ್ರಕರ್ತರ ಸಂಘ ಆರಂಭಿಸಿದ ಈ ಕಾರ್ಯಕ್ರಮ ವನ್ನು ಈಗ ಕೆನರಾ ಚೇಂಬರ್ ಒಫ್ ಕಾಮರ್ಸ್ ಹಾಗೂ ಕ್ರಡೈ ಮುಂದುವರಿಸಿ ಕೊಂಡು ಹೋಗುತ್ತಿದೆ.ಮುಂದಿನ ಯೋಜನೆಗಳು:ಬ್ರ್ಯಾಂಡ್ ಮಂಗಳೂರು ಇಂಟರ್ನ್ಯಾಷನಲ್ ಕೌನ್ಸಿಲ್ ಸ್ಥಾಪನೆಮಂಗಳೂರು ನ್ನು ವಿಶ್ವದಲ್ಲಿ ಆಕರ್ಷಸಲು ಈ ಕೌನ್ಸಿಲ್ ಮೂಲಕ ಪ್ರಯತ್ನಿಸಲಾಗುವುದು. ಜನಪ್ರತಿನಿದಿಗಳು, ಅಧಿಕಾರಿಗಳು, ಪತ್ರಕರ್ತರು, ಉದ್ಯಮಿ ಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು.ಗ್ರಾಮ ವಾಸ್ತವ್ಯ ಫಾಲೋ ಅಪ್ ಸಮಿತಿ:ಗ್ರಾಮ ವಾಸ್ತವ್ಯ ಮಾಡಿರುವ ಗ್ರಾಮಗಳಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಿ ಕೊಂಡು ಹೋಗಲು ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು.

ಪ್ರಾದೇಶಿಕ ವಾರ್ತೆಗಳು

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ 2ನೇ ಬಾರಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ. ಬಿ.ಎನ್ ಅವರಿಗೆ ಚುನಾವಣಾಧಿಕಾರಿಯಿಂದ ಅಭಿನಂದನೆ ಜೊತೆಗೆ ಪ್ರಮಾಣ ಪತ್ರ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ 2ನೇ ಬಾರಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ ಬಿ. ಎನ್ ಅವರನ್ನು ಚುನಾವಣಾಧಿಕಾರಿ ಖಾದರ್ ಶಾ ಅವರು ಮಂಗಳೂರು ವಾರ್ತಾ ಇಲಾಖೆಯಲ್ಲಿ ಪ್ರಮಾಣಪತ್ರ ನೀಡಿ ಅಭಿನಂದಿಸಿದರು

ಪ್ರಾದೇಶಿಕ ವಾರ್ತೆಗಳು

ಗಂಗಾಧರ್ ಗಾಂಧೀಗೆ ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.

ಅನೇಕ ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ ಕನ್ನಡ ಕಾರ್ಯಕ್ರಮ,ಕಾನೂನು ಕಾರ್ಯಕ್ರಮ ಆಯೋಜನೆ,ಸಂಘಟಕ ಮತ್ತು ಗಾಯನ ಕ್ಷೇತ್ರದಲ್ಲಿ ನಿರಂತರ 12 ಗಂಟೆಗಳ ಕಾಲ ಹಾಡುವ ಮೂಲಕ ಎರಡು ವಿಶ್ವ ದಾಖಲೆ ಮಾಡಿರುವ ಗಂಗಾಧರ್ ಗಾಂಧೀಗೆ ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025 ಇತ್ತೀಚಿಗೆ ಪ್ರಧಾನ ಮಾಡಲಾಯಿತು.ಕೇರಳದ ನೆಲದಲ್ಲಿ ಕನ್ನಡ ಗ್ರಾಮವನ್ನು ಸೃಷ್ಟಿ ಮಾಡಿ ಕನ್ನಡ ಭಾಷೆ ಕನ್ನಡದ ಅನನ್ಯತೆ ಕನ್ನಡದ ಅಸ್ಮಿತೆ ಕುರಿತು ಕಳೆದ 40 ವರ್ಷಗಳಿಂದ ನಿರಂತರ ಕಾರ್ಯಕ್ರಮಗಳನ್ನು ಮಾಡುತ್ತಾ ,ಅದೇ ಕಾಸರಗೋದಿನ ಕನ್ನಡ ಗ್ರಾಮದಲ್ಲಿ ತನ್ನ 60 ನೇ ಜನ್ಮದಿನ ಆಚರಿಸಿದ ಶಿವರಾಮ ಕಾಸರಗೋಡು ಅವರ ಕನಸಿನ ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025 ಯನ್ನು ಕನ್ನಡಕ್ಕಾಗಿ ಕೆಲಸ ಮಾಡಿದ,ಮಾಡುತ್ತಿರುವ 60 ಮಂದಿ ಸಾಧಕರನ್ನು ಈ ಸಂದರ್ಭದಲ್ಲಿ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕನ್ನಡವನ್ನೇ ಉಸಿರಾಗಿ ಬದುಕಿ, ಭವಿಷ್ಯದಲ್ಲಿ ಅನೇಕ ಕನ್ನಡ ಪರ ಕಾರ್ಯಕ್ರಮದ ಕನಸು ಹೊತ್ತಿರುವ , ಆನೇಕ ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ ಕಾನೂನು ಮಾಹಿತಿ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧ ಕಡೆಗಳಲ್ಲಿ ಆಯೋಜಿಸಿದ, ಇತ್ತೀಚಿಗೆ ನಿರಂತರ 12 ಗಂಟೆಗಳ ಕಾಲ ಕನ್ನಡ ಗೀತೆಗಳನ್ನು ಹಾಡುವ ಮೂಲಕ ಎರಡು ವಿಶ್ವ ದಾಖಲೆ ಮಾಡಿರುವ ಗಂಗಾಧರ್ ಗಾಂಧೀ ಅವರನ್ನು ಶಾಲು ಹೊದಿಸಿ, ಹಾರ ಹಕ್ಕಿ ಪೇಟ ತೊಡಿಸಿ ಅಭಿನಂದನ ಪಲಕ ನೀಡಿ ಅತ್ಯಂತ ಪ್ರೀತಿ ಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ, ಸಾಮಾಜಿಕ ಚಿಂತಕ ವೆಂಕಟ್ರಮಣ ಹೊಳ್ಳ, ಕಾರ್ಯಕ್ರಮದ ರೂವಾರಿ ಶಿವರಾಮ ಕಾಸರಗೋಡು.,ಶಿಕ್ಷಕಿ, ಕವಯಾತ್ರಿ ರೇಖಾ ಸುದೇಶ್ ರಾವ್, ಪತ್ರಕರ್ತ ಜಗದೀಶ್ ಕೂಡ್ಲು ಮತ್ತಿತರರು ಉಪಸ್ಥಿತರಿದ್ದರು.ಡಾ. ಕೊಳಚಪ್ಪೆ ಗೋವಿಂದ ಭಟ್.

ಪ್ರಾದೇಶಿಕ ವಾರ್ತೆಗಳು

ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕೃತಿ, ಕಲೆಯನ್ನು “ಕೊರಗಜ್ಜ” ಸಿನಿಮಾ ಎತ್ತಿ ಹಿಡಿದಿದೆ: ಡಾI ಜಿ ಪರಮೇಶ್ವರ್. ನ.11 ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ಕೊರಗಜ್ಜ ದೈವದ ಕೋಲ

ಮಂಗಳೂರು: ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರಾದ ಡಾ ಜಿ ಪರಮೇಶ್ವರ್ ಹರ್ಷ ವ್ಯಕ್ತಪಡಿಸಿದರು. ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು “ಕೊರಗಜ್ಜ” ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಈ ರೀತಿಯ ಚಿತ್ರಗಳು ಹೆಚ್ಚು ಹೆಚ್ಚು ಮೂಡಿಬರಲಿ ಎಂದು ಆಶಿಸಿ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ತಾಯಾರಾಗಿರುವ “ಕೊರಗಜ್ಜ” ಚಿತ್ರಕ್ಕೆ ಶುಭ ಹಾರೈಸಿದರು.ನವಂಬರ್ 11ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ದೂರಿ ಕೋಲಸೇವೆಯ ಬಗ್ಗೆ ರಾಜ್ಯದ ಗೃಹ ಸಚಿವರೊಂದಿಗೆ ಚಿತ್ರತಂಡ ಚರ್ಚಿಸಿತು. ಕೆಲ ಸ್ಥಳಿಯ ಕಿಡಿಕೇಡಿಗಳು ನೀಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಗೃಹಸಚಿವ ಡಾII ಜಿ.ಪರಮೇಶ್ ರವರೊಂದಿಗೆ ನಿರ್ದೇಶಕ ಸುಧೀರ್ ಅತ್ತಾವರ್, ಚಿತ್ರದ ಪ್ರಮುಖ ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ್, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಚರ್ಚಿಸಿ ವಿಶೇಷ ಭದ್ರತೆಯ ಬಗ್ಗೆ ಮನವಿ ಮಾಡಿಕೊಂಡರು. ಗೃಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೋಲಿಸ್ ಕಮಿಷನರ್ ಜೊತೆ ವಿಷಯ ಪ್ರಸ್ತಾಪಿಸಿದರು.ಇತ್ತೀಚೆಗಷ್ಟೇ ಅತ್ಯಂತ ವಿಭಿನ್ನ ರೀತಿಯಲ್ಲಿ ಚಿತ್ರದ ಫಸ್ಟ್ ಲುಕ್ ಮತ್ತು 3ಡಿ ಮೋಷನ್ ಪೋಸ್ಟರ್ ಬಿಡುಗಡೆ ಗೊಳಿಸಿ ಚಿತ್ರದ ಮೇಲಿನ ನಿರೀಕ್ಷೆ ಇಮ್ಮಡಿಗೊಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಅಗಲಿದ ಪತ್ರಕರ್ತ ನಾಗರಾಜ್‌ರಿಗೆ ನುಡಿನಮನ

ಮಂಗಳೂರು: ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ವೀಡಿಯೊ ಜರ್ನಲಿಸ್ಟ್ ನಾಗರಾಜ್ ಅವರಿಗೆ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ ‘ಎರಡು ದಶಕದಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಾಗರಾಜ್ ಅವರ ಕುಟುಂಬಕ್ಕೆ ಪರಿಹಾರ ಧನ ಒದಗಿಸಲು ಎಂಎಲ್‌ಸಿ ಐವನ್ ಡಿಸೋಜಾ ಅವರ ಮೂಲಕ ರಾಜ್ಯ ಸರ್ಕಾರವನ್ನು ವಿನಂತಿಸಲಾಗುವುದು ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ವಿಜಯ ಕೋಟ್ಯಾನ್ ಪಡು ನುಡಿ ನಮನ ಸಲ್ಲಿಸಿದರು.ದಿ. ನಾಗರಾಜ್ ಕುಟುಂಬದ ಸದಸ್ಯರು, ಪತ್ರಕರ್ತರು ಉಪಸ್ಥಿತರಿದ್ದರು.ಫೋಟೋ: ನಾಗರಾಜ್

ಪ್ರಾದೇಶಿಕ ವಾರ್ತೆಗಳು

ಕಿನ್ನಿಗೋಳಿ ಯುಗಪುರುಷದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ: ಕನ್ನಡ ಭಾಷೆ, ಸಂಸ್ಕೃತಿ ಉಳಿಸೋಣ: ಕೆ. ಭುವನಾಭಿರಾಮ ಉಡುಪ

ಮೂಲ್ಕಿ: ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ನಾವೆಲ್ಲರೂ ಗೌರವಿಸಿ, ಉಳಿಸಬೇಕು ಕನ್ನಡ ಭಾಷೆಗೆ ಸ್ವಾಭಿಮಾನದ ಗೌರವವಿದೆ. ಮಕ್ಕಳಲ್ಲಿ ಕನ್ನಡ ಅಭಿಮಾನವನ್ನು ಬೆಳೆಸೋಣ ಎಂದು ಕಿನ್ನಿಗೋಳಿ ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪ ಹೇಳಿದರು.ಅವರು ಕಿನ್ನಿಗೋಳಿಯ ಯುಗಪುರುಷ ಸಂಸ್ಥೆಯ ನೇತೃತ್ವದಲ್ಲಿ ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಸಹಾಭಗಿತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ ಪುನರೂರು ಅಧ್ಯಕ್ಷತೆಯನ್ನು ವಹಿಸಿದ್ದರು.ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ನಮ್ಮ ಪಾತ್ರ ಎನ್ನುವ ವಿಷಯದಲ್ಲಿ ಪಾಂಪೈ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ. ವಿ. ಮಾತನಾಡಿ, ಕನ್ನಡ ನಶಿಸದ ಭಾಷೆಯಲ್ಲ, ಆತಂಕ ಬೇಡ ಓದುಗರು ಕಡಿಮೆಯಾದರೂ ಸಾಹಿತ್ಯ ಚಟುವಟಿಕೆ ಕಡಿಮೆಯಾಗಿಲ್ಲ. ಬರಹಗಾರರನ್ನು ಬೆಳೆಸಿ ಓದುಗರನ್ನು ಸೃಷ್ಟಿಸೋಣ ಎಳೆಯ ಮಕ್ಕಳಲ್ಲಿ ಸಾಹಿತ್ಯ ಅಭಿಮಾನವನ್ನು ಜಾಗೃತಗೋಳಿಸೋಣ ಕನ್ನಡಿಗರ ಹೋರಾಟದಿಂದ ಕನ್ನಡ ಭಾಷೆಗೆ ಸ್ಥಾನಮಾನ ಸಿಕ್ಕಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯ ಡಾ. ಶಿವಾನಂದ ಪ್ರಭು ಅವರನ್ನು ರಾಜ್ಯೋತ್ಸವ ಗೌರವಾರ್ಪಣೆ ನೀಡಲಾಯಿತು.ಉದ್ಯಮಿ ಅಗರಿ ರಾಘವೇಂದ್ರರಾವ್ ಸುರತ್ಕಲ್, ಸಾಣೂರು ಅರುಣ್ ಶೆಟ್ಟಿಗಾರ್, ಸತೀಶ್ ಬಂಗೇರ, ಉಷಾ ಕಿರಣ್, ಸಾಹಿತ್ಯ ಸಂಘಟಕ ಪ್ರದೀಪ್ ಕುಮಾರ್, ಮೂಲ್ಕಿ ಹೋಬಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜೊಸ್ಸಿ ಪಿಂಟೋ, ಹಿರಿಯ ಸಾಹಿತಿ ಬಾಲಕೃಷ್ಣ ಉಡುಪ, ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಪದ್ಮಶ್ರೀ ಭಟ್ ಉಪಸ್ಥಿತರಿದ್ದರು.ಸಂಭ್ರಮ ವಂದಿಸಿದರು. ಅಭಿಷೇಕ್ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣೆ. 34 ಮಂದಿ ಅಭ್ಯರ್ಥಿಗಳು ಕಣದಲ್ಲಿ- ಇಬ್ಬರು ಅವಿರೋಧ ಆಯ್ಕೆ

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣೆ ನ.9ರಂದು ನಡೆಯಲಿದೆ. 23 ಸ್ಥಾನಗಳಿಗೆ ಒಟ್ಟು 34 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಇದ್ದಾರೆ. ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.ನಾಮಪತ್ರ ಹಿಂಪಡೆಯುವ ಸಮಯ ಕೊನೆಗೊಂಡ ಹಿನ್ನಲೆಯಲ್ಲಿ ಕಣದಲ್ಲಿರುವ ಅಭ್ಯರ್ಥಿಗಳ ಚಿತ್ರಣ ಸ್ಪಷ್ಟವಾಗಿದೆ.ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೇಶ್ ಕೆ.ಪೂಜಾರಿ, ಕೋಶಾಧಿಕಾರಿ ಸ್ಥಾನಕ್ಕೆ ವಿಜಯ್ ಕೋಟ್ಯಾನ್ ಪಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಸ್ಥಾನಕ್ಕೆ ನೇರ ಸ್ಪರ್ಧೆ ಏರ್ಪಟ್ಟಿದ್ದು ಪುಷ್ಪರಾಜ್ ಬಿ.ಎನ್ ಹಾಗೂ ಶ್ರವಣ್ ಕುಮಾರ್ ಕೆ. ಕಣದಲ್ಲಿದ್ದಾರೆ.ಉಪಾಧ್ಯಕ್ಷ 3 ಸ್ಥಾನಗಳಿಗೆ 5 ಮಂದಿ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಉಪಾಧ್ಯಕ್ಷತೆಗೆ ಮಹಮ್ಮದ್ ಆರೀಫ್, ಗಂಗಾಧರ ಕಲ್ಲಪಳ್ಳಿ, ಐ.ಬಿ. ಸಂದೀಪ್ ಕುಮಾರ್, ವಿಲ್‌ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ ಸ್ಫರ್ಧಿಸುತ್ತಿದ್ದಾರೆ.ಕಾರ್ಯದರ್ಶಿ 3 ಸ್ಥಾನಗಳಿಗೆ 4 ಮಂದಿ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೆ ಎ. ಸಿದ್ದಿಕ್ ನೀರಾಜೆ, ರಾಜೇಶ್ ಕುಮಾರ್, ಸುರೇಶ್ ಡಿ ಪಳ್ಳಿ, ಸತೀಶ್ ಇರಾ ಸ್ಪರ್ಧಿಸುತ್ತಿದ್ದಾರೆ.ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯತ್ವಕ್ಕೆ ಇಬ್ಬರು ಕಣದಲ್ಲಿದ್ದಾರೆ.ಹಾಲಿ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಮುಹಮ್ಮದ್ ಅನ್ಸಾರ್ ಇನೋಳಿ ಸ್ಪರ್ಧಿಸುತ್ತಿದ್ದಾರೆ.ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರ 15 ಸ್ಥಾನಗಳಿಗೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಅಶೋಕ್ ಶೆಟ್ಟಿ ಬಿ.ಎನ್, ಸಂದೇಶ್ ಜಾರ,ಗಿರೀಶ್ ಅಡ್ಪಂಗಾಯ, ಪ್ರಕಾಶ್ ಸುವರ್ಣ, ಸಂದೀಪ್ ಕುಮಾರ್ ಎಂ. ಲಕ್ಷ್ಮಿನಾರಾಯಣ ರಾವ್, ಹರೀಶ್ ಮೋಟುಕಾನ, ಶಶಿಧರ ಬಂಗೇರ, ದಿವಾಕರ ಪದ್ಮುಂಜ, ಕಿರಣ್ ಯು. ಸಿರ್ಸೀಕರ್, ಅಭಿಷೇಕ್ ಎಚ್.ಎಸ್, ಜಯಶ್ರೀ, ಮಂಜುನಾಥ್ ಕೆ.ಪಿ., ಭುವನೇಶ್ವರ ಜಿ. ಸಂದೀಪ್ ವಾಗ್ಲೆ, ಪ್ರವೀಣ್ ರಾಜ್ ಕೆ.ಎಸ್, ಹರೀಶ್ ಕೆ. ಆದೂರ್, ಲೋಕೇಶ್ ಸುರತ್ಕಲ್, ಶೇಕ್ ಜೈನುದ್ದೀನ್, ಸಂದೀಪ್ ಸಾಲ್ಯಾನ್, ಆರೀಫ್ ಕಲ್ಕಟ್ಟ ಕಣದಲ್ಲಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನಾವಣಾಧಿಕಾರಿಗಳಾದ ವಾರ್ತಾಧಿಕಾರಿ ಖಾದರ್ ಷಾ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ನ.1ರಂದು ದಿ.ಮನೋಹರ ಪ್ರಸಾದ್ ಸಂಸ್ಕರಣೆ

ಮಂಗಳೂರು : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ, ದಿ.ಮನೋಹರ ಪ್ರಸಾದ್ ಸಂಸ್ಕರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ನ.1 ರಂದು ಮಧ್ಯಾಹ್ನ 3.30ಕ್ಕೆ ಕುತ್ತಾರಿನನ ಹೋಟೆಲ್ ವೆಜಿನೇಷನ್ ಸಭಾಂಗಣದಲ್ಲಿ ನಡೆಯಲಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್.ಜಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾವಿದ ಕದ್ರಿ ನವನೀತ ಶೆಟ್ಟಿ ಅವರು ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಳ್ಳಾಲ ನಗರಸಭೆ ಅಧ್ಯಕ್ಷೆ ಶಶಿಕಲಾ ಕೆ., ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ, ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ನ ಉಳ್ಳಾಲ ಘಟಕದ ಅಧ್ಯಕ್ಷ ರಾಜೇಶ್ ಉಳ್ಳಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ವಿದ್ಯಾಧರ ಶೆಟ್ಟಿ, ಛಾಯಾಗ್ರಾಹಕ ಅಶೋಕ್ ಉಳ್ಳಾಲ್, ಪವರ್ ಲಿಫ್ಟರ್ ಗೀತಾ ಬಾಯಿ ಇವರುಗಳನ್ನು ಸನ್ಮಾನಿಸಲಾಗುವುದೆಂದು ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.……………………………………………

ಪ್ರಾದೇಶಿಕ ವಾರ್ತೆಗಳು

ಸಿಎಸ್ಆರ್ ಅಡಿಯಲ್ಲಿ ಪಾರದೀಪ್ ಫಾಸ್ಪೆಟ್ಸ್ ನಿಂದ ವಿಶೇಷ ಮಕ್ಕಳ ಶಾಲೆಗೆ ವ್ಯಾನ್ ಕೊಡುಗೆ

ಪಣಂಬೂರು, ಅ. 24: ಸಿಎಸ್ಆರ್ ನಿಧಿಯಡಿ ಪಣಂಬೂರಿನ ಪಾರದೀಪ್ ಫಾಸ್ಪೆಟ್ಸ್ ನಿಂದ ಕುಲಶೇಖರದಲ್ಲಿರುವ ಶ್ರೀ ದುರ್ಗಾ ನಡೆಸುತ್ತಿರುವ ಐಕ್ಯಮ್ ವಿಶೇಷ ಮಕ್ಕಳ ಶಾಲೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯಾನ್ ನ ಕೊಡುಗೆ ನೀಡಲಾಯಿತು.ಪಿಪಿಎಲ್ ಕಂಪನಿಯ ಸಿಎಂಓ ಎಸ್. ಗಿರೀಶ್ ಅವರು ಸಂಸ್ಥೆಯ ವತಿಯಿಂದ ಸಿಎಸ್ ಆರ್ ಯೋಜನೆ ಹಮ್ಮಿ ಕೊಂಡು ಅಗತ್ಯ ವುಳ್ಳ ಈ ಶಾಲೆಗೆ ಕೊಡುಗೆ ನೀಡಲಾಗಿದೆ ಎಂದರು.ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ಮಾತನಾಡಿ ವಿಶೇಷ ಸಾಮರ್ಥ್ಯದ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವುದರ ಮೂಲಕ ಮುಖ್ಯ ವಾಹಿನಿ ಗೆ ತರ ಬೇಕಾಗಿದೆ ಎಂದರು.ದುರ್ಗಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕಮಲಾಕ್ಷಿ ಅವರು ಪಿಪಿಎಲ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.ಪಿಪಿ ಎಲ್ ಜೆ ಜಿ ಎಂ ಚೇತನ್ ಮೆಂಡೋನ್ಸ, ಸುರತ್ಕಲ್ ರೋಟರಿ ಕ್ಲಬ್ ಉಪಾಧ್ಯಕ್ಷ ರಮೇಶ್ ರಾವ್ ಮಧ್ಯ, ಕಾರ್ಯದರ್ಶಿ ರಾಮಮೋಹನ್. ವೈ., ಕ್ಲಬ್ ಸೇವಾ ನಿರ್ದೇಶಕ ಕೃಷ್ಣ ಮೂರ್ತಿ, ಪಬ್ಲಿಕ್ ಇಮೇಜ್ ನಿರ್ದೇಶಕ ಡಾ. ರಾಜಮೋಹನ್ ರಾವ್. ಕೆ. ದುರ್ಗಾ ಟ್ರಸ್ಟ್ ಪದಾಧಿ ಕಾರಿಗಳು, ರೋಟರಿ ಸದಸ್ಯರು ಉಪಸ್ಥಿತರಿದ್ದರು. ದುರ್ಗಾ ಟ್ರಸ್ಟ್ ಕಾರ್ಯ ದರ್ಶಿ ಸಂತೋಷ್ ಕುಮಾರ್ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ನಗರಪಾಲಿಕೆ ವ್ಯಾಪ್ತಿಯ ನಿವೇಶನರಹಿತರಿಗೆ ವಸತಿ ಯೋಜನೆ ಜಾರಿಯಾಗಲಿ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡ ನಿವೇಶನ ರಹಿತರಿಗೆ G+ 3 ಮಾದರಿ ವಸತಿಯೋಜನೆಯನ್ನು ಜಾರಿಗೊಳಿಸಲು ಒತ್ತಾಯಿಸಿ ನಿವೇಶನ ರಹಿತರ ಹೋರಾಟ ಸಮಿತಿ (CPIM ) ನೇತೃತ್ವದಲ್ಲಿ ಲಾಲ್ ಬಾಗ್ ನಲ್ಲಿರುವ ನಗರಪಾಲಿಕೆ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿರುವ ಸುಮಾರು 7000ದಷ್ಟು ಮನೆ ನಿವೇಶನ ಆಕಾಂಕ್ಷಿಗಳ ಪರಿಸ್ಥಿತಿ ಡೋಲಾಯಮಾನವಾಗಿದೆ. ಕೇಂದ್ರ, ರಾಜ್ಯ ಸರಕಾರ ಮತ್ತು ಸ್ಥಳೀಯಾಡಳಿತವು ನಿವೇಶನ ರಹಿತರಿಗೆ ಸೂರು ನೀಡುವ ಕುರಿತಾದ ಪತ್ರಿಕಾ ಪ್ರಕಟಣೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ವಸತಿ ವಿತರಿಸಲಾಗಿದೆ ಎಂಬ ಆಕರ್ಷಕ ಹೇಳಿಕೆಗಳು ರಾರಾಜಿಸುತ್ತಿದೆ. ಆದರೆ ವಾಸ್ತವಿಕವಾಗಿ ಅದು ಕೇವಲ ಪ್ರಚಾರದ ತೆವಳಿಗಾಗಿಯೇ ಹೊರತು ಎಲ್ಲಿಯೂ ಜಾರಿಯಾಗುತ್ತಿಲ್ಲ. ಪಾಲಿಕೆ ವ್ಯಾಪ್ತಿಯ ಶಾಸಕರು ವಸತಿ ನೀಡುವ ಬದಲು ನಿವೇಶನ ರಹಿತರ ಹೆಸರಿನಲ್ಲಿ TDR ನೀಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಎಸಗಿದ್ದಾರೆ ಎಂದರು.ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್‌ನ ಇಡ್ಯಾದಲ್ಲಿ ಬಹುಮಹಡಿಗಳ ನಿವೇಶನ ರಹಿತರ ವಸತಿ ಸಂಕೀರ್ಣ ಕಾಮಗಾರಿ ಅರ್ಧದಲ್ಲೇ ನಿಂತು ಆರು ವರ್ಷಗಳು ಆದರೂ ಕೂಡ ಜನಪ್ರತಿನಿದಿಗಳಿಗೆ ಯಾವುದೇ ಸಂಬಂಧ ಇರದ ರೀತಿಯಲ್ಲಿ ಮೂಕರಾಗಿದ್ದಾರೆಶಕ್ತಿನಗರದಲ್ಲಿಯೂ ವಸತಿ ನಿರ್ಮಾಣ ಯೋಜನೆ ಅಂತಿಮಗೊಂಡಿಲ್ಲ. ಮ.ನ.ಪಾ.ದ ಅಡಳಿತ ಮತ್ತು ಜನಪ್ರತಿನಿಧಿಗಳ ಉಡಾಫೆ ಮನೋಭಾವವೇ ಇದಕ್ಕೆ ಕಾರಣ. ಈ ಎರಡು ಯೋಜನೆಗಳು ಅಲ್ಲದೆ ಟಿಡಿಆರ್‌ನಲ್ಲಿ ವಸತಿಹೀನರ ಹೆಸರಿನಲ್ಲಿ ನಾಲೈದು ಕಡೆ ಮಂಗಳೂರು ಮಹಾನಗರ ಪಾಲಿಕೆ ಜಾಗವನ್ನು ಪಡೆದಿದೆಯೇ ವಿನಾಃ ಕಾಮಗಾರಿಯ ಪ್ರಸ್ತಾಪ ಆಗಿರುವುದಿಲ್ಲ. ಬದಲಾಗಿ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ಎಸಗಲಾಗಿದೆ ಎಂದರು.Dyfi ನ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಕಳೆದ ಜನವರಿ ತಿಂಗಳಿನಿಂದ ಮೂರು ಬಾರಿ ಪ್ರತಿಭಟನೆಯನ್ನು ನಡೆಸಲಾಗಿದೆ. ಆದರೆ ಕುಂಭಕರ್ಣ ನಿದ್ದೆಯಲ್ಲಿ ಇರುವ ಮಂಗಳೂರು ಮಹಾನಗರ ಪಾಲಿಕೆ ಯಾವುದೇ ರೀತಿಯಲ್ಲಿ ಸ್ಪಂಧಿಸುತ್ತಿಲ್ಲ.ಆದುದರಿಂದ ಮ.ನ.ಪಾ.ದ ಜನವಿರೋಧಿ ಧೋರಣೆ ವಿರೋಧಿಸಿ ತೀವೃ ಸ್ವರೂಪದ ಹೋರಾಟಮುಂದಿನ ದಿನಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರುಪ್ರತಿಭಟನೆಯಲ್ಲಿ ಮಾಜಿ ಕಾರ್ಪೋರೇಟರ್ ದಯಾನಂದ ಶೆಟ್ಟಿ , ಯುವಜನ ಮುಖಂಡರಾದ ಶ್ರೀನಾಥ್ ಕಾಟಿಪಳ್ಳ ಸಭೆಯನ್ನುದ್ದೇಶಿಸಿ. ಮಾತನಾಡಿದರು.ಪ್ರತಿಭಟನೆಯ ನೇತೃತ್ವವನ್ನು ಹೋರಾಟ ಸಮಿತಿಯ ಅಧ್ಯಕ್ಷರಾದ ಅಸುಂತಾ ಡಿಸೋಜ, ನವೀನ್ ಕೊಂಚಾಡಿ , ಅಬ್ದುಲ್ ತಯ್ಯೂಬ್, ನಾಗೇಶ್ ಕೋಟ್ಯಾನ್,ಮನೋಜ್ ವಾಮಂಜೂರ್,ಯೋಗಿತಾ ಉಳ್ಳಾಲ್ ವಹಿಸಿದ್ದರು.ಪ್ರತಿಭಟನೆಯಲ್ಲಿ DHS ಮುಖಂಡರಾದ ಕೃಷ್ಣ ತಣ್ಣೀರುಬಾವಿ, ರಾದಾಕೃಷ್ಣ , ತಿಮ್ಮಯ್ಯ ಕೊಂಚಾಡಿ, DYFI ನ ಜಗದೀಶ ಬಜಾಲ್ , ನಾಸೀರ್ ಬೆಂಗ್ರೆ ಉಪಸ್ಥಿತರಿದ್ದರು.ಹೋರಾಟಸಮಿತಿಯ ಕಾರ್ಯದರ್ಶಿ ಪ್ರಮೀಳಾ ಶಕ್ತಿನಗರ ವಂದನಾರ್ಪನೆಗೈದರು.

Scroll to Top