ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

‘St. Theresa’s School’ invites Dr. Rohan S. Monis for the Orientation Programme of Kindergarten Parents.

Mangaluru, June 20, 2026 St. Theresa’s School conducted an Orientation Programme for the parents of Kindergarten students on 20th June 2026 at 9:00 a.m. in the Msgr. Raymond Auditorium, marking the beginning of a fruitful partnership between the school and parents in nurturing the holistic development of young learners. The programme commenced with a prayer service seeking God’s blessings, led by Mrs. Priya and Mrs. Jesney. Mrs. Lidwin extended a warm welcome to the gathering, while Mrs. Seema gracefully compered the programme. Addressing the parents, the Principal, Sr. Lourdes, familiarised them with the rules and regulations of the school and emphasised the importance of positive parenting and a value-based family culture. She urged parents to speak positively about the school in the presence of their children so that they develop a healthy attitude towards learning. Highlighting the need to nurture values from an early age, she stressed the importance of raising children who are sensitive, disciplined, humble and respectful towards others. She also encouraged parents to help children accept correction with love and understanding and to work hand in hand with the school in shaping responsible and compassionate individuals. Mrs. Roshni introduced the Chief Guest, Dr. Rohan S. Monis – Chief Administrative Officer of Kanachur Medical College & an advocate for CPR & Organ Donation. In his insightful address, Dr. Monis spoke on various aspects of purposeful parenting, schooling, children’s emotional scaffolding and behaviour. He highlighted the vital role of parental love with right communication & emotional support and healthy family relationships in a child’s overall mind development. Speaking on “Learning Happens as a Rhythm,” he stressed the importance of creating a natural and balanced rhythm in a child’s life through adequate rest, movement, communication, limited screen time, structured routines, creating boundaries and ensuring proper mental and physical nourishment. Exploring the fact “Treat Your Child as a Little Adult,” he encouraged parents to communicate with children respectfully through clear explanations, meaningful choices, validation of their emotions and collaborative conflict resolution. Emphasising the need for emotional bonding & setting up boundaries. He spoke on “The Power of the Kissing Embrace,” urging parents, especially fathers, to express affection openly and create a loving environment for their children; by breaking the no touch technique that most of them were brought up with. He wished the Fathers an ‘Happy Early Father’s Day’ too. The vote of thanks was proposed by Mrs. Savitha. An interactive session followed, during which parents actively participated and had their queries and concerns addressed by Sr. Lourdes and Mrs. Gladys. The programme concluded with the National Anthem, heralding the successful beginning of a collaborative journey between the school and parents in fostering the all-round growth and development of every child.

ಪ್ರಾದೇಶಿಕ ವಾರ್ತೆಗಳು

Mangaluru to Welcome Bollywood Badshah Shah Rukh Khan for a Landmark Event Hosted by Rohan Corporation

Mangaluru: Rohan Corporation, one of Coastal Karnataka’s most respected and trusted real estate developers, has announced that Bollywood superstar and global entertainment icon Shah Rukh Khan will visit Mangaluru on June 25, 2026, as the special guest at an exclusive event titled “An Evening with Shah Rukh Khan.” The much-anticipated event will be held at Adyar Garden, Mangaluru, with entry commencing from 4:00 PM onwards. Bringing together an influential gathering of business leaders, industry stalwarts, dignitaries, invited guests, and registered members of the public, the evening is poised to be among the most significant corporate and entertainment events ever hosted in the region. Announcing the visit, Dr. Rohan Monteiro, Founder and Managing Director of Rohan Corporation, said the moment marks a defining milestone for the organization. “We are delighted to welcome Shah Rukh Khan to Mangaluru for this special evening. This is a moment of immense pride for Rohan Corporation, and we look forward to hosting a truly memorable experience for our guests and attendees,” he said. Dion Monteiro, Director of Rohan Corporation, underscored the scale of the event and the level of execution it demands. “This will be one of the most prominent corporate events ever hosted in Mangaluru. The occasion marks a landmark moment for our organization and for the city, bringing together distinguished guests for an evening of exceptional significance. We seek the cooperation of all concerned departments and the public in making the event a safe and memorable success,” he said. Rohan Corporation has confirmed that prior registration is mandatory for all attendees. Entry will be permitted only upon presentation of a valid registered pass issued by the organizers. The announcement of Shah Rukh Khan’s visit has generated tremendous excitement across the region and beyond, with the event expected to attract widespread attention from fans, business leaders, and the public alike. The evening is poised to become a landmark occasion in Mangaluru’s event landscape, further reinforcing the city’s growing stature as a destination capable of hosting events of national prominence and significance. About Rohan Corporation Rohan Corporation is one of Coastal Karnataka’s leading real estate development companies, renowned for delivering landmark residential, commercial, and mixed-use developments. Built on a foundation of trust, quality, innovation, and customer-centricity, the company has played a significant role in shaping the region’s evolving urban landscape while consistently setting new benchmarks in excellence. For any assistance, call: +91 90355 64026 ————————————————— *ಪತ್ರಿಕಾ ಪ್ರಕಟಣೆ* *ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ* ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ” ಎಂದು ಹೇಳಿದರು. ಕಾರ್ಯಕ್ರಮದ ಸಿದ್ದತೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕರಾದ ಶ್ರೀ ಡಿಯಾನ್ ಮೊಂತೇರೊ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ನಮ್ಮ ಸಂಸ್ಥೆಗೆ ಮತ್ತು ನಗರಕ್ಕೆ ಮಹತ್ವದ ಕ್ಷಣವಾಗಿರುವ ಈ ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ’ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪಾಸ್‌ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅಪಾರ ಕುತೂಹಲ ಮತ್ತು ನಿರೀಕ್ಷೆ ಮೂಡಿದ್ದು, ಈ ಕಾರ್ಯಕ್ರಮವು ಮಂಗಳೂರಿನ ಕಾರ್ಪೊರೇಟ್ ಹಾಗೂ ಸಾಮಾಜಿಕ ವಲಯದಲ್ಲಿ ವಿಶೇಷ ಗಮನ ಸೆಳೆಯುವ ನಿರೀಕ್ಷೆಯಿದೆ. ರೋಹನ್ ಕಾರ್ಪೊರೇಶನ್ ಬಗ್ಗೆ ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ. ಹೆಚ್ಚಿನ ಮಾಹಿತಿಗಾಗಿ 📞 : +91 90355 64026

ಪ್ರಾದೇಶಿಕ ವಾರ್ತೆಗಳು

ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ” ಎಂದು ಹೇಳಿದರು. ಕಾರ್ಯಕ್ರಮದ ಸಿದ್ದತೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕರಾದ ಶ್ರೀ ಡಿಯಾನ್ ಮೊಂತೇರೊ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ನಮ್ಮ ಸಂಸ್ಥೆಗೆ ಮತ್ತು ನಗರಕ್ಕೆ ಮಹತ್ವದ ಕ್ಷಣವಾಗಿರುವ ಈ ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ’ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪಾಸ್‌ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅಪಾರ ಕುತೂಹಲ ಮತ್ತು ನಿರೀಕ್ಷೆ ಮೂಡಿದ್ದು, ಈ ಕಾರ್ಯಕ್ರಮವು ಮಂಗಳೂರಿನ ಕಾರ್ಪೊರೇಟ್ ಹಾಗೂ ಸಾಮಾಜಿಕ ವಲಯದಲ್ಲಿ ವಿಶೇಷ ಗಮನ ಸೆಳೆಯುವ ನಿರೀಕ್ಷೆಯಿದೆ. ರೋಹನ್ ಕಾರ್ಪೊರೇಶನ್ ಬಗ್ಗೆ ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ. ಹೆಚ್ಚಿನ ಮಾಹಿತಿಗಾಗಿ 📞 : +91 90355 64026

ಪ್ರಾದೇಶಿಕ ವಾರ್ತೆಗಳು

ಜೂನ್ 28ರಂದು ಮಂಗಳಾದೇವಿ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಮಾರ್ಗದರ್ಶಿ -Cracking the UPSC Examination

ಮಂಗಳೂರು IAS, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ನಾಗರಿಕ ಸೇವಾ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ, ಪ್ರೇರಣೆ ಹಾಗೂ ಸ್ಪಷ್ಟ ದಿಕ್ಕುನಿರ್ದೇಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ರಾಮಕೃಷ್ಣ ಮಿಷನ್, ಮಂಗಳೂರು ಇದರ ಕಾರ್ಯದರ್ಶಿಗಳಾದ ಸ್ವಾಮಿ ಜಿತಕಾಮಾನಂದಜಿ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಶ್ರೀ ಅರುಣ್ ಜೇಜಿ ಚಕ್ರವರ್ತಿ, IPS, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ, IPS ಹಾಗೂ ಮಂಗಳೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀ ಶಶಿಕಾಂತ್ ಸೋಮನಾಥ್ ವಿಭೂತೆ, IFS ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. UPSC ಮಾಸ್ಟರ್ ಟ್ರೈನರ್ಗಳಾದ ಶ್ರೀ ಮೋಹನ್ ಕೃಷ್ಣಮೂರ್ತಿ ಹಾಗೂ ಶ್ರೀ ಚಂದ್ರಮೋಹನ್ ಇನಗಂಟಿ, ಪ್ರಥಮ ದರ್ಜೆ ಮಹಿಳಾ ಕಾಲೇಜು, ಬಲ್ಮಠ, ಮಂಗಳೂರು ಇದರ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಮನಾ ಬಿ., ಜಾಗತಿಕ ಮಟ್ಟದ ಗೂಗಲ್ ಪ್ರಮಾಣಿತ ಶಿಕ್ಷಣತಜ್ಞ ಹಾಗೂ ಮೈಕ್ರೋಸಾಫ್ಟ್ ಪ್ರಮಾಣಿತ ಶಿಕ್ಷಣ ತಜ್ಞರಾದ ಶ್ರೀ ಡಾನ್ ಪ್ರಕಾಶ್ ಮತ್ತು ಮಂಗಳೂರು IAS ಸಂಸ್ಥಾಪಕರಾದ ಶ್ರೀ ಸಂತೋಷ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾರ್ಗದರ್ಶನ ನೀಡಲಿದ್ದಾರೆ. UPSC ಪರೀಕ್ಷೆಯ ಮಾದರಿ, ಪರಿಣಾಮಕಾರಿ ಅಧ್ಯಯನ ತಂತ್ರಗಳು, ಸಮಯ ನಿರ್ವಹಣೆ, ಉತ್ಪಾದಕತೆ ವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಸಾಮಾನ್ಯವಾಗಿ ಮಾಡುವ ತಪ್ಪುಗಳು, ತಜ್ಞರೊಂದಿಗೆ ನೇರ ಪ್ರಶ್ನೋತ್ತರ, ಪ್ರೇರಣಾತ್ಮಕ ಮಾರ್ಗದರ್ಶನ ಹಾಗೂ ವೃತ್ತಿ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ವಿಶೇಷ ಉಪನ್ಯಾಸಗಳು ನಡೆಯಲಿವೆ. ಈ ಕಾರ್ಯಕ್ರಮವು ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷರಾದ ಶ್ರೀ ರೊಯ್ ಕ್ಯಾಸ್ಟೆಲಿನೊ ಹಾಗೂ ಮಂಗಳೂರು IAS ಸಂಸ್ಥಾಪಕರಾದ ಶ್ರೀ ಸಂತೋಷ್ ರಾವ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಅಗತ್ಯವಾದ ಮತ್ತು ಸರಿಯಾದ ತಯಾರಿ ವಿಧಾನ, ಮಾರ್ಗದರ್ಶನ ಹಾಗೂ ಸ್ಪಷ್ಟತೆಯನ್ನು ಅಭ್ಯರ್ಥಿಗಳಿಗೆ ಒದಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಎಲ್ಲಾ ಅಧಿವೇಶನಗಳಿಗೆ ಪ್ರವೇಶ, ಊಟ, ಇ-ಪ್ರಮಾಣಪತ್ರ ಹಾಗೂ ಭವಿಷ್ಯದ ವಿದ್ಯಾರ್ಥಿವೇತನ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳ ಅವಕಾಶಗಳು ಲಭ್ಯವಾಗಲಿವೆ. ನಾಗರಿಕ ಸೇವೆ ಹಾಗೂ ಸರ್ಕಾರಿ ಉದ್ಯೋಗ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಆಸನಗಳು ಸೀಮಿತವಾಗಿರುವುದರಿಂದ ಮೊದಲಿಗೆ ನೋಂದಾಯಿಸುವವರಿಗೆ ಆದ್ಯತೆ ನೀಡಲಾಗುವುದು. ನೋಂದಣಿ ಶುಲ್ಕ ರೂ. 200 ಆಗಿರುತ್ತದೆ.ಪ್ರಕಟಣೆ: ಮಂಗಳೂರು IAS ಸಹಯೋಗದಲ್ಲಿ ರಚನಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು“Different but NOT Difficult Exams” ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದವರು: ಸಂತೋಷ್ ರಾವ್ – ಸಂಸ್ಥಾಪಕರು, ಮಂಗಳೂರು ಐಎಎಸ್ಫಾ. ರೋಶನ್ ರೊಸಾರಿಯೊ OFM (CAP) – ನಿರ್ದೇಶಕರು, ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಆ್ಯಂಡ್ ಎಜುಕೇಶನ್ರೊಯ್ ಕ್ಯಾಸ್ಟೆಲಿನೊ – ಅಧ್ಯಕ್ಷರು, ರಚನಾ – ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಆ್ಯಲ್ರನ್ ರೊಡ್ರಿಗಸ್ – ಕಾರ್ಯದರ್ಶಿ, ರಚನಾ

ಪ್ರಾದೇಶಿಕ ವಾರ್ತೆಗಳು

ಪಾಲೇಮಾರ್ ಕನ್ಫವೆನ್ಷನಲ್ ಹಾಲ್ ನ ಆವರಣ, ಮೇರಿಹಿಲ್ ಇಲ್ಲಿ 12ನೇ ಅಂತರರಾಷ್ಟೀಯ ಯೋಗ ದಿನಾಚರಣೆ

.ಮಂಗಳೂರು -ಮನಸ್ಸು,ನಮ್ಮ ಶರೀರ ನಮ್ಮ ಅಧ್ಯಾತಿಕತೆ ಅದರ ಜೊತೆಗೆ ಸ೦ಸ್ಕಾರ , ಸಮಾಜ ಸೇವೆ ಇ೦ದಿನ ಜೀವನಕ್ಕೆಅನಿವಾರ್ಯ, ಯೋಗದಿ೦ದ ರೋಗ ಮುಕ್ತ ಜೀವನವನ್ನು ನಾವು ಪಡೆಯಬೇಕು ಎ೦ದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಪೌಂಡೇ ಶನ್ (ರಿ)ಮಂಗಳೂರು ಮಹಾನಗರ ಇದರ ವತಿಯಿಂದ ಪಾಲೇಮಾರ್ ಕನ್ಫವೆನ್ಷನಲ್ ಹಾಲ್ ನ ಆವರಣ,ಮೇರಿಹಿಲ್ ಇಲ್ಲಿ ನಡೆದ 12ನೇ ಅಂತರರಾಷ್ಟೀಯ ಯೋಗ ದಿನಾಚರಣೆಯುನ್ನು ಉದ್ಯಮಿ ಹಾಗೂ ಸಮಾಜ ಸೇವಾಕರ್ತರಾದ ಪ್ರಶಾಂತ ಪೈ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಮೂಲಕ ಉದ್ಘಾಟನೆ ಮಾಡಿದರು.ಯೋಗದ ಮಹತ್ವವನ್ನು ತಿಳಿದುಕೊ೦ಡು ಹಾಗೂ ಜೀವನದಲ್ಲಿ ಅದನ್ನು ಅಳವಡಿಸಿ ಕೊಂಡು ಆರೋಗ್ಯಕರ ಜೀವನವನ್ನು ಅನುಭವಿಸಬೇಕು ಎ೦ದು ಮುಖ್ಯ ಆತಿಥಿ ಮಾಜಿ ಮೇಯರ್ ಜಯಾನಂದ ಅಂಚನ್ ರವರು ಮಾತನಾಡಿದರು.. ಯೋಗಭ್ಯಾಸ ಮಾಡುವುದರಿ೦ದ ಸಾವಧನತೆ ಮತ್ತು ಭಾವನತ್ಮಕ ನಿಯ೦ತ್ರಣವನ್ನು ಬೆಳೆಸುವ ಮೂಲಕ ಮಾನಸಿಕ ಮತ್ತು ಅ೦ತರಿಕ ಶಾ೦ತಿ ಮತ್ತು ವಿಶ್ರಾ೦ತಿಯ ಭಾವನೆಯನ್ನು ಉತ್ತೇಜಿಸುತ್ತದೆ ಎ೦ದು ಕುಮಾರಿ ಆರಾಧ್ಯ ಅವರು ಯೋಗ ದಿನದ ಮಹತ್ವದ ಬಗ್ಗೆ ಬೌದ್ಧಿಕ ನೀಡಿದರು.ಪ್ರಾರಂಭದಲ್ಲಿ ಭಜನೆ ಯನ್ನು ವೀರಾಂಜನೇಯ ಶಾಖೆ ಅಡ್ಯಾರ್ ಇಲ್ಲಿನ ಯೋಗ ಬಂಧುಗಳು ನಡೆಸಿ ಕೊಟ್ಟರು.ಅಮೃತ ವಚನ ವನ್ನು ಶಿವಪ್ಪ ಅವರು ನಡೆಸಿಕೊಟ್ಟರು. ಪಂಚಾಗ ಪಠಣ ವನ್ನು ಶ್ರೀಮತಿ ಪ್ರಪುಲ್ಲ ಇವರು ನಡೆಸಿಕೊಟ್ಟರು.ಮಾನಸಿಕ ಸಿದ್ಧತೆ, ಉಸಿರಾಟದ ಕ್ರಿಯೆ, ಗಣಪತಿ ನಮಸ್ಕಾರ ವನ್ನು ಸುರೇಂದ್ರ ಹಾಗೂ ಪ್ರಾತ್ಯಕ್ಷಿತೆ ಯನ್ನು ರೇಣುಕಾ ಹಾಗೂ ಸದಾಶಿವ ಅವರು ನಡೆಸಿಕೊಟ್ಟರು.ಭಾಸ್ಕರ್ ,ಉಮಾ ,ರಾಮಕೃಷ್ಣ, ಸುಮಿತ್ರ, ಲೋಕೇಶ್ ಜಯಂತಿ ದಂಪತಿಗಳು ಅಗ್ನಿ ಹೋತ್ರ ಕಾರ್ಯಕ್ರಮ ನಡೆಸಿದರು.ಆಯುಷ್ ಪಠ್ಯ ಕ್ರಮ ದ ಯೋಗಭ್ಯಾಸವನ್ನು ಹಿರಿಯ ಶಿಕ್ಷಕರಾದ ಶಿವಾನಂದ ಹಾಗೂ ಪ್ರತ್ಯಕ್ಷಿಕೆಯನ್ನು ವಿನೀತ್ , ಭವ್ಯ ಅವರು ನಡೆಸಿಕೊಟ್ಟರು.ಕಾರ್ಯಕ್ರಮದ ಸಂಚಾಲಕರಾದ ಮಹಾಬಲ ಅವರು ವಂದನಾರ್ಪಣೆ ಮಾಡಿದರು.ಶ್ರೀಮತಿ ದಿವ್ಯಶ್ರೀ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು.ಅನ್ನಪೂರ್ಣೇ ಮಂತ್ರ ಹೇಳಿ ಪ್ರಸಾದ ಸ್ವೀಕರಿಸಿಸಲಾಯಿತು.ಸಮಿತಿ ಪ್ರಮುಖರಾದ ರವೀಶ್, , ಆನಂದ, ಗೋಕುಲ್ ನಾಥ , ಪ್ರಕಾಶ್ , ದಾಮೋದರ , ಪ್ರವೀಣ್ , ಉಮೇಶ್ ಪೊಳಲಿ, ವೇಣುಗೋಪಾಲ್ ,ಜನಾರ್ಧನ್ ,ಉಮೇಶ್ ಕದ್ರಿ, ಪ್ರಸಾದ್ ನಂಬಿಯರ್, ಗೀತಾ ,ಪುಷ್ಪಾ ಲತಾ,ಭಾರತಿ , ವಿಶಾಲಕ್ಷಿ ಲೀಲಾ ,ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದರು.ಕದ್ರಿ, ಕಂಕನಾಡಿ, ಪೊಳಲಿ, ಹಳೆಯಂಗಡಿ, ಮಂಗಳೂರು ನಗರದ ಯೋಗ ಬಂಧುಗಳು ಹಾಗೂ ಸ್ಥಳೀಯ ಸಂಘ ಸಂಸ್ಥೆ ಯ ಬಂಧುಗಳು, ಸಾರ್ವಜನಿಕರು ಸುಮಾರು ಒಟ್ಟು 500ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಾಸಣಾ ಶಿಬಿರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಸೋಮವಾರ ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಾಸಣಾ ಶಿಬಿರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ನಿಯೋಜಿತ ಅಧ್ಯಕ್ಷ ರವೀಂದ್ರ ಬಿ.ಎನ್. ಶಿಬಿರ ಉದ್ಘಾಟಿಸಿದರು. ಆಯುರ್ವೇದ ತಜ್ಞೆ ಡಾ.ಜ್ಯೋತಿ ಕೆ. ಮಾತನಾಡಿ ” ಮೂಳೆ ಖನಿಜ ಸಾಂದ್ರತೆ ಕುರಿತು ಜಾಗೃತಿ ಮೂಡಿಸುವುದು ಅಗತ್ಯ. ನಿಯಮಿತ ತಪಾಸಣೆಯಿಂದ ಯಾವುದೇ ಅರೋಗ್ಯ ಸಮಸ್ಯೆಯನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯ’ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ,ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಬೆಂಗಳೂರಿನ ಮೆಡಿಲ್ಯಾಬ್ ಇಂಡಿಯಾ ಫಾರ್ಮಾ ಸಂಸ್ಥೆಯ ಪ್ರತಿನಿಧಿ ಅರುಣ್ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪ್ರಭಾವಿಗಳ ಹಿತ ಕಾಪಾಡಲು ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ಪಾಲಿಕೆಯ ದಬ್ಬಾಳಿಕೆ ಖಂಡನೀಯ – ಸಿಪಿಐಎಂ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ನಗರಾಡಳಿತ ನಡೆಸುತ್ತಿರುವ ದಾಳಿಗಳು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆಡಳಿತವನ್ನೇ ನಾಚಿಸುವಂತಿದೆ. ನಗರದಲ್ಲಿ ಸಂಡೇ ಬಜಾರ್ ವ್ಯಾಪಾರಸ್ಥರ ವಿರುದ್ದ ಪ್ರಾರಂಭವಾದ ದಬ್ಬಾಳಿಕೆಗಳು ನಗರದ ಎಲ್ಲಾ ಭಾಗಗಳಲ್ಲಿಯೂ ವಿಸ್ತರಿಸಿದೆ. ಇದು ತನ್ನ ಬಡಜನ ವಿರೋದಿ ಮನೋಭಾವವನ್ನು ತೋರಿಸುತ್ತದೆ ಎಂದು CPIM ನಗರ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.Jun20ರ ಶನಿವಾರ ಪಡೀಲ್–ಬಜಾಲ್ ಮುಖ್ಯ ರಸ್ತೆಯಲ್ಲಿ ಜೀವನೋಪಾಯಕ್ಕಾಗಿ ಹಲವು ವರ್ಷಗಳಿಂದ ಹೂವಿನ ವ್ಯಾಪಾರ ನಡೆಸುತ್ತಿದ್ದ ಅಂಗವಿಕಲ ಬೀದಿಬದಿ ವ್ಯಾಪಾರಿಗಳಾದ ಚಂದ್ರಹಾಸ ಪೂಜಾರಿ ಮತ್ತು ಸುನೀತಾ ಪೂಜಾರಿ ಅವರ ವ್ಯಾಪಾರ ಕೇಂದ್ರಗಳನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಿರುವ ಮಂಗಳೂರು ಮಹಾನಗರ ಪಾಲಿಕೆಯ ಅಮಾನವೀಯ ಕ್ರಮವನ್ನು ಸಿಪಿಐಎಂ ಮಂಗಳೂರು ನಗರ ಸಮಿತಿ ತೀವ್ರವಾಗಿ ಖಂಡಿಸುತ್ತದೆ.ತಮ್ಮ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಬಡ ಕಾರ್ಮಿಕ ವರ್ಗದ ಮೇಲೆ ಅಧಿಕಾರ ಯಂತ್ರವನ್ನು ಬಳಸಿಕೊಂಡು ದಾಳಿ ನಡೆಸಿರುವುದು ಕೇವಲ ಆಡಳಿತಾತ್ಮಕ ಕ್ರಮವಲ್ಲ; ಇದು ಬಂಡವಾಳಶಾಹಿ ವ್ಯವಸ್ಥೆಯ ವರ್ಗಪಕ್ಷಪಾತದ ಮುಖವನ್ನು ಮತ್ತೊಮ್ಮೆ ಬಯಲಿಗೆಳೆದಿರುವ ಘಟನೆಯಾಗಿದೆ. ದೊಡ್ಡ ವ್ಯಾಪಾರ ಮಳಿಗೆಗಳು, ಪ್ರಭಾವಿ ಮಾಲಕರು ಮತ್ತು ಹಣದ ಶಕ್ತಿಯ ಮುಂದೆ ತಲೆಬಾಗುವ ಆಡಳಿತವು ಬದುಕಿಗಾಗಿ ಹೋರಾಡುತ್ತಿರುವ ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ಮಾತ್ರ ತನ್ನ ಶಕ್ತಿಯನ್ನು ಪ್ರದರ್ಶಿಸುತ್ತಿದೆ.ರಾಜ್ಯದ ಆಡಳಿತ ಯಂತ್ರವು ಹೆಚ್ಚಾಗಿ ಆಳುವ ವರ್ಗದ ಹಿತಾಸಕ್ತಿಯನ್ನು ಕಾಪಾಡುವ ಸಾಧನವಾಗಿ ಕಾರ್ಯ ನಿರ್ವಹಿಸುತ್ತದೆ ಎಂಬುದಕ್ಕೆ ಈ ಘಟನೆ ಜೀವಂತ ಉದಾಹರಣೆಯಾಗಿದೆ. ನಗರದ ರಸ್ತೆ, ಸಾರ್ವಜನಿಕ ಸ್ಥಳಗಳು ಮತ್ತು ಸಂಪನ್ಮೂಲಗಳೆಲ್ಲವೂ ಎಲ್ಲಾ ನಾಗರಿಕರಿಗೂ ಸೇರಿದ್ದಾಗಿದೆ, ದುಡಿಯುವ ಜನರಿಗೆ ಅದರ ಮೇಲೆ ಸಂಪೂರ್ಣ ಹಕ್ಕು ಇದೆ. ಆದರೆ ಇಂದು ನಗರಾಭಿವೃದ್ಧಿ ಎಂಬ ಹೆಸರಿನಲ್ಲಿ ಬಡವರನ್ನು ನಗರದಿಂದಲೇ ಹೊರದಬ್ಬುವ ನೀತಿಗಳನ್ನು ಅನುಸರಿಸಲಾಗುತ್ತಿದೆ.ಶೇಕಡಾ 75 ರಷ್ಟು ಅಂಗವೈಕಲ್ಯ ಹೊಂದಿರುವ ಬೀದಿ ಬದಿ ವ್ಯಾಪಾರಿಗಳನ್ನು ಬಿಡದೆ ಅವರ ಬದುಕಿನ ಮೇಲೆ ಪಾಲಿಕೆ ಬುಲ್ಡೋಜರ್ ಹರಿಸಿರುವುದು ಅಮಾನವೀಯ ಕೃತ್ಯವಾಗಿದೆ. ಇವರ ಅಂಗಡಿ ಸಾಮಗ್ರಿಗಳನ್ನು ಧ್ವಂಸಗೊಳಿಸಿ, ವಶಪಡಿಸಿ ಕೊಂಡಿರುವ ಕ್ರಮವು ಸಂವಿಧಾನಬದ್ಧ ಜೀವನೋಪಾಯದ ಹಕ್ಕಿನ ಮೇಲಿನ ನೇರ ದಾಳಿಯಾಗಿದೆ. ಬಡವರ ಗುಡಿಸಲುಗಳು, ಸಣ್ಣ ವ್ಯಾಪಾರ ಕೇಂದ್ರಗಳು ಮತ್ತು ಬೀದಿಬದಿ ವ್ಯಾಪಾರಗಳು ಮಾತ್ರ ಅಧಿಕಾರಿಗಳಿಗೆ ಕಾಣುತ್ತವೆ. ಆದರೆ ಸಾರ್ವಜನಿಕ ಜಾಗಗಳನ್ನು ಅತಿಕ್ರಮಿಸುವ ಪ್ರಭಾವಿಗಳ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲು ಆಡಳಿತ ಹಿಂದೇಟು ಹಾಕುವುದು ಏಕೆ? ಈ ದ್ವಂದ್ವ ನೀತಿಯೇ ಆಡಳಿತ ಯಾರ ಪರವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.ಆದ್ದರಿಂದ ಚಂದ್ರಹಾಸ ಪೂಜಾರಿ ಮತ್ತು ಸುನೀತಾ ಪೂಜಾರಿ ಅವರಿಗೆ ಕೂಡಲೇ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು,ಧ್ವಂಸಗೊಳಿಸಿದ ವಸ್ತುಗಳಿಗೆ ಸಂಪೂರ್ಣ ಪರಿಹಾರ ನೀಡಬೇಕು.ಬೀದಿಬದಿ ವ್ಯಾಪಾರಿಗಳ ವಿರುದ್ಧದ ದಬ್ಬಾಳಿಕೆ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕು. ಬೀದಿಬದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಿಸುವ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.ಈ ಅಮಾನವೀಯ ಕ್ರಮಕ್ಕೆ ಹೊಣೆಗಾರರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಂದು ನಗರ ಪಾಲಿಕೆ ಅಧಿಕಾರಿಗಳನ್ನು CPIMಒತ್ತಾಯಿಸಿದೆ. ದುಡಿಯುವ ಜನರ ಬದುಕಿನ ಮೇಲೆ ನಡೆಯುವ ಇಂತಹ ವರ್ಗದಾಳಿಗಳನ್ನು ಸಿಪಿಐಎಂ ಪಕ್ಷ ಎಂದಿಗೂ ಸಹಿಸುವುದಿಲ್ಲ. ಬಡವರ ಬದುಕನ್ನು ಬುಲ್ಡೋಜರ್‌ನಿಂದ ನಾಶಮಾಡುವ ಆಡಳಿತದ ವಿರುದ್ಧ ಜನಾಂದೋಲನವನ್ನು ಕಟ್ಟಲು ಮತ್ತು ಸಂತ್ರಸ್ತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲು ಸಿಪಿಐಎಂ ಬದ್ಧವಾಗಿದೆ ಎಂದುಯೋಗೀಶ್ ಜಪ್ಪಿನಮೊಗರು,ನಗರ ಕಾರ್ಯದರ್ಶಿ– ಸಿಪಿಐಎಂ ಮಂಗಳೂರು ನಗರ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಯುವ ಸಿಂಚನ ಪತ್ರಿಕೆಯ ಸಂಪಾದಕ, ಎನ್ ಎಸ್ ಸಿಡಿಎಫ್ ನ ಪ್ರಧಾನ ಕಾರ್ಯದರ್ಶಿ ದಿನಕರ್ ಡಿ. ಬಂಗೇರ ಅವರಿಗೆ ಮಾತೃ ವಿಯೋಗ.

ಮಂಗಳೂರು -ಮಂಗಳೂರಿನ ಸ್ಟೇಟ್ ಬ್ಯಾಂಕ್ ಹಾಮಿಲ್ಟನ್ ಕಾಂಪ್ಲೆಕ್ಸ್ ನಲ್ಲಿರುವ ಹೆಸರಾಂತ ಸಂಸ್ಥೆ ಹಾನಾ ಪಬ್ಲಿಶರ್ ನ ಸಿಎಂಡಿ, ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಘಟನೆಯಿಂದ ಪ್ರಕಾಶಿತಗೊಳ್ಳುವ ಯುವ ಸಿಂಚನ ಪತ್ರಿಕೆಯ ಸಂಪಾದಕ,ಸಾಮಾಜಿಕ ಮತ್ತು ಜನಪರ ಚಿಂತನೆಯ ಎನ್ ಎಸ್ ಸಿಡಿಎಫ್ ನ ಪ್ರಧಾನ ಕಾರ್ಯದರ್ಶಿ, ಎಂಪಿಎಂಎಲ್ ಎ ನ್ಯೂಸ್, ಬ್ಯಾರಿ ವಾರ್ತೆ, ಬ್ಯಾರಿ ಮಿತ್ರ, ಚಾಲುಕ್ಯ, ಕಚ್ಚೂರುವಾಣಿ,ಹೊಸಂಗಣ ಕರಾವಳಿ ಕೇಸರಿ. ಕರಾವಳಿ ನ್ಯೂಸ್. ಬಂಟ್ಸ್ ನ್ಯೂಸ್, ಸಿಟಿ ನ್ಯೂಸ್ ಸೇರಿದಂತೆ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯ ಜನಪ್ರಿಯ ನಿಯತಾಕಾಲಿಕೆಗಳ ಪ್ರಖ್ಯಾತ ಡಿಸೈನರ್ ದಿನಕರ್ ಡಿ.ಬಂಗೇರ ಅವರ ಮಾತೃಶ್ರೀ,ಕಿರೋಡಿಯನ್ ಕುಟುಂಬದ ಹಿರಿಯ ಸದಸ್ಯೆ, ದಿ. ದೇವಣ್ಣ ಪೂಜಾರಿಯವರ ಧರ್ಮಪತ್ನಿ ರಮಣಿ ಡಿ. ಬಂಗೇರ (80)ಅವರು ಇಂದು ಬೆಳಿಗ್ಗೆ 5ಗಂಟೆಗೆ ಬೈಕಂಪಾಡಿ ಮೀನಕಳಿಯದ ಎಂ.ವಿ. ಸದನ ಸ್ವಗೃಹದಲ್ಲಿ ವಯೋಸಹಜ ಅಸ್ವಸ್ಥದಿಂದ ದೈವಾಧೀನರಾದರು. ಮೃತರ ಅಂತಿಮ ವಿಧಿಯನ್ನು ಇಂದು ಬೆಳಿಗ್ಗೆ 10.30 ಕ್ಕೆ ಬೈಕಂಪಾಡಿಯ ಎಂ. ವಿ. ಸದನದಲ್ಲಿ ನೆರವೇರಿಸಿ ಬೆಳ್ಳಿಗೆ 11ಗಂಟೆಗೆ ಸುರತ್ಕಲ್ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತು. ಯುವ ವಾಹಿನಿ ಕೇಂದ್ರ ಸಮಿತಿ ಸೇರಿದಂತೆ ಊರ-ಪರವೂರ ಗಣ್ಯರನೇಕರು, ಎನ್ ಎಸ್ ಸಿಡಿಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ,ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, ಪ್ರತಿಷ್ಠಾನದ ಆಜೀವ ಸದಸ್ಯೆ ಯೋಗೇಶ್ವರಿ, ಸ್ಥಳೀಯರು ಮೃತರ ಅಂತಿಮ ದರ್ಶನ ಪಡೆದರು. ಎಂಪಿ ಎಂಎಲ್ ಎ ನ್ಯೂಸ್ ಸಂಪಾದಕ ಡಾ. ಅಶೋಕ್ ಶೆಟ್ಟಿ ಬಿ. ಎನ್. ಅವರು ಎಂ. ವಿ. ಸದನಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದರು. ಮೃತರು ದಿನಕರ್ ಡಿ. ಬಂಗೇರ, ಮೋಹನ್ ಡಿ. ಬಂಗೇರ ಮತ್ತು ಶ್ರೀಮತಿ ಶೀಲಾವತಿ ಕೆ.ಸೇರಿದಂತೆ ಮೂವರು ಮಕ್ಕಳು, ಐವರು ಮೊಮ್ಮಕ್ಕಳು, ಬಂಧು ಮಿತ್ರರನ್ನು ಅಗಲಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಹಿರಿಯ ಸಾಹಿತಿ ಪತ್ರಕರ್ತ ಶ್ರೀ ಪರಮಾನಂದ ಸಾಲ್ಯಾನ್ ರಿಗೆ ರಂಗಭಾಸ್ಕರ- 2026 ಪ್ರಶಸ್ತಿ ಪ್ರದಾನ

ಮಂಗಳೂರು- ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹದಿನೆಂಟನೆಯ ವಾರ್ಷಿಕೋತ್ಸವದ ಪರವಾಗಿ ರಂಗಭಾಸ್ಕರ-2026 ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ, ನಾಟಕಕಾರ, ಸಾಹಿತಿ ಮತ್ತು ಸಂಘಟಕ ಶ್ರೀ ಪರಮಾನಂದ ಸಾಲ್ಯಾನ್‌ರವರಿಗೆ ಇಂದು (21-6-2026) ಸಸಿಹಿತ್ಲುವಿನ ಶ್ರೀಯುತರ ಸ್ವಗೃಹದಲ್ಲಿ ನಡೆದ ಸರಳ ಮತ್ತು ಆಪ್ತ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಲ್ಷತೆ ವಹಿಸಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಡಾ.ನಾ.ದಾಮೋದರ ಶೆಟ್ಟಿಯವರು ಮಾತನಾಡಿ, ರಂಗಭಾಸ್ಕರ ಪ್ರಶಸ್ತಿಗೆ ಅತ್ಯಂತ ಸೂಕ್ತ ವ್ಯಕ್ತಿಯನ್ನು ಆರಿಸಿದ್ದಕ್ಕೆ ಸಂತೋಷವಾಗಿದೆ ಎಂದರು. ಹಿರಿಯ ಜನಪದ ತಜ್ಞ ಕೆ.ಕೆ.ಪೇಜಾವರರವರು ತಮ್ಮ ಮತ್ತು ಪರಮಾನಂದರ ದೀರ್ಘ ಕಾಲದ ಗೆಳೆತನದ ದಿನಗಳನ್ನು ಮೆಲುಕು ಹಾಕಿದರು. ಜನಪ್ರಿಯ ಸಿನೆಮಾ ರಂಗಭೂಮಿ ನಟ ನವೀನ್ ಡಿ ಪಡೀಲ್ ಮಾತನಾಡಿ ಪರಮಾನಂದ ಸಾಲ್ಯಾನ್‌ರವರ ಸಹೃದತೆ ಮತ್ತು ಕಲೆಯ ಬಗೆಗಿನ ಅಭಿಮಾನವನ್ನು ನೆನಪಿಸಿ ಶುಭಹಾರೈಸಿದರು. ಸಂಘಟಕ, ನಟ ಯತೀಶ್ ಬೈಕಂಪಾಡಿಯವರು ಪರಮಾನಂದರು ಲವಲವಿಕೆಯಿಂದ ಇದ್ದಾರೆ ಆದರೆ ಇನ್ನಷ್ಟು ಆತ್ಮಸ್ತೈರ್ಯದಿಂದ ಇದ್ದು ಆರೋಗ್ಯ ವೃದ್ಧಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ರಂಗ ಭಾಸ್ಕರ ಪ್ರಶಸ್ತಿ- ವರ್ಷಂಪ್ರತಿ ಹಿರಿಯ ರಂಗಭೂಮಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಯಾಗಿದೆ. ಬಹುಮುಖ ಪ್ರತಿಭೆ ದಿವಂಗತ ಭಾಸ್ಕರ ನೆಲ್ಲಿತೀರ್ಥರವರ ನೆನಪಿನಲ್ಲಿ ನೀಡಲಾಗುವ ಈ ಪ್ರಶಸ್ತಿಯನ್ನು ಉಡುಪಿಯ ಕಲಾಪೋಷಕ ಉಡುಪಿ ವಿಶ್ವನಾಥ ಶೆಣೈಯವರು ಪ್ರಾಯೋಜಿಸುತ್ತಿದ್ದಾರೆ. ಪ್ರಶಸ್ತಿಯು ಸನ್ಮಾನ ಪತ್ರ, ಶಾಲು, ಹಾರ, ಸ್ಮರಣಿಕೆ ಮತ್ತು ಪ್ರಶಸ್ತಿ ಮೊತ್ತ 15,000 ಹಾಗೂ ರಂಗಸಂಗಾತಿ ಗೆಳೆಯರ ಬಳಗ ಕೊಡಮಾಡಿದ 20,000/- ಒಟ್ಟು 35,000/- ಮೊತ್ತವನ್ನು ಒಳಗೊಂಡಿತ್ತು. ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್, ಹಿರಿಯ ನಟರುಗಳಾದ ಸಂತೋಷ್ ಶೆಟ್ಟಿ, ಮುರಳೀಧರ ಕಾಮತ್, ಉಡುಪಿಯ ರವಿರಾಜ್ ಹೆಚ್.ಪಿ., ರಾಜೇಶ್ ಭಟ್ ಪಣಿಯಾಡಿ, ಮೈಮ್ ರಾಮದಾಸ್, ಜಯಶೀಲ್, ಜಯದೇವ್, ಹರಿಪ್ರಸಾದ್ ಕುಂಪಲ, ರಂಜನ್ ಬೋಳೂರು, ಪ್ರಮೀಳಾ ದೀಪಕ್, ಯಶೋಧರ ಕೋಟ್ಯಾನ್, ಉಪನ್ಯಾಸಕ ಕರುಣಾಕರ ಬಳ್ಕೂರು, ರಂಗಸಂಗಾತಿಯ ವಿಶ್ವಸ್ಥ ಮಂಡಳಿ ಸದಸ್ಯರಾದ ಕರುಣಾಕರ ಶೆಟ್ಟಿ, ನಾಗೇಶ್ ಬಜಾಲ್, ಚಂದ್ರಶೇಖರ ಕೂಳೂರು ಮುಂತಾದವರು ಮತ್ತು ಪರಮಾನಂದರ ಶಿಷ್ಯರು, ಅಭಿಮಾನಿಗಳು ಉಪಸ್ಥಿತರಿದ್ದರು. ರಂಗಸಂಗಾತಿ ಕಾರ್ಯದರ್ಶಿ ಶಶಿರಾಜ್ ರಾವ್ ಕಾವೂರು ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಪ್ರಾದೇಶಿಕ ವಾರ್ತೆಗಳು

ಮೇರು ಕವಿಗಳ ಸ್ಮರಣೆ ಸ್ತುತ್ಯಾರ್ಹ – ಡಾ. ಆನಂದ್ ಬಂಜನ್

ಕೆ ಎಸ್ ನಿಸಾರ್ ಅಹಮದ್ ಅವರು ನಾಡು ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಕರ್ನಾಟಕದ ಸೌಂದರ್ಯವನ್ನು ಅತ್ಯಂತ ಶ್ರೀಮಂತವಾಗಿ ಮತ್ತು ಅತ್ಯಂತ ಸುಂದರವಾಗಿ ವರ್ಣಿಸುವುದರಲ್ಲಿ ಕೆ ಎಸ್ ನಿಸಾರ್ ಅಹ್ಮದ್ ತನ್ನ ಸಾಹಿತ್ಯದ ಪ್ರಖರತೆಯನ್ನು ತೋರಿಸಿದ್ದಾರೆ. ಈ ಕಾರಣದಿಂದಾಗಿಯೇ ಬಹುತೇಕ ಕನ್ನಡ ಕಾರ್ಯಕ್ರಮಗಳಲ್ಲಿ ನಿತ್ಯೋತ್ಸವ ಗೀತೆಗಳು ಮೂಡಿಬರುವುದು ಕೆ ಎಸ್ ನಿಸಾರ್ ಅಹಮದರ ಸಾಹಿತ್ಯದ ಔನ್ನತ್ಯ ಎಂದು ಲೋಕೋಪಯೋಗಿ ಅಭಿಯಂತರ, ಕವಿ,ಲೇಖಕ ಡಾಕ್ಟರ್ ಆನಂದ್ ಬಂಜನ್ ಅಭಿಪ್ರಾಯಪಟ್ಟರು. ಅವರು ಮಂಗಳೂರಿನ ಕದ್ರಿ ಬಾಲ ಭವನದಲ್ಲಿ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಯೋಜಿಸಿದ ಕೆ ಎಸ್ ನಿಸಾರ್ ಅಹ್ಮದ್ ನಿತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಿದ ಕೆ ಎಸ್ ನಿಸಾರ ಅಹ್ಮದರ ಹೆಸರು ಸರ್ವಕಾಲಕ್ಕೂ ಅಜರಾಮರ. ಇಂತಹ ಮೇರು ಕವಿಯ ನೆನಪಿನಲ್ಲಿ ನಿತ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ ರಾಣಿ ಪುಷ್ಪಲತಾದೇವಿ ಮತ್ತು ಬಳಗ ಅಭಿನಂದನಾರ್ಹರು ಎಂದರು.ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆದರೆ ಹಿರಿ-ಕಿರಿ ಕವಿಗಳಿಗೆ ತಮ್ಮ ಸಾಹಿತ್ಯ ಪ್ರಕಾರವನ್ನು ಸಾದರಪಡಿಸುವುದಕ್ಕೆ ಅವಕಾಶ ಸಿಗುತ್ತದೆ ಎಂದ ಅವರು ಇಂತಹ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಸಾಮಾಜಿಕ ಚಿಂತಕ ರಂಜನ್ ಕುಮಾರ್ ಹಾಗೂ ಎನ್ ಎಸ್ ಸಿ ಡಿ ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ಉಪಸ್ಥಿತರಿದ್ದರು ಡಾಕ್ಟರ್ ಸುರೇಶ್ ನೆಗಳಗುಳಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿಜಯಂತಿ ನಂದಲಿಕೆ ಕಾರ್ಕಳ, ಆಂಟೋನಿ ಲೂಯಿಸ್ ಮಣಿಪಾಲ,ಶರಣ್ಯ ಬೆಳುವಾಯಿ, ಮಂಜುನಾಥ ಗುಂಡ್ಮಿ, ವಿನೋದ ಪ್ರಕಾಶ್ ಪಡುಬಿದ್ರಿ, ಶಾಲಿನಿ ಕೆಮ್ಮಣ್ಣು, ಆಕೃತಿ ಐ ಎಸ್ ಭಟ್ ಮಂಗಳೂರು, ಅಶ್ವಿನಿ ಕೊಂಜಾಡಿ, ಪೂರ್ಣಿಮಾ ಕೋಟ್ಯಾನ್ ಮಾರ್ನಾಡ್, ಕೆ. ವಾಣಿಶ್ರೀ ಅಶೋಕ್ ಐತಾಳ್, ಪ್ರಶಾಂತ್ ಆಚಾರ್ಯ ಎಡಪದವು, ನಿರೀಕ್ಷಿತಾ ಮಂಗಳೂರು, ಗಿರೀಶ್ ಪೆರಿಯಡ್ಕ, ಮಂಡ್ಯ ಅನಾರ್ಕಲಿ ಸಲೀಂ, ಸುಮಯ್ಯಾ ಎಂ ಪಾಟೀಲ್ ದೇರಳಕಟ್ಟೆ, ಸುಲೋಚನ ನವೀನ್, ಡಾ.ಪ್ಲಾವಿಯಾ ಕ್ಯಾಸ್ಟಲಿನೊ ಮಣಿಪಾಲ, ಸಿಹಾನ ಬಿ.ಎಂ., ಅವನೀಶ್ ಐತಾಳ್.ಪಿ ಶಂಶೀರ್ ಬುಡೋಳಿ, ಆಯಿಷಾ ಪೆರ್ನೆ, ರೇಖಾ ಸುದೇಶ್ ರಾವ್, ಸುಖಲತಾ ಶೆಟ್ಟಿ ಬೋಂದೆಲ್ ತಮ್ಮ ಸ್ವರಚಿತ ಕವನ ವಾಚನ ಮಾಡಿದರು. ರೇಖಾ ಸುದೇಶ್ ರಾವ್ ಪ್ರಾರ್ಥಿಸಿದರು, ಶರಣ್ಯ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು.

Scroll to Top