ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಸೂರಜ್ ಶೆಟ್ಟಿ ನಿರ್ದೇಶನದ “ಕತೆ ಕೈಲಾಸ” ಸಿನಿಮಾಕ್ಕೆ ಮುಹೂರ್ತ!

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ “ಕತೆ ಕೈಲಾಸ” ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಿನಿಮಾಕ್ಕೆ ಕ್ಲಾಫ್ ಮಾಡಿ ಮಾತಾಡಿದರು. “ಸೂರಜ್ ಶೆಟ್ಟಿ ನೇತೃತ್ವದಲ್ಲಿ ಮೂಡಿಬರಲಿರುವ ಸಿನಿಮಾ ಜನರನ್ನು ರಂಜಿಸುವುದರಲ್ಲಿ ಅನುಮಾನವಿಲ್ಲ. ಆದಷ್ಟು ಬೇಗ ಸಿನಿಮಾ ಚಿತ್ರೀಕರಣ ನಡೆದು ತೆರೆಯ ಮೇಲೆ ಬರಲಿ” ಎಂದರು.ಕದ್ರಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಶುಭಾಶಂಸನೆಗೈದರು. ಶ್ರೀರಂಗ ಐತಾಳ್ ದೀಪ ಪ್ರಜ್ವಲನೆಗೈದರು. ಮುಖ್ಯ ಅತಿಥಿಗಳಾಗಿ ಪ್ರಕಾಶ್ ಪಾಂಡೇಶ್ವರ, ಕದ್ರಿ ನವನೀತ ಶೆಟ್ಟಿ, ಶಶಿಧರ ಶೆಟ್ಟಿ, ಮಹಾಗಣಪತಿ ಟ್ರಾನ್ಸ್ ಪೋರ್ಟ್ ,ಆರ್ ಕೆ ಮಾಧವ ನಾಯ್ಕ್, ಬಾಳ ಜಗನ್ನಾಥ ಶೆಟ್ಟಿ, ರವಿ ರೈ ಕಳಸ, ಲೀಲಾಕ್ಷ ಕರ್ಕೇರ, ಪ್ರೀತಮ್, ಅಜಿತ್ ಚೌಟ ದೇವಸ್ಯ, ಸುದೇಶ್ ರೈ ಸಿಎ, ಸಿಎ ಸುನಿಲ್, ಪ್ರಸಾದ್ ರೈ ಕಲ್ಲಿಮಾರ್, ರತ್ನಾಕರ್ ಜೈನ್, ಸುಧಾಕರ್ ಆಳ್ವ, ಪ್ರವೀಣ್ ಆಳ್ವ, ಲಯನ್ ವಸಂತ್ ಶೆಟ್ಟಿ, ಅಶೋಕ್ ಡಿಕೆ, ಲಯನ್ ಶ್ರೀಧರ್ ರಾಜ್ ಶೆಟ್ಟಿ, ಹರೀಶ್ ಆಳ್ವ ಲಯನ್ ಚಂದ್ರಹಾಸ ರೈ, ಮಹಾಬಲ ಭಂಡಾರಿ, ರವಿಶಂಕರ್ ರೈ ಉಪಸ್ಥಿತರಿದ್ದರು. ನಿರ್ಮಾಪಕರಾದ ಕಿಶೋರ್ ಡಿ ಶೆಟ್ಟಿ, ಪುರುಷೋತ್ತಮ್ ಭಂಡಾರಿ, ಮೋಹನ್ ಕೊಪ್ಪಲ, ಪ್ರದೀಪ್ ಆಳ್ವ, ದಿವಾಕರ್ ಶೆಟ್ಟಿ ಹಾಜರಿದ್ದರು.ಕ್ಯಾಮರಾ ಜಾಯಲ್ ಸಮನ್ ಡಿ ಸೋಜ, ಸಂಕಲನ ಪ್ರದೀಪ್ ರಾವ್, ಸಂಗೀತ ನವೀನ್ ಶಂಕರ್, ತಾರಾಗಣದಲ್ಲಿ ವಿಸ್ಮಯ ವಿನಾಯಕ, ಮೈಮ್ ರಾಮದಾಸ್, ಪುಷ್ಪರಾಜ್ ಬೊಳ್ಳಾರ್, ಗಣೇಶ್ ಆಚಾರ್ಯ, ರಾಘವ ಸೂರಿ, ವಿನೋದ್ ಶೆಟ್ಟಿ, ನವ್ಯಾ ಪೂಜಾರಿ, ದಿವಾಕರ ಕಟೀಲು, ವಾಲ್ಟರ್ ನಂದಳಿಕೆ, ಕದ್ರಿ ನವನೀತ ಶೆಟ್ಟಿ, ಮೋಹನ್ ಕೊಪ್ಪಳ, ಪ್ರದೀಪ್ ಆಳ್ವ ಇದ್ದಾರೆ.“ಕತೆ ಕೈಲಾಸ” ಸಿನಿಮಾಕ್ಕೆ ಮಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಮುವತ್ತು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.‌ಸಿನಿಮಾ ಉತ್ತಮ ಕತೆಯನ್ನು ಒಳಗೊಂಡಿದ್ದು, ಸಂಪೂರ್ಣ ಹಾಸ್ಯಭರಿತವಾಗಿದೆ ಎಂದು ಚಿತ್ರ ತಂಡ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

28 ವರ್ಷಗಳ ಬೇರ್ಪಡಿಕೆಯ ಬಳಿಕ ತಾಯಿಯ ಮಡಿಲಿಗೆ ಮರಳಿದ ಚೈತಾಲಿ

ಜನವರಿ 15, 2025 – ಈ ದಿನ ಚೈತಾಲಿ, ಅಂದರೆ ಕಾಂಚನಮಾಲಾ ರಾಯ್ ಅವರ ಜೀವನದಲ್ಲಿ ಹೊಸ ಬೆಳಕಿನ ಹಾದಿ ತೋರಿಸಿದ ಕ್ಷಣ. 28 ವರ್ಷಗಳ ನಿರ್ನಾಮದ ನಂತರ ಅವರು ತಮ್ಮ ಕುಟುಂಬದೊಂದಿಗೆ ಪುನಃ ಸೇರಿಕೊಂಡರು, ಇದು ಕಣ್ಣೀರಿನ ಜೊತೆಗೆ ಸಂಭ್ರಮದ ಕ್ಷಣವಾಯಿತು. 2023ರ ಸೆಪ್ಟೆಂಬರ್ 13ರಂದು ಸ್ನೇಹಾಲಯದ ತಂಡ ಚೈತಾಲಿಯನ್ನು ರಕ್ಷಿಸಿದ ನಂತರ, ಅವಳ ಗುರುತು ಪತ್ತೆಹಚ್ಚಲು ನಿರಂತರ ಪ್ರಯತ್ನಗಳು ನಡೆದವು. 2024ರ ನವೆಂಬರ್ 25ರಂದು ಅವರನ್ನು ಶ್ರದ್ದಾ ಫೌಂಡೇಶನ್‌ಗೆ ವರ್ಗಾಯಿಸಲಾಯಿತು. ಆದಾಗ್ಯೂ, ವೈಯಕ್ತಿಕ ಮಾಹಿತಿ ಬಹುಶಃ ಅಳಿಸಿಹೋಗಿದ್ದರಿಂದ ಅವರ ಕುಟುಂಬವನ್ನು ಪತ್ತೆ ಮಾಡಲು ಹಲವಾರು ಮಾಧ್ಯಮಗಳ ಸಹಾಯ ತೆಗೆದುಕೊಳ್ಳಲಾಯಿತು—ಫೇಸ್‌ಬುಕ್, ಟಿವಿ ಸುದ್ದಿ, ವಾಟ್ಸಾಪ್ ಗ್ರೂಪುಗಳು—ಆದರೆ ಹೆಚ್ಚಿನ ಸುಳಿವು ದೊರೆಯಲಿಲ್ಲ. ಆದರೆ, ಒಂದು ಆಕಸ್ಮಿಕ ಮಾಹಿತಿ ಈ ಕಠಿಣ ಯಾತ್ರೆಗೆ ಹೊಸ ದಾರಿ ತೆರೆದಿತು. ಒಬ್ಬ ಮಹಿಳೆ ಚೈತಾಲಿಯ ಕುಟುಂಬ ಸದಸ್ಯರ ಹೆಸರುಗಳನ್ನು ಗುರುತಿಸಿ, ಅವರ ಜೀವನದ ಕೆಲವು ಘಟನೆಗಳನ್ನು ನೆನಪಿಸಿದರು. ಇದರಿಂದ ಕುಟುಂಬಸ್ಥರು ಅವರ ಜಾಡು ಹಿಡಿಯಲು ಸಾಧ್ಯವಾಯಿತು. ಈ ಪುನರ್ಮಿಲನದ ಹರ್ಷದ ಕ್ಷಣದಲ್ಲಿ ಅವರ ಪತಿ, ಸಹೋದರರು, ಸಹೋದರಿಯರು ಮತ್ತು ನೆರೆಹೊರೆಯವರು 28 ವರ್ಷಗಳ ಬೇರ್ಪಡಿಕೆಯ ನಂತರ ಕಣ್ಣೀರಿನಿಂದ ಅವರನ್ನಾಳಿಸಿದರು.ತಾಯಿಯ ಮರಳುವಿಕೆಗೆ ಸಂತೋಷಗೊಂಡ ಪುತ್ರರುಚೈತಾಲಿಯ ಇಬ್ಬರು ಪುತ್ರರಲ್ಲಿ ಒಬ್ಬರು ಅಮೃತಸರದಲ್ಲಿ ಸೇನೆಯ ಅಧಿಕಾರಿ, ಮತ್ತೊಬ್ಬರು ಸಿಲ್ಚರ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆತ್ತ ತಾಯಿ ಎಂದಿಗೂ ಮರಳಿ ಬರುವುದಿಲ್ಲ ಎಂಬ ನಿರಾಶೆಯಲ್ಲಿದ್ದ ಈ ಇಬ್ಬರೂ ತಮ್ಮ ತಾಯಿಯನ್ನು ಸಜೀವವಾಗಿ, ಸ್ವಸ್ಥ ಸ್ಥಿತಿಯಲ್ಲಿ ನೋಡಿ ಭಾವನಾತ್ಮಕ ಕ್ಷಣವನ್ನು ಅನುಭವಿಸಿದರು.ಸ್ನೇಹಾಲಯದ ಮಹತ್ವದ ಕೊಡುಗೆಈ ಅದ್ಭುತ ಪುನರ್ಮಿಲನ ಸ್ನೇಹಾಲಯ ಮತ್ತು ಶ್ರದ್ದಾ ಫೌಂಡೇಶನ್‌ಗಳ ಅನವರತ ಶ್ರಮದಿಂದ ಸಾಧ್ಯವಾಯಿತು. ಕಳೆದ ವರ್ಷಗಳಲ್ಲಿ ಸ್ನೇಹಾಲಯವು ಭಾರತದೆಲ್ಲೆಡೆ 1,490ಕ್ಕೂ ಹೆಚ್ಚು ನಾಪತ್ತೆಯಾದ ಜನರನ್ನು ತಮ್ಮ ಕುಟುಂಬದ ಬಳಿಗೆ ಸೇರಿಸುವ ಮಹತ್ಕಾರ್ಯವನ್ನು ಮಾಡಿದೆ. ಜಾತಿ, ಭಾಷೆ, ಧರ್ಮ ಎಂಬ ಬೇಧವಿಲ್ಲದೆ ನಾನಾ ಕುಟುಂಬಗಳನ್ನು ಪುನಃ ಒಂದಾಗಿ ಸೇರಿಸುವ ಭಗೀರಥ ಶ್ರಮ ನಡೆಸುತ್ತಿರುವ ಈ ಸಂಸ್ಥೆಯ ಸೇವೆ ಅನನ್ಯವಾಗಿದೆ.ಇಂದು ವಿಶ್ವದಾದ್ಯಂತ ಪ್ರತಿ ವರ್ಷ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ನಾಪತ್ತೆಯಾಗುತ್ತಾರೆ, ಇದರಲ್ಲಿ ಹಲವರು ಮಾನಸಿಕ ಆರೋಗ್ಯ ಸಮಸ್ಯೆಯಿಂದಲೂ ಬಳಲಿರುತ್ತಾರೆ. ಸುಧಾರಿತ ತಂತ್ರಜ್ಞಾನ, ಮಾನವೀಯ ಸಹಕಾರ ಮತ್ತು ಸಾಮಾಜಿಕ ಜಾಲತಾಣಗಳ ಸಹಾಯದಿಂದ ಅವರ ಪುನರ್ಮಿಲನವನ್ನು ಸುಗಮಗೊಳಿಸುವ ಹೊಸ ಪ್ರಯತ್ನಗಳು ಮಾಡುವ ಸ್ನೇಹಾಲಯ ದಕ್ಷಿಣ ಭಾರತದಲ್ಲಿ ದೇವರ ಒಂದು ವರದಾನವಾಗಿದೆ. ‘ಅಳಿಲ ಭಕ್ತಿ ಮರಳ ಸೇವೆ’ ಎನ್ನುವಂತೆ, .ಸ್ನೆಹಾಲಯದ ನಿಸ್ವಾರ್ಥ ಸೇವೆ ಇನ್ನಷ್ಟು ಜನರಿಗೆ ಪ್ರೇರಣೆ ಆಗಲಿ ಎಂಬುದು ನಮ್ಮ ಹಾರೈಕೆ

ಪ್ರಾದೇಶಿಕ ವಾರ್ತೆಗಳು

ಅಕ್ಷಯಪಾತ್ರ ಪ್ರತಿಷ್ಠಾನ ತ್ಯಾಜ್ಯ ನೀರಿನ ಸಂಸ್ಕರಣಾ ನೂತನ ಘಟಕದ ಉದ್ಘಾಟನೆ (ಹಸಿರು ಸಂಕಲ್ಪ). ಶೈಕ್ಷಣಿಕ ಮತ್ತು ಸಾಂಸ್ಕೃತಿಕ ನೂತನ ಕೇಂದ್ರಕ್ಕೆ ಇಟ್ಟಿಗೆ ಸಮರ್ಪಣೆ (ಸಮರ್ಪಣ್)

ಮಂಗಳೂರು: “ನಗರದ ಇಸ್ಕಾನ್ ಸಂಸ್ಥೆಯ ಸಹ ಸಂಸ್ಥೆಯಾದ ಅಕ್ಷಯಪಾತ್ರ ಪ್ರತಿಷ್ಠಾನದ ಸಂಸ್ಥೆಯು ದಿನಂಪ್ರತಿ ಜಿಲ್ಲೆಯ190 ಸರ್ಕಾರಿ ಶಾಲೆಯ 20,000 ವಿದ್ಯಾರ್ಥಿಗಳಿಗೆ ಬಿಸಿಯೂಟ ಸರಬರಾಜು ಮಾಡುವ ಕಾರ್ಯ ಭಗವಂತನು ಮೆಚ್ಚುವ ಸತ್ಕಾರ್ಯ” ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅವರು ತಾ.28.01..2025ರಂದು ಬೆಂಜನಪದವು ಅಕ್ಷಯಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಜರಗಿದ ಹಸಿರು ಸಂಕಲ್ಪ ಮತ್ತು ಸಮರ್ಪಣ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇಸ್ಕಾನ್ ಸಂಸ್ಥೆಯ ಧಾರ್ಮಿಕ, ಶೈಕ್ಷಣಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಸಮಾಜ ಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ಅದು ಮಾತ್ರವಲ್ಲದೆ ಋಷಿ ವೃತ್ತಿ ಮತ್ತು ಕೃಷಿ ವೃತ್ತಿಗೆ ಪ್ರಾಮುಖ್ಯತೆ ನೀಡಿದೆ ಎಂದು ಸಂತಸ ವ್ಯಕ್ತ ಪಡಿಸಿದರು.ಇಸ್ಕಾನ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗುಣಾಕರ ರಾಮ ದಾಸ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅಕ್ಷಯ ಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಸುಮಾರು 1.00 ಕೋಟಿ ಮೌಲ್ಯದ ದಿನಂಪ್ರತಿ50,000 ಲೀಟರ್ ಸಾಮರ್ಥ್ಯವುಳ್ಳ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕವನ್ನು (ಹಸಿರು ಸಂಕಲ್ಪ) ನೂತನವಾಗಿ ಆರಂಭಿಸಲಾಗಿದೆ ಮತ್ತು ಅದರ ಶುದ್ಧೀಕರಿಸಿದ ನೀರನ್ನು ಸ್ವಚ್ಛ ಭಾರತ್ ಹಾಗೂ ಹಸಿರು ಕ್ರಾಂತಿಯ ಅಭಿಯಾನವಾಗಿ ಗಿಡ, ಮರ, ಗದ್ದೆಗಳಿಗೆ ಸರಬರಾಜು ಮಾಡಲಾಗುವುದು ಎಂದು ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಕೌಶಲ್ಯ ಅಭಿಯಾನದ ಅಂಗವಾಗಿ ಇಸ್ಕಾನ್ ಸಂಸ್ಥೆಯ ಗೋವರ್ಧನ ಗಿರಿ ನೂತನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕೇಂದ್ರಕ್ಕೆ ಕಟ್ಟಡಕ್ಕೆ (ಸಮರ್ಪಣ್) ಇಟ್ಟಿಗೆಗಳನ್ನು ಪೂಜಿಸಿ ಸಮರ್ಪಿಸಲಾಯಿತು. ಈ ಕಾರ್ಯಕ್ರಮದ ಸವಿನೆನಪಿಗಾಗಿ ಹಾಗೂ ಸಂಸ್ಥೆಯ ಸಮಾಜ ಸೇವಾ ಅಂಗವಾಗಿ ಅಡ್ಡೂರು ದ.ಕ. ಜಿಲ್ಲಾ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. ವೇದಿಕೆಯಲ್ಲಿ ಕಾಪು ಕ್ಷೇತ್ರದ ಶಾಸಕ ಜಿ. ಸುರೇಶ್ ಶೆಟ್ಟಿ, ಆಭರಣ ಜ್ಯುವೆಲ್ರ‍್ಸ್ ಆಡಳಿತ ನಿರ್ದೇಶಕ ಪ್ರತಾಪ್ ಮಧುಕರ್ ಕಾಮತ್, ಚಿತ್ತಾರ ಗೇರುಬೀಜ ಸಂಸ್ಥೆಯ ಆಡಳಿತ ನಿರ್ದೇಶಕ ಗೋಪಿನಾಥ ಕಾಮತ್, ಅದಾನಿ ಸಮೂಹ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಎಂ.ಆರ್.ಪಿ.ಎಲ್. ಸಂಸ್ಥೆಯ ಮಹಾಪ್ರಬಂಧಕ ಪ್ರಶಾಂತ್ ಬಾಳಿಗ, ಆಳ್ವಾಸ್ ಮೂಡಬಿದ್ರೆ ಸಂಸ್ಥೆಯ ವಿವೇಕ ಆಳ್ವ, ಆಲಿಗ್ರೋ ಸಂಸ್ಥೆಯ ಆಡಳಿತ ನಿರ್ದೇಶಕ ಧರ್ಮೇಂದ್ರ ಮೆಹ್ತಾ ಮತ್ತು ಎಸ್.ಸಿ.ಎಸ್. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಜೀವ್‌ರಾಜ್ ಆಳ್ವ, ಎ.ಕೆ. ಬನ್ಸಾಲ್ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಅಭಿನವ್ ಬನ್ಸಾಲ್, ನಗರದ ಖ್ಯಾತ ವಕೀಲ ಪದ್ಮರಾಜ್ ಪೂಜಾರಿ, ಎಸ್.ಸಿ.ಡಿ.ಸಿ. ಬ್ಯಾಂಕ್‌ನ ನಿರ್ದೇಶಕರಾದ ಶ್ರೀ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮತ್ತು ಮುಂಬಯಿ ನಗರದ ತ್ರಿರಂಗ ಸಂಗಮ ಸಂಸ್ಥೆಯ ಮಾಲಿಕ ಮೋಹನ್ ರೈ ಉಪಸ್ಥಿತರಿದ್ದು ಪ್ರಸ್ತಾವಿಕವಾಗಿ ಮಾತಾಡಿ ಸಂಸ್ಥೆಗೆ ಯಶಸ್ಸು ಕೋರಿದರು.ಉಪಾಧ್ಯಕ್ಷ ಶ್ರೀ ಸನಂದನ ದಾಸ ವಂದಿಸಿದರು. ಶ್ರೀ ಶ್ವೇತದ್ವೀಪ ದಾಸ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಒಡಿಯೂರು ತುಳು ಸಮ್ಮೇಳನ ಅಧ್ಯಕ್ಷರಾಗಿ ಭಾಸ್ಕರ ರೈ ಕುಕುವಳ್ಳಿ

ಮಂಗಳೂರು: ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್ ನಲ್ಲಿ ಜರಗುವ 25ನೇ ತುಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ,ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ, ತುಳು – ಕನ್ನಡ ಸಾಹಿತಿ ಹಾಗೂ ಹಿರಿಯ ಯಕ್ಷಗಾನ ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಆಯ್ಕೆಯಾಗಿದ್ದಾರೆ. ಇದೇ 2025 ಫೆಬ್ರವರಿ 6ರಂದು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ‘ತುಳು ಬಾಸೆ ಸಂಸ್ಕೃತಿದ ಜಾಗೃತಿಗಾದ್’ಎಂಬ ಧ್ಯೇಯ ವಾಕ್ಯದೊಂದಿಗೆ ಒಡಿಯೂರು ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಸಮ್ಮೇಳನ ನಡೆಯಲಿದೆ.ಬಹುಮುಖೀ ಸಾಧಕ’:ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಭಾಸ್ಕರ ರೈ ಕುಕ್ಕುವಳ್ಳಿ ಓರ್ವ ಬಹುಮುಖೀ ಸಾಧಕರು. ಪುತ್ತೂರು ತಾಲೂಕು ಇರ್ದೆ ಗ್ರಾಮದ ಪ್ರತಿಷ್ಠಿತ ಬಾಲ್ಯೊಟ್ಟು ಗುತ್ತು ಮನೆತನದಲ್ಲಿ ಜನಿಸಿ ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ ಮತ್ತು ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿ,ಮಂಗಳೂರಿನಲ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ಹಾಗೂ ಮೈಸೂರು ಮಾನಸಗಂಗೋತ್ರಿಯಲ್ಲಿ ಎಂ.ಎ.ಎಂ.ಎಡ್. ಪದವಿಗಳನ್ನು ಗಳಿಸಿದರು. ಭಾರತೀಯ ಅಂಚೆ ಇಲಾಖೆಯಲ್ಲಿ 14 ವರ್ಷ ಸೇವೆ ಸಲ್ಲಿಸಿದ ಬಳಿಕ ಶಿಕ್ಷಣ ಇಲಾಖೆ ಸೇರಿ ಚೇಳಾಯರು ಮತ್ತು ಗುರುಪುರ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ನಿವೃತ್ತರಾದರು.ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಪ್ರಮುಖ ಅರ್ಥಧಾರಿ, ಹವ್ಯಾಸಿ ವೇಷಧಾರಿಯಾಗಿ, ಪುರಾಣ ಪ್ರವಚನಕಾರರಾಗಿಯೂ ಅವರು ಪ್ರಸಿದ್ಧರು. ಆಕಾಶವಾಣಿ ಮತ್ತು ದೂರದರ್ಶನ ಕಲಾವಿದರು. ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ ಬಾನುಲಿ ಪಠ್ಯಗಳನ್ನು ರಚಿಸಿದ್ದಾರೆ. ಧ್ವನಿಸುರುಳಿ ಸಾಕ್ಷ್ಯ ಚಿತ್ರಗಳಿಗೆ ಸಾಹಿತ್ಯ ಮತ್ತು ಗೀತೆಗಳನ್ನು ಬರೆದಿದ್ದಾರೆ. ಪ್ರಪ್ರಥಮ ತುಳುವಾರ್ತಾ ವಾಹಿನಿ ನಮ್ಮ ಕುಡ್ಲ, ಸಹಾಯ ಟಿವಿ,ವಿ4, ಡೈಜಿ ವರ್ಲ್ಡ್, ರೇಡಿಯೋ ಸಾರಂಗ್, ಕ್ಯಾಡ್ ಮೀಡಿಯಾಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ದೇಶ ವಿದೇಶಗಳ ಯಕ್ಷಗಾನ ಮತ್ತು ಸಾಹಿತ್ಯ ಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ.ಕೃತಿಗಳು :ಕನ್ನಡ – ತುಳು ಲೇಖಕರಾಗಿರುವ ಕುಕ್ಕುವಳ್ಳಿ ಅವರು ಹಲವು ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ. ಏಕಾಂತದಿಂದ ಲೋಕಾಂತರಕೆ, ಸೃಷ್ಟಿಸಿರಿಯಲಿ ಪುಷ್ಪವೃಷ್ಟಿ, ಯಕ್ಷಿಕಾ, ಪಂಚದುರ್ಗಾ, ಅಭಿರಾಮ (ಕನ್ನಡ); ಗಾಂಪನ ಪುರಾಣ, ನೆಯಿ – ಪೇರ್, ಸೀಯನ (ತುಳು); ಯಕ್ಷಪ್ರಮೀಳ, ಯಕ್ಷ ಬಂಟರು, ಯಕ್ಷರ ಚೆನ್ನ, ಪುಳಿಂಚ ಸ್ಮೃತಿ – ಕೃತಿ, ಅರ್ಬಿ, ಅಳಿಕೆ ರಾಮಯ್ಯ ರೈ ಶತಮಾನದ ನೆನಪು, ಯಕ್ಷ ಪುರುಷೋತ್ತಮ, ಗಂದಸಾಲೆ (ಸಂಪಾದಿತ); ನೀಲಾಂಜನ, ಭರಣಿ ಜ್ಯೋತಿ, ಜಯ ಜನಾರ್ದನ, ಶ್ರೀ ಆದಿ ಮಹೇಶ್ವರಿ, ಪುಣ್ಯನೆಲ ಪೆರಣಂಕಿಲ (ದ್ವನಿ ಸುರುಳಿ ಸಾಹಿತ್ಯ); ಜನ್ಮ ರಹಸ್ಯ, ರಂಭಾ ಶಾಪ, ಹರಣ ಹಾರಿತು ಎರೆಯ ನೆಡೆಗೆ, ತುಳುನಾಡ ಬಲಿಯೇಂದ್ರ, ಗರತಿ ಮಂಗನೆ, ದಳವಾಯಿ ದೇವುಪೂಂಜೆ, ಜನ್ಮ ರಹಸ್ಯ (ನಾಟಕ); ಘೋರ ಮಾರಕ, ಗುನ್ಯಾಸುರ ವಧೆ, ಉಳ್ಳಾಲ ರಾಣಿ ಅಬ್ಬಕ್ಕ, ಕ್ರಾಂತಿ ಕಹಳೆ, ಸ್ವಾತಂತ್ರ್ಯ ಸಮರ, ಕಲಿ ಪ್ರಳಯ, ವಜ್ರನಾಭ ವೃತ್ತಾಂತ, ಸಾವಯವ ವಿಜಯ, ವಾತಾಸುರ ಬಂಧನ – ಕರ್ಕಶಾಸುರ ವಧೆ, ನಾರಾಯಣಾಸ್ತ್ರ – ಕೊರೋನಾಸ್ತ್ರ, ಜೀವಜಲ – ದೇವನೆಲ (ಜನಜಾಗ್ರತಿ ಯಕ್ಷಗಾನ ಪ್ರಸಂಗ ಸಾಹಿತ್ಯ)ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ (2004) ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ (2008) ಸದಸ್ಯರಾಗಿದ್ದ ಭಾಸ್ಕರ ರೈ ಅವರು ಮಂಗಳೂರಿನಲ್ಲಿ ಪ್ರಪ್ರಥಮ ಮಹಿಳಾ ಯಕ್ಷಗಾನ ಸಮ್ಮೇಳನವನ್ನು ಸಂಘಟಿಸಿದ್ದರು. 2015 ರಲ್ಲಿ ಮೈಸೂರು ದಸರಾ ಕವಿಗೋಷ್ಠಿಯಲ್ಲಿ ತುಳು ಭಾಷೆಯನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ, ಯಕ್ಷಾಂಗಣ ಮಂಗಳೂರು, ಕರ್ನಾಟಕ ಯಕ್ಷಭಾರತಿ ಪುತ್ತೂರು ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ.ಪ್ರಶಸ್ತಿಗಳುಅಂತಾರಾಷ್ಟ್ರೀಯ ಆರ್ಯಭಟ, ಜಿಲ್ಲಾ ರಾಜ್ಯೋತ್ಸವ, ಕಾರಂತ ಸದ್ಭಾವನ, ಸೌರಭ, ಸಾಧನ, ನೂಪುರ, ವಿದ್ಯಾರತ್ನ, ಯುಎಇ ಬಂಟ ವಿಭೂಷಣ, ಪೆರ್ಮೆದ ತುಳುವೆ, ಶೇಣಿ ಶತಮಾನೋತ್ಸವ, ಮುಂಬೈ ಯಕ್ಷರಕ್ಷಾ, ಕುದುರೆಮುಖ ಕನ್ನಡ ಸಂಘದ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ಸಂದಿವೆ.

ಪ್ರಾದೇಶಿಕ ವಾರ್ತೆಗಳು

ಸುರತ್ಕಲ್ ನಲ್ಲಿ ಯಕ್ಷದ್ಯುತಿ ಕಾರ್ಯಕ್ರಮ. ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ

ಸುರತ್ಕಲ್: ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ಗುರುದೇವದತ್ತ ಸಂಸ್ಥಾಮ್ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮಿಜಿ ನುಡಿದರು.ಸುರತ್ಕಲ್ ಗೋವಿಂದದಾಸ ಕಾಲೇಜ್ ನಲ್ಲಿ ಯಕ್ಷ ದ್ಯುತಿ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈಯವರ 35 ವರುಷಗಳ ಯಕ್ಷಯಾನದ ಸಂಭ್ರಮ ಯಕ್ಷದ್ಯುತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಯಕ್ಷಗಾನದ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ನಡೆಯಬೇಕಾಗಿದೆ. ಯಕ್ಷಗಾನದಿಂದ ಸಂಸ್ಕೃತಿ ಆಚಾರ, ವಿಚಾರಗಳನ್ನು ತಿಳಿಯ ಬಹುದಾಗಿದೆ ಎಂದರು.ಸಮಾರಂಭದಲ್ಲಿ ಹರಿನಾರಾಯಣ ದಾಸ ಅಸ್ರಣ್ಣ, ನಾಗೇಂದ್ರ ಭಾರದ್ವಾಜ್, ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಪಟ್ಲ ಸತೀಶ್ ಶೆಟ್ಟಿ, ಶ್ರೀಪತಿ ಭಟ್ ಮೂಡಬಿದ್ರೆ, ಸುಧಾಕರ ಪೂಂಜ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಯಶಸ್ವಿನಿ ಶೆಟ್ಟಿ, ಪುರಂದರ ರೈ ಮಿತ್ರಂಪಾಡಿ, ಚಿತ್ತರಂಜನ್ ರೈ ನುಳಿಯಾಲು, ದೇವಿಪ್ರಸಾದ್ ಶೆಟ್ಟಿ ಬೆಂಗಳೂರು, ಮೋಹನ್ ಕೊಪ್ಪಳ, ಮಾಧವ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಗೌರವ ಪುರಸ್ಕಾರ, ಪ್ರತಿಭಾ ಪುರಸ್ಕಾರ ನಡೆಯಿತು. ಯಕ್ಷಸಾಧಕಿ ಪೂರ್ಣಿಮಾ ಯತೀಶ್ ರೈ ದಂಪತಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ವಿವಿಧ ಸಂಘ ಸಂಸ್ಥೆಯವರು ಕೂಡಾ ಪೂರ್ಣಿಮಾ ಯತೀಶ್ ರೈ ಅವರನ್ನು ಸನ್ಮಾನಿಸಿದರು.ಕಳೆದ 35 ವರ್ಷಗಳ ಯಕ್ಷಗಾನ ರಂಗದಲ್ಲಿ ಬಣ್ಣ ಹಚ್ಚಿದ್ದೇನೆ, ಮನೆಯವರ ಸಹಕಾರದ ಜೊತೆಗೆ ಎಲ್ಲರ ಸಹಕಾರವೂ ದೊರೆತಿದೆ. ಇದಕ್ಕೆ ನಾನು ಯಾವತ್ತೂ ಚಿರಋಣಿ ಎಂದು ಪೂರ್ಣಿಮಾ ಯತೀಶ್ ರೈ ತಿಳಿಸಿದರು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಐ ರಮಾನಂದಭಟ್, ವೆಂಕಟರಮಣ ಅಸ್ರಣ್ಣ, ರಮೇಶ ಭಟ್, ಶಾಸಕ ಡಾ ವೈ ಭರತ್ ಶೆಟ್ಟಿ,ವರುಣ್ ಚೌಟ, ಹರಿಕೃಷ್ಣ ಪುನರೂರು, ಗಿರೀಶ್ ಎಂ ಶೆಟ್ಟಿ ಕಟೀಲು, ವಾಸುದೇವ ಐತಾಳ್ , ಡಾ ಸತ್ಯಮೂರ್ತಿ, ಗುಣವತಿ ರಮೇಶ್, ಶ್ರೀರಂಗ ಹೊಸಬೆಟ್ಟು, ಬಾಳ ಜಗನ್ನಾಥ ಶೆಟ್ಟಿ, ಲಕ್ಷ್ಮೀ, ಹರೀಶ್ ಶೆಟ್ಟಿ ಆರತಿ ಆಳ್ವ, ಭಾಗವಹಿಸಿದ್ದರು‌.ಮಧ್ಯಾಹ್ನ ನಡೆದ ಗೌರವ ಪುರಸ್ಕಾರದಲ್ಲಿ ಶಿವರಾಮ ಪಣಂಬೂರು, ರಮೇಶ್ ಶೆಟ್ಟಿ ಬಾಯಾರು, ಹರಿನಾರಾಯಣ ಬೈಪಾಡಿತ್ತಾಯ, ಶಂಕರ ನಾರಾಯಣ ಮೈರ್ಪಾಡಿ ಅವರನ್ನು ಸನ್ಮಾನಿಸಲಾಯಿತು.ಸಮಿತಿಯ ಉಪಾಧ್ಯಕ್ಷರುಗಳಾದ ಲೀಲಾಧರ ಶೆಟ್ಟಿ ಕಟ್ಲ ಸ್ವಾಗತಿಸಿ, ಗಂಗಾಧರ ಪೂಜಾರಿ ಚೇಳಾರ್ ವಂದಿಸಿದರು.ರಾತ್ರಿ ಯಕ್ಷಪೂರ್ಣಿಮಾ ಶಿಷ್ಯವೃಂದದವರಿಂದ ಶ್ರೀ ದೇವಿ ಮಹಾತ್ಮ್ಯೆ ಯಕ್ಷಗಾನ ನಡೆಯಿತು.

ಪ್ರಾದೇಶಿಕ ವಾರ್ತೆಗಳು

“ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾದ “ಫಸ್ಟ್ ಲುಕ್ ಪೋಸ್ಟರನ್ನು ಜ: 27 ಕ್ಕೆ ಸಾವಿರಾರು ವರ್ಷಗಳ ಇತಿಹಾಸವಿರುವ ವನದುರ್ಗೆಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ವೇದಮೂರ್ತಿ ಬಿ ಕೆ ವಿಘ್ಣೇಶ್ ಭಟ್ ಅವರು ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭಾಶೀರ್ವಾದ ನೀಡಿದರು.ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀಧರ್ ಭಟ್, ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ) ಅಬ್ಬನಡ್ಕ ಇದರ ಸಂಚಾಲಕರಾದ ಸಂದೀಪ್ ವಿ ಪೂಜಾರಿ, ಚಿತ್ರದ ನಿರ್ಮಾಪಕರಾದ ಪ್ರತೀಕ್ ಯು ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ ನಟ ರಮೇಶ್ ರೈ ಕುಕ್ಕುವಳ್ಳಿ, ಪ್ರೊಡಕ್ಷನ್ ಮೆನೇಜರ್ ಕಾರ್ತಿಕ್ ಶೆಟ್ಟಿ, ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.” ಪಿಲಿಪಂಜ” ಚಲನಚಿತ್ರವು ಎರಡು ಹಂತದ ಚಿತ್ರೀಕರಣವನ್ನು ಮುಗಿಸಿದ್ದು, ಇನ್ನು ಹಾಡಿನ ಚಿತ್ರೀಕರಣ ಬಾಕಿ ಇದ್ದು ಫ್ರೆಬ್ರವರಿ ಮೊದಲ ವಾರದಲ್ಲಿ ಅದನ್ನೂ ಮಾಡಿ ಮುಗಿಸಿ ಶೀಘ್ರದಲ್ಲಿ ಚಲನಚಿತ್ರವನ್ನು ಬಿಡುಗಡೆ ಮಾಡುವ ತಯಾರಿಯಲ್ಲಿ ಚಿತ್ರತಂಡವಿದೆ.ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ರವಿ ರಾಮಕುಂಜ, ಶಿವಪ್ರಕಾಶ್ ಪೂಂಜ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳೂರು, ರಕ್ಷಣ್ ಮಾಡೂರು, ಪ್ರಕಾಶ್ ಶೆಟ್ಟಿ ಧರ್ಮನಗರ, ವಿಜಯಹರಿ ರೈ, ದಯಾನಂದ ಬೆಟ್ಟಂಪಾಡಿ, ರೂಪಶ್ರೀ ವರ್ಕಾಡಿ, ಜಯಶೀಲ, ರಾಧಿಕಾ,ಭಾಸ್ಕರ್ ಮಣಿಪಾಲ, ಹಾಗೂ ನಾಯಕಿಯಾಗಿ ದಿಶಾರಾಣಿ ಮುಂತಾದವರು ಬಣ್ಣ ಹಚ್ಚಿದ್ದಾರೆ.ನಿರ್ಮಾಣ ಪ್ರತೀಕ್ ಯು ಪೂಜಾರಿ, ಕಥೆ- ನಿರ್ದೇಶನ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ರಮೇಶ್ ರೈ ಕುಕ್ಕುವಳ್ಳಿ, ಛಾಯಾಗ್ರಹಣ ಉದಯ ಬಳ್ಳಾಲ್, ಸಂಗೀತ ಲಾಯ್ ವೆಲೆಂಟೀನ್ ಸಲ್ದಾನ, ಸಂಕಲನ ಶ್ರೀನಾಥ್ ಪವಾರ್, ಸಹನಿರ್ದೇಶನ ಅಕ್ಷತ್ ವಿಟ್ಲ, ಸಹಾಯಕ ನಿರ್ದೇಶನ ಸಜೇಶ್ ಪೂಜಾರಿ, ಚಿತ್ರಕಥೆ ಸಂಭಾಷಣೆ ಸುರೇಶ್ ಬಲ್ಮಠ, ಪ್ರಚಾರ ಜಗನ್ನಾಥ ಶೆಟ್ಟಿ ಬಾಳ, ಸಾಹಸ ಸುರೇಶ್ ಶೆಟ್ಟಿ ಮತ್ತು ನವೀನ್ ಲೋಬೋ,ನೃತ್ಯ ನಿರ್ದೇಶನ ರಾಜೇಶ್ ಕಣ್ಣೂರು, ಪ್ರೊಡಕ್ಷನ್ ಮನೇಜರ್ ಕಾರ್ತಿಕ್ ಶೆಟ್ಟಿ.

ಪ್ರಾದೇಶಿಕ ವಾರ್ತೆಗಳು

ಆಕಾಶ್ ಎಜುಕೇಶನಲ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ (KCET Plus) ಕೆಸಿಇಟಿಪ್ಲಸ್ ಪ್ರಾರಂಭ

ಮಂಗಳೂರು: ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ.ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಒದಗಿಸುವ ಉದ್ದೇಶವನ್ನು ಹೊಂದಿವೆ. ಇಂಗ್ಲಿಷ್‌ನಲ್ಲಿ ನಡೆಯುವ ಈ ಕೋರ್ಸ್ ಪದವಿಪೂರ್ವ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತವೆ.ಈ KCET ಕೋರ್ಸುಗಳು ಪ್ರಾದೇಶಿಕ ಮಾರುಕಟ್ಟೆಗಳಲ್ಲಿ ತನ್ನ ನೆಲೆಗಳನ್ನು ವಿಸ್ತರಿಸುವ ಮತ್ತು ರಾಜ್ಯಗಳ ಪದವಿಪೂರ್ವ ಮಂಡಳಿಗಳ ವಿದ್ಯಾರ್ಥಿಗಳೊಂದಿಗೆ ಸಿಬಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಗುಣಮಟ್ಟದ ತರಬೇತಿಯನ್ನು ಒದಗಿಸುವ ಆಕಾಶ್ ಅವರ ಕಾರ್ಯತಂತ್ರದ ಭಾಗವಾಗಿದೆ. ಸತತವಾಗಿ ಮೂರು ವರ್ಷಗಳ ಕಾಲ KCETನಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ರಾಜ್ಯದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವ ಹೆಗ್ಗಳಿಕೆ ಆಕಾಶ್ ಹೊಂದಿದೆ, 2021ರಲ್ಲಿ ಮೇಘನ್ ಎಚ್.ಕೆ., 2022ರಲ್ಲಿ ಅಪೂರ್ವ್ ಟಂಡನ್ ಮತ್ತು 2023ರಲ್ಲಿ ವಿಘ್ನೇಶ್ ಎನ್. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳುಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್‌ನ ವ್ಯಾಪಾರ ಮತ್ತು ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಅವರು, “ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರವಾದ ತರಬೇತಿಯೊಂದಿಗೆ ವಿದ್ಯಾರ್ಥಿಗಳನ್ನು ಸಬಲರಾಗಿಸಲು ಆಕಾಶ್ ಆಳವಾದ ಬದ್ಧತೆಯನ್ನು ಹೊಂದಿದೆ ಎಂದರು. 10ನೆಯ ತರಗತಿಯಿಂದ 11ನೆಯ ತರಗತಿಗೆ ಪ್ರವೇಶಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ, 10ನೆಯ ತರಗತಿಯ ಬೋರ್ಡ್ ಪರೀಕ್ಷೆಗಳು ಮುಗಿದ ನಂತರ ಮಾರ್ಚ್ 2025ರಿಂದ ಮೇ 2025ರ ನಡುವೆ ಹಾಗೂ ಫಲಿತಾಂಶಗಳ ಘೋಷಣೆಯಾದ ನಂತರ ಜೂನ್-ಜುಲೈ 2025ರಲ್ಲಿ ಕೆಸಿಇಟಿ ಮತ್ತು ಜೆಇಇ (ಮೇನ್) 2027 (ಸಿಬಿಎಸ್‌ಇ/ಪಿಯುಸಿ) ಪ್ರವೇಶ ಪರೀಕ್ಷೆಗಳಿಗಾಗಿ ಎರಡು ವರ್ಷದ ಇಂಟೆಗ್ರೇಟೆಡ್ ತರಗತಿ ಕೋರ್ಸನ್ನು ಆಕಾಶ್ ನಡೆಸುತ್ತಿದೆ. 11ನೆಯ ತರಗತಿಯಿಂದ 12ನೆಯ ತರಗತಿಗೆ ಪ್ರವೇಶಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ, ಕೆಸಿಇಟಿ ಮತ್ತು ಜೆಇಇ (ಮೇನ್) 2026 (ಸಿಬಿಎಸ್‌ಇ/ಪಿಯುಸಿ) ಪ್ರವೇಶ ಪರೀಕ್ಷೆಗಳಿಗಾಗಿ ಒಂದು ವರ್ಷದ ಇಂಟೆಗ್ರೇಟೆಡ್ ತರಗತಿ ಕೋರ್ಸು ಮಾರ್ಚ್-ಏಪ್ರಿಲ್ 2025ರಲ್ಲಿ, ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾರಂಭವಾಗುತ್ತದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯು (KCET) ಇಂಜಿನಿಯರಿಂಗ್, ತಂತ್ರಜ್ಞಾನ, ವಾಸ್ತುಶಿಲ್ಪ, ಬ್ಯಾಚಲರ್ ಆಫ್ ಯೋಗ &ನ್ಯಾಚುರೋಪತಿ (BNYS), ಬಿ.ಎಸ್ಸಿ. ನರ್ಸಿಂಗ್, ಮತ್ತು ಬ್ಯಾಚಲರ್ ಆಫ್ ವೆಟರಿನರಿ ಸೈನ್ಸ್ &ಅನಿಮಲ್ ಹಸ್ಬೆಂಡ್ರಿ (B.V.Sc. & A.H.)ಕೋರ್ಸುಗಳ ಪ್ರವೇಶಕ್ಕೆ ಹೆದ್ದಾರಿಯಾಗಿದೆ.ಪ್ರಮುಖಅಂಶಗಳು : ಪಠ್ಯಕ್ರಮವನ್ನುಕೆಸಿಇಟಿ ಮತ್ತು ಜೆಇಇ ಪಠ್ಯಗಳನ್ನುಆಧರಿಸಿ ಸಿದ್ಧಪಡಿಸಲಾಗುವುದು., ಇಂಗ್ಲಿಷ್‌ನಲ್ಲಿಅಧ್ಯಯನ ಸಾಮಗ್ರಿಯನ್ನುಒದಗಿಸಲಾಗುವುದು, ಪರೀಕ್ಷಾ ಪ್ರಶ್ನೆಪತ್ರಿಕೆಗಳನ್ನು ಪರಿಣತರು ಸಿದ್ಧಪಡಿಸುತ್ತಾರೆ. XI& ಘXII ತರಗತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬ್ಯಾಚ್‌ಗಳನ್ನು ಒದಗಿಸಲಾಗುವುದು.ಪತ್ರಿಕಾಗೋಷ್ಠಿಯಲ್ಲಿ ಮಂಗಳೂರುಸಹಾಯಕ ನಿರ್ದೇಶಕ ಶ್ಯಾಮ ಪ್ರಸಾದ, ಬ್ರ್ಯಾಂಚ್‌ ಹೆಡ್‌ ವಿಶ್ವನಾಥ ಪಿ.ಜಿ. ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಾದೇಶಿಕ ವಾರ್ತೆಗಳು

ಮಾ.1-14: ಅಡ್ಯಾರ್ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ

ಮಂಗಳೂರು: ಅಡ್ಯಾರು ಗ್ರಾಮದ ಗ್ರಾಮದೇವರಾದ ಮಹಾಲಿಂಗೇಶ್ವರ ಕ್ಷೇತ್ರವು ಯೋಗಿಯೋರ್ವರ ಪ್ರೇರಣೆಯಿಂದ ಅತ್ತಾವರ ಕೀರ್ತಿಶೇಷ ಸಂಕಪ್ಪ ಪೂಂಜರಿಂದ 400 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ಕಾರಣೀಕದ ಶಿವಕ್ಷೇತ್ರ. ಊರ ಪರವೂರ ಭಕ್ತರ ಶ್ರದ್ಧಾಪೂರ್ವಕ ಸಹಕಾರದೊಂದಿಗೆ ಬೈದ್ಯಾವುಗುತ್ತು ಕುಟುಂಬಿಕರ ವಂಶ ಪಾರಂಪರಿಕ ಆಡಳಿತದೊಂದಿಗೆ ಭಕ್ತರನ್ನು ಅನುಗ್ರಹಿಸುವ ಈ ಪುಣ್ಯ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಬಹಳ ಸುಂದರವಾಗಿ ಮೂಡಿಬಂದಿದ್ದು, ಮಾರ್ಚ್ 1 ರಿಂದ 14ರವರೆಗೆ ತನಕ ತಂತ್ರಿವರೇಣ್ಯರಾದ ವಾಮಂಜೂರು ಶ್ರೀ ಅನಂತ ಉಪಾಧ್ಯಾಯ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಮಾರ್ಚ್ 1ರಂದು ಸಂಜೆ ಗಂಟೆ 3.30ಕ್ಕೆ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತಸರ ರಾಘವೇಂದ್ರ ಶಾಸ್ತ್ರಿಗಳಿಂದ ಉದ್ಘಾಟಿಸಲ್ಪಡುವ ಹಸಿರು ಹೊರಕಾಣಿಕೆ ಶೋಭಾಯಾತ್ರೆಯು ಅಡ್ಯಾರು ಸೋಮನಾಥ ಕಟ್ಟೆಯಿಂದ ಹೊರಟು ರಾಜಮಾರ್ಗದಲ್ಲಿ ಸಾಗಿ ಶ್ರೀ ಕ್ಷೇತ್ರವನ್ನು ತಲುಪಲಿದೆ. ಮಾರ್ಚ್ 6ರಂದು ಬೆಳಗ್ಗೆ ಗಂಟೆ 11.05ರಿಂದ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ,ಮಹಾಕಾಳಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ ಆಗಿ ಮಾರ್ಚ್ 9ರಂದು ಬೆಳಗ್ಗೆ ಗಂಟೆ 11.05ಕ್ಕೆ ಬ್ರಹ್ಮಕಲಶಾಭಿಶೇಕ ನೆರವೇರಲಿದೆ. ಅದೇ ದಿನ ಸಂಜೆ ಧ್ವಜಾರೋಹಣ ಆಗಿ ಮಾರ್ಚ್ 14ರ ತನಕ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ವಿವಿಧ ಧಾರ್ಮಿಕ ಕ್ಷೇತ್ರಗಳ ಮಠಾಧೀಶರು ಆಶೀರ್ವಚನ ನೀಡಲಿದ್ದು ಬೇರೆ ಬೇರೆ ಕ್ಷೇತ್ರಗಳ ಸಾಧಕರು,ರಾಜಕೀಯ ನಾಯಕರು, ಕೊಡುಗೈ ದಾನಿಗಳು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿದೆ ಎಂದರು.ಪತ್ರಿಕಾಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟ್ ನ ದಿವಾಕರ ದಾಸ್ ಮಲ್ಲಿ, ದೇವಳದ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಎನ್.ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ನಾಯ್ಕ್ ಅಡ್ಯಾರು, ಪುನರ್ ನಿರ್ಮಾಣ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರಮೋದ್ ಕುಮಾರ್ ಶೆಟ್ಟಿ ಭಂಡಾರಿಂಜ, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧ್ಯಕ್ಷ ದೇವಿಪ್ರಸಾದ್ ಸಾಮಾನಿ ಅಡ್ಯಾರುಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ.ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.ಫೋಟೋ – ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಜೈ ಭಾರತಿ ತರುಣ ವೃಂದದ ವಜ್ರ ಮಹೋತ್ಸವಕ್ಕೆ ಚಾಲನೆ

ಮಂಗಳೂರು: ನಗರದ ಹೊಯ್ಗೆಬೈಲ್‌ನ ಜೈ ಭಾರತಿ ತರುಣ ವೃಂದದ ವಜ್ರ ಮಹೋತ್ಸವ ಸಂಭ್ರಮಾಚರಣೆಯ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಕಾರ್ಯಕ್ರಮ ಭಾನುವಾರ ಕುಲಶೇಖರ ಬಳಿಯ ರಿಯಾ ಫೌಂಡೇಶನ್ ವಿಶೇಷ ಮಕ್ಕಳ ಕೇಂದ್ರದಲ್ಲಿ ನಡೆಯಿತು.ವಜ್ರಮಹೋತ್ಸವ ಲಾಂಛನ ಅನಾವರಣಗೊಳಿಸಿದ ವಕೀಲ ರಾಘವೇಂದ್ರ ರಾವ್ ಮಾತನಾಡಿ ‘ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳುವ ಯುವ ಸಮುದಾಯ ಸಮಾಜದ ಆಸ್ತಿ. ಕಳೆದ 60 ವರ್ಷದಿಂದ ಇಂತಹ ಸೇವೆ ನೀಡಿರುವ ಜೈ ಭಾರತಿ ತರುಣ ವೃಂದ ಮಾದರಿ ಯುವ ಸಂಘಟನೆಯಾಗಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮಾತನಾಡಿ ‘ಯುವ ಸಮುದಾಯಕ್ಕೆ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸದಾ ಪ್ರೇರಣೆ ನೀಡಿರುವ ಜೈ ಭಾರತಿ ತರುಣ ವೃಂದ ಸ್ಥಳೀಯ ಯುವಕರ ಒಗ್ಗಟ್ಟಿನ ಪ್ರತೀಕವಾಗಿ ಬೆಳೆದಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದರು.ರಿಯಾ ಫೌಂಡೇಶನ್ ವಿಶೇಷ ಮಕ್ಕಳ ಕೇಂದ್ರದ ಮೇಲ್ವಿಚಾರಕಿ ರಶ್ಮಿತಾ ಮುಖ್ಯ ಅತಿಥಿಯಾಗಿದ್ದರು. ಜೈ ಭಾರತಿ ತರುಣ ವೃಂದದಅಧ್ಯಕ್ಷ ವಿಕ್ರಮ್ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಕೇಶವ ಕರ್ಕೇರ, ಕಾರ್ಯದರ್ಶಿ ಜಿತೇಂದ್ರ, ಕೋಶಾಧಿಕಾರಿ ಸುನಿಲ್ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.ಉಪಾಧ್ಯಕ್ಷ ಸತೀಶ್ ಪೂಜಾರಿ ಅಶೋಕನಗರ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಜೈ ಭಾರತಿ ತರುಣ ವೃಂದದಿಂದ ವಿಶೇಷ ಮಕ್ಕಳ ಕೇಂದ್ರಕ್ಕೆ ದಿನಸಿ ಸಾಮಾಗ್ರಿ ನೀಡಲಾಯಿತು. ಕೇಂದ್ರದ ನಿವಾಸಿಗಳೊಂದಿಗೆ ಸಹಭೋಜನ ಏರ್ಪಡಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ದಿ.ಜಾರ್ಜ್ ಫೆರ್ನಾಂಡಿಸ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾಟ: ಜಾರ್ಜ್ ಫೆರ್ನಾಂಡಿಸ್ ಬದುಕು ದೇಶಕ್ಕೆ ಸದಾ ಆದರ್ಶ – ಡಾ.ನಾರಾಯಣ ಶೆಣೈ

ಮಂಗಳೂರು : ದೇಶ ಕಂಡ ಅಪ್ರತಿಮ ರಾಜಕಾರಣಿ ಜಾರ್ಜ್ ಫೆರ್ನಾಂಡಿಸ್ ಅವರು ಅಸಂಘಟಿತ ಕಾರ್ಮಿಕರಿಗೆ ಶಕ್ತಿ ತುಂಬಿದ ಮಹಾನ್ ಚೇತನ.ರಾಜಕೀಯವಾಗಿ ಉನ್ನತ ಸ್ಥಾನದಲ್ಲಿದ್ದರೂ ಜನ ಸಾಮಾನ್ಯರಂತೆ ಬದುಕಿದ ಜಾರ್ಜ್ ಅವರ ಜೀವನಾದರ್ಶ ದೇಶಕ್ಕೆ ಮಾದರಿಯಾಗಿದೆ ಎಂದು ಎಂಐಟಿ ಮಣಿಪಾಲದ ನಿವೃತ್ತ ಪ್ರಾಧ್ಯಾಪಕ ಡಾ.ಕೆ.ನಾರಾಯಣ ಶೆಣೈ ಹೇಳಿದರು. ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ ದಿ.ಜಾರ್ಜ್ ಫೆರ್ನಾಂಡಿಸ್ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಬುಧವಾರ ನಗರದ ಮಂಗಳಾ ಕ್ರೀಡಾಂಗಣದ ಬಳಿ ನಡೆದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪಂದ್ಯಾಟಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಜೆ.ಆರ್. ಲೋಬೊಮಾತ‌ನಾಡಿ” ಕೊಂಕಣ ರೈಲ್ವೆ ಯೋಜನೆ ಮೂಲಕ ಜಾರ್ಜ್ ಫೆರ್ನಾಂಡಿಸ್ ಅವರು ಕರಾವಳಿ ಕರ್ನಾಟಕದ ಅಭಿವೃದ್ದಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.ಭೆಥನಿ‌ ಮಂಗಳೂರು ಪ್ರಾಂತ್ಯದ ಸಹ ಪ್ರಾಂತ್ಯಾಧಿಕಾರಿ ಭಗಿನಿ ಮಾರಿಯೊಲ ಡಿಸೋಜಾ ಬಿ.ಎಸ್.ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ, ಐಎಂಎ ಮಂಗಳೂರು ಶಾಖೆಯ ಅಧ್ಯಕ್ಷೆ ಡಾ. ಜೆಸ್ಸಿ ಮರಿಯ ಡಿಸೋಜ, ಉದ್ಯಮಿ ಮ್ಯಾಕ್ಸಿಂ ಕ್ರಾಸ್ತಾ, ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಸ್.ಸತೀಶ್ ಕುಮಾರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಜ್ಞಾನದೀವಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು.ವೇದಿಕೆಯ ಸ್ಥಾಪಕ ಅಧ್ಯಕ್ಷ ಫ್ರಾಂಕ್ಲಿನ್ ಮೊಂತೆರೊ ಸ್ವಾಗತಿಸಿದರು. ಮಲ್ಲಿಕಟ್ಟೆ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರುತ್ ಸಿಲ್ವಿಯಾ ಕ್ಯಾಸ್ತಲಿನೊ ಕಾರ್ಯಕ್ರಮ ನಿರೂಪಿಸಿದರು.

Scroll to Top