ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

ಮಂಗಳೂರು: ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 08-12-2024ನೇ ಅದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು. ಬೆಳಿಗ್ಗೆ 6ರಿಂದ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಇವರಿಂದ ಭಜನ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.ಮಧ್ಯಾಹ್ನ 1 ಗಂಟೆಯಿಂದ ಶ್ರೀಮತಿ ವಿಜಯ ಭಾಸ್ಕರ್ ಮತ್ತು ಶ್ರೀ ಗಣೇಶ್ ಮಂಗಳೂರು ಇವರಿಂದ “ಭಕ್ತಿಗಾನ ಸುಧೆ” ಸಂಜೆ 4 ಗಂಟೆಯಿಂದ “ಸ್ಪೂರ್ತಿ ಮಹಿಳಾ ಭಜನಾ ಮಂಡಳಿ” ಪದವಿನಂಗಡಿ ಮತ್ತು ಶ್ರೀ ನಾರಾಯಣಗುರು ಸೇವಾಸಂಘ, ಮೇರಿಹಿಲ್, ಗುರುನಗರ ಇವರಿಂದ ” ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಿತು. ಸಂಜೆ 7 ಗಂಟೆಗೆ ಅಗೆಲು ಸೇವೆ ನಡೆದು, ಬಳಿಕ ಅನ್ನಸಂತರ್ಪಣೆ ನೆರವೇರಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಕಮಲಾದೇವಿ ಅಸ್ರಣ ಅವರು ಆಶೀರ್ವಚನ ನೀಡಿದರು. ನಿರೂಪಕ ನವನೀತ್ ಶೆಟ್ಟಿ ಕದ್ರಿ, ಉದ್ಯಮಿಗಳಾದ ಲೀಲಾಕ್ಷ ಕರ್ಕೇರಾ, ಎಂ. ಅಶೋಕ್ ಶೇಟ್, ಲಚ್ಚು ಲಾಲ್, ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ಶ್ರೀಮತಿ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಪ್ರಾದೇಶಿಕ ವಾರ್ತೆಗಳು

ನಳಿನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ ಕಾಮತ್ ರ ಹುಟ್ಟುಹಬ್ಬಕ್ಕೆ Mpmla’s ನ್ಯೂಸ್ ಶುಭಾಶಯಗಳು.

ಮಂಗಳೂರು: ಇಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ರ ಹುಟ್ಟುಹಬ್ಬವಾಗಿದ್ದು, mp mla’s ನ್ಯೂಸ್ ಇಬ್ಬರಿಗೂ ಶುಭಾಶಯಗಳನ್ನು ಸಲ್ಲಿಸುತ್ತದೆ.

ಪ್ರಾದೇಶಿಕ ವಾರ್ತೆಗಳು

ಡಾ. ಅಶೋಕ್ ಶೆಟ್ಟಿ ಬಿ. ಎನ್. ಸಹಿತ 15 ಮಂದಿ ಸಾಧಕರಿಗೆ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ಮತ್ತು ಆಕ್ಸಿಸ್ ಬ್ಯಾಂಕ್ ಸಹಯೋಗದಲ್ಲಿ ಸೇವಾರತ್ನ ಪ್ರಶಸ್ತಿ ಪ್ರದಾನ.

ಮಂಗಳೂರು: ಮಾಕ್ಸ್ ಲೈಫ್ ಇನ್ಶೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಸಹಯೋಗದಲ್ಲಿ ಪತ್ರಕರ್ತ ಡಾ. ಅಶೋಕ್ ಶೆಟ್ಟಿ ಬಿ. ಎನ್ ಸಹಿತ 15 ಮಂದಿ ಸಾಧಕರಿಗೆ ಅತ್ತಾವರದ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿ ಕಚೇರಿಯಲ್ಲಿ ಡಿಸೆಂಬರ್ 6 ರ ಸಂಜೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸನ್ಮಾನ ಕಾರ್ಯಕ್ರಮದಲ್ಲಿ ZVP ಸುಧಾಕರ್ ಶೆಟ್ಟಿ, ARM ಸತೀಶ್ ಮೆನನ್, ಕಚೇರಿ ಮುಖ್ಯಸ್ಥ ಅರುಣ್ ವಿ.ಎಸ್., ಬ್ರಾಂಚ್ ಮೆನೇಜರ್ ಗಣೇಶ್ ಆಚಾರ್ಯ, ಟೈನಿಂಗ್ ಮೆನೇಜರ್ ಸಚಿನ್ ಕೆ.ಎಸ್., ಸೀನಿಯರ್ ಪಾರ್ಟನರ್ (ಸೇಲ್ಸ್) ಶಶಿಧರ್, ಸೀನಿಯರ್ ಮೆನೇಜರ್ ಪ್ರಜ್ವಲ್ ಕೋಟ್ಯಾನ್ ಹಾಗೂ ಅಸೋಸಿಯೇಟ್ ಡೆವೆಲಪ್‌ಮೆಂಟ್ ಮೆನೇಜರ್ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಸಮಾಜದಲ್ಲಿ ಮಹತ್ವದ ಹೊಣೆಗಾರಿಕೆ ನಿಭಾಯಿಸುತ್ತಿರುವ ಮಾಧ್ಯಮದ ಪ್ರತಿನಿಧಿಗಳು -ಪ್ರೊ.ಪಿ‌ಎಲ್ ಧರ್ಮ. ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಸಮಾರೋಪ

ಮಂಗಳೂರು,ಡಿ‌.6;ಸಮಾಜದಲ್ಲಿ ಮಾಧ್ಯಮಗಳು ಹಲವು ಇತಿಮಿತಿಗಳ ನಡುವೆ ಪ್ರತಿನಿತ್ಯ ಹಲವಾರು ಸುದ್ದಿಗಳನ್ನು ಶ್ರಮವಹಿಸಿ ಓದುಗರಿಗೆ ನೀಡುವ ಮಹತ್ವದ ಹೊಣೆಗಾರಿಕೆ ಯನ್ನು ಇಂದಿಗೂ ನಿಭಾಯಿಸುತ್ತಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ.ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ದಿ.ಮನೋಹರ ಪ್ರಸಾದ್ ವೇದಿಕೆ, ದಿ. ಭುವನೇಂದ್ರ ಪುದುವೆಟ್ಟು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ 5ನೇ ಜಿಲ್ಲಾ ಸಮ್ಮೇಳನದ ಸಮಾರೋಪ ಸಮಾರಂಭವನ್ನು ನೆರವೇರಿಸಿ ಮಾತನಾಡುತ್ತಿದ್ದರು.ಪತ್ರಿಕೆಗಳು ಜಾಹೀರಾತು,ಸಿನಿಮಾ ಇನ್ನಿತರ ಪುಟಗಳ ನಡುವೆ ಪ್ರತಿನಿತ್ಯ ನೂರಾರು ಸುದ್ದಿಗಳನ್ನು ಸಂಗ್ರಹಿಸಿ ತನ್ನ ಓದುಗರಿಗೆ ನೀಡುತ್ತಿರುವುದರ ಹಿಂದಿನ ಪರಿಶ್ರಮ ಮಹತ್ವದ ಹೊಣೆಗಾರಿಕೆ ಯಾಗಿದೆ.ಜೊತೆಗೆ ಪತ್ರಕರ್ತರು ಸಮಾಜವನ್ನು ಎಚ್ಚರಿಸುವ, ಕೆಲವೊಮ್ಮೆ ಚಾಟಿ ಬೀಸುವ ಕೆಲಸವನ್ನೂ ಮಾಡುತ್ತಾ, ಸಮಾಜದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಶ್ಲಾಘನೀಯ ಎಂದರು. ಅತಿಥಿಗಳಾಗಿ ಭಾಗವಹಿಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡುತ್ತಾ, ಇಂದಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಾಧ್ಯಮಗಳಲ್ಲೂ ಬದಲಾವಣೆ ಯಾಗಿದೆ.ಪತ್ರಿಕಾ ಮಾಧ್ಯಮ ಗಳ ಜೊತೆ ಟಿ.ವಿ ಮಾಧ್ಯಮ ಗಳು ಅವುಗಳಿಗಿಂತಲೂ ಸಾಮಾಜಿಕ ಮಾಧ್ಯಮಗಳು ಇನ್ನೂ ವೇಗವಾಗಿ ಸಮಾಜದಲ್ಲಿ ಜನರ ನಡುವೆ ಕಾರ್ಯ ನಿರ್ವಹಿಸುತ್ತಿದೆ.ರಾಜಕೀಯ ರಂಗದಂತೆ ಮಾಧ್ಯಮ ರಂಗಗಳು ಸ್ಪರ್ಧಾತ್ಮಕ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಒಂದು ಸಣ್ಣ ಘಟನೆ ಕ್ಷಣ ಮಾತ್ರದಲ್ಲಿ ದೇಶಾದ್ಯಂತ ಪ್ರಸಾರವಾಗುತ್ತವೆ.ಇಂತಹ ಸಂದರ್ಭದಲ್ಲಿ ಕೆಲವು ಸುದ್ದಿಗಳಿಂದ ಸಮಾಜದಲ್ಲಿ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡುತ್ತದೆ.ಈ ನಡುವೆ ಪತ್ರಕರ್ತರು ತಾವು ಇರುವ ಪ್ರದೇಶ ಜನರ ಬಗ್ಗೆ ಕಾಳಜಿಯಿಂದ ಸಕಾರಾತ್ಮಕ ದೃಷ್ಟಿಕೋನ. ದಿಂದ ಜನರ ಹಿತಕ್ಕಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ. ಅದಕ್ಕಾಗಿ ಬ್ರ್ಯಾಂಡ್ ಮಂಗಳೂರು ನಂತಹ ಕಾರ್ಯಕ್ರಮ, ಗ್ರಾಮವಾಸ್ತವ್ಯದಂತಹ ಕಾರ್ಯಕ್ರಮಗಳು ಮಾದರಿಯಾಗಿದೆ ಎಂದರು.ಶಾಸಕ ಡಾ.ವೈ.ಭರತ್ ಶೆಟ್ಟಿಯವರು ಮಾತನಾಡುತ್ತಾ, ಪತ್ರಕರ್ತರು ಒತ್ತಡಗಳ ನಡುವೆ ತಮ್ಮ ಮೌಲ್ಯಗಳು,ಜನ ಸಾಮಾ ನ್ಯರ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಸಮ್ಮೇಳಕ್ಕೆ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ದಿವಂಗತ ಮನೋಹರ ಪ್ರಸಾದ್ ಅವರ ಸಂಸ್ಕರಣೆಯನ್ನು ಹಿರಿಯ ಪತ್ರಕರ್ತರಾದ ಪಿ.ಬಿ.ಹರೀಶ್ ರೈ ಹಾಗೂ ರವೀಂದ್ರ ಶೆಟ್ಟಿ ನಡೆಸಿಕೊಟ್ಟರು.ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ಎಂ.ಎಸ್.ಭಟ್ (:ಉದಯವಾಣಿ),ದೀಪಕ್ ಅಟವಳೆ (;ಹೊಸ ದಿಗಂತ),ಉದಯ ಶಂಕರ ನೀರ್ಪಾಜೆ( ಉದಯವಾಣಿ,) .ರಾಮಕೃಷ್ಣ ಭಟ್( ಕೆಪಿಎನ್,)ಜಯಂತ ಉಳ್ಳಾಲ,( ನಮ್ಮ ಕುಡ್ಲ ವಾಹಿನಿ)ಶಶಿಧರ ಪೊಯ್ಯತ್ತ ಬೈಲು( ಅಬ್ಬಕ್ಕ ಟಿವಿ ವಾಹಿನಿ,) ಅಶೋಕ್ ಶೆಟ್ಟಿ ಬಾಳ.ಬಿ.ರವೀಂದ್ರ ಶೆಟ್ಟಿ (ವಿಜಯ ಕರ್ನಾಟಕ,)ಪ್ರಕಾಶ್ ಸುವರ್ಣ(ಕನ್ನಡ ಪ್ರಭ ) .ಸಲೀಮ್ ಬೋಳಂಗಡಿ( ಸನ್ಮಾರ್ಗ) ಶರತ್ ಸಾಲ್ಯಾನ್ (ವಿ 4 ನ್ಯೂಸ್ ) .ಎಚ್.ಎಸ್.ಮಂಜುನಾಥ( ದಿ ಹಿಂದೂ ) ರಾಜೇಶ್ ಕದ್ರಿ(ಮಂಗಳೂರು ಮಿರರ್) ಭಾಗ್ಯವಾನ್ ಸುನೀಲ್ (ವಿಜಯವಾಣಿ) ಇವರನ್ನು ಸನ್ಮಾನಿಸಲಾಯಿತು.ಮಾಧ್ಯಮ ಯುವ ಜನ ಗೋಷ್ಠಿಯಲ್ಲಿ ಪತ್ರಕರ್ತರಾದ ಮೊಹಮ್ಮದ್ ಆರಿಫ್ ಪಡುಬಿದ್ರೆ,ಸಂಧ್ಯಾ ಹೆಗಡೆ,ಅನಿಲ್ ಶಾಸ್ತ್ರಿ ವಿಷಯ ಮಂಡಿಸಿದರು. ಅನ್ನಪೂರ್ಣೇಶ್ವರಿ ಅಂಧ ಕಲಾವಿದರ ಸಂಗೀತ ಕಾರ್ಯಕ್ರಮ ನಡೆಯಿತು.ಭಾಸ್ಕರ್ ಕಟ್ಟ ಕಾರ್ಯಕ್ರಮ ಸಂಯೋಜಿಸಿದರು. ತಾಲೂಕಿನ ಅಧ್ಯಕ್ಷ ರು ಪದಾಧಿಕಾರಿ ಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.ಸೀತಾರಾಮ ಆಚಾರ್ಯ ಮೂಡುಬಿದಿರೆ, ಮೌನೇಶ್ ವಿಶ್ವಕರ್ಮ ಬಂಟ್ವಾಳ,ಶಶಿಧರ ಪೊಯ್ಯತ್ತಬೈಲ್ ಉಳ್ಳಾಲ,ಸಿದ್ಧಿಕ್ ನೀರಾಜೆ ಪುತ್ತೂರು,ವಿಜಯ ಕುಮಾರ್ ಪೆರ್ಲ ಕಡಬ ಭಾಗವಹಿಸಿದ್ದರು.ಸಮ್ಮೇಳನ ದ ಸರ್ವಾಧ್ಯಕ್ಷ ಶಿವ ಸುಬ್ರಹ್ಮಣ್ಯ ಸಮಾರೋಪ ಸಮಾರಂಭದ ಪ್ರತಿಕ್ರಿಯೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ವೇದಿಕೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ,ಉದ್ಯಮಿ ರಮೇಶ್ ನಾಯಕ್,ಇಂಡಿಯನ್ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ಸಭಾಪತಿ ಸಿ.ಎ. ಶಾಂತಾರಾಮ ಶೆಟ್ಟಿ ತಾಲೂಕು ಮತ್ತುಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾ ರಿಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್: ಅಭಿವ್ಯಕ್ತಿ ವೇದಿಕೆ ಉದ್ಘಾಟನೆಯಲ್ಲಿ ಡಾ.ಎನ್.ಪಿ. ನಾರಾಯಣ ಶೆಟ್ಟಿ. ಆಲಿಸುವ, ಚರ್ಚಿಸುವ ಮನೋಭಾವ ಬೆಳೆಸಿಕೊಳ್ಳಿ

ವಿದ್ಯಾಗಿರಿ: ‘ಆಲಿಸುವ ಹಾಗೂ ಚರ್ಚಿಸಿ ನಿರ್ಧರಿಸುವ ಮನೋಭಾವವೇ ಯಶಸ್ಸು ಕಾಣುವ ಮಾರ್ಗ’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಮೌಲ್ಯಮಾಪನ) ಡಾ.ಎನ್.ಪಿ. ನಾರಾಯಣ ಶೆಟ್ಟಿ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನಲ್ಲಿ ಮಂಗಳವಾರ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ‘ಅಭಿವ್ಯಕ್ತಿ’ ವಿದ್ಯಾರ್ಥಿ ವೇದಿಕೆಯ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಪತ್ರಿಕೋದ್ಯಮದಲ್ಲಿ ಯಶಸ್ಸು ಕಾಣಲು ಸಂಯಮದ ಆಲಿಸುವ ಮನೋಭಾವ ಬಹುಮುಖ್ಯ. ಯಾವುದೇ ಕಾರ್ಯಕ್ರಮ ಯೋಜಿಸುವ ಮೊದಲು ಸಾಕಷ್ಟು ಚರ್ಚೆ ನಡೆಸಬೇಕು. ಹಿರಿಯರು- ಕಿರಿಯರು ಎನ್ನದೇ ಸಲಹೆ -ಸೂಚನೆಗಳನ್ನು ಸ್ವೀಕರಿಸಿಕೊಂಡು ನಿರ್ಧಾರಕ್ಕೆ ಬರಬೇಕು ಎಂದರು.ಭಾಷೆಯ ಮೇಲಿನ ಹಿಡಿತ ಹಾಗೂ ತಂತ್ರಜ್ಞಾನದ ಸ್ಪರ್ಶ ಇಂದಿನ ಮಾಧ್ಯಮ ಜಗತ್ತಿಗೆ ಅನಿವಾರ್ಯ ಎಂದ ಅವರು, ಜ್ಞಾನ ಮತ್ತು ಅಭಿವ್ಯಕ್ತಿ ಪತ್ರಿಕೋದ್ಯಮದ ಎರಡು ಕಣ್ಣುಗಳು ಎಂದರು.ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ‘ನಾವು ಏನು ಆಗಿಲ್ಲವೋ, ಆ ವ್ಯಕ್ತಿತ್ವವನ್ನು ನಮ್ಮೊಳಗೆ ರೂಪಿಸುವುದೇ ಕಲಿಕೆ. ಅದು ನಮ್ಮ ವ್ಯಕ್ತಿತ್ವದ ಉನ್ನತೀಕರಣ ಆಗಿರಬೇಕು’ ಎಂದರು.‘ನಮಗೆಲ್ಲ ಅಭಿವ್ಯಕ್ತಿ ಸ್ವಾತಂತ್ರö್ಯ ಇದೆ. ಆದರೆ, ಅದರ ಸದ್ಬಳಕೆ ಆಗದಿದ್ದರೆ, ಅಧ್ವಾನದ ಅಪಾಯಗಳೂ ಇವೆ’ ಎಂದರು.‘ಪ್ರಜಾಪ್ರಭುತ್ವ ಉಳಿಸಿ- ಬೆಳೆಸುವಲ್ಲಿ ಪತ್ರಿಕೋದ್ಯಮದ ಪಾತ್ರ ಬಹುಮುಖ್ಯ ಪ್ರಜಾಸತ್ತಾತ್ಮಕವಾಗಿ ವರ್ತಿಸಿದಾಗ ಮಾತ್ರ ಪತ್ರಕರ್ತರ, ಸಮಾಜದ ಯಶಸ್ಸು ಸಾಧ್ಯ’ ಎಂದರು.ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಯೋಗಿಕ ಕಲಿಕೆ ಹೆಚ್ಚು ಅವಕಾಶಗಳಿದ್ದು ಅವುಗಳನ್ನು ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು.ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯ ವಿದ್ಯಾರ್ಥಿ ಸಂಯೋಜಕ ರುಧೀರ್ ವಾರ್ಷಿಕ ವರದಿ ವಾಚಿಸಿದರು. ವಿನೀತ್ ಭವಿಷ್ಯದ ಕಾರ್ಯ ಯೋಜನೆಗಳನ್ನು ತಿಳಿಸಿದರು.ನೂತನ ವರ್ಷದ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ವೇದಿಕೆ ಖಜಾಂಚಿ ವೀಕ್ಷಿತ .ವಿ ನಿರೂಪಿಸಿದರು. ಉಪ ಸಂಯೋಜಕಿ ಪ್ರೇರಣಾ ಇದ್ದರು.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಸಿನಿಮಾ ಸಮಾಜದಲ್ಲಿ ಕಾರ್ಯಾಗಾರ. ಬರವಣಿಗೆಯೇ ಸಿನಿಮಾದ ತಳಹದಿ: ಪರಮ್

ವಿದ್ಯಾಗಿರಿ; ‘ಸಿನಿಮಾ ಕ್ಷೇತ್ರದಲ್ಲಿ ಬರವಣಿಗೆ ಬಹುಮುಖ್ಯವಾಗಿದ್ದು, ಬರಹಗಾರರಿಗೆ ಹೆಚ್ಚಿನ ಬೇಡಿಕೆ ಇದೆ. ಸಿನಿಮಾ ಕ್ಷೇತ್ರ ಪ್ರವೇಶಿಸಲು ಇಚ್ಛಿಸುವ ವಿದ್ಯಾರ್ಥಿಗಳು ಬರವಣಿಗೆಯನ್ನು ಉನ್ನತೀಕರಿಸಿಕೊಳ್ಳಬೇಕು’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ರಮಾನಂದ ನಾಯಕ್ (ಪರಮ್ ಭಾರಧ್ವಜ್) ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಪತ್ರೀಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸೋಮವಾರ ಆಳ್ವಾಸ್ ಫಿಲಂ ಸೊಸೈಟಿ ಹಮ್ಮಿಕೊಂಡ ‘ಸ್ಕಿçಪ್ಟಿಂಗ್ ಸಿನಿಮಾ’ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ‘ಸಿನಿಮಾ ನಿರ್ಮಾಣದಲ್ಲಿ ಕಲ್ಪನೆ, ಬರವಣಿಗೆ, ಸಂಕಲನ, ಚಿತ್ರೀಕರಣ ಸೇರಿದಂತೆ ಎಲ್ಲ ವಿಭಾಗಗಳೂ ಮುಖ್ಯ. ಅವುಗಳ ನಡುವೆ ಉತ್ತಮ ಹೊಂದಾಣಿಕೆ ಹಾಗೂ ಸಮತೋಲನ ಇದ್ದಾಗ ಮಾತ್ರ ಒಳ್ಳೆಯ ಸಿನಿಮಾ ಬರಲು ಸಾಧ್ಯ’ ಎಂದರು.ಕಲಿಕೆಯಲ್ಲಿ ಮೇಲು-ಕೀಳು ಎಂಬುದು ಇಲ್ಲ. ಸಣ್ಣವರು, ದೊಡ್ಡವರು, ಸಮಾನ ಮನಸ್ಕರು ಸೇರಿದಂತೆ ಎಲ್ಲರಿಂದಲೂ ಕಲಿಯಬೇಕು ಎಂದರು.ತಾವು ಬರೆದು ನಿರ್ಮಿಸಿದ ಆಲ್ಪಂ ಹಾಡುಗಳನ್ನು ಪ್ರದರ್ಶಿಸಿದ ಅವರು, ಕಿರುಚಿತ್ರ, ಆಲ್ಪಂ ಹಾಡು, ಸಿನಿಮಾ ಹಾಡು, ಸಂಭಾಷಣೆ ಇತ್ಯಾದಿಗಳ ರಚನೆ ಬಗ್ಗೆ ತರಬೇತಿ ನೀಡಿದರು.ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಆಳ್ವಾಸ್ ಫಿಲಂ ಸೊಸೈಟಿ ಸಂಯೋಜಕ ಹರ್ಷವರ್ಧನ ಪಿ.ಆರ್., ಸಹಾಯಕ ಪ್ರಾಧ್ಯಾಪಕರಾದ ಸುಶ್ಮಿತಾ ಜೆ., ನಿಶಾನ್ ಕೋಟ್ಯಾನ್, ಹನ್ನಾ, ಅರುಣ್ ಮತ್ತು ಶಂಕರ್ ಕಾಮತ್ ಇದ್ದರು.

ಪ್ರಾದೇಶಿಕ ವಾರ್ತೆಗಳು

ಧೈರ್ಯವಾಗಿ ಮುನ್ನುಗ್ಗಲು ಡಿಜಿಟಲ್ ಕ್ರಾಂತಿ ಮಾಧ್ಯಮ ಕ್ಷೇತ್ರಕ್ಕೆ ಶಕ್ತಿ ತುಂಬಿದೆ: ಜಿಲ್ಲಾ ಪತ್ರಕರ್ತರ ಸಮ್ಮೇಳನದ ಅಧ್ಯಕ್ಷ ಶಿವಸುಬ್ರಹ್ಮಣ್ಯ ಕೆ. ಅಭಿಮತ

ಮಂಗಳೂರು: ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮದ ತಮ್ಮ ಅನುಭವಗಳನ್ನು ಬಿಚ್ಚಿಟ್ಟ ಅವರು ಕಂಪೆನಿ ಕಲ್ಚರ್‌ಗೆ ಒಗ್ಗಿಕೊಳ್ಳಲು ಆಗದ ಕಾರಣ ಪತ್ರಿಕೋದ್ಯಮದಿಂದ ನಿರ್ಗಮಿಸಬೇಕಾಯುತು ಎಂದರು.ಪತ್ರಿಕಾಲಯದಲ್ಲಿ ಇರುವ ಕೆಲವೊಂದು ಕೆಟ್ಟ ನಡವಳಿಕೆಗಳು ಸುಸಂಸ್ಕೃತ ಪತ್ರಕರ್ತರನ್ನು ದೂರ ಮಾಡುವ ಅಪಾಯ ಇದೆ ಎಂದು ಹೇಳಿದರು.ಪತ್ರಿಕೋದ್ಯಮ ಪ್ರವೇಶ ಮಾಡುವ ಸಂದರ್ಭದಲ್ಲಿ ಪ್ರತಿಯೊಬ್ಬ ಯುವಪತ್ರಕರ್ತರ ಮುಂದೆ ಅದ್ಭುತ ಲೋಕ ತೆರೆದುಕೊಳ್ಳುತ್ತದೆ. ಹೊರಗಡೆ ಚೆನ್ನಾಗಿ ಕಂಡರೂ ಹಲವೆಡೆ ಒಳಗಿನ ವಾತಾವರಣ ಕಲುಷಿತವಾಗಿದೆ. ಪತ್ರಕರ್ತರಲ್ಲಿ ಗುಂಪುಗಾರಿಕೆ, ಹಣದ ಹಪಹಪಿ ಹೆಚ್ಚಾಗಿದೆ. ಪತ್ರಕರ್ತರನ್ನು ವ್ಯವಸ್ಥಿತವಾಗಿ ಮುಗಿಸುವ ಷಡ್ಯಂತ್ರವೂ ನಡೆಯುತಿದೆ. ಕನ್ನಡದ ಪತ್ರಿಕೋದ್ಯಮದ ಅವನತಿಗೆ ಈ ರೀತಿಯ ಬೆಳವಣಿಗೆ ಕಾರಣವಾಗಬಹುದು ಎಂದು ಹೇಳಿದರು. ಆದರೆ ಕ್ರಿಯಾಶೀಲವಾಗಿರುವ ಯುವ ಪತ್ರಕರ್ತರಿಗೆ ಸಾಕಷ್ಟು ಅವಕಾಶ ಇದೆ. ಮೊದಲು ನಿಮ್ಮ ಗುರಿಯನ್ನು ನಿಗದಿಪಡಿಸಿ, ಉದ್ಯೋಗದಲ್ಲಿ ಶಿಸ್ತು, ಬದ್ಧತೆ, ಅರ್ಪಣಾ ಮನೋಭಾವದಿಂದ ಕೆಲಸ ಮಾಡಿ, ಪ್ರಾದೇಶಿಕ ಭಾವನೆ, ಗುಂಪುಗಾರಿಕೆ, ಜಾತೀಯ ಮನೋಭಾವ ಬೇಡ. ಪತ್ರಿಕಾಲಯದಲ್ಲಿ ನಿಮಗೆ ಮಾರ್ಗದರ್ಶನ ಮಾಡುವವರ ಗುಂಪಿಗೆ ಸೇರಿಕೊಳ್ಳಿ ಎಂದು ಕರೆ ನೀಡಿದರು. ವಿಶ್ವಾಸಾರ್ಹತೆ ಮುಖ್ಯ ಎಂದ ಅವರು ವಿಶ್ವಾಸಾರ್ಹತೆ ಇಲ್ಲದಿದ್ದರೆ ಯಾವುದೇ ಮಾಧ್ಯಮ ಉಳಿಯಲು ಸಾಧ್ಯವಿಲ್ಲ ಎಂದರು. ಚಿಕ್ಕ ವಯಸ್ಸಿನಲ್ಲಿ ಪತ್ರಿಕೆಯನ್ನು ಓದುವುದರಿಂದ ಪತ್ರಿಕೆ ಓದುವ ಸುಖ ಸಿಗಲು, ಆಸಕ್ತಿ ಹೆಚ್ಚಲು ಸಾಧ್ಯ ಎಂದರು. ಒಂದು ಸರಕಾರ ಮಾಡುವ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತಿದೆ ಎಂದು ಶ್ಲಾಘಿಸಿದ ಅವರು ಶಿವಾನಂದ ತಗಡೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಸಂಘಕ್ಕೆ ಹೊಸ ಇಮೇಜ್ ತಂದರು. ಜಿಲ್ಲಾ ಸಂಘಗಳು ಕೂಡ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತಿವೆ. ಪತ್ರಕರ್ತರ ಮುಂದಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಅವರು ಹೇಳಿದರು.ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಶಿವಸುಬ್ರಹ್ಮಣ್ಯ ಕೆ.ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಕಲೆ ಸಾಹಿತ್ಯ, ಪ್ರಾದೇಶಿಕ ವಾರ್ತೆಗಳು

ನಾ ಕಂಡ ಉಪೇಂದ್ರ. ‘ಎ’ಯಿಂದ U. I. ತನಕ

ವಿಶೇಷ ವರದಿ: ಡಾ. ಅಶೋಕ್ ಶೆಟ್ಟಿ ಬಿ.ಎನ್.ಮಂಗಳೂರು:1998ರಲ್ಲಿ ಉಪೇಂದ್ರ ಚಿತ್ರದ ಚಿತ್ರೀಕರಣ ಬ್ರಹ್ಮರಕೂಟ್ಲು ಸಮೀಪದ ತುಂಬೆ ರಾಮಲ್‌ಕಟ್ಟೆ ಆಲದ ಮರದ ಸುತ್ತ ನಡೆಯುತ್ತಿತ್ತು. ಆಗ ನಾನು ಉಪೇಂದ್ರರವರನ್ನು ಭೇಟಿಯಾಗಿ ಈ ಚಿತ್ರದ ಹೀರೋ ಯಾರು ಎಂದು ಕೇಳಿದೆ.  ಉಪೇಂದ್ರರವರು ‘ನಾನು’ ಅಂತ ಹೇಳಿದರು. ಆದರ ನಂತರ ವಿಲನ್ ಯಾರು ಎಂದು ಕೇಳಿದೆ. ಆಗ ಉಪೇಂದ್ರರವರು ‘ನಾನು’ ಎಂದು ಹೇಳಿದರು.  ಯಾವುದೇ ಪ್ರಶ್ನೆಯನ್ನು ಕೇಳಿದರೂ ಉಪೇಂದ್ರರವರು ನಾನು, ನಾನು ಎನ್ನುತ್ತಲೇ ಇದ್ದರು. ನನಗೆ ಏನೆಂದೇ ಅರ್ಥವಾಗಲಿಲ್ಲ. ಉಪೇಂದ್ರ ಚಿತ್ರ ನೋಡಿದ ಮೇಲೆ ಉಪೇಂದ್ರರವರು ಮನುಷ್ಯನ ಒಳಗಿರುವ ‘ನಾನು ‘ಎಂಬ ಅಹಂಕಾರದ ಬಗ್ಗೆ ಕಥೆ ಹೆಣೆದು ಚಿತ್ರ ಸಂದೇಶ ನೀಡಿದ್ದರು. ಉಪೇಂದ್ರರವರ ಎಲ್ಲಾ ಚಿತ್ರಗಳು ‘ಎ ’ ಯಿಂದ ಆರಂಭಿಸಿ ವಿಶಿಷ್ಟ ಡೈಲಾಗ್ ಮತ್ತು ಮ್ಯಾನರೀಸಂನಿಂದ ಪ್ರೇಕ್ಷಕರನ್ನು ತಲುಪುತ್ತವೆ.ಪ್ರಸ್ತುತ ಉಪೇಂದ್ರರವರ ‘U.I’ ಐದು ಭಾಷೆಗಳಲ್ಲಿ ತಯಾರಾಗಿದ್ದು,ಡಿಸೆಂಬರ್ 20ರಂದು ರಾಜ್ಯಾದಾದ್ಯಂತ ಬಿಡುಗಡೆಗೊಳ್ಳಲಿದೆ.ಉಪೇಂದ್ರರವರು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದಾಗ ಭಾಗವಹಿಸಿ ನಾಲ್ಕು ಪ್ರಶ್ನೆಗಳನ್ನು ಕೇಳಿದ್ದೆ.ಮೊದಲನೆಯದು, ‘U.I’ ಚಿತ್ರ ಡಿಸೆಂಬರ್ 20ಕ್ಕೆ ಬಿಡುಗಡೆಯಾಗುತ್ತದೆ. ಇದರ ಬೆನ್ನಲ್ಲೇ ಸುದೀಪ್ ಅಭಿನಯದ ಮ್ಯಾಕ್ಸ್ ಚಿತ್ರ ಡಿಸೆಂಬರ್ 25ಕ್ಕೆ ಬಿಡುಗಡೆಯಾಗುತ್ತದೆ. ಬೆನ್ನು ಬೆನ್ನಿಗೆ ದೊಡ್ಡ ಬಜೆಟ್‌ನ ಚಿತ್ರಗಳು ಬಿಡುಗಡೆಗೊಂಡರೆ ಸಮಸ್ಯೆಯಾಗುವುದಿಲ್ಲವೇ ಎಂದು ಕೇಳಿದಾಗ, ಉಪೇಂದ್ರರವರು ನನ್ನ ಚಿತ್ರದ ಪ್ರೇಕ್ಷಕರು ನನ್ನ ಚಿತ್ರವನ್ನು ನೋಡುತ್ತಾರೆ. ಇದರಿಂದ ನಮಗೇನೂ ಸಮಸ್ಯೆ ಇಲ್ಲ ಎಂದರು. ಎರಡನೆಯದಾಗಿ, ‘ಎ ’ ಚಿತ್ರದ ಉಪೇಂದ್ರನಿಗೂ ‘U.I’ ಚಿತ್ರದ ಉಪೇಂದ್ರನಿಗೂ ಇರುವ ವ್ಯತ್ಯಾಸ ಏನೆಂದು ಕೇಳಿದೆ. ಆಗ ಅವರು ನೀವು ‘U.I’ ಚಿತ್ರವನ್ನು ನೋಡಿ ಗೊತ್ತಾಗುತ್ತದೆ ಎಂದರು.ಮೂರನೆಯದಾಗಿ, ಈಗ ಥಿಯೇಟರುಗಳಿಗೆ ಬಂದು ಚಿತ್ರ ನೋಡುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆಯಲ್ಲವೇ ಎಂದು ಕೇಳಿದೆ. ಆಗ ಉಪೇಂದ್ರರವರು ಉತ್ತಮ ಗುಣಮಟ್ಟದ ಸ್ವಾರಸ್ಯಕರ ಕಥೆಯಿರುವ ಚಿತ್ರವನ್ನು ಪ್ರೇಕ್ಷಕರು ಖಂಡಿತಾ ಥಿಯೇಟರಿಗೆ ಬಂದು ನೋಡುತ್ತಾರೆ. ಕನ್ನಡ ಚಿತ್ರ ಪ್ರೇಮಿಗಳು ಎಂದಿಗೂ ಕನ್ನಡ ಚಿತ್ರವನ್ನು ಸೋಲಲು ಬಿಡುವುದಿಲ್ಲವೆಂದರು.ನಾಲ್ಕನೇಯದಾಗಿ, ನೀವು ಪ್ರಜಾಕೀಯ ರಾಜಕೀಯದ ಮೂಲಕ ರಾಜಕೀಯ ಪಕ್ಷ ಕಟ್ಟಿದವರು. ಅದು ಈಗ ಯಾವ ಹಂತದಲ್ಲಿದೆ. ಎಂದು ಕೇಳಿದೆ. ಆಗ ಉಪೇಂದ್ರರವರು ನಾನು ಯಾವುದೇ ರಾಜಕೀಯ ಪಕ್ಷ ಕಟ್ಟಿಲ್ಲ. ಅದು ನನ್ನ ರಾಜಕೀಯ ಚಿಂತನೆ ಸಿದ್ಧಾಂತಗಳಷ್ಟೇ. ಯಾವುದಕ್ಕೂ ‘U.I’ ಪಿಕ್ಚರ್ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದರು.ಉಪೇಂದ್ರರವರ ‘U.I’ ಬಹು ಭಾಷಾ ಚಿತ್ರ ಯಶಸ್ವಿಯಾಗಲೆಂದು Mp mla’s ನ್ಯೂಸ್ ಶುಭ ಹಾರೈಸುತ್ತದೆ.ಚಿತ್ರಗಳು: ಸತೀಶ್ ಕಾಪಿಕಾಡ್, ಸುರೇಶ್ ಪಂಡಿತ್ ಮತ್ತು ರಾಜೇಶ್ ಅಮೀನ್ ಮುಲ್ಕಿ

ಪ್ರಾದೇಶಿಕ ವಾರ್ತೆಗಳು

ಭಟ್ರಕುಮೇರು: ಡಿಸೆಂಬರ್ 8ರಂದು ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ.

ಮಂಗಳೂರು: ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ಇದೇ ಬರುವ ಡಿಸೆಂಬರ್ 8ನೇ ಅದಿತ್ಯವಾರದಂದು ಬೆಳಿಗ್ಗೆ 6 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಲಿದೆ.ಅಂದು ಬೆಳಿಗ್ಗೆ 6ರಿಂದ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಇವರಿಂದ ಭಜನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಸ್ವಾಮಿ ಕೊರಗ ತನಿಯ ದೈವದ ಕೋಲ ಸೇವೆ ಜರುಗಲಿದೆ. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಮಧ್ಯಾಹ್ನ 1 ಗಂಟೆಯಿಂದ ಶ್ರೀಮತಿ ವಿಜಯ ಭಾಸ್ಕರ್ ಮತ್ತು ಗಣೇಶ್ ಮಂಗಳೂರು ಇವರಿಂದ “ಭಕ್ತಿಗಾನ ಸುಧೆ” ಸಂಜೆ 4 ಗಂಟೆಯಿಂದ “ಸ್ಪೂರ್ತಿ ಮಹಿಳಾ ಭಜನಾ ಮಂಡಳಿ” ಪದವಿನಂಗಡಿ ಮತ್ತು ಶ್ರೀ ನಾರಾಯಣಗುರು ಸೇವಾಸಂಘ, ಮೇರಿಹಿಲ್, ಗುರುನಗರ ಇವರಿಂದ ” ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಲಿದೆ. ಸಂಜೆ 7 ಗಂಟೆಗೆ ಅಗೆಲು ಸೇವೆ ನಡೆಯಲಿದ್ದು, ಬಳಿಕ ಅನ್ನಸಂತರ್ಪಣೆ ನೆರವೇರಲಿದೆ.ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕರಿಗಂಧ ಸ್ವೀಕರಿಸಿ, ಸ್ವಾಮಿ ಕೊರಗ ತನಿಯ ದೈವದ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ಶ್ರೀಮತಿ ವಿಜಯ ಭಾಸ್ಕರ ಬಂಗೇರ ಇವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಆಳ್ವಾಸ್ ಮೆಡಿಕಲ್ ಫೌಂಡೇಶನ್ ನಲ್ಲಿ ವಿಶೇಷ ಉಪನ್ಯಾಸಗೈದ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿ (ಪುಣೆ)

ಮೂಡಬಿದ್ರಿ: ಆಳ್ವಾಸ್ ಮೆಡಿಕಲ್ ಫೌಂಡೇಶನ್‍ನಲ್ಲಿ “Rational (Ethical) pediatric Praticise’ ಈ ವಿಷಯದ ಬಗ್ಗೆ ಮೂಡಬಿದ್ರಿ ಆಳ್ವಾಸ್ ಸೆಮಿನರ್ ಹಾಲ್‍ನಲ್ಲಿ ಡಿ. 2ರಂದು ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ (ಪುಣೆ) ಅವರು ವಿಶೇಷ ಉಪನ್ಯಾಸಗೈದರು. ಇದರಲ್ಲಿ 200 ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಆಳ್ವಾಸ್ ಆಯುರ್ವೇದ ಮತ್ತು ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪಾಲ್ಗೊಂಡರು. ಮಕ್ಕಳ ಅಭ್ಯಾಸದಲ್ಲಿ ನೈತಿಕ ಮಾರ್ಗ ಕುರಿತಾದ ಉಪನ್ಯಾಸ ಇದಾಗಿತ್ತು. ಪ್ರತೀ ಎರಡು ತಿಂಗಳಿಗೊಮ್ಮೆ ಪುಣೆಯಿಂದ ಮೂಡಬಿದ್ರೆಗೆ ಬಂದು ಆಳ್ವಾಸ್ ಮೆಡಿಕಲ್ ಕಾಲೇಜಿನಲ್ಲಿ ಉಪನ್ಯಾಸ ನೀಡುತ್ತಾ ಬಂದಿರುವ ಡಾ. ಸುಧಾಕರ ಶೆಟ್ಟಿಯವರು ಮೂಡಬಿದ್ರೆಯಲ್ಲಿ ಗ್ರಾಮೀಣ ಪರಿಸರದಲ್ಲಿ ಸಂಚಾರಿ ಮಕ್ಕಳ ಮೊಬೈಲ್ ಕ್ಲಿನಿಕ್ ಅನ್ನು ಕೂಡ ನಡೆಸುತ್ತಾ ಬಂದಿದ್ದಾರೆ. ಆಳ್ವಾಸ ವಿದ್ಯಾರ್ಥಿಗಳಿಗೆ ಸಮುದಾಯ ಮತ್ತು ಗ್ರಾಮೀಣ ಮಕ್ಕಳ ವೈದ್ಯಕೀಯದ ಬಗ್ಗೆ ಡಾ. ಸುಧಾಕರ ಶೆಟ್ಟಿಯವರು ವಿಶೇಷ ಉಪನ್ಯಾಸ ನೀಡುತ್ತಾ ಬಂದಿದ್ದಾರೆ. ಡಾ. ಸುಧಾಕರ ಶೆಟ್ಟಿಯವರ ಉಪನ್ಯಾಸಕ್ಕೆ ಡಾ. ಮೋಹನ ಆಳ್ವರವರು ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.ಡಾ. ಸುಧಾಕರ ಶೆಟ್ಟಿಯವರಿಗೆ ಈ ಹಿಂದೆ ಹೊರನಾಡ ಕನ್ನಡ ರತ್ನ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ -2022, ಚಾರ್ ಸಹಿಬಜಾದೆ ಅವಾರ್ಡ್ ದೊರಕಿರುತ್ತದೆ. ಅಷ್ಟೇ ಅಲ್ಲದೆ ಅವರು ಸತತ ನಾಲ್ಕು ಬಾರಿ ಕೇಂದ್ರ ಸರಕಾರದ ರಕ್ಷಾ ಮಂತ್ರಿ ಅವಾರ್ಡ್ ಪುರಸ್ಕೃತ ವೈದ್ಯಕೀಯ ತಂಡದ ಸದಸ್ಯರಾಗಿದ್ದಾರೆ.

Scroll to Top