ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಅಶೋಕ್ ಪೂಜಾರ್ ಆಯ್ಕೆ

ಮಂಗಳೂರು : ಕರ್ನಾಟಕ ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಮೂಲ್ಕಿಯ ಯುವ ಸಾಮಾಜಿಕ ನೇತಾರ ಅಶೋಕ್ ಎಚ್. ಪೂಜಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಮಾದರ ಮಹಾಸಭಾದ ರಾಜ್ಯಾಧ್ಯಕ್ಷ ಡಾ. ಕೆ.ಹೆಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.ಕರ್ನಾಟಕ ಮಾದರ ಮಹಾಸಭೆಯು 2015ರಲ್ಲಿ ಮಾದಿಗ ಸಮುದಾಯದ ಸಬಲೀಕರಣ ಮತ್ತು ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಸ್ಥಾಪಿತವಾಗಿದೆ. ಮಾದಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ನೀವು ನಿಷ್ಠೆಯಿಂದ ಹಾಗೂ ತ್ಯಾಗಮನೋಭಾವದಿಂದ ಕೆಲಸ ಮಾಡುವ ಇಂಗಿತವನ್ನು ಅಶೋಕ್ ಪೂಜಾರ್ ಹೊಂದಿದ್ದಾರೆ.ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಕರಾವಳಿ ಆದಿಜಾಂಬವ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಅಶೋಕ್ ಪೂಜಾರ್ ಸಮುದಾಯವನ್ನು ಸಂಘಟಿಸುತಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ದಾಮಸ್‌ಕಟ್ಟೆ ಕಿರೆಂ ಚರ್ಚ್‌ನಲ್ಲಿ “ವೇಳ್‌ಘಡಿ” ಕೊಂಕಣಿ ಸಿನಿಮಾಕ್ಕೆ ಮುಹೂರ್ತ. ‘ಸಿನಿಮಾ ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡಲಿ’ : ಫಾ. ಓಸ್ವಾಲ್ಡ್ ಮೊಂತೇರೋ

ಮಂಗಳೂರು: ಜನರನ್ನು ಬಹುಬೇಗ ಆಕರ್ಷಿಸುವ ಸಿನಿಮಾವು ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವಂತಾಗಬೇಕು, ಕೊಂಕಣಿ ಭಾಷಾ ಸಿನಿಮಾಕ್ಕೆ ಉತ್ತಮ ಭವಿಷ್ಯವಿದೆ. ತಂತ್ರಜ್ಞರು, ಕಲಾವಿದರು ಜೊತೆಯಾಗಿ ಉತ್ತಮ ಸಿನಿಮಾವನ್ನು ನಿರ್ಮಿಸಿದಲ್ಲಿ ಪ್ರೇಕ್ಷಕರು ಸಹ ಅವರಿಗೆ ಮುಕ್ತ ಬೆಂಬಲ ನೀಡುತ್ತಾರೆ. “ವೇಳ್‌ಘಡಿ” ಕೊಂಕಣಿ ಸಿನಿಮಾವು ಉತ್ತಮವಾಗಿ ಮೂಡಿಬರಲಿ ಎಂದು ದಾಮಸ್‌ಕಟ್ಟೆಯ ಕಿರೆಂ ಚರ್ಚ್‌ನ ಧರ್ಮಗುರು ಫಾ. ಒಸ್ವಾಲ್ಡ್ ಮೊಂತೇರೋ ಹೇಳಿದರು.ಅವರು ಕಿನ್ನಿಗೋಳಿ ಬಳಿಯ ದಾಮಸ್‌ಕಟ್ಟೆಯ ಕಿರೆಂ ಚರ್ಚ್‌ನ ಶಾಲೋಮ್ ಹಾಲ್‌ನ ಕಿರು ಸಭಾಂಗಣದಲ್ಲಿ ರೋಶನ್ ನೆಲ್ಲಿಗುಡ್ಡೆ ಅವರ ಸೋನುಲವಿ ಸಿನೆ ಕ್ರಿಯೇಶನ್ಸ್‌ನ ಬ್ಯಾನರ್ ಅಡಿಯಲ್ಲಿ, ಜಾನ್ ವಿಲ್ಸನ್ ಲೋಬೋ ಅವರ ನಿರ್ಮಾಣದ ನೋರ್ಬಾರ್ಟ್ ಜಾನ್ ನಿರ್ದೇಶನದ “ವೇಳ್‌ಘಡಿ” ಕೊಂಕಣಿ ಸಿನಿರ್ಮಾಣದ ಮುಹೂರ್ತವನ್ನು ನೆರವೇರಿಸಿ ಆಶೀರ್ವಚನ ನೀಡಿದರು.ಚಿತ್ರ ನಿರ್ಮಾಪಕ ಜಾನ್ ವಿಲ್ಸನ್ ಲೋಬೋ ಮಾತನಾಡಿ, ಕೊಂಕಣಿ ಸಿನಿಮಾವೊಂದನ್ನು ನಿರ್ಮಿಸಬೇಕು ಎಂಬ ಕನಸು ಈಗ ಈಡೇರುತ್ತಿದೆ. ಒಂದು ಉತ್ತಮ ಕಥೆಯುಳ್ಳ, ಸಮಾಜದ ಯುವ ಪೀಳಿಗೆಗೆ ಜಾಗೃತಿ ಸಂದೇಶವನ್ನು ನೀಡುವ ಸಿನಿಮಾವಾಗಿ ನಿರ್ಮಾಣವಾಗಲಿದೆ, ಎಲ್ಲರ ಪ್ರೋತ್ಸಾಹ ಸಿಗಲಿ ಎಂದು ಆಶಯ ವ್ಯಕ್ತಪಡಿಸಿದರು. ಮುಂಬೈ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಮಾತನಾಡಿ, ಸಮಾಜವು ಬದಲಾವಣೆಯಾಗಲು ಸಿನಿಮಾ ಕ್ಷೇತ್ರ ಬಹಳಷ್ಟು ಕೊಡುಗೆಯನ್ನು ನೀಡಿದೆ. ಪ್ರಾದೇಶಿಕ ಭಾಷೆಯಾದ ಕೊಂಕಣಿಯ ಪ್ರೇಕ್ಷಕರು ವಿಶ್ವಮಟ್ಟದಲ್ಲಿದ್ದು, ಎಲ್ಲರೂ ಈ ಸಿನಿಮಾವನ್ನು ನೋಡುವಂತಹ ವಾತಾವರಣ ನಿರ್ಮಾಣವಾಗಲಿ ಎಂದರು.ಸೋನುಲವಿ ಸಿನೆ ಕ್ರಿಯೇಶನ್ಸ್‌ನ ಪ್ರವರ್ತಕ ರೋಶನ್ ನೆಲ್ಲಿಗುಡ್ಡೆ ಸಿನಿಮಾ ಹಾಗೂ ಅದರ ತಂತ್ರಜ್ಞನರ, ಕಲಾವಿದರ ಪರಿಚಯಿಸಿ, ಸ್ವಾಗತಿಸಿದರು.ಮಂಗಳೂರಿನ ಹಿರಿಯ ಕಲಾವಿದ ಡೊಲ್ಲಂ, ಎಂಸಿಸಿ ಬ್ಯಾಂಕ್‌ನ ನಿರ್ದೇಶಕ ಹಾಗೂ ನ್ಯಾಯವಾದಿ ಜೆ.ಬಿ. ಮೋಂತೆರೋ, ಚರ್ಚ್‌ನ ಪಾಲನಾ ಮಂಡಳಿಯ ಉಪಾಧ್ಯಕ್ಷ ರೋಹನ್ ಡಿ.ಕೋಸ್ತ ಶುಭ ಹಾರೈಸಿದರು.ಸಿನಿಮಾ ನಿರ್ದೇಶಕ ನೋರ್ಬಾರ್ಟ್ ಜಾನ್, ಪ್ರೋಡಕ್ಷನ್ ಇಂಜಿನಿಯರ್ ಆಲ್ವಿನ್ ಸಿಕ್ವೇರಾ, ಡಿಒಪಿ ಫೆಸ್‌ವಿತ್ ಮಂಗಳೂರು, ಸಹಾಯಕ ರಾಯನ್, ಸಿನಿಮಾ ಪಿಆರ್‌ಒ ಸುನಿಲ್ ನೆಲ್ಲಿಗುಡ್ಡೆ, ಕಲಾವಿದರು ಮತ್ತಿತರರು ಉಪಸ್ಥಿತರಿದ್ದರು.ಸೆನೆಟ್ ಡಿಕೋನ್ಹ ಕಾರ್ಯಕ್ರಮ ನಿರೂಪಿಸಿದರು. “ವೇಳ್‌ಘಡಿ” ಕೊಂಕಣಿ ಸಿನಿಮಾ….ಸಮಾಜದಲ್ಲಿ ಒಂದು ಘಟನೆ ಕ್ಷಣಿಕವಾಗಿ ನಡೆದಾಗ ಅದು ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ರೋಷಕ ಕಥೆಯ ಎಳೆಯೊಂದಿಗೆ ನಡೆಯುವ ತಾಕಲಾಟದ ಚಿತ್ರಣವೇ “ವೇಳ್‌ಘಡಿ” ಕೊಂಕಣಿ ಸಿನಿಮಾದ ಕಥಾ ಸಾರಾಂಶವನ್ನು ರೋಶನ್ ನೆಲ್ಲಿಗುಡ್ಡೆ ಅವರು ರಚಿಸಿದ್ದು, ಸಹ ನಿರ್ದೇಶನ ಹಾಗೂ ತಮ್ಮದೇ ಸೋನುಲವಿ ಸಿನೆ ಕ್ರಿಯೇಶನ್ಸ್‌ನ ಮೂಲಕ ತೆರೆಗೆ ತರಲಿದ್ದಾರೆ. ನಿರ್ಮಾಣದಲ್ಲಿ ಜಾನ್ ವಿಲ್ಸನ್ ಲೋಬೋ ಸಹಕಾರ ನೀಡಲಿದ್ದಾರೆ. ಸಿನಿಮಾ ಕ್ಷೇತ್ರದ ತಂತ್ರಜ್ಞರಾಗಿ ಸಾಕಷ್ಟು ಅನುಭವ ಇರುವ ನೋರ್ಬಾರ್ಟ್ ಜಾನ್ ನಿರ್ದೇಶನದ ಜೊತೆಗೆ ಚಿತ್ರಕಥೆಯನ್ನು ಬರೆದಿದ್ದಾರೆ. ಯುವ ಸಂಗೀತಗಾರ ರಸ್ಸೆಲ್ ರೋಡ್ರಿಗಸ್ ಸಂಗೀತ ನೀಡಲಿದ್ದಾರೆ. ಪ್ರೋಡಕ್ಷನ್ ಇಂಜಿನಿಯರ್ ಆಗಿ ಆಲ್ವಿನ್ ಸಿಕ್ವೇರಾ, ಡಿಒಪಿಯಲ್ಲಿ ಫೆಸ್‌ವಿತ್ ಮಂಗಳೂರು ಸಹಾಯಕರಾಗಿ ರಾಯನ್, ಸಾಹಿತಿ ವಿಲ್ಸನ್ ಕಟೀಲು ಮತ್ತು ವಿಲ್ಫ್ರೇಡ್ ಪಾಂಗಳ ಸಿನಿಮಾ ತಂಡದಲ್ಲಿದ್ದು, ಸುನಿಲ್ ನೆಲ್ಲಿಗುಡ್ಡೆ ಪಿಆರ್‌ಒ ಆಗಿದ್ದಾರೆ. ಕಲಾವಿದರಾಗಿ ಹೊಸ ಮುಖಗಳೊಂದಿಗೆ ಅನುಭವಿ ಕಲಾವಿದರಿದ್ದಾರೆ. ಕಿನ್ನಿಗೋಳಿ, ಮಂಗಳೂರು, ಬಜಪೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ.

ಪ್ರಾದೇಶಿಕ ವಾರ್ತೆಗಳು

ಮಂಗಳೂರು ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ- ಕುಳಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್‌ನಲ್ಲಿ ಆರಂಭ

ಮಂಗಳೂರು: ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕುಪ್ರಾಣಿಗಳಿಗೆ ಅತ್ಯಾವಶ್ಯಕವಾದ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಮಹತ್ವದ ಹೆಜ್ಜೆಯಾಗಿ, ಕುಳಶೇಖರದಲ್ಲಿರುವ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್ ನಲ್ಲಿ ಪೆಟ್ ಡಯಾಲಿಸಿಸ್ ಯಂತ್ರವನ್ನು ಅಧಿಕೃತವಾಗಿ ಆರಂಭಿಸಲಾಯಿತು. ಮೂತ್ರಪಿಂಡ ಸಂಬಂಧಿತ ತೊಂದರೆಗಳಿಂದ ಬಳಲುವ ಸಾಕುಪ್ರಾಣಿಗಳಿಗೆ ಇದು ಜೀವ ರಕ್ಷಕ ಚಿಕಿತ್ಸೆಯಾಗಿ ಪರಿಣಮಿಸುವ ನಿರೀಕ್ಷೆಯಿದೆ.ಈ ಡಯಾಲಿಸಿಸ್ ಘಟಕವನ್ನು ವಿನ್ಸೆಂಟ್ ಜೋಸೆಫ್ ನೀಲಿಯಾರ (ಶಾಜು) ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ವೈದ್ಯರು ಹಾಗೂ ರೋಟರಿ ಸಂಘದ ಸದಸ್ಯರು ಉಪಸ್ಥಿತರಿದ್ದರು.ಈ ಉಪಕ್ರಮವನ್ನು ಭಾಜಪ ಕರ್ನಾಟಕ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಜೆಸ್ಸೆಲ್ ಡಿಸೋಜಾ ಅವರು ಸಮನ್ವಯಗೊಳಿಸಿ, ವಿವಿಧ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಸಹಕಾರವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.ಈ ಯೋಜನೆಯ ಪರಿಕಲ್ಪನೆ ಡಾ. ಶ್ರೇಯಸ್ ಸೊರಕೆ, ಓರಲ್ ಮತ್ತು ಮ್ಯಾಕ್ಸಿಲೋಫೇಶಿಯಲ್ ಸರ್ಜನ್ ಅವರದು. ಮಂಗಳೂರು ಮತ್ತು ಸುತ್ತಮುತ್ತಲಿನ ಸುಮಾರು 200 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾಕುಪ್ರಾಣಿಗಳಿಗೆ ಡಯಾಲಿಸಿಸ್ ಸೌಲಭ್ಯ ಇಲ್ಲದಿರುವುದನ್ನು ಗಮನಿಸಿ, ಈ ಅಗತ್ಯವನ್ನು ಪೂರೈಸುವ ದೃಷ್ಟಿಯಿಂದ ಅವರು ಈ ಪ್ರಯತ್ನಕ್ಕೆ ಚಾಲನೆ ನೀಡಿದರು. ಅವರ ಈ ದಿ ಗೌರವಿಸಿ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಯಿತು. ‘ದೀರ್ಘ ದೃಷ್ಟಿ ಮತ್ತು ಸೇವಾಭಾವವನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಜಿಲ್ಲಾ 3181 ರ ಸಹಾಯಕ ಗವರ್ನರ್ ಆರ್‌ಟಿಎನ್ ಡಾ. ರವಿಶಂಕರ್ ರಾವ್, ಮಂಗಳೂರುಂತಹ ಬೆಳೆಯುತ್ತಿರುವ ನಗರಕ್ಕೆ ಇಂತಹ ಮಾನವೀಯ ಹಾಗೂ ನವೀನ ಉಪಕ್ರಮಗಳು ಅತ್ಯಂತ ಅಗತ್ಯವೆಂದು ಹೇಳಿದರು. “ಸ್ಮಾರ್ಟ್ ಸಿಟಿ ಎಂದರೆ ಮೂಲಸೌಕರ್ಯಗಳ ಜೊತೆಗೆ ಪ್ರಾಣಿಗಳ ಕಲ್ಯಾಣಕ್ಕೂ ಆದ್ಯತೆ ನೀಡುವ ನಗರವಾಗಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಮಂಗಳೂರು ಸೌತ್ ಅಧ್ಯಕ್ಷ ಆರ್‌ಟಿಎನ್ ಹರೀಶ್ ಅಡ್ಯಾರ್, ಕಾರ್ಯದರ್ಶಿ ಆರ್‌ಟಿಎನ್ ಸೂರ್ಯಕಾಂತ್ ನಾಯಕ್, ಆರ್‌ಟಿಎನ್ ಜಿ.ಕೆ. ಶೆಟ್ಟಿ, ಕರ್ನಾಟಕ ಸೆಕ್ಯುರಿಟಿಯ ಉದ್ಯಮಿ ಮತ್ತು ರೋಟೇರಿಯನ್‌ ಆರ್‌ಟಿಎನ್ ಟಿ.ಎ. ಅಶೋಕನ್, ಅನಿಮಲ್ ಕೇರ್ ಟ್ರಸ್ಟ್‌ನ ಸುಮಾ ನಾಯಕ್,ಡಯಾಲಿಸಿಸ್ ತಂತ್ರಜ್ಞ ನಿತಿನ್ ಕುಮಾರ್ ಹಾಗೂ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್‌ ಡಾ. ಯಶಸ್ವಿ ನಾರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಈ ಡಯಾಲಿಸಿಸ್ ಸೌಲಭ್ಯದಿಂದ ಮಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾಕುಪ್ರಾಣಿಗಳಿಗೆ ತುರ್ತು ಮತ್ತು ಪ್ರಗತಿಪರ ಚಿಕಿತ್ಸೆಯನ್ನು ಸ್ಥಳೀಯವಾಗಿ ಪಡೆಯುವ ಅವಕಾಶ ದೊರೆಯಲಿದ್ದು, ಪ್ರಾಣಿಪ್ರೇಮಿಗಳಿಗೂ ಇದು ದೊಡ್ಡ ಸಹಾಯವಾಗಲಿದೆ.ಸಾಕುಪ್ರಾಣಿಗಳ ಆರೈಕೆಯಲ್ಲಿ ಮಂಗಳೂರಿನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ ಈ ಉಪಕ್ರಮವು ಪ್ರಾಣಿಗಳ ಆರೋಗ್ಯ ಸೇವೆಗೆ ಹೊಸ ದಿಕ್ಕು ನೀಡಲಿದೆ.

ಪ್ರಾದೇಶಿಕ ವಾರ್ತೆಗಳು

ಇಂದು ವಿಶ್ವ ಶ್ರವಣ ದಿನಾಚರಣೆ

ಮಂಗಳೂರು: ಯುವ ರೆಡ್ ಕ್ರಾಸ್ ಮಂಗಳೂರು ವಿ.ವಿ., ಫಾದರ ಮುಲ್ಲರ್ ಮೆಡಿಕಲ್ ಕಾಲೇಜಿನ ಸ್ಪೀಚ್ ಮತ್ತು ಹಿಯರಿಂಗ್ ವಿಭಾಗ, ಸೈಂಟ್ ಆಗ್ನೆಸ್ ( ಸ್ವಾಯತ್ತ) ಕಾಲೇಜು ಇವುಗಳ ಸಹಯೋಗದಲ್ಲಿ ಮಾ.4 ರಂದು ಬೆಳಗ್ಗೆ 10.30ಕ್ಕೆ ಸೈಂಟ್ ಆಗ್ನೆಸ್ ಕಾಲೇಜು ಸಭಾಂಗಣದಲ್ಲಿ ವಿಶ್ವ ಶ್ರವಣ ದಿನಾಚರಣೆ, ಶ್ರವಣ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಲಿದೆ.ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸೈಂಟ್ ಆಗ್ನೆಸ್ ಕಾಲೇಜಿನ ಉಪ ಪ್ರಾಂಶುಪಾಲೆ ಸಿ.ರೂಪಾ ರಾಡ್ರಿಗಸ್ ಅಧ್ಯಕ್ಷತೆ ವಹಿಸಲಿದ್ದಾರೆ.ಫಾದರ್ ಮುಲ್ಲರ್ ಕಾಲೇಜ್ ಆಫ್ ಸ್ಪೀಚ್ ಆ್ಯಂಡ್ ಹಿಯರಿಂಗ್ ನ ಪ್ರಾಂಶುಪಾಲೆ ಪ್ರೊ.ಸಿಂತಿಯಾ ಸಾಂತಮಯರ್ ಮತ್ತು ಆಡಿಯಾಲಜಿ ವಿಭಾಗದ ಮುಖ್ಯಸ್ಥೆ ಪ್ರೊ.ಪ್ರಶಾಂತಿ ಪೂವಯ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ.ಯ ನೋಡಲ್ ಅಧಿಕಾರಿ ಡಾ.ಗಾಯತ್ರಿ. ಎನ್.‌ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಡಿಸೆಂಬರ್ ನಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆ

ಮಂಗಳೂರು: ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ತೊಡಗಿಸಿಕೊಂಡಿದೆ. ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಮಹಾದಾನಿ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದಿಂದ ಸಂಕೀರ್ಣದ ಕೆಲಸ ಪ್ರಗತಿಯಲ್ಲಿದೆ. ಸಂಕೀರ್ಣದಲ್ಲಿ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಅವರ ಹೆಸರಿನಲ್ಲಿ ವೇದಿಕೆ ಇದೆ. ಇದರ ಜೊತೆಗೆ ಕಿರು ಸಭಾಂಗಣ, ಧರ್ಮಚಾವಡಿ, ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯೂ ಇದೆ. ಡಿಸೆಂಬರ್ ತಿಂಗಳಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಲೋಕಾರ್ಪಣೆಗೊಳ್ಳಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟ ಅವರು ತಿಳಿಸಿದರು. ಅವರು ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಒಕ್ಕೂಟದ ಮಹಾ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ ಅವರು ಸಭೆಯನ್ನು ಉದ್ಘಾಟಿಸಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಮಧ್ಯಮವರ್ಗದವರ ಕಣ್ಣೀರನ್ನು ಒರೆಸುವ ಕೆಲಸ ಮಾಡುತ್ತಿದೆ. 40 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾದ ಬಳಿಕ‌ ಒಕ್ಕೂಟದ ಚಿತ್ರಣವನ್ನೇ ಬದಲಾಯಿಸಿದರು ಎಂದರು.ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, ಐಕಳರ ಸಂಘಟನಾ ಚತುರತೆ, ದಿನನಿತ್ಯ ಓಡಾಟ, ದಾನಿಗಳ ಸಂಪರ್ಕದಿಂದ ಒಕ್ಕೂಟ ಎತ್ತರಕ್ಕೆ ಬೆಳೆದಿದೆ ಎಂದರು.ಯುವ ವಿಭಾಗದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ ಮಾತನಾಡಿ ಒಕ್ಕೂಟಕ್ಕೆ ಯುವಕರನ್ನು ಸೆಳೆಯುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಒಕ್ಕೂಟದ ಅಧ್ಯಕ್ಷರೊಂದಿಗೆ ಚರ್ಚಿಸಿ ಯುವ ಸಮಾವೇಶ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು. ಸಭೆಯಲ್ಲಿ ಉದ್ಯಮಿ, ದಾನಿಗಳಾದ ರಾಜೇಂದ್ರ ವಿ ಶೆಟ್ಟಿ ಪಂಜುರ್ಲಿ ಗ್ರೂಪ್ಸ್, ಶಶಿಧರ್ ಶೆಟ್ಟಿ ಇನ್ನಂಜೆ, ರಾಜೇಶ್ ಶೆಟ್ಟಿ ರಾಕ್ಷಿ ಡೆವಲಪರ್ಸ್, ಬೆಳ್ಳಾಡಿ ಅಶೋಕ್ ಶೆಟ್ಟಿ, ಅರವಿಂದ್ ಆನಂದ್ ಶೆಟ್ಟಿ, ಮುನಿಯಾಲ್ ಉದಯಕುಮಾರ್ ಶೆಟ್ಟಿ, ಹರೀಶ್ ಶೆಟ್ಟಿ ಪಡುಕುದೂರು, ವಸಂತ ಶೆಟ್ಟಿ, ರತ್ನಾಕರ ಶೆಟ್ಟಿ ಎಕ್ಕಾರ್, ಸಂತೋಷ್ ಕುಮಾರ್ ಹೆಗ್ಡೆ, ರತ್ನ ಪಿ. ಶೆಟ್ಟಿ, ಚಿತ್ರ ಆರ್. ಶೆಟ್ಟಿ, ಆರತಿ ಆಳ್ವ, ಹುಂತ್ರಿಕೆ ಸುಧಾಕರ್ ಶೆಟ್ಟಿ, ಅಕ್ಕುಂಜೆ ಸತೀಶಚಂದ್ರ ಶೆಟ್ಟಿ, ಸನ್ಮಿತ್ ಬಾಬು ಶೆಟ್ಟಿ, ಸುದೇಶ್ ವಿ.ಶೆಟ್ಟಿ, ರಾಜೇಶ್ ಶೆಟ್ಟಿ ತೆಳ್ಳಾರ್, ಹರಿಪ್ರಸಾದ್ ರೈ, ಮಂಜುನಾಥ್ ಶೆಟ್ಟಿ ಕೊಡ್ಲಾಡಿ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಶ್ರೀಧರ್ ಶೆಟ್ಟಿ ಆರೂರು, ಆನಂದ್ ಶೆಟ್ಟಿ ಕಾವೂರು ಸೇರಿದಂತೆ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.ಸಭೆಯಲ್ಲಿ ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರು ಉಪಸ್ಥಿತರಿದ್ದರು.ಸುರೇಶ್ ಶೆಟ್ಟಿ ಶಿಬರೂರು ಪ್ರಾರ್ಥನೆಗೈದರು.ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ‌ ನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಪಾಲ್ದನೆ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಕ್ರಮ

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್ ನಲ್ಲಿ ಸೈಬರ್‌ ಕ್ರೈಮ್‌ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಬೆಳಗ್ಗಿನ ಬಲಿ ಪೂಜೆಯ ಬಳಿಕ ಚರ್ಚ್ ನ ತೆರೆದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ವಾಮಂಜೂರಿನಲ್ಲಿರುವ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ಪ್ರದೀಪ್ ನಾಗನ ಗೌಡ ಅವರು ಮಾಹಿತಿ ನೀಡಿದರು. ಸೈಬರ್ ಅಪರಾಧಗಳು ಹೇಗೆ ನಡೆಯುತ್ತವೆ, ಸಾರ್ವಜನಿಕರು ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕು, ಮೊಬೈಲ್‌ ಫೋನ್‌ ಗಳಿಗೆ ಅಪರಿಚಿತ ಆ್ಯಪ್‌ ಗಳು, ಸಂದೇಶಗಳು, ವಾಟ್ಸಪ್ ಲಿಂಕ್ ಗಳು ಬಂದಾಗ ಅವುಗಳನ್ನು ನಿಭಾಯಿಸುವುದು ಹೇಗೆ ಎಂಬಿತ್ಯಾದಿ ವಿಷಯಗಳ ಬಗ್ಗೆ ಅವರು ವಿವರಿಸಿದರು. ಜನರ ಖಾತೆಗಳಲ್ಲಿರುವ ಹಣವನ್ನು ಸೈಬರ್ ಕಳ್ಳರು ಕಸಿದು ಕೊಳ್ಳುವ ಕುರಿತು ಮಾಹಿತಿ ನೀಡಿ ಎಚ್ಚರಿಕೆಯಿಂದ ಇರುವಂತೆ ಸಲಹೆ ಮಾಡಿದರು. ಕಾರ್ಯಕ್ರಮದಲ್ಲಿ ಚರ್ಚ್ ನ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಅವರ ಪ್ರಶ್ನೆ ಮತ್ತು ಸಂಶಯಗಳಿಗೆ ಉತ್ತರ ನೀಡಿದರು.ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಇಲಾಖೆಗೆ ಧನ್ಯವಾದ ಅರ್ಪಿಸಿದರು. ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್, ಪೊಲೀಸ್ ಸಿಬಂದಿ ಬೀರೇಂದ್ರ, ಹನುಮಂತ ಅವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಮುಲ್ಲಕಾಡ್ ಸರ್ಕಾರಿ ಶಾಲೆಯ ಮೇಲ್ಛಾವಣಿ ಉದ್ಘಾಟನೆ

ಮುಲ್ಲಕಾಡಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ದತ್ತು ಪಡೆದಿರುವ ರೋಟರಿ ಕ್ಲಬ್ ಹಿಲ್‌ಸೈಡ್ ಮಂಗಳೂರು ಇವರು ಮಕ್ಕಳಿಗೆ ಮತ್ತು ಶಾಲೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಯೋಜನೆಗಳನ್ನು ಕೈಗೊಳ್ಳುತ್ತಾ ಬಂದಿರುತ್ತಾರೆ. ಈ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲಾ ರೋಟರಿ ಅನುದಾನದಲ್ಲಿ ಶಾಲೆಯ ಮುಂಭಾಗದಲ್ಲಿ ಮಕ್ಕಳಿಗೆ ಬಿಸಿಲು ಮತ್ತು ಮಳೆಯಿಂದ ರಕ್ಷಣೆ ನೀಡಲು ಲೋಹದ ತಗಡಿನ ಮೇಲ್ಛಾವಣಿಯನ್ನು ಅಳವಡಿಸಲಾಯಿತು. ಇದರ ಉದ್ಘಾಟನೆಯನ್ನು ರೋಟರಿ ಜಿಲ್ಲೆ 3181 ಇದರ ಗವರ್ನರ್ ಆದ ರೋ. ಶ್ರೀ ರಾಮಕೃಷ್ಣ.ಪಿ.ಕೆ ಇವರು ನೆರವೇರಿಸಿ ಮೆಚ್ಚುಗೆಯ ಮಾತುಗಳನ್ನಾಡಿದರು. ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷ್ಮೀಶ್ ಅವರು ಮಾತನಾಡುತ್ತಾ, “ಇದೊಂದು ಉತ್ತಮ ಯೋಜನೆಯಾಗಿದ್ದು, ಶಾಲೆಗೆ ಅನುಕೂಲವಾಗಲಿದೆ” ಎಂದು ತಿಳಿಸಿ, ಶಾಲಾ ಪರವಾಗಿ ರೋಟರಿ ಕ್ಲಬ್ ಹಿಲ್‌ಸೈಡ್ ಇದರ ಎಲ್ಲಾ ಪದಾಧಿಕಾರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಹಿಲ್ಸ್ ನ ಅಧ್ಯಕ್ಷರಾದ ರೋ.ಪೀಟರ್ , ಕಾರ್ಯದರ್ಶಿ ರೋ.ವಾಸದೇವ ಶೆಟ್ಟಿಗಾರ್, ರೋ. ಶ್ರೀನಿವಾಸ್ ಕಿಣಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜಿ ಉಸ್ಮಾನ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ವೀಣಾ, ರೋಟರಿ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.Photos:Sathish Kapikad

ಪ್ರಾದೇಶಿಕ ವಾರ್ತೆಗಳು

ಕೌಶಲ್ಯಾಭಿವೃದ್ಧಿಯಿಂದ ವೃತ್ತಿ ಜೀವನಕ್ಕೆ ನೆರವು-ಉಪನ್ಯಾಸಕಿ ಡಾ.ಸುಮನ.ಬಿ.

ಮಂಗಳೂರು: ನಗರದ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ರಕ್ತನಿಧಿ ಕೇಂದ್ರದಲ್ಲಿ ಒಂದು ತಿಂಗಳು ಪ್ರಾಯೋಗಿಕ ತರಬೇತಿ ಪಡೆದ ದ್ವಿತೀಯ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಶನಿವಾರ ಪ್ರಮಾಣ ಪತ್ರ ವಿತರಿಸಲಾಯಿತು.ಪ್ರಮಾಣ ಪತ್ರ ವಿತರಿಸಿದ ಉಪನ್ಯಾಸಕಿ, ರೆಡ್‌ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಆಡಳಿತ ಮಂಡಳಿ ಸದಸ್ಯೆ ಡಾ.ಸುಮನ.ಬಿ. ಮಾತನಾಡಿ ” ವೈದ್ಯಕೀಯ ಕ್ಷೇತ್ರದಲ್ಲಿ ವೈದ್ಯರು ನೀಡುವ ಸೇವೆಯೊಂದಿಗೆ ದಾದಿಯರು ಹಾಗೂ ಸಹಾಯಕ ಸಿಬ್ಬಂದಿ ನೀಡುವ ಸೇವೆಯೂ ಅತ್ಯಮೂಲ್ಯವಾಗಿದೆ. ಅರೆ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಕಲಿಕೆಗೆ ಸಂಬAಧಿಸಿ ಪಡೆಯುವ ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿ ಭವಿಷ್ಯದಲ್ಲಿ ವೃತ್ತಿ ಜೀವನಕ್ಕೆ ನೆರವಾಗುತ್ತದೆ ‘ ಎಂದರು.ರಕ್ತನಿಧಿ ಕೇಂದ್ರದ ತಾಂತ್ರಿಕ ಮೇಲ್ವಿಚಾರಕಿ ಮರಿಯಾ ಆರತಿ ಸೋನ್ಸ್ ಮಾತನಾಡಿ ” ವಿದ್ಯಾರ್ಥಿಗಳು ರಕ್ತ ಸಂಗ್ರಹ, ವರ್ಗೀಕರಣ, ರಕ್ತ ಹೊಂದಾಣಿಕೆ ಪರೀಕ್ಷೆ, ರಕ್ತದ ಘಟಕಗಳ ವರ್ಗೀಕರಣ ಸಹಿತ ಬ್ಲಡ್‌ಬ್ಯಾಂಕ್‌ಗೆ ಪೂರಕವಾದ ಪ್ರಾಯೋಗಿಕ ತರಬೇತಿ ಪಡೆದಿದ್ದು ಉದ್ಯೋಗಕ್ಕೆ ನೆರವಾಗಲು ಪ್ರಮಾಣ ಪತ್ರ ನೀಡಲಾಗಿದೆ ‘ಎಂದರು.ರೆಡ್‌ಕ್ರಾಸ್ ಜಿಲ್ಲಾ ಘಟಕದ ಆಡಳಿತ ಮಂಡಳಿ ಸದಸ್ಯರಾದ ಗುರುದತ್ ನಾಯಕ್, ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ರಕ್ತನಿಧಿ ಕೇಂದ್ರದ ತಂತ್ರಜ್ಞರಾದಪ್ರಿಯಾ, ಪ್ರತ್ಯಕ್ಷಿ, ನಾಗಭೂಷಣ್, ಪ್ರಿಯದರ್ಶಿನಿ, ವತ್ಸಲಾ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಯೆನೆಪೋಯ ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ನರ್ಸಿಂಗ್ ವಿಭಾಗದ ವತಿಯಿಂದ ಡಿಜಿಟಲ್ ಶಿಕ್ಷಣಶಾಸ್ತ್ರ ಬೋಧನ -ಕಲಿಕೆಯಲ್ಲಿ ಕಲೆ ವಿಷಯದ ಬಗ್ಗೆ ಸಂಸ್ಥೆಯ ಯೆಂಡೋರೆನ್ಸ್ ಸಭಾಂಗಣದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಿತು.ಸಮ್ಮೇಳನ ಉದ್ಘಾಟಿಸಿದ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಮಾತನಾಡಿ “ವಿದ್ಯಾರ್ಥಿಗಳು ಮತ್ತು ಬೋಧಕರು ಕೃತಕ ಬುದ್ಧಿಮತ್ತೆ ಸಾಧನಗಳನ್ನು ಬುದ್ಧಿವಂತಿಕೆಯಿಂದ ಬಳಸಿಕೊಳ್ಳಬೇಕು . ಡಿಜಿಟಲ್ ನೈತಿಕತೆ ಮತ್ತು ಆಧುನಿಕ ಶಿಕ್ಷಣದಲ್ಲಿ ಲಭ್ಯವಿರುವ ತಾಂತ್ರಿಕ ಸೌಲಭ್ಯಗಳ ಬಗ್ಗೆ ಅರಿವು ಹೊಂದಿರುವುದು ಅತ್ಯಗತ್ಯ ಎಂದರು.ಮುಖ್ಯ ಅತಿಥಿಯಾಗಿದ್ದ ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಶ್ವಿನಿ ದತ್ .ಆರ್.ಅವರು ಪರಿವರ್ತನಾಶೀಲ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲೀನಾ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು. ವಿವಿಧ ರಾಜ್ಯಗಳ ೩೫೦ ಪ್ರತಿನಿಧಿಗಳು ಭಾಗವಹಿಸಿದ್ದರು. ಸಮ್ಮೇಳನದ ಅಧ್ಯಕ್ಷೆ ಡಾ. ಪ್ರಿಯಾ ರೇಷ್ಮಾ ಅರಾನ್ಹಾ ಸ್ವಾಗತಿಸಿ, ಕಾರ್ಯದರ್ಶಿ ನಿತ್ಯಶ್ರೀ ಬಿ.ವಿ.ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮಸಂಗೀತ ಗುರುಗಳಿಂದ ಚಾಲನೆ

ನಗರದ ಸಂಗೀತ ಭಾರತಿ ಫೌಂಡೇಶನ್ ದ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು ಗುರುಗಳಾದ ಶ್ರೀಮತಿ ಬಸ್ತಿ ಕವಿತಾ ಶೆಣೈ, ಶ್ರೀಮತಿ ವಿಭಾ ನಾಯಕ್, ಶ್ರೀಮತಿ ಶ್ರೀಲತಾ ಫ್ರಭು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಗೀತ ಭಾರತಿ ಫೌಂಡೇಶನ್ ದ ಅಧ್ಯಕ್ಷರಾದ ಉಸ್ತಾದ್ ರಫೀಕ್ ಖಾನ್ , ಉಪಾಧ್ಯಕ್ಷರಾದ ಶ್ರೀ ನರೇಂದ್ರ ಎಲ್ ನಾಯಕ್ , ಕಾರ್ಯದರ್ಶಿ ಡಾ ಉಷಾಪ್ರಭಾ ಎನ್ ನಾಯಕ್ , ಟ್ರಸ್ಟಿ ರಮೇಶ್ ಕೆಜಿ, ಖಚಾಂಚಿ ಕರುಣಾಕರ ಬಳ್ಕೂರು, ಸದಸ್ಯೆ ಶ್ರೀ ಸೌಮ್ಯ ಕಾಮತ್ ಉಪಸ್ಥಿತರಿದ್ಧರು. ಪೂರ್ವಾರ್ಧಸಲ್ಲಿ ವಿಭಾ ಹೆಗ್ಡೆ ಮತ್ತು ಶಿವಾನಿ ಮಿರಾಜ್ ಕರ್ ಇವರಿಂದ ಶಾಸ್ತ್ರೀಯ ಜುಗಲ್ ಬಂಧಿ ಖಾರ್ಯಕ್ರಮ ನಡೆಯಿತು. ಇವರಿಗೆ ಹಾರ್ಮೋನಿಯಂ ನಲ್ಲಿ ಮೇಧಾ ಭಟ್, ತಬ್ಲದಲ್ಲಿ ವಿಜೇತಾ ಹೆಗ್ಡೆ, ತಂಬೂರದಲ್ಲಿ ಪ್ರತೀಕ್ಷ ಪ್ರಭು, ಶಾವರಿ ಸಾಥ್ ನೀಡಿದರು. ಉತ್ತರಾರ್ಧದಲ್ಲಿ ವಯೋಲಿನ್ ಟ್ರಯೋ ಕಾರ್ಯಕ್ರಮವನ್ನು ಸಂಗೀತಾ ಶಂಕರ್ ಮತ್ತು ನಂದಿನಿ ಶಂಕರ್ , ರಾಗಿಣಿ ಶಂಕರ್ ನಡೆಸಿಕೊಟ್ಟರು. ಇವರಿಗೆ ತಬ್ಲದಲ್ಲಿ ಅನುರಾಧ ಪಾಲ್ ಸಾಥ್ ನೀಡಿದರು. ಈ ಕಾರ್ಯಕ್ರಮಕ್ಕೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ , ಪ್ರವಾಸೋದ್ಯಮ ಇಲಾಖೆ, ಕೆನರಾ ಬ್ಯಾಂಕ್, ಡಾ ದಯಾನಂದ ಫೈ, ಕರ್ಣಾಟಕ ಬ್ಯಾಂಕ್ , ಮುದ್ರಾ ಪ್ರಿಂರ್ಟಸ್ ಸಹ ಪ್ರಾಯೋಜಕತ್ವವನ್ನು ನೀಡಿದ್ದಾರೆ

Scroll to Top