ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಸುಭಾಷಿತನಗರದಲ್ಲಿ ಸ್ವಚ್ಛತಾ ಅಭಿಯಾನ

ಸುರತ್ಕಲ್ :ಗಾಂಧಿ ಜಯಂತಿ ದಿನದಂದು ಸುರತ್ಕಲ್ ಸುಭಾಷಿತ ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮ ಬೆಳಿಗ್ಗೆ ನಡೆಯಿತು. ಸುಭಾಷಿತ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಯಿತು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಲಕ್ಷ್ಮೀ ಚಂದ್ರಶೇಖರ ಹಾಗೂ ಅಸೋಸಿಯೇಶನ್ ನ ಸದಸ್ಯರು ಪಾಲ್ಗೊಂಡಿದ್ದರು.ಬಳಿಕ ಅಸೋಶಿಯನ್ ನ ಸರ್ವ ಸದಸ್ಯರ ಸಭೆ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ಗಾಂಧೀಜಿಯವರ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ.

ಮಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮೂಲಮಂತ್ರಗಳು ವಿಶ್ವದಾದ್ಯಂತದ ಮಾಧ್ಯಮ ವ್ಯಕ್ತಿಗಳಿಗೆ ಮಾತ್ರವಲ್ಲ ಎಲ್ಲಾ ಮನುಷ್ಯರಿಗೆ ಕತ್ತಲಲ್ಲಿ ಮುನ್ನಡೆಸುವ ದಾರಿದೀಪಗಳಾಗಿವೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ ಹೇಳಿದರು. ಅವರು ಮಂಗಳೂರಿನ ಸಿಒಡಿಪಿಯಲ್ಲಿ ನಡೆದ ಇಂಡಿಯನ್ ಕ್ಯಾಥೋಲಿಕ್ ಪ್ರೆಸ್ ಅಸೋಸಿಯೇಷನಿನ 29 ನೇ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಗಾಂಧೀಜಿಯವರು ನಮಗೆ ಅನ್ಯರ ಅಭಿಪ್ರಾಯಗಳನ್ನು ಗೌರವಿಸುವ ಪರಂಪರೆಯನ್ನು ಪಾಲಿಸಲು ಕರೆ ನೀಡಿದ್ದಾರೆ. ಆ ಕೋರಿಕೆಯಂತೆ ನಾವೆಲ್ಲರೂ ಜವಾಬ್ದಾರಿಯಿಂದ ಮುಂದುವರೆಯಬೇಕೆಂದು ಹಾಗೂ ಗಾಂಧೀಜಿಯವರಂತೆ ಇಂದಿನ ಎಲ್ಲಾ ಪತ್ರಕರ್ತರು ನಿರ್ಭೀತರೂ ಸತ್ಯಪಕ್ಷಪಾತಿಗಳಾಗಬೇಕೆಂದು ಕರೆ ನೀಡಿದರು. ಮಾಧ್ಯಮಗಳ ಮೂಲಕ ಸತ್ಯದ ಹುಡುಕಾಟ ನಡೆಯುತ್ತಿದೆಯೇ? ಸತ್ಯ ನೋವು ನೀಡುತ್ತದೆ. ಆದರೆ ಅದು ನಿರ್ಗತಿಕರಿಗೆ ಬಲ ನೀಡುತ್ತದೆ ಎಂದು ಅವರು ತಿಳಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಹೆನ್ರಿ ಡಿಸೋಜಾರವರು ಮಾತನಾಡಿ ವಿವಿಧ ಒತ್ತಡಗಳ ನಡುವೆ ಸಿಲುಕಿ ಹೋಗಿರುವ ಇಂದಿನ ಮಾಧ್ಯಮ ಜಗತ್ತಿನಲ್ಲಿ ಗಾಂಧೀಜಿಯವರ ಚಿಂತನೆಗಳು ಅಪ್ರಸ್ತುತ ಎನ್ನುವಂತೆ ಕಾಣುತ್ತಿದೆಯಾದರೂ ವಾಸ್ತವವಾಗಿ ಬೆಳಕಿನ ಅಗತ್ಯವಿರುವುದು ಕತ್ತಲಿನ ನಡುವೆಯೇ ಎನ್ನುವುದನ್ನು ಮರೆಯಬಾರದು. ಇಂತಹ ಗೊಂದಲದ ನಡುವೆಯೇ ಪ್ರಜಾತಂತ್ರದ ಹಾಗೂ ಭಾರತೀಯತೆಯ ಬಲವನ್ನು ಹೆಚ್ಚಿಸಲು ಮಾಧ್ಯಮಗಳ ಪಾತ್ರದ ಕುರಿತು ಗಾಂಧೀಜಿಯವರ ಚಿಂತನೆಗಳನ್ನು ಪುನಃ ನಮ್ಮ ಪತ್ರಿಕೋದ್ಯಮದ ಕೇಂದ್ರ ಭಾಗವಾಗಿಸುವ ಅಗತ್ಯವಿದೆ ಎಂದು ಹೇಳಿದರು.ಸನ್ಮಾನ್ಯ ವಿಧಾನ ಪರಿಷತ್ತಿನ ಸದಸ್ಯರಾದ ಐವನ್ ಡಿಸೋಜಾ ಸಮಾವೇಶದ ಉದ್ಘಾಟಕರಾಗಿ ಉಪಸ್ಥಿತರಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠ ಗುರುಗಳಾದ ಬಹು ವಂದನೀಯ ಮ್ಯಾಕ್ಸಿಮ್ ಎಲ್ ನರೊನ್ಹಾ, ಐಸಿಪಿಎ ಅಧ್ಯಕ್ಷರಾದ ಇಗ್ನೇಷಿಯಸ್ ಗೊನ್ಸಾಲ್ವಿಸ್, ಕಾರ್ಯದರ್ಶಿ ಫಾ. ಸುರೇಶ್ ಮ್ಯಾಥ್ಯೂ, ಕಾರ್ಯಕ್ರಮದ ಸಂಯೋಜಕರಾದ ರಾಕ್ಣೊ ವಾರಪತ್ರಿಕೆಯ ಸಂಪಾದಕರಾದ ವಂದನೀಯ ಫಾದರ್ ರೂಪೇಶ್ ಮಾಡ್ತಾ, ಸಿಒಡಿಪಿ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜಾ ವೇದಿಕೆಯಲ್ಲಿ ಹಾಜರಿದ್ದರು.

ಪ್ರಾದೇಶಿಕ ವಾರ್ತೆಗಳು

ಮಾತಾ ಅಮೃತಾನಂದಮಯಿ ಮಠ, ಮಂಗಳೂರು ನೂತನ ಸೇವಾ ಸಮಿತಿ 2024-26 ಪದಗ್ರಹಣ

ಮಂಗಳೂರು: ಮಾತಾ ಅಮೃತಾನಂದಮಯಿ ಮಠ, ಮಂಗಳೂರು ಇದರ ಸೇವಾ ಸಮಿತಿಯ ಪುನಾರಚನೆ ಹಾಗೂ ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.ಗೌರವಾಧ್ಯಕ್ಷರಾಗಿ ಮಂಗಳೂರು ವಿ.ವಿ.ಯ ವಿಶ್ರಾಂತ ಉಪಕುಲಪತಿ ಡಾ. ಪಿ. ಎಸ್. ಎಡಪಡಿತ್ತಾಯ ಇರುವರು. ಅಧ್ಯಕ್ಷರಾಗಿ ಉದ್ಯಮಿ ಸುರೇಶ್ ಅಮೀನ್,ಉಪಾಧ್ಯಕ್ಷರುಗಳಾಗಿ ಡಾ. ರಾಜೇಶ್ವರಿದೇವಿ ಹಾಗೂ ಡಾ. ಇಂದುಮತಿ ಮಲ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ವೀಣಾ ಟಿ. ಶೆಟ್ಟಿ ಕಾರ್ಯ ನಿರ್ವಹಿಸಲಿರುವರು.ಕೋಶಾಧಿಕಾರಿಯಾಗಿ CA. ರಾಮನಾಥ ನಾಯಕ್ ಮತ್ತು ‌ಸದಸ್ಯರುಗಳಾಗಿ ಗಣೇಶ್ ಕೆ., ಅಡ್ವೊಕೇಟ್ ಪುಷ್ಪಲತಾ, ಡಾ.ದೇವಿಪ್ರಸಾದ್ ಎಸ್.ಅಶೋಕ್, ಭರತ್ ಕುಮಾರ್ ಎರ್ಮಾಳ್, ಪ್ರವೀಣ್ ಶಬರೀಶ್, ಡಾ. ಉಮ್ಮಪ್ಪ ಪೂಜಾರಿ ಪಿ., ಗಿರೀಶ್ ರೇವಣಕರ್, ಪ್ರೇಮರಾಜ್, ರವಿಕಿರಣ್, ವಾಮನ್ ಬಿ. ಮೈಂದನ್, ಡಾ. ಸುಚಿತ್ರಾ ರಾವ್, ದಿನೇಶ್ ರಾವ್, ಚಂದ್ರಹಾಸ್ ಸುವರ್ಣ ಆಯ್ಕೆಯಾಗಿದ್ದಾರೆ.ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಅಮೃತಜ್ಯೋತಿಯನ್ನು ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಗೌರವಾಧ್ಯಕ್ಷರಾದ ಡಾ. ವೈ. ಸನತ್ ಹೆಗ್ಡೆ ಪ್ರಸ್ತಾವನೆಗೈದರು. ಶ್ರೀಮತಿ ಶ್ರುತಿ ಹೆಗ್ಡೆ ಪ್ರಮಾಣ ವಚನ‌ ಬೋಧಿಸಿದರು. ಆರಂಭದ ಅಧ್ಯಕ್ಷ ಡಾ. ಜೀವರಾಜ್ ಸೊರಕೆ ಹಾಗೂ ನಿಕಟಪೂರ್ವ ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ ಉಪಸ್ಥಿತರಿದ್ದರು. ಡಾ. ದೇವದಾಸ್ ಪುತ್ರನ್ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

Mp mla’s ನ್ಯೂಸ್ 13 ನೇ ಸೌಹಾರ್ದ ಸಂಗಮ ಡಿಸೆಂಬರ್ 17 ಕ್ಕೆ ಸಂಜೆ 4 ರಿಂದ 9 ರ ತನಕ. ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ. ಗಣ್ಯ ಅತಿಥಿಗಳಿಂದ ಸೌಹಾರ್ದ ಸಂದೇಶ.

ಮಂಗಳೂರು: ವಿಧಾನಪರಿಷತ್ ಉಪ ಚುನಾವಣೆ ಪ್ರಯುಕ್ತ ಚುನಾವಣಾ ನೀತಿ ಸಂಹಿತೆ ಇರುವುದ್ದರಿಂದ ಅಕ್ಟೋಬರ್ 13 ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಿಗದಿಯಾಗಿದ್ದ Mp mla’s ನ್ಯೂಸ್ 13 ನೇ ಸೌಹಾರ್ದ ಸಂಗಮವನ್ನು ಡಿಸೆಂಬರ್ 17 ಕ್ಕೆ ಮುಂದೂಡಲಾಗಿದೆಂದು ಸೌಹಾರ್ದ ಸಂಗಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ. ಎನ್. ಅವರು ತಿಳಿಸಿದ್ದಾರೆ. ಸೌಹಾರ್ದ ಸಂಗಮದಲ್ಲಿ ಎಂಪಿ ಎಂ ಎಲ್ ಎಗಳು ಭಾಗವಹಿಸಲಿರುವುದ್ದರಿಂದ ಸೌಹಾರ್ದ ಸಂಗಮವನ್ನು ಮುಂದೂಡಲಾಗಿದೆಂದು ಡಾ. ಅಶೋಕ್ ಶೆಟ್ಟಿ ಬಿ. ಎನ್. ಹೇಳಿದ್ದಾರೆ. Mpmla’s news 13 ನೇ ಸೌಹಾರ್ದ ಸಂಗಮವು ಡಿಸೆಂಬರ್ 17 ರ ಸಂಜೆ 4 ರಿಂದ 9 ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಅಂದು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಗಣ್ಯ ಅತಿಥಿಗಳಿಂದ ಸೌಹಾರ್ದ ಸಂದೇಶ,ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯವಿದೆ. Mp mla’s ನ್ಯೂಸ್ ಡಾ. ಅಶೋಕ್ ಶೆಟ್ಟಿ ಬಿ. ಎನ್. ಅವರ ಸಾರಥ್ಯದಲ್ಲಿ 12 ಸೌಹಾರ್ದ ಸಂಗಮಗಳನ್ನು ಯಶಸ್ವಿಯಾಗಿ ಸಂಘಟಿಸಿ ವಿವಿಧ ಕ್ಷೇತ್ರಗಳ 300 ಮಂದಿ ಸಾಧಕರನ್ನು ಗುರುತಿಸಿದೆ.

ಪ್ರಾದೇಶಿಕ ವಾರ್ತೆಗಳು

ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 3 ರಿಂದ 14 ರವರೆಗೆ ವೈಭವದ ಮಂಗಳೂರು ದಸರಾ. ಅಕ್ಟೋಬರ್ 13 ರಂದು ಭವ್ಯ ಶೋಭಾಯಾತ್ರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ. 3 ರಿಂದ 14 ರವರೆಗೆ ವೈಭವದಿಂದ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದರು.ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಸರಾ ಅಂಗವಾಗಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾನ ಸೇವೆಗಳು ನಡೆಯಲಿದೆ. ಈ ಬಾರಿಯ ದಸರಾಕ್ಕೂ ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಮಾತನಾಡಿ, ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಅವರು ವೈಭವದ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಅ.3ರಂದು ಬೆಳಗ್ಗೆ 8.3೦ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ ಧರ್ನುಲಗ್ನö, ಕಲಶ ಪ್ರತಿಷ್ಠೆ, ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ, ದಸರಾ ಉದ್ಘಾಟನೆ, ಬಳಿಕ ಪುಷ್ಪಾಲಂಕಾರ ಮಹಾಪೂಜೆ, 12.3೦ರಿಂದ ಅನ್ನಸಂತರ್ಪಣೆ. ಭಜನಾ ಕಾರ್ಯಕ್ರಮ, ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ ಉತ್ಸವ ನಡೆಯಲಿದೆ. ಅ.4ರಂದು ಬೆಳಗ್ಗೆ 1೦.೦೦ಕ್ಕೆ ದುರ್ಗಾಹೋಮ, 12.3೦ರಿಂದ ಅನ್ನಸಂತರ್ಪಣೆ. ಅ.5ರಂದು ಬೆಳಗ್ಗೆ ಗಂಟೆ 1೦.೦೦ಕ್ಕೆ ಪಂಚ ದುರ್ಗಾಹೋಮ, 12.3೦ರಿಂದ ಅನ್ನಸಂತರ್ಪಣೆ, ಅ.6ರಂದು ಬೆಳಗ್ಗೆ ಗಂಟೆ 1೦.೦೦ಕ್ಕೆ ಆರ್ಯ ದುರ್ಗಾಹೋಮ, 12.3೦ರಿಂದ ಅನ್ನಸಂತರ್ಪಣೆ. ಅ.7ರಂದು ಬೆಳಗ್ಗೆ 1೦.೦೦ಕ್ಕೆ ಅಂಬಿಕಾ ದುರ್ಗಾ ಹೋಮ, 12.3೦ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದರು. ಅ. 8ರಂದು ಬೆಳಗ್ಗೆ ಗಂಟೆ 1೦.೦೦ಕ್ಕೆ ಭಗವತೀ ದುರ್ಗಾ ಹೋಮ (ಲಲಿತಾ ಪಂಚಮಿ) 12.3೦ರಿಂದ ಅನ್ನಸಂತರ್ಪಣೆ, ಅ. 9ರಂದು ಬೆಳಗ್ಗೆ ಗಂಟೆ 9.೦೦ಕ್ಕೆ ಸಾಮೂಹಿಕ ಚಂಡಿಕಾ ಹೋಮ, ಕುಮಾರಿ ದುರ್ಗಾ ಹೋಮ, ಪುಷ್ಪಾಲಂಕಾರ ಮಹಾಪೂಜೆ, 12.3೦ರಿಂದ ಅನ್ನಸಂತರ್ಪಣೆ. ಅ.1೦ರಂದು ಬೆಳಗ್ಗೆ ಗಂಟೆ 1೦.೦೦ಕ್ಕೆ ಮಹಿಷರ್ದಿನಿ ದುರ್ಗಾ ಹೋಮ, 12.3೦ರಿಂದ ಅನ್ನಸಂತರ್ಪಣೆ. ಅ.11ರಂದು ಬೆಳಗ್ಗೆ ಗಂಟೆ 1೦.೦೦ಕ್ಕೆ ಚಂಡಿಕಾಹೋಮ ಹಗಲೋತ್ಸವ,12.3೦ರಿಂದ ಅನ್ನಸಂತರ್ಪಣೆ.ಅ.12ರಂದು ಬೆಳಗ್ಗೆ ಗಂಟೆ 1೦.೦೦ಕ್ಕೆ ಸರಸ್ವತಿ ದುರ್ಗಾಹೋಮ, 11.3೦ರಿಂದ ಶತ ಸೀಯಾಳಾಭಿಷೇಕ, ಶಿವಪೂಜೆ (ಮಹಾನವಮಿ), ಮಹಾಅನ್ನಸಂತರ್ಪಣೆ.ವೈಭವದ ಮೆರವಣಿಗೆ: ಅ.13ರಂದು ಬೆಳಗ್ಗೆ ಗಂಟೆ 1೦.೦೦ರಿಂದ ವಾಗೀಶ್ವರಿ ದುರ್ಗಾಹೋಮ, 12.3೦ಕ್ಕೆ ಶಿವಪೂಜೆ. ಸಂಜೆ 4.೦೦ರಿಂದ ಮಹಾಗಣಪತಿ, ನವದುರ್ಗೆ, ಆದಿಶಕ್ತಿಯೊಂದಿಗೆ ಶ್ರೀ ಶಾರದ ಮಾತೆಯ ಶೋಭಾಯಾತ್ರೆ ನಡೆಯಲಿದೆ. ಅ.14ರಂದು ಬೆಳಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ಶಾರದಾ ವಿಸರ್ಜನೆ, ರಾತ್ರಿ 7.೦೦ರಿಂದ ಭಜನಾ ಕಾರ್ಯಕ್ರಮ, 8.೦೦ರಿಂದ ಗುರುಪೂಜೆ ನಡೆಯಲಿದೆ ಎಂದರು.ಅ.6ರಂದು ಹಾಫ್ ಮ್ಯಾರಥಾನ್: ಅ.6ರಂದು ಬೆಳಗ್ಗೆ 5.3೦ಕ್ಕೆ ಹಾಫ್ ಮ್ಯಾರಥಾನ್ ನಡೆಯಲಿದ್ದು, 2ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿನಿತ್ಯ ಸಂಜೆ ಸಂತೋಷಿ ಕಲಾ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ-ಉಪಾಧ್ಯಕ್ಷ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷರಾದ ಬಿ.ಜಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಸದಸ್ಯರಾದ ಕಿಶೋರ್ ದಂಡೆಕೇರಿ, ವಾಸುದೇವ ಕೋಟ್ಯಾನ್, ಎಚ್.ಎಸ್. ಜೈರಾಜ್, ಲತೀಶ್ ಎಂ. ಸುವರ್ಣ,ರಾಧಾಕೃಷ್ಣ , ಲೀಲಾಕ್ಷ ಕರ್ಕೇರಾ, ಚಂದನ್‌ದಾಸ್, ಗೌರವಿ ರಾಜಶೇಖರ್, ಕೃತಿನ್ ದೀರಾಜ್ ಅಮೀನ್ ಉಪಸ್ಥಿತರಿದ್ದರು.ಅಕ್ಟೋಬರ್ 13 ರಂದು ಭವ್ಯ ಶೋಭಾಯಾತ್ರೆ: ಸಾಯಿರಾಂಅ.13ರ ಭಾನುವಾರ ಸಂಜೆ 4.೦೦ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ಕೇರಳದ ಮೈನವಿರೇಳಿಸುವ ಚೆಂಡೆ ವಾದ್ಯ, ರಾಜ್ಯದ ನಾನಾ ಕಡೆಯಿಂದ ಆಗಮಿಸುವ ಜಾನಪದ, ಸಾಂಸ್ಕೃತಿಕ ಹಿನ್ನಲೆಯ ನೃತ್ಯ ತಂಡಗಳು ನಾನಾ ಜಿಲ್ಲೆö, ರಾಜ್ಯಗಳ ಕಲಾ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ ಎಂದು ದೇವಸ್ಥಾನದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಹೇಳಿದರು.ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಮಂಗಳೂರು ದಸರಾ ಮಹೋತ್ಸವ ಹಾದು ಹೋಗುವ ರಸ್ತೆ ಸೇರಿದಂತೆ ನಗರದ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಮಹೋತ್ಸವಕ್ಕೆ ಮತ್ತಷ್ಟು ವೈಭವ ತುಂಬಬೇಕು ಎಂದರು.ಚಿತ್ರಗಳು:ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಬಂಟ್ಸ್ ಹಾಸ್ಟೆಲ್: ಬಂಟ ಕ್ರೀಡೋತ್ಸವ ಉದ್ಘಾಟನೆ

ಮಂಗಳೂರು: ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವಗಳಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಉದ್ಯಮಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ.ಸುಂದರ ಶೆಟ್ಟಿ ಹೇಳಿದರು.ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ-2024 ಉದ್ಘಾಟಿಸಿದರು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಟಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ ಅವರು ಮಾತನಾಡಿ, ಈ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾ ಪಟುಗಳಿಗೆ ರಾಷ್ಟ್ರ -ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅವಕಾಶ ಒದಗಿ ಬರಲಿ ಎಂದು ಹಾರೈಸಿದರು.ಉದ್ಯಮಿ ಪುರುಷೋತ್ತಮ ರೈ, ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ, ಡಾ. ಸಂಜೀವ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ ಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಶೆಡ್ಡೆ ಮಂಜುನಾಥ್ ಭಂಡಾರಿ, ಕೃಷ್ಣ ಪ್ರಸಾದ್ ರೈ, ತಾಲೂಕು ಸಮಿತಿಯ ಅಧ್ಯಕ್ಷ ವಸಂತ ಶೆಟ್ಟಿ, ಜಯರಾಮ ಸಾಂತ, ಗಣೇಶೋತ್ಸವ ಸಮಿತಿಯ ಸಂಚಾಲಕರುಗಳಾದ ದಿವಾಕರ ಸಾಮಾನಿ, ಅಶ್ವತ್ತಾಮ ಹೆಗ್ಡೆ, ಮನೀಶ್ ರೈ ಹಾಗೂ ಸಂತೋಷ್ ಶೆಟ್ಟಿ ಶೆಡ್ಡೆ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಖ್ಯಾತ ಚಿತ್ರ ಕಲಾವಿದೆ ಆಶ್ರಿತಾ ರೈ ಅವರು ಕನ್ನಡಾಂಬೆಯ ಚಿತ್ರ ರಚಿಸಿದರು.ಕ್ರೀಡಾ ಕೂಟದ ಸಂಚಾಲಕ ಕಿರಣ್ ಪಕ್ಕಳ ಸ್ವಾಗತಿಸಿದರು. ಸಂಚಾಲಕಿ ನಿವೇದಿತಾ ಎನ್.ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ಹಾಗೂ ಪ್ರಕಾಶ್ ಮೇಲಂಟ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಅಕ್ಟೋಬರ್ 2: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ

ಮಂಗಳೂರು, ಸೆಪ್ಟೆಂಬರ್ 30, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಅಕ್ಟೋಬರ್ 2 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನ ದಲ್ಲಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ತಂಡ, ಮಂಗಳೂರು ಪೊಲೀಸ್ ಆಯುಕ್ತರ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳ ತಂಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಂಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ತಂಡ ಪಂದ್ಯಾವಳಿ ಯಲ್ಲಿ ಭಾಗವಹಿಸಲಿವೆ.ಈ ಕ್ರಿಕೆಟ್ ಪಂದ್ಯಾವಳಿ ಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಉದ್ಘಾಟಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಸಂಘನಿಕೇತನದಲ್ಲಿ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ

ಸಂಘನಿಕೇತನದಲ್ಲಿ ಮಾತಾ ಅಮೃತಾನಂದಮಯಿ ದೇವಿಯವರ ಜನ್ಮದಿನಾಚರಣೆ.ಮಂಗಳೂರು : ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 71 ನೆಯ ಜನ್ಮದಿನವನ್ನು ನಗರದ ಸಂಘನಿಕೇತನದಲ್ಲಿ ಭಾನುವಾರ ಶ್ರದ್ಧಾ ಭಕ್ತಿಗಳಿಂದ ಹಾಗೂ ಸಾಮಾಜಿಕ ಸೇವಾ ಯೋಜನೆಗಳ ವಿತರಣೆಯೊಂದಿಗೆ ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಮಾತಾ ಅಮೃತಾನಂದಮಯಿ ಮಠದ ಕರಾವಳಿ ಕರ್ನಾಟಕದ ವಿವಿಧ ಸೇವಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವುಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರು ಶ್ರೀಗುರು ಪಾದುಕಾಪೂಜೆ ಮಾಡುವ ಮೂಲಕ ಚಾಲನೆ ಪಡೆಯಿತು.ಈ ಸಂದರ್ಭದಲ್ಲಿ ಆಶೀರ್ವಚನವಿತ್ತು ಮಾತೃತ್ವದ ಮಹತ್ವದ ಅಂಶಗಳನ್ನು ಉಲ್ಲೇಖಿಸಿದರು. ಅಮ್ಮನ ಗರ್ಭದಲ್ಲಿ ಮಗು ಇರುವಾಗ ಮಗುವಿಗೆ ಬೇಕಾದ ಪೋಷಕಾಂಶಗಳು ಆ ತಾಯಿಯಿದಲೇ ಲಭಿಸುತ್ತದೆ. ಶರೀರ ಮತ್ತು ಮನಸ್ಸುಗಳ ಸೃಷ್ಟಿ ಅಲ್ಲಿಂದಲೇ ಆಗುತ್ತದೆ. ಅದೇ ರೀತಿಯಲ್ಲಿ ನಾವು ವಿಶ್ವ ಮಾತೆಯ ಆಶ್ರಯದಲ್ಲಿ ಇದ್ದೇವೆ. ಮಗು ತಾಯಿಯ ಪ್ರೇಮವನ್ನು ಅನುಭವಿಸುತ್ತದೆ. ಗರ್ಭದಿಂದ ಹೊರಬಂದ ಮೇಲೆ ತಾಯಿ ಮಗುವಿನ ಮುಖಾಮುಖಿ ಆಗುತ್ತದೆ. ಅಮ್ಮನ ಕರುಣೆ, ಭಕ್ತಿಭಾವ ನಮ್ಮಲ್ಲಿ ಸದಾ ಇರಲಿ ಎಂದರು.ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕಿಶೋರ್ ಆಳ್ವ ಮಾತನಾಡಿ ವಿಶ್ವ ಹೃದಯ ದಿನದ ಸಂದರ್ಭದಲ್ಲಿ ಇಂದು ಅಮ್ಮನ ಜನ್ಮದಿನಾಚರಣೆ ಮಾಡುತ್ತಿರುವುದು ಅರ್ಥ ಪೂರ್ಣ. ಪ್ರೇಮ ಮತ್ತು ಕರುಣೆ ತುಂಬಿದ ಹೃದಯ ಅಮ್ಮನ ವಿಶೇಷತೆಯಾಗಿದ್ದು ವಿಶ್ವದ ಅಸಂಖ್ಯಾತ ಜನರ ಹೃದಯ ಜ್ಯೋತಿಯನ್ನು ಬೆಳಗಿ ಅವರ ಬಾಳಿಗೆ ಬೆಳಕು ನೀಡಿದ್ದಾರೆ .ಅಮ್ಮನವರ ಮಾನವೀಯ ಸೇವೆಗಳನ್ನು ಹಾಗೂ ಕರಾವಳಿ ಕರ್ನಾಟಕದಲ್ಲಿನ ಸೇವಾಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷಡಾ. ಎಂ. ಮೋಹನ್ ಆಳ್ವ ಅವರು ಮಾತನಾಡಿ144 ಕೋಟಿ ಜನಸಂಖ್ಯೆಯ ಭಾರತವು ಅಧಿಕ ಮಾನವ ಸಂಪನ್ಮೂಲವನ್ನು ಹೊಂದಿರುವ ರಾಷ್ಟ್ರವಾಗಿದೆ. ಆದರೆ ಇಂದು ಸಮಾಜದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗಿದ್ದರೂ ಭ್ರಷ್ಟತೆ ಸರ್ವವ್ಯಾಪಿಯಾಗಿದೆ. ಹಾಗಾಗಿ ಇಂದು ಸಾಧುಸಂತರ ಮಾರ್ಗದರ್ಶನ ಅತ್ಯಂತ ಅವಶ್ಯವಾಗಿದೆ.ಅಮ್ಮನವರು ಶೈಕ್ಷಣಿಕ, ಆರೋಗ್ಯ ಕ್ಷೇತ್ರದ ಜೊತೆಗೆ ಮನುಷ್ಯರ ಮದ್ಯೆ ಇರುವ ಕಂದಕಗಳನ್ನು ದೂರಮಾಡುವ ಕಾರ್ಯ ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಅಮ್ಮನವರ ಜೀವನವನ್ನು ಆಧರಿಸಿದ ಕಥಾಮೃತ ಕಾರ್ಯಕ್ರಮವನ್ನು ಗಣೇಶ್ ಎರ್ಮಾಳ್ ಪ್ರಸ್ತುತ ಪಡಿಸಿದರು. ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ಆಗಿ ವೃತ್ತಿಪರತೆ ಮೆರೆದ ಮಂಗಳೂರಿನವರಾದ ದಿಶಾ ಅಮೃತ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಅಮೃತ ಆರೋಗ್ಯ ಸೇವಾ ಯೋಜನೆ ಹಾಗೂ ವಸ್ತ್ರದಾನದ ವಿತರಣೆ ನಡೆಯಿತು.ಮೂರೂ ಜಿಲ್ಲೆಗಳ ವಿವಿಧ ಸೇವಾ ಸಮಿತಿಗಳಿಗೆ 2024-26 ಅವಧಿಗೆ ನೂತನ ಪದಾಧಿಕಾರಿಗಳ ಪದಗ್ರಹಣ ಜರುಗಿತುಡಾ.ಜೀವರಾಜ್ ಸೊರಕೆಯವರು ಅಮ್ಮನೊಂದಿಗಿನ ಅನುಭವಾಮೃತಗಳನ್ನು ತಿಳಿಸಿದರು.ಮಂಗಳೂರಿನ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತಕುಮಾರ ಪೆರ್ಲ ಅವರು ಸ್ವಾಗತಿಸಿದರು. ಉಡುಪಿ ಸೇವಾ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಕೊಡವೂರು ವಂದಿಸಿದರು. ಡಾ.ದೇವದಾಸ್ ಪುತ್ರನ್ ನಿರೂಪಣೆ ಮಾಡಿದರು.ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡ ಜಿಲ್ಲೆ ಹಾಗೂ ಮುಂಬಯಿನ ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಎಲ್ಲರಿಗೂ ಅಮೃತ ಭೋಜನ,ಪ್ರಸಾದ ವಿತರಣೆ ಮಾಡಲಾಯಿತು.ಚಿತ್ರ -ವರದಿ: ಸತೀಶ್ ಕಾಪಿಕಾಡ್.

ಪ್ರಾದೇಶಿಕ ವಾರ್ತೆಗಳು

ವನಿತಾ ಪಾರ್ಕ್‌ನಲ್ಲಿ ತುಳು ಕವಿಗೋಷ್ಠಿ. ‘ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’-ರೋಟರಿ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ

ಮಂಗಳೂರು: ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದರು.ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಭಾನುವಾರ ನಗರದ ಲಾಲ್ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾಪಾರ್ಕ್‌ನಲ್ಲಿ ನಡೆದ ‘ಪಚ್ಚೆ ಸಿರಿ‘ ತುಳು ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿದ್ದ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ತುಳು ಭಾಷೆಗೆ ಸಂಬಂಧಿಸಿದ ಸಾಹಿತ್ಯ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ತುಳುವೆರೆ ಕಲದ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ಮಾತನಾಡಿ ‘ ತುಳು ಲಿಪಿಯೇ ಭಾಷೆಯ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿದೆ. ತುಳು ಲಿಪಿ ಕಲಿಕೆ ಜತೆಗೆ ತುಳುವಿನ ಮೂಲ ಶಬ್ದಗಳನ್ನೇ ಬಳಸುವ ಮೂಲಕ ಭಾಷೆಯ ಸೊಗಡು ಉಳಿಸಲು ಪ್ರಯತ್ನಿಸಬೇಕು ಎಂದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್,ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ,ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ ಬಿ. ಎನ್.ಉಪಸ್ಥಿತರಿದ್ದರು

ಪ್ರಾದೇಶಿಕ ವಾರ್ತೆಗಳು

‘ರಕ್ತದಾನ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಲಿ’ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಆಶಯ

ಮಂಗಳೂರು : ಸ್ವಯಂ ಪ್ರೇರಣೆಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ರಕ್ತದಾನ ಅತ್ಯಂತ ಪವಿತ್ರಕಾರ್ಯವಾಗಿದೆ. ಒಬ್ಬನ ರಕ್ತದಾನದಿಂದ ಮೂವರು ರೋಗಿಗಳಿಗೆ ಜೀವದಾನ ಮಾಡುವ ಅವಕಾಶವಿದೆ. ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವಾಗಲಿ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಶ್ರೀ ರಾಘವೇಂದ್ರ ಮಿತ್ರ ಮಂಡಳಿ ನೆಲ್ಲಿಕಾಯಿ ಮಠ ಮತ್ತು ಬಜಿಲಕೇರಿ ಫ್ರೆಂಡ್ಸ್ ಬಜಿಲಕೇರಿ ಮಂಗಳೂರುವತಿಯಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಹಾಗೂ ಫಾದರ್ ಮುಲ್ಲರ್ ಕಾಲೇಜು ಹಾಗೂ ಆಸ್ಪತ್ರೆಯ ಸಹಭಾಗಿತ್ವದಲ್ಲಿ ನಗರದ ಸೆಂಟ್ರಲ್ ವಾರ್ಡ್‌ನ ಬಸ್ತಿ ಗಾರ್ಡನ್ ಶಾಲೆಯಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಈ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು ಎಂದು ಅವರು ಹೇಳಿದರು.ಶಿಬಿರಕ್ಕೆ ಆಗಮಿಸಿದ ಡಿ.ವೇದವ್ಯಾಸ್ ಕಾಮತ್ ಅವರು ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನದ ಮೂಲಕ ಜನತೆಗೆ ನೆರವಾಗುತ್ತಿರುವ ಶ್ರೀ ರಾಘವೇಂದ್ರ ಮಿತ್ರ ಮಂಡಳಿ ಮತ್ತು ಬಜಿಲಕೇರಿ ಫ್ರೆಂಡ್ಸ್‌ನ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುನೈನಾ ಭಟ್ , ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಫಾದರ್ ಮುಲ್ಲರ್ ಆಸ್ಪತ್ರೆ ಆರೋಗ್ಯ ಶಿಬಿರದ ಸಂಯೋಜಕರಾದ ರೈನಾ, ಕೆಲ್ವಿನ್ ಪೀಟರ್ ಪಾಸ್, ರೆಡ್ ಕ್ರಾಸ್ ರಕ್ತನಿಧಿ ಸಂಯೋಜಕ ಪ್ರವೀಣ್ ಕುಮಾರ್, ಬಸ್ತಿ ಗಾರ್ಡನ್ ಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ರಾವ್, ಶ್ರೀರಾಘವೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಚಂದ್ರಕಾಂತ ನಾಯಕ್, ಬಜಿಲಕೇರಿ ಫ್ರೆಂಡ್ಸ ಅಧ್ಯಕ್ಷ ಹರೀಶ್.ಎಚ್. ಉಪಸ್ಥಿತರಿದ್ದರು. ಅರ್ಪಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಫೋಟೋ : ಕ್ಯಾಂಪ್

Scroll to Top