ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ.

ಮಂಗಳೂರು :ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ ಬರೆ ಎಳೆದಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಭೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ದ.ಕ.ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ,ಮಾಜಿ ಮೇಯರ್ ಗಳಾದ ಜಯಾನಂದ ಅಂಚನ್, ಕವಿತಾ ಸನಿಲ್, ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಜಗದೀಶ್ ಶೇಣವ, ಸಂಜಯ್ ಪ್ರಭು, ಮತ್ತಿತರರು ಭಾಗವಹಿಸಿದ್ದರು.

ಪ್ರಾದೇಶಿಕ ವಾರ್ತೆಗಳು

ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಮಂಗಳೂರು : ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ.ಈ ಕಾರಣಕ್ಕೆ ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಪ್ರಾದೇಶಿಕ ವಾರ್ತೆಗಳು

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಹೆಚ್ಚಳ ಮಾಡಿದ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ.

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ತನ್ನ ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಮತ್ತು ಸಚಿವರುಗಳ ನಡೆಸಿದಭ್ರಷ್ಟಾಚಾರದಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ವಿದ್ಯುತ್ ದರ, ಮುದ್ರಾಂಕ ಶುಲ್ಕ ಸಹಿತ ಎಲ್ಲ ರೀತಿಯ ಶುಲ್ಕಗಳನ್ನು ಏರಿಸಿ ಜನರಿಗೆ ಅನ್ಯಾಯ ಮಾಡಿದೆ. ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿರುವುದರಿಂದ ಸಾಗಾಟ ವೆಚ್ಚ ಹೆಚ್ಚಳವಾಗಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಇದರಿಂದ ರಾಜ್ಯದ ಜನತೆ ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಇನ್ನೊಂದೆಡೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಜನತೆ ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯಕ್ಕೆ ಉಳಿಗಾಲವಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ನಳಿನ್‌ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಅಧಿಕಾರವಿರಲಿ, ಇಲ್ಲದಿರಲಿ ನಳಿನ್‌ಕುಮಾರ್ ಕಟೀಲು ಅವರು ನಿಜವಾದ ಜನನಾಯಕ.

ಜನಾಭಿಪ್ರಾಯ ವರದಿ: ಡಾ.ಅಶೋಕ್ ಶೆಟ್ಟಿ ಬಿ.ಎನ್.ಮಂಗಳೂರು: ಅಧಿಕಾರವಿರಲಿ. ಇಲ್ಲದಿರಲಿ, ನಳಿನ್‌ಕುಮಾರ್ ಕಟೀಲು ಅವರೇ ನಿಜವಾದ ಜನನಾಯಕ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿದೆ. ಮೊನ್ನೆ ಬೋಳಿಯಾರ್ ಪ್ರಕರಣದಲ್ಲಿ ಆಸ್ಪತ್ರೆಗೆ ಸೇರಿದ ಬಿಜೆಪಿ ಕಾರ‍್ಯಕರ್ತರನ್ನು ಕಟೀಲು ಅವರು ಭೇಟಿಯಾಗಿ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ರೀತಿ ಅವರೊಬ್ಬ ನಿಜವಾದ ಜನನಾಯಕ ಎಂಬುವುದನ್ನು ಜನ ಎಲ್ಲೆಡೆ ಅವರನ್ನು ಶ್ಲಾಘಿಸುವಂತೆ ಮಾಡಿದೆ.ಮೂರು ಬಾರಿ ದಕ್ಷಿಣ ಕನ್ನಡದ ಎಂಪಿಯಾಗಿ 2 ಲಕ್ಷಕ್ಕೂ ಅಧಿಕ ಕೋಟಿ ರೂಪಾಯಿ ಅನುದಾನವನ್ನು ತಂದಿದ್ದ ನಿಷ್ಕಳಂಕ ನಾಯಕ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾಗ ಅತೀ ಹೆಚ್ಚು ಬಾರಿ ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ತಳಮಟ್ಟದಲ್ಲೇ ಕಟ್ಟಿ ಬಲಿಷ್ಠವಾಗಿಸಿದ್ದರು. ಕಟೀಲು ಅವರ ವರ್ಚಸ್ಸನ್ನು ಸಹಿಸಲಾಗದೆ ಹೊಟ್ಟೆ ಉರಿ ನಂಜು ಮತ್ಸರದಿಂದ ಅಪಪ್ರಚಾರ ನಡೆಸಿದ ಕೈಲಾಗದ ಮಂದಿ ಕಟೀಲು ಅವರಿಗೆ ನಾಲ್ಕನೇ ಬಾರಿಗೆ ಎಂಪಿ ಟಿಕೇಟು ಸಿಗದಿದ್ದಾಗ ಸಂತೋಷದಿಂದ ಹಿಗ್ಗಿ ಹೋಗಿದ್ದರು.ಇದರ ಜೊತೆಗೆ, ಯಡಿಯೂರಪ್ಪನವರು ಕಟೀಲ್‌ ಅವರಿಗೆ ಟಿಕೇಟ್ ಸಿಗದಂತೆ ಮಾಡಿ ಕಟೀಲ್‌ರವರ ಬೆಳವಣಿಗೆಯನ್ನು ಚಿವುಟಲು ನೋಡಿದ್ದರು. ಆದರೆ, ಕಟೀಲು ಅವರು ಎಲ್ಲವನ್ನು ಸಹಿಸಿಕೊಂಡರು. ಯಾರ ಮೇಲೂ ಕೋಪಗೊಳ್ಳದೆ ಜಾಣ ನಡೆ ಅನುಸರಿಸಿದರು.ಪ್ರಸ್ತುತ,ಕಟೀಲು ಅವರು ಮಾಜಿ ಸಂಸದ.ಆದರೆ,ಅವರ ಬಳಿ ಬರುವ ಜನ ಸಾಗರ ಕಡಿಮೆಯಾಗಲಿಲ್ಲ.ಕಟೀಲು ಅವರಿಗೆ ಲಕ್ಷ ಲಕ್ಷ ಅಭಿಮಾನಿಗಳಿದ್ದು,ಕಟೀಲು ಅವರು ಅಧಿಕಾರವಿರಲಿ, ಇಲ್ಲದಿರಲಿ ನಿಜವಾದ ಜನನಾಯಕ ಎಂಬ ಜನಾಭಿಪ್ರಾಯಗಳು Mp mla’s ನ್ಯೂಸ್‌ಗೆ ವ್ಯಕ್ತವಾಗಿವೆ. ಚಿತ್ರಗಳು :ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಆಶಯ

ಮಂಗಳೂರು : ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ನಗರವನ್ನು ಎರಡನೆ ರಾಜ್ಯದ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ. ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ತಿಳಿಸಿದರು.ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ‘ ಬಂದರು,ವಿಮಾನ ನಿಲ್ದಾಣ, ರೈಲು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸೌಲಭ್ಯ ಹೊಂದಿರುವ ಮಂಗಳೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿದೆ. ಇಲ್ಲಿನ ಸಮುದ್ರಕ್ಕೆ, ನದಿಗಳಿಗೆ ನಗರದ ಕಸ , ತ್ಯಾಜ್ಯ ನೀರು ಸೇರಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಂಗಳೂರು ಅಭಿವೃದ್ಧಿ ಬಗ್ಗೆ ರಾಜ್ಯದಲ್ಲಿ ಎಸ್.ಎಂ.ಕೃಷ್ಣ ಮುಖ್ಯ ಮಂತ್ರಿಯಾಗಿದ್ದಾಗ ಸರ್ಕಾರಕ್ಕೆ ಸಮಗ್ರ ವರದಿ ನೀಡಿದ್ದೆ ಎಂದರು.ನಾನು ಹುಟ್ಟಿ ಬೆಳೆದ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎನ್ನುವುದು ನನ್ನ ಗುರಿಯಾಗಿತ್ತು. ದುಡಿಮೆಯಉಳಿತಾಯದಲ್ಲಿ ಬಡಜನರಿಗೆ,ಸಮಾಜಕ್ಕೆ ಒಂದು ಪಾಲು ಮೀಸಲಿಡಲು ತೀರ್ಮಾನಿಸಿದ್ದೆ. ಮದುವೆಯ ಸಂದರ್ಭದಲ್ಲಿಯೂ ಈ ಬಗ್ಗೆ ಪ್ರಮಾಣ ಸ್ವೀಕರಿಸಿದ್ದೆ, ನನ್ನ ಪತ್ನಿಯೂ ಇದಕ್ಕೆ ಸಮ್ಮತಿಸಿದ್ದಳು. ಕೊಲ್ಲಿ ರಾಷ್ಟ್ರದಲ್ಲಿ ವೃತ್ತಿ ಬದುಕು ಮತ್ತು ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿದ ಬಳಿಕ ಸಮಾಜಮುಖಿ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ. ಅದೇ ನನ್ನ ಬದುಕಿನ ಸಾಧನೆ ಎಂದರು.ನನ್ನ ಸಾಮಾಜಿಕ ಚಟುವಟಿಕೆಗೆ ಜಾತಿ,ಧರ್ಮ ಎಂದೂ ಅಡ್ಡಿಯಾಗಿಲ್ಲ . ರಾಜ್ಯದ ಕೆಲವು ಹಳ್ಳಿಗಳಿಗೆ ಕುಡಿಯುವ ನೀರು,ರಸ್ತೆ ನಿರ್ಮಾಣ ದೇವಸ್ಥಾನ ನಿರ್ಮಾಣ ಮಾಡಿ ಜನರಿಗೆ ಸೇವೆ ನೀಡಲು ಸಾಧ್ಯವಾಗಿದೆ . ಕಠಿಣ ಪರಿಶ್ರಮ ಮತ್ತು ಸಾಮಾಜಿಕ ಸೇವಾ ಮನೋಭಾವದಿಂದ ನಮ್ಮ ಯುವಕರು ಬದುಕಿನಲ್ಲಿ ಯಶಸ್ಸು ಸಾಧಿಸ ಬಹುದು ಎಂದು ಅವರು ಹೇಳಿದರು.ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಳ್ವಾರಿಸ್, ಜೀನ್ ಕೊಲಾಸೊ , ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ , ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ವಾಲ್ಟರ್ ನಂದಳಿಕೆ, ಡೆನಿಸ್ ಡಿಸಿಲ್ವ, ಶ್ರೀನಿವಾಸ ವಿ.ವಿ.ಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಷ್ಮಿತಾ ಕೋಟ್ಯಾನ್ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್.ವಂದಿಸಿದರು. ಆರ್.ಸಿ. ಭಟ್ ಕಾರ್ಯ ಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ” – ಹರೀಶ್ ಪೂಂಜ

ಬೆಳ್ತಂಗಡಿ:ಜೂ.13: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆಯೆಂಬ ವಿಶ್ವಾಸವನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

ಪ್ರಾದೇಶಿಕ ವಾರ್ತೆಗಳು

“ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ” -ಗಣೇಶ್ ರಾವ್ *ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.ಬಳಿಕ ಮಾತಾಡಿದ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಚೇರ್ ಮೆನ್ ಗಣೇಶ್ ರಾವ್ ಅವರು, “ತುಡರ್ ಅಂದರೆ ಕನ್ನಡದಲ್ಲಿ ಬೆಳಕು ಅಂತ ಅರ್ಥ. ಒಂದು ಬೆಳಕಿನಿಂದ ಎಷ್ಟೋ ದೀಪಗಳನ್ನು ಬೆಳಗಿಸಬಹುದು. ಅದೇ ರೀತಿ ಬಿಡುಗಡೆಯಾಗಿರುವ ತುಳು ಸಿನಿಮಾ ತುಳು ತುಡರ್ ಚಿತ್ರರಂಗದಲ್ಲಿ ಹೊಸ ಬೆಳಕಾಗಿ ಮೂಡಿಬರಲಿ. ಸಿನಿಮಾ ತಂಡವನ್ನು ನೋಡಿದರೆ ಖಂಡಿತ ಈ ಸಿನಿಮಾ ಗೆಲ್ಲುವ ವಿಶ್ವಾಸವಿದೆ. ಸಮಾಜಕ್ಕೆ ಮನೋರಂಜನೆಯ ಜೊತೆಗೆ ಒಳ್ಳೆಯ ಸಂದೇಶ ನೀಡುವ ಸಿನಿಮಾಗಳು ಬರಲಿ. ಚಿತ್ರತಂಡದಿಂದ ಇನ್ನಷ್ಟು ಸದಭಿರುಚಿಯ ಸಿನಿಮಾಗಳು ಬರಲಿ. ಸಂಸ್ಕೃತಿಗೆ ಪೂರಕವಾದ ಜಾತಿ ಧರ್ಮ ದ್ವೇಷವನ್ನು ಪಸರಿಸದೆ ಜನರನ್ನು ಒಂದುಮಾಡುವ ಸಿನಿಮಾಗಳು ಬರಲಿ” ಎಂದು ಶುಭ ಹಾರೈಸಿದರು.ಬಳಿಕ ಮಾತಾಡಿದ ಅರವಿಂದ್ ಬೋಳಾರ್, “ತುಳು ಸಿನಿಮಾ ಬಿಡುಗಡೆ ಎಂದರೆ ಭಯವಾಗುತ್ತದೆ. ಯಾಕೆಂದರೆ ಸಿನಿಮಾ ಎಷ್ಟು ದಿನ ನಡೆಯುತ್ತದೆ ಎಂದು ಹೇಳಲು ಆಗುವುದಿಲ್ಲ. ಆದರೆ ತುಡರ್ ಸಿನಿಮಾ ವೀಕ್ಷಿಸಿದವರು ಚಿತ್ರತಂಡವನ್ನು ಮೆಚ್ಚಿ ಬೆನ್ನುತಟ್ಟಿದ್ದಾರೆ. ಹೀಗಾಗಿ ನಮಗೆ ಧೈರ್ಯ ಬಂದಿದೆ. ಈ ಸಿನಿಮಾ ಗೆಲ್ಲಲು ತುಳುವರು ಥಿಯೇಟರ್ ಗೆ ಬಂದು ಸಿನಿಮಾ ನೋಡಬೇಕು” ಎಂದರು.ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, “ಸಿನಿಮಾ ಕುರಿತು ಎಲ್ಲೆಡೆ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ. ಸಿನಿಮಾ ಗೆಲ್ಲಲು ತುಳುವರ ಆಶೀರ್ವಾದ ಅಗತ್ಯ” ಎಂದರು.ವಾಲ್ಟರ್ ನಂದಳಿಕೆ ಮಾತಾಡಿ, “ಸಿನಿಮಾ ನೋಡಿದವರು ಬಹಳ ಸಮಯದ ಬಳಿಕ ಒಳ್ಳೆಯ ಸಿನಿಮಾ ನೋಡಿದ್ದಾಗಿ ಹೇಳುತ್ತಿದ್ದಾರೆ. ಸಿನಿಮಾ ಖಂಡಿತ ಗೆಲ್ಲಲಿದೆ” ಎಂದರು. ವೇದಿಕೆಯಲ್ಲಿ ಭಾರತ್ ಸಿನೆಮಾಸ್ ನ ಬಾಲಕೃಷ್ಣ ಶೆಟ್ಟಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮನೋಹರ್ ಶೆಟ್ಟಿ, ಉದಯ ಪೂಜಾರಿ ಬಲ್ಲಾಳ್ ಬಾಗ್, ಉಮೇಶ್ ರೈ ಪದವು ಮೇಗಿನ‌ಮನೆ, ಸ್ವರಾಜ್ ಶೆಟ್ಟಿ, ನಟ ಸಿದ್ದಾರ್ಥ್ ಶೆಟ್ಟಿ, ನಟಿ ದೀಕ್ಷಾ ಭಿಸೆ, ರೂಪ ವರ್ಕಾಡಿ, ನಿರ್ದೇಶಕ ತೇಜೇಶ್ ಪೂಜಾರಿ, ಪ್ರಕಾಶ್ ಮಹಾದೇವನ್, ವಿಲ್ಸನ್ ರೆಬೆಲ್ಲೋ, ವಿದ್ಯಾ, ಸಂಪತ್, ಹರೀಶ್ ಶೆಟ್ಟಿ, ವಿಕಾಸ್ ಪುತ್ರನ್, ಮೋಹನ್ ರಾಜ್, ಹಂಚಿಕೆದಾರ ಸಚಿನ್ ಎಸ್. ಉಪ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು. ಚಿರಾಗ್ ಬಜಾಲ್ ಕಾರ್ಯಕ್ರಮ ನಿರ್ವಹಿಸಿದರು.ತುಡರ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಬಿಡುಗಡೆಯಾಯಿತು.ಈಗಾಗಲೇ ತುಡರ್ ಸಿನಿಮಾ ವಿದೇಶ ಸಹಿತ ಮಂಗಳೂರು, ಉಡುಪಿ, ಪುತ್ತೂರು, ಸುರತ್ಕಲ್, ಪಡುಬಿದ್ರೆಯಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಪ್ರೇಕ್ಷಕರ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನಿಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ. ನಾಯಕ ನಟ ಸಿದ್ದಾಥ್೯ ಶೆಟ್ಟಿ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ‌.

ಪ್ರಾದೇಶಿಕ ವಾರ್ತೆಗಳು

ಜೂನ್ 14 ರಂದು ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಪ್ರೆಸ್ ಕ್ಲಬ್ ಗೌರವ ಅತಿಥಿ ಸನ್ಮಾನ ಕಾರ್ಯಕ್ರಮ.

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜೂ.14 ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್‌ ಕೊಲಾಸೊ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ರೋನ್ಸ್ ಬಂಟ್ವಾಳ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನು ಚಿಕಿತ್ಸೆ ಪಡೆಯುತ್ತಿರುವ ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲು ಸಹಿತ ಬಿಜೆಪಿ ಮುಖಂಡರು. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸುವಂತೆ ಪೊಲೀಸ್ ಇಲಾಖೆಗೆ, ರಾಜ್ಯ ಸರಕಾರಕ್ಕೆ ಒತ್ತಾಯ.

ಮಂಗಳೂರು : ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪ್ರಮುಖರುಗಳು ಭೇಟಿಯಾಗಿ ಧೈರ್ಯ ತುಂಬಿ,ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಚಿತ್ರಗಳು :ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಪ್ರಧಾನಿ ಮೋದಿ ಪ್ರಮಾಣ ವಚನ ದಿವಸ ಬೊಳಿಯಾರಿನಲ್ಲಿ ನಡೆದ ವಿಜಯೋತ್ಸವದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲಿನ ಮಾರಣಾoತಿಕ ಹಲ್ಲೆ ಖಂಡಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಸುದ್ದಿ ಗೋಷ್ಠಿ. ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕ್ರಮ ಮತ್ತು ಹಲ್ಲೆ ಗೊಳಗಾದವರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡುವಂತೆ ರಾಜ್ಯ ಸರಕಾರಕ್ಕೆ ಒತ್ತಾಯ.

ಮಂಗಳೂರು : ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನ ಬೊಳಿಯಾರಿನಲ್ಲಿ ನಡೆದ ವಿಜಯೋತ್ಸವದಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ತುಘಲಕ್ ಆಡಳಿತ ನಡೆಯುತ್ತಿದೆಯೇ ಎಂಬ ಅನುಮಾನ ಹುಟ್ಟುತ್ತಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಆರೋಪಿಸಿದರು.ನಗರದಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಲ್ಲೆಗೊಳಗಾದ ಹರೀಶ್ ಮತ್ತು ನಂದಕುಮಾರ್ ಮಸೀದಿ ಬಳಿ ಭಾರತ್ ಮಾತೆಗೆ ಜೈಕಾರ ಹಾಕಿದ್ದ ಒಂದೇ ಕಾರಣಕ್ಕೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ದೇಶದಲ್ಲಿ ಭಾರತ್ ಮಾತಾಕಿ ಜೈ ಹೇಳುವುದು ಅಪರಾಧವೇ? ಮುಖ್ಯಮಂತ್ರಿಯವರು, ಗೃಹಸಚಿವರು ಉತ್ತರಿಸಬೇಕು? ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಮತಾಂಧ ಶಕ್ತಿಗಳ ವರ್ತನೆ ಅತಿರೇಕಕ್ಕೆ ಹೋಗಿದೆ. ಈ ಪ್ರಕರಣದ ಹಿಂದಿರುವ ಎಲ್ಲ ದುಷ್ಟಶಕ್ತಿಗಳನ್ನು ಪತ್ತೆಹಚ್ಚಿ ಬಂಧಿಸಬೇಕು. ಗಾಯಗೊಂಡವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದರು.ಬಿಜೆಪಿ ವಿಜಯೋತ್ಸವ ಸಂದರ್ಭ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದು, ಅಲ್ಲಿರುವ ಯುವಕರು ಈ ಘಟನೆಯಲ್ಲಿ ಶಾಮೀಲಾಗಿದ್ದರೆಂದು ಹೇಳಲಾಗುತ್ತಿದೆ. ಹಾಗಾದರೆ ಪ್ರಾರ್ಥನೆಗೆ ಬಂದವರಿಗೆ ಚೂರಿ ಸಿಕ್ಕಿದಾದರೂ ಹೇಗೆ? ಎಲ್ಲಿಂದ ಬಂತು ಈ ಮಾರಕಾಸ್ತ್ರಗಳು?ಗೃಹ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ದಾಳಿ, ರಸ್ತೆಯಲ್ಲೇ ನಮಾಜು, ಭಾರತ ಮಾತೆಗೆ ಜೈಕಾರ ಹಾಕುವವರ ಮೇಲೆ ಕೇಸು ಹಾಕಲಾಗುತ್ತದೆ. ಹಾಗಾದರೆ ನಾವು ಎಲ್ಲಿದ್ದೇವೆ ಎಂಬ ಅನುಮಾನ ಬರುತ್ತಿದೆ. ಕೂಡಲೇ ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದರು.ಈ ಸಂದರ್ಭ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು. ಚಿತ್ರ : ಸತೀಶ್ ಕಾಪಿಕಾಡ್

Scroll to Top