ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ವಿದ್ಯಾರ್ಥಿಗಳಿಂದ ಯಕ್ಷಕಲೆ ಬೆಳೆಯಲಿದೆ:ಮಂಗಳೂರಿನ ಎಸ್.ಡಿ. ಯಂ. ಲಾ ಕಾಲೇಜ್ ನಲ್ಲಿ ನಡೆದ ಅಂತರ ಕಾಲೇಜು ಯಕ್ಷಗಾನ ಸ್ಪರ್ಧೆ ಕಾರ್ಯಕ್ರಮದ ಸಮಾರಂಭದಲ್ಲಿ ಶ್ಯಾಮ್ ಭಟ್ ಅಭಿಪ್ರಾಯ.

ಮಂಗಳೂರು: ವಿದ್ಯಾವಂತ ಸಮಾಜ ಯಕ್ಷಗಾನ ಕ್ಷೇತ್ರದತ್ತ ಒಲವು ಹೊಂದಿರುವುದು ಉತ್ತಮ ವಿಚಾರ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಲೆ ಉಳಿಸಲು ಮುಂದಾಗಿರುವುದು. ಅವುಗಳ ಶ್ರೀಮಂತಿಕೆಯನ್ನು ವಿವರಿಸುತ್ತಿದ್ದು, ವಿದ್ಯಾರ್ಥಿಗಳ ಕಲಾ ಜೀವನ ಯಶಸ್ವಿಯಾಗಲಿ ಎಂದು ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಆಡಳಿತಾತ್ಮಕ ಸದಸ್ಯ ಶ್ಯಾಮ್ ಭಟ್ ತಿಳಿಸಿದರು.ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಲಾದ 32 ನೇ ವರ್ಷದ ಯಕ್ಷೋತ್ಸವ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯ ಸಮಾರೋಪದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.ಹಿಂದಿನ ಕಾಲದಲ್ಲಿ ವಿದ್ಯಾಭ್ಯಾಸ ಮುಂದುವರಿಸಲಾಗದವರು ಯಕ್ಷಗಾನ ಕ್ಷೇತ್ರವನ್ನು ಆಯ್ಕೆ ಮಾಡುತ್ತಿದ್ದರು. ಆದರೆ,ಇಂದು ಚಿತ್ರಣವೇ ಬದಲಾಗಿದ್ದು, ವಿದ್ಯಾವಂತರು ಯಕ್ಷಗಾನದಲ್ಲಿ ಹೆಚ್ಚು ಭಾಗವಹಿಸುತ್ತಿರುವುದು ಕಲೆಯ ಬೆಳವಣಿಗೆಗೆ ಪೂರಕ. ಮೂವತ್ತೆರಡು ವರ್ಷಗಳ ಹಿಂದೆಯೇ ಯಕ್ಷಗಾನ ಸ್ಪರ್ಧೆಯನ್ನು ಆರಂಭಿಸಿರುವುದು ಸಂಸ್ಥೆಗೆ ಹಿರಿಮೆ ತಂದಿದೆ. ಎಲ್ಲ ತಂಡಗಳು ಒಂದೇ ಪ್ರಸಂಗವನ್ನು ಪ್ರದರ್ಶಿಸಿರುವ ಕಾರಣ ತೀರ್ಪುಗಾರಿಕೆಗೆ ನೆರವಾಗಿದೆ. ಶಾಲಾ ಕಾಲೇಜುಗಳಲ್ಲಿ ಯಕ್ಷಗಾನ ಕಲಿಯುವುದು ಕಲೆಯತ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತರಾಗಲು ಕಾರಣವಾಗುತ್ತದೆ. ಉದ್ಯೋಗದ ಬಗ್ಗೆ ಹೆಚ್ಚು ಚಿಂತಿಸದೆ ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರಿಂದ ಗೌರವ, ಗುರುತಿಸುವಿಕೆಯ ಜೀವನ ನಡೆಸಲು ಸಾಧ್ಯ ಎಂದರು. ಸಮ್ಮಾನತೀರ್ಪುಗಾರರಾದ ಎಂ.ಕೆ. ಆಚಾರ್ಯ, ಅಂಬಾ ಪ್ರಸಾದ್, ಶ್ಯಾಮ್ ಭಟ್ ಅವರನ್ನು ಸಮ್ಮಾನಿಸಲಾಯಿತು. ಪ್ರಾಂಶುಪಾಲ ಡಾ. ತಾರಾನಾಥ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ದೇವರಾಜ ಟಿ., ಯಕ್ಷೋತ್ಸವ ಸಂಚಾಲಕ ಪುಷ್ಪರಾಜ್ ಕೆ. ಶುಭ ಹಾರೈಸಿದರು. ಬಹುಮಾನ ವಿತರಣೆಸಮಾರೋಪದಲ್ಲಿ ಪ್ರಶಸ್ತಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ನಿಟ್ಟೆ ಎನ್‌ಎಂಎಎಂ ಟೆಕ್ನಾಲಜಿ ಸಂಸ್ಥೆ ಪ್ರಥಮ ಸಮಗ್ರ ಪ್ರಶಸ್ತಿ ಗೆದ್ದು ಕೊಂಡಿತ್ತು. ಎಸ್‌ಡಿಎಂ ಉಜಿರೆ ಕಾಲೇಜು ದ್ವಿತೀಯ, ಉಡುಪಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಸಂಸ್ಥೆ ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು.ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಥಮ ದರ್ಜೆ ಕಾಲೇಜು ತಂಡ ನಾಲ್ಕು ಹಾಗೂ ಮಂಗಳೂರಿನ ಎಸ್‌ಡಿಎಂ ಉದ್ಯಮಾಡಳಿತ ಕಾಲೇಜು ತಂಡ ಐದನೇ ಸ್ಥಾನ ಪಡೆದುಕೊಂಡಿತು.

ಪ್ರಾದೇಶಿಕ ವಾರ್ತೆಗಳು

ಭಕ್ತರನ್ನು ಕೈಬೀಸಿ ಕರೆಯುತ್ತಿದೆ ಭದ್ರಕಾಳಿಯ ಸಾನಿಧ್ಯ

ಮಂಗಳೂರು, ಫೆ, 26 : ಶ್ರೀ ಭದ್ರಕಾಳಿ ದೇವಸ್ಥಾನ ಕದ್ರಿ ಪದವು ಇಲ್ಲಿನ ಭದ್ರಕಾಳಿ ಅಮ್ಮನ ಗುಡಿಯ ಪುನ: ಪ್ರತಿಷ್ಠೆ ಅಷ್ಟ ಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿ ತಿಂಗಳ 28/02/2024 ಬುಧವಾರದಿಂದ ಆರಂಭ ಗೊಂಡು 01/03/2024 ಶುಕ್ರವಾರದವರೆಗೆ ಕದ್ರಿ ಯೋಗೀಶ್ವರ ಮಠಾಧಿಪತಿ ಶ್ರೀ. ಶ್ರೀ.ಶ್ರೀ. ರಾಜ ನಿರ್ಮಲ್ನಾಥ್ ಜಿ ಯವರ ಉಪಸ್ಥಿತಿಯೊಂದಿಗೆ ಶ್ರೀ.ಭದ್ರಕಾಳಿ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಶ್ರೀ ಉಮೇಶ್ ನಾಥ್ ಜಿ ಯವರ ನಿರ್ದೇಶನದಂತೆ ಅಘೋರ ತಾಂತ್ರಿಕ್ ಬ್ರಹ್ಮಶ್ರೀ ದೇರೆಬೈಲ್ ವಿಠಲ ದಾಸ್ ತಂತ್ರಿ ಯವರ ಧಾರ್ಮಿಕ ವಿಧಿ ವಿಧಾನಗಳ ನಿಯಮಾನುಸಾರ ನೆರವೇರಲಿದೆ.ಕರಾವಳಿ ಜಿಲ್ಲೆಯಲ್ಲಿರುವ ಪುರಾತನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ.ಭದ್ರಕಾಳಿ ದೇವಸ್ಥಾನ ನಾಥ ಸಂಪ್ರದಾಯದ ಕದ್ರಿ ಯೋಗೀಶ್ವರ ಮಠಾಧಿಪತಿಗಳಿಂದ ಪೂಜೆಗೊಳಪಟ್ಟು ಗತದ ಪರಂಪರೆಯ ಪ್ರಭಾವವನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಇಲ್ಲಿನ ವಿಶೇಷತೆ. ಭದ್ರಕಾಳಿ ಸಾನಿಧ್ಯದ ಹಿನ್ನಲೆವರದಹಳ್ಳಿಯ ಮಹಾನ್ ಸಂತ ಶ್ರೀ.ಶ್ರೀಧರ ಸ್ವಾಮೀಜಿಗಳು ದಟ್ಟ ಕಾಡಿನಿಂದ ಆವ್ರತವಾಗಿರುವ ಈ ಭಾಗದಲ್ಲಿ ತಮ್ಮ ಭಕ್ತರೊಂದಿಗೆ ಸಂಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಇಲ್ಲೊಂದು ಅಗೋಚರ ಶಕ್ತಿಯು ನೆಲೆ ನಿಂತಿರುವ ಬಗ್ಗೆ ತನ್ನ ತಪೋಶಕ್ತಿಯಿಂದ ಅರಿತುಕೊಳ್ಳುತ್ತಾರೆ.ಮುಂದೆ ಅವರು ಇದೇ ಸ್ಥಳದಲ್ಲಿ ತನ್ನ ಶಿಷ್ಯ ವೃಂದ ದೊಂದಿಗೆ ಚಾತುರ್ಮಾಸ ವ್ರತ ಕೈಗೊಂಡ ಸಂದರ್ಭದಲ್ಲಿ ತಾಯಿ ಭದ್ರಕಾಳಿಯು ಕನಸಿನಲ್ಲಿ ಬಂದು ಗುಡಿ ನಿರ್ಮಿಸಲು ಆಜ್ಞಾಪಿಸಿದಾಗ ಸ್ವಾಮೀಜಿಗಳು ಊರ ಗ್ರಾಮಸ್ಥರ ಸಹಾಯದಿಂದ ಈ ಸ್ಥಳದಲ್ಲೊಂದು ಗುಡಿ ನಿರ್ಮಿಸಿ ಮಂಗಳವಾರ ಮತ್ತು ಶುಕ್ರವಾರದಂದು ಪೂಜೆ ನೆರವೇರುವಂತೆ ಮಾಡಿದರೆಂಬ ಐತಿಹ್ಯಇದೆ.ತದನಂತರ 29 ಮೇ 1967 ನೇ ಇಸವಿಯಲ್ಲಿ ಕದ್ರಿ ಯೋಗೀಶ್ವರ ಮಠದ ಅಂದಿನ ಪೀಠಾಧಿಪತಿಗಳಾಗಿದ್ದ ಶ್ರೀ.ಶ್ರೀ ಶ್ರೀ ಶಾಂತಿನಾಥ್ ಜಿ ಅವರು ಇಲ್ಲಿ ಸುಂದರವಾದ ಗುಡಿಯೊಂದನ್ನು ನಿರ್ಮಾಣ ಮಾಡಿದರೆಂದು ದಾಖಲೆಗಳಿಂದ ತಿಳಿಯುತ್ತದೆ.ಇದೀಗ ಸುಮಾರು ಐವತ್ತೇಳು ವರ್ಷಗಳ ನಂತರ ತಾಯಿ ಭದ್ರಕಾಳಿಯನ್ನು ತನ್ನ ಪೂಜೆ ಮಾತ್ರದಿಂದಲೇ ಒಲಿಸಿಕೊಂಡಿರುವ ದೇವಳದ ಪ್ರಧಾನ ಅರ್ಚಕರಾಗಿರುವ ಶ್ರೀ ಉಮೇಶ್ ನಾಥ್ ಜಿ ಅವರು ಬಹು ವರ್ಷಗಳ ತನ್ನ ಕನಸಿನಂತೆ ಸರಿ ಸುಮಾರು 2.5 ಕೋಟಿ ರೂಪಾಯಿಗೂ ಮಿಕ್ಕಿದ ವೆಚ್ಚದಲ್ಲಿ ಭಕ್ತರು ಹಾಗೂ ದಾನಿಗಳ ನೆರವಿನ ಸಹಾಯದಿಂದ ಅದ್ಭುತವಾದ ದೇವಾಲಯ ನಿರ್ಮಾಣ ಮಾಡಿ ಇತಿಹಾಸ ನಿರ್ಮಿಸಿದ್ದಾರೆ.ಶಿರಾ ಎಂಬ ಊರಿನಿಂದ ತರಿಸಿದ ಕಲ್ಲು, ಶುದ್ಧ ತಾಮ್ರ ಹಾಗೂ ಮರಗಳನ್ನು ಬಳಸಿ ದೇವಳದ ಪುನ:ನಿರ್ಮಾಣ ಕಾರ್ಯ ನಡೆದಿದ್ದು,ಕುಡುಪು ಕೃಷ್ಣರಾಜ ತಂತ್ರಿಯವರ ವಾಸ್ತು ವಿನ್ಯಾಸ ಅತ್ಯಂತ ಮನಮೋಹಕವಾಗಿದೆ. ✍️ ಡಾ. ರಾಜೇಶ್ ಕದ್ರಿ

ಪ್ರಾದೇಶಿಕ ವಾರ್ತೆಗಳು

ವಿಶ್ವ ದಾಖಲೆ ನಿರ್ಮಿಸಿದ ಗಂಗಾಧರ್ ಗಾಂಧಿ ಮತ್ತವರ ತಂಡಕ್ಕೆ ಅಭಿನಂದನೆ

ಮಂಗಳೂರು :ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ದಿ ಪ್ರತಿಷ್ಠಾನ (NSCDF) ದಿನಾಂಕ 05-11-2023 ರಂದು ಆಯೋಜಿಸಿದ್ದ ನಿರಂತರ 12 ಗಂಟೆಗಳ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮವು ವಿಶ್ವ ದಾಖಲೆಯನ್ನು ನಿರ್ಮಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವು 23-02-2024 ರಂದು ಮಂಗಳೂರು ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ಚಲನಚಿತ್ರ ಖ್ಯಾತ ಹಾಸ್ಯ ನಟ ಅರವಿಂದ ಬೋಳಾರ್ ಮಾತನಾಡಿ ಮನಃಶಾಂತಿಗಾಗಿ ಹಾಡು ವಿಶ್ವದಾಖಲೆ ನಿರ್ಮಿಸಿದ್ದು ಸಂತಸದ ವಿಚಾರ. ಇವರ ಈ ಸಾಧನೆಯನ್ನು ಮೆಚ್ಚಲೇಬೇಕು. ಇಂತಹ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಬೇಕು ಮತ್ತು ಇವರ ತಂಡಕ್ಕೆ ಎಲ್ಲರೂ ಸಹಕರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ NSCDF ಅಧ್ಯಕ್ಷ ಗಂಗಾಧರ ಗಾಂಧಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ತುಳು ಹಾಸ್ಯ ಚಿತ್ರನಟ ಸತೀಶ್ ಬಂದಲೆ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, NSCDF ಅಂತರಾಷ್ಟ್ರೀಯ ವಕ್ತಾರೆ ಮಮತಾ ರಾವ್, ಪ್ರಧಾನ ಕಾರ್ಯದರ್ಶಿ ದಿನಕರ ಡಿ. ಬಂಗೇರ ಉಪಸ್ಥಿತರಿದ್ದರು. ಅಂದು ವಿಶ್ವ ದಾಖಲೆ ನಿರ್ಮಿಸಿದ ಗಾಯಕರಾದ ಗಂಗಾಧರ್ ಗಾಂಧಿ, ವರ್ಷ ಕರ್ಕೇರ, ಶ್ರೀರಕ್ಷಾ ಸರ್ಪಂಗಳ, ನೇತ್ರ ಖುಷಿ, ರಾಣಿ ಪುಷ್ಪಲತಾ ದೇವಿ ಇವರಿಗೆ ವಿಶ್ವದಾಖಲೆಯ ಪ್ರಮಾಣ ಪತ್ರ ನೀಡಿ ಶಾಲು, ಹಾರ, ತುರಾಯಿ, ಫಲತಾಂಬೂಲದೊಂದಿಗೆ ಸನ್ಮಾನಿಸಲಾಯಿತು. ಮತ್ತು ಅಂದಿನ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಸಹಕರಿಸಿದರವೀಂದ್ರ ಮುನ್ನಿಪಾಡಿ, ಡಾ. ಸುರೇಶ್ ನೆಗಳಗುಳಿ, ಡಾ. ವಾಣಿಶ್ರೀ ಕಾಸರಗೋಡು, ಯು ಆರ್ ಶೆಟ್ಟಿ, ಶಿವಪ್ರಸಾದ್ ಕೊಕ್ಕಡ, ರೇಷ್ಮಾ ಶೆಟ್ಟಿ ಗೋರೂರು, ಆರ್ವಿ ವಿ.ಕೆ, ಗುರುರಾಜ್ ಎಂ.ಆರ್, ರೇಖಾ ಸುದೇಶ್ ರಾವ್ಮಮ್ತಾ ರಾವ್ ಮುಂತಾದವರಿಗೆ ಹಾರ, ಶಾಲು, ನೆನಪಿನ ಕಾಣಿಕೆಯೊಂದಿಗೆ ಧನ್ಯವಾದ ಸಮರ್ಪಿಸಲಾಯಿತು. ಕಾರ್ಯಕ್ರಮವನ್ನು ರಶ್ಮಿ ಸನಿಲ್ ಮತ್ತು ರೇಷ್ಮಾ ಶೆಟ್ಟಿ ಗೋರೂರು ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಮಾಜಿ ಸಚಿವ ಬಿ. ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳದ ವತಿಯಿಂದ ಮಾರ್ಚ್ 2 ರ ಶನಿವಾರದಂದು 13ನೇ ವರ್ಷದ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಬಯಲುಕಂಬಳ (ಬಂಟ್ವಾಳ ಕಂಬಳ).

ಬಂಟ್ವಾಳ: 13ನೇ ವರ್ಷದ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳವು ಬಂಟ್ವಾಳ ತಾಲೂಕು ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಮಾರ್ಚ್ 2ನೇ ಶನಿವಾರ ಬೆಳಿಗ್ಗೆ 8.45ರಿಂದ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರಾದ ಬೆಳ್ಳಿಪ್ಪಾಡಿ ರಮಾನಾಥ ರೈಯವರ ಗೌರವಾಧ್ಯಕ್ಷತೆಯಲ್ಲಿ ನಡೆಯಲಿದೆ.ಅತ್ಯಂತ ಜನಪ್ರಿಯ ಮತ್ತು ಜನಮನ್ನಣೆ ಗಳಿಸಿರುವ ಮೂಡೂರು-ಪಡೂರು ಕಂಬಳವು ತುಳುನಾಡಿನ ಪುರಾತನ ಜಾನಪದ ಕ್ರೀಡಾಲೋಕದಲ್ಲಿ ಹೊಸ ಚರಿತ್ರೆಯನ್ನು ಬರೆದಿದ್ದು, ಗಣ್ಯಾತಿಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾರ್ಚ್ 2ರ ಶನಿವಾರ ಬೆಳಿಗ್ಗೆ 8.45ಕ್ಕೆ ಕರ್ನಾಟಕ ಆರ್ಯ-ಈಡಿಗ ಮಹಾ ಸಂಸ್ಥಾನ ಸೋಲೂರು ಇದರ ಪೀಠಾಧಿಪತಿ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಮತ್ತು ಆಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಮೂಡೂರು-ಪಡೂರು ಕಂಬಳವನ್ನು ಉದ್ಘಾಟಿಸಲಿದ್ದಾರೆ.ಕೆಪಿಸಿಸಿ ಉಪಾಧ್ಯಕ್ಷ ಮತ್ತು ಮಾಜಿ ಸಚಿವರಾಗಿರುವ ಬೆಳ್ಳಿಪ್ಪಾಡಿ ರಮಾನಾಥ ರೈಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವೆಲಂಕಣಿ ಧರ್ಮಕೇಂದ್ರ ಫರ್ಲಾದ ಧರ್ಮಗುರುಗಳಾದ ವಂ| ಜೋನ್ ಪ್ರಕಾಶ್ ಡಿ’ಸೋಜ, ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ನಮ್ಮ ಕುಡ್ಲ ವಾಹಿನಿ ಮುಖ್ಯಸ್ಥ ಲೀಲಾಕ್ಷ ಕರ್ಕೆರ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉದ್ಯಮಿ ರಘುನಾಥ್ ಸೋಮಯಾಜಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಮೇಶ್ ಶೆಟ್ಟಿ ಮಾಣಿಸಾಗು ಮತ್ತು ಲಿಯೋ ಫೆರ್ನಾಂಡಿಸ್ ಸರಪಾಡಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಮಾರ್ಚ್ 2 ರ ಶನಿವಾರ ಸಂಜೆ 7.00ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಿ.ರಮಾನಾಥ ರೈಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್, ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವರ ದಿನೇಶ್ ಗುಂಡೂರಾವ್ ಸಹಿತ ಕರ್ನಾಟಕ ಸರಕಾರದ ಬಹುತೇಕ ಮಂತ್ರಿಗಳು, ರಾಮನಗರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಬಹುಮಾನಗಳ ವಿವರ: ಕನ ಹಲಗೆ 7 1/2 ಕೋಲು ನಿಶಾನಿಗೆ ನೀರು ಹಾಯಿಸಿದ ಕೋಣಗಳಿಗೆ 2 ಪವನ್ ಚಿನ್ನ, ಕನ ಹಲಗೆ 6 1/2 ಕೋಲು ನಿಶಾನಿಗೆ ನೀರು ಹಾಯಿಸಿದ ಕೋಣಗಳಿಗೆ 1 ಪವನ್ ಚಿನ್ನ, ಹಗ್ಗ ಹಿರಿಯ ಪ್ರಥಮ 2 ಪವನ್ ಚಿನ್ನ, ದ್ವಿತೀಯ 1 ಪವನ್ ಚಿನ್ನ, ಹಗ್ಗ ಕಿರಿಯ ಪ್ರಥಮ 1 ಪವನ್, ದ್ವಿತೀಯ 1/2 ಪವನ್. ನೇಗಿಲು ಹಿರಿಯ ಪ್ರಥಮ 2 ಪವನ್, ದ್ವಿತಿಯ 1 ಪವನ್, ನೇಗಿಲು ಕಿರಿಯ ಪ್ರಥಮ 1 ಪವನ್, ದ್ವಿತೀಯ 1/2 ಪವನ್, ಅಡ್ಡಹಲಗೆ ಪ್ರಥಮ 1 ಪವನ್, ದ್ವಿತೀಯ 1/2 ಪವನ್ ಹಾಗೂ ವಿಜೇತರಿಗೆ ಮೂಡೂರು-ಪಡೂರು ಟ್ರೋಫಿ ನೀಡಿ ಗೌರವಿಸಲಾಗುವುದು. ಕಂಬಳದಲ್ಲಿ ಪ್ರಧಾನ ತೀರ್ಪುಗಾರರಾಗಿ ಕೆ. ಗುಣಪಾಲ ಕಡಂಬ, ಅಭ್ಯುದಯ ಶಿರ್ಲಾಲು, ಮುಖ್ಯ ತೀರ್ಪುಗಾರರಾಗಿ ಎಂ. ರಾಜೀವ ಶೆಟ್ಟಿ ಎಡ್ತೂರು, ತೀರ್ಪುಗಾರರ ಸಂಚಾಲಕರಾಗಿ ವಿಜಯ ಕುಮಾರ್ ಕಂಗಿನಮನೆ, ತೀರ್ಪುಗಾರರಾಗಿ ಸುಧಾಕರ ಶೆಟ್ಟಿ ಮೊಗೆರೋಡಿ, ನಿರಂಜನ ರೈ ಮಠಂತಬೆಟ್ಟು ಸತೀಶ್ ಹೊಸ್ಮಾರು, ರವೀಂದ್ರ ಕುಮಾರ್ ಕುಕ್ಕುಂದೂರು, ವಿದ್ಯಾಧರ್ ಜೈನ್ ರೆಂಜಾಳ, ಗಂತಿನ ವೀಕ್ಷಕ ವಿವರಣೆಗಾರರಾಗಿ ಮಹಾವೀರ ಜೈನ್ ಕಜೆ, ಸುದೀಪ್ ಹೆಗ್ಡೆ ಶಿರ್ಲಾಲು, ಪ್ರಕಾಶ್ ಕಜೆಕಾರು, ರಾಜಶೇಖರ್ ಆಜ್ರಿ ನಾವೂರ, ಉಮೇಶ್ ಕರ್ಕೇರ, ಯಶವಂತ ಕಟಪಾಡಿ, ಸುದರ್ಶನ ನಾಯ್ಕ್ ಕಂಪ, ರಾಜೀವ ಕಕ್ಕಪದವು, ವೀಡಿಯೋ ತೀರ್ಪುಗಾರರಾಗಿ ಜಾನ್ ಡಿ’ಸೋಜ ಸರಪಾಡಿ, ಕೋಣಗಳನ್ನು ಬಿಡಿಸುವವರು ಅಪ್ಪು ಯಾನೆ ವಲೇರಿಯನ್ ಡೇಸಾ ಅಲ್ಲಿಪಾದೆ, ಸುಧೀರ್ ಕುಮಾರ್ ಆರಿಗ ಬಂಗಾಡಿ, ಜನಾರ್ಧನ ನಾಯ್ಕ್ ಕರ್ಪೆ, ಅಜಿತ್ ಕುಮಾರ್ ನಾಯ್ಕ್ ಈದು, ವಿಶ್ವನಾಥ ಪ್ರಭು ಶಿರ್ವ, ಬರವಣಿಗೆ ಹಾಗೂ ದಾಖಲಾತಿಗಾರರಾಗಿ ಸಂಕಪ್ಪ ಶೆಟ್ಟಿ ನಗ್ರಿ, ದಿನೇಶ್ ಕಕ್ಕಪದವು, ಲೇಸರ್ ತೀರ್ಪುಗಾರರಾಗಿ ಸ್ಕೈವ್ಯೂ ಕಾರ್ಕಳ, ಗಂತಿನಲ್ಲಿ ಸಹಕಾರರಾಗಿ ವಿನ್ಸೆಂಟ್ ಪಿಂಟೋ ಅಲ್ಲಿಪಾದೆ, ಅಖಿಲೇಶ್ ಶೆಟ್ಟಿ ಕೂರ್ಯಾಳ, ರೋಹಿತ್‌ನಾಥ್ ಕೋರಿಂಜ, ಉಮೇಶ್ ಜಕ್ರಿಬೆಟ್ಟು, ಮುತ್ತಪ್ಪ ನೆಕ್ಕಿಲಾರು, ಅರುಣ್‌ಕುಮಾರ್ ಕೋರಿಂಜ, ವಾಲ್ಟಾರ್ ರೋಡ್ರಿಗಸ್ ಪೊನ್ನಂಗಿಲ ಮೊದಲಾದವರು ಭಾಗವಹಿಸಲಿದ್ದಾರೆ. ಸ್ಪರ್ಧಾ ಕೋಣಗಳು ಕರೆಗೆ ಇಳಿಯುವ ಸಮಯ ನೇಗಿಲು ಕಿರಿಯ 9 ಗಂಟೆಗೆ, ನೇಗಿಲು ಹಿರಿಯ 11 ಗಂಟೆಗೆ, ಹಗ್ಗ ಹಿರಿಯ ಮತ್ತು ಕಿರಿಯ ಮಧ್ಯಾಹ್ನ 3.30ಕ್ಕೆ, ಕನ ಹಲಗೆ ಮತ್ತು ಅಡ್ಡ ಹಲಗೆ ಸಂಜೆ 5 ಗಂಟೆ ಆಗಿರುತ್ತದೆ. ಜಿಲ್ಲಾ ಕಂಬಳ ಸಮಿತಿಯ ಸೂಚನೆಯಂತೆ 24 ಗಂಟೆಯೊಳಗೆ ಸ್ಪರ್ಧೆ ಮುಗಿಯಬೇಕಾಗಿರುವುದ್ದರಿಂದ ಕೋಣಗಳ ಯಜಮಾನರು ಸಹಕರಿಸಬೇಕಾಗಿ ವಿನಂತಿ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಕೋಣಗಳ ಯಜಮಾನರು ಕೋಣಗಳ ಜೊತೆಗೆ ಆಗಮಿಸಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಬಿ. ರಮಾನಾಥ ರೈ, ಅಧ್ಯಕ್ಷರಾದ ಪಿಯೂಸ್ ಎಲ್. ರೊಡ್ರಿಗಸ್, ಸಂಚಾಲಕರಾದ ಬಿ. ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮತ್ತು ಕಂಬಳ ಸಮಿತಿಯ ಸರ್ವ ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ. ಕಂಬಳ ಸಮಿತಿಯಲ್ಲಿ ರಾಜೀವ ಶೆಟ್ಟಿ ಎಡ್ತೂರು (ಪ್ರಧಾನ ಕಾರ್ಯದರ್ಶಿ), ಪಿಲಿಫ್ ಫ್ರೆಂಕ್ (ಕೋಶಾಧಿಕಾರಿ), ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಎಂ.ಎಸ್. ಮೊಹಮ್ಮದ್, ಅನಿಲ್ ಮೆನೇಜಸ್ ಮೊದಲಾದವರು ಉಪಾಧ್ಯಕ್ಷರುಗಳಾಗಿರುತ್ತಾರೆ. ಮೂಡೂರು – ಪಡೂರು ಕಂಬಳಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಂಬಳವನ್ನು ಚಂದಗಾಣಿಸಿಕೊಡಬೇಕೆಂದು ಕಂಬಳ ಸಮಿತಿ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ಪ್ರಾದೇಶಿಕ ವಾರ್ತೆಗಳು

ರಾಜ್ಯ ಪ್ರಶಸ್ತಿ ವಿಜೇತ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಚಿತ್ರಕಥೆ, ನಿರ್ದೇಶನದ ಕನ್ನಡ ಸಿನೆಮಾ ‘ಪುರುಷೋತ್ತಮನ ಪ್ರಸಂಗ’ ಮಾರ್ಚ್ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು : ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ.ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ಪುರುಷೋತ್ತಮನ ಪ್ರಸಂಗ ಸಿನಿಮಾ ಮಾರ್ಚ್ 1 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತ ಬಜಪೆ, ಮುರನಗರ, ಕೆಂಜಾರ್ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು, ದುಬಾಯಿಯಲ್ಲಿ 7 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು, ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ. ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗ ರಿಷಿಕಾ ನಾಯ್ಕ ಮತ್ತು ದೀಪಿಕಾ ಎಂಬವರನ್ನು ದೇವದಾಸ್ ಕಾಪಿಕಾಡ್ ಕನ್ನಡಕ್ಕೆ ಪರಿಚಯಿಸಿದ್ದಾರೆ. ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ. ಚಿತ್ರಗಳು: ಸತೀಶ್ ಕಾಪಿಕಾಡ್ ಕನ್ನಡದಲ್ಲಿ ನಟನಾಗಿ ಗುರುತಿಸಿ ಹೆಸರು ಗಳಿಸಿರುವ ದೇವದಾಸ್ ಕಾಪಿಕಾಡ್ ಮೊದಲನೇ ಬಾರಿಗೆ ಕನ್ನಡದಲ್ಲಿ ಕತೆ ಚಿತ್ರಕತೆ ಸಾಹಿತ್ಯ ಸಂಭಾಷಣೆ ಬರೆದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಅಲ್ಲದೆ ಒಂದು ಪ್ರಮುಖ ಪಾತ್ರದಲ್ಲೂ ಅವರು ಕಾಣಿಸಿ ಕೊಂಡಿದ್ದಾರೆ. ಇವರಿಗೆ ನಿರ್ದೇಶನದಲ್ಲಿ ಅರ್ಜುನ್ ಕಾಪಿಕಾಡ್ ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ.ನಿರ್ಮಾಪಕರು: ವಿ. ರವಿ ಕುಮಾರ್.ತಾರಾಗಣದಲ್ಲಿ ಅಜಯ್ ನಾಯಕ ನಟ,ರಿಷಿಕಾ ನಾಯ್ಕ್ (ನಾಯಕಿ) ದೀಪಿಕಾ (ನಾಯಕಿ) ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸಾಯಿಕೃಷ್ಣ ಕುಡ್ಲ, ಶೋಭರಾಜ್ ಪಾವೂರು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ, ಜ್ಯೋತಿಷ್ ಶೆಟ್ಟಿ, ಶಿವ ಪ್ರಕಾಶ್ ಪೂಂಜ ಹರೇಕಳ, ರೂಪಾ ವರ್ಕಾಡಿ ಹಾಗೂ ಇತರರು ಇದ್ದಾರೆ.ತಾಂತ್ರಿಕ ವರ್ಗ, ಸಹ ನಿರ್ದೇಶನ: ಅರ್ಜುನ್ ಕಾಪಿಕಾಡ್ ,ಸಹಾಯಕ ನಿರ್ದೇಶನ: ಅರ್ಜುನ್ ಕಜೆ, ಪ್ರಶಾಂತ್ ಕಲ್ಲಡ್ಕ, ವಿಕ್ರಮ್ ದೇವಾಡಿಗ,ಅನೂಪ್ ಸಾಗರ್, ಕ್ಯಾಮರಾ -ವಿಷ್ಣು, ಸಹಾಯ: ಪುಟ್ಟ, ಸಂಗೀತ -ನಕುಲ್ ಅಭಯಂಕರ್, ವಸ್ತ್ರವಿನ್ಯಾಸ – ಶರತ್ ಪೂಜಾರಿ,ಸಹ ನಿರ್ಮಾಪಕರು- ಅಬೂಬಕರ್ ಪುತ್ತಕ, ಲೈನ್ ಪ್ರೊಡ್ಯುಸರ್ – ಸಂದೀಪ್ ಶೆಟ್ಟಿ, ಪ್ರೊಡಕ್ಷನ್ ಟೀಮ್ – ಸಂತೋಷ್,ರಮಾನಂದ, ಮುನ್ನ, ರಾಜೇಶ್.ಮಾರ್ಚ್ 1 ರಂದು “ಪುರುಷೋತ್ತಮನ ಪ್ರಸಂಗ” ಹಾಸ್ಯ ಪ್ರಧಾನ ಸಿನಿಮಾ ತೆರೆಗೆ ಬರಲಿದೆ. ದೇವದಾಸ್ ಕಾಪಿಕಾಡ್ ಅವರು ಪತ್ರಿಕಾಗೋಷ್ಟಿಯಲ್ಲಿ ಪುರುಷೋತ್ತಮನ ಪ್ರಸಂಗ ಕನ್ನಡ ಚಿತ್ರದ ಬಗ್ಗೆ ವಿವರ ನೀಡಿದರು. ಚಿತ್ರದ ನಿರ್ಮಾಪಕ ವಿ. ರವಿ ಕುಮಾರ್,ಸಂಶುದ್ದೀನ್, ಸಹ ನಿರ್ದೇಶಕ ಅರ್ಜುನ್ ಕಾಪಿಕಾಡ್, ನಾಯಕ ನಟ ಅಜಯ್, ನಾಯಕಿ ನಟಿ ದೀಪಿಕಾ ದಿನೇಶ್ ಮೊದಲಾದವರು ಉಪಸ್ಥಿತರಿದ್ದು ಸಿನೆಮಾದ ಬಗ್ಗೆ ಮಾತಾಡಿದರು. ಈ ಸಿನೆಮಾವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್ ಗೆ ಬಂದು ನೋಡುವುದರ ಮೂಲಕ ಕನ್ನಡ ಚಿತ್ರವನ್ನು ಪ್ರೋತ್ಸಾಹಿಸಬೇಕೆಂದು ದೇವದಾಸ್ ಕಾಪಿಕಾಡ್ ಮತ್ತು ಚಿತ್ರ ತಂಡ ವಿನಂತಿಸಿದೆ.

ಕರಾವಳಿ ಸುದ್ದಿ, ಪ್ರಾದೇಶಿಕ ವಾರ್ತೆಗಳು

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪಮೂಡ,ಬಂಟ್ವಾಳ ತಾಲೂಕು ಇಲ್ಲಿ ಫೆ.25 ಮತ್ತು ಫೆ.27 ರಂದು ಅಗೇಲು ಸೇವೆ ಇರುವುದಿಲ್ಲ.

ಪಣೋಲಿಬೈಲ್ : ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾoಬಾ ಕ್ಷೇತ್ರ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ದಿನಾಂಕ 25-02-2024 ನೇ ಆದಿತ್ಯವಾರ ಮತ್ತು 27-02-2024 ನೇ ಮಂಗಳವಾರದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲವೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮ ಕಲಶ ಮಹೋತ್ಸವ ಮತ್ತು ವರ್ಷಾವಧಿ ಮಹೋತ್ಸವ.

ಮಂಗಳೂರು : ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ದಲ್ಲಿ ಫೆ.13ರಂದು ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿ-ವಿಧಾನಗಳು ನಡೆದವು. ಪ್ರಾತಃಕಾಲ ಪುಣ್ಯಾಹ, ಶ್ರೀದೇವರ ಪ್ರತಿಷ್ಠಾ ಕಲಶ, ಪ್ರಧಾನ ಹೋಮ, ಶಿಖರಪ್ರತಿಷ್ಠಾಂಗ ಶಿಖರ ಕಲಶ ಪ್ರತಿಷ್ಠಾ ಕಲಶಾಭಿಷೇಕ, ಗೋಪೂಜಾ ಪೂರ್ವಕ ಶ್ರೀ ಮಾರಿಯಮ್ಮ ದೇವರ ಪುನರ್ ಪ್ರತಿಷ್ಠೆ ಪಂಚಾಮೃತಾಪೂರ್ವಕ ಕಲಶಾಭಿಷೇಕ, ಪಂಚಬ್ರಹ್ಮ ಮಹಾಮಂತ್ರ ಹೋಮ, ಶ್ರೀ ಮಹಾಗಣಪತಿ ದೇವರಿಗೆ, ಶ್ರೀ ಸುಬ್ರಹ್ಮಣ್ಯ ದೇವರಿಗೆ, ಶ್ರೀ ನಾಗ ದೇವರಿಗೆ ವಿಶೇಷ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ 4.30 ರಿಂದ ಸಾಮೂಹಿಕ ಕುಂಕು ಮಾರ್ಚನೆ, ಸಂಜೆ 5ರಿಂದ ಲಲಿತಸಹಸ್ರನಾಮ ಹೋಮ, ಶ್ರೀ ಕ್ಷೇತ್ರ ದೈವಗಳಿಗೆ ಸಾನಿಧ್ಯ, ಕಲಶಾಭಿಷೇಕಗಳು, ಪರ್ವಗಳು, ಮಹಾಪೂಜೆ ಜರಗಿದವು. ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ವಿವಿಧ ಭಜನ ತಂಡಗಳಿAದ ಭಜನೆ, ಮಧ್ಯಾಹ್ನ ಗಾನ ಮಾಧುರ್ಯ, ಸಂಜೆ ಧಾರ್ಮಿಕ ಸಭೆ, ಸಂಜೆ ಬಳಿಕ ಗ್ರಾಮ ಸಭೆಯ ಮಹಿಳಾ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ, ನೃತ್ಯ ವೈಭವ, ‘ಶಿವದೂತೆ ಗುಳಿಗೆ’ ತುಳು ನಾಟಕ ನಡೆದವು. ಫೆ.14 ರಂದು ಬೆಳಗ್ಗೆ 7.30ರಿಂದ ಪುಣ್ಯಾಹ, ನವಶಕ್ತಿ ಹೋಮ, ತತ್ವಕಲಶಪ್ರತಿಷ್ಠಾ ತತ್ವಹೋಮ, ಶ್ರೀ ದೇವಿಗೆ ತತ್ವಕಲಶಾಭಿಷೇಕ, ಮಹಾಪೂಜೆ, ಬ್ರಹ್ಮಕಲಶ ಮಂಡಲ ರಚನೆ, ಬೆಳಗ್ಗೆ 11 ರಿಂದ ಭಜನಾ ಕಾರ್ಯಕ್ರಮ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, 1 ಗಂಟೆಯಿಂದ 3 ರ ವರೆಗೆ ಮೇಘನಾ ಸಾಲಿಗ್ರಾಮ ಅವರಿಂದ ಸ್ಯಾಕ್ಸೊಫೋನ್ ಪ್ಯೂಷನ್, ಸಂಜೆ 4.30 ರಿಂದ 5.30ರ ವರೆಗೆ ಸಾಮೂಹಿಕ ಕುಂಕುಮಾರ್ಚನೆ, 5ರಿಂದ ಬ್ರಹ್ಮಕಲಶ ಮಂಡಲ ಪೂಜಾ, ಕಲಶಾಧಿವಾಸಗಳು, 5.30 ರಿಂದ 6.30ರ ವರೆಗೆ ಧಾರ್ಮಿಕ ಸಭೆ, 6.30 ರಿಂದ 7.30ರ ವರೆಗೆ ವೀಣಾ ವಾದನ, 7.30ರಿಂದ 9ರ ವರೆಗೆ ನ್ಯಾಟ್ಯ ನಿಲಯ ಉಳ್ಳಾಲದಿಂದ ನೃತ್ಯ ವೈಭವ, ರಾತ್ರಿ 7.39ಕ್ಕೆ ಮಹಾಪೂಜೆ, 9 ರಿಂದ 10ರ ವರೆಗೆ ಮಹಿಳಾ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ, 10 ರಿಂದ ತುಳು ನಾಟಕ ಜರಗಿತು. ಮಂಗಳೂರು ನಗರದ ಬೋಳೂರು ಗ್ರಾಮದಲ್ಲಿ ನೆಲೆ ನಿಂತ ಪುರಾಣ ಪ್ರಸಿದ್ದ ಉರ್ವ ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಭಕ್ತಿ ಸಡಗರದ ಪವಿತ್ರ ಕಾರ್ಯವಾದ ಬ್ರಹ್ಮಕಲಶೋತ್ಸವ ಸಡಗರವನ್ನು ಸಹಸ್ರಾರು ಭಕ್ತ ಸಮೂಹವು ಕಣ್ತುಂಬಿಕೊಂಡು ಕೃತಾರ್ಥರಾದರು. ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಅಪರೂಪದ ಹಾಗೂ ದಿವ್ಯ ಅನುಭೂತಿ ಕಲ್ಪಿಸುವ ಉರ್ವದ ಮಹಾಮಾತೆಯ ಬ್ರಹ್ಮಕಲಶ ಸಡಗರವನ್ನು ಕಣ್ಣು ತುಂಬಿಕೊಂಡು ಸಂಭ್ರಮಿಸಿದರು. ಫೆ. 11ರಿಂದ ಮೊದಲ್ಗೊಂಡು ಫೆ.15ರ ಗುರುವಾರದವರೆಗೆ ಕ್ಷೇತ್ರದ ನವೀಕರಿಸಲಾದ ಗರ್ಭಗೃಹದಲ್ಲಿ ಬ್ರಹ್ಮಶ್ರೀ ಕೋಡಿಕಲ್ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವೈದಿಕ ವಿಧಿ-ವಿಧಾನಗಳು ನಡೆದು ಧಾರ್ಮಿಕ, ಸಾಂಸ್ಕೃತಿಕ ಕಾರ್ಯ ಕ್ರಮಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು. ಮೊಗವೀರ ಬಂಧುಗಳ ಪ್ರಧಾನ ಆರಾಧನ ಕ್ಷೇತ್ರವಾದ ಉರ್ವ ಶ್ರೀ ಮಾರಿಯಮ್ಮ ಸನ್ನಿಧಿಯಲ್ಲಿ ನಡೆದ ಬ್ರಹ್ಮಕಲಶ ಸಂಭ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಗುರುವಾರ ಸಹಿತ ಇತರ ದಿನಗಳಲ್ಲಿಯೂ ಭಕ್ತರು ಸೇರಿದ್ದರು. ಪವಿತ್ರ ರತ್ನ ದರ್ಭೆ, ಅಕ್ಷತೆ, ತುಳಸಿ ಸಹಿತ ಪ್ರಧಾನ ಸುವಸ್ತುಗಳ ಜತೆಗೆ ಬ್ರಹ್ಮಕಲಶೋತ್ಸವದ ವಿಧಿವಿಧಾನಗಳು ಗುರುವಾರ ನೆರವೇರಿದವು. ಮುಂಜಾನೆಯಿಂದ ಮಧ್ಯಾಹ್ನದವರೆಗೆ ನಡೆದ ಧಾರ್ಮಿಕ ಕಾರ್ಯಕಲಾಪಗಳು ನೆರವೇರಿತು.ಮಧ್ಯಾಹ್ನ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಗಿರೀಶ್ ರೈ ಕಕ್ಕೆಪದವು ಅವರ ಭಾಗವತಿಕೆಯಲ್ಲಿ ಯಕ್ಷಗಾನ ವೈಭವ, ಸಂಜೆ ಸುಮಂಗಲೆಯರಿಸಿದ ಸಾಮೂಹಿಕ ಕುಂಕುಮಾರ್ಚನೆ, ಕಲಾಸಿಂಧು ಕಲಾವತಿ ದಯಾನಂದ ಬಳಗದಿಂದ ಸಂಗೀತ ಸಂಜೆ ನಡೆಯಿತು. ಬ್ರಹ್ಮಕಲಶೋತ್ಸವ ದಿನವಾದ ಗುರುವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ 12ಕ್ಕೆ ಮಹಾಪೂಜೆ, ಪಲ್ಲಪೂಜೆ ನಡೆಯಿತು. ಬಳಿಕ ಅನ್ನಪ್ರಸಾದ ವಿತರಣೆ ಆರಂಭವಾಗಿ ರಾತ್ರಿಯವರೆಗೂ ಮುಂದುವರಿಯಿತು. ಸಂಜೆ 7.30ಕ್ಕೆ ಶ್ರೀ ದೇವಿಗೆ ಸಾಮೂಹಿಕ ಮಹಾರಂಗಪೂಜೆ, ಮಹಾಪೂಜೆ, ದರ್ಶನ ಬಲಿ ಪೂಜೆ, ರಥೋತ್ಸವ ನಡೆಯಿತು. ಬೋಳೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ನಂತರ ಮಾರಿಯಮ್ಮ ದೇವರ ಪುನರ್ ಪ್ರತಿಷ್ಠೆ ನಡೆಯಿತು. ಫೆ. 23ನೇ ಶುಕ್ರವಾರ ಶ್ರೀ ಚಂಡಿಕಾಯಾಗ ಮತ್ತು ಮಹಾ ಅನ್ನಸಂತರ್ಪಣೆ ನಡೆಯಲಿದೆ.ಫೆ. 26ನೇ ಸೋಮವಾರ ಮತ್ತು ಫೆ. 27ನೇ ಮಂಗಳವಾರದAದು ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಸಹಿತ ವರ್ಷಾವಧಿ ಮಹಾಪೂಜೆ ನಡೆಯಲಿದೆ. ಮಾರ್ಚ್ 2ನೇ ಶನಿವಾರ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವವು ವಿಜೃಂಭಣೆಯಿAದ ಜರಗಲಿದೆ.ಭಕ್ತಾಧಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಮಾರಿಯಮ್ಮ ದೇವರ ಮತ್ತು ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.

ಪ್ರಾದೇಶಿಕ ವಾರ್ತೆಗಳು

ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರ್ಪಡೆಯಾಗಲಿ : ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಮನವಿ

ಮಂಗಳೂರು : ಮನರಂಜನೆ ಜತೆಗೆ ವಿಸ್ಮಯ ಮೂಡಿಸುವ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ಕೇಂದ್ರದ ನಾಟಕ ಅಕಾಡೆಮಿ ಪಟ್ಟಿಯಲ್ಲಿ ಜಾದೂವಿಗೆ ಸ್ಥಾನ ನೀಡಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಜಾದೂ ಸೇರ್ಪಡೆಯಾಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಎಂದು ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ವಿನಂತಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿಯಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ‘ಸಂಗೀತ, ನೃತ್ಯ, ಯಕ್ಷಗಾನದಂತೆ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ನಶಿಸಿ ಹೋಗುತ್ತಿರುವ ಈ ಕಲೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ನೀನಾಸಂ, ರಂಗಾಯಣ ಮಾದರಿಯ ತರಬೇತಿ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದರು. ಜಾದೂವನ್ನು ಇತರ ಕಲೆಗಳಂತೆ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಒಟ್ಟಾಗಿ ಕಲಿಸಲು ಸಾಧ್ಯವಿಲ್ಲ. ಜಾದೂ ಕಲಿಯುವ ವಿದ್ಯಾರ್ಥಿಯಲ್ಲಿ ಮೆದುಳು ಮತ್ತು ಕೈಚಳಕದ ಜತೆಗೆ ಸಮರ್ಪಣಾ ಮನೋಭಾವ ಅಗತ್ಯ.ಜಾದೂ ಕಲೆ ಸಿದ್ಧಿಸಿಕೊಳ್ಳಬೇಕೆಂದರೆ ಕನಿಷ್ಠ ಆರೇಳು ವರ್ಷಗಳ ಅಭ್ಯಾಸದ ಅಗತ್ಯವಿದೆ. ಈ ನಿಟ್ಟಿನಲ್ಲಿ ತರಬೇತಿ ನೀಡುವ, ಕಾಲೇಜು ತೆರೆಯುವ ಆಶಯವೂ ಇದೆ . ವೃತ್ತಿಪರತೆಗಿಂತಲೂ ಹವ್ಯಾಸಿ ಕಲೆಯಾಗಿ ಉಳಿದಿರುವ ಜಾದೂವನ್ನು ನವರಸ ಪೂರ್ಣ ಭಾವದೊಂದಿಗೆ, ರಂಗಭೂಮಿಯ ಕಲೆಯಾಗಿ ಬೆಳೆಸಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು. 1998ರಿಂದ ತುಳುನಾಡಿನ ದೈವರಾಧಾನೆಯನ್ನು ಬಿಂಬಿಸುವ ಜಾದೂವನ್ನು ಪ್ರಸ್ತುತ ಪಡಿಸಿದ ಪರಿಣಾಮ ನಮ್ಮ ವಿಸ್ಮಯ ತಂಡ ಇದು ವಿಶ್ವವಿಖ್ಯಾತಿಯಾಗಲು ಸಾಧ್ಯವಾಗಿದೆ. ನಮ್ಮ ಮಣ್ಣಿನ ಜನಪದ ಸ್ಪರ್ಶವನ್ನು ಜಾದೂವಿನ ತಂತ್ರಗಾರಿಕೆಯ ಜತೆ ಬೆಸೆದಾಗ ವೀಕ್ಷಕನ ಭಾವನೆಗಳನ್ನು ತಟ್ಟಲು ಸಾಧ್ಯವಾಗುತ್ತದೆ. ಜಾದೂ ಕೂಡಾ ಸಾಮಾಜಿಕ ಕಳಕಳಿಯೊಂದಿಗೆ ಬೆರೆತಾಗ ಹೃದಯವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಕುದ್ರೋಳಿ ಗಣೇಶ್ ಹೇಳಿದರು.ನಮ್ಮ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯಕ್ರಮ ಸಂಯೋಜಕ ಆತ್ಮಭೂಷಣ ಭಟ್ ಉಪಸ್ಥಿತರಿದ್ದರು. ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ. ಭಟ್ ಕಾರ್ಯಕ್ರಮ ನಿರೂಪಿಸಿದರು. ಓದಿನ ಹವ್ಯಾಸ ಜಾದೂ ಕಲೆಗೆ ಪ್ರೇರಣೆ 8ನೆ ತರಗತಿಯಿಂದಲೇ ಪುಸ್ತಕ ಓದುವ ಹುಚ್ಚು ಸಣ್ಣ ಪುಟ್ಟ ಮ್ಯಾಜಿಕ್‌ಗಳ ಬಗ್ಗೆ ಆಸಕ್ತಿ ಬೆಳೆಸಿತು. ದ್ವಿತೀಯ ಪಿಯುಸಿಯಲ್ಲಿ ಇರುವಾರ ಓದಿದ ಮ್ಯಾಜಿಕ್ ಫೋರ್ ದಿ ಬಿಗಿನರ್ಸ್ ಎಂಬ ಪುಸ್ತಕ ಓದಿನ ಜಾದೂವಿನ ಆಸಕ್ತಿಯನ್ನು ಇಮ್ಮಡಿಸಿತು. ಬಳಿಕ ಹವ್ಯಾಸಿ ಜಾದೂಗಾರರಾಗಿದ್ದ ಪ್ರದೀಪ್ ಅವರು ನನ್ನ ಗುರುವಾದರು. ಅವರು ಜಾದೂ ತಂತ್ರಗಾರಿಕೆಯನ್ನು ನನಗೆ ಹೇಳಿಕೊಟ್ಟಿದ್ದಲ್ಲದೆ, ಹಲವು ಪರಿಕರಗಳನ್ನೂ ನೀಡಿದರು. ಪದವಿ ಬಳಿಕ ಮುಂಗಾರು ಪತ್ರಿಕೆಯಲ್ಲಿ ಸುಮಾರು 3 ವರ್ಷಗಳ ಕಾಲ ಉಪಸಂಪಾದಕನಾಗಿದ್ದ ಸಂದರ್ಭ ಓದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರಿಂದ ಜಾದೂವಿನ ನನ್ನ ಆಸಕ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯವಾಯಿತು ಎಂದು ಕುದ್ರೋಳಿ ಗಣೇಶ್ ಹೇಳಿದರು.

ಪ್ರಾದೇಶಿಕ ವಾರ್ತೆಗಳು

Dr. Sudhakar shetty pune delivered a lecture on How to diagnose malnutrition & importance to treat malnutrition in tulunadu.

Odiyoor:Dr. Sudhakar shetty famous children specialist pune – moodubedri has lecture on ” HOW TO DIAGNOSE MALNUTRITION & IMPORTANCE TO TREAT MALNUTRITION IN TULUNAAD” on the occasion of Tulunaad jaatre & Rathaotsava at Shreekshetra Odiyoor on 19.2 .2024 at 11am in the presence of Odiyoor Shree Gurudeva & Guru Maatha.Present on the occasion are Nalin Kumar Kateel(MP),Shashidar Shetty Baroda,Viraar Shankar Shetty & many other dignitaries. Detail about Dr SUDHAKAR shetty Child specialist. pune/moodabidri.He is practising in pune since 36 years .he has his own child clinic in pune by the name of BABYFRIEND CLINIC.he is also attached to Pune police hospital, State RESERVE police force hospital, red cross society & professor at bharathividyapeet UNIVERSITY. Dr. Sudhakar shetty has received several awards for service in childcare & outstanding service during g covid pandemic. He has helped more than 1500 kanadigas during covid pandemic by treating them & giving covid vaccination.AWARDS1..RAKSHA MANTRI AWARD was given to his team2.certificate of excellence from pune cantonment board3.dakshina kannada Zilla rRAJYOTHSAVA AWARD 20224.CHAAR SAHIBZAADE award.

ಪ್ರಾದೇಶಿಕ ವಾರ್ತೆಗಳು

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ**ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

ಮಂಗಳೂರು: ರಾಜ್ಯದ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದವರು ಎನ್ನುತ್ತಾರೆ, ಅದು ನಿಜ ಎಂದಾದಲ್ಲಿ ನೀವು ಬಂಟರ ಸಮ್ಮೇಳನದಲ್ಲಿ ನೀಡಿದ ಭರವಸೆಯಂತೆ ಬಂಟರ ನಿಗಮ ಸ್ಥಾಪಿಸಿ ನುಡಿದಂತೆ ನಡೆಯಿರಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟರ ಸಂಘಕ್ಕೆ ಇದುವರೆಗೆ ಯಾವ ಸರಕಾರದಿಂದಲೂ ಸಹಕಾರ ಸಿಕ್ಕಿಲ್ಲ. ಬಂಟ ಸಮುದಾಯ ನೋಡಲು ಬಲಿಷ್ಠ ಸಮಾಜ. ಆದರೆ ನಮ್ಮಲ್ಲೂ ಶೇ50ಕ್ಕಿಂತ ಅಧಿಕ ಕಡುಬಡವರಿದ್ದಾರೆ. ದೊಡ್ಡವರಿಗೆ ಸಮುದಾಯದಲ್ಲಿ ಕಷ್ಟದಲ್ಲಿರುವವರ ಬಗ್ಗೆ ಗೊತ್ತಿಲ್ಲ. ಆದರೆ ನಮಗೆ ಗೊತ್ತಿದೆ. ಜಾಗತಿಕ ಬಂಟರ ಸಂಘಕ್ಕೆ ಯಾವುದೇ ಆದಾಯವಿಲ್ಲ. ಇತರರಲ್ಲಿ ಹಣ ಸಂಗ್ರಹಿಸಿ ಸಹಾಯ ಮಾಡುತ್ತಿದ್ದೇವೆ. ಈ ಕಾರಣದಿಂದ ನಮಗೂ ನಿಗಮ, ಮೀಸಲಾತಿ ಬೇಕು ಎಂದು ತಿಳಿಸಿದರು. ನಮಗೆ ಬಿಜೆಪಿ, ಕಾಂಗ್ರೆಸ್ ಎಲ್ಲವೂ ಸಮಾನ. ಬಂಟ ಜನಪ್ರತಿನಿಧಿಗಳು ರಾಜಕೀಯವಾಗಿ ಹೇಳಿಕೆ ನೀಡುವ ಬದಲು ನಿಮಗೂ ಜವಾಬ್ದಾರಿ ಇದೆ. ಅವರು ನಮ್ಮ ಬೇಡಿಕೆ ಈಡೇರಿಸಲು ಯಾವ ರೀತಿ ಸ್ಪಂದಿಸಿದ್ದೀರಿ ಎನ್ನುವ ಮಾಹಿತಿಯಿಲ್ಲ. ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ನಳಿನ್ ಕುಮಾರ್ ಕಟೀಲ್ ಅವರನ್ನು ಮೂರ್ನಾಲ್ಕು ಬಾರಿ ಭೇಟಿ ಮಾಡಿ ನಿಗಮಕ್ಕಾಗಿ ಮನವಿ ಸಲ್ಲಿಸಿದ್ದೆವು. ಕಾಂಗ್ರೆಸ್ ಸರಕಾರ ಬಂದ ಬಳಿಕ ರಮಾನಾಥ ರೈ, ಮಂಜುನಾಥ ಭಂಡಾರಿ, ಅಶೋಕ್ ರೈ, ಮಿಥುನ್ ರೈ ಸಹಿತ ಇತರರನ್ನು ಭೇಟಿಯಾಗಿ ಮಾಡಿ ಮನವಿ ಮಾಡಿದ್ದೇವೆ. ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದರೂ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾವನೆ ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಹರೀಶ್ ಶೆಟ್ಟಿ ತಿಳಿಸಿದರು.ಕಳೆದ ವರ್ಷ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನ ಉದ್ಘಾಟಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂಪಾಯಿಗಳನ್ನು ಮೀಸಲಿರಿಸುದಾಗಿ ಘೋಷಿಸಿದ್ದರೂ ಅವರೇ ಮಂಡಿಸಿದ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿಗೆ ಯಾವುದೇ ಅನುದಾನ, ಅಭಿವೃದ್ಧಿ ನಿಗಮಕ್ಕೆ ಅವಕಾಶ ನೀಡದೆ ಬಂಟ ಸಮುದಾಯವನ್ನು ನಿರ್ಲಕ್ಷ್ಯ ಮಾಡಲಾಗಿದೆ. ಈ ವಿಚಾರದಲ್ಲಿ ಬಂಟ ಶಾಸಕರೂ ದ್ವನಿ ಎತ್ತಲಿಲ್ಲ ಎಂದು ಖೇದ ವ್ಯಕ್ತಪಡಿಸಿದ ಹರೀಶ್ ಶೆಟ್ಟಿ, ನಿಗಮ ಸ್ಥಾಪನೆಗಾಗಿ ಸರಕಾರಕ್ಕೆ ಡೆಡ್‌ಲೈನ್ ಕೊಡುವುದಿಲ್ಲ. ಸರಕಾರ ಬಂದು ವರ್ಷ ಮಾತ್ರ ಆಗಿದೆ. ಚುನಾವಣೆಗೆ ಮೊದಲು ಇನ್ನೊಮ್ಮೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇವೆ ಎಂದು ಮುಂದಿನ ನಡೆಯ ಬಗ್ಗೆ ತಿಳಿಸಿದರು.ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆಕಾರ್ಯದರ್ಶಿ ಚಂದ್ರಹಾಸ ಡಿ.ಶೆಟ್ಟಿ, ಮಾಧ್ಯಮ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

Scroll to Top