ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಜುಲೈ 5ರಂದು ಕಂಕನಾಡಿ ಎಂಪೋರಿಯಂ ಕಾಂಪ್ಲೆಕ್ಸ್ ನಲ್ಲಿ ಲಯನ್ ಅನಿಲ್ ದಾಸ್ ಸಾರಥ್ಯದ ಅಂತಾರಾಷ್ಟ್ರೀಯ ಖ್ಯಾತಿಯ ಪ್ರತಿಷ್ಟಿತ ಮತ್ತು ಅಪಾರ ಜನ ಮೆಚ್ಚುಗೆ ಪಡೆದಿರುವ ಜಿಲ್ಲೆಯ ಹೆಸರಾಂತ ಸೇವಾ ಸಂಸ್ಥೆ ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಕೇರ್ ಇದರ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ

ಮಂಗಳೂರು: ರಾಜ್ಯದಾದ್ಯoತ ಸಹಸ್ರಾರು ಮಂದಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಮಂಗಳೂರಿನ ಹೆಸರಾಂತ ನಿಸ್ವಾರ್ಥ ಸಮಾಜ ಸೇವಾ ಮನೋಭಾವದ ಉದ್ಯಮಿ ಲಯನ್ ಅನಿಲ್ ದಾಸ್ ಸಾರಥ್ಯದ ಅಂತಾರಾಷ್ಟ್ರೀಯ ಖ್ಯಾತಿಯ ಪ್ರತಿಷ್ಟಿತ ಮತ್ತು ಅಪಾರ ಜನ ಮೆಚ್ಚುಗೆ ಪಡೆದಿರುವ ಸೇವಾ ಸಂಸ್ಥೆ ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಕೇರ್ ಇದರ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನೆಯು ಜು. 5ರಂದು ಬೆಳಿಗ್ಗೆ 11-30ಕ್ಕೆ ಕಂಕನಾಡಿಯ ಎಂಪೋರಿಯಂ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಕಟೀಲಿನ ಕಮಲಾದೇವಿ ಪ್ರಸಾದ್ ಅಸ್ರಣ್ಣರು ದೀಪ ಪ್ರಜ್ವಲನೆ ಮಾಡಲಿದ್ದು,ಎಂಪಿ ಕ್ಯಾ. ಬ್ರಿಜೇಶ್ ಚೌಟ ಅವರು ನಾಮಫಲಕ ಅನಾವರಣ ಮಾಡಲಿದ್ದಾರೆ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ನವೀಕೃತ ಕೇಂದ್ರ ಕಚೇರಿಯ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಡೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಕು. ಧನಲಕ್ಷ್ಮೀ ಅವರಿಗೆ ಸನ್ಮಾನ ಕಾರ್ಯಕ್ರಮವಿದ್ದು, ಹಿತೈಷಿಗಳು ಹಾಗೂ ಸಂಸ್ಥೆಯ ಅಭಿಮಾನಿಗಳು ಸಮಾರಂಭದಲ್ಲಿ ಭಾಗವಹಿಸುವಂತೆ ದಾಸ್ ಪ್ರಮೋಷನ್ಸ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಲ. ಅನಿಲ್‌ದಾಸ್ ಹಾಗೂ ಶ್ರೀಮತಿ ಆಶಾಲತಾ ದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ನಮಗೆ ಯಾವುದೇ ರಾಜಕೀಯ ಪಕ್ಷವಿಲ್ಲ. ಸಹಕಾರಿ ಪಕ್ಷವೇ ನಮ್ಮ ಪಕ್ಷ. ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಒಮ್ಮತದಿಂದ ಕೈ ಜೋಡಿಸಬೇಕು: ಮಂಗಳೂರು ಎಸ್ ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ವಿಶೇಷ ಸಹಕಾರ ಸಪ್ತಾಹ ಉದ್ಘಾಟಿಸಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕರೆ.

ಮಂಗಳೂರು: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶೇಷ ಸಹಕಾರ ಸಪ್ತಾಹಕ್ಕೆ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, “ನಮಗೆ ರಾಜಕೀಯ ಪಕ್ಷವಿಲ್ಲ, ಸಹಕಾರಿ ಪಕ್ಷವೇ ನಮ್ಮ ಪಕ್ಷ. ರಾಜ್ಯದಲ್ಲಿ 47 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಬಡವರು ಹಾಗೂ ಸಾಮಾನ್ಯ ಜನರ ಅಭಿವೃದ್ಧಿಗೆ ಸಹಕಾರಿ ಬ್ಯಾಂಕ್‌ಗಳ ಕೊಡುಗೆ ಅಪಾರ. ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಡಿ. ಕಾಮತ್, “ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸಹಕಾರಿ ಚಳುವಳಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. 2047ರ ಶಕ್ತಿಶಾಲಿ ಭಾರತದ ನಿರ್ಮಾಣಕ್ಕೆ ಕೇಂದ್ರ ಸಹಕಾರ ಸಚಿವಾಲಯದ ಯೋಜನೆಗಳು ಪೂರಕವಾಗಲಿವೆ” ಎಂದರು. ಜೊತೆಗೆ, ಡಾ. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸಹಕಾರಿ ಸಂಘಗಳ ಪಾತ್ರ ಶ್ಲಾಘನೀಯ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ರವಿರಾಜ್ ಹೆಗ್ಡೆ, ಜಯಕರ ಶೆಟ್ಟಿ ಬಿ. ಇಂದ್ರಾಳಿ, ಹೆಚ್.ಎನ್. ರಮೇಶ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ವಿ. ಹಿರೇಮರ್, ವಿನಯ್ ಕುಮಾರ್ ಸೂರಿಂಜೆ, ಗೋಪಾಲಕೃಷ್ಣ ಭಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಶಶಿಕುಮಾರ್ ರೈ ಬಾಲೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಪ್ರಾದೇಶಿಕ ವಾರ್ತೆಗಳು

ಜುಲೈ 1ರಂದು ದ.ಕ.ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜುಲೈ 1ರಂದು ಬೆಳಗ್ಗೆ 11ಕ್ಕೆ ನಗರದಪತ್ರಿಕಾ ಭವನದಲ್ಲಿ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್, ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ.ಕರಿಕಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ನ್ಯೂಸ್ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಡಂಗಾಯ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಹಾಗೂ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

114 ವರ್ಷಗಳ ಎಂಸಿಸಿ ಬ್ಯಾಂಕ್‌ನಿಂದ ರೂ.1,535 ಕೋಟಿ ವ್ಯವಹಾರ; ದೇರಳಕಟ್ಟೆ, ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ

ಮಂಗಳೂರು: 114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ ಗಮನಾರ್ಹ ಸಾಧನೆ ದಾಖಲಿಸಿದ್ದು, ಒಟ್ಟು ವ್ಯವಹಾರ ವಹಿವಾಟು ರೂ.1,535 ಕೋಟಿಗೆ ತಲುಪಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ನಗರದ ಹಂಪನಕಟ್ಟೆಯಲ್ಲಿರುವ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕ್ 22.89 ಶೇಕಡಾ ಬೆಳವಣಿಗೆ ಸಾಧಿಸಿದ್ದು, ನಿವ್ವಳ ಮೌಲ್ಯವು ರೂ.83.76 ಕೋಟಿಯಿಂದ ರೂ.91.80 ಕೋಟಿಗೆ ಏರಿಕೆಯಾಗಿದೆ ಎಂದು ಹೇಳಿದರು. ಎನ್‌ಆರ್‌ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಗೆ ಪ್ರಮುಖ ಕಾರಣವಾಗಿದ್ದು, ಬ್ಯಾಂಕ್‌ನ ಕಾರ್ಯವ್ಯಾಪ್ತಿ ಈಗ ಸಂಪೂರ್ಣ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲಾಗಿದೆ. ಸಂಪೂರ್ಣ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್, ಖಾಸಗಿ ಹಾಗೂ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸಮಾನವಾದ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತಿದೆ ಎಂದರು. 2018ರಲ್ಲಿ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್ ಗಣನೀಯ ಪ್ರಗತಿ ಸಾಧಿಸಿದೆ. ಠೇವಣಿಗಳು ರೂ.304 ಕೋಟಿಯಿಂದ ರೂ.876 ಕೋಟಿಗೆ ಏರಿಕೆಯಾಗಿದ್ದು, ಸಾಲ ಮತ್ತು ಮುಂಗಡಗಳು ರೂ.191 ಕೋಟಿಯಿಂದ ರೂ.657 ಕೋಟಿಗೆ ಹೆಚ್ಚಳಗೊಂಡಿವೆ. ವ್ಯವಹಾರ ವಹಿವಾಟು ರೂ.496 ಕೋಟಿಯಿಂದ ರೂ.1,535 ಕೋಟಿಗೆ ತಲುಪಿ 209 ಶೇಕಡಾ ಬೆಳವಣಿಗೆ ದಾಖಲಿಸಿದೆ ಎಂದು ವಿವರಿಸಿದರು. ಬ್ಯಾಂಕ್‌ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಜೂನ್ 28ರಂದು ಹಾಗೂ 23ನೇ ಶಾಖೆಯನ್ನು ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟಿಸಲಾಗುವುದು ಎಂದು ಅವರು ಘೋಷಿಸಿದರು. ದೇರಳಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸಲಿದ್ದು, ಪಾನೀರ್ ಅವರ್ ಲೇಡಿ ಆಫ್ ಮರ್ಸಿ ಚರ್ಚ್‌ನ ಧರ್ಮಗುರು ವಂ. ವಿಕ್ಟರ್ ಡಿಮೆಲ್ಲೊ ಆಶೀರ್ವಚನ ನೀಡಲಿದ್ದಾರೆ. ಆರ್ಸುಲೈನ್ ಫ್ರಾನ್ಸಿಸ್ಕನ್ ಸಭೆಯ ಸುಪೀರಿಯರ್ ಜನರಲ್ ಸಿಸ್ಟರ್ ಮಿಲ್ಲಿ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅದೇ ದಿನ ದೇರಳಕಟ್ಟೆಯಲ್ಲಿ ಬ್ಯಾಂಕ್‌ನ 16ನೇ ಎಟಿಎಂ ಸೇವೆಯನ್ನೂ ಉದ್ಘಾಟಿಸಲಾಗುವುದು. ಅಲ್ಲದೆ ಮೊರ್ಗನ್ಸ್‌ಗೇಟ್ ಶಾಖೆಯನ್ನು ಜುಲೈ 25ರಂದು, ಮೂಡಬಿದಿರೆ ಶಾಖೆಯನ್ನು ಆಗಸ್ಟ್ 22ರಂದು ಸ್ಥಳಾಂತರಿಸಲಾಗುತ್ತಿದ್ದು, ಕಾರ್ಕಳ ಶಾಖೆಯನ್ನು ಆಗಸ್ಟ್ 26ರಂದು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಮಾಹಿತಿ ನೀಡಿದರು. ಎಂಸಿಸಿ ಬ್ಯಾಂಕ್ ಶಿಕ್ಷಣ ಸಾಲ, ಎಂಎಸ್‌ಎಂಇ ಸಾಲ, ವಾಹನ ಸಾಲ, ಗೃಹ ಸಾಲ, ಮನೆ ದುರಸ್ತಿ ಸಾಲ ಸೇರಿದಂತೆ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತಿದ್ದು, ಯಾವುದೇ ಪ್ರೊಸೆಸಿಂಗ್ ಶುಲ್ಕವಿಲ್ಲದೆ ಚಿನ್ನದ ಸಾಲ, ಉಚಿತ ಎಟಿಎಂ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ನೀಡುತ್ತಿದೆ. ಬ್ಯಾಂಕಿನ ಠೇವಣಿಗಳು ಡಿಐಸಿಜಿಸಿ ವಿಮಾ ರಕ್ಷಣೆಯ ಅಡಿಯಲ್ಲಿ ಸುರಕ್ಷಿತವಾಗಿವೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕರಾದ ಆ್ಯಂಡ್ರೂ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರಧಾನ ವ್ಯವಸ್ಥಾಪಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇರಿದಂತೆ ಇತರ ಸಂಘ ಸಂಸ್ಥೆ ಗಳ ಸಹಯೋಗದಲ್ಲಿ ವಾಮದಪದವಿನ ಬಸ್ತಿಕೋಡಿಯಲ್ಲಿ 2076ನೇ ಮದ್ಯವರ್ಜನಾ ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ

ಬಂಟ್ವಾಳ -ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ಸಹಯೋಗದಲ್ಲಿ ನಡೆಯುತ್ತಿರುವ 2076ನೇ ಮದ್ಯವರ್ಜನ ಶಿಬಿರದ ಆರೋಗ್ಯ ತಪಾಸಣೆಯನ್ನು ಪದ್ಮಾವತಿ ಸಭಾಭವನ, ಬಸ್ತಿ ಕೋಡಿ ವಾಮದಪದವುನಲ್ಲಿ ನಡೆಸಲಾಯಿತು   ಡಾ, ಉಮೇಶ್ ಅಡ್ಯಂತಾಯ,ವೈದ್ಯಾಧಿಕಾರಿ ಸಮುದಾಯ ಆರೋಗ್ಯ ಕೇಂದ್ರ ವಾಮದಪದವು,ಡಾ. ರಾಮಕೃಷ್ಣ ಭಟ್,ಖ್ಯಾತ ವೈದ್ಯರು ಇರುವತ್ತೂರು ಇವರುಗಳು ಶಿಬಿರಾರ್ಥಿಗಳೆಲ್ಲರ ಆರೋಗ್ಯ ತಪಾಸಣೆ ನಡೆಸಿ ಯೋಗ ಕ್ಷೇಮವನ್ನು ವಿಚಾರಿಸಿದರು    ಈ ಸಂದರ್ಭದಲ್ಲಿ ಶಿಬಿರದ ಯೋಜನಾಧಿಕಾರಿಗಳಾದ ಗಣೇಶ್ ಅವರು ಬಂಟ್ವಾಳ ತಾಲೂಕು ಯೋಜನಾಧಿಕಾರಿಗಳಾದಜಯಾನಂದ್ ರವರು ಶಿಬಿರ ಅಧಿಕಾರಿ  ರಮೇಶ್,ಆರೋಗ್ಯ ಸಹಾಯಕಿ ಶ್ರೀಮತಿ ಜಯಲಕ್ಷ್ಮಿ ರವರುಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ರೆಡ್‌ಕ್ರಾಸ್‌ನಿಂದ ರಕ್ತದಾನಿಗಳಿಗೆ ಸನ್ಮಾನ *’ರಕ್ತದಾನ ಮಾನವೀಯತೆಯ ಅತ್ಯುನ್ನತ ಸಂಕೇತ’ ಶಾಸಕ ವೇದವ್ಯಾಸ ಕಾಮತ್ ಅಭಿಮತ

ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಶನಿವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ” ರಕ್ತಕ್ಕೆ ಯಾವುದೇ ಜಾತಿ, ಧರ್ಮದ ಭೇದವಿಲ್ಲ. ರಕ್ತದಾನ ಮಾನವೀಯತೆಯ ಅತ್ಯುನ್ನತ ಸಂಕೇತವಾಗಿದೆ. ಯುವ ಪೀಳಿಗೆ ರಕ್ತದಾನವನ್ನು ಜೀವನದ ಒಂದು ಮುಖ್ಯ ಸಂಕಲ್ಪವಾಗಿ ಮಾಡಿಕೊಂಡರೆ ಅಮೂಲ್ಯ ಜೀವಗಳನ್ನು ಉಳಿಸಬಹುದು’ ಎಂದರು.ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಶಿವಪ್ರಕಾಶ್.ಡಿ.ಎಸ್., ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್.ಎಂ.ಆರ್. ಮುಖ್ಯ ಅತಿಥಿಗಳಾಗಿಭಾಗವಹಿಸಿದ್ದರು.ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹತ್ತು ಮತ್ತು ಅದಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ಜಿಲ್ಲೆಯ ೧೧ ಮಂದಿ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ರಕ್ತದಾನ ಶಿಬಿರಗಳನ್ನು ಆಯೋಜಿಸಿದ ಜಿಲ್ಲೆಯ ೧೩ ಸಂಸ್ಥೆಗಳ ಪ್ರತಿನಿಧಿಗಳನ್ನು ಇದೇ ಸಂದರ್ಭ ಗೌರವಿಸಲಾಯಿತು.ಖಜಾಂಜಿ ಗುರುದತ್ .ಎಂ. ನಾಯಕ್, ನಿರ್ದೇಶಕ ರಾಘವೇಂದ್ರ ರಾವ್, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ.ಸುಕೇಶ್ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸೊಸೈಟಿಯ ರಕ್ತದಾನ ಉಪ ಸಮಿತಿ ನಿರ್ದೇಶಕ ಪುಷ್ಪರಾಜ್ ಜೈನ್ ಸ್ವಾಗತಿಸಿ, ನಿರ್ದೇಶಕ ಪಿ.ಬಿ.ಹರೀಶ್ ರೈ ವಂದಿಸಿದರು. ನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಕ್ತದಾನಿಗಳಿಗೆ ಸನ್ಮಾನ:ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ನಾರಾಯಣ ಕುಂಪಲ (೫೩ ಬಾರಿ), ದೇವಿಪ್ರಸಾದ್ ರಾವ್.ಎ.ಕೊಟ್ಟಾರ(೪೬), ಮಹಮ್ಮದ್ ಮುಸ್ತಾಫ ಬೊಳಂತೂರು (೩೬),ಎ.ನಿರಂಜನ್, ಕೆಎಸ್‌ಆರ್‌ಪಿ, ಕೊಣಾಜೆ (೩೨), ಫ್ಲಾನ್ಸಿ ಸುವಾರಿಸ್ ಪುತ್ತೂರು(೨೭), ಗಣೇಶ್ ನಾಯಕ್ ಡೊಂಗರಕೇರಿ (೨೫), ಅಭಿಷೇಕ್.ಎಚ್.ಎಸ್. (೨೦), ಮಹಮ್ಮದ್ಅನ್ಸಾರ್ ಬೊಳಂತೂರು (೧೯), ರಾನ್ಸನ್ ಸ್ಟೀಫನ್ ಕ್ರಾಸ್ತಾ ವಾಮದಪದವು (೧೮), ಅಬ್ದುಲ್ ಮಲಿಕ್.ಕೆ.ಎಚ್.(೧೧) ಮತ್ತು ಸುಧೀರ್ ರಂಜನ್.ಕೆ. (೧೦ ಬಾರಿ) ಇವರುಗಳನ್ನು ಸನ್ಮಾನಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

St Joseph’s University, Block B, Bangalore *Student and Parent Orientation Programme 2026–27

The Student and Parent Orientation Programme for the academic year 2026–27, marking the inaugural academic year of St. Joseph’s University – Block B, was conducted on 19 and 20 June 2026 at the University Auditorium. The programme was organized for the newly admitted students and parents of the B.Com, B.A. (Economics, Journalism and Psychology), BCA, and BBA programmes. The orientation aimed to familiarize students and their parents with the University’s academic framework, examination regulations, mentoring system, student support services, code of conduct, and the various opportunities available for holistic growth and development. It also provided an overview of the academic and administrative processes that students would encounter during their university journey. The Chief Guest, Dr. Ashwini N. V., Director of Muktha Foundation, addressed the parents and emphasized the significance personal growth, and mental well-being in shaping responsible and successful individuals. Her insightful interaction with parents highlighted the importance of a supportive partnership between families and educational institutions. The programme also featured informative sessions by University officials, Rev. Dr Victor Lobo SJ, Vice Chancellor, Dr Christo Selvan, Pro-VC, Dr Wajeed, Registrar, Prof Dr. Godwin, COE and others. They introduced various academic, administrative, and student-support initiatives of the University. These sessions provided clarity regarding institutional expectations and available resources, enabling students to begin their academic journey with confidence. The orientation programme was coordinated by Dr. Sara Kutty and Ms. Parul Batra. The event served as an important platform for strengthening collaboration between the University and parents, while helping students transition smoothly into university life and become active members of the St. Joseph’s University community.

ಪ್ರಾದೇಶಿಕ ವಾರ್ತೆಗಳು

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ. *ನಿರಂತರ ಪ್ರಯತ್ನದಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

ಬೆಳ್ತಂಗಡಿ, ಜೂ.26: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ ಸಂಶೋಧನಾತ್ಮಕ ಅಭ್ಯಾಸ ಅತ್ಯಗತ್ಯವಾಗಿದೆ ಎಂದು ಯುವ ಲೆಕ್ಕ ಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಅಭಿಪ್ರಾಯ ಪಟ್ಟರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಸಿಎ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜೂ.25 ರಂದು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲರೂ ಸಿಎ ಪರೀಕ್ಷೆ ಅತ್ಯಂತ ಕ್ಲಿಷ್ಟಕರ ಎಂಬ ಮಾತು ಹೇಳುತ್ತಾರೆ. ಆದರೆ ನಾನು ಕಂಡುಕೊಂಡಂತೆ ಸಿಎ ಪರೀಕ್ಷೆ ಕುರಿತು ಸುಧೀರ್ಘ ತಯಾರಿ ನಡೆಸಿದಲ್ಲಿ ಭವಿಷ್ಯದಲ್ಲಿ ನೀವು ಅಂದುಕೊಂಡ ಹಾದಿ ಸುಗಮವಾಗಿಸಬಹುದು. ಈ ನೆಲೆಯಲ್ಲಿ ನಮ್ಮ ಸುತ್ತಮುತ್ತ ಸೂಕ್ತ ಮನಸ್ಥಿತಿ, ಸಮರ್ಪಕ ಸಿದ್ಧತೆ ಹಾಗೂ ಸರಿಯಾದ ವ್ಯಕ್ತಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಸಾಧನೆ ವೇದಿಕೆ ಕಲ್ಪಿಸುವಲ್ಲಿ ವಿದ್ವತ್ ಎಲ್ಲ ರೀತಿಯ ಶೈಕ್ಷಣಿಕ ಉತ್ತೇಜನವನ್ನು ನೀಡುತ್ತಿದೆ. ಅದನ್ನು ಸದ್ಭಳಸಿಕೊಳ್ಳುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಅವಕಾಶಗಳು ನಮ್ಮನ್ನು ಅರಸಿ ಬರುವುದಿಲ್ಲ, ಅವುಗಳನ್ನು ಅರಸಿ ನಾವುಗಳು ಅದಕ್ಕೆ ತಕ್ಕ ಪೂರ್ವತಯಾರಿ ನಡೆಸಬೇಕು ಎಂದು ಸಲಹೆ ನೀಡಿದರು. ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಇ.ಎಂ. ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಆಪ್ತ ಸಮಾಲೋಚನೆ ನಡೆಸುವ ಮಾಡೆಲ್ ಕಾಲೇಜು ದ.ಕ. ಜಿಲ್ಲೆಯಲ್ಲಿ ಇದ್ದರೆ ಅದು ವಿದ್ವತ್ ಪಿಯು ಕಾಲೇಜು ಮಾತ್ರ. ಪ್ರತಿಯೊಬ್ಬರು ತಮ್ಮದೇ ಕಾರ್ಯಪ್ರವೃತ್ತಿಯಲ್ಲಿ ತಲ್ಲೀನರಾಗಿರುತ್ತಾರೆ. ಆದರೆ ವಿಚಾರ, ವಿಷಯಗಳು ಬೇರೆಯಾಗಿರುತ್ತವೆಯಷ್ಟೆ. ಕೆಟ್ಟ ಹವ್ಯಾಸಗಳತ್ತ ಆಕರ್ಷಣೆಗೊಳ್ಳದೆ, ಧನಾತ್ಮಕ ವಿಚಾರಗಳತ್ತ ಆಕರ್ಷಿತರಾದರೆ ನಿರೀಕ್ಷಾ ನಾವರ ಅವರಂತೆ ನೀವು ಸಾಧನೆ ಮಾಡಿ ನಿಮ್ಮ ಊರಿಗೆ, ದೇಶಕ್ಕೆ, ಹೆತ್ತವರಿಗೆ ಹೆಸರು ತರುವಿರಿ ಎಂದು ಕಿವಿಮಾತು ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ರೈ, ಟ್ರಸ್ಟಿ ಕಾಶಿನಾಥ್ ಎಂ.ಕೆ., ಆಡಳಿತಾಧಿಕಾರಿ ಅಶೋಕ್ ಶೆಟ್ಟಿ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಹಾಗೂ ಕಾರ್ಯಕ್ರಮ ಸಂಯೋಜಕಿ ಡಾ.ಮಹಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಪಂದನ್ ಶೆಟ್ಟಿ ಸ್ವಾಗತಿಸಿದರು. ಮೈಲಾರ್ ಕಾಳಿಂಗೇಶ್ವರ್ ಚಿಳ್ಳಾಲೆ ಅತಿಥಿ ಪರಿಚಯ ಮಾಡಿದರು. ಬುವಿ ಎಸ್.ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಮನೋಶಕ್ತಿಯೇ ಸಾಧನೆಯ ಸಿದ್ಧಹಾದಿ !:ಇಂದಿನ ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ಧರಿರುವುದಿಲ್ಲ. ಸವಾಲನ್ನು ಸ್ವೀಕರಿಸಲು ಸಿದ್ಧರಿಲ್ಲದವರು ನಿಮ್ಮ ಕನಸು ಸಾಕಾರಗೊಳಿಸಲು ಸಾಧ್ಯವಾಗುವುದಿಲ್ಲ.ಜೀವನದಲ್ಲಿ ಯಾವುದೂ ಸುಲಭವಿಲ್ಲ, ಅದೇ ರೀತಿ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ ಎಂದಿಲ್ಲ. ಎಲ್ಲವನ್ನೂ ಸರಿಹಾದಿಗೆ ತರಬೇಕಾಗಿರುವುದು ನಮ್ಮ ಮನೋಶಕ್ತಿ. ಪ್ರತಿಯೊಬ್ಬರ ಸಾಮರ್ಥ್ಯ ಒಂದೇ ಆಗಿರುವುದಿಲ್ಲ, ಎಲ್ಲವೂ ಭಿನ್ನವಾಗಿರುತ್ತದೆ. ಇದು ನಿಮ್ಮ ಆಯ್ಕೆಯಾಗಿದೆ, ನಿಮ್ಮದೇ ಕನಸಾಗಿದೆ. ನನಸು ಮಾಡುವವರೆಗೆ ವಿರಮಿಸದಿರಿ.-ನಿರೀಕ್ಷಾ ನಾವರ, ಲೆಕ್ಕಪರಿಶೋಧಕಿ (ಸಿಎ)

ಪ್ರಾದೇಶಿಕ ವಾರ್ತೆಗಳು

ಡಿ.20ರಂದು ಉಡುಪಿಯಲ್ಲಿ ದೇವಾಡಿಗ ಮಹಾಧಿವೇಶನ-2026: ಪೂರ್ವಭಾವಿ ಸಭೆ *ದೇವಾಡಿಗ ಮಹಾಧಿವೇಶನದಿಂದ ಭೌಗೋಳಿಕ ಅಸ್ತಿತ್ವ ಸಾಧ್ಯ: ಧರ್ಮಪಾಲ್ ಯು. ದೇವಾಡಿಗ

ಮುಂಬಯಿ: ಒಗ್ಗಟ್ಟು ಮತ್ತು ಜಾಗೃತಿಯಿಂದ ಸಮುದಾಯದ ಇಂತಹ ಅಧಿವೇಶನದಿಂದ ಭೌಗೋಳಿಕವಾಗಿ ಹಂಚಿ ಹೋಗಿರುವ ಸಮುದಾಯ ಬಾಂಧವರನ್ನು ಒಂದೇ ಸೂರಿನಡಿ ತರಲು ಸಾಧ್ಯವಿದೆ. ನಮ್ಮಲ್ಲಿನ ಹಕ್ಕುಗಳು ಮತ್ತು ಅಸ್ತಿತ್ವದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಹತ್ತರ ಬದಲಾವಣೆಗೆ ಪೂರಕವಾಗುತ್ತವೆ. ತಳಮಟ್ಟದಿಂದಲೇ ಸಭೆಗಳನ್ನು ನಡೆಸಿ ಸಂಘಟನೆ ಬಲಪಡಿಸುವುದರಿಂದ ಸಮುದಾಯದ ಕಟ್ಟಕಡೆಯ ವ್ಯಕ್ತಿಯೂ ಧ್ವನಿಯಾಗುತ್ತಾನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಲು ಮಹಾಧಿವೇಶನಗಳಿಂದ ಸಾಧ್ಯವಾಗುತ್ತದೆ. ಆ ಮೂಲಕ ತಳಮಟ್ಟದ ಸಶಕ್ತೀಕರಣದಿಂದ ಸಮುದಾಯ ಅಧಿವೇಶನದ ಅಗತ್ಯತೆ ಮತ್ತು ಇದರಿಂದ ಆಗುವ ಪ್ರಯೋಜನಕ್ಕೆ ದೇವಾಡಿಗರೆಲ್ಲರ ಸಹಕಾರ ಅತ್ಯಾವಶ್ಯ ಎಂದು ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ್ ಯು. ದೇವಾಡಿಗ ತಿಳಿಸಿದರು. ಡಿ. 20ರಂದು ಉಡುಪಿಯಲ್ಲಿ ಆಯೋಜಿಸಲಾಗಿರುವ ದೇವಾಡಿಗ ಮಹಾಧಿವೇಶನ-2026 ಇದರ ಪೂರ್ವಭಾವಿ ಸಭೆಯು ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಇದರ ಸಭಾಂಗಣದಲ್ಲಿ ಜೂ. 21ರಂದು ನಡೆದಿದ್ದು ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಧರ್ಮಪಾಲ ದೇವಾಡಿಗ ಅವರು, ಅಧಿವೇಶನಗಳ ಮೂಲಕ ಮಹಿಳೆಯರಿಗೆ ಮತ್ತು ಯುವಕರಿಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸೂಕ್ತ ವೇದಿಕೆ ದೊರೆಯಲಿದೆ. ಯುವಶಕ್ತಿ ಸಮುದಾಯ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ. ಮಾತ್ರವಲ್ಲದೆ ಸ್ವಸಮುದಾಯದ ಸಾಂಸ್ಕøತಿಕ ಮತ್ತು ಸಾಮಾಜಿಕ ಗುರುತು, ವಿಶಿಷ್ಟ ಸಂಸ್ಕøತಿ, ಆಚಾರ-ವಿಚಾರ ಹಾಗೂ ಪರಂಪರೆಯನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೆ ಅದನ್ನು ಹಸ್ತಾಂತರಿಸಲು ಇಂತಹ ಮಹಾಸಭೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.ದೇವಾಡಿಗ ಸಂಘ ಮುಂಬಯಿ ಇದರ ಅಧ್ಯಕ್ಷ ರವಿ ಎಸ್. ದೇವಾಡಿಗ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಜನಾರ್ದನ ಪಡುಪಣಂಬೂರು ಮಾತನಾಡಿ, ಸಂಘಟನೆ ದೃಢವಾಗಿ ಕೆಲಸ ಮಾಡಲು ವಿವಿಧ ಉಪಸಮಿತಿಗಳನ್ನು ರಚಿಸಬೇಕಾದ ಅಗತ್ಯತೆಯನ್ನು ತಿಳಿಸಿದರು. ಉಡುಪಿ ನಗರಸಭೆ ಮಾಜಿ ಸದಸ್ಯ ವಿಜಯ ಕೊಡವೂರು ಮಾತನಾಡಿ ಗ್ರಾಮ ಸಭೆಗಳನ್ನು ರಚಿಸಿ ತಳಮಟ್ಟದಿಂದಲೇ ಸಂಘಟನೆ ಬಲಪಡಿಸುವ ಬಗ್ಗೆ ವಿವರಿಸಿ ಎಲ್ಲರ ಸಹಕಾರ ಬಯಸಿದರು.ದೇವಾಡಿಗ ಸಂಘ ಪಾವಂಜೆ ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ವಿಜಯಲಕ್ಷ್ಮೀ ಜನಾರ್ಧನ್ ಹಾಗೂ ಉಡುಪಿ ಉದ್ಯಾವರ, ಕಟಪಾಡಿ, ಕಾಪು, ಉಚ್ಚಿಲ, ಪಡುಬಿದ್ರೆ, ಎರ್ಮಾಳು, ಎಲ್ಲೂರು, ಬೆಳ್ಮಣ್, ಬಂಟಕಲ್ಲು, ಪಲಿಮಾರು, ಹೆಜಮಾಡಿ, ಮೂಲ್ಕಿ, ಪಾವಂಜೆ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದರು. ದೇವಾಡಿಗ ಸಂಘ ಪಾವಂಜೆ ಅಧ್ಯಕ್ಷ ಅಣ್ಣಪ್ಪ ದೇವಾಡಿಗ ಪಕ್ಷಿಕೆರೆ, ದೇವಾಡಿಗ ಸಂಘ ಉಡುಪಿ ಅಧ್ಯಕ್ಷ ರತ್ನಾಕರ್ ಜಿ.ಎಸ್., ದೇವಾಡಿಗ ಸಂಘ ಮಂಗಳೂರು ಅಧ್ಯಕ್ಷ ಅಶೋಕ್ ಮೊಯಿಲಿ ಹಾಗೂ ಉಪಸ್ಥಿತ ಸಂಘದ ಅಧ್ಯಕ್ಷರುಗಳು ತಮ್ಮ ತಮ್ಮ ಅನಿಸಿಕೆಗಳನ್ನು ಮಂಡಿಸಿದರು.ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಜಯಶ್ರೀ ಯಾದವ್ ಅವರ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭವಾಯಿತು. ಶ್ರೀ ಏಕನಾಥೇಶ್ವರಿ ದೇವಸ್ಥಾನ ಬಾರ್ಕೂರು ಇದರ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷ ಯಾದವ ದೇವಾಡಿಗ ಸ್ವಾಗತಿಸಿದರು. ಸಭೆಯಲ್ಲಿ ದೇವಾಡಿಗ ಸಮಾಜ ಸೇವಾ ಸಂಗ ಪಾವಂಜೆ ಪರವಾಗಿ ಧರ್ಮಪಾಲ್ ಯು. ದೇವಾಡಿಗ ಇವರನ್ನು ಗೌರವಿಸಲಾಯಿತು. ವಿಶ್ವ ದೇವಾಡಿಗ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ದೇವಾಡಿಗ ಅಂಬಲಪಾಡಿ ಪ್ರಸ್ತಾವನೆಗೈದರು. ಸಂಘದ ನಿಕಟಪೂರ್ವ ಅಧ್ಯಕ್ಷ ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರ್ವಹಿಸಿದರು. ಪಾವಂಜೆ ಸಂಘದ ಉಪಾಧ್ಯಕ್ಷ ಸತೀಶ್ ಇಂದಿರಾನಗರ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

*ಕೊರೋನಾ ವೇಳೆ ಮಾಸ್ಕ್ ಧರಿಸದೆ ಮಳಿಗೆ ಪ್ರವೇಶಿಸಿದ ಪ್ರಕರಣ *ಡಾ. ಕಕ್ಕಿಲ್ಲಾಯ ವಿರುದ್ಧದ ಆರೋಪ ಪಟ್ಟಿ ರದ್ದುಪಡಿಸಿದ ಉಚ್ಚನ್ಯಾಯಾಲಯ

ಮಂಗಳೂರು: ಕೊರೋನಾ ಸಾಂಕ್ರಾಮಿಕದ ಸಂದರ್ಭ ಮಳಿಗೆಯೊಂದಕ್ಕೆ ಮಾಸ್ಕ್ ಧರಿಸದೆ ಪ್ರವೇಶಿಸಿದ ಆರೋಪದಲ್ಲಿ ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರ ವಿರುದ್ಧ ದಾಖಲಿಸಲಾಗಿದ್ದ ಆರೋಪಪಟ್ಟಿಗಳನ್ನು ರದ್ದುಪಡಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶಿಸಿದೆ.2021ರ ಮೇ 18ರಂದು ನಗರದ ಮಳಿಗೆಯೊಂದಕ್ಕೆ ಡಾ. ಶ್ರೀನಿವಾಸ ಕ್ಕಕಿಲ್ಲಾಯರು ಭೇಟಿ ನೀಡಿದ್ದ ವೇಳೆ ಮಾಸ್ಕ್ ಧರಿಸಿಲ್ಲ ಎಂದು ಆರೋಪಿಸಿ, ಅವರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಮಂಗಳೂರಿನ 6ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, 2021ರ ಜೂ. 18ರಂದು ಈ ಪ್ರಕರಣ ಕರ್ನಾಟಕ ಉಚ್ಚ ನ್ಯಾಯಾಯಲಯ ಆರೋಪ ಪಟ್ಟಿಗಳನ್ನು ರದ್ದುಪಡಿಸಿ ಆದೇಶಿಸಿದೆ. ತನ್ನ ಮೇಲೆ ಹೊರಿಸಲಾಗಿದ್ದ ಮೊಕದ್ದಮೆಯನ್ನು ರದ್ದುಪಡಿಸುವಂತೆ ಕೋರಿ ಡಾ. ಶ್ರೀನಿವಾಸ ಕಕ್ಕಿಲ್ಲಾಯ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ 2021ರ ಆ. 3ರಂದು ಸಲ್ಲಿಸಿದ್ದ ರಿಟ್ ಅರ್ಜಿಯ ಮೇಲೆ ನ್ಯಾಯಮೂರ್ತಿ ನಟರಾಜನ್‍ರ ನ್ಯಾಯಪೀಠವು 2021ರ ಆ. 31ರಂದು ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ನಂತರ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಹಾಗೂ ಆರ್. ನಟರಾಜ್ ಅವರ ನ್ಯಾಯಪೀಠಕ್ಕೆ ಈ ತಡೆಯಾಜ್ಞೆಯನ್ನು ವಿಸ್ತರಿಸಲಾಗಿತ್ತು. ಇದೀಗ ನ್ಯಾಯಮೂರ್ತಿ ರವಿ ಹೊಸಮನಿ ಅವರ ನ್ಯಾಯಪೀಠವು ಈ ಮೊಕದ್ದಮೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಅಂತಿಮ ಆದೇಶವನ್ನು ನೀಡಿದೆ.ಹೆಚ್ಚೆಂದರೆ 200ರೂ. ದಂಡವನ್ನಷ್ಟೇ ವಿಧಿಸಬಹುದಾದ ಈ ಪ್ರಕರಣವನ್ನು ನ್ಯಾಯಾಂಗದ ವಿಚಾರಣೆಗೊಳಪಡಿಸಲು ಅಥವಾ ಶಿಕ್ಷಿಸಲು ಕಾನೂನಿನಲ್ಲಿ ಅವಕಾಶಗಳೇ ಇಲ್ಲ. ಮಾತ್ರವಲ್ಲ, ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅಡಿಯಲ್ಲಿ ಕೊರೋನಾ ಸಾಂಕ್ರಾಮಿಕದ ವಾದವನ್ನು ಮಾನ್ಯ ಉಚ್ಚನ್ಯಾಯಾಲಯವು ಪುರಸ್ಕರಿಸಿದೆ. ಪ್ರತಿವಾದಿಗಳಾಗಿದ್ದ ಮೂಲ ದೂರುದಾರರಾಗಲಿ, ಸರಕಾರವಾಗಲಿ ಯಾವುದೇ ಪ್ರತಿವಾದಗಳನ್ನು ಸಲ್ಲಿಸಲಿಲ್ಲ. ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಪರವಾಗಿ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ಸಚಿನ್ ಬಿ.ಎಸ್. ಮತ್ತು ಅನಿಕೇತ್ ಕೆ.ವಿ. ವಾದಿಸಿದ್ದರು. ಮಂಗಳೂರಿನ ನ್ಯಾಯವಾದಿಗಳಾದ ಚಿದಾನಂದ ಕೆದಿಲಾಯ ಹಾಗೂ ಶಿವಪ್ರಸಾದ್ ಎ. ಸಹಕರಿಸಿದ್ದಾರೆ.ಈ ಪ್ರಕರಣವನ್ನು ದೇಶ-ವಿದೇಶಗಳ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿಸಿ, ನಿರಾಧಾರ, ಉತ್ಪ್ರೇಕ್ಷಿತ ಹೇಳಿಕೆಗಳನ್ನೂ, ವೈಯಕ್ತಿಕ ನಿಂದನೆಗಳನ್ನೂ ಮಾಡಿ ಡಾ. ಶ್ರೀನಿವಾಸ ಕಕ್ಕಿಲ್ಲಾಯರ ತೇಜೋವಧೆಗೆ ಪ್ರಯತ್ನಿಸಲಾಗಿತ್ತು. ಅದಕ್ಕಾಗಿ ಸೂಪರ್ ಮಾರ್ಕೆಟ್‍ನ ಮಾಲಕರ ಮೇಲೂ, ಮಂಗಳೂರಿನ ಐಎಂಎ ಮತ್ತು ಎಂಎಂಸಿ ಎಂಬ ವೈದ್ಯಕೀಯ ಸಂಘಟನೆಗಳ ಪದಾಧಿಕಾರಿಗಳ ಮೇಲೂ, ಇನ್ನಿತರ ವ್ಯಕ್ತಿಗಳ ಮೇಲೂ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಮಂಗಳೂರಿನ ಜೆಎಂಎಫ್‍ಸಿ ನ್ಯಾಯಾಲಯಗಳಲ್ಲಿ ಆಗಲೇ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದು, ಈ ಪ್ರಕರಣದ ನ್ಯಾಯಾಂಗ ಪ್ರಕ್ರಿಯೆ ಮುಂದುವರಿದಿದೆ.

Scroll to Top