ರಾಷ್ಟ್ರೀಯ ವಾರ್ತೆಗಳು

ರಾಷ್ಟ್ರೀಯ ವಾರ್ತೆಗಳು

ಜೂನ್ 8 ರ ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಯವರು ರಾಜೀನಾಮೆ ಅಂಗೀಕರಿಸಿದ್ದಾರೆ. ಪ್ರಸುತ್ತ ಮೋದಿಯವರು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್ 8 ರ ಶನಿವಾರ ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರೀಯ ವಾರ್ತೆಗಳು

ಪತ್ರಿಕಾ ಪ್ರಕಟಣೆಜೆ: ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ (ಗೇಲ್-ಇಂಡಿಯಾ) ನಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ: ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ

ಇಂದು ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದ್ದರು.

ರಾಷ್ಟ್ರೀಯ ವಾರ್ತೆಗಳು

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ :ಸಂಸದ ನಳಿನ್ ಕುಮಾರ್ ಕಟೀಲ್

ನವದೆಹಲಿ: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ  ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ. ಬಡವರ, ರೈತರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ. ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ಕಲ್ಪಿಸಲಾಗಿದೆ. 9 ರಿಂದ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್  ನಿರೋಧಕ ಲಸಿಕೆಗೆ ಉತ್ತೇಜನ ನೀಡುವ ಮೂಲಕ ಅವರ ಆರೋಗ್ಯದ ಬಗ್ಗೆ  ವಿಶೇಷ ಕಾಳಜಿ ವಹಿಸಲಾಗಿದೆ. ಲಕ್ಷ ದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪರೋಕ್ಷವಾಗಿ ಮಂಗಳೂರು ಸಹಿತ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೂ ಸಹಕಾರಿಯಾಗಲಿದೆ. ಪ್ರವಾಸೋದ್ಯಮಕ್ಕೆ ಒತ್ತು ನೀಡಿರುವುದರಿಂದ  ಅನೇಕ ಉದ್ಯೋಗ ಹಾಗೂ  ವ್ಯವಹಾರಗಳು ಸೃಷ್ಟಿಯಾಗಲಿವೆ. ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಮೀನುಗಾರರ ಬಹುಕಾಲದ ಬೇಡಿಕೆ ಈಡೇರಿಸಿದ್ದ ಕೇಂದ್ರ ಸರ್ಕಾರ ಈಗ ಮತ್ಸೃ ಸಂಪದ ಯೋಜನೆ ಮುಂದುವರಿಸಿದ್ದು  ಕರಾವಳಿಯ ಮೀನುಗಾರರಿಗೆ ವರದಾನವಾಗಲಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ವಿದ್ಯುತ್, ಮುಂದಿನ 5 ವರ್ಷಗಳಲ್ಲಿ 3 ಕೋಟಿ ಹೊಸ ಮನೆ ನಿರ್ಮಾಣ, ಹೆಚ್ಚಿನ ಮೆಡಿಕಲ್ ಕಾಲೇಜು ನಿರ್ಮಾಣ   ಸ್ವಾಗತಾರ್ಹವಾಗಿದೆಂದು ಕೇಂದ್ರದ ಬಜೆಟ್ ಬಗ್ಗೆ ಸಂಸದ ನಳಿನ್‌ಕುಮಾರ್ ಕಟೀಲ್  ಅವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Scroll to Top