ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

In Kannada film CHARGESHEET 03-08, a true crime triller, Pune based pediatrician Dr Sudhakar Shetty in a important role of an doctor (forensic expert)

The Kannada film ” CHARGESHEET ” is based on true story which happened in Bengalaru in 2003 ,when SK Umesh was serving as DSP in Bangaluru Police.This true story is cased on a novel written by him.Its a fight for justice & also has a good message.Directed by award winning director Venkat Bharadwaj.The shooting has been completed & the atmosphere of Bengalaru in the early 2000s has been captured.The film has stars like Sunder raj,Harsh Arjun,Amar Satheya,Ram,Chetana khot,Dr Pramod, Dr Sudhakar Shetty ,Roopesh & Venkat Bharadwaj in the lead roles. Dr Sudhakar Shetty’s first film “Hey Prabhu” has already been released and its songs – eddelo egga & baduku bareda” has been a superhit.Its already been take up by Air India Engineering Services to be screened in Prime minister’s official aircraft ” BHARAT” for PM & his onboard staff.2nd film is ” CHARGESHEET ” ,3rd film is ” RAKKY” presented by Ashwini Puneeth Rajkumar ,4th film is in tulu & marathi ” Dr Mohan MBBS. 5th untitled film is in hindi which will go on floor shortly.In all these films Dr Shetty has played the role of doctor to inspire young doctors & is directed by Venkat Bharadwaj who is the son of Dr Shetty’s film Guru legendary late Shri C V SHIVASHANKAR (Putana kanagal awardee) ಬದುಕು ಬರೆದ – ಸಾಂಗ್ ಕೆಳಗಿನ ಲಿಂಕ್ ಮೂಲಕ ವೀಕ್ಷಿಸಬಹುದು.

ಪ್ರಾದೇಶಿಕ ವಾರ್ತೆಗಳು

ಬಿಜೈ ಚರ್ಚ್ ರಸ್ತೆಯ ಕ್ಯಾಮಲಾಟ್ ಸಭಾಂಗಣದಲ್ಲಿ ದಿ ಎಕೋಸ್ ಆಫ್ ದ ಕಾರಿಡಾರ್ಸ್

ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್ ಎಂಬ ಎರಡು ಕಾಫಿ ಟೇಬಲ್ ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಸ್ಥೆಗಳ ಇತಿಹಾಸ ಮತ್ತು ಮೌಲ್ಯಗಳನ್ನು ಸಂರಕ್ಷಿಸುವಲ್ಲಿ ದೃಶ್ಯ ಕಥನದ ಮಹತ್ವವನ್ನು ಈ ಕಾರ್ಯಕ್ರಮದಲ್ಲಿ ವಿವರಿಸಲಾಗುವುದು. ಈ ಉಪನ್ಯಾಸವನ್ನು ಶ್ರೀಮತಿ ಜಿಸೆಲ್ ಮೆಹ್ತಾ ಅವರು ನೀಡಲಿದ್ದು, ಕಾಫಿ ಟೇಬಲ್ ಪುಸ್ತಕಗಳು ಹೇಗೆ ಪಾರಂಪರಿಕ ದಾಖಲೆಗಳಾಗಿ ಕಾರ್ಯನಿರ್ವಹಿಸುತ್ತವೆ ಎಂಬುದರ ಕುರಿತು ಮಾತನಾಡಲಿದ್ದಾರೆ. ಆರ್ಕೈವ್ ಛಾಯಾಚಿತ್ರಗಳು, ದಾಖಲೆಗಳು ಮತ್ತು ಕಥನಶೈಲಿಯನ್ನು ಸಂಯೋಜಿಸುವ ಮೂಲಕ ಇತಿಹಾಸವನ್ನು ಸುಲಭವಾಗಿ ಗ್ರಹಿಸಬಹುದಾದ ಹಾಗೂ ಆಕರ್ಷಕ ರೂಪದಲ್ಲಿ ಹೇಗೆ ಮಂಡಿಸಬಹುದು ಎಂಬುದರ ಮೇಲೆ ಅವರು ಬೆಳಕು ಚೆಲ್ಲಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸೈಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ರೆ। ಮೆಲ್ವಿನ್ ಜೋಸೆಫ್ ಪಿಂಟೊ ಹಾಗೂ ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ಯುನಿವರ್ಸಿಟಿಯ ಕುಲಪತಿ ರೆ। ಡಾ। ಪ್ರವೀಣ್ ಮಾರ್ಟಿಸ್ ಉಪಸ್ಥಿತರಿದ್ದು, ಶಿಕ್ಷಣ, ಆರೋಗ್ಯ ಮತ್ತು ಸಮಾಜಸೇವೆಯಲ್ಲಿ ಆಳವಾಗಿ ನೆಲೆಸಿರುವ ಸಂಸ್ಥೆಗಳ ದಾಖಲೀಕರಣದ ಅಗತ್ಯತೆ ಮತ್ತು ಪ್ರಸ್ತುತತೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ನಿರ್ದೇಶಕ ರೆ। ಫಾವುಸ್ತಿನ್ ಲುಕಾಸ್ ಲೋಬೊ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಈ ಕಾರ್ಯಕ್ರಮವು 2025 ಡಿಸೆಂಬರ್ 21 ರಂದು, ಸಂಜೆ 5 ಗಂಟೆಗೆ ಮಂಗಳೂರಿನ ಬಿಜೈ ಚರ್ಚ್ ರಸ್ತೆಯ ‘ಕ್ಯಾಮಲಾಟ್’ ಸಭಾಂಗಣದಲ್ಲಿ ನಡೆಯಲಿದೆ. ಶಿಕ್ಷಣ ಕ್ಷೇತ್ರ, ವಿದ್ಯಾರ್ಥಿಗಳು, ಇತಿಹಾಸಕಾರರು, ಪಾರಂಪರಿಕ ಅಧ್ಯಯನ ಆಸಕ್ತರು ಹಾಗೂ ಸಂಸ್ಥೆಗಳ ಇತಿಹಾಸ, ದಾಖಲೀಕರಣ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ಆಸಕ್ತಿ ಹೊಂದಿರುವ ಸಾರ್ವಜನಿಕರು ಮುಕ್ತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಪ್ರಾದೇಶಿಕ ವಾರ್ತೆಗಳು

ನೈಜ ಘಟನೆಯ ಚಾರ್ಜ್ ಶೀಟ್ ನಲ್ಲಿ ವೈದ್ಯರಾಗಿ ಪ್ರಮುಖ ಪಾತ್ರದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ.ಸುಧಾಕರ್ ಶೆಟ್ಟಿ

ಬೆಂಗಳೂರಿನಲ್ಲಿ 2003ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಚಿತ್ರ ‘ಚಾರ್ಜ್ ಶೀಟ್ 03/08’. ಆ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಜೀವನಾನುಭವ ಹಾಗೂ ಅವರು ಬರೆದ ಕಾದಂಬರಿಯೇ ಈ ಸಿನಿಮಾದ ಕಥಾಹಂದರ. ಸತ್ಯದ ಹುಡುಕಾಟ, ವ್ಯವಸ್ಥೆಯೊಳಗಿನ ಸಂಘರ್ಷ ಮತ್ತು ನ್ಯಾಯಕ್ಕಾಗಿ ನಡೆಯುವ ಹೋರಾಟವನ್ನು ಈ ಸಿನಿಮಾ ಚಿತ್ರಿಸುವುದರ ಜೊತೆಗೆ ಉತ್ತಮ ಸಂದೇಶವನ್ನೂ ನೀಡಲಿದೆ. ನಿರ್ದೇಶಕ ವೆಂಕಟ್ ಭಾರದ್ವಾಜ್ ಈ ನೈಜ ಕಥೆಗೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, 2000ದ ದಶಕದ ಆರಂಭದ ಬೆಂಗಳೂರಿನ ವಾತಾವರಣವನ್ನು ಇಲ್ಲಿ ನೈಜವಾಗಿ ಸೆರೆಹಿಡಿಯಲಾಗಿದೆ. ಚಿತ್ರದಲ್ಲಿ ಸುಂದರ್‍ರಾಜ್, ಹರ್ಶ್ ಅರ್ಜುನ್, ಅಮರ್, ಸತೆಯಾ, ರಾಮ್, ಚೇತನ ಖೋಟ್, ಡಾ. ಪ್ರಮೋದ್, ಡಾ. ಸುಧಾಕರ್ ಶೆಟ್ಟಿ, ರೂಪೇಶ್ ಹಾಗೂ ವೆಂಕಟ್ ಭಾರದ್ವಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಡಾ.ಸುಧಾಕರ ಶೆಟ್ಟಿಯವರ ಮೊದಲ ಚಿತ್ರ ವೆಂಕಟ್ ಭಾರಧ್ವಜ್ ನಿರ್ದೇಶನದ ಹೇ ಪ್ರಭು, ಎರಡನೆ ಚಿತ್ರ ಚಾರ್ಜ್ ಶೀಟ್, ಮೂರನೇ ಚಿತ್ರ ರಕ್ಕಿ,ನಾಲ್ಕನೇ ಚಿತ್ರ ಡಾ.ಮೋಹನ್ ಎಂಬಿಬಿಯಸ್ .ಇದು ತುಳು ಮತ್ತು ಮರಾಠಿ ಚಿತ್ರವಾಗಿದ್ದು, ಡಾ.ಸುಧಾಕರ್ ಶೆಟ್ಟಿಯವರು ಪ್ರಮುಖ ಪಾತ್ರದಲ್ಲಿದ್ದಾರೆ. ಇದು ಸಮರ್ಪಿತ ಮತ್ತು ಪ್ರಾಮಾಣಿಕ ವೈದ್ಯರ ಕಥೆಯನ್ನು ಆಧರಿಸಿದೆ.

ಪ್ರಾದೇಶಿಕ ವಾರ್ತೆಗಳು

ನವಜ್ಯೋತಿ ಫ್ರೆಂಡ್ಸ್ ಕ್ಲಬ್ ಕಳಸಗುರಿ ಇದರ ಸಹಾಯ ನಿಧಿಯ ದಶಮಾನೋತ್ಸವ

ಮಂಗಳೂರು -ನವಜ್ಯೋತಿ ಫ್ರೆಂಡ್ಸ್ ಕ್ಲಬ್ (ರಿ)ಕಳಸಗುರಿ ಇದರ ಸಹಾಯ ನಿಧಿಯ ದಶಮಾನೋತ್ಸವ ಕಾರ್ಯಕ್ರಮವು ಡಿಸೆಂಬರ್ 13 ರಂದು ಅಡ್ಡೂರು, ಕಳಸಗುರಿ ಎಂಬಲ್ಲಿ ಬಹಳ ಅದ್ದೂರಿಯಿಂದ ಜರುಗಿತು. ಕಾರ್ಯಕ್ರಮವು ಭಜನಾ ಕಾರ್ಯಕ್ರಮದೊಂದಿಗೆ ಆರಂಭವಾಯಿತು. ಈಶ್ವರಿ ಭಜನಾ ಮಂಡಳಿ, ಕಾಂಜಿಲಕೋಡಿ ಹಾಗೂ ಆಗಸ್ತ್ಯೇಶ್ವರ ಭಜನಾ ಮಂಡಳಿ, ಪೊಳಲಿ ಇವರಿಂದ ಕುಣಿತ ಭಜನೆಯ ಕಾರ್ಯಕ್ರಮವು ನಡೆಯಿತು. ನಂತರ ಸ್ಥಳೀಯ ಪ್ರತಿಭೆಗಳಿಂದ ಹಾಗೂ ಸಂಸ್ಥೆಯ ಮಹಿಳಾ ಸದಸ್ಯರುಗಳಿಂದ ವಿವಿಧ ಡ್ಯಾನ್ಸ್ ಕಾರ್ಯಕ್ರಮವು ಜರುಗಿತು ಹಾಗೂ ಮಂಗಳೂರಿನ ಹೆಸರಾಂತ ಡ್ಯಾನ್ಸ್ ತಂಡವಾದ ವರ್ಸಿಟಿ ಡ್ಯಾನ್ಸ್ ಅಕಾಡೆಮಿ ಇವರಿಂದ ವಿನೂತನ ಶೈಲಿಯ ನೃತ್ಯ ಪ್ರದರ್ಶನವು ನಡೆಯಿತು. ಅಶೋಕ್ ಪೊಳಲಿ ಇವರಿಂದ ವಿಶಿಷ್ಟ ಶೈಲಿಯ ನೃತ್ಯ ಪ್ರದರ್ಶನವು ಜರುಗಿತು. ನಂತರ ದಶಮಾನೋತ್ಸವದ ಸಭಾ ಕಾರ್ಯಕ್ರಮವು ನಡೆಯಿತು. ಸಭಾಧ್ಯಕ್ಷತೆಯನ್ನು ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ವಹಿಸಿದ್ದರು. ಅತಿಥಿಗಳಾಗಿ ಅನಂತ್ ಭಟ್ ಪೊಳಲಿ, ಪದ್ಮರಾಜ್ ಆರ್, ಹರಿಕೃಷ್ಣ ಬಂಟ್ವಾಳ, ಭುವನೇಶ್ ಪಚ್ಚಿನಡ್ಕ,ಗಿರೀಶ್ ಆಳ್ವ, ಪದ್ಮನಾಭ ಕೋಟ್ಯಾನ್, ಹಿರಿಯ ವರದಿಗಾರರಾದ ವಿಜಯ ಕೋಟ್ಯಾನ್, ಭಾರತ ಸರ್ಕಾರದ ಅಧಿಕಾರಿಯಾಗಿರುವ ಜಗದೀಶ್ ಕೆ, ವೆಂಕಟೇಶ, ನಾವಡ ಪೊಳಲಿ, ಯಶವಂತ ಪೊಳಲಿ, ಯು. ಪಿ. ಇಬ್ರಾಹಿಂ, ಎ. ಕೆ. ಹ್ಯಾರಿಸ್, ಧನಂಜಯ ಗಂದಾಡಿ, ಸಂಸ್ಥೆಯ ಅಧ್ಯಕ್ಷರಾದ ಭೋಜ ಮೂಲ್ಯ ಅಡ್ಡೂರು,ಮಹಿಳಾ ಅಧ್ಯಕ್ಷರಾದ ನಿಶ್ಮಿತಾ, ಸ್ವರೂಪ್ ಪೂಂಜಾ, ಚಂದ್ರಹಾಸ ಶೆಟ್ಟಿ ನಾರಳ, ಚಂದ್ರಹಾಸ ಪಲ್ಲಿಪಾಡಿ ಇವರುಗಳು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ಸದಸ್ಯರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯವಾಗಿ ಗುರುತಿಸಿಕೊಂಡು ಸಮಾಜಕ್ಕೆ ಮಾದರಿಯಾದ ಕೆಲಸಗಳನ್ನು ಮಾಡುತ್ತಿರುವ ಎಂಟು ಜನ ಸಾಧಕರಿಗೆ ಸಮ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು. ನಂತರ ಸಹಾಯ ನಿಧಿಯ ಫಲಾನುಭವಿಗಳಿಗೆ ಸಹಾಯ ನಿಧಿಯ ಮೊತ್ತವನ್ನು ವಿತರಿಸಲಾಯಿತು. ಪ್ರತಿಭಾ ಪುರಸ್ಕಾರ ಮಾಡಲಾಯಿತು, ಸುಮಾರು ಎರಡುವರೆ ಲಕ್ಷ ರೂಪಾಯಿಗಳ ಮೊತ್ತವನ್ನು.ಸಹಾಯ ನಿಧಿ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಯಿತು. ಸಭಾ ಕಾರ್ಯಕ್ರಮವನ್ನು ದಿನೇಶ್ ರಾಯಿ ಇವರು ನಿರೂಪಿಸಿದರು. ಸಂಪೂರ್ಣ ಕಾರ್ಯಕ್ರಮವನ್ನು ಜಿತೇಶ್ ಕುಮಾರ್ ಉಳಿಯ ಮತ್ತು ಜಶ್ವಿನಿ ಜಿತೇಶ್ ಇವರು ನಿರೂಪಿಸಿದರು.ಕಿರಣ್, ಶ್ವೇತಾ. ಲೋಕೇಶ್ ಸಹಕರಿಸಿದರು.ಪ್ರಧಾನ ಸನ್ಮಾನವನ್ನು ಸಂಸ್ಥೆಯ ಸಹಾಯನಿಧಿ ರೂವಾರಿ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ ಇವರಿಗೆ ನೀಡಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಪ್ರಸನ್ನ ಶೆಟ್ಟಿ ಬೈಲೂರು ಇವರ ತಂಡದಿಂದ ‘ರಾಘು ಮಾಸ್ಟ್ರು’ ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು. ಡಿ .14ರಂದು ಮಧ್ಯಾಹ್ನ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಂತರ ಮಹಾ ಅನ್ನ ಸಂತರ್ಪಣೆ ಹಾಗೂ ರಾತ್ರಿ ಬಪ್ಪನಾಡು ಮೇಳದವರಿಂದ ಯಕ್ಷಗಾನ ಪ್ರದರ್ಶನಗೊಂಡಿತು.

ಪ್ರಾದೇಶಿಕ ವಾರ್ತೆಗಳು

ಸುರತ್ಕಲ್ ನಲ್ಲಿ “ಪರ್ವ 2025” ಸೀರೆ, ಲೈಫ್ ಸ್ಟೈ ಲ್, ಮತ್ತು ಫುಢ್ ಫೆಸ್ಟಿವೆಲ್ ಉದ್ಘಾಟನೆ. ಸುರತ್ಕಲ್ ಬಂಟರ ಭವನದಲ್ಲಿ  ಮೂರು ದಿನ ಜನ ಜಾತ್ರೆ

ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21 ರಂದು ಸುರತ್ಕಲ್ ಬಂಟರ ಭವನದ ಆವರಣದಲ್ಲಿ  “ಪರ್ವ 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಢ್ ಫೆಸ್ಟಿವೆಲ್ ನಡೆಯಲಿದ್ದು, ಕಾರ್ಯಕ್ರಮವನ್ನು ಮನಪಾ ಸುರತ್ಕಲ್ ವಲಯ ಕಛೇರಿಯ ಆಯುಕ್ತರಾದ ವಾಣಿ ಆಳ್ವ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸುರತ್ಕಲ್ ಬಂಟರ ಸಂಘದಲ್ಲಿ ಮಹಿಳಾ ವೇದಿಕೆ ನಿರಂತರ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಒಳ್ಳೆಯ ಹೆಸರನ್ನು ಗಳಿಸಿದೆ. ಸಾಂಸ್ಕೃತಿಕ, ಕ್ರೀಡೆ ಸಹಿತ ಎಲ್ಲಾ ವಿಭಾಗಗಳಲ್ಲೂ ಮಹಿಳಾ ವೇದಿಕೆ ಮುಂಚೂಣಿಯಲ್ಲಿದೆ ಎಂದರು.ಮುಖ್ಯ ಅತಿಥಿ  ಎಸ್ ಸಿಡಿಸಿಸಿ ಬ್ಯಾಂಕ್ ಕಾಟಿಪಳ್ಳ ಶಾಖೆಯ ಶಾಖಾ ವ್ಯವಸ್ಥಾಪಕರಾದ ಕೇಸರಿ ಶೆಟ್ಟಿ ಶುಭ ಹಾರೈಸಿದರು.ಮಹಿಳಾ ವೇದಿಕೆಯ ಅಧ್ಯೆಕ್ಷೆ ಸರೋಜ ಟಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆಯ ಉಪಾಧ್ಯೆಕ್ಷೆ ಜಯಂತಿ ಟಿ ರೈ, ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿ ಮಾಲತಿ ಜೆ ಶೆಟ್ಟಿ ಉಪಸ್ಥಿತರಿದ್ದರು. ರಾಜೇಶ್ವರಿ ಡಿ ಶೆಟ್ಟಿ ಪ್ರಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕವಿತಾ ಶೆಟ್ಟಿ ವಂದಿಸಿದರು.ಜ್ಯೋತಿ ಪಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ಡಿಸೆಂಬರ್ 20 ರಂದು ಶನಿವಾರ ಸಂಜೆ 7 ಕ್ಕೆ  ಪೆರ್ಮೆದ ಕಲಾವಿದೆರ್ ಚೇಳಾರ್ ತಂಡದಿಂದ “ಎನ್ನಿಲೆಕ್ಕ ಇಜ್ಜೆರ್” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.ಡಿಸೆಂಬರ್ 21 ರಂದು ಸಂಜೆ 6 ಗಂಟೆಗೆ ವಿಶ್ವಾಸ್ ಮ್ಯೂಸಿಕಲ್ ಮಂಗಳೂರು ತಂಡದಿಂದ “ಸಂಗೀತ ರಸ ಮಂಜರಿ”, ಬಳಿಕ 7 ಗಂಟೆಗೆ ಉಮೇಶ್ ಮಿಜಾರ್ ಸಾರಥ್ಯದ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ಈ ವರ್ಷದ ಸೂಪರ್ ಹಿಟ್ ಹಾಸ್ಯ ನಾಟಕ “ವೈರಲ್ ವೈಶಾಲಿ” ಪ್ರದರ್ಶನ ಗೊಳ್ಳಲಿದೆ.ಡಿ. 20 ಮತ್ತು 21 ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ ಹತ್ತರ ತನಕ ಬಗೆಬಗೆಯ ತಿಂಡಿತಿನಿಸುಗಳ ಫುಡ್ ಫೆಸ್ಟಿವಲ್ ನಡೆಯಲಿದೆ.*ಸೀರೆ ಮೇಳ:* ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ  ವಿವಿಧ ಮಳಿಗೆಗಳ ಸೀರೆ ಮಾರಾಟ ಮೇಳವೂ ನಡೆಯಲಿದೆ.ನವನವೀನ ಮಾದರಿಯ ಕಾಂಚಿಪುರಂ, ಬನಾರಸ್, ರೇಷ್ಮೆ, ಬಂಗಾಲಿ ಕಾಟನ್ ಹಾಗೂ ವಿವಿಧ ಮಾದರಿಯ ಸೀರೆಗಳು ಸಲ್ವಾರ್ ಸೂಟ್, ಕುರ್ತಾಗಳು, ಖಾದಿ ಭಂಡಾರ, ಕಸೂತಿ, ಹಸ್ತಕಲೆ ಬ್ಯಾಗುಗಳು, ಒಂದು ಗ್ರಾಂ ಚಿನ್ನಾಭರಣ ವಿವಿಧ ವಿನ್ಯಾಸದ ಆರ್ಟಿಫಿಶಲ್ ಜ್ಯುವೆಲ್ಲರಿ ಮಸಾಲೆ ಹುಡಿಗಳು, ಹರ್ಬಲ್ ಉತ್ಪನ್ನಗಳು ಹಾಗೂ ಅನೇಕ ವಿಧವಿಧ ಉತ್ಪನ್ನಗಳ ಅಪೂರ್ವ ಸಂಗ್ರಹವೂ ಇದೆ.ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಉತ್ಪನ್ನಗಳು ದೊರೆಯಲಿದೆ. ಇದು ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆಯುವಂತಹ ಕಾರ್ಯಕ್ರಮವಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಪ್ರಾದೇಶಿಕ ವಾರ್ತೆಗಳು

ಹುಬ್ಬಳ್ಳಿಯಲ್ಲಿ ಮಿಂಚಿದ “ಶನಿ ಮಹಾತ್ಮೆ”

ಮಂಗಳೂರು: ಕಿಶೋರ್ ಡಿ ಶೆಟ್ಟಿ ನೇತೃತ್ವದ ಶ್ರೀ ಲಲಿತೆ ತಂಡದವರು ಹುಬ್ಬಳ್ಳಿಯ ಸಾವಾಯಿ ಗಂಧರ್ವ ಸಭಾ ಭವನದಲ್ಲಿ ಪ್ರದರ್ಶಿಸಿದ “ಶನಿ ಮಹಾತ್ಮೆ” ಕನ್ನಡ ಪೌರಾಣಿಕ ನಾಟಕವು ಪ್ರೇಕ್ಷಕರನ್ನು ಬೆರಗುಗೊಳಿಸಿತು. ಹುಬ್ಬಳ್ಳಿಯ ಶನಿ ಪೂಜಾ ಸೇವಾ ಸಮಿತಿಯವರು ಸಾಮೂಹಿಕ ಶನಿ ಪೂಜೆ ನಡೆಸಿ ಶನಿ ದೇವರ ಕಥೆ ಯನ್ನು ನಾಟಕ ದ ಮೂಲಕ ಪ್ರಸ್ತುತಿ ಗೈದರು. ಶನಿ ಜನ್ಮ, ಶನಿ ಪ್ರಭಾವ ವನ್ನು ಬೇರೆ ಬೇರೆ ಯುಗ ಗಳಲ್ಲಿ ತೋರುವ ನವ ರಸ ಭರಿತ ಕಥಾ ವಸ್ತುವನ್ನು ಹೊಂದಿದ ಕದ್ರಿ ನವನೀತ ಶೆಟ್ಟಿ ಅವರು ರಚಿಸಿದ ಈ ನಾಟಕ ದ 48 ನೇ ಪ್ರದರ್ಶನ ಇದಾಗಿದೆ.ಅದ್ದೂರಿ ಸಂಪ್ರದಾಯಿಕ ರಂಗ ವಿನ್ಯಾಸ, ಆಧುನಿಕ ಬೆಳಕಿನ ವಿನ್ಯಾಸ, ಪೂರ್ವ ಮುದ್ರಿತ ಧ್ವನಿ, ಸೊಗಸಾದ ವೇಷ ಭೂಷಣ, ಹಿತ ಮಿತ ಸಂಗೀತ, ಪ್ರಬುದ್ಧ ಕಲಾವಿದರ ಭಾವ ಪೂರ್ಣ ಅಭಿನಯಗಳೊಂದಿಗೆ ಅಚ್ಚುಕಟ್ಟಾಗಿ ಪ್ರದರ್ಶನಗೊಂಡ ನಾಟಕವನ್ನು ಪ್ರೇಕ್ಷಕರು ಭಕ್ತಿ ಭಾವದಿಂದ ಆಸ್ವಾದಿಸಿದರು.ಇದೇ ಸಂದರ್ಭದಲ್ಲಿ ನಾಟಕ ರಚನೆ ಮಾಡಿದ ಬಹುಮುಖ ಪ್ರತಿಭೆಯ ಕಲಾವಿದ ಕದ್ರಿ ನವನೀತ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಉದ್ಯಮಿಗಳಾದ ರಮೇಶ್ ಶೆಟ್ಟಿ, ಸುಗ್ಗಿ ಸುಧಾಕರ ಶೆಟ್ಟಿ, ಅರ್ಚಕ ಅಕ್ಷಯ ಉಡುಪ ಅತಿಥಿಗಳಾಗಿ ಪಾಲ್ಗೊಂಡರು.ಶನಿ ಪೂಜಾ ಸಮಿತಿಯ ಸತೀಶ್ ಡಿ ಶೆಟ್ಟಿ ಅವರು ಅಭಿನಂದಿಸಿದರು. ಸಮಿತಿಯ ಪ್ರಧಾನ ರಾದ ಅನಂತ ಪದ್ಮನಾಭ ಐತಾಳ್, ಕೃಷ್ಣ ಶೆಟ್ಟಿ, ರಮಾನಂದ ಶೆಟ್ಟಿ, ವಿವೇಕ್ ಪೂಜಾರಿ ಉಪಸ್ಥಿತರಿದ್ದರು.ಶ್ರೀ ಲಲಿತೆ ತಂಡದ ಯಜಮಾನ ಕಿಶೋರ್ ಡಿ ಶೆಟ್ಟಿ, ನಾಟಕ ನಿರ್ದೇಶಕ ಜೀವನ್ ಉಳ್ಳಾಲ್, ಪ್ರಸರಣ ಸಂಯೋಜಕ ಪ್ರದೀಪ್ ಆಳ್ವ ಕದ್ರಿ ಅವರನ್ನು ಗೌರವಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ನಗರದಲ್ಲಿ ಹೆಚ್ಚುತ್ತಿರುವ ಹೆಬ್ಬಾವುಗಳ ಹಾವಳಿ

ಮಂಗಳೂರು-2 ದಿನಗಳ ಹಿಂದೆ ನಸುಕಿನ ಜಾವ 4.30ಕ್ಕೆ ಮಂಗಳೂರು ಸ್ಟೇಟ್ ಬ್ಯಾಂಕ್ ನ ಹ್ಯಾಮಿಲ್ಟನ್ ವೃತ್ತದ ಬಳಿ ಹೆಬ್ಬಾವೊಂದು ರಸ್ತೆ ಮಧ್ಯೆ ಹಾದು ಹೋಯಿತು. ನಾವು ಡ್ಯೂಟಿ ಮುಗಿಸಿ ಬೈಕಲ್ಲಿ ಬರುವಾಗ ಕಂಡೆವು. ನಾವೆಲ್ಲ ಅದು ರಸ್ತೆ ದಾಟುವ ತನಕ ಕಾದು ಕುಳಿತು ಬೈಕ್ ನಿಲ್ಲಿಸಿ ನಂತರ ಹೊರಟೆವೆಂದು ಹೊಗೈ ಬಜಾರ್ ನಿವಾಸಿಯೊಬ್ಬರು ಹೇಳಿದ್ದಾರೆ. ನಗರದಲ್ಲಿ ಹೆಬ್ಬಾವುಗಳು ಹೆಚ್ಚುತ್ತಿದ್ದು, ನಿನ್ನೆ ರಾತ್ರಿ ಕೊಟ್ಟಾರ ಕ್ರಾಸ್ ನ ಪೂವರಿ ಫಾಸ್ಟ್ ಫುಡ್ ಬಳಿ ಹೆಬ್ಬಾವೊಂದು ಪತ್ತೆಯಾದಾಗ ತುಳುನಾಡು ಪ್ರತಿಷ್ಠಾನದ ಅಧ್ಯಕ್ಷ ರಾಜೇಶ್ ಅಮಿನ್ ಮೂಲ್ಕಿ ಮತ್ತು ಸ್ಥಳೀಯರಾದ ರಾಕೇಶ್ ಕೊಟ್ಟಾರ ಕ್ರಾಸ್ ಅವರು ಅದನ್ನು ಹಿಡಿದು ಸುರಕ್ಷಿತ ಜಾಗಕ್ಕೆ ತಲುಪಿಸಿದರು. ಇದನ್ನು ಈ ಕೆಳಗಿನ ಲಿಂಕ್ ಬಳಸಿ ನೋಡಬಹುದಾಗಿದೆ.

ಪ್ರಾದೇಶಿಕ ವಾರ್ತೆಗಳು

ಸಂಗಬೆಟ್ಟು ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಶ್ರೀ ಬ್ರಹ್ಮ ಮುಗೇರ ಮಹಾಕಾಳಿ ದೈವಸ್ಥಾನದ ಶ್ರೀ ಮಹಾಕಾಳಿ, ಶ್ರೀ ಬ್ರಹ್ಮ ಮುಗೇರ ದೈವಗಳು ಮತ್ತು ಪರಿವಾರ ದೈವಗಳ ಹಾಗೂ ಕೊರಗಜ್ಜ ದೈವದ ವರ್ಷಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ದೈವಸ್ಥಾನ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.ದಿನಾಂಕ 16-01-2026 ರಿಂದ 19-01-2026 ತನಕ ನೇಮೋತ್ಸವ ನಡೆಯಲಿರುತ್ತದೆ.ಈ ಸಂದರ್ಭದಲ್ಲಿ ಉತ್ಸವ ಸಮಿತಿಯ ಅಧ್ಯಕ್ಷರಾದ ರಾಮಕೃಷ್ಣ ನಾಯಕ್ ಕಿನ್ನಾಜೆ,ಗೌರವ ಅಧ್ಯಕ್ಷ ಭುಜಬಲಿ ಕಂಬಳಿ,ಪ್ರಧಾನ ಕಾರ್ಯದರ್ಶಿ ಶ್ರೀಧರ ಮುಗೇರ, ಗುರಿಕಾರರಾದ ಭಾಸ್ಕರ ಪೂಜಾರಿ ಅಲಕ್ಕೆ ಮೇಗಿನಮನೆ,ಮುಗೇರ ಸಮಾಜದ ಗುರಿಕಾರ ನೋಣಯ ಮುಗೇರ, ಮಹಿಳಾ ಸಮಿತಿ ಅಧ್ಯಕ್ಷೆ ರಂಜಿನಿ ದಿವಾಕರ್,ಕೊರಗಜ್ಜ ಬೆಳ್ಳಿ ಮುಟ್ಟಾಳೆ ಸಮರ್ಪಣೆ ಅಧ್ಯಕ್ಷರಾದ ಸಂತೋಷ ಕುಮಾರ್ ಚೌಟ,ಉತ್ಸವ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಗುರಿಗದ್ದೆ ಪದಾಧಿಕಾರಿಗಳಾದ ಮಹಾಬಲ ಪೂಜಾರಿ,ರತ್ನಕಾರ ಪೂಜಾರಿ, ವಾಮನ ಬುಣ್ಣನ್ ಕರ್ಪೆ, ಭೋಜ ಪೂಜಾರಿ,ವಿನೋದ್ ಪೂಜಾರಿ,ಸತೀಶ್ ಮುಗೇರ, ಶಂಕರ ಪೂಜಾರಿ,ಶೇಖರ ಮುಗೇರ, ವಾಸು ಮುಗೇರ ಕರ್ಪೆ,ನೇತ್ರಾವತಿ, ವಿರಮ್ಮ,ಮತ್ತಿತರರು ಉಪಸ್ಥಿತರಿದ್ದರು

ಪ್ರಾದೇಶಿಕ ವಾರ್ತೆಗಳು

“ಪರ್ವ 2025” ಸೀರೆ, ಲೈಫ್ ಸ್ಟೈ ಲ್, ಮತ್ತು ಫುಢ್ ಫೆಸ್ಟಿವೆಲ್. ಡಿಸೆಂಬರ್ 19 ರಿಂದ 21 ರ ವರೆಗೆ ಸುರತ್ಕಲ್ ಬಂಟರ ಭವನದಲ್ಲಿ ಜನ ಜಾತ್ರೆ. ಸಂಗೀತ ರಸಮಂಜರಿ, “ಎನ್ನಿಲೆಕ ಇಜ್ಜೆರ್”, “ವೈರಲ್ ವೈಶಾಲಿ” ನಾಟಕ ಪ್ರದರ್ಶನ

ಮಂಗಳೂರು: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಡಿಸೆಂಬರ್ 19, 20 ಮತ್ತು 21 ರಂದು ಸುರತ್ಕಲ್ ಬಂಟರ ಭವನದ ಆವರಣದಲ್ಲಿ “ಪರ್ವ 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಢ್ ಫೆಸ್ಟಿವೆಲ್ ನಡೆಯಲಿದೆ ಎಂದು ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಡಿಸೆಂಬರ್ 20 ರಂದು ಶನಿವಾರ ಸಂಜೆ 7 ಕ್ಕೆ ಪೆರ್ಮೆದ ಕಲಾವಿದೆರ್ ಚೇಳಾರ್ ತಂಡದಿಂದ “ಎನ್ನಿಲೆಕ್ಕ ಇಜ್ಜೆರ್” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.ಡಿಸೆಂಬರ್ 21 ರಂದು ಸಂಜೆ 6 ಗಂಟೆಗೆ ವಿಶ್ವಾಸ್ ಮ್ಯೂಸಿಕಲ್ ಮಂಗಳೂರು ತಂಡದಿಂದ “ಸಂಗೀತ ರಸ ಮಂಜರಿ”, ಬಳಿಕ 7 ಗಂಟೆಗೆ ಉಮೇಶ್ ಮಿಜಾರ್ ಸಾರಥ್ಯದ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ಈ ವರ್ಷದ ಸೂಪರ್ ಹಿಟ್ ಹಾಸ್ಯ ನಾಟಕ “ವೈರಲ್ ವೈಶಾಲಿ” ಪ್ರದರ್ಶನ ಗೊಳ್ಳಲಿದೆ ಎಂದರು.ಡಿ. 20 ಮತ್ತು 21 ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ ಹತ್ತರ ತನಕ ಬಗೆಬಗೆಯ ತಿಂಡಿತಿನಿಸುಗಳ ಫುಡ್ ಫೆಸ್ಟಿವಲ್ ನಡೆಯಲಿದೆ.ಸೀರೆ ಮೇಳ: ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ವಿವಿಧ ಮಳಿಗೆಗಳ ಸೀರೆ ಮಾರಾಟ ಮೇಳವೂ ನಡೆಯಲಿದೆ.ನವನವೀನ ಮಾದರಿಯ ಕಾಂಚಿಪುರಂ, ಬನಾರಸ್, ರೇಷ್ಮೆ, ಬಂಗಾಲಿ ಕಾಟನ್ ಹಾಗೂ ವಿವಿಧ ಮಾದರಿಯ ಸೀರೆಗಳು ಸಲ್ವಾರ್ ಸೂಟ್, ಕುರ್ತಾಗಳು, ಖಾದಿ ಭಂಡಾರ, ಕಸೂತಿ, ಹಸ್ತಕಲೆ ಬ್ಯಾಗುಗಳು, ಒಂದು ಗ್ರಾಂ ಚಿನ್ನಾಭರಣ ವಿವಿಧ ವಿನ್ಯಾಸದ ಆರ್ಟಿಫಿಶಲ್ ಜ್ಯುವೆಲ್ಲರಿ ಮಸಾಲೆ ಹುಡಿಗಳು, ಹರ್ಬಲ್ ಉತ್ಪನ್ನಗಳು ಹಾಗೂ ಅನೇಕ ವಿಧವಿಧ ಉತ್ಪನ್ನಗಳ ಅಪೂರ್ವ ಸಂಗ್ರಹವೂ ಇದೆ.ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಉತ್ಪನ್ನಗಳು ದೊರೆಯಲಿದೆ. ಇದು ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆಯುವಂತಹ ಕಾರ್ಯಕ್ರಮವಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಮಾಲತಿ ಜೆ ಶೆಟ್ಟಿ, ಜೊತೆ ಕಾರ್ಯದರ್ಶಿ ಕವಿತಾ ಪಿ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಜನ ಮೆಚ್ಚುಗೆ ಗಳಿಸಿದ ಬ್ರಹ್ಮರಕೂಟ್ಲುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 90ರ ಸಂಭ್ರಮ

ಬಂಟ್ವಾಳ: ಬಂಟ್ವಾಳ ತಾಲೂಕು, ಕಳ್ಳಿಗೆ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲು ಇದರ 9೦ರ ಸಂಭ್ರಮ ದಿನಾಂಕ 13-12-2025ರಂದು ಅದ್ದೂರಿಯಾಗಿ ನೆರವೇರಿತು. 1935ರಲ್ಲೇ ಸ್ಥಾಪನೆಗೊಂಡ ಶಾಲೆಯಲ್ಲಿ ಈಗಾಗಲೇ ಅನೇಕ ಸತ್ಪ್ರಜೆಗಳ ನಿರ್ಮಾಣವಾಗಿದೆ. ಇಲಾಖೆಯ ಮಾನ್ಯತೆಯೊಂದಿಗೆ ಕನ್ನಡ ಹಾಗೂ ಇಂಗ್ಲೀಷ್‌ ಮಾಧ್ಯಮದಲ್ಲಿ ತರಗತಿಗಳನ್ನು ದ್ವಿತೀಯ ವರ್ಷ ಯಶಸ್ವಿಯಾಗಿ ನಡೆಸಿದೆ. ಇಲ್ಲಿಗೆ ತಮ್ಮ ಮಕ್ಕಳನ್ನು ಸೇರಿಸಿ ಉತ್ತಮ ಶಿಕ್ಷಣವನ್ನು ಉಚಿತವಾಗಿ ಪಡೆಯಿರಿ. ಮುಂದಿನ 1೦ ವರ್ಷದಲ್ಲಿ 1೦೦ರ ಸಂಭ್ರಮ ಇನ್ನಷ್ಟು ಪೋಷಕರ ಶಿಕ್ಷಣಾಸಕ್ತರ ಹಾಗೂ ಹಿರಿಯ ವಿದ್ಯಾರ್ಥಿಗಳ ನೆರವಿನಲ್ಲಿ ಅತಿ ವಿಜೃಂಭಣೆಯಿಂದ ನೆರವೇರಲಿ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಇವರು ಉದ್ಘಾಟಿಸಿ,ಮಾತನಾಡಿದರು.ಬೆಳಗ್ಗೆ 9.30ಕ್ಕೆ ಸರಿಯಾಗಿ ಶಾಲಾ ಧ್ವಜಾರೋಹಣವನ್ನು ಕಳ್ಳಿಗೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ ಇವರು ನೆರವೇರಿಸಿ ಶುಭಾಶಯ ನುಡಿದರು. ಬಳಿಕ ವಿದ್ಯಾರ್ಥಿಗಳ ಏರೋಬಿಕ್ ವ್ಯಾಯಾಮ ಪ್ರದರ್ಶನ ವಿಭಿನ್ನ ಮಾದರಿಯಲ್ಲಿ ನಡೆಯಿತು. ಬಳಿಕ ಬೆಳಗ್ಗೆ 11.30ಕ್ಕೆ ಸಭಾ ಕಾರ್ಯಕ್ರಮ ನೆರವೇರಿತು. ದ.ಕ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವರಾದ ಬಿ .ರಮಾನಾಥ ರೈ ಇವರು ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸುವುದರೊಂದಿಗೆ ರೋಟರಿ ಸಹಯೋಗದಲ್ಲಿ ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘ ಕೊಡುಗೆಯಾಗಿ ನೀಡಿದ ಪ್ಲೇ ಗ್ರೌಂಡ್‌ ವಸ್ತುಗಳ ಉಪಯೋಗಕ್ಕೆ ಚಾಲನೆ ನೀಡಿದರು.ಅತಿಥಿಗಳಾಗಿ ದತ್ತು ಸ್ವೀಕಾರ ಸಮಿತಿಯ ಗೌರವ ಸಲಹೆಗಾರರಾದ ಚಂದ್ರಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯತ್ ಕಳ್ಳಿಗೆ ಇದರ ಉಪಾಧ್ಯಕ್ಷರಾದ ಶ್ರೀಮತಿ ವಾರಿಜ, ಗ್ರಾಮ ಪಂಚಾಯತ್ ಕಳ್ಳಿಗೆ ಸದಸ್ಯರಾದ ರವಿರಾಜ್ ಜೈನ್, ಶ್ರೀಮತಿ ರತ್ನಾವತಿ, ತುಂಬೆ ಕ್ಲಸ್ಟರ್ ಸಿ.ಆರ್.ಪಿ.ರಮೇಶ್, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಜೇಸಿ ಸುರೇಶ್ ಕುಮಾರ್ ಬಿ ನಾವೂರು ವಕೀಲರು, ರೋಟರಿ ಕ್ಲಬ್ ಬಿಸಿ ರೋಡ್ ಅಧ್ಯಕ್ಷರಾದ ಶ್ರೀ ದಿವಾಕರ್ ಶೆಟ್ಟಿ, ದತ್ತು ಸ್ವೀಕಾರ ಸಮಿತಿ ಅಧ್ಯಕ್ಷರಾದ ಮಧುಸೂದನ್ ಶೆಣೈ, ನಿಯಾಝ್‌ ತಲಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯೋಗೀಶ್ ದರಿಬಾಗಿಲು, ಕೋಶಾಧಿಕಾರಿ ಪ್ರಶಾಂತ್‌ ಮುಂಡಾಜೆ ಉಪಸ್ಥಿತರಿದ್ದರು.ವಿಶೇಷ ಆಹ್ವಾನಿತರಾಗಿ ಶ್ ಅನಿಲ್ ಪಂಡಿತ್, ಜ್ಯೋತಿಷ್ಯರು, ಮೋಹನ್ ದಾಸ್ ರೈ ಪೆತ್ತಮುಗೇರು, ದಿನೇಶ್ ರೈ ಪೆತ್ರಮುಗೇರು, ಸುರೇಶ್ ರೈ, ಪೆತ್ತಮುಗೇರು, ಶಶಿಧರ ಬ್ರಹ್ಮರಕೂಟ್ಟು, ಶ್ರೀಮತಿ ಶಶಿಪ್ರಭಾ ಗುತ್ತಿನಹಿತ್ತಿಲು, ಶ್ರೀಮತಿ ವಾಣಿ ಪೆರಿಯೋಡಿ , ಪೂವಪ್ಪ ಮೇಸ್ತ್ರಿ ವಳವೂರು, ಹಮೀದ್, ಬ್ರಹ್ಮರಕೂಟ್ಲು, ಸಂಜೀವ ದರಿಬಾಗಿಲು, ಆಕ್ಟರ್ ಅಲಿ, ಶಿಕ್ಷಕರು, ಟಿ. ಇದಿನಬ್ಬ ತಲಪಾಡಿ, ಕೆ.ಎಸ್.ಆರ್.ಟಿ.ಸಿ., ಶ್ರೀಮತಿ ಕುಸುಮ ವಿಶ್ವನಾಥ ಜಾರಂದಗುಡ್ಡೆ, ಶ್ರೀಮತಿ ಪ್ರಿಯದರ್ಶಿನಿ ದರಿಬಾಗಿಲು, ಸಂತೋಷ್ ಬಂಗೇರ, ಜಗದೀಶ್ ಬಂಗೇರ ಕಂಜೆತ್ತೂರು, ಮನೋಹರ ಕಂಜೆತ್ತೂರು, ಸಂದೇಶ್ ದರಿಬಾಗಿಲು ಮೊದಲಾದ ಗಣ್ಯರು ಉಪಸ್ಥಿತರಿದ್ದರು.ಸಭೆಯಲ್ಲಿ 2024-25ನೇ ಸಾಲಿನ ಮುಖ್ಯಮಂತ್ರಿಯವರ ಬಂಗಾರದ ಪದಕ ಪ್ರಶಸ್ತಿ ಪುರಸ್ಕೃತರಾದ ಶಾಲೆಯ ಹಳೆ ವಿದ್ಯಾರ್ಥಿ ಸುಧೀರ್ ಜಾರಂದಗುಡ್ಡೆ, ರೋಟರಿ ಜಿಲ್ಲೆ 3181ರ ಸಮಾಜ ಸೇವಾ ಪ್ರಶಸ್ತಿ ವಿಜೇತರು ಹಾಗೂ ಸ. ಹಿ. ಪ್ರಾ. ಶಾಲೆ ಬ್ರಹ್ಮರಕೂಟ್ಲುವಿನ ಸಹಶಿಕ್ಷಕರಾದ ಶ್ರೀಮತಿ ಭಾರತಿ, 23ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ – ನಾಲ್ಕು ಪದಕಗಳನ್ನು ಗೆದ್ದ ಸಾಧಕಿ ಶ್ರೀಮತಿ ಅಶ್ಲೀಟ್ ಗ್ರೇಡಿಸ್ ಪಾಯಸ್ ಇವರನ್ನು ಸನ್ಮಾನಿಸಲಾಯಿತು.ಸಭಾಧ್ಯಕ್ಷತೆ ವಹಿಸಿದ ಶಾಲಾ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ಉದಯ ಕುಮಾರ್ ಜ್ಯೋತಿಗುಡ್ಡೆ ಇವರು ಮಾತನಾಡಿ ಶಾಲೆ ಕೇವಲ ಕಟ್ಟಡ ಅಲ್ಲ. ಅಲ್ಲಿಗೆ ಹಳೆ ವಿದ್ಯಾರ್ಥಿಗಳು ತಮ್ಮ ಮಕ್ಕಳನ್ನು ಕಳಿಸಿದರಷ್ಟೆ ಶಾಲೆ ಉಳಿಯಲು ಸಾಧ್ಯ. ಕಲಿಕೆಯಲ್ಲಿ ಕಲಿಸುವಿಕೆಯಲ್ಲಿ ಈಗಾಗಲೇ ಸರಕಾರಿ ಶಾಲೆಗಳು ಮುಂಚೂಣಿಯಲ್ಲಿರುವಾಗ ಶಾಲೆಗೆ ಸೇರಿಸಲು ಯಾವುದೇ ಸಂಶಯ ಬೇಕಾಗಿಲ್ಲ. 1೦೦ರ ಸಂಭ್ರಮಾಚರಣೆ ಇನ್ನಷ್ಟು ಹಿರಿಯ ವಿದ್ಯಾರ್ಥಿಗಳ ಸಹಕಾರದಲ್ಲಿ ಇನ್ನೂ ಅದ್ದೂರಿಯಾಗಿ ನಡೆಯಲಿ ಎಂದು ಹಾರೈಸಿದರು.ವಿದ್ಯಾರ್ಥಿಗಳ ಪ್ರಾರ್ಥನೆ ಮೂಲಕ ಪ್ರಾರಂಭ ಗೊಂಡ ಉದ್ಘಾಟನಾ ಸಮಾರಂಭಕ್ಕೆ ಬಂದ ವರನ್ನು ಮುಖ್ಯಶಿಕ್ಷಕಿ ಶ್ರೀಮತಿ ಕಲ್ಯಾಣಿ ಜಿ. ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ವೇದಾವತಿ ವಂದನಾರ್ಪಣೆ ಸಲ್ಲಿಸಿದರು.ಅಪರಾಹ್ನ 4 ಘಂಟೆಯಿಂದ ಶಾಲಾ ವಿದ್ಯಾರ್ಥಿಗಳ ಮನೋರಂಜನಾ ಕಾರ್ಯಕ್ರಮ ನೆರವೇರಿತು. ಸಂಜೆ 6.00ರಿಂದ ಗೀತಾಂಜಲಿ ಆರ್ಕೆಸ್ಟ್ರಾ ಬಳಗ ಬಿ.ಸಿ.ರೋಡ್ ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಸಲಾಯಿತು.

Scroll to Top