ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಪ್ರಯತ್ನ, ಹೋರಾಟಗಳಿಂದ ಯಶಸ್ಸು ಸಾಧ್ಯ- ಎಂಎಲ್‌ಸಿ ಐವನ್

ಮಂಗಳೂರು- ಕೆಲಸಗಳು ಸುಲಭದಲ್ಲಿ ಆಗೋದಿಲ್ಲ. ಇದಕ್ಕೆ ನಿರಂತರವಾದ ಹೋರಾಟ, ಪ್ರಯತ್ನಗಳ ಜತೆಗೆ ಎಲ್ಲರ ಒಗ್ಗಟ್ಟುತನ ಇದ್ದಾಗ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.ಅವರು ಶುಕ್ರವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ನೌಕರರ ವೇದಿಕೆ ಮಂಗಳೂರು ಜು.1,2022ರಿಂದ ಜು.31,2024ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ನೌಕರರ ರಾಜ್ಯ ಕಾರ‍್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಸಿಎಂ ಮನೆ ಮುಂದೆ ಧರಣಿಗೆ ಚಿಂತನೆ: ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಬೆಂಗಳೂರು ಇದರ ರಾಜ್ಯ ಮಹಾಪ್ರಧಾನ ಸಂಚಾಲಕ ಡಾ.ಎಂ.ಪಿ.ಎ ಷಣ್ಮುಖಯ್ಯ ಮಾತನಾಡಿ, ಇದು ಸರಕಾರ ಮಾಡಿದ ಅನ್ಯಾಯವಲ್ಲ. ಪ್ರಸ್ತುತ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಅಧ್ಯಕ್ಷ ಸಿ.ಎಚ್.ಷಡಕ್ಷರಿ ಮತ್ತು ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಎಲ್. ಭೈರಪ್ಪ ಅವರು 7ನೇ ವೇತನ ಆಯೋಗದ ವರದಿ ಒಪ್ಪಿ ಮಂಜೂರು ಮಾಡಿದ ಮಹಾತ್ಮರು ಅವರಿಂದ ನಾವು ಹಿರಿಯ ನಾಗರಿಕರು ಬೀದಿಗೆ ಇಳಿದು ಪ್ರತಿಭಟನೆ ಮಾಡಬೇಕಾಗಿ ಬಂತು. ನವೆಂಬರ್‌ನಲ್ಲಿ ಮೈಸೂರಿನ ಸಿಎಂ ಮನೆ ಮುಂದೆ ನಿವೃತ್ತ ಸರಕಾರಿ ನೌಕರರಿಂದ ಧರಣಿ ಮಾಡುವ ಜತೆಗೆ ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲ ಅಧಿವೇಶನಕ್ಕೆ ಪಾದಯಾತ್ರೆಯನ್ನು ಕೈಗೊಳ್ಳುವ ಕರ‍್ಯ ಮಾಡಲಾಗುತ್ತದೆ ಎಂದರು.ಪರಿಷ್ಕೃತ ಆದೇಶ ನೀಡಿ: ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ನೌಕರರ ವೇದಿಕೆ ಮಂಗಳೂರು ಇದರ ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಮಾತನಾಡಿ, ಸರಿಸುಮಾರು 25-40 ವರ್ಷಗಳ ಕಾಲ ಸರಕಾರಿಯ ನಾನಾ ಇಲಾಖೆಯಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತರಾದಂತಹ ನೌಕರರಿಗೆ ಸಂಧ್ಯಾಕಾಲದಲ್ಲಿ ಆರ್ಥಿಕವಾಗಿ ವಂಚಿತರನ್ನಾಗಿ ಮಾಡುವುದು ಸರಿಯಲ್ಲ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಪೂರ್ಣ ಪ್ರಮಾಣದ ವೇತನ ಪಡೆಯುತ್ತಿದ್ದಾರೆ. ನಿವೃತ್ತ ನೌಕರರ ಮೇಲೆ ಯಾಕೆ ಈ ತಾರತಮ್ಯ ಮಾಡಲಾಗುತ್ತಿದೆ ಎಂದರು.ಈ ಸಂದರ್ಭ ರಾಜ್ಯ ಸಂಚಾಲಕರಾದ ಅಶೋಕ ಎಂ. ಸಜ್ಜನ, ಶಂಕರಪ್ಪ ಲಮಾಣಿ, ಎಸ್.ಬಿ. ಬಿಸೇರೊಟ್ಟಿ, ಮಹಾಂತೇಶ ವಿ. ಹಿರೇಮಠ ಸೇರಿದಂತೆ ರಾಜ್ಯದ 31 ಜಿಲ್ಲೆಗಳಿಂದ ಬಂದ ಪ್ರಧಾನ ಸಂಚಾಲಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಯಾದಗಿರಿಯ ಬೀಮಣ್ಣ ಪ್ರಾರ್ಥಿಸಿದರು. ವಿಜಯನಗರದ ಹುಳು ಬಸಪ್ಪ ವಂದಿಸಿದರು. ಮಂಡ್ಯದ ನಾರಾಯಣ ಸ್ವಾಮಿ ಕಾರ‍್ಯಕ್ರಮ ನಿರೂಪಿಸಿದರು. ನಿವೃತ್ತ ಸರಕಾರಿ ನೌಕರರ ಸಮಸ್ಯೆಗೆ ಪರಿಹಾರ ಕೊಡಿಸಲು ಆಗ್ರಹಜು.1, 2022ರಿಂದ ಜು.31,2024 ನೌಕರರಿಗೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕಾಲ್ಪನಿಕವಾಗಿ ವೇತನ ಪರಿಷ್ಕರಣೆ ಮಾಡಿ ಆದೇಶ ಮಾಡಲಾಗಿದೆ. ಆದರೆ ನಗದು ರೂಪದಲ್ಲಿ ಆ.1, 2024 ರಿಂದ ಅನ್ವಯವಾಗುವಂತೆ ಆದೇಶ ಮಾಡಿರುವುದರಿಂದ ಈ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ನಿವೃತ್ತಿ ಪಿಂಚಣಿ ಹೊಸ ವೇತನದಂತೆ ನಿಗದಿ ಪಡಿಸಲು ಆದೇಶ ಮಾಡಿರುವುದರಿಂದ ಡಿ.ಸಿ.ಆರ್.ಜಿ.. ಕಮ್ಯುಟೇಶನ್, ಇ.ಎಲï. ನಗದೀಕರಣ ಸೌಲಭ್ಯಗಳನ್ನು 6 ನೇ ವೇತನದ ಆಯೋಗದ ಅಡಿ ಪಡೆಯುತ್ತಿದ್ದ ಮೂಲ ವೇತನದ ಮೇಲೆ ಪಾವತಿಸುವುದರಿಂದ ಸುಮಾರು 26,500 ನಿವೃತ್ತ ನೌಕರರು ಆರ್ಥಿಕವಾಗಿ ವಂಚಿತರಾಗುತ್ತಾರೆ ಎನ್ನುವುದು ನಿವೃತ್ತ ಸರಕಾರಿ ನೌಕರರ ಆಳಲು ಇದಕ್ಕೆ ರಾಜ್ಯದ ಸಿಎಂ ಪರಿಹಾರ ಕೊಡಬೇಕು ಎನ್ನುವುದು ಇವರ ಆಗ್ರಹ.….ಚಿತ್ರ: 17ಎಂ-ಸರಕಾರಿನಿವೃತ್ತರಾದ ಸರಕಾರಿ ನೌಕರರ ರಾಜ್ಯ ಕಾರ‍್ಯಕಾರಿಣಿ ಸಭೆಯ ಉದ್ಘಾಟನೆ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮನಾಭ ಕೋಟ್ಯಾನ್

ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಮಂಗಳೂರು ಉತ್ತರ ವಿಧಾನ ಸಭೆ ಕ್ಷೇತ್ರದ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಪದ್ಮನಾಭ ಕೋಟ್ಯಾನ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ

ಪ್ರಾದೇಶಿಕ ವಾರ್ತೆಗಳು

ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಸಭೆ: ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ-ದ.ಕ.ಜಿಲ್ಲಾಧಿಕಾರಿ ದರ್ಶನ್.ಎಚ್.ವಿ.

ಮಂಗಳೂರು : ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ. ವಿಶ್ವದಾದ್ಯಂತ ರೆಡ್‌ಕ್ರಾಸ್ ಪಸರಿಸಿದ್ದು ಮಾನವೀಯ ಸೇವೆಯೇ ಸಂಸ್ಥೆಯ ಗುರಿಯಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ, ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ದರ್ಶನ್.ಎಚ್.ವಿ.ಹೇಳಿದರು.ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ ಭವ್ಯ ಶತಮಾನೋತ್ಸವ ಕಟ್ಟಡದ ನಿರ್ಮಾಣ ಸಹಿತ ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದಕಾರ್ಯ ಚಟುವಟಿಕೆ ರಾಜ್ಯಕ್ಕೆ ಮಾದರಿಯಾಗಿದೆ’ ಎಂದರು.ರೆಡ್‌ಕ್ರಾಸ್ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ‘ ದ.ಕ.ಜಿಲ್ಲಾಡಳಿತ, ದಾನಿಗಳು ಹಾಗೂ ರೆಡ್‌ಕ್ರಾಸ್ ಸದಸ್ಯರ ನೆರವಿನಿಂದ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ನಿರ್ಮಾಣವಾಗಿರುವುದು ಹೆಮ್ಮೆ ತಂದಿದೆ. ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆ ಹಾಗೂ ಇತರ ಆರೋಗ್ಯ ಸಮಸ್ಯೆ ಸಂಬಂಧಿಸಿ ದಾಖಲಾದವರಿಗೆ ಅವಶ್ಯ ಇದ್ದರೆ ರೆಡ್‌ಕ್ರಾಸ್ ಬ್ಲಡ್‌ಬ್ಯಾಂಕ್‌ನಿಂದ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಮಾಹಿತಿ ಒದಗಿಸಲು ರೆಡ್‌ಕ್ರಾಸ್‌ನಿಂದ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ ಎಂದರು.ರೆಡ್‌ಕ್ರಾಸ್ ರಾಜ್ಯ ಘಟಕದ ಚೇರ್ಮನ್ ಬಸ್ರೂರು ರಾಜೀವ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಶತಮಾನೋತ್ಸವ ಕಟ್ಟಡ ನಿರ್ಮಣಕ್ಕೆ ನೆರವಾದ ದಾನಿಗಳನ್ನು ಮತ್ತು ಆಡಳಿತ ಮಂಡಳಿಯ ಮಾಜಿ ನಿರ್ದೇಶಕರನ್ನು ಗೌರವಿಸಲಾಯಿತು.ತಾಲೂಕು ಮಟ್ಟದಲ್ಲಿ ಅತ್ಯುತ್ತಮ ಘಟಕ ಕಾರ್ಯ ನಿರ್ವಹಣೆಗಾಗಿ ಸುಳ್ಯ ಘಟಕದ ಅಧ್ಯಕ್ಷ ಪಿ.ಬಿ. ಸುಧಾಕರ ರೈ (ಪ್ರಥಮ) ಹಾಗೂ ಬೆಳ್ತಂಗಡಿ ಘಟಕದ ಹರಿದಾಸ್.ಎಸ್. ಎಂ. (ದ್ವಿತೀಯ) ಪುರಸ್ಕಾರ ಸ್ವೀಕರಿಸಿದರು.ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ವರದಿ ವಾಚಿಸಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಡಾ.ಸತೀಶ್ ರಾವ್, ಖಜಾಂಚಿ ಮೋಹನ್ ಶೆಟ್ಟಿ ಕೆ., ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಡಾ.ಬಿ. ಸಚ್ಚಿದಾನಂದ ರೈ, ಗುರುದತ್.ಎಂ. ನಾಯಕ್, ವಿಟ್ಟಲ ಎ., ಡಾ.ಸುಮನಾ ಬಿ. ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಅ.17ರಿಂದ ಸೃಜನಶೀಲ ಬರೆವಣಿಗೆ ಕಾರ್ಯಾಗಾರ

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಅ.17 ಮತ್ತು 18 ರಂದು ವಿ.ವಿ.ಕಾಲೇಜಿನ ಶಿವರಾಮ ಕಾರಂತ‌ ಸಭಾಂಗಣದಲ್ಲಿಸೃಜನೇತರ ಬರೆವಣಿಗೆಕಾರ್ಯಾಗಾರ ನಡೆಯಲಿದೆ.ಅ.17ರಂದು ಮಧ್ಯಾಹ್ನ 2ಕ್ಕೆ ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಮಂಗಳೂರು ವಿ.ವಿ.ಯ ಕುಲಪತಿ ಪ್ರೊ. ಪಿ. ಎಲ್ ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ.ಮಂಗಳೂರು ವಿ.ವಿ.ಯ ಕುಲ‌ಸಚಿವ ಕೆ.ರಾಜು‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿ.ವಿ.ಕಾಲೇಜು ಪ್ರಾಂಶುಪಾಲ ಪ್ರೊ.ಗಣಪತಿ ಗೌಡ, ಅಭಾಸಾಪ‌ ದ.ಕ.ಜಿಲ್ಲಾಧ್ಯಕ್ಷ ಪಿ. ಬಿ. ಹರೀಶ್ ರೈ‌ ಉಪಸ್ಥಿತರಿರುವರು.ಹಿರಿಯ‌ ಲೇಖಕ‌ ಡಾ.ಚ.ನ. ಶಂಕರ್ ರಾವ್, ‌ಪತ್ರಕರ್ತರಾದ ಆರ್.ಸಿ.ಭಟ್ , ಗುರುಪ್ರಸಾದ್ ಟಿ.ಎನ್. ಸಂಪನ್ಮೂಲ‌ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.ಅಭಾಸಾಪ‌ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ನರೂರು ಸಮಾರೋಪ ಭಾಷಣ ಮಾಡಲಿದ್ದಾರೆ‌ ಎಂದು ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಹಿಂಸಾತ್ಮಕ ರಾಜಕೀಯ ಖಂಡನೀಯ: ಪ್ರೊಫ್‌ಕಾನ್

ಮಂಗಳೂರು, ಅಕ್ಟೋಬರ್ 11, 2025 – ವಿಸ್ಡಮ್ ಇಸ್ಲಾಮಿಕ್ ಸ್ಟುಡೆಂಟ್ಸ್ ಆರ್ಗನೈಸೇಶನ್ ರಾಜ್ಯ ಸಮಿತಿ ಮಂಗಳೂರಿನಲ್ಲಿ ಆಯೋಜಿಸಿದ 29ನೇ ‘ಪ್ರೊಫ್‌ಕಾನ್’ ಜಾಗತಿಕ ವೃತ್ತಿಪರ ವಿದ್ಯಾರ್ಥಿಗಳ ಸಮ್ಮೇಳನವು ದೇಶದಾದ್ಯಂತದ ವೃತ್ತಿಪರ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಬೇರೂರುತ್ತಿರುವ ಅಪ್ರಜಾಸತ್ತಾತ್ಮಕ ಪ್ರವೃತ್ತಿಗಳು ಮತ್ತು ಹಿಂಸಾತ್ಮಕ ರಾಜಕೀಯವನ್ನು ತೀವ್ರವಾಗಿ ಖಂಡಿಸಿ, ಇಂತಹ ಪ್ರವೃತ್ತಿಗಳ ವಿರುದ್ಧ ವಿದ್ಯಾರ್ಥಿ ಸಮುದಾಯ ಒಗ್ಗೂಡಿ ಪ್ರತಿರೋಧಿಸಬೇಕೆಂದು ಮನವಿ ಮಾಡಿತು.ಶೈಕ್ಷಣಿಕ ಸಂಸ್ಥೆಗಳು ಜ್ಞಾನ ಮತ್ತು ಸಾಮಾಜಿಕ ಪ್ರಜ್ಞೆಯ ಕೇಂದ್ರಗಳಾಗಬೇಕಾದರೂ, ದುರದೃಷ್ಟವಶಾತ್ ಹಿಂಸೆ ಮತ್ತು ವಿಭಜನೆಯ ವೇದಿಕೆಗಳಾಗುತ್ತಿವೆ ಎಂದು ಸಮ್ಮೇಳನ ವ್ಯಕ್ತಪಡಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಮಾದರಿಗಳಾಗಬೇಕಾದ ಕ್ಯಾಂಪಸ್‌ಗಳಲ್ಲಿನ ಹಿಂಸಾತ್ಮಕ ರಾಜಕೀಯವನ್ನು ಸರ್ಕಾರಗಳು ಪ್ರೋತ್ಸಾಹಿಸಬಾರದು ಎಂದು ಒತ್ತಾಯಿಸಿತು. ಕ್ಯಾಂಪಸ್‌ಗಳಲ್ಲಿ ಶಾಂತಿ ಮತ್ತು ಸಹಕಾರದ ಮಾದರಿಗಳನ್ನು ಸ್ಥಾಪಿಸುವ ಅಗತ್ಯವನ್ನು ಸಭೆ ಒತ್ತಿ ಹೇಳಿತು.ಪ್ರಜಾಸತ್ತೆ ನಿರ್ಣಾಯಕ ತಿರುವಿನಲ್ಲಿದೆ: ಮಾಜಿ ಮುಖ್ಯ ಚುನಾವಣಾ ಆಯುಕ್ತರುಸಮ್ಮೇಳನದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಾದ ಡಾ. ಎಸ್.ವೈ. ಖುರೈಶಿ ಅವರು, ಜಾಗತಿಕ ಮಟ್ಟದಲ್ಲಿ ಮತ್ತು ವಿಶೇಷವಾಗಿ ಭಾರತದಲ್ಲಿ ಪ್ರಜಾಸತ್ತೆ ನಿರ್ಣಾಯಕ ತಿರುವಿನಲ್ಲಿದೆ ಎಂದು ತಿಳಿಸಿದರು.“ಕಳೆದ ಮೂರು ದಶಕಗಳಿಗಿಂತ ಹೆಚ್ಚು ಜನರು ಈಗ ಸರ್ವಾಧಿಕಾರಿ ಆಡಳಿತಗಳ ಅಡಿಯಲ್ಲಿ ವಾಸಿಸುತ್ತಿದ್ದಾರೆ. ಪ್ರಜಾಸತ್ತಾತ್ಮಕ ರಾಷ್ಟ್ರಗಳು ಬಳಲಿಕೆಗೊಂಡ ಸ್ಥಿತಿಯಲ್ಲಿವೆ. ಮತದಾರರ ಭಾಗವಹಿಸುವಿಕೆ ಕುಸಿಯುತ್ತಿದೆ ಮತ್ತು ಸಾಂವಿಧಾನಿಕ ಸಂಸ್ಥೆಗಳಲ್ಲಿನ ನಂಬಿಕೆ ಕ್ಷೀಣಿಸುತ್ತಿದೆ. ವಿಶ್ವದ ಅತಿದೊಡ್ಡ ಪ್ರಜಾಸತ್ತಾತ್ಮಕ ರಾಷ್ಟ್ರವಾದ ಭಾರತಕ್ಕೆ ಇದರಲ್ಲಿ ನಿರ್ಣಾಯಕ ಪಾತ್ರ ಮತ್ತು ಜವಾಬ್ದಾರಿ ಇದೆ,” ಎಂದು ಡಾ. ಖುರೈಶಿ ಅವರು ಹೇಳಿದರು.ಫೆಡರಲ್ ವ್ಯವಸ್ಥೆಗಳನ್ನು ದುರ್ಬಲಗೊಳಿಸುವುದು, ರಾಜಕೀಯ ಪಕ್ಷಗಳೊಳಗಿನ ಆಂತರಿಕ ಪ್ರಜಾಸತ್ತೆ ದುರ್ಬಲಗೊಳ್ಳುವುದು, ಮಾಧ್ಯಮ ಸ್ವಾತಂತ್ರ್ಯ ಕುಸಿಯುವುದು, ನಕಲಿ ಸುದ್ದಿಗಳ ಹರಡುವಿಕೆ ಮತ್ತು ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಧ್ರುವೀಕರಣವು ಪ್ರಜಾಸತ್ತೆಯಿಂದ ನಾವು ಗಳಿಸಿದ ಸಾಧನೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.ತಾಂತ್ರಿಕ ಕೌಶಲ್ಯಗಳನ್ನು ಪಡೆದುಕೊಳ್ಳುವ ಜೊತೆಗೆ ನಾಗರಿಕ ಪ್ರಜ್ಞೆಯನ್ನೂ ಬೆಳೆಸಿಕೊಳ್ಳಬೇಕು ಮತ್ತು ವೃತ್ತಿಪರರು ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಕರಾಗಬೇಕು ಎಂದು ಅವರು ಒತ್ತಾಯಿಸಿದರು. ವೃತ್ತಿಪರ ಶಿಕ್ಷಣದಲ್ಲಿ ನಾಗರಿಕ ಸಾಕ್ಷರತೆಯನ್ನು ಸೇರಿಸಬೇಕು ಎಂದು ಅವರು ಸೇರಿಸಿದರು.ಗಮನಾರ್ಹ ವಿದ್ಯಾರ್ಥಿ ಭಾಗವಹಿಸುವಿಕೆಕರ್ನಾಟಕದ ಶೈಕ್ಷಣಿಕ ರಾಜಧಾನಿ ಎಂದು ಕರೆಯಲ್ಪಡುವ ಮಂಗಳೂರಿನಲ್ಲಿ ನಡೆದ 29ನೇ ಪ್ರೊಫ್‌ಕಾನ್ ಪ್ರಭಾವಶಾಲಿ ವಿದ್ಯಾರ್ಥಿ ಭಾಗವಹಿಸುವಿಕೆಗೆ ಗಮನಾರ್ಹವಾಯಿತು. ಕೇರಳದ ಎಲ್ಲಾ ಜಿಲ್ಲೆಗಳಿಂದ ಮತ್ತು ಬೆಂಗಳೂರು, ಹೈದರಾಬಾದ್, ಚೆನ್ನೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳು ಮತ್ತು ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ ನೂರಾರು ವಿದ್ಯಾರ್ಥಿ ಪ್ರತಿನಿಧಿಗಳು ಆಗಮಿಸಿದರು. ಕೆ.ಸಿ. ರೋಡ್, ಬಿ.ಸಿ. ರೋಡ್, ಕೊಡಗು, ಉಳ್ಳಾಳ, ದೇರಾಲಘಟ್ಟ ಮತ್ತು ಪುತ್ತೂರ್‌ನಿಂದ ರೈಲು ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಿಂದ ಸಂಚಾರ ಸೌಲಭ್ಯಗಳನ್ನು ಏರ್ಪಡಿಸಲಾಗಿತ್ತು.ಸಮ್ಮೇಳನದ ಅಧಿವೇಶನಗಳುಮುಂಬೈನ ಸೈಯದ್ ಪಟೇಲ್, ವಿಸ್ಡಮ್ ಇಸ್ಲಾಮಿಕ್ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಫೈಸಲ್ ಮೌಲವಿ ಪುತುಪ್ಪರಂಬ, ಕಾರ್ಯದರ್ಶಿ ಅಬ್ದುಲ್ ಮಲಿಕ್ ಸಲಫಿ ಮತ್ತು ಇತರ ಅನೇಕ ವಿದ್ವಾಂಸರು ಮತ್ತು ಯುವ ನಾಯಕರು ವಿವಿಧ ಅಧಿವೇಶನಗಳನ್ನು ನಡೆಸಿದರು.‘ಎಕೋಸ್ ಆಫ್ ಅಲ್ ಖುದ್ಸ್: ದಿ ಪ್ಯಾಲೆಸ್ಟೈನ್ ಸ್ಟೋರಿ’ ಅಧಿವೇಶನದಲ್ಲಿ ಭೂರಾಜಕೀಯ ವಿಶ್ಲೇಷಕ ಮತ್ತು ಕಾಲಿಕಟ್ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ. ಪಿ.ಜೆ. ವಿನ್ಸೆಂಟ್ ಮತ್ತು ಡಾ. ಅಬ್ದುಲ್ಲಾ ಬಾಸಿಲ್ ಸಿ.ಪಿ. ಭಾಗವಹಿಸಿದರು. ಸಮ್ಮೇಳನವು ಪ್ಯಾಲೆಸ್ಟೀನಿಯನ್ ಜನರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿತು.‘ವೆನ್ ದಿ ರಿಜೀಮ್ ಫೇಲ್ಸ್, ದಿ ಪೀಪಲ್’ ಚರ್ಚೆಯಲ್ಲಿ ಎಂಎಸ್ಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಪಿ.ವಿ. ಅಹಮದ್ ಸಾಜು ಮತ್ತು ಯುವ ಕಾಂಗ್ರೆಸ್ ಪ್ರತಿನಿಧಿ ಡಾ. ಜಿಂಟೋ ಜಾನ್ ಭಾಗವಹಿಸಿದರು.ಶೀ ಸ್ಪೇಸ್ ಸಿಂಪೋಸಿಯಂಗೆ ವಿಸ್ಡಮ್ ವುಮೆನ್ ರಾಜ್ಯ ಅಧ್ಯಕ್ಷೆ ಡಾ. ಸಿ. ರಜೀಲಾ ಮತ್ತು ವಿಸ್ಡಮ್ ಗರ್ಲ್ಸ್ ರಾಜ್ಯ ಅಧ್ಯಕ್ಷೆ ಟಿ.ಕೆ. ಹನೀನಾ ನೇತೃತ್ವ ವಹಿಸಿದರು. ‘ಟ್ಯಾಕ್ಲಿಂಗ್ ಮಾಡರ್ನ್ ಅಡಿಕ್ಷನ್ಸ್’ ಕಾರ್ಯಾಗಾರವನ್ನು ಶೇಖ್ ಅಬ್ದುಸ್ಸಲಾಂ ಮದನಿ ಮತ್ತು ಶಫೀಖ್ ಬಿನ್ ರಹೀಂ ನಡೆಸಿದರು.ಇಂದಿನ ಕಾರ್ಯಕ್ರಮ (ಅಕ್ಟೋಬರ್ 12, ಭಾನುವಾರ)ಇಂದು ಬೆಳಿಗ್ಗೆ ನಡೆಯುವ ಓಪನ್ ಫೋರಮ್‌ನಲ್ಲಿ ಫೈಸಲ್ ಮೌಲವಿ, ಲಜ್ನತುಲ್ ಬುಹೂಸುಲ್ ಇಸ್ಲಾಮಿಯ್ಯ ಕಾರ್ಯದರ್ಶಿ ಶಮೀರ್ ಮದನಿ, ಮುಹಮ್ಮದ್ ಸ್ವಾದಿಖ್ ಮದನಿ ಮತ್ತು ಯಾಸಿರ್ ಅಲ್ ಹಿಕ್ಮಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ.‘ಪ್ರೊಫ್ಲೂಮಿನಾ ಅವಾರ್ಡ್ ಫಾರ್ ಎಕ್ಸಲೆನ್ಸ್’ ಪ್ರಶಸ್ತಿಯನ್ನು ಎನ್‌ಐಟಿ ಕಾಲಿಕಟ್ ಚಿನ್ನದ ಪದಕ ವಿಜೇತ ಮುಹಮ್ಮದ್ ಅಮೀನ್‌ಗೆ ಪ್ರೊಫ್‌ಕಾನ್ ಸ್ವಾಗತ ಸಮಿತಿ ಅಧ್ಯಕ್ಷ ಅಡೂರ್ ಬಿ. ಇಬ್ರಾಹಿಂ ಐಎಎಸ್ (ನಿವೃತ್ತ) ನೀಡುತ್ತಾರೆ.‘ಟ್ಯಾಕ್ಲಿಂಗ್ ಮಾಡರ್ನ್ ಅಡಿಕ್ಷನ್ಸ್’, ‘ಮಾಸ್ಟರಿಂಗ್ ಇಸ್ಲಾಮಿಕ್ ನಾಲೆಡ್ಜ್: ವೇ & ಮೀನ್ಸ್’ ಮತ್ತು ‘ನೆಕ್ಸ್ಟ್ ಜೆನ್ ರೆಡಿ: ಸ್ಕಿಲ್ಸ್, ಎಥಿಕ್ಸ್ & ಇನ್ನೋವೇಷನ್’ ಕಾರ್ಯಾಗಾರಗಳನ್ನು ನಡೆಸಲಾಗುವುದು.ಸಮಾರೋಪ ಸಮಾವೇಶವನ್ನು ಪ್ರಮುಖ ವಿದ್ವಾಂಸ ಮತ್ತು ವಿಸ್ಡಮ್ ಇಸ್ಲಾಮಿಕ್ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಸಲಫಿ ಉದ್ಘಾಟಿಸುತ್ತಾರೆ. ಕರ್ನಾಟಕ ವಿಧಾನಸಭಾ ಸದಸ್ಯ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಯಾಗಿರುತ್ತಾರೆ. ಶಾರ್ಜಾದ ಹುಸೇನ್ ಸಲಫಿ ಮುಖ್ಯ ಭಾಷಣ ಮಾಡುತ್ತಾರೆ.

ಪ್ರಾದೇಶಿಕ ವಾರ್ತೆಗಳು

ರಜತ ಮಹೋತ್ಸವ ಆಚರಣೆ: ಪೇಸ್ ಸಿಲ್ವಿಯೋರಾ 2025

ಪೇಸ್ ಗ್ರೂಪ್ ತನ್ನ ರಜತ ಮಹೋತ್ಸವದ ಅಂಗವಾಗಿ “ಸಿಲ್ವಿಯೋರಾ 2025” ಎಂಬ ಶೀರ್ಷಿಕೆಯಲ್ಲಿ ಅತ್ಯಂತ ಸ್ಮರಣೀಯ ಕ್ಷಣವನ್ನು 2025ರ ಅಕ್ಟೋಬರ್ 14ರಂದು ಪೇಸ್ ಜ್ಞಾನ ನಗರದಲ್ಲಿ ಅಧಿಕೃತ ಬ್ಯಾನರ್ ಅನಾವರಣದೊಂದಿಗೆ ಆಚರಿಸಿತು. ಈ ಕಾರ್ಯಕ್ರಮವು ಸಂಸ್ಥೆಯ 25 ವರ್ಷದ ಯಶಸ್ವಿ ಪ್ರಯಾಣದ ಮಹತ್ವದ ಮೈಲುಗಲ್ಲುಗಳನ್ನು ಗುರುತಿಸಿತು.ಕಾರ್ಯಕ್ರಮವು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಯಿತು. ಪೇಸ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅಬ್ದುಲ್ಲಾ ಇಬ್ರಾಹಿಂ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ತಮ್ಮ ಭಾಷಣದಲ್ಲಿ ಅವರು “ಸಿಲ್ವಿಯೋರಾ 2025” ಬ್ಯಾನರ್ ಅನ್ನು ಅನಾವರಣಗೊಳಿಸಿ, ಮುಂದಿನ ಮೂರು ತಿಂಗಳುಗಳ ಕಾಲ ನಡೆಯುವ ವೈಭವಶಾಲಿ ಉತ್ಸವಗಳ ಸರಣಿಗೆ ಅಧಿಕೃತ ಚಾಲನೆ ನೀಡಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರ್ಫ್ರಾಜ್ ಜೆ ಹಾಸಿಮ್ ಅವರು ಸಭಿಕರನ್ನು ಸ್ವಾಗತಿಸಿ, ರಜತ ಮಹೋತ್ಸವದ ಸಂಭ್ರಮದ ಕುರಿತು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಸ್ ಎಂ.ಕೆ. ಅವರು ಸಂಸ್ಥೆಯ 25 ವರ್ಷದ ಪ್ರಯಾಣದ ಕುರಿತು ಸ್ಮರಣೀಯ ಅನುಭವವನ್ನು ತಿಳಿಸಿ , ಭವಿಷ್ಯದ ಗುರಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಪೇಸ್ ಗ್ರೂಪ್ನ ವಿವಿಧ ಘಟಕಗಳ ಪ್ರಾಂಶುಪಾಲರು, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ಲರೂ ಸಂಸ್ಥೆಯ ಇತಿಹಾಸವನ್ನು ಸ್ಮರಿಸಿ, ಮುಂಬರುವ ವಿಶ್ವವಿದ್ಯಾನಿಲಯದ ಗುರಿಯನ್ನು ಸಾಧಿಸಲು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಲೀಮುಲ್ಲಾ ಖಾನ್ ಅವರು ಹಾಜರಿದ್ದ ಸರ್ವರಿಗೂ ಧನ್ಯವಾದವನ್ನು ಸಲ್ಲಿಸಿದರು.ರಜತ ಮಹೋತ್ಸವದ ಅಂಗವಾಗಿ ನಾನಾ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸೃಜನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಈ ಬ್ಯಾನರ್ ಅನಾವರಣ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಪ್ರಾದೇಶಿಕ ವಾರ್ತೆಗಳು

ಮಂಗಳೂರು: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ವಾರ್ಷಿಕೋತ್ಸವ ಸಂಭ್ರಮ

ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಾರ್ಷಿಕೋತ್ಸವ ಅಕ್ಟೋಬರ್ 12 ರಂದು ರವಿವಾರ ವಿಜೃಂಭಣೆಯಿಂದ ನಡೆಯಿತು.ಹಬ್ಬದ ಸಾಂಭ್ರಮಿಕ ಬಲಿ ಪೂಜೆಯ ನೇತೃತ್ವವನ್ನು ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿ ಸೋಜಾ ಅವರು ವಹಿಸಿ ವಾರ್ಷಿಕೋತ್ಸವದ ಶುಭಾಶಯಗಳನ್ನು ಸಲ್ಲಿಸಿದರು. ಚರ್ಚ್ ನ ಪೋಷಕಿ ಮದರ್ ತೆರೆಸಾ ಅವರ ಮೌಲ್ಯಾಧಾರಿತ ಜೀವನವನ್ನು ನೆನಪಿಸಿದ ಅವರು ಪ್ರತಿಯೊಬ್ಬ ಭಕ್ತರು ಕೂಡಾ ತಮ್ಮ ಜೀವನದಲ್ಲಿ ತೆರೆಸಾ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳ ಬೇಕೆಂದು ಹೇಳಿದರು.ಪ್ರವಚನ ನೀಡಿದ ಜಪ್ಪು ಸೈಂಟ್ ಜೋಸೆಫ್ ಸೆಮಿನರಿಯ ಮಾಜಿ ರೆಕ್ಟರ್ ವಂದನೀಯ ಫಾ. ಡಾ. ರೊನಾಲ್ಡ್ ಸೆರಾವೋ ಅವರು ಬಡ ಬಗ್ಗರ ಮತ್ತು ನಿರ್ಗತಿಕರ ಸೇವೆ ಮಾಡಿದ ಸಂತ ತೆರೆಸಾ ಅವರ ಬದುಕು ನಮಗೆಲ್ಲ ಮಾದರಿಯಾಗಿದೆ. ಅಂತಹ ಪೋಷಕಿಯನ್ನು ಪಡೆದ ಪಾಲ್ದನೆ ಚರ್ಚ್ ನ ಭಕ್ತರು ಧನ್ಯರು ಎಂದು ಹೇಳಿದರು.ಬಲಿ ಪೂಜೆಯಲ್ಲಿ ಮಂಗಳೂರು ಸಿಟಿ ವಲಯದ ಮುಖ್ಯಸ್ಥ ವಾಮಂಜೂರು ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಡಾ. ಜೇಮ್ಸ್ ಡಿ ಸೋಜಾ, ಅಂಜೆಲೋರ್ ಗಾರ್ಡಿಯನ್ ಏಂಜೆಲ್ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಫ್ರೆಡ್ರಿಕ್ ಮೊಂತೇರೊ, ಬಜ್ಜೋಡಿ ಇನ್ಫೆಂಟ್ ಮೇರಿ ಚರ್ಚ್ ನ ವಂದನೀಯ ಫಾ. ಮೆಲ್ವಿನ್ ಡಿ ಸೋಜಾ, ಜಪ್ಪು ಸೆಮಿನರಿಯ ವಂದನೀಯ ಫಾಫೆಲಿಕ್ಸ್ ಮೊಂತೇರೊ, ಮಂಜೇಶ್ವರ ಚರ್ಚ್ ನ ಧರ್ಮ ಗುರು ವಂದನೀಯ ಫಾ. ವಿನ್ಸೆಂಟ್ ಸಲ್ಡಾನ್ಹಾ, ಪಾಲ್ದನೆ ಸಂತ ತೆರೆಸಾ ಚರ್ಚ್ ನ ಡೀಕೋನ್ ರೋವಿನ್ ಲೋಪೆಜ್ ಮತ್ತು ಇತರ ಗುರುಗಳು ಉಪಸ್ಥಿತರಿದ್ದರು. ಪಾಲ್ದನೆ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಬಲಿಪೂಜೆಯಲ್ಲಿ ಭಾಗವಹಿಸಿ ವಾರ್ಷಿಕೋತ್ಸವದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಆಧ್ಯಾತ್ಮಿಕ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ , ಗಾಯನ ಮಂಡಳಿಯ ಅಧ್ಯಕ್ಷೆ ಲಿಝಿ ಫೆರ್ನಾಂಡಿಸ್ ಮತ್ತು ಇತರರು ಉಪಸ್ಥಿತರಿದ್ದರು. ಹಬ್ಬದ ಪಿರ್ಜೆಂತ್ ಫ್ರಾಂಕ್ ಫೆರ್ನಾಂಡಿಸ್ ಅವರನ್ನು ಎಂ.ಸಿ.ಸಿ. ಬ್ಯಾಂಕಿನ ಮಾಜಿ ಅಧ್ಯಕ್ಷ ಮೆಲ್ವಿನ್ ಡಿ ಕುನ್ಹಾ ಅವರೊಂದಿಗೆ ಸನ್ಮಾನಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಕ್ರೀಡಾಕ್ಷೇತ್ರಕ್ಕೆ ಟೊರ್ಪೆಡೋಸ್ ಸಂಸ್ಥೆಯ ಕೊಡುಗೆ ಅಪಾರ-ಯಶ್ಪಾಲ್ ಸುವರ್ಣ

ಉಡುಪಿ-ಇಲ್ಲಿನ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್-2025 ವಿದ್ಯುಕ್ತವಾಗಿ ಉದ್ಘಾಟನೆ ನೆರವೇರಿತು.ದೀಪ ಬೆಳಗಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಬಹಳಷ್ಟು ವರ್ಷಗಳಿಂದ ಹಲವಾರು ಕ್ರೀಡಾಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಸೃಷ್ಟಿಸಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನಾಗಿ ರೂಪಿಸಿದೆ”ಎಂದರು.ಈ ಸಂದರ್ಭ ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಪ್ರಸಾದರಾಜ್ ಕಾಂಚನ್,ಯುವಜನ‌ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ,ಉದ್ಯಮಿ ಅಬ್ದುಲ್ ರೆಹಮಾನ್,ವಕೀಲರಾದ ಗಣೇಶ್ ಕುಮಾರ್ ಮಟ್ಟು,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಗೌತಮ್ ಶೆಟ್ಟಿ,ಕ್ರೀಡಾಕೂಟ ಪ್ರಮುಖ ಆಯೋಜಕರಲ್ಲೋರ್ವರಾದ ಶಾಲಿನಿ ಶೆಟ್ಟಿ,ಬಿಗ್ ಬೀಟರ್ಸ್ ಮಾಲೀಕ ಸುದೇಶ್ ಶೆಟ್ಟಿ, ರಾಯ್ ರಾಕರ್ಸ್ ನ ಆಲ್ವಿನ್ ಪಿಂಟೋ,ರ‌್ಯಾಕೆಟ್ ರೇಂಜರ್ಸ್ ನ ಗುರುರಾಜ್ ಸಾಲ್ಯಾನ್ ಮತ್ತು ಕಾಶೀರಾಮ್ ಪೈ,ನ್ಯಾಷನಲ್ ಸ್ಮ್ಯಾಷರ್ಸ್ ನ‌ ಅಬ್ದುಲ್ ರೆಹಮಾನ್,ಮಟ್ಟುಮಿತ್ ವಾರಿಯರ್ಸ್ ನ ಗಣೇಶ್ ಮತ್ತು ಅಮಿತ್,ಮಾಲ್ಸಿ ಸ್ಟ್ರೈಕರ್ಸ್ ನ ಚಂದ್ರಕಾಂತ್ ಶೆಣೈ ಮತ್ತು ಗೌತಮ್ ಶೆಣೈ,ಕೋಸ್ಟಲ್ ಸ್ಟಾರ್ ಸುರತ್ಕಲ್ ನ ಅರುಣ್.ಎಮ್.ಡಿಸೋಜಾ,ಮತ್ಸ್ಯರಾಜ್ ಗ್ರೂಪ್ ಮಲ್ಪೆಯ ಅಭಿಜಿತ್ ಕೋಟ್ಯಾನ್,ಗ್ಯಾಲಕ್ಸಿ ಸ್ಪೋರ್ಟ್ಸ್ ನ ಕೃಷ್ಣಮೂರ್ತಿ ಶೇಟ್ ಮತ್ತು ಸದಾನಂದ ನಾವಡ,ಫೆದರ್ ಫೈಟರ್ಸ್ ನ ಆರ್.ಉದಯ್ ಕುಮಾರ್ ಶೆಟ್ಟಿ ಮತ್ತು ರೋಹಿತ್ ಶೆಟ್ಟಿ, ಡೇರಿಂಗ್ ಜಾಗ್ವರ್ಸ್ ನ ಹರ್ಷ ಕುಮಾರ್ ಗೌಡ ಮತ್ತು ಕೋಸ್ಟಲ್ ನೈಲ್ ಮಾಲೀಕರಾದ ಡಾಲ್ಫಿ ಸಾರೆಸ್ ಮತ್ತು ಶಮ್ಶೀರ್ ಉಪಸ್ಥಿತರಿದ್ದರು.ಸುರೇಶ್ ಭಟ್ ಸ್ಪೋರ್ಟ್ಸ್ ಕನ್ನಡ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಕದ್ರಿ ಉದ್ಯಾನವನದಲ್ಲಿ ಸಸ್ಯೋತ್ಸವ

ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಕದ್ರಿ ಉದ್ಯಾನವನ ದಲ್ಲಿ ಅಕ್ಟೋಬರ್ 17ರಿಂದ 19 ವರೆಗೆ “ಕದ್ರಿ ಸಸ್ಯೋತ್ಸವ -ರೈತ ಮೇಳ” ನಡೆಯಲಿದೆ.ಬೆಳಗ್ಗೆ 8ರಿಂದ ರಾತ್ರಿ 8ವರೆಗೆ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.ಅಕ್ಟೋಬರ್ 17ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಕಾರ್ಯಕ್ರಮ ಉದ್ಘಾಟಿಸುವರು.ರೈತಕುಡ್ಲ ಪ್ರತಿಷ್ಠಾನ ಅಧ್ಯಕ್ಷ ಭರತ್ ರಾಜ್ ಸೊರಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ದಕ್ಷಿಣ ಕನ್ನಡ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ರೈತ ಕುಡ್ಲ ಗೌರವ ಪ್ರಶಸ್ತಿ ಪ್ರದಾನ ಮಾಡುವರು.ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಮಂಗಳೂರು ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ,ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೊನ್ನಪ್ಪ ಗೋವಿಂದ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಕಾರ್ಯಕಾರಿ ಸದಸ್ಯರಾದ ಜಗನ್ನಾಥ ಗಾಂಭೀರ್, ಜಿ.ಕೆ. ಭಟ್, ರಾಮ ಮೊಗರೋಡಿ, ರೈತಕುಡ್ಲ ಪ್ರತಿಷ್ಠಾನ ಕಾರ್ಯದರ್ಶಿ ಲತೀಶ್ ಭಾಗವಹಿಸುವರು.ಸಸ್ಯೋತ್ಸವದಲ್ಲಿ ಏನಿರಲಿದೆ?ನರ್ಸರಿ ಸಂಸ್ಥೆ ಗಳಿಂದ ಹೂವು, ಅಲಂಕಾರಿಕಾ ಸಸ್ಯಗಳ ಪ್ರದರ್ಶನ ಮಾರಾಟ ಇರಲಿದೆ. ತರಕಾರಿ, ಹಣ್ಣಿನ ಗಿಡಗಳು, ಒಳಾಂಗಣ ಸಸ್ಯ, ಕೈತೋಟ ನಿರ್ಮಾಣಕ್ಕೆ ಪೂರಕ ಗೊಬ್ಬರ, ಯಂತ್ರಗಳು, ಬೀಜಗಳು, ತರಕಾರಿ ಗಿಡಗಳು, ಗ್ರೋ ಬ್ಯಾಗ್ ಮಾರಾಟವಿರಲಿದೆ. ಕಸಿ ಕಟ್ಟುವ ಬಗ್ಗೆ ಉಚಿತ ತರಬೇತಿ ಕಲ್ಪಿಸಲಾಗಿದೆ.ವಿಶೇಷ ಆಕರ್ಷಣೆಯಾಗಿ ಮಣ್ಣಿನ ಮಡಿಕೆ ತಯಾರಿ, ಹಣತೆ ತಯಾರಿ ಪ್ರಾತ್ಯಕ್ಷಿಕೆ, ಬುಟ್ಟಿ ಹೆಣೆಯುವ ಪ್ರಾತ್ಯಕ್ಷಿಕೆ, ಕೈಮಗ್ಗದಿಂದ ಸೀರೆ‌ ತಯಾರಿ ಪ್ರಾತ್ಯಕ್ಷಿಕೆ ಇರಲಿದೆ. ನಗರ ಜೇನು‌ಕೃಷಿಗೆ ಪೂರಕವಾಗಿ ಜೇನುಕೃಷಿ ಮಾಹಿತಿ, ಸ್ಥಳೀಯ ರೈತೋದ್ಯಮಿಗಳು ತಯಾರಿಸಿದ ಉತ್ಪನ್ನಗಳ ಮಾರಾಟ, ಖಾದಿ ಉತ್ಪನ್ನಗಳ ಮಾರಾಟ ಏರ್ಪಡಿಸಲಾಗಿದೆ. ದೀಪಾವಳಿ ‌ಹಬ್ಬಕ್ಕೆ ಅಗತ್ಯವಾದ ಮಣ್ಣಿನ ಹಣತೆ, ಗೂಡುದೀಪ, ಅಲಂಕಾರಿಕ ವಸ್ತುಗಳು ಲಭ್ಯವಿರಲಿದೆ.ಪಾರ್ಕ್ ನಲ್ಲಿ ಶುಕ್ರವಾರ ಮತ್ತು‌ ಶನಿವಾರ ರಕ್ತದೊತ್ತಡ, ಮಧುಮೇಹ ತಪಾಸಣೆ ಶಿಬಿರ‌ ಏರ್ಪಡಿಸಲಾಗುವುದು.ರೈತ‌ ಕುಡ್ಲ ಗೌರವ ಪಡೆಯುವ ರೈತ ಜಾನ್ ಮೊಂತೇರೋ:ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ನಿವಾಸಿ, ಕಾಯಕವನ್ನೇ ಉಸಿರಾಗಿಸಿಕೊಂಡ ಕರ್ಮಯೋಗಿ, ಬೇಸಾಯ ಹಾಗೂ ಮನೆಯ ಖರ್ಚಿಗಾಗಿ ನೀರಿನ ಸಮಸ್ಯೆ ಎದುರಾದಾಗ ಸುರಂಗಗಳನ್ನು ಕೊರೆದು‌‌ ಜಲ ಸಂಗ್ರಹಿಸಿದ ಸಾಧಕ. ಭತ್ತ, ಅಡಕೆ, ತರಕಾರಿ ಬೆಳೆಯುತ್ತಿರುವ 71 ವರ್ಷದ ಕಾಯಕಯೋಗಿ.ಹಣತೆ ಸಿಂಧೂರಅಕ್ಟೋಬರ್ 18ರಂದು ಹಣತೆ ಸಿಂಧೂರ ವಿಶೇಷ ಕಾರ್ಯಕ್ರಮ ನಡೆಯಲಿದೆ.‌ ಸಾಯಂಕಾಲ 6ಗಂಟೆಗೆ ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ದೀಪಾವಳಿ ಆಚರಣೆ ನಡೆಯಲಿದೆ. ಭಿನ್ನ ಸಾಮರ್ಥ್ಯ ದ ಮಕ್ಕಳು ತಯಾರಿಸಿದ ಹಣತೆಯನ್ನು‌ ಸ್ಟಾಲ್ ಗಳಲ್ಲಿ ‌ಮಾರಾಟ ಮಾಡಿ‌ ಮಕ್ಕಳಿಗೆ ‌ಪ್ರೋತ್ಸಾಹ ನೀಡಲಾಗುವುದು.ಪತ್ರಿಕಾಗೋಷ್ಠಿಯಲ್ಲಿ ‌ಉಪಸ್ಥಿತಿ:ಭರತ್ ರಾಜ್, ರೈತಕುಡ್ಲ ಪ್ರತಿಷ್ಠಾನ ಅಧ್ಯಕ್ಷಲತೀಶ್ ಪ್ರತಿಷ್ಠಾನ ದ ಕಾರ್ಯದರ್ಶಿನವೀನ್ ಕುಲಶೇಖರ, ಪ್ರತಿಷ್ಠಾನದ ಸದಸ್ಯ

ಪ್ರಾದೇಶಿಕ ವಾರ್ತೆಗಳು

ಸಿದ್ದಕಟ್ಟೆ ಕೊಡಂಗೆ: ವೀರ ವಿಕ್ರಮ ಜೋಡುಕರೆ ಎರಡನೇ ವರ್ಷದ ‘ ರೋಟರಿ ಕಂಬಳ ‘ಕ್ಕೆ ಚಾಲನೆ. ‘ಕಂಬಳ ಕ್ಕೆ ಅಂತರ್ ರಾಷ್ಟೀಯ ಮಾನ್ಯತೆ’: ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ

ಬಂಟ್ವಾಳ: ದೇಶದಲ್ಲಿ ಸಿಗುವ ಕೆಲವೊಂದು ಜನಪ್ರಿಯ ಆಹಾರ ಮತ್ತು ಪಾನೀಯ ಪೊಟ್ಟಣ ಗಲ್ಲಿ ಕೂಡಾ ದಷ್ಟ -ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಶಿಸುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ. ಕೆ. ಹೇಳಿದ್ದಾರೆ. ಇಲ್ಲಿನ ಸಿದ್ದಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಭಾನುವಾರ ಏರ್ಪಡಿಸಿದ್ದ ಎರಡನೇ ವರ್ಷದ ‘ರೋಟರಿ ಕಂಬಳ’ ಉದ್ಘಾಟಿಸಿ ಅವರು ಮಾತನಾಡಿದರು.ಲೊರೆಟ್ಟೋ ಹಿಲ್ಸ್ ಸೇರಿದಂತೆ ಬಂಟ್ವಾಳ, ಮೊಡಂಕಾಪು, ಮಂಗಳೂರು ಸೆಂಟ್ರಲ್ ಮತ್ತು ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಸಹ ಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಕಿರಿಯ ಮತ್ತು ಸಬ್ ಜೂನಿಯರ್ ವಿಭಾಗದಈ ಕಂಬಳ ಕಾರ್ಯಕ್ರಮದಲ್ಲಿಮಾಜಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜಮುಖಿ ಚಟುವಟಿಕೆ ಜೊತೆಗೆ ಪಬ್ಲಿಕ್ ಇಮೇಜ್ ವೃದ್ಧಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ರೋಟರಿ ಕಂಬಳ ಪೂರಕವಾಗಿದೆ ಎಂದರು.ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಭೇಟಿ ನೀಡಿ ಶುಭ ಹಾರೈಸಿದರು.ಲೊರೆಟ್ಟೋ ಹಿಲ್ಸ್ ಕ್ಲಬ್ಬಿನ ಮಾಜಿ ಅಧ್ಯಕ್ಷ ಎಂ. ಪದ್ಮರಾಜ್ ಬಲ್ಲಾಳ್ ಮಾವಂತೂರು ಇವರು ‘ಕಂಬಳ  ಕರೆ ಉದ್ಘಾಟಿಸಿದರು. ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಬೊಮ್ಮರೆಡ್ಡಿ,   ಸಿದ್ದಕಟ್ಟೆ ಕೊಡಂಗೆ ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ, ಕಕ್ಯಪದವು ಮೈರ ಕಂಬಳ ಸಮಿತಿ ಅಧ್ಯಕ್ಷ ಸುದರ್ಶನ್  ಬಜ, ರೋಟರಿ ಸಹಾಯಕ ಗವರ್ನರ್ ಡಾ.ಎ.ಜಯ ಕುಮಾರ ಶೆಟ್ಟಿ, ಉಮೇಶ್ ರಾವ್ ಮಿಜಾರು, ಕೆ.ಪದ್ಮನಾಭ ರೈ ಕಲ್ಲಡ್ಕ,ಡಾ. ರಾಜಾರಾಮ್ ಉಪ್ಪಿನಂಗಡಿ, ಪ್ರಮುಖರಾದ ಡಾ. ದೇವದಾಸ್ ರೈ, ನಾರಾಯಣ ಹೆಗ್ಡೆ, ಡಾ. ಶಿವಪ್ರಕಾಶ್,ಲೊರೆಟ್ಟೋ ಕ್ಲಬ್ ಅಧ್ಯಕ್ಷ ವಿಜಯ ಫೆರ್ನಾಂಡಿಸ್, ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಬಂಟ್ವಾಳ ಕ್ಲಬ್ಬಿನ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಸಿದ್ದಕಟ್ಟೆ ಕ್ಲಬ್ಬಿನ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜೆ, ಮೊಡಂಕಾಪು ಕ್ಲಬ್ಬಿನ ಅಧ್ಯಕ್ಷೆ ಪ್ರೀಮಾ ವೈಲೆಟ್ ಫೆರ್ನಾಂಡಿಸ್, ಮಂಗಳೂರು ಕ್ಲಬ್ಬಿನ ಅಧ್ಯಕ್ಷ ಭಾಸ್ಕರ ರೈ ಕಟ್ಟ  ಶುಭ ಹಾರೈಸಿದರು.  ಪ್ರಮುಖರಾದ ಶ್ರುತಿ ಮಾಡ್ತಾ, ಡಾ.ಆತ್ಮ ರಂಜನ್ ರೈ,ಗಣೇಶ್ ಶೆಟ್ಟಿ ಸಿದ್ದಕಟ್ಟೆ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ,ಜಾನ್ ಕೆನ್ಯೂಟ್ ಮಸ್ಕರೆನ್ಹಸ್ ಉಪ್ಪಿನಂಗಡಿ, ಡಾ.ಪ್ರಹ್ಲಾದ್ ಮೈಸೂರು, ಪುಷ್ಪರಾಜ ಹೆಗ್ಡೆ, ಕಿರಣ್  ಹೆಗ್ಡೆ ಮಾಣಿ,ಕಿರಣ್ ಕುಮಾರ್ ಮಂಜಿಲ, ಮೈಕಲ್ ಡಿಕೋಸ್ತ, ಮೋಹನ್ ಕೆ.ಶ್ರೀಯಾನ್ ರಾಯಿ, ಮೊಹಮ್ಮದ್ ಯಾಸೀರ್ ಕಲ್ಲಡ್ಕ, ಟೀನಾ ಡಿಕೊಸ್ತ ಸಿದ್ದಕಟ್ಟೆ,ಪ್ರಸನ್ನ ರಾವ್ ಮೊಡಂಕಾಪು, ವಿಕಾಸ್ ಕೋಟ್ಯಾನ್ ಮಂಗಳೂರು, ರಾಜೇಶ್ ಶೆಟ್ಟಿ ಸೀತಾಳ, ಹರಿಪ್ರಸಾದ್ಶೆಟ್ಟಿ ಕುರುಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಮೈಕಲ್ ಡಿಕೋಸ್ತ,ಹೊನ್ನಯ ಕಾಟಿಪಳ್ಳ,ಪಿ.ಎ.ರಹೀಂ ಬಿ.ಸಿ.ರೋಡ್, ಕೆ.ರಮೇಶ್ ನಾಯಕ್, ಅಲೆಕ್ಸಾಂಡರ್ ಲೋಬೋ, ಶಶಿಧರ ಶೆಟ್ಟಿ ಕಲ್ಲಾಪು,ಸೀತಾರಾಮ ಶೆಟ್ಟಿ, ಹರೀಶ ಶೆಟ್ಟಿ, ಜಿಲ್ಲಾ ತೀರ್ಪುಗಾರ ವಿಜಯ ಕುಮಾರ್  ಕಂಗಿನಮನೆ, ಉಮೇಶ್ ಹಿಂಗಾಣಿ ಮತ್ತಿತರರಿದ್ದರು.    

Scroll to Top