ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಪಾಂಡವರಕಲ್ಲು: ಸರಕಾರಿ ಶಾಲೆಗೆ 8 ಫ್ಯಾನ್ ಕೊಡುಗೆ ನೀಡಿದ ಸುಧಾಕರ ಶೆಣೈ

ಬಂಟ್ವಾಳ : ಪಾಂಡವರಕಲ್ಲು ದ.ಕ. ಜಿಲ್ಲಾ  ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾರ್ಥಮಿಕ ಶಾಲೆಗೆ ಸುಧಾಕರ್ ಶೆಣೈ  ಖಂಡಿಗ ಅವರು ಕೊಡುಗೆಯಾಗಿ ಎಂಟು ಫ್ಯಾನ್ ಗಳನ್ನು ಶುಕ್ರವಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ  ಶಾಲಾ ಮುಖ್ಯ ಶಿಕ್ಷಕಿ ಅಗ್ನೆಸ್ ಪ್ರಮಿಲಾ ಲೋಬೊ, ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಜೇಕ್ಯಾರ್, ಸದಸ್ಯರಾದ ಮಾಧವ ಪಟ್ರಾಡಿ,  ಲತೀಫ್, ಬಾಬು ಪೂಜಾರಿ ನಿರಾಡಿ, ಹನೀಫ್ ಕೆದಿಲೆ, ಫಾರೂಕ್ ನೀರಾಡಿ, ಪದ್ಮನಾಭ,  ನಮಿತಾ ಹಾಗೂ ಮತ್ತಿತರರು ಹಾಜರಿದ್ದರು.

ಪ್ರಾದೇಶಿಕ ವಾರ್ತೆಗಳು

ವಿಶ್ವ ಪರಿಸರ ದಿನಾಚರಣೆಗಾಂಧಿನಗರ ಸರಕಾರಿ ಶಾಲಾ ಮಕ್ಕಳಿಗೆ ಬಟ್ಟೆ ಬ್ಯಾಗ್ ವಿತರಣೆ

ಮಂಗಳೂರು, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿನಗರದ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಶಾಲೆಯ ಮಕ್ಕಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಲು ಬಟ್ಟೆ ಚೀಲಗಳನ್ನು ವಿತರಿಸಲಾಯಿತು.ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಆಯೋಜಿಸಲಾದ ಭಾಷಣ ಸ್ಪರ್ಧೆಯ ಬಹುಮಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್ ವಿತರಿಸಿ ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುವ ಹಾನಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಬಟ್ಟೆಯ ಚೀಲ ನೀಡಿ ಜಾಗೃತಿ ಮೂಡಿಸುವುದು ಉತ್ತಮ ಕಾರ್ಯ ಎಂದು ಹೇಳಿದರು.ಬಟ್ಟೆ ಚೀಲ ವಿತರಿಸಿ ಮಾತನಾಡಿದ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಬಂಧಕ ಅರುಣಾ ಪ್ರಭ, ಪರಿಸರದ ಮೇಲೆ ನಿರಂತರ ನಡೆಯುವ. ಮಾಲಿನ್ಯ ದಿಂದದಾಗಿ ಗಾಳಿ ಕೂಡ ವಿಷಯುಕ್ತ ವಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡಲು ಮೊದಲ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ನರೇಶ್ ಶೆಣೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್. ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ ಎನ್, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಫ್ಲೆವಿ ಫೆರ್ನಾಂಡೀಸ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮನ

ಮಂಗಳೂರು, ಜೂನ್ 5:ಭಾರತೀಯ ಮಜ್ದೂರ್ ಸಂಘದ (BMS) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ *ಶ್ರೀ ವಿ. ರಾಧಾಕೃಷ್ಣನ್* ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದರು. ಜೂನ್ 7ರಂದು ನಡೆಯಲಿರುವ ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಜಿಲ್ಲೆಯ ವಿವಿಧ ಸಂಯೋಜಿತ ಯೂನಿಯನ್‌ಗಳಿಗೆ ಭೇಟಿ ನೀಡಿ ಸಂಘಟನಾ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.ಜಿಲ್ಲೆಗೆ ಆಗಮಿಸಿದ ಶ್ರೀ ರಾಧಾಕೃಷ್ಣನ್ ಅವರನ್ನು ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಕಾರ್ಯವಾಹರಾದ *ಶ್ರೀ ಪ್ರಕಾಶ್ ಪಿ.ಎಸ್.* , ಭಾರತೀಯ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷರಾದ *ಶ್ರೀ ಸತೀಶ್ ಶೆಟ್ಟಿ,* ಜಿಲ್ಲಾ ಅಧ್ಯಕ್ಷರಾದ *ಶ್ರೀ ಅನಿಲ್ ಕುಮಾರ್ ಯು.,* ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ *ಶ್ರೀ ಗೋಪಾಲ ಕೃಷ್ಣ* ಹಾಗೂ ಜಿಲ್ಲಾ ಉಪಾಧ್ಯಕ್ಷರಾದ *ಶ್ರೀ ರೋಹಿತಾಶ್ವ* ಉಪಸ್ಥಿತರಿದ್ದರು.ತಮ್ಮ ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಶ್ರೀ ರಾಧಾಕೃಷ್ಣನ್ ಅವರು ಭಾರತೀಯ ಮಜ್ದೂರ್ ಸಂಘದ ಸಂಯೋಜಿತ ಯೂನಿಯನ್‌ಗಳ ಕಚೇರಿಗಳಿಗೆ ಭೇಟಿ ನೀಡಿ ಅವುಗಳ ಆಡಳಿತಾತ್ಮಕ ಹಾಗೂ ಸಂಘಟನಾ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ. ಯೂನಿಯನ್‌ಗಳ ದಾಖಲಾತಿಗಳ ಸಮರ್ಪಕ ನಿರ್ವಹಣೆ, ಸದಸ್ಯತ್ವ ನೋಂದಣಿ, ರಿಜಿಸ್ಟರ್‌ಗಳ ಪಾಲನೆ, ಲೆಕ್ಕಪತ್ರಗಳ ನಿರ್ವಹಣೆ, ವಾರ್ಷಿಕ ವರದಿಗಳ ಸಲ್ಲಿಕೆ, ಅಫಿಲಿಯೇಷನ್ ನವೀಕರಣ ಹಾಗೂ ಭಾರತೀಯ ಮಜ್ದೂರ್ ಸಂಘದ ನಿಯಮಾವಳಿಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.ಸಂಘಟನೆಯ ಬಲವರ್ಧನೆ ಹಾಗೂ ಕಾರ್ಯಕ್ಷಮತೆಯ ವೃದ್ಧಿಗಾಗಿ ಎಲ್ಲಾ ಸಂಯೋಜಿತ ಯೂನಿಯನ್‌ಗಳು ಕಾನೂನುಬದ್ಧ ಹಾಗೂ ಸಂಘಟನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮಹತ್ವವನ್ನು ಅವರು ಒತ್ತಿ ಹೇಳಲಿದ್ದಾರೆ.ಜೂನ್ 7ರಂದು ಜಿಲ್ಲಾ ಕಾರ್ಯಾಲಯದ *“ಪ್ರಭಾಕರ ಘಾಟೆ”* ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲೆಯ ಸಂಘಟನಾ ಬೆಳವಣಿಗೆ, ಕಾರ್ಮಿಕರ ಸಮಸ್ಯೆಗಳು, ಸಂಯೋಜಿತ ಯೂನಿಯನ್‌ಗಳ ಕಾರ್ಯವೈಖರಿ ಹಾಗೂ ಮುಂದಿನ ಸಂಘಟನಾ ಕಾರ್ಯಕ್ರಮಗಳು ಮತ್ತು ಕಾರ್ಯತಂತ್ರಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

ಪ್ರಾದೇಶಿಕ ವಾರ್ತೆಗಳು

ಸಕಾರಾತ್ಮಕ ಚಿಂತನೆಯಿಂದ ಮಾನಸಿಕ ಆರೋಗ್ಯ -ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಸಾಮಾಜಿಕ ಜಾಲತಾಣಗಳ ಪ್ರಭಾವ, ಶೈಕ್ಷಣಿಕ ಒತ್ತಡ, ಬದಲಾಗುತ್ತಿರುವ ಜೀವನಶೈಲಿ ಸಹಿತ ಹಲವು ಕಾರಣಗಳಿಂದ ಹದಿಹರೆಯದವರು ಖಿನ್ನತೆಗೆ ಒಳಗಾಗುತ್ತಿದಾರೆ. ಹದಿಹರೆಯದವರ ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದಷ್ಟೇ ಮುಖ್ಯ, ಆತ್ಮಸ್ಥೆರ್ಯ ಹಾಗೂ ಸಕಾರಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ವತಿಯಿಂದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಭಾಗಿತ್ವದಲ್ಲಿ ಸಮಾಲೋಚನೆ ಮತ್ತು ಹದಿಹರೆಯದಮಾನಸಿಕ ಆರೋಗ್ಯ ಸರ್ಟಿಫಿಕೇಟ್ ಕೋರ್ಸ್ ಪೂರೈಸಿದ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ಗುರುವಾರ ರೆಡ್‌ಕ್ರಾಸ್ ಸೊಸೈಟಿಯ ಪ್ರೇರಣಾ ಸಭಾಂಗಣದಲ್ಲಿ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.ಯೂತ್ ರೆಡ್‌ಕ್ರಾಸ್ ನಿರ್ದೇಶಕಿ ಡಾ.ಸುಮನ ಬೋಳಾರ್ ಮಾತನಾಡಿ “ಹದಿಹರೆಯದಲ್ಲಿ ಕೆಲವು ಸಮಸ್ಯೆಗಳು ಸಾಮಾನ್ಯ. ಇವುಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಸಲಹೆ ನೀಡುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು. ಈ ನಿಟ್ಟಿನಲ್ಲಿ ಹದಿಹರೆಯದ ಮಾನಸಿಕ ಆರೋಗ್ಯ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗಿದೆ ಎಂದರು.ವಿದ್ಯಾರ್ಥಿನಿಯರಾದ ಸುಕನ್ಯಾ ಮತ್ತು ಶೋಭರಾಣಿ ಕೋರ್ಸ್ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಖಜಾಂಜಿ ಗುರುದತ್ ನಾಯಕ್, ನಿರ್ದೇಶಕರಾದ ಡಾ.ಸತೀಶ್ ರಾವ್, ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ಕಲಾ ನಡಿಗೆ ಜನರ ಬಳಿಗೆ ವಿನೂತನ ಕಾರ್ಯಕ್ರಮ

ಮಂಗಳೂರು, ಸಂಗೀತ ಆಲಿಸುವುದರ ಮೂಲಕ ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಬಂಧಕ ಅರುಣಾ ಪ್ರಭ ಅಭಿಪ್ರಾಯಪಟ್ಟರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಾ ಸಾಧನಾ ಮಂಗಳೂರು ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾದ ಕಲಾ ನಡಿಗೆ ಜನರ ಬಳಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಘ ಸಂಸ್ಥೆಗಳ ಮೂಲಕ ಈ ರೀತಿಯ ಕಾರ್ಯಕ್ರಮ ಆಯೋಜಿಸಿರುವುದು ಮಾದರಿಯಾಗಿದೆ. ನಮ್ಮ ಕಲೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರಾಜೇಶ್, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕಲಾ ನಡಿಗೆ ಜನರ ಬಳಿಗೆ ಆಯೋಜಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕದ್ರಿ ಉದ್ಯಾನವನ ಸಲಹಾ ಸಮಿತಿ ಸದಸ್ಯ ಜಗನ್ನಾಥ ಗಾಂಭೀರ್,ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ ಸಿರಿ ತೋಟಗಾರಿಕೆ ಇಲಾಖೆಯ ರುಕ್ಮಯ್ಯ,ಪತ್ರಕರ್ತರಾದ ಶ್ರೀನಿವಾಸ್ ನಾಯಕ್, ರಾಜೇಶ್ ದಡ್ಡ0ಗಡಿ ಕಲಾವಿದರಾದ ವಿಭಾ ನಾಯಕ್, ಹೇಮಂತ್ ಭಾಗವತ್, ಅಶ್ವಿತ್ ಪ್ರಭು, ದೀಪ್ತಿ, ಭೂಮಿ ಉಪಸ್ಥಿತರಿದ್ದರು.ವಿಭಾ ಶ್ರೀನಿವಾಸ್ ನಾಯಕ್ ಹಾಗೂ ಸಂಗೀತ ಕಾರ್ಯಕ್ರಮ ನಡೆಯಿತು.

ಪ್ರಾದೇಶಿಕ ವಾರ್ತೆಗಳು

ಜೂ.14 ರಂದು ರಕ್ತದಾನಿಗಳಿಗೆ ಸನ್ಮಾನ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಜೂ.೧೪ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುವುದು.ಕಾರ್ಯಕ್ರಮದ ಅಂಗವಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಜಿಲ್ಲಾ ಮಟ್ಟದಲ್ಲಿ ಸನ್ಮಾನಿಸಲಾಗುವುದು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಜಿಲ್ಲೆಯ ಓರ್ವ ರಕ್ತದಾನಿಯನ್ನು ರೆಡ್‌ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ವತಿಯಿಂದ ಬೆಂಗಳೂರಿನಲ್ಲಿ ವಿಶೇಷವಾಗಿ ಗೌರವಿಸಲಾಗುವುದು.10 ಅಥವಾ ಅದಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ದ.ಕ.ಜಿಲ್ಲೆಯ ರಕ್ತದಾನಿಗಳು ತಮ್ಮ ರಕ್ತದಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜೂ.6ರ ಒಳಗಾಗಿ ಕಚೇರಿ ವಿಳಾಸ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, “ಶತಮಾನೋತ್ಸವ ಕಟ್ಟಡ” ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣ, ಓಲ್ಡ್ ಪೋರ್ಟ್ ರೋಡ್, ಮಂಗಳೂರು -575001 ಈ ವಿಳಾಸಕ್ಕೆ ಸಲ್ಲಿಸಬೇಕು. ಈ ಹಿಂದೆ ರೆಡ್‌ಕ್ರಾಸ್ ಸಂಸ್ಥೆಯಿಂದ ರಕ್ತದಾನಕ್ಕಾಗಿಸನ್ಮಾನಿತರಾದವರು ಆಯ್ಕೆಗೆ ಅರ್ಹರಾಗಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.ದಾಖಲೆಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮೂಲಕವೂ ಕಳುಹಿಸಬಹುದಾಗಿದೆ.ವಾಟ್ಸಪ್ : 96068 66210e mail : ircsdkd@gmai.com

ಪ್ರಾದೇಶಿಕ ವಾರ್ತೆಗಳು

ಇಂದು ಡಾ.ಮಿಜಾರುಗುತ್ತು ಮೋಹನ ಆಳ್ವರಿಗೆ ಹುಟ್ಟುಹಬ್ಬ ದ ಸಂಭ್ರಮ.

ಮೂಡಬಿದ್ರೆ – ಮೇ 31.ಇಂದು ನಿಸ್ವಾರ್ಥ ಸಮಾಜ ಸೇವಕ, ಬಹುಮುಖ ಪ್ರತಿಭೆಯ ಸವ್ಯಸಾಚಿ, ಅಪೂರ್ವ ಸಾಧಕ, ಶಿಕ್ಷಣ, ಸಾಂಸ್ತ್ರತಿಕ, ಕ್ರೀಡಾ ಕ್ಷೇತ್ರಗಳ ಮಹಾನ್ ಪೋಷಕ, ಮೂಡಬಿದ್ರೆ ಅಭಿವೃದ್ಧಿಯ ಹರಿಕಾರ, ಅದ್ಭುತ ವಾಗ್ಮಿ, ಸಾಹಿತ್ಯ, ಜಾನಪದ ಲೋಕದ ಅಪೂರ್ವ ಸಿರಿ, ಅಂತಾರಾಷ್ಟ್ರೀಯ ಖ್ಯಾತಿಯ ಸರಿಸಾಟಿ ಇಲ್ಲದ ಅದ್ವಿತೀಯ ಸಂಘಟಕ, ಮಾನವೀಯ ಮೌಲ್ಯಗಳಿಗೆ ಜೀವ ತುಂಬುವ ಕರುಣಾಮೂರ್ತಿ, ಬಡವರ ಬಂಧು, ವಿದ್ಯಾ ದಾನಿ, ಕಲಾ ಪೋಷಕ, ಸಮಯಪಾಲಕ,ನುಡಿದಂತೆ ನಡೆವ ನೇರ ನಡೆ ನುಡಿಯ ಸೌಹಾರ್ದ ವ್ಯಕ್ತಿತ್ವದ ಮಾನವತಾವಾದಿ. ಸರ್ವ ಧರ್ಮಿಗಳ ನೆಚ್ಚಿನ ಸರದಾರ, ಬಂಟ ಸಮಾಜದ ಅಪೂರ್ವ ಮುತ್ತು, ದಿಟ್ಟ ನಡಿಗೆಯ ಅಜಾತ ಶತ್ರು, ದಣಿವರಿಯದ ನಾಯಕ, ರಾಷ್ಟ್ರ, ಅಂತಾರಾಷ್ಟ್ರೀಯ ಖ್ಯಾತಿಯ ಹೆಸರಾಂತ ಮೂಡಬಿದ್ರೆ ಆಳ್ವಾಸ್ ಎಜುಕೇಶನ್ ಸಂಸ್ಥೆ ಯ ಸ್ಥಾ ಪಕ ಅಧ್ಯಕ್ಷರಾಗಿರುವ ಡಾ. ಮಿಜಾರುಗುತ್ತು ಡಾ. ಮೋಹನ ಆಳ್ವ ಅವರಿಗೆ 75ನೇ ಹುಟ್ಟುಹಬ್ಬದ ಸಂಭ್ರಮ. ಡಾ. ಮಿಜಾರುಗುತ್ತು ಮೋಹನ್ ಆಳ್ವರ ಹುಟ್ಟುಹಬ್ಬಕ್ಕೆ ಎಂಪಿ ಎಂಎಲ್ ಎ ಸಂಪಾದಕ ಡಾ.ಅಶೋಕ್ ಶೆಟ್ಟಿ ಬಿ. ಎನ್. ಅವರು ಶುಭ ಹಾರೈಸಿದ್ದಾರೆ

ಪ್ರಾದೇಶಿಕ ವಾರ್ತೆಗಳು

ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ-ಪಿ.ಬಿ.ಹರೀಶ್ ರೈ

ಮಂಗಳೂರು: ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು ಸಮಸ್ಯೆಗಳನ್ನುನೇರವಾಗಿ ಜನತೆಗೆ ತಲುಪಿಸುತ್ತಿವೆ. ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹೇಳಿದರು.ರೋಟರಿ ಕ್ಲಬ್ ಮಂಗಳೂರು ನಾರ್ತ್ ಇದರ ವತಿಯಿಂದ ನಗರದ ಮಲ್ಲಿಕಟ್ಟೆಯ ರೋಟರಿ ಬಾಲ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾಧ್ಯಮ ಮತ್ತು ಸಮಾಜ ವಿಷಯದ ಬಗ್ಗೆ ಉಪನ್ಯಾಸ ನೀಡಿದರು,ಇಂದಿನ ವಿದ್ಯಾಥಿಗಳು , ಯುವ ಜನತೆ ಓದಿನಿಂದ ವಿಮುಖರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ವಿಚಾರಗಳು ಸತ್ಯ ಎಂದು ನಂಬುವ ಸ್ಥಿತಿ ಇದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ದಿನ ಪತ್ರಿಕೆಗಳು ನೈಜ ಸುದ್ದಿಯ ಜತೆಗೆ ಜ್ಞಾನದ ಆಗರವಾಗಿದೆ. ಪತ್ರಿಕೆ ಓದುವಂತೆ ಮಕ್ಕಳನ್ನು ಪ್ರೇರೇಪಿಸುವುದುಹಿರಿಯರ ಜವಾಬ್ದಾರಿ ಎಂದು ಅವರು ಹೇಳಿದರು.ರೋಟರಿ ಕ್ಲಬ್ ಮಂಗಳೂರು ನಾರ್ತ್ ಅಧ್ಯಕ್ಷ ಡಾ.ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಾಂಭವಿ ಪ್ರಭು, ನಿಕಟಪೂರ್ವ ಅಧ್ಯಕ್ಷ ಮೋಹನ್ ನಾಯರ್, ನಿಯೋಜಿತ ಅಧ್ಯಕ್ಷ ಸುದರ್ಶನ್ ನಾಯಕ್ , ಡಾ.ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಆರ್.ಎಂ.ಗೊಗೆರಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಗಣೇಶ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಉರುಮಣೆ ಶಾಲೆಯಲ್ಲಿ ಎನ್ ಎಸ್ ಎಸ್ ಕಾರ್ಯಾಗಾರ; ಶೈಕ್ಷಣಿಕ ಸಾಮಾಗ್ರಿ ವಿತರಣೆ

ಮಂಜನಾಡಿ,ಮೇ,25ಮಂಗಳೂರು ವಿಶ್ವವಿದ್ಯಾನಿಲಯದ ನೆಹರು ಚಿಂತನ ಕೇಂದ್ರ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ,ವಿಶ್ವವಿದ್ಯಾನಿಲಯ ಕಾಲೇಜು, ಮಂಗಳಗಂಗೋತ್ರಿಯ ಸಹಯೋಗ ದೊಂದಿಗೆ ಒಂದು ದಿನದ ಎನ್. ಎಸ್. ಎಸ್ ಕಾರ್ಯಾಗಾರ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾ ಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಉರುಮಣೆ ಯಲ್ಲಿ ನಡೆಯಿತು. ಉರುಮಣೆ ಶಾಲೆಯ ಆಟದ ಮೈದಾನ ಮಕ್ಕಳಿಗೆ ಆಟಕ್ಕೆ ಯೋಗ್ಯವಂತೆ ಶಾಲಾ ಆಟದ ಮೈದಾನವನ್ನು ಸರಿಪಡಿಸುವ ಮತ್ತು ಸ್ವಚ್ಚತಾ ಕಾರ್ಯ ನಡೆಯಿತು. ವಿಶ್ವವಿದ್ಯಾನಿ ಲಯ ಕಾಲೇಜಿನ ವಿದ್ಯಾರ್ಥಿ ಗಳು ಬೆಳಗ್ಗಿನಿಂದ ಸಂಜೆಯ ತನಕ ಶ್ರಮದಾನ ವನ್ನು ನಡೆಸಿದರು. ಕಾರ್ಯಕ್ರಮದ ಕೊನೆಯಲ್ಲಿ ನೆಹರು ಚಿಂತನ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ನಾಯ್ಕ ಮತ್ತು ರೋಟರಿ ಕ್ಲಬ್ ನ ಅಧ್ಯಕ್ಷರಾದ ಭಾಸ್ಕರ್ ರೈ ರವರು ತರಕಾರಿ ಗಿಡಗಳನ್ನು ನೆಡುವ ಮೂಲಕ ಶ್ರಮದಾನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಧನ್ಯವಾದ ಸಮರ್ಪಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ,ರೋಟರಿ 3180 ಮಾಜಿ ಗವರ್ನರ್ ಡಾ. ದೇವದಾಸ್ ರೈ ಭಾಗವಹಿಸಿದ್ದರು. ವಿಶ್ವವಿದ್ಯಾನಿಲಯ ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಶೇಷಶಯನ ಹೆಚ್. ವಿ, ನೆಹರು ಚಿಂತನ ಕೇಂದ್ರದ ಸಂಶೋಧನ ಸಹಾಯಕಿ ಡಾ. ನಯನ ಕೃಷ್ಣಾಪುರ, ಸಂಧ್ಯಾ ಅಂಚನ್, ಉರುಮನೆ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ಎಲ್ ಅಶ್ರಫ್, ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಪಿ. ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಉರುಮಣೆ ಶಾಲಾ ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ನಗರದಲ್ಲಿ ಸುರಕ್ಷತಾ ಸಂಕಲ್ಪ ಜಾಥ

ಮಂಗಳೂರು,ಮೇ.26;ನಗರದ ಬೆಸೆಂಟ್ ಮಹಿಳಾ ಕಾಲೇಜಿನಿಂದ ಪಿವಿಎಸ್ ವೃತ್ತದ ವರೆಗೆ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಮಂಗಳವಾರ ಸುರಕ್ಷಾ ಸಂಕಲ್ಪ ಜಾಥ ನಡೆಯಿತು.ಮಂಗಳೂರು ಪೊಲೀಸ್ ಕಮೀಷನರೇಟ್ ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿಸುರಕ್ಷಾ ಜಾಥಾಕ್ಕೆ ಚಾಲನೆ ನೀಡಿ ಮಾತನಾ ಡುತ್ತಾ,ರಸ್ತೆ ಸಂಚಾರ ನಿಯಮದ ಪಾಲನೆ ಯಿಂದ ನಮ್ಮ ಜೀವದ ರಕ್ಷಣೆಯ ಜೊತೆ ಇತರರ ಜೀವವನ್ನು ಉಳಿಸಬಹುದು. ಸಂಚಾರ ನಿಯಮದ ಪಾಲನೆಯಲ್ಲಿ ಎಚ್ಚರ ತಪ್ಪಿದಾಗ ಅಮಾಯಕರು ವಾಹನ ಅಪಘಾತಕ್ಕೀಡಾಗಿ ಬಲಿಯಾದ ಉದಾಹರಣೆಗಳಿವೆ.ನಾಗರೀಕರಿಗೂ ರಸ್ತೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಅಗತ್ಯವಿದೆ. ಇದರಿಂದಲೂ ಸಾಕಷ್ಟು ಅಪಘಾತಗಳನ್ನು ತಪ್ಪಿಸಲು ಸಾಧ್ಯವಿದೆಈ ಹಿನ್ನೆಲೆಯಲ್ಲಿ ಸುರಕ್ಷತಾ ಜಾಥ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಸಮಾರಂಭದಲ್ಲಿ ಮಂಗಳೂರು ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ ಅಧ್ಯಕ್ಷ ತೆ ವಹಿಸಿದ್ದರು.ಸಮಾರಂಭದಲ್ಲಿಬೆಸೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಕುಮಾರ್ ಕೆ.ಸಿ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತ ರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್, ರೋಟರಿ ಜಿಲ್ಲೆ 3180 ಮಾಜಿ ಗವರ್ನರ್ ರಾಜ ಗೋಪಾಲ್ ರೈ,ರೋಟರಿ ಝೋನಲ್ ಲೆಫ್ಟಿನೆಂಟ್ ರವಿಜಲನ್,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ರೋಟರಿ ಸೆಂಟ್ರಲ್ ನಿಯೋಜಿತ ಅಧ್ಯಕ್ಷ ರವೀಂದ್ರ ಬಿ ಎನ್, ರೋಟರಿ ಪೂರ್ವಾ ಧ್ಯಕ್ಷ ರಾಜೇಶ್ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ದೀಕ್ಷಿತಾ ಸ್ವಾಗತಿಸಿ ದರು,ಕಾರ್ಯದರ್ಶಿ ಅಂಚಲ್ ಕೃತಜ್ಞತೆ ಸಲ್ಲಿಸಿದರು.ಎಸಿಪಿ ಗೀತಾ ಕುಲಕರ್ಣಿ ಹಾಗೂ ಟ್ರಾಫಿಕ್ ಪೊಲೀಸ್ ಸಬ್ ಇನ್ಸಪೆಕ್ಟರ್ ಮಂಜುಳಾ,ಅಸಿಸ್ಟೆಂಟ್ ಸಬ್ ಇನ್ಸಪೆಕ್ಟರ್ ಭುವನೇಶ್ , ಸುರಕ್ಷಾ ಜಾಥದ ಬಗ್ಗೆ ವಿದ್ಯಾರ್ಥಿ ಗಳಿಗೆ ಮಾರ್ಗದ ರ್ಶನ ನೀಡಿದರು.ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಜಾಥದಲ್ಲಿ ಮಾಹಿತಿ ಫಲಕದ ಜೊತೆ ಭಾಗವ ಹಿಸಿದ್ದರು

Scroll to Top