ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ಮಂಗಳೂರು ಪುರಭವನದಲ್ಲಿ ಇಂದು (ನವೆಂಬರ್ 27 ರ) ಸಂಜೆ 6 ಕ್ಕೆ ವಿಶೇಷ ಚೇತನ ಕಲಾವಿದರಿಗೆ ಸಂಗೀತ ಪರಿಕರ ವಿತರಣೆ ಮತ್ತು ವಿಶ್ವ ದಾಖಲೆ ಸಾಧಕಿ ದೀಕ್ಷಾ ವಿ. ಅಭಿನಂದನೆ.

ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಸ್ಥಾನ (NSCDF) ಆಶ್ರಯದಲ್ಲಿ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಹಯೋಗದೊಂದಿಗೆ ದಕ್ಷಿಣ ಕನ್ನಡದಲ್ಲಿ ನೆಲೆಸಿರುವ ವಿಶೇಷ ಚೇತನ ಕಲಾವಿದರಿಗೆ ಸಂಗೀತ ಪರಿಕರ ಹಾಗೂ ಧ್ವನಿ ವರ್ಧಕ ವಿತರಣ ಕಾರ್ಯಕ್ರಮ ಮತ್ತು 216 ಗಂಟೆಗಳ ಕಾಲ ನಿರಂತರ ಭರತ ನಾಟ್ಯ ಮಾಡುವ ಮೂಲಕ GOLDEN BOOK OF WORLD RECORD ನಲ್ಲಿ ವಿಶ್ವ ದಾಖಲೆ ಮಾಡಿರುವ ಸಾಧಕಿ ವಿಧುಷಿ ದೀಕ್ಷಾ ವಿ. ಅವರಿಗೆ ಅಭಿನಂದನಾ “ಪುರಸ್ಕಾರ” ಸಮಾರಂಭ ಇಂದು (ದಿನಾಂಕ 27/11/2025 ನೇ ಗುರುವಾರ) ಸಂಜೆ ಗಂಟೆ 6ಕ್ಕೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಮಹತ್ವ ಪೂರ್ಣ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ನ್ಯಾಯವಾದಿ ರವೀಂದ್ರ ಮುನ್ನಿಪಾಡಿ ನೆರವೇರಿಸಲಿದ್ದು , NSCDF ಅಧ್ಯಕ್ಷ ಗಂಗಾಧರ್ ಗಾಂಧೀ ಅಧಕ್ಷತೆವಹಿಸಲಿರುವ ಈ ಕಾರ್ಯಕ್ರಮದಲ್ಲಿ, ಬೆಂಗಳೂರು ಮೂಲದ ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಸ್ಥಾನ ಅಧ್ಯಕ್ಷೆ ಸೌಮ್ಯ ಶೆಟ್ಟಿ ವಿಶೇಷ ಚೇತನಾ ಕಲಾವಿದರಿಗೆ ಸಂಗೀತ ಪರಿಕರ ಮತ್ತು ಧ್ವನಿವರ್ಧಕಗಳನ್ನು ಹಸ್ತಾಂತರಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಹಾಗೂ ಸಮಾಜ ಸೇವಕ ರಂಜನ್ ಮತ್ತು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಸ್ಥಾನ (KSSAP) ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.“ಒಂದೇ ಮಾತರಂ ” ಗೀತೆಯೊಂದಿಗೆ ಆರಂಭ ಗೊಳ್ಳಲಿರುವ ಈ ಪ್ರಾರ್ಥನಾ ಗೀತೆಯನ್ನು ದೃತಿ ಪಿ.ಶೆಟ್ಟಿ, ಶಿಲ್ಪಾ ಜೆ. ಸಕಲೇಶಪುರ ಮತ್ತು ರೇಖಾ ಸುದೇಶ್ ರಾವ್ ಹಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮದ ನಿರೂಪಣೆಯನ್ನು ಮಂಗಳೂರಿನ ಜನಪ್ರಿಯ ನಿರೂಪಕಿ, ಮಾತಿನ ಮಲ್ಲಿ ರಶ್ಮಿ ಸನಿಲ್ ನಿರ್ವಹಿಸಲಿದ್ದಾರೆ ಎಂದು NSCDF ಪ್ರಧಾನ ಕಾರ್ಯದರ್ಶಿ ದಿನಕರ ಡಿ. ಬಂಗೇರ ಮಾಧ್ಯಮ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಪತ್ರಕರ್ತರಾದ ಶ್ರೀನಿವಾಸ ನಾಯಕ್ ಇಂದಾಜೆ, ಪುಷ್ಪರಾಜ್ ಶೆಟ್ಟಿ ಬಿ. ಎನ್, ರಾಜೇಶ್ ಶೆಟ್ಟಿ, ಸತೀಶ್ ಇರಾ, ಅಶೋಕ್ ಶೆಟ್ಟಿ ಬಿ. ಎನ್. ಅವರಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಮತ್ತು ಬಹಿರಂಗ ಅಧಿವೇಶನ ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಬಿ.ಎನ್, ಉಪಾಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಇರಾ, ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್. ಬ್ರಹ್ಮರಕೂಟ್ಲು ಅವರನ್ನು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಮಾತೃ ಸಂಘದ ಹೊರ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುನರಾಯ್ಕೆಗೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ, ಮೋಹನ್ ದಾಸ್ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಹರೀಶ್ ಶೆಟ್ಟಿ ಪಡು ಕುಡೂರು, ಇಂದ್ರಾಳಿ ಜಯಕರ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೊಲ್ಲಾಡಿ ಬಾಲಕೃಷ್ಣ ರೈ, ಚಂದ್ರಹಾಸ ಶೆಟ್ಟಿ ರಂಗೋಲಿ, ನ್ಯಾಯವಾದಿ ಪೃಥ್ವಿರಾಜ್ ರೈ ಸೇರಿದಂತೆ ಗಣ್ಯರನೇಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು

ಪ್ರಾದೇಶಿಕ ವಾರ್ತೆಗಳು

ಬಸವಣ್ಣನವರ ವಚನಗಳಾಗಲಿ, ನಾರಾಯಣ ಗುರುಗಳ ತಾತ್ವಿಕ ಚಿಂತನೆಗಳು ನಮ್ಮ ಜೀವನದಲ್ಲಿ ಅನುಷ್ಠಾನಗೊಳಿಸಬೇಕು-ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಆಶಯ.

ಬಸವಣ್ಣನವರ ವಚನಗಳಾಗಲಿ, ನಾರಾಯಣ ಗುರುಗಳ ತಾತ್ವಿಕ ಚಿಂತನೆಗಳನ್ನಾಗಲೀ ಬೆಳೆಸುವ ಬದಲು ನಮ್ಮ ಜೀವನದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಭಿಪ್ರಾಯಪಟ್ಟರು.ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಕದಳಿ ಮಹಿಳಾ ವೇದಿಕೆ, ದ.ಕ.ನಾರಾಯಣ ಗುರು ಧರ್ಮ ಪರಿಪಾಲನಾ ಸಮಿತಿ ಮಂಗಳೂರು ಹಾಗೂ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ನಡೆದ ‘ಶರಣರ ಅನುಭಾವ ಸಂಗಮ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ವಿಚಾರ ಸಂಕೀರ್ಣ ಹಾಗೂ ಪ್ರಶಸ್ತಿ ಪ್ರಧಾನ’ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಗೋಕರ್ಣಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ವಸಂತ ಕಾರಂದೂರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯುವಜನತೆಗೆ ಸಮಾಜ ಸುಧಾರಕರ ತತ್ವಗಳನ್ನು ತಿಳಿಸುತ್ತಾ ಅವರನ್ನು ಸಮಾಜಮುಖಿಯಾಗಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮಾತನಾಡಿ, ನಮ್ಮ ದೇಶದ ಪರಂಪರೆ ಹಾಗೂ ನೆಲದ ಗುಣ ನಮ್ಮನ್ನು ಒಗ್ಗೂಡಿಸಿ ಹೃದಯವಂತರನ್ನಾಗಿ ಮಾಡುವುದರೊಂದಿಗೆ ಸಂಸ್ಕಾರವಂತರನ್ನಾಗಿ ಮಾಡುತ್ತದೆ ಎಂದು ತಿಳಿಸಿದರು.ಈ ಸಂದರ್ಭ ಅಲೆಮಾರಿ-ಅರೆಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ‘ಬಸವಶ್ರೀ’ ಕಾಯಕಯೋಗಿ ಪ್ರಶಸ್ತಿ, ಸ್ತ್ರೀಶಕ್ತಿಗಾಗಿ ಪ್ರತಿಭಾ ಕುಳಾಯಿ ಅವರಿಗೆ ‘ಕದಳಿಶ್ರೀ’ ಪ್ರಶಸ್ತಿ ಹಾಗೂ ಆಕಾಶವಾಣಿ ಉದ್ಘೋಷಕ ಮುದ್ದು ಮೂಡುಬೆಳ್ಳೆ ಅವರಿಗೆ ‘ನಾರಾಯಣ ಗುರುಶ್ರೀ’ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಬಳಿಕ ಮಂಗಳೂರು ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಸುಮಾ ಅರುಣ್ ಮಾನ್ವಿ ಅಧ್ಯಕ್ಷತೆಯಲ್ಲಿ ‘ಸಾಮಾಜಿಕ ಕ್ರಾಂತಿಗಾಗಿ ಶರಣರ ಪಯಣ’ ಈ ವಿಷಯದ ಬಗ್ಗೆ ಮಂಗಳೂರು ವಿವಿಯ ನಿವೃತ್ತ ಪ್ರಾಧ್ಯಾಪಕ ಡಾ.ಕೆ ಎಸ್.ಜಯಪ್ಪ ಅವರು ವಿಚಾರ ಮಂಡಿಸಿದರು. ನಾರಾಯಣ ಗುರುಶ್ರೀ ವಿಚಾರ ಸಂಕಿರಣದ ಬಗ್ಗೆ ಡಸ್‌ಡಿಎಂ ಕಾಲೇಜಿನ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ರಾಮಚಂದ್ರ ಮಾತನಾಡಿದರು.ಅಖಿಲ ಭಾರತ ವೀರೇಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಬಸವರಾಜ ಗಗನ್, ಮಂಗಳೂರಿನ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷರುಗಳಾದ ಶೇಖರ ಪೂಜಾರಿ, ಡಾ.ಬಿ.ಜಿ ಸುವರ್ಣ, ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಶ್ರೀ ಗೋಕರ್ಣಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕುಮಾರ್, ಮಂಗಳೂರು ಅನುಭಾವ ಸಂಗಮದ ಅಧ್ಯಕ್ಷ ಶರಣ ಗುಂಡಪ್ಪ ಪೀರಲಾ ಅಬ್ಬೆಂದಿ, ಕರಾವಳಿ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಪ್ರ.ಕಾ. ಚನ್ನಬಸಪ್ಪ ರೊಟ್ಟಿ, ಧಾರವಾಡ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಶರಣ ಕರಿಬಸಪ್ಪ ಕೋರಿಶೆಟ್ಟರ್ ಮೊದಲಾದವರು ಉಪಸ್ಥಿತರಿದ್ದರು. ಶರಣ ಸಾಹಿತ್ಯ ಪರಿಷತ್ತಿ ದ.ಕ. ಜಿಲ್ಲಾಧ್ಯಕ್ಷ ಶರಣ ಜಗನ್ನಾಥಪ್ಪ ಪನ್ಸಾಲೆ ಜನವಾಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕದಳಿ ಮಹಿಳಾ ವೇದಿಕೆಯ ರಿಜಿಸ್ಟರ್ ಸುರೇಖಾ ಯಾಳವಾರ ವಂದಿಸಿದರು. ಕರಾವಳಿ ಪ್ರದೇಶ ಅನುಭವ ಪೀಠದ ಪೀಠಾಧಿಪತಿ ಅಲ್ಲಮಪ್ರಭು ನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಅಡ್ಡೂರು ಸೆಂಟ್ರಲ್ ಕಮಿಟಿ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಆಯ್ಕೆ

ಮಂಗಳೂರು: ಅಡ್ಡೂರು ಸೆಂಟ್ರಲ್ ಕಮಿಟಿಯ ೨೦೨೫-೨೬ನೇ ಸಾಲಿನ ಮಹಾಸಭೆಯು ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ನಂದ್ಯ ಆಯ್ಕೆಯಾದರು.ಎಂ.ಎಸ್.ರಫೀಕ್ ಅಧ್ಯಕ್ಷತೆಯಲ್ಲಿ ಎ.ಎಸ್.ಅಶ್ರಫ್ ಉಸ್ತುವಾರಿಯಲ್ಲಿ ಸಫ್ವಾ ದಮ್ಮಾಮ್ ಮವಾದಿ ರೆಸಾರ್ಟ್‌ನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಶರೀಫ್ ಜಿ.ಎ., ಶಮೀರ್ ಅಳಕೆ ಗೌರವಾಧ್ಯಕ್ಷರಾಗಿ ಎಂ.ಎಸ್.ರಫೀಕ್, ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ತೋಕೂರ್, ಜೊತೆ ಕಾರ್ಯದರ್ಶಿಯಾಗಿ ಶರೀಫ್ ಗೋಳಿಪಡ್ಪು ಹಾಗೂ ನವಾಝ್ ತೋಕೂರ್, ಕೋಶಾಧಿಕಾರಿಯಾಗಿ ನೂರ್ ತೋಕೂರ್, ಲೆಕ್ಕ ಪರಿಶೋಧಕರಾಗಿ ಕಲಂದರ್ ಗುತ್ತು, ಎಲ್ಲಾ ವಲಯ ಸಮಿತಿಗಳಿಂದ ತಲಾ ಐವರು ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.ಸಲಹೆಗಾರರಾದ ಎ.ಪಿ.ಮುಹಮ್ಮದ್ ಕಿರಾಅತ್ ಪಠಿಸಿದರು. ಜುಬೈಲ್ ಸಮಿತಿಯ ಕಾರ್ಯದರ್ಶಿ ರಶೀದ್ ಎ.ಕೆ ಸ್ವಾಗತಿಸಿದರು. ಪ್ರದಾನ ಕಾರ್ಯದರ್ಶಿ ಮನ್ಸೂರ್ ವಾರ್ಷಿಕ ವರದಿ ಮಂಡಿಸಿದರು. ಜೊತೆ ಕಾರ್ಯದರ್ಶಿ ಖಲಂದರ್ ಗುತ್ತು ಹಣಕಾಸು ವರದಿ ಮಂಡಿಸಿದರು.

ಪ್ರಾದೇಶಿಕ ವಾರ್ತೆಗಳು

ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಟಿವಿ ಕೊಡುಗೆ

ಮಂಗಳೂರು, ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ಮಹಾ ಪ್ರಬಂಧಕ ಅರುಣ್ ಪ್ರಭ ಕೊಡುಗೆಯಾಗಿ ನೀಡಿರುವ ಟಿವಿ ಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಈ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದರು. ಆನೆಗುಂಡಿ ಅಂಗನವಾಡಿ ಕೇಂದ್ರ ಬಾಡಿಗೆ ಕೊಠಡಿಯಲ್ಲಿದ್ದು, ಅದಕ್ಕೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಜಮೀನು ಒದಗಿಸುವ ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲಭವನ ಸೊಸೈಟಿ ಅಧ್ಯಕ್ಷ ಬಿ ಆರ್ ನಾಯ್ಡು ಕರ್ನಾಟಕ ಸೆಣಬು ಅಭಿವೃದ್ಧಿ ನಿಗಮದ ಅಧ್ಯಕ್ಷ ನಟರಾಜ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜೆ,,ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ್ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಎಂ ಸಿ ಸಿ ಬ್ಯಾಂಕ್ ನಿರ್ದೇಶಕ ಅಲ್ವಿನ್ ಮೊಂತೆರೋ, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಸಿಂಧೂ, ಶಿಕ್ಷಕಿ ಲಕ್ಷ್ಮಿ, ಕೆ ವಿ ಪ್ರಭಾಕರ್ ಕುಟುಂಬದ ಸದಸ್ಯರು, ವಿವಿಧ ಅಂಗನವಾಡಿ ಕೇಂದ್ರದ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿ ಪದಗ್ರಹಣ

ಮಂಗಳೂರು: ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ 2025-28ನೆ ಸಾಲಿನ ಜಿಲ್ಲಾ ಘಟಕದ ಪದಗ್ರಹಣ ಸಮಾರಂಭ ಮಂಗಳೂರು,ನ.21;ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ 2025-28ನೆ ಸಾಲಿನ ದ.ಕ ಜಿಲ್ಲಾ ಘಟಕದ ಪದಗ್ರಹಣ ಸಮಾರಂಭ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಪದಗ್ರಹಣ ಸಮಾರಂಭ ಮುಖ್ಯ ಅತಿಥಿಯಾಗಿ ದ.ಕ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಉಪ ನಿರ್ದೇಶಕರು ಹಾಗೂ ಚುನಾವ ಣಾಧಿ ಕಾರಿ ಖಾದರ್ ಶಾ ಶುಭ ಹಾರೈಸಿ ಮಾತನಾಡುತ್ತಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರ್ಯನಿರತನಿರತ ಪತ್ರಕರ್ತರ ಸಂಘ ಸಕ್ರೀಯ ಚಟುವಟಿಕೆಗಳ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ.ಜಿಲ್ಲೆಯ ಗ್ರಾಮೀಣ ಪ್ರದೇಶದ ಪತ್ರಕರ್ತರು ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ ಉತ್ತಮ ಕಾರ್ಯ ಮಿರ್ವಹಿಸುತ್ತಿದ್ದಾರೆ.ಸದಸ್ಯರ ಶ್ರೇಯೋ ಭಿವೃದ್ಧಿಗೆ ಇನ್ನಷ್ಟು ಉತ್ತಮ ಕೆಲಸಗಳಾಗಿ ಎಂದು ಶುಭ ಹಾರೈಸಿದರು.ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ ಪೂರ್ವಾಧ್ಯಕ್ಷ ಆನಂದ ಶೆಟ್ಟಿ ಯವರು ಅಧ್ಯಕ್ಷ ಪುಷ್ಪರಾಜ್ ಬಿ .ಎನ್ , ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ ಪೂಜಾರಿ, ಉಪಾ ಧ್ಯಕ್ಷರಾದ ಮುಹಮ್ಮದ್ ಆರಿಫ್ ಪಡುಬಿದ್ರೆ,ವಿಲ್ಫ್ರೆಡ್ ಡಿ ಸೋಜ, ರಾಜೇಶ್ ಶೆಟ್ಟಿ, ಕೋಶಾಧಿಕಾರಿ ವಿಜಯ ಕೋಟ್ಯಾನ್ ಪಡು ,ಕಾರ್ಯದರ್ಶಿಗಳಾದ ಸುರೇಶ್ ಡಿ ಪಳ್ಳಿ,ಸಿದ್ಧಿಕ್ ನೀರಾಜೆ,ಸತೀಶ್ ಇರಾ ರವರಿಗೆ ಪ್ರತಿಜ್ಞಾ ವಿಧಿ ಬೋಧನೆ ನೆರವೇರಿಸಿ ಮಾತ ನಾಡುತ್ತಾ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ನಡೆದು ಬಂದ ಹಾದಿಯ ಬಗ್ಗೆ ವಿವರಿಸಿ,ಸಂಘದ ಸದಸ್ಯರು ಸಂಘಟಿತರಾಗಿ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಇನ್ನಷ್ಟು ಸಾಧಿಸುವಂತಾಗಲಿ ಎಂದರು. ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಯವರಿಗೆ ನಿಕಟ ಪೂರ್ವರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಪ್ರತಿಜ್ಞಾ ವಿಧಿ ಬೋಧಿಸಿದರು.ಜಿಲ್ಲಾ ಸಮಿತಿಯ ಪೂರ್ವಾಧ್ಯಕ್ಷ ಹರ್ಷ ಜಿಲ್ಲಾ ಕಾರ್ಯ ಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.ನಿಕಟ ಪೂರ್ವ ಅಧ್ಯಕ್ಷ ಹಾಗೂ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಸ್ವಾಗತಿಸಿ ಮಾತನಾಡುತ್ತಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯದ ಮಾದರಿ ಸಂಘವಾಗಿ ಗುರುತಿಸಿ ಕೊಂಡಿದೆ.ಈ ಸಾಧನೆಗೆ ಸಹಕಾರ ನೀಡಿದ ಸಂಘದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ ಮತ್ತು ನೂತನ ಆಡಳಿತ ಮಂಡಳಿಯ ಸದಸ್ಯರಿಗೆ ಶುಭ ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ).ನೂತನ ಅಧ್ಯಕ್ಷರಪುಷ್ಪರಾಜ್ ಬಿ.ಎನ್ ನಿಕಟ ಪೂರ್ವ ಅಧ್ಯಕ್ಷ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಕರ್ತರ ಸಂಘಟನೆ,ಅಪಘಾತ ವಿಮೆ,ಆರೋಗ್ಯ ವಿಮೆಯ ಜೊತೆ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಸಂಘದ ಸದಸ್ಯರ ರಚನಾತ್ಮಕ ಚಟುವಟಿಕೆಗಳಿಗೆ ಸಂಘಟಿತವಾಗಿ ಶ್ರಮಿಸಲಿದೆ ಎಂದರು. ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ಅನ್ನು ಮಂಗಳೂರು ಶುಭ ಹಾರೈಸಿದರು.ಅಶೋಕ್ ಶೆಟ್ಟಿ ಬಿ.ಎನ್,ಸಂದೇಶ್ ಜಾರ,ಸಂದೀಪ್ ಕುಮಾರ್ ಎಂ,ಲಕ್ಷ್ಮೀ ನಾರಾಯಣ ರಾವ್,ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ,ಕಿರಣ್ ಯು ಸಿರ್ಸಿಕರ್, ಅಭಿಷೇಕ್ ಎಚ್ ಎಸ್,ಜಯಶ್ರೀ, ಭುವನೇ ಶ್ವರ ಜಿ, ಸಂದೀಪ್ ವಾಗ್ಲೆ,ಹರೀಶ್ ಕೆ ಆದೂರ್, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ. ಜಿಲ್ಲಾ ಕಾರ್ಯ ಕಾರಿ ಸಮಿತಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಉಪಾಧ್ಯಕ್ಷ ಮುಹಮ್ಮದ್ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿ ಸಿದರು.ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು ವಂದಿಸಿದರು.

ಪ್ರಾದೇಶಿಕ ವಾರ್ತೆಗಳು

ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಮುಖ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು: ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿನ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯೊಂದಿಗೆ ಕಾನೂನಿನ ಮೇಲೆ ವಿಶ್ವಾಸವನ್ನು ಹೊಂದಿರಬೇಕು, ಸತ್ಯ, ನಿಷ್ಠೆ, ಪ್ರಾಮಾಣಿಕತೆಯಿಂದ ಇದ್ದವನಿಗೆ ನ್ಯಾಯದ ಮೇಲಿನ ಭರವಸೆ ಎಂದಿಗೂ ಹುಸಿಯಾಗುವುದಿಲ್ಲ, ಇಂದು ನಮ್ಮ ನಡುವೆ ನ್ಯಾಯಾಧೀಶರಾದವರು ತಮ್ಮ ಸರಳ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಿಕೊಂಡವರಲ್ಲಿ ನಾಗಲಿಂಗನ ಗೌಡ ಅವರೂ ಸಹ ಒಬ್ಬರಾಗಿದ್ದಾರೆ. ಅವರ ತೀರ್ಪುಗಳೇ ಅವರನ್ನು ಗೌರವಿಸಿದೆ ಎಂದು ಆಧ್ಯಾತ್ಮಿಕ ವಿಶ್ವಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞರು, ಜ್ಯೋತಿಷ್ಯರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ನುಡಿದರು.ಅವರು ಬೆಂಗಳೂರಿನ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ನಡೆದ ಕರುನಾಡ ಸಾಧಕರು ಎಂಬ ಸರಣಿ ಕಾರ್ಯಕ್ರಮದಲ್ಲಿ ನಿವೃತ್ತ ಜಸ್ಟಿಸ್ ಹಾಗೂ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ಬೆಂಗಳೂರು. ಕರ್ನಾಟಕ ಸರಕಾರ ಇದರ ಅಧ್ಯಕ್ಷರಾಗಿರುವ ನಾಗಲಿಂಗನ ಗೌಡ ಅವರನ್ನು ಸನ್ಮಾನಿಸಿ ಮಾತನಾಡಿದರು.ಸನ್ಮಾನವನ್ನು ಸ್ವೀಕರಿಸಿ ನಾಗಲಿಂಗನ ಗೌಡ ಮಾತನಾಡಿ, ಸ್ವಾಮೀಜಿಯವರ ಸೇವಾ ಕಾರ್ಯ ನಿರಂತರವಾಗಿ ಮುಂದುವರಿಯಲಿ, ಸಮಾಜದಲ್ಲಿ ಅಶಕ್ತರಿಗೆ ಆಸರೆಯಾಗಿ, ಸದಾ ಸನ್ಮಾರ್ಗದಲ್ಲಿ ಸಾಗುವವರನ್ನು ಗೌರವಿಸುವ ಅವರ ಗುಣ ವಿಶೇಷತೆಯಿಂದ ಅವರ ನೇತೃತ್ವದ ಸೇವಾ ಶ್ರಮವನ್ನು ನಾಡಿನ ಜನತೆ ಗುರುತಿಸುತ್ತಿದೆ ಎಂದರು.ಸೇವಾಶ್ರಮದ ನಿರ್ದೇಶಕಿ ರಜನಿ ಸಿ. ಭಟ್, ರಾಘವ ಸೂರ್ಯ, ನ್ಯಾಯವಾದಿ ರೋಶನಿ ಚಂದ್ರಶೇಖರ್, ರಾಹುಲ್ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.ಆಶ್ರಮದ ವಕ್ತಾರ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಡಾ. ಎಂ. ಎನ್. ರಾಜೇಂದ್ರ ಕುಮಾರ್ ನಿರ್ಮಾಣದ ವಾದಿರಾಜ ವಾಲಗ ಮಂಡಳಿ ಚಲನಚಿತ್ರಕ್ಕೆ ಮುಹೂರ್ತ

ಮಂಗಳೂರು: ಎಂ.ಎನ್.ಆರ್. ಪ್ರೊಡಕ್ಷನ್ ಲಾಂಛನದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನಿರ್ಮಾಣದ “ವಾದಿರಾಜ ವಾಲಗ ಮಂಡಳಿ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಾಳೆ ಬೆಳಿಗ್ಗೆ 9 ಗಂಟೆಗೆ ಉರ್ವಾ ಮಾರಿಯಮ್ಮ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕರಾದ ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿ ಹೇಳಿದರುಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ “ಕನ್ನಡ” ವಾಹಿನಿಯಲ್ಲಿ ಪ್ರಸಾರಗೊಂಡ ಈ ಧಾರಾವಾಹಿಯು ಜನಮೆಚ್ಚುಗೆಯನ್ನು ಪಡೆದಿರುತ್ತದೆ. ಹಾಗೇ ಪ್ರತಿಭಾವಂತ ನಿರ್ದೇಶಕ ಎಂ.ಡಿ.ಶ್ರೀಧರ್ ಅವರ ನಿರ್ದೇಶನದಲ್ಲಿ “ಗಲಾಟೆ” ಎಂಬ ಸಿನೆಮಾ ನಟ ಪ್ರಜ್ವಲ್ ದೇವರಾಜ್ ಹಾಗೂ ಬಹುತಾರಾಗಣದಲ್ಲಿ ನಿರ್ಮಾಣವಾಗಿದ್ದು, ಇದು ಬಹುಪಾಲು ವಿದೇಶದಲ್ಲಿ ಚಿತ್ರೀಕರಣಗೊಂಡಿದೆ. ಈ “ಗಲಾಟೆ” ಚಲನಚಿತ್ರ “ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆಯ ಮೊದಲ ಚಲನಚಿತ್ರವಾಗಿದೆ. ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆ ತುಳುನಾಡಿನ ಸಂಸ್ಥೆಯಾಗಿರುವುದರಿಂದ ತುಳುಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ “ಡಾಕ್ಟ್ರಾ..ಭಟ್ರಾ?” ಎನ್ನುವ ತುಳು ಸಿನೆಮಾ ಮುಹೂರ್ತ ಮಾಡಲಾಗಿದ್ದು, ಈ ಸಿನೆಮಾ ಮುಂದಿನ ವರ್ಷ ತೆರೆಕಾಣಲಿದೆ ಎಂದರು.ಈ ಮಧ್ಯೆ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ನಿರ್ದೇಶಕ, ಕಾಂತಾರ ಸಿನೆಮಾದ “ವರಾಹ ರೂಪಂ” “ಕಾಂತಾರ-I” ರ “ಗೊತ್ತಿಲ್ಲಾ ಶಿವನೇ ಭಕ್ತಿ ದಾರಿಯು” ಹಾಡುಗಳನ್ನು ರಚಿಸಿರುವ ಶಶಿರಾಜ್ ರಾವ್ ಕಾವೂರು ರಚಿಸಿರುವ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಇರುವ “ವಾದಿರಾಜ ವಾಲಗ ಮಂಡಳಿ” ಎಂಬ ಕನ್ನಡ ಸಿನೆಮಾವನ್ನು ತೆರೆಗೆ ಸಿದ್ಧಪಡಿಸುತ್ತಿದ್ದೇವೆ.ಈ ಸಿನೆಮಾ ಉತ್ತಮ ಕಥಾ ಹಂದರದಿಂದ ಸಂಪೂರ್ಣ ಹಾಸ್ಯ ಪ್ರಧಾನವಾಗಿದ್ದು, ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಕೂಡಾ ನೀಡುತ್ತದೆ. ಸಿನೆಮಾದಲ್ಲಿ ನವೀನ್ ಡಿ ಪಡೀಲ್, ಲಕ್ಷ್ಮಣ ಕುಮಾರ್ ಮಲ್ಲೂರು, ಪ್ರಕಾಶ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳೂರ್, ಮೈಮ್ ರಾಮದಾಸ್, ಶೋಭರಾಜ್ ಪಾವೂರು, ತನ್ವಿ ರಾವ್, ವೇನ್ಯ ರೈ, ಚೈತ್ರಾ ಶೆಟ್ಟಿ, ಕೀರ್ತನಾ ಮುಂತಾದವರು ನಟಿಸಲಿದ್ದಾರೆ.ಚಿತ್ರಕ್ಕೆ ಎಸ್. ಚಂದ್ರಶೇಖರನ್ ಅವರ ಛಾಯಾಗ್ರಹಣ, ಮಣಿಕಾಂತ್ ಕದ್ರಿಯವರ ಸಂಗೀತ ನಿರ್ದೇಶನ, ಸಹ ನಿರ್ಮಾಪರಾಗಿ ಜಯಪ್ರಕಾಶ್ ತುಂಬೆ, ಕಾರ್ಯಕಾರಿ ನಿರ್ಮಾಪಕರಾಗಿ ಸಂತೋಷ್ ಶೆಟ್ಟಿ, ಸಹಕರಿಸಲಿದ್ದಾರೆ, ಕಾಸರಗೋಡು, ಮಂಗಳೂರು, ಉಡುಪಿ, ಕುಂದಾಪುರ ಮುಂತಾದ ಕಡೆ 40 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಶಶಿರಾಜ್ ಕಾವೂರ್, ಗೋಪಿನಾಥ್ ಭಟ್,ಎಸ್. ಚಂದ್ರಶೇಖರ್, ಜಯಪ್ರಕಾಶ್ ತುಂಬೆ, ಲಕ್ಷ್ಮಣ್ ಕುಮಾರ್ ಮಲ್ಲೂರು, ಸಂತೋಷ್ ಶೆಟ್ಟಿ, ಸುನೀಲ್ ಬಜಗೋಳಿ,ಉಪಸ್ಥಿತರಿದ್ದರು.ಚಿತ್ರಗಳು-ಸತೀಶ್ ಕಾಪಿಕಾಡ್

ಪ್ರಾದೇಶಿಕ ವಾರ್ತೆಗಳು

ಶಾಸಕ ವೇದವ್ಯಾಸ ಕಾಮತ್ ರವರು ಇಂದು ಅಟಲ್ ಸೇವಾ ಕೇಂದ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ವಿವರಗಳು.

1.ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದು ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಖಂಡನೀಯ. ನಗರದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದ ವಾತಾವರಣ ಸೃಷ್ಟಿಯಾಗಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದಂತೂ ಈ ಸರ್ಕಾರದ ಬೇಜವಾಬ್ದಾರಿಯ ಪರಮಾವಧಿಯಾಗಿದೆ. 2.ಮಂಗಳೂರು ಆಯುಷ್ ನಲ್ಲಿ ಔಷಧ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದ್ದು, ಅಧಿಕಾರಿಗಳು ಹಣದ ಆಸೆಗೆ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡಿದ್ದು ತಿಳಿದ ಕೂಡಲೇ ದಾಖಲೆಗಳ ಸಮೇತ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಿದ್ದೇನೆ. ಇದು ಸಾರ್ವಜನಿಕರ ಆರೋಗ್ಯದ ವಿಷಯವಾಗಿದ್ದರೂ ಗಂಭೀರವಾಗಿ ಪರಿಗಣಿಸದ ಇಲಾಖೆಯ ನಿರ್ಲಕ್ಷ್ಯ ಖಂಡನೀಯ. ಯಾರನ್ನು ರಕ್ಷಿಸಲು ಇಲ್ಲಿ ಹುನ್ನಾರ ನಡೆಯುತ್ತಿದೆ? ಇದರ ಹಿಂದೆ ಯಾರಿದ್ದಾರೆ? ಯು.ಟಿ ಖಾದರ್, ಐವನ್ ಡಿಸೋಜ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಜನಪ್ರತಿನಿಧಿಗಳ ಮೇಲೆಯೇ ಸಾರ್ವಜನಿಕರ ಸಂಶಯ ಮೂಡುವಂತಾಗಿದೆ. ಇದೀಗ ಅಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು ಆರೋಪಕ್ಕೆ ಪೂರಕವಾಗಿ ಕೆಲವು ದಾಖಲೆಗಳು ಲಭಿಸಿದೆ ಎಂದು ವರದಿಯಾಗಿದ್ದು, ಯಾವುದೇ ಒತ್ತಡಕ್ಕೆ ಒಳಗಾಗದೇ ಸೂಕ್ತ ತನಿಖೆ ಮುಂದುವರಿದರೆ ಮತ್ತಷ್ಟು ವಿಷಯಗಳು, ಕಾಣದ ಕೈಗಳು ಹೊರಗೆ ಬರುವ ನಿರೀಕ್ಷೆ ಇದೆ. 3.ಯಕ್ಷಗಾನ ಕಲಾವಿದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರ ಕ್ಷಮೆ ಮಾತ್ರವಲ್ಲ, ಈ ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಅವರನ್ನು ಆ ಸ್ಥಾನದಿಂದಲೇ ಕಿತ್ತೆಸೆಯಬೇಕು. ಕರಾವಳಿ ಕರ್ನಾಟಕದ ಗಂಡು ಕಲೆಯಾದ ಯಕ್ಷಗಾನವು ಇಲ್ಲಿನ ಜನರ ಭಕ್ತಿ ಭಾವದಿಂದ ಕೂಡಿದ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಅಂತಹ ಪರಂಪರೆಗೆ ಎಡಪಂಥೀಯ ಬುದ್ದಿಜೀವಿಗಳು ಅವಮಾನ ಮಾಡುವ ಮೂಲಕ ಇಡೀ ಹಿಂದೂ ಸಮಾಜಕ್ಕೆ ನೋವಾಗಿದೆ. ಸದಾ ಕಾಲ ಹಿಂದೂ ಧರ್ಮದ ವಿರುದ್ಧ ದ್ವೇಷ ಕಾರುವವರನ್ನೇ ಹುಡುಕಿ ಪ್ರಮುಖ ಸ್ಥಾನದಲ್ಲಿ ಕೂರಿಸುವ ಕಾಂಗ್ರೆಸ್ಸಿನ ಹೀನ ಚಾಳಿ ಇನ್ನಾದರೂ ಬದಲಾಗಬೇಕು. 4.ನಗರದ ಕದ್ರಿ ಪಾರ್ಕ್ ರಸ್ತೆಯಲ್ಲಿ ಜನವರಿಯಿಂದ ವಾಹನಗಳಿಗೆ ಟೋಲ್‌ ವಿಧಿಸಲು ಚಿಂತನೆ ನಡೆಸಿರುವುದು ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಹೊರೆಯಾಗಿ ಪರಿಣಮಿಸಲಿದ್ದು ಇದಕ್ಕೆ ನಮ್ಮ ಆಕ್ಷೇಪವಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಲ್ಲಿನ ರಸ್ತೆಯ ನಿರ್ವಹಣೆಯ ಜವಾಬ್ದಾರಿಯನ್ನು ಪಾಲಿಕೆಗೆ ವಹಿಸಲಾಗಿತ್ತು. ಇದೀಗ ಪಾಲಿಕೆಯಲ್ಲಿ ಬಿಜೆಪಿ ಆಡಳಿತದ ಅವಧಿ ಅಂತ್ಯವಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ಮೂಲಕ ಆಡಳಿತ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕದ್ರಿ ಪಾರ್ಕ್ ರಸ್ತೆಗೆ ಟೋಲ್‌ ಕಡ್ಡಾಯ ಮಾಡಲಾಗುತ್ತಿದೆ.ಈಗಾಗಲೇ ರಾಜ್ಯದಲ್ಲಿ ಜನಸಾಮಾನ್ಯರು ಬೆಲೆ ಏರಿಕೆ ಯಿಂದ ತತ್ತರಿಸಿ ಹೋಗಿದ್ದಾರೆ. ಇದೀಗ ಈ ವ್ಯವಸ್ಥೆಯೂ ಸಹ ಜಾರಿಗೆ ಬಂದರೆ ಇಲ್ಲಿನ ಜನರು ರೊಚ್ಚಿಗೇಳುವುದು ಗ್ಯಾರಂಟಿ. 5.ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಕದ್ರಿ ಪಾರ್ಕ್ ಬಳಿಯ ಗೂಡಂಗಡಿಗಳಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಇದೀಗ ಕಾಂಗ್ರೆಸ್ ನೇತೃತ್ವದ ಪಾಲಿಕೆಯು ಇಲ್ಲಿನ ದುಡಿಯುವ ವರ್ಗದ ಜನತೆಗೆ ನಾವು ಯಾವುದೇ ತೊಂದರೆ ಮಾಡುವುದಿಲ್ಲ ಎನ್ನುತ್ತಲೇ, ಪರ್ಯಾಯ ವ್ಯವಸ್ಥೆ ಕೂಡಾ ಮಾಡದೇ, ಏಕಾಏಕಿ ಗೂಡಂಗಡಿಗಳನ್ನು ತೆರವುಗೊಳಿಸಿದ್ದು ದುಡಿಯುವ ವರ್ಗದ ಮೇಲಿನ ಪ್ರಹಾರವಾಗಿದ್ದು ಖಂಡನೀಯವಾಗಿದೆ. 6.ನಗರದ ಜೈಲ್ ಜಾಮರ್ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿ ಆಯ್ತು, ಸಚಿವರ ಗಮನಕ್ಕೆ ತಂದೂ ಆಯ್ತು, ಕೊನೆಗೆ ಅನಿವಾರ್ಯವಾಗಿ ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲಾಯಿತು. ಆದರೂ ಇಲ್ಲಿನ ಜನರ ಸಮಸ್ಯೆಗೆ ಮುಕ್ತಿ ಸಿಕ್ಕಿರಲಿಲ್ಲ. ಇದೀಗ ಇಲ್ಲಿನ ವಕೀಲರ ಮೂಲಕ ಸ್ವತಃ ರಾಜ್ಯ ಹೈಕೋರ್ಟ್ ಮಧ್ಯ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ಇನ್ನಾದರೂ ಈ ದಪ್ಪ ಚರ್ಮದ ಸರ್ಕಾರ ಎಚ್ಚೆತ್ತುಕೊಳ್ಳಲಿ. 7.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ–ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಖಂಡನೀಯ. ಮೊನ್ನೆಯವರೆಗೆ ಇದ್ದ ಬದ್ದ ಅಧಿಕಾರಿಗಳನ್ನೆಲ್ಲಾ ಅವೈಜ್ಞಾನಿಕ ಸಮೀಕ್ಷೆಗೆ ನಿಯೋಜಿಸಿಕೊಂಡ ಪರಿಣಾಮ ಎಷ್ಟೇ ತುರ್ತು ಪರಿಸ್ಥಿತಿಯಿದ್ದರೂ ಸಾರ್ವಜನಿಕರಿಗೆ ಇ-ಖಾತಾ ಲಭಿಸಿರಲಿಲ್ಲ. ಇದೀಗ ಸಮೀಕ್ಷೆ ಮುಗಿದು ಅಧಿಕಾರಿಗಳು ಬಂದಿದ್ದಾರೆ. ಆದರೆ ಸರ್ವರ್ ಇಲ್ಲ. ಹೀಗಾದರೆ ಸಾರ್ವಜನಿಕರ ತಾಳ್ಮೆಯ ಕಟ್ಟೆಯೊಡೆಯುತ್ತದೆ. ಕಳೆದ ಎರಡು ವರ್ಷಗಳಿಂದಲೂ ಇರುವ ಈ ಸಮಸ್ಯೆಯ ಬಗ್ಗೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದೇನೆ, ಸಂಬಂಧಪಟ್ಟ ಸಚಿವರಿಗೂ ಮನವಿ ಮಾಡಿದ್ದೇನೆ. ಆದರೂ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ನಾಗರಿಕರಿಗೆ ತೊಂದರೆ ತಪ್ಪಿಲ್ಲ. 8.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಅನೇಕ ಪ್ರಕರಣಗಳು ನಡೆದಿದೆ. ಆದರೂ ಆಳುವ ಸರ್ಕಾರ ದುರಸ್ಥಿಗೆ ಅನುದಾನ ನೀಡದೇ ಕಣ್ಣು ಮುಚ್ಚಿ ಕೂತಿದೆ. ನಗರದಲ್ಲಿ ಕಸದ ಸಮಸ್ಯೆಯಂತೂ ಹೇಳತೀರದಾಗಿದ್ದು ಗಾಂಧಿನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳ ಎಲ್ಲೆಡೆ ಕಸ ಬಿದ್ದಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದರೂ ಅದನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. 9.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ವಿಷಯಗಳು ಪಾತಾಳಕ್ಕಿಳಿದಿದ್ದರೂ, ಬೆಲೆ ಏರಿಕೆ, ಭ್ರಷ್ಟಾಚಾರಗಳು ಮಾತ್ರ ನಿರಂತರವಾಗಿ ಎಗ್ಗಿಲ್ಲದೇ ನಡೆಯುತ್ತಿದೆ. ಮಂಗಳೂರು ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಅನುದಾನ, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಸೇರಿದಂತೆ ಯಾವುದೇ ಅನುದಾನಗಳು ಬರುತ್ತಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು, ಅಭಿವೃದ್ಧಿ ಕಾರ್ಯಗಳು ನಡೆಯುವುದಾದರೂ ಹೇಗೆ?ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೇ ನಮ್ಮ ಮಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವುದು ಅಕ್ಷಮ್ಯವಾಗಿದೆ. ಮಂತ್ರಿಗಳು ಜಿಲ್ಲೆಗೆ ಬಂದಾಗ ಕಾಟಾಚಾರಕ್ಕೆ ಕೋಟಿ ಕೋಟಿ ರೂ. ಗಳನ್ನು ಘೋಷಣೆ ಮಾಡಿ ಹೋಗುತ್ತಾರೆ. ಆ ನಂತರ ಅದು ಕಾರ್ಯರೂಪಕ್ಕೆ ಬರುವುದೇ ಇಲ್ಲ. ಕೇವಲ ಪತ್ರಿಕಾ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿರುವ ಸುಳ್ಳು ಘೋಷಣೆಗಳು, ಸುಳ್ಳು ಭರವಸೆಗಳು ನಮ್ಮ ಕ್ಷೇತ್ರಕ್ಕೆ ಜಿಲ್ಲೆಗೆ ಅಗತ್ಯವಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಸಂಯೋಜನೆಯಲ್ಲಿ ನಡೆದ ಸ್ವಚ್ಚ ಭಾರತ್ ಅಭಿಯಾನಕ್ಕೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಜೈ ಶಂಕರ್ ಉದ್ಘಾಟಿಸಿ ಮಾತನಾಡಿದರು. ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯ : ಜೈ ಶಂಕರ್

ಮೂಲ್ಕಿ: ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯವಾಗಿದೆ. ಪರಿಸರವನ್ನು ಸ್ವಚ್ಚವಾಗಿಟ್ಟಲ್ಲಿ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು, ಪ್ಲಾಸ್ಟಿಕ್ ವಸ್ತುಗಳನ್ನು ದೂರಮಾಡಿಕೊಂಡು ಪರಿಸರ ಸ್ನೇಹಿಯಾಗಿ ಬಾಳೋಣ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಜೈ ಶಂಕರ್ ಹೇಳಿದರು. ಅವರು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಸಂಯೋಜನೆಯಲ್ಲಿ ನಡೆದ ಸ್ವಚ್ಚ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾ ಸಂಜೀವಿನಿ ಆಸ್ಪತ್ರೆಯಿಂದ ಕಟೀಲು ದೇವಸ್ಥಾನದವರೆಗೆ ಕಟೀಲು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕಟೀಲು ಬಸ್ ನಿಲ್ದಾಣದಲ್ಲಿ ಬೀದಿ ನಾಟಕ, ಕಿನ್ನಿಗೋಳಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮತ್ತು ಉಚಿತ ಬಟ್ಟೆಯ ಕೈಚೀಲಗಳನ್ನು ವಿತರಿಸಲಾಯಿತು.ಆರೋಗ್ಯಾಧಿಕಾರಿ ಬ್ರಹ್ಮಾನಂದ, ಕಂದಾಯ ನಿರೀಕ್ಷಕ ರಾಘವೇಂದ್ರ, ಇಂಜಿನಿಯರಿಂಗ್ ವಿಭಾಗದ ಪವನ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ, ಪ್ರಮುಖರಾದ ಈಶ್ವರ್ ಕಟೀಲ್, ಪ್ರಕಾಶ್ ಆಚಾರ್ಯ, ಪ್ರೇಮ್‌ರಾಜ್ ಶೆಟ್ಟಿ, ಕಾರ್ಯಕ್ರಮದ ಸಹ ಸಂಯೋಜನೆಯ ಮೂಲ್ಕಿ ಸುಧಾಮ ಫೌಂಡೇಶನ್‌ನ ಶೈಲೇಶ್ ಕುಮಾರ್, ನವೀನ್ ರಾಜ್, ವೀರಣ್ಣ, ರಮೇಶ್, ಶಿಕ್ಷಣ ಸಂಸ್ಥೆಯ ಪ್ರಮುಖರು, ಮತ್ತಿತರರು ಇದ್ದರು.

Scroll to Top