ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ ತಾಲೂಕಿನ ಬಜಿರೆ,ನಿಟ್ಟಿಡೆ ಮತ್ತುಪಡ್ಡಂದಡ್ಕ ಕ್ಲಸ್ಟರ್ ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು20/8/2025 ರಂದು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇಲ್ಲಿ ಜರಗಿತು.ವೇಣೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು ಶ್ರೀ ಎಲ್ ಜೆ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಆರತಿ ,ನೋಡಲ್ ಅಧಿಕಾರಿಶ್ರೀಮತಿ ಪುಷ್ಪ,ಶಿಕ್ಷಕ ಸಂಘದ ಕೋಶಾಧಿಕಾರಿ ಶ್ರೀ ರಾಜೇಶ್ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶ್ರೀಮತಿ ಮರ್ಸೆಲಿನ್ ಸ್ವಾಗತಿಸಿದರು ಸುಪ್ರೀತಾ ವಂದಿಸಿದರುಶಿಕ್ಷಕಿ ಮೀನಾ ಮೋನಿಸ್ ನಿರ್ವಹಿಸಿದರು.

ಪ್ರಾದೇಶಿಕ ವಾರ್ತೆಗಳು

ಆ. 24: ಮೂಡುಬಿದಿರೆ ಜೈನ ಮಠದಲ್ಲಿ ಮಂದಾರರ ‘ಬೀರದ ಬೊಲ್ಪು’ ತುಳು ಕಾವ್ಯಯಾನ ಸುಗಿಪು -ದುನಿಪು

ಮಂಗಳೂರು: ಧವಳತ್ರಯ ಜೈನ ಕಾಶಿ ಟ್ರಸ್ಟ್ (ರಿ) ತುಳುವ ಮಹಾಸಭೆ ಮೂಡುಬಿದಿರೆ, ಮಂದಾರ ಪ್ರತಿಷ್ಠಾನ ಮಂಗಳೂರು, ತುಳುಕೂಟ ಬೆದ್ರ ಇವರ ಸಂಯುಕ್ತ ಆಶ್ರಯದಲ್ಲಿ ‘ತುಳು ಕಾವ್ಯ ಯಾನ-28’ ತುಳು ವಾಲ್ಮೀಕಿ ಮಂದಾರ ಕೇಶವ ಭಟ್ ವಿರಚಿತ ‘ಬೀರದ ಬೊಲ್ಪು’ ಶ್ರೀಕೃಷ್ಣನ ಬಾಲ ಲೀಲೆಯ ಕುರಿತ ‘ಸುಗಿಪು – ದುನಿಪು’ ವಾಚನ – ವ್ಯಾಖ್ಯಾನ ಕಾರ್ಯಕ್ರಮವನ್ನು ಅಗಸ್ಟ್ 24 ರಂದು ಸಂಜೆ 3 ಗಂಟೆಗೆ ಮೂಡಬಿದಿರೆಯ ಸ್ವಸ್ತಿ ಶ್ರೀ ಭಟ್ಟಾರಕ ಸಭಾಭವನ ಶ್ರೀ ದಿಗಂಬರ ಜೈನ ಮಠದಲ್ಲಿ ಆಯೋಜಿಸಲಾಗಿದೆ ಎಂದು ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ತಿಳಿಸಿದ್ದಾರೆ. ಯಕ್ಷಗಾನ ಅರ್ಥಧಾರಿ ಮತ್ತು ಪ್ರವಚನಕಾರ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು ಕಾವ್ಯದ ವ್ಯಾಖ್ಯಾನ ನೀಡಲಿದ್ದಾರೆ. ಯುವ ಭಾಗವತರಾದ ಪ್ರಶಾಂತ ರೈ ಪುತ್ತೂರು ಮತ್ತು ರಚನಾ ಚಿತ್ಕಲ್ ವಾಚನ ಮಾಡುವರು. ಯಕ್ಷದೇವ ಮಿತ್ರ ಮಂಡಳಿಯ ಎಂ. ದೇವಾನಂದ ಭಟ್ ಬೆಳುವಾಯಿ ಮದ್ದಳೆ ನುಡಿಸುವರು.ಮಂದಾರ ಪ್ರತಿಷ್ಠಾನದ ಡಾ. ರಾಜೇಶ್ ಭಟ್ ಸಹಕಾರದೊಂದಿಗೆ ತುಳುವರ್ಲ್ಡ್ ಫೌಂಡೇಶನ್ ನ ಡಾ. ರಾಜೇಶ ಆಳ್ವ ಅವರ ಸಂಯೋಜನೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ದೀಪ ಬೆಳಗಿಸಿ ಕಾವ್ಯಯಾನಕ್ಕೆ ಚಾಲನೆ ನೀಡಲಿದ್ದಾರೆ.ಬೆದ್ರ ತುಳುಕೂಟದ ಧನಕೀರ್ತಿ ಬಲಿಪ, ಚಂದ್ರಹಾಸ ದೇವಾಡಿಗ, ಮಂದಾರರ ಪುತ್ರಿ ಶಾರದಾಮಣಿ, ತುಳುವ ಮಹಾಸಭೆ ಮೂಡುಬಿದಿರೆ ಸಂಚಾಲಕಿ ಜಯಂತಿ ಎಸ್. ಬಂಗೇರ ಉಪಸ್ಥಿತರಿರುವರು ಎಂದು ತುಳುವ ಮಹಾಸಭೆ ಮುಖ್ಯ ಸಂಚಾಲಕ ಪ್ರಮೋದ್ ಸಪ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕರ್ನಾಟಕ ಸಂಘ ಕತಾರ್ ವತಿಯಿಂದ ಬೆಂಗಳೂರಿನಲ್ಲಿ ಸಂಸ್ಥಾಪಕರು ಮತ್ತು ಅಶಕ್ತರಿಗೆ ನೆರವಿನೊಂದಿಗೆ, ಸಮಾಜಸೇವಕರಿಗೆ ಗೌರವ ಸಲ್ಲಿಕೆ

ಮಂಗಳೂರು: ಕರ್ನಾಟಕ ಸಂಘ ಕತಾರ್ (ಕೆಎಸ್‌ಕ್ಯೂ) 2025 ರ ಆಗಸ್ಟ್ 10 ರಂದು ಬೆಂಗಳೂರಿನ ಬಸವೇಶ್ವರ ನಗರದ ಕರ್ನಾಟಕ ಎಂಜಿನಿಯರ್ಸ್ ಅಕಾಡೆಮಿಯಲ್ಲಿ “ಸಂಸ್ಥಾಪಕರಿಗೆ, ರಜತಪಥದ ಹರಿಕಾರರಿಗೆ ಅಭಿವಂದನಾ “ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಿ, ತನ್ನ ಬೆಳ್ಳಿಹಬ್ಬದ ಸಂಭ್ರಮವನ್ನು ತವರು ನೆಲಕ್ಕೆ ತರುವುದರ ಮೂಲಕ ರಜತ ವರ್ಷಕ್ಕೆ ಇನ್ನಷ್ಟು ಮೆರುಗನ್ನು ನೀಡಿದೆ.ಕಾರ್ಯಕ್ರಮದ ಆರಂಭದಲ್ಲಿ, ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ ಅವರು “ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು” ಎಂಬ ಡಿವಿಜಿ ಅವರ ಕಗ್ಗದ ಸಾಲುಗಳನ್ನು ಉಲ್ಲೇಖಿಸಿ, ಕೃತಜ್ಞತೆಯ ಮನೋಭಾವವನ್ನು ಮೂಡಿಸಿದರು. ಕಾರ್ಯಕ್ರಮ ನಿರೂಪಕರಾಗಿದ್ದ ಮಾಜಿ ಅಧ್ಯಕ್ಷ ಎಚ್.ಕೆ. ಮಧು ಅವರು, ಈ ಮಹತ್ವದ ಮೈಲಿಗಲ್ಲನ್ನು ಅಧ್ಯಕ್ಷ ರವಿ ಶೆಟ್ಟಿಯವರ ನಾಯಕತ್ವ ಮತ್ತು ಅವರ ಉತ್ಸಾಹಿ ತಂಡಕ್ಕೆ ಸಮರ್ಪಿಸಿದರು. ಅವರು ಡಿವಿಜಿ ಅವರ ಮತ್ತೊಂದು ಕಗ್ಗದ “ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು” ಎಂಬ ಸಾಲನ್ನು ಉಲ್ಲೇಖಿಸಿ, ಸಂಪ್ರದಾಯ ಮತ್ತು ಹೊಸ ಶಕ್ತಿಯ ಮಹತ್ವವನ್ನು ಸಾರಿದರು. ಉದ್ಘಾಟನೆ ಮತ್ತು ಪ್ರಥಮ ಹಂತ:ಕಾರ್ಯಕ್ರಮಕ್ಕೆ ಪದ್ಮಶ್ರೀ ಡಾ. ಕೆ.ಎಸ್. ರಾಜಣ್ಣ, ಅಧ್ಯಕ್ಷ ರವಿ ಶೆಟ್ಟಿ, ಸಲಹಾ ಸಮಿತಿಯ ಅಧ್ಯಕ್ಷ ಮಹೇಶ್ ಗೌಡ, ಮಾಜಿ ಅಧ್ಯಕ್ಷರುಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳು ದೀಪ ಬೆಳಗಿಸಿ ಚಾಲನೆ ನೀಡಿದರು. ತಮ್ಮ ಸ್ವಾಗತ ಭಾಷಣದಲ್ಲಿ ರವಿ ಶೆಟ್ಟಿ ಅವರು, ಅನುಭವಿ ಮನಸ್ಸುಗಳು ಮತ್ತು ಯುವ ಪ್ರತಿಭೆಗಳು ನಿಸ್ವಾರ್ಥವಾಗಿ ಕೆಲಸ ಮಾಡಿದಾಗ ಸಂಘದ ಪ್ರತಿಷ್ಠೆಯು ಹೆಚ್ಚುತ್ತದೆ ಎಂದು ಹೇಳಿ, ಕೆಎಸ್‌ಕ್ಯೂನ 25 ವರ್ಷಗಳ ಪಯಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.ಪ್ರಥಮ ಹಂತದಲ್ಲಿ, ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮವನ್ನು ಕೆಎಸ್‌ಕ್ಯೂ ಕೋಶಾಧಿಕಾರಿ ಪ್ರದೀಪ್ ದಿಲೀಪ್ ಅವರು ನಿರ್ವಹಿಸಿದರು. ಸದಸ್ಯರು ಮತ್ತು ಹಿತೈಷಿಗಳಿಂದ ಸಂಗ್ರಹಿಸಿದ ನಿಧಿಯ ಮೂಲಕ, ಈ ಕೆಳಗಿನ ವ್ಯಕ್ತಿಗಳಿಗೆ ಬೆಳ್ಳಿಹಬ್ಬದ ವಿಶೇಷ ಶಾಲು, ಬಿರುದಿನೊಂದಿಗೆ ಸ್ಮರಣಿಕೆ ಮತ್ತು ಗೌರವಧನ ನೀಡಿ ಗೌರವಿಸಲಾಯಿತು:*ಮಂಡ್ಯದ ಪದ್ಮಶ್ರೀ ಡಾ. ಕೆ.ಎಸ್. ರಾಜಣ್ಣ , ನಾಲ್ಕು ಅಂಗಗಳಲ್ಲಿ ತೀವ್ರ ವಿಕಲತೆ ಇದ್ದರೂ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದ ಇವರಿಗೆ “ಅದಮ್ಯ ದಿವ್ಯ ಚೇತನ” ಎಂಬ ಬಿರುದನ್ನು ನೀಡಲಾಯಿತು.*ಬೆಳಗಾವಿಯ ನಾಗರತ್ನ25 ವರ್ಷಗಳ ಹಿಂದೆ ಏಡ್ಸ್ ರೋಗದಿಂದ ಬಳಲುತ್ತಿದ್ದ ಇವರು, ಈಗ ವಿಧವೆಯಾಗಿದ್ದರೂ ಏಡ್ಸ್ ರೋಗಿಗಳಿಗಾಗಿ ‘ಆಶ್ರಯ ಫೌಂಡೇಶನ್’ ಸ್ಥಾಪಿಸಿ ನಡೆಸುತ್ತಿರುವ ಇವರು “ ಸ್ಪೂರ್ತಿಯ ಚಿಲುಮೆ “ ಬಿರುದಿಗೆ ಪಾತ್ರರಾದರು.*ಮಂಗಳೂರಿನ ಗೀತಾ ಶೆಟ್ಟಿಯವರು ದೇರಳಕಟ್ಟೆಯಲ್ಲಿ ವ್ರಧಾಶ್ರಮವನ್ನು ನಡೆಸುತ್ತಿದ್ದು “ ಸೇವಾ ಸಂಪದ “ಬಿರುದಿಗೆ ಭಾಜನರಾದರು.*ಮೂಡಬಿದ್ರಿಯ ಪ್ರಕಾಶ್ ಶೆಟ್ಟಿಗಾರ್ ತಾನು ಮತ್ತು ಮಗ ವಿಕಲಾಂಗರಾಗಿದ್ದರೂ ವಿಶೇಷ ಮಕ್ಕಳಿಗಾಗಿ ‘ಸ್ಪೂರ್ತಿ ಶಾಲೆ’ ನಡೆಸುತ್ತಿರುವ ಇವರಿಗೆ “ ಸ್ಪೂರ್ತಿ ಪ್ರಕಾಶ” ಬಿರುದನ್ನು ನೀಡಲಾಯಿತು.*ಮೇರೆಮಜಲಿನ ಇಂಜಿನಿಯರ್ ಹರೀಶ್ ಪೆರ್ಗಡೆ ತಮ್ಮ ದಿವಂಗತ ತಾಯಿಯ ನೆನಪಿನಲ್ಲಿ ‘ಮಾತ ಲಕ್ಷಣಿ ವೃದ್ಧಾಶ್ರಮ’ ನಡೆಸುತ್ತಿದ್ದು “ ಆಶ್ರಯದಾತ “ ಬಿರುದಿಗೆ ಪಾತ್ರರಾದರು.*ಬಳ್ಳಾರಿಯ ದ್ರಷ್ಟಿಹೀನರಾದ ಅಶ್ವಿನ್ ಅಂಗಡಿಯವರು ಬೆಂಗಳೂರಿನಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಬೆಳಕು ಅಕಾಡೆಮಿ ಫಾರ್ ಬ್ಲೈಂಡ್ & ಡೆಫ್’ ಸಂಸ್ಥೆ ಸ್ಥಾಪಿಸಿದ ಇವರಿಗೆ “ಬೆಳಕಿನಂಗಡಿ “ ಬಿರುದು ನೀಡಲಾಯಿತು.*ಬೆಂಗಳೂರಿನ ರಂಜಿತ್ ಶೆಟ್ಟಿಯವರು ಕೆಂಗೇರಿಯಲ್ಲಿ ‘ಅರೈಕೆ ಟ್ರಸ್ಟ್’ ಸ್ಥಾಪಿಸಿ, 80 ನಿರ್ಗತಿಕರನ್ನು ನೋಡಿಕೊಳ್ಳುತ್ತಿರುವ ಇವರು “ ಹೃದಯವಂತ “ ಬಿರುದಿಗೆ ಪಾತ್ರರಾದರು.*ತೀರ್ಥಹಳ್ಳಿಯ ತರುಳ ತರುಣ್, ಉಡುಪಿ ಜಿಲ್ಲೆಯ ಬೈಲೂರಿನಲ್ಲಿ ‘ಹೊಸಬೆಳಕು ಆಶ್ರಮ’ ಸ್ಥಾಪಿಸಿ, 180 ನಿರ್ಗತಿಕರನ್ನು ನೋಡಿಕೊಳ್ಳುತ್ತಿದ್ದು “ಅನಾಥರ ಹೊಸಬೆಳಕು “ ಬಿರುದಿಗೆ ಪಾತ್ರರಾದರು.*ಕತಾರಿನಲ್ಲಿ ಬ್ಯಾಂಕರ್ ಆಗಿದ್ದ ಮಂಗಳೂರಿನ ಹೆರಾಲ್ಡ್ ಮೊರಾಸ್ ನೂರಾರು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ನೆರವಾಗುತ್ತಿರುವ ಇವರಿಗೆ “ ಸೇವಾ ರತ್ನ “ ಬಿರುದನ್ನು ನೀಡಲಾಯಿತು .*ಮಂಗಳೂರಿನ ವಸಂತ್ ಮಾಸ್ಟರ್ ‘ಸಾನಿಧ್ಯ ಸ್ಪೆಷಲ್ ಸ್ಕೂಲ್’‌ನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು “ ವಿಕಲರ ಚೇತನ “ ಬಿರುದಿಗೆ ಪಾತ್ರರಾದರು.*ಕೊಡಗಿನ ಅಣ್ಣಪ್ಪ ಪುತ್ತೂರಿನಲ್ಲಿ ಮಾನಸಿಕವಾಗಿ ಅಸ್ವಸ್ಥರಾದವರಿಗಾಗಿ ‘ಪ್ರಜ್ಞಾಶ್ರಮ’ ಸ್ಥಾಪಿಸಿದ್ದಾರೆ. ಇವರಿಗೆ “ ಅನಾಥ ಬಂಧು “ ಬಿರುದು ನೀಡಲಾಯಿತು*ಕುಂದಾಪುರದ ಜಯರಾಮ್ 34 ವರ್ಷಗಳಿಂದ ಹಾಸಿಗೆ ಹಿಡಿದಿದ್ದರೂ, ಜೀವನದ ಸವಾಲುಗಳನ್ನು ಎದುರಿಸುವಲ್ಲಿ ಮಾದರಿಯಾಗಿದ್ದಾರೆ.ಇವರಿಗೆ “ ಮನೋಬಲದ ಜಯವೀರ” ಬಿರುದನ್ನು ನೀಡಲಾಯಿತುಇದರ ಜೊತೆಗೆ, ಕರ್ನಾಟಕದ ವಿವಿಧ ಜಿಲ್ಲೆಗಳ ಮೂತ್ರಪಿಂಡ ಕಾಯಿಲೆ, ಕ್ಯಾನ್ಸರ್ ಮತ್ತು ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ “25 ವರ್ಷ 25 ನೊಂದ ಮುಖಗಳಲ್ಲಿ ಹರ್ಷ” ಎಂಬ ಯೋಜನೆಯ ಅಡಿಯಲ್ಲಿ ಸಹಾಯ ಹಸ್ತವನ್ನು ರಾಜ್ಯದ ಬೇರೆ ಬೇರೆ ಕಡೆಯವರಿಗೆ ನೀಡಲಾಯಿತು . ಕರುಣಾಕರ್ ಪೂಜಾರಿ(ಬಂಟ್ವಾಳ್ ) , ಎಕ್ಬಾಲ್ ಅಬೂಬಕ್ಕರ್ ( ಚಿಕ್ಕಮಗಳೂರ್ ), ನಿಖಿಲ್ ರೈ (ಕಾಸರ್ಗೋಡ್ ), ಸತೀಶ್ ಪೂಜಾರಿ (ಪುತ್ತೂರು ), ಮಿರ್ಜಾ ಮಾಯಿಜ ( ಬೆಂಗಳೂರ್ ), ರಾಬರ್ಟ್ & ರೆಮ್ಮಿ ಡಿ ಸೋಜಾ ( ಉಪ್ಪಿನಂಗಡಿ ) , ರೇಖಾ ಶೆಟ್ಟಿ( ವಾಮಂಜೂರ್ ) , ರಮ್ಯಾ ( ಬೆಂಗಳೂರು ), ವಿಜಯ್ ( ಬೆಂಗಳೂರು ), ನಾಗರಾಜ್ ( ಯೆಲ್ಲಾಪುರ ) , ಭೀಮಕ್ಕ ( ಹುಬ್ಬಳ್ಳಿ ) , ಸುಬ್ಬ ರಾವ್ ( ಬಳ್ಳಾರಿ ) , ಸ್ಟಾಲಿನ್ ( ಬೆಂಗಳೂರು ), ಮೊಹಮ್ಮದ್ (ಬಿಜಾಪುರ್) , ಕಿರಣ್ ನಾಯಕ್ ( ಉಡುಪಿ ) , ಮಲ್ಲಪ್ಪ ( ಬೆಳಗಾವಿ ), ಮಲ್ಲಿಕಾರ್ಜುನ್ ( ಹಾವೇರಿ ) , ಯಮುನ (ರಾಯಚೂರ್) , ನೀಲಕಾಂತ್ ( ಸಕಲೇಶಪುರ ) , ಮಮ್ಮುನ್ಹಿ ( ಕಾಸರ್ಗೋಡ್ ).ಮೊದಲ ಹಂತವು ರಾಜ್ಯ ಪ್ರಶಸ್ತಿ ವಿಜೇತ ಗಾಯಕ ರಮೇಶ್ಚಂದ್ರ, ಡಾ. ಸುಶೀಲಾ ಮತ್ತು ಪ್ರಕಾಶ್ ಪಾವಂಜೆ ಅವರ ಗಾಯನಗಳೊಂದಿಗೆ ಮುಕ್ತಾಯಗೊಂಡಿತು.ಸಂಸ್ಥಾಪಕರು ಮತ್ತು ಪ್ರವರ್ತಕರಿಗೆ ಗೌರವ ಕಾರ್ಯಕ್ರಮದ ಎರಡನೇ ಹಂತವನ್ನು “ಕೆಎಸ್‌ಕ್ಯೂ ಇತಿಹಾಸದಲ್ಲಿ ಸುವರ್ಣ ಅಧ್ಯಾಯ” ಎಂದು ನಿರೂಪಕ ಎಚ್.ಕೆ. ಮಧು ಅವರು ಬಣ್ಣಿಸಿದರು. ಇದು ಸಂಸ್ಥೆಯ ಸ್ಥಾಪಕರಿಗೆ ಧನ್ಯವಾದಗಳನ್ನು ಹೇಳಲು ಒಂದು ಅಪರೂಪದ ಪುನರ್ಮಿಲನವಾಗಿತ್ತು. ಅಧ್ಯಕ್ಷ ರವಿ ಶೆಟ್ಟಿ ಅವರು ರಾಷ್ಟ್ರ ಕವಿಗಳಾದ ಜಿ.ಎಸ್. ಶಿವರುದ್ರಪ್ಪ ಮತ್ತು ಕುವೆಂಪು ಅವರ ಕವನಗಳನ್ನು, ಮತ್ತು ಡಿವಿಜಿ ಅವರ “ಇರುವ ಕೆಲಸವ ಮಾಡು ಕಿರಿದೆನೆದೆ ಮನವಿಟ್ಟು” ಎಂಬ ಕಗ್ಗದ ಸಾಲುಗಳನ್ನು ಉಲ್ಲೇಖಿಸಿ, ಕೆಎಸ್‌ಕ್ಯೂನ ಸ್ಥಾಪಕರು ಮತ್ತು ಮಾಜಿ ನಾಯಕರ ನಿಸ್ವಾರ್ಥ ಸೇವೆಗೆ ಅದನ್ನು ಸಮರ್ಪಿಸಿದರು.ಸನ್ಮಾನಿತರಾದವರಲ್ಲಿ ಸಂಸ್ಥಾಪಕ ಉಪಾಧ್ಯಕ್ಷ ಡಾ. ವಿ.ಸಿ. ಮೂರ್ತಿ, ಮಾಜಿ ಅಧ್ಯಕ್ಷರುಗಳಾದ ಪ್ರಕಾಶ್ ಬಾಬು, ಪ್ರಭಾಕರ್, ಅರವಿಂದ್ ಪಾಟೀಲ್, ವೆಂಕಟ್ ರಾವ್ ಮತ್ತು ಅನುರಾಧ ನಾಗೇಶ್ ರಾವ್ ಸೇರಿದ್ದಾರೆ. ಸಂಸ್ಥಾಪಕ ಅಧ್ಯಕ್ಷ ಸತೀಶ್ ದೇಶಪಾಂಡೆ ಮತ್ತು ಶ್ರೀಮತಿ ಭುವನ ನಾಗರಾಜ್ ಅವರನ್ನು ಅವರ ಮನೆಗಳಲ್ಲಿ ಗೌರವಿಸಲಾಯಿತು.ಅಲ್ಲದೆ, ಮಾಜಿ ಕಾರ್ಯಕಾರಿ ಸಮಿತಿ ಸದಸ್ಯರಾದ ಸೂರ್ಯನಾರಾಯಣ, ಆರ್. ರವಿ, ಶ್ಯಾಮ್ ಎನ್. ಸ್ವಾಮಿ, ವೀಣಾ ಸಂತೋಷ್ ಕುಲಕರ್ಣಿ, ರಾಜೇಂದ್ರ ಜ್ಯೋತಿ, ಶಾಲಿನಿ ಶರಣ್ ಆಲೂರು, ರೂಪಾ ಪ್ರಮೋದ್, ಅರುಣ್ ಕುಮಾರ್ ಎಂ.ಕೆ., ಸುಬ್ರಮಣ್ಯ ಇ., ಮಂಜುಳ ಮಂಜುನಾಥ ರಾವ್, ಅಶೋಕ್ ಉನಕಲ್, ಸಿ.ಆರ್. ಮಂಜುನಾಥ್, ಲಕ್ಕಪ್ಪ ಗೌಡ, ಸವಿತಾ ಅರುಣ್, ನಿಯಾಜ್ ಅಹಮದ್, ಹೇಮಾ ಲಕ್ಕಪ್ಪ, ಆಶಾ ನಂಜಪ್ಪ ಮತ್ತು ಸಂಜನಾ ಜೀವನ್ ಅವರಿಗೆ ಗೌರವ ಸಲ್ಲಿಸಲಾಯಿತು.ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ವಿಜೇತರಾದ ಸುಮ ಮಹೇಶ್ ಮತ್ತು ಅಶ್ವಿನ್ ಪಿ. ಕುಮಾರ್, ಹಾಗೂ ಬೆಳ್ಳಿಹಬ್ಬದ ಬೆಂಬಲಿಗರಾದ ಅರುಣ್ ಕುಮಾರ್ ಮತ್ತು ಸಂಜಯ್ ಚಪೋಲ್ಕರ್ ಅವರಿಗೆ ಸ್ಮರಣಿಕೆಯೊಂದಿಗೆ ಗೌರವ ನೀಡಲಾಯಿತು.ಮಾಜಿ ನಾಯಕರ ಪರವಾಗಿ ಮಾತನಾಡಿದ ಡಾ. ವಿ.ಸಿ. ಮೂರ್ತಿ ಅವರು ಈ ಕಾರ್ಯಕ್ರಮವನ್ನು ಶ್ಲಾಘಿಸಿ, ಕೆಎಸ್‌ಕ್ಯೂನ ಆರಂಭಿಕ ವರ್ಷಗಳನ್ನು ನೆನಪಿಸಿಕೊಂಡರು. ಕನ್ನಡ ಅಭಿವೃದ್ಧಿ ಕಾರ್ಯದರ್ಶಿ ಭೀಮಪ್ಪ ಖೋತ್ ಅವರು ವಂದನಾರ್ಪಣೆ ಮಾಡಿದರು.ಈ ಸಂಭ್ರಮಾಚರಣೆಯು ಮತ್ತಷ್ಟು ಗಾಯನ, ಪುನರ್ಮಿಲನಗಳು ಮತ್ತು ಸಾಂಪ್ರದಾಯಿಕ ಊಟದೊಂದಿಗೆ ಕೊನೆಗೊಂಡಿತು. ಅಧ್ಯಕ್ಷರು , ಕಾರ್ಯಕಾರಿ ಸಮಿತಿ ಸದಸ್ಯರು, ಸ್ವಯಂಸೇವಕರು, ಮತ್ತು ಮಾಜಿ ಅಧ್ಯಕ್ಷರಾದ ಪ್ರಭಾಕರ್ ಹಾಗೂ ವೆಂಕಟ್ ರಾವ್ ಅವರ ಸಹಕಾರದಿಂದ ಈ ಅಭಿನಂದನಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಿದೇಶದ ಕರ್ನಾಟಕ ಸಂಘವೊಂದು ತಾಯ್ನಾಡಿನಲ್ಲಿ ಇಂತಹ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವುದರ ಮೂಲಕ ಸಂಘದ ಪ್ರತಿಷ್ಠೆ ಮತ್ತು ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದೆ.

ಪ್ರಾದೇಶಿಕ ವಾರ್ತೆಗಳು

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಪುಂಡಲೀಕ ಪೈ ಆಯ್ಕೆ

ಮಂಗಳೂರು: ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಪುಂಡಲೀಕ ಪೈ (ಅನ್ನು ಮಂಗಳೂರು) , ಪ್ರಧಾನ ಕಾರ್ಯದರ್ಶಿಯಾಗಿ ರವಿ ಪೊಸವಣಿಕೆ ಹಾಗೂ ಖಜಾಂಚಿಯಾಗಿ ಹರ್ಷ ಆಯ್ಕೆಯಾಗಿದ್ದಾರೆ. ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್.ಅವರಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿ ವೇಣುವಿನೋದ್ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಟ್ರಸ್ಟ್ ಸದಸ್ಯರಾದ ಕೆ. ಆನಂದ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಪುಪ್ಪರಾಜ್. ಬಿ. ಎನ್.ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ.ಹರೀಶ್ ರೈ ಉಪಸ್ಥಿತರಿದ್ದರು.ಪತ್ರಿಕಾ ಭವನ ಟ್ರಸ್ಟ್‌ನಿಂದ ಪತ್ರಕರ್ತರ ಆರೋಗ್ಯ ಸಮಸ್ಯೆಗೆ ನೆರವು ಮತ್ತು ಮೃತ ಪತ್ರಕರ್ತರ ಕುಟುಂಬಕ್ಕೆ ಪರಿಹಾರವಾಗಿ 7.47 ಲಕ್ಷ ರೂ. ನೆರವು ನೀಡಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವದ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಒಟ್ಟು 5 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಪ್ರಾದೇಶಿಕ ವಾರ್ತೆಗಳು

ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಇಳಿಕೆ -ಡಿಸಿಪಿ ರವಿಶಂಕರ್

ಮಂಗಳೂರು,ಆ.21;ಕಳೆದ ಒಂದು ವರ್ಷದ ಅಂಕಿಅಂಶಗಳನ್ನು ಗಮನಿಸಿದಾಗ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಸಾಕಷ್ಟು ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ರವಿಶಂಕರ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ ಉಚಿತ ಖಾಸಗಿ ಬಸ್ ಪಾಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪತ್ರಕರ್ತರು ತಮ್ಮ ವೃತ್ತಿ ಬದುಕಿನಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸು ತ್ತಿದ್ದಾರೆ.ಈ ನಡುವೆ ಸತ್ಯ ಮತ್ತು ನ್ಯಾಯ ಪರದ ಜೊತೆ ಸಮಾಜದ ಧ್ವನಿಯಾಗಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ.ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ವರದಿಗಳ ಬಗ್ಗೆಯೂ ಸಾಕಷ್ಟು ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಪತ್ರಕರ್ತರ ಹೊಣೆಗಾರಿಕೆ ಶ್ಲಾಘನೀಯ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆರ್ ಟಿಒ ಶ್ರೀಧರ್ ಮಾತನಾಡುತ್ತಾ,ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಯೊಂದಿಗೆ ಚಾಲನೆ ಮಾಡುವುದು ಮುಖ್ಯ. ಜೊತೆಗೆ ಅಪಘಾತ ರಹಿತ ಚಾಲನೆಯೂ ಉತ್ತಮ ಮಾದರಿ ಎಂದು ಶುಭ ಹಾರೈಸಿ ದರು.ದಕ್ಷಿಣ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಮಾತನಾಡುತ್ತಾ, ಜಿಲ್ಲೆಯ ಪತ್ರಕರ್ತರ ಸಮಾಜ ಮುಖಿ ಚಟುವ ಟಿಕೆಗಳು ಮತ್ತು ಅವರ ವೃತ್ತಿ ನಿಷ್ಠೆಯ ಬಗ್ಗೆ ಗೌರವವಿದೆ.ಆ ಕಾರಣದಿಂದ ನಮ್ಮ ಸ್ವ ಆಸಕ್ತಿಯಿಂದ ಅವರಿಗೆ ಉಚಿತ ಬಸ್ ಪಾಸ್ ನೀಡಲು ಮುಂದೆ ಬಂದಿರುವುದಾಗಿ ತಿಳಿಸಿದರು..ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು,ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ರಾಮಚಂದ್ರ ನಾಯಕ್,ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್,ಜೊತೆ ಕಾರ್ಯದರ್ಶಿ ರಾಜೇಶ್ ಟಿ,ಪೂರ್ವಾಧ್ಯಕ್ಷ ನೆಲ್ಸನ್ ಪಿರೇರಾ,ಪದಾಧಿಕಾರಿಗಳಾದ ಸಂಜ್ಯೋತಿ ಶೇಖ, ಮೊಹಿಸಿನ್ ನವಾಬ್, ಪವನ್ ಕುಮಾರ್,ಸುಚೇತನಾ ಕಾವೂರು, ಚಂದ್ರಕಲಾ,ಇಸ್ಮಾಯಿಲ್(ಇಚ್ಚಾಲಿ),,ಚಂದ್ರನ್,ಇಮ್ತಿಯಾಝ್,ರಂಜಿತ್,ರೋಶನ್ ಸಲ್ದಾನ,ಜಾಯ್ ರೋಡ್ರಿಗಸ್, ಆ್ಯರೋನ್, ರಾಜ್ ಕುಮಾರ್,ಜಯಂತ್ ಕುಮಾರ್ ಮೊದಲಾದ ವರು ಉಪಸ್ಥಿತರಿದ್ದರು.ಸಮಾರಂಭದಲ್ಲಿ ಅಪಘಾತ ರಹಿತ ಚಾಲನೆ ಮಾಡಿದ ಚಾಲಕರಾದ ಧರ್ಮಪಾಲ ಉಳ್ಳಾಲ್,ಮೋಹನ್ ಮತ್ತು ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಶ,ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ

ಮಂಗಳೂರು -ಅಗಸ್ಟ್ 20ರ ಮಂಗಳವಾರ ನಡೆದ ಪತ್ರಿಕಾ ಭವನ ಟ್ರಸ್ಟ್ ಸಭೆಯಲ್ಲಿ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ ಆಗಿದ್ದಾರೆ. ಅನ್ನು ಮಂಗಳೂರು ಅವರು ಹಿರಿಯ ಪತ್ರಕರ್ತರಾಗಿದ್ದು, ಈ ಹಿಂದೆ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಉತ್ತಮ ಅಡಳಿತ ನೀಡಿದ್ದರು.

ಪ್ರಾದೇಶಿಕ ವಾರ್ತೆಗಳು

ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಅವರಿಗೆ ‘ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ’.ಆಗಸ್ಟ್ 23ರಂದು ಪ್ರಶಸ್ತಿ ಪ್ರದಾನ

ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ.ಡಿ.ಕೆ. ಚೌಟ ದತ್ತಿನಿಧಿಯಿಂದ ನೀಡುವ ಯಕ್ಷಗಾನ ಪ್ರಶಸ್ತಿಗೆ 2025ನೇ ಸಾಲಿನಲ್ಲಿ ತೆಂಕು ತಿಟ್ಟು ಯಕ್ಷಗಾನದ ಹೆಸರಾಂತ ಸ್ತ್ರೀವೇಷಧಾರಿ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಡಗು ತಿಟ್ಟಿನ ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರನ್ನೊಳಗೊಂಡ ಸಲಹಾ ಸಮಿತಿಯು ಈ ಪ್ರಶಸ್ತಿಗೆ ಅವರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಪ್ರಮಾಣ ಫಲಕವನ್ನೊಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ವೈ.ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು:ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಗೋಣಿಬೀಡಿನಲ್ಲಿ ದಿ.ಐತಪ್ಪ ಶೆಟ್ಟಿ ಮತ್ತು ಸುಂದರಿ ಶೆಟ್ಟಿ ದಂಪತಿಗೆ 1960 ಜೂನ್ 1ರಂದು ಜನಿಸಿದ ಸಂಜಯ ಕುಮಾರ್ ಶೆಟ್ಟಿ ಅವರು ತನ್ನ ಪ್ರೌಢಶಾಲಾ ವ್ಯಾಸಂಗ ಪೂರೈಸಿ ಧರ್ಮಸ್ಥಳ ಲಲಿತಕಲಾ ಕೇಂದ್ರದಲ್ಲಿ ದಿ.ಪಡ್ರೆ ಚಂದು ಅವರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು.16ನೇ ವಯಸ್ಸಿನಲ್ಲಿ ಪುತ್ತೂರು ಶೀನಪ್ಪ ಭಂಡಾರಿಯವರ ಆದಿ ಸುಬ್ರಹ್ಮಣ್ಯ ಮೇಳದಲ್ಲಿ ತಿರುಗಾಟ ಆರಂಭಿಸಿ, ಮುಂದೆ ಪುತ್ತೂರು, ಸುರತ್ಕಲ್, ಕರ್ನಾಟಕ, ಗಣೇಶಪುರ, ಮಂಗಳಾದೇವಿ, ಕುಂಟಾರು, ಎಡನೀರು, ಹೊಸನಗರ, ಬಪ್ಪನಾಡು, ಕೊಲ್ಲಂಗಾನ, ಮಲ್ಲ, ಬಾಚಕೆರೆ ಮುಂತಾದ ತೆಂಕುತಿಟ್ಟಿನ ವಿವಿಧ ಮೇಳಗಳಲ್ಲಿ ಕಲಾ ಸೇವೆ ಮಾಡಿದ್ದಾರೆ. ಶ್ರೀದೇವಿ, ದ್ರೌಪದಿ, ದಮಯಂತಿ, ಸುಭದ್ರೆ, ಸೀತೆ, ದಾಕ್ಷಾಯಿಣಿ, ಅಂಬೆ, ಚಿತ್ರಾಂಗದೆ, ಕಯಾದು, ಮೋಹಿನಿ, ಮೇನಕೆ, ತ್ರಿಲೋಕ ಸುಂದರಿ, ಸ್ವೈರಿಣಿ ಮೊದಲಾದವು ಅವರಿಗೆ ಹೆಸರು ತಂದ ಸ್ತ್ರೀಪಾತ್ರಳು. ತುಳು ಪ್ರಸಂಗಗಳಲ್ಲಿ ಕಿನ್ನಿದಾರು, ಸಿರಿ, ಸೋಮಲಾದೇವಿ, ಕಚ್ಚೂರ ಮಾಲ್ದಿ, ಗೆಜ್ಜೆ ಪೂಜೆಯ ತುಳಸಿ, ಎಲ್ಲೂರ ಮಲ್ಲಿ, ಕಾಡಮಲ್ಲಿಗೆಯ ತುಂಗೆ, ನಾಡ ಕೇದಗೆ, ನೀಲಾಂಬರಿ, ಸಿರಿ ಬಾಲೆ, ಪಲ್ಲವಿ, ಶ್ರೀಮತಿ … ಇತ್ಯಾದಿ ಪಾತ್ರಗಳಲ್ಲಿ ಸಂಜಯ ಕುಮಾರ್ ಶೆಟ್ಟಿ ಅವರು ತಮ್ಮ ಸ್ತ್ರೀ ವೇಷದ ಛಾಪನ್ನು ಮೂಡಿಸಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಲಕ್ಷ್ಮಣ, ಅಯ್ಯಪ್ಪ, ಪರಶುರಾಮ, ಮನ್ಮಥ, ಲವ – ಕುಶ ಮುಂತಾದ ಪುಂಡುವೇಷಗಳಲ್ಲೂ ಅವರು ಪ್ರಸಿದ್ಧರು.ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಯಕ್ಷಸಿರಿ, ಉಡುಪಿ ಯಕ್ಷಗಾನ ಕಲಾರಂಗ, ಸ್ವಸ್ತಿಸಿರಿ, ರೋಟರಿ, ಅರುವ ಪ್ರತಿಷ್ಠಾನ, ಕದ್ರಿ ಹವ್ಯಾಸಿ ಬಳಗ, ಒಡಿಯೂರು ಗುರುದೇವಾನಂದ ಪ್ರಶಸ್ತಿಗಳಲ್ಲದೆ, ಬೋಳಾರ, ಪುಳಿಂಚ, ಶೇಣಿ ಜನ್ಮ ಶತಮಾನೋತ್ಸವ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಪಾತಾಳ – ಯಕ್ಷ ಮಂಗಳ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಯಕ್ಷರಂಗದ ಚಿರಕನ್ನಿಕೆ, ಯಕ್ಷ ಮಿನುಗುತಾರೆ, ಯಕ್ಷ ಮಣಿಮೇಖಲಾ, ಯಕ್ಷ ಮಯೂರಿ, ಯಕ್ಷ ನಂದಿನಿ, ಯಕ್ಷ ನಾಟ್ಯ ಲಲಿತೆ ಮೊದಲಾದ ಬಿರುದುಗಳು ಅವರಿಗೆ ಸಂದಿವೆ. ಪ್ರಸ್ತುತ ವೃತ್ತಿ ಬದುಕಿನ ಅರ್ಧ ಶತಮಾನವನ್ನು ಪೂರೈಸಿರುವ ಅವರು ಈ ವರ್ಷ ತನ್ನ ಯಕ್ಷ ಯಾನದ ಸುವರ್ಣ ಸಂಭ್ರಮದಲ್ಲಿದ್ದಾರೆ.ಪತ್ನಿ ಪ್ರಫುಲ್ಲ ಸಂಜಯ್, ಪುತ್ರಿ ದೀಕ್ಷಾ, ಪುತ್ರರಾದ ದರ್ಶನ್ ಮತ್ತು ದಕ್ಷಿಣ್ ಅವರೊಂದಿಗೆ ಸುಖೀ ಜೀವನ ನಡೆಸುತ್ತಿರುವ ಯಕ್ಷ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರು ಮಂಗಳೂರಿನ ಬೆಂದೂರು ಬಳಿ ‘ಯಕ್ಷ ಭ್ರಮರ’ ನಿವಾಸದಲ್ಲಿ ನೆಲೆಸಿದ್ದಾರೆ.ಪ್ರಶಸ್ತಿ ಪ್ರದಾನ:ಆ.23ರಂದು ನಗರದ ಕರಂಗಲಪಾಡಿ ಎ.ಜೆ.ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆಯುವ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪ್ರಾದೇಶಿಕ ವಾರ್ತೆಗಳು

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ

ಮಂಗಳೂರು -ಅಗಸ್ಟ್ 20ರ ಮಂಗಳವಾರ ನಡೆದ ಪತ್ರಿಕಾ ಭವನ ಟ್ರಸ್ಟ್ ಸಭೆಯಲ್ಲಿ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷರಾಗಿ ಅನ್ನು ಮಂಗಳೂರು (ಪುಂಡಲೀಕ ಪೈ) ಅವಿರೋಧ ಆಯ್ಕೆ ಆಗಿದ್ದಾರೆ. ಅನ್ನು ಮಂಗಳೂರು ಅವರು ಹಿರಿಯ ಪತ್ರಕರ್ತರಾಗಿದ್ದು, ಈ ಹಿಂದೆ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಉತ್ತಮ ಅಡಳಿತ ನೀಡಿದ್ದರು.

ಪ್ರಾದೇಶಿಕ ವಾರ್ತೆಗಳು

ಆ.23ರಂದು ಡಾ.ಎಂ.ಮೋಹನ ಆಳ್ವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ’ ಅವಾರ್ಡ್

ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.23ರಂದು ನಗರದ ಎ.ಜೆ.ಗ್ರಾೃಂಡ್ ಹೋಟೆಲ್‌ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ’ ಪ್ರದಾನ ಮಾಡಲಾಗುವುದು.ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ‌್ಯಾಂಕ್ ಪಡೆದ ಸಿಎ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಸಿಎ ರಕ್ಷಾ. ಆರ್.ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಕಲ್ಲಡ್ಕ ಗಾಂಧಿ ಮೈದಾನದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕಲ್ಲಡ್ಕ ಗಾಂಧಿ ಮೈದಾನದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ರೈ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಲಾಯಿತು. ಅಧ್ಯಕ್ಷತೆಯನ್ನು ಸೂರಜ್ ಬೀಡಿ ಮಾಲಕರಾದ ಹುಸೈನ್ ಕಲ್ಲಡ್ಕ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷರಾದ ಮಧುಸೂದನ್ ಐತಲ್, ಮಾಜಿ ಪಂಚಾಯತ್ ಸದಸ್ಯರು ಹಿರಿಯ ಮುಖಂಡರಾದ ಅಬೂಬಕ್ಕರ್ ಮುರಾಬೈಲ್, ಬಂಟ್ವಾಳ nsui ಉಪಾಧ್ಯಕ್ಷರಾದ ಶ್ರೀವತ್ಸಹ ಶೆಣೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕಿರಣ್ ಕಲ್ಲಡ್ಕ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಶಾಫಿ ಹಾಗೂ ನರಸಿಂಹ ಮಡಿವಾಳ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು ಮತ್ತು ಅನೇಕ ಗಣ್ಯರು ಭಾಗವಹಿಸಿದರು.

Scroll to Top