ಪ್ರಾದೇಶಿಕ ವಾರ್ತೆಗಳು

ಪ್ರಾದೇಶಿಕ ವಾರ್ತೆಗಳು

“ಪಿಚ್ಚರ್” ತುಳು-ಕನ್ನಡ ಸಿನಿಮಾ ಆಗೋಸ್ಟ್ 7 ರಂದು ರಾಜ್ಯಾದ್ಯಂತ ತೆರೆಗೆ. ಗೋಲ್ಡನ್ ಮೂವೀ ನಿರ್ಮಾಣದ ಸಿನಿಮಾ

ಮಂಗಳೂರು: ಗೋಲ್ಡನ್‌ ಮೂವಿ ನಿರ್ಮಾಣದ ಕನ್ನಡ ಮತ್ತು ತುಳು ಭಾಷೆಯ ಚಿತ್ರ ‘ಪಿಚ್ಚರ್’ ಆ. 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಕರಾವ‍ಳಿಯಲ್ಲಿ ತುಳು ಭಾಷೆaಯಲ್ಲಿ ಮತ್ತು ಹೊರ ಜಿಲ್ಲೆಗಳಲ್ಲಿ ಕನ್ನಡದಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ ಎಂದು ನಿರ್ಮಾಪಕ ಗೋಲ್ಡನ್‌ ಸ್ಟಾರ್‌ ಗಣೇಶ್‌ ತಿಳಿಸಿದ್ದಾರೆ.ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ವಿವರ ನೀಡಿದರು.ಕರಾವಳಿ ಮಾತ್ರವಲ್ಲ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರದಲ್ಲಿ ಕರಾವಳಿಯ ಎಲ್ಲ ಹಿರಿಯ, ಕಿರಿಯ ಅನುಭವಿ ಕಲಾವಿದರಲ್ಲದೆ, ಹೊಸ ಕಲಾವಿದರೂ ನಟಿಸಿದ್ದಾರೆ. ಉಡುಪಿ ಮತ್ತು ಪುತ್ತೂರಿನಲ್ಲಿ ಚಿತ್ರದ ಪ್ರೀಮಿಯರ್‌ ಶೋ ನಡೆದಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.ಮುಂದಿನ ದಿನಗಳಲ್ಲಿ ಗಡಿನಾಡು ಕಾಸರಗೋಡು, ಗಲ್ಫ್‌ ರಾಷ್ಟ್ರ ಮಾತ್ರವಲ್ಲದೆ ಒಟಿಟಿಯಲ್ಲೂ ಈ ಚಿತ್ರ ಕಾಣಿಸಲಿದೆ ಎಂದರು. ತುಳುವರಿಗೆ ಹ್ಯಾಟ್ಸ್‌ಅಪ್‌ತುಳುವಿನ ಕಾಮಿಡಿ, ಕನ್ನಡದ ಭಾವನಾತ್ಮಕತೆಯ ಸಮ್ಮಿಳಿತ ಈ ಚಿತ್ರವಾಗಿದ್ದು, ತುಳುವಿನ ದೊಡ್ಡ ಕಲಾವಿದರು ನಟಿಸಿರುವುದು ಖುಷಿ ತಂದಿದೆ. ನನ್ನ ಮೊದಲ ಚಿತ್ರದ ನಿರ್ದೇಶಕರೂಕರಾವಳಿಯವರೇ ಎಂಬುದು ಅಭಿಮಾನದ ಸಂಗತಿ. ಇಲ್ಲಿನ ಕಲಾವಿದರು ತುಳು ಭಾಷೆಗೆ ನೀಡುವ ಕೊಡುಗೆಗೆ ಹ್ಯಾಟ್ಸ್‌ಅಪ್‌ ಎಂದರು.ಈ ಚಿತ್ರಕ್ಕೆ ತುಳು ಭಾಷಿಕರೂ ಉತ್ತಮ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಹಾಗಾಗಿ ಈ ಚಿತ್ರದ ಸೂಪರ್‌ ಹಿಟ್‌ ಎಂರೆ ಪ್ರೇಕ್ಷಕರೇ. ಯಾವುದೇ ಸಿನಿಮಾಗೆ ಹೂಡಿದಬಂಡವಾಳ ಶೇ.ನೂರರಷ್ಟು ವಾಪಸ್‌ ಸಿಗುವುದಿಲ್ಲ. ಶೇ.5ರಿಂದ ಶೇ.6ರಷ್ಟು ಮಾತ್ರ ಲಾಭ ಸಿಗುತ್ತದೆ. ಸಿನಿಮಾ ಸೂಪರ್‌ಹಿಟ್‌ ಆದರೆ ಮಾತ್ರ ಇನ್ನಷ್ಟು ಹೂಡಿಕೆದಾರರು ಒಲವು ತೋರಿಸಲು ಸಾಧ್ಯವಿದೆ ಎಂದರು. ಒಳ್ಳೆ ಸಿನಿಮಾ ಸಿಕ್ಕಿದರೆ ತುಳುವಲ್ಲಿ ನಟನೆಒಳ್ಳೆಯ ಸಿನಿಮಾ ಸಿಕ್ಕಿದರೆ ತುಳು ಭಾಷೆಯಲ್ಲಿ ನಟಿಸಲು ಸಿದ್ಧ ಎಂದು ಗೋಲ್ಡನ್‌ ಸ್ಟಾರ್‌ ಗಣೇಶ್‌ ಹೇಳಿದರು. ಮುಂದಿನ ಸಿನಿಮಾವನ್ನು ಸ್ಕ್ರಿಪ್ಟ್‌ ನೋಡಿ ನಿರ್ಧರಿಸುತ್ತೇನೆ. ಇಲ್ಲಿನ ಸಿನಿ ಪ್ರಿಯರಿಗೆ ಬೇಕಾಗುವ ಸಿನಿಮಾವನ್ನು ನಿರ್ಮಾಣ ಮಾಡಬೇಕು. ಆಗ ಮಾತ್ರ ಅದು ಯಶಸ್ವಿಯಾಗಲು ಸಾಧ್ಯ. ಕೃತಕಬುದ್ಧಿ ಮತ್ತೆ (ಎಐ) ಕ್ಷೇತ್ರದಿಂದ ಸಿನಿಮಾ ರಂಗಕ್ಕೆ ಏನೂ ತೊಂದರೆ ಆಗದು. ನಾವು ಎಐ ಅನ್ನು ಹೇಗೆ ಸ್ವೀಕರಿಸುತ್ತೇನೆ ಎನ್ನುವುದರ ಮೇಲೆ ಒಳಿತು, ಕೆಡುಕು ಅವಲಂಬಿತವಾಗಿದೆ ಎಂದರು.ನಿರ್ಮಾಪಕಿ ಶಿಲ್ಪಾ ಗಣೇಶ್‌ ಮಾತನಾಡಿ, ಒಂದೂವರೆ ವರ್ಷದ ಹಿಂದೆ ಈ ಸಿನಿಮಾಗೆ ನಿರ್ಧಾರ ಮಾಡಿದ್ದೆ. ಪ್ರೀಮಿಯರ್‌ ಶೋಗಳಲ್ಲಿ ಪ್ರೇಕ್ಷಕರ ಉತ್ತಮ ಸ್ಪಂದನೆವ್ಯಕ್ತವಾಗಿದೆ. ಸಣ್ಣದರಲ್ಲಿ ಆರಂಭಿಸಿದ ಸಿನಿಮಾ ಈಗ ದೊಡ್ಡ ಬಜೆಟ್‌ ಆಗಿದೆ.ಸಿನಿಮಾದ ಎಲ್ಲ ಹಾಡುಗಳೂ ಪ್ರೇಕ್ಷಕರಿಗೆ ಇಷ್ಟವಾಗುವಂತಿದೆ. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಜಯಭೇರಿ ಕಂಡರೆ ಇನ್ನಷ್ಟು ಸಿನಿಮಾ ಮಾಡುವ ಹುಮ್ಮಸ್ಸು ಇದೆ ಎಂದರು.ಹಿರಿಯ ನಟ ಡಾ ದೇವದಾಸ್ ಕಾಪಿಕಾಡ್, ಭೋಜರಾಜ್‌ ವಾಮಂಜೂರು, ನಟ ಅರ್ಜುನ್‌ ದೇವ್‌, ಸಂಗೀತ ನಿರ್ದೇಶಕ ಸಾಮ್ಯುವೆಲ್‌, ಸಿನಿಮಾ ವಿತರಕರಾದ ಸಚಿನ್‌ ಎ ಎಸ್ ಉಪ್ಪಿನಂಗಡಿ, ಮುನೀಂದ್ರ ಮತ್ತಿತರರಿದ್ದರು. ಅನುರಾಗ್‌ ನಿರೂಪಿಸಿದರು. ಸಿನಿಮಾ ಚೆನ್ನಾಗಿ ಮೂಡಿಬಂದಿದೆ*ಗೋಲ್ಡನ್‌ ಮೂವಿ ನಿರ್ಮಾಣದ ಈ ‘ಪಿಚ್ಚರ್‌’ ಸಿನಿಮಾದಲ್ಲಿ ಮೊದಲ ಬಾರಿನಟಿಸುತ್ತಿದ್ದು, ಈ ಸಿನಿಮಾ ಬಹಳ ಅತ್ಯುತ್ತಮವಾಗಿ ಮೂಡಿಬಂದಿದೆ ಎಂದು ಪ್ರೀಮಿಯರ್‌ ಶೋ ನೋಡಿದವರು ಹೇಳುತ್ತಿದ್ದಾರೆ. ಸಿನಿಮಾ ನೋಡಿ ಇನ್ನಷ್ಟು ಪ್ರೋತ್ಸಾಹ ಇರಲಿ.ನಿತ್ಯಪ್ರಕಾಶ್‌ ಬಂಟ್ವಾಳ್‌, ನಾಯಕ ನಟ ಉತ್ತಮ‌ ಪಾತ್ರ ಲಭಿಸಿದೆರಾಜ್‌ ಬಿ. ಶೆಟ್ಟಿ ಪ್ರೋತ್ಸಾಹದಿಂದ ಚಿತ್ರರಂಗಕ್ಕೆ ಧುಮುಕಿದ್ದು, ಈ ಸಿನಿಮಾದಲ್ಲಿ ಉತ್ತಮ ರೀತಿಯಲ್ಲಿ ನಟಿಸಿದ್ದೇನೆ. ಜನತೆ ಈ ಸಿನಿಮಾ ಇಷ್ಟಪಡುವ ನಂಬಿಕೆ ಇದೆ. ಜನರಪ್ರೋತ್ಸಾಹವೇ ಚಿತ್ರ ತಂಡಕ್ಕೆ ನೀಡುವ ಶ್ರೀರಕ್ಷೆ.-ಅಮೃತಾ, ನಾಯಕಿ ನಟಿ ಒಳ್ಳೆಯ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಾರೆತುಳು ಚಿತ್ರ ರಂಗದ ಎಲ್ಲ ಕಲಾವಿದರನ್ನು ಸೇರಿಸಿ ಈ ಸಿನಿಮಾ ನಿರ್ಮಿಸಿರುವುದು ಹೆಗ್ಗಳಿಕೆ. ಕನ್ನಡ ಚಿತ್ರರಂಗದ ಅಜಾತಶತ್ರು ಗೋಲ್ಡನ್‌ ಸ್ಟಾರ್‌ ಗಣೇಶ್‌-ಶಿಲ್ಪಾಗಣೇಶ್‌ ದಂಪತಿ ಇದನ್ನು ನಿರ್ಮಿಸುತ್ತಿರುವುದು ಹೆಮ್ಮೆಯ ಸಂಗತಿ. ಒಳ್ಳೆಯ ಸಿನಿಮಾ ಕೊಟ್ಟರೆ ಜನತೆ ನೋಡುತ್ತಾರೆ.-ದೇವದಾಸ್‌ ಕಾಪಿಕಾಡ್‌,ತುಳು ಚಿತ್ರ ನಟ, ನಿರ್ಮಾಪಕ

ಪ್ರಾದೇಶಿಕ ವಾರ್ತೆಗಳು

ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

ಮಹಾನಗರ, ಆ. 2: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ| ಜಿ. ಸಂತೋಷ್ ಕುಮಾರ್‌ ಹೇಳಿದರು.ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಪರಿಸರವನ್ನು ಉಳಿಸಿ, ಸಂರಕ್ಷಿಸುವ ಕಾರ್ಯ ಯುದ್ಧೋಪಾದಿಯಲ್ಲಿ ಆಗಬೇಕು. ಪ್ರಕೃತಿಯನ್ನು ಹಾಳು ಮಾಡಿದ್ದರಿಂದಲೇ ಇಂದು ನಾವು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಪರಿಸರವನ್ನು ಕಾಪಾಡಿ, ಅದನ್ನು ನಮ್ಮ ಮುಂದಿನ ತಲೆಮಾರಿಗೆ ಸುರಕ್ಷಿತವಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ| ರಾಜೇಂದ್ರ ಕಲ್ಬಾವಿ ಹಾಗೂ ಹಸಿರು ದಳದ ಪ್ರಾಜೆಕ್ಟ್ ಮ್ಯಾನೇಜರ್ ನಾಗರಾಜ್ ಬಜಾಲ್ ಅವರು ಪರಿಸರ ಸಂರಕ್ಷಣೆಯ ಪ್ರಾಯೋಗಿಕ ಮಾರ್ಗಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಕ್ಷೇತ್ರದ ಪರಿಸರ ಆಯೋಗದ ಕಾರ್ಯದರ್ಶಿ ಲುವಿಸ್ ಜೆ. ಪಿಂಟೊ, ಪರಿಸರ ಆಯೋಗದ ಕಾರ್ಯಕಾರಿ ಸಮಿತಿ ಸದಸ್ಯ ವಂ| ಡಾ| ಮೈಕಲ್ ಸಾಂತುಮಾಯೋರ್, ಫಾದರ್ ಮುಲ್ಲರ್‌ ಸಂಸ್ಥೆಗಳ ನಿರ್ದೇಶಕ ವಂ| ಫಾ| ಫಾವುಸ್ಟಿನ್ ಲೋಬೊ, ಭ| ಪ್ಲಾವಿಯ ವಿಲ್ಮಾ, ಸೆಲೆಸ್ತಿನ್ ಡಿಸೋಜ, ಕ್ಲೇಮಂಟ್ ಪಿಂಟೊ, ಫ್ರಾನ್ಸಿಸ್ ಮಿನೇಜಸ್ ಬಾಲ್ಕುಟಜೆ, ಜೀತ್ ಮಿಲನ್ ರೋಚ್, ಚಾರ್ಲ್ಸ್ ಪಾಯ್ಸ್ ಉಪಸ್ಥಿತರಿದ್ದರು.

ಪ್ರಾದೇಶಿಕ ವಾರ್ತೆಗಳು

The responsibility of saving nature for the next generation is on us: Dr. G. Santhosh

Mahanagara (City), Aug. 2: “We ourselves are destroying the environment around us. Our selfishness and irresponsibility are the root cause of the terrible natural disasters that occurred in Chikkamagaluru and Kodagu in 2019,” said Dr. G. Santhosh Kumar, Project Director of the District Urban Development Cell. He was speaking after inaugurating a special environmental information camp organized for the conveners and secretaries of the Environment Commission, held under the leadership of the Environment Commission of the Catholic Diocese of Mangalore at the Bendur Church hall in the city.“The work of saving and conserving the environment in our country must happen on a war footing. We are facing difficult situations today precisely because we have ruined nature. The responsibility of protecting the environment and handing it over safely to our next generation rests upon all of us,” he stated.Prof. Rajendra Kalbhavi, Executive Director of the Dakshina Kannada District Nirmiti Kendra, and Nagaraj Bajal, Project Manager of Hasiru Dala, provided information on practical ways of environmental conservation. The program was attended by Louis J. Pinto, Secretary of the Environment Commission of the Mangalore Diocese, Rev. Dr. Michael Santhumayor, Executive Committee Member of the Environment Commission, Rev. Fr. Faustine Lobo, Director of Father Muller Institutions, Sr. Flavia Wilma, Celestine D’Souza, Clement Pinto, Francis Menezes Balkutaje, Jeet Milan Roche, and Charles Pais.

ಪ್ರಾದೇಶಿಕ ವಾರ್ತೆಗಳು

ಬೋಂದೆಲ್ ಚರ್ಚ್ ಮತ್ತು ಪುಣ್ಯ ಕ್ಷೇತ್ರದಲ್ಲಿ ಸಂತ ಲಾರೆನ್ಸರ ಹಬ್ಬದ ನೊವೆನಾ ಆರಂಭ. ಹಬ್ಬದ ವಿಷಯ: “ನಾನು ನಿಮ್ಮನ್ನು ಪ್ರೀತಿಸಿದಂತೆಯೇ ಒಬ್ಬರನ್ನೊಬ್ಬರು ಪ್ರೀತಿಸೋಣ” (ಯೋಹಾನ 15:12). ಸಂದೇಶ: “ಸಂತ ಲಾರೆನ್ಸರಂತೆ ನಾವು ಬಡವರನ್ನು ಪ್ರೀತಿಸೋಣ ಮತ್ತು ಸೇವೆ ಮಾಡೋಣ.”

ಮಂಗಳೂರು: ಮಂಗಳೂರಿನ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಮತ್ತು ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬದ ಆಚರಣೆಗಳು ಮಂಗಳೂರು ನಗರ ವಲಯದ ವಿಕಾರ್ ವಾರ್ ಹಾಗೂ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರ ವಿಧ್ಯುಕ್ತ ಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಅವರನ್ನು ಬೋಂದೆಲ್ ಚರ್ಚ್ ಮತ್ತು ಪುಣ್ಯ ಕ್ಷೇತ್ರದ ರೆಕ್ಟರ್ ವಂದನೀಯ ಫಾ. ಬೇಸಿಲ್ ವಾಸ್ ಅವರು ಪುಷ್ಪಗುಚ್ಛ ಮತ್ತು ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು.ತಮ್ಮ ಸಂದೇಶದಲ್ಲಿ, ಫಾ.ರಿಚಾರ್ಡ್ ಕುವೆಲ್ಲೊ ಅವರು ಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು ಮತ್ತು ಸಂತ ಲಾರೆನ್ಸರಂತೆ ನಾವು ಬಡವರನ್ನು ಪ್ರೀತಿಸೋಣ ಮತ್ತು ಸೇವೆ ಮಾಡೋಣ” ಎಂಬ ಹಬ್ಬದ ಸಂದೇಶವನ್ನು ನೀಡಿದರು. ಬಡವರನ್ನು ಪ್ರೀತಿಸುವುದು ಮತ್ತು ಸೇವೆ ಮಾಡುವುದು ಪ್ರತಿಯೊಬ್ಬ ಕ್ರೈಸ್ತನ ಧ್ಯೇಯ ಮತ್ತು ಕ್ಯಾಥೊಲಿಕರ ನಂಬಿಕೆಯ ಅತ್ಯಗತ್ಯ ಅಭಿವ್ಯಕ್ತಿ ಯಾಗಿದೆ ಎಂದು ಹೇಳಿದರು.ಸ್ವಾಗತಿಸಿದ ವಂದನೀಯ ಫಾ. ಬೇಸಿಲ್ ವಾಸ್ ಅವರು ಒಂಬತ್ತು ದಿನಗಳ ನೊವೆನಾದಲ್ಲಿ ಭಾಗವಹಿಸಲು ಮತ್ತು ಸಂತ ಲಾರೆನ್ಸ್ ಅವರ ಆಶೀರ್ವಾದವನ್ನು ಪಡೆಯಲು ಎಲ್ಲರನ್ನೂ ಆಹ್ವಾನಿಸಿದರು. ಹಬ್ಬದ ವಿಷಯವನ್ನು ಉಲ್ಲೇಖಿಸಿ, ಈ ವರ್ಷ ರೋಗಿಗಳು ಮತ್ತು ಅಶಕ್ತರಿಗೆ ವೈದ್ಯಕೀಯ ನಿಧಿ ಆರಂಭಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಜನರು ಬೆಂಬಲಿಸ ಬೇಕೆಂದರು.ಸಮಾರಂಭದಲ್ಲಿ ಸಹಾಯಕ ಧರ್ಮಗುರು ವಂದನೀಯ ಫಾ. ಲಾರೆನ್ಸ್ ಕುಟಿನ್ಹಾ; ಸೇಂಟ್ ಲಾರೆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂದನೀಯ ಫಾ. ಪೀಟರ್ ಗೊನ್ಸಾಲ್ವಿಸ್, ವಂದನೀಯ ಫಾ. ಬಿಜು ಬೆತ್ರಮ್, ವಂದನೀಯ ಫಾ. ಜೇಮ್ಸ್ ಬ್ರಿಟ್ಟೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜಾನ್ ಡಿ’ಸಿಲ್ವಾ; ಕಾರ್ಯದರ್ಶಿ ಅಲ್ವಿನ್ ಸಲ್ಡಾನ್ಹಾ; ಸರ್ವ ಆಯೋಗಗಳ ಸಂಯೋಜಕಿ ಅವಿತಾ ಮಸ್ಕರೇನ್ಹಸ್; ಪುಣ್ಯಕ್ಷೇತ್ರದ ಸಂಚಾಲಕ ಜೇಸನ್ ಫೆರ್ನಾಂಡಿಸ್; ಮತ್ತು ಮಾಧ್ಯಮ ಸಂಚಾಲಕಿ ಮೀನಾ ಬಾರ್ಬೋಜಾ, ಮಾಧ್ಯಮ ಸಲಹೆಗಾರ ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಿಯಾ ವೇಗಸ್ ನಿರೂಪಿಸಿದರು.ಧ್ವಜಾರೋಹಣದ ಬಳಿಕ ವಂದನೀಯ ಫಾ . ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಪರಮ ಪ್ರಸಾದದ ಆರಾಧನೆಯನ್ನು ಮುನ್ನಡೆಸಿದರು ಮತ್ತು ಎಲ್ಲಾ ಭಕ್ತರ ಇಷ್ಟಾರ್ಥಗಳಿಗಾಗಿ ಪ್ರಾರ್ಥಿಸಿದರು. ಬಳಿಕ ಅವರು ಮೊದಲ ದಿನದ ನೊವೆನಾ ಪ್ರಾರ್ಥನೆಯನ್ನು ನಡೆಸಿಕೊಟ್ಟರು. “ಮಕ್ಕಳು ದೇವರ ರಾಜ್ಯದ ಫಲಗಳು” ಎಂಬ ವಿಷಯದ ಕುರಿತು ಪ್ರಬೋಧನೆ ನೀಡಿದ ಅವರು ಪೋಷಕರು ತಮ್ಮ ಮಕ್ಕಳನ್ನು ನಿಯಮಿತವಾಗಿ ಚರ್ಚ್‌ಗೆ ಕರೆತರ ಬೇಕು. ಇದರಿಂದ ಅವರು ದೇವರ ಪ್ರೀತಿ ಮತ್ತು ಉಪಸ್ಥಿತಿಯನ್ನು ಅನುಭವಿಸ ಬಹುದು. ಮಕ್ಕಳು ದೇವರಿಂದ ಬಂದ ಅಮೂಲ್ಯ ಉಡುಗೊರೆ. ಅವರನ್ನು ನಂಬಿಕೆ ಮತ್ತು ಕ್ರಿಶ್ಚಿಯನ್ ಮೌಲ್ಯಗಳಲ್ಲಿ ಬೆಳೆಸಬೇಕು ಎಂದು ಅವರು ಪೋಷಕರಿಗೆ ನೆನಪಿಸಿದರು.ಪಾಲ್ದನೆ ಚರ್ಚ್ ನ ಲೀಝಿ ಫೆರ್ನಾಂಡಿಸ್ ನೇತೃತ್ವದ ಗಾಯನ ತಂಡವು ಪರಮ ಪ್ರಸಾದದ ಆರಾಧನೆ ಮತ್ತು ಬಲಿಪೂಜೆಯ ಸಂದರ್ಭ ಭಕ್ತಿ ಗಾಯನದೊಂದಿಗೆ ಸಹಕರಿಸಿತು.

ಪ್ರಾದೇಶಿಕ ವಾರ್ತೆಗಳು

ಪೇಸ್‌ನಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಕುರಿತು ಎಫ್‌ಡಿಪಿ ಉದ್ಘಾಟನೆ

ಮಂಗಳೂರು, ಆ. 3: ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ (ಪೇಸ್), ಮಂಗಳೂರಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ‘ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್ಸ್: ಪ್ರೆಸೆಂಟ್ & ಫ್ಯೂಚರ್’ ವಿಷಯದ ಕುರಿತು ಆಯೋಜಿಸಿರುವ ಒಂದು ವಾರದ AICTE ATAL Academy ಪ್ರಾಯೋಜಿತ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (ಎಫ್‌ಡಿಪಿ) ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವು ಆಗಸ್ಟ್ 3ರಿಂದ 8ರವರೆಗೆ ನಡೆಯಲಿದೆ.ಬೆಂಗಳೂರು ಬಿ.ಎಂ.ಎಸ್. ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ್ ಟಿ. ಲಮಾಣಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಲೆಕ್ಟ್ರಿಕ್ ವಾಹನ (ಇವಿ) ಕ್ಷೇತ್ರವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ವ್ಯವಸ್ಥೆಗಳ ಮಹತ್ವ ಹೆಚ್ಚುತ್ತಿದೆ. ಬ್ಯಾಟರಿಯ ಸುರಕ್ಷತೆ, ಕಾರ್ಯಕ್ಷಮತೆ ಮತ್ತು ಬಾಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಥರ್ಮಲ್ ಮ್ಯಾನೇಜ್‌ಮೆಂಟ್ ತಂತ್ರಜ್ಞಾನಗಳ ಅಭಿವೃದ್ಧಿ ಅಗತ್ಯವಾಗಿದೆ ಎಂದು ಅವರು ಹೇಳಿದರು.ಗೌರವ ಅತಿಥಿಯಾಗಿದ್ದ ಪೇಸ್‌ನ ವಿದ್ಯಾರ್ಥಿ ವ್ಯವಹಾರಗಳ ಡೀನ್ ಹಾಗೂ CMSR ನಿರ್ದೇಶಕ ಡಾ. ಸಯ್ಯದ್ ಅಮೀನ್ ಅಹಮ್ಮದ್ ಮಾತನಾಡಿ, ಇವಿ ಉದ್ಯಮ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಮಗಳ ನಡುವಿನ ಸಹಯೋಗವನ್ನು ಬಲಪಡಿಸಬೇಕಾಗಿದೆ ಎಂದರು. ಉದ್ಯಮದ ನೈಜ ಅಗತ್ಯಗಳಿಗೆ ಪೂರಕವಾದ ನವೀನ ಮತ್ತು ಪ್ರಾಯೋಗಿಕ ಸಂಶೋಧನೆಗಳಿಗೆ ಅಧ್ಯಾಪಕರು ಹಾಗೂ ಸಂಶೋಧಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.ಪೇಸ್ ಉಪ ಪ್ರಾಂಶುಪಾಲೆ ಡಾ. ಶರ್ಮಿಳಾ ಕುಮಾರಿ ಎಂ. ಮಾತನಾಡಿ, ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಅಧ್ಯಾಪಕರ ಜ್ಞಾನ ಮತ್ತು ಕೌಶಲ ವೃದ್ಧಿಗೆ AICTE ATAL Academyಯ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.ಅಧ್ಯಕ್ಷತೆ ವಹಿಸಿದ್ದ ಪೇಸ್ ಪ್ರಾಂಶುಪಾಲ ಡಾ. ರಾಮಿಸ್ ಎಂ.ಕೆ. ಮಾತನಾಡಿ, ಆಧುನಿಕ ಬ್ಯಾಟರಿ ಚಾಲಿತ ವ್ಯವಸ್ಥೆಗಳ ಸುರಕ್ಷತೆ, ದಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸುವಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ವ್ಯವಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.ವಿವಿಧ ಶಿಕ್ಷಣ ಸಂಸ್ಥೆಗಳ ಸುಮಾರು 50 ಮಂದಿ ಎಫ್‌ಡಿಪಿಯಲ್ಲಿ ಭಾಗವಹಿಸಿದ್ದಾರೆ.ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಪೈ ಎಂ. ಸ್ವಾಗತಿಸಿದರು. ಎಫ್‌ಡಿಪಿ ಸಂಯೋಜಕ ಡಾ. ಅಬ್ದುಲ್ ರಝಾಕ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಡಾ. ಮಹಮ್ಮದ್ ಸಲ್ಮಾನ್ ವಾರಿಮಣಿ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಶಹಬಾಝ್ ಎಸ್.ಎಂ. ಕಾರ್ಯಕ್ರಮ ನಿರೂಪಿಸಿದರು.

ಪ್ರಾದೇಶಿಕ ವಾರ್ತೆಗಳು

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಸ್ಮರಣಾರ್ಥ ಬೆಂಗಳೂರಿನ ಸಮಥ ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಆಗಸ್ಟ್ 9 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಇಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ,ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು .ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 9ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ . ಕಾರ್ಯಕ್ರಮದ ಉದ್ಘಾಟನೆಯನ್ನು ಜೆಕೆ ರಶ್ಮಿ ಐಪಿಎಸ್ ಪೊಲೀಸ್ ಮಹಾ ನಿರೀಕ್ಷಕರು ಬೆಂಗಳೂರು ಮಾಡಲಿರುವರು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಶರವಣ , ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಕನ್ನಡ ಪರ ಸಂಘದ ಸಂಘಟನೆಯ ಒಕ್ಕೂಟ ಅಧ್ಯಕ್ಷರಾದ ಎಂ .ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು . ಕಾರ್ಯಕ್ರಮ ಸಂಯೋಜಕರಾದ ಎಸ್ ಆರ್ ವಿಜಯ ಸಮರ್ಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ .ಮಾಲತಿ ಶೆಟ್ಟಿ ಮಾಣೂರವರು ಕಳೆದ 22 ವರ್ಷಗಳಿಂದ ಸಾಹಿತ್ಯ, ಪತ್ರಿಕೋದ್ಯಮ, ಸಮಾಜ ಸೇವೆ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದು ಕಳೆದ 13 ವರುಷಗಳಿಂದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. 9 ಕೃತಿಗಳನ್ನು ಪ್ರಕಟಿಸಿದ್ದಾರೆ. ಪತ್ರಿಕೆಯ ವತಿಯಿಂದ ಹಿರಿಯ ಕಿರಿಯ ಬರಹಗಾರರ 49 ಕೃತಿಗಳು ಸರಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಂಡಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಸಾಹಿತ್ಯ ಅಭಿರುಚಿ ಮೂಡುವ ಸಲುವಾಗಿ ಈಗಾಗಲೇ 119 ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಯಶಸ್ವಿಯಾಗಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾಡಿ ದಾಖಲೆ ನಿರ್ಮಿಸಿದ್ದಾರೆ.

ಪ್ರಾದೇಶಿಕ ವಾರ್ತೆಗಳು

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ 20 ಮಂದಿ ಇಂದು (ಆಗಸ್ಟ್ 3) ಪ್ರಮಾಣ ವಚನ ಸ್ವೀಕಾರ. ಜಮೀರ್ ಅಹ್ಮದ್ ಗೆ ಸ್ಥಾನ. ದಿನೇಶ್ ಗೂಂಡುರಾವ್ ಗೆ ಮಂತ್ರಿ ಪದವಿ ಇಲ್ಲ. ಸಂಪುಟದ ಗಾತ್ರ ಬರೋಬರಿ 34ಕ್ಕೆ ಏರಿಕೆ. BREAkING LATEST POLITICAL FLASH NEWS BY DR. ASHOK SHETTY BN

ಬೆಂಗಳೂರು – ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂಪುಟದ ನೂತನ ಸಚಿವರಾಗಿ 20 ಮಂದಿ ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಂದ ಆಗಸ್ಟ್ 3 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ದಿನೇಶ್ ಗುಂಡೂರಾವ್ ಅವರು ಅವಕಾಶ ವಂಚಿತರಾದರೆ, ಜಮೀರ್ ಅಹ್ಮದ್ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ಸಂಪುಟದ ಗಾತ್ರ 34ಕ್ಕೆ ಏರಿದೆ. ನೂತನ ಸಚಿವರ ಆಯ್ಕೆಯಲ್ಲಿ ರಾಹುಲ್ ಗಾಂಧಿಯವರೇ ನೇರವಾಗಿ ಅಂತಿಮ ತೀರ್ಮಾನ ವಹಿಸಿದ್ದು, ಹೊಸ ಮುಖಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ

ಪ್ರಾದೇಶಿಕ ವಾರ್ತೆಗಳು

SFI ನೂತನ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಸರ್ವಾನುಮತದಿಂದ ಆಯ್ಕೆ

ಭಾರತ ವಿದ್ಯಾರ್ಥಿ ಫೆಡರೇಶನ್ (SFI)ನ ದ.ಕ.ಜಿಲ್ಲಾ ಸಮಾವೇಶವು ನಗರದ ಡಾನ್ ಬಾಸ್ಕೋ ಹಾಲ್ ನಲ್ಲಿ ಬಿ ಕೆ ಇನಾಜ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.ಜಿಲ್ಲೆಯ ಜನಪದ ವಿದ್ವಾಂಸರೂ,ನಿವೃತ್ತ ಪ್ರಾಂಶುಪಾಲರಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಸಮಾವೇಶವನ್ನು ಉದ್ಘಾಟಿಸಿದರೆ,SFI ಕರ್ನಾಟಕ ರಾಜ್ಯಾಧ್ಯಕ್ಷರಾದ ಶಿವಪ್ಪ ಅಂಬ್ಲಿಕಲ್ ರವರು ಇಡೀ ಸಮಾವೇಶವು ಸುಸೂತ್ರವಾಗಿ ನಡೆಯುವಂತೆ ಮಾರ್ಗದರ್ಶನ ನೀಡಿದರು. ಸಮಾವೇಶವು ಮುಂದಿನ ಸಾಲಿಗೆ ನೂತನ ದ.ಕ‌.ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.ನೂತನ ಅಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ ಹಾಗೂ ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರುರವರು ಸರ್ವಾನುಮತದಿಂದ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಲಿಖಿತ್ ವಾಮಂಜೂರು, ಅಲ್ಮಾಸ್, ರೋನ್ ಸನ್ ಡಿಸೋಜ, ಅವಿಶಾ ಡಿಸೋಜ ಪಂಜಿಮೊಗರು,ಸಮನ್ವಿ ಬಜಾಲ್,ಪ್ರೇಮ್ ಮದ್ಯ, ಮಿನಹಾಜ್ ದೇರಳಕಟ್ಟೆ, ಸಹಕಾರ್ಯದರ್ಶಿಗಳಾಗಿ ಚಿರಾಗ್ ಕುತ್ತಾರ್,ಇಶಾನ್, ಶ್ರಮಾ,ಇಂಚರಾ ಎಸ್ ಬಜಾಲ್,ಸನನ್ವಿ ಬಜಾಲ್, ನೋಯಲ್ ಸ್ಟೀಫನ್ ಡಿಸೋಜ, ಶಯಾನ್,ರಂಜಿತ್ ಕೊಯ್ಯೂರುರವರನ್ನು‌ ಆರಿಸಲಾಯಿತು.ಹಾಗೂ ಜಿಲ್ಲೆಯ ವಿವಿಧ ಕಾಲೇಜ್ ಗಳಿಂದ 35 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.

ಪ್ರಾದೇಶಿಕ ವಾರ್ತೆಗಳು

ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಖ್ಯಾತ ಹಿರಿಯ ಕ್ರೀಡಾ ಲೇಖಕ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರು ಸಹಕಾರಿ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಕುರಿತಾಗಿ ಬರೆದ ಸಮಗ್ರ ಚಿತ್ರಣ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಆಗಸ್ಟ್ 3ರಂದು ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಎಸ್ ಸಿ ಡಿಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಂಡಿತು. ಮಹಾನ್ ಸಾಧಕ ಮೊಳಹಳ್ಳಿ ಕುರಿತಾದ ಈ ಕೃತಿ ಸಹಕಾರಿ ಕ್ಷೇತ್ರಕ್ಕೆ, ನಮ್ಮೆಲ್ಲರಿಗೆ ಮಾರ್ಗದರ್ಶಿಯಾಗಲಿ :ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ಸಹಕಾರವನ್ನು ಜೀವನದ ಧ್ಯೇಯವನ್ನಾಗಿ,, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ, ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯ ಕುರಿತಾದ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರು ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಅವರು ಮಂಗಳೂರು ಕೊಡಿಯಾಲ್ ಬೈಲ್ ನಲ್ಲಿರುವ ಎಸ್ ಸಿಡಿ ಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.ಬಳಿಕ ಮಾತಾಡಿದ ಅವರು, ನಮ್ಮ ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಅವರು ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ಲೇಖಕರಾಗಿದ್ದಾರೆ. ಮೊಳಹಳ್ಳಿ ಅವರು ಎತ್ತಿನಗಾಡಿಯಲ್ಲಿ ಸಂಚರಿಸಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಬೆಳೆಸಲು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿದರೂ ಪುತ್ತೂರಿನಲ್ಲಿ ನೆಲೆಸಿ ವಕೀಲ ವೃತ್ತಿಯಲ್ಲಿದ್ದರೂ ಸಹಕಾರಿ ಕ್ಷೇತ್ರದ ಅಭಿವ್ಯದ್ಧಿಗೆ ಕಾರಣರಾದವರು. ಇಂತಹ ಮಹಾನ್ ಸಾಧಕರ ಕುರಿತಾದ ಕೃತಿಯು ನಮ್ಮೆಲ್ಲರಿಗೆ ಮಾರ್ಗದರ್ಶಿಯಾಗಿರಲಿ” ಎಂದರು.ಕಾರ್ಯಕ್ರಮದಲ್ಲಿ ಬ್ಯಾಂಕ್ ನ ಸಿಇಒ ಗೋಪಿನಾಥ್ ಭಟ್, ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕ ಶಶಿಕುಮಾ‌ರ್ ರೈ ಬಾಳ್ಕೊಟ್ಟು ನಬಾರ್ಡ್ ಸಂಗೀತ, ರಮೇಶ್, ಸುಧೀರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ತ್ಯಾಗಮಯಿ ಮೊಳಹಳ್ಳಿ ಕೃತಿಯ ಲೇಖಕರ ಕುರಿತು…ಹಿರಿಯ ಕ್ರೀಡಾ ಲೇಖಕರಲ್ಲಿ ಒಬ್ಬಾಗಿರುವಎಸ್. ಜಗದೀಶ್ಚಂದ್ರ ಅಂಚನ್, ಸೂಟರ್‌ಪೇಟೆಅವರು ಸುಮಾರು 36 ವರ್ಷಗಳ ನಿರಂತರ ಪತ್ರಿಕೋದ್ಯಮದ ಅವಧಿಯಲ್ಲಿ ಅವರು 4,500ಕ್ಕೂ ಹೆಚ್ಚು ಕ್ರೀಡಾ ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ,ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂರಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಇವರು ನಾಟಕ, ಸಿನಿಮಾ ಮತ್ತು ಯಕ್ಷಗಾನದ ಕುರಿತು ವಿಮರ್ಶಾತ್ಮಕ ಲೇಖನಗಳ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಸಹ ಅನಾವರಣಗೊಳಿಸಿದ್ದಾರೆ. ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾಯರ ಜೀವನ, ತತ್ವಗಳು ಮತ್ತು ಸಮಾಜಸೇವೆಯ ಬಗ್ಗೆ ಅವರಿಗೆ ವಿಶೇಷ ಗೌರವ ಹಾಗೂ ಅಭಿಮಾನವಿದೆ. ಕಳೆದ ಹತ್ತು ವರ್ಷಗಳಿಂದ ಪ್ರತಿ ವರ್ಷ ಆಗಸ್ಟ್ 4 ರಂದು ಶಿವರಾಯರ ಜನ್ಮದಿನದಂದು ವಿವಿಧ ಪತ್ರಿಕೆಗಳಲ್ಲಿ ಸ್ಮರಣಾರ್ಥ ಲೇಖನಗಳನ್ನು ಬರೆದಿದ್ದಾರೆ. ಈ ಅಧ್ಯಯನ, ಅಭಿಮಾನ ಮತ್ತು ಸಾಮಾಜಿಕ ಕಾಳಜಿಯೇ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ರಚನೆಗೆ ಅವರಿಗೆ ಪ್ರೇರಣೆಯಾಯಿತು.

Scroll to Top